Viral Video | ಜೋರಾಗಿ ಉಯ್ಯಾಲೆ ಆಡುತ್ತ ತಿರುತಿರುಗಿ ಬಿದ್ದ ಮಹಿಳೆ; ಜೋಕಾಲಿ ಜೋಕೆ ! - Vistara News

ವೈರಲ್ ನ್ಯೂಸ್

Viral Video | ಜೋರಾಗಿ ಉಯ್ಯಾಲೆ ಆಡುತ್ತ ತಿರುತಿರುಗಿ ಬಿದ್ದ ಮಹಿಳೆ; ಜೋಕಾಲಿ ಜೋಕೆ !

ಜೋಕಾಲಿ ಆಟ ಎಲ್ಲರಿಗೂ ಇಷ್ಟವಾಗುತ್ತದೆ. ಆದರೆ ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟಬುತ್ತಿ. ಮಹಿಳೆ ಬಿದ್ದ ಈ ವಿಡಿಯೋ ಭಯ ಹುಟ್ಟಿಸುವಂತಿದೆ.

VISTARANEWS.COM


on

Viral Video
ಉಯ್ಯಾಲೆ ಆಡುತ್ತಿರುವ ಮಹಿಳೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೋಕಾಲಿ ಆಟ ಯಾರಿಗೆ ಇಷ್ಟವಿಲ್ಲ ಹೇಳಿ. ಇದು ಮಕ್ಕಳಿಗಷ್ಟೇ ಇಷ್ಟವಾಗುವ ಆಟವಲ್ಲ. ಮಹಿಳೆಯರು, ವಯಸ್ಸಾದವರೂ-ಹೀಗೆ ಎಲ್ಲ ವರ್ಗದವರೂ ತುಂಬ ಇಷ್ಟಪಟ್ಟು ಆಡುತ್ತಾರೆ. ಆ ಉಯ್ಯಾಲೆ ಅತ್ತಿಂದತ್ತ ಜೋರಾಗಿ ಓಲಾಡಿದಷ್ಟೂ ಆಡುವವರಿಗೆ ಉತ್ಸಾಹ ಏರುತ್ತದೆ. ಹೀಗೆ ಸಖತ್​ ಮಜಾ ಕೊಡುವ ಜೋಕಾಲಿ ಅಷ್ಟೇ ಅಪಾಯವೂ ಕೂಡ. ನಾವು ಆಯತಪ್ಪಿದರೆ, ಹಿಡಿತ ಸಡಿಲವಾದರೆ ಅಥವಾ ಜೋಕಾಲಿ ಹಗ್ಗ ಹರಿದರೆ ಅವಘಡ ಕಟ್ಟಿಟ್ಟ ಬುತ್ತಿ. ಅದಕ್ಕೆ ಈ ದೃಶ್ಯವೇ ಸಾಕ್ಷಿ.

‘ಅದೊಂದು ದೊಡ್ಡದಾದ ಹಸಿರು ಮರ. ಅದಕ್ಕೆ ಜೋಕಾಲಿ ಕಟ್ಟಲಾಗಿದೆ. ಹಲವು ಮಹಿಳೆಯರೆಲ್ಲ ಅಲ್ಲಿ ಸೇರಿದ್ದಾರೆ. ಅದರಲ್ಲೊಬ್ಬ ಹಸಿರು ಚೂಡೀದಾರು ತೊಟ್ಟ ಮಹಿಳೆ ಉಯ್ಯಾಲೆ ಆಡುತ್ತಿದ್ದಾರೆ. ಅವರು ಜೋಕಾಲಿ ಮೇಲೆ ಕುಳಿತಿಲ್ಲ, ಬದಲಾಗಿ ನಿಂತುಕೊಂಡಿದ್ದಾರೆ. ಜೋಕಾಲಿ ಭರ್ಜರಿ ವೇಗದಲ್ಲಿ ಅತ್ತಿಂದಿತ್ತ ಓಲಾಡುತ್ತಿತ್ತು. ಮೂರ್ನಾಲ್ಕು ಬಾರಿ ಆಡಿದ ಅವರು, ಬಳಿಕ ಆಯ ತಪ್ಪಿ, ಜೋಕಾಲಿ ಮೇಲಿಂದ ತಿರುತಿರುಗಿ, ಉಲ್ಟಾ ಆಗಿ ಬಿದ್ದಿದ್ದಾರೆ. ಅದೃಷ್ಟಕ್ಕೆ ಆ ಮರದ ಕಟ್ಟೆಗೆ ಬಡಿದು ಬೀಳಲಿಲ್ಲ. ಆಕೆ ಕೆಳಗೆ ಬೀಳುತ್ತಿದ್ದಂತೆ ವಿಡಿಯೋ ಕಟ್​ ಆಗಿದ್ದು, ಮುಂದಿನ ಸ್ಥಿತಿ ಗೊತ್ತಾಗಲಿಲ್ಲ. ಈ ವಿಡಿಯೋ ನೋಡಿದ ಅನೇಕರು ಮಹಿಳೆ ಬಗ್ಗೆ ಮರುಕ ವ್ಯಕ್ತಪಡಿಸಿ ಕಮೆಂಟ್ ಮಾಡಿದ್ದರೆ, ಇನ್ನೂ ಹಲವರು ಮಹಿಳೆಯನ್ನೇ ಛೇಡಿಸಿದ್ದಾರೆ.

