VISTARA TOP 10 NEWS : ಭಾರತ ವಿಶ್ವ ವಿಜಯಕ್ಕೆ ಪ್ರಾರ್ಥನೆ, ಉ.ಪ್ರದಲ್ಲಿ ಹಲಾಲ್‌ ಉತ್ಪನ್ನ ಬ್ಯಾನ್‌ Vistara News

ಕರ್ನಾಟಕ

VISTARA TOP 10 NEWS : ಭಾರತ ವಿಶ್ವ ವಿಜಯಕ್ಕೆ ಪ್ರಾರ್ಥನೆ, ಉ.ಪ್ರದಲ್ಲಿ ಹಲಾಲ್‌ ಉತ್ಪನ್ನ ಬ್ಯಾನ್‌

VISTARA TOP 10 NEWS : ವಿಶ್ವ ಕಪ್‌ ಫೈನಲ್‌ ನಲ್ಲಿ ಭಾರತ ಗೆಲ್ಲಲಿ ಎಂಬ ಪ್ರಾರ್ಥನೆ ಎಲ್ಲೆಡೆ ಕೇಳುತ್ತಿದೆ, ಯತೀಂದ್ರ ಸಿದ್ದರಾಮಯ್ಯ ಮೇಲೆ ಬಿಜೆಪಿ ಇನ್ನಷ್ಟು ಆಪಾದನೆ ಮಾಡಿದೆ. ಹೀಗೆ ಪ್ರಮುಖ ಸುದ್ದಿಗಳ ಗುಚ್ಛವೇ ವಿಸ್ತಾರ ಟಾಪ್‌ 10 ನ್ಯೂಸ್‌.

VISTARANEWS.COM


on

Vistara Top 10 Neww
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1.ವಿಶ್ವಕಪ್‌ ಫೈನಲ್‌ ಕದನಕ್ಕಾಗಿ ಕ್ಷಣಗಣನೆ‌ : ಆಸ್ಟ್ರೇಲಿಯಾ ವಿರುದ್ಧ ಭಾರತ ಗೆಲುವಿಗಾಗಿ ಪ್ರಾರ್ಥನೆ
ಆರು ವಾರಗಳ ಕಾಲ ನಡೆದ ಏಕ ದಿನ ವಿಶ್ವ ಕಪ್​ನ (ICC World Cup 2023) ಕೊನೆಯ ಮತ್ತು ವಿಜೇತರನ್ನು ನಿರ್ಣಯಿಸುವ ಪಂದ್ಯ ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ನೆವೆಂಬರ್​ 19ರಂದು ನಡೆಯಲಿದೆ. ಅಕ್ಟೋಬರ್ 5ರಂದು ಟೂರ್ನಿಯ ಉದ್ಘಾಟನಾ ಆವೃತ್ತಿಯೂ ಇದೇ ಸ್ಟೇಡಿಯಮ್​ನಲ್ಲಿ ನಡೆದಿತ್ತು. ಇದೀಗ ಅದೇ ಸ್ಟೇಡಿಯಮ್​ನಲ್ಲಿ ವಿಶ್ವ ವಿಜೇತರು ಯಾರೆಂಬುದು ಪ್ರಕಟವಾಗಲಿದೆ. ಸಹಜವಾಗಿ ಟೂರ್ನಿಯ ಬಲಿಷ್ಠ ಎರಡು ತಂಡಗಳಾದ ಆಸ್ಟ್ರೇಲಿಯಾ ಮತ್ತು ಭಾರತ ಫೈನಲ್​ಗೇರಿದ್ದು ಇತ್ತಂಡಗಳು ಪ್ರಶಸ್ತಿಗಾಗಿ ಸೆಣಸಾಸಲಿವೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಇದನ್ನೂ ಓದಿ: ICC World Cup 2023 : ವಿಶ್ವ ಕಪ್ ಫೈನಲ್ ಪಂದ್ಯಗಳಲ್ಲಿ ದಾಖಲಾದ ಗರಿಷ್ಠ ರನ್​ ಎಷ್ಟು?
ಇದನ್ನೂ ಓದಿ: ICC World Cup 2023 : ಪಂದ್ಯ ಟೈ ಆದರೆ, ಮಳೆ ಬಂದರೆ ಫಲಿತಾಂಶ ಪ್ರಕಟಿಸುವುದು ಹೇಗೆ?
ಇದನ್ನೂ ಓದಿ: ICC World Cup 2023 : ಫೈನಲ್ ಪಂದ್ಯದಲ್ಲಿ ಬ್ಯಾಟರ್​ಗಳ ಅಬ್ಬರ ಖಾತರಿ; ಯಾಕೆ ಗೊತ್ತೇ?

2. ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸರ್ಕಾರವೇ ಕೊಡ್ತಾ ಸಾಕ್ಷ್ಯ? : ಪಟ್ಟಿಯಲ್ಲಿದೆ ವಿವೇಕಾನಂದ ಹೆಸರು
ಪೊಲೀಸ್ ಇಲಾಖೆಯಲ್ಲಿ ಮತ್ತೆ 71 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ (transfer) ಮಾಡಲಾಗಿದೆ. ಇದರಲ್ಲಿ ವಿವೇಕಾನಂದ ಎಂಬವರನ್ನು ಮೈಸೂರು ನಗರದ ವಿವಿ ಪುರಂ ಪೊಲೀಸ್‌ ಠಾಣೆಗೆ ವರ್ಗಾಯಿಸಿ ಆದೇಶ ನೀಡಲಾಗಿದೆ. ಈ ವಿವೇಕಾನಂದ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ತಮ್ಮ ತಂದೆ ಜತೆಗೆ ಮಾತನಾಡಿರುವ ವಿಡಿಯೋದಲ್ಲಿ ಉಲ್ಲೇಖಿಸಿರುವ ವ್ಯಕ್ತಿಯಾ ಎಂಬ ಚರ್ಚೆಗೆ ನಡೆದಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಇದನ್ನೂ ಓದಿ : ಯತೀಂದ್ರ ಮಾತಿಗೆ ತಾಳೆಯಾದ ವಿವೇಕಾನಂದ ವರ್ಗ, ʼಸಾಕ್ಷಿ ಇಲ್ಲಿದೆ ನೋಡಿʼ ಎಂದ ಎಚ್‌ಡಿಕೆ
ಇದನ್ನೂ ಓದಿ : ಟ್ರಾನ್ಸ್‌ಫರ್‌ ಆಗಿರುವ ವಿವೇಕಾನಂದ ಯಾರೆಂದೇ ಗೊತ್ತಿಲ್ಲ!; ಯತೀಂದ್ರ ಸ್ಪಷ್ಟನೆ

