Viral News : ಎದ್ದೇಳಲೂ ಸಾಧ್ಯವಿಲ್ಲದವನನ್ನು ನಡೆಯುವಂತೆ ಮಾಡಿತು ಡಿಜಿಟಲ್‌ ಚಿಕಿತ್ಸೆ! ಇಲ್ಲಿದೆ ಮಾಹಿತಿ Vistara News
Connect with us

ವೈರಲ್ ನ್ಯೂಸ್

Viral News : ಎದ್ದೇಳಲೂ ಸಾಧ್ಯವಿಲ್ಲದವನನ್ನು ನಡೆಯುವಂತೆ ಮಾಡಿತು ಡಿಜಿಟಲ್‌ ಚಿಕಿತ್ಸೆ! ಇಲ್ಲಿದೆ ಮಾಹಿತಿ

ತಂತ್ರಜ್ಞಾನದ ಮೂಲಕವೇ ಮೆದುಳು ಮತ್ತು ಸ್ಪೈನಲ್‌ ಕಾರ್ಡ್‌ ನಡುವೆ ಸಂಪರ್ಕ ಸೃಷ್ಟಿಸಿ ಮನುಷ್ಯನನ್ನು ನಡೆದಾಡುವಂತೆ ಮಾಡಿರುವ (Viral News) ವಿಶೇಷ ಪ್ರಯೋಗ ನೆದರ್‌ಲೆಂಡ್‌ನಲ್ಲಿ ನಡೆದಿದೆ. ಇದು ಎಲ್ಲೆಡೆ ವೈರಲ್‌ ಆಗಿದೆ.

VISTARANEWS.COM


on

Koo

ಆಮಸ್ಟರ್‌ಡ್ಯಾಂ: ಅವರು ನೆದರ್‌ಲೆಂಡ್‌ನಲ್ಲಿ ವಾಸವಿರುವ ಜೆರ್ಟ್‌-ಜನ್‌ ಒಸ್ಕಮ್‌. 12 ವರ್ಷಗಳ ಹಿಂದೆ ಜರ್ಟ್‌ಗೆ ಮೋಟಾರು ವಾಹನ ಅಪಘಾತವಾಗಿ ಅಂದಿನಿಂದ ಅವರು ಹಾಸಿಗೆಯ ಮೇಲೇ ಉಳಿಯುವಂತೆ ಆಯಿತು. ಅವರು ಎರಡೂ ಕಾಲುಗಳು ಸಂಪೂರ್ಣವಾಗಿ ಸ್ವಾಧೀನ ಕಳೆದುಕೊಂಡಿಡ್ದವು. ಆದರೆ ಇದೀಗ ಡಿಜಿಟಲ್‌ ತಂತ್ರಜ್ಞಾನದ (Viral News) ಸಹಾಯದಿಂದಾಗಿ ಜೆರ್ಟ್‌ ಮತ್ತೆ ನಿಂತುಕೊಳ್ಳುತ್ತಿದ್ದಾರೆ, ನಡೆದಾಡುತ್ತಿದ್ದಾರೆ.

ಹೌದು. ಅಂಥದ್ದೊಂದು ವಿಶೇಷವಾದ ತಂತ್ರಜ್ಞಾನವನ್ನು ಸ್ವಿಟ್ಜರ್ಲೆಂಡ್‌ನ ಎಕೋಲ್ ಪಾಲಿಟೆಕ್ನಿಕ್ ಫೆಡರಲ್ ಡಿ ಲೌಸನ್ನೆ (ಇಪಿಎಫ್‌ಎಲ್) ನಲ್ಲಿರುವ ನರವಿಜ್ಞಾನಿಗಳು ಕಂಡುಕೊಂಡಿದ್ದಾರೆ. ವೈರ್‌ಲೆಸ್‌ ಡಿಜಿಟಲ್‌ ಬ್ರಿಡ್ಜ್‌ ಮೂಲಕವೇ ಮನುಷ್ಯನ ಮೆದುಳು ಬೇರೆ ಅಂಗಾಂಗದ ಜತೆ ಸ್ಪಂದಿಸುವಂತಹ ಸಂಪರ್ಕ ನಿರ್ಮಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: Viral News : ಅಮ್ಮನಿಗೆ ಬುದ್ಧಿ ಕಲಿಸಲು ಊರಿಗೇ ಬೆಂಕಿ ಇಟ್ಟ ಮಗಳು! ಇದರ ಹಿಂದಿದೆ ಅಕ್ರಮ ಸಂಬಂಧದ ಕತೆ
ಜೆರ್ಟ್‌ ಅವರಿಗೆ ಅಪಘಾತದಿಂದಾಗಿ ಸ್ಪೈನಲ್‌ ಕಾರ್ಡ್‌ ಮತ್ತು ಮೆದುಳಿನ ನಡುವಿನ ಸಂಪರ್ಕ ಕಡಿತವಾಗಿತ್ತು. ಮನುಷ್ಯ ನಡೆದಾಡಬೇಕೆಂದರೆ ಮೊದಲು ಮೆದುಳು ಅದರ ಬಗ್ಗೆ ಸ್ಪೈನಲ್‌ ಕಾರ್ಡ್‌ಗೆ ಸೂಚನೆ ನೀಡಬೇಕು. ಅದನ್ನ ಸ್ಪೈನಲ್‌ ಕಾರ್ಡ್‌ ಅನುಸರಿಸಬೇಕು. ಆದರೆ ಜೆರ್ಟ್‌ಗೆ ಮೆದುಳು ಮತ್ತು ಸ್ಪೈನಲ್‌ ಕಾರ್ಡ್‌ ನಡುವಿನ ಸಂಬಂಧವೇ ಇಲ್ಲವಾಗಿದ್ದರಿಂದಾಗಿ ಎದ್ದೇಳುವುದು ಕೂಡ ಸಾಧ್ಯವಾಗುತ್ತಿರಲಿಲ್ಲ.

