VISTARA TOP 10 NEWS : ಸಲಿಂಗ ವಿವಾಹ ನಾಟ್‌ ಓಕೆ ಎಂದ ಸುಪ್ರೀಂ, ರಾಜ್ಯದಲ್ಲಿ ಮತ್ತೆ ಡೈರಿ ಕಂಪನ... - Vistara News

ಕರ್ನಾಟಕ

VISTARA TOP 10 NEWS : ಸಲಿಂಗ ವಿವಾಹ ನಾಟ್‌ ಓಕೆ ಎಂದ ಸುಪ್ರೀಂ, ರಾಜ್ಯದಲ್ಲಿ ಮತ್ತೆ ಡೈರಿ ಕಂಪನ…

VISTARA TOP 10 NEWS : ಸಲಿಂಗ ಸಂಬಂಧ ಓಕೆ, ಆದರೆ ಮದುವೆ ಮಾತ್ರ ನಾಟ್‌ ಓಕೆ ಎಂದಿದೆ ಸುಪ್ರೀಂ ಕೋರ್ಟ್‌. ಈ ನಡುವೆ, ರಾಜ್ಯ ರಾಜಕಾರಣದಲ್ಲಿ ಡೈರಿಯೊಂದು ಸದ್ದು ಮಾಡಿದೆ. ಏನಿದೆ ಅದರಲ್ಲಿ ಎಂಬ ಕುತೂಹಲವೂ ಸೇರಿದಂತೆ ದಿನದ ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ.

VISTARANEWS.COM


on

Vistara top 10 News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. ಸಲಿಂಗ ಸಂಬಂಧ ಓಕೆ, ವಿವಾಹ ನಾಟ್‌ ಓಕೆ ಎಂದ ಸುಪ್ರೀಂಕೋರ್ಟ್‌; ಮದುವೆ ಮಾನ್ಯತೆ ವಿಚಾರ ಸಂಸತ್ತಿಗೆ
ದೇಶದಲ್ಲಿ ಸಲಿಂಗ ವಿವಾಹಕ್ಕೆ ಸಮಾನ ಮಾನ್ಯತೆಯ ಕುರಿತು ಸುಪ್ರೀಂ ಕೋರ್ಟ್‌ನ ಪಂಚಸದಸ್ಯ ಸಾಂವಿಧಾನಿಕ ನ್ಯಾಯಪೀಠ ನಾಲ್ಕು ಪ್ರತ್ಯೇಕ ತೀರ್ಪುಗಳನ್ನು ನೀಡಿದೆ. ಸಲಿಂಗ ವಿವಾಹಕ್ಕೆ ಒಪ್ಪಿಗೆ ನೀಡುತ್ತಿಲ್ಲ ಎಂಬ ಕಾರಣದಿಂದ ವಿಶೇಷ ವಿವಾಹ ಕಾಯಿದೆ ರದ್ದತಿ ಸಾಧ್ಯವಿಲ್ಲ. ಸಲಿಂಗ ವಿವಾಹ ಮಾನ್ಯತೆಯ ವಿಚಾರದಲ್ಲಿ ಸಂಸತ್ತು ತೀರ್ಮಾನಿಸಬೇಕು ಎಂದು ಸಿಜೆಐ ಡಿ.ವೈ ಚಂದ್ರಚೂಡ್ ಹೇಳಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಪೂರಕ ವರದಿ 1: ಸಲಿಂಗ ವಿವಾಹ ಮಾನ್ಯತೆ; ಇಲ್ಲಿವೆ ಸುಪ್ರೀಂ ಕೋರ್ಟ್‌ ಅಣಿಮುತ್ತುಗಳು
ಪೂರಕ ವರದಿ 2: ವಿಸ್ತಾರ Explainer: Same Sex Marriage: ಸಲಿಂಗ ಸಂಬಂಧ ಓಕೆ, ವಿವಾಹ ನಾಟ್‌ ಓಕೆ!

2. ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಡೈರಿ ಕಂಪನ- ಐಟಿ ದಾಳಿ ವೇಳೆ ಡೈರಿಯಲ್ಲಿ ಯಾರ ಹೆಸರಿದೆ?
ಒಂದು ವಾರದಿಂದ ನಡೆಯುತ್ತಿರುವ ಐಟಿ ದಾಳಿಯಲ್ಲಿ (IT raid in Bangalore) ಈಗಾಗಲೇ 92 ಕೋಟಿ ರೂ. ನಗದು ಪತ್ತೆಯಾಗಿರುವುದು ಒಂದು ಸುದ್ದಿಯಾದರೆ, ಇನ್ನೊಂದು ಕಡೆ ದಾಳಿ ವೇಳೆ ಡೈರಿಯೊಂದು ಪತ್ತೆಯಾಗಿರುವುದು (Diary found during IT Raid) ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಅದರಲ್ಲಿ ಯಾರ ಹೆಸರಿದೆ ಎನ್ನುವುದು ಚರ್ಚೆಯ ವಿಷಯವಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಪೂರಕ ಸುದ್ದಿ1: DK Shivakumar : ಐಟಿ ದಾಳಿಯಲ್ಲಿ ಸಿಕ್ಕಿರೋದು ಬಿಜೆಪಿ ಹಣ, ಡೈರಿ; ಡಿ.ಕೆ ಶಿವಕುಮಾರ್‌ ಹೇಳಿಕೆ
ಪೂರಕ ಸುದ್ದಿ2: ರಾಜ್ಯ ಲೂಟಿ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಸಿ.ಎನ್.ಅಶ್ವತ್ಥ ನಾರಾಯಣ್ ಕಿಡಿ