3.R Ashok : 2008ರಲ್ಲಿ ಬಿಜೆಪಿಗೆ ಅಧಿಕಾರ ನಿರಾಕರಿಸಿದ್ದು ‌HDK ಅಲ್ಲ, ದೇವೇಗೌಡ್ರು; ಆರ್‌. ಅಶೋಕ್
ಅಂದು 2008ರಲ್ಲಿ ಬಿಜೆಪಿಗೆ ಹಸ್ತಾಂತರ ಮಾಡಲು ನಿರಾಕರಿಸಿದ್ದು ಎಚ್‌ ಡಿ ಕುಮಾರಸ್ವಾಮಿ ಅಲ್ಲ, ಎಚ್.ಡಿ ದೇವೇಗೌಡರು. ಹಾಗೆ ಮಾಡದೆ ಇರುತ್ತಿದ್ದರೆ ಕಾಂಗ್ರೆಸ್‌ ಇಂದು ಬೋರ್ಡ್‌ ಗೇ ಇರುತ್ತಿರಲಿಲ್ಲ ಎಂಬ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌. ಎಚ್.ಡಿ. ದೇವೇಗೌಡರು ಅಂದು ಆ ತಪ್ಪನ್ನು ಮಾಡಬಾರದಿತ್ತು ಎಂದು ವಿಸ್ತಾರ ನ್ಯೂಸ್‌ ವಿಶೇಷ ಸಂದರ್ಶನದಲ್ಲಿ ಅವರು ಹೇಳಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

4. Yathindra Siddaramaiah : ʼಹಲೋ ಅಪ್ಪಾʼ ಆ್ಯಪ್ ಡೌನ್‌ಲೋಡ್ ಮಾಡಿ ಪೇಮೆಂಟ್ ಮಾಡಿ!
ಯತೀಂದ್ರ ಸಿದ್ದರಾಮಯ್ಯ (‌Yathindra Siddaramaiah) ಅವರ “ಲಿಸ್ಟ್‌” ರಾಜಕೀಯದ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಪ್ರತಿಪಕ್ಷಗಳು ಈಗ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಯತೀಂದ್ರ ಸಿದ್ದರಾಮಯ್ಯ ವಿರುದ್ಧ “ಹಲೋ ಅಪ್ಪಾ, ಆ್ಯಪ್ ಡೌನ್‌ಲೋಡ್ ಮಾಡಿ ಪೇಮೆಂಟ್ ಮಾಡಿ” ಪೋಸ್ಟರ್‌, “ಶ್ಯಾಡೋ ಸಿಎಂ” ಪೋಸ್ಟರ್ (Shadow CM), ಇಂಧನ ಸಚಿವ ಕೆ.ಜೆ. ಜಾರ್ಜ್‌, ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಕೆಲವರ ಮೇಲೆ ಪೋಸ್ಟರ್‌ಗಳನ್ನು ರಚಿಸಿ ಸರ್ಕಾರಿ ಕಚೇರಿಗಳ ಸಹಿತ ಅಲ್ಲಲ್ಲಿ ಅಂಟಿಸಲಾಗುತ್ತಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಇದನ್ನೂ ಓದಿ : ‌Yathindra Siddaramaiah : ‘ಅಪ್ಪಾ ಜಿ’ ಪೋಸ್ಟರ್‌ ಬಿಟ್ಟು ಕಾಲೆಳೆದ ಬಿಜೆಪಿ!

6. ವಿಸ್ತಾರ ಅಂಕಣ: ಭಾರತಾಂಬೆಯ ವಿರುದ್ಧ ಆಕೆಯ ತನುಜಾತೆಯನ್ನು ಎತ್ತಿಕಟ್ಟುವುದು ಏಕೆ?

vistara Column Photo


“ಕೇಂದ್ರ ಸರ್ಕಾರಕ್ಕೆ ತೆರಿಗೆ ಕೊಡೋರು ಯಾರು? ಯಾರ್ರೀ ತೆರಿಗೆ ಕೊಡೋರು? ರಾಜ್ಯದ ಜನಗಳಲ್ಲವ? ಅದಕ್ಕೆ ಅಂತ ಬೇರೆ ಜನರೇನಾದರೂ ಇರುವರೇ, ಇಲ್ಲ. ನಮ್ಮ ರಾಜ್ಯದಿಂದ ಹಣ ಕೊಟ್ಟಿದ್ದೀವಿ” ಎನ್ನುವ ವಾದವೊಂದು ಹುಟ್ಟಿಕೊಂಡಿದೆ. ಹಿಂದಿ ಹೇರಿಕೆ, ಆರ್ಯ-ದ್ರಾವಿಡ ಮತ್ತಿತರ ವಾದಗಳ ಮೂಲಕ ಭಾರತ ಬೇರೆ, ರಾಜ್ಯಗಳು ಬೇರೆ ಎನ್ನುವ ತಾರತಮ್ಯ ಸೃಷ್ಟಿಸಲಾಗುತ್ತಿದೆ. ಇದರ ಬಗ್ಗೆ ವಿಶ್ಲೇಷಣೆ ನಡೆಸಿದ್ದಾರೆ ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ರಾದ ಹರಿಪ್ರಕಾಶ್‌ ಕೋಣೆಮನೆಯವರು ತಮ್ಮ ವಿಸ್ತಾರ ಅಂಕಣದಲ್ಲಿ. ಪೂರ್ಣ ಲೇಖನಕ್ಕೆ ಈ ಲಿಂಕ್‌ ಕ್ಲಿಕ್‌ ಮಾಡಿ

6. Halal Products: ಸಿಎಂ ಯೋಗಿ ದಿಟ್ಟ ನಿರ್ಧಾರ ‌’ಹಲಾಲ್‌’ ಉತ್ಪನ್ನಗಳ ಮಾರಾಟ ನಿಷೇಧ!.
ಹಲಾಲ್‌ ಕಟ್ ವಿಷಯವು ಚರ್ಚೆಗೆ ಗ್ರಾಸವಾಗಿರುವ, ಪರ-ವಿರೋಧ ಚರ್ಚೆಗಳು ಆಗಾಗ ಕೇಳಿಬರುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರವು (Uttar Pradesh Government) ರಾಜ್ಯದಲ್ಲಿ ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು (Halal Certified Products) ನಿಷೇಧಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. Telangana Polls: 500 ರೂ.ಗೆ ಎಲ್‌ಪಿಜಿ, ಸ್ತ್ರೀಯರಿಗೆ ಉಚಿತ ಪ್ರಯಾಣ; ಕಾಂಗ್ರೆಸ್‌ ಭರ್ಜರಿ ಭರವಸೆ
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಐದೂ ರಾಜ್ಯಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಸ್ಪರ್ಧೆಗೆ ಬಿದ್ದು ‘ಉಚಿತ ಕೊಡುಗೆ’ಗಳ (Free Bies) ಭರವಸೆಗಳನ್ನು ನೀಡುತ್ತಿವೆ. ತೆಲಂಗಾಣದಲ್ಲೂ ಕಾಂಗ್ರೆಸ್‌ (Telangana Polls) ಹತ್ತಾರು ಭರವಸೆಗಳನ್ನು ನೀಡಿದ್ದು, ಜನರಿಗೆ ಭರಪೂರ ಉಚಿತ ಯೋಜನೆ ಘೋಷಿಸಿದೆ. ಅದರಲ್ಲೂ, 500 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್‌, ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೇರಿ ಹಲವು ಭರವಸೆ ನೀಡಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. Digital Payment: ಗಮನಿಸಿ; ಡಿಸೆಂಬರ್‌ 31ರಿಂದ ಈ ಯುಪಿಐ ಖಾತೆಗಳು ಬಂದ್!
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯಾರೂ ಜೇಬಲ್ಲಿ ದುಡ್ಡು ಇಟ್ಟುಕೊಂಡ ಓಡಾಡುತ್ತಿಲ್ಲವೇನೋ ಎನ್ನುವಷ್ಟರ ಮಟ್ಟಿಗೆ ಡಿಜಿಟಲ್‌ ಪೇಮೆಂಟ್‌ (Digital Payment)ನ ಪ್ರಮಾಣ ಹೆಚ್ಚಿದೆ. ಈ ಮಧ್ಯೆ ನ್ಯಾಷನಲ್‌ ಪೇಮೆಂಟ್ಸ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (NPCI) ಡಿಸೆಂಬರ್‌ 31ರಿಂದ ಕೆಲವೊಂದು ಯುಪಿಐ ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