ಇದನ್ನೂ ಓದಿ: Viral Video | ಅಮ್ಮನ ಸಮಾಧಿಗೆ ಕಿಂಡಿ ಮಾಡಿ ಹುಡುಕಿದ ಮಗು; ಹೃದಯ ಕಿವುಚುವ ದೃಶ್ಯವಿದು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Look between H and L : ಸೋಶಿಯಲ್​ ಮೀಡಿಯಾಗಳಲ್ಲಿ ಟ್ರೆಂಡ್​ ಆದ H ಮತ್ತು L; ಏನಿದರ ಗಮ್ಮತ್ತು?

Look between H and L : ನಿಮ್ಮ ಕೀಬೋರ್ಡ್​​ನಲ್ಲಿ ಎಚ್ ಮತ್ತು ಎಲ್ ನಡುವೆ ನೋಡಿ” ಟ್ರೆಂಡ್ ಕೂಡ ಗೊಂದಲ ಸೃಷ್ಟಿಸಿತು. ಯಾಕೆಂದರೆ ಸ್ವಿಗ್ಗಿ, ಯೂಟ್ಯೂಬ್, ಬ್ಲಿಂಕಿಟ್ ಮತ್ತು ಇತರ ಬ್ರಾಂಡ್​ಗಳು ಕೂಡ ತಮ್ಮದೂ ಇರಲಿ ಎಂದು ಪೋಸ್ಟ್​​ ಮಾಡಿದವು. ಹೀಗಾಗಿ ವಿಷಯವೇನೆಂದು ತಿಳಿದುಕೊಳ್ಳುವುದು ಅಗತ್ಯ.

VISTARANEWS.COM


on

ook between H and L
Koo

ಬೆಂಗಳೂರು: ಮೇಣದ ಅರಮನೆಗೆ ಬೆಂಕಿ ಹಿಡಿದಷ್ಟೇ ವೇಗವಾಗಿ ಸೋಶಿಯಲ್​ ಮೀಡಿಯಾಗಳಲ್ಲಿ ಟ್ರೆಂಡ್ ಗಳು ಸೃಷ್ಟಿಯಾಗುತ್ತವೆ. ವ್ಯಕ್ತಿಯೊಬ್ಬರು ಶೇರ್ ಮಾಡುವ ಯಾವುದೊ ಒಂದು ಕಾನ್ಸೆಪ್ಟ್​ ಬೆಳೆಬೆಳೆದು ವಿಶ್ವ ವ್ಯಾಪಿಯಾಗುತ್ತದೆ. ಆ ವಿಷಯಕ್ಕೆ ತಲೆ, ಕಾಲು ಮತ್ತು ಬಾಲಗಳೂ ಸೇರಿಕೊಳ್ಳುತ್ತವೆ. ಮುಂದೆ ಅದು ಎಲ್ಲರ ಮನಸ್ಸನ್ನೂ ಗೆಲ್ಲುವ ಸೋಶಿಯಲ್​ ಮೀಡಿಯಾ ಟ್ರೆಂಡ್ ಆಗಿ ಉಳಿಯುತ್ತದೆ. ಅಂತೆಯೇ ಮಂಗಳವಾರ (ಏಪ್ರಿಲ್ 23ರಂದು) ಸೋಶಿಯಲ್​ ಮೀಟಿಯಾ ವೇದಿಕೆಯಾಗಿರುವ ಎಕ್ಸ್​​ನಲ್ಲಿ ಎಚ್​​ ಮತ್ತು ಎಲ್ ಮಧ್ಯೆ ನೋಡಿ (Look between H and L) ಟ್ರೆಂಡ್​ ಕಿಡಿ ಹಚ್ಚಿತ್ತು. ಎಲ್ಲಿ ನೋಡಿದರೂ ಇದೇ ರೀತಿಯ ಪೋಸ್ಟ್​ಗಳು ಕಾಣಿಸುತ್ತಿದ್ದವು. ಆರಂಭದಲ್ಲಿ ಪೋಸ್ಟ್​​ ನೋಡಿ ಗಾಬರಿ ಬಿದ್ದಿದ್ದರು ಹಲವರು. ಅರ್ಥ ಮಾಡಿಕೊಂಡ ಬಳಿಕ ಅದು ದೊಡ್ಡ ವಿನೋದವಾಗಿ ಮಾರ್ಪಾಡಾಯಿತು.

