Wayanad Landslide: ಭಯಾನಕ ಸಾವಿನಿಂದ ರಕ್ಷಿಸಿತು ಸಾಕಿದ ಹಸು! ಕನ್ನಡಿಗ ಕುಟುಂಬದ ಅನುಭವ - Vistara News

ವೈರಲ್ ನ್ಯೂಸ್

Wayanad Landslide: ಭಯಾನಕ ಸಾವಿನಿಂದ ರಕ್ಷಿಸಿತು ಸಾಕಿದ ಹಸು! ಕನ್ನಡಿಗ ಕುಟುಂಬದ ಅನುಭವ

Wayanad Landslide: ವೈನಾಡಿನ ಚೂರಲ್‌ಮಲೆಯಲ್ಲಿ ನೆಲೆಸಿದ್ದ ಚಾಮರಾಜನಗರದ ವಿನೋದ್, ಜಯಶ್ರೀ, ಸಿದ್ದರಾಜು, ಮಹೇಶ್ ಹಾಗೂ ಗೌರಮ್ಮ ಎಂಬವರು ಪಾರಾದವರು. ಮೇಪ್ಪಾಡಿಯಲ್ಲಿದ್ದ ಪ್ರವಿದಾ, ಲಕ್ಷ್ಮಿ, ಪುಟ್ಟಸಿದ್ದಮ್ಮ ಮತ್ತು 2 ತಿಂಗಳ ಮಗು ಚಾಮರಾಜನಗರಕ್ಕೆ ಸುರಕ್ಷಿತವಾಗಿ ಬಂದಿದ್ದಾರೆ.

VISTARANEWS.COM


on

wayanad landslide cow rescues family
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ: ಕೇರಳದ ವೈನಾಡಿನಲ್ಲಿ ಸಂಭವಿಸಿದ ರುದ್ರಭಯಾನಕ ಭೂಕುಸಿತದಲ್ಲಿ (Wayanad landslide, Kerala Landslide) ಚಾಮರಾಜನಗರ ಮೂಲದ ಕುಟುಂಬವೊಂದನ್ನು ಅವರು ಸಾಕಿದ ಹಸು ವಿಚಿತ್ರ ರೀತಿಯಲ್ಲಿ ಪಾರು ಮಾಡಿದ ಘಟನೆ (Viral news) ನಡೆದಿದೆ.

ವೈನಾಡಿನ ಚೂರಲ್‌ಮಲೆಯಲ್ಲಿ ನೆಲೆಸಿದ್ದ ಚಾಮರಾಜನಗರದ ವಿನೋದ್, ಜಯಶ್ರೀ, ಸಿದ್ದರಾಜು, ಮಹೇಶ್ ಹಾಗೂ ಗೌರಮ್ಮ ಎಂಬವರು ಪಾರಾದವರು. ಮೇಪ್ಪಾಡಿಯಲ್ಲಿದ್ದ ಪ್ರವಿದಾ, ಲಕ್ಷ್ಮಿ, ಪುಟ್ಟಸಿದ್ದಮ್ಮ ಮತ್ತು 2 ತಿಂಗಳ ಮಗು ಚಾಮರಾಜನಗರಕ್ಕೆ ಸುರಕ್ಷಿತವಾಗಿ ಬಂದಿದ್ದಾರೆ. ವಿನೋದ್ ಪತ್ನಿ ಬಾಣಂತಿಯಾದ ಕಾರಣ ಪ್ರವಿದಾ, ಅತ್ತೆ ಲಕ್ಷ್ಮೀ ಹಾಗೂ ಪುಟ್ಟಸಿದ್ದಮ್ಮ ಮೇಪ್ಪಾಡಿಯಲ್ಲಿದ್ದರು. ವಿನೋದ್ ಮತ್ತು ನಾಲ್ವರು ಚೂರಲ್‌ಮಲೆಯಲ್ಲಿದ್ದರು. ಚೂರಲ್‌ಮಲೆಗೂ ಮೇಪ್ಪಾಡಿಗೂ 6 ಕಿಮೀ ದೂರವಿದ್ದು, ಭೂಕುಸಿತ ಉಂಟಾಗುವ ಕೆಲವು ಸಮಯಕ್ಕೆ ಮುನ್ನ ಇವರು ಪಾರಾಗಿ ಸುರಕ್ಷಿತ ಸ್ಥಳಕ್ಕೆ ಸೇರಿಕೊಂಡಿದ್ದಾರೆ.

ಅದು ಘಟಿಸಿದ್ದು ಹೀಗೆ. ಚೂರಲ್ ಮಲೆಯಲ್ಲಿ ವಿನೋದ್ ಕುಟುಂಬ ನಿದ್ರಿಸುತ್ತಿದ್ದಾಗ ಕೊಟ್ಟಿಗೆಯಲ್ಲಿದ್ದ ಹಸು ಚೀರಾಡಿ, ಅಳುವ ಸದ್ದು ಮಾಡಿದೆ. ಕೂಡಲೇ ಎಚ್ಚೆತ್ತ ವಿನೋದ್ ಕೊಟ್ಟಿಗೆಗೆ ತೆರಳಿ ನೋಡಿದಾಗ ನೀರು ತುಂಬಿಕೊಂಡಿದ್ದನ್ನು ಕಂಡಿದ್ದಾರೆ. ಕೂಡಲೇ ವಿನೋದ್ ಮನೆಯಲ್ಲಿದ್ದವರನ್ನು ಎಬ್ಬಿಸಿ ಗುಡ್ಡದ ಮೇಲಕ್ಕೆ ತೆರಳಿದ್ದಾರೆ. ನೋಡನೋಡುತ್ತಿದ್ದಂತೆ ಇವರು ಇದ್ದ ಮನೆ, ವಾಹನ ಎಲ್ಲವೂ ಮಾಯವಾದಂತೆ ಭೂಮಿಯಡಿ ಹುದುಗಿಹೋಗಿದೆ. ಮನೆಯ ಸಮೀಪವೇ ಇದ್ದ ಸೇತುವೆ ಕೂಡ ಎರಡು ಭಾಗವಾಗಿದೆ. ಕೂಡಲೇ ಮೇಪ್ಪಾಡಿಯಲ್ಲಿದ್ದ ಪತ್ನಿಗೂ ವಿಚಾರ ತಿಳಿಸಿದ್ದು, ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ವಿನೋದ್ ಸೂಚಿಸಿದ್ದಾರೆ. ಪ್ರವಿದಾ, ಲಕ್ಷ್ಮೀ ಹಾಗೂ ಪುಟ್ಟಸಿದ್ದಮ್ಮ ಸುರಕ್ಷಿತ ಸ್ಥಳಕ್ಕೆ ಬಂದು ಕಾರ್ ಮೂಲಕ ಚಾಮರಾಜನಗರಕ್ಕೆ ಮಂಗಳವಾರ ಸಂಜೆ ತಲುಪಿದ್ದಾರೆ.