9. ರಾಮಮಂದಿರಕ್ಕೆ ಹೋದವರು ಮುಸ್ಲಿಮರಾಗಿ ಬರುತ್ತಾರೆ ಎಂದ ಪಾಕ್‌ ಮಾಜಿ ಕ್ರಿಕೆಟಿಗ; ಬೆಂಡೆತ್ತಿದ ಜನ
ರಾಮಮಂದಿರದ ಗರ್ಭಗುಡಿಯಲ್ಲಿ 2024ರ ಜನವರಿ 22ರಂದು ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆ ನಡೆಯಲಿದೆ. ಇದರ ನಡುವೆ “ರಾಮಮಂದಿರಕ್ಕೆ ಹೋದವರು ಮುಸ್ಲಿಮರಾಗಿ ಹೊರಬರುತ್ತಾರೆ” ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಜಾವೇದ್‌ ಮಿಯಾಂದಾದ್‌ (Javed Miandad) ಹೇಳಿರುವ ಹಳೆಯ ವಿಡಿಯೊ (Viral Video) ಈಗ ವೈರಲ್‌ ಆಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

10. Bullock Attack : ರೊಚ್ಚಿಗೆದ್ದ ದೇವರ ಗೂಳಿ; ಕೊಂಬಿನಿಂದ ಗುದ್ದಿ ಬಸ್ಸಿನ ಮೇಲೆ ದಾಳಿ!
ದೇವರಿಗೆ ಬಿಟ್ಟ ಹೋರಿಗಳು (Bullock Attack) ಸಾಮಾನ್ಯವಾಗಿ ಜನರ ನಡುವೆ ಬೆರೆಯುತ್ತಾ ಸೌಹಾರ್ದದಿಂದ ಇರುತ್ತವೆ ಎನ್ನುವ ಪ್ರತೀತಿ ಇದೆ. ಆದರೆ, ಕೆಲವು ಕಡೆ ಈ ನಂಬಿಕೆಯನ್ನು ಮುರಿಯುವುದು ಕೂಡಾ ಇದೆ. ಕೆಲವೊಮ್ಮೆ ಶಾಂತವಾಗಿರುವ ಹೋರಿಗಳು ಕೂಡಾ ಒಮ್ಮಿಂದೊಮ್ಮೆಗೇ ಸಿಟ್ಟಿಗೇಳುವುದುಂಟು. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಹೋರಿಯೊಂದು ಬಸ್ಸನ್ನೇ ತಡೆಹಿಡಿದಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Police Protest : ಪೊಲೀಸರ ಅಮಾನತ್ತು ವಾಪಸ್ಸು ಪಡೆಯಲು ಸಮಯ ಕೇಳಿದ್ದಕ್ಕೆ ಪೊಲೀಸ್‌ ಸಿಬ್ಬಂದಿ ಹಾಗೂ ಕುಟುಂಬಸ್ಥರು ಅಹೋರಾತ್ರಿ ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ. ಜತೆಗೆ ವಕೀಲರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

VISTARANEWS.COM


on

By

Police call off protest FIR against lawyer who slapped police
Koo

ಚಿಕ್ಕಮಗಳೂರು: ಹೆಲ್ಮೆಟ್‌ ಹಾಕದ ಕಾರಣಕ್ಕೆ ಪ್ರೀತಮ್‌ ಎಂಬ ಯುವ ವಕೀಲನ ಮೇಲೆ ನಗರ ಠಾಣೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಪ್ರಕರಣದಲ್ಲಿ ಪಿಎಸ್‌ಐ, ಎಎಸ್‌ಐ, ಮುಖ್ಯ ಪೇದೆ ಹಾಗೂ ಮೂವರು ಪೇದೆಗಳು ಸೇರಿ ಒಟ್ಟು ಆರು ಪೊಲೀಸರನ್ನು ಎಸ್‌ಪಿ ವಿಕ್ರಮ್‌ ಅಮಟೆ ಅಮಾನತು ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಪೊಲೀಸ್‌ ಕುಟುಂಬಸ್ಥರು ಶನಿವಾರ (ಡಿ.2) ಅಹೋರಾತ್ರಿ ಪ್ರತಿಭಟನೆಯನ್ನು (Police Protest) ನಡೆಸಿದ್ದರು.

ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿಯೇ ಟಾರ್ಪಲ್ ಹಾಕಿ ಮಲಗಿ ಪ್ರತಿಭಟಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮಂಗಳವಾರ ವರದಿ ನೀಡಲು ಸೂಚನೆ ನೀಡಿತ್ತು. ಹೀಗಾಗಿ ಆರು ಮಂದಿ ಪೊಲೀಸರನ್ನು ಬಂಧಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಇತರೆ ಸಿಬ್ಬಂದಿ ಶನಿವಾರ ಅಹೋರಾತ್ರಿ ಪ್ರತಿಭಟನೆಗೆ ಮುಂದಾದರು.

ನಗರದ 6 ಠಾಣೆಗಳ 300ಕ್ಕೂ ಹೆಚ್ಚು ಪೊಲೀಸರು ಕೆಲಸ ನಿಲ್ಲಿಸಿ ಪ್ರತಿಭಟನೆಗೆ ಆಗಮಿಸಿ, ನಾವ್ಯಾರು ಕೆಲಸ ಮಾಡಲ್ಲ. ಪೊಲೀಸರಿಗೆ ರಕ್ಷಣೆ ಇಲ್ಲ, ಪೊಲೀಸ್ ಕುಟುಂಬಗಳಿಗೆ ಅನ್ಯಾಯ ಆಗಿದೆ‌. ಒಂದು ವೇಳೆ ಪ್ರಕರಣದಲ್ಲಿ ಪೊಲೀಸ್‌ ಸಿಬ್ಬಂದಿಯನ್ನು ಬಂಧಿಸಿದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಸ್‌ಪಿಗೆ ಎಚ್ಚರಿಕೆ ನೀಡಿದ್ದರು. ಸಿಬ್ಬಂದಿ ಹೋರಾಟಕ್ಕೆ ಮಣಿದ ಹಿರಿಯ ಅಧಿಕಾರಿಗಳು ವಕೀಲರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದರು. ಇದಾದ ಬಳಿಕ ಪೊಲೀಸರು ಹಾಗೂ ಅವರ ಕುಟುಂಬಸ್ಥರು ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.