ಸೋಶಿಯಲ್​ ಮೀಡಿಯಾಗಳಲ್ಲಿ ಆಗಾಗ್ಗೆ ಮೀಮ್ ಗಳು, ವೀಡಿಯೊಗಳು ಮತ್ತು ನೆಟ್ಟಿಗರು ಹಂಚಿಕೊಳ್ಳುವ ವಿಷಯಗಳು ಸಮೃದ್ಧವಾಗಿರುತ್ತವೆ. ಆದಾಗ್ಯೂ, ಈ ಕೆಲವು ಸಂಗತಿಗಳ ಅರ್ಥದ ಬಗ್ಗೆ ತಿಳಿದಿಲ್ಲದ ಬಹಳಷ್ಟು ಜನರಿಗೆ ಇದೇನು ಅನಿಸುವುದು ಸಹಜ. ಅಂತೆಯೇ “ನಿಮ್ಮ ಕೀಬೋರ್ಡ್​​ನಲ್ಲಿ ಎಚ್ ಮತ್ತು ಎಲ್ ನಡುವೆ ನೋಡಿ” ಟ್ರೆಂಡ್ ಕೂಡ ಗೊಂದಲ ಸೃಷ್ಟಿಸಿತು. ಯಾಕೆಂದರೆ ಸ್ವಿಗ್ಗಿ, ಯೂಟ್ಯೂಬ್, ಬ್ಲಿಂಕಿಟ್ ಮತ್ತು ಇತರ ಬ್ರಾಂಡ್​ಗಳು ಕೂಡ ತಮ್ಮದೂ ಇರಲಿ ಎಂದು ಪೋಸ್ಟ್​​ ಮಾಡಿದವು. ಹೀಗಾಗಿ ವಿಷಯವೇನೆಂದು ತಿಳಿದುಕೊಳ್ಳುವುದು ಅಗತ್ಯ.

ಏನಿದು Look between H and L?

ನಿಮ್ಮ ಕಂಪ್ಯೂಟರ್ ಅಥವಾ ಮೊಬೈಲ್ ಕಿ ಪ್ಯಾಡ್​ನಲ್ಲಿ ಇಂಗ್ಲಿಷ್​ನ H ಮತ್ತು L ನಡುವೆ J ಮತ್ತು K ಇದೆ. ಹಾಗಾದರೆ ಜೆ.ಕೆ ಎಂದರೇನು? ಇಂಗ್ಲಿಷ್​ನಲ್ಲಿ Just Kidding ( ಕೇವಲ ತಮಾಷೆಗಾಗಿ) ಎಂಬ ಮಾತಿದೆ. ಅದನ್ನು ನೇರವಾಗಿ ಹೇಳುವ ಬದಲು Look between H and L ಟ್ರೆಂಡ್​ ಸೃಷ್ಟಿ ಮಾಡಲಾಗಿದೆ. ಅಂದ ಹಾಗೆ ಇದಕ್ಕೂ ಒಂದು ಕಾರಣವಿದೆ. ಇತ್ತೀಚೆಗೆ ಮಲಯಾಳಂನಲ್ಲಿ ‘ಪ್ರೇಮಾಲು’ ಎಂಬ ಸಿನಿಮಾ ಬಿಡುಗಡೆಯಾಗಿತ್ತು. ಅದು ಈಗ ಒಟಿಟಿಯಲ್ಲೂ ಲಭ್ಯ. ಅದಲ್ಲಿ ಭಗ್ನ ಪ್ರೇಮಿ ಹಾಗೂ ಐಟಿ ಕಂಪನಿಯೊಂದರ ಪ್ರಾಜೆಕ್ಟ್​ ಮ್ಯಾನೇಜರ್​ ಆದಿ ಎಂಬ ಪಾತ್ರವನ್ನು Just Kidding ಅನ್ನು ಪದೇ ಪದೆ ಬಳಸುತ್ತಾನೆ. ಗಂಭೀರವಾದ ವಿಷಯವನ್ನು ಹೇಳಿ just kidding ಎಂದು ಹೇಳುತ್ತಿದ್ದಾನೆ.

ಇದನ್ನೂ ಓದಿ: Virat kohli : ಅಂಪೈರ್​ಗಳ ಕೈ ಕುಲುಕಲೂ ನಿರಾಕರಿಸಿದ್ದ ವಿರಾಟ್​ ಕೊಹ್ಲಿ; ವಿಡಿಯೊ ಇದೆ

ಇದೇ ವೇಳೆ Look Between T and O ಟ್ರೆಂಡ್​ ಕೂಡ ಆಗಿದೆ. ಇದು 2021ರಲ್ಲಿ ಆರಂಭಗೊಂಡಿತು. 4Chan ಎಂಬ ಚಿತ್ರ ಆಧಾರಿತ ವೆಬ್​​ ಸರಣಿಯದ್ದಾಗಿದೆ. ಕೀಬೋರ್ಡ್​​ನಲ್ಲಿ T ಮತ್ತು O ನಡುವಿನ Y, U ಮತ್ತು I ಅಕ್ಷರಗಳಿವೆ. ಇದು ಅನಿಮೆ ಸರಣಿಯ ಪಾತ್ರವಾದ Yui ಹೆಸರಾಗಿದೆ. ಇದು ತಮ್ಮ ಪ್ರೌಢ ಶಾಲೆಯ ಸಂಗೀತ ಕ್ಲಬ್ ಮೂಲಕ ಬ್ಯಾಂಡ್ ನುಡಿಸುವು ಹುಡುಗಿಯ ಕುರಿತದ್ದು.

