VISTARA TOP 10 NEWS : ಲಿಂಗಾಯತ ಸಿಎಂ ತಲ್ಲಣದಿಂದ ಮೋದಿ ಚುನಾವಣಾ ಪ್ರಚಾರ ಆರಂಭದವರೆಗೆ ಪ್ರಮುಖ ಸುದ್ದಿ - Vistara News

ಕರ್ನಾಟಕ

VISTARA TOP 10 NEWS : ಲಿಂಗಾಯತ ಸಿಎಂ ತಲ್ಲಣದಿಂದ ಮೋದಿ ಚುನಾವಣಾ ಪ್ರಚಾರ ಆರಂಭದವರೆಗೆ ಪ್ರಮುಖ ಸುದ್ದಿ

VISTARA TOP 10 NEWS: ರಾಜ್ಯದಲ್ಲಿ ಮತ್ತೆ ಲಿಂಗಾಯತ ಸಿಎಂ ಕೂಗೆದ್ದಿದೆ. ಅತ್ತ ಮೋದಿ ಅವರು ನಾಲ್ಕು ರಾಜ್ಯಗಳ ಚುನಾವಣೆಯ ಪ್ರಚಾರ ಶುರು ಮಾಡಿದ್ದಾರೆ. ಹೀಗೆ ಪ್ರಮುಖ ಸುದ್ದಿಗಳ ಗುಚ್ಛ.

VISTARANEWS.COM


on

Vistara top 10 News 3009
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. ರಾಜ್ಯದಲ್ಲಿ ಲಿಂಗಾಯತ ಸಿಎಂ ಕೂಗು; ಶಾಮನೂರು ಆಕ್ರೋಶಕ್ಕೆ ಕಾಂಗ್ರೆಸ್‌ನಲ್ಲಿ ತಲ್ಲಣ
ರಾಜ್ಯ ಕಾಂಗ್ರೆಸ್‌ನಲ್ಲಿ ಈಗ ಲಿಂಗಾಯತರ ಅವಗಣನೆ ಮತ್ತು ಲಿಂಗಾಯತರು ಸಿಎಂ ಆಗಬೇಕು (Lingayat CM Demdand) ಎಂಬ ಕೂಗೆದ್ದಿದೆ. ಲಿಂಗಾಯತ ಸಮುದಾಯದ ಹಿರಿಯ ನಾಯಕ, 92 ವರ್ಷದ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರ ಆಕ್ರೋಶದ ಒಂದು ನುಡಿ ಈ ರಾಜ್ಯ ಕಾಂಗ್ರೆಸ್‌ನಲ್ಲಿ ತಲ್ಲಣಗಳನ್ನು ಸೃಷ್ಟಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಪೂರಕ ಸುದ್ದಿ 1: ಛದ್ಮವೇಷಧಾರಿ ಸಿದ್ದರಾಮಯ್ಯ, ನೀವು ಯಾವ ಸೀಮೆ ಜಾತ್ಯತೀತ?: HDK ಫುಲ್‌ ಗರಂ
ಪೂರಕ ಸುದ್ದಿ 2: ಆಪರೇಷನ್‌ ಹಸ್ತ ತೀವ್ರ; ಜೆಡಿಎಸ್‌, ಬಿಜೆಪಿಯ ಇಬ್ಬರು ಮಾಜಿ ಶಾಸಕರು ಕೈವಶ

2. ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿ ಸೆರೆ; ಇವರೆಲ್ಲ ಹಿಂದೂ ಧರ್ಮ ವಿರೋಧಿಗಳು ಎಂದ!
ರಾಜ್ಯದ ಹಲವು ಸಾಹಿತಿಗಳು ಮತ್ತು ಚಿಂತಕರಿಗೆ ಸಾಲು ಸಾಲು ಬೆದರಿಕೆ ಪತ್ರ (Life threat) ಬರೆದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತ್ರ ಬರೆದ ದಾವಣಗೆರೆ ಮೂಲದ ಶಿವಾಜಿ ರಾವ್ ಹಿಂದೂ ಹಿಂದೂ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಪೂರಕ ಸುದ್ದಿ: ಚಿಂತಕರಿಗೆ ಬೆದರಿಕೆ ಹಾಕಿದ ಶಿವಾಜಿ ರಾವ್ ಬೆಳಗ್ಗೆ 4 ಗಂಟೆಗೆ ಎದ್ದು ಭಗವದ್ಗೀತೆ ಓದ್ತಿದ್ದ!