ತರೀಕೆರೆ ಡಿವೈಎಸ್‌ಪಿ ಹಾಲಮೂರ್ತಿ, ಡಿಸಿಆರ್‌ಬಿ ಡಿವೈಎಸ್‌ಪಿ ಶಿವಪ್ರಸಾದ್ ನಾಯ್ಕ್, ಸೆನ್ ಪಿಎಸ್ಐ ಗವಿರಾಜ್ ಹಾಗೂ ಎಸ್‌ಪಿ ವಿಕ್ರಂ ಅಮಟೆ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯು ಯಶಸ್ವಿಯಾಗಿದೆ. ಪೊಲೀಸ್‌ ಸಿಬ್ಬಂದಿ ಅಮಾನತ್ತು ವಾಪಸ್ಸು ಪಡೆಯಲು ಎಸ್‌ಪಿ ವಿಕ್ರಂ ಅಮಟೆ ಸಮಯ ಕೇಳಿದ್ದಕ್ಕೆ ಪ್ರತಿಭಟನೆಯನ್ನು ಕೈಬಿಟ್ಟರು. ಇದೇ ವೇಳೆ ವಶಕ್ಕೆ ಪಡೆದಿದ್ದ ಪೇದೆ ಗುರುಮೂರ್ತಿಯನ್ನು ಬಿಡುಗಡೆ ಮಾಡಲಾಯಿತು. ಜತೆಗೆ ವಕೀಲರ ಮೇಲೂ ನಾಲ್ಕು ಪ್ರತ್ಯೇಕ ಎಫ್ಐಆರ್ ದಾಖಲಾಯಿತು.

ಇದನ್ನೂ ಓದಿ: Atrocity on Lawyer: ವಕೀಲರ ಮೇಲಿನ ಹಲ್ಲೆಗೆ ಹೈಕೋರ್ಟ್‌ ಗರಂ; 6 ಪೊಲೀಸರ ಅಮಾನತು

ಕಪ್ಪಾಳಕ್ಕೆ ಹೊಡೆದಿದ್ದ ಪ್ರೀತಮ್‌!

ಸಿಬ್ಬಂದಿ ಹೋರಾಟಕ್ಕೆ ಮಣಿದ ಹಿರಿಯ ಅಧಿಕಾರಿಗಳು ವಕೀಲರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದರು. ಪೇದೆ ಗುರುಪ್ರಸಾದ್ ನೀಡಿದ ದೂರಿನ ಮೇಲೆ ವಕೀಲ ಪ್ರೀತಮ್ ಮೇಲೂ ಎಫ್‌ಐಆರ್ ದಾಖಲಾಗಿದೆ. ವಕೀಲ ಪ್ರೀತಮ್ ಗುರುಪ್ರಸಾದ್‌ ಕಪ್ಪಾಳಕ್ಕೆ ಹೊಡಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಮೂರು ಬೇಡಿಕೆ ಇಟ್ಟ ಪೊಲೀಸರು

  1. ಅಮಾನತು ಆದೇಶ ವಾಪಸ್ ಪಡೆಯಬೇಕು.
  2. ಪ್ರಕರಣ ‌ದಾಖಲಾದ ಸಿಬ್ಬಂದಿ ಬಂಧನ ಮಾಡುವಂತಿಲ್ಲ.
  3. ಪ್ರಕರಣ ದಾಖಲಾದ ವಕೀಲರ ಮೇಲೆ‌ ಸೂಕ್ತ ಕ್ರಮಕೈಗೊಳ್ಳಬೇಕು.

ಏನಿದು ಪ್ರಕರಣ?

ಹೆಲ್ಮೆಟ್ ಹಾಕದಿರುವ ವಿಚಾರಕ್ಕೆ ವಕೀಲರನ್ನು ಠಾಣೆಗೆ ಕರೆದೊಯ್ದು ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಪೊಲೀಸರ ವಿರುದ್ಧ ಸಿಡಿದೆದ್ದ ರಾಜ್ಯ ವಕೀಲರ ಸಂಘ ಬೀದಿಗಿಳಿದು ಪ್ರತಿಭಟನೆ ನಡೆಸಿ ಖಾಕಿ ವಿರುದ್ಧ ಕೆಂಡ ಕಾರಿದ್ದರು. ಕಾಫಿನಾಡಲ್ಲಿ ವಕೀಲರ ಪ್ರತಿಭಟನೆ ಕ್ಷಣ ಕ್ಷಣಕ್ಕೂ ಕಾವು ಪಡೆಯುತ್ತಿದ್ದು, ಹಲ್ಲೆ ನಡೆಸಿದ ಪೊಲೀಸರನ್ನು ಬಂಧಿಸದಿದ್ದರೆ ಮುಂದೆ ಏನಾದರೂ ನಮಗೆ ಗೊತ್ತಿಲ್ಲ ಎಂದು ವಕೀಲರ ಪಡೆ ಖಡಕ್ ವಾರ್ನಿಂಗ್ ಕೊಟ್ಟಿತ್ತು.

ಅಂದಹಾಗೇ ಕಳೆದ ನವೆಂಬರ್‌ 30ರ ರಾತ್ರಿ 7 ಗಂಟೆ ಸುಮಾರಿಗೆ ಹೆಲ್ಮೆಟ್ ಧರಿಸಿದೆ ಹೋಗುತ್ತಿದ್ದ ವಕೀಲ ಪ್ರೀತಮ್‌ನನ್ನು ತಡೆದ ಪೊಲೀಸರು ಬೈಕ್‌ನಿಂದ ಕೆಳಗಿಳಿಸಿ ಕೀ ಕಿತ್ತುಕೊಂಡಿದ್ದರು. ಈ ವಿಚಾರ ದೊಡ್ಡದಾಗಿ ಬೈಕ್ ಸವಾರನನ್ನು ಠಾಣೆಗೆ ಕರೆದು ಕರೆದೊಯ್ದು ಹಿಗ್ಗಾ ಮುಗ್ಗ ಹಲ್ಲೆ ನಡೆಸಿರುವ ವಿಚಾರ ಇತರೆ ವಕೀಲರು ಸಿಟ್ಟಿಗೆಳುವಂತೆ ಮಾಡಿತ್ತು.

ದಂಡ ಹಾಕುವ ಬದಲು ಠಾಣೆಯಲ್ಲಿ ವಕೀಲ ಪ್ರೀತಮ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಚಿಕ್ಕಮಗಳೂರು ನಗರ ಠಾಣೆಯ ಮುಂದೆ ರಾತ್ರಿ ಇಡೀ ಪ್ರತಿಭಟನೆ ನಡೆಸಿ ಸುಖಾ ಸುಮ್ಮನೆ ಹಲ್ಲೆ ನಡೆಸಿದ ಪೊಲೀಸರನ್ನು ಬಂಧಿಸುವಂತೆ ವಕೀಲರು ಪಟ್ಟು ಹಿಡಿದಿದ್ದರು. ಚಿಕ್ಕಮಗಳೂರು ಎಸ್‌ಪಿ ವಿಕ್ರಂ ಅಮಟೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದರು ಪಟ್ಟು ಬಿಡದ ನೂರಾರು ವಕೀಲರು ಪೊಲೀಸರನ್ನು ಬಂಧಿಸಿಲೇ ಬೇಕೆಂದು ಒತ್ತಾಯ ಮಾಡಿದರು. ಬಳಿಕ ವಕೀಲರ ಪ್ರತಿಭಟನೆಗೆ ಮಣಿದ ಎಸ್‌ಪಿ ವಿಕ್ರಂ, ಓರ್ವ ಪಿಎಸ್ಐ, ಎಎಸ್‌ಐ ಸೇರಿ ಆರು ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.