ಬಹಳಷ್ಟು ಜನರು ಈ ಟ್ರೆಂಡ್​ ತಮ್ಮ ಪ್ರತಿಕ್ರಿಯೆಗಳನ್ನು ಸಹ ವ್ಯಕ್ತಪಡಿಸಿದರು. ಕೆಲವರು ಅದರ ಬಗ್ಗೆ ಗೊಂದಲಕ್ಕೊಳಗಾಗಿದ್ದರೆ ಇತರರು ಇದು “ಕಿರಿಕಿರಿ” ಎಂದು ಎಂದೂ ಕಾಮೆಂಟ್​ ಮಾಡಿದ್ದಾರೆ.

Continue Reading

ವೈರಲ್ ನ್ಯೂಸ್

Viral News: ರಾಮನ ಚಿತ್ರವಿರುವ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ; ಅಂಗಡಿ ಮಾಲೀಕ ಅರೆಸ್ಟ್‌

Viral News: ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ ಮಾಡಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯಲ್ಲಿ ಈ ಘಟನೆ ನಡೆದಿದೆ.

VISTARANEWS.COM


on

By

Viral News
Koo

ದೆಹಲಿ: ಭಗವಾನ್ ರಾಮನ (god ram) ಚಿತ್ರಗಳನ್ನು ಹೊಂದಿರುವ ಪ್ಲೇಟ್‌ಗಳಲ್ಲಿ (plate) ನಾನ್‌ವೆಜ್‌ ಬಿರಿಯಾನಿ (biriyani) ಬಡಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social) ವೈರಲ್ (Viral News) ಆಗಿದೆ. ಈ ಘಟನೆ ಉತ್ತರ ದೆಹಲಿಯ (north delhi) ಜಹಾಂಗೀರ್‌ಪುರಿಯಲ್ಲಿರುವ (jahangirpuri) ಬಿರಿಯಾನಿ ಜಾಯಿಂಟ್‌ನಲ್ಲಿ ಭಾನುವಾರ ನಡೆದಿದೆ.

ಈ ವಿಡಿಯೋದಲ್ಲಿ ಭಗವಾನ್ ರಾಮನ ಚಿತ್ರಗಳನ್ನು ಒಳಗೊಂಡ ಪ್ಲೇಟ್‌ ಗಳಲ್ಲಿ ಬಿರಿಯಾನಿ ನೀಡುತ್ತಿರುವುದನ್ನು ವಿಡಿಯೋ ತೋರಿಸುತ್ತದೆ. ಬಿರಿಯಾನಿ ಅಂಗಡಿಯ ಬಳಿ ಜನರ ಗುಂಪಾಗಿ ನಿಂತು ಬಳಕೆ ಮಾಡಿ ಬಿಸಾಡುವ ಪ್ಲೇಟ್ ಗಳಲ್ಲಿ ಬಿರಿಯಾನಿ ತಿನ್ನುತ್ತಿದ್ದರು. ಅಂಗಡಿ ಮಾಲೀಕನ ಈ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಬಳಿಕ ಸ್ಥಳಕ್ಕೆ ತೆರಳಿದ ಪೊಲೀಸರು ರಾಮನ ಚಿತ್ರವಿದ್ದ ಪ್ಲೇಟ್‌ಗಳನ್ನು ವಶಪಡಿಸಿಕೊಂಡು ಅಂಗಡಿ ಮಾಲೀಕನನ್ನು ಬಂಧಿಸಿದರು.

ಇದನ್ನೂ ಓದಿ: IPL 2024: ಹಾರ್ದಿಕ್​ ಪಾಂಡ್ಯ ನಿಜವಾಗಿಯೂ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರಾ?; ವಿಚಿತ್ರ ವರ್ತನೆಯ ವಿಡಿಯೊ ವೈರಲ್​

ಬಿರಿಯಾನಿ ಅಂಗಡಿಯಲ್ಲಿ ಗಲಾಟೆ

ರಾಮನ ಚಿತ್ರವಿರುವ ಪ್ಲೇಟ್ ನಲ್ಲಿ ಬಿರಿಯಾನಿ ಮಾರಾಟ ಮಾಡುತ್ತಿರುವ ಮಾಹಿತಿ ತಿಳಿದು ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ಮತ್ತು ಬಜರಂಗದಳದ ಸದಸ್ಯರು ಸೇರಿದ್ದು ಅಂಗಡಿಯ ಮಾಲೀಕರನ್ನು ತರಾಟೆಗೆ ತೆಗೆದುಕೊಂಡರು. ಆ ಪ್ಲೇಟ್‌ಗಳಲ್ಲಿ ಬಿರಿಯಾನಿ ಮಾರಾಟ ಮಾಡುವುದನ್ನು ವಿರೋಧಿಸಿ ಪೊಲೀಸರಿಗೆ ದೂರು ನೀಡಿದರು. ಅಂಗಡಿಯಲ್ಲಿ ಬಿರಿಯಾನಿ ಮಾರುವವರ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಸ್ಥಳೀಯ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ.


