Biodiversity: ದಿನಾ ಇಡ್ಲಿ ತಿಂತೀರಾ? ಹಾಗಾದ್ರೆ ಜೀವವೈವಿಧ್ಯ ಹಾನಿಗೆ ನಿಮ್ಮದೇ ಹೆಚ್ಚಿನ ಕೊಡುಗೆ! - Vistara News

ವೈರಲ್ ನ್ಯೂಸ್

Biodiversity: ದಿನಾ ಇಡ್ಲಿ ತಿಂತೀರಾ? ಹಾಗಾದ್ರೆ ಜೀವವೈವಿಧ್ಯ ಹಾನಿಗೆ ನಿಮ್ಮದೇ ಹೆಚ್ಚಿನ ಕೊಡುಗೆ!

ಭಾರತದ ಪ್ರೀತಿಯ ಇಡ್ಲಿ, ಚನ್ನಾ ಮಸಾಲಾ, ರಾಜ್ಮಾ ಮತ್ತು ಚಿಕನ್ ಜಲ್ಫ್ರೇಜಿ (chicken jalfrezi) ಜೀವವೈವಿಧ್ಯದ (Biodiversity) ಮೇಲಿನ ದುಷ್ಪ್ರಪ್ರಭಾವದ ಪಟ್ಟಿಯಲ್ಲಿ ಟಾಪ್ 25ರಲ್ಲಿ ಇವೆಯಂತೆ.

VISTARANEWS.COM


on

Idli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ನೀವು ಪ್ರತಿದಿನ ಇಡ್ಲಿ (Idli) ಸೇವಿಸುವವರಾಗಿದ್ದರೆ, ಅಥವಾ ರಾಜ್ಮಾ (Rajma) ಸವಿಯುವವರಾಗಿದ್ದರೆ, ನೀವು ಜೀವವೈವಿಧ್ಯತೆಗೆ (biodiversity) ಸ್ವಲ್ಪ ಹೆಚ್ಚಿನ ಹಾನಿಯನ್ನೇ ಉಂಟುಮಾಡುತ್ತಿದ್ದೀರಿ ಅಂತ ಅರ್ಥ ಮಾಡಿಕೊಳ್ಳಬೇಕು. ಇದನ್ನು ಹೇಳಿದ್ದು ನಾವಲ್ಲ, ಕೆಲವು ಜೀವವಿಜ್ಞಾನಿಗಳು.

ಹೌದು, ವಿಜ್ಞಾನಿಗಳು ಪ್ರಪಂಚದಾದ್ಯಂತದ 151 ಜನಪ್ರಿಯ ಭಕ್ಷ್ಯಗಳ ʼಜೀವವೈವಿಧ್ಯತೆಯ ಹೆಜ್ಜೆಗುರುತುʼ (biodiversity footprints) ನಿರ್ಣಯಿಸಿದ್ದಾರೆ. ಈ ಪಟ್ಟಿಯನ್ನು ನೋಡಿದರೆ ನಿಮಗೆ ಆಶ್ಚರ್ಯ ಆಗಬಹುದು. ಭಾರತದ ಪ್ರೀತಿಯ ಇಡ್ಲಿ, ಚನ್ನಾ ಮಸಾಲಾ, ರಾಜ್ಮಾ ಮತ್ತು ಚಿಕನ್ ಜಲ್ಫ್ರೇಜಿ (chicken jalfrezi) ಪರಿಸರದ ಮೇಲಿನ ದುಷ್ಪ್ರಪ್ರಭಾವದ ಪಟ್ಟಿಯಲ್ಲಿ ಟಾಪ್ 25ರಲ್ಲಿ ಇವೆಯಂತೆ.

ಸ್ಪ್ಯಾನಿಷ್ ಹುರಿದ ಭಕ್ಷ್ಯ ʼಲೆಚಾಜೊʼ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದು ಕುರಿ ಮಾಂಸದ ಭಕ್ಷ್ಯ. ಇದರ ನಂತರ ನಾಲ್ಕು ಭಕ್ಷ್ಯಗಳು ಬ್ರೆಜಿಲಿಯನ್ ಮಾಂಸಕೇಂದ್ರಿತ ಅಡುಗೆಗಳು. ಸಂಶೋಧಕರು ಆರನೇ ಸ್ಥಾನದಲ್ಲಿ ಇಡ್ಲಿ ಮತ್ತು ಏಳನೇ ಸ್ಥಾನದಲ್ಲಿ ರಾಜ್ಮಾ ಕರಿಯನ್ನು ಇರಿಸಿದ್ದಾರೆ.

ವೈಜ್ಞಾನಿಕ ಜರ್ನಲ್ PLOS Oneನಲ್ಲಿ ಈ ಅಧ್ಯಯನ ಪ್ರಕಟವಾಗಿದೆ. ಸಿಂಗಾಪುರ (Singapore) ವಿಶ್ವವಿದ್ಯಾನಿಲಯ ಪ್ರೊಫೆಸರ್‌ ಎಲಿಸ್ಸಾ ಚೆಂಗ್ ಮತ್ತು ಸಹೋದ್ಯೋಗಿಗಳು ಇದನ್ನು ಮಾಡಿದ್ದಾರೆ. ಇದು 151 ಭಕ್ಷ್ಯಗಳ ಪ್ರಭಾವವನ್ನು ವಿಶ್ಲೇಷಿಸಿದೆ. ಆಯಾಯ ದೇಶದ ಒಟ್ಟು ಉತ್ಪನ್ನದ ಆಧಾರದ ಮೇಲೆ ಅಗ್ರ 25ರ ಪಟ್ಟಿ ಮಾಡಲಾಗಿದೆ.

ಸಾಮಾನ್ಯವಾಗಿ ಸಸ್ಯಾಹಾರಿ ಅಡುಗೆಗಳು (Vegetarian dish) ಮಾಂಸದ ಅಡುಗೆಗಳಿಗಿಂತ ಕಡಿಮೆ ಜೀವವೈವಿಧ್ಯದ ಹೆಜ್ಜೆಗುರುತುಗಳನ್ನು ಹೊಂದಿವೆ. ಆದರೆ ಅಕ್ಕಿ ಮತ್ತು ದ್ವಿದಳ ಧಾನ್ಯಗಳ ಕೆಲವು ಭಕ್ಷ್ಯಗಳು ಈ ಪಟ್ಟಿಯಲ್ಲಿ ಮೇಲಿರುವುದನ್ನು ಕಂಡು ಸ್ವತಃ ಸಂಶೋಧಕರು ಆಶ್ಚರ್ಯಚಕಿತರಾಗಿದ್ದಾರೆ.