3. ಕೆಜಿ ಹಳ್ಳಿ ಗೋಲಿಬಾರ್‌ನಲ್ಲಿ ಸತ್ತವರು ಅಮಾಯಕರಲ್ಲ ಎಂದು ಒಪ್ಪಿಕೊಂಡ ಕಾಂಗ್ರೆಸ್ ಸರ್ಕಾರ
ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆ ವೇಳೆ ಕಿಡಿಗೇಡಿಗಳ ಗುಂಪಿನ ಮೇಲೆ ನಡೆದ ಗೋಲಿಬಾರ್‌ನಲ್ಲಿ (DJ Halli-KG Halli Golibar) ಸತ್ತವರು ಅಮಾಯಕರಲ್ಲ ಎಂದು ಕಾಂಗ್ರೆಸ್‌ ಸರ್ಕಾರ ಒಪ್ಪಿಕೊಂಡಿದೆ. ಈ ಕುರಿತ ಮ್ಯಾಜಿಸ್ಟ್ರೇಟ್‌ ವರದಿಯನ್ನು ಒಪ್ಪಿಕೊಳ್ಳುವ ಮೂಲಕ ಕಾಂಗ್ರೆಸ್‌ ಸರ್ಕಾರ, ಆ ಮೂಲಕ ಈ ಹಿಂದೆ ತಾನೇ ಮಾಡಿದ್ದ ಆರೋಪವನ್ನು ನಿರಾಕರಿಸಿದಂತಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಪೂರಕ ಸುದ್ದಿ: ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣ ವರದಿ ಯಥಾವತ್ತು ಸ್ವೀಕರಿಸಿರುವುದು ಸ್ವಾಗತಾರ್ಹ: ಬೊಮ್ಮಾಯಿ

4. ಕಾವೇರಿ ಪ್ರಾಧಿಕಾರದ ಮುಂದೆ ಮರುಪರಿಶೀಲನೆ ಅರ್ಜಿ ಸಲ್ಲಿಕೆ, ತೀರ್ಪು ನೋಡಿಕೊಂಡು ಸುಪ್ರೀಂಗೆ
ಸೆ. 28ರಿಂದ ಅಕ್ಟೋಬರ್‌ 15ರವರೆಗೆ ತಮಿಳುನಾಡಿಗೆ ಪ್ರತಿ ದಿನವೂ 3000 ಕ್ಯೂಸೆಕ್‌ ನೀರು ಹರಿಸಬೇಕು (Cauvery water Dispute) ಎಂಬ ಆದೇಶವನ್ನು ಮರುಪರಿಶೀಲಿಸಲು ಕೋರಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ರಾಜ್ಯ ಸರ್ಕಾರ ಶನಿವಾರ ಮರುಪರಿಶೀಲನೆ ಅರ್ಜಿ ಸಲ್ಲಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

5. ವಿಸ್ತಾರ ಅಂಕಣ: ಎಡಬಿಡಂಗಿ ಪಾಕಿಗಳನ್ನು ಕುಣಿಸುತ್ತಿರುವ ಅಮೆರಿಕದ ಬಗ್ಗೆ ಎಚ್ಚರ ವಹಿಸಬೇಕಿದೆ
ಒಂದೇ ದೇಶದ ರಾಯಭಾರಿಗಳು ಭಿನ್ನ ದೇಶಗಳಲ್ಲಿ ಭಿನ್ನ ನಿಲುವನ್ನು ತಳೆಯುತ್ತಾರೆ ಎಂದರೆ ಅದು ಅಮೆರಿಕದಿಂದ ಮಾತ್ರ ಸಾಧ್ಯ. ಹಾಗಾದರೆ ಈ ಗಿಲ್ಗಿಟ್-ಬಾಲ್ಟಿಸ್ತಾನಕ್ಕೆ ಅಮೆರಿಕ ರಾಯಭಾರಿ ಭೇಟಿ ನೀಡಿದ್ದೇಕೆ? ಅದರ ಮಹತ್ವವೇನು? ಎನ್ನುವುದನ್ನು ವಿಶ್ಲೇಷಿಸಿದ್ದಾರೆ ವಿಸ್ತಾರ ನ್ಯೂಸ್‌ನ ಪ್ರಧಾನ ಸಂಪಾದಕರಾದ ಹರಿಪ್ರಕಾಶ್‌ ಕೋಣೆಮನೆ ತಮ್ಮ ವಿಸ್ತಾರ ಅಂಕಣದಲ್ಲಿ. ಪೂರ್ಣ ಲೇಖನ ಓದಲು ಈ ಲಿಂಕ್‌ ಕ್ಲಿಕ್‌ ಮಾಡಿ

