Viral Video : 90ರ ವಯಸ್ಸಿನ ಇವರು ವಿಶ್ವದ ಅತ್ಯಂತ ಹಿರಿಯ ಬಾಡಿ ಬಿಲ್ಡರ್‌! ಹೇಗಿದೆ ನೋಡಿ ಇವರ ವರ್ಕ್‌ಔಟ್‌ Vistara News

ವೈರಲ್ ನ್ಯೂಸ್

Viral Video : 90ರ ವಯಸ್ಸಿನ ಇವರು ವಿಶ್ವದ ಅತ್ಯಂತ ಹಿರಿಯ ಬಾಡಿ ಬಿಲ್ಡರ್‌! ಹೇಗಿದೆ ನೋಡಿ ಇವರ ವರ್ಕ್‌ಔಟ್‌

ಅಮೆರಿಕದ ಜಿಮ್‌ ಹೆಸರಿನ ವ್ಯಕ್ತಿ 90ರ ವಯಸ್ಸಿನಲ್ಲೂ ಬಾಡಿ ಬಿಲ್ಡಿಂಗ್‌ ಮಾಡುತ್ತಿದ್ದಾರೆ. ಅವರ ಕುರಿತಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಆಗಿದೆ.

VISTARANEWS.COM


on

Jim Arrington
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಯಸ್ಸು ಬರೀ ಸಂಖ್ಯೆಯಷ್ಟೇ ಎಂದು ಹೇಳಲಾಗುತ್ತದೆ. ಯಾವುದೇ ಸಾಧನೆ ಮಾಡುವುದಕ್ಕೆ ಯಾವ ವಯಸ್ಸಿನ ಮಿತಿಯೂ ಅಡ್ಡಬರಬಾರದು. ಆದರೆ ಇತ್ತೀಚಿನ ದಿನಗಳಲ್ಲಿ 20-30ರ ವಯಸ್ಸಿನವರೇ ಏನೇನೋ ಅನಾರೋಗ್ಯದಿಂದ ಬಳಲುವುದನ್ನು ನಾವು ಕಾಣುತ್ತಿದ್ದೇವೆ. ಆದರೆ ಅಮೆರಿಕದ ಈ ಒಬ್ಬ ವ್ಯಕ್ತಿ ಮಾತ್ರ 90ರ ವಯಸ್ಸಿನಲ್ಲಿದ್ದರೂ ಈಗಲೂ ಬಾಡಿ ಬಿಲ್ಡಿಂಗ್‌ ಮಾಡುತ್ತಾ, ಹಲವರಿಗೆ ಸ್ಫೂರ್ತಿಯಾಗಿದ್ದಾರೆ. ಅವರ ಬಗೆಗಿನ ವಿಡಿಯೊವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವೈರಲ್‌ (Viral Video) ಆಗಿದೆ.

ಅಮೆರಿಕದ ಜಿಮ್‌ ಅರಿಂಗ್ಟನ್‌ ಅವರ ವಯಸ್ಸು 90. ಆದರೂ ಅವರು ಇಂದಿಗೂ ಪ್ರತಿನಿತ್ಯ ಜಿಮ್‌ಗೆ ಹೋಗಿ ವರ್ಕ್‌ಔಟ್‌ ಮಾಡುತ್ತಾರೆ. ಅಷ್ಟೇ ಏಕೆ, ಕಳೆದ ವರ್ಷ ನಡೆದ ಬಾಡಿ ಬಿಲ್ಡಿಂಗ್‌ ಸ್ಪರ್ಧೆಯಲ್ಲಿ ಸ್ಪರ್ಧಿಸಿದ್ದರು ಕೂಡ. ಇಳಿ ವಯಸ್ಸಿನಲ್ಲೂ ಸದೃಢ ದೇಹದೊಂದಿಗೆ ಬಾಡಿ ಬಿಲ್ಡರ್‌ ಆಗಿರುವ ಜಿಮ್‌ ಅವರ ಸಾಧನೆಯನ್ನು ಗುರುತಿಸಿ ಗಿನ್ನಿಸ್ ವರ್ಲ್ಡ್‌ ರೆಕಾರ್ಡ್‌ ಸಂಸ್ಥೆ ಅವರಿಗೆ ವಿಶ್ವದ ಅತ್ಯಂತ ಹಿರಿಯ ಬಾಡಿ ಬಿಲ್ಡರ್‌ ಎನ್ನುವ ದಾಖಲೆಯನ್ನೂ ನೀಡಿದೆ.

ಇದನ್ನೂ ಓದಿ: Viral Video : ಅಪ್ಪ ನಾನೀಗ ಡಾಕ್ಟರ್‌ ಎಂದ ಮಗಳು! ಭಾವುಕರಾದ ತಂದೆ!

ಜಿಮ್‌ ಅವರ ಬಗ್ಗೆ ಗಿನ್ನಿಸ್ ವರ್ಲ್ಡ್‌ ರೆಕಾರ್ಡ್‌ ಸಂಸ್ಥೆ ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲಿ ವಿಡಿಯೊವನ್ನು ಹಂಚಿಕೊಂಡಿದೆ. ಅದರಲ್ಲಿ ಜಿಮ್‌ ಅವರು ತಮ್ಮ ಸಾಧನೆಯ ಕುರಿತಾಗಿ ಎಲ್ಲ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಹಾಗೆಯೇ ಅವರು ವರ್ಕ್‌ಔಟ್‌ ಮಾಡುವ ದೃಶ್ಯಗಳು, ಕಿರಿಯ ಬಾಡಿ ಬಿಲ್ಡರ್‌ಗಳಿಗೆ ಸಲಹೆ ನೀಡುವ ದೃಶ್ಯಗಳನ್ನೆಲ್ಲವನ್ನೂ ವಿಡಿಯೊದಲ್ಲಿ ಸೇರಿಸಲಾಗಿದೆ.


ಈ ವಿಡಿಯೊವನ್ನು ಜುಲೈ 19ರಂದು ಯೂಟ್ಯೂಬ್‌ನಲ್ಲಿ ಹಂಚಿಕೊಳ್ಳಲಾಗಿದೆ. ಅಂದಿನಿಂದ ಇಂದಿನವರೆಗೆ ವಿಡಿಯೊ ಸಾವಿರಾರು ಜನರಿಂದ ವೀಕ್ಷಣೆ ಪಡೆದುಕೊಂಡಿದೆ. ನೂರಾರು ಮಂದಿ ವಿಡಿಯೊಗೆ ಲೈಕ್‌ ಮಾಡಿದ್ದಾರೆ. ಹಾಗೆಯೇ ಹಲವಾರು ಮಂದಿ ವಿಡಿಯೊಗೆ ಕಾಮೆಂಟ್‌ಗಳ ಮೂಲಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. “ನಾನು ಎಷ್ಟೋ ವರ್ಷಗಳಿಂದ ಈ ಜಿಮ್‌ ಅವರ ವಿಡಿಯೊ ನೋಡುತ್ತಿದ್ದೇನೆ. ನನಗೆ ಅವರೇ ಸ್ಫೂರ್ತಿ. ಸಾಧನೆಗೆ ವಯಸ್ಸಿನ ಮಿತಿ ಇಲ್ಲ ಎನ್ನುವುದನ್ನು ನಾನು ಅವರಿಂದ ಕಲಿತಿದ್ದೇನೆ”, “ಇವರು ಅದ್ಭುತ ವ್ಯಕ್ತಿ. ಇವರು ಈಗಿನ ಸಮಾಜದ ಅನೇಕರಿಗೆ ಸ್ಫೂರ್ತಿ” ಎನ್ನುವಂತಹ ಕಾಮೆಂಟ್‌ಗಳು ವಿಡಿಯೊಗೆ ಬಂದಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಟೋಮೊಬೈಲ್

Bhavani Revanna : ಭವಾನಿ ರೇವಣ್ಣರ 1.5 ಕೋಟಿಯ ಕಾರು ಯಾವುದು? ಅದರ ವಿಶೇಷತೆಯೇನು?

