Virat Kohli : ವಿರಾಟ್​ ಕೊಹ್ಲಿ, ಅನುಷ್ಕಾ ದಂಪತಿಗೆ ಗಂಡು ಮಗು; ಹೆಸರು ಅಕಾಯ್​​ - Vistara News

ಪ್ರಮುಖ ಸುದ್ದಿ

Virat Kohli : ವಿರಾಟ್​ ಕೊಹ್ಲಿ, ಅನುಷ್ಕಾ ದಂಪತಿಗೆ ಗಂಡು ಮಗು; ಹೆಸರು ಅಕಾಯ್​​

Virat Kohli : ಅನುಷ್ಕಾ ಶರ್ಮಾ ಅವರು ತಮ್​ ಇನ್​ಸ್ಟಾ ಗ್ರಾಮ್​ ಪೋಸ್ಟ್​ನಲ್ಲಿ ಎರಡನೇ ಮಗುವಿನ ಜನನ ಹಾಗೂ ಹೆಸರಿನ ಮಾಹಿತಿ ಪ್ರಕಟಿಸಿದ್ದಾರೆ.

VISTARANEWS.COM


on

Anushka Sharma
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತ ತಂಡ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಹಾಗೂ ಪತ್ನಿ ಅನುಷ್ಕಾ ಶರ್ಮಾ (Anushka Sharma) ಎರಡನೇ ಮಗುವನ್ನು ಸ್ವಾಗತಿಸಿದ್ದಾರೆ. ಫೆಬ್ರವರಿ 15 ರಂದು ಗಂಡು ಮಗುವನ್ನು ಜನಿಸಿರುವುದಾಗಿ ದಂಪತಿಗಳು ಘೋಷಿಸಿದ್ದಾರೆ. ಅನುಷ್ಕಾ ಶರ್ಮಾ ತಮ್ಮ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಮಗುವಿಗೆ ಅಕಾಯ್ ಎಂದು ಹೆಸರಿಟ್ಟಿದ್ದೇವೆ ಎಂದು ಬಹಿರಂಗಪಡಿಸಿದ್ದಾರೆ. ದಂಪತಿಗೆ ವಾಮಿಕಾ ಎಂಬ ಮಗಳಿದ್ದಾಳೆ.

ಈ ಹಿಂದೆ ನಟಿ ಅನುಷ್ಕಾ ಕೆಲವೇ ದಿನಗಳಲ್ಲಿ ಲಂಡನ್​ನಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು. ಕೈಗಾರಿಕೋದ್ಯಮಿ ಹರ್ಷ್ ಗೋಯೆಂಕಾ ಇತ್ತೀಚೆಗೆ ತಮ್ಮ ಎಕ್ಸ್ ಹ್ಯಾಂಡಲ್ ನಲ್ಲಿ ಕೆಲವೇ ದಿನಗಳಲ್ಲಿ ಮಗು ಜನಿಸಲಿದೆ ಎಂದು ಹೇಳಿಕೊಂಡಿದ್ದರು. ವಿರಾಟ್ ಅಥವಾ ಅನುಷ್ಕಾ ಹೆಸರನ್ನು ಉಲ್ಲೇಖಿಸದೆ ಬರೆದುಕೊಂಡಿದ್ದರು. “ಮುಂದಿನ ಕೆಲವು ದಿನಗಳಲ್ಲಿ ಮಗುವೊಂದು ಜನಿಸಲಿದೆ. ಶ್ರೇಷ್ಠ ಕ್ರಿಕೆಟರ್​​ ಅಪ್ಪನಂತೆ ಮಗು ಭಾರತವನ್ನು ದೊಡ್ಡ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂದು ಭಾವಿಸುತ್ತೇನೆ. ಅಲ್ಲದಿದ್ದರೆ ತಾಯಿಯನ್ನು ಅನುಸರಿಸಿ ಚಲನಚಿತ್ರ ತಾರೆಯಾಗಬಹುದೇ? ಎಂದು ಬರೆದುಕೊಂಡಿದ್ದರು. ಮುಂದುವರಿದ ಅವರು ‘ಮೇಡ್ ಇನ್ ಇಂಡಿಯಾ’ ಮತ್ತು ‘ಟು ಬಿ ಬಾರ್ನ್ ಇನ್ ಲಂಡನ್’ ಹ್ಯಾಶ್ ಟ್ಯಾಗ್ ಗಳನ್ನು ಸಹ ಬಳಸಿದ್ದರು. ಗೋಯೆಂಕಾ ಅವರು, ಅನುಷ್ಕಾ ಮತ್ತು ವಿರಾಟ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಇದು ಎಲ್ಲರಿಗೂ ಅನಿಸಿತ್ತು. ಆ ಸುದ್ದಿ ಈಗ ಖಾತರಿಯಾಗಿದೆ.

ಇದನ್ನೂ ಓದಿ : Sarfaraz Khan : ಕೆಕೆಆರ್​ ತಂಡ ಸೇರಲಿದ್ದಾರಾ ಸರ್ಫರಾಜ್ ಖಾನ್​?

2023 ರ ಅಕ್ಟೋಬರ್​​ನಲ್ಲಿ ಅನುಷ್ಕಾ ಶರ್ಮಾ ಎರಡನೇ ಗರ್ಭಧರಿಸಿರುವ ವರದಿಗಳು ಮೊದಲ ಬಾರಿಗೆ ಬಹಿರಂಗೊಂಡಿದ್ದವು. ನಟಿ ಪತಿ ವಿರಾಟ್ ಕೊಹ್ಲಿಯೊಂದಿಗೆ ಎರಡನೇ ಮಗುವನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿತ್ತು. ಅನುಷ್ಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಕಳೆದ ಬಾರಿಯಂತೆ, ಅವರು ನಂತರದ ಹಂತದಲ್ಲಿ ಔಪಚಾರಿಕವಾಗಿ ಸುದ್ದಿಯನ್ನು ಪ್ರಪಂಚದೊಂದಿಗೆ ಹಂಚಿಕೊಳ್ಳುತ್ತಾರೆ” ಎಂದು ಹೇಳಲಾಗಿತ್ತು.

