Karnataka MP's : 23 ಸಂಸದರ ಆಸ್ತಿ ದೊಡ್ಡ ಮಟ್ಟಿಗೆ ಏರಿಕೆ: ಕರ್ನಾಟಕದವರು ಎಷ್ಟಿದ್ದಾರೆ? - Vistara News

ಪ್ರಮುಖ ಸುದ್ದಿ

Karnataka MP’s : 23 ಸಂಸದರ ಆಸ್ತಿ ದೊಡ್ಡ ಮಟ್ಟಿಗೆ ಏರಿಕೆ: ಕರ್ನಾಟಕದವರು ಎಷ್ಟಿದ್ದಾರೆ?

Karnataka MP’s : ವರದಿಯ ಪ್ರಕಾರ ಕರ್ನಾಟಕದ ಒಟ್ಟು ಆರು ಸಂಸದರ ಆಸ್ತಿ ಏರಿಕೆಯಾಗಿದೆ. ಎಂದು ವರದಿಯಾಗಿದೆ.

VISTARANEWS.COM


on

Sadananda Gowda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ವೇಳೆ ಕಳೆದ ಇಪ್ಪತ್ತು ವರ್ಷಗಳಲ್ಲಿ ಸಿಕ್ಕಾಪಟ್ಟೆ ಆಸ್ತಿ ಮಾಡಿಕೊಂಡ ಸಂಸದರ ಪಟ್ಟಿ ಬಹಿರಂಗವಾಗಿದೆ. ಅದರಲ್ಲಿ 2004ರಿಂದ ಪುನರಾಯ್ಕೆಗೊಳ್ಳುತ್ತಿರುವ 23 ಸಂಸದರ (Karnataka MP’s) ಒಟ್ಟಾರೆ ಆಸ್ತಿ ಮೌಲ್ಯವು ರೂ. 35.18 ಕೋಟಿಯಿಂದ ರೂ. 402.79 ಕೋಟಿಗೆ ಏರಿಕೆಯಾಗಿದೆ ಎಂದು ಹೇಳಲಾಗಿದೆ.

ಅಸೋಸಿಯೇಷನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ಸ್‌ (ಎಡಿಆರ್‌) ವರದಿಯ ಪ್ರಕಾರ ಕರ್ನಾಟಕ ಸಂಸದರ ಆಸ್ತಿಯ ಪ್ರಮಾಣವೂ ಹಿಗ್ಗಿದೆ. ವಿಜಯಪುರ ಕ್ಷೇತ್ರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಯವರ ಆಸ್ತಿ ಮೌಲ್ಯ ಗರಿಷ್ಠ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಶೇ. 9,098ರಷ್ಟಾಗಿದೆ. 2004ರಲ್ಲಿ ರೂ. 54.8 ಲಕ್ಷದಷ್ಟಿದ್ದ ಇವರ ಆಸ್ತಿ ಮೌಲ್ಯವು 2019ರ ವೇಳೆಗೆ ರೂ. 50.41 ಕೋಟಿ ಗಳಿಸಿದೆ.

ವರದಿಯ ಪ್ರಕಾರ ಕರ್ನಾಟಕದ ಒಟ್ಟು ಆರು ಸಂಸದರ ಆಸ್ತಿ ಏರಿಕೆಯಾಗಿದೆ.

ರಮೇಶ್ ಜಿಗಜಿಣಗಿ(ವಿಜಯಪುರ)- 54.8 ಲಕ್ಷದಷ್ಟಿದ್ದ ಆಸ್ತಿ ಮೌಲ್ಯ 50.41 ಕೋಟಿಗೆ ಏರಿಕೆಯಾಗಿದೆ. ಅದೇ ರೀತಿ ಡಿ.ವಿ.ಸದಾನಂದ ಗೌಡ (ಬೆಂಗಳೂರು ಉತ್ತರ) ಆಸ್ತಿ ಮೌಲ್ಯವು ರೂ. 46.39 ಲಕ್ಷದಿಂದ ರೂ. 20.93 ಕೋಟಿಗೆ ಏರಿಕೆಯಾಗಿದೆ. ಸಂಸದ ಜಿ.ಎಂ.ಸಿದ್ದೇಶ್ವರ್ (ದಾವಣಗೆರೆ) ಆಸ್ತಿ ಮೌಲ್ಯವು ರೂ. 5.02 ಕೋಟಿಯಿಂದ ರೂ. 38.01 ಕೋಟಿಗೆ ಏರಿಕೆಯಾಗಿದೆ. ಕೇಂದ್ರ ಸಚಿವ ಪಹ್ಲಾದ್ ಜೋಶಿ (ಧಾರವಾಡ) ಆಸ್ತಿ ಮೌಲ್ಯ ರೂ. 77.60 ಲಕ್ಷದಿಂದ ರೂ. 11.13 ಕೋಟಿಗೆ ಏರಿಕೆಯಾಗಿದೆ.