Bhavani Revanna: ಭವಾನಿ ರೇವಣ್ಣ ಅವರು ಸುಖಕರ ಪ್ರಯಾಣಕ್ಕೆ ಬಳಸಿದ್ದ ಕಾರಿನ ಕಿಮ್ಮತ್ತು ಏನು ಎಂಬುದ ಮಾಹಿತಿ ಇಲ್ಲಿದೆ.

VISTARANEWS.COM


on

Toyoto Vellfire
Koo

ಹಾಸನ: ಮಾಜಿ ಪ್ರಧಾನಿ ಎಚ್​ ಡಿ ದೇವೇಗೌಡರ ಸೊಸೆ, ಮಾಜಿ ಸಚಿವ ರೇವಣ್ಣ ಅವರ ಪತ್ನಿ, ಸಂಸದ ಪ್ರಜ್ವಲ್ ತಾಯಿ ಭವಾನಿ ರೇವಣ್ಣ (Bhavani Revanna) ಕೆಟ್ಟ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ತಮ್ಮ ಕಾರಿಗೆ ಗುದ್ದಿದ ಬೈಕ್​ ಸವಾರನೊಬ್ಬನಿಗೆ ಅವಾಚ್ಯ ಪದಗಳಿಂದ ಬೈಯುವ ಮೂಲಕ ಅವರು ಜನಸಾಮಾನ್ಯರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. ವಿರೋಧ ವ್ಯಕ್ತವಾಗುತ್ತಿದ್ದಂತೆ ಪ್ರಕರಣವನ್ನು ಸುಖಾಂತ್ಯ ಮಾಡಲು ದೊಡ್ಡಗೌಡರ ಫ್ಯಾಮಿಲಿ ಶ್ರಮ ವಹಿಸುತ್ತಿದೆ. ಏತನ್ಮಧ್ಯೆ, ಭವಾನಿ ರೇವಣ್ಣ ಅವರು ಬೈಗುಳದ ನಡುವೆ ನನ್ನ 1.5 ಕೋಟಿ ರೂಪಾಯಿಯ ಕಾರಿಗೆ ಡ್ಯಾಮೇಜ್​ ಆಗಿದೆ. ನ್ಯಾಯ ಮಾತನಾಡೋರು ರಿಪೇರಿ ಮಾಡೋದಕ್ಕೆ 50 ಲಕ್ಷ ರೂಪಾಯಿ ಕೊಡಿ ಎಂದು ಹೇಳಿದ್ದರು. ಹೀಗಾಗಿ ಇದ್ಯಾವ ಕಾರು ಎಂಬ ಕುತೂಹಲ ಮೂಡಿದೆ. ಹೀಗಾಗಿ ಭವಾನಿ ಅವರು ಪ್ರಯಾಣಿಸುತ್ತಿದ್ದ ಕಾರು ಯಾವುದು ಮತ್ತು ಅದರ ವಿಶೇಷತೆ ಏನು ಎಂಬುದನ್ನು ನೋಡೋಣ.

ಭವಾನಿ ಅವರು ಪ್ರಯಾಣಿಸುತ್ತಿದ್ದ ಕಾರಿನ ಬ್ರಾಂಡ್ ನೇಮ್​ ಟೊಯೋಟಾ ವೆಲ್​ಫೈರ್ (Toyoto Vellfire)​​. ಇದು ಜಪಾನ್ ಮೂಲಕ ಟೋಯೋಟಾ ಕಂಪನಿಯು ನಿರ್ಮಿಸುವ ಕಾರು. ಜಪಾನ್​ ತಾಂತ್ರಿಕತೆಯೊಂದಿಗೆ ಟೋಯೋಟಾ ಕಂಪನಿಯು ಭಾರತದಲ್ಲಿ ಮಾರುತ್ತಿರುವ ಅತ್ಯಂತ ದುಬಾರಿ ಬೆಲೆಯ ಕಾರು. ಅಂದ ಹಾಗೆ ಬೆಂಗಳೂರಿನ ಬಿಡದಿಯಲ್ಲಿರುವ ಟೊಯೋಟಾ ಕಂಪನಿಯ ನಿರ್ಮಾಣ ಘಟಕದಲ್ಲಿಯೇ ಈ ಕಾರನ್ನು ಉತ್ಪಾದಿಸಲಾಗುತ್ತದೆ. ಫೆಬ್ರವರಿ 26, 2020 ರಂದು ಸುಮಾರು 80 ಲಕ್ಷ ರೂ.ಗಳ ಎಕ್ಸ್ ಶೋರೂಂ ಬೆಲೆಯೊಂದಿಗೆ ಮೊಟ್ಟ ಮೊದಲ ಕಾರು ಭಾರತದಲ್ಲಿ ಬಿಡುಗಡೆಯಾಗಿತ್ತು. ಇದರ ಸುಧಾರಿತ ಆವೃತ್ತಿ (ಫೇಸ್​ಲಿಫ್ಟ್​) ಸೆಪ್ಟೆಂಬರ್ 2023ರಲ್ಲಿ ಬಿಡುಗಡೆ ಮಾಡಲಾಗಿದೆ.

ಸೆಲೆಬ್ರಿಟಿಗಳ ಕಾರು

ಇದು ಎಂಪಿವಿ (ಮಲ್ಟಿ ಪರ್ಪಸ್​ ವೆಹಿಕಲ್​) ಮಾಡೆಲ್​ನ ಕಾರು. ಟೊಯೊಟಾದ ಇನ್ನೋವಾ ಕೂಡ ಎಂಪಿವಿ ವರ್ಗಕ್ಕೆ ಸೇರಿದ ಕಾರು. ಆದರೆ, ಐಷಾರಾಮಿ ಫೀಚರ್​ಗಳು ಹಾಗೂ ವಿಶಾಲವಾದ ಜಾಗ ಹಾಗೂ ಸುಖಮಯ ಪ್ರಯಾಣದ ಕಾರಣಕ್ಕೆ ವೆಲ್​ಫೈರ್​ಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ಜತೆಗೆ ಬೆಲೆಯೂ ಹೆಚ್ಚು. ಹೀಗಾಗಿ ಇದನ್ನು ಹೆಚ್ಚಾಗಿ ಸೆಲೆಬ್ರಿಟಿಗಳೇ ಖರೀದಿ ಮಾಡುತ್ತಿದ್ದಾರೆ. ಬಾಲಿವುಡ್​ ತಾರೆಯರು ಸೇರಿದಂತೆ ಭಾರತದ ಶ್ರೀಮಂತರು ಈ ಕಾರಿನ ಟಾರ್ಗೆಟ್ ಕಸ್ಟಮರ್ಸ್​​. ರಾಜಕಾರಣಿಗಳ ಕುಟುಂಬದ ಸೊಸೆಯಾಗಿರುವ ಭವಾನಿ ಅವರು ಅರ್ಹವಾಗಿ ಇದೇ ಕಾರಿನಲ್ಲಿ ಪ್ರಯಾಣಿಸಿದ್ದಾರೆ.