ಸುದ್ದಿ ತಿಳಿಸಿದ್ದ ಎಬಿಡಿ ವಿಲಿಯರ್ಸ್​

ಜನವರಿ 2024 ರಲ್ಲಿ, ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಹಾಗೂ ವಿರಾಟ್ ಕೊಹ್ಲಿ ಆರ್​ಸಿಬಿ ಸಹ ಆಟಗಾರ ಎಬಿ ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ಅನುಷ್ಕಾ ಶರ್ಮಾ ಅವರ ಗರ್ಭಧಾರಣೆಯ ವರದಿಗಳನ್ನು ದೃಢಪಡಿಸಿದ್ದರು. “ಹೌದು, ಅವರ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೌದು, ಇದು ಕುಟುಂಬದ ಸಮಯ ಮತ್ತು ವಿಷಯ. ಅವರಿಗೆ ಅದು ಮುಖ್ಯ. ಹೆಚ್ಚಿನ ಜನರ ಆದ್ಯತೆ ಕುಟುಂಬ ಎಂದು ನಾನು ಭಾವಿಸುತ್ತೇನೆ. ಭಾರತ ತಂಡದಲ್ಲಿ ನಾವು ವಿರಾಟ್​ ಅವರನ್ನು ಮಿಸ್ ಮಾಡಿಕೊಳ್ಳುತ್ತೇವೆ. ಆದರೆ ಅವರು ರಜೆ ತೆಗೆದುಕೊಂಡಿರುವುದು ಸರಿಯಾದ ನಿರ್ಧಾರ ಎಂದು ಹೇಳಿದ್ದರು.

ಅನುಷ್ಕಾ ಶರ್ಮಾ 2017 ರ ಡಿಸೆಂಬರ್​ನಲ್ಲಿ ವಿರಾಟ್ ಕೊಹ್ಲಿಯನ್ನು ವಿವಾಹವಾಗಿದ್ದರು. ನಟಿ ಝೀರೋ ಚಿತ್ರದ ಬಿಡುಗಡೆಯ ನಂತರ 2018 ರಲ್ಲಿ ನಟನೆಯಿಂದ ವಿರಾಮ ತೆಗೆದುಕೊಂಡಿದ್ದರು. ನಂತರ ದಂಪತಿ ತಮ್ಮ ಮಗಳು ವಾಮಿಕಾಳನ್ನು ಜನವರಿ 2021 ರಲ್ಲಿ ಸ್ವಾಗತಿಸಿದ್ದರು. ಅಂದಿನಿಂದ ಅನುಷ್ಕಾ ಯಾವುದೇ ಚಿತ್ರಗಳಲ್ಲಿ ನಟಿಸಿಲ್ಲ. ಆದಾಗ್ಯೂ ಅನುಷ್ಕಾ ಚಕ್ದಾ ಎಕ್ಸ್​ಪ್ರೆಸ್​ ಮೂಲಕ ಮತ್ತೆ ತೆರೆಗೆ ಬರಲಿದ್ದಾರೆ. ಇದು ಭಾರತ ಮಹಿಳೆಯರ ತಂಡದ ಮಾಜಿ ವೇಗದ ಬೌಲರ್​ ಜೂಲನ್​ ಗೋಸ್ವಾಮಿ ಅವರ ಜೀವನ ಚರಿತ್ರೆಯಾಗಿದೆ. ನಟಿ ಈಗಾಗಲೇ ಚಿತ್ರೀಕರಣವನ್ನು ಮುಗಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

PM Narendra Modi Live: ಮೋದಿ ಸಮಾವೇಶದ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದಲ್ಲಿ 100 ಎಕರೆ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಮೋದಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಭಾನುವಾರ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ಮಾಡಿದ ನರೇಂದ್ರ ಮೋದಿ ಅವರು ಹೊಸಪೇಟೆಯಲ್ಲಿಯೇ ನಿನ್ನೆ ವಾಸ್ತವ್ಯ ಹೂಡಿದ್ದರು. ಪ್ರಚಾರದುದ್ದಕ್ಕೂ ಕೇಂದ್ರ ಸರ್ಕಾರದ ಸಾಧನೆ ಜತೆಗೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇಂದು ಯಾವ ವಿಷಯವನ್ನು ಪ್ರಸ್ತಾಪ ಮಾಡಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

VISTARANEWS.COM


on

PM Narendra modi in Bagalakote for Election Campaign and here is Live telecast
Koo

ಬಾಗಲಕೋಟೆ: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಭಾನುವಾರ (ಏಪ್ರಿಲ್‌ 28) ಕರ್ನಾಟಕದ (Karnataka) ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸೋಮವಾರವೂ (ಏಪ್ರಿಲ್‌ 29) ಬಾಗಲಕೋಟೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಮೋದಿ ಸಮಾವೇಶದ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದಲ್ಲಿ 100 ಎಕರೆ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಮೋದಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಸೋಮವಾರ ಮಧ್ಯಾಹ್ನ 12 ಗಂಟೆಗೆ ನರೇಂದ್ರ ಮೋದಿ ಅವರು ಬಾಗಲಕೋಟೆಗೆ ಆಗಮಿಸಲಿದ್ದಾರೆ. ಮೋದಿ ಭಾಷಣಕ್ಕಾಗಿ 90/100 ಅಡಿ ಮುಖ್ಯ ವೇದಿಕೆ ಪೆಂಡಾಲು ಹಾಕಲಾಗಿದೆ. 60/40 ಅಡಿಯ ಮುಖ್ಯ ವೇದಿಕೆಯಲ್ಲಿ, 32 ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಬಿಸಿಲು ಹೆಚ್ಚಾದ ಕಾರಣ ವೇದಿಕೆ ಹವಾನಿಯಂತ್ರಿತವಾಗಿ ಇರಲಿದೆ. ಇನ್ನು ಸಾರ್ವಜನಿಕರಿಗೆ 400 ಅಡಿ ಅಗಲ, 600 ಅಡಿ ಉದ್ದದ ಬೃಹತ್ ಪೆಂಡಾಲ್ ವೇದಿಕೆ ನಿರ್ಮಿಸಲಾಗಿದೆ. ಜರ್ಮನ್ ಮಾದರಿಯಲ್ಲಿ ವೇದಿಕೆ ನಿರ್ಮಿಸಲಾಗಿದೆ.