ಗುಡ್ಡದ ಮೇಲೆ ಆಶ್ರಯ ಪಡೆದಿದ್ದ ವಿನೋದ್ ಹಾಗೂ ಮತ್ತಿತರರನ್ನು ರಕ್ಷಣಾ ಪಡೆ ಮಂಗಳವಾರ ಸಂಜೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. ಸಾಕಿದ್ದ ಹಸು ದೇವರಂತೆ ಅಪಾಯದ ಬಗ್ಗೆ ಕುಟುಂಬಕ್ಕೆ ಎಚ್ಚರಿಸಿ ಇಡೀ ಕುಟುಂಬವನ್ನು ಪಾರುಮಾಡಿದೆ. ಆದರೆ ಇವರನ್ನು ಕಾಪಾಡಿದ ಹಸು ಉಳಿದಿದೆಯೋ ಇಲ್ಲವೋ ತಿಳಿದುಬಂದಿಲ್ಲ.

ನಾಲ್ವರ ಶವ ಪತ್ತೆ, ಉಳಿದವರಿಗೆ ಶೋಧ ಮುಂದುವರಿಕೆ

ಚಾಮರಾಜನಗರ ಜಿಲ್ಲೆಯ ರಾಜೇಂದ್ರ(50), ರತ್ನಮ್ಮ(45), ಪುಟ್ಟಸಿದ್ದಶೆಟ್ಟಿ(62), ರಾಣಿ(50) ಇವರ ಶವಗಳು ದೊರೆತಿವೆ. ತ್ರಯಂಬಕಪುರದ ಸ್ವಾಮಿಶೆಟ್ಟಿ ಎಂಬವರಿಗೆ ಗಾಯಗಳಾಗಿವೆ. ರಾಜೇಂದ್ರ, ರತ್ನಮ್ಮ ಚಾಮರಾಜನಗರ ತಾಲೂಕಿನ ಇರಸವಾಡಿ ಗ್ರಾಮದವರು. ಇಬ್ಬರ ಶವ ಇನ್ನೂ ಪತ್ತೆಯಾಗಿಲ್ಲ. ವೈನಾಡು ಜಿಲ್ಲೆಯ ಮೆಪ್ಪಾಡಿಯ ವೈತ್ರಿ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್‌ ಬಾಬು ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು, ತಹಸೀಲ್ದಾರ್ ನೇತೃತ್ವದ ತಂಡ ಮೃತರ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದೆ.

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿ, ಝಾನ್ಸಿ ಪುತ್ರ ನಿಹಾಲ್, ಅತ್ತೆ ಲೀಲಾವತಿ ನಾಪತ್ತೆಯಾಗಿದ್ದಾರೆ. ಮೈಸೂರಿನ ಸರಗೂರಿನ ಅನಿಲ್ ಕುಮಾರ್ ಎಂಬುವವರಿಗೆ ಝಾನ್ಸಿರಾಣಿಯನ್ನು ಕುಟುಂಬ ಮದುವೆ ಮಾಡಿಕೊಟ್ಟಿತ್ತು. ಕೇರಳದ ಮುಂಡಕೈಯಲ್ಲಿ ಅನಿಲ್, ಪತ್ನಿ ಝಾನ್ಸಿ, ಪುತ್ರ ನಿಹಾಲ್ ಹಾಗೂ ತಂದೆ-ತಾಯಿ ನೆಲೆಸಿದ್ದರು. ಮುಂಡಕೈ ಗುಡ್ಡ ಕುಸಿತದಲ್ಲಿ ಅನಿಲ್ ತಾಯಿ ಲೀಲಾವತಿ(55), ಪುತ್ರ ನಿಹಾಲ್(2.5) ನಾಪತ್ತೆಯಾಗಿದ್ದು, ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅನಿಲ್ ಹಾಗೂ ಅವರ ಪತ್ನಿ ಝಾನ್ಸಿ, ತಂದೆ ದೇವರಾಜು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರೂ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮೂವರಿಗೆ ಕೇರಳದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕುಟುಂಬಸ್ಥರನ್ನು ಕಾಣಲು ಝಾನ್ಸಿರಾಣಿ ಕುಟುಂಬಸ್ಥರು ಕೇರಳಕ್ಕೆ ತೆರಳಿದ್ದಾರೆ.

ಇದನ್ನೂ ಓದಿ: Wayanad Landslide: ವೈನಾಡ್‌ ಭೂಕುಸಿತ ಪರಿಣಾಮ ಕರ್ನಾಟಕ- ಕೇರಳ ರಸ್ತೆ ಸಂಪರ್ಕ ಕಡಿತ, ಬಸ್‌ ಸಂಚಾರ ಸ್ಥಗಿತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: 3 ತಿಂಗಳಿಂದ ಕಾಣೆಯಾಗಿದ್ದ ಬಾಲಕಿ ಗುಹೆಯಲ್ಲಿ ಡಿಢೀರ್‌ ಪ್ರತ್ಯಕ್ಷ; ಹಾವಿನಂತೆ ವರ್ತನೆ ಕಂಡು ಜನ ಶಾಕ್‌-ವಿಡಿಯೋ ಇದೆ

Viral Video ಜಾರ್ಖಂಡ್‌ನಲ್ಲಿ ಮೂರು ತಿಂಗಳಿನಿಂದ ಕಾಣೆಯಾದ ಬಾಲಕಿಯೊಬ್ಬಳು ಗುಹೆಯೊಂದರಲ್ಲಿ ಪತ್ತೆಯಾಗಿದ್ದು, ಹಾವಿನಂತೆ ತೆವಳುತ್ತಾ, ನಾಲಗೆ ಹೊರಗೆ ಚಾಚುತ್ತಾ ಇರುವ ವಿಡಿಯೊವೊಂದು ವೈರಲ್ ಆಗಿದೆ. ಗುಹೆಯಲ್ಲಿ ಕಂಡುಬರುವ ಈ ಹುಡುಗಿಯ ಈ ರೂಪವನ್ನು ನೋಡಲು ಗ್ರಾಮಸ್ಥರ ಗುಂಪು ಅಲ್ಲಿ ನೆರೆದಿದ್ದು, ಅವಳನ್ನು ಹುಡುಕುತ್ತಿದ್ದ ಆಕೆಯ ಕುಟುಂಬ ಸದಸ್ಯರು ಪೂಜೆ ಮಾಡಿ ಅಂತಿಮವಾಗಿ ಅವಳನ್ನು ಮನೆಗೆ ಕರೆತಂದರು ಎನ್ನಲಾಗಿದೆ.

