Site icon Vistara News

VISTARA TOP 10 NEWS: ನಾಡಗೀತೆಯಲ್ಲೂ ಸರಕಾರ ಎಡವಟ್ಟು ಪಬ್ಲಿಕ್‌ ಪ್ಲೇಸಲ್ಲಿ ಸೇದಬಾರದು ಸಿಗರೇಟು.. ಮತ್ತು ಇತರ ಸುದ್ದಿಗಳು

vistara top ten

1.ಇನ್ನೊಂದು ಎಡವಟ್ಟು; ಖಾಸಗಿ ಶಾಲೆಯಲ್ಲಿ ನಾಡಗೀತೆ ಹಾಡಬೇಕಿಲ್ಲ ಎಂದ ಸರ್ಕಾರ!
ರಾಜ್ಯದ ಕಾಂಗ್ರೆಸ್‌ ಸರ್ಕಾರ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ. ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡಬಾರದು ಎಂಬ ಆದೇಶ, ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹದ ಸಾಲುಗಳನ್ನೇ ಬದಲಿಸಿ ವಿವಾದವನ್ನು ಮೈಮೇಲೆ ಎಳೆದುಕೊಂಡಿತ್ತು. ಇದೀಗ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ (Nadageethe row) ಎಂಬ ಸುತ್ತೋಲೆ ಹೊರಡಿಸಿ ವಿವಾದಕ್ಕೆ ಒಳಗಾಗಿದೆ. ಕೊನೆಗೆ ಸುತ್ತೋಲೆ ಹಿಂಪಡೆದು ತಿಪ್ಪೆಸಾರಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಈ ಸುದ್ದಿಯನ್ನೂ ಓದಿ: ಮಿಷನರಿಗಳಿಗೆ ಮಣಿದ ಸರ್ಕಾರ; ಡೋಂಗಿ ಕನ್ನಡ ಪ್ರೇಮಿ ಸಿದ್ದರಾಮಯ್ಯ; ಬಿಜೆಪಿ ಆಕ್ರೋಶ
ಈ ಸುದ್ದಿಯನ್ನೂ ಓದಿ: ಕೆಟ್ಟ ಮೇಲೆ ಬುದ್ಧಿ; ವಿವಾದಿತ ನಾಡಗೀತೆ ಸುತ್ತೋಲೆ ಬದಲಿಸಿದ ಸರ್ಕಾರ

2.ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಅನ್ಯಧರ್ಮೀಯರ ನೇಮಕಕ್ಕೆ ವಿರೋಧ
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು (Hindu Temples) ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ ದಲ್ಲಿ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಅನ್ಯ ಸಮುದಾಯದವರನ್ನು ನೇಮಕ ಮಾಡಲು ಅವಕಾಶ ನೀಡಿರುವುದು ಸರಿಯಲ್ಲ. ಹೀಗಾಗಿ ವಿಧೇಯಕವನ್ನು ರದ್ದುಪಡಿಸಬೇಕು ಎಂದು ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಆಗ್ರಹಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಈ ಸುದ್ದಿಯನ್ನೂ ಓದಿ: ದೇವಸ್ಥಾನದ ಆದಾಯ 1 ಕೋಟಿ ಇದ್ದರೆ ಸರ್ಕಾರಕ್ಕೆ 10 ಲಕ್ಷ ರೂ. ಸಿಗುವಂತೆ ವಿಧೇಯಕ!

3 ಮೋದಿ ಬಗ್ಗೆ ಸಿದ್ದರಾಮಯ್ಯ ಟೀಕೆ; ಪಲಾಯನವಾದಿ ಸಿಎಂ ಎಂದ ಬಿಜೆಪಿ
ವಿಧಾನ ಮಂಡಲ ಅಧಿವೇಶನದಲ್ಲಿ (Karnataka Budget Session 2024) ಕೇಂದ್ರದ ಅನುದಾನದ ಬಗ್ಗೆ ಪ್ರಸ್ತಾಪವಾಗಿದೆ. ಈ ವಿಷಯವನ್ನು ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ ಎಂದು ಹೇಳಿದ್ದಾರೆ. ಆದರೆ, ಬಿಜೆಪಿ ಸಿದ್ದರಾಮಯ್ಯ ಅವರನ್ನೇ ಪಲಾಯನವಾದಿ ಎಂದಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