ಹೊಸ ಟೊಯೊಟಾ ವೆಲ್ಫೈರ್ ವಿನ್ಯಾಸ

ಇತ್ತೀಚೆಗೆ ಬಿಡುಗಡೆಯಾದ ವೆಲ್ ಫೈರ್ ಬಹುತೇಕ ಹಳೆಯ ನೋಟವನ್ನೇ ಉಳಿಸಿಕೊಂಡಿದೆ ಅಂದರೇ ಒಂದು ರೀತಿ ಸಣ್ಣ ವ್ಯಾನ್ ಮಾದರಿಯ ಐಷಾರಾಮಿ ನೋಟ. ಟೊಯೊಟಾ ಮುಂಭಾಗದಲ್ಲಿ ಆರು-ಸ್ಲಾಟ್ ಗ್ರಿಲ್ ಗಳಿದ್ದು. ಮಧ್ಯದಲ್ಲಿ ಟೊಯೋಟಾ ಲೋಗೋವನ್ನು ಅಳವಡಿಸಲಾಗಿದೆ. ಇದು ಸ್ಪ್ಲಿಟ್ ಹೆಡ್ ಲ್ಯಾಂಪ್ ಗಳಿಂದ ಹೊಂದಿದೆ. ಹೆಡ್ ಲ್ಯಾಂಪ್ ಗಳ ಕೆಳಭಾಗದಲ್ಲಿ ಎಲ್ಇಡಿ ಡೇಟೈಮ್ ರನ್ನಿಂಗ್ ಲ್ಯಾಂಪ್ ಗಳಿವೆ. ಯು-ಆಕಾರದ ಕ್ರೋಮ್ ಸ್ಟ್ರಿಪ್ ಎರಡು ಹೆಡ್ ಲ್ಯಾಂಪ್ ಗಳನ್ನು ಸಂಪರ್ಕಿಸುವ ಬಂಪರ್ ನಡುವೆ ಸಾಗಿದೆ.

ವೆಲ್​ಫೈರ್​​ನ ಗ್ಲಾಸ್ ಹೌಸ್ ಕ್ರೋಮ್ ಔಟ್ ಲೈನ್ ಹೊಂದಿದೆ. ಹಿಂಭಾಗದಲ್ಲಿ ವಿ-ಆಕಾರದ ಟೈಲ್ ಲ್ಯಾಂಪ್ ಆವರಣವನ್ನು ಹೊಂದಿದ್ದು, ವಿಸ್ತ್ರತ ಕ್ರೋಮ್ ಟ್ರಿಮ್ ಇದೆ. ವೆಲ್ಫೈರ್ ಬ್ಯಾಡ್ಜಿಂಗ್ ಮತ್ತು ಮಧ್ಯದಲ್ಲಿ ದೊಡ್ಡ ಟೊಯೊಟಾ ಲೋಗೊವನ್ನು ಹೊಂದಿದೆ.

ಇಂಟೀರಿಯರ್ ವಿಶೇಷತೆ

ಹೊಸ ವೆಲ್ ಫೈರ್​ನಲ್ಲಿ ಕಡಿಮೆ ಬಟನ್ ಇರುವ ಮತ್ತು ಅತ್ಯಂತ ಸರಳವಾಗಿ ಕಾಣುವ ಡ್ಯಾಶ್ ಬೋರ್ಡ್ ನೀಡಲಾಗಿದೆ. ಬಹುತೇಕ ಕೆಲಸವನ್ನು ದೊಡ್ಡ, 14-ಇಂಚಿನ ಟಚ್ ಸ್ಕ್ರೀನ್ ನಲ್ಲಿ ಅಳವಡಿಸಲಾಗಿದೆ. ಹೆಚ್ಚು ಆರಾಮದಾಯಕ ಸೀಟ್ ವಿನ್ಯಾಸವನ್ನು ಇದು ಹೊಂದಿದೆ. ದೊಡ್ಡ ಓವರ್ ಹೆಡ್ ಕನ್ಸೋಲ್, ಹಲವು ಎಸಿ ವೆಂಟ್ ಗಳು ಮತ್ತು ಹೊಸದಾಗಿ ವಿನ್ಯಾಸಗೊಳಿಸಲಾದ ಪುಲ್-ಡೌನ್ ಸನ್ ಶೇಡ್​ ಈ ಕಾರಿನಲ್ಲಿದೆ.

ಟಾಪ್ ಎಂಡ್​ ವೆಲ್​ಫೈರ್​ ವಿಐಪಿ ಟ್ರಿಮ್​ನಲ್ಲಿ ಎಕ್ಸಿಕ್ಯೂಟಿವ್ ಲಾಂಜ್ ಪ್ಯಾಕೇಜ್​ ಜತೆ ನೀಡಲಾಗುತ್ತದೆ. ಈ ಕಾರಿನ ಎರಡನೇ ಸಾಲಿನಲ್ಲಿ ಎರಡು ಕ್ಯಾಪ್ಟನ್ ಸೀಟ್​ಗಳು ಮಾತ್ರ ಇರುತ್ತವೆ. ಪ್ರತ್ಯೇಕ ಕಂಟ್ರೋಲ್​ ಯೂನಿಟ್​ ಕೂಡ ಇದೆ. ಇದು ಹಿಂಬದಿ ಪ್ರಯಾಣಿಕರಿಗೆ ಮೀಡಿಯಾ ಮತ್ತು ಕ್ಲೈಮೇಟ್​ ಕಂಟ್ರೋಲ್​ ಸೆಟ್ಟಿಂಗ್​​ಗಳನ್ನು ಮತ್ತು ಸನ್​​ಶೇಡ್​ಗಳನ್ನು ನೀಡುತ್ತದೆ.

ಇದನ್ನೂ ಓದಿ : Bhavani Revanna : ಸಾಯೋಕೆ ನನ್ನ 1.5 ಕೋಟಿ ಕಾರೇ ಬೇಕಾ?; ಭವಾನಿ ರೇವಣ್ಣ ದರ್ಪಕ್ಕೆ ಎಲ್ಲೆಡೆ ಆಕ್ರೋಶ

ಹೆಡ್ಸ್-ಅಪ್ ಡಿಸ್​ಪ್ಲೇ ವೈರ್​ಲೆಸ್​ ಚಾರ್ಜರ್, ಎರಡನೇ ಸಾಲಿನ ಸೀಟುಗಳಿಗೆ ಒಟ್ಟೋಮನ್ (ಹೈ ಟ್ರಿಮ್) ಮತ್ತು ಎಂಟು ರೀತಿಯಲ್ಲಿ ಅಡ್ಜಸ್ಟ್ ಮಾಡಬಹುದಾದ ಡ್ರೈವರ್ ಸೀಟ್ ಮತ್ತಿತರ ವೈಶಿಷ್ಟ್ಯಗಳನ್ನು ನೀಡಲಾಗಿದೆ.. ಟೊಯೊಟಾ 60 ಕ್ಕೂ ಹೆಚ್ಚು ಕನೆಕ್ಟೆಡ್​ ವಿಶೇಷತೆಗಳನ್ನು ಹೊಂದಿದೆ.\

ಸಿಕ್ಕಾಪಟ್ಟೆ ಸೇಫ್​ ಕಾರು

ಸುರಕ್ಷತಾ ವೈಶಿಷ್ಟ್ಯಗಳ ಬಗ್ಗೆ ಹೇಳುವುದಾದರೆ ವೆಲ್​ಫೈರ್​ ಎಂಪಿವಿ ಟೊಯೊಟಾ ಸೇಫ್ಟಿ ಸೆನ್ಸ್ ಅಡಾಸ್​​ ಸಿಸ್ಟಮ್ ಅನ್ನು ಹೊಂದಿದೆ. ಇದು ಅಪಘಾತದ ಮೊದಲಿನ ಸುರಕ್ಷತಾ ವ್ಯವಸ್ಥೆ, ಲೇನ್ ಟ್ರೇಸ್ ಅಸಿಸ್ಟ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಮತ್ತು ಬ್ಲೈಂಡ್ ಸ್ಪಾಟ್ ಮಾನಿಟರ್​ನೊಂದಿಗೆ ಬರುತ್ತದೆ. ಇದಲ್ಲದೆ, ಇದು ಆರು ಏರ್ ಬ್ಯಾಗ್​​ಗಳು, ಸ್ಟೆಬಿಲಿಟಿ ಕಂಟ್ರೋಲ್, ಪಾರ್ಕ್ ಅಸಿಸ್ಟ್, ಹಿಲ್ ಅಸಿಸ್ಟ್ ಕಂಟ್ರೋಲ್ ಕೂಡ ಪಡೆಯುತ್ತದೆ.