ವಿಜ್ಞಾನಿಗಳು ವೈರ್‌ಲೆಸ್‌ ಡಿಜಿಟಲ್‌ ಬ್ರಿಡ್ಜ್‌ ಮೂಲಕ ಸ್ಪೈನಲ್‌ ಕಾರ್ಡ್‌ ಮತ್ತು ಮೆದುಳಿನ ಮೂಲಕ ಸಂಪರ್ಕ ಕಲ್ಪಿಸಿದ್ದಾರೆ. ಇದರಿಂದಾಗಿ ಮೆದುಳು ಸ್ಪೈನಲ್‌ ಕಾರ್ಡ್‌ಗೆ ಸೂಚನೆ ನೀಡಲು ಸಾಧ್ಯವಾಗುತ್ತಿದೆ. ಹಾಗಾಗಿ ಜೆರ್ಟ್‌ ಎದ್ದು ನಡೆದಾಡಲು ಸಾಧ್ಯವಾಗುತ್ತಿದೆ ಎಂದಿದ್ದಾರೆ ವಿಜ್ಞಾನಿಗಳು.

ಇದನ್ನೂ ಓದಿ: Viral News : ಬಾರ್ಬಿಯಂತೆ ಕಾಣುವುದಕ್ಕಾಗಿ 90 ಲಕ್ಷ ರೂ. ಖರ್ಚು ಮಾಡಿದ ಯುವತಿ!
ಸದ್ಯ ಈ ತಂತ್ರಜ್ಞಾನವನ್ನು ಒಬ್ಬರ ಮೇಲೆಯೇ ಪರೀಕ್ಷಿಸಲಾಗಿದೆ. ಮುಂಬರುವ ದಿನಗಳಲ್ಲಿ ಈ ತಂತ್ರಜ್ಞಾನದ ಮೂಲಕ ಮೆದುಳು ಮತ್ತು ಕೈಗಳು ಹಾಗೂ ಇತರೆ ಅಂಗಾಂಗಗಳ ಜತೆ ಸಂಪರ್ಕ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಅದೇನೇ ಇರಲಿ ದೇವರು ಸೃಷ್ಟಿಸಿರುವ ದೇಹದಲ್ಲಿ ಮಾನವ ತನ್ನದೇ ಶಕ್ತಿಯಿಂದ ಹೊಸ ಬದಲಾವಣೆ ಮಾಡುತ್ತಿರುವುದು ಮಾತ್ರ ಒಂದು ಅದ್ಭುತವೇ ಸರಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ವೈರಲ್ ನ್ಯೂಸ್

Viral Video : ವೇದಿಕೆ ಮೇಲೆ ಧೂಳೆಬ್ಬಿಸಿದ ಭಲೇ ಜೋಡಿ; ಸಕತ್‌ ಆಗಿದೆ ಈ ಸೆನೋರಿಟಾ ಡ್ಯಾನ್ಸ್‌

ವೃದ್ಧ ಜೋಡಿ ವೇದಿಕೆ ಮೇಲೆ ಸೆನೋರಿಟಾ ಹಾಡಿಗೆ ನೃತ್ಯ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಆಗಿದೆ.

VISTARANEWS.COM


on

Edited by

old pair dance
Koo

ಮದುವೆ ಕಾರ್ಯಕ್ರಮ ಎಂದ ಮೇಲೆ ಅಲ್ಲಿ ಸಂಭ್ರಮವೋ ಸಂಭ್ರಮ. ಮನೆಯ ಪ್ರತಿಯೊಬ್ಬ ಸದಸ್ಯರೂ ಹಾಡಿ, ಕುಣಿದು, ಕುಪ್ಪಳಿಸುವುದಕ್ಕೆ ಸಿಗುವ ಅವಕಾಶವೇ ಮದುವೆ. ಈ ಸಂಭ್ರಮದ ಹಲವಾರು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ವೈರಲ್‌ ಆಗುತ್ತಿರುತ್ತವೆ. ಅದೇ ರೀತಿಯ ಮತ್ತೊಂದು ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಕತ್‌ ಸದ್ದು (Viral Video) ಮಾಡುತ್ತಿದೆ.

ವೇದಿಕೆಯ ಮೇಲೆ ವೃದ್ಧ ದಂಪತಿ ನಿಂತಿದ್ದಾರೆ. ಹಿಂದಿನಿಂದ 2011ರ ಜಿಂದಗಿ ನಾ ಮಿಲೇಗಿ ದುಬಾರಾ ಸಿನಿಮಾದ ಸೆನೋರಿಟಾ ಹಾಡು ತೇಲಿಬರುತ್ತಿದೆ. ಈ ಹಾಡು ತಮ್ಮದೇ ಎನ್ನುವ ರೀತಿಯಲ್ಲಿ ವೇದಿಕೆ ಮೇಲಿದ್ದ ಜೋಡಿ ಕುಣಿಯಲಾರಂಭಿಸುತ್ತದೆ. ಒಂದು ಸೆಕೆಂಡ್‌ ಕೂಡ ಬಿಡುವು ಕೊಡದೆ ಇಬ್ಬರೂ ಹೊಂದಾಣಿಕೆಯೊಂದಿಗೆ ಹಾಡಿಗೆ ಹೆಜ್ಜೆ ಹಾಕುತ್ತಾರೆ.

ಇದನ್ನೂ ಓದಿ: Viral News: ಪಲ್ಟಿಯಾದ ಬಿಯರ್‌ ತುಂಬಿದ ಲಾರಿ, ಸಿಕ್ಕಿದ್ದೇ ಚಾನ್ಸು ಅಂತ ಬಾಟಲಿ ಎತ್ತಿಕೊಂಡು ಕುಡುಕರು ಪರಾರಿ
ಈ ರೀತಿಯಲ್ಲಿ ಜೋಡಿ ಯುವಕರೂ ನಾಚುವಂತೆ ಹೆಜ್ಜೆ ಹಾಕುತ್ತಿದ್ದರೆ ವೇದಿಕೆಯ ಕೆಳಗಿರುವ ಜನರು ಜೋರಾಗಿ ಚೀರುತ್ತಾ, ಚಪ್ಪಾಳೆ ತಟ್ಟುತ್ತಾ ಜೋಡಿಗೆ ಪ್ರೋತ್ಸಾಹಿಸುತ್ತಾರೆ. ಕ್ಯಾಮರಾಮೆನ್‌ ಕೂಡ ಎಲ್ಲ ರೀತಿಯ ಭಂಗಿಯಲ್ಲಿ ಈ ಜೋಡಿಯ ನೃತ್ಯವನ್ನು ಸೆರೆಹಿಡಿದಿದ್ದಾನೆ.

