Insurance Claim : ಕಾರಿಗೆ ಆಫ್ಟರ್ ಮಾರ್ಕೆಟ್​ ಆಕ್ಸೆಸರಿ ಹಾಕಿಸುತ್ತೀರಾ? ಗಾಡಿಗೇನಾದರೂ ಆದರೆ ಇನ್ಶುರೆನ್ಸ್​​ ಸಿಗುವುದಿಲ್ಲ! - Vistara News

ಪ್ರಮುಖ ಸುದ್ದಿ

Insurance Claim : ಕಾರಿಗೆ ಆಫ್ಟರ್ ಮಾರ್ಕೆಟ್​ ಆಕ್ಸೆಸರಿ ಹಾಕಿಸುತ್ತೀರಾ? ಗಾಡಿಗೇನಾದರೂ ಆದರೆ ಇನ್ಶುರೆನ್ಸ್​​ ಸಿಗುವುದಿಲ್ಲ!

Insurance Claim : ಕಾರುಗಳಿಗೆ ಆಫ್ಟರ್ ಮಾರ್ಕೆಟ್ ಆಕ್ಸೆಸರಿಗಳನ್ನು ಹಾಕಿ ತೊಂದರೆ ಆದರೆ ಅದಕ್ಕೆ ಉತ್ಪಾದಕರು ಹಾಗೂ ವಿಮಾ ಕಂಪನಿ ಹೊಣೆಗಾರಿಕೆ ವಹಿಸುವುದಿಲ್ಲ.

VISTARANEWS.COM


on

Thar Jeep
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತದಲ್ಲಿ ವಾಹನಗಳಿಗೆ ಬೆಂಕಿ ಬೀಳುವ ಘಟನೆಗಳ ಸಾಮಾನ್ಯವಾಗುತ್ತಿವೆ. ಅದಕ್ಕೆ ನಾನಾ ಕಾರಣಗಳಿವೆ. ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ವರದಿಗಳನ್ನು ನಾವು ಹೆಚ್ಚಾಗಿ ನೋಡುವುದಾದರೂ ಪೆಟ್ರೋಲ್​ ವಾಹನಗಳೂ ಬೆಂಕಿಗೆ ಆಹುತಿಯಾದ ಸಾಕಷ್ಟು ಪ್ರಕರಣಗಳಿವೆ. ಬೆಂಕಿ ಬಿದ್ದಾಗ ಸಾಮಾನ್ಯವಾಗಿ ವಿಮಾ ಕಂಪನಿಗಳು ಅದಕ್ಕೆ ಪರಿಹಾರ ನೀಡುತ್ತವೆ. ಆದರೆ, ಹರಿಯಾಣದಲ್ಲಿ ವ್ಯತಿರಿಕ್ತ ಪ್ರಕರಣವೊಂದು ನಡೆದಿದೆ. ಅಲ್ಲಿ ಕೆಲವೇ ತಿಂಗಳುಗಳ ಹಳೆಯದಾದ ಮಹೀಂದ್ರಾ ಥಾರ್ ಬೆಂಕಿಗೆ ಆಹುತಿಯಾಗಿದೆ. ಅಚ್ಚರಿಯೆಂದರೆ ವಿಮಾ ಕಂಪನಿ (Insurance Claim) ಮತ್ತು ತಯಾರಕರು ಅವನ ನಷ್ಟಕ್ಕೆ ಪರಿಹಾರ ಒದಗಿಸಿಲ್ಲ. ಅದಕ್ಕೆ ಕಾರಣವೇನು ಗೊತ್ತೇ? ಅನಧಿಕೃತವಾಗಿ ಕಾರಿಗೆ ಆಕ್ಸೆಸರಿ ಅಳವಡಿಸಿರುವುದು.

ಘಟನೆಯನ್ನು ಪ್ರತೀಕ್ ಸಿಂಗ್ ಎಂಬುವರು ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ ಮಾಲೀಕರು 2023ರ ಡಿಸೆಂಬರ್​​ನಲ್ಲಿ ಮಹೀಂದ್ರಾ ಥಾರ್​ ಕಾರನ್ನು ಖರೀದಿಸಿದ್ದಾರೆ ಎಂದು ಹೇಳಲಾಗಿದೆ. ಕಾರನ್ನು ಸುಮಾರು 700 ಕಿ.ಮೀ ಓಡಿಸಿದ್ದರು ಮತ್ತು ಅದನ್ನು ಮೊದಲ ಸರ್ವಿಸ್​​ಗಾಗಿ ಶೋರೂಮ್​ಗೆ ಇಟ್ಟಿದ್ದರು. ಕಾರನ್ನು ಬಿಡುವಾಗ, 50-60 ಕಿ.ಮೀ.ಗಿಂತ ಹೆಚ್ಚು ದೂರ ಓಡಿಸಿದ ನಂತರ ಕಾರನ್ನು ನಿಲ್ಲಿಸಿದಾಗಲೆಲ್ಲಾ ಕ್ಯಾಬಿನ್ ಒಳಗೆ ಸುಟ್ಟ ವಾಸನೆ ಬರುತ್ತಿದೆ ಎಂದು ಸಿಬ್ಬಂದಿಗೆ ತಿಳಿಸಿದ್ದರು.

ಸರ್ವಿಸ್​ನಿಂದ ಕಾರನ್ನು ವಾಪಸ್​​ ತೆಗೆದುಕೊಳ್ಳಲು ಹಿಂತಿರುಗಿದಾಗ, ಅಲ್ಲಿನ ಸಿಬ್ಬಂದಿ ಸಮಸ್ಯೆಯನ್ನು ಪರಿಹರಿಸಲಾಗಿದೆ ಚಿಂತಿಸಬೇಕಾಗಿಲ್ಲ ಎಂದು ಹೇಳಿದ್ದರು. ಅಲ್ಲದೆ, ಸುಟ್ಟ ವಾಸನೆ ಹೊಸ ಕಾರುಗಳಲ್ಲಿ ಸಾಮಾನ್ಯ ಎಂದೂ ನಂಬಿಸಿದ್ದರು. ಮಾಲೀಕರು ತಂತ್ರಜ್ಞರ ಮಾತನ್ನು ನಂಬಿ ಕಾರು ವಾಪಸ್​ ತೆಗೆದುಕೊಂಡು ಹೋಗಿದ್ದರು.

ಕೆಲವು ದಿನಗಳ ಬಳಿಕ ಮಾಲೀಕರು ತಮ್ಮ ಕುಟುಂಬದೊಂದಿಗೆ ತಮ್ಮ ಮನೆಯಿಂದ 200 ಕಿ.ಮೀ ದೂರದಲ್ಲಿ ನಡೆದ ಮದುವೆಯಲ್ಲಿ ಭಾಗವಹಿಸಲು ಹೋಗಿದ್ದರು. ಅಲ್ಲಿ ಕಾರು ಪಾರ್ಕ್ ಮಾಡುವಾಗ ಕಾರಿನೊಳಗೆ ಸುಟ್ಟ ವಾಸನೆ ಜೋರಾಗಿತ್ತು. ಸರ್ವಿಸ್​ ಸಿಬ್ಬಂದಿ ಮಾತು ಕೇಳಿ ವಾಸನೆಯನ್ನು ನಿರ್ಲಕ್ಷಿಸಿ ಹೊರಟಿದ್ದರು. ಅವರು ಹೊರಬಂದ ಕೆಲವು ನಿಮಿಷಗಳ ನಂತರ ಥಾರ್ ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಭಸ್ಮವಾಗಿತ್ತು.

ಇದನ್ನೂ ಓದಿ : Tata Motors : ಸನಂದ್ ಘಟಕದಲ್ಲಿ 10 ಲಕ್ಷ ಕಾರು ಉತ್ಪಾದಿಸಿದ ಟಾಟಾ ಮೋಟಾರ್ಸ್

ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಅಗ್ನಿಶಾಮಕ ದಳ ಸ್ಥಳಕ್ಕೆ ತಲುಪುವಷ್ಟರಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ಮಾಲೀಕರು ಘಟನೆಯ ಬಗ್ಗೆ ವಿಮೆ ಮತ್ತು ಡೀಲರ್ ಇಬ್ಬರಿಗೂ ಮಾಹಿತಿ ನೀಡಿದ್ದರು. ವಿಮಾ ಕಂಪನಿಯು ತನಿಖೆ ನಡೆಸಲು ಕಾರ್ಯನಿರ್ವಾಹಕರನ್ನು ಕಳುಹಿಸಿತು ಮತ್ತು ಉತ್ಪಾದನಾ ದೋಷದಿಂದಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಡೀಲರ್ ಜೊತೆ ಹೋಗಿ ಮಾತನಾಡಬೇಕೆಂದು ಮಾಲೀಕರಿಗೆ ತಿಳಿಸಿತು. ಅಂತೆಯೇ ಅವರು ಶೋರೂಮ್​ಗೆ ಮಾಹಿತಿ ನೀಡಿದ್ದರು. ಈ ವೇಳೆ ಅವರಿಗೆ ಆಘಾತ ಎದುರಾಯಿತು.