3. ದಳಪತಿಗಳ ಕೋಟೆಯಲ್ಲಿ ತಾರಕಕ್ಕೇರಿದ ಸೈದ್ಧಾಂತಿಕ ಸಂಘರ್ಷ: ಸಿಎಂ ಇಬ್ರಾಹಿಂ ಉಚ್ಚಾಟನೆ?
ಜಾತ್ಯತೀತ ಜನತಾಳದಲ್ಲಿ ಸೈದ್ಧಾಂತಿಕ ಸಂಘರ್ಷ ಜೋರಾಗಿದೆ. ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಎಚ್‌.ಡಿ ಕುಮಾರಸ್ವಾಮಿ ಮತ್ತು ನಿಖಿಲ್‌ ಕುಮಾರಸ್ವಾಮಿ ಅವರನ್ನೇ ಸಿಎಂ ಇಬ್ರಾಹಿಂ ಉಚ್ಛಾಟನೆ ಮಾಡಿದ್ದಾರಂತೆ ಎಂಬ ಆದೇಶದ ಪ್ರತಿಯೊಂದು ವೈರಲ್‌ ಆಗಿದೆ. ಆದರೆ, ಈಗ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನೇ ವಜಾ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

4. ಪಂಚಮಸಾಲಿಗಳಿಗೆ ಸದ್ಯಕ್ಕಿಲ್ಲ 2ಎ ಮೀಸಲಾತಿ ಗಿಫ್ಟ್ : ಹಾಗಿದ್ದರೆ ಇನ್ಯಾವಾಗ?
ಪಂಚಮಸಾಲಿ ಸಮುದಾಯಕ್ಕೆ (Panchamasali Community) ಸದ್ಯಕ್ಕೆ 2ಎ ಮೀಸಲಾತಿ (2A Reservation) ಸಿಗುವ ಸಾಧ್ಯತೆಗಳಿಲ್ಲ. ಯಾಕೆಂದರೆ, 2ಎ ಮೀಸಲಾತಿ ನೀಡಿಕೆ ಸಂಬಂಧ ಹೈಕೋರ್ಟ್‌ನಲ್ಲಿ ಎರಡು ಅರ್ಜಿಗಳಿದ್ದು, ಅವುಗಳು ಇತ್ಯರ್ಥವಾಗಬೇಕು. ಈ ವಿಚಾರವನ್ನು ಸ್ವತಃ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್‌ ಹೆಗ್ಡೆ (K Jayaprakash Hegde) ಹೇಳಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

5. ಅ.21ಕ್ಕೆ ಮಾನವಸಹಿತ ಗಗನಯಾನದ ಪರೀಕ್ಷಾರ್ಥ ಪ್ರಯೋಗ-2035ಕ್ಕೆ ಬಾಹ್ಯಾಕಾಶ ಕೇಂದ್ರ ನಿರ್ಮಾಣ
ಇಸ್ರೋ ತನ್ನ ಮೊದಲ ಮಾನವ ಸಹಿತ ಗಗನಯಾನಕ್ಕೆ (Gaganyaan Mission) ಸರ್ವ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಅಕ್ಟೋಬರ್ 21ರಂದು ಬೆಳಗಿನ 7 ಗಂಟೆಯಿಂದ 9 ಗಂಟೆಯ ನಡುವೆ ಮಿಷನ್‌ಗೆ ಬಳಸಲಾಗುವ ಮಾನವ ಬಾಹ್ಯಾಕಾಶ ನೌಕೆಯನ್ನು (Spaceflight) ಪರೀಕ್ಷಿಸಲಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

6. I.N.D.I.A ಮೈತ್ರಿಕೂಟಕ್ಕೆ ಖರ್ಗೆ, ರಾಹುಲ್ ಪ್ರಧಾನಿ ಅಭ್ಯರ್ಥಿ- ಸಂಚಲನ ಮೂಡಿಸಿದ ಶಶಿ ತರೂರ್‌ ಹೇಳಿಕೆ
2024ರ ಲೋಕಸಭೆ ಚುನಾವಣೆ (Lok Sabha Election 2024) ವೇಳೆ ಇಂಡಿಯಾ ಕೂಟದ (India Bloc) ಪ್ರಧಾನಿ ಅಭ್ಯರ್ಥಿಯಾಗಿ (PM Candidate) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅಥವಾ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಅವರನ್ನು ಪಕ್ಷವು ಸೂಚಿಸಬಹುದು ಎಂದು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸದಸ್ಯ ಶಶಿ ತರೂರ್ (Shashi Tharoor)ಹೇಳಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. ICC World Cup 2023 : ಭಾರತ ವಿರುದ್ಧ ಸೋತು ಕಂಗೆಟ್ಟ ಪಾಕ್​ ತಂಡಕ್ಕೆ ಜ್ವರದ ಬಾಧೆ!
ಅಹಮದಾಬಾದ್​ನಲ್ಲಿ ಭಾರತ ವಿರುದ್ಧ ಹೀನಾಯ ಸೋಲಿನ ನಂತರ, ಪಾಕಿಸ್ತಾನ ಶುಕ್ರವಾರ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಪಂದ್ಯಕ್ಕೆ (ICC World Cup 2023) ಸಜ್ಜಾಗಬೇಕಾಗಿದೆ. ಅದಕ್ಕಾಗಿ ತಂಡ ಬೆಂಗಳೂರಿಗೆ ತಲುಪಿದೆ. ಆದರೆ ಪಾಖ್​ ಶಿಬಿರದಲ್ಲಿ ಜ್ವರದ ಸಮಸ್ಯೆ ಕಾಣಿಸಿಕೊಂಡಿದೆ. ಅಬ್ದುಲ್ಲಾ ಶಫೀಕ್, ಶಾಹೀನ್ ಅಫ್ರಿದಿ ಮತ್ತು ಉಸಾಮಾ ಮಿರ್ ಜ್ವರದಿಂದ ಬಳಲುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8.Anti Hindu HDFC: ಎಚ್‌ಡಿಎಫ್‌ಸಿ ಬ್ಯಾಂಕಿನಿಂದ ಹಿಂದೂ ವಿರೋಧಿ ಜಾಹೀರಾತು! ನೆಟ್ಟಿಗರು ಫುಲ್ ಗರಂ
ಸೈಬರ್ ವಂಚನೆಗಳ ವಿರುದ್ದ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಎಚ್‌ಡಿಎಫ್‌ಸಿ ಬ್ಯಾಂಕ್ ವಿಜಿಲ್ ಆಂಟಿ ಜಾಹೀರಾತು ಅಭಿಯಾನ ಕೈಗೊಂಡಿದೆ. ಆದರೆ, ಕೆಲವು ನೆಟ್ಟಿಗರು ಈ ಜಾಹೀರಾತು ಹಿಂದೂ ವಿರೋಧಿ ಎಂದು ಆರೋಪಿಸಿದ್ದಾರೆ. ಹಾಗಿದ್ದರೆ ಏನಿದೆ ಆ ಜಾಹೀರಾತಿನಲ್ಲಿ? ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