ಈ ವಿಡಿಯೊವನ್ನು sikhlens ಹೆಸರಿನ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದೆ. ಮೇ 16ರಂದು ಹಂಚಿಕೊಳ್ಳಲಾದ ಈ ವಿಡಿಯೊ ಈಗಾಗಲೇ 2.1 ಮಿಲಿಯನ್‌ಗೂ ಅಧಿಕ ಮಂದಿಯಿಂದ ವೀಕ್ಷಣೆಗೊಂಡಿದೆ. ಸಾವಿರಾರು ಮಂದಿ ವಿಡಿಯೊವನ್ನು ಲೈಕ್‌ ಮಾಡಿದ್ದಾರೆ. ಹಾಗೆಯೇ ಮೆಚ್ಚುಗೆಯ ಕಾಮೆಂಟ್‌ಗಳ ಸುರಿಮಳೆಯೇ ವಿಡಿಯೊಗೆ ಸುರಿದಿದೆ.

ಇದನ್ನೂ ಓದಿ: Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!
“ಅಬ್ಬಾ, ಲವ್ಲಿ ಜೋಡಿಯಿದು. ಇವರು ಹಲವಾರು ಕಾರ್ಯಕ್ರಮಗಳಲ್ಲಿ ಕುಣಿದಿರುವ ವಿಡಿಯೊವನ್ನು ನಾನು ನೋಡಿದ್ದೇನೆ”, “ಇದು ಅತ್ಯದ್ಭುತ ವಿಡಿಯೊ”, “ಇವರು ನಿಜವಾಗಿಯೂ ಸಾಕಷ್ಟು ಜನರಿಗೆ ಸ್ಫೂರ್ತಿ” ಎನ್ನುವ ಹಲವಾರು ಕಾಮೆಂಟ್‌ಗಳು ಈ ವಿಡಿಯೊಗೆ ಬಂದಿವೆ.

Continue Reading

ದೇಶ

Viral Video: ಟಾರ್ಗೆಟ್‌ ರೀಚ್‌ ಆಗದ್ದಕ್ಕೆ ಸಹೋದ್ಯೋಗಿಗೆ ಬೈದ ಎಚ್‌ಡಿಎಫ್‌ಸಿ ಅಧಿಕಾರಿ ಸಸ್ಪೆಂಡ್

Viral Video: ಟಾರ್ಗೆಟ್‌ ರೀಚ್‌ ಆಗಿಲ್ಲ ಎಂದು ಕೋಲ್ಕೊತಾ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಹಿರಿಯ ಅಧಿಕಾರಿಯೊಬ್ಬರು ಕಿರಿಯ ಸಹೋದ್ಯೋಗಿಗಳಿಗೆ ಬಾಯಿಗೆ ಬಂದಂತೆ ಬೈದಿದ್ದರು. ಈ ವಿಡಿಯೊ ವೈರಲ್‌ ಆಗಿ, ಜನರಿಂದ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಹಿರಿಯ ಅಧಿಕಾರಿಯನ್ನು ಎಚ್‌ಡಿಎಫ್‌ಸಿ ಅಮಾನತುಗೊಳಿಸಿದೆ.

VISTARANEWS.COM


on

Edited by

HDFC Officer Viral Video
ಆನ್‌ಲೈನ್‌ ಮೀಟಿಂಗ್.
Koo

ಕೋಲ್ಕೊತಾ: ಯಾವುದೇ ಕಂಪನಿ ಇರಲಿ, ಬಾಸ್‌ಗಳಿಂದ ಸಹೋದ್ಯೋಗಿಗಳು ಬೈಗುಳ ತಿನ್ನುವುದು ಸಹಜ. ಅದರಲ್ಲೂ, ಬ್ಯಾಂಕ್‌ಗಳಲ್ಲಿ, ಮೆಡಿಕಲ್‌ ರೆಪ್ರೆಸೆಂಟೇಟಿವ್‌ ಸೇರಿ ಟಾರ್ಗೆಟ್‌ ಇರುವ ಕ್ಷೇತ್ರಗಳಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಯ ಸಹೋದ್ಯೋಗಿಗಳಿಗೆ ಬೈಗುಳ ಫ್ರೀ. ಹೀಗೆ, ಆನ್‌ಲೈನ್‌ ಮೀಟಿಂಗ್‌ನಲ್ಲಿ ಕಿರಿಯ ಸಹೋದ್ಯೋಗಿಗೆ ಬಾಯಿಗೆ ಬಂದಂತೆ ಬೈದ ಹಿರಿಯ ಸಹೋದ್ಯೋಗಿಯನ್ನು ಎಚ್‌ಡಿಎಫ್‌ಸಿ (Viral Video) ವಜಾಗೊಳಿಸಿದೆ.

