Anantkumar Hegde: ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಅನಂತಕುಮಾರ ಹೆಗಡೆ ಭಾವನಾತ್ಮಕ ಪೋಸ್ಟ್ - Vistara News

ಪ್ರಮುಖ ಸುದ್ದಿ

Anantkumar Hegde: ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಅನಂತಕುಮಾರ ಹೆಗಡೆ ಭಾವನಾತ್ಮಕ ಪೋಸ್ಟ್

ತಮ್ಮ ಫೇಸ್‌ಬುಕ್ ಪುಟದಲ್ಲಿ ಈ ಕುರಿತು ಹೆಗಡೆ (Anantkumar Hegde) ಅವರು ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದು, ತಮ್ಮ ಭಾಷಣದ ಶೈಲಿಯ ಪದಪ್ರಯೋಗದಲ್ಲೇ ಸಾರ್ವಜನಿಕರಿಗೆ ಪತ್ರ ಬರೆದಿದ್ದಾರೆ.

VISTARANEWS.COM


on

Anantkumar Hegde
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಉತ್ತರ ಕನ್ನಡದಿಂದ (Uttara Kannada) ಸ್ಪರ್ಧೆಗೆ ಬಿಜೆಪಿ ಟಿಕೆಟ್ (BJP Ticket) ಕೈತಪ್ಪಿದ ಬೆನ್ನಲ್ಲೇ ಅನಂತಕುಮಾರ ಹೆಗಡೆ (BJP MP Anantkumar Hegde) ಅವರು ಭಾವನಾತ್ಮಕವಾಗಿ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, 3 ದಶಕಗಳಿಂದ ಸೇವೆ ಸಲ್ಲಿಸಲು ಅವಕಾಶ ನೀಡಿದ ʼಜನತಾ ಜನಾರ್ದನʼರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ತಮ್ಮ ಫೇಸ್‌ಬುಕ್ ಪುಟದಲ್ಲಿ ಈ ಕುರಿತು ಹೆಗಡೆ (Anantkumar Hegde) ಅವರು ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದು, ತಮ್ಮ ಭಾಷಣದ ಶೈಲಿಯ ಪದಪ್ರಯೋಗದಲ್ಲೇ ಸಾರ್ವಜನಿಕರಿಗೆ ಪತ್ರ ಬರೆದಿದ್ದಾರೆ.

“ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು. ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವನ್ನಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವನ್ನಾಗಿಸುವ, ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು. ಆದರೆ, ಆರಂಭ ಎಲ್ಲಿಂದ ಎಂದು ತಿಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ ನಾನು ಈ ಪೂಜೆಯನ್ನು ಎಲ್ಲಿಂದ, ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ” ಎಂದು ಹೆಗಡೆ ಬರೆದುಕೊಂಡಿದ್ದಾರೆ.

“ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ದನನ ಆರಾಧನೆ. ಸರಿಸುಮಾರು ಮೂವತ್ತು ವರ್ಷಗಳ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು ತೋರಿದ ಸ್ನೇಹ, ಪ್ರೀತಿ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು, ಅದು ಅದಮ್ಯ. ಯಾವುದೇ ಪೂಜೆ, ಆರಾಧನೆ, ಅದು ಎಂದಿಗೂ ಮುಗಿಯದ ಅನಂತ ಕಾಯಕ. ಈ ತಾಯ್ನೆಲದ ಪೂಜೆಯಲ್ಲಿ, ಆಕೆಯ ಸೇವೆಯಲ್ಲಿ ನನ್ನನ್ನು ನಾನು ಸಮರ್ಪಿಸಿಕೊಳ್ಳುವ ಸೌಭಾಗ್ಯ ಈ ಜನ್ಮದಲ್ಲಿ ಭಗವಂತ ಕರುಣಿಸಿದ್ದಕ್ಕೆ, ಈ ಕಣ್ಣಿಗೆ ಕಾಣದ ಆ ಅಕ್ಷಯ ಪಾದಪದ್ಮಗಳಿಗೆ ನನ್ನ ಅನಂತ ನಮನಗಳನ್ನು ಸಲ್ಲಿಸುತ್ತೇನೆ” ಎಂದಿದ್ದಾರೆ.

“ಕಳೆದ 3 ದಶಕಗಳಿಂದ ಹಿಂದವೀ ಹಿತದಲ್ಲಿ ಸೇವೆ ಸಲ್ಲಿಸುವ ಅಪೂರ್ವ ಸಂಯೋಗ ಈ ಬದುಕಿನಲ್ಲಿ ನನಗೊಂದು ಗುರುತು ನೀಡಿದೆ. ನಿಜಕ್ಕೂ ಅಷ್ಟೇ ಸಾಕು! ಈ ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೇ ಸಿಕ್ಕೀತು? ಹೆತ್ತ ತಾಯೊಡಲಿದೆ, ಬದುಕು ಕೊಟ್ಟ ಕ್ಷೇತ್ರದ ಜನಮನಕ್ಕೆ ಮತ್ತೊಮ್ಮೆ, ಮಗದೊಮ್ಮೆ, ಮತ್ತೊಮ್ಮೆ ಸಾಷ್ಟಾಂಗವೆರಗುತ್ತೇನೆ. ತಮ್ಮೆಲ್ಲರ ನೆನಪಿನಲ್ಲಿ ಹೃದಯದಾಳದ ಕೃತಜ್ಞತೆಯೊಂದಿಗೆ” ಎಂದು ಅನಂತಕುಮಾರ ಹೆಗಡೆ ಬರೆದಿದ್ದಾರೆ.

1996ರಲ್ಲಿ ನಡೆದ 11ನೇ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡದಿಂದ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದ ಅನಂತ ಕುಮಾರ ಹೆಗಡೆ, ನಂತರ ಐದು ಬಾರಿ ಉತ್ತರ ಕನ್ನಡ ಕ್ಷೇತ್ರದ ಸಂಸದರಾಗಿ ಚುನಾಯಿತರಾಗಿದ್ದಾರೆ. 2016ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕ್ಯಾಬಿನೆಟ್‌ನಲ್ಲಿ ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವರಾಗಿದ್ದರು. ವಿವಾದಾತ್ಮಕ ಹಾಗೂ ತೀವ್ರ ರಾಷ್ಟ್ರೀಯವಾದಿ ಹೇಳಿಕೆಗಳಿಂದ ಅವರು ಖ್ಯಾತರಾಗಿದ್ದಾರೆ.