ಕುತ್ತು ತಂದ ರಿಯರ್​ ಕ್ಯಾಮೆರಾ

ಈ ಕಾರಿನಲ್ಲಿ ಆಫ್ಟರ್ ಮಾರ್ಕೆಟ್ ರಿಯರ್ ಪಾರ್ಕಿಂಗ್ ಕ್ಯಾಮೆರಾವನ್ನು ಅಳವಡಿಸಲಾಗಿದೆ ಎಂದು ಶೋ ರೂಮ್ ಸಿಬ್ಬಂದಿ ಹೇಳಿದ್ದಾರೆ. ಕಾರಿನಲ್ಲಿ ಬಾಹ್ಯ ಫಿಟ್ಮೆಂಟ್ ಕಂಡುಬಂದಿದ್ದರಿಂದ ಕ್ಲೈಮ್ ಅನ್ನು ತಿರಸ್ಕರಿಸಿದ್ದಾರೆ. ಈ ಮೂಲಕ ವಿಮೆ ಹಾಗೂ ಮಹೀಂದ್ರಾ ಕಂಪನಿ ಎರಡೂ ಸಮಸ್ಯೆಯಿಂದ ನುಣಚಿಕೊಂಡಿದೆ. ಆದರೆ, ಕ್ಯಾಮೆರಾವನ್ನು ಅಳವಡಿಸಿರುವುದು ಡೀಲರ್​ಶಿಪ್​ ಕಡೆಯಿಂದ ಎಂಬುದಾಗಿ ಥಾರ್ ಮಾಲೀಕರು ಹೇಳಿಕೊಂಡಿದ್ದಾರೆ. ಅಲ್ಲದೆ ಸೋಶಿಯಲ್​ ಮೀಡಿಯಾಗಳಲ್ಲಿ ಬೆಂಕಿ ಬಿದ್ದ ಸುದ್ದಿಯಾದ ಬಳಿಕ ಅವರು ಬಾಹ್ಯ ದೋಷದಿಂದ ಘಟನೆ ಸಂಭವಿಸಿದೆ ಎಂದು ವರದಿ ನೀಡಿದೆ.

ತಯಾರಕರು ಮತ್ತು ವಿಮಾ ಕಂಪನಿ ಎರಡೂ ಅವನಿಗೆ ಯಾವುದೇ ಪರಿಹಾರವನ್ನು ನೀಡುತ್ತಿಲ್ಲ. ಹೀಗಾಗಿ ಕಾರಿ ಮಾಲೀಕರಲ್ಲಿ ಈಗ ಸುಟ್ಟ ಕಾರು ಹೊರತುಪಡಿಸಿ ಬೇರೇನೂ ಇಲ್ಲ. ಮಾಲೀಕರು ಅಸ್ತಿತ್ವದಲ್ಲಿಲ್ಲದ ಕಾರಿಗೆ ಇಎಂಐ ಪಾವತಿ ಮಾಡಬೇಕಾಗುತ್ತದೆ.

ತಯಾರಕರು ಶೀಘ್ರದಲ್ಲೇ ಪರಿಹಾರದೊಂದಿಗೆ ಬರುತ್ತಾರೆ ಮತ್ತು ಈ ಸಮಸ್ಯೆಯನ್ನು ಪರಿಹರಿಸುತ್ತಾರೆ ಎಂದು ನಾವು ನಿಜವಾಗಿಯೂ ಭಾವಿಸುತ್ತೇವೆ. ಸುಟ್ಟ ವಾಸನೆ ಬಗ್ಗೆ ಹೇಳಿದಾಗ ಸರ್ವಿಸ್ ಸ್ಟೇಷನ್​ ಸಿಬ್ಬಂದಿ ಪ್ರತಿಕ್ರಿಯಿಸಿರಲಿಲ್ಲ. ಅವರು ಕೆಲಸ ಮಾಡಿದ್ದರೆ ಸಮಸ್ಯೆ ಆಗುತ್ತಿಲ್ಲ ಎಂದು ಕಾರಿನ ಮಾಲೀಕರು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

PM Narendra Modi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ; ಕರ್ನಾಟಕದಲ್ಲಿ ಶಿಕ್ಷಣ ನೀತಿಯಲ್ಲೂ ರಾಜಕೀಯ: ಮೋದಿ ಕಿಡಿ

PM Narendra Modi: ಕರ್ನಾಟಕ ಶಿಕ್ಷಣ ನೀತಿಯಲ್ಲಿ ಕಾಂಗ್ರೆಸ್ ಮಾಡಿದ್ದು ವೋಟ್‌ ಬ್ಯಾಂಕ್ ರಾಜಕೀಯವಾಗಿದೆ. ಕರ್ನಾಟಕ ಯುವಕರು, ವಿದ್ಯಾರ್ಥಿಗಳ ವಿಚಾರದಲ್ಲೂ ಕಾಂಗ್ರೆಸ್‌ನಿಂದ ರಾಜಕೀಯ ನಡೆದಿದೆ. ಕರ್ನಾಟಕದ ಆರೋಗ್ಯ ಹಾಗೂ ನೀರಾವರಿ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಪಾಲಿಟಿಕ್ಸ್ ಮಾಡಲಾಗಿದೆ. ಭಗವಾನ್‌ ಬಸವೇಶ್ವರರ ನಾಡಿನಲ್ಲಿ ಪ್ರಜಾಪ್ರಭುತ್ವಕ್ಕೆ ಮಾರಕವಾದ ರಾಜಕೀಯ ನಡೆಯುತ್ತಿದೆ. ಅತಿ ದೊಡ್ಡ ಪಾಪದ ಕೆಲಸದಲ್ಲಿ ಕಾಂಗ್ರೆಸ್ ತೊಡಗಿಕೊಂಡಿದೆ. ಎಸ್‌ಸಿ, ಎಸ್‌ಟಿ ಅಭಿವೃದ್ಧಿ ವಿಚಾರದಲ್ಲೂ ಕಾಂಗ್ರೆಸ್‌ ಹಗರಣ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

5 PM for 5 years if Congress comes to power says PM Narendra Modi
Koo

ದಾವಣಗೆರೆ: ಬಿಜೆಪಿ ಸರ್ಕಾರ ದೇಶದಲ್ಲಿ ಅಭಿವೃದ್ಧಿ ಮಾಡುತ್ತಲೇ ಹೋಗುತ್ತಿದೆ. ಆದರೆ, ಬಿಜೆಪಿ ಸರ್ಕಾರದ ಕೆಲಸವನ್ನು ಕಾಂಗ್ರೆಸ್‌ ಹಾಳು ಮಾಡಲು ಪ್ರಯತ್ನ ಪಡುತ್ತಲೇ ಇದೆ. ಈಗ ಇಂಡಿ ಅಲೆಯನ್ಸ್‌ನವರು (INDI Alliance) ಹೊಸ ಫಾರ್ಮೂಲಾವನ್ನು ಮಾಡಿಕೊಂಡು ರಾಜಕೀಯವನ್ನು ಮಾಡುತ್ತಿದ್ದಾರೆ. ಇಂಡಿ ಒಕ್ಕೂಟಕ್ಕೆ ಅಧಿಕಾರ ಸಿಕ್ಕರೆ ಒಂದೊಂದು ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿ ಆಗುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ವಾಗ್ದಾಳಿ ನಡೆಸಿದರು.

ದಾವಣಗೆರೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮೊದಲ ವರ್ಷಕ್ಕೆ ಒಬ್ಬರು ಪ್ರಧಾನಿ, ಎರಡನೇ ವರ್ಷಕ್ಕೆ ಒಬ್ಬರು, ಮೂರನೇ ವರ್ಷಕ್ಕೆ, ನಾಲ್ಕನೇ ಹಾಗೂ ಐದನೇ ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿಯಾಗುತ್ತಾರೆ. ಹೀಗೆ 5 ವರ್ಷ ಕಾಲ ದೇಶವನ್ನು ಒಬ್ಬರ ಕೈಗೆ ಕೊಡುವಾಗ ನೀವು ಯೋಚನೆ ಮಾಡುತ್ತೀರಲ್ಲವೇ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಶಿಕ್ಷಣದಲ್ಲೂ ರಾಜಕೀಯ

ಕರ್ನಾಟಕ ಶಿಕ್ಷಣ ನೀತಿಯಲ್ಲಿ ಕಾಂಗ್ರೆಸ್ ಮಾಡಿದ್ದು ವೋಟ್‌ ಬ್ಯಾಂಕ್ ರಾಜಕೀಯವಾಗಿದೆ. ಕರ್ನಾಟಕ ಯುವಕರು, ವಿದ್ಯಾರ್ಥಿಗಳ ವಿಚಾರದಲ್ಲೂ ಕಾಂಗ್ರೆಸ್‌ನಿಂದ ರಾಜಕೀಯ ನಡೆದಿದೆ. ಕರ್ನಾಟಕದ ಆರೋಗ್ಯ ಹಾಗೂ ನೀರಾವರಿ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಪಾಲಿಟಿಕ್ಸ್ ಮಾಡಲಾಗಿದೆ. ಭಗವಾನ್‌ ಬಸವೇಶ್ವರರ ನಾಡಿನಲ್ಲಿ ಪ್ರಜಾಪ್ರಭುತ್ವಕ್ಕೆ ಮಾರಕವಾದ ರಾಜಕೀಯ ನಡೆಯುತ್ತಿದೆ. ಅತಿ ದೊಡ್ಡ ಪಾಪದ ಕೆಲಸದಲ್ಲಿ ಕಾಂಗ್ರೆಸ್ ತೊಡಗಿಕೊಂಡಿದೆ. ಎಸ್‌ಸಿ, ಎಸ್‌ಟಿ ಅಭಿವೃದ್ಧಿ ವಿಚಾರದಲ್ಲೂ ಕಾಂಗ್ರೆಸ್‌ ಹಗರಣ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ದೆಹಲಿಯಿಂದ 1 ರೂಪಾಯಿ ಕೊಟ್ಟರೆ ಬರೀ ಹದಿನೈದು ಪೈಸೆ ಮಾತ್ರ ತಲುಪ್ತಿತ್ತು. ಈ ವಿಷಯವನ್ನು ಕಾಂಗ್ರೆಸ್‌ನಿಂದ ಪ್ರಧಾನಿಯಾದವರೇ ಹೇಳಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನ ಎಲ್ಲ ಭ್ರಷ್ಟಾಚಾರಕ್ಕೆ ಇದೇ ಸಾಕ್ಷಿಯಾಗುತ್ತಿತ್ತು. ಇನ್ನೂ ಹುಟ್ಟದ ಮಕ್ಕಳ ಹೆಸರಲ್ಲಿ, ಸತ್ತವರ ಹೆಸರಲ್ಲೂ ಕಾಂಗ್ರೆಸ್‌ನಿಂದ ಲೂಟಿ ಮಾಡಲಾಗಿದೆ. ಯಾರೂ ಊಹಿಸದ ರೀತಿಯಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದ್ದವರು ಕಾಂಗ್ರೆಸಿಗರಾಗಿದ್ದಾರೆ. ಸರ್ಕಾರದ ಖಜಾನೆ ಲೂಟಿ ಮಾಡುವುದೇ ಕಾಂಗ್ರೆಸ್ ಪಕ್ಷದ ನಾಯಕರ ಗುರಿಯಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದರು.

ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲ

ದಾವಣಗೆರೆ: ಈ ಬಾರಿ ಕರ್ನಾಟಕದ ಜನತೆ ಕಾಂಗ್ರೆಸ್‌ನ ಪಾಪದ ಕೆಲಸಗಳಿಗೆ ತಕ್ಕ ಶಿಕ್ಷೆಯನ್ನು ನೀಡಲಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್‌ (Congress Karnataka) ಪಕ್ಷವೂ ಖಾತೆ ತೆರೆಯುವುದೇ ಅನುಮಾನವಾಗಿದೆ. ಇನ್ನು ಮುಂದೆ ಕಾಂಗ್ರೆಸ್‌ನ ಲೂಟಿ ಪ್ರಕರಣಗಳು ಒಂದೊಂದಾಗಿಯೇ ಹೊರ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದರು.

ದಾವಣಗೆರೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಾರ್ಟಿಯು ಬೇರೆ ಬೇರೆ ಲೂಟಿಯಲ್ಲಿ ತೊಡಗಿಕೊಂಡಿದೆ. ಈಗ ಒಳಗೊಳಗೆ ಯುದ್ಧ ನಡೆಯುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಲೂಟಿ ಪ್ರಕರಣಗಳು ಒಂದೊಂದಾಗಿ ಬಯಲಾಗುತ್ತದೆ ಎಂದು ಹೇಳಿದರು.

ಸೋಲುವ ಭೀತಿಯಿಂದ ಇವಿಎಂ ಪ್ರಸ್ತಾಪ

ಈ ಕಾಂಗ್ರೆಸ್‌ನವರಿಗೆ ಯಾವುದರ ಮೇಲೂ ವಿಶ್ವಾಸ ಇಲ್ಲ. ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆಯಲ್ಲಿ ಸೋಲುತ್ತಲೇ ಬಂದಿದ್ದಾರೆ. ಮೋದಿ ಗೆದ್ದರೂ ಇವಿಎಂ ಎಂದು ಹೇಳುತ್ತಾರೆ. ಈಗಲೂ ಸೋಲುವ ಭೀತಿಯಿಂದ ಅವರು ಇವಿಎಂ ಬಗ್ಗೆ ಸುಪ್ರೀಂ ಕೋರ್ಟ್‌ ಮೆಟ್ಟಿಲು ಹತ್ತಿದ್ದರು. ಆದರೆ, ಸುಪ್ರೀಂ ಕೋರ್ಟ್‌ನಲ್ಲಿ ಕಾಂಗ್ರೆಸ್‌ನವರಿಗೆ ಮುಖಭಂಗವಾಗಿದೆ. ಈಗ ಕಾಂಗ್ರೆಸ್‌ನವರು ಕಂಗಾಲಾಗಿ ಕುಳಿತಿದ್ದಾರೆ ಎಂದು ನರೇಂದ್ರ ಮೋದಿ ಕಿಡಿಕಾರಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ!

ಬಿಜೆಪಿ ಸರ್ಕಾರ ದೇಶದಲ್ಲಿ ಅಭಿವೃದ್ಧಿ ಮಾಡುತ್ತಲೇ ಹೋಗುತ್ತಿದೆ. ಆದರೆ, ಬಿಜೆಪಿ ಸರ್ಕಾರದ ಕೆಲಸವನ್ನು ಕಾಂಗ್ರೆಸ್‌ ಹಾಳು ಮಾಡಲು ಪ್ರಯತ್ನ ಪಡುತ್ತಲೇ ಇದೆ. ಈಗ ಇಂಡಿ ಅಲೆಯನ್ಸ್‌ನವರು ಹೊಸ ಫಾರ್ಮೂಲಾವನ್ನು ಮಾಡಿಕೊಂಡು ರಾಜಕೀಯವನ್ನು ಮಾಡುತ್ತಿದ್ದಾರೆ. ಇಂಡಿ ಒಕ್ಕೂಟಕ್ಕೆ ಅಧಿಕಾರ ಸಿಕ್ಕರೆ ಒಂದೊಂದು ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿ ಆಗುತ್ತಾರೆ. ಮೊದಲ ವರ್ಷಕ್ಕೆ ಒಬ್ಬರು ಪ್ರಧಾನಿ, ಎರಡನೇ ವರ್ಷಕ್ಕೆ ಒಬ್ಬರು, ಮೂರನೇ ವರ್ಷಕ್ಕೆ, ನಾಲ್ಕನೇ ಹಾಗೂ ಐದನೇ ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿಯಾಗುತ್ತಾರೆ. ಹೀಗೆ 5 ವರ್ಷ ಕಾಲ ದೇಶವನ್ನು ಒಬ್ಬರ ಕೈಗೆ ಕೊಡುವಾಗ ನೀವು ಯೋಚನೆ ಮಾಡುತ್ತೀರಲ್ಲವೇ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಶಿಕ್ಷಣ ನೀತಿಯಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್‌ ರಾಜಕೀಯ

ಕಾಂಗ್ರೆಸ್‌ ಪಕ್ಷದವರಿಂದ ಜನಸಾಮಾನ್ಯರ ಜೀವನದಲ್ಲೂ ಆಟವಾಡಲಾಗುತ್ತಿದೆ. ಶಿಕ್ಷಣ ನೀತಿಯಲ್ಲಿ ಸಹ ಕರ್ನಾಟಕದಲ್ಲಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ. ಯುವಕರು, ವಿದ್ಯಾರ್ಥಿಗಳ ಭವಿಷ್ಯದಲ್ಲಿಯೂ ಆಟವಾಡುತ್ತಿದೆ. ಆರೋಗ್ಯ, ನೀರಾವರಿ ಸೇರಿ ಎಲ್ಲ ಕ್ಷೇತ್ರದಲ್ಲಿಯೂ ಚೆಲ್ಲಾಟವಾಟುತ್ತಿದೆ. ದೇಶದ ಭವಿಷ್ಯವನ್ನು ಬರ್ಬಾದ್‌ ಮಾಡುವ ಕಾಂಗ್ರೆಸ್‌ ಪಕ್ಷವನ್ನು ನಂಬಲು ಆಗುತ್ತದೆಯೇ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ನಮ್ಮ ಸರ್ಕಾರ ಬಂದಾಗ ಭ್ರಷ್ಟಾಚಾರಕ್ಕೆ ಕಡಿವಾಣ