ಕೋರ್ಟ್‌ ಕಲಾಪ ಬಹಿಷ್ಕರಿಸಿದ್ದ ವಕೀಲರು

ಇನ್ನೂ ಶುಕ್ರವಾರ ಜಿಲ್ಲಾ ನ್ಯಾಯಾಲಯದ ಮುಂದೆ ಪ್ರತಿಭಟನೆಗಳಿದ್ದ ನೂರಾರು ವಕೀಲರು, ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿ ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಪ್ರತಿಭಟನೆಗೆ ಬಂದಿದ್ದ ವಕೀಲರು, ತಪ್ಪಿತಸ್ಥ ಪೊಲೀಸರನ್ನು ಬಂಧಿಸಬೇಕು, ಹಲ್ಲೆಗಳಾದ ವಕೀಲ ಪ್ರೀತಂಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

Election Results 2023 : ತೆಲಂಗಾಣ ಶಾಸಕರನ್ನು ರೆಸಾರ್ಟ್‌ಗೆ ಕರೆತಂದು ಸೇವೆ ಮಾಡಿದ್ರೆ ಉಗ್ರ ಪ್ರತಿಭಟನೆ; ಆರ್.‌ ಅಶೋಕ್

Election Results 2023 : ರಾಜ್ಯದಲ್ಲಿ ಅಧಿವೇಶನ ಇದ್ದರೂ ನಮ್ಮ ಸಚಿವರು ತೆಲಂಗಾಣಕ್ಕೆ ಹೋಗಿ ಅಲ್ಲಿ ಸೇವೆ ಮಾಡುತ್ತಿದ್ದಾರೆ. ಮುಂದೆ ಇವರಿಗೆ ಜನರು ತಕ್ಕ ಪಾಠವನ್ನು ಕಲಿಸಲಿದ್ದಾರೆ. ಆದರೆ, ಇಲ್ಲಿ ಬರದ ಸ್ಥಿತಿಯನ್ನು ಇಟ್ಟುಕೊಂಡು ಈ ವೇಳೆ ರಾಜ್ಯದ ರೆಸಾರ್ಟ್‌ಗಳಿಗೆ ಅಲ್ಲಿನ ಶಾಸಕರನ್ನು ಕರೆತಂದು ನಮ್ಮ ಸಚಿವರು ಸೇವೆ ಮಾಡಲು ಮುಂದಾದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

VISTARANEWS.COM


on

R Ashok
Koo

ಬೆಂಗಳೂರು: ತೆಲಂಗಾಣ ಕಾಂಗ್ರೆಸ್‌ನವರಿಗೆ (Telangana Congress) ಧಮ್ ಇಲ್ಲ. ಬರಗಾಲ ಬಂದಾಗ ಸಿಎಂ ಸಿದ್ದರಾಮಯ್ಯ (CM Siddaramaiah) ಕಣ್ಣೀರು ಸುರಿಸಿದ್ದೇ ಸುರಿಸಿದ್ದು. ಇವಾಗ ಅವರದ್ದು ಬರೀ ಮೊಸಳೆ ಕಣ್ಣೀರು ಎಂಬುದು ಗೊತ್ತಾಗಿದೆ. ಅಧಿವೇಶನದಲ್ಲಿ ಬರದ ಬಗ್ಗೆ ಮಾತನಾಡೋದು ಬಿಟ್ಟು ಇಲ್ಲಿ ರೆಸಾರ್ಟ್‌ಗೆ ತೆಲಂಗಾಣದ ಶಾಸಕರನ್ನು ಕರೆತಂದು ಸಚಿವರು ಸೇವೆ ಮಾಡುತ್ತಾ ಕುಳಿತುಕೊಂಡರೆ ಪರಿಣಾಮ ನೆಟ್ಟಗಿರಲ್ಲ. ಅವರಿಗೆ ಹೋರಾಟ ಪ್ರತಿಭಟನೆಗಳ ಮೂಲಕ ತಕ್ಕ ಪಾಠವನ್ನು ಕಲಿಸುತ್ತೇವೆ ಎಂದು ಆರ್.‌ ಅಶೋಕ್ (R Ashok) ಹೇಳಿದರು. ಅಲ್ಲದೆ, ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ (Election Results 2023) ಬಿಜೆಪಿ ಮುನ್ನಡೆ ಸಾಧಿಸುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಆರ್.‌ ಅಶೋಕ್‌, ರಾಜ್ಯದಲ್ಲಿ ಅಧಿವೇಶನ ಇದ್ದರೂ ನಮ್ಮ ಸಚಿವರು ತೆಲಂಗಾಣಕ್ಕೆ ಹೋಗಿ ಸೇವೆ ಮಾಡುತ್ತಿದ್ದಾರೆ. ಮುಂದೆ ಇವರಿಗೆ ಜನರು ತಕ್ಕ ಪಾಠವನ್ನು ಕಲಿಸಲಿದ್ದಾರೆ. ಆದರೆ, ಇಲ್ಲಿ ಬರದ ಸ್ಥಿತಿಯನ್ನು ಇಟ್ಟುಕೊಂಡು ಈ ವೇಳೆ ರಾಜ್ಯದ ರೆಸಾರ್ಟ್‌ಗಳಿಗೆ ಅಲ್ಲಿನ ಶಾಸಕರನ್ನು ಕರೆತಂದು ನಮ್ಮ ಸಚಿವರು ಸೇವೆ ಮಾಡಲು ಮುಂದಾದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದರು.

ಗೆಲ್ಲುವ ರಾಜ್ಯಗಳಿಗೆ ಓಡಿ ಹೋಗುವ ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಅವರು ಗೆಲ್ಲುವ ರಾಜ್ಯಗಳಿಗೆಲ್ಲ ಓಡಿ ಹೋಗುತ್ತಾರೆ. ಮಧ್ಯಪ್ರದೇಶ ಗೆದ್ದರೂ ಅಲ್ಲಿಗೆ ಓಡಿ ಹೋಗುತ್ತಿದ್ದರು. ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಿಸಿ ಸಿಎಂ ಆಗಬೇಕು ಎಂಬ ಅವರ ಕನಸಿಗೆ ಇಲ್ಲಿರುವ ಸಿಎಂ ಸಿದ್ದರಾಮಯ್ಯ ಏನು ಮಾಡುತ್ತಾರೆ ಎಂಬುದನ್ನು ನೋಡಬೇಕಲ್ಲವೇ? ಪಾಪ ಶಿವಕುಮಾರ್‌ಗೆ ಸಿದ್ದರಾಮಯ್ಯ ಬಿಟ್ಟು ಕೊಡಬೇಕಲ್ಲ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ವ್ಯಂಗ್ಯವಾಡಿದ್ದಾರೆ.