ಅನಂತ್‌ ಕುಮಾರ್ ಹೆಗಡೆ (ಉತ್ತರ ಕನ್ನಡ) ಆಸ್ತಿ ಮೌಲ್ಯವು ರೂ. 12.06 ಲಕ್ಷದಿಂದ ರೂ. 8.47 ಕೋಟಿಗೆ ಏರಿಕೆಯಾಗಿದೆ. ಪಿ.ಸಿ. ಗದ್ದಿಗೌಡರ್ (ಬಾಗಲಕೋಟೆ) ಆಸ್ತಿ ಮೌಲ್ಯವು ರೂ. 53.75 ಲಕ್ಷದಿಂದ ರೂ. 4.39 ಕೋಟಿಗೆ ಏರಿಕೆಯಾಗಿದೆ.

2004ರಿಂದ ಪುನರಾಯ್ಕೆಗೊಂಡಿರುವ 23 ಸಂಸದರ ಪೈಕಿ 17 ಸಂಸದರು ಬಿಜೆಪಿಗೆ ಸೇರಿದ್ದರೆ, ಮೂವರು ಸಂಸದರು ಕಾಂಗ್ರೆಸ್ ಪಕ್ಷಕ್ಕೆ, ಎಐಎಂಐಎಂ, ಶಿವಸೇನೆ ಹಾಗೂ ಬಿಜೆಡಿಗೆ ಸೇರಿದ ತಲಾ ಒಬ್ಬ ಸಂಸದರಿದ್ದಾರೆ. ಈ ಎಲ್ಲಾ ಸಂಸದರ ಸರಾಸರಿ ಆಸ್ತಿ ಮೌಲ್ಯವು 2004ರಲ್ಲಿ 1.52 ಕೋಟಿಯಾಗಿದ್ದರೆ, 2009ರಲ್ಲಿ 3.46 ಕೋಟಿಗೆ, 2014ರಲ್ಲಿ 9.85 ಕೋಟಿಗೆ ಹಾಗೂ 2019ರಲ್ಲಿ ರೂ. 17.51 ಕೋಟಿಗೆ ಏರಿಕೆಯಾಗಿದೆ.

ಇದನ್ನೂ ಓದಿ: Paytm Crisis: ಪೇಟಿಎಂನ ಥರ್ಡ್ ಪಾರ್ಟಿ ಆ್ಯಪ್ ಮನವಿಯನ್ನು ಎನ್‌ಪಿಸಿಐ ಪರಿಶೀಲಿಸಲಿ ಎಂದ ಆರ್‌ಬಿಐ

ಸಂಸದರ ಸರಾಸರಿ ಆಸ್ತಿ ಮೌಲ್ಯದ ಏರಿಕೆ ರೂ. 15.98 ಕೋಟಿ ಅಥವಾ ಶೇ. 1,045ರಷ್ಟಾಗಿದೆ ಎಂಬ ವಿಷಯವನ್ನು ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರಗಳ ವಿಶ್ಲೇಷಣೆಯಿಂದ ತಿಳಿದು ಬಂದಿದೆ. ರಾಹುಲ್ ಗಾಂಧಿ ಆಸ್ತಿ ಏರಿಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಆಸ್ತಿ ಮೌಲ್ಯ 2004 ರಲ್ಲಿ ರೂ. 55.38 ಲಕ್ಷದಿಂದ 2009 ರಲ್ಲಿ ರೂ. 2.32 ಕೋಟಿಗೆ, 2014 ರಲ್ಲಿ ರೂ. 9.4 ಕೋಟಿ ಮತ್ತು 2019ರಲ್ಲಿ ರೂ. 15.88 ಕೋಟಿಗೆ ಏರಿಕೆಯಾಗಿದೆ.

ಕಳೆದ 15 ವರ್ಷಗಳಲ್ಲಿ ರಾಹುಲ್ ಗಾಂಧಿಯವರ ಆಸ್ತಿ ಮೌಲ್ಯದಲ್ಲಿ ಶೇ. 2,769ರಷ್ಟು ಏರಿಕೆ ಕಂಡಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರ ಆಸ್ತಿ ಮೌಲ್ಯ ರೂ. 85.68 ಲಕ್ಷದಿಂದ ರೂ.11.82 ಕೋಟಿಗೆ (ಶೇ.1,280ರಷ್ಟು) ಏರಿಕೆ ಕಂಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

T20 World Cup : ವಿಶ್ವ ಕಪ್​ ಇತಿಹಾಸದಲ್ಲಿ ಮೊದಲ ಗೆಲುವು ದಾಖಲಿಸಿದ ಕೆನಡಾ; ಐರ್ಲೆಂಡ್​ಗೆ ನಿರಾಸೆ

T20 World Cup : ಮೊದಲು ಬ್ಯಾಟ್ ಮಾಡಿದ ಕೆನಡಾ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 137 ರನ್‌ ಬಾರಿಸಿತ್ತು. ಪ್ರತಿಯಾಗಿ ಆಡಿದ ಐರ್ಲೆಂಡ್‌ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾ 7 ವಿಕೆಟ್​ ಕಳೆದುಕೊಂಡು 125 ರನ್‌ ಗಳಿಸಿ ಸೋಲೋಪ್ಪಿಕೊಂಡಿತು. ಇದು ಕೂಡ ಟೂರ್ನಿಯ ಜಿದ್ದಾಜಿದ್ದಿನ ಪಂದ್ಯ ಎನಿಸಿಕೊಂಡಿತು.