ಇದನ್ನೂ ಓದಿ: BJP Candidates List: ವಿಧಾನಸಭೆಯಲ್ಲಿ ಸೋತವರಿಗೂ ಸಿಕ್ಕಿತು ಬಿಜೆಪಿ ಟಿಕೆಟ್‌; ಚಿತ್ರದುರ್ಗ ಸಸ್ಪೆನ್ಸ್! ಅನಂತ್‌ ಕುಮಾರ್‌ಗೆ ಶಾಕ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

MS Dhoni : ಧೋನಿಯ ಗಾಯದ ಗುಮಾನಿಗೆ ಸ್ಪಷ್ಟತೆ ನೀಡಿದ ಕೋಚ್ ಫ್ಲೆಮಿಂಗ್​

VISTARANEWS.COM


on

MS Dhoni
Koo

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2024 ರ (IPL 2024) ಋತುವಿನಲ್ಲಿ ಎಂಎಸ್ ಧೋನಿ (MS Dhoni) ಕೆಳ ಕ್ರಮಾಂಕದಲ್ಲಿ ಬ್ಯಾಟ್​ ಮಾಡುತ್ತಿರುವುದಕ್ಕೆ ಕಾರಣವನ್ನು ಚೆನ್ನೈ ಸೂಪರ್ ಕಿಂಗ್ಸ್ (CSK) ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಬಹಿರಂಗಪಡಿಸಿದ್ದಾರೆ. ಎಂಎಸ್ ಧೋನಿ ಸ್ನಾಯು ಗಾಯದಿಂದ ಬಳಲುತ್ತಿದ್ದಾರೆ, ಇದು ಐಪಿಎಲ್ 2024 ರಲ್ಲಿ ಭಾಗವಹಿಸುವ ಮೇಲೆ ಪರಿಣಾಮ ಬೀರಬಹುದು ಎಂದು ಸ್ಟೀಫನ್ ಫ್ಲೆಮಿಂಗ್ ಹೇಳಿದ್ದಾರೆ. ಹೀಗಾಗಿ ಅವರು ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ. ವಿಕೆಟ್​ಗಳ ನಡುವೆ ರನ್​ಗಾಗಿ ಹೆಚ್ಚು ಓಡುತ್ತಿಲ್ಲ ಎಂಬುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. ಧೋನಿಯನ್ನು ನೋಡುವುದು ಐಪಿಎಲ್ ಅಭಿಮಾನಿಗಳಿಗೆ ದೊಡ್ಡ ವಿಷಯ. ಹೀಗಾಗಿ ಅವರು ಆಡುತ್ತಿದ್ದಾರೆ ಎಂಬುದೇ ಅವರ ಮಾತಿನ ಸಾರಾಂಶ.

ನಾಯಕ ಸ್ಥಾನದಿಂದ ಕೆಳಗಿಳಿದರೂ ಎಂಎಸ್ ಧೋನಿ ಸಿಎಸ್​ಕೆ ತಂಡದ ನಿರ್ಣಾಯಕ ಸದಸ್ಯರಾಗಿ ಉಳಿದಿದ್ದಾರೆ. ಅವರು ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ ಮತ್ತು ಪಂಜಾಬ್ ಕಿಂಗ್ಸ್ (PBKS) ವಿರುದ್ಧದ ಇತ್ತೀಚಿನ ಪಂದ್ಯದಲ್ಲಿ 9 ನೇ ಕ್ರಮಾಂಕದಲ್ಲಿ ಕ್ರೀಸ್​ಗೆ ಇಳಿದಿದ್ದರು. 42 ವರ್ಷದ ಕ್ರಿಕೆಟಿಗ ಹಾಲಿ ಆವೃತ್ತಿಯಲ್ಲಿ 55 ಸರಾಸರಿಯಲ್ಲಿ 110 ರನ್ ಗಳಿಸಿದ್ದಾರೆ ಮತ್ತು 224.49 ಸ್ಟ್ರೈಕ್ ರೇಟ್ ಹೊಂದಿದ್ದಾರೆ.

ವಿಕೆಟ್ ಕೀಪರ್-ಬ್ಯಾಟರ್​ ಪ್ರಸ್ತುತ ಪಂದ್ಯಾವಳಿಯಲ್ಲಿ ತಮ್ಮ ಮೊದಲ ಏಳು ಇನ್ನಿಂಗ್ಸ್​ಗಳಲ್ಲಿ ಔಟಾಗದೆ ಉಳಿದಿದ್ದರು. ಪಂಜಾಬ್ ಕಿಂಗ್ಸ್ ವಿರುದ್ಧದ ತವರು ಪಂದ್ಯದ ವೇಳೆ ಬಲಗೈ ಬ್ಯಾಟರ್​ ರನೌಟ್ ಆಗಿದ್ದರು. ಧೋನಿ ತಮ್ಮ ಇತ್ತೀಚಿನ ಪಂದ್ಯದಲ್ಲಿ ಗೋಲ್ಡನ್ ಡಕ್ ಔಟ್ ಆಗಿದ್ದರು. ಅವರು ಋತುವಿನಾದ್ಯಂತ ಸ್ಟಂಪ್ ಗಳ ಹಿಂದೆ ಉತ್ತಮ ಕೆಲಸ ಮಾಡಿದ್ದಾರೆ.