ಬಾಗಲಕೋಟೆಯಲ್ಲಿ ಮೋದಿ ಸಮಾವೇಶದ ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್‌ ಹಾಗೂ ವಿಜಯಪುರ ಅಭ್ಯರ್ಥಿ ರಮೇಶ್‌ ಜಿಗಜಿಣಗಿ ಪರವಾಗಿ ಪ್ರಧಾನಿ ಮತಯಾಚನೆ ಮಾಡಲಿದ್ದಾರೆ. ಒಟ್ಟು 70 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಭದ್ರತೆಗೆ 1,100ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಮೂವರು ಎಸ್‌ಪಿ, ನಾಲ್ವರು ಎಎಸ್‌ಪಿ, 12 ಡಿಎಸ್‌ಪಿ, 32 ಸಿಪಿಐ, 88 ಪಿಎಸ್‌ಐ, 1,049 ಪೊಲೀಸ್‌ ಪೇದೆಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ವೇದಿಕೆ ಬಲಭಾಗ ಮೂರು ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದೆ.

ಇದನ್ನೂ ಓದಿ: PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

ಪ್ರಧಾನಿ ನರೇಂದ್ರ ಮೋದಿ ಅವರ ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಎರಡೂ ಕ್ಷೇತ್ರಗಳ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಸೇರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಭಾನುವಾರ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ಮಾಡಿದ ನರೇಂದ್ರ ಮೋದಿ ಅವರು ಹೊಸಪೇಟೆಯಲ್ಲಿಯೇ ನಿನ್ನೆ ವಾಸ್ತವ್ಯ ಹೂಡಿದ್ದರು. ಪ್ರಚಾರದುದ್ದಕ್ಕೂ ಕೇಂದ್ರ ಸರ್ಕಾರದ ಸಾಧನೆ ಜತೆಗೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು.

Continue Reading

ಪ್ರಮುಖ ಸುದ್ದಿ

Fact Check: ಅಮಿತ್‌ ಶಾ ಎಸ್​​ಸಿ, ಎಸ್​ಟಿ ಮೀಸಲು ರದ್ದು ಮಾಡ್ತೀವಿ ಎಂದಿದ್ದು ನಿಜವೆ?​​

Fact Check: ಅಧಿಕಾರಿಗಳ ಪ್ರಕಾರ, ಗೃಹ ಸಚಿವಾಲಯ (ಎಂಎಚ್ಎ) ಈ ಸಂಬಂಧ ದೂರು ದಾಖಲಿಸಿದೆ. ಅದರ ಆಧಾರದ ಮೇಲೆ ದೆಹಲಿ ಪೊಲೀಸರ ವಿಶೇಷ ಸೆಲ್ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದೆ.

VISTARANEWS.COM


on

Amith Shah
Koo

ನವ ದೆಹಲಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ (Fact Check) ನೀಡಲಾಗುತ್ತಿರುವ ಮಿಸಲಾತಿಯನ್ನು ತೆಗೆದು ಹಾಕಲಾಗುವುದು ಎಂದು ಅಮಿತ್ ಶಾ (Amit Shah) ಹೇಳಿದ್ದಾರೆ ಎಂದು ತಿರುಚಿದ ವಿಡಿಯೊ ಹರಿಬಿಟ್ಟ ಪ್ರಕರಣದಲ್ಲಿ ಡೆಲ್ಲಿ ಪೊಲೀಸರು (Delhi Police) ಎಫ್​ಐಆರ್​ ದಾಖಲಿಸಿದ್ದಾರೆ. ಇದೇ ವೇಳೆ ಪೊಲೀಸರು ವಿಡಿಯೊದ ಕುರಿತು ಮಾಹಿತಿ ನೀಡುವಂತೆ ಸೋಶಿಯಲ್ ಮೀಡಿಯಾ ಫ್ಲ್ಯಾಟ್​ಫಾರ್ಮ್​ ಎಕ್ಸ್​​ಗೆ (X) ಮನವಿ ಮಾಡಿದೆ. ಅದರ ಪ್ರಕಾರ ತನಿಖೆ ನಡೆಸುವುದಾಗಿ ಪೊಲೀಸರು ಹೇಳಿದ್ದಾರೆ. ಇದು ನಕಲಿ ಸೃಷ್ಟಿ ಎಂದು ಅಮಿತ್‌ ಶಾ ಸ್ಪಷ್ಪಪಡಿಸಿದ್ದಾರೆ.

ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​​ಫಾರ್ಮ್​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾನುವಾರ ಎಫ್ಐಆರ್ ದಾಖಲಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಗೃಹ ಸಚಿವಾಲಯ (ಎಂಎಚ್ಎ) ಈ ಸಂಬಂಧ ದೂರು ದಾಖಲಿಸಿದೆ. ಅದರ ಆಧಾರದ ಮೇಲೆ ದೆಹಲಿ ಪೊಲೀಸರ ವಿಶೇಷ ಸೆಲ್ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದೆ.

ಮೂಲಗಳನ್ನು ಉಲ್ಲೇಖಿಸಿ, ಈ ಪ್ರಕರಣದಲ್ಲಿ ಬಂಧನಗಳು ದೇಶಾದ್ಯಂತ ನಡೆಯುವ ಸಾಧ್ಯತೆಯಿದೆ ಎಂದು ಪಿಟಿಐ ವರದಿ ತಿಳಿಸಿದೆ.