ಎಂಜಿನ್ ಪವರ್​ ಏನಿದೆ?

ವೆಲ್ ಫೈರ್ ಟೊಯೊಟಾದ ಮಾಡ್ಯುಲರ್ ಟಿಎನ್​​ಜಿಎ-ಕೆ ಪ್ಲಾಟ್ ಫಾರ್ಮ್ ನಲ್ಲಿ ನಿರ್ಮಾಣಗೊಂಡಿದೆ. ಇದು 4,995 ಎಂಎಂ ಉದ್ದ, 1,850 ಎಂಎಂ ಅಗಲ ಮತ್ತು 1,950 ಎಂಎಂ ಎತ್ತರ ಮತ್ತು 3,000 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. ಹೊಸ ವೆಲ್ ಫೈರ್ 193 ಬಿಹೆಚ್​​ಪಿ, 240 ಎನ್ಎಂ ಪವರ್​ ಸೃಷ್ಟಿಸುವ 2.5-ಲೀಟರ್​ನ ನಾಲ್ಕು ಸಿಲಿಂಡರ್ ಪೆಟ್ರೋಲ್-ಹೈಬ್ರಿಡ್ ಎಂಜಿನ್ ಹೊಂದಿದೆ. ಇದರಲ್ಲಿ ಇ ಸಿವಿಟಿ ಗೇರ್​ಬಾಕ್ಸ್​ ಇದೆ. ವೆಲ್​ಫೈರ್​ ಪ್ರತಿ ಲೀಟರ್​ ಪೆಟ್ರೋಲ್​ಗೆ 19.28 ಕಿ.ಮೀ ಮೈಲೇಜ್ ನೀಡುತ್ತದೆ.

ಒಂದೂವರೆ ಕೋಟಿ ಬೆಲೆ ಇರೋದು ಹೌದಾ?

ಖಂಡಿತಾ. ಭವಾನಿ ರೇವಣ್ಣ ಅವರು ಕೋಪದ ಭರದಲ್ಲಿ ಕೆಟ್ಟದಾಗಿ ಬೈದಿರಬಹುದು. ಆದರೆ, ರೇಟ್​ ಬಗ್ಗೆ ಸುಳ್ಳು ಹೇಳಿಲ್ಲ. ಈ ಕಾರಿನ ಬೆಲೆ 1. 5 ಕೋಟಿ ರೂಪಾಯಿಗಿಂತಲೂ ಹೆಚ್ಚಿದೆ. ಕಾರು ಕೇವಲ 2 ವೇರಿಯೆಂಟ್​ಗಳಲ್ಲಿ ಮಾತ್ರ ಲಭ್ಯವಿದೆ. ಬೇಸ್​ ಮಾಡೆಲ್​ ಹೈ (hi) ಎಂಬ ಹೆಸರಿನೊಂದಿಗೆ ಲಭ್ಯವಿದ್ದರೆ, ಇನ್ನೊಂದು ಮಾಡೆಲ್​ ವಿಐಪಿ ಎಕ್ಸೆಕ್ಯುಟಿವ್​ ಲಾಂಜ್​ (VIP Executive Lounge) ರೂಪದಲ್ಲಿ ಸಿಗುತ್ತದೆ. ಬೆಂಗಳೂರಿನಲ್ಲಿ ಬೇಸ್​ ಮಾಡೆಲ್​ ಕಾರಿನ ಆನ್​ ರೋಡ್ ಬೆಲೆ 1,48,58,511 ರೂಪಾಯಿ (1.48 ಕೋಟಿ). ಇನ್ನೊಂದು ವೇರಿಯೆಂಟ್​ಗೆ 1,60,94,733 ಕೋಟಿ ರೂಪಾಯಿ. ಅಂದರೆ ಭವಾನಿ ರೇವಣ್ಣ ಅವರು ಹೇಳಿದ್ದಕ್ಕಿಂತ ಇನ್ನೂ 10 ಲಕ್ಷ ರೂಪಾಯಿ ಅಧಿಕ. ಇಲ್ಲಿಗೆ ಮುಗಿದಿಲ್ಲ. 1.5 ಕೋಟಿ ಇದ್ದ ತಕ್ಷಣವೇ ಈ ಕಾರು ತಗೊಂಡು ಬರೋದಿಕ್ಕೆ ಆಗುವುದಿಲ್ಲ. ಇತ್ತೀಚಿನ ಮಾಹಿತಿ ಪ್ರಕಾರ ಈ ಕಾರಿನ ವೇಟಿಂಗ್ ಪಿರಿಯೆಡ್​ (ಕಾಯುವಿಕೆಯ ಅವಧಿ) 14 ತಿಂಗಳು. ಅಂದರೆ, ಕಾರು ಬುಕ್ ಮಾಡಿ 1 ವರ್ಷಕ್ಕೂ ಅಧಿಕ ದಿನಗಳು ಕಾಯಬೇಕು.

Continue Reading

ದೇಶ

Cat Bite: ಪ್ರೀತಿಯಿಂದ ಸಾಕಿದ ಬೆಕ್ಕು ಕಚ್ಚಿ ತಂದೆ, ಮಗನ ದಾರುಣ ಸಾವು!

Uttar Pradesh: ಉತ್ತರ ಪ್ರದೇಶದಲ್ಲಿ ವಿಚಿತ್ರ ಘಟನೆ ನಡೆದಿದ್ದು, ಸಾಕು ಬೆಕ್ಕು ಕಚ್ಚಿದ ಪರಿಣಾಮ ತಂದೆ ಮತ್ತು ಮಗ ಇಬ್ಬರು ಸಾವನ್ನಪ್ಪಿದ್ದಾರೆ.

VISTARANEWS.COM


on

Father and son dies after cat bite in Uttar Pradesh
Koo

ಕಾನ್ಪುರ್: ಉತ್ತರ ಪ್ರದೇಶದ (Uttar Pradesh) ಕಾನ್ಪುರದಲ್ಲಿ (Kanpur City) ಸಾಕು ಬೆಕ್ಕು (Pet Cat) ಕಚ್ಚಿದ ಕಾರಣಕ್ಕೆ (Cat Bite) ತಂದೆ ಮತ್ತು ಮಗ ಇಬ್ಬರು ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ(Father and Son). ಮೃತರಿಗೆ ಕಚ್ಚಿದ ಬೆಕ್ಕಿಗೆ, ಬೀದಿ ನಾಯಿಯೊಂದು ಕಚ್ಚಿತ್ತು. ಅದೇ ಬೆಕ್ಕು ತಂದೆ ಮತ್ತು ಮಗ ಇಬ್ಬರಿಗೂ ಕಚ್ಚಿದ್ದರಿಂದ ಅವರಿಗೆ ಮಾರಣಾಂತಿಕ ರೇಬೀಸ್ ಸೋಂಕು (rabies virus) ತಗುಲಿ, ಅಂತಿಮವಾಗಿ ಮೃತಪಟ್ಟರು. ಇವರಿಬ್ಬರೂ ಒಂದು ವಾರದ ಅಂತರದಲ್ಲಿ ಸಾವನ್ನಪ್ಪಿದ್ದಾರೆ.

