Bellulli Kabab Chandru: ಒಂದಾಗೇ ಬಿಟ್ರು ಭಟ್ರು-ಬೆಳ್ಳುಳ್ಳಿ ಕಬಾಬ್ ಚಂದ್ರು: ಇದರಲ್ಲಿ ಅಣ್ಣ ಯಾರು? ತಮ್ಮ ಯಾರು? - Vistara News

ವೈರಲ್ ನ್ಯೂಸ್

Bellulli Kabab Chandru: ಒಂದಾಗೇ ಬಿಟ್ರು ಭಟ್ರು-ಬೆಳ್ಳುಳ್ಳಿ ಕಬಾಬ್ ಚಂದ್ರು: ಇದರಲ್ಲಿ ಅಣ್ಣ ಯಾರು? ತಮ್ಮ ಯಾರು?

Bellulli Kabab Chandru ಚಂದ್ರು ನೋಡಲು ಸ್ವಲ್ಪ ಸಿನಿಮಾ ನಿರ್ದೇಶಕ ಯೋಗರಾಜ ಭಟ್ರನ್ನು ಹೋಲುತ್ತಾರೆ. ಇದೇ ಕಾರಣಕ್ಕೆ ಕೆಲ ಮೀಮ್ ಪೇಜ್‌ಗಳಲ್ಲಿ ಇಬ್ಬರ ಫೋಟೊಗಳನ್ನು ಕೊಲಾಜ್ ಮಾಡಿ ಅಣ್ಣ-ತಮ್ಮ ಎಂದು ಬರೆಯಲಾಗುತ್ತಿದೆ.

VISTARANEWS.COM


on

yogaraj bhat and bellulli kabab chandru join hands
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʻಬೆಳ್ಳುಳ್ಳಿ ಕಬಾಬ್ʼ​ ಖ್ಯಾತಿಯ ಚಂದ್ರು ಅವರ ಹವಾ ಇನ್ನೂ ನಿಂತಿಲ್ಲ. ಹಲವು ಪ್ರತಿಭೆಗಳು ಚಂದ್ರು ಅವರ ಬಗ್ಗೆ ರೀಲ್ಸ್‌ ಕೂಡ ಹಂಚಿಕೊಂಡಾಯ್ತು. ಆದರೆ ಇದೀಗ ಸ್ವಲ್ಪ ದಿನಗಳಿಂದ ʻಬೆಳ್ಳುಳ್ಳಿ ಕಬಾಬ್​ ಚಂದ್ರುʼ ಹಾಗೂ ಯೋಗರಾಜ್‌ ಭಟ್‌ ಅವರ ಕುರಿತಾದ ಮೀಮ್‌ಗಳು ವೈರಲ್‌ ಆಗುತ್ತಿವೆ. ‘ಕರಿಮಣಿ ಮಾಲೀಕ’ ರೀಲ್ಸ್ ಜತೆಗೆ ‘ರಾಹುಲ್ಲಾ’ ಸೇರಿಸಿ ಒಂದಷ್ಟು ವಿಡಿಯೋಗಳು ವೈರಲ್ ಆಯಿತು. ಚಂದ್ರು- ವಿಕಾಸ್ ಒಟ್ಟಿಗೆ ಸೇರಿ ವಿಡಿಯೋ ಮಾಡಿದ್ದು ಆಯಿತು. ಚಂದ್ರು ನೋಡಲು ಸ್ವಲ್ಪ ಸಿನಿಮಾ ನಿರ್ದೇಶಕ ಯೋಗರಾಜ ಭಟ್ರನ್ನು ಹೋಲುತ್ತಾರೆ. ಇದೇ ಕಾರಣಕ್ಕೆ ಕೆಲ ಮೀಮ್ ಪೇಜ್‌ಗಳಲ್ಲಿ ಇಬ್ಬರ ಫೋಟೊಗಳನ್ನು ಕೊಲಾಜ್ ಮಾಡಿ ಅಣ್ಣ-ತಮ್ಮ ಎಂದು ಬರೆಯಲಾಗುತ್ತಿದೆ. ಈಗ ಇದೇ ಕಾರಣ ಇಟ್ಟುಕೊಂಡು ಭಟ್ರು ತಮ್ಮ ಮುಂದಿನ ಕರಟಕ-ದಮನಕʼ ಸಿನಿ ಪ್ರಚಾರಕ್ಕೆ ಚಂದ್ರು ಜತೆ ಕೈ ಜೋಡಿಸಿದ್ದಾರೆ.

ಕೆಲವು ದಿನಗಳಿಂದ ಟ್ರೋಲ್‌ ಹಾಗೂ ಮೀಮ್‌ ಪೇಜ್‌ಗಳಲ್ಲಿ ಯೋಗರಾಜ್‌ ಭಟ್‌ ಹಾಗೂ ಚಂದ್ರು ಅವರನ್ನು ಕೊಲಾಜ್ ಮಾಡಿ ಅಣ್ಣ-ತಮ್ಮ ಎಂದು ಬರೆಯಲಾಗುತ್ತಿದೆ. ‘ಒಬ್ರು ಸಿನಿಮಾ ಭಟ್ರು, ಇನ್ನೊಬ್ರು ಅಡುಗೆ ಭಟ್ರು, ಒಬ್ರು ಗಾಳಿಪಟ, ಇನ್ನೊಬ್ರು ಚಟ ಪಟʼ ಎಂದು ಪೋಸ್ಟ್ ಆಗಿದ್ದ ಮೀಮ್ ಫೋಟೊ ಸಖತ್ ವೈರಲ್ ಆಗಿತ್ತು. ಇದಾದ ಮೇಲೆ ಇದೀಗ ಯೋಗರಾಜ್‌ ಭಟ್‌ ಅವರು ಚಂದ್ರು ಅವರ ಜತೆ ಕೈ ಜೋಡಿಸಿದ್ದಾರೆ. ತಮ್ಮ ಮುಂದಿನ ಕರಟಕ-ದಮನಕ ಸಿನಿ ಪ್ರಚಾರಕ್ಕೆ ಚಂದ್ರು ಅವರನ್ನು ಬಳಸಿಕೊಂಡಿದ್ದಾರೆ. ಸಿನಿಮಾ ಪ್ರಚಾರಕ್ಕಾಗಿ ಇಬ್ಬರೂ ಸೇರಿ ಒಂದು ನಾನ್‌ವೆಜ್ ರೆಸಿಪಿ ವಿಡಿಯೋ ಮಾಡಿದ್ದಾರೆ. ಅದರ ಪ್ರೋಮೊವನ್ನು ಯೋಗರಾಜ್ ಭಟ್ ಹಂಚಿಕೊಂಡಿದ್ದಾರೆ.