ಭಾರತೀಯ ಸೈಬರ್ ಕ್ರೈಮ್ ಸಮನ್ವಯ ಕೇಂದ್ರದ (ಐ 4 ಸಿ) ಡಿಸಿ ಸಿಂಕು ಶರಣ್ ಸಿಂಗ್ ಅವರು ಸಲ್ಲಿಸಿದ ದೂರಿನ ಪ್ರಕಾರ, “ಸಮುದಾಯಗಳ ನಡುವೆ ಸಾಮರಸ್ಯ ಹಾಳು ಮಾಡುವ ಉದ್ದೇಶದಿಂದ ಕೆಲವು ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುತ್ತಿದೆ, ಇದು ಸಾರ್ವಜನಿಕ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಲಿಂಕ್​​ಗಳ ಸಂಗ್ರಹ

ಮುಂದಿನ ಕ್ರಮಕ್ಕಾಗಿ ವೀಡಿಯೊಗಳನ್ನು ಹಂಚಿಕೊಂಡ ಲಿಂಕ್​​ಗಳನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮೂಲಗಳ ಪ್ರಕಾರ, ದೆಹಲಿ ಪೊಲೀಸರು ಎಕ್ಸ್ ಮತ್ತು ಫೇಸ್ಬುಕ್​​ಗೆ ಪತ್ರ ಬರೆದಿದ್ದು, ಅಮಿತ್ ಶಾ ಅವರ ನಕಲಿ ಕ್ಲಿಪ್​ನ ಮೂಲ ಮತ್ತು ವೀಡಿಯೊವನ್ನು ಮೊದಲು ಹಂಚಿಕೊಂಡ ಖಾತೆಯ ಬಗ್ಗೆ ಸಾಮಾಜಿಕ ಮಾಧ್ಯಮ ಖಾತೆಗಳ ಬಗ್ಗೆ ಮಾಹಿತಿ ಕೋರಿದ್ದಾರೆ.

ಹಿಂಸಾಚಾರಕ್ಕೆ ಕಾರಣವಾಗಬಹುದು

ಗೃಹ ಸಚಿವರ ನಕಲಿ ವೀಡಿಯೊಗಳನ್ನು ಕಾಂಗ್ರೆಸ್ ಹರಡಿಸಿದೆ ಎಂಬುದಾಗಿ ಬಿಜೆಪಿ ಹೇಳಿದೆ. ಎಡಿಟ್ ಮಾಡಿದ ತುಣುಕುಗಳನ್ನು ಪ್ರಸಾರ ಮಾಡುವ ಮತ್ತು ಹಂಚಿಕೊಳ್ಳುವ ಮೂಲಕ ವಿರೋಧ ಪಕ್ಷವು ದೇಶದಲ್ಲಿ ಕೋಮು ಸಾಮರಸ್ಯವನ್ನು ಹರಡುತ್ತಿದೆ ಎಂದು ಆರೋಪಿಸಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಕಾಂಗ್ರೆಸ್ ತೆಲಂಗಾಣ ಘಟಕವು ಅಮಿತ್ ಶಾ ಅವರ ನಕಲಿ ವೀಡಿಯೊವನ್ನು ಪ್ರಸಾರ ಮಾಡುತ್ತಿದೆ, ಇದು “ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಕಾರಣವಾಗಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

ತೆಲಂಗಾಣ ಕಾಂಗ್ರೆಸ್ ಎಡಿಟ್ ಮಾಡಿದ ವೀಡಿಯೊವನ್ನು ಹರಡುತ್ತಿದೆ, ಇದು ಸಂಪೂರ್ಣವಾಗಿ ನಕಲಿ ಮತ್ತು ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಕಾರಣವಾಗುವ ಸಾಮರ್ಥ್ಯವನ್ನು ಹೊಂದಿದೆ” ಎಂದು ಮಾಳವೀಯ ಬರೆದಿದ್ದಾರೆ.

ಧರ್ಮದ ಆಧಾರದ ಮೇಲೆ ಮುಸ್ಲಿಮರಿಗೆ ನೀಡಲಾಗುವ “ಅಸಂವಿಧಾನಿಕ ಮೀಸಲಾತಿ” ಪ್ರಯೋಜನಗಳನ್ನು ತೆಗೆದುಹಾಕುವ ಬಗ್ಗೆ ಮಾತ್ರ ಶಾ ಮಾತನಾಡುತ್ತಿದ್ದಾರೆ ಎಂದು ಅವರು ಗಮನಸೆಳೆದರು.

ಅನನುಕೂಲಕರ ಮೀಸಲಾತಿ

ಕಾಂಗ್ರೆಸ್ ಮತ್ತು ಅದರ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮೀಸಲಾತಿ ಬಗ್ಗೆ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅಮಿತ್ ಶಾ ತಮ್ಮ ಹೇಳಿಕೆಯಲ್ಲಿ ಆರೋಪಿಸಿದ್ದಾರೆ. ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುತ್ತಿದೆ ಅಸಂವಿಧಾನಿಕ ಮೀಸಲಾತಿಯನ್ನು ಕೊನೆಗೊಳಿಸುತ್ತೇವೆ ಎಂದು ಅವರು ಹೇಳಿದ್ದಾರೆ.

“ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಮೀಸಲಾತಿ ಬಗ್ಗೆ ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ. ತುಷ್ಟೀಕರಣಕ್ಕಾಗಿ, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವ ಮೂಲಕ ಮತ್ತು ಜಾಮಿಯಾ ಮತ್ತು ಎಎಂಯುನಂತಹ ಸಂಸ್ಥೆಗಳಲ್ಲಿ ಎಸ್ಸಿ-ಎಸ್ಟಿ ಮತ್ತು ಒಬಿಸಿಯನ್ನು ವಂಚಿತಗೊಳಿಸಲಾಗುತ್ತಿದೆ ಎಂದು” ಎಂದು ಶಾ ಆರೋಪಿಸಿದರು.