ಎಂಎಸ್ ಧೋನಿಯ ಕೆಲಸದ ಹೊರೆಯನ್ನು ನಿರ್ವಹಿಸುತ್ತಿದ್ದೇವೆ – ಸ್ಟೀಫನ್ ಫ್ಲೆಮಿಂಗ್

ಪಂದ್ಯದ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ಟೀಫನ್ ಫ್ಲೆಮಿಂಗ್, ಇಡೀ ಪಂದ್ಯಾವಳಿಗೆ ಅವರ ಲಭ್ಯತೆಯನ್ನು ಉಳಿಸಿಕೊಳ್ಳುವುದಕ್ಕೆ ಎಂಎಸ್ ಧೋನಿ ಅವರ ಕೆಲಸದ ಹೊರೆಯನ್ನು ನಿರ್ವಹಿಸಬೇಕಾಗಿದೆ. ಡೆತ್ ಓವರ್ಗಳಲ್ಲಿ ಧೋನಿ ಬ್ಯಾಟ್​ನೊಂದಗೆ ನೀಡಬಹುದಾದ ಕೊಡುಗೆ ಸಮತೋಲನವನ್ನು ಕಂಡುಕೊಳ್ಳುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಫ್ಲೆಮಿಂಗ್ ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಸುನಿಲ್ ಗವಾಸ್ಕರ್ ಮತ್ತು ಹರ್ಷ ಭೋಗ್ಲೆ ವಿರುದ್ಧ ವಿರಾಟ್ ಕೊಹ್ಲಿ ವಾಗ್ದಾಳಿ

ನಾವು ಅವರ ಕೆಲಸದ ಹೊರೆಯನ್ನು ನಿರ್ವಹಿಸುತ್ತಿದ್ದೇವೆ. ಇದು ಅಪಾಯಕಾರಿ ಮತ್ತು ಋತುವಿನ ಆರಂಭದಲ್ಲಿ ಸ್ವಲ್ಪ ಸ್ನಾಯು ಸೆಳೆತವನ್ನುಅ ನುಭವಿಸಿದ್ದಾರೆ. ಅವರು ಹೆಚ್ಚು ಸಮಯ ಬ್ಯಾಟಿಂಗ್ ಮಾಡಿದರೆ ನಾವು ಅವರನ್ನು ಕಳೆದುಕೊಳ್ಳುವ ಅಪಾಯವನ್ನು ಎದುರಿಸುತ್ತೇವೆ. ಆದ್ದರಿಂದ ನಾವು ಆ ಸಮತೋಲನವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ. ಧೋನಿ ಕೇವಲ ಸಿಕ್ಸರ್ ಮತ್ತು ಬೌಂಡರಿಗಳನ್ನು ಹೊಡೆಯುವ ಮೂಲಕ ಪಂದ್ಯದ ಮೇಲೆ ಪರಿಣಾಮ ಬೀರುತ್ತಿದ್ದಾರೆಎಂದು ಫ್ಲೆಮಿಂಗ್ ಹೇಳಿದರು.

ಎಚ್ಚರಿಕೆ ಅಗತ್ಯ

ಈ ಋತುವಿನಲ್ಲಿ ಎಂಎಸ್ ಧೋನಿ ಅವರ ಕೆಲಸದ ಹೊರೆಯನ್ನು ಟೀಮ್ ಮ್ಯಾನೇಜ್ಮೆಂಟ್ ನಿರ್ವಹಿಸುವ ಅಗತ್ಯವಿದೆ ಎಂದು ಸ್ಟೀಫನ್ ಫ್ಲೆಮಿಂಗ್ ಹೇಳಿದ್ದಾರೆ. ಅಂತಿಮ ಓವರ್​ಗಳಲ್ಲಿ ತಮ್ಮ ಬ್ಯಾಟಿಂಗ್ ಪರಾಕ್ರಮದ ಜೊತೆಗೆ ಹೊಸ ನಾಯಕ ಋತುರಾಜ್ ಗಾಯಕ್ವಾಡ್​ಗೆ ಧೋನಿ ತಂತ್ರಗಾರಿಕೆಯ ಸಲಹೆಯನ್ನು ನೀಡುತ್ತಿದ್ದಾರೆ. ಅವರು ಎಲ್ಲ ರೀತಿಯಲ್ಲೂ ತಂಡಕ್ಕೆ ಅಗತ್ಯ ಎಂದು ಅವರು ಹೇಳಿದರು.

ಕಳೆದ ವರ್ಷ ಅವರು ಎದುರಿಸಿದ ಮೊಣಕಾಲು ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದಾರೆ. ಆದರೂ ಅದು ಅವರನ್ನು ಸಾಕಷ್ಟು ದುರ್ಬಲಗೊಳಿಸಿದೆ. ಈ ವರ್ಷ ಅವರು ನಿರ್ವಹಿಸಬಹುದಾದ ಒಂದು ನಿರ್ದಿಷ್ಟ ಕೆಲಸದ ಹೊರೆ ಇರುತ್ತದೆ ಎಂದು ನಾವು ಮೊದಲೇ ಹೇಳಿದ್ದೇವೆ. ನಮ್ಮಲ್ಲಿ ಬ್ಯಾಕ್​ಅಪ್​ ಕೀಪರ್​ಗಳು ಇದ್ದಾರೆ. ಆದಾಗ್ಯೂ ಎಂಎಸ್ ಧೋನಿಯನ್ನು ಮೈದಾನದಲ್ಲಿ ಇರಿಸಲು ಬಯಸುತ್ತೇವೆ. ಬ್ಯಾಟಿಂಗ್​ನಲ್ಲಿ ನಾಲ್ಕು ಓವರ್​ಗಳು ಮತ್ತು ಅವರ ಕೀಪಿಂಗ್ ಮತ್ತು ಹೊಸ ನಾಯಕನೊಂದಿಗೆ ಕಾರ್ಯತಂತ್ರದ ಸಲಹೆಯನ್ನು ನೀಡುತ್ತಿದ್ದಾರೆ, “ಎಂದು ಫ್ಲೆಮಿಂಗ್ ಹೇಳಿದರು.

ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡವು ಪ್ರಸ್ತುತ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ ಮತ್ತು +0.700 ನೆಟ್ ರನ್ ರೇಟ್ (ಎನ್ಆರ್​ಆರ್) ಹೊಂದಿದೆ. ಮೇ 10ರಂದು ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ತನ್ನ ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಚೆನ್ನೈ ಮೂಲದ ತಂಡವು ಪಂದ್ಯಾವಳಿಯಲ್ಲಿ ಸ್ಥಾನ ಪಡೆಯಲು ಉಳಿದಿರುವ ಮೂರು ಪಂದ್ಯಗಳಲ್ಲಿ ಕನಿಷ್ಠ ಎರಡನ್ನು ಗೆಲ್ಲಬೇಕಾಗಿದೆ.

Continue Reading

ಪ್ರಮುಖ ಸುದ್ದಿ

IPL 2024 : ಸುನಿಲ್ ಗವಾಸ್ಕರ್ ಮತ್ತು ಹರ್ಷ ಭೋಗ್ಲೆ ವಿರುದ್ಧ ವಿರಾಟ್ ಕೊಹ್ಲಿ ವಾಗ್ದಾಳಿ

IPL 2024: ನಿರಂತರವಾಗಿ ವಿಕಸನಗೊಳ್ಳುತ್ತಿರುವ ಟಿ20 ಸ್ವರೂಪದಲ್ಲಿ ನಿರಂತರ ಸುಧಾರಣೆಯ ಮಹತ್ವವನ್ನು ಕೊಹ್ಲಿ ಒತ್ತಿಹೇಳಿದ್ದಾರೆ ತಮ್ಮ ಕೌಶಲಗಳನ್ನು ಪರಿಷ್ಕರಿಸಲು ಮತ್ತು ಹೊಸ ಸವಾಲುಗಳನ್ನು ಸ್ವೀಕರಿಸಲು ತೋರಿದ ಬದ್ಧತೆಯನ್ನು ವ್ಯಕ್ತಪಡಿಸಿದ್ದಾರೆ. ಅಂದ ಹಾಗೆ ಧರ್ಮಶಾಲಾದಲ್ಲಿ ನಡೆದ ಐಪಿಎಲ್ 2024 ರ ರೋಮಾಂಚಕ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪಂಜಾಬ್ ಕಿಂಗ್ಸ್ (PBKS) ವಿರುದ್ಧ 60 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರ ಹಿಂದೆ ಕೊಹ್ಲಿಯ 92 ರನ್​ಗಳ ಶ್ರಮವಿದೆ.

VISTARANEWS.COM


on

IPL 2024
Koo

ಧರ್ಮಶಾಲಾ: ಮೇ 9 ರಂದು ನಡೆದ ಐಪಿಎಲ್ 2024 ರ (IPL 2024) ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಅದ್ಭುತ ಬ್ಯಾಟಿಂಗ್ ಮಾಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challegers Bangalore) ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮತ್ತೊಮ್ಮೆ ತಮ್ಮ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. ತಮ್ಮ ಆಟದ ವಿಧಾನದ ಬಗ್ಗೆ ಮಾತನಾಡಿದ ಅವರು ಅಭ್ಯಾಸದ ಸಮಯ ಹಾಗೂ ವ್ಯಾಪಕ ಅನುಭವವು ಹೇಗೆ ತಮ್ಮ ನ್ನು ಶಕ್ತಗೊಳಿಸಿದೆ ಎಂಬುದನ್ನು ವಿವರಿಸಿದ್ದಾರೆ. ಇದೇ ವೇಳೆ ತಮ್ಮನ್ನು ಅನವಶ್ಯಕವಾಗಿ ಟೀಕೆ ಮಾಡುವ ಸುನಿಲ್ ಗವಾಸ್ಕರ್ ವಿರುದ್ಧ ಕೆಂಡ ಕಾರಿದ್ದಾರೆ.

ನಿರಂತರವಾಗಿ ವಿಕಸನಗೊಳ್ಳುತ್ತಿರುವ ಟಿ20 ಸ್ವರೂಪದಲ್ಲಿ ನಿರಂತರ ಸುಧಾರಣೆಯ ಮಹತ್ವವನ್ನು ಅವರು ಒತ್ತಿಹೇಳಿದ್ದಾರೆ ತಮ್ಮ ಕೌಶಲಗಳನ್ನು ಪರಿಷ್ಕರಿಸಲು ಮತ್ತು ಹೊಸ ಸವಾಲುಗಳನ್ನು ಸ್ವೀಕರಿಸಲು ತೋರಿದ ಬದ್ಧತೆಯನ್ನು ವ್ಯಕ್ತಪಡಿಸಿದ್ದಾರೆ. ಅಂದ ಹಾಗೆ ಧರ್ಮಶಾಲಾದಲ್ಲಿ ನಡೆದ ಐಪಿಎಲ್ 2024 ರ ರೋಮಾಂಚಕ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪಂಜಾಬ್ ಕಿಂಗ್ಸ್ (PBKS) ವಿರುದ್ಧ 60 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರ ಹಿಂದೆ ಕೊಹ್ಲಿಯ 92 ರನ್​ಗಳ ಶ್ರಮವಿದೆ.

ಗುಣಮಟ್ಟ ನನಗೆ ಚೆನ್ನಾಗಿ ಕೆಲಸ ಮಾಡುತ್ತದೆ: ವಿರಾಟ್ ಕೊಹ್ಲಿ

ಕೊಹ್ಲಿಯ 92 ರನ್​ಗಳ ರೋಚಕ ಇನ್ನಿಂಗ್ಸ್ ತಂತ್ರಗಾರಿಕೆ ಮತ್ತು ಲೆಕ್ಕಾಚಾರದ ಆಕ್ರಮಣಶೀಲತೆಯ ಫಲವಾಗಿದೆ. ಅಲ್ಲದೆ ಅವರು ತಮ್ಮ ಭಯಂಕರ ಇನಿಂಗ್ಸ್​ ಮೂಲಕ ಸ್ಟ್ರೈಕ್ ರೇಟ್ ಅನ್ನು ಪ್ರಶ್ನಿಸಿದ ಟೀಕಾಕಾರರನ್ನು ಮೌನಗೊಳಿಸಿದ್ದಾರೆ. 195 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್​ನೊಂದಿಗೆ ಕೊಹ್ಲಿ ಅವರ 47 ಎಸೆತಗಳು ಪರಿಣಾಮಕಾರಿ ಸ್ಟ್ರೋಕ್​ಗಳಿಮದ ತುಂಬಿದ್ದ ರನ್​ ಬಾರಿಸಿದ್ದಾರೆ. ಡ್ಯಾಶಿಂಗ್ ಬಲಗೈ ಬ್ಯಾಟರ್​ ತಮ್ಮ ಅದ್ಭುತ ಇನ್ನಿಂಗ್ಸ್​ನಲ್ಲಿ 7 ಬೌಂಡರಿ ಮತ್ತು 6 ಸಿಕ್ಸರ್​ಗಳನ್ನು ಸಿಡಿಸಿದ್ದರು.