ಕಾನ್ಪುರ ದೇಹತ್‌ನ ಅಕ್ಬರ್‌ಪುರ ನಗರದಲ್ಲಿ ಈ ಘಟನೆ ನಡೆದಿದ್ದು, ನಿವಾಸಿಯೊಬ್ಬರು ತಮ್ಮ ಮನೆಯಲ್ಲಿ ಬೆಕ್ಕನ್ನು ಸಾಕಿದ್ದರು. ಕುಟುಂಬದ ಸದಸ್ಯರೆಲ್ಲರೂ ಬೆಕ್ಕಿನೊಂದಿಗೆ ಆಟ ಆಡುತ್ತಿದ್ದರು. ಈ ಬೆಕ್ಕಿಗೆ ಬೀದಿನಾಯಿ ಕಚ್ಚಿತು ಮತ್ತು ಕೆಲವೇ ದಿನಗಳಲ್ಲಿ ರೇಬೀಸ್‌ನ ಲಕ್ಷಣಗಳು ಕಾಣಿಸಿಕೊಳ್ಳಲಾರಂಭಿಸಿದವು. ಬಳಿಕ ಆಟವಾಡುತ್ತಿದ್ದ ವೇಳೆ ಕುಟುಂಬದ ಮಗನಿಗೆ ಬೆಕ್ಕು ಗೀಚಿದೆ. ಕ್ರಮೇಣ ಅವನ ಸ್ಥಿತಿ ಹದಗೆಡಲಾರಂಭಿಸಿತು. ಬಳಿಕ ಆತನಲ್ಲಿ ಬೆಕ್ಕಿನ ಲಕ್ಷಣಗಳು ಕಾಣಿಸಿಕೊಳ್ಳಲಾರಂಭಿಸಿದವು. ಕೆಲವು ದಿನಗಳ ನಂತರ, ಆತ ಮೃತಪಟ್ಟ. ಬಳಿಕ, ಮೃತ ಯುವಕನ ತಂದೆಯಲ್ಲೂ ಅದೇ ಲಕ್ಷಣಗಳು ಕಾಣಿಸಕೊಳ್ಳಲಾರಂಭಿಸಿದವು. ಮಗ ಸತ್ತ ಒಂದು ವಾರದಲ್ಲೇ ರೇಬೀಸ್ ಕಾಯಿಲೆಗೆ ತಂದೆ ಕೂಡ ಮೃತಪಟ್ಟಿದ್ದಾರೆ.

ಬೆಕ್ಕಿನಿಂದ ರೇಬೀಸ್ ತಗುಲಿ ತಂದೆ-ಮಗ ಇಬ್ಬರು ಸಾಯಿತ್ತಿದ್ದಂತೆ ಆ ಪ್ರದೇಶದಲ್ಲಿ ಭಾರೀ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಸದ್ಯಕ್ಕೆ ಬೆಕ್ಕು ಸಾಕಿದ್ದ ಕುಟುಂಬದ ಸದಸ್ಯರನ್ನು ಪರೀಕ್ಷೆಗಾಗಿ ಕಾನ್ಪುರ್‌ಗೆ ಕಳುಹಿಸಲಾಗಿದ್ದು, ಅವರೆಲ್ಲರೂ ಸುರಕ್ಷಿತವಾಗಿದ್ದಾರೆ. ಆ ಬೆಕ್ಕು ಪ್ರದೇಶದ ಇನ್ನಾರಿಗೋ ಕಚ್ಚಿರುವ ಇಲ್ಲವೇ ಗೀಚಿರುವ ಸಾಧ್ಯತೆಯನ್ನು ಊಹಿಸಿಕೊಂಡೇ ಜನರು ಭಯಭೀತರಾಗಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ಸಾಕು ನಾಯಿ ಮತ್ತು ಸಾಕು ಬೆಕ್ಕು ಹೊಂದಿರುವ ಕುಟುಂಬಗಳಲ್ಲಿ ಹೆಚ್ಚಿನ ಆತಂಕ ಶುರುವಾಗಿದೆ.

ಸಾಕು ಪ್ರಾಣಿಗಳಿಗೆ ಆ್ಯಂಟಿ ರೇಬೀಸ್ ಇಂಜಕ್ಷನ್ ನೀಡಬೇಕು ಎಂದು ಪಶು ವೈದ್ಯರು ತಿಳಿಸಿದ್ದಾರೆ. ಯಾವುದೇ ಬೀದಿ ಪ್ರಾಣಿ ಕಚ್ಚಿದರೆ, ದಾಳಿ ಮಾಡಿದರೆ ಮೊದಲಿಗೆ ಗಾಯವನ್ನು ಸ್ವಚ್ಛವಾಗಿ ತೊಳೆಯಬೇಕು. ವೈದ್ಯರನ್ನು ಸಂಪರ್ಕಿಸಿದ ನಂತರ ಚಿಕಿತ್ಸೆಯನ್ನು ಪಡೆಯಬೇಕು. ಏಕೆಂದರೆ ಕೆಲವೊಮ್ಮೆ ರೇಬೀಸ್‌ನ ಲಕ್ಷಣಗಳು ವರ್ಷಗಳ ನಂತರವೂ ಕಾಣಿಸಿಕೊಳ್ಳಬಹುದು. ನಿರ್ಲಕ್ಷ್ಯ ವಹಿಸಿದರೆ ವ್ಯಕ್ತಿಯು ಸಾಯಬಹುದು. ಅಂತಹ ಪರಿಸ್ಥಿತಿಯಲ್ಲಿ, ಚಿಕಿತ್ಸೆ ಮತ್ತು ಜಾಗೃತಿ ಮಾತ್ರ ರಕ್ಷಣೆ ಮಾಡಲು ಸಾಧ್ಯ ಎಂದು ತಜ್ಞರು ಹೇಳುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ: Actor Darshan : ವೈದ್ಯೆಗೆ ನಾಯಿ ಕಚ್ಚಿದ ಪ್ರಕರಣ; ವಿಚಾರಣೆಗೆ ನಟ ದರ್ಶನ್‌ ಹಾಜರ್‌

Continue Reading

ಕರ್ನಾಟಕ

Video Viral : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

Video viral : ಬಸ್ಸಿಗೆ ಡಿಕ್ಕಿ ಹೊಡೆದ ಕಾರು ಹೊತ್ತಿ ಉರಿದಿದೆ. ಬಸ್‌ ಚಾಲಕ ಪ್ರಯಾಣಿಕರನ್ನು ರಕ್ಷಿಸಿದ್ದು ಮಾತ್ರವಲ್ಲ ಕಾರಿಗೆ ಅಂಟಿಕೊಂಡ ಬಸ್ಸನ್ನು ಬೇರ್ಪಡಿಸಲು ಮಾಡಿದ ಪ್ರಯತ್ನ ಮತ್ತು ಅದರಲ್ಲಿ ಯಶಸ್ವಿಯಾದ ಕಥೆ ಇಲ್ಲಿದೆ.