9. Success Story: ಉಜಾಲಾ ಮೂಲಕ ಜನಸಾಮಾನ್ಯರೂ ಹೊಳೆಯುವಂತೆ ಮಾಡಿದ ರಾಮಚಂದ್ರನ್‌
ಮೂಥೆದತ್ ಪಂಜನ್ ರಾಮಚಂದ್ರನ್‌ ಯಶಸ್ವಿ ಉದ್ಯಮಿ. ಹೀಗೆಂದ ಕೂಡಲೇ ಅವರು ಯಾರು ಎನ್ನುವುದು ಬಹುತೇಕರಿಗೆ ಗೊತ್ತಾಗುವುದಿಲ್ಲ. ಉಜಾಲಾ(Ujala) ಕಂಪೆನಿ ಸ್ಥಾಪಕರು ಎಂದರೆ ಎಲ್ಲರಿಗೂ ಗೊತ್ತಾಗುತ್ತದೆ. ಜನ ಸಾಮಾನ್ಯರ ಬದುಕಲ್ಲಿ ಉಜಾಲಾ ಬೀರಿದ ಹೊಳಪು ಅಂತಹದ್ದು. ರಾಮಚಂದ್ರನ್‌ ಅವರ ಯಶಸ್ಸಿನ ಪಯಣದ ಕಥೆ ಇಲ್ಲಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

10. Viral News: ಕಾರಿನಲ್ಲಿ ವೇಗವಾಗಿ ಹೋಗುವಾಗ ಗಮನಿಸಿ; ಈತನಿಗೆ ಬಿದ್ದ ಫೈನ್‌ 11.65 ಕೋಟಿ ರೂ.!
‌ʼಮೂಗಿಗಿಂತ ಮೂಗುತಿ ಭಾರʼ ಎನ್ನುವ ಗಾದೆ ಮಾತಿದೆ. ಬಹುಶಃ ಈ ಮಾತು ಅಮೆರಿಕದ ವ್ಯಕ್ತಿಯೊಬ್ಬರಿಗೆ ಸರಿಯಾಗಿ ಹೊಂದಿಕೆಯಾಗುತ್ತದೆ. ಯಾಕೆಂದರೆ ಕಾರಿಗಿಂತ ಹಲವು ಪಟ್ಟು ಹೆಚ್ಚಿನ ದಂಡ ಅವರಿಗೆ ಬಂದಿದೆ. ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿದ್ದಕ್ಕಾಗಿ ಜಾರ್ಜಿಯಾ ಮೂಲದ ಈತನಿಗೆ ಬರೋಬ್ಬರಿ 1.4 ಮಿಲಿಯನ್ ಡಾಲರ್ (11.65 ಕೋಟಿ ರೂ.) ದಂಡ ವಿಧಿಸಲಾಗಿದೆ! ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕಲೆ/ಸಾಹಿತ್ಯ

ಕಥೆ ನಿಜ, ಕಥೆಗಾರ ಸುಳ್ಳು: ಕಥೆಕೂಟ ಸಮಾವೇಶದಲ್ಲಿ ಟಿಎನ್‌ ಸೀತಾರಾಮ್‌

ಸಕಲೇಶಪುರದ ಮಕ್ಕಿತಿಟ್ಟದಲ್ಲಿ ನಡೆದ ʼಕಥೆಕೂಟʼ ವಾಟ್ಸ್ಯಾಪ್‌ ಗುಂಪಿನ ಒಂಬತ್ತನೇ ವಾರ್ಷಿಕೋತ್ಸವ ಹಾಗೂ ಆರನೇ ಸಮಾವೇಶದ ಎರಡನೇ ದಿನ ನಡೆದ ‘ಮುಕ್ತಕಥಾ’ ಸಂವಾದ ಕಾರ್ಯಕ್ರಮದಲ್ಲಿ ಟಿಎನ್ನೆಸ್ ಮತ್ತು ಡುಂಡಿರಾಜ್ ತಮ್ಮ ಕಥಾಜೀವನ- ಕಾವ್ಯಜೀವನದ ಅಂತರಂಗವನ್ನು ತೆರೆದಿಟ್ಟರು.