6. 4 ರಾಜ್ಯ, 6 ದಿನ, 8 ರ‍್ಯಾಲಿ; ಚುನಾವಣಾ ರಾಜ್ಯಗಳಲ್ಲಿ ಪ್ರಧಾನಿ ಮೋದಿ ಸುತ್ತಾಟ!
ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Narendra Modi) ಮುಂಬರುವ ತಿಂಗಳುಗಳಲ್ಲಿ ಚುನಾವಣೆ ನಡೆಯಲಿರುವ ನಾಲ್ಕು ರಾಜ್ಯಗಳಾದ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ಆರು ದಿನಗಳ ಕಾಲ ಮೆಗಾ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. Financial Rules: ನಾಳೆಯಿಂದ 10 ಪ್ರಮುಖ ನಿಯಮಗಳ ಬದಲಾವಣೆ; ತಿಳಿಯದಿದ್ದರೆ ಲಾಸ್‌ ತಪ್ಪಿದ್ದಲ್ಲ!
ಹಣಕಾಸು, ವಿಮೆ. ಡಿಜಿಟಲ್‌ ಸೇರಿ ಹಲವು ಕ್ಷೇತ್ರಗಳಲ್ಲಿ ಅಕ್ಟೋಬರ್‌ 1ರಿಂದ ನಿಯಮಗಳು ಬದಲಾಗಿವೆ. ಇವೆಲ್ಲ ತಿಳಿದುಕೊಳ್ಳುವ ಮೂಲಕ ಹಣ ಹಾಗೂ ಸಮಯ ಉಳಿಸಿರಿ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. World Cup History: ಲಾರ್ಡ್ಸ್​ ಅಂಗಳದಲ್ಲಿ ಚೊಚ್ಚಲ ವಿಶ್ವಕಪ್​ ಎತ್ತಿದ ಕಪಿಲ್ ಡೆವಿಲ್ಸ್
ಕೆಟ್‌ನಲ್ಲಿ ಅಚ್ಚರಿ,ಅನಿರೀಕ್ಷಿತ, ಅದ್ಭುತ, ಪವಾಡ ಇವೆಲ್ಲವೂ ಏಕಕಾಲದಲ್ಲಿ ಸಂಭವಿಸುತ್ತದೆ ಎನ್ನುವ ಮಾತನ್ನು ಜಗತ್ತಿಗೆ ತೋರಿಸಿಕೊಟ್ಟಿದ್ದು 1983ರ(1983 Cricket World Cup) ವಿಶ್ವಕಪ್‌. ಅದರಲ್ಲಿ ಕಪಿಲ್‌ ದೇವ್‌ ಸಾರಥ್ಯದ ಭಾರತ ತಂಡ ನೂತನ ವಿಶ್ವ ಚಾಂಪಿಯನ್‌ ಆಗಿ ಮೂಡಿಬಂದಿತ್ತು! ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

9. Raja Marga Column : ಅಸ್ಮಿತಾಯ್: ಕೊಂಕಣಿ ಭಾಷೆ, ಸಂಸ್ಕೃತಿ, ಸಂಪ್ರದಾಯಗಳ ವಿರಾಟ್ ಕ್ಯಾನ್ವಾಸ್
ಕೊಂಕಣಿ ಭಾಷೆಯಲ್ಲೊಂದು ಅದ್ಭುತವಾದ ಸಿನಿಮಾ ಬಂದಿದೆ. ಹೆಸರು ಅಸ್ಮಿತಾಯ್. ಆಂತರ್ಯದಲ್ಲೊಂದು ಪ್ರೀತಿ ಕಥೆಯನ್ನು ಹೊತ್ತು ಸಾಗುವ ಈ ಸಿನಿಮಾದಲ್ಲಿ ದೊಡ್ಡ ಮಟ್ಟದಲ್ಲಿ ಡಿಪಿಕ್ಟ್‌ ಆಗುವುದು ಮಹೋನ್ನತವಾದ ಕೊಂಕಣಿ ಭಾಷೆ, ಸಂಸ್ಕೃತಿ ಮತ್ತು ಸಂಪ್ರದಾಯಗಳ ವಿರಾಟ್‌ ಸ್ವರೂಪಗಳು. ಪೂರ್ಣ ಲೇಖನಕ್ಕೆ ಈ ಲಿಂಕ್‌ ಕ್ಲಿಕ್‌ ಮಾಡಿ

10.Heart Touching Video: 1 ವರ್ಷದ ಬಳಿಕ ಭೇಟಿಯಾದ ಸಾಕುತಂದೆ; ಶ್ವಾನ ಮಾಡಿದ್ದೇನು?
ʼ777 ಚಾರ್ಲಿʼ ಕನ್ನಡ ಚಿತ್ರದಲ್ಲಿ ತೋರಿಸಿರುವಂತೆ ಮಾನವ ಶ್ವಾನ ನಡುವಿನ ಬಾಂಧವ್ಯದ ವಿಡಿಯೊವೊಂದು ವೈರಲ್‌ ಆಗಿದೆ. ವರ್ಷದ ಬಳಿಕ ಭೇಟಿಯಾದ ಸಾಕು ತಂದೆಯ ಮೇಲಿನ ಶ್ವಾನದ ಪ್ರೀತಿ ನೋಡಿ ನೆಟ್ಟಿಗರು ಭಾವುಕರಾಗಿದ್ದಾರೆ. ಪೂರ್ಣ ಲೇಖನಕ್ಕೆ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Namma Metro : ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಝೀರೋ-ಕೆವೈಸಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಲಭ್ಯ