4. ಅನಧಿಕೃತ ಹುಕ್ಕಾ ಬಾರ್‌ ತೆರೆದ್ರೆ 3 ವರ್ಷ ಜೈಲು; ಮಸೂದೆ ಪಾಸ್‌
ರಾಜ್ಯದಲ್ಲಿ ಇನ್ನು ಹುಕ್ಕಾ ಬಾರ್ (Hookah Bar) ಅನ್ನು ಅನಧಿಕೃತ ನಡೆಸಿದರೆ ಒಂದರಿಂದ ಮೂರು ವರ್ಷ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ. ಇಂಥದ್ದೊಂದು ವಿಧೇಯಕವನ್ನು ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಈ ಸುದ್ದಿಯನ್ನೂ ಓದಿ: ಪಬ್ಲಿಕ್‌ ಪ್ಲೇಸ್‌ನಲ್ಲಿ ಸಿಗರೇಟ್‌ ಸೇದಿದ್ರೆ ಭಾರೀ ದಂಡ!

5. ವಾಟ್ಸಾಪ್‌ ವೆಬ್‌ನಲ್ಲೂ ಚಾಟ್‌ ಲಾಕ್‌ಗೆ ಸೀಕ್ರೆಟ್‌ ಕೋಡ್‌!
ವಾಟ್ಸಾಪ್(WhatsApp), ತನ್ನ ಚಾಟ್ ಲಾಕ್‌ ಫೀಚರ್ ಅನ್ನು ಮತ್ತಷ್ಟು ಸುಧಾರಿಸುವ ಪ್ರಯತ್ನವನ್ನು ಮಾಡುತ್ತಿದೆ(WhatsApp New Feature). ಕೆಲವು ವರದಿಗಳ ಪ್ರಕಾರ, ಇದರ ವೆಬ್‌ ವರ್ಷನ್ ಅಭಿವೃದ್ಧಿಪಡಿಸುತ್ತಿದೆ. ಅಂದರೆ ವೆಬ್‌ನಲ್ಲೂ ಚಾಟ್‌ ಲಾಕ್‌ಗೆ ಅವಕಾಶ ದೊರೆಯಲಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

6. ಮೆದುಳಿಗೆ ಚಿಪ್‌ ಅಳವಡಿಸಿಕೊಂಡ ವ್ಯಕ್ತಿ ಯೋಚನೆಯ ಮೂಲಕವೇ ಮೌಸ್‌ ಅಲ್ಲಾಡಿಸಿದ! ಏನಿದು ಎಲಾನ್‌ ಮಸ್ಕ್‌ ಪ್ರಯೋಗ?
‘ನ್ಯೂರಾಲಿಂಕ್ (Neuralink) ಬ್ರೈನ್ ಚಿಪ್‌ (Brain Chip) ಅಳವಡಿಸಿದ ಮೊದಲ ವ್ಯಕ್ತಿ ಇದೀಗ ಯೋಚನೆಯಿಂದಲೇ ಕಂಪ್ಯೂಟರ್‌ ಪರದೆಯ ಮೇಲಿನ ಕರ್ಸರ್‌ ಅನ್ನು ಚಲಿಸುವ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾನೆʼ ಎಂದು ಟೆಕ್‌ ದೈತ್ಯ ಎಲಾನ್‌ ಮಸ್ಕ್‌ (Elon Musk) ಹೇಳಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. ಹೋಗಿ ಬನ್ನಿ ನಾರಿಮನ್‌ ಸಾಬ್‌, ಕನ್ನಡಿಗರ ಮನಸ್ಸಿನಲ್ಲಿ ನಿಮ್ಮ ನೆನಪು ಸದಾ ಹಸಿರು
ಕಾವೇರಿ ನದಿ ನೀರು ವಿವಾದದಲ್ಲಿ (Cauvery Water Dispute) ಕರ್ನಾಟಕದ ಪರ ಪ್ರಬಲ ವಾದ ಮಂಡಿಸುತ್ತಾ, ಕನ್ನಡಿಗರ ಕಣ್ಮಣಿಯಾಗಿದ್ದ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಫಾಲಿ ಸ್ಯಾಮ್‌ ನಾರಿಮನ್‌ (Fali s Nariman) ಅವರ ನಿಧನಕ್ಕೆ ಕನ್ನಡ ನಾಡು ಕಂಬನಿ ಮಿಡಿದಿದೆ. ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫಾಲಿ ನಾರಿಮನ್‌ ಅವರು ರಾಜ್ಯಕ್ಕೆ ನೀಡಿದ ಕೊಡುಗೆಯನ್ನು ನೆನಪಿಸಿಕೊಂಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. ಪಾಕ್‌ನಲ್ಲಿ ಕೊನೆಗೂ ಮೈತ್ರಿ ಸರ್ಕಾರ; ಶೆಹಬಾಜ್‌ ಷರೀಫ್‌ ನೂತನ ಪ್ರಧಾನಿ
ಪಾಕಿಸ್ತಾನದಲ್ಲಿ ಕೆಲ ವರ್ಷಗಳಿಂದ ಉಂಟಾಗಿರುವ ರಾಜಕೀಯ ಅರಾಜಕತೆಯು ಕೊನೆಯಾಗುವ ಲಕ್ಷಣಗಳು ಕಾಣುತ್ತಿವೆ. ಪಾಕಿಸ್ತಾನ ಮುಸ್ಲಿಂ ಲೀಗ್‌-ನವಾಜ್‌ (PML-N) ಹಾಗೂ ಪಾಕಿಸ್ತಾನ ಪೀಪಲ್ಸ್‌ ಪಕ್ಷವು (PPP) ಮೈತ್ರಿ ಮಾಡಿಕೊಂಡಿದ್ದು, ಪಿಎಂಎಲ್‌ಎನ್‌ ಪಕ್ಷದ ಅಧ್ಯಕ್ಷ ಶೆಹಬಾಜ್‌ ಷರೀಫ್‌ (Shehbaz Sharif) ಅವರೇ ನೂತನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಖಚಿತವಾಗಿದೆ. ಇನ್ನು ಪಿಪಿಪಿಯ ಆಸಿಫ್‌ ಜರ್ದಾರಿ ಅವರು ಮತ್ತೆ ದೇಶದ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