ಪಂದ್ಯದ ನಂತರ ಮಾತನಾಡಿದ ಕೊಹ್ಲಿ ವೈಯಕ್ತಿಕ ಮೈಲಿಗಲ್ಲುಗಳಿಗಿಂತ ತಮ್ಮ ಆಟದ ಗುಣಮಟ್ಟ ಹೆಚ್ಚಿಸುವ ಬದ್ಧತೆ ಪುನರುಚ್ಚರಿಸಿದರು. ಆತಿಥೇಯ ಪಿಬಿಕೆಎಸ್ ವಿರುದ್ಧದ ಪಂದ್ಯ ವಿಜೇತ ಇನ್ನಿಂಗ್ಸ್​ಗಾಗಿ ಮಾಜಿ ಆರ್​ಸಿಬಿ ನಾಯಕ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

ಗುಣಮಟ್ಟವೇ ನನಗೆ ಮುಖ್ಯ

ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ, “ನನಗೆ ದಾಖಲೆಗಿಂತ ಗುಣಮಟ್ಟದ ಕ್ರಿಕೆಟ್ ಮುಖ್ಯ. ನನ್ನ ವೃತ್ತಿಜೀವನದ ಮಹತ್ವದ ಹಂತದಲ್ಲಿದ್ದೇನೆ. ನಾನು 35 ವರ್ಷದವನಾಗಿದ್ದೇನೆ. ಹೀಗಾಗಿ ದೊಡ್ಡ ರನ್​ಗಿಂತ ಗುಣಮಟ್ಟವು ನನಗೆ ಬೆಂಬಲವಾಗಿರುತ್ತದೆ. ಅನೇಕ ವರ್ಷಗಳ ಆಟದ ಅರಿವು ಮಾನಸಿಕವಾಗಿ ಬಲಗೊಳಿಸುತ್ತದೆ ಎಂದು ಹೇಳಿದರು.

ಇದನ್ನೂ ಓದಿ: IPL 2024: ಕೆ.ಎಲ್​ ರಾಹುಲ್​ಗೆ ಬೈದ ಎಲ್​​ಎಸ್​​ಜಿ ಮಾಲೀಕ ಗೋಯೆಂಕಾ ವರ್ತನೆಗೆ ಮೊಹಮ್ಮದ್​ ಶಮಿ ಆಕ್ರೋಶ

ಇದನ್ನು ನಾನು ಪ್ರತಿ ಪಂದ್ಯದಲ್ಲಿ ಪುನರಾವರ್ತಿಸಲು ಪ್ರಯತ್ನಿಸಿದ್ದೇನೆ..ನನ್ನ ಆಟವನ್ನು ಸುಧಾರಿಸುವ ವಿಷಯದಲ್ಲಿ ಕೆಲವು ಹೆಚ್ಚುವರಿ ಸವಾಲುಗಳಿವೆ ಇದು ನಿರಂತರವಾಗಿ ವಿಕಸನಗೊಳ್ಳುತ್ತಿರುವ ಪ್ರಕ್ರಿಯೆ. ನಾನು ಉತ್ತಮವಾಗಿ ಆಡುವವ. ಸುಮ್ಮನೆ ವಿವರಣೆ ನೀಡುವ ವ್ಯಕ್ತಿಯಲ್ಲ ಎಂದು ಗವಾಸ್ಕರ್ ಮತ್ತು ಹರ್ಷ ಭೋಗ್ಲೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ತಮ್ಮ ಹೊಡೆಗಳ ಬಗ್ಗೆ ಮಾತನಾಡಿದ ಕೊಹ್ಲಿ

ಐಪಿಎಲ್ 2024 ರಲ್ಲಿ ಕೊಹ್ಲಿ ಆಗಾಗ್ಗೆ ಸ್ಲಾಗ್-ಸ್ವೀಪ್ಗಳನ್ನು ಬಳಸುತ್ತಿದ್ದಾರೆ. ಇದು ಅನೇಕರನ್ನು ಆಶ್ಚರ್ಯಗೊಳಿಸಿದೆ. ಭಾರತದ ಮಾಜಿ ನಾಯಕ ಎಂದಿಗೂ ಅಂಥ ಶಾಟ್ ಅನ್ನು ನಿರ್ದಿಷ್ಟವಾಗಿ ಅಭ್ಯಾಸ ಮಾಡಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಬದಲಾಗಿ, ಬ್ಯಾಟಿಂಗ್ ಮಾಂತ್ರಿಕ ಅವುಗಳನ್ನು ತಿಳಿವಳಿಕೆ ಮೇಲೆ ಮಾಡಿದ್ದಾರೆ.

ಇದು ಪ್ರತಿ ಶಾಟ್ ಅನ್ನು ನಿಖರವಾಗಿ ಅಭ್ಯಾಸ ಮಾಡುವ ಬಗ್ಗೆ ಅಲ್ಲ, ಆದರೆ ಪರಿಸ್ಥಿತಿಗೆ ಅಗತ್ಯವಿರುವಾಗ ಅವುಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸುವ ನಂಬಿಕೆ ಮತ್ತು ವಿಶ್ವಾಸವನ್ನು ಹೊಂದಿದ್ದೇನೆ ಎಂದು ಅವರು ಹೇಳಿದರು. ನಾನು ಸ್ಪಿನ್ನರ್​ಗಳ ವಿರುದ್ಧ ಸ್ಲಾಗ್-ಸ್ವೀಪ್ ಅನ್ನು ಬಳಸುತ್ತಿದ್ದೇನೆ. ಮಾನಸಿಕವಾಗಿ ಆ ಪರಿಸ್ಥಿತಿಯಲ್ಲಿ ಬೆಳೆದಿದ್ದೇನೆ ಎಂದು ಹೇಳಿದರು.