VISTARANEWS.COM


on

ಕಥೆಕೂಟ literature meet
Koo

ಬೆಂಗಳೂರು: ನಾನು ಸಾಹಿತ್ಯ ಸಿನಿಮಾ ಎಂದು ಬೆಂಗಳೂರಿನಲ್ಲಿ ಬದುಕು ಹುಡುಕಿಕೊಳ್ಳುತ್ತಿದ್ದಾಗ ತಂದೆ ಊರಿನಲ್ಲಿ ನನಗಾಗಿ ಜಮೀನು ಮಾಡಿಟ್ಟು ಊರಿಗೆ ಬಾ ಎಂದು ಕರೆದರು. ನಾನು, ನಿಮ್ಮ ಜಮೀನು ನನಗೆ ಬೇಕಿಲ್ಲ ಎಂದು ಉತ್ತರಿಸಿ ಪತ್ರ ಬರೆದೆ. ಇದಾದ ತಿಂಗಳೊಳಗೆ ಅವರು ಕಾಯಿಲೆ ಉಲ್ಬಣಿಸಿ ತೀರಿಕೊಂಡರು. ಊರಿಗೆ ಹೋದೆ. ತಂದೆ ನನ್ನ ಪತ್ರ ತಲುಪಿದ ಬಳಿಕ ಕೊರಗಿನಲ್ಲಿ ತಮ್ಮ ಮಾತ್ರೆಗಳನ್ನು ಸೇವಿಸಿರಲಿಲ್ಲ ಎಂದು ಗೊತ್ತಾಯಿತು. ತಂದೆಯ ಸಾವಿಗೆ ಕಾರಣವಾದೆ ಎಂಬ ಪಶ್ಚಾತ್ತಾಪದಿಂದ ದಗ್ಧನಾದೆ. ಮುಂದೆ ಇದೇ ಘಟನೆಯನ್ನಿಟ್ಟುಕೊಂಡು ಒಂದು ನಾಟಕ ಬರೆದೆ. ಅದೇ ‘ಬದುಕ ಮನ್ನಿಸು ಪ್ರಭುವೆ’. ಇದಕ್ಕೆ ಲಂಕೇಶ್, ರಾಮಚಂದ್ರ ಶರ್ಮ ಅವರೆಲ್ಲ ಸ್ಪರ್ಧಿಸಿದ್ದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಬಂತು. ಅದು ನನ್ನ ಕಣ್ಣೀರಿನಿಂದ ಮೂಡಿದ ಕೃತಿ. ನಮ್ಮ ನಮ್ಮ ಕಣ್ಣೀರುಗಳನ್ನು, ನಿಟ್ಟುಸಿರುಗಳನ್ನು ಹಿಂಬಾಲಿಸುತ್ತ ಹೋದರೆ ನೈಜ ಕತೆಗಳೋ ಕಾದಂಬರಿಗಳೋ ಬರೆಸಿಕೊಳ್ಳುತ್ತವೆ.

  • ಟಿಎನ್ ಸೀತಾರಾಮ್ ಹೀಗೆ ತಮ್ಮ ಬದುಕಿನಿಂದ ಆಯ್ದ ಒಂದು ಘಟನೆಯನ್ನು ಎತ್ತಿಕೊಂಡು, ಅದಕ್ಕೂ ತಮ್ಮ ಸೃಜನಶೀಲತೆಗೂ ಇದ್ದ ಸಂಬಂಧವನ್ನು ವಿವರಿಸುತ್ತಾ ಇದ್ದರೆ ಎದುರು ಕುಳಿತ ಕಥೆಕೂಟಿಗರು ಮಂತ್ರಮುಗ್ಧ.

ಸಕಲೇಶಪುರದ ಮಕ್ಕಿತಿಟ್ಟದಲ್ಲಿ ನಡೆದ ʼಕಥೆಕೂಟʼ ವಾಟ್ಸ್ಯಾಪ್‌ ಗುಂಪಿನ ಒಂಬತ್ತನೇ ವಾರ್ಷಿಕೋತ್ಸವ ಹಾಗೂ ಆರನೇ ಸಮಾವೇಶದ ಎರಡನೇ ದಿನ ನಡೆದ ‘ಮುಕ್ತಕಥಾ’ ಸಂವಾದ ಕಾರ್ಯಕ್ರಮದಲ್ಲಿ ಟಿಎನ್ನೆಸ್ ಮತ್ತು ಡುಂಡಿರಾಜ್ ತಮ್ಮ ಕಥಾಜೀವನ- ಕಾವ್ಯಜೀವನದ ಅಂತರಂಗವನ್ನು ತೆರೆದಿಟ್ಟರು.

ನಾವು ನೊಂದ ನೋವಿನಲ್ಲಿ ನಮ್ಮ ಜೀವವಿರುತ್ತದೆ. ನಮ್ಮ ಕಣ್ಣೀರು ನಿಟ್ಟುಸಿರನ್ನು ಹಿಂಬಾಲಿಸಿದಾಗಲೇ ನಾವು ಬರೆಯಬೇಕಾದ ಕತೆ ಸಿಗುತ್ತದೆ. ಹಾಗಾಗಿ ನಾನು ಬರೆಯುವ ಕತೆಗಳಲ್ಲಿ ನಿಜವಾದ ನಾನು ಇರುತ್ತೇನೆ. ಹೊರತು, ನಿಮ್ಮ ಜೊತೆ ಒಡನಾಡುತ್ತಿರುವ ನಾನು ಸುಳ್ಳಿರಬಹುದು. ಆದರೆ ನನ್ನ ಕತೆಗಳು ಸುಳ್ಳಲ್ಲ. ನನ್ನ ಕತೆಯೇ ಸತ್ಯ ಎಂದರು ಟಿಎನ್ನೆಸ್. ನಾನು ಇದುವರೆಗೂ ಸೀರಿಯಲ್‌ಗಳಿಗಾಗಿ ಪ್ರತಿದಿನದಂತೆ ಸುಮಾರು 7000 ಕತೆಗಳನ್ನು ಬರೆದಿದ್ದೇನೆ. ಮನುಷ್ಯ ಮೂಲಭೂತವಾಗಿ ಕತೆ ಕಟ್ಟುವವನಾದ್ದರಿಂದ ಇದು ಸಾಧ್ಯವಾಗಿದೆ ಎಂದವರ ಮಾತು.

