VISTARA TOP 10 NEWS: ಚುನಾವಣೆಗೂ ಮುನ್ನವೇ CAA,‌ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ ಇತ್ಯಾದಿ ಸುದ್ದಿ - Vistara News

ಟಾಪ್ 10 ನ್ಯೂಸ್

VISTARA TOP 10 NEWS: ಚುನಾವಣೆಗೂ ಮುನ್ನವೇ CAA,‌ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ ಇತ್ಯಾದಿ ಸುದ್ದಿ

Vistara top 10 News : ಲೋಕಸಭಾ ಚುನಾವಣೆಗೂ ಮುನ್ನವೇ ಸಿಎಎ ಕಡ್ಡಾಯ ನಿಯಮ ಜಾರಿಯಾಗಲಿದೆ. ಇತ್ತ ಬೆಂಗಳೂರಿನಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ ಮಾಡಲಾಗಿದೆ. ಹೀಗೆ ಪ್ರಮುಖ ಸುದ್ದಿಗಳ ಗುಚ್ಚ ಇಲ್ಲಿದೆ.

VISTARANEWS.COM


on

vistara Top ten
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

1. Lok Sabha Election 2024: ಲೋಕಸಭೆ ಚುನಾವಣೆಗೂ ಮುನ್ನವೇ ಸಿಎಎ ಜಾರಿ: ಅಮಿತ್ ಶಾ
2019ರಲ್ಲಿ ಜಾರಿಗೊಳಿಸಲಾದ ಪೌರತ್ವ ತಿದ್ದುಪಡಿ ಕಾಯಿದೆಯನ್ನು (ಸಿಎಎ) ಈ ನಿಟ್ಟಿನಲ್ಲಿ ಅಗತ್ಯವಾದ ನಿಯಮಗಳನ್ನು ಹೊರಡಿಸಿದ ನಂತರ ಲೋಕಸಭೆ ಚುನಾವಣೆಗೂ (Lok Sabha Election 2024) ಮುನ್ನವೇ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಅಮಿತ್‌ ಶಾ (Amit Shah) ಹೇಳಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಇದನ್ನೂ ಓದಿ : ಮೈಸೂರಿನಲ್ಲಿ ಅಮಿತ್‌ ಶಾ; ಸುತ್ತೂರು ಜಾತ್ರೆ, ರಾಜಕೀಯ ಯಾತ್ರೆ; ಏನೇನು ನಡೆಯುತ್ತೆ?

2. PM Narendra Modi: ದೇಶಕ್ಕೆ ಒಂದೇ ಸಂವಿಧಾನ ಕನಸು ಸಾಕಾರ! ಇದು 17ನೇ ಲೋಕಸಭೆಯ ಹೆಗ್ಗಳಿಕೆ
17ನೇ ಲೋಕಸಭೆಯ (17th Lok Sabha) ಕೊನೆಯ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು, ಎಲ್ಲ ಸಂಸದರು (MPs) ಹಾಗೂ ಸ್ಪೀಕರ್ (Lok Sabha Speaker) ಅವರಿಗೆ ಅಭಿನಂದನೆ ಸಲ್ಲಿಸಿದರು. ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ರದ್ದು ಮಾಡುವ ಬಹು ಮುಖ್ಯ ನಿರ್ಣಯವನ್ನು ಈ ಲೋಕಸಭೆ ಕೈಗೊಂಡಿದೆ ಎಂದು ಮೋದಿ ಹೇಳಿದರು. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

3. ಗುಂಡಿಕ್ಕಿ ಕೊಲ್ಲಿ ವಿವಾದ: ಡಿ.ಕೆ ಸುರೇಶ್‌ ಮತ್ತು ಈಶ್ವರಪ್ಪ ನಡುವೆ ಭರ್ಜರಿ ಕದನ, ಡಿ.ಕೆ ಶಿವಕುಮಾರ್‌ ಎಚ್ಚರಿಕೆ
ದೇಶ ವಿಭಜನೆಯ ಹೇಳಿಕೆ ನೀಡಿದ ಸಂಸದ ಡಿ.ಕೆ. ಸುರೇಶ್‌ ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬ ಹೇಳಿಕೆ ನೀಡಿದ ಬಿಜೆಪಿ ನಾಯಕ ಕೆ.ಎಸ್‌. ಈಶ್ವರಪ್ಪ ಮತ್ತು ಇತರರ ನಡುವೆ ಭಾರಿ ಕದನವೇ ನಡೆದಿದೆ. ಮಾತಿನ ಅಬ್ಬರ ಜೋರಾಗಿದೆ.

