ವಿಸ್ತಾರ Explainer | 5G ತಂತ್ರಜ್ಞಾನದಿಂದ ಅನುಕೂಲ ಅಪಾರ, ಅನನುಕೂಲ ಅತ್ಯಲ್ಪ - Vistara News

5 G

ವಿಸ್ತಾರ Explainer | 5G ತಂತ್ರಜ್ಞಾನದಿಂದ ಅನುಕೂಲ ಅಪಾರ, ಅನನುಕೂಲ ಅತ್ಯಲ್ಪ

ದೇಶದಲ್ಲಿ 5ಜಿ ತಂತ್ರಜ್ಞಾನ ಬಳಕೆಯಿಂದ ಆಗುವ ಬದಲಾವಣೆಗಳೇನು? ಇದರ ಸಾಧಕ-ಬಾಧಕಗಳೇನು ಎಂಬುದರ ಬಗ್ಗೆ
ವಿಸ್ತಾರ ನ್ಯೂಸ್‌ ಜತೆ ಸೈಬರ್ ತಜ್ಞ ಫಣೀಂದರ್ ಬಿ. ಎನ್ ಅವರು ವಿವರಿಸಿದ್ದಾರೆ.

VISTARANEWS.COM


on

5G Technology
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೇಶದ ಟೆಲಿಕಾಂ ವಲಯದಲ್ಲಿ ೫ಜಿ ಕ್ರಾಂತಿಯ ಹವಾ ಶೀಘ್ರದಲ್ಲಿಯೇ ಶುರುವಾಗಲಿದೆ. ಈ ತಂತ್ರಜ್ಞಾನದಲ್ಲಿ ಯಾವುದೇ ಹೊಸ ಬಗೆಯ ರಿಸ್ಕ್‌ ಇಲ್ಲ. ಜತೆಗೆ ಅನನುಕೂಲಕ್ಕಿಂತ ಅನುಕೂಲವೇ ಹೆಚ್ಚು ಎನ್ನುತ್ತಾರೆ ಸೈಬರ್ ತಜ್ಞ ಫಣೀಂದರ್ ಬಿ. ಎನ್. ಅವರು ಮುಂಬರುವ ೫ಜಿ ಕ್ರಾಂತಿಯ ಬಗ್ಗೆ ವಿಸ್ತಾರ ನ್ಯೂಸ್‌ ಜತೆ ಸಮಗ್ರವಾಗಿ ವಿವರಿಸಿದ್ದಾರೆ.

ಸಂದರ್ಶನ: ಅಭಿಷೇಕ್‌ ಬಿ. ವಿ, ಬೆಂಗಳೂರು

ಪ್ರಶ್ನೆ: 5 ಜಿ ರೆವೆಲ್ಯೂಷನ್‌ ಎಂದರೇನು?

ಫಣೀಂದರ್‌ ಬಿ.ಎನ್‌, ಸೈಬರ್‌ ತಜ್ಞ

ಪದಕೋಶದ ಭಾಷೆಯಲ್ಲಿ ಹೇಳಬೇಕು ಅಂದ್ರೆ 5ಜಿ ಅನ್ನೋದು 5ನೇ ಜನರೇಶನ್ ಮೊಬೈಲ್ ನೆಟ್‌ವರ್ಕಿಂಗ್. ಈಗಿನ ಕಾಲದಲ್ಲಿ ಮನೆಯಲ್ಲಿರೋ ಪ್ರತಿಯೊಬ್ಬರೂ ಮೊಬೈಲ್ ಫೋನ್‌ಗಳನ್ನು ಉಪಯೋಗಿಸುತ್ತಿದ್ದೇವೆ. ಕಳೆದ ಹಲವಾರು ವರ್ಷಗಳಿಂದ ನಾನಾ ಮಾದರಿಯ ಮೊಬೈಲ್‌ಗಳನ್ನು ಹಾಗು ನೆಟ್‌ವರ್ಕ್‌ಗಳನ್ನು ಗಮನಿಸಿದ್ದೇವೆ, ಉಪಯೋಗಿಸುತ್ತಿದ್ದೇವೆ. ಮೊದಲಿನ ಮೊಬೈಲ್‌ಗಳಲ್ಲಿ ನೆಟ್‌ವರ್ಕ್ ಸಿಗ್ನಲ್ ನೋಡುತ್ತಿದ್ದಾಗ, 2ಜಿ – 3ಜಿ – 4ಜಿ ಅಂತ ತೋರಿಸಲಾಗ್ತಿತ್ತು. ಈಗ ಕಣ್ಣಿಗೆ ಕಾಣುವ ಬದಲಾವಣೆ ಏನೆಂದರೆ ಮೊಬೈಲ್‌ಗಳಲ್ಲಿ 4ಜಿ ಬದಲಾಗಿ 5ಜಿ ಅಂತ ತೋರಿಸಲಾಗುತ್ತದೆ. ಪ್ರತಿ 10 ವರ್ಷಗಳಿಗೊಮ್ಮೆ ಜನರೇಶನ್ ಬದಲಾಗುತ್ತದೆ. ಅದೇ ರೀತಿ ಈಗ 5ಜಿ ಬಂದಿದ್ದು, ಮುಂದಿನ 10 ವರ್ಷದಲ್ಲಿ 6ಜಿ ಕೂಡ ಬರಲಿದೆ. 1980ರಲ್ಲಿ ಪ್ರಪ್ರಥಮ ಬಾರಿಗೆ ಇಂಟರ್‌ನೆಟ್ ಸೇವೆ ಬಂದಾಗ ಅದು 1ನೇ ಜನರೇಶನ್ ಆಗಿತ್ತು. 1990ರಲ್ಲಿ 2ಜಿ ಚಾಲ್ತಿಗೆ ಬಂದಿತ್ತು. ಈಗ 5ಜಿ ಚಾಲ್ತಿಗೆ ಬರುವ ಮುನ್ನವೇ 6ಜಿ ಬಗ್ಗೆ ಸಂಶೋಧನೆ ಹಾಗೂ ಅಧ್ಯಯನ ನಡೆಯುತ್ತಿದೆ ಅನ್ನೋದು ಸತ್ಯ.

ಪ್ರಶ್ನೆ : 5 ಜಿ ಕ್ರಾಂತಿ ಎಂದರೇನು?