VISTARANEWS.COM


on

T20 World Cup
Koo

ಬೆಂಗಳೂರು : ಗುರುವಾರವಷ್ಟೇ ಪಾಕಿಸ್ತಾನ ತಂಡವನ್ನು ಸೋಲಿಸಿದ್ದ ಅಮೆರಿಕ ತಂಡ ಟಿ20 ಕ್ರಿಕೆಟ್ ವಿಶ್ವ ಕಪ್​ನಲ್ಲಿ ಐತಿಹಾಸಿಕ ವಿಜಯವೊಂದನ್ನು ದಾಖಲಿಸಿತ್ತು. ಇದೀಗ ಶುಕ್ರವಾರ ನಡೆದ ಪಂದ್ಯದಲ್ಲಿ ಕೆನಡಾ ತಂಡ ಟೂರ್ನಿಯ ಇತಿಹಾಸದಲ್ಲಿ ಮೊಟ್ಟ ಮೊದಲ ಗೆಲುವು ದಾಖಲಿಸಿದೆ. ಈ ತಂಡವು ತನಗಿಂತ ಸ್ವಲ್ಪ ಮಟ್ಟಿಗೆ ಬಲಿಷ್ಠವಾಗಿರುವ ಐರ್ಲೆಂಡ್ ವಿರುದ್ಧ ವಿಜಯ ಸಾಧಿಸಿದೆ.

ನ್ಯೂಯಾರ್ಕ್‌ನ ನಸ್ಸೌ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಜೂನ್‌ 7ರ ಶುಕ್ರವಾರ ನಡೆದ ಪಂದ್ಯದಲ್ಲಿ ಕೆನಡಾ ತಂಡ 12 ರನ್​ಗಳ ವಿಜಯ ತನ್ನದಾಗಿಸಿಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಕೆನಡಾ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 137 ರನ್‌ ಬಾರಿಸಿತ್ತು. ಪ್ರತಿಯಾಗಿ ಆಡಿದ ಐರ್ಲೆಂಡ್‌ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾ 7 ವಿಕೆಟ್​ ಕಳೆದುಕೊಂಡು 125 ರನ್‌ ಗಳಿಸಿ ಸೋಲೋಪ್ಪಿಕೊಂಡಿತು. ಇದು ಕೂಡ ಟೂರ್ನಿಯ ಜಿದ್ದಾಜಿದ್ದಿನ ಪಂದ್ಯ ಎನಿಸಿಕೊಂಡಿತು.

ಕೆನಡಾ ತಂಡ ಪರ ಅ್ಯರೋನ್​ ಜಾನ್ಸನ್ ಮತ್ತು ನವನೀತ್ ಧಲಿವಾಲ್ ಬ್ಯಾಟಿಂಗ್ ಆರಂಭಿಸಿದರು. ಆದರೆ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. ಮೊದಲ ವಿಕೆಟ್‌ಗೆ ಕೇವಲ 12 ರನ್‌ಗಳನ್ನು ದಾಖಲಾಯಿತು. ಧಲಿವಾಲ್ ಆರು ರನ್ ಗೆ ಔಟಾದರು. ಬಳಿಕ ಪರ್ಗತ್ ಸಿಂಗ್ 18 ರನ್‌ ಗಳಿಸಿ ನಿರ್ಗಮಿಸಿದರು. ಅತ್ತ ಜಾನ್ಸನ್ ಮೂರು ಬೌಂಡರಿಗಳ ನೆರವಿನಿಂದ 14 ರನ್ ಗಳಿ ಪೆವಿಲಿಯನ್​ಗೆ ಮರಳಿದರು. ಜಾನ್ಸನ್ ಔಟಾದ ನಂತರ ಕ್ರೀಸ್​ಗೆ ಇಳಿದ ದಿಲ್‌ಪ್ರೀತ್ ಬಾಜ್ವಾ 7 ರನ್‌ ಔಟಾದರು. ಬಳಿಕ ನಿಕೋಲಸ್ ಕಿರ್ಟನ್ ಮೊವ್ವಾ ಉತ್ತಮ ಜೊತೆಯಾಟವಾಡಿದರು. 15.2 ಓವರ್‌ಗಳಲ್ಲಿ ತಂಡ 100 ರನ್ ಗಳಿಸಿತು. ಏತನ್ಮಧ್ಯೆ ಮೆಕಾರ್ಥಿ ಎಸೆದ 19ನೇ ಓವರ್‌ನಲ್ಲಿ ತಂಡ ಎರಡು ವಿಕೆಟ್ ಕಳೆದುಕೊಂಡಿತು. 35 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್‌ ಸಹಿತ 49 ರನ್ ಗಳಿಸಿದ್ದ ಕಿರ್ಟನ್‌ 1 ರನ್​ನಿಂದ ಅರ್ಧ ಶತಕದ ಅವಕಾಶ ನಷ್ಟ ಮಾಡಿಕೊಂಡರು. ಆದಾಗ್ಯೂ ತಂಡ ಪರ ಗರಿಷ್ಠ ಮೊತ್ತ ಬಾರಿಸಿದರು. ಮೊವ್ವ 36 ಎಸೆತಗಳಲ್ಲಿ 3 ಬೌಂಡರಿ ಸೇರಿದಂತೆ 37 ರನ್ ಗಳಿಸಿದರು.