Namma Metro: ಭಾರತೀಯ ರಿಸರ್ವ್ ಬ್ಯಾಂಕ್‌ನ ನಿರ್ದೇಶನಕ್ಕೆ ಅನುಗುಣವಾಗಿ ಎಜಿಎಸ್ ಟ್ರಾನ್ಸಾಕ್ಟ್ ಟೆಕ್ನಾಲಜೀಸ್ ಲಿಮಿಟೆಡ್ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಅನುಕೂಲಕರ ಮತ್ತು ಅತ್ಯುತ್ತಮ ಸೌಲಭ್ಯ ಒದಗಿಸುವ ಸಲುವಾಗಿ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್‌ಗಾಗಿ ಝೀರೋ ಕೆವೈಸಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (ಎನ್‌ಸಿಎಂಸಿ) ಅನಾವರಣಗೊಳಿಸಿದೆ.

VISTARANEWS.COM


on

By

namma Metro
Koo

ಬೆಂಗಳೂರು: ಭಾರತದ ಪ್ರಮುಖ ಸಂಯೋಜಿತ ಓಮ್ನಿಚಾನಲ್ ಪೇಮೆಂಟ್ಸ್ ಪೂರೈಕೆದಾರರಲ್ಲಿ ಒಂದಾಗಿರುವ ಎಜಿಎಸ್ ಟ್ರಾನ್ಸಾಕ್ಟ್ ಟೆಕ್ನಾಲಜೀಸ್ ಲಿಮಿಟೆಡ್ ಮಂಗಳವಾರ ತಾನು ಆರ್‌ಬಿಎಲ್‌ ಬ್ಯಾಂಕ್ ಸಹಭಾಗಿತ್ವದಲ್ಲಿ ಬೆಂಗಳೂರು ಮೆಟ್ರೋ ರೇಲ್ ಕಾರ್ಪೊರೇಷನ್‌ಗಾಗಿ (Namma Metro) ಝೀರೋ-ಕೆವೈಸಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (ಎನ್‌ಸಿಎಂಸಿ) ವಿತರಣೆ ಆರಂಭಿಸಿರುವುದಾಗಿ ಘೋಷಿಸಿದೆ. ಸಂಪೂರ್ಣ ಕೆವೈಸಿ ಅಗತ್ಯವಿಲ್ಲದೇ ಇರುವುರಿಂದ ಈ ಕಾರ್ಡ್ ಅನ್ನು ಸಕ್ರಿಯಗೊಳಿಸಬಹುದಾದ್ದರಿಂದ ಬಳಕೆದಾರರಿಗೆ ಎನ್‌ಸಿಎಂಸಿಯನ್ನು ವೇಗವಾಗಿ ವಿತರಿಸಬಹುದಾಗಿದೆ. ಪ್ರಯಾಣಿಕರು ಝೀರೋ-ಕೆವೈಸಿ ಎನ್‌ಸಿಎಂಸಿಗೆ ಗರಿಷ್ಠ ರೂ.2,000 ಅನ್ನು ಟಾಪ್ ಅಪ್ ಮಾಡಬಹುದು. ಈ ಕಾರ್ಡ್ ಅನ್ನು ಮೆಟ್ರೋ, ಬಸ್, ವಾಟರ್ ಮೆಟ್ರೋ, ಪಾರ್ಕಿಂಗ್ ಮತ್ತು ಟೋಲ್‌ನಂತಹ ಎಲ್ಲಾ ಟಚ್ ಪಾಯಿಂಟ್‌ಗಳಲ್ಲಿ ಬಳಸಬಹುದು.

ಎಜಿಎಸ್ ಟ್ರಾನ್ಸಾಕ್ಟ್ 2023ರ ಮಾರ್ಚ್‌ನಿಂದ ಆರ್‌ಬಿಎಲ್‌ ಬ್ಯಾಂಕ್ ಸಹಭಾಗಿತ್ವದಲ್ಲಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಶನ್‌ನಲ್ಲಿ ಎನ್‌ಸಿಎಂಸಿ ಅನ್ನು ನೀಡುತ್ತಿದೆ. ಇಂದಿನಿಂದ, ಕಂಪನಿಯು ಬಿಎಂಆರ್‌ಸಿಎಲ್‌ಗೆ ಇಲ್ಲಿಯವರೆಗೆ 57,000ಕ್ಕೂ ಹೆಚ್ಚು ಎನ್‌ಸಿಎಂಸಿಗಳನ್ನು ನೀಡಿದೆ.