ಹೌದು, ಕಿರಿಯ ಸಹೋದ್ಯೋಗಿಗೆ ಎಲ್ಲರ ಎದುರು ಅವಮಾನವಾಗುವ ರೀತಿ ಬೈದ, ಕೋಲ್ಕೊತಾ ಎಚ್‌ಡಿಎಫ್‌ಸಿ ಬ್ಯಾಂಕ್‌ ಹಿರಿಯ ಅಧಿಕಾರಿ ಸೌಮಿ ಚಕ್ರವರ್ತಿ ಅವರನ್ನು ಎಚ್‌ಡಿಎಫ್‌ಸಿ ಬ್ಯಾಂಕ್‌ ಅಮಾನತುಗೊಳಿಸಿದೆ. ಟಾರ್ಗೆಟ್‌ ರೀಚ್‌ ಆಗದ ಹಿನ್ನೆಲೆಯಲ್ಲಿ ಆನ್‌ಲೈನ್‌ ಮೀಟಿಂಗ್‌ನಲ್ಲಿ ಕಿರಿಯ ಸಹೋದ್ಯೋಗಿ ಮೇಲೆ ರೇಗಾಡಿದ, ಕಿರಿಯ ಸಹೋದ್ಯೋಗಿ ಮಾತನಾಡಲು ಕೂಡ ಬಿಡದಂತೆ ಕಿರುಚಾಡಿದ ವಿಡಿಯೊ ವೈರಲ್‌ ಆಗಿತ್ತು. ವಿಡಿಯೊ ವೈರಲ್‌ ಆಗುತ್ತಲೇ ಎಚ್‌ಡಿಎಫ್‌ಸಿ ಕ್ರಮ ತೆಗೆದುಕೊಂಡಿದೆ.

ಇಲ್ಲಿದೆ ನೋಡಿ ವಿಡಿಯೊ

ಬ್ಯಾಂಕ್‌ ಸೇವೆಗಳನ್ನು ಮಾಡಿಸದ ಹಾಗೂ ಹೆಚ್ಚಿನ ಜನರಿಂದ ವಿಮೆ ಪಾಲಿಸಿಗಳನ್ನು ಮಾಡಿಸದ ಕಾರಣ ಸೌಮಿ ಚಕ್ರವರ್ತಿಯು ಆನ್‌ಲೈನ್‌ ಮೀಟಿಂಗ್‌ ವೇಳೆ ಸಹೋದ್ಯೋಗಿಗಳಿಗೆ ಬೆಂಗಾಲಿ ಭಾಷೆಯಲ್ಲಿ ಬೈದಿದ್ದರು. “ನೀನು ಕಳೆದ ಎರಡು ದಿನದಲ್ಲಿ ಎಷ್ಟು ಸೇವಿಂಗ್‌ ಹಾಗೂ ಕರೆಂಟ್‌ ಅಕೌಂಟ್‌ ಓಪನ್‌ ಮಾಡಿಸಿದ್ದೀಯಾ” ಎಂದು ಒಬ್ಬರಿಗೆ ಕೇಳುತ್ತಾರೆ. ಆಗ ಅವರು ಉತ್ತರಿಸುವ ಮೊದಲೇ ಮತ್ತೊಬ್ಬ ಸಹೋದ್ಯೋಗಿಗೆ ಬೈಯುತ್ತಾರೆ. “ನೀನು 15 ಖಾತೆ ಓಪನ್‌ ಮಾಡಿಸಬೇಕಿತ್ತು. ಕೇವಲ ಐದು ಮಾಡಿಸಿದ್ದೀಯಾ” ಎಂದು ಜೋರಾಗಿ ಕಿರುಚಿದ್ದಾರೆ.

ಇದನ್ನೂ ಓದಿ: Hosakerehalli Lake: ಕೆರೆಯಲ್ಲಿ ರಸ್ತೆ; ಡಿಕೆಶಿ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ ಇಬ್ಬರು ಅಧಿಕಾರಿಗಳ ಅಮಾನತು

ಸಹೋದ್ಯೋಗಿಗಳಿಗೆ ಬೈದ, ಜೋರಾಗಿ ಕಿರುಚಿದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಯನ್ನು ಅಮಾನತು ಮಾಡಿರುವ ಕುರಿತು ಎಚ್‌ಡಿಎಫ್‌ಸಿ ಮಾಹಿತಿ ನೀಡಿದೆ. “ಸಹೋದ್ಯೋಗಿಗಳ ಜತೆ ವಿಚಿತ್ರವಾಗಿ ವರ್ತಿಸಿದ, ಅವರಿಗೆ ಅವಮಾನವಾಗುವ ರೀತಿ ಬೈದ ಹಿರಿಯ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಹಾಗೆಯೇ, ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿದೆ” ಎಂದು ಎಚ್‌ಡಿಎಫ್‌ಸಿ ಸರ್ವಿಸ್‌ ಮ್ಯಾನೇಜರ್‌ ಅಜಯ್‌ ಮಾಹಿತಿ ನೀಡಿದ್ದಾರೆ.

Continue Reading

ದೇಶ

Viral Video: ಒಬ್ಬಳ ಕೈಯಲ್ಲಿ ಚಪ್ಪಲಿ, ಮತ್ತೊಬ್ಬಳ‌ ಕೈಯಲ್ಲಿ ಬಾಟಲ್‌; ಮೆಟ್ರೋದಲ್ಲಿ ಜಡೆಜಗಳ

Viral Video: ದೆಹಲಿ ಮೆಟ್ರೋದಲ್ಲಿ ಸಹ ಪ್ರಯಾಣಿಕರು ಎಷ್ಟು ಜಗಳ ಬಿಡಿಸಿದರೂ ಇಬ್ಬರು ಮಹಿಳೆಯರು ಪರಸ್ಪರ ಬೈದಾಡಿಕೊಂಡಿದ್ದಾರೆ. ಇದರ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Edited by