ʼಜೀವವೈವಿಧ್ಯದ ಹೆಜ್ಜೆಗುರುತುʼ ಇದು ಜೀವವೈವಿಧ್ಯದ ಮೇಲೆ ನಮ್ಮ ಚಟುವಟಿಕೆಗಳ ಪ್ರಭಾವವನ್ನು ಅಳೆಯುವ ಮಾನದಂಡ. ಇಂಗಾಲದ ಹೆಜ್ಜೆಗುರುತನ್ನೂ (carbon footprints) ಹೀಗೇ ಅಳೆಯಲಾಗುತ್ತದೆ. ಇದು ಜೀವರಾಶಿಯ ಮೇಲೆ ನಮ್ಮ ಕ್ರಿಯೆಗಳ ವಿಶಾಲವಾದ ಪರಿಸರ ಪರಿಣಾಮಗಳನ್ನು ಪರಿಗಣಿಸುತ್ತದೆ.

ಇಡ್ಲಿ ಹೇಗೆ ಹಾನಿಕರ?

ಕೃಷಿಯಿಂದ ಪರಿಸರದ ಮೇಲಿನ ದುಷ್ಪರಿಣಾಮವು ಇದರ ಹಿನ್ನೆಲೆಯಲ್ಲಿದೆ. ಅಕ್ಕಿ ಮತ್ತು ದ್ವಿದಳ ಧಾನ್ಯಗಳನ್ನು ಬೆಳೆಯಲು ಬಳಸಲಾಗುವ ಭೂಮಿ ಸಾಮಾನ್ಯವಾಗಿ ಐತಿಹಾಸಿಕವಾಗಿ ಜೀವವೈವಿಧ್ಯ ಪ್ರದೇಶಗಳನ್ನುಅತಿಕ್ರಮಿಸಿದೆ. ಇದಕ್ಕಾಗಿ ಮಾಡಲಾದ ಭೂ ಪರಿವರ್ತನೆಗಳು ಹೆಚ್ಚಿನ ಹೆಜ್ಜೆ ಗುರುತನ್ನು ಮೂಡಿಸಿವೆ. ಭಾರತವು ಕಡಲೆ ಮತ್ತು ಕಿಡ್ನಿ ಬೀನ್ಸ್‌ನಂತಹ ದ್ವಿದಳ ಧಾನ್ಯಗಳ ಪ್ರಮುಖ ಉತ್ಪಾದಕ. ಜೈವಿಕ ವೈವಿಧ್ಯತೆಯ ಸಮಾವೇಶದ ಪ್ರಕಾರ, ಪ್ರಪಂಚದ ಒಟ್ಟಾರೆ ದ್ವಿದಳ ಧಾನ್ಯದ ಅಂದಾಜು 7-8%ರಷ್ಟನ್ನು ಬೆಳೆಯುತ್ತದೆ.

ಆಶ್ಚರ್ಯಕರ ಸಂಗತಿ ಎಂದರೆ, ಈ ಅಧ್ಯಯನದಲ್ಲಿ ʼಫ್ರೆಂಚ್ ಫ್ರೈʼ ಕಡಿಮೆ ಜೀವವೈವಿಧ್ಯದ ಹೆಜ್ಜೆಗುರುತನ್ನು ಹೊಂದಿದೆಯಂತೆ! ಇದರ ನಂತರ ಬ್ಯಾಗೆಟ್‌ಗಳು, ಟೊಮೆಟೊ ಸಾಸ್ ಮತ್ತು ಪಾಪ್‌ಕಾರ್ನ್ ಇವೆ. ಭಾರತೀಯ ಸನ್ನಿವೇಶದಲ್ಲಿ ಆಲೂ ಪರೋಟಾ 96ನೇ, ದೋಸೆ 103ನೇ ಮತ್ತು ಬೋಂಡಾಗಳು 109ನೇ ಸ್ಥಾನದಲ್ಲಿವೆ.

ಇದನ್ನೂ ಓದಿ: Trekking Restriction: ಚಾರಣಪ್ರಿಯರಿಗೆ ಶಾಕ್‌; ಆನ್‌ಲೈನ್‌ ಬುಕಿಂಗ್‌ ಇಲ್ಲದ ಜಾಗಗಳಿಗೆ ಪ್ರವೇಶವಿಲ್ಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಕತ್ತಿಯಿಂದ ಐವರ ಮೇಲೆ ಡೆಡ್ಲಿ ಅಟ್ಯಾಕ್‌; ದಾಳಿಕೋರನ ಅರೆಸ್ಟ್‌ ವಿಡಿಯೋ ಫುಲ್‌ ವೈರಲ್‌

Viral Video: ತಲ್ರೋ ಗಾರ್ಡನ್‌ ಬಳಿ ವಾಹನವೊಂದು ಏಕಾಏಕಿ ಕಟ್ಟಡಕ್ಕೆ ಗುದ್ದಿತ್ತು. ಅದರಲ್ಲಿದ್ದ ದುಷ್ಕರ್ಮಿ ಕೆಳಗಿಳಿದು ಕೈಯಲ್ಲಿ ಕತ್ತಿ ಹಿಡಿದುಕೊಂದು ಓಡಾಡುತ್ತಿದ್ದ. ಬಳಿಕ ಇದ್ದಕ್ಕಿದ್ದಂತೆ ಸಿಕ್ಕ ಸಿಕ್ಕವರ ಮೇಲೆ ಕತ್ತಿಯಿಂದ ದಾಳಿ ನಡೆಸಲು ಆರಂಭಿಸಿದ್ದ. ಎದುರಿಗೆ ಸಿಕ್ಕಿದ್ದ 14 ವರ್ಷದ ಬಾಲಕ ಸೇರಿದಂತೆ ಒಟ್ಟು ಐವರ ಮೇಲೆ ಕತ್ತಿಯಿಂದ ಚುಚ್ಚಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲೇ ಅಸುನೀಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು

VISTARANEWS.COM


on

Viral video
Koo

ಲಂಡನ್‌: ಹಾಡಹಗಲೇ ದುಷ್ಕರ್ಮಿಯೋರ್ವ ಕತ್ತಿಯಿಂದ ದಾಳಿ(Stabbed) ನಡೆಸಿದ್ದು, ಘಟನೆಯಲ್ಲಿ 14 ವರ್ಷದ ಬಾಲಕ ದಾರುಣವಾಗಿ ಮೃತಪಟ್ಟಿದ್ದಾನೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಂಡನ್‌(London)ನ ಹೈನಾಲ್ಟ್‌ನಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ. ತಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆತನನ್ನು ಹೆಡೆಮುರಿ ಕಟ್ಟಿದ್ದಾರೆ. 36 ವರ್ಷದ ಆರೋಪಿ ಏಕಾಏಕಿ ಚಾಕು ದಾಳಿ ನಡೆಸಿ ಎಸ್ಕೇಪ್‌ ಆಗೋಕೆ ಯತ್ನಿಸುತ್ತಿರುವಾಗಲೇ ಆತನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