ಭಾರತ ಸರ್ಕಾರದ ಒಂದು ಕಾರ್ಡ್ ಒಂದು ದೇಶ ಯೋಜನೆಗೆ ಅನುಗುಣವಾಗಿ ಝೀರೋ- ಕೆವೈಸಿ ಎನ್‌ಸಿಎಂಸಿ ಅನ್ನು ಬಿಡುಗಡೆ ಮಾಡಲಾಗಿದ್ದು, ಈ ಯೋಜನೆಯು ಭಾರತದ ಸಾರಿಗೆ ಕ್ಷೇತ್ರದ ಭವಿಷ್ಯದಲ್ಲಿ ಭಾರಿ ಬದಲಾವಣೆ ಮಾಡುವ ನಿರೀಕ್ಷೆ ಇದೆ. ಪ್ರಸ್ತುತ ಕ್ಲೋಸ್ಡ್-ಲೂಪ್ ಟ್ರಾನ್ಸಿಟ್ ಕಾರ್ಡ್‌ಗಳನ್ನು ಭಾರತದಲ್ಲಿ ಮೆಟ್ರೋ ಅಥವಾ ಬಸ್ ಸಂಚಾರಕ್ಕೆ ನಿರ್ದಿಷ್ಟವಾಗಿ ಬಳಸಲಾಗುತ್ತದೆ. ಆದರೆ ಎನ್‌ಸಿಎಂಸಿಗಳನ್ನು ದೇಶದಾದ್ಯಂತ ಇರುವ ಎಲ್ಲಾ ಎನ್‌ಸಿಎಂಸಿ ಲಭ್ಯ ಇರುವ ಸ್ಥಳಗಳಲ್ಲಿ ಬಳಸಬಹುದಾಗಿದೆ. ಎಜಿಎಸ್ ಟ್ರಾನ್ಸಾಕ್ಟ್ ಟೆಕ್ನಾಲಜೀಸ್‌ನ ಝೀರೋ-ಕೆವೈಸಿ ಎನ್‌ಸಿಎಂಸಿಯು ಗ್ರಾಹಕರಿಗೆ ಕೆವೈಸಿ ವೆರಿಫಿಕೇಷನ್ ತೊಂದರೆಯಿಂದ ಮುಕ್ತಗೊಳಿಸುತ್ತದೆ. ವೇಗವಾಗಿ, ಹೆಚ್ಚು ಅನುಕೂಲಕರ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ವಿವಿಧ ಸಾರಿಗೆ ವಿಭಾಗಗಳಲ್ಲಿ ಅನುಕೂಲಕರ ಮತ್ತು ಸುಲಭ ಪಾವತಿ ಮಾಡುವ ಸೌಲಭ್ಯ ಒದಗಿಸುತ್ತದೆ.

ಎಜಿಎಸ್ ಟ್ರಾನ್ಸಾಕ್ಟ್ ಟೆಕ್ನಾಲಜೀಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ಎಂಡಿ ರವಿ ಬಿ ಗೋಯಲ್ ಮಾತನಾಡಿ , “ನಮ್ಮ ಗ್ರಾಹಕರಿಗೆ ಅನುಕೂಲವಾಗುವಂತಹ ಪಾವತಿ ಸೌಲಭ್ಯ ಒದಗಿಸುವ ಮೂಲಕ ಈ ವಿಭಾಗದಲ್ಲಿ ಮಹತ್ವದ ಪಾತ್ರ ವಹಿಸಲು ನಾವು ಬದ್ಧರಾಗಿದ್ದೇವೆ. ಗ್ರಾಹಕರಿಗೆ ತೊಂದರೆ ಮುಕ್ತ ಮತ್ತು ಸುಲಭವಾದ ಸಾರಿಗೆ ವ್ಯವಸ್ಥೆ ಕಲ್ಪಿಸುವ ಬಿಎಂಆರ್‌ಸಿಎಲ್‌ನ ಯೋಜನೆಗೆ ನೆರವಾಗಲು ನಮಗೆ ಸಂತೋಷ ಇದೆ. ಬೆಂಗಳೂರಿನಲ್ಲಿ ನಾವು ಮೊದಲು ಎನ್‌ಸಿಎಂಸಿ ಅನ್ನು ಬಿಡುಗಡೆ ಮಾಡಿದಾಗಿನಿಂದಲೂ ಅದರ ಸರಳ ಬಳಕೆ ವಿಧಾನ ಮತ್ತು ಸುಲಭವಾಗಿ ಟಾಪ್-ಅಪ್‌ ಮಾಡುವ ಸೌಲಭ್ಯಗಳಿಂದಾಹಿ ಹೆಚ್ಚಿನ ಪ್ರಯಾಣಿಕರು ಆಸಕ್ತಿ ತೋರಿಸಿದ್ದಾರೆ. ಝೀರೋ ಕೆವೈಸಿ ಎನ್‌ಸಿಎಂಸಿಯ ವೇಗದ ವಿತರಣೆ ಮಾಡುವ ಮೂಲಕ ಹೆಚ್ಚು ಗ್ರಾಹಕರಿಗೆ ಅಚ್ಚುಮೆಚ್ಚಿನದಾಗುತ್ತದೆ ಮತ್ತು ಆ ಮೂಲಕ ಎನ್‌ಸಿಎಂಸಿ ಬಳಕೆ ಹೆಚ್ಚಾಗಲಿದೆ ಎಂಬ ನಂಬಿಕೆ ನಮಗಿದೆ’’ ಎಂದು ಹೇಳಿದರು.