Continue Reading

ಕರ್ನಾಟಕ

UGCET 2024: ಯುಜಿಸಿಇಟಿ ಅರ್ಜಿ ತಿದ್ದುಪಡಿಗೆ ಅಂತಿಮ ಅವಕಾಶ ನೀಡಿದ ಕೆಇಎ; ಕೊನೆಯ ದಿನಾಂಕ ಯಾವಾಗ?

UGCET 2024: ಯುಜಿಸಿಇಟಿ-2024 ಅರ್ಜಿಯಲ್ಲಿ ಆರ್‌ಡಿ ಸಂಖ್ಯೆ ಹಾಗೂ ಇತರೆ ಕ್ಲೇಮ್‌ಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ.

VISTARANEWS.COM


on

KEA
Koo

ಬೆಂಗಳೂರು: ಯುಜಿಸಿಇಟಿ-2024ಕ್ಕೆ (UGCET 2024) ಆನ್‌ಲೈನ್ ಅರ್ಜಿಯಲ್ಲಿ ನೀಡಿರುವ ಆರ್‌ಡಿ ಸಂಖ್ಯೆಗಳನ್ನು ಹಾಗೂ ಇತರೆ ಕ್ಲೇಮ್‌ಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಕೆಇಎ ಅಂತಿಮ ಅವಕಾಶ ನೀಡಿದೆ. ಅಭ್ಯರ್ಥಿಗಳು ಮೇ 15ರ ರಾತ್ರಿ 11.59 ಗಂಟೆವರೆಗೆ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.

ಎಂಜಿನಿಯರಿಂಗ್, ವೈದ್ಯಕೀಯ ಹಾಗೂ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕೆಇಎ ನಡೆಸುವ ಸಿಇಟಿ-2024ರ ಆನ್‌ಲೈನ್ ಅರ್ಜಿಯಲ್ಲಿ ಆ‌ರ್‌ಡಿ ಸಂಖ್ಯೆಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅನೇಕ ಅಭ್ಯರ್ಥಿಗಳು ಮನವಿ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್‌ಡಿ ಸಂಖ್ಯೆಗಳನ್ನು ಹಾಗೂ ಇತರೆ ಕ್ಲೇಮ್‌ಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಮೇ 15ರ ರಾತ್ರಿ 11.59 ರವರೆಗೆ ಅಂತಿಮ ಅವಕಾಶ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ ಸೈಟ್ http://kea.kar.nic.inಗೆ ಭೇಟಿ ನೀಡಬಹುದು.

ಯುಜಿಸಿಇಟಿ-2024 ಅರ್ಜಿ ತಿದ್ದಪಡಿ ಮಾಡಲು ಇಲ್ಲಿ ಕ್ಲಿಕ್‌ ಮಾಡಿ

ತಿದ್ದುಪಡಿ ಮಾಡಿಕೊಳ್ಳಲು ಅನುಸರಿಸಬೇಕಾದ ಕ್ರಮ

  1. ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನಿಗದಿತ ಲಿಂಕ್ ಅನ್ನು ಆಯ್ಕೆ ಮಾಡಿ ಅಭ್ಯರ್ಥಿಗಳ ಲಾಗಿನ್ ಮೂಲಕ ತಿದ್ದುಪಡಿ ಮಾಡಿಕೊಳ್ಳುವುದು.
  2. ಲಿಂಕ್ ಆಯ್ಕೆ ಮಾಡಿದ ನಂತರ ಯಾವುದನ್ನು ಎಡಿಟ್ ಮಾಡಬೇಕು ಎಂಬುದನ್ನು ಸೆಲೆಕ್ಟ್ ಮಾಡಿ, ನಂತರ , (eligibility clause Update, RD details update, Course Update, Upload Documents, Reservation Claims, Special Category claims.) ತಿದ್ದುಪಡಿ ಮಾಡಿ
  3. Declaration button ಅನ್ನು ಆಯ್ಕೆ (Select) ಮಾಡುವ ಮೊದಲು ಪರಿಶೀಲಿಸಿ, ಒಂದು ಸಾರಿ Declaration button ಅನ್ನು ಆಯ್ಕೆ (Select) ಮಾಡಿದ ನಂತರ ಪುನಹ ತಿದ್ದುಪಡಿಮಾಡಿಕೊಳ್ಳಲು ಅವಕಾಶ ವಿರುವುದಿಲ್ಲ.
  4. ತಿದ್ದುಪಡಿ ಮಾಡಿಕೊಂಡ ನಂತರ ತಪ್ಪದೇ Declaration button ಅನ್ನು ಆಯ್ಕೆ (Select) ಮಾಡಿ ನಂತರ Final Submission ಅನ್ನು ಸಲ್ಲಿಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಅಭ್ಯರ್ಥಿಗಳು ಅರ್ಜಿಯಲ್ಲಿ ಮೊದಲು ಸಲ್ಲಿಸಿದ ಮಾಹಿತಿಯನ್ನೇ ಮುಂದಿನ ಎಲ್ಲಾ ಪ್ರಕ್ರಿಯೆಗೆ ಪರಿಗಣಿಸಲಾಗುವುದು.
  5. ನಂತರ ಮಾರ್ಪಡಿಸಿದ ಅರ್ಜಿಯನ್ನು ಮುದ್ರಿಸಿ ತಮ್ಮಲ್ಲಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. ಮುದ್ರಿತ ಅರ್ಜಿಯ ಕನಿಷ್ಟ ಐದು ಪ್ರತಿಗಳು ತಮ್ಮಲ್ಲಿ ಇರುವುದು ಸೂಕ್ತ.