Continue Reading

ಪ್ರಮುಖ ಸುದ್ದಿ

Physical Abuse : ಮದುವೆ ಪ್ರಸ್ತಾಪ ತಿರಸ್ಕರಿಸಿದ ಬಾಲಕಿ ಮೇಲೆ ಅತ್ಯಾಚಾರ, ಮುಖಕ್ಕೆ ಕಬ್ಬಿಣದಿಂದ ಬರೆ

Physical Abuse: ನಾನು ಏಪ್ರಿಲ್ 19 ರಂದು ಮನೆಗೆ ಸಾಮಗ್ರಿ ಖರೀದಿಸಲು ಅಂಗಡಿಗೆ ಹೋಗಿದ್ದೆ. ಅವನು ನನ್ನನ್ನು ಒತ್ತಾಯಪೂರ್ವಕವಾಗಿ ಮನೆಗೆ ಕರೆದೊಯ್ದಿದ್ದ. ಅಲ್ಲಿ ತಪ್ಪು ಕೆಲಸಗಳನ್ನು ಮಾಡಿದನು. ನಂತರ ಅವನು ನನ್ನ ಮುಖವನ್ನು ರಾಡ್ ನಿಂದ ಸುಟ್ಟು ತನ್ನ ಹೆಸರನ್ನು ಬರೆದನು, ಅವನ ಸಹೋದರಿ ಮತ್ತು ತಾಯಿ ನನ್ನನ್ನು ಹಿಡಿದುಕೊಂಡಿದ್ದರು. ನಾನು ಕೂಗುತ್ತಲೇ ಇದ್ದೆ, ಆದರೆ ಯಾರೂ ನಮ್ಮನ್ನು ರಕ್ಷಿಸಲು ಬರಲಿಲ್ಲ” ಎಂದು ಬಾಲಕಿ ತಿಳಿಸಿದ್ದಾರೆ.

VISTARANEWS.COM


on

Physical Abuse
Koo

ಲಖನೌ: ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ 17 ವರ್ಷದ ಬಾಲಕಿಯೊಬ್ಬಳನ್ನು ಮೂರು ದಿನಗಳ ಕಾಲ ಒತ್ತೆಯಾಳಾಗಿ ಇರಿಸಿ, ಅತ್ಯಾಚಾರ ಎಸಗಿದ (Physical Abuse) ಘಟನೆ ಲಖೀಂಪುರದಲ್ಲಿ ನಡೆದಿದೆ. ಕ್ರೂರಿಗಳು ಆಕೆಯ ಮುಖದ ಮೇಲೆ ಕಬ್ಬಿಣದ ರಾಡ್​​ನಿಂದ ಬರೆಯೂ ಎಳೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 19 ರಂದು, 21 ವರ್ಷದ ಯುವಕ ಈ ಕೆಲಸ ಮಾಡಿದ್ದಾರೆ. ತನ್ನ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಆಕೆಯನ್ನು ಬಲವಂತವಾಗಿ ತನ್ನ ಮನೆಗೆ ಕರೆಯೊಯ್ದಿದ್ದ. ಅವಳನ್ನು ಮೂರು ದಿನಗಳ ಕಾಲ ಅಲ್ಲಿ ಬಂಧಿಯಾಗಿಟ್ಟು ಹಲ್ಲೆ ಹಾಗೂ ಅತ್ಯಾಚಾರ ಮಾಡಿದ್ದ.

ನಾನು ಏಪ್ರಿಲ್ 19 ರಂದು ಮನೆಗೆ ಸಾಮಗ್ರಿ ಖರೀದಿಸಲು ಅಂಗಡಿಗೆ ಹೋಗಿದ್ದೆ. ಅವನು ನನ್ನನ್ನು ಒತ್ತಾಯಪೂರ್ವಕವಾಗಿ ಮನೆಗೆ ಕರೆದೊಯ್ದಿದ್ದ. ಅಲ್ಲಿ ತಪ್ಪು ಕೆಲಸಗಳನ್ನು ಮಾಡಿದನು. ನಂತರ ಅವನು ನನ್ನ ಮುಖವನ್ನು ರಾಡ್ ನಿಂದ ಸುಟ್ಟು ತನ್ನ ಹೆಸರನ್ನು ಬರೆದನು, ಅವನ ಸಹೋದರಿ ಮತ್ತು ತಾಯಿ ನನ್ನನ್ನು ಹಿಡಿದುಕೊಂಡಿದ್ದರು. ನಾನು ಕೂಗುತ್ತಲೇ ಇದ್ದೆ, ಆದರೆ ಯಾರೂ ನಮ್ಮನ್ನು ರಕ್ಷಿಸಲು ಬರಲಿಲ್ಲ” ಎಂದು ಬಾಲಕಿ ತಿಳಿಸಿದ್ದಾರೆ.

ಬಾಲಕಿ ಹೇಗೋ ಸೆರೆಯಿಂದ ತಪ್ಪಿಸಿಕೊಂಡು ಏಪ್ರಿಲ್ 21 ರಂದು ಮನೆಗೆ ಹಿಂದಿರುಗಿದ್ದಳು. ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ, ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

ಆರಂಭದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 343 (ಅಕ್ರಮ ಬಂಧನ), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು) ಮತ್ತು 504 (ಉದ್ದೇಶಪೂರ್ವಕ ಅವಮಾನ) ಮತ್ತು ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಅಡಿಯಲ್ಲಿ ನಿಬಂಧನೆಗಳನ್ನು ಸೇರಿಸಲಾಯಿತು.

Continue Reading

ಕರ್ನಾಟಕ

Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Srinivasa Prasada Passes Away: ನಾಳೆ ಸಿಲ್ಕ್ ಫ್ಯಾಕ್ಟರಿ ಬಳಿ ಅಂಬೇಡ್ಕರ್ ಎಜುಕೇಶಲ್ ಅಂಡ್ ಕಲ್ಚರಲ್ ಟ್ರಸ್ಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅವರು ಬೌದ್ಧ ಧರ್ಮ ಸ್ವೀಕಾರ ಮಾಡಿದ್ದರು. ಹಾಗಾಗಿ ಬೌದ್ಧ ಧರ್ಮದ ಪ್ರಕಾರ ಅಂತಿಮ ವಿಧಿ ವಿಧಾನ ನಡೆಯಲಿವೆ ಎಂದು ಶ್ರೀನಿವಾಸ್ ಪ್ರಸಾದ್ ಮಗಳು ಪ್ರತಿಮಾ ಪ್ರಸಾದ್‌ ಹೇಳಿದ್ದಾರೆ.