ನಾವಿಬ್ಬರು ಅಣ್ಣ ತಮ್ಮ, ತಮ್ಮ ಅಣ್ಣ

ಇದೀಗ ಈ ಪ್ರೋಮೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. “ಹಂಗೂ ಹಿಂಗೂ ಹೆಂಗೋ ಇದ್ದೋ, ಹಿಂಗಾಗೋದ್ವಿ ನೋಡೋ ಅಣ್ತಮ್ಮ ಎಂದು ಭಟ್ರು ಹಾಡು ಹಾಡು ಶುರು ಮಾಡಿದರು. ನಾವಿಬ್ಬರು ಅಣ್ಣ ತಮ್ಮ, ತಮ್ಮ ಅಣ್ಣ ಎಂದು ಎಲ್ಲ ಕಡೆ ಚರ್ಚೆ ನಡೀತಿದೆ. ನಾವು ಯಾವ ತರ ಅಣ್ಣ ತಮ್ಮ?ಹೌದಾ? ಅಲ್ಲವಾ?ಎಲ್ಲವನ್ನು ನಿಮಗೆ ವಿವರಿಸಿ ಹೇಳ್ತೀವಿ. ಇನ್ನೊಬ್ಬರು ಪಂಚಾಯ್ತಿಗೆ ದೊಡ್ಡವರು ಬರ್ತಾರೆʼʼಎಂದಿದ್ದಾರೆ. ಇನ್ನು ಚಂದ್ರು ಕೂಡ ಮಾತನಾಡಿ ʻʻಹೌದಣ್ಣ. ಬರ್ತಾರೆ..ಒನ್‌ ಮೋರ್‌ ಒನ್‌ ಮೋರ್‌ ಅಂತ ಬರ್ತಾರೆ..ಹೇಳ್ತಾರೆ. ಕೇಳ್ತಾ ಇದ್ದರೆ ಆಮೇಲೆ ಗೊತ್ತಾಗತ್ತೆ. ಯಾರು ಅಣ್ಣ..ಯಾರು ತಮ್ಮ ಎಂದುʼʼಹೇಳಿದ್ದಾರೆ. ಭಟ್ರು ಕೂಡ ಕೊನೆಯಲ್ಲಿ ರೆಡಿ ಮಾಡ್ಕೊಳ್ಳೋ ರಾವುಲ್ಲಾ…ʼʼಎಂದಿದ್ದಾರೆ.

ಇದನ್ನೂ ಓದಿ: Bellulli Kabab Chandru: `ರಾಹುಲ್ಲಾ ಅಲ್ಲ.. ಸುನಿಲ್ಲಾ’ ತುಂಬ ಚೆನ್ನಾಗಿ ಸಿನಿಮಾ ಮಾಡಿದ್ದಾರೆ ಎಂದ ಬೆಳ್ಳುಳ್ಳಿ ಕಬಾಬ್​ ಚಂದ್ರು!

ಈ ತಮಾಷೆಯ ವಿಡಿಯೊಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಕರಟಕ ದಮನಕ + ಬೆಳ್ಳುಳ್ಳಿ ಕಬಾಬ್’ ಅಣ್ಣತಮ್ಮಂದಿರ ಕಹಾನಿಗೆ ಕಾಯ್ತಾ ಇದ್ದಾರೆ ಜನ.

ಮಾರ್ಚ್ 8ಕ್ಕೆ ಸಿನಿಮಾ ತೆರೆಗೆ

ಯೋಗರಾಜ್‌ ಭಟ್ ನಿರ್ದೇಶನದ ‘ಕರಟಕ ದಮನಕ’ ಚಿತ್ರದಲ್ಲಿ ಶಿವರಾಜ್‌ಕುಮಾರ್ ಹಾಗೂ ಪ್ರಭುದೇವ ನಟಿಸಿದ್ದಾರೆ. ಈಗಾಗಲೇ ಚಿತ್ರದ ಹಾಡುಗಳು ಬಿಡುಗಡೆಯಾಗಿ ಸದ್ದು ಮಾಡುತ್ತಿದೆ. ಮಾರ್ಚ್ 8ಕ್ಕೆ ಸಿನಿಮಾ ತೆರೆಗೆ ಬರಲಿದೆ.. ʻಕರಟಕ ದಮನಕʼ ಎಂದರೆ ‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು ಕರಟಕ ಇನ್ನೊಂದರ ಹೆಸರು ದಮನಕ. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು. ಈ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ. ಎಚ್ಚರಿಕೆ’ ಎಂದು ಫೋಸ್ಟ್ ಮಾಡಿದ್ದಾರೆ. ಹಲವು ದಿನಗಳಿಂದ ಈ ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ರಾಕ್ ಲೈನ್ ವೆಂಕಟೇಶ್ ಕೂಡ ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಅವರು ಈ ಸಿನಿಮಾದಲ್ಲಿ ಪೊಲೀಸ್ ಆಫೀಸರ್ ಪಾತ್ರ ನಿರ್ವಹಿಸುತ್ತಿದ್ದಾರೆ.ವಿ ಹರಿಕೃಷ್ಣ ಸಂಗೀತ ಸಂಯೋಜನೆಯ 7 ಹಾಡುಗಳು ಚಿತ್ರದಲ್ಲಿದೆ. ಸಂತೋಷ್ ರೈ ಪಾತಾಜೆ ಈ ಚಿತ್ರದ ಛಾಯಾಗ್ರಾಹಕರು. ನಿಶ್ವಿಕಾ ನಾಯ್ಡು, ಪ್ರಿಯಾ ಆನಂದ್ ನಾಯಕಿಯರು. ಮುಖ್ಯ ಮಂತ್ರಿ ಚಂದ್ರು ಹಾಗೂ ತನಿಕೆಲ್ಲ ಭರಣಿ ಅವರಂತಹ ಹಿರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: 160 ಕಿ.ಮೀ. ವೇಗದಲ್ಲಿ ಡ್ರೈವಿಂಗ್‌..ಇನ್‌ಸ್ಟಾಗ್ರಾಂನಲ್ಲಿ ಲೈವ್‌..ಡೆಡ್ಲಿ ಆಕ್ಸಿಡೆಂಟ್‌! ವೈರಲಾಯ್ತು ಶಾಕಿಂಗ್‌ ವಿಡಿಯೋ