ಇದನ್ನೂ ಓದಿ : T20 World Cup : ಪಾಕಿಸ್ತಾನ ತಂಡದ ಅಮೆರಿಕ ವಿರುದ್ಧ ಸೋತಿದ್ದು ಐಎಮ್​ಎಫ್​ ನೀಡುವ 80 ಕೋಟಿ ಸಾಲಕ್ಕಾಗಿ!

ಐರ್ಲೆಂಡ್‌ ಬೌಲಿಂಗ್​ನಲ್ಲಿ ಯಂಗ್ ಮತ್ತು ಮೆಕಾರ್ಥಿ ತಮ್ಮ ನಾಲ್ಕು ಓವರ್‌ಗಳ ಸ್ಪೆಲ್​ನಲ್ಲಿ ಅನುಕ್ರಮವಾಗಿ 32 ಮತ್ತು 24 ರನ್‌ ಬಿಟ್ಟುಕೊಟ್ಟು ತಲಾ ಎರಡು ವಿಕೆಟ್ ಪಡೆದರು. ಅದೈರ್ ಮತ್ತು ಡೆಲಾನಿ ತಲಾ ಒಂದು ವಿಕೆಟ್ ಕಬಳಿಸಿದರು.

ಐರ್ಲೆಂಡ್‌ ಚೇಸಿಂಗ್ ಫೇಲ್​

ಗುರಿ ಬೆನ್ನಟ್ಟಲು ಶುರು ಮಾಡಿದ ಐರ್ಲೆಂಡ್ ಸತತವಾಗಿ ಮೇಲೆ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತು. ನಾಯಕ ಪೌಲ್‌ ಸ್ಟಿರ್ಲಿಂಗ್ ವಿಫಲರಾಗಿ ಕೇವಲ 9 ರನ್‌ ಗಳಿಸಿ ಔಟಾದರು. ಬಾಲ್ಬಿರ್ನಿ ಕೊಡುಗೆ 17 ರನ್‌. ಹ್ಯಾರಿ ಟೆಕ್ಟರ್‌ 7 ರನ್‌ ಗಳಿಸಿದರೆ, ಲೋರ್ಕನ್ ಟಕರ್ 10 ರನ್‌ ಗಳಿಸಿ ನಿರ್ಗಮಿಸಿದರು. ಕರ್ಟಿಸ್ ಕ್ಯಾಂಫರ್ 4 ರನ್‌ಗೆ ಸೀಮಿತಗೊಂಡರು. ದಿಢೀರನೆ ಕುಸಿತ ಕಂಡ ತಂಡಕ್ಕೆ ಡಾಕ್ರೆಲ್‌ ಹಾಗೂ ಮಾರ್ಕ್‌ ಅಡೈರ್‌ ಆಸರೆಯಾದರು. ತಂಡವನ್ನು ಗೆಲುವಿನ ದಡ ಸೇರಿಸುವ ಪ್ರಯತ್ನ ಮಾಡಿದರು.‌ ಆದರೆ, ಕೆನಡಾ ಬೌಲರ್‌ಗಳು ಅದಕ್ಕೆ ಅವಕಾಶ ನೀಡಲಿಲ್ಲ. ಕೊನೇ ಓವರ್​ನಲ್ಲಿ 17 ರನ್ ಗೆಲುವಿಗೆ ಬೇಕಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ.

Continue Reading

ದೇಶ

Narendra Modi: ಹಂಗಾಮಿ ಪ್ರಧಾನಿ ಮೋದಿಗೆ ಮೊಸರು-ಸಕ್ಕರೆ ತಿನ್ನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು!