ಪೂರಕ ವರದಿ 1. ನಾನೇ ನಿಮ್ಮ ಮುಂದೆ ಬರ್ತೇನೆ, ಗುಂಡಿಟ್ಟು ಕೊಲ್ಲಿ; ಈಶ್ವರಪ್ಪಗೆ ಡಿಕೆಸು ಸವಾಲ್‌
ಪೂರಕ ವರದಿ 2. ಗುಂಡಿಕ್ಕಿ ಕೊಲ್ಲಿ ಎಂದಿಲ್ಲ, ಕಾನೂನು ಬೇಕು ಅಂದೆ ಅಷ್ಟೆ; ಮೆತ್ತಗಾದ ಈಶ್ವರಪ್ಪ
ಪೂರಕ ವರದಿ 3. ನಮ್ಮ ಸುದ್ದಿಗೆ ಬಂದವರ ಸೆಟ್ಲ್‌ ಮೆಂಟ್‌ ಮಾಡಿದ್ದೇವೆ, ಈಶ್ವರಪ್ಪಗೆ ಡಿಕೆಶಿ ಎಚ್ಚರಿಕೆ

4.INDIA Bloc: ಪಂಜಾಬ್‌, ಚಂಡೀಗಢದಲ್ಲಿ ಸ್ವತಂತ್ರ ಸ್ಪರ್ಧೆ ಎಂದ ಕೇಜ್ರಿವಾಲ್; ಇಂಡಿಯಾ ಕೂಟ ಛಿದ್ರ
ಕಾಂಗ್ರೆಸ್ (Congress Party) ನೇತೃತ್ವದ ಇಂಡಿಯಾ ಕೂಟಕ್ಕೆ (INDIA Bloc) ಮತ್ತೊಂದು ಹೊಡೆತ ಬಿದ್ದಿದೆ. ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಸ್ವತಂತ್ರ ಸ್ಪರ್ಧೆಯನ್ನು ಘೋಷಿಸಿದ ಬೆನ್ನಲ್ಲೇ ಆಪ್ (aam aadmi party) ನಾಯಕ ಹಾಗೂ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ (CM Arvind Kejriwal) ಅವರು ಕೂಡ, ಚಂಡೀಗಢ ಹಾಗೂ ಪಂಜಾಬ್‌ನಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

5.Bengaluru News : 6 ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ; ತ್ರಿಬಲ್‌ ರೈಡಿಂಗ್‌ಗೆ ಬ್ರೇಕ್‌!
ಬೆಂಗಳೂರು ಸಂಚಾರಿ ಪೊಲೀಸರು (Bengaluru Traffic police) ಶಾಲೆಗಳ ಬಳಿ ವಿಶೇಷ ಕಾರ್ಯಾಚರಣೆಯನ್ನು ನಡೆಸಿದ್ದರು. ಈ ವೇಳೆ ಮಕ್ಕಳು ಹೆಲ್ಮೆಟ್ ಧರಿಸದೇ (Helmet Awareness) ಬಂದ ಹಿನ್ನೆಲೆಯಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ ಮಾಡಿ ಆದೇಶವನ್ನು ಹೊರಡಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