ಇದನ್ನೂ ಓದಿ | SSLC Result 2024: ಎಸ್‌ಎಸ್‌ಎಲ್‌ಸಿ ‌ಉತ್ತರ ಪತ್ರಿಕೆ ಮರು ಮೌಲ್ಯಮಾಪನ, ಮರುಎಣಿಕೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ

Continue Reading

ದೇಶ

ಪಿತ್ರೋಡಾ ‘ಸಂಪತ್ತು ಹಂಚಿಕೆ’ ಹೇಳಿಕೆ, ಮಣಿಶಂಕರ್‌ ಅಯ್ಯರ್‌ ಪಾಕ್‌ ಪ್ರೇಮ; ಕಾಂಗ್ರೆಸ್‌ಗೆ ಈಗ ತೀವ್ರ ಫಜೀತಿ!

ಸಂಪತ್ತಿನ ಹಂಚಿಕೆ ಕುರಿತು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ, ಪಾಕಿಸ್ತಾನದ ಕುರಿತು ಪಕ್ಷದ ನಾಯಕ ಮಣಿಶಂಕರ್‌ ಅಯ್ಯರ್‌ ಅವರು ನೀಡಿರುವ ಹೇಳಿಕೆಗಳು ಕಾಂಗ್ರೆಸ್‌ಗೆ ಭಾರಿ ಮುಜುಗರ ತಂದಿವೆ. ಇಬ್ಬರೂ ನಾಯಕರ ವಿರುದ್ಧ ಸಾರ್ವಜನಿಕವಾಗಿಯೂ ಆಕ್ರೋಶ ವ್ಯಕ್ತವಾಗುತ್ತದೆ. ಹಾಗಾಗಿ, ಕಾಂಗ್ರೆಸ್‌ ಪಕ್ಷವು ಇಬ್ಬರ ಹೇಳಿಕೆಗಳಿಂದಲೂ ಅಂತರ ಕಾಪಾಡಿಕೊಳ್ಳುವ ಮೂಲಕ ಮುಜುಗರದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ.

VISTARANEWS.COM


on

Sam Pitroda
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಿಡಿದು, ಸ್ಥಳೀಯ ಪಕ್ಷದ ನಾಯಕನವರೆಗೆ ಭಾಷಣಗಳು, ಹೇಳಿಕೆಗಳು, ಆರೋಪ, ಟೀಕೆ, ವ್ಯಂಗ್ಯಗಳು ಮೊನಚಾಗಿವೆ. ಆದರೆ, ಕಾಂಗ್ರೆಸ್‌ನ ಕೆಲ ನಾಯಕರು ನೀಡುತ್ತಿರುವ ಹೇಳಿಕೆಗಳು ಆ ಪಕ್ಷಕ್ಕೇ ಮುಳುವಾಗುತ್ತಿವೆ. ಸಂಪತ್ತಿನ ಹಂಚಿಕೆ ಕುರಿತು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ, ಪಾಕಿಸ್ತಾನದ ಕುರಿತು ಪಕ್ಷದ ನಾಯಕ ಮಣಿಶಂಕರ್‌ ಅಯ್ಯರ್‌ (Mani Shankar Aiyar) ಅವರು ನೀಡಿರುವ ಹೇಳಿಕೆಗಳು ಕಾಂಗ್ರೆಸ್‌ಗೆ ಭಾರಿ ಮುಜುಗರ ತಂದಿವೆ. ಇದೇ ಕಾರಣಕ್ಕಾಗಿ, ಇಬ್ಬರೂ ನಾಯಕರ ಹೇಳಿಕೆಗಳಿಂದ ಕಾಂಗ್ರೆಸ್‌ ಅಂತರ ಕಾಪಾಡಿಕೊಂಡಿದೆ.

ಸ್ಯಾಮ್‌ ಪಿತ್ರೋಡಾ ಅವಾಂತರಗಳು

“ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದ ಜನರ ಸಂಪತ್ತನ್ನು ಕಸಿದು, ಹಂಚಿಕೆ ಮಾಡುತ್ತದೆ. ಮಹಿಳೆಯರ ಮಂಗಳಸೂತ್ರಕ್ಕೆ ಕೈ ಹಾಕುತ್ತದೆ” ಎಂಬುದಾಗಿ ನರೇಂದ್ರ ಮೋದಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸುವ ಭರದಲ್ಲಿ, ಸ್ಯಾಮ್‌ ಪಿತ್ರೋಡಾ ಅವರು ಅಮೆರಿಕದ ಉದಾಹರಣೆ ಕೊಟ್ಟರು. “ಅಮೆರಿಕದಲ್ಲಿ ಪಿತ್ರಾರ್ಜಿತ ತೆರಿಗೆ ಇದೆ. ಅಪ್ಪನ ಆಸ್ತಿಯಲ್ಲಿ ಶೇ.55ರಷ್ಟು ಆಸ್ತಿಯನ್ನು ಸರ್ಕಾರಕ್ಕೆ ಕೊಡಬೇಕು” ಎಂಬುದಾಗಿ ಹೇಳಿದ್ದು ವಿವಾದಕ್ಕೆ ಕಾರಣವಾಯಿತು.

“ಅಮೆರಿಕದಲ್ಲಿ ಪಿತ್ರಾರ್ಜಿತ ತೆರಿಗೆ ಇದೆ. ಒಬ್ಬನು 100 ಮಿಲಿಯನ್ USD ಮೌಲ್ಯದ ಸಂಪತ್ತನ್ನು ಹೊಂದಿದ್ದರೆ ಅವನು ಸತ್ತಾಗ ಕೇವಲ 45 ಪ್ರತಿಶತವನ್ನು ತನ್ನ ಮಕ್ಕಳಿಗೆ ವರ್ಗಾಯಿಸಬಹುದು. 55 ಪ್ರತಿಶತವನ್ನು ಸರ್ಕಾರವು ಹೊಂದುತ್ತದೆ. ಅದು ಆಸಕ್ತಿದಾಯಕ ಕಾನೂನು. ನಿಮ್ಮ ಪೀಳಿಗೆಯಲ್ಲಿ ನೀವು ಸಂಪತ್ತನ್ನು ಸಂಪಾದಿಸಿದ್ದೀರಿ. ಮತ್ತು ನೀವು ಈಗ ಹೋಗುವಾಗ, ನಿಮ್ಮ ಸಂಪತ್ತನ್ನು ಸಾರ್ವಜನಿಕರಿಗೆ ಬಿಡಬೇಕು. ಎಲ್ಲವನ್ನೂ ಅಲ್ಲ, ಅದರಲ್ಲಿ ಅರ್ಧದಷ್ಟು, ಇದು ನ್ಯಾಯೋಚಿತವಾಗಿದೆ” ಎಂದು ಪಿತ್ರೋಡಾ ಹೇಳಿದ್ದರು. ಇನ್ನು, ಅವರು ದಕ್ಷಿಣ ಭಾರತೀಯರು ಆಫ್ರಿಕಾದವರಂತೆ ಇದ್ದಾರೆ ಎಂದು ವರ್ಣ ಭೇದದ ಹೇಳಿಕೆಗಳಿಂದಾಗಿ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.