Narendra Modi: ನರೇಂದ್ರ ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸುವ ಸಂಸದರು ಯಾರು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಇನ್ನು, ನರೇಂದ್ರ ಮೋದಿ ಮಾತ್ರವಲ್ಲ, ಎನ್‌ಡಿಎ ಮೈತ್ರಿಕೂಟದ ಹಲವು ಸದಸ್ಯರು ಕೂಡ ರಾಷ್ಟ್ರಪತಿ ಅವರನ್ನು ಭೇಟಿಯಾದರು. ಬಿಹಾರ ಸಿಎಂ ನಿತೀಶ್‌ ಕುಮಾರ್‌, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಕೂಡ ಇದ್ದರು. ಇನ್ನು, ಮೋದಿ ಅವರಿಗೆ ರಾಷ್ಟ್ರಪತಿ ಅವರು ಸಕ್ಕರೆ ಮಿಶ್ರಿತ ಮೊಸರು ತಿನ್ನಿಸುವ ಮೂಲಕ ಶುಭ ಹಾರೈಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಎನ್‌ಡಿಎ ಮೈತ್ರಿಕೂಟದ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ (ಜೂನ್‌ 6) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ನೂತನ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಎನ್‌ಡಿಎ (NDA) ಮೈತ್ರಿಕೂಟದ ಪಕ್ಷಗಳು ಬೆಂಬಲ ನೀಡಿರುವ ಪತ್ರದೊಂದಿಗೆ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾದ ಅವರು ಹಕ್ಕು ಮಂಡಿಸಿದ್ದಾರೆ. ಇನ್ನು, ಸತತ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿ ಅವರಿಗೆ ದ್ರೌಪದಿ ಮುರ್ಮು ಅವರು ಸಕ್ಕರೆ ಮಿಶ್ರಣ ಆಗಿರುವ ಮೊಸರನ್ನು ತಿನ್ನಿಸಿ, ಶುಭ ಕೋರಿದ್ದಾರೆ. ಈ ಫೋಟೊ ಈಗ ವೈರಲ್‌ ಆಗಿದೆ.

ಮತ್ತೊಂದೆಡೆ, ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಅಧಿಕೃತ ಮಾಹಿತಿ ನೀಡಿದ್ದಾರೆ. “ನರೇಂದ್ರ ಮೋದಿ ಅವರು ಪ್ರಧಾನಿಯಾಗಿ, ಹಲವು ಸಂಸದರು ಸಚಿವರಾಗಿ ಜೂನ್‌ 9ರಂದು ಸಂಜೆ 7.15ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ” ಎಂದು ರಾಷ್ಟ್ರಪತಿಯವರ ಕಚೇರಿಯು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ. ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿ ದೇಶ-ವಿದೇಶಗಳ ನೂರಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ನರೇಂದ್ರ ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸುವ ಸಂಸದರು ಯಾರು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಇನ್ನು, ನರೇಂದ್ರ ಮೋದಿ ಮಾತ್ರವಲ್ಲ, ಎನ್‌ಡಿಎ ಮೈತ್ರಿಕೂಟದ ಹಲವು ಸದಸ್ಯರು ಕೂಡ ರಾಷ್ಟ್ರಪತಿ ಅವರನ್ನು ಭೇಟಿಯಾದರು. ಬಿಹಾರ ಸಿಎಂ ನಿತೀಶ್‌ ಕುಮಾರ್‌, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ನೂತನ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಸೇರಿ ಹಲವು ನಾಯಕರು ಇದ್ದರು.

ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಮುನ್ನ ನಡೆದ ಎನ್‌ಡಿಎ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ನಿತೀಶ್‌ ಕುಮಾರ್‌ ಅವರು ಹೊಗಳಿದರು. “ಮುಂದಿನ ಸಲವೂ ನೀವೇ ಸ್ಪರ್ಧೆಗೆ ನಿಂತರೆ, ಈಗ ಅಲ್ಲಲ್ಲಿ ಗೆಲುವು ಸಾಧಿಸಿರುವ ಇಂಡಿಯಾ ಒಕ್ಕೂಟದ ಯಾವೊಬ್ಬರೂ ಗೆಲ್ಲುವುದಿಲ್ಲ. ಎಲ್ಲರೂ ನಿಮ್ಮೆದುರು ಸೋತು ಹೋಗುತ್ತಾರೆ. ಅವರು ಎಂದಿಗೂ ದೇಶಕ್ಕಾಗಿ ಕೆಲಸ ಮಾಡಿಲ್ಲ. ಅವರಿಂದ ದೇಶಕ್ಕೆ ಯಾವ ಸೇವೆಯೂ ಸಿಕ್ಕಿಲ್ಲ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿಯೇ ದೇಶ ಏಳಿಗೆ ಹೊಂದುತ್ತಿದೆ” ಎಂಬುದಾಗಿ ನಿತೀಶ್‌ ಕುಮಾರ್‌ ಹೇಳಿದರು. ಆಗ ನರೇಂದ್ರ ಮೋದಿ ಅವರು ಗಹಗಹಿಸಿ ನಕ್ಕರು. ಸಭೆಯಲ್ಲಿದ್ದ ಎಲ್ಲರೂ ನಗೆಗಡಲಲ್ಲಿ ತೇಲಾಡಿದರು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಮೋದಿ ಮೂರನೇ ಅವಧಿ, ಆಗಲಿ ಇನ್ನಷ್ಟು ವಿಕಾಸದ ಬುನಾದಿ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಮೋದಿ ಮೂರನೇ ಅವಧಿ, ಆಗಲಿ ಇನ್ನಷ್ಟು ವಿಕಾಸದ ಬುನಾದಿ