VISTARANEWS.COM


on

Viral Video
Koo


ಜಾರ್ಖಂಡ್ : ಕೆಲವರು ದೇವರು ಮೈಮೇಲೆ ಬಂದಂತೆ ವರ್ತಿಸುವುದನ್ನು ನಾವು ಹಲವು ಬಾರಿ ನೋಡಿರುತ್ತೇವೆ. ಅಂತವರಿಗೆ ದೇವರ ಅನುಗ್ರಹವಿದೆ. ಹಾಗಾಗಿ ದೇವರು ಅವರ ಮೇಲೆ ಆಹ್ವಾನವಾಗಿ ನಂಬಿದ ಭಕ್ತರಿಗೆ ಮಾರ್ಗದರ್ಶನ ನೀಡುತ್ತಾನೆ ಎಂಬ ನಂಬಿಕೆ ಬಹಳ ಹಿಂದಿನ ಕಾಲದಿಂದಲೂ ಇದೆ. ಇದನ್ನು ನಾವು ಇಂದಿನ ಕಾಲದಲ್ಲಿಯೂ ಕೆಲವು ಕಡೆ ನೋಡಬಹುದು. ಹೆಚ್ಚಾಗಿ ದೇವಸ್ಥಾನದ ಜಾತ್ರೆಯ ಸಮಯದಲ್ಲಿ ಕೆಲವರು ದೇವರು ಮೈಮೇಲೆ ಬರುವಂತೆ ವರ್ತಿಸುವ ದೃಶ್ಯವನ್ನು ನೊಡಬಹುದು. ಅದೇರೀತಿ ಜಾರ್ಖಂಡ್‍ನಲ್ಲಿ ಕೂಡ ಇಂತಹದೊಂದು ಘಟನೆ ನಡೆದಿದೆ. ಕಾಣೆಯಾದ ಬಾಲಕಿಯೊಬ್ಬಳು ಗುಹೆಯೊಂದರಲ್ಲಿ ಪತ್ತೆಯಾಗಿದ್ದು, ಆದರೆ ಅವಳು ಹಾವಿನಂತೆ ವರ್ತಿಸಿದ್ದಾಳೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ವಿಡಿಯೊದಲ್ಲಿರುವ ಹುಡುಗಿ ಗುಹೆಯ ನೆಲದ ಮೇಲೆ ಹಾವಿನಂತೆ ತೆವಳುತ್ತಾ ತನ್ನ ನಾಲಿಗೆಯನ್ನು ಹಾವಿನಂತೆ ಹೊರಗೆ ಚಾಚುತ್ತಿದ್ದಾಳೆ. ಗುಹೆಯಲ್ಲಿ ಕಂಡುಬರುವ ಈ ಹುಡುಗಿಯ ಈ ರೂಪವನ್ನು ನೋಡಲು ಗ್ರಾಮಸ್ಥರ ಗುಂಪು ಅಲ್ಲಿ ನೆರೆದಿದ್ದು, ಮನೆಯವರು ಆಕೆಗೆ ಪೂಜೆ ಮಾಡಿದ್ದಾರೆ. ಕಳೆದ ಮೂರು ತಿಂಗಳಿನಿಂದ ಬಾಲಕಿ ಕಾಣೆಯಾಗಿದ್ದಳು. ಆದರೆ ಇತ್ತೀಚೆಗೆ ಆಕೆ ರಾಣಿದಿಹ್ ಗುಪ್ತಾ ಧಾಮ್ ಗುಹೆಯಲ್ಲಿ ಪತ್ತೆಯಾಗಿದ್ದಾಳೆ. ಆದರೆ ಅವಳು ಹಾವಿನಂತೆ ವರ್ತಿಸುತ್ತಿದ್ದಾಳೆ ಎನ್ನಲಾಗಿದೆ. ಆಕೆ ಹಾವಿನಂತೆ ವರ್ತಿಸುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

ಇದನ್ನು ಕಂಡು ಜನರು ಆಶ್ಚರ್ಯ ಚಕಿತರಾಗಿದ್ದಾರೆ. ಈ ಘಟನೆ ದೊಡ್ಡ ಜನಸಮೂಹವನ್ನು ಸೆಳೆದಿದ್ದು, ಆಕೆಯ ಅಸಾಮಾನ್ಯ ನಡವಳಿಕೆಯನ್ನು ನೋಡಲು ಅನೇಕ ಜನರು ಆ ಗುಹೆಯ ಬಳಿ ಜಮಾಯಿಸಿದ್ದಾರೆ. ಅವಳನ್ನು ಹುಡುಕುತ್ತಿದ್ದ ಆಕೆಯ ಕುಟುಂಬ ಸದಸ್ಯರು ಪೂಜೆ ಮಾಡಿ ಅಂತಿಮವಾಗಿ ಅವಳನ್ನು ಮನೆಗೆ ಕರೆತಂದರು ಎನ್ನಲಾಗಿದೆ.

ರಾಣಿದಿಹ್ ಗುಪ್ತ ಧಾಮ್ ಗುಹೆಯಲ್ಲಿ ಬಹಳ ಹಿಂದಿನ ಕಾಲದಲ್ಲಿ ಭಗವಾನ್ ಶಿವನನ್ನು ಸ್ಥಾಪನೆ ಮಾಡಲಾಗಿತ್ತು. ಶಿವನ ಪೂಜೆ ಮಾಡಲು ದೂರದ ಸ್ಥಳಗಳಿಂದ ಭಕ್ತರ ಗುಂಪು ಇಲ್ಲಿಗೆ ಬಂದು ಸೇರುತ್ತಿದ್ದರು. ಪ್ರತಿ ವರ್ಷದಂತೆ, ಈ ಬಾರಿಯೂ ಜನರು ಇಲ್ಲಿಗೆ ಭೇಟಿ ನೀಡಲು ಬಂದಿದ್ದರು, ನಂತರ ಸೋಮವಾರ, ಈ ಹುಡುಗಿಯನ್ನು ಗುಹೆಯ ಮುಖ್ಯ ದ್ವಾರದಲ್ಲಿ ಸರ್ಪದ ರೂಪದಲ್ಲಿ ನೋಡಿದ ಕೂಡಲೇ ಇದು ಗ್ರಾಮದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.
ಬಾಲಕಿಯ ಕುಟುಂಬದ ಪ್ರಕಾರ, ಕಳೆದ ಮೂರು ತಿಂಗಳಿನಿಂದ ಅವಳು ಮನೆಯಿಂದ ಕಾಣೆಯಾಗಿದ್ದಳು.

ಇದನ್ನೂ ಓದಿ: ಮಲಗಿದ್ದ ಮಹಿಳೆಯ ತಲೆಕೂದಲಿನಲ್ಲಿ ಹರಿದಾಡಿದ ಹಾವು!

ಕುಟುಂಬವು ಅವಳನ್ನು ಹುಡುಕಲು ಸಾಕಷ್ಟು ಪ್ರಯತ್ನಿಸಿತು. ಆದರೆ ಅವಳು ಸಿಗಲಿಲ್ಲ. ಅಲ್ಲಿಯ ತನಕ ಆಕೆ ಎಲ್ಲಿದ್ದಳು, ಏನು ಮಾಡುತ್ತಿದ್ದಳು ಎಂಬುದು ಯಾರಿಗೂ ತಿಳಿದಿಲ್ಲ. ಆದರೆ ಕುಟುಂಬವು ಹುಡುಗಿಯನ್ನು ಈ ರೂಪದಲ್ಲಿ ಕಂಡುಕೊಂಡಾಗ, ಅವರು ಮೊದಲು ಅವಳನ್ನು ಪೂಜಿಸಿದರು ಮತ್ತು ಹಾಡುಗಳೊಂದಿಗೆ ಮನೆಗೆ ಕರೆದುಕೊಂಡು ಹೋಗಿದ್ದಾರೆ.