VISTARANEWS.COM


on

srinivasa prasad sutturu sri
ಸುತ್ತೂರು ಶ್ರೀಗಳಿಂದ ಶ್ರೀನಿವಾಸ ಪ್ರಸಾದ್‌ ಅಂತಿಮ ದರ್ಶನ
Koo

ಮೈಸೂರು: ಬಿಜೆಪಿಯ ಹಿರಿಯ (BJP leader) ನಾಯಕ, ದಲಿತ ಮುಖಂಡ, ಚಾಮರಾಜನಗರ ಸಂಸದ (Chamarajanagar MP) ಶ್ರೀನಿವಾಸ ಪ್ರಸಾದ್‌ ಅವರ ಪಾರ್ಥಿವ ಶರೀರದ (Srinivasa Prasada Passes Away) ಅಂತಿಮ ದರ್ಶನಕ್ಕೆ ಇಂದು ಮಧ್ಯಾಹ್ನ 1.00 ಗಂಟೆಯಿಂದ ಅಶೋಕಪುರಂನಲ್ಲಿರುವ ಎಂಟಿಎಂ ಶಾಲೆಯಲ್ಲಿ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ. ಸಿಎಂ, ಡಿಸಿಎಂ ಸೇರಿದಂತೆ ಹಲವು ಗಣ್ಯರು ಪ್ರಸಾದ್‌ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ನಾಳೆ ಅಂತ್ಯಕ್ರಿಯೆ

ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ಶ್ರೀನಿವಾಸ ಪ್ರಸಾದ್‌ ಮನೆಗೆ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ ತರಲಾಗಿದ್ದು, ಅಲ್ಲಿಂದ ಎಂಟಿಎಂ ಶಾಲೆಗೆ ತರಲಾಗುತ್ತಿದೆ. 1 ಗಂಟೆ ತನಕ ಮನೆಯಲ್ಲಿ ಶ್ರೀನಿವಾಸ ಪ್ರಸಾದ್ ದರ್ಶನಕ್ಕೆ ಅವಕಾಶ. 1 ಗಂಟೆಯ ನಂತರ ಅಶೋಕ ಪುರಂ ನ ಎಂ.ಟಿ.ಎಂ ಶಾಲೆಯಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ವ್ಯವಸ್ಥೆ. ನಾಳೆ ಅಶೋಕಪುರಂನಲ್ಲಿ ಮೆರವಣಿಗೆ ನಡೆಯಲಿದೆ. ಸಿಲ್ಕ್ ಫ್ಯಾಕ್ಟರಿ ಬಳಿ ಅಂಬೇಡ್ಕರ್ ಎಜುಕೇಶಲ್ ಅಂಡ್ ಕಲ್ಚರಲ್ ಟ್ರಸ್ಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅವರು ಬೌದ್ಧ ಧರ್ಮ ಸ್ವೀಕಾರ ಮಾಡಿದ್ದರು. ಹಾಗಾಗಿ ಬೌದ್ಧ ಧರ್ಮದ ಪ್ರಕಾರ ಅಂತಿಮ ವಿಧಿ ವಿಧಾನ ನಡೆಯಲಿವೆ ಎಂದು ಶ್ರೀನಿವಾಸ್ ಪ್ರಸಾದ್ ಮಗಳು ಪ್ರತಿಮಾ ಪ್ರಸಾದ್‌ ಹೇಳಿದ್ದಾರೆ.

ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀನಿವಾಸ ಪ್ರಸಾದ್‌, ಮೊನ್ನೆ ತುಸು ಚೇತರಿಕೆ ಅನುಭವಿಸಿದ್ದರು. ಆಗಮಿಸಿದ ಎಲ್ಲರ ಜೊತೆ ಚೆನ್ನಾಗಿಯೇ ಮಾತನಾಡಿದ್ದ ಅವರಿಗೆ ನಿನ್ನೆಯಿಂದ ಮಾತನಾಡಲು ಸಾಧ್ಯ ಆಗಿರಲಿಲ್ಲ. ಈ ವೇಳೆ ಬರೆದು ಸೂಚಿಸಲು ಕುಟುಂಬಸ್ಥರು ಪೆನ್ನು ಪೇಪರ್ ಕೊಟ್ಟಿದ್ದರು. ಆಗ ಪೇಪರ್‌ನಲ್ಲಿ ʼcoffeeʼ ಅಂತ ಬರೆದಿದ್ದ ಸಂಸದ ಶ್ರೀನಿವಾಸ್ ಪ್ರಸಾದ್, ಕಾಫಿ ತರಿಸಿಕೊಂಡು ಎರಡು ಗುಟುಕು ಕಾಫಿ ಕುಡಿದಿದ್ದರು ಎಂದು ತಿಳಿದುಬಂದಿದೆ.

ದಮನಿತರ ದನಿ: ಸಿಎಂ ಸಿದ್ದರಾಮಯ್ಯ

“ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸ ಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ. ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ. ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಪರ ದನಿ: ಡಿಕೆ ಶಿವಕುಮಾರ್‌