ಮೋದಿಯವರಿಂದ ನಾವು ಸುಸ್ಥಿರ ಸರಕಾರವನ್ನು ನಿರೀಕ್ಷಿಸಬಹುದು. ಮೋದಿಯವರಲ್ಲಿ ಈ ವಯಸ್ಸಿನಲ್ಲೂ ದೇಶವನ್ನು ಮುನ್ನಡೆಸಬಲ್ಲ ಛಲ, ಒಳನೋಟ, ಮುತ್ಸದ್ಧಿತನ, ಜಾಣ್ಮೆ ಎಲ್ಲ ಇವೆ. ಆಂತರಿಕ ಹಾಗೂ ಬಾಹ್ಯ ನಾಯಕರ ಗೆಳೆತನವೂ ಇದೆ. ಆಧುನಿಕತೆಯನ್ನು ಬರಮಾಡಿಕೊಳ್ಳುವ ನಾಯಕತ್ವವೂ ಇದೆ. ಒಬ್ಬ ನಾಯಕನಲ್ಲಿ ಇದಕ್ಕಿಂತ ಹೆಚ್ಚಿನದನ್ನು ನಿರೀಕ್ಷಿಸಬೇಕಿಲ್ಲ. ಮೋದಿ ಸರಕಾರ ಭಾನುವಾರದ ಪ್ರಮಾಣ ವಚನದ ದಿನದಿಂದಲೇ ತನ್ನ ʼವಿಕಸಿತ ಭಾರತʼದ ಗುರಿಯತ್ತ ಮುನ್ನುಗ್ಗಲಿ.

VISTARANEWS.COM


on

Narendra Modi
Koo

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿ ಆಗಲಿದ್ದಾರೆ. ಇಂದು ಬಹುಮತ ಪಡೆದಿರುವ ಎನ್‌ಡಿಎ ಮೈತ್ರಿಕೂಟದ ಸಭೆ ನಡೆದು, ಅಲ್ಲಿ ಮೋದಿಯವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆರಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸರಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಜೂನ್‌ 9ರಂದು ಕೆಲವು ಸಚಿವರೊಂದಿಗೆ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೈತ್ರಿಕೂಟದ ಎಲ್ಲ ಸದಸ್ಯರ ಬೆಂಬಲ ಇರುವುದರಿಂದ, ನೂತನ ಸರಕಾರ ರಚನೆ ಕಷ್ಟವಾಗಲಾರದು. ಹತ್ತು ವರ್ಷಗಳ ಅನುಭವವೂ ಮೋದಿಯವರ ಬೆನ್ನಿಗೆ ಇದೆ. ಆದ್ದರಿಂದ ಕೇಂದ್ರ ಸರಕಾರ ರಚನೆಯ ಬಗ್ಗೆ ಅವರಿಗೆ ಯಾರೂ ಕಿವಿಮಾತು ಹೇಳುವುದು ಬೇಕಿಲ್ಲ. ಆದರೆ ಮೈತ್ರಿಧರ್ಮದ ಪಾಲನೆ ಮಾಡಿಕೊಂಡು ಈ ಬಾರಿ ಸರಕಾರ ಮುನ್ನಡೆಸುವುದು ಬಿಜೆಪಿಗೆ ಹಗ್ಗದ ಮೇಲಿನ ನಡಿಗೆಯೇ ಆಗಲಿದೆ.

ಎನ್‌ಡಿಎ ಸಭೆಯಲ್ಲಿ ಮೋದಿಯವರು ಭವಿಷ್ಯದ ಹಲವು ಮುನ್ನೋಟದ ನುಡಿಗಳನ್ನು ಆಡಿದ್ದಾರೆ. ದೇಶದ ಜಿಡಿಪಿಯನ್ನು ಇನ್ನಷ್ಟು ಹೆಚ್ಚಿಸುವುದು, ಯುವಜನತೆಗೆ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವುದು, ಮಹಿಳೆಯರ ಸಬಲೀಕರಣ, ಹಳ್ಳಿಗಳಿಗೆ ಆರೋಗ್ಯಸೇವೆ ಮತ್ತು ಡಿಜಿಟಲ್‌ ಇಂಡಿಯಾದ ವಿಸ್ತರಣೆ, ಫಲಾನುಭವಿ ಯೋಜನೆಗಳ ವಿಸ್ತರಣೆಯ ಮೂಲಕ ವಿಕಸಿತ ಭಾರತದ ಸಾಕ್ಷಾತ್ಕಾರ, ರೈತರ ಸಬಲೀಕರಣ- ಇತ್ಯಾದಿಗಳು ಈ ಭಾಷಣದಲ್ಲಿ ಸ್ಥಾನ ಪಡೆದಿದ್ದವು. ಮೂಲಸೌಕರ್ಯದಂಥ ವಿಚಾರಗಳಲ್ಲಿ ಮೋದಿ ಸರಕಾರ ದೇಶದ ಬಹಳಷ್ಟು ಹಳ್ಳಿಗಳನ್ನೂ ನಗರಗಳನ್ನೂ ತಲುಪಿದೆ. ವಂದೇಮಾತರಂ ರೈಲುಗಳೂ ಎಕ್ಸ್‌ಪ್ರೆಸ್‌ವೇಗಳೂ ಗ್ರಾಮಸಡಕ್‌ ಯೋಜನೆಗಳೂ ಇದಕ್ಕೆ ಉದಾಹರಣೆ. ಜೈಶಂಕರ್‌, ನಿತಿನ್‌ ಗಡ್ಕರಿ ಮೊದಲಾದ ಮೋದಿ ಎರಡನೇ ಅವಧಿಯ ಸಚಿವರು ಅದ್ಭುತ ಅನ್ನಿಸುವಂಥ ಕಾರ್ಯವೈಖರಿಯನ್ನೇ ಮೆರೆದಿದ್ದಾರೆ. ಇಂಥ ಕರ್ತವ್ಯನಿಷ್ಠರನ್ನು ಮುಂದಿನ ಅವಧಿಗೂ ಮುಂದುವರಿಸಬೇಕಿದೆ. ಆಗ ಮಾತ್ರ ಅವರು ಕೈಗೊಂಡ ಕೆಲಸಗಳು ತಾರ್ಕಿಕ ಅಂತ್ಯ ಕಾಣಬಹುದು.