Continue Reading

Latest

Charminar Clock: 135 ವರ್ಷ ಇತಿಹಾಸ ಇರೋ ಚಾರ್‌ಮಿನಾರ್ ಗಡಿಯಾರ ಸೌಂದರ್ಯಕ್ಕೆ ಪಾರಿವಾಳಗಳಿಂದ ಧಕ್ಕೆ

Charminar Clock: ಐತಿಹಾಸಿಕ ಸ್ಥಳವಾದ ಹೈದರಾಬಾದ್ ಚಾರ್ ಮಿನಾರ್‌ನ ಪೂರ್ವ ಭಾಗದಲ್ಲಿರುವ 135 ವರ್ಷ ಹಳೆಯ ಗಡಿಯಾರ ಭಾಗಶಃ ಹಾನಿಯಾಗಿರುವುದು ಕಂಡುಬಂದಿದೆ. ಬಿಳಿ ಬಣ್ಣದ ಪದರವನ್ನು ಹೊಂದಿರುವ ಗಡಿಯಾರದಲ್ಲಿ ಕಪ್ಪು ರಂಧ್ರಗಳು ಬಿದ್ದಿರುವುದು ಎದ್ದು ಕಾಣುತ್ತಿದೆ. ಅದರಲ್ಲೂ 25 ನಿಮಿಷಗಳ ಗುರುತಿಸುವಲ್ಲಿ ರಂಧ್ರ ಇರುವುದನ್ನು ಗಮನಿಸಲಾಗಿದೆ. ಪಾರಿವಾಳಗಳು ಗಡಿಯಾರದಲ್ಲಿ ಯಾವಾಗಲೂ ಬೀಡುಬಿಟ್ಟಿರುತ್ತವೆ. ಹಾಗಾಗಿ ಪಾರಿವಾಳಗಳು ಗಡಿಯಾರವನ್ನು ಹಾನಿಗೊಳಿಸಿವೆ ಎಂದು ಭಾರತೀಯ ಪುರಾತತ್ವ ಸಮೀಕ್ಷೆಯ (ಎಎಸ್ಐ) ಸಿಬ್ಬಂದಿ ಹೇಳಿದ್ದಾರೆ.

VISTARANEWS.COM


on

Charminar Clock
Koo


ಹೈದರಾಬಾದ್: ಐತಿಹಾಸಿಕ ಸ್ಥಳವಾದ ಹೈದರಾಬಾದ್ ಚಾರ್ ಮಿನಾರ್‌ನ ಪೂರ್ವ ಭಾಗದಲ್ಲಿರುವ 135 ವರ್ಷ ಹಳೆಯ ಗಡಿಯಾರ ಭಾಗಶಃ ಹಾನಿಯಾಗಿರುವುದು ಕಂಡುಬಂದಿದೆ. ಸೋಮವಾರ ಸ್ಮಾರಕಕ್ಕೆ ಭೇಟಿ ನೀಡಿದ ಸಂದರ್ಶಕರೊಬ್ಬರು ಗಡಿಯಾರ ಹಾನಿಯಾಗಿದೆ ಎಂದು ತಿಳಿಸಿದ್ದಾರೆ. ಗಡಿಯಾರದ ಹಾನಿಗೊಳಗಾದ ಭಾಗದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ (Charminar Clock)ಆಗಿದೆ.

ಬಿಳಿ ಬಣ್ಣದ ಪದರವನ್ನು ಹೊಂದಿರುವ ಗಡಿಯಾರದಲ್ಲಿ ಕಪ್ಪು ರಂಧ್ರಗಳು ಬಿದ್ದಿರುವುದು ಎದ್ದು ಕಾಣುತ್ತಿದೆ. ಅದರಲ್ಲೂ 25 ನಿಮಿಷಗಳ ಗುರುತಿಸುವಲ್ಲಿ ರಂಧ್ರ ಇರುವುದನ್ನು ಗಮನಿಸಲಾಗಿದೆ. ಪಾರಿವಾಳಗಳು ಗಡಿಯಾರದಲ್ಲಿ ಯಾವಾಗಲೂ ಬೀಡುಬಿಟ್ಟಿರುತ್ತವೆ. ಹಾಗಾಗಿ ಪಾರಿವಾಳಗಳು ಗಡಿಯಾರವನ್ನು ಹಾನಿಗೊಳಿಸಿವೆ ಎಂದು ಭಾರತೀಯ ಪುರಾತತ್ವ ಸಮೀಕ್ಷೆಯ (ಎಎಸ್ಐ) ಸಿಬ್ಬಂದಿ ಹೇಳಿದ್ದಾರೆ. ಅಲ್ಲದೇ ಗಡಿಯಾರವನ್ನು ಸ್ಥಾಪಿಸಿದ ವಾಹಿದ್ ವಾಚ್ ಕಂಪನಿಯ ಕುಟುಂಬ ಸದಸ್ಯರೊಂದಿಗೆ ಹಾನಿಯ ಬಗ್ಗೆ ತಿಳಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಿಬ್ಬಂದಿ ತಿಳಿಸಿದ್ದಾರೆ.

ಚಾರ್‌ ಮಿನಾರ್ ಹೈದರಾಬಾದ್‍ನಲ್ಲಿರುವ ಅತ್ಯಂತ ಪ್ರಸಿದ್ಧ ಸ್ಮಾರಕಗಳಲ್ಲಿ ಒಂದಾಗಿದೆ. ರಾಜಧಾನಿಯನ್ನು ಗೋಲ್ಕೊಂಡದಿಂದ ಹೈದರಾಬಾದ್‍ಗೆ ಸ್ಥಳಾಂತರಿಸಿದ ನಂತರ, ಕುತುಬ್ ಶಾಹಿ ರಾಜವಂಶದ ಐದನೇ ರಾಜನು ಇದನ್ನು 1591 ರಲ್ಲಿ ನಿರ್ಮಿಸಿದನು. ಅದಕ್ಕೆ ನಾಲ್ಕು ಮಿನಾರ್‌ಗಳಿರುವ ಕಾರಣ , ಇದನ್ನು “ಚಾರ್ ಮಿನಾರ್” ಎಂದು ಹೆಸರಿಸಲಾಯಿತು. ತನ್ನ ನಗರವನ್ನು ಹಾಳುಗೆಡವುತ್ತಿದ್ದ ಪ್ಲೇಗ್ ರೋಗದ ಅಂತ್ಯಕ್ಕಾಗಿ ರಾಜನು ತನ್ನ ದೇವರನ್ನು ಪ್ರಾರ್ಥಿಸಿದ ಮತ್ತು ತಾನು ಪ್ರಾರ್ಥಿಸುತ್ತಿದ್ದ ಅದೇ ಸ್ಥಳದಲ್ಲಿಯೇ ಮಸ್ಜಿದ್ (ಇಸ್ಲಾಮಿನ ಮಸೀದಿ) ಒಂದನ್ನು ನಿರ್ಮಿಸುವುದಾಗಿ ಅವನು ಹರಸಿಕೊಂಡ ಎಂದು ಹೇಳಲಾಗುತ್ತದೆ. ಹಾಗಾಗಿ ಆ ಸ್ಥಳದಲ್ಲಿ 1591ರಲ್ಲಿ ಚಾರ್ ಮಿನಾರ್‌ಗೆ ಅಡಿಪಾಯವನ್ನು ಹಾಕಿದ್ದಾನೆ.