5G AUTION

ಮಾರುಕಟ್ಟೆಗೆ ಯಾವುದೇ ಹೊಸ ಪದಾರ್ಥ, ವಸ್ತು, ಸಾಫ್ಟ್‌ವೇರ್, ಹಾರ್ಡ್‌ವೇರ್ ಏನೇ ಬಂದ್ರೂ ಜನರು ಅದನ್ನು ಉಪಯೋಗಿಸಲು ಕಾತರರಾಗಿರುತ್ತಾರೆ. ದೈನಂದಿನ ಕೆಲಸಗಳು ಹಾಗು ವ್ಯವಹಾರಗಳ ಮೇಲೆ ಹೊಸ ಬಳಕೆಯ ವಸ್ತು ಯಾವ ರೀತಿಯ ಪರಿಣಾಮ ಬೀರುತ್ತೆ ಅಂತ ಕಾದು ನೋಡ್ತಾರೆ. ಅದೇ ರೀತಿ ಜನರು 5ಜಿ ತಂತ್ರಜ್ಞಾನವನ್ನು ಈಗ ಎದುರು ನೋಡ್ತಿದ್ದಾರೆ. ಪ್ರಸ್ತುತ ಜಗತ್ತಿನಲ್ಲಿ ಎಲ್ಲವೂ ಫಾಸ್ಟ್ ಆಗಿದ್ದು, ಈ ಫಾಸ್ಟ್ ಜಮಾನಕ್ಕೆ ಬೇಕಿರೋ ಹೆಚ್ಚಿನ ವೇಗವನ್ನು 5ಜಿ ನೀಡಲಿದೆ. ಲಾಕ್‌ಡೌನ್ ಸಂದರ್ಭದಲ್ಲಿ ಪೋಷಕರು ತಮ್ಮ ಕೆಲಸಕ್ಕೆ, ಮಕ್ಕಳು ತಮ್ಮ ವಿದ್ಯಾಭ್ಯಾಸಕ್ಕೆ ಆನ್‌ಲೈನ್ ಮೊರೆಹೋಗಿದ್ದೆವು. ಎಲ್ಲರ ಮನೆಯಲ್ಲೂ ವೈಫೈ, ರೌಟರ್ ಇರದ ಕಾರಣ ಮೊಬೈಲ್‌ನಲ್ಲಿದ್ದ 4ಜಿ ಇಂಟರ್ನೆಟ್ ಸೌಲಭ್ಯ ಬಳಸುತ್ತಿದ್ದೆವು. 4ಜಿ ಸದ್ಯದ ಮಟ್ಟಿಗೆ ನಮ್ಮೆಲ್ಲರ ಅಗತ್ಯಕ್ಕೆ ಸಾಥ್ ನೀಡಿತ್ತು ಅನ್ನೋದು ಎಷ್ಟು ಸತ್ಯವೋ, ಮುಂದಿನ ದಿನಗಳಲ್ಲಿ ನಮಗೆ ಮತ್ತಷ್ಟು ವೇಗವಾಗಿರೋ ಸೌಲಭ್ಯಗಳು ಬೇಕು ಅನ್ನೋದು ಕೂಡ ಅಷ್ಟೇ ಸತ್ಯ. ಹಿಂದಿನವರಿಗಿಂತ ನಾವು ಹೆಚ್ಚಿನ ತಂತ್ರಜ್ಞಾನ ಬಳಸುತ್ತಿದ್ದೇವೆ. ನಮಗಿಂದ ನಮ್ಮ ಮುಂದಿನ ತಲೆಮಾರು ಹೆಚ್ಚಿನ ತಂತ್ರಜ್ಞಾನ ಬಳಸಲಿದೆ. ಇದೇ ರೀತಿ ಮುಂದುವರಿಯುದರಿಂದ ಮುಂದಿನ ದಿನಗಳಲ್ಲಿ ಹೆಚ್ಚು ತಂತ್ರಜ್ಞಾನವನ್ನು ಬಳಸಲಾಗುತ್ತದೆ. ಹೆಚ್ಚು ವೇಗವಾಗಿರೋ ಇಂಟರ್‌ನೆಟ್ ಮುಂದಿನ ದಿನಗಳಲ್ಲಿ ಸಾಮಾನ್ಯವಾಗಲಿದೆ.

ಪ್ರಶ್ನೆ: 5 ಜಿ ತಂತ್ರಜ್ಞಾನದಿಂದ ಏನು ಅನುಕೂಲ? ಇದರಿಂದ ಅನನುಕೂಲ ಇಲ್ಲ ಅನ್ನೋದೇ ಮೊದಲನೇ ಅನುಕೂಲ. ಒಂದಿಷ್ಟು ತಂತ್ರಜ್ಞಾನಗಳನ್ನು ಬಳಸೋದ್ರಿಂದ ರಿಸ್ಕ್ ಕೂಡ ಹೆಚ್ಚಿರುತ್ತದೆ. ಅದೇ ರೀತಿ 5ಜಿ ಬಳಸುವುದರಿಂದ ಹೊಸದಾಗಿ ಯಾವುದೇ ರಿಸ್ಕ್ ನಾವು ತೆಗೆದುಕೊಳ್ಳಬೇಕು ಅಂತೇನಿಲ್ಲ. ಜನರು ಹಿಂದೆ ಮುಂದೆ ನೋಡದೇ ಮೊಬೈಲ್‌ನಲ್ಲಿ ಯಾವುದೋ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿ ಮೋಸ ಹೋಗ್ತಿರೋದು ಮೊದಲಿಂದ ಇದೆ. ಇದೇ ರೀತಿಯ ರಿಸ್ಕ್ 5ಜಿಯಲ್ಲೂ ಮುಂದುವರಿಯಲಿದೆಯೇ ಹೊರತು 5ಜಿಯಿಂದ ಹೊಸ ರಿಸ್ಕ್ ಅಂತ ಯಾವುದೂ ಕಾಣುತ್ತಿಲ್ಲ. ನಮ್ಮ ಅನುಕೂಲಗಳಿಗೆ ತಕ್ಕಂತೆ ತಂತ್ರಜ್ಞಾನ ಬದಲಾಗುತ್ತಿದ್ದು, ಇದನ್ನು ಸರಿಯಾಗಿ ಬಳಕೆ ಮಾಡೋದು ಜನರಿಗೆ ಬಿಟ್ಟಿದ್ದು. 2ಜಿ – 3ಜಿ – 4ಜಿ ಉಪಯೋಗಿಸುತ್ತಿದ್ದಾಗ ಏನು ರಿಸ್ಕ್ ಇತ್ತೋ, ಅದೇ ರಿಸ್ಕ್ 5ಜಿ ಬಳಕೆಯಲ್ಲೂ ಮುಂದುವರಿಯುತ್ತದೆ.

ಪ್ರಶ್ನೆ : 5 ಜಿ ತಂತ್ರಜ್ಞಾನ ಯಾಕೆ ಏಕಾಏಕಿ ಸದ್ದು ಮಾಡಲು ಆರಂಭಿಸಿದೆ? ಕೇಂದ್ರ ಸರ್ಕಾರ 5ಜಿ ಸ್ಪೆಕ್ಟ್ರಂ ಹರಾಜಿಗೆ ಹಾಕುತ್ತಿದೆ. ಆ ಹರಾಜಿನಲ್ಲಿ ಯಾರು ಸ್ಪೆಕ್ಟ್ರಂ ಖರೀದಿ ಮಾಡ್ತಾರೆ ಅನ್ನೋದೇ ಎಲ್ಲರಿಗೂ ಕುತೂಹಲಕಾರಿಯಾಗಿದೆ. ಖರೀದಿ ಮಾಡಿದವರ ಕೈಯಲ್ಲಿ ಇಡೀ ದೇಶದ 5ಜಿ ಸ್ಪೆಕ್ಟ್ರಂ ಇರುತ್ತೆ. ಅವರು ಅದಕ್ಕೆ ಹೇಗೆ ದರ ನಿಗದಿ ಮಾಡ್ತಾರೆ? ಎಲ್ಲೆಲ್ಲಿ ಉಚಿತವಾಗಿ ಅಥವಾ ಕಡಿಮೆ ದರಕ್ಕೆ ನೀಡ್ತಾರೆ? ಅದರ ಬಳಕೆಯನ್ನು ಹೇಗೆ ನಿಭಾಯಿಸಲಿದ್ದಾರೆ ಅನ್ನೋ ಕುತೂಹಲದಿಂದ ಇದರ ಬಗ್ಗೆ ತುಂಬಾ ಸೆನ್ಸೇಶನ್ ಕ್ರಿಯೇಟ್ ಆಗಿದೆ. ಹೊಸ ತಂತ್ರಜ್ಞಾನ ಬರ್ತಿದೆ ಅನ್ನೋ ಕುತೂಹಲದ ಜೊತೆಗೆ ಇದರಿಂದ ದುಷ್ಪರಿಣಾಮ ಇರಬಹುದು ಅಂತ ಮಾತುಕತೆಗಳಿಂದ ಈ ವಿಚಾರ ಮುನ್ನೆಲೆಗೆ ಬಂದಿದೆ.