ಜಾಗತಿಕವಾಗಿ ಎರಡು ಯುದ್ಧಗಳು ನಡೆಯುತ್ತಿರುವ ಈ ಪ್ರಕ್ಷುಬ್ಧ ಅವಧಿಯಲ್ಲಿ ಮೂರನೇ ಬಾರಿಗೆ ಒಂದು ಸರಕಾರ ಆಯ್ಕೆಯಾಗುವುದು ಅಸಾಧಾರಣ ಸಾಧನೆ. ಜಾಗತಿಕ ಅನಿಶ್ಚಿತತೆ ಇರುವ ಸಮಯದಲ್ಲಿ ನಮ್ಮ ದೇಶದ ಜನತೆ ನಿರಂತರತೆ, ಸ್ಥಿರತೆ ಬಯಸಿದ್ದಾರೆ. ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರ ಪುನರಾಗಮನವನ್ನು ವಿಶ್ವ ನಾಯಕರು ಸ್ವಾಗತಿಸಿದ್ದಾರೆ. 121ಕ್ಕೂ ಹೆಚ್ಚು ವಿಶ್ವ ನಾಯಕರು ಅವರನ್ನು ಅಭಿನಂದಿಸಿದ್ದಾರೆ. ಯುಎಸ್ ಅಧ್ಯಕ್ಷ ಜೋ ಬೈಡೆನ್, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಂತಹ ವಿಶ್ವ ನಾಯಕರು ಮೋದಿಯವರ ಪುನರಾಗಮನವನ್ನು ಸ್ವಾಗತಿಸಿದ್ದು, ಇವರೊಂದಿಗೆ ಮೋದಿ ವೈಯಕ್ತಿಕ ಸಂಬಂಧವನ್ನೂ ಆತ್ಮೀಯವಾಗಿ ಕಾಪಾಡಿಕೊಂಡಿರುವುದು ಉಲ್ಲೇಖನೀಯ.

ಇನ್ನು ಮೈತ್ರಿಕೂಟದಲ್ಲಿರುವ ಇಬ್ಬರು ಬಲಿಷ್ಠ ಪ್ರಾದೇಶಿಕ ನಾಯಕರಾದ ನಿತೀಶ್‌ ಕುಮಾರ್‌ ಹಾಗೂ ಚಂದ್ರಬಾಬು ನಾಯ್ಡು ಅವರೊಂದಿಗಿನ ಸಂಬಂಧ. ಇದು ಎನ್‌ಡಿಎಗೆ ಈ ಅವಧಿಯಲ್ಲಿ ಮುಖ್ಯವಾದುದು. ಇಬ್ಬರಿಗೂ ಬಹುತೇಕ ಮೋದಿಯವರಷ್ಟೇ ವಯಸ್ಸು ಆಗಿದೆ. ಇಬ್ಬರೂ ಮಾಗಿದ ರಾಜಕಾರಣಿಗಳು; ಅನವಶ್ಯಕ ರಿಸ್ಕ್‌ ತೆಗೆದುಕೊಳ್ಳುವವರಲ್ಲ. ಈ ಸಲದ ಫಲಿತಾಂಶ ಅವರಿಗೂ ಹಲವು ಪಾಠ ಕಲಿಸಿದೆ. ಬಿಹಾರ ಹಾಗೂ ಆಂಧ್ರಪ್ರದೇಶಗಳಲ್ಲೂ ಬಿಜೆಪಿ ಸಾಕಷ್ಟು ವಿಸ್ತರಿಸಿದೆ; ಈ ಪಕ್ಷಗಳಿಗೆ ಸಮಾನವಾಗಿಯೇ ಸ್ಥಾನಬಲ ಹೆಚ್ಚಿಸಿಕೊಂಡಿದೆ. ಈ ನಾಯಕರಿಗೆ ತಮ್ಮ ರಾಜ್ಯದ ಸಂಬಂಧವನ್ನು ಕೇಂದ್ರದೊಡನೆ ಕಾಪಾಡಿಕೊಂಡು, ರಾಜ್ಯದಲ್ಲೂ ಬೆಲೆ ಭದ್ರಪಡಿಸಿಕೊಂಡು ಉಳಿಯುವ ಹಂಬಲವಿದೆ. ಇಬ್ಬರೂ ಕೇಂದ್ರದಲ್ಲೂ ಸಾಕಷ್ಟು ಅಧಿಕಾರ ಅನುಭವಿಸಿದವರೇ. ಹೀಗಾಗಿ ಒಂದೆರಡು ಸಚಿವ ಸ್ಥಾನಗಳಿಗಾಗಿ ಚೌಕಾಸಿ ಮಾಡಿದರೂ, ಸಂಬಂಧ ಹರಿದುಕೊಳ್ಳುವಷ್ಟರ ಮಟ್ಟಿಗೆ ಯಾರೂ ಹೋಗುವವರಲ್ಲ. ಕರ್ನಾಟಕದ ಜೆಡಿಎಸ್‌ ಕೂಡ ಎರಡು ಸ್ಥಾನಗಳನ್ನು ಹೊಂದಿದ್ದು, ಒಂದು ಸಚಿವ ಸ್ಥಾನವನ್ನಂತೂ ಪಡೆಯುವುದು ಶಕ್ಯವಿದೆ.