Viral Video:ಅಹ್ಮದಾಬಾದ್‌ನಿಂದ ಮುಂಬೈಗೆ SUV ಕಾರಿನಲ್ಲಿ ರೋಡ್‌ ಟ್ರಿಪ್‌ ಹೊರಟಿದ್ದ ಐವರು ಯುವಕರು ಕಾರು ಚಲಾಯಿಸುತ್ತಲೇ ಇನ್‌ಸ್ಟಾಗ್ರಾಂ ಲೈವ್‌ ಹೋಗಿದ್ದಾರೆ. ಒಂದು ಅತೀ ವೇಗದ ಕಾರು ಚಾಲನೆ ಅದರ ಜೊತೆ ಇನ್‌ಸ್ಟಾಗ್ರಾಂನಲ್ಲಿ ಲೈವ್‌ ಹೀಗೆ ಎದುರಿಗೆ ಬರುತ್ತಿದ್ದ ಒಂದೊಂದೆ ವಾಹಗಳನ್ನು ಓವರ್‌ಟೇಕ್‌ ಮಾಡುತ್ತಾ ಹುಚ್ಚಾಟ ಮೆರೆದಿದ್ದಾರೆ. ಫುಲ್‌ ಎಂಜಾಯ್‌ ಮೂಡ್‌ನಲ್ಲಿದ್ದ ಯುವಕರ ಹುಚ್ಚಾಟದಿಂದ ಎದುರಿಗೆ ಬರುತ್ತಿದ್ದ ವಾಹನ ತಪ್ಪಿಸಲು ಹೋಗಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಯುವಕರಿಬ್ಬರು ಸ್ಥಳದಲ್ಲೇ ಬಲಿಯಾಗಿದ್ದಾರೆ.

VISTARANEWS.COM


on

Viral Video
Koo

ಗುಜರಾತ್‌: ಮೋಜಿಗೆಂದು ವೇಗವಾಗಿ ವಾಹನ ಚಲಾಯಿಸಿ(Rash Driving) ಯುವಕರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುವ ಬಗ್ಗೆ ದಿನಾ ಒಂದಿಲ್ಲೊಂದು ಘಟನೆ ವರದಿ ಆಗುತ್ತಲೇ ಇರುತ್ತದೆ. ಅಂತಹದ್ದೇ ಮತ್ತೊಂದು ಘಟನೆ ಗುಜರಾತ್‌(Gujarat Accident)ನಲ್ಲಿ ನಡೆದಿದ್ದು, ಐವರು ಯುವಕರು ಇನ್‌ಸ್ಟಾ ಗ್ರಾಂ ಲೈವ್‌(Viral Video) ಹೋಗುತ್ತಾ ಕಾರನ್ನು ಪ್ರತಿ ಗಂಟೆಗೆ 160 ಕಿಲೋಮೀಟರ್‌ ವೇಗದಲ್ಲಿ ಚಲಾಯಿಸಿ ಕೊನೆಗೆ ಭೀಕರ ಅಪಘಾತಕ್ಕೀಡಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಅಸುನೀಗಿದರೆ, ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ವಿವರ:

ಗುಜರಾತ್‌ನ ಕಛ್‌ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಹ್ಮದಾಬಾದ್‌ನಿಂದ ಮುಂಬೈಗೆ SUV ಕಾರಿನಲ್ಲಿ ರೋಡ್‌ ಟ್ರಿಪ್‌ ಹೊರಟಿದ್ದ ಐವರು ಯುವಕರು ಕಾರು ಚಲಾಯಿಸುತ್ತಲೇ ಇನ್‌ಸ್ಟಾಗ್ರಾಂ ಲೈವ್‌ ಹೋಗಿದ್ದಾರೆ. ಒಂದು ಅತೀ ವೇಗದ ಕಾರು ಚಾಲನೆ ಅದರ ಜೊತೆ ಇನ್‌ಸ್ಟಾಗ್ರಾಂನಲ್ಲಿ ಲೈವ್‌ ಹೀಗೆ ಎದುರಿಗೆ ಬರುತ್ತಿದ್ದ ಒಂದೊಂದೆ ವಾಹಗಳನ್ನು ಓವರ್‌ಟೇಕ್‌ ಮಾಡುತ್ತಾ ಹುಚ್ಚಾಟ ಮೆರೆದಿದ್ದಾರೆ. ಫುಲ್‌ ಎಂಜಾಯ್‌ ಮೂಡ್‌ನಲ್ಲಿದ್ದ ಯುವಕರ ಹುಚ್ಚಾಟದಿಂದ ಎದುರಿಗೆ ಬರುತ್ತಿದ್ದ ವಾಹನ ತಪ್ಪಿಸಲು ಹೋಗಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಯುವಕರಿಬ್ಬರು ಸ್ಥಳದಲ್ಲೇ ಬಲಿಯಾಗಿದ್ದಾರೆ. ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸುವುದಕ್ಕೂ ಮುನ್ನ ನಡೆದ ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಜೋರಾಗಿ ಮ್ಯೂಸಿಕ್‌ ಹಾಕಿಕೊಂಡು ಯುವಕನೋರ್ವ “ನೋಡಿ ನಮ್ಮ ಕಾರು ಎಷ್ಟು ವೇಗವಾಗಿ ಹೋಗುತ್ತಿದೆ” ಎಂದು ಹೇಳುತ್ತಾ ಸ್ಪೀಡೋ ಮೀಟರ್‌ ಅನ್ನು ತೋರಿಸುತ್ತಾನೆ. ಅದು ಪ್ರತಿಗಂಟೆಗೆ 160 ಕಿ.ಮೀ ವೇಗ ತೋರಿಸುತ್ತಿತ್ತು. ಅಷ್ಟು ಹೊತ್ತಿಗೆ ಕಾರನ್ನು ಮತ್ತಷ್ಟು ವೇಗವಾಗಿ ಚಲಾಯಿಸಿ ಒಂದೊಂದೆ ವಾಹನಗಳನ್ನು ಹಿಂದಿಕ್ಕಲು ಶುರು ಮಾಡುತ್ತಾರೆ. ಆಗ ಮತ್ತೊರ್ವ ಯುವಕ ಯೆಸ್‌…ಒನ್‌ ಮೋರ್‌ ಎಂದು ಕಿರುಚುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ:Shyam Rangeela: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದ ಕಲಾವಿದನ ನಾಮಪತ್ರ ತಿರಸ್ಕಾರ!