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಎಲ್ಲ ಕಡೆ ಬಿಜೆಪಿ ಗೆಲುವಿನ ಹೊಸ್ತಿಲಿನಲ್ಲಿ ಇದೆ. ಗ್ಯಾರಂಟಿಗಳು ಎಲ್ಲ ಠುಸ್ ಪಟಾಕಿ ಎಂದು ಹೇಳಿದರು.

ಕಳೆದ ಬಾರಿ ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಸೋಲು ಕಂಡಿದ್ದೆವು. ತೆಲಂಗಾಣದಲ್ಲೂ ನಾವು ನಾಲ್ಕು ಸೀಟು ಪಡೆದಿದ್ದೇವೆ. ರಾಜಸ್ಥಾನ ಬಿಜೆಪಿ ಗೆಲ್ಲೋದು ನಿಶ್ಚಿತ. ತೆಲಂಗಾಣದಲ್ಲೂ ಬಿಜೆಪಿ ಹೆಚ್ಚು ಸೀಟುಗಳು ಬರುತ್ತಿದೆ. ಎಲ್ಲ ಕಡೆಯೂ ಬಿಜೆಪಿ ಜಯದ ಹೊಸ್ತಿಲಲ್ಲಿ ಇದೆ. ಇದೆಲ್ಲವೂ ನರೇಂದ್ರ ಮೋದಿಯವರ ವರ್ಚಸ್ಸಿನಿಂದ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಎಲ್ಲ ಕಡೆ ಟೋಪಿ ಹಾಕಿಕೊಂಡು‌ ಹೋಗಿ ಈ ನಮ್ಮ ಕಾಂಗ್ರೆಸ್ ನಾಯಕರು ತೆಲಂಗಾಣದ ರೆಸಾರ್ಟ್‌ನಲ್ಲಿ ಸರ್ವಿಸ್‌ ಕೊಡೋಕೆ ಹೋಗಿದ್ದಾರೆ. ಇದು ಒಂದು ನಾಚಿಕೆಗೇಡಿನ ಸಂಗತಿ ಎಂದು ಆರ್. ಅಶೋಕ್ ಕಿಡಿಕಾರಿದರು.

ಲೋಕಸಭಾ ಚುನಾವಣೆಯಲ್ಲಿ ಲಾಭ

ತೆಲಂಗಾಣದಲ್ಲಿ ಕೆಸಿಆರ್ ಕುಟುಂಬ ರಾಜಕಾರಣದಿಂದ ಹಿನ್ನಡೆ ಆಗಿದೆ. ಕಳೆದ ಚುನಾವಣೆಯಲ್ಲಿ ಈ ನಾಲ್ಕು ರಾಜ್ಯದಲ್ಲಿ ನಾವು ಸೋತ್ತಿದ್ದೆವು. ಆದರೆ, ಈ ಬಾರಿ ಎರಡು ರಾಜ್ಯದಲ್ಲಿ ಗೆಲುವು ಸಾಧಿಸಿದ್ದೇವೆ. ತೆಲಂಗಾಣದಲ್ಲಿ 11 ಸ್ಥಾನದಲ್ಲಿ ಮುನ್ನಡೆಯಲ್ಲಿದ್ದೇವೆ. ಕಳೆದ ಬಾರಿ ತೆಲಂಗಾಣದಲ್ಲಿ ನಾಲ್ಕು ಸ್ಥಾನ ಇತ್ತು. ಈಗ 11 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದೇವೆ. ದೊಡ್ಡ ದೊಡ್ಡ ರಾಜ್ಯದಲ್ಲಿ ಬಿಜೆಪಿ ಮುನ್ನಡೆಯನ್ನು ಕಂಡುಕೊಂಡಿದೆ. ಲೋಕಸಭಾ ಚುನಾವಣೆಯಲ್ಲಿ ಪರಿಣಾಮ ಬೀರಬಹುದಾದ ರಾಜ್ಯದಲ್ಲಿ ನಾವು ಮುಂದೆ ಇದ್ದೇವೆ ಎಂದು ಆರ್.‌ ಅಶೋಕ್ ಹೇಳಿದರು.

ತನ್ನ ತಪ್ಪಿನಿಂದಲೇ ಬಿಆರ್‌ಎಸ್ ತೆಲಂಗಾಣವನ್ನು ಕಳೆದುಕೊಂಡಿದೆ

ಬಿಆರ್‌ಎಸ್ ತೆಲಂಗಾಣದಲ್ಲಿ ಕುಟುಂಬ ರಾಜಕೀಯ ಮಾಡಿದೆ. ತನ್ನ ತಪ್ಪಿನಿಂದಲೇ ಬಿಆರ್‌ಎಸ್ ತೆಲಂಗಾಣವನ್ನು ಕಳೆದುಕೊಂಡಿದೆ. ಕಳೆದ ಬಾರಿ ಮಧ್ಯಪ್ರದೇಶ, ಛತ್ತಿಸ್‌ಗಡ, ರಾಜಸ್ಥಾನಗಳಲ್ಲಿ ಕಾಂಗ್ರೆಸ್ ಜಯ ಗಳಿಸಿತ್ತು. ಆದರೆ, ಈ ವರ್ಷ ಬಿಜೆಪಿ ಮುಂದಿದೆ. ಕರ್ನಾಟಕದಲ್ಲಿ ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಹೋಗುವ ವಿಚಾರ. ಈಗಿನ ಫಲಿತಾಂಶ ನೋಡಿದರೆ ಕಾಂಗ್ರೆಸ್‌ನವರೆ ಬಿಜೆಪಿಗೆ ಬರುವ ಸಾಧ್ಯತೆ ಇದೆ. ಕಾಂಗ್ರೆಸ್‌ನಲ್ಲೇ ಭಿನ್ನಮತೀಯ ಚಟುವಟಿಕೆ ಹೆಚ್ಚಾಗಿದೆ. ಬೆಳಗಾವಿ, ದಾವಣಗೆರೆ, ರಾಯಚೂರಿನಲ್ಲಿ ಕಾಂಗ್ರೆಸ್ ಭಿನ್ನಮತ ಶುರುವಾಗಿದೆ. ಕಾಂಗ್ರೆಸ್‌ನವರು ಅವರ ಕಾಲಿನ ಮೇಲೆ ಅವರೇ ಕಲ್ಲು ಹಾಕಿಕೊಳ್ಳುತ್ತಾರೆ ಎಂದು ಆರ್.‌ ಅಶೋಕ್‌ ಹೇಳಿದರು.