6.ವಿಸ್ತಾರ ಅಂಕಣ: ಮಥುರಾದಲ್ಲೂ ಗತವೈಭವ ಮರುಕಳಿಸುವ ದಿನಗಳು ದೂರವಿಲ್ಲ
ಕಾನೂನಿನ ತೊಡಕುಗಳು ಆದಷ್ಟು ಬೇಗ ನಿವಾರಣೆಯಾದಲ್ಲಿ ರಾಮಜನ್ಮಭೂಮಿಯ ಹಾಗೇ ಕೃಷ್ಣಜನ್ಮಭೂಮಿಯಲ್ಲೂ ಫ್ರೆಂಚ್ ವ್ಯಾಪಾರಿ ವರ್ಣಿಸಿದ ಹಳೆ ವೈಭವ ಮತ್ತೊಮ್ಮೆ ತಲೆ ಎತ್ತಲಿದೆ ಎನ್ನುವುದು ವಿಸ್ತಾರ ನ್ಯೂಸ್‌ ನಿರ್ದೇಶಕರಾದ ಹರಿಪ್ರಕಾಶ್‌ ಕೋಣೆಮನೆ ಅವರ ಅಭಿಪ್ರಾಯ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7.EPF Interest Rate Hike: ನೌಕರರಿಗೆ ಸಿಹಿಸುದ್ದಿ: ಇಪಿಎಫ್‌ ಬಡ್ಡಿ ದರ ಶೇ.8.25ಕ್ಕೆ ಏರಿಕೆ
ನಿವೃತ್ತಿ ನಿಧಿ ಸಂಸ್ಥೆ ಇಪಿಎಫ್‌ಒ (EPFO) 2023-24ರ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ.8.25ಕ್ಕೆ ಹೆಚ್ಚಿಸಿದೆ (EPF Interest Rate Hike). ಇದು ಮೂರು ವರ್ಷಗಳ ಗರಿಷ್ಠ ಮಟ್ಟವಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. ಪಾಕ್‌ ಸೇನೆಯಿಂದ ಇಮ್ರಾನ್ ಹತ್ಯೆ ಸಂಚು? ಸರ್ಕಾರ ರಚನೆಗೆ ನವಾಜ್‌ ಷರೀಫ್-‌ ಬಿಲಾವಲ್‌ ಒಪ್ಪಂದ
ಪಾಕಿಸ್ತಾನದ ಚುನಾವಣೆ ಫಲಿತಾಂಶ (Pakistan Election result) ಪೂರ್ಣವಾಗಿ ಹೊರಬೀಳುವ ಮುನ್ನವೇ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ (Imran Khan) ಅವರನ್ನು ಕೊಲ್ಲಲು ಪಾಕ್‌ ಮಿಲಿಟರಿ ಸಂಚು ನಡೆಸಿದೆ ಎಂದು ಇಮ್ರಾನ್‌ ಸಹೋದರಿ ಗಂಭೀರ ಆರೋಪ ಮಾಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

9.Varthur Santhosh: ವರ್ತೂರ್‌ ಸಂತೋಷ್‌ಗೆ ಸನ್ಮಾನ ಮಾಡಿದ ಪಿ ಎಸ್ ಐ ರಾತ್ರೋರಾತ್ರಿ ವರ್ಗಾವಣೆ!
ಬಿಗ್‌ ಬಾಸ್‌ ಸೀಸನ್‌ 10ರ ನಾಲ್ಕನೇ ರನ್ನರ್‌ ಅಪ್‌ ವರ್ತೂರ್‌ ಸಂತೋಷ್‌ (Varthur Santhosh) ಒಂದಲ್ಲ ಒಂದು ಸುದ್ದಿಯಲ್ಲಿ ಇದ್ದಾರೆ. ವರ್ತೂರು ಸಂತೋಷ್ ಅವರಿಗೆ ಪಿಎಸ್‌ಐ ತಿಮ್ಮರಾಯಪ್ಪ ಸನ್ಮಾನ‌ ಮಾಡಿದ್ದರು. ಆದ್ದರಿಂದ ಬೆಂಗಳೂರು ನಗರ ಪೊಲೀಸ್ ಕಮೀಷನರ್ ದಯಾನಂದ್ ಅವರು ಎಸ್ ಐ ತಿಮ್ಮರಾಯಪ್ಪನನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

10.ಅದೃಷ್ಟ ತಂದ ಉಚಿತ ಲಾಟರಿ ಟಿಕೆಟ್, ಕೇರಳದವನಿಗೆ 33 ಕೋಟಿ ರೂ. ಜಾಕ್‌ಪಾಟ್!
ಯುಎಇನಲ್ಲಿ (UAE) ವಾಸಿಸುತ್ತಿರುವ ಭಾರತೀಯ (Indian Origin) ಮೂಲದ, ವಲಸಿಗ ರಾಜೀವ್ ಅರಿಕ್ಕಟ್ಟ (Rajeev Arikkatt) ಎಂಬುವವರಿಗೆ 1.5 ಕೋಟಿ ದಿರ್ಹಾಮ್‌ಗಳು ಜಾಕ್‌ಪಾಟ್ ಲಾಟರಿ ಹೊಡೆದಿದೆ. ಭಾರತೀಯ ರೂಪಾಯಿ ಲೆಕ್ಕಾಚಾರದಲ್ಲಿ ಅದು 33 ಕೋಟಿ ರೂಪಾಯಿಯಾಗುತ್ತದೆ! ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್: ಟ್ರಂಪ್ ಸರ್ಕಾರದ ಆದೇಶ ಅಸಿಂಧು, ಭಾರತೀಯರು ನಿರಾಳ