ಈ ಹಿಂದೆ ಕಾಂಗ್ರೆಸ್‌ನಿಂದ ಪ್ರಧಾನಿಯಾದವರೊಬ್ಬರು ಹೇಳಿಕೆ ಪ್ರಕಾರ, ದೇಶದಲ್ಲಿ ಒಂದು ರೂಪಾಯಿ ಬಿಡುಗಡೆ ಮಾಡಿದರೆ ಅದು ಫಲಾನುಭವಿಗೆ ತಲುಪುವ ಹೊತ್ತಿನಲ್ಲಿ 15 ಪೈಸೆ ಆಗುತ್ತಿತ್ತು. ಆದರೆ, ಈಗ ಪರಿಸ್ಥಿತಿ ಏನಾಗಿದೆ? ಸರ್ಕಾರ ಬಿಡುಗಡೆ ಮಾಡುವ 1 ರೂಪಾಯಿ ಪೂರ್ತಿಯಾಗಿ ಫಲಾನುಭವಿಯ ಖಾತೆಗೆ ಬೀಳುತ್ತಿದೆ. ಇದು ನಮ್ಮ ಭ್ರಷ್ಟಾಚಾರ ರಹಿತ ಆಡಳಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಯಾವುದೇ ಒಬ್ಬ ತಂದೆ – ತಾಯಿ ಏನು ಯೋಚನೆ ಮಾಡುತ್ತಾರೆ? ನಾವು ದುಡಿದಿದ್ದರಲ್ಲಿ ಸ್ವಲ್ಪ ಉಳಿಕೆ ಮಾಡಿ, ನಮ್ಮ ಕಾಲಾನಂತರ ಮಕ್ಕಳಿಗೆ ಸ್ವಲ್ಪ ಆದಾಯವನ್ನು, ಆಸ್ತಿಯನ್ನು ಮಾಡಿಡಬೇಕು ಎಂದು ಚಿಂತೆ ಮಾಡುತ್ತಾರಲ್ಲವೇ? ಆದರೆ, ಕಾಂಗ್ರೆಸ್‌ ಈಗ ಆ ಆಸ್ತಿ ಮೇಲೆ ಕಣ್ಣಿಟ್ಟಿದೆ. ನೀವು ಮಾಡುವ ಆಸ್ತಿಯಲ್ಲಿ ನಿಮ್ಮ ಮಕ್ಕಳಿಗೆ 55 ಪರ್ಸೆಂಟ್‌ ತೆರಿಗೆಯನ್ನು ಸರ್ಕಾರಕ್ಕೆ ಕಟ್ಟುವಂತೆ ನೀತಿ ನಿರೂಪಣೆ ಮಾಡಲು ಹೋಗಿದ್ದಾರೆ. ಇಂಥವರಿಗೆ ಪಾಠ ಕಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಯಾವುದಾದರೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರೆ ಅಲ್ಲಿ ಹೂಡಿಕೆ ಮಾಡಲು ಯಾರಾದರೂ ಮುಂದೆ ಬರುತ್ತಾರಾ? ಯಾವುದಾದರೂ ಕೈಗಾರಿಕೆಗಳು ಬರುತ್ತದೆಯೋ? ಬಂಗ್ಲೆ, ದುಡ್ಡು ಎಷ್ಟೇ ಇದ್ದರೂ ಸುರಕ್ಷತೆ ಇಲ್ಲದಿದ್ದರೆ ಹೇಗೆ? ಅದೇ ರೀತಿಯಾಗಿ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಬೆಂಗಳೂರಲ್ಲಿ ಬಾಂಬ್‌ ಬ್ಲಾಸ್ಟ್‌ ಆಗಿದ್ದಾಗ ಮೊದಲು ಏನೆಂದರು? ಸಿಲಿಂಡರ್‌ ಸ್ಫೋಟ ಎಂದು ಹೇಳಿದರು. ಕೊನೆಗೆ ಬಾಂಬ್‌ ಬ್ಲಾಸ್ಟ್‌ ಆಯಿತು ಎಂದು ಗೊತ್ತಾಗುತ್ತಿದ್ದಂತೆ, ಬ್ಯುಸಿನೆಸ್‌ ವಿರೋಧಿಗಳ ಕೃತ್ಯ ಎಂದು ಹೇಳಿದರು. ಇದು ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ನೇಹಾ ಹತ್ಯೆ ಸಾಮಾನ್ಯವಲ್ಲ

ಪ್ರತಿ ತಂದೆ ತಾಯಿಯೂ ತಮ್ಮ ಮಕ್ಕಳ ಸುರಕ್ಷತೆಯನ್ನು ನೋಡುತ್ತಾರೆ. ಆದರೆ, ಶಾಲಾ -ಕಾಲೇಜುಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಲು ಪೋಷಕರು ಆತಂಕ ಪಡುತ್ತಿದ್ದಾರೆ. ಹುಬ್ಬಳ್ಳಿಯ ನೇಹಾ ಹತ್ಯೆ ಸಾಮಾನ್ಯವಲ್ಲ. ವೋಟ್‌ ಬ್ಯಾಂಕ್‌ ಮಾಡುತ್ತಿರುವ ಕಾಂಗ್ರೆಸ್‌ನ ಆಡಳಿತಕ್ಕೆ ಇದು ಸಾಕ್ಷಿ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ವೋಟ್‌ ಬ್ಯಾಂಕ್‌ ಚಿಂತೆಯಲ್ಲಿ ಕಾಂಗ್ರೆಸ್‌ ಇದೆ. ಇದು ಅತ್ಯಂತ ಅಪಾಯಕಾರಿ ಮನಃಸ್ಥಿತಿಯಾಗಿದೆ. ವಿದ್ವಂಸಕ ಸಂಘಟನೆಗಳು ದೇಶದ ಸ್ವಾಸ್ಥ್ಯವನ್ನು ಹಾಳು ಮಾಡಲು ಹೊರಟಿದೆ. ಹಾಗಾಗಿ ಸಂಘಟನೆಯೊಂದನ್ನು ನಾವು ನಿಷೇಧ ಮಾಡಿದ್ದೇವೆ. ಆದರೆ, ಅಂಥ ಸಂಘಟನೆಯನ್ನು ಓಲೈಕೆ ಮಾಡಲು ಕಾಂಗ್ರೆಸ್‌ ಮುಂದಾಗಿದೆ ಎಂದು ತೀವ್ರ ವಾಗ್ದಾಳಿ ನಡೆಸಿದ ಮೋದಿ, ಸುರಕ್ಷತೆಯ ಗ್ಯಾರಂಟಿ, ವಿಕಾಸದ ಗ್ಯಾರಂಟಿ ಎಂದರೆ ಮೋದಿ ಎಂದು ಹೇಳಿದರು.

ಇದನ್ನೂ ಓದಿ: PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

ನೀವು ಇಲ್ಲಿ ಕೊಡುವ ಪ್ರತಿಯೊಂದು ಮತವೂ ನರೇಂದ್ರ ಮೋದಿಗೆ ಸಲ್ಲುತ್ತದೆ. ನಿಮ್ಮ ಪ್ರತಿ ಮತವೂ ದೇಶದ ಅಭಿವೃದ್ಧಿಯನ್ನು ಮಾಡಲಿದೆ. ಈವರೆಗಿನ ರೆಕಾರ್ಡ್‌ ಬ್ರೇಕ್‌ ಮಾಡುವ ನಿಟ್ಟಿನಲ್ಲಿ ಈ ಬಾರಿ ನಿಮ್ಮ ಹಕ್ಕು ಚಲಾಯಿಸಿ ಎಂದು ನರೇಂದ್ರ ಮೋದಿ ಕರೆ ನೀಡಿದರು.

ಜೂನ್‌ 4ರಂದು ಕರ್ನಾಟಕದಲ್ಲಿ ಎಲ್ಲ ಕಡೆಯೂ ವಿಜಯೋತ್ಸವ

2014, 2019ರ ಚುನಾವಣೆಗಿಂತಲೂ ಹೆಚ್ಚಿನ ಜನ ಬೆಂಬಲ ಈ ಬಾರಿ ಇದೆ. ಈ ಬಾರಿಯ ಅಲೆಯೇ ಬೇರೆಯಾಗಿದೆ. ಕರ್ನಾಟಕದ ಎಲ್ಲಿ ಹೋದರೂ ಬಿಜೆಪಿ ಪರ ಅಲೆ ಎದ್ದು ಕಾಣುತ್ತಿದೆ. 10 ವರ್ಷ ಮೋದಿ ಮಾಡಿದ ಕೆಲಸಕ್ಕೆ ಜನರು ಮನ ಸೋತಿದ್ದಾರೆ. ಜೂನ್‌ 4ರಂದು ಕರ್ನಾಟಕದಲ್ಲಿ ಎಲ್ಲ ಕಡೆಯೂ ವಿಜಯೋತ್ಸವ, ಸಂಭ್ರಮ ಮನೆ ಮಾಡಿರುತ್ತದೆ. ಯಾರಿಗೆಲ್ಲ ನಾನು ಆಭಾರಿಯಾಗಲಿ ಎಂದು ಹೇಳಿಕೊಳ್ಳಲು ಆಗದು. ನಾನು ಯಾವತ್ತೂ ನಿಲ್ಲುವುದಿಲ್ಲ, ನನ್ನ ಕೆಲಸವೂ ನಿಲ್ಲುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading

ದೇಶ

Drugs Smuggling: ಗುಜರಾತ್‌ನಲ್ಲಿ ಪಾಕ್‌ನ 14 ಜನರ ಬಂಧನ, 600 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ!

Drugs Smuggling: ಗುಜರಾತ್‌ ಕರಾವಳಿ ಪ್ರದೇಶದಲ್ಲಿ ಕರಾವಳಿ ರಕ್ಷಣಾ ಪಡೆ, ಭ್ರಷ್ಟಾಚಾರ ನಿಗ್ರಹ ದಳ (ATS) ಹಾಗೂ ಮಾದಕವಸ್ತು ನಿಯಂತ್ರಣ ಬ್ಯೂರೋ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಹಡಗನ್ನು ವಶಪಡಿಸಿಕೊಳ್ಳಲಾಗಿದೆ. 600 ಕೋಟಿ ರೂ. ಮೌಲ್ಯದ ಮಾದಕವಸ್ತುವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

VISTARANEWS.COM


on

Drugs Smuggling
Koo

ಗಾಂಧಿನಗರ: ಗುಜರಾತ್‌ ಬಳಿಯ ಸಾಗರ ಪ್ರದೇಶದಲ್ಲಿ (Gujarat) ಮಹತ್ವದ ಕಾರ್ಯಾಚರಣೆಯೊಂದನ್ನು ನಡೆಸಲಾಗಿದ್ದು, ಪಾಕಿಸ್ತಾನದ ಹಡಗನ್ನು ತಡೆಯಲಾಗಿದೆ. ಹಡಗಿನಲ್ಲಿ 600 ಕೋಟಿ ರೂ. ಮೌಲ್ಯದ 14 ಕೆ.ಜಿ ಮಾದಕವಸ್ತು ಸಿಕ್ಕಿದ್ದು, ಅಕ್ರಮ ಸಾಗಣೆ ಹಿನ್ನೆಲೆಯಲ್ಲಿ ಪಾಕಿಸ್ತಾನದ (Pakistan) 14 ಜನರನ್ನು ಬಂಧಿಸಲಾಗಿದೆ. ಪಾಕಿಸ್ತಾನದಿಂದ ಭಾರತಕ್ಕೆ ಅಕ್ರಮವಾಗಿ ಮಾದಕವಸ್ತು ಸಾಗಣೆ (Drugs Smuggling) ಮಾಡಲಾಗುತ್ತಿರುವ ಕುರಿತು ನಿಖರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ, ಡ್ರಗ್ಸ್‌ಅನ್ನು ವಶಪಡಿಸಿಕೊಳ್ಳಲಾಗಿದೆ.