ಈ ಘಟನೆ ಮೇ 2ರಂದು ಅದಾಸ್‌ ಪ್ರದೇಶದಲ್ಲಿ ಬೆಳಗ್ಗಿನ ಜಾವ 3.30 ಮತ್ತು 4.30ರ ನಡುವೆ ನಡೆದಿದ್ದು, ಮೃತರನ್ನು ಅಮನ್‌ ಮೆಹಬೂಬ್‌ ಭಾಯ್‌ ಶೇಖ್‌ ಮತ್ತು ಚಿರಾಗ್‌ ಕುಮಾರ್‌ ಕೆ ಪಟೇಲ್‌ ಎಂದು ಗುರುತಿಸಲಾಗಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕಾರು ಚಲಾಯಿಸುತ್ತಿದ್ದ ಮುಸ್ತಾಫಾ ಅಲಿಯಾಸ್‌ ಶಹಬಾದ್‌ ಖಾನ್‌ ಪಠಾಣ್‌ ವಿರುದ್ಧ ಕೇಸ್‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಕ್ರೀಡೆ

Team India Coach Applications: ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಸಾವಿರಾರು ಅಭಿಮಾನಿಗಳು; ಫಜೀತಿಗೆ ಸಿಲುಕಿದ ಬಿಸಿಸಿಐ

Team India Coach Applications: ಸೋಮವಾರವಷ್ಟೇ ಬಿಸಿಸಿಐ(BCCI) ತನ್ನ ಅಧಿಕೃತ ಪ್ರಕಟನೆ ಮೂಲಕ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಅರ್ಜಿ ಸಲ್ಲಿಸಲು ಮೇ 27 ಅಂತಿಮ ಗಡುವಾಗಿದೆ. ಬಿಸಿಸಿಐ ಆನ್​ಲೈನ್​ ಮೂಲಕ ಈ ಅರ್ಜಿ ಆಹ್ವಾನಿಸಿ ಇದೀಗ ಫಜೀತಿಗೆ ಸಿಲುಕಿದೆ. ಹೌದು, ಅನೇಕ ಕ್ರಿಕೆಟ್​ ಅಭಿಮಾನಿಗಳು(Cricket Fans Apply For India’s Head Coach) ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತ ಟ್ವೀಟ್​ಗಳು ವೈರಲ್​ ಆಗಿದೆ.

VISTARANEWS.COM


on

Team India Coach Applications
Koo

ಮುಂಬಯಿ: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ(Team India Coach Applications) ಅರ್ಜಿ ಆಹ್ವಾನಿಸಿರುವ ಬಿಸಿಸಿಐಗೆ ಇದೀಗ ದೊಡ್ಡ ತಲೆನೋವೊಂದು ಎದುರಾಗಿದೆ. ಸೋಮವಾರವಷ್ಟೇ ಬಿಸಿಸಿಐ(BCCI) ತನ್ನ ಅಧಿಕೃತ ಪ್ರಕಟನೆ ಮೂಲಕ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಅರ್ಜಿ ಸಲ್ಲಿಸಲು ಮೇ 27 ಅಂತಿಮ ಗಡುವಾಗಿದೆ. ಬಿಸಿಸಿಐ ಆನ್​ಲೈನ್​ ಮೂಲಕ ಈ ಅರ್ಜಿ ಆಹ್ವಾನಿಸಿ ಇದೀಗ ಫಜೀತಿಗೆ ಸಿಲುಕಿದೆ. ಹೌದು, ಅನೇಕ ಕ್ರಿಕೆಟ್​ ಅಭಿಮಾನಿಗಳು(Cricket Fans Apply For India’s Head Coach) ಗೂಗಲ್​ ಅರ್ಜಿ ಪಡೆದುಕೊಂಡು ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತ ಟ್ವೀಟ್​ಗಳು ವೈರಲ್​ ಆಗಿದೆ.

ಶುಕ್ರವಾರ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ನಾವು 3 ವರ್ಷಗಳ ದೀರ್ಘ ಅವಧಿಗಾಗಿ ಕೋಚ್​ ಹುಡುಕಾಟದಲ್ಲಿದ್ದೇವೆ ಎಂದು ಹೇಳಿದ್ದರು. ಜತೆಗೆ ದ್ರಾವಿಡ್ ಅವರಿಗೂ​ ಮರು ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದರು. ಆದರೆ, ದ್ರಾವಿಡ್​ ಕೋಚ್​ ಹುದ್ದೆಯಲ್ಲಿ ಮುಂದುವರಿಯಲು ಆಸಕ್ತಿ ಹೊಂದಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಬಿಸಿಸಿಐ ನೂತನ ಕೋಚ್​ ಹುಡುಕಾಟದಲ್ಲಿದೆ.