VISTARANEWS.COM


on

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್

ವಾಷಿಂಗ್ಟನ್: ಅಮೆರಿಕದಲ್ಲಿ H-1B ವೀಸಾ ಹೊಂದಿರುವ ವಿದೇಶಿ ಉದ್ಯೋಗಿಗಳಿಗೆ ಹೆಚ್ಚುವರಿ ಶುಲ್ಕ ವಿಧಿಸುವ ಟ್ರಂಪ್ ಆಡಳಿತದ ನಿರ್ಧಾರಕ್ಕೆ ಕೋರ್ಟ್‌ ಬ್ರೇಕ್‌ ಹಾಕಿದೆ. ಫೆಡರಲ್ ನ್ಯಾಯಾಧೀಶ ಲಿಯೋ ಸೊರೊಕಿನ್ ಮಹತ್ವದ ತೀರ್ಪು ನೀಡಿದ್ದು, H-1Bಯ ವೀಸಾ ಅರ್ಜಿಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ ಶುಲ್ಕವನ್ನು ಅಸಿಂಧು ಎಂದು ಘೋಷಿಸಿದ್ದಾರೆ.

ಈ ತೀರ್ಪಿನಿಂದ ಅಮೆರಿಕದಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಭಾರತೀಯ ಐಟಿ ಉದ್ಯೋಗಿಗಳಿಗೆ ಉದ್ಯೋಗಿಗಳು ನಿರಾಳರಾಗುವಂತೆ ಮಾಡಿದೆ. ವಿದೇಶಿ ಪರಿಣತ ಉದ್ಯೋಗಿಗಳನ್ನು ಅವಲಂಬಿಸಿರುವ ಅಮೆರಿಕದ ಕಂಪನಿಗಳು ಹಾಗೂ ವಿಶ್ವವಿದ್ಯಾಲಯಗಳಿಗೂ ಇದು ಅನುಕೂಲಕರ ಬೆಳವಣಿಗೆಯಾಗಿದೆ.

ಡೊನಾಲ್ಡ್ ಟ್ರಂಪ್ ಸರ್ಕಾರ, ಸ್ಥಳೀಯ ಅಮೆರಿಕನ್ನರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಲಸೆ ನೀತಿಗಳನ್ನು ಕಠಿಣಗೊಳಿಸಲಾಗಿತ್ತು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಟ್ರಂಪ್‌ ಹೊಸ H-1Bಯ ವೀಸಾ ಅರ್ಜಿಗಳಿಗೆ ಒಂದು ಲಕ್ಷ ಡಾಲರ್‌ ಶುಲ್ಕವನ್ನು ಪಾವತಿಸುವ ಘೋಷಣೆಗೆ ಸಹಿ ಹಾಕಿದ್ದರು.

ಆದರೆ ನ್ಯಾಯಾಲಯವು ಸರ್ಕಾರದ ಈ ಕ್ರಮವು ಕಾನೂನುಬದ್ಧ ಅಧಿಕಾರದ ವ್ಯಾಪ್ತಿಯನ್ನು ಮೀರಿ ಜಾರಿಗೊಳಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದು, ಶುಲ್ಕ ವಿಧಿಸುವ ನಿಯಮವನ್ನು ರದ್ದುಗೊಳಿಸಿದೆ. ಇದರಿಂದ ವಿದೇಶಿ ಪರಿಣತ ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ಸಂಸ್ಥೆಗಳಿಗೆ ಆರ್ಥಿಕ ಭಾರ ಕಡಿಮೆಯಾಗುವ ಸಾಧ್ಯತೆ ಇದೆ.

ಇದೇ ವೇಳೆ, ಟ್ರಂಪ್ ಆಡಳಿತದ ವಲಸೆ ನೀತಿಗೆ ಇದು ಪ್ರಮುಖ ಹಿನ್ನಡೆಯಾಗಿ ಪರಿಗಣಿಸಲಾಗುತ್ತಿದೆ. ಸರ್ಕಾರವು ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸುತ್ತಿರುವುದಾಗಿ ವರದಿಯಾಗಿದೆ.