ನಿಖರ ಮಾಹಿತಿ ಮೇರೆಗೆ ಕರಾವಳಿ ರಕ್ಷಣಾ ಪಡೆ, ಭ್ರಷ್ಟಾಚಾರ ನಿಗ್ರಹ ದಳ (ATS) ಹಾಗೂ ಮಾದಕವಸ್ತು ನಿಯಂತ್ರಣ ಬ್ಯೂರೋದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. “ಪಾಕಿಸ್ತಾನದ 14 ನಾಗರಿಕರನ್ನು ಬಂಧಿಸಲಾಗಿದ್ದು, ಮಾದಕವಸ್ತುವನ್ನು ಜಪ್ತಿ ಮಾಡಲಾಗಿದೆ. ಪ್ರಕರಣದ ಕುರಿತು ಇನ್ನಷ್ಟು ತನಿಖೆ ನಡೆಸಲಾಗುತ್ತಿದೆ” ಎಂಬುದಾಗಿ ಕರಾವಳಿ ರಕ್ಷಣಾ ಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ಮಾದಕವಸ್ತು ಸಾಗಣೆ ಮಾಡುತ್ತಿದ್ದ ಹಡಗನ್ನು ವಶಪಡಿಸಿಕೊಳ್ಳಲು ಅಧಿಕಾರಿಗಳು ಕರಾವಳಿ ರಕ್ಷಣಾ ಪಡೆಯ ಒಂದು ನೌಕೆ ಹಾಗೂ ವಿಮಾನವನ್ನು ಬಳಸಿಕೊಳ್ಳಲಾಗಿದೆ. ರಾಜರತನ್‌ ಎಂಬ ನೌಕೆಯ ಮೂಲಕ ಅಧಿಕಾರಿಗಳು ಬೆನ್ನತ್ತಿ ಪಾಕಿಸ್ತಾನದ ನೌಕೆಯನ್ನು ಹಿಡಿಯಲಾಗಿದೆ. ಗುಪ್ತಚರ ಮೂಲಗಳಿಂದ ನಿಖರ ಮಾಹಿತಿ ಮೇರೆಗೆ ಶಂಕಾಸ್ಪದ ಹಡಗನ್ನು ತಡೆದ, ಪರಿಶೀಲನೆ ನಡೆಸಿದಾಗ ಡ್ರಗ್ಸ್‌ ಜಾಲ ಬಯಲಾಗಿದೆ” ಎಂದು ತಿಳಿಸಿದ್ದಾರೆ.

ಎರಡು ತಿಂಗಳ ಹಿಂದಷ್ಟೇ ಗುಜರಾತ್‌ ಸಾಗರ ಪ್ರದೇಶದಲ್ಲಿ ಇರಾನ್‌ನಿಂದ ಸಾಗಿಸಲಾಗುತ್ತಿದ್ದ ಸುಮಾರು 3 ಸಾವಿರ ಕೆ.ಜಿ ಡ್ರಗ್ಸ್‌ಅನ್ನು ವಶಪಡಿಸಿಕೊಳ್ಳಲಾಗಿತ್ತು. ನೌಕಾಪಡೆಯ ಪ್ರಕಾರ 3,089 ಕಿಲೋಗ್ರಾಂಗಳಷ್ಟು ಚರಸ್, 158 ಕೆಜಿ ಮೆಥಾಂಫೆಟಮೈನ್ ಮತ್ತು 25 ಕೆಜಿ ಮಾರ್ಫಿನ್ ಅನ್ನು ಒಳಗೊಂಡಿರುವ ಈ ಮಾದಕವಸ್ತು ವಶಪಡಿಸಿಕೊಳ್ಳುವಿಕೆಯು ಇತ್ತೀಚಿನ ದಿನಗಳಲ್ಲಿ ಬೃಹತ್‌ ಪ್ರಮಾಣದ್ದಾಗಿದೆ. ಪೋರಬಂದರ್‌ನ ಬಂದರಿನಲ್ಲಿ ನಡೆಸಿದ ಕಾರ್ಯಾಚರಣೆಯ ನಂತರ ಐವರು ವಿದೇಶಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿತ್ತು.

ಫೆಬ್ರವರಿ 27ರಂದು ಬಂಧಿತ ದೋಣಿ, ಸಿಬ್ಬಂದಿ ಮತ್ತು ನಿಷಿದ್ಧ ಮಾದಕ ವಸ್ತುಗಳನ್ನು ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲಾಯಿತು. ಕಣ್ಗಾವಲು ಕಾರ್ಯಾಚರಣೆಯ ಸಮಯದಲ್ಲಿ P8I LRMR ವಿಮಾನವು ಮಾಹಿತಿ ಸಂಗ್ರಹಿಸಿದ್ದು, ನಂತರ ಪ್ರತಿಕ್ರಿಯೆಯಾಗಿ ಕಾರ್ಯಾಚರಣೆಯನ್ನು ನಡೆಸಲಾಯಿತು. ಅನುಮಾನಾಸ್ಪದ ದೋಣಿಯನ್ನು ಯಶಸ್ವಿಯಾಗಿ ಪ್ರತಿಬಂಧಿಸಿ ಸೆರೆಹಿಡಿಯಲಾಯಿತು.

ಇದನ್ನೂ ಓದಿ: Student Death: ಅಮೆರಿಕದಲ್ಲಿ ಡ್ರಗ್ಸ್‌ ಗ್ಯಾಂಗ್‌ನಿಂದ ಅಪಹೃತನಾದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆ

Continue Reading

ಕರ್ನಾಟಕ

Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

Hassan Pen Drive Case: ರಾಜ್ಯ ಮಹಿಳಾ ಆಯೋಗದ ದೂರಿನ ಅನ್ವಯ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿಬಂದಿವೆ.

VISTARANEWS.COM


on

Hassan Pen Drive Case
ಸುಮನ್ ಡಿ ಪೆನ್ನೇಕರ್, ಎಡಿಜಿಪಿ ಬಿ.ಕೆ. ಸಿಂಗ್, ಸೀಮಾ ಲಾಟ್ಕರ್
Koo

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣದ (Hassan Pen Drive Case) ತನಿಖೆಗಾಗಿ ಎಸ್‌ಐಟಿ ರಚನೆಗೆ ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಆದೇಶಿಸಿದ್ದರು. ಇದೀಗ ಅಧಿಕೃತವಾಗಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ಇದರಲ್ಲಿ ಇಬ್ಬರು ಮಹಿಳಾ ಐಪಿಎಸ್‌ ಅಧಿಕಾರಿಗಳು ಇದ್ದಾರೆ.

ಎಡಿಜಿಪಿ ಬಿ.ಕೆ. ಸಿಂಗ್ ಅವರು ಎಸ್‌ಐಟಿ ಮುಖ್ಯಸ್ಥರಾಗಿದ್ದು, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ ಸೀಮಾ ಲಾಟ್ಕರ್ ಸದಸ್ಯರಾಗಿದ್ದಾರೆ. ಸಿಐಡಿಯಲ್ಲಿ ಎಡಿಜಿಪಿಯಾಗಿರುವ ಬಿ.ಕೆ ಸಿಂಗ್ ಅವರು, ಈ ಹಿಂದೆ ಗೌರಿ ಲಂಕೇಶ್ ಕೊಲೆ ಕೇಸ್‌ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಹಾಸನ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿ ಕ್ರಮ ಜರುಗಿಸುವಂತೆ ರಾಜ್ಯ ಮಹಿಳಾ ಆಯೋಗ ದೂರು ನೀಡಿತ್ತು. ಅದೇ ರೀತಿ ಮಹಿಳೆಯೊಬ್ಬರು ಏ.28ರಂದು ನೀಡಿದ ದೂರಿನ ಅನ್ವಯ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 107/2024 ಕಲಂ 354A, 354D, 506, 509 ಐಪಿಸಿ ಅಡಿ ದಾಖಲಾದ ಪ್ರಕರಣದ ತನಿಖೆಗಾಗಿ ಸಿಐಡಿಯ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಲಾಗಿದೆ ಎಂದು ಒಳಾಡಳಿತ ಇಲಾಖೆಯ(ಅಪರಾಧಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಎಸ್‌.ಅಂಬಿಕಾ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವಿಡಿಯೊ ಚಿತ್ರೀಕರಣವು ಮಾಧ್ಯಮಗಳಲ್ಲಿ ಪ್ರಚಾರವಾಗಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕ ಪಡಿಸಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಲು ಆದೇಶ ನೀಡಬೇಕೆಂದು ಹಾಗೂ ಆರೋಪಿಗಳ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗ ಕೋರಿತ್ತು. ಈ ಹಿನ್ನೆಲೆ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಒಂದು ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಕರಣದ ಸಮಗ್ರ ತನಿಖೆ ನಡೆಸಲು ರಚಿಸಿರುವ ಎಸ್‌ಐಟಿ ಮುಖ್ಯಸ್ಥರಾಗಿ ಸಿಐಡಿ ಅಪರ ಪೊಲೀಸ್ ಮಹಾ ನಿರ್ದೇಶಕ ಬಿಜಯ ಕುಮಾರ್ ಸಿಂಗ್, ಸದಸ್ಯರಾಗಿ ಪೊಲೀಸ್ ಪ್ರಧಾನ ಕಚೇರಿಯ ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ ಪೆನ್ನೇಕರ್, ಮೈಸೂರು ಪೊಲೀಸ್ ಅಧೀಕ್ಷಕರಾದ ಸೀಮಾ ಲಾಟ್ಕರ್ ಅವರನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