ಈ ಕಟ್ಟಡ ರಚನೆಯು ಗ್ರಾನೈಟ್, ಸುಣ್ಣ, ಗಾರೆಯಿಂದ ಮಾಡಲ್ಪಟ್ಟಿದೆ, ಮತ್ತು ಕೆಲವೊಬ್ಬರು ಹೇಳುವ ಪ್ರಕಾರ, ಪುಡಿಮಾಡಲ್ಪಟ್ಟ ಅಮೃತಶಿಲೆಯನ್ನೂ ಇದಕ್ಕೆ ಬಳಸಲಾಗಿದೆ ಎನ್ನಲಾಗಿದೆ. ಆಗ್ರಾದಲ್ಲಿನ ತಾಜ್‍ಮಹಲ್ ಮತ್ತು ಪ್ಯಾರಿಗಳಲ್ಲಿ ಐಫೆಲ್ ಟವರ್ ಗೆ ಸಮಾನವಾದ ಪ್ರಾಮುಖ್ಯತೆ ಚಾರ್ ಮಿನಾರ್ ಗೆ ಇದೆ ಎಂದು ಹೇಳಬಹುದು. ಭಾರತದ ಟಾಪ್ 10 ಐತಿಹಾಸಿಕ ಸ್ಥಳಗಳಲ್ಲಿ ಚಾರ್ಮಿನಾರ್ ಕೂಡ ಸೇರಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

ಪ್ರಸ್ತುತ, ಎಎಸ್ಐ ಈ ಐತಿಹಾಸಿಕ ಸ್ಮಾರಕವನ್ನು ನೋಡಿಕೊಳ್ಳುತ್ತಿದೆ. 2014 ರಲ್ಲಿ ತೆಲಂಗಾಣ ರಾಜ್ಯ ರಚನೆಯಾದ ನಂತರ, ಸರ್ಕಾರವು ವಾರಂಗಲ್‌ನ ಕಾಕತೀಯ ಕಲಾ ತೋರಣಂ ಜೊತೆಗೆ ಈ ಸ್ಮಾರಕವನ್ನು ರಾಜ್ಯದ ಅಧಿಕೃತ ಲಾಂಛನದಲ್ಲಿ ಸೇರಿಸಿತು.

Continue Reading

ವೈರಲ್ ನ್ಯೂಸ್

Wayanad Landslide: ಒಂದು ಮೆಸೇಜ್‌ನಿಂದ ಉಳಿಯಿತು ಜೀವ! ವೈನಾಡಿನ ದುರಂತದ ನಡುವೆ ಪಾರಾದ ಕನ್ನಡಿಗ ಕಾರು ಚಾಲಕ

Wayanad Landslide: ಮಂಜುನಾಥ್ ರೆಸಾರ್ಟ್‌ನಿಂದ ಸ್ವಲ್ಪ ದೂರದಲ್ಲಿ ಕಾರು ನಿಲ್ಲಿಸಿ, ಅದೇ ಕಾರಿನಲ್ಲಿ ರಾತ್ರಿ ನಿದ್ದೆಗೆ ಜಾರಿದ್ದರು. ಮಧ್ಯರಾತ್ರಿ ಒಂದು ಗಂಟೆ 15 ನಿಮಿಷಕ್ಕೆ ಭೂ ಕುಸಿತವಾಗಿದೆ. ಇದರಿಂದ ರೆಸಾರ್ಟ್‌ನಲ್ಲಿದ್ದ ಹಲವರು ಮಣ್ಣುಪಾಲಾಗಿದ್ದಾರೆ.

VISTARANEWS.COM


on

wayanad landslide car driver
Koo

ಬೆಂಗಳೂರು: ಒಂದು ಅಲರ್ಟ್‌ ಮೆಸೇಜ್‌ ಪರಿಣಾಮ ಕನ್ನಡಿಗ ಕಾರು ಚಾಲಕನೊಬ್ಬ (Bangalore Car Driver) ವೈನಾಡಿನ ರುದ್ರಭಯಾನಕ ಭೂಕುಸಿತದ (Wayanad Landslide, Kerala Landslide) ನಡುವೆ ಜೀವ ಉಳಿಸಿಕೊಂಡಿದ್ದಾರೆ. ಸಾವಿನೂರಿಂದ ಈತ ಬಚಾವ್ ಆಗಿ ಬಂದದ್ದೇ ರೋಚಕ. ಮಿಡ್‌ನೈಟ್ ಬಂದ ಅದೊಂದು ಮೆಸೇಜ್ ಯುವಕನ ಪ್ರಾಣ ಉಳಿಸಿದ ಕತೆ (Viral news) ಇಲ್ಲಿದೆ.

ಬೆಂಗಳೂರಿನಲ್ಲಿ ಟ್ಯಾಕ್ಸಿ ಡ್ರೈವರ್ ಆಗಿರುವ ಹಾವೇರಿ ಮೂಲದ ಮಂಜುನಾಥ್‌, ಇಬ್ಬರು ಯುವಕರು ಹಾಗೂ ಯುವತಿಯರನ್ನು ಬಾಡಿಗೆ ಕರೆದುಕೊಂಡು ವೈನಾಡ್‌ಗೆ ಹೋಗಿದ್ದರು. ದಂಪತಿಗಳು ಉತ್ತರ ಭಾರತ ಮೂಲದವರು. ಎರಡೂ ಜೋಡಿ ವಯನಾಡ್‌ನ ರೆಸಾರ್ಟ್‌ನಲ್ಲಿ ಉಳಿದುಕೊಂಡಿದ್ದರು.

ಮಂಜುನಾಥ್ ರೆಸಾರ್ಟ್‌ನಿಂದ ಸ್ವಲ್ಪ ದೂರದಲ್ಲಿ ಕಾರು ನಿಲ್ಲಿಸಿ, ಅದೇ ಕಾರಿನಲ್ಲಿ ರಾತ್ರಿ ನಿದ್ದೆಗೆ ಜಾರಿದ್ದರು. ಮಧ್ಯರಾತ್ರಿ ಒಂದು ಗಂಟೆ 15 ನಿಮಿಷಕ್ಕೆ ಭೂ ಕುಸಿತವಾಗಿದೆ. ಇದರಿಂದ ರೆಸಾರ್ಟ್‌ನಲ್ಲಿದ್ದ ಹಲವರು ಮಣ್ಣುಪಾಲಾಗಿದ್ದಾರೆ. ಆದರೆ ಚಾಲಕ ಇದ್ಯಾವುದರ ಪರಿವೆಯೇ ಇಲ್ಲದೆ ನಿದ್ದೆಗೆ ಜಾರಿದ್ದರು. ಭೂಕುಸಿತದ ಬಳಿಕ ನದಿ ಪಾತ್ರ ವಿಶಾಲವಾಗಿದ್ದು, 15 ಅಡಿ ಅಗಲದ ನದಿ 150 ಅಡಿಗಳಷ್ಟು ಅಗಲವಾಗಿ ಮಣ್ಣು ಕಲ್ಲು ಮರಗಳನ್ನು ತುಂಬಿಕೊಂಡು ಅಬ್ಬರಿಸಿ ಹರಿದಿದೆ. ಮಂಜುನಾಥ್‌ ಕಾರಿಗೂ ಜಲದಿಗ್ಬಂಧನವಾಗಿದೆ.