ಹಾಸ್ಯಕವನ, ಹನಿಕವನ ಬರೆಯುವುದು ನನ್ನ ಆಯ್ಕೆಯಾಗಿರಲಿಲ್ಲ. ಅದು ಅನಿವಾರ್ಯ ಆಗಿತ್ತು. ಮಾಧ್ಯಮಗಳೂ ಕೆಲವೊಮ್ಮೆ ಅದನ್ನೇ ಬಯಸುತ್ತಿದ್ದವು. ನನಗೆ ಗಂಭೀರ ಕಾವ್ಯ ರಚನೆ ಇಷ್ಟವೇ. ಹಲವು ಗಂಭೀರ ಕಾವ್ಯ ರಚಿಸಿದ್ದೇನೆ ಕೂಡಾ. ಆದರೆ ಜನರ ಗಮನ ಹೆಚ್ಚು ಸೆಳೆದದ್ದು ಹನಿಗವನಗಳು ಎಂಬುದು ಡುಂಡಿರಾಜ್ ಮಾತಾಗಿತ್ತು. ಹಾಲು ಮಾರಲು ಬರುತ್ತಿದ್ದ ಹುಡುಗಿಯ ಬಗ್ಗೆ ಬರೆದ ಮೊದಲ ಕವನ ನೆನಪಿಸಿಕೊಂಡರು ಡುಂಡಿ.

ಗಂಭೀರ ಕವನ ಬರೆಯಲು ಸಾಕಷ್ಟು ಜನರಿದ್ದಾರೆ; ಆದರೆ ಹನಿಗವನ ಬರೆಯುವುದರಲ್ಲಿ ನಿನಗೆ ಸ್ಪರ್ಧಿಗಳಿಲ್ಲ ಎಂದು ಗೆಳೆಯ ಬಿಆರೆಲ್ ತನಗೆ ಒತ್ತಾಸೆಯಾಗಿ ನಿಂತುದನ್ನು ಡುಂಡಿ ನೆನಪಿಸಿಕೊಂಡರು. ಆತ್ಮತೃಪ್ತಿಯ ರಚನೆಗಳು ಮತ್ತು ಜನಪ್ರಿಯ ರಚನೆಗಳು- ಎರಡರ ನಡುವೆ ಭೇದ ಇದ್ದೇ ಇರುತ್ತದೆ. ಹೊಟ್ಟೆಪಾಡಿನ ಪ್ರಶ್ನೆ ಬಂದಾಗ ಜನಪ್ರಿಯ ರಚನೆಗಳು ಅನಿವಾರ್ಯವಾಗುತ್ತವೆ; ಆತ್ಮತೃಪ್ತಿ ಬದಿಗೆ ಸರಿಯುತ್ತದೆ ಎಂಬುದು ಇಬ್ಬರ ಒಕ್ಕೊರಲ ಉತ್ತರವಾಗಿತ್ತು.

ಅನಂತ ಕುಣಿಗಲ್ ಚುರುಕಾದ ಪ್ರಶ್ನೆಗಳ ಮೂಲಕ ಈ ಕಾರ್ಯಕ್ರಮ ನಡೆಸಿಕೊಟ್ಟರು. ಕವಿತಾ ಹೆಗಡೆ ಅಭಯಂ ಕಾರ್ಯಕ್ರಮವನ್ನು ನಿರ್ವಹಿಸಿದರು. ಜೋಗಿ, ಗೋಪಾಲಕೃಷ್ಣ ಕುಂಟಿನಿ ಉಪಸ್ಥಿತರಿದ್ದರು.

ಇದನ್ನೂ ಓದಿ: Pustaka Sante : ವೀರಲೋಕ ಪುಸ್ತಕ ಸಂತೆ ಅದ್ಧೂರಿ ಆರಂಭ, ವೆರಿ ಗುಡ್ ಎಂದು ಬೆನ್ನುತಟ್ಟಿದ ಸಿಎಂ ಸಿದ್ದರಾಮಯ್ಯ

Continue Reading

ಕರ್ನಾಟಕ

CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

CM Siddaramaiah: ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ಅವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ ನೀಡಿದ್ದೆ. ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಬೇಕಾದರೆ ನೀವೇ ವಿರೋಧಪಕ್ಷದ ನಾಯಕರಾಗಬೇಕೆಂದು ಕಾರ್ಯಕಾರಿಣಿ ಸಮಿತಿ ಹಾಗೂ ನಾನೂ ಒತ್ತಾಯ ಮಾಡಿದ್ದೆ. ವಿಪಕ್ಷ ನಾಯಕರಾಗಿ ಜವಾಬ್ದಾರಿ ವಹಿಸಿಕೊಂಡಿರುವ ಅವರಿಗೆ ಅಭಿನಂದನೆ ಹೇಳಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಹೇಳಿದರು.