ಪೇಪರ್ ಪ್ಲೇಟ್‌ಗಳ ಬಂಡಲ್‌ ನಲ್ಲಿ ಒಂದೆರಡು ಪ್ಲೇಟ್‌ಗಳು ಮಾತ್ರ ಭಗವಾನ್ ರಾಮನ ಫೋಟೋಗಳನ್ನು ಹೊಂದಿದ್ದವು. ಪ್ರಸ್ತುತ, ಜಹಾಂಗೀರ್ಪುರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕುರಿತು ಸಂಪೂರ್ಣ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆ ಮುಂದುವರಿಕೆ

ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಅಂಗಡಿ ಮಾಲೀಕರ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳು ಮಾರ್ಕೆಟಿಂಗ್ ಉದ್ದೇಶಕ್ಕಾಗಿ ಇದನ್ನು ಮಾಡಿದ್ದಾರೆಯೇ ಅಥವಾ ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಲು ಇದನ್ನು ಮಾಡಲಾಗಿದೆಯೇ ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ದೆಹಲಿಯ ಜನರು ಬೀದಿ ಬದಿಯ ಆಹಾರವನ್ನು ಹೆಚ್ಚಾಗಿ ಸೇವಿಸುತ್ತಾರೆ. ಹಳೆಯ ದೆಹಲಿಯಲ್ಲಿಯೂ ಆಹಾರದ ರುಚಿ ಹೆಚ್ಚಿನ ಜನರನ್ನು ಆಕರ್ಷಿಸುತ್ತದೆ. ಈ ಭಾಗದಲ್ಲಿ ಬಿರಿಯಾನಿ ಕೂಡ ಅನೇಕರು ಇಷ್ಟಪಡುತ್ತಾರೆ. ಆದರೆ ಆಹಾರ ಮಾರಾಟಕ್ಕಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವುದು ಸರಿಯಲ್ಲ ಎಂದು ನಗರದ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Continue Reading

ಬೆಂಗಳೂರು

Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

Murder case : ಅತಿಯಾದ ಲೈಂಗಿಕ ಕ್ರಿಯೆಗೆ ಒತ್ತಾಯಿಸಿಸುತ್ತಿದ್ದ ಮಹಿಳೆಯನ್ನು ಕೊಂದು ಪರಾರಿ ಆಗಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. 20 ಹುಡುಗರ ಸಹವಾಸ ಮಾಡಿದ್ದ ಮಹಿಳೆಯ ಹಿಸ್ವರಿ ಕೇಳಿ ಪೊಲೀಸರೇ ದಂಗಾಗಿದ್ದಾರೆ.

VISTARANEWS.COM


on

By

Murder case In Bengaluur
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ತನ್ನ ಮನೋಕಾಮನೆ ತಣಿಸಲು 48ರ ಮಹಿಳೆ, ಹುಡುಗರನ್ನು ಬಟ್ಟೆ ಬದಲಾಯಿಸುವಂತೆ ಬದಲಿಸುತ್ತಿದ್ದಳು. 20 ಹುಡುಗರ ಸಹವಾಸ ಹೊಂದಿದ್ದ ಆಕೆ ಅವರಿಗೆಲ್ಲ ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ ಹೆಸರು ಇಟ್ಟಿದ್ದಳು. ಆದರೆ ಕೊನೆಗೆ ಆಕೆಗೆ ಅದುವೇ ಮುಳುವಾಯಿತು. ಕಳೆದ ಏ. 19ರಂದು ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್‌ನ ಗಣೇಶ ನಗರದಲ್ಲಿ ಒಂಟಿ ಮಹಿಳೆಯ ಬರ್ಬರ (Murder Case) ಹತ್ಯೆಯಾಗಿತ್ತು. ಶೋಭಾ (48) ಎಂಬಾಕೆಯ ಮೃತದೇಹವು ಬೆಡ್‌ ರೂಮಿನಲ್ಲಿ ನಗ್ನ ಸ್ಥಿತಿಯಲ್ಲಿ ಬಿದ್ದಿತ್ತು. ಇದೀಗ ಕೊಲೆ ಪ್ರಕರಣವನ್ನು ಭೇದಿಸಿರುವ ಕೊಡಿಗೇಹಳ್ಳಿ ಪೊಲೀಸರು ಹೇರೋಹಳ್ಳಿ ಮೂಲದ ನವೀನ್ ಎಂಬಾತನನ್ನು ಬಂಧಿಸಿದ್ದಾರೆ. ತನಿಖೆಯಲ್ಲಿ ಮಹಿಳೆಯ ಕಾಮಕಥೆ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ.

ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಕೊಟ್ಟಿದ್ದ ಶೋಭಾ, ಕೊಡಿಗೆಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿ ವಾಸವಾಗಿದ್ದಳು. ಇತ್ತ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್‌, ಕಾಲ್ ಗರ್ಲ್‌ಗಾಗಿ ಆ್ಯಪ್‌ಗಳನ್ನು ಬಳಕೆ ಮಾಡುವುದು, ಅವರ ಜತೆ ಚಾಟ್ ಮಾಡುವುದು ಮಾಡುತ್ತಿದ್ದ. ಈ ವೇಳೆ ಶೋಭಾಳ ಪರಿಚಯವಾಗಿತ್ತು. ಮೊದ ಮೊದಲು ನವೀನ್‌ಗೆ ಶೋಭಾಳ ಸಂಗ ಚೆನ್ನಾಗಿಯೇ ಇತ್ತು. ಆದರೆ ಶೋಭಾಳ ವಿಕೃತತೆ ಹೆಚ್ಚಾಗುತ್ತಲೇ ಹೋಗಿತ್ತು. ಪದೇಪದೆ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದಳು. ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಳು. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಸಿಟ್ಟಾದ ನವೀನ್‌ ಉಸಿರುಗಟ್ಟಿಸಿ ಕೊಂದು ಪರಾರಿ ಆಗಿದ್ದ.

