Site icon Vistara News

Hindu Festival : ಹಿಂದೂಗಳ ಹಬ್ಬದಲ್ಲಿ ಅಗ್ನಿ ಅವಘಡ: 6 ಯಾತ್ರಿಕರ ಸಾವು

hindu Festival

ಪೋರ್ಟ್ ಲೂಯಿಸ್, ಮಾರಿಷಸ್: ಮಾರಿಷಸ್ ನಲ್ಲಿ ಭಾನುವಾರ ಹಿಂದೂಗಳ ಹಬ್ಬದ (Hindu Festival) ಆಚರಣೆಯ ಸಂದರ್ಭದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಆರು ಯಾತ್ರಿಕರು ಮೃತಪಟ್ಟಿದ್ದಾರರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂದೂ ದೇವತೆಗಳ ಪ್ರತಿಮೆಗಳನ್ನು ಇಡುವ ಮರದ ಮತ್ತು ಬಿದಿರಿನ ಗಾಡಿಗೆ ವಿದ್ಯುತ್ ತಂತಿ ತಾಗಿ ದುರ್ಘಟನೆ ಸಂಭವಿಸಿದೆ.

“ಬೆಂಕಿಯ ಕೆನ್ನಾಲಿಗೆ ಆರು ಯಾತ್ರಿಗಳನ್ನು ಬಲಿ ತೆಗೆದುಕೊಂಡಿದೆ. ಏಳು ಜನರು ಗಾಯಗೊಂಡಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ” ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.

ಮಾರ್ಚ್ 8 ರಂದು ಶಿವರಾತ್ರಿ ಹಬ್ಬಕ್ಕೆ ಮುಂಚಿತವಾಗಿ ಪೂರ್ವ ಆಫ್ರಿಕಾದ ದ್ವೀಪ ರಾಷ್ಟ್ರದ ಹಿಂದೂ ಸಮುದಾಯವು ಪವಿತ್ರವೆಂದು ಪರಿಗಣಿಸುವ ಗ್ರ್ಯಾಂಡ್ ಬಾಸ್ಸಿನ್ ಸರೋವರಕ್ಕೆ ಯಾತ್ರಾರ್ಥಿಗಳು ಪಾದಯಾತ್ರೆ ಮಾಡುತ್ತಿದ್ದರು.

ಅಬುಧಾಬಿಯ ಹಿಂದು ದೇಗುಲ ಭಕ್ತರ ಪ್ರವೇಶಕ್ಕೆ ಮುಕ್ತ; ಭೇಟಿ ನೀಡುವ ಮುನ್ನ ಈ ನಿಯಮ ಪಾಲಿಸಿ

ಅಬುಧಾಬಿ: ಕಳೆದ ತಿಂಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟಿಸಿದ್ದ ಅಬುಧಾಬಿಯ ಬೋಚಾಸನವಾಸಿ ಅಕ್ಷರ ಪುರುಷೋತ್ತಮ ಸಂಸ್ಥಾ (BAPS) ಮಂದಿರ ಮಾರ್ಚ್‌ 1ರಿಂದ ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಯುಎಇಯಲ್ಲಿನ ಹಿಂದು ದೇವಾಲಯ (UAE Hindu Temple) ತನ್ನ ವೆಬ್‌ಸೈಟ್‌ನಲ್ಲಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಯಾವ ರೀತಿಯ ಬಟ್ಟೆ ಧರಿಸಬೇಕು, ಯಾವೆಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎನ್ನುವುದನ್ನು ತಿಳಿಸಿದೆ.

ಡ್ರೆಸ್‌ಕೋಡ್‌

“ಕುತ್ತಿಗೆ, ಮೊಣಕೈ ಮತ್ತು ಪಾದಗಳ ನಡುವಿನ ದೇಹದ ಭಾಗ ಮುಚ್ಚಿರಬೇಕು. ಆಕ್ರಮಣಕಾರಿ ವಿನ್ಯಾಸಗಳನ್ನು ಹೊಂದಿರುವ ಟೋಪಿಗಳು, ಟೀ ಶರ್ಟ್‌ಗಳು ಮತ್ತು ಇತರ ಬಟ್ಟೆಗಳನ್ನು ಅನುಮತಿಸಲಾಗುವುದಿಲ್ಲ. ಅರೆ ಪಾರದರ್ಶಕ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸಬೇಡಿ. ಗಮನವನ್ನು ಬೇರೆಡೆಗೆ ಸೆಳೆಯುವ ಶಬ್ದಗಳು ಅಥವಾ ಪ್ರತಿಬಿಂಬಗಳನ್ನು ಉಂಟು ಮಾಡುವ ಬಟ್ಟೆ ಮತ್ತು ಪರಿಕರಗಳನ್ನು ತಪ್ಪಿಸಿ” ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಈ ರಾಶಿಯವರು ಇಂದು ಗಾಬರಿಯಲ್ಲೇ ದಿನ ಕಳೆಯುವಿರಿ

ಈ ನಿಯಮ ಗೊತ್ತಿರಲಿ

ದೇವಾಲಯದ ಒಳಕ್ಕೆ ಸಾಕು ಪ್ರಾಣಿಗಳಿಗೆ ಪ್ರವೇಶವಿಲ್ಲ. ಹೊರಗಿನ ಆಹಾರ ಮತ್ತು ಪಾನೀಯಗಳನ್ನು ದೇವಸ್ಥಾನದ ಸಂಕೀರ್ಣದ ಒಳಗೆ ತರುವಂತಿಲ್ಲ. ಅಲ್ಲದೆ ಡ್ರೋನ್‌ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಪ್ರಕಟಣೆ ಸೂಚಿಸಿದೆ. “ಪ್ರಶಾಂತ ವಾತಾವರಣವನ್ನು ಕಾಪಾಡಿಕೊಳ್ಳಲು ಮತ್ತು ನಮ್ಮ ಆವರಣದ ಕ್ರಮಬದ್ಧ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಈ ಮಾರ್ಗಸೂಚಿಗಳನ್ನು ಅನುಸರಿಸುವುದು ಅಗತ್ಯʼʼ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಬೋಚಾಸನವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ ದುಬೈ– ಅಬುಧಾಬಿ ಶೇಖ್‌ ಜಾಯೆದ್‌ ಹೆದ್ದಾರಿಯ ಅಬು ಮುರೇಖಾದಲ್ಲಿ 27 ಎಕರೆ ಪ್ರದೇಶದಲ್ಲಿ ಸುಮಾರು 700 ಕೋಟಿ ರೂ. ವೆಚ್ಚದಲ್ಲಿ ಈ ಭವ್ಯವಾದ ದೇವಾಲಯವನ್ನು ನಿರ್ಮಾಣ ಮಾಡಿದೆ. ಫೆಬ್ರವರಿ 14ರಂದು ಸುಮಾರು 5,000 ಮಂದಿಯ ಉಪಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ದೇಗುಲವನ್ನು ಉದ್ಘಾಟಿಸಿದ್ದರು. ಮಾರ್ಚ್‌ 1ರಿಂದ ಪ್ರವಾಸಿಗರ ಭೇಟಿಗೆ ಮಂದಿರ ಮುಕ್ತವಾಗಿದ್ದು, ಬೆಳಗ್ಗೆ 8 ಗಂಟೆಯಿಂದ ರಾತ್ರಿ 8ರವರೆಗೆ ದೇವಾಲಯವ ತೆರೆದಿರಲಿದೆ. ಪ್ರತಿ ಸೋಮವಾರ ಮಂದಿರ ಮುಚ್ಚಿರಲಿದೆ.

Exit mobile version