ನೀರಿನ ಹೊಡೆತಕ್ಕೆ ಕಾರು ಉಲ್ಟಾ ಮುಖ ಮಾಡಿದೆ. ಈ ವೇಳೆ ಚಾಲಕ ತರಾತುರಿಯಲ್ಲಿ ಕಾರ್ ಚಲಾಯಿಸಲು ಮುಂದಾಗಿದ್ದ. ಕಾರು ಆನ್ ಆಗುತ್ತಿದ್ದಂತೆ ಬೆಂಗಳೂರಿನಲ್ಲಿದ್ದ ಕಾರಿನ‌‌ ಮಾಲಕ ಸಚಿನ್‌ಗೆ ಅಲರ್ಟ್‌ ಮೆಸೇಜ್ ಹೋಗಿದೆ. ಸಚಿನ್‌ ಮೊಬೈಲ್‌ನಲ್ಲಿ ಕಾರಿನ ಆಕ್ಸೆಸ್ ಹೊಂದಿದ್ದರು. ಜಿಪಿಎಸ್ ಆನ್ ಆಗುತ್ತಿದ್ದಂತೆ ಆಟೋಮ್ಯಾಟಿಕ್ ಮೆಸೇಜ್ ಬಂದಿತ್ತು. ಹೊತ್ತಲ್ಲದ ಹೊತ್ತಿನಲ್ಲಿ ಗಾಡಿ ಆನ್ ಆದ ಮೆಸೇಜ್ ನೋಡಿ ಮಾಲೀಕ ಚಕಿತರಾಗಿ, ಕೂಡಲೇ ಈ ವಿಚಾರವಾಗಿ ಚಾಲಕನಿಗೆ ಕಾಲ್ ಮಾಡಿದ್ದಾರೆ.

ಈ ವೇಳೆ ಪ್ರವಾಹದ ಬಗ್ಗೆ ಚಾಲಕ ಮಂಜುನಾಥ್‌ ವಿವರಿಸಿದ್ದರು. ಮಂಜುನಾಥ್‌ಗೆ ಧೈರ್ಯ ತುಂಬಿದ್ದ ಮಾಲೀಕ ಸಚಿನ್, ಅದೇ ಜಾಗದಲ್ಲಿದ್ದ ತನ್ನ ಪರಿಚಯಸ್ಥರಿಗೆ ಮಾಹಿತಿ ನೀಡಿದ್ದರು. ಇದರಿಂದ ಚಾಲಕನ ಸಹಾಯಕ್ಕೆ ಜನ ಬಂದಿದ್ದಾರೆ. ನಂತರ ಜಿಪಿಎಸ್ ಟ್ರ್ಯಾಕ್ ಮಾಡಿ ಚಾಲಕನನ್ನು ಕೆಸರು ನೀರಿನ ಮಧ್ಯದಿಂದ ರಕ್ಷಣೆ ಮಾಡಲಾಗಿದೆ. ಬದುಕುಳಿದು ಬಂದಿರುವ ಮಂಜುನಾಥ್‌, ತಮ್ಮನ್ನು ಕಾಪಾಡಿದವರಿಗೆ ಧನ್ಯವಾದ ಹೇಳಿದ್ದಾರೆ.

ಭಯಾನಕ ಸಾವಿನಿಂದ ರಕ್ಷಿಸಿತು ಸಾಕಿದ ಹಸು! ಕನ್ನಡಿಗ ಕುಟುಂಬದ ಅನುಭವ

ಚಾಮರಾಜನಗರ: ಕೇರಳದ ವೈನಾಡಿನಲ್ಲಿ ಸಂಭವಿಸಿದ ರುದ್ರಭಯಾನಕ ಭೂಕುಸಿತದಲ್ಲಿ (Wayanad landslide, Kerala Landslide) ಚಾಮರಾಜನಗರ ಮೂಲದ ಕುಟುಂಬವೊಂದನ್ನು ಅವರು ಸಾಕಿದ ಹಸು ವಿಚಿತ್ರ ರೀತಿಯಲ್ಲಿ ಪಾರು ಮಾಡಿದ ಘಟನೆ ನಡೆದಿದೆ.

ವೈನಾಡಿನ ಚೂರಲ್‌ಮಲೆಯಲ್ಲಿ ನೆಲೆಸಿದ್ದ ಚಾಮರಾಜನಗರದ ವಿನೋದ್, ಜಯಶ್ರೀ, ಸಿದ್ದರಾಜು, ಮಹೇಶ್ ಹಾಗೂ ಗೌರಮ್ಮ ಎಂಬವರು ಪಾರಾದವರು. ಮೇಪ್ಪಾಡಿಯಲ್ಲಿದ್ದ ಪ್ರವಿದಾ, ಲಕ್ಷ್ಮಿ, ಪುಟ್ಟಸಿದ್ದಮ್ಮ ಮತ್ತು 2 ತಿಂಗಳ ಮಗು ಚಾಮರಾಜನಗರಕ್ಕೆ ಸುರಕ್ಷಿತವಾಗಿ ಬಂದಿದ್ದಾರೆ. ವಿನೋದ್ ಪತ್ನಿ ಬಾಣಂತಿಯಾದ ಕಾರಣ ಪ್ರವಿದಾ, ಅತ್ತೆ ಲಕ್ಷ್ಮೀ ಹಾಗೂ ಪುಟ್ಟಸಿದ್ದಮ್ಮ ಮೇಪ್ಪಾಡಿಯಲ್ಲಿದ್ದರು. ವಿನೋದ್ ಮತ್ತು ನಾಲ್ವರು ಚೂರಲ್‌ಮಲೆಯಲ್ಲಿದ್ದರು. ಚೂರಲ್‌ಮಲೆಗೂ ಮೇಪ್ಪಾಡಿಗೂ 6 ಕಿಮೀ ದೂರವಿದ್ದು, ಭೂಕುಸಿತ ಉಂಟಾಗುವ ಕೆಲವು ಸಮಯಕ್ಕೆ ಮುನ್ನ ಇವರು ಪಾರಾಗಿ ಸುರಕ್ಷಿತ ಸ್ಥಳಕ್ಕೆ ಸೇರಿಕೊಂಡಿದ್ದಾರೆ.

ಅದು ಘಟಿಸಿದ್ದು ಹೀಗೆ. ಚೂರಲ್ ಮಲೆಯಲ್ಲಿ ವಿನೋದ್ ಕುಟುಂಬ ನಿದ್ರಿಸುತ್ತಿದ್ದಾಗ ಕೊಟ್ಟಿಗೆಯಲ್ಲಿದ್ದ ಹಸು ಚೀರಾಡಿ, ಅಳುವ ಸದ್ದು ಮಾಡಿದೆ. ಕೂಡಲೇ ಎಚ್ಚೆತ್ತ ವಿನೋದ್ ಕೊಟ್ಟಿಗೆಗೆ ತೆರಳಿ ನೋಡಿದಾಗ ನೀರು ತುಂಬಿಕೊಂಡಿದ್ದನ್ನು ಕಂಡಿದ್ದಾರೆ. ಕೂಡಲೇ ವಿನೋದ್ ಮನೆಯಲ್ಲಿದ್ದವರನ್ನು ಎಬ್ಬಿಸಿ ಗುಡ್ಡದ ಮೇಲಕ್ಕೆ ತೆರಳಿದ್ದಾರೆ. ನೋಡನೋಡುತ್ತಿದ್ದಂತೆ ಇವರು ಇದ್ದ ಮನೆ, ವಾಹನ ಎಲ್ಲವೂ ಮಾಯವಾದಂತೆ ಭೂಮಿಯಡಿ ಹುದುಗಿಹೋಗಿದೆ. ಮನೆಯ ಸಮೀಪವೇ ಇದ್ದ ಸೇತುವೆ ಕೂಡ ಎರಡು ಭಾಗವಾಗಿದೆ. ಕೂಡಲೇ ಮೇಪ್ಪಾಡಿಯಲ್ಲಿದ್ದ ಪತ್ನಿಗೂ ವಿಚಾರ ತಿಳಿಸಿದ್ದು, ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ವಿನೋದ್ ಸೂಚಿಸಿದ್ದಾರೆ. ಪ್ರವಿದಾ, ಲಕ್ಷ್ಮೀ ಹಾಗೂ ಪುಟ್ಟಸಿದ್ದಮ್ಮ ಸುರಕ್ಷಿತ ಸ್ಥಳಕ್ಕೆ ಬಂದು ಕಾರ್ ಮೂಲಕ ಚಾಮರಾಜನಗರಕ್ಕೆ ಮಂಗಳವಾರ ಸಂಜೆ ತಲುಪಿದ್ದಾರೆ.