ಪ್ರಯಾಣಿಕರು ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿನ ಟಿಕೆಟ್ ಕೌಂಟರ್‌ಗಳಿಂದ ಎಜಿಎಸ್ ಟ್ರಾನ್ಸಾಕ್ಟ್ ಟೆಕ್ನಾಲಜೀಸ್ ವಿತರಣೆ ಮಾಡುವ ಝೀರೋ ಕೆವೈಸಿ ಎನ್‌ಸಿಎಂಸಿಗಳನ್ನು ಖರೀದಿಸಬಹುದು ಮತ್ತು ಅನುಕೂಲಕರವಾಗಿ ಟಾಪ್ ಅಪ್ ಮಾಡಬಹುದು.

Continue Reading

ಬೆಂಗಳೂರು ಗ್ರಾಮಾಂತರ

Murder Case: ಆನೇಕಲ್‌ನಲ್ಲಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ

Murder Case : ಕುಡಿದು ಬಂದು ಗಲಾಟೆ ಮಾಡುತ್ತಿದ್ದ ತಮ್ಮನನ್ನು ಅಣ್ಣನೇ ದೊಣ್ಣೆಯಿಂದ ಹೊಡೆದು ಕೊಂದು ಹಾಕಿದ್ದಾನೆ. ಸರ್ಜಾಪುರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Murder Case
Koo

ಆನೇಕಲ್: ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ (Murder Case) ನಡೆದಿದೆ. ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ಪಂಡಿತನ ಅಗ್ರಹಾರದಲ್ಲಿ ಘಟನೆ ನಡೆದಿದೆ. ಆನಂದ (27) ಕೊಲೆಯಾದವರು.

ಮಣಿಕಂಠ(32) ಕೊಲೆ ಮಾಡಿದ ಆರೋಪಿ ಆಗಿದ್ದಾನೆ. ತಮಿಳುನಾಡು ಮೂಲದ ಈ ಅಣ್ಣ-ತಮ್ಮಂದಿರು ಪಂಡಿತನ ಅಗ್ರಹಾರದಲ್ಲಿ ಗಾರೆ ಕೆಲಸಕ್ಕಾಗಿ ಬಂದಿದ್ದರು. ನಿರ್ಮಾಣ ಹಂತದ ಕಟ್ಟಡದಲ್ಲಿ ಆನಂದ್ ತಂದೆ-ತಾಯಿ ಜತೆಗೆ ವಾಸವಿದ್ದರೆ, ಇತ್ತ ಮಣಿಕಂಠ ಮಂಡ್ಯದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ.

ನಿನ್ನೆ ತಂದೆ-ತಾಯಿಯನ್ನು ನೋಡಿಕೊಂಡು ಹೋಗಲು ಮಣಿಕಂಠ ಬಂದಿದ್ದ. ಆನಂದ ಕುಡಿದು ಬಂದು ನಿತ್ಯ ಗಲಾಟೆ ಮಾಡುತ್ತಿದ್ದ. ಸುಖಾ ಸುಮ್ಮನೆ ತಂದೆ, ತಾಯಿ, ಅಣ್ಣನ ಜತೆಗೆ ಕಿರಿಕ್ ತೆಗೆಯುತ್ತಿದ್ದ. ಕಳೆದ ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಕುಡಿದು ಬಂದು ಆನಂದ ಗಲಾಟೆ ಮಾಡಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ದೊಣ್ಣೆಯಿಂದ ಮಣಿಕಂಠ ಆನಂದ್‌ಗೆ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಆನಂದ್‌ ಸ್ಥಳದಲ್ಲೆ ಮೃತಪಟ್ಟಿದ್ದಾನೆ.