ಫೋಟೋ ತೋರಿಸಿ ಹುಡುಗರಿಗೆ ಬ್ಲಾಕ್‌ಮೇಲ್‌

ಇನ್ನು ಶೋಭಾ ಹಿನ್ನೆಲೆ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ. 48ರ ಶೋಭಾಳಿಗೆ ಯುವಕರೆಂದರೆ ಹುಚ್ಚು ಅಂತೆ. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿರುವ ಶೋಭಾ, ನವೀನ್‌ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಕಾಲ್‌ ಗರ್ಲ್‌ ಆ್ಯಪ್‌ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು.

ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೆ ಅಲ್ಲದೆ ಅವರೇನಾದರೂ ಬೇರೆಯವರನ್ನು ಮದುವೆ ಆಗಲು ಮುಂದಾದರೆ ಅದನ್ನು ತಪ್ಪಿಸುತ್ತಿದ್ದಳು. ನೀ ಮದುವೆ ಆಗಬಾರದು, ನಾನು ಕರೆದಾಗ ಬರಬೇಕು ಎಂದು ಧಮ್ಕಿ ಹಾಕುತ್ತಿದ್ದಳು. ಹೀಗೆ ನಾಲ್ವರು ಯುವಕರ ಮದುವೆಯನ್ನು ನಿಲ್ಲಿಸಿದ್ದಾಳೆ.

Murder Case
ಕೊಲೆಯಾದ ಶೋಭಾ ಹಾಗೂ ಆರೋಪಿ ನವೀನ್

ಒಳ್ಳೆ ಕುಟುಂಬದಿಂದ ಬಂದಿದ್ದ ನವೀನ್‌ನ ಹಿಂದೆ ಬಿದ್ದ ಶೋಭಾ ಕಾಟ ಕೊಟ್ಟಿದ್ದಳು. ಮನೆಗೆ ಕರೆದಾಗ
ಬಂದಿಲ್ಲ ಎಂದರೆ ಬೆದರಿಕೆ ಹಾಕುತ್ತಿದ್ದಳು ಎನ್ನಲಾಗಿದೆ. ಆಕೆಗೆ ಹೆದರಿ ನವೀನ್‌ ಬಂದು ಹೋಗುತ್ತಿದ್ದ. ಇನ್ನೂ
ಕೊಲೆಯಾದ ದಿನವೂ ನವೀನ್‌ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್‌ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು‌ ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್‌, ಶೋಭಾಳ ಕತ್ತು ಹಿಸುಕಿ ಕೊಲೆ‌ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಿರುವ ಕೊಡಿಗೇಹಳ್ಳಿ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೀಡೆ

IPL 2024: ಹಾರ್ದಿಕ್​ ಪಾಂಡ್ಯ ನಿಜವಾಗಿಯೂ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರಾ?; ವಿಚಿತ್ರ ವರ್ತನೆಯ ವಿಡಿಯೊ ವೈರಲ್​

IPL 2024: ಮುಂಬೈ ಇಂಡಿಯನ್ಸ್ ತಂಡ ಬ್ಯಾಟಿಂಗ್ ಮಾಡುತಿದ್ದ ವೇಳೆ ಹಾರ್ದಿಕ್ ಪಾಂಡ್ಯ ಡಗೌಟ್‌ನಲ್ಲಿ ತಮ್ಮ ಬ್ಯಾಟಿಂಗ್‌ಗಾಗಿ ಕಾಯುತ್ತಿದ್ದರು. ಈ ಸಂದರ್ಭದಲ್ಲಿ ಅವರು ಬೌಂಡರಿ ಲೈನ್ ಪಕ್ಕದಲ್ಲಿ ಪುಶ್​ ಅಪ್​​ ಮಾಡುವ ಮೂಲಕ ತಯಾರಿ ಮಾಡಿಕೊಂಡಿದ್ದರು. ಇದರ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

hardik pandya
Koo

ಜೈಪುರ: ಮುಂಬೈ ಇಂಡಿಯನ್ಸ್(mumbai indians)​ ತಂಡದ ನಾಯಕ ಹಾರ್ದಿಕ್​ ಪಾಂಡ್ಯ(Hardik Pandya) ಅವರು ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಮಾಜಿ ಆಟಗಾರ ರಾಬಿನ್​ ಉತ್ತಪ್ಪ(Robin Uthappa) ಕೆಲ ದಿನಗಳ ಹಿಂದೆ ಹೇಳಿದ್ದರು. ಹಾರ್ದಿಕ್​ ಅವರ ವರ್ತನೆಯನ್ನು ನೋಡುವಾಗ ಉತ್ತಪ್ಪ ಮಾತು ನಿಜ ಎಂಬಂತೆ ಭಾಸವಾಗುತ್ತಿದೆ. ಸೋಮವಾರ ನಡೆದಿದ್ದ ರಾಜಸ್ಥಾನ್​ ವಿರುದ್ಧದ(IPL 2024) ಪಂದ್ಯದಲ್ಲಿ ಪಾಂಡ್ಯ ವಿಚಿತ್ರ ವರ್ತನೆ ತೋರುತಿದ್ದರು. ಇದರ ವಿಡಿಯೊಗಳು ವೈರಲ್​ ಆಗುತ್ತಿದೆ.