ಹಾಲಿನ ಉತ್ಪಾದನೆ 99 ಲಕ್ಷ ಲೀಟರ್‌ಗಿಂತ ಹೆಚ್ಚಾಗಿದೆ

ಹಾಲಿನ ದರ ಹೆಚ್ಚಾಗಿಲ್ಲ. ಕಳೆದ ವರ್ಷ ಇದೇ ವೇಳೆಗೆ ಹಾಲಿನ ಉತ್ಪಾದನೆ 90 ಲಕ್ಷ ಲೀಟರ್ ಇತ್ತು. ಈಗ 99 ಲಕ್ಷ ಲೀಟರ್‌ಗಿಂತ ಹೆಚ್ಚಾಗಿದೆ. ರೈತರಿಂದ ನಾವು ಹಾಲು ಪಡೆಯಬೇಕಾಗಿದ್ದು, ಅದನ್ನು ಮಾರಾಟ ಮಾಡಬೇಕಿದೆ. ಅರ್ಧ ಲೀಟರ್ ಪ್ಯಾಕೆಟ್‌ನಲ್ಲಿ 50 ಮೀ.ಲೀ ಹೆಚ್ಚು ಮಾಡಿದ್ದು, ಅದಕ್ಕೆ ತಗಲುವ 2.10 ರೂ.ಗಳನ್ನು ಪ್ರಮಾಣಕ್ಕೆ ತಕ್ಕಂತೆ ಬೆಲೆ ನಿಗದಿ ಮಾಡಲಾಗಿದೆ ಎಂದು ಪುನರುಚ್ಚರಿಸಿದರು. ಮಾರುಕಟ್ಟೆ ಅಗತ್ಯವಿದೆ, ಹಾಲಿನ ಬೆಲೆ ಹೆಚ್ಚು ಮಾಡಿಲ್ಲ. ಹಾಲು ಹೆಚ್ಚು ಉತ್ಪಾದನೆಯಾಗಿರುವುದನ್ನು ಹೆಚ್ಚು ನೀಡಿ ಅದಕ್ಕೆ ತಕ್ಕದರವನ್ನಷ್ಟೇ ನಿಗದಿ ಮಾಡಲಾಗಿದೆ ಎಂದರು.

ಹಾಲಿನ ದರ ಏರಿಕೆಯಾಗಿಲ್ಲ: ಕಾಫಿ, ಟೀ ದರಗಳ ಹೆಚ್ಚಳ ಸಲ್ಲದು

ಹೋಟೆಲ್ ಮಾಲೀಕರ ಸಂಘದವರು ಸಭೆ ಸೇರಿ ಕಾಫಿ‌, ಟೀ ದರಗಳನ್ನು ಹೆಚ್ಚಿಸಲಾಗುವುದು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅವರು ಹೇಗೆ ಹೆಚ್ಚಿಸುತ್ತಾರೆ, ಹಾಲಿನ ಬೆಲೆ ಏರಿದ್ದರೆ ಮಾತ್ರ ಹೆಚ್ಚಿಸಬೇಕು ಎಂದರು.

ಇದನ್ನೂ ಓದಿ | CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

ರೈತರಿಂದ ಹಾಲು ಕೊಳ್ಳಬೇಕು

ಹೆಚ್ಚಾಗಿ ಉತ್ಪಾದನೆಯಾಗಿರುವ ಹಾಲನ್ನು ರೈತರಿಂದ ಕೊಳ್ಳಬೇಕೆ ಹೊರತು ಚೆಲ್ಲಲಾಗುವುದಿಲ್ಲ. ಕೊಳ್ಳುವವವರಿಗೆ ಹಾಲು ಹೆಚ್ಚಾಗಿ ದೊರೆಯುತ್ತಿದ್ದು ಜನ ಹಾಲನ್ನು ಕೊಳ್ಳಬೇಕು ಎಂದರು. ಇದೇ ವೇಳೆ ಸಂಸದರ ಸಭೆಗೆ ದೆಹಲಿಗೆ ತೆರಳುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಹೋಗುವಾಗ ಹೇಳುತ್ತೇನೆ ಎಂದರು.

Continue Reading

ಕರ್ನಾಟಕ

Self Harming: ಕೆಲಸದಿಂದ ತೆಗೆದು ಕಿರುಕುಳ; ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

Self Harming: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಾರ್ಮೆಂಟ್ಸ್‌ನಲ್ಲಿ ಕೆಲಸದಿಂದ ತೆಗೆದು ಬೇರೆಲ್ಲೂ ಕೆಲಸ ಸಿಗದಂತೆ ಕಿರುಕುಳ ನೀಡಲಾಗಿದೆ ಎಂದು ಡೆತ್‌ ನೋಟ್‌ನಲ್ಲಿ ಯುವಕ ಉಲ್ಲೇಖಿಸಿದ್ದಾನೆ.

VISTARANEWS.COM


on

Self Harming
Koo

ಮೈಸೂರು: ಕಂಪನಿಯಲ್ಲಿ ಕೆಲಸದಿಂದ ತೆಗೆದು ಕಿರುಕುಳ ನೀಡಿದ್ದಾರೆ ಎಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತಿ.ನರಸೀಪುರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಕಿರಣ್ (28) ಮೃತ ಯುವಕ.

ತಿ.ನರಸೀಪುರದ ಸಾಯಿ ಗಾರ್ಮೆಂಟ್ಸ್‌ನಲ್ಲಿ ಯುವಕ ಕಿರಣ್‌ ಕೆಲಸ ಮಾಡುತ್ತಿದ್ದ. ಆದರೆ, ಕಂಪನಿಯಲ್ಲಿ ಕೆಲಸದಿಂದ ಬೇಕಂತಲೇ ತೆಗೆದಿದ್ದಾರೆ. ನನ್ನ ಸಾವಿಗೆ ಕಂಪನಿಯ ಕ್ವಾಲಿಟಿ ಎ.ಜಿ.ಎಂ ಲೋಕೇಶ್‌ ಹಾಗೂ ಎಚ್.ಆರ್. ಎ.ಜಿ.ಎಂ ಅನಿಲ್ ಕಾರಣ ಎಂದು ಡೆತ್‌ ನೋಟ್‌ನಲ್ಲಿ ಯುವಕ ಉಲ್ಲೇಖಿಸಿದ್ದಾನೆ.