Murder case
Murder case

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸರ್ಜಾಪುರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಆಕ್ಸ್‌ಫರ್ಡ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಆರೋಪಿ ಮಣಿಕಂಠನನ್ನು ಸರ್ಜಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Continue Reading

ಬೆಂಗಳೂರು

Breast cancer: ಬೈಕಥಾನ್‌ ಮೂಲಕ ಗಲ್ಲಿ ಗಲ್ಲಿಯಲ್ಲೂ ಸ್ತನ ಕ್ಯಾನ್ಸರ್‌ ಜಾಗೃತಿ ಮೂಡಿಸಿದ ಬೈಕರ್ಸ್‌ಗಳು

Breast cancer : ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಬೈಕಥಾನ್‌ ಆಯೋಜನೆ ಮಾಡಲಾಗಿತ್ತು.

VISTARANEWS.COM


on

By

Breast Cancer Awareness Month celebrated through bikethon
Koo

ಬೆಂಗಳೂರು: ಸ್ತನಕ್ಯಾನ್ಸರ್‌ (Breast cancer) ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಪಿಂಕ್‌ ವುಮೆನ್ಸ್‌ ಶೀರ್ಷಿಕೆಯಡಿ ಬೈಕಥಾನ್‌ ಆಯೋಜಿಸಿತ್ತು. ಸ್ತನಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ನಡೆದ ಈ ಬೈಕಥಾನ್‌ ಕೆ.ಆರ್‌. ರಸ್ತೆಯ ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದಿಂದ ಸೋಮವಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭಗೊಂಡು, ಎಂ.ಜಿ. ರಸ್ತೆ, ಟ್ರಿನಿಟಿ ಸರ್ಕಲ್‌, ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು.

Breast Cancer Awareness Month celebrated through bikethon

180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ ಆದ್ಯತೆ ನೀಡುವ ಕುರಿತು ಜಾಗೃತಿ ಮೂಡಿಸಿದರು. ಇದಷ್ಟೇ ಅಲ್ಲದೆ, ಬೈಕಥಾನ್‌ಗೂ ಮುನ್ನ, ಜುಂಬಾ ಸೆಷನ್‌, ಮೈಕಲ್‌ ಜಾಕ್ಸನ್‌ ಅವರ “ಡೇಂಜರಸ್‌” ಪ್ರೇರಿತಗೊಂಡ ಸ್ಟೆಪ್ಸ್‌ ಹಾಕುವ ಮೂಲಕ ಸ್ತನ ಕ್ಯಾನ್ಸರ್‌ ಆರಂಭಿಕ ಪತ್ತೆಯ ಬಗ್ಗೆ “ಬೀಟ್ ಇಟ್” ಶೀರ್ಷಿಕೆಯ ಫಲಕಗಳನ್ನು ಹಿಡಿದು ವಿಭಿನ್ನವಾಗಿ ಜಾಗೃತಿ ಮೂಡಿಸಿದರು.

ಎಚ್‌ಸಿಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಶಾ ಕುಮಾರ್, ಮೆಡಿಕಲ್‌ ಆಂಕೊಲಾಜಿಸ್ಟ್ ಡಾ. ರೋಶನಿ ದಾಸ್‌ಗುಪ್ತ, ಸರ್ಜಿಕಲ್ ಆಂಕೊಲಾಜಿಸ್ಟ್ ಡಾ ಮಹೇಶ್ ಬಂಡೇಮೆಗಲ್ ಈ ಬೈಕಥಾನ್‌ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಮನೀಶಾ ಕುಮಾರ್, ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚಾಗಿ ಸ್ತನಕ್ಯಾನ್ಸರ್‌ ಕಾಡುತ್ತಿರುವುದು ಆತಂಕಕಾರಿ ಬೆಳವಣಿಗೆ. ಆರಂಭದಲ್ಲಿಯೇ ಈ ಕ್ಯಾನ್ಸರ್‌ನನ್ನು ಪತ್ತೆ ಹಚ್ಚಿದರೆ ಸುಲಭವಾಗಿ ಚಿಕಿತ್ಸೆ ಮೂಲಕ ಗುಣಪಡಿಸಬಹುದು. ನಾವಷ್ಟೇ ಜಾಗೃತರಾದೆ ಸಾಲದು, ನಮ್ಮ ಸುತ್ತಮುತ್ತ ಹಾಗೂ ಗ್ರಾಮೀಣ ಭಾಗದ ಮಹಿಳೆಯರಿಗೂ ಕೂಡ ಈ ಬಗ್ಗೆ ಅರಿವು ಮೂಡಿಸಬೇಕು. ಆಗಷ್ಟೇ ಎಲ್ಲರಿಗೂ ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಲಿದೆ. ಮಹಿಳಾ ಬೈಕರ್ಸ್‌ಗಳು ವಿಶೇಷವಾಗಿ ಬೈಕ್‌ ಸವಾರಿ ಮೂಲಕ ಈ ಬಗ್ಗೆ ಜಾಗೃತಿ ಮೂಡಿಸಿದ್ದು ಪ್ರಶಂಸನೀಯ ಎಂದರು.