ನಾಳೆ ಅಧಿವೇಶನ ಇದ್ದರೂ ಡಿ.ಕೆ. ಶಿವಕುಮಾರ್‌ ಹಾಗೂ ಕೆಲವು ಸಚಿವರು ತೆಲಂಗಾಣಕ್ಕೆ ಹೋಗಿರುವ ವಿಚಾರ‌ದ ಬಗ್ಗೆ ಪ್ರತಿಕ್ರಿಯೆ ನೀಡಿದ ಆರ್.‌ ಅಶೋಕ್‌, ರಾಜ್ಯದಲ್ಲಿ ಬರ ಇದೆ‌. ಇಲ್ಲಿನ ರೈತರು ಬರಗಾಲದಲ್ಲಿ ಸಂಕಷ್ಟದಲ್ಲಿದ್ದರೂ ತೆಲಂಗಾಣಕ್ಕೆ ಹೋಗಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: Election Results 2023: ಚುನಾವಣೆ ಗೆಲುವು; ಬಿಜೆಪಿ ಕಚೇರಿಯಲ್ಲಿ ಮೋದಿ ಸ್ವಾಗತಕ್ಕೆ ಸಿದ್ಧತೆ; ಸಂಭ್ರಮ

ಲೋಕಸಭೆಯಲ್ಲೂ ಗ್ಯಾರಂಟಿ ಅಬ್ಬರ; ಜನ ತೀರ್ಮಾನ ಮಾಡ್ತಾರೆ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗ್ಯಾರಂಟಿ ಯೋಜನೆಗಳ ಅಬ್ಬರ ಬರಲಿದೆ. ಆದರೆ, ಜನ ತೀರ್ಮಾನ ಮಾಡುತ್ತಾರೆ. ಮೋದಿ ಸರ್ಕಾರ ಬೇಕಾ ಅಥವಾ ಮಮತಾ ಬ್ಯಾನರ್ಜಿ, ರಾಹುಲ್‌ನಂಥವರ ಸರ್ಕಾರ ಬೇಕಾ ಅಂತಾ ಜನ ತೀರ್ಮಾನ ಮಾಡಲಿ ಎಂದು ಆರ್.‌ ಅಶೋಕ್‌ ಹೇಳಿದರು.

Continue Reading

ಕರ್ನಾಟಕ

Telangana Results 2023 : ತೆಲಂಗಾಣದಲ್ಲಿ ಗೆದ್ದ‌ ಕೈ ಶಾಸಕರೆಲ್ಲರೂ ಹೈದರಾಬಾದ್‌ಗೆ ಶಿಫ್ಟ್

Telangana Results 2023 : ತೆಲಂಗಾಣದಲ್ಲಿ ಕಾಂಗ್ರೆಸ್‌ ವಿಜಯದ ಸನಿಹದಲ್ಲಿದೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಶಾಸಕರನ್ನು ಹೈದರಾಬಾದ್‌ ಗೆ ಬರುವಂತೆ ಸೂಚಿಸಲಾಗಿದೆ.

VISTARANEWS.COM


on

DK Shivakumar Telangana congress
ಹೈದರಾಬಾದ್‌ನ ಹೋಟೆಲ್‌ ಮುಂದೆ ಸಿದ್ಧವಾಗಿರುವ ಬಸ್‌ ಗಳು
Koo

ಬೆಂಗಳೂರು: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ (Telangana Results 2023) ಕಾಂಗ್ರೆಸ್‌ ಗೆಲುವಿನ ನಾಗಾಲೋಟದಲ್ಲಿದೆ. 119 ಕ್ಷೇತ್ರಗಳ ಪೈಕಿ 70ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಆಡಳಿತವನ್ನು ಕಳೆdದಕೊಳ್ಳುವುದು ಬಹುತೇಕ ನಿಶ್ಚಿತವಾಗಿದೆ.

ಈ ಹಂತದಲ್ಲಿ ಕಾಂಗ್ರೆಸ್‌ ತನ್ನೆಲ್ಲ ಸಂಭಾವ್ಯ ಶಾಸಕರನ್ನು ಹೈದರಾಬಾದ್‌ ಗೆ ಕರೆಸಿಕೊಳ್ಳಲಾಗಿದೆ. ಒಂದು ವೇಳೆ ಇನ್ನು ಫಲಿತಾಂಶದಲ್ಲಿ ಏನಾದರೂ ಏರುಪೇರು ಉಂಟಾದರೆ ಪರಿಸ್ಥಿತಿಯನ್ನು ಎದುರಿಸಲು ಈ ತಂತ್ರಗಾರಿಕೆ ಮಾಡಲಾಗಿದೆ. ಗೆಲುವು ಸನಿಹದಲ್ಲೇ ಇದ್ದರೂ ನಿರ್ಲಕ್ಷ್ಯ ಮಾಡುವುದು ಬೇಡ ಎಂಬ ಕಾರಣಕ್ಕಾಗಿ ಎಲ್ಲರನ್ನು ಒಂದೇ ಕಡೆ ಸೇರಿಸುವ ಪ್ಲ್ಯಾನ್‌ ಮಾಡಲಾಗಿದೆ.

ಅತಂತ್ರ ಪರಿಸ್ಥಿತಿ ಅಥವಾ ಸರಳ ಬಹುಮತ ಬಂದರೆ ಚೆಸ್ ಗೇಮ್ ಆಡಲು ಕಳುಹಿಸಿಕೊಟ್ಟಿರುವ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವ ಕರ್ನಾಟಕ ಕಾಂಗ್ರೆಸ್ ಟೀಮ್ ಸಜ್ಜಾಗಿ ನಿಂತಿದೆ. ಒಂದು ವೇಳೆ ಅವಶ್ಯ ಬಿದ್ದರೆ ಕಾಂಗ್ರೆಸ್‌ ನ ಎಲ್ಲ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್‌ ಮಾಡಲು ಮೂರು ಬಸ್‌ ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.

ಡಿ.ಕೆ ಶಿವಕುಮಾರ್, ಸಚಿವರಾದ ಜಮೀರ್ ಅಹ್ಮದ್, ನಾಗೇಂದ್ರ, ಬೋಸರಾಜು. ಕೆ ಜೆ ಜಾರ್ಜ್ , ಎಂ.ಸಿ ಸುಧಾಕರ್, ಶಾಸಕರಾದ ರಿಜ್ವಾನ್ ಅರ್ಷದ್, ಪ್ರಿಯಾಕೃಷ್ಣ, ಪ್ರದೀಪ್ ಈಶ್ವರ್, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ ಸೇರಿ ಹಲವು ನಾಯಕರು ಈಗ ಹೈದರಾಬಾದ್‌ನಲ್ಲೇ ಬೀಡುಬಿಟ್ಟಿದ್ದಾರೆ.

ಒಂದೊಮ್ಮೆ ಅಗತ್ಯಬಿದ್ದರೆ ರೆಸಾರ್ಟ್‌ ಗೆ ಕರೆದುಕೊಂಡು ಹೋಗಲು ಕೂಡಾ ವ್ಯವಸ್ಥೆ ಮಾಡಲಾಗಿದೆ. ಹೈದರಾಬಾದ್‌ ನ ಹೋಟೆಲ್‌ ಮುಂದೆ ನಿಂತಿರುವ ಬಸ್‌ಗಳನ್ನು ಈ ಕಾರಣಕ್ಕಾಗಿಯೇ ಸಿದ್ಧಪಡಿಸಿ ಇಡಲಾಗಿದೆ.

ತೆಲಂಗಾಣದ ಈಗಿನ ಮುನ್ನಡೆ ಪ್ರವೃತ್ತಿ ಹೇಗಿದೆ?

119 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 70 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಬಿ.ಆರ್‌ಎಸ್‌ 37ರಲ್ಲಿ, ಬಿಜೆಪಿ ಎಂಟು ಮತ್ತು ಎಐಎಂಐಎಂ ನಾಲ್ಕರಲ್ಲಿ ಮುನ್ನಡೆ ಸಾಧಿಸಿದೆ.