ಪ್ರಶ್ನೆ : ಸದ್ಯಕ್ಕೆ 5 ಜಿ ಉಪಯೋಗಿಸಲಾಗ್ತಿದ್ಯಲ್ಲಾ? ಇದರಲ್ಲಿ ಹೊಸತನ ಏನಿದೆ? ರಾಜ್ಯದಲ್ಲಿ ಮಾತ್ರವಲ್ಲ, ದೇಶದಲ್ಲಿ ಈಗ ಯಾರೇ 5ಜಿ ಉಪಯೋಗಿಸುತ್ತಿದ್ದರೂ ಅದು ಟ್ರಯಲ್ ಬೇಸಿಸ್‌ನಲ್ಲಿ ನೀಡುತ್ತಿರುವ ಸೌಲಭ್ಯವೇ ಹೊರತು ಅದು ಪೂರ್ಣಪ್ರಮಾಣದ ಸೇವೆಯಲ್ಲ. 5 ಜಿ ತಂತ್ರಜ್ಞಾನ ಅಳವಡಿಕೆಯಲ್ಲಿ ಏನೆಲ್ಲಾ ಸಮಸ್ಯೆಗಳು ಎದುರಾಗಬಹುದು? ಅದನ್ನು ಯಾವ ರೀತಿ ಸರಿಪಡಿಸಬೇಕು? ಮುಂದಿರುವ ಸವಾಲುಗಳೇನು? ಇಂತಹ ವಿಚಾರಗಳ ಅಧ್ಯಯನಕ್ಕಾಗಿ ಈಗ ಪ್ರಾಯೋಗಿಕವಾಗಿ ನೀಡಲಾಗಿರಬಹುದು. ಯಾವಾಗ ಸಾಧಾರಣ ವ್ಯಕ್ತಿಗೂ ಈ ಉನ್ನತ ಸೌಲಭ್ಯ ಸಿಗಲಿದೆಯೊ, ಆಗ ಮಾತ್ರ 5ಜಿ ಪೂರ್ಣಪ್ರಮಾಣದಲ್ಲಿ ನೀಡಲಾಗುತ್ತಿದೆ ಎನ್ನಬಹುದು.

ಪ್ರಶ್ನೆ : 5 ಜಿ ತಂತ್ರಜ್ಞಾನದಿಂದ ಯಾವ ಕ್ಷೇತ್ರಕ್ಕೆ ತುಂಬಾ ಉಪಯೋಗ ಸಿಗಲಿದೆ?

5ಜಿ ತಂತ್ರಜ್ಞಾನ ಚಾಲ್ತಿಗೆ ಬರುವುದರಿಂದ ಮೆಡಿಕಲ್ ಕ್ಷೇತ್ರಕ್ಕೆ ಅತ್ಯಂತ ಹೆಚ್ಚಿನ ಸೌಲಭ್ಯ ಸಿಗಲಿದೆ. ಆರೋಗ್ಯ ಕ್ಷೇತ್ರಕ್ಕೆ ಇದರ ಅವಶ್ಯಕತೆ ತುಂಬಾ ಇದೆ ಅನ್ನೋದು ನನ್ನ ಅನಿಸಿಕೆ. ಮೊಬೈಲ್ ಫೋನ್ ಉಪಯೋಗಿಸಿಕೊಂಡು 30 ಮೈಲು ದೂರದಿಂದ ವಿಡಿಯೋ ಕಾಲ್ ಮುಖಾಂತರ ಆಪರೇಶನ್‌ ಮಾಡಿರುವ ಉದಾಹರಣೆಯನ್ನು ನಾವು ಚೀನಾದಲ್ಲಿ ನೋಡಿದ್ದೇವೆ. ಅದೇ ರೀತಿ 5ಜಿ ಟೆಕ್ನಾಲಿಜಿ ಪೂರ್ಣಪ್ರಮಾಣದಲ್ಲಿ ಚಾಲ್ತಿಗೆ ಬಂದ್ರೆ, ಅದರಿಂದ ವೈದ್ಯರು ಮತ್ತೊಂದು ಆಯಾಮವನ್ನು ಮೆಡಿಕಲ್ ಇಂಡಸ್ಟ್ರಿಯಲ್ಲಿ ಕಾಣಬಹುದು ಎಂಬುದು ನನ್ನ ಅಭಿಪ್ರಾಯ. ಇದರ ಜೊತೆಜೊತೆಗೆ ಮೊಬೈಲ್ ಗೇಮಿಂಗ್ ಇಂಡಸ್ಟ್ರಿಗೆ ತುಂಬಾ ಅನುಕೂಲವಾಗಲಿದೆ. ಇದರ ಜೊತೆ ಕ್ಲೌಡ್ ಸ್ಟೋರೇಜ್ ಬಳಕೆಗೆ ಪರಿಣಾಮಕಾರಿಯಾಗಿರಲಿದೆ. ದೊಡ್ಡ ಫೈಲ್‌ಗಳನ್ನು ಕ್ಲೌಡ್‌ಗೆ ಅಪ್‌ಲೋಡ್ ಹಾಗು ಡೌನ್‌ಲೋಡ್ ಮಾಡೋದು ಇನ್ಮುಂದೆ ಮತ್ತಷ್ಟು ಶೀಘ್ರಗತಿಯಲ್ಲಿ ಆಗಲಿದೆ. ಕ್ಲೌಡ್ ಅನ್ನು ದೊಡ್ಡ ದೊಡ್ಡ ಕಂಪನಿಗಳು ಉಪಯೋಗಿಸುತ್ತಿದ್ದು, ಅವರಿಗೆ ಅತಿ ಹೆಚ್ಚು ಸಹಾಯವಾಗಲಿದೆ.