ಮೆಡಿಕಲ್‌ ಆಂಕೊಲಾಜಿಸ್ಟ್ ಡಾ ರೋಶನಿ ದಾಸ್‌ಗುಪ್ತ ಮಾತನಾಡಿ, ಸ್ತನಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸಿದಷ್ಟೂ ಈ ಬಗ್ಗೆ ಭಯಗೊಳ್ಳುವವರ ಸಂಖ್ಯೆಯೂ ಕಡಿಮೆಯಾಗಲಿದೆ. ಜನರು ಈ ಕ್ಯಾನ್ಸರ್‌ನ ಪ್ರಾರಂಭದಲ್ಲಿಯೇ ಪತ್ತೆ ಹಚ್ಚಿ, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಈ ರೋಗದಿಂದ ಮುಕ್ತಿಗೊಂಡು ಎಂದಿನಂತೆ ಜೀವನ ನಡೆಸಬಹುದು, ಹೀಗಾಗಿ ಜನರು ಈ ಬಗ್ಗೆ ಹೆಚ್ಚು ಜಾಗೃತರಾಗುವುದು ಒಳಿತು ಎಂದು ಸಲಹೆ ನೀಡಿದರು.

ಸರ್ಜಿಕಲ್ ಆಂಕೊಲಾಜಿಸ್ಟ್ ಡಾ. ಮಹೇಶ್ ಬಂಡೇಮೆಗಲ್ ಮಾತನಾಡಿ, “ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳಂದು ಪಿಂಕ್ ಮಹಿಳಾ ಬೈಕ್‌ಥಾನ್ 2024 ನಂತಹ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಅವಶ್ಯಕತೆ ಹೆಚ್ಚಿದೆ. ಇದರಿಂದಲಾದರೂ ಮಹಿಳೆಯರು ಎಚ್ಚೆತ್ತುಕೊಳ್ಳುತ್ತಾರೆ ಎಂದು ಹೇಳಿದರು.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain
Karnataka rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain
Karnataka rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain
Karnataka rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru
Karnataka rain

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain
Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading
Advertisement
Dina Bhavishya
ಭವಿಷ್ಯ1 ದಿನ ago

Dina Bhavishya : ಈ ದಿನ ಹೂಡಿಕೆ ವ್ಯವಹಾರದಿಂದ ದೂರವಿರಿ

Dina bhavishya
ಭವಿಷ್ಯ2 ದಿನಗಳು ago

Dina Bhavishya: ಈ ರಾಶಿಯವರಿಗೆ ಉತ್ಸಾಹದ ವಾತಾವರಣ; ಆಪ್ತರೊಂದಿಗೆ ಪ್ರಯಾಣ ಸಾಧ್ಯತೆ

namma Metro
ಬೆಂಗಳೂರು3 ದಿನಗಳು ago

Namma Metro : ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಝೀರೋ-ಕೆವೈಸಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಲಭ್ಯ

Murder Case
ಬೆಂಗಳೂರು ಗ್ರಾಮಾಂತರ3 ದಿನಗಳು ago

Murder Case: ಆನೇಕಲ್‌ನಲ್ಲಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ

Dina bhavishya
ಭವಿಷ್ಯ3 ದಿನಗಳು ago

Dina Bhavishya: ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ; ಮಾತಿನಲ್ಲಿ ಹಿಡಿತವಿರಲಿ

Breast Cancer Awareness Month celebrated through bikethon
ಬೆಂಗಳೂರು4 ದಿನಗಳು ago

Breast cancer: ಬೈಕಥಾನ್‌ ಮೂಲಕ ಗಲ್ಲಿ ಗಲ್ಲಿಯಲ್ಲೂ ಸ್ತನ ಕ್ಯಾನ್ಸರ್‌ ಜಾಗೃತಿ ಮೂಡಿಸಿದ ಬೈಕರ್ಸ್‌ಗಳು

Karnataka Rain
ಮಳೆ4 ದಿನಗಳು ago

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain
ಮಳೆ4 ದಿನಗಳು ago

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Dina Bhavishya
ಭವಿಷ್ಯ4 ದಿನಗಳು ago

Dina Bhavishya : ಹೂಡಿಕೆ ವ್ಯವಹಾರಗಳನ್ನು ಈ ದಿನ ಮಾಡುವುದು ಬೇಡವೇ ಬೇಡ

Karnataka Rain
ಮಳೆ5 ದಿನಗಳು ago

Karnataka Rain: ತೊಯ್ದು ತೊಪ್ಪೆಯಾದ ಚಿಕ್ಕಮಗಳೂರು, ಶಿವಮೊಗ್ಗ; ನಾಳೆಗೂ ಭಾರಿ ಮಳೆ ಎಚ್ಚರಿಕೆ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