22 ಸೆಕೆಂಡ್ಸ್‌ ವಿಡಿಯೋದಲ್ಲಿ ಕೃತ್ಯದ ಬಳಿಕ ಓಡಿ ಹೋಗಲು ಯತ್ನಿಸುತ್ತಿದ್ದ ಹಳದಿ ಬಣ್ಣದ ಜ್ಯಾಕೆಟ್‌ ತೊಟ್ಟಿದ್ದ ದುಷ್ಕರ್ಮಿ ಬಳಿ ಮಹಿಳಾ ಪೊಲೀಸ್‌ ಸಿಬ್ಬಂದಿ ಪಿಸ್ತೂಲ್‌ ಹಿಡಿದು ಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಕೆಲವು ನಿಮಿಷಗಳ ಬಳಿ ಆರು ಜನ ಪೊಲೀಸರು ಆತನನ್ನು ಹಿಡಿಯುವಲ್ಲಿ ಯಶಸ್ವಿ ಆಗಿದ್ದಾರೆ. ಕೃತ್ಯಕ್ಕೂ ಮುನ್ನ ಆತನ ವಾಹನ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆದು, ಆತನಿಗೆ ಸ್ವಲ್ಪ ಮಟ್ಟ ಗಾಯಗಳಾಗಿವೆ. ಹೀಗಾಗಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ವಿವರ:

ತಲ್ರೋ ಗಾರ್ಡನ್‌ ಬಳಿ ವಾಹನವೊಂದು ಏಕಾಏಕಿ ಕಟ್ಟಡಕ್ಕೆ ಗುದ್ದಿತ್ತು. ಅದರಲ್ಲಿದ್ದ ದುಷ್ಕರ್ಮಿ ಕೆಳಗಿಳಿದು ಕೈಯಲ್ಲಿ ಕತ್ತಿ ಹಿಡಿದುಕೊಂದು ಓಡಾಡುತ್ತಿದ್ದ. ಬಳಿಕ ಇದ್ದಕ್ಕಿದ್ದಂತೆ ಸಿಕ್ಕ ಸಿಕ್ಕವರ ಮೇಲೆ ಕತ್ತಿಯಿಂದ ದಾಳಿ ನಡೆಸಲು ಆರಂಭಿಸಿದ್ದ. ಎದುರಿಗೆ ಸಿಕ್ಕಿದ್ದ 14 ವರ್ಷದ ಬಾಲಕ ಸೇರಿದಂತೆ ಒಟ್ಟು ಐವರ ಮೇಲೆ ಕತ್ತಿಯಿಂದ ಚುಚ್ಚಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲೇ ಅಸುನೀಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ದೃಶ್ಯ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಆರೋಪಿ ಯಾವುದಾದರೂ ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದಾನೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸಿದ್ದು, ಆ ಅನುಮಾನ ಸುಳ್ಳಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Godrej Group: ಶತಮಾನದ ಇತಿಹಾಸ ಹೊಂದಿರುವ ಗೋದ್ರೇಜ್‌ ಗ್ರೂಪ್‌ ಇಬ್ಬಾಗ; ಎರಡು ಕುಟುಂಬಗಳಲ್ಲಿ ಆಡಳಿತ ವಿಭಜನೆ

ಕಿಂಗ್‌ ಚಾರ್ಲ್ಸ್‌, ರಿಷಿ ಸುನಕ್‌ ಖಂಡನೆ

ಇನ್ನು ಘಟನೆಗೆ ಬ್ರಿಟನ್‌ ರಾಜ ಚಾರ್ಲ್ಸ್‌, ಪ್ರಧಾನಿ ರಿಷಿ ಸುನಕ್‌ ಖಂಡನೆ ವ್ಯಕ್ತಪಡಿಸಿದ್ದಾರೆ. ದುರ್ಘಟನೆಯಲ್ಲಿ ಮೃತಪಟ್ಟ ಬಾಲಕ ಕುಟುಂಬಕ್ಕೆ ಸಾಂತ್ವನ ಹೇಳಿರುವ ಚಾರ್ಲ್ಸ್‌, ಮೃತ ಬಾಲಕನ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಈ ಸಂದರ್ಭದಲ್ಲಿ ದಿಟ್ಟತನ ತೋರಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರನ್ನು ಶ್ಲಾಘಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನು ಇದೊಂದು ಆಘಾತಕಾರಿ ಘಟನೆ ಎಂದು ಕರೆದಿರುವ ರಿಷಿ ಸುನಕ್‌, ಇಂಥಹ ಘಟನೆಗಳು ದೇಶದಲ್ಲಿ ನಡೆಯಬಾರದು. ಮೃತ ಹಾಗೂ ಗಾಯಾಳುಗಳ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಪೊಲೀಸರನ್ನೂ ನಾನು ಪ್ರಶಂಸಿಸುತ್ತೇನೆ ಎಂದರು.

Continue Reading

ವೈರಲ್ ನ್ಯೂಸ್

Viral News: ಸೆಕೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಕಾಪಾಡಲು ಶಿಕ್ಷಕರ ಸೂಪರ್‌ ಐಡಿಯಾ; ಇಲ್ಲಿದೆ ವಿಡಿಯೊ

Viral News: ಸದ್ಯ ದೇಶಾದ್ಯಂತ ಉಷ್ಣಾಂಶ ವಿಪರೀತ ಮಟ್ಟಕ್ಕೆ ಏರಿಕೆಯಾಗಿದ್ದು, ಮನುಷ್ಯರು ಸೇರಿದಂತೆ ಸಕಲ ಜೀವ ರಾಶಿಯನ್ನು ಬಾಧಿಸಿದೆ. ಈ ಮಧ್ಯೆ ಉತ್ತರ ಪ್ರದೇಶದ ಕನೌಜ್‌ನ ಶಾಲೆಗೆ ಮಕ್ಕಳು ಬರಲು ಹಿಂದೇಟು ಹಾಕುತ್ತಿದ್ದರು. ಇದಕ್ಕೆ ಶಾಲೆಯ ಶಿಕ್ಷಕರು ಪರಿಹಾರ ಕಂಡುಕೊಂಡಿದ್ದಾರೆ. ಈ ಕ್ರಮದಿಂದಾಗಿ ಇದೀಗ ಶಾಲೆಯ ಹಾಜರಾತಿ ಹೆಚ್ಚಿದೆ. ಹಾಗಾದರೆ ಶಿಕ್ಷಕರು ಕಂಡುಕೊಂಡ ಉಪಾಯವೇನು ಎನ್ನುವ ವಿವರ ಇಲ್ಲಿದೆ.