VISTARANEWS.COM


on

Car catches fire after hitting bus
Koo

ಬೆಂಗಳೂರು: ಕಾರೊಂದು ಬಿಎಂಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಸುಟ್ಟು ಕರಕಲಾದ ಘಟನೆ (Car Hits bus and catches fire in Bangalore) ಬೆಂಗಳೂರಿನ ಚಂದ್ರಾ ಲೇಔಟ್‌ ಸಮೀಪದ ನಾಗರಬಾವಿ ರಿಂಗ್‌ ರಸ್ತೆಯಲ್ಲಿ (Nagarabavi Ring Road) ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಕಾರು ಬಸ್ಸಿಗೆ ಅಂಟಿಕೊಂಡು ಬಸ್‌ಗೂ ಬೆಂಕಿ ಹತ್ತಿಕೊಂಡಿತ್ತು (video Viral). ಆದರೆ, ಬಸ್‌ನ ಚಾಲಕ ಪ್ರಯಾಣಿಕರನ್ನು ಇಳಿಸಿ ರಕ್ಷಿಸಿದ್ದಲ್ಲದೆ, ಅತ್ಯಂತ ಚಾಲಾಕಿತನ ಮತ್ತು ಸಮಯಪ್ರಜ್ಞೆ ಮೆರೆದು (Time sense of driver) ಬಸ್‌ ನಿಂದ ಕಾರನ್ನು ಬೇರ್ಪಡಿಸಿದ್ದಾರೆ. ಬಸ್‌ ಕೂಡಾ ಸಂಪೂರ್ಣ ಸುಟ್ಟು ಹೋಗುವುದನ್ನು (Fire Accident) ತಪ್ಪಿಸಿದ್ದಾರೆ.

ಸೋಮವಾರ ಬೆಳಗ್ಗೆ 9 ಗಂಟೆಗೆ ಹೊತ್ತಿಗೆ ನಗರದ ಚಂದ್ರಾ ಲೇಔಟ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಯಶವಂತಪುರದಿಂದ ನಾಯಂಡಹಳ್ಳಿ ಕಡೆ ತೆರಳುತ್ತಿದ್ದ ಬಸ್‌ ಚಂದ್ರಾ ಲೇಔಟ್ ಬಳಿ ನಿಂತಿತ್ತು. ಆಗ ಹಿಂಬದಿಯಿಂದ ವೇಗವಾಗಿ ಬಂದ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆಯಿತು. ಅತ್ಯಂತ ರಭಸದಿಂದ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಕ್ಷಣಾರ್ಧದಲ್ಲಿಯೇ ಬೆಂಕಿ ಹತ್ತಿಕೊಂಡಿದೆ. ಆಗ ಕಾರಿನ ಪ್ರಯಾಣಿಕರು ಕೂಡಲೇ ಇಳಿದು ಜೀವ ರಕ್ಷಿಸಿಕೊಂಡರು. (video Viral)

ಅದರ ಜತೆಗೆ ಬಸ್‌ ಚಾಲಕ ಕೂಡಾ ಎಲ್ಲ ಪ್ರಯಾಣಿಕರನ್ನು ಇಳಿಸಿದರು. ಇಷ್ಟರ ನಡುವೆ ಕಾರು ಬಸ್ಸಿಗೆ ಅಂಟಿಕೊಂಡು ಹೊತ್ತಿ ಉರಿಯತೊಡಗಿತ್ತು. ಬಸ್ಸನ್ನು ಸ್ವಲ್ಪ ಮಂದೆ ಕೊಂಡು ಹೋಗಲು ಪ್ರಯತ್ನಿಸಿದಾಗ ಅದು ಅಂಟಿಕೊಂಡಿದ್ದು ಗೊತ್ತಾಯಿತು. ಅದನ್ನು ಹೇಗಾದರೂ ಬೇರ್ಪಡಿಸಬೇಕು ಎಂದು ಯೋಚಿಸಿದ ಬಿಎಂಟಿಸಿ ಚಾಲಕ ಭಾರಿ ಡೇಂಜರಸ್‌ ಪ್ರಯೋಗಕ್ಕೆ ಮುಂದಾದರು.

ಕಾರು ಹೊತ್ತಿ ಉರಿಯುತ್ತಿದ್ದಂತೆಯೇ ಬಸ್ಸನ್ನು ಮುಂದಕ್ಕೆ ಚಲಾಯಿಸಿದರು ಚಾಲಕ. ಬಸ್ಸು ಮುಂದಕ್ಕೆ ಚಲಿಸಿದಾಗ ಕಾರು ಕಳಚಿಕೊಳ್ಳಬಹುದು ಎನ್ನುವುದು ಅವರ ಯೋಚನೆಯಾಗಿತ್ತು. ಆದರೆ, ಅದು ಕಳಚಿಕೊಳ್ಳಲಿಲ್ಲ. ಬದಲಾಗಿ ಗಾಳಿಯ ವೇಗಕ್ಕೆ ಬೆಂಕಿ ಇನ್ನಷ್ಟು ಧಗಧಗಿಸಿತು.

Car catches fire after hitting bus
ತಡೆಗೋಡೆಗೆ ಡಿಕ್ಕಿ ಹೊಡೆದು ಬಸ್ಸಿನಿಂದ ಕಾರನ್ನು ಬೇರ್ಪಡಿಸಲು ಪ್ರಯತ್ನ

ಈ ವೇಳೆ ಚಾಲಕ ಬಸ್ಸನ್ನು ಸ್ವಲ್ಪ ದೂರ ಹೋಗಿ ನಿಲ್ಲಿಸಿ ಇನ್ನೊಂದು ಪ್ಲ್ಯಾನ್‌ ಮಾಡಿದರು. ಇದೊಂದು ಡಬಲ್‌ ರೋಡ್‌ ಆಗಿದ್ದು, ಒಂದು ಭಾಗದಲ್ಲಿ ತಡೆಗೋಡೆ ಇದೆ. ಚಾಲಕ ಬಸ್ಸನ್ನು ಆ ತಡೆಗೋಡೆಗೆ ಡಿಕ್ಕಿ ಹೊಡೆಸಿ ಕಾರನ್ನು ಕದಲಿಸುವ ಪ್ರಯತ್ನವನ್ನು ಮಾಡಿದರು. ಆದರೆ, ಕಾರು ಬಿಡಿಸಿಕೊಳ್ಳಲೇ ಇಲ್ಲ.

ಇದನ್ನೂ ಓದಿ: ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

ಈ ನಡುವೆ, ಕಾರು ಸುಟ್ಟು ಹೋಗುವ ವೇಗ ಜಾಸ್ತಿಯಾಯಿತು. ಪೆಟ್ರೋಲ್‌ ಟ್ಯಾಂಕ್‌ ಕೂಡಾ ಸಿಡಿಯಿತು. ಬಸ್ಸಿಗೂ ಬೆಂಕಿ ಹತ್ತಿಕೊಳ್ಳುವ ವೇಗ ಜಾಸ್ತಿಯಾಯಿತು. ಇಷ್ಟಾದರೂ ಚಾಲಕ ತನ್ನ ಪ್ರಯತ್ನವನ್ನು ಬಿಡಲಿಲ್ಲ, ವ್ಯವಧಾನವನ್ನು ಕಳೆದುಕೊಳ್ಳಲಿಲ್ಲ.