ಈ ಪ್ರಕರಣದ ಕುರಿತು ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ, ದಾಖಲಾಗಬಹುದಾದ ಪ್ರಕರಣಗಳನ್ನು ಡಿಜಿ & ಐಜಿಪಿ ಅವರು, ಈ ವಿಶೇಷ ತನಿಖಾ ತಂಡ (Special Investigation Team) ಕ್ಕೆ ವರ್ಗಾಯಿಸಬೇಕು ಹಾಗೂ ತನಿಖೆಗಾಗಿ ಇತರೆ ಸದಸ್ಯರ ಅವಶ್ಯವಿದ್ದಲ್ಲಿ ಡಿಜಿ & ಐಜಿಪಿ ಅವರ ಅನುಮೋದನೆಯೊಂದಿಗೆ ತನಿಖಾ ತಂಡಕ್ಕೆ ಸೇರಿಸಿಕೊಳ್ಳಬೇಕು. ಸಿಐಡಿ ಪೊಲೀಸ್ ಮಹಾ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ (Special Investigation Team) ವು ಕಾರ್ಯನಿರ್ವಹಿಸಬೇಕು ಹಾಗೂ ಪ್ರಕರಣದ ಸಮಗ್ರ ತನಿಖೆಯನ್ನು ನಡೆಸಿ, ತನಿಖಾ ವರದಿಯನ್ನು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಮುಖಾಂತರ ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಕೊನೆಗೂ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯಿಂದ ಬಂತು ದೂರು

ಹಾಸನ ಆಶ್ಲೀಲ ವಿಡಿಯೊ ಪ್ರಕರಣದಲ್ಲಿ ಕೊನೆಗೂ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯಿಂದ ದೂರು ಬಂದಿದೆ ಎಂದು ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ. ನಿನ್ನೆ ಸಂತ್ರಸ್ತೆಯೊಬ್ಬರು ಮಹಿಳಾ ಆಯೋಗಕ್ಕೆ ವಾಟ್ಸ್‌ಆ್ಯಪ್ ಮೂಲಕ ದೂರು ನೀಡಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಮಹಿಳೆ ಹೇಳಿದ್ದಾರೆ. ಅವರಿಗೆ ಪೊಲೀಸ್‌ ರಕ್ಷಣೆ ಒದಗಿಸಲಾಗಿದೆ. ಸಂತ್ರಸ್ತೆ ಅನೇಕ ವಿಚಾರಗಳನ್ನು ಹೇಳಿರುವುದಾಗಿ ತಿಳಿಸಿದ್ದಾರೆ.

ಸಾಕಷ್ಟು ಮಹಿಳೆಯರ ಅಶ್ಲೀಲ ವಿಡಿಯೊ ಚಿತ್ರೀಕರಣ ಮಾಡಲಾಗಿದೆ. ಪೆನ್‌ಡ್ರೈವ್‌ನಲ್ಲಿ ಲೈಂಹಿಕ ದೌರ್ಜನ್ಯದ ವಿಡಿಯೊಗಳಿವೆ. ಅಧಿಕಾರ ಹಾಗೂ ಸ್ಥಾನ ದೂರುಪಯೋಗ ಮಾಡಿಕೊಂಡು, ಅಸಹಾಯಕ ಮಹಿಳೆಯರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದರಿಂದ ಸಾವಿರಾರು ಮಹಿಳೆಯರ ಭವಿಷ್ಯ ಹಾಗೂ ಜೀವನ ಹಾಳಾಗಿದೆ. ಇತಂಹ ಘಟನೆ ಮತ್ತೆ ಎಲ್ಲೂ ಮರಕಳಿಸಬಾರದು. ಹಾಸನ ಎಸ್‌ಪಿಗೆ ಸುಮೋಟೊ ಕೇಸ್ ದಾಖಲಿಸುವಂತೆ ಹೇಳಿದ್ದೆ, ಆದರೆ, ಕೇಸ್ ದಾಖಲಿಸಿಕೊಂಡಿಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮಾಹಿತಿ ನೀಡಿದ್ದಾರೆ.

ಅಶ್ಲೀಲ ವಿಡಿಯೊ ಶೇರ್‌ ಮಾಡಬೇಡಿ

ವಿಡಿಯೊ ನೋಡಿದರೆ ನೊಂದ ಮಹಿಳೆಯರ ಬಗ್ಗೆ ಕನಿಕರ ಮೂಡುತ್ತದೆ. ಮಹಿಳೆಯರ ಕುಟುಂಬಸ್ಥರೇ ಈಗ ಅವರಿಗೆ ಧೈರ್ಯ ತುಂಬಬೇಕು. ತಪ್ಪು ಎಲ್ಲರೂ ಮಾಡುತ್ತಾರೆ, ಆದ್ರೆ ಇಲ್ಲಿ ನಡೆದಿರೋದು ಕೇವಲ ತಪ್ಪಲ್ಲ.
ಆರೋಪಿಯಾಗಿರೋ ಪ್ರಭಾವಿ ರಾಜಕಾರಣಿಯನ್ನು ರಕ್ಷಣೆ ಮಾಡೋ ಕೆಲಸ ಸಹಜವಾಗಿ ನಡೆಯುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಆರೋಪಿಸಿದ್ದಾರೆ.

ಇದನ್ನೂ ಓದಿ | Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

ಅಧಿಕಾರಿಗಳನ್ನು ಬಳಸಿಕೊಂಡು ಪ್ರಕರಣದ ದಿಕ್ಕು ತಪ್ಪಿಸುವ ಯತ್ನ ನಡೆಯುತ್ತಿದೆ. ನಾನೂ ಒಬ್ಬ ವೈದ್ಯೆಯಾಗಿ ಆತನ ಹೀನಾಯ ಮನಸ್ಥಿತಿಯನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ದಯಮಾಡಿ ಜನರು ಆ ವಿಡಿಯೊಗಳನ್ನು ಹಂಚಬೇಡಿ. ನೊಂದ ಮಹಿಳೆಯರ ಜೀವ ಹಾಗೂ ಜೀವನದ ಮೇಲೆ ಅದು ಕೆಟ್ಟ ಪ್ರಭಾವ ಬೀರುತ್ತಿದೆ. ವಿಡಿಯೊ ಮಾಡಿರೋ ವ್ಯಕ್ತಿ ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾನೆ. ಹೆದರಿಸಿ‌ ಬೆದರಿಸಿ ಒಪ್ಪಿಗೆ ಇಲ್ಲದಿದ್ದರೂ ಒತ್ತಡ ಹೇರಿದ್ದಾನೆ. ಆತನಿಗೆ ಕೋರ್ಟ್ ಕಡ್ಡಾಯವಾಗಿ ಶಿಕ್ಷೆ ನೀಡುವಂತೆ ಮಾಡಲಾಗುತ್ತದೆ. ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಅವರಿಗೆ ಭದ್ರತೆ ನೀಡಲಾಗಿದೆ. ಕೋರ್ಟ್‌ನಲ್ಲಿ ಸಾಕ್ಷಿಗಳು ಬೇಕಿರುವುದರಿಂದ ನೊಂದ ಮಹಿಳೆಯರು ದೂರು ನೀಡುವಂತೆ ಕೋರುತ್ತೇವೆ. ಕೋರ್ಟ್ ಮೇಲೆ ನಂಬಿಕೆಯಿದೆ, ಆತನಿಗೆ ಶಿಕ್ಷೆ ಆಗುತ್ತದೆ ಎಂದು ನಂಬಿರುವುದಾಗಿ ಹೇಳಿದರು.