VISTARANEWS.COM


on

Viral Video
Koo

ಲಕ್ನೋ: ʼʼಉಫ್‌! ಏನು ಸೆಕೆʼʼ ಸದ್ಯ ಎಲ್ಲೆಂದರಲ್ಲಿ ಈ ಮಾತು ಕಿವಿಗೆ ಬೀಳುತ್ತಿದೆ. ದೇಶಾದ್ಯಂತ ತಾಪಮಾನ ತೀವ್ರವಾಗಿ ಏರಿಕೆ ಕಂಡಿದೆ. ಈ ಎಲ್‌ ನಿನೊ ಪರಿಣಾಮದಿಂದ ದೇಶಾದ್ಯಂತ ಜನರು ಪರಿತಪಿಸುತ್ತಿದ್ದಾರೆ. ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿ ಮುಂದೆ ಸಾಗುತ್ತಿದೆ. ಜತೆಗೆ ಉಷ್ಣ ಅಲೆ (Heatwave)ಯು ಜನ-ಜೀವನವನ್ನು ಬಾಧಿಸಿದೆ. ಮನುಷ್ಯರು ಸೇರಿದಂತೆ ಸಕಲ ಜೀವ ರಾಶಿಯನ್ನು ಈ ಬೇಸಿಗೆ ಹೈರಾಣಾಗಿಸಿದೆ. ಮನೆಯಿಂದ ಹೊರಗೆ ಓಡಾಡದಂತಹ ಸ್ಥಿತಿ ನಿರ್ಮಾಣವಾಗಿದೆ. ಕೆಲವೆಡೆ ಮಧ್ಯಾಹ್ನ ಅಘೋಷಿತ ಬಂದ್‌ ಎನಿಸುವಂತೆ ರಸ್ತೆಗಳೆಲ್ಲ ಖಾಲಿ ಹೊಡೆಯುತ್ತವೆ. ಈ ಮಧ್ಯೆ ವಿದ್ಯಾರ್ಥಿಗಳನ್ನು ಉರಿ ಸೆಕೆಯಿಂದ ಪಾರು ಮಾಡಲು ಶಾಲೆಯೊಂದು ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಉತ್ತರ ಪ್ರದೇಶದ ಶಾಲೆಯ ಈ ವಿಡಿಯೊ ಸದ್ಯ ಸೋಷಿಯಲ್‌ ಮಿಡಿಯಾದಲ್ಲಿ ವೈರಲ್‌ ಆಗಿದೆ (Viral News).

ಶಿಕ್ಷಕರ ಐಡಿಯಾ ನೋಡಿ

ಉತ್ತರ ಪ್ರದೇಶದ ಕನೌಜ್‌ನ ಶಾಲೆಯ ತರಗತಿಯೊಂದನ್ನು ಈಜುಕೊಳವನ್ನಾಗಿ ಪರಿವರ್ತಿಸಿ ತೀವ್ರ ಶಾಖದಿಂದ ಮಕ್ಕಳನ್ನು ಪಾರು ಮಾಡಲಾಗಿದೆ. ಸುಮಾರು ಎರಡು ಅಡಿ ನೀರು ತುಂಬಿದ ಕ್ಲಾಸ್‌ ರೂಮ್‌ನಲ್ಲಿ ವಿದ್ಯಾರ್ಥಿಗಳು ಖುಷಿಯಿಂದ ಈಜಾಡುತ್ತಿರುವ, ಆಡುತ್ತಿರುವ ದೃಶ್ಯ ಇದೀಗ ನೆಟ್ಟಿಗರ ಗಮನ ಸೆಳೆದಿದೆ.

ಕಾರಣ ಏನು?

ದೇಶದ ಇತರ ಭಾಗಗಳಂತೆ ಉತ್ತರ ಪ್ರದೇಶದಲ್ಲಿಯೂ ವಿಪರೀತ ಉಷ್ಣತೆ ದಾಖಲಾಗುತ್ತಿದೆ. ಹೀಗಾಗಿ ಮಕ್ಕಳು ಶಾಲೆಗಳಿಗೆ ಬರಲೂ ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಶಾಲೆಯಲ್ಲಿ ಕಡಿಮೆ ಹಾಜರಾತಿ ಕಂಡು ಬಂದಿತ್ತು. ಇದನ್ನು ಗಮನಿಸಿದ ಕನ್ನೌಜ್ ಜಿಲ್ಲೆಯ ಮಹಾಸೌನಾಪುರ್‌ನ ಪ್ರಾಥಮಿಕ ಶಾಲೆಯ ಶಿಕ್ಷಕರು ಈ ಸಮಸ್ಯೆಯ ಪರಿಹಾರಕ್ಕೆ ಕಂಡುಕೊಂಡ ಮಾರ್ಗವೇ ಈ ಈಜುಕೊಳದ ಉಪಾಯ. ಸದ್ಯ ವಿದ್ಯಾರ್ಥಿಗಳು ಖುಷಿಯಿಂದಲೇ ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದಾರೆ.

ಪ್ರಾಂಶುಪಾಲರು ಹೇಳೋದೇನು?

ʼʼಕೆಲವು ದಿನಗಳಿಂದ ವಾತಾವರಣದ ಉಷ್ಣಾಂಶ 38ರಿಂದ 40 ಡಿಗ್ರಿ ಸೆಲ್ಶಿಯಸ್‌ಗೆ ತಲುಪುತ್ತಿದೆ. ಹೀಗಾಗಿ ನಿರಂತರವಾಗಿ ಮಕ್ಕಳು ಶಾಲೆಗೆ ಗೈರಾಗುತ್ತಿದ್ದರು. ಇದನ್ನು ತಪ್ಪಿಸಲು ಈ ಉಪಾಯ ಕೈಗೊಂಡಿದ್ದೇವೆʼʼ ಎಂದು ಶಾಲೆಯ ಪ್ರಾಂಶುಪಾಲ ವೈಭವ್‌ ರಾಜಪೂತ್‌ ತಿಳಿಸಿದ್ದಾರೆ. ಇದೀಗ ಕ್ಲಾಸ್‌ ರೂಮಿಗೆ ನೀರನ್ನು ತುಂಬಿಸಿರುವುದರಿಂದ ಮಕ್ಕಳು ಶಾಲೆಗೆ ಉತ್ಸಾಹದಿಂದ ಬರುತ್ತಿದ್ದಾರೆ. ಇದೀಗ ಮಕ್ಕಳು ನೀರಿನಲ್ಲಿ ಆಟವಾಡುತ್ತಾ ಕಲಿಯುತ್ತಿದ್ದಾರೆʼʼ ಎಂದು ಅವರು ವಿವರಿಸಿದ್ದಾರೆ. ಅವರ ಈ ಐಡಿಯಾಕ್ಕೆ ಗ್ರಾಮಸ್ಥರು ಭೇಷ್‌ ಎಂದಿದ್ದಾರೆ. ನೆಟ್ಟಿಗರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video: ಆರಾಮಾಗಿ ಆಟವಾಡ್ತಿದ್ದ ಬಾಲಕಿ ಮೇಲೆ ಜರ್ಮನ್‌ ಶೆಫರ್ಡ್‌ ಡೆಡ್ಲಿ ಅಟ್ಯಾಕ್‌!

ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ

ಈ ಮಧ್ಯೆ ಹವಾಮಾನ ಇಲಾಖೆ ಹೆಚ್ಚುತ್ತಿರುವ ತಾಪಮಾನದ ಬಗ್ಗೆ ಎಚ್ಚರಿಕೆ ನೀಡಿದೆ. ಸೋಮವಾರ ದೇಶದ ಕೆಲವೆಡೆ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿತ್ತು. ಮುಂದಿನ ಐದು ದಿನಗಳಲ್ಲಿ ಇದೇ ರೀತಿಯ ಬಿಸಿಯ ವಾತಾವರಣ ಮುಂದುವರಿಯಲಿದೆ ಎಂದು ಎಚ್ಚರಿಸಿದೆ. ಆಂಧ್ರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾ ಮುಂತಾದೆಡೆಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ತೆಲಂಗಾಣ, ಕರ್ನಾಟಕ, ಕೇರಳ ಮತ್ತು ಸಿಕ್ಕಿಂಗೆ ಆರಂಜ್‌ ಅಲರ್ಟ್‌ ಸೂಚಿಸಲಾಗಿದೆ.

Continue Reading

ವೈರಲ್ ನ್ಯೂಸ್

Divorce Celebration: ಗಂಡನ ಬಿಟ್ಟು ಬಂದ ಮಗಳನ್ನು ಅದ್ಧೂರಿ ಮೆರವಣಿಗೆಯಲ್ಲಿ ಕರೆ ತಂದ ಅಪ್ಪ!

Divorce Celebration: ಕಾನ್ಪುರದ ನಿವೃತ್ತ ಸರ್ಕಾರಿ ಅಧಿಕಾರಿಯೊಬ್ಬರು ತಮ್ಮ ಮಗಳ ವಿಚ್ಚೇದನವನ್ನು ಬ್ಯಾಂಡ್ ಬಾಜಾದೊಂದಿಗೆ ಆಚರಿಸಿ ಸಂಭ್ರಮಿಸಿದ್ದಾರೆ.
ವಿಚ್ಛೇದನದ ಬಳಿಕ ಮಗಳಿಗೆ ಯಾವುದೇ ಕಳಂಕ ಬಾರದೇ ಇರಲಿ ಎಂದು ತಂದೆಯೊಬ್ಬರು ವಿಭಿನ್ನ ಹೆಜ್ಜೆಯನ್ನು ಇಟ್ಟಿದ್ದಾರೆ.

VISTARANEWS.COM


on

By

Divorce Celebration
Koo

ಕಾನ್ಪುರ: ಮಗಳ ಮದುವೆ (daughter wedding) ಮಾಡಿ ಗಂಡನ ಮನೆಗೆ ಕಳುಹಿಸುವಾಗ ಬ್ಯಾಂಡ್ ಬಾಜಾದೊಂದಿಗೆ (band baja) ಕಳುಹಿಸುವುದು ಸಂಪ್ರದಾಯ. ಆದರೆ ಇಲ್ಲೊಬ್ಬರು ಮಗಳ ವಿಚ್ಛೇದನದ ಬಳಿಕ ಬ್ಯಾಂಡ್ ಬಾಜಾದೊಂದಿಗೆ (Divorce Celebration) ಮಗಳನ್ನು ಮರಳಿ ಮನೆಗೆ ಕರೆ ತಂದು ಸಂಭ್ರಮಿಸಿದ್ದಾರೆ. ಈ ಘಟನೆ ಕಾನ್ಪುರದಲ್ಲಿ (Kanpur) ಭಾರಿ ಸದ್ದು ಮಾಡಿದೆ.

ಕಾನ್ಪುರದ ನಿವೃತ್ತ ಸರ್ಕಾರಿ ಅಧಿಕಾರಿಯೊಬ್ಬರು ತಮ್ಮ ಮಗಳ ವಿಚ್ಚೇದನವನ್ನು ಬ್ಯಾಂಡ್ ಬಾಜಾದೊಂದಿಗೆ ಆಚರಿಸಿ ಸಂಭ್ರಮಿಸಿದ್ದಾರೆ. ವಿಚ್ಛೇದನದ ಬಳಿಕ ಮಗಳು ಸಾಕಷ್ಟು ನೋವು ಅನುಭವಿಸಬೇಕಾಗುತ್ತದೆ. ಸಮಾಜದ ಚುಚ್ಚು ಮಾತುಗಳನ್ನು ಕೇಳಬೇಕಾಗುತ್ತದೆ. ಮಗಳಿಗೆ ಯಾವುದೇ ಸಾಮಾಜಿಕ ಕಳಂಕ ಬಾರದೇ ಇರಲಿ ಎಂದು ತಂದೆಯೊಬ್ಬರು ಸ್ಫೂರ್ತಿದಾಯಕ ಹೆಜ್ಜೆಯನ್ನು ಇಟ್ಟಿದ್ದಾರೆ.

ಇದನ್ನೂ ಓದಿ: Divorce Case : ಶುಭ ಸುದ್ದಿ! ಕಾರಣ ಸರಿಯಾಗಿದ್ದರೆ ಕೂಲಿಂಗ್‌ ಪೀರಿಯೆಡ್‌ ಇಲ್ಲದೆಯೇ ತಕ್ಷಣ ಡೈವೋರ್ಸ್ ಸಿಗುತ್ತೆ!