ನ್ಯಾಯಾಲಯದ ತೀರ್ಪನ್ನು ಅಮೆರಿಕದಲ್ಲಿರುವ ಭಾರತೀಯ ಮೂಲದ ಉದ್ಯೋಗಿಗಳು ಹಾಗೂ ಉದ್ಯಮ ವಲಯ ಸ್ವಾಗತಿಸಿದ್ದು, H-1B ವೀಸಾ ವ್ಯವಸ್ಥೆಯ ಮೇಲಿನ ಅನಿಶ್ಚಿತತೆ ಕಡಿಮೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

Also Read: ಆಗಸ್ಟ್ 15ಕ್ಕೆ ಪಿಂಕ್ ಲೈನ್ ಮೆಟ್ರೋ ಸಂಚಾರ ಆರಂಭ? ದಕ್ಷಿಣ ಬೆಂಗಳೂರಿಗೆ ಸಂಚಾರ ದಟ್ಟಣೆಯಿಂದ ಮುಕ್ತಿ ನಿರೀಕ್ಷೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

bigbreaking

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

VISTARANEWS.COM


on

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Continue Reading

Latest

ಅಕ್ಷಯ ತೃತೀಯದ ದಿನ ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌

VISTARANEWS.COM


on

ಬೆಂಗಳೂರು: ಅಕ್ಷಯ ತೃತೀಯದ ಈ ವಿಶೇಷ ಸಂದರ್ಭದಲ್ಲಿ ಚಿನ್ನ ಖರೀದಿಸುವವರಿಗೆ ಮಾರುಕಟ್ಟೆ ಸಿಹಿ ಸುದ್ದಿ ನೀಡಿದೆ. ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಹಾಗೂ ಮಧ್ಯಪ್ರಾಚ್ಯದ ಯುದ್ಧದ ಭೀತಿಯ ನಡುವೆಯೂ ಚಿನ್ನದ ಬೆಲೆ ಇಳಿಕೆ ಹಾದಿ ಹಿಡಿದಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಹಬ್ಬದ ದಿನದಂದು ಬಂಗಾರ ಖರೀದಿಸಿದರೆ ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆ ಇರುವ ಕಾರಣ, ಬೆಲೆ ಇಳಿಕೆಯು ಜನ ಸಾಮಾನ್ಯರಿಗೆ ತುಸು ನಿರಾಳ ತಂದಿದೆ.

ಬೆಂಗಳೂರಿನ ಇಂದಿನ ಮಾರುಕಟ್ಟೆ ದರದಂತೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 490 ರೂ. ಇಳಿಕೆಯಾಗಿದ್ದು, 1,55,290 ರೂಪಾಯಿಗೆ ತಲುಪಿದೆ. ಇನ್ನು ಆಭರಣ ಚಿನ್ನ ಅಂದರೆ 22 ಕ್ಯಾರೆಟ್‌ನ 10 ಗ್ರಾಂ ಬೆಲೆಯು 450 ರೂ. ಕಡಿಮೆಯಾಗಿ 1,42,350 ರೂಪಾಯಿ ದಾಖಲಾಗಿದೆ. ಈ ಇಳಿಕೆಯು ಅಕ್ಷಯ ತೃತೀಯದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದ್ದು, ಜ್ಯುವೆಲ್ಲರಿ ಶಾಪ್‌ಗಳಲ್ಲಿ ಇಂದು ಗ್ರಾಹಕರ ಸಂಖ್ಯೆ ಏರುವ ಸಾಧ್ಯತೆಯಿದೆ.

ಚಿನ್ನದ ಬೆಲೆ ಇಳಿಕೆಯಾಗಿದ್ದರೂ, ಬೆಳ್ಳಿಯ ದರದಲ್ಲಿ ಇಂದು ಯಾವುದೇ ಬದಲಾವಣೆ ಕಂಡುಬಂದಿಲ್ಲ. ಬೆಳ್ಳಿ ಬೆಲೆ ತಟಸ್ಥವಾಗಿದ್ದು, ಒಂದು ಕೆಜಿಗೆ 2,75,000 ರೂಪಾಯಿ ಹಾಗೂ ಒಂದು ಗ್ರಾಂಗೆ 275 ರೂಪಾಯಿ ನಿಗದಿಯಾಗಿದೆ. ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಡಾಲರ್ ಮೌಲ್ಯದ ಏರಿಳಿತದ ನಡುವೆಯೂ ಬಂಗಾರದ ದರ ಇಳಿಕೆಯಾಗಿರುವುದು ಈ ಬಾರಿ ಅಕ್ಷಯ ತೃತೀಯದ ವಿಶೇಷ ಆಕರ್ಷಣೆಯಾಗಿದೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಜಿಡಿಪಿಯಲ್ಲಿ ನಿರೀಕ್ಷೆ ಮೀರಿದ ಬೆಳವಣಿಗೆ ಹರ್ಷದಾಯಕ