ಇದನ್ನೂ ಓದಿ Team India Coach: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನ; ಮೇ 27 ಕೊನೆಯ ದಿನ

2011ರಲ್ಲಿ ಗ್ಯಾರಿ ಕಸ್ಟನ್ ಮಾರ್ಗದರ್ಶನದಲ್ಲಿ ಭಾರತ 2ನೇ ಬಾರಿಗೆ ವಿಶ್ವಕಪ್​ ಗೆದ್ದಿತ್ತು. ಬಳಿಕ 2013ರಲ್ಲಿ ಡಂಕನ್​ ಪ್ಲೆಚರ್​ ಮಾರ್ಗದರ್ಶನದಲ್ಲಿ ಭಾರತ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಭಾರತ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ರವಿಶಾಸ್ತ್ರಿ ಮತ್ತು ರಾಹುಲ್​ ದ್ರಾವಿಡ್​ ಮಾರ್ಗದರ್ಶನಲ್ಲಿ 2 ಏಕದಿನ ವಿಶ್ವಕಪ್​ ಆಡಿದರೂ ಭಾರತ ಕಪ್​ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ವಿದೇಶಿ ಕೋಚ್​ ಆಯ್ಕೆಯೇ ಉತ್ತಮ ಎಂದು ಬಿಸಿಸಿಐ ಯೋಚಿಸಿದೆ ಎನ್ನಲಾಗಿದೆ.

ಸದ್ಯ ಪ್ಲೆಮಿಂಗ್​ ಮತ್ತು ಕ್ರಿಕೆಟ್ ಆಸ್ಟ್ರೇಲಿಯಾ ಕಂಡ ಯಶಸ್ವಿ ಕೋಚ್ ಗಳಲ್ಲಿ ಒಬ್ಬರಾದ ಜಸ್ಟಿನ್ ಲ್ಯಾಂಗರ್ ಹೆಸರು ಕೇಳಿ ಬಂದಿದೆ. ಇದರಲ್ಲಿ ಲ್ಯಾಂಗರ್​ ಅವರು ತಾವಾಗಿಯೇ ಕೋಚಿಂಗ್​ ಬಗ್ಗೆ ಆಸಕ್ತಿ ತೋರಿರುವ ಕಾರಣ ಬಿಸಿಸಿಐ ಅವರಿಗೆ ಮಣೆ ಹಾಕಿದರೂ ಅಚ್ಚರಿಯಿಲ್ಲ. ಲ್ಯಾಂಗರ್ ಮಾರ್ಗದರ್ಶನದಲ್ಲಿ ಆಸೀಸ್ ತಂಡ ಟಿ20 ವಿಶ್ವಕಪ್, ಇಂಗ್ಲೆಂಡ್​ ಎದುರಿನ ಪ್ರತಿಷ್ಠಿತ ಆ್ಯಶಸ್​ ಟೆಸ್ಟ್​ ಸರಣಿ ಗೆದ್ದಿತ್ತು. ಮೂರು ವರ್ಷಗಳ ಕಾಲ ಅವರು ಆಸೀಸ್​ ತಂಡದ ಕೋಚ್​ ಆಗಿ ಕರ್ತವ್ಯ ನಿರ್ವಹಿಸಿದ್ದರು. ಒಟ್ಟಾರೆಯಾಗಿ ಟಿ20 ವಿಶ್ವಕಪ್​ ಮುಗಿದ ಬಳಿಕ ಭಾರತ ತಂಡದ ಕೋಚ್​ ಯಾರಾಗಲಿದ್ದಾರೆ ಎನ್ನುವ ಸ್ಪಷ್ಟ ಚಿತ್ರಣ ಸಿಗಲಿದೆ.

ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಆಯ್ಕೆಯಾದ ಹೊಸ ಕೋಚ್‌ ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ದ್ರಾವಿಡ್ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕವೇ ಕೋಚ್​ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದರು. ಆದರೆ, ಬಿಸಿಸಿಐ ಟಿ20 ವಿಶ್ವಕಪ್​ ತನಕ ಅವರನ್ನು ಮುಂದುವರಿಯುವಂತೆ ಒತ್ತಾಯ ಮಾಡಿತ್ತು. ಹೀಗಾಗಿ ದ್ರಾವಿಡ್​ ಟಿ20 ವಿಶ್ವಕಪ್ ತನಕ ಈ ಹುದ್ದೆಯಲ್ಲಿ ಮುಂದುವರಿದರು.

Continue Reading

ಕ್ರಿಕೆಟ್

Crazy MS Dhoni fan: 2100 ಕಿ.ಮೀ ದೂರ ಸೈಕಲ್​ ತುಳಿದು ದಿಲ್ಲಿಯಿಂದ ಚೆನ್ನೈಗೆ ಬಂದ ಧೋನಿ ಅಭಿಮಾನಿ; 23 ದಿನಗಳಲ್ಲಿ ಮಿಷನ್​ ಕಂಪ್ಲೀಟ್​

Crazy MS Dhoni fan: ಬಿಹಾರ ಮೂಲದ ಧೋನಿ ಅಭಿಮಾನಿಯೊಬ್ಬ (Crazy MS Dhoni fan) ತನ್ನ ನೆಚ್ಚಿನ ಆಟಗಾರನ ಆಟ ನೋಡಲೆಂದೇ ದಿಲ್ಲಿಯಿಂದ ಬರೋಬ್ಬರಿ 2100 ಕಿ.ಮೀ ದೂರ ಸೈಕಲ್​ ತುಳಿದು ಚೆನ್ನೈಗೆ ಬಂದು ತನ್ನ ಆಸೆಯನ್ನು ಈಡೇರಿಸಿಕೊಂಡಿದ್ದಾನೆ.