ಮಗಳು ಮದುವೆಯಾಗಿ ಹೊಸ ಜೀವನ ಪ್ರಾರಂಭಿಸುವಾಗ ಬ್ಯಾಂಡ್ ಬಾಜಾದೊಂದಿಗೆ ಗಂಡನ ಮನೆಗೆ ಕಳುಹಿಸಿಕೊಡುತ್ತೇವೆ. ಅದೇ ರೀತಿ ವಿಚ್ಛೇದನದ ಬಳಿಕ ಆಕೆ ಹೊಸ ಜೀವನವನ್ನು ಆರಂಭಿಸುವ ಸಮಯ. ನಾವು ಅವಳನ್ನು ಕೆಲವು ವರ್ಷಗಳ ಹಿಂದೆ ಕಳುಹಿಸಿದ್ದೇವೆ. ಈಗ ಮರಳಿ ಕರೆ ತಂದಿದ್ದೇವೆ. ಅವಳು ಹೊಸದಾಗಿ ಜೀವನ ಪ್ರಾರಂಭಿಸುವ ಸಮಯ ಬಂದಿದೆ ಎಂದು ಬಿಎಸ್ ಎನ್ ಎಲ್ ನ ನಿವೃತ್ತ ಅಧಿಕಾರಿ ಅನಿಲ್ ಕುಮಾರ್ ಹೇಳಿದರು.


ನವದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಎಂಜಿನಿಯರ್ ಆಗಿರುವ ಅನಿಲ್ ಅವರ ಪುತ್ರಿ ಉರ್ವಿ (36) ಅವರಿಗೆ 2016ರಲ್ಲಿ ಕಂಪ್ಯೂಟರ್ ಎಂಜಿನಿಯರ್ ಒಬ್ಬನೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಉರ್ವಿ ದಂಪತಿ ದೆಹಲಿಯಲ್ಲಿ ವಾಸಿಸುತ್ತಿದ್ದರು. ಅವರಿಗೆ ಒಬ್ಬ ಮಗಳು ಇದ್ದಾಳೆ. ಆದರೆ ಉರ್ವಿಯ ಅತ್ತೆಯಂದಿರು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಫೆ. 28ರಂದು ಅವರು ವಿವಾಹ ವಿಚ್ಛೇದನ ಪಡೆದಿದ್ದಾರೆ. ಎಂಟು ವರ್ಷಗಳ ಚಿತ್ರಹಿಂಸೆ, ಹೊಡೆತ ಮತ್ತು ನಿಂದೆಗಳನ್ನು ಸಹಿಸಿಕೊಂಡಿದ್ದೇನೆ. ಆದರೆ ಕೊನೆಗೆ ಮದುವೆ ಮುರಿಯುವ ನಿರ್ಧಾರ ಮಾಡಿದೆ ಎಂದು ಉರ್ವಿ ಹೇಳಿದರು.

ವಿಚ್ಛೇದನಕ್ಕೂ ಸಂಭ್ರಮ

ಮದುವೆ ಎನ್ನುವುದು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ ಎನ್ನುವ ನಂಬಿಕೆ ಇತ್ತು. ಆದರೆ ಈಗ ವಿಚ್ಛೇದನಗಳು ಹೆಚ್ಚಾಗುತ್ತಿದೆ. ಸಣ್ಣಪುಟ್ಟ ಜಗಳಗಳು ಕೋರ್ಟ್ ಮೆಟ್ಟಿಲೇರಿ ವಿಚ್ಛೇದನ ಪಡೆಯುತ್ತಿದ್ದಾರೆ.

ವಿಚ್ಛೇದನ ಎನ್ನುವುದು ಕೇವಲ ಒಂದು ಹೆಣ್ಣನ್ನು ಮಾತ್ರವಲ್ಲ ಆಕೆಯ ಸಂಪೂರ್ಣ ಕುಟುಂಬವನ್ನೇ ಜರ್ಜರಿತರನ್ನಾಗಿ ಮಾಡುತ್ತದೆ. ತಮ್ಮ ನೋವು ತಮಗೆ ಆದರೂ ಸಮಾಜದ ಚುಚ್ಚು ಮಾತುಗಳು ಅವರನ್ನು ಮತ್ತಷ್ಟು ಕುಗ್ಗುವಂತೆ ಮಾಡುತ್ತದೆ. ವಿಚ್ಛೇದನ ಎನ್ನುವುದು ಹೆಣ್ಣಿಗೆ ಶಾಪವಲ್ಲ ಎಂಬುದನ್ನು ತೋರ್ಪಡಿಸಲು ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಸಂಭ್ರಮಿಸುವವರು ಹೆಚ್ಚಾಗಿದ್ದಾರೆ. ವಿದೇಶದಲ್ಲಿದ್ದ ಈ ಸಂಸ್ಕೃತಿ ಈಗ ನಮ್ಮಲ್ಲೂ ಬೇರೂರುತ್ತಿದೆ.

ದೊಡ್ಡದೊಡ್ಡ ಸೆಲೆಬ್ರಿಟಿಗಳು ತಮ್ಮ ವಿಚ್ಛೇದನವನ್ನು ಸಂಭ್ರಮಿಸುತ್ತಾರೆ. ಇತ್ತೀಚಿಗೆ ಫ್ಯಾಶನ್ ಡಿಸೈನರ್ ಶಾಲಿನಿ ಕೆಂಪು ಬಣ್ಣದ ಬಟ್ಟೆ ಧರಿಸಿ ಫೋಟೋಶೂಟ್ ಮಾಡಿಕೊಂಡು ವಿಚ್ಛೇದನವನ್ನು ಸಂಭ್ರಮಿಸಿದ್ದರು.

ಇಂತಹ ಸಂಸ್ಕೃತಿಯನ್ನು ಇದೀಗ ಪೋಷಕರೇ ಮುಂದೆ ನಿಂತು ಆಚರಿಸುತ್ತಿರುವುದು ನೊಂದ ಹೆಣ್ಣಿಗೆ ಶಕ್ತಿ ತುಂಬಿದಂತಾಗುವುದು.

Continue Reading

ವಿದೇಶ

Jai Shri Ram Slogan: ಪ್ಯಾಲೆಸ್ತೇನ್ ವಿರುದ್ಧ ಜೈಶ್ರೀರಾಮ್ ಘೋಷಣೆ ಕೂಗಿದ ಇಸ್ರೇಲ್ ಬೆಂಬಲಿಗರು!

Jai Shri Ram Slogan: ಅಮೆರಿಕದ ವಿವಿಧ ಕ್ಯಾಂಪಸ್‌ಗಳಲ್ಲಿ ನಡೆಯುತ್ತಿರುವ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಗಳು ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿವೆ. ಈ ಮಧ್ಯೆ ಇದಕ್ಕೆ ವಿರುದ್ಧವಾಗಿ ಲಾಸ್ ಏಂಜಲೀಸ್‌ನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಇಸ್ರೇಲ್ ಬೆಂಬಲಿಗರು ಮೆರವಣಿಗೆ ನಡೆಸಿದ್ದಾರೆ. ಈ ಮೆರವಣಿಗೆಯಲ್ಲಿ ಇಸ್ರೇಲ್ ಬೆಂಬಲಿಗರು ಜೈ ಶ್ರೀ ರಾಮ್ ಎಂಬ ಘೋಷಣೆ ಕೂಗಿದ್ದಾರೆ. ಭಗವಾನ್ ರಾಮನಿಗೆ ಸಂಬಂಧಿಸಿದ ಈ ಘೋಷಣೆಯನ್ನು ಭಾರತ-ವಿರೋಧಿಗಳಿಗೆ ಪ್ರತಿಕ್ರಿಯೆಯಾಗಿ ಅಮೆರಿದಲ್ಲಿ ಬಳಸಲ್ಪಟ್ಟಿದ್ದು ವಿಶೇಷ.