Continue Reading

ತುಮಕೂರು

Tumkur News: ಪ್ಯಾರಾ ಮೆಡಿಕಲ್ ಓದಿದವರಿಗೆ ವಿಫುಲ ಅವಕಾಶ: ಶಾಸಕ ಟಿ.ಬಿ.ಜಯಚಂದ್ರ

Tumkur News: ಶಿರಾ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಸರ್ಕಾರಿ ಅರೆ ವೈದ್ಯಕೀಯ (ಪ್ಯಾರಾ ಮೆಡಿಕಲ್ ) ನೂತನ ಕಾಲೇಜಿನ ಉದ್ಘಾಟನಾ ಕಾರ್ಯಕ್ರಮ ಜರುಗಿತು.

VISTARANEWS.COM


on

MLA T.B.Jayachandra spoke at the inauguration program of the new Para Medical College at Shira
ಶಿರಾ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಸರ್ಕಾರಿ ಅರೆ ವೈದ್ಯಕೀಯ (ಪ್ಯಾರಾ ಮೆಡಿಕಲ್ ) ನೂತನ ಕಾಲೇಜಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಟಿ.ಬಿ. ಜಯಚಂದ್ರ ಮಾತನಾಡಿದರು.
Koo

ಶಿರಾ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಸರ್ಕಾರಿ ಅರೆ ವೈದ್ಯಕೀಯ (ಪ್ಯಾರಾ ಮೆಡಿಕಲ್) (Para Medical) ನೂತನ ಕಾಲೇಜಿನ ಉದ್ಘಾಟನಾ ಕಾರ್ಯಕ್ರಮ ಜರುಗಿತು.

ನೂತನ ಸರ್ಕಾರಿ ಅರೆ ವೈದ್ಯಕೀಯ (ಪ್ಯಾರಾ ಮೆಡಿಕಲ್) ಕಾಲೇಜನ್ನು ಶಾಸಕ ಟಿ.ಬಿ. ಜಯಚಂದ್ರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ಯಾರಾ ಮೆಡಿಕಲ್ ಅಧ್ಯಯನ ಮಾಡಿದವರಿಗೆ ಸಾಕಷ್ಟು ಉದ್ಯೋಗ ಅವಕಾಶಗಳಿವೆ, ಈ ಭಾಗದ ಯುವಕ-ಯುವತಿಯರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Tsunami Warning: 7.6 ತೀವ್ರತೆಯ ಭೂಕಂಪ; ಭೀಕರ ಸುನಾಮಿಯ ವಾರ್ನಿಂಗ್‌!

ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ಅಡಳಿತ ಅಧಿಕಾರಿ ಡಾ. ಶ್ರೀಕಾಂತ್, ತಾಲೂಕು ವೈದ್ಯ ಅಧಿಕಾರಿ ಡಾ.ಸಿದ್ದೇಶ್ವರ್, ರಾಮಕೃಷ್ಣ ನರ್ಸಿಂಗ್ ಶಾಲೆಯ ಮುಖ್ಯಸ್ಥ ಡಾ. ರಾಮಕೃಷ್ಣಪ್ಪ, ಸ್ಥಳೀಯ ನಗರಸಭೆ ಸದಸ್ಯೆ ಉಮಾ ಸೇರಿದಂತೆ ಸಾರ್ವಜನಿಕ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

Continue Reading
Advertisement
election five states
ದೇಶ51 seconds ago

Election Results 2023: ಲೋಕಸಭೆ 65 ಸ್ಥಾನಗಳ ಮೇಲೆ ಇದೀಗ ಬಿಜೆಪಿ ಹಿಡಿತ! ಮೋದಿ ಹಾದಿ ಸುಲಭ!

Police call off protest FIR against lawyer who slapped police
ಕರ್ನಾಟಕ15 mins ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Shivraj Singh Chouhan
ದೇಶ17 mins ago

Ladli Behna: ಚೌಹಾಣ್‌ ‘ಗ್ಯಾರಂಟಿ’ಗೆ ಜೈ ಎಂದ ಮಧ್ಯಪ್ರದೇಶ ಜನ;‌ ಏನಿದು ಲಾಡ್ಲಿ ಬೆಹ್ನಾ?

Bobby Deol cries after paparazzi praise him as Animal
ಬಾಲಿವುಡ್20 mins ago

Bobby Deol: ʻಅನಿಮಲ್‌ʼ ಸಕ್ಸೆಸ್‌ ಹೊಗಳಿಕೆಗೆ ಕಣ್ಣೀರಿಟ್ಟ ನಟ ಬಾಬಿ ಡಿಯೋಲ್

R Ashok
ಕರ್ನಾಟಕ33 mins ago

Election Results 2023 : ತೆಲಂಗಾಣ ಶಾಸಕರನ್ನು ರೆಸಾರ್ಟ್‌ಗೆ ಕರೆತಂದು ಸೇವೆ ಮಾಡಿದ್ರೆ ಉಗ್ರ ಪ್ರತಿಭಟನೆ; ಆರ್.‌ ಅಶೋಕ್

Snehit Gowda and Namratha Gowda
ಬಿಗ್ ಬಾಸ್47 mins ago

BBK SEASON 10: ನಮ್ರತಾ ಮೇಲೆ ಸ್ಟ್ರಾಂಗ್​ ಫೀಲಿಂಗ್ಸ್ ಇದೆ ಎಂದ ಸ್ನೇಹಿತ್‌!

Narendra Modi
ದೇಶ54 mins ago

Election Results 2023: ಚುನಾವಣೆ ಗೆಲುವು; ಬಿಜೆಪಿ ಕಚೇರಿಯಲ್ಲಿ ಮೋದಿ ಸ್ವಾಗತಕ್ಕೆ ಸಿದ್ಧತೆ; ಸಂಭ್ರಮ

DK Shivakumar Telangana congress
ಕರ್ನಾಟಕ1 hour ago

Telangana Results 2023 : ತೆಲಂಗಾಣದಲ್ಲಿ ಗೆದ್ದ‌ ಕೈ ಶಾಸಕರೆಲ್ಲರೂ ಹೈದರಾಬಾದ್‌ಗೆ ಶಿಫ್ಟ್

MLA T.B.Jayachandra spoke at the inauguration program of the new Para Medical College at Shira
ತುಮಕೂರು1 hour ago

Tumkur News: ಪ್ಯಾರಾ ಮೆಡಿಕಲ್ ಓದಿದವರಿಗೆ ವಿಫುಲ ಅವಕಾಶ: ಶಾಸಕ ಟಿ.ಬಿ.ಜಯಚಂದ್ರ

Shivamogga News Arrest of the accused who went missing after raping a young woman at Ripponpet
ಕ್ರೈಂ1 hour ago

Shivamogga News: ರಿಪ್ಪನ್‌ಪೇಟೆ; ಅತ್ಯಾಚಾರ ಎಸಗಿ ನಾಪತ್ತೆಯಾಗಿದ್ದ ಆರೋಪಿ ಬಂಧನ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Police call off protest FIR against lawyer who slapped police
ಕರ್ನಾಟಕ15 mins ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ7 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ19 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

ಟ್ರೆಂಡಿಂಗ್‌