Women Fighting In Delhi Metro
Koo

ನವದೆಹಲಿ: ರಾಷ್ಟ್ರ ರಾಜಧಾನಿಯ ಮೆಟ್ರೋ ರೈಲುಗಳು ಅನೈತಿಕ ಚಟುವಟಿಕೆಗಳ ತಾಣವಾಗಿವೆ. ಇತ್ತೀಚೆಗೆ, ಯುವಕತಿ-ಯುವತಿ ಲಿಪ್‌ ಲಾಕ್‌ ಮಾಡಿದ, ಯುವಕನೊಬ್ಬ ಎಲ್ಲರೆದುರೇ ಹಸ್ತಮೈಥುನ ಮಾಡಿಕೊಂಡ ವಿಡಿಯೊಗಳು ವೈರಲ್‌ ಆಗಿವೆ. ಈತ ಇಂತಹದ್ದೇ ಪ್ರಸಂಗ ನಡೆದಿದೆ. ಇಬ್ಬರು ಹೆಣ್ಣುಮಕ್ಕಳು ದೆಹಲಿ ಮೆಟ್ರೋದಲ್ಲಿ ಜಗಳವಾಡಿದ್ದು, ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ಹೌದು, ಚಲಿಸುತ್ತಿರುವ ಮೆಟ್ರೋದಲ್ಲಿಯೇ ಇಬ್ಬರು ಹೆಣ್ಣುಮಕ್ಕಳು ಜಗಳವಾಡಿದ್ದಾರೆ. ಇಬ್ಬರು ಹೆಣ್ಣುಮಕ್ಕಳ ಮಧ್ಯೆ ವಾಗ್ವಾದದೊಂದಿಗೆ ಜಗಳ ಆರಂಭವಾಗಿದೆ. ವಾಗ್ವಾದ ಅತಿರೇಕಕ್ಕೆ ಹೋಗಿದೆ. ಆಗ ಒಬ್ಬರು ಚಪ್ಪಲಿ ಕೈಗೆತ್ತಿಕೊಂಡಿದ್ದಾರೆ. ಇನ್ನೊಬ್ಬ ಮಹಿಳೆಯು ನೀರಿನ ಬಾಟಲ್‌ ಹಿಡಿದು ಎದುರಾಳಿಗೆ ಆವಾಜ್‌ ಹಾಕಿದ್ದಾರೆ. ಚಲಿಸುವ ರೈಲಿನಲ್ಲಿ ಹೀಗೆ ಇಬ್ಬರ ಮಧ್ಯೆ ಜಗಳವಾಗುತ್ತಿದ್ದರೆ, ಒಂದಷ್ಟು ಮಹಿಳೆಯರು ಜಗಳ ಬಿಡಿಸಲು ಯತ್ನಿಸಿದ್ದಾರೆ. ಮತ್ತೊಂದಿಷ್ಟು ಸ್ತ್ರೀಯರು ಸುಮ್ಮನೆ ಜಗಳ ನೋಡಿ ಮಜಾ ತೆಗೆದುಕೊಂಡಿದ್ದಾರೆ.

ಜಗಳದ ವಿಡಿಯೊ ಇಲ್ಲಿದೆ

“ಮೊದಲು ನೀನೇ ಜಗಳ ಶುರು ಮಾಡಿದ್ದು” ಎಂದು ಒಬ್ಬ ಮಹಿಳೆ ಎಂದರೆ, “ನಿನ್ನಿಂದಲೇ ಇದೆಲ್ಲ ಆಗಿದ್ದು” ಎಂದು ಮತ್ತೊಬ್ಬರು ಆರೋಪ ಮಾಡಿದ್ದಾರೆ. ಇದೇ ವೇಳೆ ಒಬ್ಬರು, ಮೈಕ್‌ ಮೂಲಕ ರೈಲು ಸಿಬ್ಬಂದಿಗೆ ಮತ್ತೊಬ್ಬ ಮಹಿಳೆ ಬಗ್ಗೆ ದೂರು ನೀಡಿದ್ದಾರೆ. ಇದರಿಂದ ಕುಪಿತಗೊಂಡ ಮಹಿಳೆಯು, ತನ್ನ ಎದುರಾಳಿಯ ತಾಯಿ ಬಗ್ಗೆ ಅವಾಚ್ಯವಾಗಿ ಬೈದಿದ್ದಾರೆ. ಇದಕ್ಕೂ ಮತ್ತೊಬ್ಬ ಮಹಿಳೆ ಬೈಗುಳದ ಮೂಲಕವೇ ತಿರುಗೇಟು ನೀಡಿದ್ದಾರೆ. ಇನ್ನೂ ಸಿಟ್ಟು ಹೆಚ್ಚಾಗಿ, ಮಹಿಳೆಯು ನೀರು ಎರಚುವ ಮೂಲಕ ಸಿಟ್ಟು ತೀರಿಸಿಕೊಂಡಿದ್ದಾರೆ.

ಇದನ್ನೂ ಓದಿ: Viral News : ಮ್ಯಾಕ್‌ಡೊನಾಲ್ಡ್ಸ್‌ನಲ್ಲಿ ಕೂತಿದ್ದ ಬಾಲಕನ ಚಡ್ಡಿಯೊಳಗೇ ಹೋಗಿ ಕಚ್ಚಿದ ಇಲಿ! ಇಲ್ಲಿದೆ ವೈರಲ್‌ ವಿಡಿಯೊ

ಹೀಗೆ, ಪುಟ್ಟ ಮಕ್ಕಳಂತೆ ಮೆಟ್ರೋದಲ್ಲಿ ಇಬ್ಬರು ಮಹಿಳೆಯರು ಜಗಳವಾಡಿದ ವಿಡಿಯೊ ವೈರಲ್‌ ಆಗುತ್ತಲೇ, ಜನ ತರಹೇವಾರಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ. “ಹೀಗೆ ಮೆಟ್ರೋದಲ್ಲಿ ಜಗಳವಾಡುವುದು ಸರಿಯಲ್ಲ” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಇನ್ನು, “ಫುಲ್‌ ವಿಡಿಯೊ ನೋಡಿದೆ. ಇಬ್ಬರು ಹೆಣ್ಣುಮಕ್ಕಳು ಜಗಳ ಆಡುವುದು ನೋಡಿ ಮಜಾ ಬಂತು” ಎಂದು ಮತ್ತೊಬ್ಬರು ಹೇಳಿದ್ದಾರೆ. “ಜಗಳ ಮನರಂಜನೆಯಿಂದ ಕೂಡಿದೆ” ಎಂದೂ ಕೂಡ ಯುವತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. ಒಟ್ಟಿನಲ್ಲಿ, ದೆಹಲಿ ಮೆಟ್ರೋದಲ್ಲಿ ಕಿಸ್ಸಿಂಗ್‌, ಫೈಟಿಂಗ್‌ನಂತಹ ಘಟನೆಗಳು ಜಾಸ್ತಿಯಾಗುತ್ತಿದ್ದು, ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Continue Reading

ಕರ್ನಾಟಕ

Video Viral: ವಿರೋಧಿಗಳ ಒಂದು ಪತ್ರಕ್ಕೂ ಸಹಿ ಹಾಕಲ್ಲ ಎಂದ ಚಲುವರಾಯಸ್ವಾಮಿ; ಸಚಿವರ ಎಡವಟ್ಟು, ಸರ್ಕಾರಕ್ಕೆ ಇಕ್ಕಟ್ಟು!