ಗುಡ್ಡದ ಮೇಲೆ ಆಶ್ರಯ ಪಡೆದಿದ್ದ ವಿನೋದ್ ಹಾಗೂ ಮತ್ತಿತರರನ್ನು ರಕ್ಷಣಾ ಪಡೆ ಮಂಗಳವಾರ ಸಂಜೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. ಸಾಕಿದ್ದ ಹಸು ದೇವರಂತೆ ಅಪಾಯದ ಬಗ್ಗೆ ಕುಟುಂಬಕ್ಕೆ ಎಚ್ಚರಿಸಿ ಇಡೀ ಕುಟುಂಬವನ್ನು ಪಾರುಮಾಡಿದೆ. ಆದರೆ ಇವರನ್ನು ಕಾಪಾಡಿದ ಹಸು ಉಳಿದಿದೆಯೋ ಇಲ್ಲವೋ ತಿಳಿದುಬಂದಿಲ್ಲ.

ಇದನ್ನೂ ಓದಿ: Wayanad Landslide: ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 150ಕ್ಕೆ ಏರಿಕೆ; ಇಂದೂ ಭಾರಿ ಮಳೆಯ ಮುನ್ಸೂಚನೆ, ಮುಂದುವರಿದ ಕಾರ್ಯಾಚರಣೆ

Continue Reading

ವೈರಲ್ ನ್ಯೂಸ್

Viral video: ಪೋಷಕರ ಫೋಟೊ ಶೋಕಿ; ಮೊಸಳೆ ಎದುರು ಮಕ್ಕಳಿಗೆ ಪ್ರಾಣ ಸಂಕಟ! ಆಘಾತಕಾರಿ ವಿಡಿಯೊ

ರಸ್ತೆಬದಿಯಲ್ಲಿ ಮೊಸಳೆಯನ್ನು ನೋಡಿದ ಮಕ್ಕಳು ಪೋಷಕರನ್ನು ಕರೆಯುತ್ತಾರೆ. ಅವರು ಮಕ್ಕಳನ್ನು ಅದರ ಮುಂದೆ ನಿಂತು ಫೋಟೋಗೆ ಪೋಸ್ ನೀಡುವಂತೆ ಒತ್ತಾಯಿಸುತ್ತಾರೆ. ಮಕ್ಕಳು ಭಯದಿಂದಲೇ ಮೊಸಳೆಯ ಮುಂದೆ ನಿಂತು ಸಾಕಷ್ಟು ಫೋಟೋಗಳಿಗೆ ಪೋಸ್ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral video) ಆಗಿದ್ದು, ಸಾಕಷ್ಟು ಮಂದಿಯ ಆಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

By

Viral video
Koo

ತಂದೆ ತಾಯಿಗೆ ಮಕ್ಕಳೇ ಜೀವವಾಗಿರುತ್ತಾರೆ. ಎಷ್ಟೋ ಸಂದರ್ಭದಲ್ಲಿ ಅವರಿಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ ಆಗಿರುವ ವಿಡಿಯೋವೊಂದು (Viral Video) ಈಗ ಎಲ್ಲ ಪೋಷಕರಲ್ಲೂ ಆತಂಕ ಉಂಟು ಮಾಡಿದೆ ಮಾತ್ರವಲ್ಲ ಸಾಕಷ್ಟು ಆಕ್ರೋಶವನ್ನೂ ಹುಟ್ಟು ಹಾಕಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ (Instagram) ವೈರಲ್ ಆಗಿರುವ ಈ ವಿಡಿಯೋದಲ್ಲಿ ಪೋಷಕರು ತಮ್ಮ ಮಕ್ಕಳನ್ನು ಫೋಟೋಗಾಗಿ ಮೊಸಳೆಯ (photo pose with alligator) ಹತ್ತಿರ ನಿಲ್ಲುವಂತೆ ಪ್ರೋತ್ಸಾಹಿಸುತ್ತಿರುವುದನ್ನು ಕಾಣಬಹುದು. ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಮಕ್ಕಳು ರಸ್ತೆಬದಿಯಲ್ಲಿ ಮೊಸಳೆಯನ್ನು ನೋಡಿ ಪೋಷಕರನ್ನು ಕರೆಯುತ್ತಾರೆ. ಅವರು ಮಕ್ಕಳನ್ನು ಅದರ ಮುಂದೆ ನಿಂತು ಫೋಟೋಗೆ ಪೋಸ್ ನೀಡುವಂತೆ ಒತ್ತಾಯಿಸುತ್ತಾರೆ. ಮಕ್ಕಳು ಭಯದಿಂದಲೇ ಮೊಸಳೆಯ ಮುಂದೆ ನಿಂತು ಸಾಕಷ್ಟು ಫೋಟೋಗಳಿಗೆ ಪೋಸ್ ನೀಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಅಜಾಗರೂಕತೆಯ ಈ ದೃಶ್ಯದಲ್ಲಿ ಮೊಸಳೆ ಬಾಯ್ತೆರೆ ದು ನಿಂತಿತ್ತು. ಕೊಂಚ ಎಚ್ಚರ ತಪ್ಪಿದರೂ ಇದು ಬಹುದೊಡ್ಡ ಅನಾಹುತವನ್ನೇ ಉಂಟು ಮಾಡುತ್ತಿತ್ತು. ಆದರೆ ಈ ವಿಡಿಯೋದಲ್ಲಿ ಯಾರೊಬ್ಬರೂ ಅಪಾಯದ ಬಗ್ಗೆ ಯೋಚಿಸದಿರುವುದು ನೆಟ್ಟಿಗರನ್ನು ಕೆರಳಿಸಿದೆ.

ವಿಡಿಯೋದ ಸ್ಥಳ ಮತ್ತು ದಿನಾಂಕವನ್ನು ಪತ್ತೆ ಮಾಡಲಾಗಲಿಲ್ಲ. ಆದರೂ ಇದು ಸುಮಾರು 8 ತಿಂಗಳ ಹಿಂದಿನದ್ದು ಎಂದು ತಿಳಿದು ಬಂದಿದ್ದು, ಎಜೆ ಎಲ್ಲಿಸ್ ಎಂಬ ಬಳಕೆದಾರರು ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಸುಮಾರು 1.6 ಮಿಲಿಯನ್ ವೀಕ್ಷಣೆಗಳನ್ನು ಪಡೆದಿದೆ. ಕಾಮೆಂಟ್ ವಿಭಾಗದಲ್ಲಿ ನೆಟ್ಟಿಗರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ.