Continue Reading

Lok Sabha Election 2024

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi: ಈ ಕಾಂಗ್ರೆಸ್‌ನವರಿಗೆ ಯಾವುದರ ಮೇಲೂ ವಿಶ್ವಾಸ ಇಲ್ಲ. ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆಯಲ್ಲಿ ಸೋಲುತ್ತಲೇ ಬಂದಿದ್ದಾರೆ. ಮೋದಿ ಗೆದ್ದರೂ ಇವಿಎಂ ಎಂದು ಹೇಳುತ್ತಾರೆ. ಈಗಲೂ ಸೋಲುವ ಭೀತಿಯಿಂದ ಅವರು ಇವಿಎಂ ಬಗ್ಗೆ ಸುಪ್ರೀಂ ಕೋರ್ಟ್‌ ಮೆಟ್ಟಿಲು ಹತ್ತಿದ್ದರು. ಆದರೆ, ಸುಪ್ರೀಂ ಕೋರ್ಟ್‌ನಲ್ಲಿ ಕಾಂಗ್ರೆಸ್‌ನವರಿಗೆ ಮುಖಭಂಗವಾಗಿದೆ. ಈಗ ಕಾಂಗ್ರೆಸ್‌ನವರು ಕಂಗಾಲಾಗಿ ಕುಳಿತಿದ್ದಾರೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

VISTARANEWS.COM


on

Congress fears defeat over EVMs Congress will not win a single seat in Karnataka says PM Narendra Modi
Koo

ದಾವಣಗೆರೆ: ಈ ಬಾರಿ ಕರ್ನಾಟಕದ ಜನತೆ ಕಾಂಗ್ರೆಸ್‌ನ ಪಾಪದ ಕೆಲಸಗಳಿಗೆ ತಕ್ಕ ಶಿಕ್ಷೆಯನ್ನು ನೀಡಲಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್‌ (Congress Karnataka) ಪಕ್ಷವೂ ಖಾತೆ ತೆರೆಯುವುದೇ ಅನುಮಾನವಾಗಿದೆ. ಇನ್ನು ಮುಂದೆ ಕಾಂಗ್ರೆಸ್‌ನ ಲೂಟಿ ಪ್ರಕರಣಗಳು ಒಂದೊಂದಾಗಿಯೇ ಹೊರ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದರು.

ದಾವಣಗೆರೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಾರ್ಟಿಯು ಬೇರೆ ಬೇರೆ ಲೂಟಿಯಲ್ಲಿ ತೊಡಗಿಕೊಂಡಿದೆ. ಈಗ ಒಳಗೊಳಗೆ ಯುದ್ಧ ನಡೆಯುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಲೂಟಿ ಪ್ರಕರಣಗಳು ಒಂದೊಂದಾಗಿ ಬಯಲಾಗುತ್ತದೆ ಎಂದು ಹೇಳಿದರು.

ಸೋಲುವ ಭೀತಿಯಿಂದ ಇವಿಎಂ ಪ್ರಸ್ತಾಪ

ಈ ಕಾಂಗ್ರೆಸ್‌ನವರಿಗೆ ಯಾವುದರ ಮೇಲೂ ವಿಶ್ವಾಸ ಇಲ್ಲ. ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆಯಲ್ಲಿ ಸೋಲುತ್ತಲೇ ಬಂದಿದ್ದಾರೆ. ಮೋದಿ ಗೆದ್ದರೂ ಇವಿಎಂ ಎಂದು ಹೇಳುತ್ತಾರೆ. ಈಗಲೂ ಸೋಲುವ ಭೀತಿಯಿಂದ ಅವರು ಇವಿಎಂ ಬಗ್ಗೆ ಸುಪ್ರೀಂ ಕೋರ್ಟ್‌ ಮೆಟ್ಟಿಲು ಹತ್ತಿದ್ದರು. ಆದರೆ, ಸುಪ್ರೀಂ ಕೋರ್ಟ್‌ನಲ್ಲಿ ಕಾಂಗ್ರೆಸ್‌ನವರಿಗೆ ಮುಖಭಂಗವಾಗಿದೆ. ಈಗ ಕಾಂಗ್ರೆಸ್‌ನವರು ಕಂಗಾಲಾಗಿ ಕುಳಿತಿದ್ದಾರೆ ಎಂದು ನರೇಂದ್ರ ಮೋದಿ ಕಿಡಿಕಾರಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ!

ಬಿಜೆಪಿ ಸರ್ಕಾರ ದೇಶದಲ್ಲಿ ಅಭಿವೃದ್ಧಿ ಮಾಡುತ್ತಲೇ ಹೋಗುತ್ತಿದೆ. ಆದರೆ, ಬಿಜೆಪಿ ಸರ್ಕಾರದ ಕೆಲಸವನ್ನು ಕಾಂಗ್ರೆಸ್‌ ಹಾಳು ಮಾಡಲು ಪ್ರಯತ್ನ ಪಡುತ್ತಲೇ ಇದೆ. ಈಗ ಇಂಡಿ ಅಲೆಯನ್ಸ್‌ನವರು ಹೊಸ ಫಾರ್ಮೂಲಾವನ್ನು ಮಾಡಿಕೊಂಡು ರಾಜಕೀಯವನ್ನು ಮಾಡುತ್ತಿದ್ದಾರೆ. ಇಂಡಿ ಒಕ್ಕೂಟಕ್ಕೆ ಅಧಿಕಾರ ಸಿಕ್ಕರೆ ಒಂದೊಂದು ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿ ಆಗುತ್ತಾರೆ. ಮೊದಲ ವರ್ಷಕ್ಕೆ ಒಬ್ಬರು ಪ್ರಧಾನಿ, ಎರಡನೇ ವರ್ಷಕ್ಕೆ ಒಬ್ಬರು, ಮೂರನೇ ವರ್ಷಕ್ಕೆ, ನಾಲ್ಕನೇ ಹಾಗೂ ಐದನೇ ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿಯಾಗುತ್ತಾರೆ. ಹೀಗೆ 5 ವರ್ಷ ಕಾಲ ದೇಶವನ್ನು ಒಬ್ಬರ ಕೈಗೆ ಕೊಡುವಾಗ ನೀವು ಯೋಚನೆ ಮಾಡುತ್ತೀರಲ್ಲವೇ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಶಿಕ್ಷಣ ನೀತಿಯಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್‌ ರಾಜಕೀಯ

ಕಾಂಗ್ರೆಸ್‌ ಪಕ್ಷದವರಿಂದ ಜನಸಾಮಾನ್ಯರ ಜೀವನದಲ್ಲೂ ಆಟವಾಡಲಾಗುತ್ತಿದೆ. ಶಿಕ್ಷಣ ನೀತಿಯಲ್ಲಿ ಸಹ ಕರ್ನಾಟಕದಲ್ಲಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ. ಯುವಕರು, ವಿದ್ಯಾರ್ಥಿಗಳ ಭವಿಷ್ಯದಲ್ಲಿಯೂ ಆಟವಾಡುತ್ತಿದೆ. ಆರೋಗ್ಯ, ನೀರಾವರಿ ಸೇರಿ ಎಲ್ಲ ಕ್ಷೇತ್ರದಲ್ಲಿಯೂ ಚೆಲ್ಲಾಟವಾಟುತ್ತಿದೆ. ದೇಶದ ಭವಿಷ್ಯವನ್ನು ಬರ್ಬಾದ್‌ ಮಾಡುವ ಕಾಂಗ್ರೆಸ್‌ ಪಕ್ಷವನ್ನು ನಂಬಲು ಆಗುತ್ತದೆಯೇ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ನಮ್ಮ ಸರ್ಕಾರ ಬಂದಾಗ ಭ್ರಷ್ಟಾಚಾರಕ್ಕೆ ಕಡಿವಾಣ

ಈ ಹಿಂದೆ ಕಾಂಗ್ರೆಸ್‌ನಿಂದ ಪ್ರಧಾನಿಯಾದವರೊಬ್ಬರು ಹೇಳಿಕೆ ಪ್ರಕಾರ, ದೇಶದಲ್ಲಿ ಒಂದು ರೂಪಾಯಿ ಬಿಡುಗಡೆ ಮಾಡಿದರೆ ಅದು ಫಲಾನುಭವಿಗೆ ತಲುಪುವ ಹೊತ್ತಿನಲ್ಲಿ 15 ಪೈಸೆ ಆಗುತ್ತಿತ್ತು. ಆದರೆ, ಈಗ ಪರಿಸ್ಥಿತಿ ಏನಾಗಿದೆ? ಸರ್ಕಾರ ಬಿಡುಗಡೆ ಮಾಡುವ 1 ರೂಪಾಯಿ ಪೂರ್ತಿಯಾಗಿ ಫಲಾನುಭವಿಯ ಖಾತೆಗೆ ಬೀಳುತ್ತಿದೆ. ಇದು ನಮ್ಮ ಭ್ರಷ್ಟಾಚಾರ ರಹಿತ ಆಡಳಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಯಾವುದೇ ಒಬ್ಬ ತಂದೆ – ತಾಯಿ ಏನು ಯೋಚನೆ ಮಾಡುತ್ತಾರೆ? ನಾವು ದುಡಿದಿದ್ದರಲ್ಲಿ ಸ್ವಲ್ಪ ಉಳಿಕೆ ಮಾಡಿ, ನಮ್ಮ ಕಾಲಾನಂತರ ಮಕ್ಕಳಿಗೆ ಸ್ವಲ್ಪ ಆದಾಯವನ್ನು, ಆಸ್ತಿಯನ್ನು ಮಾಡಿಡಬೇಕು ಎಂದು ಚಿಂತೆ ಮಾಡುತ್ತಾರಲ್ಲವೇ? ಆದರೆ, ಕಾಂಗ್ರೆಸ್‌ ಈಗ ಆ ಆಸ್ತಿ ಮೇಲೆ ಕಣ್ಣಿಟ್ಟಿದೆ. ನೀವು ಮಾಡುವ ಆಸ್ತಿಯಲ್ಲಿ ನಿಮ್ಮ ಮಕ್ಕಳಿಗೆ 55 ಪರ್ಸೆಂಟ್‌ ತೆರಿಗೆಯನ್ನು ಸರ್ಕಾರಕ್ಕೆ ಕಟ್ಟುವಂತೆ ನೀತಿ ನಿರೂಪಣೆ ಮಾಡಲು ಹೋಗಿದ್ದಾರೆ. ಇಂಥವರಿಗೆ ಪಾಠ ಕಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಯಾವುದಾದರೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರೆ ಅಲ್ಲಿ ಹೂಡಿಕೆ ಮಾಡಲು ಯಾರಾದರೂ ಮುಂದೆ ಬರುತ್ತಾರಾ? ಯಾವುದಾದರೂ ಕೈಗಾರಿಕೆಗಳು ಬರುತ್ತದೆಯೋ? ಬಂಗ್ಲೆ, ದುಡ್ಡು ಎಷ್ಟೇ ಇದ್ದರೂ ಸುರಕ್ಷತೆ ಇಲ್ಲದಿದ್ದರೆ ಹೇಗೆ? ಅದೇ ರೀತಿಯಾಗಿ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಬೆಂಗಳೂರಲ್ಲಿ ಬಾಂಬ್‌ ಬ್ಲಾಸ್ಟ್‌ ಆಗಿದ್ದಾಗ ಮೊದಲು ಏನೆಂದರು? ಸಿಲಿಂಡರ್‌ ಸ್ಫೋಟ ಎಂದು ಹೇಳಿದರು. ಕೊನೆಗೆ ಬಾಂಬ್‌ ಬ್ಲಾಸ್ಟ್‌ ಆಯಿತು ಎಂದು ಗೊತ್ತಾಗುತ್ತಿದ್ದಂತೆ, ಬ್ಯುಸಿನೆಸ್‌ ವಿರೋಧಿಗಳ ಕೃತ್ಯ ಎಂದು ಹೇಳಿದರು. ಇದು ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ನೇಹಾ ಹತ್ಯೆ ಸಾಮಾನ್ಯವಲ್ಲ