ಪ್ರತಿ ತ್ರೈಮಾಸಿಕದಲ್ಲೂ ದೇಶದ ಜಿಡಿಪಿಯನ್ನು ಅಂದಾಜಿಸಲಾಗುತ್ತದೆ. ಏರಿಳಿತ ಇರುವುದೇ ಆಗಿರುತ್ತದೆ. ಸಾಮಾನ್ಯವಾಗಿ ಒಂದು ವರ್ಷದಿಂದ ಇನ್ನೊಂದಕ್ಕೆ 1-2ಕ್ಕಿಂತ ಅಧಿಕ ಜಿಡಿಪಿ ವ್ಯತ್ಯಾಸ ಆಗುವುದು ಅಪರೂಪ. ಆದರೆ ಭಾರತದ ಆರ್ಥಿಕ ಕ್ಷೇತ್ರದ ಬೆಳವಣಿಗೆ ಬಹಳಷ್ಟು ವೇಗವಾಗಿದೆ. ಹೀಗಾಗಿ ಕ್ಷಿಪ್ರಗತಿಯ ಜಿಡಿಪಿ ಬೆಳವಣಿಗೆ ಕಾಣಿಸಿದೆ.

VISTARANEWS.COM


on

GDP Growth

ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ (GDP Growth) ಶೇಕಡಾ 8.4ಕ್ಕೆ ಏರಿಕೆಯಾಗಿದೆ ಎಂದು ಸಾಂಖ್ಯಿಕ ಮತ್ತು ಯೋಜನೆ ಅನುಷ್ಠಾನ ಸಚಿವಾಲಯ ಗುರುವಾರ ಹೇಳಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಶೇ.4.3ರಷ್ಟಿತ್ತು. ಹೀಗಾಗಿ ನಿರೀಕ್ಷೆ ಮೀರಿದ ಬೆಳವಣಿಗೆಯಾಗಿದೆ. “2023-24ರ ಮೂರನೇ ತ್ರೈಮಾಸಿಕದಲ್ಲಿ 8.4% ಜಿಡಿಪಿ ಬೆಳವಣಿಗೆಯು ಭಾರತೀಯ ಆರ್ಥಿಕತೆಯ ಶಕ್ತಿ ಮತ್ತು ಅದರ ಸಾಮರ್ಥ್ಯವನ್ನು ಎತ್ತಿ ತೋರಿಸುತ್ತದೆ. ತ್ವರಿತ ಆರ್ಥಿಕ ಬೆಳವಣಿಗೆಯನ್ನು ಕಾಣಲು ನಮ್ಮ ಪ್ರಯತ್ನಗಳು ಮುಂದುವರಿಯಲಿದೆ. ಇದು 140 ಕೋಟಿ ಭಾರತೀಯರಿಗೆ ಉತ್ತಮ ಜೀವನವನ್ನು ನಡೆಸಲು, ವಿಕಸಿತ​ ಭಾರತದ ಬೆಳವಣಿಗೆಗೆ ಸಹಾಯ ಮಾಡುತ್ತದೆ” ಎಂದು ಪ್ರಧಾನಿ ಹೇಳಿದ್ದಾರೆ.

2023-24ರ ಮೂರನೇ ತ್ರೈಮಾಸಿಕದಲ್ಲಿ ಸ್ಥಿರ (2011-12) ದರಗಳಲ್ಲಿ ಜಿಡಿಪಿ 43.72 ಲಕ್ಷ ಕೋಟಿ ರೂ.ಗೆ ಅಂದಾಜಿಸಲಾಗಿದೆ. ಇದು 2022-23ರ ಮೂರನೇ ತ್ರೈಮಾಸಿಕದಲ್ಲಿ 40.35 ಲಕ್ಷ ಕೋಟಿ ರೂ ಆಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ 8.4ರಷ್ಟು ಬೆಳವಣಿಗೆಯ ದರವನ್ನು ತೋರಿಸಿದೆ. ವಿಶ್ಲೇಷಕರು ಮೂರನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಕಡಾ 7ಕ್ಕಿಂತ ಕಡಿಮೆ ಎಂದು ಅಂದಾಜಿಸಿದ್ದರು. ಆದರೆ, ಸರ್ಕಾರ ಬಿಡುಗಡೆ ಮಾಡಿದ ಅಂಕಿ ಅಂಶವು ಭಾರತೀಯ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದೆ ಎಂದು ತೋರಿಸಿದೆ. ನಿರ್ಮಾಣ ಕ್ಷೇತ್ರದ ಎರಡಂಕಿ ಬೆಳವಣಿಗೆ ದರ (ಶೇ.10.7), ಉತ್ಪಾದನಾ ವಲಯದ ಬೆಳವಣಿಗೆ ದರ (ಶೇ.8.5) 2024ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯನ್ನು ಹೆಚ್ಚಿಸಿದೆ ಎಂದು ಸರಕಾರ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಶೇಕಡಾ 8.4ರಷ್ಟು ಬೆಳವಣಿಗೆಯ ಹಿಂದಿನ ಪ್ರಮುಖ ಕಾರಣವೇ ಈ ಕ್ಷೇತ್ರಗಳಲ್ಲಿನ ಬೆಳವಣಿಗೆಯಾಗಿದೆ. ಹೀಗಾಗಿ, ಈಗ ಪೂರ್ಣ ವರ್ಷದ ಜಿಡಿಪಿ ಬೆಳವಣಿಗೆ ಅಂದಾಜು ಶೇಕಡಾ 7.3ಕ್ಕಿಂತ ಹೆಚ್ಚಾಗುತ್ತದೆ ಎಂದು ಸಾಂಖ್ಯಿಕ ಸಚಿವಾಲಯ ನಿರೀಕ್ಷಿಸಿದೆ. ಇದು ವಿಶ್ವದ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿ ಭಾರತದ ಸ್ಥಾನಮಾನವನ್ನು ದೃಢಪಡಿಸಿದೆ.