ಪ್ರಶ್ನೆ: 4 ಜಿ ಹಾಗು 5 ಜಿ ವೇಗದಲ್ಲಿ ಏನು ಬದಲಾವಣೆಯನ್ನು ಕಾಣಬಹುದು? 5 ಜಿ ತಂತ್ರಜ್ಞಾನದಲ್ಲಿ 20 ಜಿಬಿಪಿಎಸ್ ವೇಗವನ್ನು ಡೌನ್‌ಲೋಡ್ ಮಾಡಲು ಹಾಗು 100 ಎಂಬಿಪಿಎಸ್ ಮೊಬೈಲ್ ಬಳಕೆಯ ಸ್ಪೀಡ್ ಕಾಣಬಹುದು. 4ಜಿ ಡೇಟಾ ಬಳಸೋವಾಗ ಒಂದು ಚದರ ಮೀಟರ್‌ನಲ್ಲಿ ಸುಮಾರು 1000 ಮೊಬೈಲ್‌ಗಳಿಗೆ ನೆಟ್‌ವರ್ಕ್ ನೀಡುತ್ತದೆ. ಆದರೆ 5 ಜಿ ತಂತ್ರಜ್ಞಾನ 1 ಚದರ ಮೀಟರ್‌ಗೆ 50 ಲಕ್ಷ ಯಂತ್ರಗಳಿಗೆ ನೆಟ್‌ವರ್ಕ್‌ ನೀಡುವ ಸಾಮರ್ಥ್ಯ ಹೊಂದಿದೆ. 5ಜಿಯಲ್ಲಿನ ಒಂದು ಸಣ್ಣ ಸಮಸ್ಯೆ ಏನಂದ್ರೆ ಒಳಾಂಗಣದಲ್ಲಿ 5ಜಿ ಬಳಸೋವಾಗ ಸಣ್ಣ ಪ್ರಮಾಣದಲ್ಲಿ ಮಳೆ ಬಂದ್ರೂ ಕೂಡ 5ಜಿ ಸ್ಪೀಡ್‌ನಲ್ಲಿ ವ್ಯತ್ಯಯ ಉಂಟಾಗಲಿದೆ.

ಪ್ರಶ್ನೆ: ಮನುಷ್ಯ, ಪ್ರಾಣಿ, ಪಕ್ಷಿಗಳ ಮೇಲೆ ಇದರ ಪ್ರಭಾವ? ಪ್ರಪಂಚದ ಹಲವೆಡೆ ಈ 5ಜಿ ಈಗಾಗಲೇ ಬಳಕೆಯಲ್ಲಿದೆ. ಇದು ಬಳಸಲು ಯೋಗ್ಯವೇ ಎಂಬುದರ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಹಲವಾರು ಅಧ್ಯಯನ ಹಾಗೂ ಸಂಶೋಧನೆ ನಡೆಸಿದೆ. ಮಾತ್ರವಲ್ಲದೆ 5 ಜಿಯಿಂದ ಮನುಷ್ಯ, ಪ್ರಾಣಿ ಹಾಗೂ ಪಕ್ಷಿಗಳ ಆರೋಗ್ಯದ ಮೇಲೆ ಆಗಬಹುದಾದ ಪರಿಣಾಮವನ್ನು ಸೂಕ್ಷವಾಗಿ ಪರಿಶೀಲಿಸಿದೆ. ಈ ಅಧ್ಯಯನದಲ್ಲಿ 5ಜಿಯಿಂದ ಸಮಸ್ಯೆ ಉಂಟಾಗುತ್ತದೆ ಎಂದು ಎಲ್ಲಿಯೂ ಪ್ರಕಟಿಸಿಲ್ಲ. ಈ ಕಾರಣದಿಂದ ಆರೋಗ್ಯ ಸಂಸ್ಥೆಯ ಮಾಹಿತಿಯನ್ನು ನಂಬಿದ್ದು, ಅದೇ ಸತ್ಯ ಎಂದು ಭಾವಿಸಿದ್ದೇವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

SmartPhone: ಆನ್‌ಲೈನ್‌ನಲ್ಲಿ ಮೊಬೈಲ್ ಖರೀದಿಸುವ ಯೋಚನೆ ಇತ್ತಾ? ನಿಮಗೊಂದು ಶಾಕಿಂಗ್ ನ್ಯೂಸ್!

ಶಿಯೋಮಿ ಮತ್ತು ರಿಯಲ್ ಮಿ ಸ್ಮಾರ್ಟ್ ಫೋನ್  ಬ್ರ್ಯಾಂಡ್ ಗಳು ಚಿಲ್ಲರೆ ವ್ಯಾಪಾರಿಗಳು ನೀಡುತ್ತಿರುವ ರಿಯಾಯಿತಿಗಳಿಗೆ ತಡೆ ಹಾಕಲು ಮುಂದಾಗಿದೆ. ಅಧಿಕೃತ ಚಾನೆಲ್‌ಗಳ ಹೊರಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ತಡೆಯುವ ಒಪ್ಪಂದಕ್ಕೆ ಸಹಿ ಹಾಕಿಸಿಕೊಂಡು ಎಚ್ಚರಿಕೆ ನೀಡಿವೆ.

VISTARANEWS.COM


on

SmartPhone
Koo

ಬೆಂಗಳೂರು: ಶಿಯೋಮಿ ಮತ್ತು ರಿಯಲ್ ಮಿ ಸ್ಮಾರ್ಟ್ ಫೋನ್  ಬ್ರ್ಯಾಂಡ್‌ಗಳು ಆನ್‌ ಲೈನ್ ಪ್ಲಾಟ್‌ ಫಾರ್ಮ್‌ ಗಳಲ್ಲಿ ತಮ್ಮ ಮೊಬೈಲ್ ಫೋನ್‌ಗಳಿಗೆ (Mobile phone) ಚಿಲ್ಲರೆ ವ್ಯಾಪಾರಿಗಳು ನೀಡುತ್ತಿರುವ ರಿಯಾಯಿತಿಗಳಿಗೆ ಬ್ರೇಕ್ ಹಾಕಲು ಹೊರಟಿವೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. ಅಂದರೆ, ಇನ್ನು ಮುಂದೆ ಪ್ರಮುಖ ಬ್ರ್ಯಾಂಡ್‌ಗಳ ಮೊಬೈಲ್‌ಗಳು ಆನ್‌ಲೈನ್‌ ಮೂಲಕ ಹೆಚ್ಚಿನ ರಿಯಾಯಿತಿ ದರದಲ್ಲಿ ಸಿಗುವುದಿಲ್ಲ.