ಇದು ಡಬಲ್‌ ರೋಡ್‌ ಆಗಿದ್ದರಿಂದ ನಡುವೆ ಸಣ್ಣ ರಸ್ತೆ ವಿಭಾಜಕ ಇತ್ತು. ಇತ್ತು. ಚಾಲಕ ಬಸ್ಸನ್ನು ತಿರುಗಿಸಿ ಆ ತಡೆಗೋಡೆಯ ಮೇಲೆ ಕಾರನ್ನು ಹಾರಿಸಿದ. ಆಗ ಅಂಟಿಕೊಂಡಿದ್ದ ಕಾರು ಕಳಚಿಕೊಂಡಿತು. ಈ ನಡುವೆ, ಕಾರು ಸಂಪೂರ್ಣ ಸುಟ್ಟು ಹೋದರೆ, ಬಸ್‌ ಗೆ ಅಲ್ಲಿದ್ದವರೆಲ್ಲ ಸ್ವಲ್ಪ ಸ್ವಲ್ಪ ನೀರು ತಂದೇ ಸಿಂಪಡಿಸಿ ಬೆಂಕಿ ಆರಿಸಿದರು.

Car catches fire after hitting bus
ರಸ್ತೆ ವಿಭಜಕವನ್ನು ಹಾಯಿಸಿ ಕಾರು ಬೇರ್ಪಡಿಸಿದ ಬಗೆ

ಬಸ್ಸಿನ ಹಿಂದಿನ ಎರಡು ಸೀಟುಗಳಿಗೆ ಸೀಮಿತವಾಗಿ ಬೆಂಕಿ ಹತ್ತಿಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಇದು ಸಾಧ್ಯವಾಗಿದೆ. ಅಲ್ಲಿ ಸೇರಿದವರೆಲ್ಲ ಬೆಂಕಿ ಆರಿಸುವಲ್ಲಿ ಚಾಲಕನಿಗೆ ನೆರವಾಗಿದ್ದಲ್ಲದೆ, ಅವರನ್ನು ಹಾಡಿ ಹೊಗಳಿ ಬೆನ್ನು ತಟ್ಟಿದರು.

ಒಟ್ಟಾರೆ ಘಟನೆಯ ಫುಲ್‌ ವಿಡಿಯೊ ಇಲ್ಲಿದೆ.

Continue Reading

ಕರ್ನಾಟಕ

Viral News : ಚಾಲಕರ ನಡುವೆ ಕಿರಿಕ್‌;‌ ಇನೋವಾ ಕಾರನ್ನೇ ಇನ್ನೊಬ್ಬನ ಮೇಲೆ ಹರಿಸಲು ಯತ್ನಿಸಿದ ಡ್ರೈವರ್‌

Viral News : ಬೆಂಗಳೂರಿನ ಹೆಬ್ಬಾಳ ಫ್ಲೈ ಓವರ್‌ನಲ್ಲಿ ಕಾರು ಚಾಲಕನೊಬ್ಬ ಇನ್ನೊಬ್ಬ ಚಾಲಕನ ಮೇಲೆಯೇ ಕಾರು ಹಾಯಿಸಲು ಯತ್ನಿಸಿದ ಘಟನೆ ನಡೆದಿದೆ.

VISTARANEWS.COM


on

Drivers fight in Bangalore
Koo

ಬೆಂಗಳೂರು: ಈಗ ಸಣ್ಣ ಪುಟ್ಟ ಕಾರಣಕ್ಕಾಗಿ ಜಗಳಕ್ಕೆ ಇಳಿಯುವುದು, ಒಮ್ಮಿಂದೊಮ್ಮೆಗೇ ಮೈಮೇಲೆ ಬೀಳುವುದು, ದಾಳಿ ಮಾಡುವ ಘಟನೆಗಳು ಹೆಚ್ಚುತ್ತಿವೆ. ಅದರಲ್ಲೂ ಬೆಂಗಳೂರಿನ ಟ್ರಾಫಿಕ್‌ನಲ್ಲಿ (Bangalore Traffic) ಮನುಷ್ಯ ಕೆಲವೊಮ್ಮೆ ಪ್ರಾಣಿಗಳಿಗಿಂತಲೂ ಕಡೆಯಾಗಿ ವರ್ತಿಸುವುದು ಕಾಣುತ್ತಿದೆ. ಇಲ್ಲಿ ಚಾಲಕರಿಬ್ಬರು ಯಾವುದೋ ಕಾರಣಕ್ಕೆ ಜಗಳವಾಡಿಕೊಂಡಿದ್ದಾರೆ (Fight between drivers). ಆಗ ಸಿಟ್ಟಿಗೆದ್ದ ಒಬ್ಬ ಇನ್ನೊಬ್ಬನ ಮೇಲೆ ಕಾರನ್ನು ಹರಿಸುವ ರೀತಿಯಲ್ಲಿ ತಳ್ಳಿಕೊಂಡು ಹೋಗಿದ್ದಾನೆ. ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೂ ಪ್ರಾಣವೇ ಹೋಗಬಹುದಾದ ರೀತಿಯಲ್ಲಿ ಕ್ರೌರ್ಯವನ್ನು ಮೆರೆದ ಚಾಲಕನನ್ನು ಪೊಲೀಸರು ಹುಡುಕುತ್ತಿದ್ದಾರೆ (viral News).

ಈ ಘಟನೆ ನಡೆದಿರುವುದು ಬೆಂಗಳೂರಿನ ಹೆಬ್ಬಾಳ ಫ್ಲೈ ಓವರ್ (Hebbala Fly over) ಮೇಲೆ. ಕಳೆದ ನವೆಂಬರ್‌ 29ರಂದು ಬೆಳಗ್ಗೆ 8.30ರಿಂದ 9 ಗಂಟೆಯ ನಡುವೆ ಘಟನೆ ನಡೆದಿದೆ. ಇಬ್ಬರು ಚಾಲಕರ ನಡುವೆ ಯಾವುದೇ ಕಾರಣಕ್ಕೆ ಕಿರಿಕ್ ಉಂಟಾಗಿದೆ. ಆಗ ಒಬ್ಬ ಚಾಲಕನನ್ನು ಇನ್ನೊಬ್ಬ ಚಾಲಕ ಬಾನೆಟ್ ಮೂಲಕ ತಳ್ಳಿಕೊಂಡೇ ಹೋಗಿದ್ದಾನೆ.

Drivers fight in Bangalore

ಇನೋವಾ ಚಾಲಕ ಹಾಗೂ ಇಟಿಯಾಸ್ ಚಾಲಕನ ನಡುವೆ ಫ್ಲೈ ಓವರ್ ಮೇಲೆ ಕಿರಿಕ್ ಉಂಟಾಗಿದೆ. ಆಗ ಇಟಿಯಾಸ್‌ ಚಾಲಕ ತನ್ನ ಕಾರಿನಿಂದ ಇಳಿದು ಇನೋವಾ ಡ್ರೈವರ್‌ ನನ್ನು ಪ್ರಶ್ನೆ ಮಾಡಿದ್ದಾನೆ. ಆಗ ಇನ್ನೊವಾ ಚಾಲಕ ಇದನ್ನು ಕೇರ್‌ ಮಾಡದೆ ಮುಂದೆ ಹೋಗಲು ನೋಡಿದ್ದಾನೆ. ಆತ ಇಟಿಯಾಸ್‌ ಚಾಲಕ ಕಾರಿಗೆ ಅಡ್ಡವಾಗಿ ನಿಂತಿದ್ದಾನೆ.