ಪ್ರತಿ ತ್ರೈಮಾಸಿಕದಲ್ಲೂ ದೇಶದ ಜಿಡಿಪಿಯನ್ನು ಅಂದಾಜಿಸಲಾಗುತ್ತದೆ. ಏರಿಳಿತ ಇರುವುದೇ ಆಗಿರುತ್ತದೆ. ಸಾಮಾನ್ಯವಾಗಿ ಒಂದು ವರ್ಷದಿಂದ ಇನ್ನೊಂದಕ್ಕೆ 1-2ಕ್ಕಿಂತ ಅಧಿಕ ಜಿಡಿಪಿ ವ್ಯತ್ಯಾಸ ಆಗುವುದು ಅಪರೂಪ. ಆದರೆ ಭಾರತದ ಆರ್ಥಿಕ ಕ್ಷೇತ್ರದ ಬೆಳವಣಿಗೆ ಬಹಳಷ್ಟು ವೇಗವಾಗಿದೆ. ಹೀಗಾಗಿ ಕ್ಷಿಪ್ರಗತಿಯ ಜಿಡಿಪಿ ಬೆಳವಣಿಗೆ ಕಾಣಿಸಿದೆ. ಇದನ್ನೇ ಷೇರು ಮಾರುಕಟ್ಟೆಯಲ್ಲೂ ಕಾಣಬಹುದು. ಕಳೆದ ಒಂದು ವರ್ಷದಿಂದ ದೇಶದ ಷೇರು ಮಾರುಕಟ್ಟೆ ಗಣನೀಯವಾಗಿ ಕುಸಿದಿಲ್ಲ. ಆದರೆ ಗಣನೀಯ ಹೆಚ್ಚಳಗಳು ಆಗಿವೆ. ಇದು ದೇಶದ ವಾಣಿಜ್ಯ ವಹಿವಾಟಿನಲ್ಲಿ, ಕೈಗಾರಿಕಾ ವಲಯದ ಮೇಲೆ ಬಂಡವಾಳೋದ್ಯಮಿಗಳು ಹಾಗೂ ಷೇರುದಾರರು ಇಟ್ಟಿರುವ ಭರವಸೆಯನ್ನು ತೋರಿಸುತ್ತದೆ. ಹಣದುಬ್ಬರದ ಕಾಲದಲ್ಲೂ ದೇಶ ತನ್ನ ಜಿಡಿಪಿಯ ಗತಿಯನ್ನು ಕಾಯ್ದುಕೊಂಡಿದೆ. ಇದು ಶ್ಲಾಘನೀಯ. ಜಿಡಿಪಿ ಸತತವಾಗಿ ಏರುತ್ತಿದ್ದಾಗ, ಸಾಮಾನ್ಯ ಮನುಷ್ಯನ ಕೈಗೂ ಸಾಕಷ್ಟು ಹಣದ ಹರಿವು ಇರುತ್ತದೆ. ಹೀಗಾಗಿ ಹಣದುಬ್ಬರದ ದುಷ್ಪರಿಣಾಮ ಅಷ್ಟಾಗಿ ತಟ್ಟುವುದಿಲ್ಲ.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ವಿದ್ಯುತ್‌ ದರ ಇಳಿಕೆ ಶ್ಲಾಘನೀಯ ಕ್ರಮ