ಭಾರತದಲ್ಲಿ ತಮ್ಮ ಉತ್ಪನ್ನಗಳ ಮಾರಾಟದ ವ್ಯಾಪ್ತಿ ಹೆಚ್ಚಿಸಲು ಕಂಪನಿಗಳು ಆಫ್‌ ಲೈನ್ ಚಾನಲ್ ಗಳಿಗೆ ಒತ್ತು ನೀಡುವ ಗುರಿಯನ್ನು ಹೊಂದಿವೆ. ಹಾಗಾಗಿ ಆನ್‌ಲೈನ್‌ ರಿಯಾಯಿತಿಗಳಿಗೆ ತಡೆ ಹಾಕಲು ಮುಂದಾಗಿವೆ. ಆನ್‌ಲೈನ್‌ ರಿಯಾಯಿತಿ ಮಾರಾಟದಿಂದಾಗಿ ತಮಗೆ ಭಾರಿ ನಷ್ಟವಾಗುತ್ತಿದೆ ಎಂದು ಚಿಲ್ಲರೆ ವ್ಯಾಪಾರಿಗಳ ಸಂಘಗಳು ದೂರಿದ್ದವು. ಈ ಹಿನ್ನೆಲೆಯಲ್ಲಿ ಶಿಯೋ ಮಿ ಮತ್ತು ರಿಯಲ್ ಮಿ ಕಂಪನಿಗಳು ರಿಯಾಯಿತಿ ದರದಲ್ಲಿನ ಆನ್‌ಲೈನ್‌ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಿವೆ. ಮಿತಿ ಮೀರಿದ ವಿನಾಯಿತಿ ನೀಡುವವರನ್ನು ಪತ್ತೆ ಹಚ್ಚಿ ದಂಡ ವಿಧಿಸುವ ಉದ್ದೇಶದಿಂದ ಕಡಿಮೆ ಬೆಲೆಯಲ್ಲಿ ಮಾರಾಟವಾಗುವ ಸ್ಟಾಕ್ ಗಳನ್ನು ಈ ಕಂಪನಿಗಳು ಮರುಖರೀದಿ ಮಾಡುತ್ತಿವೆ ಎಂದು ವರದಿಗಳು ತಿಳಿಸಿವೆ.

ವ್ಯಾಪಾರಿಗಳ ಮೇಲೆ ಏನು ಕ್ರಮ?

ಬ್ರ್ಯಾಂಡ್‌ ಗಳು ಸದ್ಯಕ್ಕೆ ಚಿಲ್ಲರೆ ವ್ಯಾಪಾರಿಗಳ ಮೇಲೆ ಯಾವುದೇ ಕ್ರಮವನ್ನು ತೆಗೆದುಕೊಳ್ಳುತ್ತಿಲ್ಲ. ಅಧಿಕೃತ ಚಾನೆಲ್‌ಗಳ ಹೊರಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ತಡೆಯುವ ಒಪ್ಪಂದಕ್ಕೆ ಸಹಿ ಹಾಕಿಸಿಕೊಂಡು ಎಚ್ಚರಿಕೆ ನೀಡುತ್ತಿವೆ. ಜಮ್ಮು, ಪಶ್ಚಿಮ ಬಂಗಾಳ, ಹರಿಯಾಣ ಮತ್ತು ತಮಿಳುನಾಡಿನ ಹಲವು ಚಿಲ್ಲರೆ ವ್ಯಾಪಾರಿಗಳಿಂದ ಈ ರೀತಿ ಸಹಿ ಹಾಕಿಸಿಕೊಳ್ಳಲಾಗಿದೆ.

ಆನ್‌ ಲೈನ್ ಮೊಬೈಲ್ ಮಾರಾಟದ ಹೆಚ್ಚಿನ ರಿಯಾಯಿತಿಗಳ ಮೇಲೆ ದೂರು

ಆಲ್ ಇಂಡಿಯಾ ಮೊಬೈಲ್  ರೀಟೇಲರ್ಸ್ ಅಸೋಸಿಯೇಷನ್ (AIMRA)ನ ರಾಜ್ಯ ಘಟಕಗಳಿಂದ ಹಲವಾರು ದೂರುಗಳು ಬಂದಿವೆ. ಅದರ ಪ್ರಕಾರ ಶಿಯೋಮಿ, ರಿಯಲ್ ಮಿ ಮತ್ತು ಸ್ಯಾಮ್ ಸಂಗ್ ನಂತಹ ಬ್ರ್ಯಾಂಡ್‌ ಗಳ ಹನ್ನೆರಡು ಉತ್ಪನ್ನಗಳನ್ನು ಆನ್‌ಲೈನ್ ಚಾನೆಲ್‌ ಗಳಲ್ಲಿ ಸುಮಾರು 1,000-2,000 ರೂ. ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.

ಇದನ್ನೂ ಓದಿ:Phone Addiction: ಸ್ಮಾರ್ಟ್‌ಫೋನ್‌ ಚಟದಿಂದ ಹೊರಬರಲು ಹೀಗೆ ಮಾಡಿ!

“ಇಕಾಮರ್ಸ್ ಪ್ಲಾಟ್‌ ಫಾರ್ಮ್‌ಗಳು ಆನ್‌ ಲೈನ್‌ನಲ್ಲಿ ಚಿಲ್ಲರೆ ವ್ಯಾಪಾರಿಗಳನ್ನು ನೋಂದಾಯಿಸಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಬ್ರ್ಯಾಂಡ್ ಅನುಮತಿಸಿದೆ. ಇದು ನಿಜವಾಗಿಯೂ ಆತಂಕಕಾರಿ ಪರಿಸ್ಥಿತಿಯಾಗಿದೆ. ಗ್ರಾಹಕರಿಗೆ ತಮ್ಮ ಅತ್ಯುತ್ತಮ ಸಾಮರ್ಥ್ಯಗಳೊಂದಿಗೆ ಉತ್ಪನ್ನವನ್ನು ಮಾರಾಟ ಮಾಡಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿರುವ ಮುಖ್ಯ ಚಿಲ್ಲರೆ ವ್ಯಾಪಾರಿಗಳ ನಂಬಿಕೆಯನ್ನು ಬ್ರ್ಯಾಂಡ್ ಕಳೆದುಕೊಳ್ಳುತ್ತಿದೆ.”  ಎಂದು ಚಿಲ್ಲರೆ ವ್ಯಾಪಾರಿಗಳ ಸಂಘವು ಮಾರ್ಚ್ 26ರಂದು ರಿಯಲ್ ಮಿಗೆ ಬರೆದ ಪತ್ರದಲ್ಲಿ ತಿಳಿಸಿತ್ತು.

ಇದೇ ರೀತಿಯ ಪತ್ರಗಳನ್ನು ಶಿಯೋಮಿಗೂ ಕಳುಹಿಸಲಾಗಿದೆ. ಅದರ ಪ್ರತಿನಿಧಿಯೊಬ್ಬರು ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ನಾವು ಈ ಸಮಸ್ಯೆಯ ಮೂಲ ಹುಡುಕಲು ಮತ್ತು ಭಾರೀ ದಂಡದೊಂದಿಗೆ ಅದನ್ನು ಸರಿಪಡಿಸಲು ಸ್ಟಾಕ್‌ ಗಳನ್ನು ಖರೀದಿಸುತ್ತಿದ್ದೇವೆ ಎಂದವರು ತಿಳಿಸಿದ್ದಾರೆ.

Continue Reading

5 G

Team India : ಭಾರತ ತಂಡ 2024ರ ಮಾರ್ಚ್​ ತನಕವೂ ಬ್ಯುಸಿ; ಇಲ್ಲಿದೆ ಟೂರ್ನಿಗಳ ವಿವರ

ಮುಂದಿನ ನಾಲ್ಕು ತಿಂಗಳಲ್ಲಿ ಭಾರತವು (Team India) ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್ ವಿರುದ್ಧ ಸರಣಿಗಳನ್ನು ಆಡಲಿದೆ.