VISTARANEWS.COM


on

Jai Shri Ram Slogan
Koo

ವಾಷಿಂಗ್ಟನ್‌: ಅಮೆರಿಕದ ವಿವಿಧ ಕ್ಯಾಂಪಸ್‌ಗಳಲ್ಲಿ ನಡೆಯುತ್ತಿರುವ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಗಳು ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿವೆ. ಈ ಮಧ್ಯೆ ಇದಕ್ಕೆ ವಿರುದ್ಧವಾಗಿ ಲಾಸ್ ಏಂಜಲೀಸ್‌ನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ (UCLA) ಇಸ್ರೇಲ್ ಬೆಂಬಲಿಗರು ಮೆರವಣಿಗೆ ನಡೆಸಿದ್ದಾರೆ. ಈ ಮೆರವಣಿಗೆಯಲ್ಲಿ ಇಸ್ರೇಲ್ ಬೆಂಬಲಿಗರು ಜೈ ಶ್ರೀ ರಾಮ್ ಎಂಬ ಘೋಷಣೆ (Jai Shri Ram Slogan) ಕೂಗಿದ್ದಾರೆ.

ವಾರಾಂತ್ಯದಲ್ಲಿ ಯುಸಿಎಲ್ಎಯಲ್ಲಿ ಪ್ಯಾಲೆಸ್ತೀನ್‌ ಪರ ಮತ್ತು ಇಸ್ರೇಲ್ ಪರ ಪ್ರತಿಭಟನಾಕಾರರ ನಡುವಿನ ಘರ್ಷಣೆಗಳು ತೀವ್ರಗೊಂಡಿದ್ದವು. ಬ್ಲೂಮಿಂಗ್ಟನ್‌ನ ಇಂಡಿಯಾನಾ ವಿಶ್ವವಿದ್ಯಾಲಯ, ಅರಿಜೋನಾ ಸ್ಟೇಟ್ ಯೂನಿವರ್ಸಿಟಿ ಮತ್ತು ಸೇಂಟ್ ಲೂಯಿಸ್‌ನ ವಾಷಿಂಗ್ಟನ್ ವಿಶ್ವವಿದ್ಯಾಲಯದಂತಹ ಇತರ ಕ್ಯಾಂಪಸ್‌ಗಳಲ್ಲಿಯೂ ಇದೇ ರೀತಿಯ ದೃಶ್ಯಗಳನ್ನು ಕಂಡು ಬಂದಿವೆ. ಇನ್ನು ಯುಸಿಎಲ್ಎಯಲ್ಲಿ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿತ್ತು.

ಈ ಗೊಂದಲದ ಮಧ್ಯೆ ಅಮೆರಿಕದ ರಾಷ್ಟ್ರೀಯವಾದಿಯೊಬ್ಬರು “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗುವ ಮೂಲಕ ಗಮನ ಸೆಳೆದಿದ್ದಾರೆ. ಸಾಮಾನ್ಯವಾಗಿ ಈ ಘೋಷಣೆಯನ್ನು ಭಾರತದಲ್ಲಿ ಹಿಂದುಗಳಿಗೆ ಸಂಬಂಧಿಸಿದ ಧಾರ್ಮಿಕ ಮೆರವಣಿಗೆ ಸಂದರ್ಭದಲ್ಲಿ ಕೂಗಲಾಗುತ್ತದೆ. ಭಗವಾನ್ ರಾಮನಿಗೆ ಸಂಬಂಧಿಸಿದ ಈ ಘೋಷಣೆಯನ್ನು ಭಾರತ-ವಿರೋಧಿಗಳಿಗೆ ಪ್ರತಿಕ್ರಿಯೆಯಾಗಿ ಅಮೆರಿದಲ್ಲಿ ಬಳಸಲ್ಪಟ್ಟಿದ್ದು ವಿಶೇಷ.

ಯುಸಿಎಲ್ಎಯ ಕಾರ್ಯತಂತ್ರದ ಸಂವಹನಗಳ ಉಪಕುಲಪತಿ ಮೇರಿ ಒಸಾಕೊ ಈ ಬಗ್ಗೆ ಮಾತನಾಡಿ, ʼʼಎರಡೂ ಕಡೆಯ ಪ್ರತಿಭಟನಾಕಾರರು ವಾಗ್ವಾದಗಳಲ್ಲಿ ತೊಡಗಿದ್ದರು. ಜತೆಗೆ ಘರ್ಷಣೆಯೂ ನಡೆಯಿತು. ಎರಡೂ ಕಡೆಯವರ ಘೋಷಣೆಗಳು ಮುಗಿಲು ಮುಟ್ಟಿದ್ದವುʼʼ ಎಂದು ವಿವರಿಸಿದ್ದಾರೆ. “ಯುಸಿಎಲ್ಎಯಲ್ಲಿ ಇದುವರೆಗೆ ಅನೇಕ ಶಾಂತಿಯುತ ಪ್ರತಿಭಟನೆ ನಡೆದಿದ್ದವು. ಆದರೆ ಇದೀಗ ಇಲ್ಲಿ ಭುಗಿಲೆದ್ದ ಹಿಂಸಾಚಾರ ತೀವ್ರ ನೋವುಂಟು ಮಾಡಿದೆʼʼ ಎಂದು ಹೇಳಿದ್ದಾರೆ.

ತೀವ್ರಗೊಂಡ ಪ್ರತಿಭಟನೆ

ಕಳೆದ ವಾರ ಅಮೆರಿಕದ ಕ್ಯಾಂಪಸ್‌ಗಳಲ್ಲಿ ವ್ಯಾಪಕವಾಗಿ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಗಳು ನಡೆದವು. ಈ ಸಂಬಂಧ ಅನೇಕರನ್ನು ಬಂಧಿಸಲಾಗಿದೆ. ನ್ಯೂಯಾರ್ಕ್‌ನ ಕೊಲಂಬಿಯಾ ವಿಶ್ವವಿದ್ಯಾಲಯವೊಂದರಿಂದಲೇ 100ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಯೇಲ್ ವಿಶ್ವವಿದ್ಯಾಲದಿಂದಲೂ ಅನೇಕರನ್ನು ವಶಕ್ಕೆ ಪಡೆಯಲಾಗಿದೆ. ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದಲೂ ಪ್ರತಿಭಟನಾಕಾರರನ್ನು ಸೆರೆ ಹಿಡಿಯಲಾಗಿದೆ. ಆಸ್ಟಿನ್‌ನಲ್ಲಿರುವ ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿನ ಪ್ರತಿಭನಾಕಾರರನ್ನು ಬಲವಂತವಾಗಿ ಚದುರಿಸಲು ಪೊಲೀಸರು ಮಧ್ಯ ಪ್ರವೇಶಿಸಬೇಕಾಯಿತು.