ಪ್ರತಿ ತಂದೆ ತಾಯಿಯೂ ತಮ್ಮ ಮಕ್ಕಳ ಸುರಕ್ಷತೆಯನ್ನು ನೋಡುತ್ತಾರೆ. ಆದರೆ, ಶಾಲಾ -ಕಾಲೇಜುಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಲು ಪೋಷಕರು ಆತಂಕ ಪಡುತ್ತಿದ್ದಾರೆ. ಹುಬ್ಬಳ್ಳಿಯ ನೇಹಾ ಹತ್ಯೆ ಸಾಮಾನ್ಯವಲ್ಲ. ವೋಟ್‌ ಬ್ಯಾಂಕ್‌ ಮಾಡುತ್ತಿರುವ ಕಾಂಗ್ರೆಸ್‌ನ ಆಡಳಿತಕ್ಕೆ ಇದು ಸಾಕ್ಷಿ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ವೋಟ್‌ ಬ್ಯಾಂಕ್‌ ಚಿಂತೆಯಲ್ಲಿ ಕಾಂಗ್ರೆಸ್‌ ಇದೆ. ಇದು ಅತ್ಯಂತ ಅಪಾಯಕಾರಿ ಮನಃಸ್ಥಿತಿಯಾಗಿದೆ. ವಿದ್ವಂಸಕ ಸಂಘಟನೆಗಳು ದೇಶದ ಸ್ವಾಸ್ಥ್ಯವನ್ನು ಹಾಳು ಮಾಡಲು ಹೊರಟಿದೆ. ಹಾಗಾಗಿ ಸಂಘಟನೆಯೊಂದನ್ನು ನಾವು ನಿಷೇಧ ಮಾಡಿದ್ದೇವೆ. ಆದರೆ, ಅಂಥ ಸಂಘಟನೆಯನ್ನು ಓಲೈಕೆ ಮಾಡಲು ಕಾಂಗ್ರೆಸ್‌ ಮುಂದಾಗಿದೆ ಎಂದು ತೀವ್ರ ವಾಗ್ದಾಳಿ ನಡೆಸಿದ ಮೋದಿ, ಸುರಕ್ಷತೆಯ ಗ್ಯಾರಂಟಿ, ವಿಕಾಸದ ಗ್ಯಾರಂಟಿ ಎಂದರೆ ಮೋದಿ ಎಂದು ಹೇಳಿದರು.

ಇದನ್ನೂ ಓದಿ: PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

ನೀವು ಇಲ್ಲಿ ಕೊಡುವ ಪ್ರತಿಯೊಂದು ಮತವೂ ನರೇಂದ್ರ ಮೋದಿಗೆ ಸಲ್ಲುತ್ತದೆ. ನಿಮ್ಮ ಪ್ರತಿ ಮತವೂ ದೇಶದ ಅಭಿವೃದ್ಧಿಯನ್ನು ಮಾಡಲಿದೆ. ಈವರೆಗಿನ ರೆಕಾರ್ಡ್‌ ಬ್ರೇಕ್‌ ಮಾಡುವ ನಿಟ್ಟಿನಲ್ಲಿ ಈ ಬಾರಿ ನಿಮ್ಮ ಹಕ್ಕು ಚಲಾಯಿಸಿ ಎಂದು ನರೇಂದ್ರ ಮೋದಿ ಕರೆ ನೀಡಿದರು.

ಜೂನ್‌ 4ರಂದು ಕರ್ನಾಟಕದಲ್ಲಿ ಎಲ್ಲ ಕಡೆಯೂ ವಿಜಯೋತ್ಸವ

2014, 2019ರ ಚುನಾವಣೆಗಿಂತಲೂ ಹೆಚ್ಚಿನ ಜನ ಬೆಂಬಲ ಈ ಬಾರಿ ಇದೆ. ಈ ಬಾರಿಯ ಅಲೆಯೇ ಬೇರೆಯಾಗಿದೆ. ಕರ್ನಾಟಕದ ಎಲ್ಲಿ ಹೋದರೂ ಬಿಜೆಪಿ ಪರ ಅಲೆ ಎದ್ದು ಕಾಣುತ್ತಿದೆ. 10 ವರ್ಷ ಮೋದಿ ಮಾಡಿದ ಕೆಲಸಕ್ಕೆ ಜನರು ಮನ ಸೋತಿದ್ದಾರೆ. ಜೂನ್‌ 4ರಂದು ಕರ್ನಾಟಕದಲ್ಲಿ ಎಲ್ಲ ಕಡೆಯೂ ವಿಜಯೋತ್ಸವ, ಸಂಭ್ರಮ ಮನೆ ಮಾಡಿರುತ್ತದೆ. ಯಾರಿಗೆಲ್ಲ ನಾನು ಆಭಾರಿಯಾಗಲಿ ಎಂದು ಹೇಳಿಕೊಳ್ಳಲು ಆಗದು. ನಾನು ಯಾವತ್ತೂ ನಿಲ್ಲುವುದಿಲ್ಲ, ನನ್ನ ಕೆಲಸವೂ ನಿಲ್ಲುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading
Advertisement
Ishan Kishan
ಕ್ರೀಡೆ11 mins ago

Ishan Kishan: ಐಪಿಎಲ್​ ನೀತಿ ಸಂಹಿತೆ ಉಲ್ಲಂಘನೆ; ಇಶಾನ್​ ಕಿಶನ್​ಗೆ ಬಿತ್ತು ದಂಡದ ಬರೆ

5 PM for 5 years if Congress comes to power says PM Narendra Modi
Lok Sabha Election 202412 mins ago

PM Narendra Modi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ; ಕರ್ನಾಟಕದಲ್ಲಿ ಶಿಕ್ಷಣ ನೀತಿಯಲ್ಲೂ ರಾಜಕೀಯ: ಮೋದಿ ಕಿಡಿ

Summer Fashion
ಫ್ಯಾಷನ್26 mins ago

Summer Fashion: ಬೇಸಿಗೆಯಲ್ಲಿ ಕ್ರಾಪ್‌ ಟೀ ಶರ್ಟ್‌ ಸ್ಟೈಲಿಂಗ್‌ಗೆ 3 ಐಡಿಯಾ

Drugs Smuggling
ದೇಶ31 mins ago

Drugs Smuggling: ಗುಜರಾತ್‌ನಲ್ಲಿ ಪಾಕ್‌ನ 14 ಜನರ ಬಂಧನ, 600 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ!

Shiva Rajkumar Graces Muhurtha Of Father Kannada Movie
ಸ್ಯಾಂಡಲ್ ವುಡ್32 mins ago

Shiva Rajkumar: ಸೆಟ್ಟೇರಿತು ಶಿವರಾಜ್‌ಕುಮಾರ್‌ – ಆರ್ ಚಂದ್ರು ಕಾಂಬಿನೇಷನ್‌ನ ಹೊಸ ಸಿನಿಮಾ!

Hassan Pen Drive Case
ಕರ್ನಾಟಕ39 mins ago

Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202444 mins ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ದೇಶ59 mins ago

Trinmool Congress: ಟಿಎಂಸಿ ಕಾರ್ಯಕರ್ತನ ಭೀಕರ ಹತ್ಯೆ; ಬಿಜೆಪಿ ನಾಯಕಿ ಮೇಲೆ ಡೆಡ್ಲಿ ಅಟ್ಯಾಕ್‌!

Crime News
ವೈರಲ್ ನ್ಯೂಸ್1 hour ago

ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆಗೆ ಶರಣಾದ 12 ವರ್ಷದ ಬಾಲಕಿ

Pakistan Cricket
ಕ್ರಿಕೆಟ್1 hour ago

Pakistan Cricket: ಭಾರತಕ್ಕೆ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್ ಪಾಕ್​ ತಂಡಕ್ಕೆ ನೂತನ ಕೋಚ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202444 mins ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20245 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ8 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