VISTARANEWS.COM


on

Cricket news
Koo

ಬೆಂಗಳೂರು: ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆರು ವಿಕೆಟ್​ಗಳಿಂದ ಸೋತ ನಂತರ ಬೇಸರದಲ್ಲಿದೆ. ಆದರೆ, ಹೆಚ್ಚು ದಿನ ಅದೇ ಮೂಡ್​ನಲ್ಲಿ ಇರಲು ಅವಕಾಶವಿಲ್ಲ. ಟೀಮ್ ಇಂಡಿಯಾ ಮುಂದಿನ ಮೂರು ತಿಂಗಳಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿರಲಿದೆ. ನಿರಂತರ ವೇಳಾಪಟ್ಟಿಯನ್ನು ಹೊಂದಿರುವುದರಿಂದ ತ್ವರಿತವಾಗಿ ಮರು ಸಂಘಟನೆಗೊಳ್ಳಬೇಕಾಗಿಎ. ವಿಶ್ವಕಪ್ ಬಳಿಕ ಟೀಂ ಇಂಡಿಯಾ ನವೆಂಬರ್ 23ರಿಂದ ಆರಂಭವಾಗಲಿರುವ 5 ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ. ಅದಕ್ಕೀಗ ತಂಡ ಪ್ರಕಟಗೊಂಡಿದೆ.

ರೋಹಿತ್ ಶರ್ಮಾ ನೇತೃತ್ವದ ತಂಡವು ಡಿಸೆಂಬರ್​ನಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು, ಮೂರು ಟಿ 20 ಮತ್ತು ಅನೇಕ ಏಕದಿನ ಪಂದ್ಯಗಳನ್ನು ಆಡಲಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅವರು ದಕ್ಷಿಣ ಆಫ್ರಿಕಾವನ್ನು ಎದುರಿಸಲಿದ್ದಾರೆ. ಇದಲ್ಲದೆ, ಭಾರತವು ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಟಿ 20 ಐ ಸರಣಿಯೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸಲಿದೆ. ನಂತರ ಜನವರಿ ಕೊನೆಯ ವಾರದಲ್ಲಿ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿ ಪ್ರಾರಂಭವಾಗಲಿದೆ.

ಟಿ20ಗೆ ಆದ್ಯತೆ

ಮುಂಬರುವ ಪ್ರವಾಸಗಳು ಟಿ 20 ಪಂದ್ಯಗಳಿಂದಲೇ ತುಂಬಿರುತ್ತವೆ. ಏಕೆಂದರೆ ತಂಡದ ಪ್ರಮುಖ ಗಮನವು ಯುಎಸ್ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2024 ರ ಮೇಲೆ ಇರುತ್ತದೆ. ಇದಲ್ಲದೆ, ನಿರ್ಣಾಯಕ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ವಿರುದ್ಧ ಸೆಣಸಲಿರುವ ಭಾರತ ಟೆಸ್ಟ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶೀಪ್​ (ಡಬ್ಲ್ಯುಟಿಸಿ) ಪಾಯಿಂಟ್ಸ್ ಟೇಬಲ್​​ನಲ್ಲಿ ನಿರ್ಣಾಯಕ ಅಂಕಗಳನ್ನು ಸಂಗ್ರಹಿಸಲು ಸಜ್ಜಾಗಿದೆ.

ಡಬ್ಲ್ಯುಟಿಸಿ ಪಾಯಿಂಟ್ಸ್ ಟೇಬಲ್​ನಲ್ಲಿ ಟೀಮ್ ಇಂಡಿಯಾ ಪ್ರಸ್ತುತ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಒಂದು ಡ್ರಾದೊಂದಿಗೆ ಎರಡನೇ ಸ್ಥಾನದಲ್ಲಿದೆ. ಪಂದ್ಯಾವಳಿಯ ಹಿಂದಿನ ಎರಡು ಆವೃತ್ತಿಗಳಲ್ಲಿ ರನ್ನರ್ ಅಪ್ ಸ್ಥಾನ ಪಡೆದ ಭಾರತ ತಂಡ ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿ ಅಪೇಕ್ಷಿತ ಗದೆ ರೂಪದ ಟ್ರೋಫಿಗೆ ಗೆಲ್ಲಲು ಸಿದ್ಧವಾಗಬೇಕಿದೆ.

ಇದನ್ನೂ ಓದಿ: Team India : ಜನವರಿಯಲ್ಲಿ ನಡೆಯಲಿದೆ ಅಫಘಾನಿಸ್ತಾನ ವಿರುದ್ಧ ಕ್ರಿಕೆಟ್​ ಸರಣಿ

ಪಂತ್​ಗಾಗಿ ಕಾಯುವಿಕೆ

ಪ್ಯಾಕ್ ಆಗಿರುವ ವೇಳಾಪಟ್ಟಿಯ ಹೊರತಾಗಿ, 2022 ರ ಡಿಸೆಂಬರ್​ನಲ್ಲಿ ಭೀಕರ ಕಾರು ಅಪಘಾತದ ಬಳಿಕ ಸುಧಾರಿಸಿಕೊಳ್ಳುತ್ತಿರುವ ಮತ್ತು ಸುಮಾರು ಒಂದು ವರ್ಷದಿಂದ ಆಟದಿಂದ ಹೊರಗುಳಿದಿದ್ದ ರಿಷಭ್ ಪಂತ್ ಮತ್ತೆ ಭಾರತೀಯ ತಂಡಕ್ಕೆ ಮರಳಲು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕ ಸೌರವ್ ಗಂಗೂಲಿ ಅವರು ಪಂತ್ ಐಪಿಎಲ್ 2024 ರಲ್ಲಿ ಭಾಗವಹಿಸುತ್ತಾರೆ ಎಂದು ಖಚಿತಪಡಿಸಿದ್ದಾರೆ ಮತ್ತು ಅವರ ಅಂತಾರಾಷ್ಟ್ರೀಯ ಪುನರಾಗಮನವು ಫೆಬ್ರವರಿ 2023 ರಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯ ಸಮಯದಲ್ಲಿ ನಡೆಯುವ ಸಾಧ್ಯತೆಯಿದೆ.

Continue Reading

5 G

BSNL 5G : ಗ್ರಾಹಕರಿಗೆ ಸಿಹಿ ಸುದ್ದಿ, ವರ್ಷಾಂತ್ಯಕ್ಕೆ ದೇಶಾದ್ಯಂತ ಸಿಗಲಿದೆ ಬಿಎಸ್ಸೆನ್ನೆಲ್‌ 5ಜಿ