“ಶೋಷಿತರ ಪರ ಗಟ್ಟಿ ದನಿಯಾಗಿದ್ದ, ಮಾರ್ಗದರ್ಶಕರು, ಹಿತೈಷಿಗಳು ಆಗಿದ್ದ ಶ್ರೀನಿವಾಸ್ ಪ್ರಸಾದ್ ಅವರ ಅಗಲಿಕೆ ಸುದ್ದಿ ಕೇಳಿ ನೋವಾಗಿದೆ. ಇವರ ನಿಧನದಿಂದ ಮೌಲ್ಯಧಾರಿತ ರಾಜಕಾರಣದ ಕೊಂಡಿ ಮರೆಯಾದಂತಾಗಿದೆ. ಶ್ರೀನಿವಾಸ್ ಪ್ರಸಾದ್ ಅವರು ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿ ಅನನ್ಯ ಸೇವೆ ಸಲ್ಲಿಸಿದ್ದಾರೆ. ಕೇಂದ್ರ ಸಚಿವರಾಗಿದ್ದಾಗ ಕರ್ನಾಟಕ ರಾಜ್ಯದ ಬೇಡಿಕೆಗಳಿಗೆ ದನಿಯಾಗಿದ್ದರು. ಕಿರಿಯ ರಾಜಕಾರಣಿಗಳಿಗೆ ಮಾರ್ಗದರ್ಶಕರಾಗಿದ್ದರು, ಮಾದರಿಯಾಗಿದ್ದರು. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಶೋಷಿತರ ಪರ ದನಿ ಎತ್ತುತ್ತಿದ್ದರು. ವಿಧಾನಸಭೆ ಹಾಗೂ ಸಂಸತ್ ಪ್ರತಿನಿಧಿಸಿದ್ದರು. ಕೆಲ ಕಾಲ ಇವರು ಹಾಗೂ ನಾನು ಸಂಪುಟ ಸಹೋದ್ಯೋಗಿಗಳಾಗಿದ್ದೆವು. ಈ ವೇಳೆ ಅವರ ರಾಜಕೀಯ ಜಾಣ್ಮೆಯನ್ನು ಹತ್ತಿರದಿಂದ ಕಂಡಿದ್ದೇನೆ. ಇವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ವರ್ಗ, ಅಭಿಮಾನಿಗಳಿಗೆ ಭಗವಂತನು ಕರುಣಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ರಾಷ್ಟ್ರದ ಗಮನ ಸೆಳೆದ ನಾಯಕ: ಬಿಎಸ್‌ವೈ

“15 ದಿನಗಳ ಹಿಂದಷ್ಟೆ ಅವರನ್ನು ನಾನು ಭೇಟಿ ಮಾಡಿದ್ದೆ. ರಾಜ್ಯಾದ್ಯಂತ ಪ್ರವಾಕ್ಕೆ ಬರಬೇಕು ಎಂದು ಹೇಳಿದ್ದೆ. ಅವರೊಂದಿಗೆ ಮಾತುಕತೆಯನ್ನೂ ಸಹ ನಡೆಸಿದ್ದೆ. ಅಷ್ಟರೊಳಗೆ ಅವರು ಅಕಾಲಿಕವಾಗಿ ಸಾವನ್ನಪ್ಪಿರೋದು ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ನೀಡಲಿ. ಅವರ ಕುಟುಂಬದವರಿಗೆ ನೋವು ಸಹಿಸುವ ಶಕ್ತಿ ನೀಡಲಿ. ಶ್ರೀನಿವಾಸ್ ಪ್ರಸಾದ್ ಕೇವಲ ದಲಿತ ನಾಯಕ ಅಲ್ಲ ಅವರು ರಾಷ್ಟ್ರದ ಗಮನ ಸೆಳೆದ ನಾಯಕ. ಪ್ರತಿ ವಿಚಾರದ ಬಗ್ಗೆಯೂ ಬಹಳ ಆಳವಾದ ಜ್ಞಾನ ಹೊಂದಿದ್ದರು” ಎಂದು ಬಿಜೆಪಿ ನಾಯಕ ಬಿಎಸ್‌ ಯಡಿಯೂರಪ್ಪ ನೆನೆದಿದ್ದಾರೆ.

ಅಪರೂಪದ ಜನನಾಯಕ: ಎಚ್‌ಡಿಕೆ

“ಸರಳತೆ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ಶ್ರೀ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನ ನನಗೆ ನೋವುಂಟು ಮಾಡಿದೆ. ತಮ್ಮ ಜೀವಿತಾವಧಿಯಲ್ಲಿ 14 ಚುನಾವಣೆಗಳನ್ನು ಎದುರಿಸಿದ್ದ ಅವರ ರಾಜಕೀಯ ಜೀವನ ಮಾದರಿಯ ಹಾದಿ. ಆರು ಅವಧಿಗೆ ಸಂಸದರಾಗಿ, ಎರಡು ಅವಧಿಗೆ ಶಾಸಕರಾಗಿ ಅನನ್ಯ ಸೇವೆ ಸಲ್ಲಿಸಿರುವ ಶ್ರೀ ಪ್ರಸಾದ್ ಅವರು; 27 ವರ್ಷಗಳ ಸುದೀರ್ಘ ಸಂಸತ್ ಸದಸ್ಯರಾಗಿ 7 ಪ್ರಧಾನಿಗಳನ್ನು ಕಂಡಿದ್ದರು. ಅವರು ಅಪರೂಪದಲ್ಲಿ ಅಪರೂಪದ ಜನನಾಯಕರಾಗಿದ್ದರು. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಜೆಡಿಎಸ್‌ ಮುಖಂಡ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬದ್ಧತೆಗೆ ಸಾಕ್ಷಿ: ವಿಜಯೇಂದ್ರ

“ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು, ಹಿರಿಯ ಮುತ್ಸದ್ದಿಗಳಾದ ವಿ. ಶ್ರೀನಿವಾಸ್ ಪ್ರಸಾದ್ ಅವರು ಅನಾರೋಗ್ಯದಿಂದ ನಿಧನರಾದ ಸುದ್ದಿ ಅತೀವ ದುಃಖ ತರಿಸಿದೆ. ಅವರ ಅಗಲಿಕೆಯಿಂದ ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಮುಳುಗಿದಂತಾಗಿದೆ. ಅವರ ರಾಜಕೀಯ ಜೀವನದ ಕಡೇ ದಿನಗಳಲ್ಲಿ ಬಿಜೆಪಿಯನ್ನು ಆಯ್ದುಕೊಂಡು ಸಂಸದರಾಗಿ ಪಕ್ಷದ ತತ್ವ, ಸಿದ್ದಾಂತ ಹಾಗೂ ರಾಷ್ಟ್ರೀಯವಾದದ ಸತ್ವವನ್ನು ಜನರಿಗೆ ತಿಳಿಸುವಲ್ಲಿ ನಾಯಕತ್ವ ವಹಿಸಿದ್ದು ಬಿಜೆಪಿಯ ಸಾಮಾಜಿಕ ನ್ಯಾಯ ಹಾಗೂ ಸಂವಿಧಾನ ಮೌಲ್ಯವನ್ನು ಎತ್ತಿ ಹಿಡಿಯುವ ಬದ್ಧತೆಯನ್ನು ಸಾಕ್ಷೀಕರಿಸಿತ್ತು. ಪ್ರಸ್ತುತ ಕಾಲಮಾನದಲ್ಲಿ ಮಾನ್ಯ ಪ್ರಸಾದರ ಅನುಪಸ್ಥಿತಿ ರಾಷ್ಟ್ರರಾಜಕಾರಣದಲ್ಲೂ ಕೊರತೆ ಸೃಷ್ಟಿಸಿದಂತಾಗಿದೆ. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

“ಮಾನ್ಯ ಶ್ರೀನಿವಾಸ್ ಪ್ರಸಾದ್ ಅವರು ರಾಜ್ಯದ ಹಿತ ಕಾಯುವಲ್ಲಿ ಯಶಸ್ವಿ ಆಗಿದ್ದಾರೆ. ವಿಶೇಷವಾಗಿ ದಲಿತ ಸಮುದಾಯದಿಂದ ಬಂದು ದಲಿತರ ದನಿಯಾಗಿ ಕೆಲಸ ಮಾಡಿದ್ದಾರೆ. ಕಂದಾಯ ಸಚಿವ ಆಗಿಯೂ ಸಾಕಷ್ಟು ಕೆಲಸ ಮಾಡಿದ್ದರು. ನನಗೆ ಬಹಳಷ್ಟು ನೋವಾಗಿದೆ. ಅವರ ಕುಟುಂಬ ವರ್ಗಕ್ಕೆ ನಷ್ಟ ಭರಿಸುವ ಶಕ್ತಿ ದೊರೆಯಲಿ” ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಸಾಹಿತಿ ದೇವನೂರು ಮಹಾದೇವ, ಶಾಸಕ ಜಿಟಿ ದೇವೇಗೌಡ, ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮುಂತಾದವರು ಮೃತರ ನಿವಾಸಕ್ಕೆ ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವನ ಸೂಚಿಸಿದ್ದಾರೆ. “ಶ್ರೀನಿವಾಸ ಪ್ರಸಾದ್ ಶೋಷಿತ ವರ್ಗದ ಧ್ವನಿಯಾಗಿ ಶಕ್ತಿ ತುಂಬಿದ್ದರು. ಮಂತ್ರಿಯಾಗಿ ಅನೇಕ ಒಳ್ಳೆಯ ಕಾರ್ಯಕ್ರಮ ಕೊಟ್ಟವರು” ಎಂದು ಜಿಟಿ ದೇವೇಗೌಡ ನುಡಿದರು.

ಇದನ್ನೂ ಓದಿ: Srinivas Prasad: ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

Continue Reading
Advertisement
Ramana Avatara trailer out
ಸಿನಿಮಾ16 seconds ago

Ramana Avatara Trailer: ರಿಷಿ ಅಭಿನಯದ ʻರಾಮನ ಅವತಾರʼ ಟ್ರೈಲರ್‌ ರಿಲೀಸ್

PM Narendra modi in Bagalakote for Election Campaign and here is Live telecast
Lok Sabha Election 20241 min ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

Amith Shah
ಪ್ರಮುಖ ಸುದ್ದಿ16 mins ago

Fact Check: ಅಮಿತ್‌ ಶಾ ಎಸ್​​ಸಿ, ಎಸ್​ಟಿ ಮೀಸಲು ರದ್ದು ಮಾಡ್ತೀವಿ ಎಂದಿದ್ದು ನಿಜವೆ?​​

Mahanati Show complaint against Gagana Contestant and Ramesh
ಕಿರುತೆರೆ26 mins ago

Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

Physical Abuse
ಪ್ರಮುಖ ಸುದ್ದಿ41 mins ago

Physical Abuse : ಮದುವೆ ಪ್ರಸ್ತಾಪ ತಿರಸ್ಕರಿಸಿದ ಬಾಲಕಿ ಮೇಲೆ ಅತ್ಯಾಚಾರ, ಮುಖಕ್ಕೆ ಕಬ್ಬಿಣದಿಂದ ಬರೆ

ದೇಶ51 mins ago

Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

srinivasa prasad sutturu sri
ಕರ್ನಾಟಕ1 hour ago

Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Gurucharan Singh soon to get married faced financial crunch
ಸಿನಿಮಾ2 hours ago

Gurucharan Singh: ನಿಗೂಢವಾಗಿ ನಾಪತ್ತೆಯಾದ ಈ ನಟನಿಗೆ ಶೀಘ್ರದಲ್ಲೇ ಮದುವೆ!

IPL 2024
ಪ್ರಮುಖ ಸುದ್ದಿ2 hours ago

IPL 2024 : ಡೇವಿಡ್ ವಾರ್ನರ್ ಅವರೊಂದಿಗೆ ‘ಈ’ ಅದ್ಭುತ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ

War 2 A galaxy of stars descended at a Mumbai restaurant on Sunday evening
ಸ್ಯಾಂಡಲ್ ವುಡ್2 hours ago

War 2 Movie: `ವಾರ್‌2′, `ಬ್ರಹ್ಮಾಸ್ತ್ರ’ ತಂಡಕ್ಕೆ ಸ್ಪೆಷಲ್‌ ಡಿನ್ನರ್‌ ಪಾರ್ಟಿ ಆಯೋಜಿಸಿದ ಅಯಾನ್ ಮುಖರ್ಜಿ !

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote for Election Campaign and here is Live telecast
Lok Sabha Election 20241 min ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202419 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202421 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202423 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202424 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

ಟ್ರೆಂಡಿಂಗ್‌