N Chaluvarayaswamy: ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿರುವ ಎನ್.‌ ಚಲುವರಾಯಸ್ವಾಮಿ ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ತಮ್ಮ ಕ್ಷೇತ್ರದಲ್ಲಿ ನಡೆದ ಮತದಾರರ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಅವರು, ಮತದಾರರ ವಿರೋಧಿಗಳ ಯಾವ ಪತ್ರಕ್ಕೂ ಸಹಿ ಹಾಕುವುದಿಲ್ಲ ಹೇಳಿದ್ದಾರೆ.

VISTARANEWS.COM


on

Edited by

Chaluvarayaswamy Video Viral
Koo

ಮಂಡ್ಯ: ಕೃಷಿ ಸಚಿವ, ನಾಗಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್.‌ ಚಲುವರಾಯಸ್ವಾಮಿ ಅವರು ವಿವಾದಗಳ ಮೇಲೆ ವಿವಾದದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್‌ನ ಗ್ಯಾರಂಟಿ (Congress Guarantee) ಯೋಜನೆಗಳನ್ನು ಚೀಪ್‌ ಗಿಮಿಕ್‌ ಎಂದು ನೀಡಿದ್ದ ಹೇಳಿಕೆ ವೈರಲ್‌ ಆಗಿರುವ ಬೆನ್ನಲ್ಲೇ ಮತ್ತೊಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿರೋಧಿಗಳ ಒಂದು ಪತ್ರಕ್ಕೂ ನಾನು ಪೆನ್ನು ಹಿಡಿದು ಸಹಿ ಹಾಕಲ್ಲ ಎಂದು ಹೇಳಿಕೆ ನೀಡಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ವಿಡಿಯೊ ಸಹ ಈಗ ವೈರಲ್ (Video Viral)‌ ಆಗಿದೆ.

ನಾಗಮಂಗಲ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಎನ್.‌ ಚಲುವರಾಯಸ್ವಾಮಿ, ನನ್ನ ಬಳಿ ಕಾಮಗಾರಿಗಳ ಪಟ್ಟಿ ಹಿಡಿದು ಬರುವವರನ್ನು ನಗುತ್ತಾ ಮಾತನಾಡಿಸಿ ಕಳಿಸುತ್ತೇನೆ. ನಿಮ್ಮ ನಿಮ್ಮ ಊರಿನಲ್ಲಿ ಮುಂದಿನ ಯೋಜನೆಗಳ ಕುರಿತು ಯಾವುದು ಉತ್ತಮ ಎಂದು ನೀವೇ ನಿರ್ಧಾರ ಮಾಡಿ ಹೇಳಿ. ನಿಮ್ಮ ಗ್ರಾಮ ಪಂಚಾಯಿತಿಗೆ ಏನು ಬೇಕು ಎಂಬುದನ್ನು ನೀವೇ ನಿರ್ಧಾರ ಮಾಡಿ. ನಾನು ಯಾವುದಕ್ಕೂ ತಲೆ ಹಾಕುವುದಿಲ್ಲ. ನಿಮ್ಮ ಅಭಿಪ್ರಾಯದ ಹೊರತು ಪೆನ್ನು ಹಿಡಿದು ಒಂದು ಪತ್ರಕ್ಕೂ ಸಹಿ ಹಾಕಲ್ಲ. ಈ ಬಗ್ಗೆ ನಿಮಗೆ ಆತಂಕವೂ ಬೇಡ, ಬೇಸರವೂ ಬೇಡ ಎಂದು ಹೇಳಿದ್ದಾರೆ. ಈ ಮೂಲಕ ದ್ವೇಷದ ರಾಜಕಾರಣಕ್ಕೆ ನಾಂದಿ ಹಾಡಿದ್ದಾರೆಯೇ ಎಂಬ ಪ್ರಶ್ನೆ ಎದುರಾಗಿದೆ.

ಮತದಾರರ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಿರುವ ಎನ್‌ ಚಲುವರಾಯಸ್ವಾಮಿ

ಇದನ್ನೂ ಓದಿ: Monsoon Season: ಮಂಗಳೂರು ವಿವಿ ಕಾಲೇಜಲ್ಲಿ ಕೈ ತೊಳೆಯೋಕೂ ನೀರಿಲ್ಲ; ರಜೆ ಕೊಟ್ಟ ಆಡಳಿತ ಮಂಡಳಿ!

ವೈರಲ್‌ ಆಗಿದ್ದ ಚೀಪ್‌ ಗಿಮಿಕ್‌ ವಿಡಿಯೊ!

ಈ ಬಾರಿಯ ಚುನಾವಣೆಯಲ್ಲಿ ಘೋಷಣೆ ಮಾಡಲಾಗಿರುವ ಗ್ಯಾರಂಟಿ (Congress Guarantee) ಯೋಜನೆಗಳು ಚುನಾವಣೆ ಗಿಮಿಕ್‌ ಎಂದು ಕೃಷಿ ಸಚಿವ ಎನ್.‌ ಚಲುವರಾಯಸ್ವಾಮಿ (N Chaluvarayaswamy) ಅವರು ಹೇಳಿರುವ ವಿಡಿಯೊವೊಂದು ವೈರಲ್‌ (Video Viral) ಆಗಿದೆ. ಚುನಾವಣೆ ವೇಳೆ ಅಧಿಕಾರವನ್ನು ಹಿಡಿಯುವುದೇ ಬಹುಮುಖ್ಯ ಆಗಿದ್ದರಿಂದ ನಮಗೆ ಇಷ್ಟ ಇದೆಯೋ ಇಲ್ಲವೋ, ಸಿದ್ದರಾಮಯ್ಯ (CM Siddaramaiah) ಅವರಿಗೆ ಇಷ್ಟ ಆಗುತ್ತದೆಯೋ ಇಲ್ಲವೋ? ಇಂಥ ಚೀಪ್‌ ಗಿಮಿಕ್‌ಗಳನ್ನು ಮಾಡಬೇಕಾಗುತ್ತದೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಹೇಳಿಕೆ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲೀಗ ಹರಿದಾಡುತ್ತಿದೆ.