VISTARANEWS.COM


on

BSNL users data hack and sold on dark web
Koo

ನವ ದೆಹಲಿ: ಬಿಎಸ್ಸೆನ್ನೆಲ್‌ನ (BSNL 5G) 4ಜಿ ನೆಟ್‌ ವರ್ಕ್‌ 2023ರ ವರ್ಷಾಂತ್ಯದ ವೇಳೆಗೆ 5ಜಿಗೆ ಮೇಲ್ದರ್ಜೆಗೇರಲಿದೆ ಎಂದು ಕೇಂದ್ರ ದೂರಸಂಪರ್ಕ ಖಾತೆ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ. (BSNL 5G) ಕಂಪನಿಯು ಪಂಜಾಬ್-ಫಿರೋಜ್‌ಪುರ್‌, ಪಠಾಣ್‌ ಕೋಟ್‌ ಮತ್ತು ಅಮೃತ್‌ಸರದಲ್ಲಿ 200 ಟವರ್‌ಗಳ ಸ್ಥಳಗಳಲ್ಲಿ 4ಜಿಯನ್ನು ಪ್ರಾಯೋಗಿಕವಾಗಿ ಆರಂಭಿಸಿದ್ದು, ಮೂರು ತಿಂಗಳ ಕಾಲ ನಡೆಯಲಿದೆ. ಬಳಿಕ ದಿನಕ್ಕೆ 200 ಸೈಟ್ಸ್‌ಗಳ ಲೆಕ್ಕದಲ್ಲಿ 4ಜಿ ನೆಟ್‌ ವರ್ಕ್‌ ವಿಸ್ತರಣೆಯಾಗಲಿದೆ. ಹಾಗೂ ನವೆಂಬರ್-ಡಿಸೆಂಬರ್‌ ವೇಳೆಗೆ 5ಜಿಗೆ ಅಪ್‌ಗ್ರೇಡ್‌ ಆಗಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಬಿಎಸ್ಸೆನ್ನೆಲ್‌ ಈಗಾಗಲೇ ಟಿಸಿಎಸ್‌ ಮತ್ತು ಐಟಿಐ ಲಿಮಿಟೆಡ್‌ ಜತೆಗೆ 4ಜಿ ನೆಟ್‌ ವರ್ಕ್‌ ಅಳವಡಿಕೆಗೆ ಸಂಬಂಧಿಸಿ 19,000 ಕೋಟಿ ರೂ.ಗಳ ಖರೀದಿ ಆರ್ಡರ್‌ಗೆ ಮುಂಗಡವನ್ನು ನೀಡಿದೆ (advance purchase order) ಎಂದು ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಬಿಎಸ್ಸೆನ್ನೆಲ್‌ ನೆಟ್‌ ವರ್ಕ್‌ ಆರಂಭದಲ್ಲಿ 4ಜಿಯಲ್ಲಿ ಇರಲಿದೆ. ಬಳಿಕ ನವೆಂಬರ್-ಡಿಸೆಂಬರ್‌ ವೇಳೆಗೆ ಸಾಫ್ಟ್‌ವೇರ್‌ನಲ್ಲಿ ಸಣ್ಣ ಬದಲಾವಣೆಯೊಂದಿಗೆ 5ಜಿಗೆ ಅಪ್‌ಡೇಟ್‌ ಆಗಲಿದೆ ಎಂದು ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್‌ ವಿವರಿಸಿದ್ದಾರೆ.

ಅಮೆರಿಕಕ್ಕೆ ಭಾರತದ ಟೆಲಿಕಾಂ ತಂತ್ರಜ್ಞಾನ ರಫ್ತು:

ಭಾರತದ ಟೆಲಿಕಾಂ ತಂತ್ರಜ್ಞಾನವನ್ನು ಅಮೆರಿಕಕ್ಕೂ ಈಗ ರಫ್ತು ಮಾಡಲಾಗುತ್ತಿದೆ. 18 ದೇಶಗಳು ಭಾರತದ 4ಜಿ ಮತ್ತು 5ಜಿ ತಂತ್ರಜ್ಞಾನವನ್ನು ಅಳವಡಿಸಲು ಉತ್ಸುಕವಾಗಿವೆ. ದೇಶ ದೂರಸಂಪರ್ಕ ತಂತ್ರಜ್ಞಾನದಲ್ಲಿ ಬೆಳೆಯುತ್ತಿರುವುದಕ್ಕೆ ಇದು ಸಾಕ್ಷಿ ಎಂದು ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಇದನ್ನೂ ಓದಿ: BSNL OTT : ಬಿಎಸ್ಸೆನ್ನೆಲ್‌ನಿಂದ OTT ಸೇವೆ ಸಿನಿಮಾಪ್ಲಸ್‌ ಆರಂಭ

Continue Reading

5 G

Jio True 5G | ಜಿಯೋದಿಂದ ಹೊಸ ವರ್ಷದ ಕೊಡುಗೆ; ಮೈಸೂರಿನಲ್ಲಿ ಟ್ರೂ 5ಜಿ ಸೇವೆ ಪ್ರಾರಂಭ

ದೇಶದ ವಿವಿಧ ನಗರಗಳಲ್ಲಿ 5ಜಿ ಸೇವಯನ್ನು ಒದಗಿಸುತ್ತಿರುವ ರಿಲಯನ್ಸ್ ಜಿಯೋ ಇದೀಗ ಕರ್ನಾಟಕದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜಿಯೋ ಟ್ರೂ 5ಜಿ (Jio True 5G) ಸೇವೆಯನ್ನು ಆರಂಭಿಸಿದೆ.

VISTARANEWS.COM


on

Jio True 5G @ Mysuru
Koo

ಮೈಸೂರು: ರಿಲಯನ್ಸ್ ಜಿಯೋ ಮೈಸೂರಿನಲ್ಲಿ ಟ್ರೂ 5ಜಿ ಸೇವೆಗಳಿಗೆ (Jio True 5G) ಚಾಲನೆ ನೀಡಿತು. ಅಷ್ಟೇ ಅಲ್ಲ, ಲಖನೌ, ತಿರುವನಂತಪುರಂ, ನಾಸಿಕ್, ಔರಂಗಾಬಾದ್, ಚಂಡೀಗಢ, ಮೊಹಾಲಿ, ಪಂಚಕುಲ, ಜಿರಾಕ್‌ಪುರ, ಖರಾರ್ ಮತ್ತು ದೇರಾಬಸ್ಸಿಗಳಲ್ಲಿ ಕೂಡ ತನ್ನ ಟ್ರೂ 5ಜಿ ಸೇವೆಗಳ ಪ್ರಾರಂಭದ ಬಗ್ಗೆ ಘೋಷಣೆ ಮಾಡಿತು. ಅಂದಹಾಗೆ, ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ 5ಜಿ ಸೇವೆಗಳನ್ನು ಪ್ರಾರಂಭಿಸುವ ಮೊದಲ ಮತ್ತು ಏಕೈಕ ಆಪರೇಟರ್ ರಿಲಯನ್ಸ್ ಜಿಯೋ ಆಗಿದೆ.