VISTARANEWS.COM


on

Crazy MS Dhoni fan
Koo

ಚೆನ್ನೈ: ಕೆಲವು ದಿನಗಳ ಹಿಂದಷ್ಟೇ ಶತಾಯುಷಿ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಧೋನಿಯನ್ನು(MS Dhoni) ನೋಡಲು ಚೆನ್ನೈಯಿಂದ ದೆಹಲಿಯವರೆಗೂ ನಡೆದುಕೊಂಡು ಹೋಗಲು ಸಿದ್ಧ ಎಂದು ಹೇಳಿದ್ದರು. ಇದೀಗ ಧೋನಿಯ ಕ್ರೇಜಿ ಅಭಿಮಾನಿಯೊಬ್ಬ(Crazy MS Dhoni fan) ತನ್ನ ನೆಚ್ಚಿನ ಆಟಗಾರನ ಆಟ ನೋಡಲೆಂದೇ ಬರೋಬ್ಬರಿ 2100 ಕಿ.ಮೀ ದೂರ ಸೈಕಲ್​ ತುಳಿದು ಬಂದು ತನ್ನ ಆಸೆಯನ್ನು ಈಡೇರಿಸಿಕೊಂಡಿದ್ದಾನೆ.

ಹೌದು, ಬಿಹಾರ ಮೂಲದ ಧೋನಿ ಅಭಿಮಾನಿಯಾಗಿರುವ ಈತ ಡೆಲ್ಲಿಯಲ್ಲಿ ನೆಲೆಸಿದ್ದಾನೆ. ಈ ಬಾರಿ ಧೋನಿ ಐಪಿಎಲ್​ಗೆ ವಿದಾಯ ಹೇಳಲಿದ್ದಾರೆ. ಹೀಗಾಗಿ ತಮ್ಮ ನೆಚ್ಚಿನ ಆಟಗಾರನ ಕೊನೆಯ ಆಟವನ್ನು ಕಣ್ತುಂಬಿಕೊಳ್ಳಲು ಪ್ರತಿ ಪಂದ್ಯದಲ್ಲಿಯೂ ಕಾದು ಕುಳಿತಿರುತ್ತಾರೆ.

ಬಿಹಾರ ಮೂಲದ ಧೋನಿ ಅಭಿಮಾನಿ ಕೂಡ ಹೇಗಾದರೂ ಮಾಡಿ ಧೋನಿಯ ಆಟವನ್ನು ನೋಡಲೇಬೇಕೆಂದು ಆಸೆ ಪಟ್ಟಿದ್ದರು. ಆದರೆ, ಆರ್ಥಿಕ ಸಮಸ್ಯೆಯೂ ದೊಡ್ಡ ಸವಾಲಾಗಿ ಪರಿಣಮಿಸಿತು. ಇದೇ ವೇಳೆ ಸೈಕಲ್ ಆಯ್ಕೆ ಮಾಡಿಕೊಂಡು ದಿಲ್ಲಿಯಿಂದ 23 ದಿನಗಳಲ್ಲಿ ಚೆನ್ನೈಗೆ ತಲುಪಿದರು. ಈ ಪಯಣದ ವೇಳೆ ಅವರು ಬರೋಬ್ಬರಿ 2100 ಕಿ.ಮೀ ​ಸೈಕಲ್​ ತುಳಿದಿದ್ದಾರೆ. ಕೊನೆಗೂ ಅವರು ಚೆನ್ನೈ ಪಂದ್ಯವನ್ನು ವೀಕ್ಷಿಸಿದ್ದಾರೆ. ಈ ರೋಚಕ ಜರ್ನಿಯ ಕಥೆಯನ್ನು ಈ ಅಭಿಮಾನಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಈ ವಿಡಿಯೊವನ್ನು ಚೆನ್ನೈ ಸೂಪರ್​ ಕಿಂಗ್ಸ್​ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ. ಇತ್ತೀಚೆಗೆ ಅಭಿಮಾನಿಯೊಬ್ಬ ತನ್ನ ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಮಾಡಿಕೊಂಡಿದ್ದ.

ಇದನ್ನೂ ಓದಿ MS Dhoni : ಧೋನಿಗೆ ದೇವಸ್ಥಾನ; ಸಿಎಸ್​​ಕೆ ತಂಡದ ಮಾಜಿ ಆಟಗಾರ ಅಭಿಮಾನದ ನುಡಿ

ಎಂ.ಎಸ್.ಧೋನಿ(MS Dhoni), ಕ್ಯಾಪ್ಟನ್‌ ಕೂಲ್‌, ಮಾಹಿ, ತಾಲಾ… ಎಂದೆಲ್ಲ ಪ್ರೀತಿಯಿಂದ ಕರೆಸಿಕೊಳ್ಳುವ ಮಹೇಂದ್ರ ಸಿಂಗ್‌ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಸಿಎಸ್‌ಕೆಗಾಗಿ ಧೋನಿ ಆಡುತ್ತಿದ್ದಾರೆ. ಅವರ ಈ ಪ್ರದರ್ಶನವನ್ನು ಪರಿಗಣಿಸಿ, ಚೆನ್ನೈಯಲ್ಲಿ ಧೋನಿಯ ದೇವಾಲಯವನ್ನು ನಿರ್ಮಿಸಲಾಗುವುದು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ. ಧೋನಿ ಚೆನ್ನೈನ ದೇವರು ಎಂದ ರಾಯುಡು, ಮುಂಬರುವ ವರ್ಷದಲ್ಲಿ ಚೆನ್ನೈನಲ್ಲಿ ಎಂಎಸ್ ಧೋನಿಯ ಮಂದಿರ ನಿರ್ಮಾಣವಾಗುವುದು ಖಚಿತ ಎಂದು ಹೇಳಿದ್ದಾರೆ.

ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಮೇ 18ರಂದು ನಡೆಯುವ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಗೆಲ್ಲಲೇ ಬೇಕು. ಒಂದೊಮ್ಮೆ ಚೆನ್ನೈ ಸೋತರೆ ಇದುವೇ ಧೋನಿಗೆ ವಿದಾಯ ಪಂದ್ಯವಾಗಲಿದೆ.

Continue Reading

ವೈರಲ್ ನ್ಯೂಸ್

Viral video: ಚಪ್ಪಲಿಯಲ್ಲಿ ಬಡಿದಾಡಿ ಬಟ್ಟೆ ಹರಿದುಕೊಂಡರು; ಪುಕ್ಕಟೆ ಬಸ್‌ನಲ್ಲಿ ಮಹಿಳೆಯರ ʼಶಕ್ತಿʼ ಪ್ರದರ್ಶನ!

Viral video: ಈ ಘಟನೆ ಬೀದರ್‌ನಿಂದ ಕಲಬುರಗಿಗೆ ತೆರಳುವ ಮಾರ್ಗದ ಬಸ್ಸಿನಲ್ಲಿ ನಡೆದಿದೆ. ತಾನು ಕರ್ಚೀಫ್ ಹಾಕಿಟ್ಟಿದ್ದ ಸೀಟಿನಲ್ಲಿ ಮತ್ತೊಬ್ಬಳು ಬಂದು ಕುಳಿತಿದ್ದರಿಂದ ಸಿಟ್ಟಾದ ಮಹಿಳೆ ಏಳಲು ಹೇಳಿದ್ದಾಳೆ. ಆದರೆ ಕೂತಿದ್ದ ಮಹಿಳೆ ಇದಕ್ಕೆ ಸ್ಪಂದಿಸದೆ ಕಟುವಾಗಿ ಪ್ರತಿಕ್ರಿಯಿಸಿದ್ದು, ಇದರಿಂದ ಮಾತಿಗೆ ಮಾತು ಬೆಳೆದಿದೆ.

VISTARANEWS.COM


on

viral video shakti scheme women fight
Koo

ಬೀದರ್‌: ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣದ (Shakthi scheme women fight) ಸೀಟಿಗಾಗಿ ಕೆಲವು ಮಹಿಳೆಯರು ಕಿತ್ತಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (viral video) ಆಗಿದೆ. ಒಂದು ಸೀಟಿಗಾಗಿ ಪರಸ್ಪರ ಮಾನ ಮರ್ಯಾದೆ ಬಿಟ್ಟು ಚಪ್ಪಲಿ ಹಿಡಿದು ಬಡಿದಾಡಿಕೊಂಡಿದ್ದಾರೆ. ಅಂಗಿ- ರವಿಕೆ ಹರಿದುಕೊಂಡಿದ್ದಾರೆ.

ಈ ಘಟನೆ ಬೀದರ್‌ನಿಂದ ಕಲಬುರಗಿಗೆ ತೆರಳುವ ಮಾರ್ಗದ ಬಸ್ಸಿನಲ್ಲಿ ನಡೆದಿದೆ. ತಾನು ಕರ್ಚೀಫ್ ಹಾಕಿಟ್ಟಿದ್ದ ಸೀಟಿನಲ್ಲಿ ಮತ್ತೊಬ್ಬಳು ಬಂದು ಕುಳಿತಿದ್ದರಿಂದ ಸಿಟ್ಟಾದ ಮಹಿಳೆ ಏಳಲು ಹೇಳಿದ್ದಾಳೆ. ಆದರೆ ಕೂತಿದ್ದ ಮಹಿಳೆ ಇದಕ್ಕೆ ಸ್ಪಂದಿಸದೆ ಕಟುವಾಗಿ ಪ್ರತಿಕ್ರಿಯಿಸಿದ್ದು, ಇದರಿಂದ ಮಾತಿಗೆ ಮಾತು ಬೆಳೆದಿದೆ. ಅವಾಚ್ಯ ಬೈಗುಳಗಳು ವಿನಿಮಯ ಆಗಿದ್ದು, ಪರಸ್ಪರರ ಅಂಗಿ ಹಿಡಿದು ಎಳೆದಾಡಿಕೊಂಡಿದ್ದಾರೆ. ನಂತರ ಚಪ್ಪಲಿ ಹಿಡಿದುಕೊಂಡು ಬಡಿದಾಡಿಕೊಂಡಿದ್ದಾರೆ. ಜೊತೆಗಿದ್ದ ಹಲವರು ಇವರ ಜಗಳ ಬಿಡಿಸಲು ಯತ್ನಿಸಿದರೆ, ಇನ್ನು ಹಲವರು ತಾವೂ ಎರಡು ಪಕ್ಷ ವಹಿಸಿ ಕಿತ್ತಾಡಿಕೊಂಡಿದ್ದಾರೆ!

ಈ ಘಟನೆಯನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿಕೊಂಡಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಹಾಕಿದ್ದಾರೆ. ಫನ್ನೀ ಕಾಮೆಂಟ್‌ಗಳು ಇದಕ್ಕೆ ಬಂದಿವೆ. “ಜಡೆಗಳು ಕಿತ್ತುಬರುವುದೊಂದೇ ಬಾಕಿ” ಎಂದು ಒಬ್ಬರು, “ಇದು ಗ್ಯಾರಂಟಿ ಹೊಡೆದಾಟ” ಎಂದು ಇನ್ನು ಕೆಲವರು ವಿನೋದವಾಡಿದ್ದಾರೆ. ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯ ಜಾರಿಯ ಬಳಿಕ ಇಂಥ ಹಲವಾರು ಹೊಡೆದಾಟಗಳು ಸೋಶಿಯಲ್‌ ಮೀಡಿಯಾಗಳಲ್ಲಿ ದಾಖಲಾಗಿವೆ.

ಖಾಸಗಿ ಬಸ್‌ಗಳಿಗೂ ವಿಸ್ತರಣೆ?