ಮಣಿಶಂಕರ್‌ ಅಯ್ಯರ್‌ ಪಾಕ್‌ ಪ್ರೇಮ

ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿರುವ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ ಅವರೀಗ ಪಾಕಿಸ್ತಾನದ ಪರವಾಗಿ ಮಾತನಾಡಿದ್ದಾರೆ. ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದು ಅವರು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ, ಮಣಿಶಂಕರ್‌ ಅಯ್ಯರ್‌ ಅವರ ಹೇಳಿಕೆಯಿಂದ ಕಾಂಗ್ರೆಸ್‌ ಅಂತರ ಕಾಪಾಡಿಕೊಂಡಿದೆ.

“ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ, ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂದು ಅಯ್ಯರ್‌ ಹೇಳಿದ್ದಾರೆ.

ಇದನ್ನೂ ಓದಿ: Sam Pitroda: ಭಾರತೀಯರ ಬಣ್ಣದ ಕುರಿತು ಮಾತಾಡಿದ ಸ್ಯಾಮ್‌ ಪಿತ್ರೋಡಾ ತಲೆದಂಡ; ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ!

Continue Reading
Advertisement
MS Dhoni
ಪ್ರಮುಖ ಸುದ್ದಿ2 mins ago

MS Dhoni : ಧೋನಿಯ ಗಾಯದ ಗುಮಾನಿಗೆ ಸ್ಪಷ್ಟತೆ ನೀಡಿದ ಕೋಚ್ ಫ್ಲೆಮಿಂಗ್​

Road Accident
ಕ್ರೈಂ6 mins ago

Road Accident : ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು; ಕರೆಂಟ್‌ ವೈರ್‌ ತಾಗಿ ವ್ಯಕ್ತಿ ಮೃತ್ಯು

IPL 2024
ಪ್ರಮುಖ ಸುದ್ದಿ16 mins ago

IPL 2024 : ಸುನಿಲ್ ಗವಾಸ್ಕರ್ ಮತ್ತು ಹರ್ಷ ಭೋಗ್ಲೆ ವಿರುದ್ಧ ವಿರಾಟ್ ಕೊಹ್ಲಿ ವಾಗ್ದಾಳಿ

KEA
ಕರ್ನಾಟಕ23 mins ago

UGCET 2024: ಯುಜಿಸಿಇಟಿ ಅರ್ಜಿ ತಿದ್ದುಪಡಿಗೆ ಅಂತಿಮ ಅವಕಾಶ ನೀಡಿದ ಕೆಇಎ; ಕೊನೆಯ ದಿನಾಂಕ ಯಾವಾಗ?

Money Guide
ಮನಿ-ಗೈಡ್26 mins ago

Money Guide: ಭಾರತದಲ್ಲಿಯೂ ಆರಂಭವಾಯ್ತು ಬಹು ನಿರೀಕ್ಷಿತ ಗೂಗಲ್ ವ್ಯಾಲೆಟ್‌; ಇದು ಗೂಗಲ್‌ ಪೇಗಿಂತ ಹೇಗೆ ಭಿನ್ನ?

Sam Pitroda
ದೇಶ27 mins ago

ಪಿತ್ರೋಡಾ ‘ಸಂಪತ್ತು ಹಂಚಿಕೆ’ ಹೇಳಿಕೆ, ಮಣಿಶಂಕರ್‌ ಅಯ್ಯರ್‌ ಪಾಕ್‌ ಪ್ರೇಮ; ಕಾಂಗ್ರೆಸ್‌ಗೆ ಈಗ ತೀವ್ರ ಫಜೀತಿ!

IPL 2024
ಕ್ರೀಡೆ36 mins ago

IPL 2024: ಕೆ.ಎಲ್​ ರಾಹುಲ್​ಗೆ ಬೈದ ಎಲ್​​ಎಸ್​​ಜಿ ಮಾಲೀಕ ಗೋಯೆಂಕಾ ವರ್ತನೆಗೆ ಮೊಹಮ್ಮದ್​ ಶಮಿ ಆಕ್ರೋಶ

Self Harming Murder case In kodagu
ಕೊಡಗು43 mins ago

Self Harming : ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಪ್ರೇಮಿ ನೇಣಿಗೆ ಶರಣು

IPL 2024
ಕ್ರೀಡೆ55 mins ago

IPL 2024 : ಆರ್​ಸಿಬಿಯ ಪ್ಲೇಆಫ್​ ಚಾನ್ಸ್​ ಇದೆಯೇ? ಇಲ್ಲಿದೆ ನೋಡಿ ಲೆಕ್ಕಾಚಾರ

Prajwal Revanna case SIT did not contact woman to file false case
ಕ್ರೈಂ58 mins ago

Prajwal Revanna case: ಸುಳ್ಳು ಕೇಸ್‌ ಹಾಕಲು ಮಹಿಳೆಯನ್ನು SIT ಸಂಪರ್ಕ ಮಾಡಿಲ್ಲ; ಕಾಟ ಕೊಟ್ಟವನನ್ನು ಬಿಡಲ್ಲ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ3 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ5 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ6 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ13 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ20 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ21 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ22 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