ನನ್ನನ್ನು ಕೆಲಸದಿಂದ ಬೇಕಂತಲೇ ತೆಗೆದಿದ್ದಾರೆ. ನನ್ನ ಬಗ್ಗೆ ಬೇರೆ ಕಡೆ ಕೆಟ್ಟ ಫೀಡ್ ಬ್ಯಾಕ್ ಕೊಟ್ಟು ಎಲ್ಲೂ ಕೆಲಸಕ್ಕೆ ತೆಗೆದುಕೊಳ್ಳದ ಹಾಗೆ ಮಾಡಿದ್ದಾರೆ. ಲೋಕೇಶ್‌ ಮತ್ತು ಅನಿಲ್‌ ಅವರಿಂದ ಕೆಲಸ ಸಿಗದ ನಾನು ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್‌ನಲ್ಲಿ ಮೃತ ಕಿರಣ್ ಉಲ್ಲೇಖ ಮಾಡಿದ್ದಾನೆ. ಈ ಬಗ್ಗೆ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Life threat

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ (Life threat) ಸಂದೇಶ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ಬಂದಿರೋ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ್‌ ಕುಮಾರ ಶ್ರೀಪಾದಗೆ ಬೆದರಿಕೆ ಮೇಲ್ ಬಂದಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಸಂದೇಶ ಬಂದಿದ್ದು, ” ನಾವು ನಿಮ್ಮನ್ನು ನಾಶ ಮಾಡುತ್ತೇವೆ, ಬೆಂಕಿಯಲ್ಲಿ ಎಸೆಯುತ್ತೇವೆ, ಉಸಿರುಗಟ್ಟಿ ಸಾಯುತ್ತೀರಿ” ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರಾ ಎಂದು ಬೆದರಿಕೆ ಸಂದೇಶ ಬಂದಿದೆ.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಈ ಬಗ್ಗೆ ಟರ್ಮಿನಲ್‌ ಉಸ್ತುವಾರಿ ಪ್ರತಾಪ ಅವರ ಗಮನಕ್ಕೆ ರೂಪೇಶ್‌ ಕುಮಾರ್‌ ತಂದಿದ್ದಾರೆ. ನಂತರ ಸಿಎಎಸ್‌ಒ, ಐಬಿ, ಬಿಡಿಡಿಎಸ್ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನೆ ಮಾಡಲಾಗಿದೆ. ವಾಯುಯಾನ ಭದ್ರತಾ ನಿಯಮದ ಪ್ರಕಾರ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂದೇಶ ಕಳುಹಿಸಿರುವ ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿದ್ಯುತ್ ತಂತಿ ತಗುಲಿ ಇಬ್ಬರು ಕಾರ್ಮಿಕರಿಗೆ ಗಾಯ

ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಇಬ್ಬರು ಕಾರ್ಮಿಕರಿಗೆ ಗಾಯಗಳಾಗಿರುವ ಘಟನೆ ನಗರದ ಕಾಶಿಪುರದಲ್ಲಿ ನಡೆದಿದೆ. ಗಣೇಶ್ ಹಾಗೂ ರಾಜು ಗಾಯಾಳುಗಳು.

ಸೆಂಟ್ರಿಂಗ್ ಕೆಲಸ ಮಾಡುವ ವೇಳೆ ಪಕ್ಕದಲ್ಲೇ ಇದ್ದ ವಿದ್ಯುತ್ ತಂತಿಯನ್ನು ರಾಜು ಮುಟ್ಟಿದ್ದಾನೆ. ರಾಜುವನ್ನು ರಕ್ಷಿಸಲು ಹೋಗಿ ಗಣೇಶ್‌ಗೂ ಶಾಕ್‌ ಹೊಡೆದಿದೆ. ಹೀಗಾಗಿ ಗಾಯಗೊಂಡ ಇಬ್ಬರನ್ನೂ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

ಕ್ರೈಂ

Robbery Case: 30 ಸೆಕೆಂಡ್‌ನಲ್ಲಿ ಇಡೀ ಜ್ಯುವೆಲ್ಲರಿ ದರೋಡೆ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Robbery Case: ಕೇವಲ 30 ಸೆಕೆಂಡಿನಲ್ಲಿ 60 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ ಮಾಡಲಾಗಿದೆ. ಸಿನಿಮಾ ಸ್ಟೈಲ್‌ನಲ್ಲಿ ಜುವೆಲ್ಲರಿ ಶಾಪ್‌ನಲ್ಲಿ ದರೋಡೆ ಮಾಡಲಾಗಿದೆ. ಮಾದನಾಯಕನಹಳ್ಳಿಯ ಲಕ್ಷ್ಮಿಪುರದ ಆಭರಣ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಗನ್ ತೋರಿಸಿ ಚಿನ್ನಾಭರಣ ದೋಚಿದ್ದಾರೆ.

VISTARANEWS.COM


on

jewellery robbery case
Koo

ಬೆಂಗಳೂರು: ರಾಜಧಾನಿಯ ಚಿನ್ನಾಭರಣದ (Jewelry) ಅಂಗಡಿಗೆ ನುಗ್ಗಿದ ಕಳ್ಳರು ಮಾಲೀಕರಿಗೆ ಗನ್ (gun point) ತೋರಿಸಿ ಕೇವಲ 30 ಸೆಕೆಂಡುಗಳಲ್ಲಿ ಸುಮಾರು 60 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕದ್ದು (Robbery Case) ಪರಾರಿಯಾಗಿರುವ ಘಟನೆ ಬೆಂಗಳೂರಿನ (Bangalore Crime) ಮಾದನಾಯಕನಹಳ್ಳಿಯ ಲಕ್ಷ್ಮಿಪುರದಲ್ಲಿ ನಡೆದಿದೆ.