ರಾಜ್ಯಾದ್ಯಂತ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ (Free Bus service) ಅವಕಾಶವನ್ನು ಒದಗಿಸಿರುವ ಶಕ್ತಿ ಯೋಜನೆ (Shakthi Scheme) ಖಾಸಗಿ ಬಸ್‌ಗಳಿಗೂ (Private Buses) ವಿಸ್ತರಣೆ ಮಾಡುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ (Karnataka High Court) ಮಹತ್ವದ ಸೂಚನೆ ನೀಡಿದ್ದು, ಎರಡು ತಿಂಗಳೊಳಗೆ ಕಾನೂನು ರೀತ್ಯಾ ಪರಿಶೀಲಿಸಲು ನಿರ್ದೇಶನ ನೀಡಿದೆ.

ರಾಜ್ಯದ ಕೆಲವು ಭಾಗಗಳಲ್ಲಿ ಸರ್ಕಾರಿ ಬಸ್‌ ಸೌಲಭ್ಯ ಇಲ್ಲ. ಹೀಗಾಗಿ ಅಲ್ಲಿನ ಜನರಿಗೂ ಯೋಜನೆಯ ಲಾಭ ದೊರೆಯುವಂತಾಗಲು ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ ಗಳಿಗೂ ವಿಸ್ತರಿಸಬೇಕು ಎಂಬ ಬೇಡಿಕೆ ಕೆಲವು ಕಡೆ ಕೇಳಿಬಂದಿತ್ತು. ಖಾಸಗಿ ಬಸ್‌ ಮಾಲೀಕರೊಬ್ಬರು ಹೈಕೋರ್ಟ್‌ ಮೆಟ್ಟಿಲು ಹತ್ತಿದ್ದಾರೆ.

ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಉಡುಪಿ ಜಿಲ್ಲೆ ಕಾರ್ಕಳದ ಖಾಸಗಿ ಬಸ್ ಆಪರೇಟರ್ ಶರತ್‌ಕುಮಾರ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಎರಡು ತಿಂಗಳೊಳಗೆ ಕಾನೂನು ರೀತ್ಯಾ ಪರಿಶೀಲಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿ ನ್ಯಾಯಾಲಯ ಆದೇಶಿಸಿದೆ. ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದಿಸಿದರು.

ಇದನ್ನೂ ಓದಿ: Electric Bus : ಶಕ್ತಿ ಯೋಜನೆ ಟೀಕಿಸುವ ಬಿಜೆಪಿಗೆ ಹೆಣ್ಮಕ್ಕಳೇ ಉತ್ತರ ಕೊಡಿ ಎಂದ ಸಿದ್ದರಾಮಯ್ಯ

Continue Reading
Advertisement
mlc election congress candidate gift boxes
ಬೆಂಗಳೂರು23 mins ago

MLC Election: ಮತದಾರರಿಗೆ ಬೆಂಗಳೂರು ಕಾಂಗ್ರೆಸ್‌ ಅಭ್ಯರ್ಥಿ ಆಮಿಷ? ಸಾವಿರಾರು ಗಿಫ್ಟ್‌ ಬಾಕ್ಸ್‌ಗಳು ಪತ್ತೆ

Pakistan
ವಿದೇಶ25 mins ago

Pakistan: “ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ, ಆದರೆ ನಾವು..” ಪಾಕ್‌ ಸಂಸದನ ಭಾಷಣ ವೈರಲ್‌

Kangana Ranaut's Emergency gets postponed again
ಬಾಲಿವುಡ್35 mins ago

Kangana Ranaut: ಲೋಕಸಭಾ ಚುನಾವಣೆ: ಕಂಗನಾ ʻಎಮರ್ಜೆನ್ಸಿʼ ಸಿನಿಮಾ ಮತ್ತೆ ಪೋಸ್ಟ್‌ಪೋನ್‌!

T20 World Cup 2024
ಕ್ರೀಡೆ43 mins ago

KMF Nandini Logo: ನಂದಿನಿ ಲೋಗೋ ಇರುವ ಜೆರ್ಸಿ ಅನಾವರಣಗೊಳಿಸಿದ ಸ್ಕಾಟ್ಲೆಂಡ್

Job Alert
ಉದ್ಯೋಗ44 mins ago

Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

IPL 2024 Points Table
ಕ್ರೀಡೆ1 hour ago

IPL 2024 Points Table: ಪಂಜಾಬ್​ಗೆ ಗೆಲುವು; ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ಮುಂಬೈ

Indian Railway
ಮಹಿಳೆ1 hour ago

Indian Railway: ಮಹಿಳಾ ಪ್ರಯಾಣಿಕರಿಗೆ ರೈಲಿನಲ್ಲಿ ಎಷ್ಟೊಂದು ಸುರಕ್ಷತಾ ಕ್ರಮಗಳಿವೆ ನೋಡಿ!

pes students self harming
ಕ್ರೈಂ1 hour ago

Student Self harming: ಪಿಇಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ, ಪೋಷಕರ ಪ್ರತಿಭಟನೆ; ಟಾಪರ್‌ಗಳೇ ಸಾಯ್ತಿರೋದ್ಯಾಕೆ?

Sachin Tendulkar
ದೇಶ1 hour ago

Sachin Tendulkar: ಸಚಿನ್ ತೆಂಡೂಲ್ಕರ್ ಸೆಕ್ಯೂರಿಟಿ ಗಾರ್ಡ್‌ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

777 Charlie Dog Gives Birth To 6 Puppies Rakshit Shetty on live
ಸಿನಿಮಾ1 hour ago

777 Charlie: 6 ಮುದ್ದಾದ ಮರಿಗಳಿಗೆ ಜನ್ಮ ನೀಡಿದ ಚಾರ್ಲಿ: ರಕ್ಷಿತ್‌ ಶೆಟ್ಟಿ ಸರ್‌ಪ್ರೈಸ್‌ ಲೈವ್‌ !

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