ಪ್ಯಾಲೆಸ್ತೀನ್‌ ವಿರುದ್ಧ ನಡೆಸುತ್ತಿರುವ ಯುದ್ಧವನ್ನು ಇಸ್ರೇಲ್ ನಿಲ್ಲಿಸಬೇಕು. ಇಸ್ರೇಲ್‌ಗೆ ಅಮೆರಿಕದ ಮಿಲಿಟರಿ ಸಹಾಯವನ್ನು ಕೊನೆಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಈ ರೀತಿಯ ಪ್ರತಿಭಟನೆಗಳು ಶಿಕ್ಷಣಕ್ಕೆ ಅಡ್ಡಿಪಡಿಸುತ್ತವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೆಚ್ಚುತ್ತಿರುವ ಪ್ರತಿಭಟನೆಗಳ ಮಧ್ಯೆ ಅಧ್ಯಕ್ಷ ಜೋ ಬೈಡನ್ ಈ ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Prakash Raj: ಕಾಶ್ಮೀರವನ್ನು ಪ್ಯಾಲೆಸ್ತೀನ್‌ಗೆ ಹೋಲಿಸಿದ ಪ್ರಕಾಶ್‌ ರಾಜ್;‌ ಕೆಂಡವಾದ ಜನ

“ಜೋ ಬೈಡನ್ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸುತ್ತಾರೆ. ಜನರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಮತ್ತು ತಮ್ಮ ದೃಷ್ಟಿಕೋನಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು ಎನ್ನುವುದು ಅವರ ಅಭಿಪ್ರಾಯ. ಆದರೆ ಅದು ಶಾಂತಿಯುತವಾಗಿರಬೇಕು. ಜತೆಗೆ ಯಹೂದಿ ವಿರೋಧಿ ಮತ್ತು ದ್ವೇಷ ಭಾಷಣವನ್ನು ಅವರು ಖಂಡಿಸುತ್ತಾರೆʼʼ ಎಂದು ಶ್ವೇತಭವನದ ರಾಷ್ಟ್ರೀಯ ಭದ್ರತಾ ವಕ್ತಾರ ಜಾನ್ ಕಿರ್ಬಿ ತಿಳಿಸಿದ್ದಾರೆ.

Continue Reading
Advertisement
delhi schools bomb threat
ಪ್ರಮುಖ ಸುದ್ದಿ14 mins ago

Bomb Threat: ದಿಲ್ಲಿಯ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ, ಮಕ್ಕಳ ತೆರವು

Columbia University
ವಿದೇಶ39 mins ago

Columbia University: ಕೊಲಂಬಿಯಾ ವಿವಿ ಪ್ರವೇಶಿಸಿದ ನ್ಯೂಯಾರ್ಕ್‌ ಪೊಲೀಸರು; ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಬಂಧನ

High-tec Gadget
ತಂತ್ರಜ್ಞಾನ51 mins ago

High-tech Gadget: ಸೆಕೆಗೆ ಎಸಿ, ಫ್ಯಾನ್‌, ಕೂಲರ್‌ ಸಾಕಾಗ್ತಿಲ್ವಾ..? ಹಾಗಿದ್ರೆ ಇಲ್ಲಿದೆ ನೋಡಿ ಹೈಟೆಕ್‌ ಗ್ಯಾಜೆಟ್‌

hassan pen drive case hd revanna prajwal revanna
ಕ್ರೈಂ60 mins ago

Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

Bhavyashree Poojary exit Neenade Naa Serial
ಕಿರುತೆರೆ1 hour ago

Bhavyashree Poojary: ರಮೇಶ್‌ ಅರವಿಂದ್‌ ನಿರ್ಮಾಣದ ಧಾರಾವಾಹಿಗೆ ಗುಡ್‌ಬೈ ಹೇಳಿದ ಭವ್ಯಶ್ರೀ ಪೂಜಾರಿ! ಕಾರಣವೇನು?

Heat Wave
ದೇಶ1 hour ago

Heat Wave: ಬಿಸಿಲಿನ ಬೇಗೆಗೆ ಹೈರಾಣಾದ ದೇಶ; ಹಲವು ಭಾಗಗಳಲ್ಲಿ ಏಪ್ರಿಲ್‌ನಲ್ಲಿ ಗರಿಷ್ಠ ತಾಪಮಾನ ದಾಖಲು

SS Rajamouli Announces Baahubali Crown of Blood Animated Series
ಟಾಲಿವುಡ್1 hour ago

SS Rajamouli: ʻಬಾಹುಬಲಿ: ಕ್ರೌನ್ ಆಫ್ ಬ್ಲಡ್ʼ ಸಿರೀಸ್‌ ಅನೌನ್ಸ್‌ ಮಾಡಿದ ರಾಜಮೌಳಿ!

Viral video
ವೈರಲ್ ನ್ಯೂಸ್2 hours ago

Viral Video: ಕತ್ತಿಯಿಂದ ಐವರ ಮೇಲೆ ಡೆಡ್ಲಿ ಅಟ್ಯಾಕ್‌; ದಾಳಿಕೋರನ ಅರೆಸ್ಟ್‌ ವಿಡಿಯೋ ಫುಲ್‌ ವೈರಲ್‌

lok sabha election 2024 voting
ಪ್ರಮುಖ ಸುದ್ದಿ2 hours ago

Lok Sabha Election 2024: ಎರಡು ಹಂತದ ಚುನಾವಣೆ ವೇಳೆ ಶೇ.84ರಷ್ಟು ಕ್ಷೇತ್ರಗಳಲ್ಲಿ ಮತದಾನ ಕುಸಿತ; ಎಫೆಕ್ಟ್ ಏನು?

Aamir Khan on collaborating with SRK, Salman Khan
ಸಿನಿಮಾ2 hours ago

Aamir Khan: ಬಿಗ್ ಸ್ಕ್ರೀನ್ ಮೇಲೆ ಮೂವರು ಖಾನ್​ಗಳು ಕಾಣೋದು ಕನ್‌ಫರ್ಮ್‌! ಸಿನಿಮಾ ಯಾವಾಗ ಶುರು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