ಕೇವಲ 30 ಸೆಕೆಂಡಿನಲ್ಲಿ 60 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ ಮಾಡಲಾಗಿದೆ. ಸಿನಿಮಾ ಸ್ಟೈಲ್‌ನಲ್ಲಿ ಜುವೆಲ್ಲರಿ ಶಾಪ್‌ನಲ್ಲಿ ದರೋಡೆ ಮಾಡಲಾಗಿದೆ. ಮಾದನಾಯಕನಹಳ್ಳಿಯ ಲಕ್ಷ್ಮಿಪುರದ ಆಭರಣ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಗನ್ ತೋರಿಸಿ ಚಿನ್ನಾಭರಣ ದೋಚಿದ್ದಾರೆ.

ಒಬ್ಬ ಕಳ್ಳ ಗನ್ ಹಿಡಿದು ಮಾಲೀಕರಿಗೆ ಬೆದರಿಕೆ ಹಾಕಿದ್ದು, ಮತ್ತೊಬ್ಬ ಚಿನ್ನಭಾರಣಗಳನ್ನು ಚೀಲಕ್ಕೆ ತುಂಬಿಕೊಂಡಿದ್ದ. ಇನ್ನೊಬ್ಬ ಕಳ್ಳ ಹೊರಗೆ ಬೈಕ್‌ನಲ್ಲಿ ಕಾಯುತ್ತಿದ್ದ. ಕೆಲವೇ ಸೆಕೆಂಡಿನಲ್ಲಿ ಚಿನ್ನಾಭರಣಗಳನ್ನು ದೋಚಿ ಅಲ್ಲಿಂದ ಪರಾರಿಯಾಗಿದ್ದಾರೆ. 750 ಗ್ರಾಂಗಿಂತ ಹೆಚ್ಚು ಚಿನ್ನ ಕದ್ದು ಅಲ್ಲಿಂದ ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಎಸ್ಕೇಪ್‌ ಆಗಿದ್ದಾರೆ. ಈ ದರೋಡೆಕೋರರ ಕೃತ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ, ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ (Life threat) ಸಂದೇಶ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ಬಂದಿರೋ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ಗೋಕುಲ ರೋಡ್ ಪೊಲೀಸ್‌ ಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ್‌ ಕುಮಾರ ಶ್ರೀಪಾದಗೆ ಬೆದರಿಕೆ ಮೇಲ್ ಬಂದಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಸಂದೇಶ ಬಂದಿದ್ದು, ” ನಾವು ನಿಮ್ಮನ್ನು ನಾಶ ಮಾಡುತ್ತೇವೆ, ಬೆಂಕಿಯಲ್ಲಿ ಎಸೆಯುತ್ತೇವೆ, ಉಸಿರುಗಟ್ಟಿ ಸಾಯುತ್ತೀರಿ” ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರಾ ಎಂದು ಬೆದರಿಕೆ ಸಂದೇಶ ಬಂದಿದೆ.

ಈ ಬಗ್ಗೆ ಟರ್ಮಿನಲ್‌ ಉಸ್ತುವಾರಿ ಪ್ರತಾಪ ಅವರ ಗಮನಕ್ಕೆ ರೂಪೇಶ್‌ ಕುಮಾರ್‌ ತಂದಿದ್ದಾರೆ. ನಂತರ ಸಿಎಎಸ್‌ಒ, ಐಬಿ, ಬಿಡಿಡಿಎಸ್ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನೆ ಮಾಡಲಾಗಿದೆ. ವಾಯುಯಾನ ಭದ್ರತಾ ನಿಯಮದ ಪ್ರಕಾರ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂದೇಶ ಕಳುಹಿಸಿರುವ ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

Continue Reading
Advertisement
ಕಥೆಕೂಟ literature meet
ಕಲೆ/ಸಾಹಿತ್ಯ14 seconds ago

ಕಥೆ ನಿಜ, ಕಥೆಗಾರ ಸುಳ್ಳು: ಕಥೆಕೂಟ ಸಮಾವೇಶದಲ್ಲಿ ಟಿಎನ್‌ ಸೀತಾರಾಮ್‌

CM Siddaramaiah
ಕರ್ನಾಟಕ3 mins ago

CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

Jayam Ravi's wife Aarti Ravi removes all her Instagram photos
ಕಾಲಿವುಡ್6 mins ago

Jayam Ravi: ಜಯಂ ರವಿ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಹಾದಿಯಲ್ಲಿ ಮತ್ತೊಂದು ಸ್ಟಾರ್‌ ಜೋಡಿ!

Gold Rate Today
ಚಿನ್ನದ ದರ31 mins ago

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕ್ರೀಡೆ36 mins ago

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

Rashmika Mandanna Ayushmann Khurrana Team Up For Horror Comedy
ಟಾಲಿವುಡ್42 mins ago

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Self Harming
ಕರ್ನಾಟಕ47 mins ago

Self Harming: ಕೆಲಸದಿಂದ ತೆಗೆದು ಕಿರುಕುಳ; ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

jewellery robbery case
ಕ್ರೈಂ48 mins ago

Robbery Case: 30 ಸೆಕೆಂಡ್‌ನಲ್ಲಿ ಇಡೀ ಜ್ಯುವೆಲ್ಲರಿ ದರೋಡೆ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Parineethi Chopra
Latest59 mins ago

Parineethi Chopra: ಏಳುಮಲ್ಲಿಗೆ ತೂಕದ ಚೆಲುವೆ ಪರಿಣಿತಿ ಚೋಪ್ರಾ ಸಿಕ್ಕಾಪಟ್ಟೆ ದಪ್ಪಗಾಗಿದ್ದು ಯಾಕೆ?

Asaduddin Owais
ದೇಶ1 hour ago

Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