ಬುಧವಾರದಿಂದಲೇ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್‌+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಮೈಸೂರಿನಲ್ಲಿರುವ ಜಿಯೋ ಬಳಕೆದಾರರನ್ನು ಜಿಯೋ ವೆಲ್‌ಕಮ್ ಆಫರ್‌ಗೆ ಆಹ್ವಾನಿಸಲಾಗುತ್ತದೆ.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಜಿಯೋ ವಕ್ತಾರರು, ಮೈಸೂರು ನಗರದಲ್ಲಿ 5ಜಿ ಆರಂಭಿಸುವುದಕ್ಕೆ ನಾವು ಹೆಮ್ಮೆಪಡುತ್ತೇವೆ ಮತ್ತು ನಾವು ಟ್ರೂ 5ಜಿ ಸೇವೆಗಳನ್ನು ಹೊರತರಲು ಪ್ರಾರಂಭಿಸಿದಾಗಿನಿಂದ ನಮ್ಮ ಅತಿದೊಡ್ಡ ಆರಂಭದಲ್ಲಿ ಇದು ಒಂದಾಗಿದೆ. ಜಿಯೋ ಟ್ರೂ 5ಜಿ ತಂತ್ರಜ್ಞಾನದ ವೇರಿಯಂಟ್‌ ಪ್ರಯೋಜನಗಳನ್ನು ಆನಂದಿಸುವ ಮೂಲಕ ಈಗ 2023ರಿಂದ ಪ್ರಾರಂಭ ಆಗುವುದರೊಂದಿಗೆ ಲಕ್ಷಾಂತರ ಜಿಯೋ ಬಳಕೆದಾರರಿಗೆ ಇದು ಗೌರವವಾಗಿದೆ.

“ಮೈಸೂರು ನಮ್ಮ ದೇಶದ ಪ್ರಮುಖ ಪ್ರವಾಸೋದ್ಯಮ ಕೇಂದ್ರ ಮತ್ತು ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. ಜಿಯೋದ ಟ್ರೂ 5ಜಿ ಸೇವೆಗಳ ಪ್ರಾರಂಭದೊಂದಿಗೆ ಈ ಪ್ರದೇಶದ ಗ್ರಾಹಕರು ಕೇವಲ ಉತ್ತಮ ದೂರಸಂಪರ್ಕ ಜಾಲವನ್ನು ಮಾತ್ರವಲ್ಲ, ಜತೆಗೆ ಇ-ಆಡಳಿತ, ಶಿಕ್ಷಣ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್, ಆರೋಗ್ಯ, ಕೃಷಿ, ಐಟಿ ಕ್ಷೇತ್ರಗಳಲ್ಲಿ ಮತ್ತು ಸಣ್ಣ ಮತ್ತು ಮಧ್ಯಮ ಸಂಸ್ಥೆಗಳು ಅಮೋಘ ಬೆಳವಣಿಗೆಯ ಅವಕಾಶಗಳನ್ನು ಪಡೆಯುತ್ತಾರೆ. “ಈ ಪ್ರದೇಶವನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನದಲ್ಲಿ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕ ಸರ್ಕಾರಕ್ಕೆ ನಾವು ಆಭಾರಿಯಾಗಿದ್ದೇವೆ” ಎಂದು ಅವರು ಹೇಳಿದರು.

ಇದನ್ನೂ ಓದಿ | Jio True 5G | ಮಹಾಕಾಲ ಮಹಾಲೋಕ, ಮಹಾಕಾಲೇಶ್ವರ ದೇವಸ್ಥಾನದಲ್ಲಿ ಜಿಯೋ ಟ್ರೂ 5ಜಿ ಸೇವೆ

Continue Reading
Advertisement
Vote Jihad
ದೇಶ2 mins ago

Vote Jihad: ವೋಟ್‌ ಜಿಹಾದ್‌ಗೆ ಕರೆ ನೀಡಿದ್ದು ಇಂಡಿಯಾ ಒಕ್ಕೂಟದ ಮನಸ್ಥಿತಿಗೆ ಕನ್ನಡಿ ಎಂದ ಮೋದಿ

Prajwal Revanna Case PM Modi defends MP accused of rape says Rahul Gandhi
Lok Sabha Election 20247 mins ago

Prajwal Revanna Case: ಮಹಾನ್‌ ರೇಪಿಸ್ಟ್‌ಗೆ ಮೋದಿಯಿಂದ ರಕ್ಷಣೆ; ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ರಾಹುಲ್‌ ಗಾಂಧಿ ಗುಡುಗು

Rinku Singh
ಕ್ರೀಡೆ15 mins ago

Rinku Singh: ಟಿ20 ವಿಶ್ವಕಪ್​ಗೆ ರಿಂಕು ಆಯ್ಕೆಯಾಗಬಹುದೆಂದು ಪಟಾಕಿ, ಸಿಹಿ ತಂದಿಟ್ಟಿದ್ದ ತಂದೆಗೆ ನಿರಾಸೆ

Crime News
ಕ್ರೈಂ16 mins ago

Crime News : 6 ವರ್ಷದ ಬಾಲಕಿಯ ಅಪಹರಿಸಲು ಯತ್ನಿಸಿದ ದುಷ್ಟ; ಹಿಟ್‌ ಆ್ಯಂಡ್‌ ರನ್‌ ಮಾಡಿ ಚಾಲಕರಿಬ್ಬರು ಎಸ್ಕೇಪ್‌

Samsung
ತಂತ್ರಜ್ಞಾನ35 mins ago

ಸ್ಯಾಮ್‌ಸಂಗ್‌ನ ‘ಫ್ಯಾಬ್ ಗ್ರಾಬ್ ಫೆಸ್ಟ್’: ಸ್ಮಾರ್ಟ್‌ಫೋನ್‌, ಟಿವಿ, ಲ್ಯಾಪ್‌ಟಾಪ್‌, ಡಿಜಿಟಲ್ ಉಪಕರಣಗಳ ಮೇಲೆ ಅದ್ಭುತ ಆಫರ್

students self harming
ಕ್ರೈಂ1 hour ago

Students Self harming: 20 ವರ್ಷಗಳಲ್ಲಿ ಐಐಟಿಯ 115 ವಿದ್ಯಾರ್ಥಿಗಳು ಆತ್ಮಹತ್ಯೆ

Prajwal Revanna Case HD DeveGowda and HD Kumaraswamy slams HD Revanna
ಕ್ರೈಂ2 hours ago

Prajwal Revanna Case: ನಿನ್ನ ಮಗನಿಂದ ಇಂಥ ಕಪ್ಪು ಚುಕ್ಕೆ ಬಂತು; ರೇವಣ್ಣ ಮೇಲೆ ಮುಗಿಬಿದ್ದ ಎಚ್‌ಡಿಡಿ, ಎಚ್‌ಡಿಕೆ

Pawan Kalyan Hari Hara Veera Mallu Part 1 teaser Out
ಟಾಲಿವುಡ್2 hours ago

Pawan Kalyan: ʻಹರಿ ಹರ ವೀರ ಮಲ್ಲುʼವಾಗಿ ಅಬ್ಬರಿಸಿದ ಪವನ್ ಕಲ್ಯಾಣ್; ಟೀಸರ್‌ ಔಟ್‌!

supreme court
ದೇಶ2 hours ago

Supreme Court: CBI ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿಲ್ಲ; ಸುಪ್ರೀಂಕೋರ್ಟ್‌ಗೆ ಸರ್ಕಾರ ಸ್ಪಷ್ಟನೆ

Viral News
ವೈರಲ್ ನ್ಯೂಸ್2 hours ago

Viral News: ಮದುವೆಗೆ ಮುನ್ನವೇ 2 ಬಾರಿ ಗರ್ಭಿಣಿಯಾದ ಅಪ್ರಾಪ್ತೆ; ಪೋಷಕರು ಮಗುವನ್ನು ಮಾರಾಟ ಮಾಡಿದ್ದಾರೆಂದು ದೂರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