ಮುಂಬೈ ಇಂಡಿಯನ್ಸ್ ತಂಡ ಬ್ಯಾಟಿಂಗ್ ಮಾಡುತಿದ್ದ ವೇಳೆ ಹಾರ್ದಿಕ್ ಪಾಂಡ್ಯ ಡಗೌಟ್‌ನಲ್ಲಿ ತಮ್ಮ ಬ್ಯಾಟಿಂಗ್‌ಗಾಗಿ ಕಾಯುತ್ತಿದ್ದರು. ಈ ಸಂದರ್ಭದಲ್ಲಿ ಅವರು ಬೌಂಡರಿ ಲೈನ್ ಪಕ್ಕದಲ್ಲಿ ಪುಶ್​ ಅಪ್​​ ಮಾಡುವ ಮೂಲಕ ತಯಾರಿ ಮಾಡಿಕೊಂಡಿದ್ದರು. ಅಲ್ಲದೆ ಪಂದ್ಯ ಸೋತಾಗಲೂ ತಮ್ಮ ಪಾಡಿಗೆ ನಗುತ್ತಿದ್ದರು. ಈ ಎಲ್ಲ ವಿಡಿಯೊಗಳು ವೈರಲ್​ ಆಗಿದ್ದು ನೆಟ್ಟಿಗರು ಪಾಂಡ್ಯಗೆ ಒಂದು ಸುತ್ತು ಕಡಿಮೆಯಾಗಿದೆ ಎಂದು ಹೇಳಿದ್ದಾರೆ. ಇನ್ನು ಕೆಲವರು ಓವರ್​ ಬಿಲ್ಡಪ್​ ಮಾಡಿದ್ದು ಸಾಕು ಮೊದಲು ಬ್ಯಾಟಿಂಗ್​ ಸರಿಯಾಗಿ ಮಾಡಿ ಎಂದು ಹೇಳಿದ್ದಾರೆ. ಪಾಂಡ್ಯ ಈ ಪಂದ್ಯದಲ್ಲಿ ಕೇವಲ 10 ರನ್​ ಗಳಿಸಿ ಔಟ್​ ಆಗಿದ್ದರು.

ಈ ಹಿಂದಿನ ಪಂದ್ಯಗಳಲ್ಲಿಯೂ ಮುಂಬೈ ಬೌಲರ್​ಗಳ ಎಸೆತಗಳಿಗೆ ಸಿಕ್ಸರ್​ ಹೋದರೆ ಪಾಂಡ್ಯ ಚಪ್ಪಾಳೆ ತಟ್ಟುತ್ತಾ ಹುಚ್ಚರಂತೆ ವರ್ತಿಸುತ್ತಿದ್ದರು. ಬೌಲಿಂಗ್​ ಮಾಡಲು ಓಡಿ ಬಂದು ಇನ್ನೇನು ಬೌಲಿಂಗ್​ ನಡೆಸಬೇಕು ಎನ್ನುವಷ್ಟರಲ್ಲಿ ತಕ್ಷಣ ಬೌಲಿಂಗ್​ ನಿಲ್ಲಿಸಿ ಫೀಲ್ಡಿಂಗ್​ ಸೆಟ್​ ಮಾಡುವುದು ಕೂಡ ಕಂಡುಬಂದಿದೆ. ಒಟ್ಟಾರೆಯಾಗಿ ಪಾಂಡ್ಯ ತಲೆಕೆಟ್ಟವರಂತೆ ವರ್ತಿಸುತ್ತಿದ್ದಾರೆ. ಇದುವೇ ತಂಡದ ಹಿನ್ನಡೆಗೆ ಕಾರಣ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ IPL 2024: ಸನ್​ರೈಸರ್ಸ್​ ತಂಡದ ಆಟಗಾರರನ್ನು ಭೇಟಿ ಮಾಡಿದ ನಟ ಮಹೇಶ್‌ ಬಾಬು

ಮುಂಬೈ ತಂಡ 9 ವಿಕೆಟ್​ಗಳ ಅಂತರದ ಹೀನಾಯ ಸೋಲು ಕಂಡಿತು. ಇಲ್ಲಿನ ಸವಾಯ್​ ಮಾನ್​ಸಿಂಗ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಮುಂಬೈ ತಂಡ ಮೊದಲು ಬ್ಯಾಟ್​ ಮಾಡಿತು. ಅಂತೆಯೇ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 179 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್ ತಂಡ ಇನ್ನೂ 8 ಎಸೆತಗಳು ಉಳಿದಿರುವಂತೆಯೇ 1 ವಿಕೆಟ್ ನಷ್ಟಕ್ಕೆ 183 ರನ್ ಬಾರಿಸಿ ಗೆಲುವು ಕಂಡಿತು.

ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನಟ್ಟಲು ಆರಂಭಿಸಿದ ಆರ್​ಆರ್​ ತಂಡಕ್ಕೆ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್ ನೆರವಾದರು. ಬಟ್ಲರ್​ 25 ಎಸೆತಕ್ಕೆ 35 ರನ್ ಬಾರಿಸ ಔಟಾದರೆ ಜೈಸ್ವಾಲ್ ಅಮೋಘ ಪ್ರದರ್ಶನ ನೀಡಿ 60 ಎಸೆತಕ್ಕೆ ಅಜೇಯ 104 ರನ್ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ನಾಯಕ ಸಂಜು ಸ್ಯಾಮ್ಸನ್​ 28 ಎಸೆತಕ್ಕೆ 38 ರನ್​ ಬಾರಿಸಿ ಕೊನೇ ತನಕ ಉಳಿದರು. ಬೌಲಿಂಗ್​ನಲ್ಲಿ 4 ಓವರ್​​ ದಾಳಿ ನಡೆಸಿದ ಸಂದೀಪ್​ 18 ರನ್​ಗೆ 5 ವಿಕೆಟ್​ ಕೆಡವಿದರು. ಈ ಸಾಧನೆಗಾಗಿ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಲಭಿಸಿತು.

Continue Reading
Advertisement
vistara Editorial ವಿಸ್ತಾರ ಸಂಪಾದಕೀಯ
ದೇಶ2 hours ago

ವಿಸ್ತಾರ ಸಂಪಾದಕೀಯ: ರಕ್ಷಣಾ ರಫ್ತು ಕ್ಷೇತ್ರದಲ್ಲಿ ಬೆಳವಣಿಗೆ ನಮ್ಮ ಹೆಗ್ಗಳಿಕೆ

IPL 2024
ಪ್ರಮುಖ ಸುದ್ದಿ2 hours ago

IPL 2024 : ಸ್ಟೊಯ್ನಿಸ್​​ ಶತಕ, ಚೆನ್ನೈ ವಿರುದ್ಧ 6 ವಿಕೆಟ್​ ಗೆಲವು ಸಾಧಿಸಿದ ಲಕ್ನೊ

Voters' Pledge
ಬೆಂಗಳೂರು2 hours ago

Voters Pledge: ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಮತದಾನ ಪ್ರತಿಜ್ಞಾವಿಧಿ ಬೋಧನೆ

Lok Sabha Election 2024
Lok Sabha Election 20242 hours ago

Lok Sabha Election 2024: ರಾಹುಲ್‌ ಗಾಂಧಿಯ ಡಿಎನ್‌ಎ ಪರೀಕ್ಷಿಸಬೇಕು; ವಿವಾದ ಹುಟ್ಟುಹಾಕಿದ ಶಾಸಕ ಅನ್ವರ್ ಹೇಳಿಕೆ

DCM DK Shivakumar Election campaign for Bangalore Rural Lok Sabha Constituency Congress candidate DK Suresh In Ramanagara
ರಾಮನಗರ3 hours ago

Lok Sabha Election 2024: ಕೇಂದ್ರ ಸರ್ಕಾರದಿಂದ ರಾಜ್ಯದ ಬಗ್ಗೆ ತಾರತಮ್ಯ ಧೋರಣೆ: ಡಿ.ಕೆ. ಸುರೇಶ್

Priyanka Gandhi
ಕರ್ನಾಟಕ3 hours ago

Priyanka Gandhi: ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಮಂಗಳಸೂತ್ರ ಉಳಿಸೋದು ಗೊತ್ತಿಲ್ಲವೇ?; ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ವಾಗ್ದಾಳಿ

Lok Sabha Election 2024
Lok Sabha Election 20243 hours ago

Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದೆ ದೇಶದಲ್ಲಿ ಶರಿಯಾ ಕಾನೂನು ಜಾರಿ; ಯೋಗಿ ಆದಿತ್ಯನಾಥ್ ವಾಗ್ದಾಳಿ

Amit Shah
ಕರ್ನಾಟಕ3 hours ago

Amit Shah: ಬೆಂಗಳೂರಲ್ಲಿ ಅಮಿತ್‌ ಶಾ ಹವಾ; ತೇಜಸ್ವಿ ಸೂರ್ಯ ಪರ ಭರ್ಜರಿ ರೋಡ್‌ ಶೋ

Public Sector Banks
ಪ್ರಮುಖ ಸುದ್ದಿ4 hours ago

Public Sector Banks : ಸಾರ್ವಜನಿಕ ಬ್ಯಾಂಕ್​ಗಳು ಸಾಲ ಕಟ್ಟದವರಿಗೆ ಲುಕ್ ಔಟ್ ನೋಟಿಸ್​ ನೀಡುವಂತಿಲ್ಲ, ಕೋರ್ಟ್​​ ಆದೇಶ

Union Minister Pralhad Joshi visit Sri Nuggikeri Anjaneya Swamy Temple in dharwad
ಕರ್ನಾಟಕ4 hours ago

Pralhad Joshi: ಸಚಿವ ಪ್ರಲ್ಹಾದ್‌ ಜೋಶಿಗೆ ಶ್ರೀ ಆಂಜನೇಯ ಸ್ವಾಮಿಯ ಆಶೀರ್ವಾದ; ತಾವರೆ ಹೂ ರೂಪದಲ್ಲಿ ಪ್ರಸಾದ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ21 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