ಇದನ್ನು ಗಮನಿಸಿದ ಇನೊವಾ ಚಾಲಕ ಆತ ಎದುರು ನಿಂತಿದ್ದನ್ನು ಗಮನಿಸಿಯೂ ಕಾರನ್ನು ಮೂವ್‌ ಮಾಡಿದ್ದಾನೆ. ಎದುರು ಅಡ್ಡಲಾಗಿ ನಿಂತವನನ್ನು ತಳ್ಳಿಕೊಂಡೇ ಕಾರು ಮುಂದಕ್ಕೆ ಹೋಗಿದೆ. ತುಂಬ ದೂರದವರೆಗೆ ಈ ಜಗಳ ಮುಂದುವರಿದಿದೆ. ಕೆಎ 05 ಎಎಲ್ 7999 ಇನೊವಾ ಕಾರಿನ ಚಾಲಕನೇ ಈ ರೀತಿಯಾಗಿ ಅತಿರೇಕದ ವರ್ತನೆ ಮೆರೆದಿರುವುದು.

ಇದನ್ನೂ ಓದಿ: Murder Case : ಸರಿಯಾಗಿ ನೋಡಿಕೊಳ್ತಿಲ್ಲ ಎಂದು ಪತ್ನಿಯನ್ನೇ ಕೊಂದ ಮಧುಮೇಹ ರೋಗಿ!

ಈ ಎಲ್ಲ ಘಟನೆಗಳು ಮತ್ತೊಂದು ಕಾರಿನ ಡ್ಯಾಷ್‌ ಬೋರ್ಡ್‌ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಇವುಗಳನ್ನು ವ್ಯಕ್ತಿಯೊಬ್ಬರು ಎಕ್ಸ್‌ ನಲ್ಲಿ ಶೇರ್‌ ಮಾಡಿದ್ದಾರೆ. ಗಲಾಟೆಯಲ್ಲಿ ಪಾಲ್ಗೊಂಡ ಎರಡೂ ಕಾರುಗಳು ಹಳದಿ ಬೋರ್ಡ್‌ನ ಕಾರುಗಳಾಗಿದ್ದು, ವಾಹನದಲ್ಲಿ ಪ್ರಯಾಣಿಕರು ಕೂಡಾ ಇದ್ದರು. ಆದರೆ, ಇಬ್ಬರೂ ಚಾಲಕರು ಜಗಳಕ್ಕೆ ಇಳಿದು ಹಠ ಸಾಧಿಸಲು ಮುಂದಾಗಿದ್ದಾರೆ.

ಇದೀಗ ಪೊಲೀಸರು ಇಬ್ಬರೂ ಚಾಲಕರನ್ನು ಪತ್ತೆ ಹಚ್ಚಲು ಯತ್ನಿಸುತ್ತಿದ್ದಾರೆ. ವಾಹನದ ನಂಬರ್‌ ಸಿಕ್ಕಿರುವುದರಿಂದ ಮಾಲಕನನ್ನು ಪತ್ತೆ ಹಚ್ಚುವುದು ಕಷ್ಟದ ಕೆಲಸವೇನಲ್ಲ.

ಬೆಂಗಳೂರಿನಲ್ಲಿ ಸಣ್ಣ ಪುಟ್ಟ ಕಾರಣಗಳಿಗಾಗಿ ಈ ರೀತಿ ಅತಿರೇಕದಿಂದ ವರ್ತಿಸುವ ಘಟನೆಗಳು ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿವೆ. ಇತ್ತೀಚೆಗೆ ಸಣ್ಣ ಜಗಳವೊಂದರ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಸುಮಾರು ಒಂದು ಕಿ.ಮೀ. ದೂರದವರೆಗೆ ಕಾರಿನ ಬಾನೆಟ್‌ ಮೇಲೆ ಕುಳಿತಿದ್ದಾಗಲೇ ವಾಹನ ಚಲಾಯಿಸಿದ ಘಟನೆ ನಡೆದಿತ್ತು.

ಅದಕ್ಕಿಂತ ಮೊದಲು ಯಾವುದೋ ಕಾರಣಕ್ಕೆ ಸಂಶಯ ಬಂದು ಬೈಕನ್ನು ತಡೆದು ನಿಲ್ಲಿಸಲು ಯತ್ನಿಸಿ, ಎಳೆದು ನಿಲ್ಲಿಸಿದ ವ್ಯಕ್ತಿಯೊಬ್ಬರನ್ನು ಆ ಕಳ್ಳ ಸುಮಾರು ಒಂದು ಕಿಲೋಮೀಟರ್‌ ದೂರಕ್ಕೆ ರಸ್ತೆಯಲ್ಲಿ ದರದರನೆ ಎಳೆದುಕೊಂಡ ಹೋದ ಘಟನೆಯೂ ನಡೆದಿತು.

Continue Reading
Advertisement
lokayukta raid in channakeshava
ಕರ್ನಾಟಕ1 min ago

Lokayukta Raid: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌, ಬೆಳ್ಳಂಬೆಳಗ್ಗೆ ರಾಜ್ಯದೆಲ್ಲೆಡೆ ದಾಳಿ

David Warner
ಕ್ರಿಕೆಟ್10 mins ago

David Warner: ಮೋಸಗಾರನಿಗೆ ವಿದಾಯ ಪಂದ್ಯದ ಅಗತ್ಯವಿಲ್ಲ; ಮಿಚೆಲ್​ ಜಾನ್ಸನ್

sadghuru with students
ಅಂಕಣ54 mins ago

Prerane Column : ವಿದ್ಯಾಭ್ಯಾಸ ಎಂದರೆ ದುಡ್ಡು ಮಾಡುವ ದಂಧೆಯ ಅಡಿಪಾಯವೇ?

ಕರ್ನಾಟಕ1 hour ago

ವಿಜಯಪುರ ಗೋದಾಮು ದುರಂತ: ಮೃತರ ಸಂಖ್ಯೆ 7ಕ್ಕೆ, ಇನ್ನೂ ನಾಲ್ಕು ಶವ ಸಿಕ್ಕಿಲ್ಲ

cm siddaramaih respect captain pranjal
ಕರ್ನಾಟಕ2 hours ago

CM Siddaramaiah: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ

Canara Bank Ammembala Subbarao Pai
ಅಂಕಣ2 hours ago

Raja Marga Column: ಹಿಡಿಯಕ್ಕಿ ಸಂಗ್ರಹಿಸಿ ಕೆನರಾ ಬ್ಯಾಂಕ್ ಕಟ್ಟಿದ ಅಮ್ಮೆಂಬಳ ಸುಬ್ಬರಾವ್ ಪೈ

CBSE Board Exam 2024 and many more changes proposed implemented in this year
ದೇಶ2 hours ago

ಸಿಬಿಎಸ್‌ಇ ಬೋರ್ಡ್‌ ಎಕ್ಸಾಂಗೆ ಘೋಷಿಸಿದ ಪ್ರಮುಖ ಬದಲಾವಣೆಗಳೇನು?

Saurav Gangly
ಕ್ರಿಕೆಟ್2 hours ago

Virat Kohli : ಕೊಹ್ಲಿಯನ್ನು ನಾಯಕತ್ವದಿಂದ ಇಳಿಸಿದ್ದಕ್ಕೆ ಕಾರಣ ತಿಳಿಸಿದ ಸೌರವ್​ ಗಂಗೂಲಿ

Physical Education Teacher
ಉದ್ಯೋಗ2 hours ago

Teachers Recruitment : ಪ್ರಾಥಮಿಕ ಶಾಲೆಯಲ್ಲಿ 2120 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ತೀರ್ಮಾನ

sufi
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಸಯ್ಯಿದ್ ರಿಜ್ವಿ ಸ್ವತಃ ಹೇಳಿದ ಸೂಫಿಗಳ ನಿಜ ಕಥನ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ1 day ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ2 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ5 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

ಟ್ರೆಂಡಿಂಗ್‌