ವಿಡಿಯೊದಲ್ಲಿ ಏನಿದೆ?

“ಈ ಹಿಂದೆಯೂ ಸಹ ಹಲವಾರು ಉಚಿತ ಯೋಜನೆಗಳನ್ನು ನಾವೇ ವಿರೋಧ ಮಾಡಿಕೊಂಡು ಬಂದಿದ್ದೇವೆ. ಇದು ದೇಶದಲ್ಲಿಯೇ ಚರ್ಚೆ ಆಗಿರುವ ವಿಚಾರವಾಗಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ, ಮುಂದೆ ಫ್ರೀ.. ಫ್ರೀ.. ಎಂದು ಹೋದರೆ ಎಲ್ಲಿಗೆ ಹೋಗಿ ಮುಟ್ಟುತ್ತದೆ ಎಂದು ನಾವೂ ಚರ್ಚೆ ಮಾಡಿದ್ದೇವೆ. ಈಗ ನಾವುಗಳೂ ಅದೇ ಲೈನ್‌ನಲ್ಲಿ ಹೊರಟಿದ್ದೇವೆ. ಎಲ್ಲೋ ಒಂದು ಕಡೆ ಚುನಾವಣೆ, ರಿಸಲ್ಟ್‌ ಎಲ್ಲವೂ ಮುಖ್ಯವಾಗುತ್ತದೆ. ಸರ್ಕಾರ ಬಂದರೆ ತಾನೇ ನಾವೂ ಏನಾದರೂ ಮಾಡುವುದಕ್ಕೆ ಸಾಧ್ಯವಾಗುವುದು? ಅಧಿಕಾರ ಸಿಕ್ಕಿದರೆ ತಾನೇ ಕೆಲಸ ಮಾಡುವುದಕ್ಕೆ ಆಗುವುದು ಎನ್ನುವ ದೃಷ್ಟಿ ಬಂದಾಗ ಅಂದು ಫಲಿತಾಂಶವೇ ಅನಿವಾರ್ಯ ಆಗುತ್ತದೆ. ಹಾಗಾಗಿ ರಿಸಲ್ಟ್‌ ಬರಬೇಕು ಎಂದಾಗ ಈ ರೀತಿಯ (ಗ್ಯಾರಂಟಿ) ಚೀಪ್‌ ಪಾಪ್ಯುಲಾರಿಟಿ, ಇಲ್ಲದ್ದು ಪಲ್ಲದ್ದು ಎಲ್ಲವನ್ನೂ ಮಾಡುತ್ತೇವೆ. ಆದರೆ, ನಮ್ಮ ಮನಸ್ಸು ಒಪ್ಪುತ್ತದೆಯೋ ಇಲ್ಲವೋ? ನಮಗೆ, ಸಿದ್ದರಾಮಯ್ಯ ಅವರಿಗೆ ಇಷ್ಟವಾಗುತ್ತದೆಯೋ ಇಲ್ಲವೋ? ಕೆಲವನ್ನು ಮಾಡಿಕೊಂಡು ಹೋಗಬೇಕಾಗುತ್ತದೆ, ಕೆಲವನ್ನು ಒಪ್ಪಿಕೊಳ್ಳಬೇಕಾಗುತ್ತದೆ” ಎಂದು ಹೇಳಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಇದು ಈಗ ಚರ್ಚೆಗೆ ಗ್ರಾಸವಾಗಿದೆ.

ಸಿದ್ದರಾಮಯ್ಯ ಅವರಿಗೂ ಇಷ್ಟ ಇರಲಿಲ್ಲವೇ?

ಇಲ್ಲಿ ಚಲುವರಾಯಸ್ವಾಮಿ ಅವರು ನೀಡಿರುವ ಹೇಳಿಕೆಯಲ್ಲಿ, “ನಮ್ಮ ಮನಸ್ಸು ಒಪ್ಪುತ್ತದೆಯೋ ಇಲ್ಲವೋ? ನಮಗೆ, ಸಿದ್ದರಾಮಯ್ಯ ಅವರಿಗೆ ಇಷ್ಟವಾಗುತ್ತದೆಯೋ ಇಲ್ಲವೋ? ಕೆಲವನ್ನು ಮಾಡಿಕೊಂಡು ಹೋಗಬೇಕಾಗುತ್ತದೆ, ಕೆಲವನ್ನು ಒಪ್ಪಿಕೊಳ್ಳಬೇಕಾಗುತ್ತದೆ ” ಎಂದು ಹೇಳಿರುವುದು ಸಹ ಈಗ ಚರ್ಚೆಯ ಭಾಗವಾಗಿದೆ. ಅಂದರೆ, ಈ ರೀತಿಯ ಉಚಿತ ಗ್ಯಾರಂಟಿ ಘೋಷಣೆಯು ಸಿದ್ದರಾಮಯ್ಯ ಅವರಿಗೂ ಇಷ್ಟ ಇರಲಿಲ್ಲವೇ? ಚುನಾವಣೆ ಗೆಲ್ಲುವುದಕ್ಕೋಸ್ಕರ ಅನಿವಾರ್ಯವಾಗಿ ಘೋಷಣೆ ಮಾಡಿದರೇ? ಅಥವಾ ಹೈಕಮಾಂಡ್‌ ನಿರ್ಧಾರಕ್ಕೆ ಅವರು ತಲೆ ಬಾಗಬೇಕಾಯಿತೇ? ಎಂಬ ಬಗ್ಗೆಯೂ ಈಗ ಚರ್ಚೆಗಳು ಹುಟ್ಟಿಕೊಂಡಿವೆ.