ಒಂದು ದೇಶದ ಮಾರುಕಟ್ಟೆಯಲ್ಲಿ ಈ ಪ್ರಮಾಣದ ಬೆಳವಣಿಗೆಯಾಗುವುದು, ಜಿಡಿಪಿ ನಿರಂತರವಾಗಿ ಪ್ರಗತಿ ತೋರಿಸುವುದು ಯಾವಾಗ ಎಂದರೆ, ಆ ದೇಶದ ಮಾರುಕಟ್ಟೆಯಲ್ಲಿ ಒಳಗಿನ ಹಾಗೂ ಹೊರಗಿನ ಹೂಡಿಕೆದಾರರ ವಿಶ್ವಾಸ ಹೆಚ್ಚಿದಾಗ. ಅಂದರೆ ಇಲ್ಲಿ ಒಳ್ಳೆಯ ಹೂಡಿಕೆ ಮಾಡಬಹುದು, ಸುರಕ್ಷಿತ ವಾತಾವರಣವಿದೆ, ಇಲ್ಲಿ ಪ್ರಗತಿಯ ಸಾಧ್ಯತೆಯಿದೆ ಎಂದು ತೋರಿದಾಗ ಮಾತ್ರ ಅಂಥಲ್ಲಿ ಹಣ ಹೂಡಲಾಗುತ್ತದೆ. ಇಂತಹ ಆತ್ಮವಿಶ್ವಾಸದ ಪರಿಣಾಮವಾಗಿಯೇ ದೇಶದ ಜಿಡಿಪಿ ಏರಿಕೆಯಾಗಿದೆ ಹಾಗೂ ಈಕ್ವಿಟಿ ಮಾರುಕಟ್ಟೆ ಉತ್ತುಂಗ ಮುಟ್ಟಿದೆ. ನಾವು ವಿಶ್ವದ ದೊಡ್ಡ ದೇಶಗಳನ್ನು ಮಿತ್ರರನ್ನಾಗಿಸಿಕೊಂಡು ಬಹುರಾಷ್ಟ್ರೀಯ ಕಂಪನಿಗಳನ್ನು ನಮ್ಮ ದೇಶದ ಮಾರುಕಟ್ಟೆಗೆ ಬೇಕಾದಂತೆ ಕುಣಿಸುತ್ತಿದ್ದೇವೆ. ನಮ್ಮ ಜನಸಂಖ್ಯಾ ಬಂಡವಾಳ, ದುಡಿಯುವ ವರ್ಗ ನಮ್ಮ ಮಾರುಕಟ್ಟೆಗೆ ಪೂರಕವಾಗಿದೆ. ಇಲ್ಲಿನ ಪ್ರತಿಭೆಗಳು ಯುಎಸ್‌, ಯುಕೆಯ ಆರ್ಥಿಕತೆಗಳನ್ನು ಕಟ್ಟುತ್ತಿವೆ. ಜಿಡಿಪಿ ಏರಿಕೆಯ ಪರಿಣಾಮವು, ಪ್ರಧಾನಿಯವರು ಹೇಳಿದಂತೆ ನಮ್ಮ ಜನತೆಯ ಬಡತನದ ತ್ವರಿತ ನಿರ್ಮೂಲನೆ ಮತ್ತು ಬದುಕಿನ ಸ್ಥಿತಿಗತಿ ಸುಧಾರಣೆಗೂ ಮೂಲವಾಗಬೇಕು. ಆಗ ಜಿಡಿಪಿ ಬೆಳವಣಿಗೆಗೆ ಹೆಚ್ಚಿನ ಅರ್ಥ ಬರುತ್ತದೆ.

Continue Reading
Advertisement
ಬಿಡದಿ ಟೌನ್‌ಶಿಪ್‌
Latest14 hours ago

ಬಿಡದಿ ಟೌನ್‌ಶಿಪ್‌ ರೈತರ ವಿರೋಧ : ಜೂನ್ 22ರಂದು ‘ಭೈರಮಂಗಲ ಚಲೋ’

ಸಿಎಂ ಡಿಕೆಶಿ
Latest15 hours ago

ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

ನೀಟ್ 2026 ಪರೀಕ್ಷೆ
Latest2 days ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest2 days ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

ರಾಜ್ಯಸಭೆ
Latest3 days ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest3 days ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ4 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest4 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest4 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest4 days ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