ಒಬ್ಬ ಬಳಕೆದಾರರು , ಪೋಷಕರು ಇದನ್ನು ಹೇಗೆ ಅನುಮತಿಸಬಹುದು? ಎಂದು ಪ್ರಶ್ನಿಸಿದ್ದರೆ ಇನ್ನೊಬ್ಬರು ಖಂಡಿತವಾಗಿ, ಪೋಷಕರು ಮೊಸಳೆಯೊಂದಿಗೆ ಮಕ್ಕಳನ್ನು ಸ್ನೇಹಶೀಲವಾಗಿರಲು ಬಿಡುವುದು ಅದ್ಭುತ ಕ್ರಮವಾಗಿದೆ ಎಂದು ಹೇಳಿದ್ದಾರೆ.

ಇನ್ನೊಬ್ಬರು ಇದು ಹುಚ್ಚುತನ. ಮೊಸಳೆಗಳು ಕೆಲವೇ ಸೆಕೆಂಡುಗಳಲ್ಲಿ ದಾಳಿ ನಡೆಸಿದ್ದನ್ನು ನಾನು ನೋಡಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಹಾವನ್ನೇ ಮಣಿಸಿ ʼಸ್ನೇಹಿತʼನ ಜೀವ ಉಳಿಸಿದ ಹಲ್ಲಿ! ಅದ್ಭುತ ವಿಡಿಯೊ; ತಪ್ಪದೇ ನೋಡಿ!

ಪೋಷಕರಿಗೆ ಇದು ತಮಾಷೆಯಾದರೆ ಮಕ್ಕಳಿಗೆ ಇದು ಭಯವನ್ನು ಉಂಟು ಮಾಡಿದೆ ಎಂದು ಇನ್ನೊಬ್ಬರು ಕಾಮೆಂಟ್ ವಿಭಾಗದಲ್ಲಿ ಹೇಳಿದ್ದಾರೆ.

ಮತ್ತೊಬ್ಬರು ಜನರಿಗೆ ಇದು ನಿಜವಾಗಿಯೂ ಅರ್ಥವಾಗುವುದಿಲ್ಲ. ಮೊಸಳೆಗಳು ನೀರು, ಭೂಮಿಯಲ್ಲಿ ಎಷ್ಟು ವೇಗವಾಗಿ ಇರುತ್ತದೆ ಎಂದು ಯಾರೂ ಯೋಚಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಇನ್ನೊಬ್ಬ ಬಳಕೆದಾರರು, ಮೊಸಳೆಯದ್ದು ಆಕಳಿಕೆ ಅಲ್ಲ. ಅದು ಅಲ್ಲಿರುವ ಜನರಲ್ಲಿ ಒಬ್ಬರು ತನ್ನ ಬಾಯಿಗೆ ಹೊಂದಿಕೊಳ್ಳುತ್ತಾರೆಯೇ ಎಂದು ಯೋಚಿಸುತ್ತಿದೆ ಎಂದು ತಿಳಿಸಿದ್ದಾರೆ.

Continue Reading
Advertisement
Sruthi Hariharan female friendship nangeallava shashwati chandrashekar
ಸ್ಯಾಂಡಲ್ ವುಡ್7 mins ago

Sruthi Hariharan: ʻನೀ ನಂಗೆ ಅಲ್ಲವಾʼ? ಎಂದು ಸ್ನೇಹಿತೆಯ ಜತೆ ಪೋಸ್‌ ಕೊಟ್ಟ ಮೂಗುತಿ ಸುಂದರಿ ಶ್ರುತಿ ಹರಿಹರನ್!

wayanad landslide mandya family
ಮಂಡ್ಯ15 mins ago

Wayanad Landslide: ಮಂಡ್ಯದ 9 ಜನರ ಕುಟುಂಬ ಭೂಕುಸಿತದಲ್ಲಿ ಸಂಪೂರ್ಣ ಕಣ್ಮರೆ

Wayanad Landslide
ದೇಶ17 mins ago

Wayanad Landslide: ಎಲ್ಲೆಂದರಲ್ಲಿ ಹೆಣಗಳ ರಾಶಿ; ಕೊಚ್ಚಿ ಹೋದ ಬದುಕು: ಸ್ಮಶಾನದಂತಾದ ಭೂಲೋಕದ ಸ್ವರ್ಗ ವಯನಾಡು

Vanitha Vijaykumar Set To Tie The Knot Again
ಟಾಲಿವುಡ್29 mins ago

Vanitha Vijaykumar: 43 ವರ್ಷದ ನಟಿ ವನಿತಾ ವಿಜಯಕುಮಾರ್ 4ನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜು?

Viral Video
Latest37 mins ago

Viral Video: 3 ತಿಂಗಳಿಂದ ಕಾಣೆಯಾಗಿದ್ದ ಬಾಲಕಿ ಗುಹೆಯಲ್ಲಿ ಡಿಢೀರ್‌ ಪ್ರತ್ಯಕ್ಷ; ಹಾವಿನಂತೆ ವರ್ತನೆ ಕಂಡು ಜನ ಶಾಕ್‌-ವಿಡಿಯೋ ಇದೆ

Charminar Clock
Latest49 mins ago

Charminar Clock: 135 ವರ್ಷ ಇತಿಹಾಸ ಇರೋ ಚಾರ್‌ಮಿನಾರ್ ಗಡಿಯಾರ ಸೌಂದರ್ಯಕ್ಕೆ ಪಾರಿವಾಳಗಳಿಂದ ಧಕ್ಕೆ

Ram Pothineni Double iSmart Bachchan Director Breaks Silence On Clash
ಟಾಲಿವುಡ್52 mins ago

Ram Pothineni: ಗುರುವಿಗೆ ತಿರುಮಂತ್ರ ಹಾಕಿದ ಶಿಷ್ಯ; ನಟನ ಅನ್​ಫಾಲೋ ಮಾಡಿದ ಖ್ಯಾತ ನಟಿ!

wayanad landslide car driver
ವೈರಲ್ ನ್ಯೂಸ್59 mins ago

Wayanad Landslide: ಒಂದು ಮೆಸೇಜ್‌ನಿಂದ ಉಳಿಯಿತು ಜೀವ! ವೈನಾಡಿನ ದುರಂತದ ನಡುವೆ ಪಾರಾದ ಕನ್ನಡಿಗ ಕಾರು ಚಾಲಕ

Gold Rate Today
ಚಿನ್ನದ ದರ1 hour ago

Gold Rate Today: ಆಭರಣ ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆಯ ಶಾಕ್‌; 10 ಗ್ರಾಂಗೆ 800 ರೂ. ಹೆಚ್ಚಳ

anurag thakur
ದೇಶ1 hour ago

Anurag Thakur: ಇಂಡಿಯಾ ಕೂಟದ ಕೊಳಕು ರಾಜಕಾರಣ ತೆರೆದಿಟ್ಟ ಅನುರಾಗ್ ಠಾಕೂರ್; ಈ ವಿಡಿಯೊ ತಪ್ಪದೇ ನೋಡಿ ಎಂದ ಮೋದಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ18 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ22 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ23 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