9. ವಿರುಷ್ಕಾ ದಂಪತಿಯ ಮಗನ ಹೆಸರು ಅಕಾಯ್‌; ಏನಿದರ ಅರ್ಥ?
ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಹಾಗೂ ನಟಿ ಅನುಷ್ಕಾ ಶರ್ಮಾ (Anushka Sharma) ದಂಪತಿಗೆ ಎರಡನೇ ಮಗು ಜನಿಸಿದೆ. ಫೆಬ್ರವರಿ 15ರಂದು ಗಂಡು ಮಗು ಜನಿಸಿರುವುದಾಗಿ ದಂಪತಿ ಘೋಷಿಸಿದ್ದಾರೆ. ಅನುಷ್ಕಾ ಶರ್ಮಾ ತಮ್ಮ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಮಗುವಿಗೆ ಅಕಾಯ್ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ. ಹಾಗಿದ್ದರೆ ಅಕಾಯ್‌ ಅಂದರೇನು? ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

10. ಈ ತಂಡದ ಆಟಗಾರರು ರಣಜಿ ಟ್ರೋಫಿ ಗೆದ್ದರೆ ಸಿಗಲಿದೆ bmw ಕಾರು!
ಹೈದರಾಬಾದ್​ ತಂಡದ ಆಟಗಾರರಿಗೆ ಇಲ್ಲಿನ ಕ್ರಿಕೆಟ್ ಅಸೋಷಿಯೇಷನ್(HCA) ಅಧ್ಯಕ್ಷ(HCA president) ಜಗನ್ ಮೋಹನ್ ರಾವ್(Jagan Mohan Rao) ಅವರು ಬಂಪರ್​ ಆಫರ್​ ನೀಡಿದ್ದಾರೆ. ತಂಡವು ಮುಂದಿನ ಮೂರು ವರ್ಷಗಳಲ್ಲಿ ರಣಜಿ ಟ್ರೋಫಿ (Ranji Trophy) ಗೆದ್ದರೆ ಪ್ರತಿಯೊಬ್ಬ ಆಟಗಾರನಿಗೆ BMW ಕಾರು(BMW car) ಮತ್ತು 1 ಕೋಟಿ ರೂ. ನೀಡುವುದಾಗಿ ಘೋಷಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version