ಇದನ್ನೂ ಓದಿ: Text Book: ಹೊಸ ಪಠ್ಯಕ್ರಮ ರಚನೆಗೆ ಸಮಿತಿ; ಬಿಜೆಪಿ ಅವಧಿಯ ಅಧ್ಯಾಯಗಳಿಗೆ ಕೊಕ್‌?

ಚುನಾವಣಾ ಪೂರ್ವ ಹೇಳಿಕೆ?

ಇದು ಚುನಾವಣೆ ನಡೆಯುವುದಕ್ಕಿಂತ ಮೊದಲು ಮಾಡಿದ ವಿಡಿಯೊ ಇರಬಹುದು ಎಂದೂ ಹೇಳಲಾಗುತ್ತಿದ್ದು, ಈ ಬಗ್ಗೆ ಈಗಿನ ಕೃಷಿ ಸಚಿವ ಎನ್.‌ ಚಲುವರಾಯಸ್ವಾಮಿ ಅವರು ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
Ex Minister V Somanna and MP GS Basavaraj
ಕರ್ನಾಟಕ7 mins ago

Lok Sabha Election 2024: ಸೋಮಣ್ಣಗೆ ತುಮಕೂರು ಲೋಕಸಭೆ ಟಿಕೆಟ್; ಗುಟ್ಟು ಬಿಚ್ಚಿಟ್ಟ ಹಾಲಿ ಸಂಸದ

successful brain surgery on a 5 year old boy at ballari vims
ಕರ್ನಾಟಕ13 mins ago

Ballari News : 5 ವರ್ಷದ ಬಾಲಕನಿಗೆ ಅತೀ ವಿರಳ ಯಶಸ್ವಿ ಮೆದುಳಿನ ಶಸ್ತ್ರ ಚಿಕಿತ್ಸೆ

Gitanjali Aiyar
ದೇಶ15 mins ago

News Anchor : ಭಾರತದ ಮೊಟ್ಟ ಮೊದಲ ಮಹಿಳಾ ಇಂಗ್ಲಿಷ್​ ನ್ಯೂಸ್ ಆ್ಯಂಕರ್​ ನಿಧನ

old pair dance
ವೈರಲ್ ನ್ಯೂಸ್17 mins ago

Viral Video : ವೇದಿಕೆ ಮೇಲೆ ಧೂಳೆಬ್ಬಿಸಿದ ಭಲೇ ಜೋಡಿ; ಸಕತ್‌ ಆಗಿದೆ ಈ ಸೆನೋರಿಟಾ ಡ್ಯಾನ್ಸ್‌

India vs West Indies Schedule
ಕ್ರಿಕೆಟ್34 mins ago

INDvsWI: ಭಾರತ-ವಿಂಡೀಸ್‌ ಕ್ರಿಕೆಟ್​ ಸರಣಿಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Marnus Labuschagne
ಕ್ರಿಕೆಟ್48 mins ago

WTC Final 2023 : ಶಮಿ ಎಸೆತಕ್ಕೆ ಮರ್ನಸ್​ ಲಾಬುಶೇನ್​ ಬೌಲ್ಡ್​ ಆದ ರೀತಿ ಹೀಗಿದೆ

wrestlers protest
ಕ್ರೀಡೆ2 hours ago

Wrestlers Protest: ಜೂನ್​ 15ರ ತನಕ ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು

abhishek ambareesh wedding Reception
ಕರ್ನಾಟಕ2 hours ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

KS Bharat
ಕ್ರಿಕೆಟ್2 hours ago

WTC Final 2023 : ವಿಕೆಟ್​ ಕೀಪರ್​ ಕೆಎಸ್​ ಭರತ್​​ ಹಿಡಿದ ರೋಮಾಂಚಕಾರಿ ಕ್ಯಾಚ್​ ಹೀಗಿತ್ತು

for tenants also to wrestlers protest and more news
ಕರ್ನಾಟಕ2 hours ago

ವಿಸ್ತಾರ TOP 10 NEWS: ಬಾಡಿಗೆಯವರಿಗೂ ಫ್ರೀ ಕರೆಂಟ್‌ನಿಂದ, ಅಂತಿಮ ಘಟ್ಟದಲ್ಲಿ ಕುಸ್ತಿ ಕದನದವರೆಗಿನ ಪ್ರಮುಖ ಸುದ್ದಿಗಳಿವು

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ17 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

abhishek ambareesh wedding Reception
ಕರ್ನಾಟಕ2 hours ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ9 hours ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ17 hours ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

Salman Khan Bigg Boss ott 2
South Cinema1 day ago

Big Boss OTT 2: ಜೂನ್ 17ಕ್ಕೆ ಬಿಗ್‌ಬಾಸ್ ಒಟಿಟಿ 2 ಪ್ರಸಾರ, ಇಲ್ಲೂ ನಿರೂಪಕ ಸಲ್ಲೂ!

dining table vastu tips
ಭವಿಷ್ಯ1 day ago

Vastu Tips : ಮನೆಯ ಡೈನಿಂಗ್‌ ಹಾಲ್‌ನಲ್ಲಿ ಈ ಆಕಾರದ ಟೇಬಲ್‌ ಇರಲೇಬಾರದು!

pineapple cultivation
ಕೃಷಿ1 day ago

Krishi Khajane : ಆರೋಗ್ಯಕರ ಅನಾನಸ್‌ ಬೆಳೆಯುವುದು ಕಷ್ಟವೇನಲ್ಲ!

health and horoscope horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ, ಇರಲಿ ಎಚ್ಚರ!

Chakravarthy Sulibele and MB Patil
ಕರ್ನಾಟಕ2 days ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ2 days ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ3 days ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

ಟ್ರೆಂಡಿಂಗ್‌

error: Content is protected !!