ಹೀಗಾಗಿ, ಈ ಬಾರಿಯೂ ಮೋದಿಯವರಿಂದ ನಾವು ಸುಸ್ಥಿರ ಸರಕಾರವನ್ನು ನಿರೀಕ್ಷಿಸಬಹುದು ಎನ್ನಬಹುದು. ಮೋದಿಯವರಲ್ಲಿ ಈ ವಯಸ್ಸಿನಲ್ಲೂ ದೇಶವನ್ನು ಮುನ್ನಡೆಸಬಲ್ಲ ಛಲ, ಒಳನೋಟ, ಮುತ್ಸದ್ಧಿತನ, ಜಾಣ್ಮೆ ಎಲ್ಲ ಇವೆ. ಆಂತರಿಕ ಹಾಗೂ ಬಾಹ್ಯ ನಾಯಕರ ಗೆಳೆತನವೂ ಇದೆ. ಆಧುನಿಕತೆಯನ್ನು ಬರಮಾಡಿಕೊಳ್ಳುವ ನಾಯಕತ್ವವೂ ಇದೆ. ಒಬ್ಬ ನಾಯಕನಲ್ಲಿ ಇದಕ್ಕಿಂತ ಹೆಚ್ಚಿನದನ್ನು ನಿರೀಕ್ಷಿಸಬೇಕಿಲ್ಲ. ಮೋದಿ ಸರಕಾರ ಭಾನುವಾರದ ಪ್ರಮಾಣ ವಚನದ ದಿನದಿಂದಲೇ ತನ್ನ ʼವಿಕಸಿತ ಭಾರತʼದ ಗುರಿಯತ್ತ ಮುನ್ನುಗ್ಗಲಿ.

ಇದನ್ನೂ ಓದಿ: Narendra Modi: ಭಾನುವಾರ ಸಂಜೆ 7.15ಕ್ಕೆ ಮೋದಿ ಪ್ರಮಾಣವಚನ‌; ಹಲವು ಸಂಸದರಿಗೂ ಮಂತ್ರಿ ಭಾಗ್ಯ!

Continue Reading

ಪ್ರಮುಖ ಸುದ್ದಿ

T20 World Cup : ಪಾಕಿಸ್ತಾನ ತಂಡ ಅಮೆರಿಕ ವಿರುದ್ಧ ಸೋತಿದ್ದು ಐಎಮ್​ಎಫ್​ ನೀಡುವ 80 ಕೋಟಿ ಸಾಲಕ್ಕಾಗಿ!

T20 World Cup: ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ತಂಡ ಸೋಲುತ್ತಿದ್ದಂತೆ ತಂಡದ ಆಟಗಾರರನ್ನು ಲೇವಡಿ ಮಾಡುವ ತಮಾಷೆಯ ವೀಡಿಯೊಗಳನ್ನು ಮಾಡಿದರು. ವಿದೇಶದಲ್ಲಿ ವಾಸಿಸುವ ಪಾಕಿಸ್ತಾನಿಗಳ ಉತ್ಸಾಹದ ಬಗ್ಗೆ ತಂಡವು ಕಾಳಜಿ ವಹಿಸುವುದಿಲ್ಲ. ಅವರು ಉತ್ತಮವಾಗಿ ಆಡುವ ಬದಲು ಮಜಾ ಮಾಡುತ್ತಿದ್ದಾರೆ ಎಂದು ಪಾಕಿಸ್ತಾನದ ಯುವತಿಯೊಬ್ಬಳು ಹೇಳುತ್ತಿರುವ ವೀಡಿಯೊ ಈಗ ವೈರಲ್ ಆಗಿದೆ.

VISTARANEWS.COM


on

T20 World Cup
Koo

ಬೆಂಗಳೂರು: ಗುರುವಾರ ನಡೆದ ಟಿ 20 ವಿಶ್ವಕಪ್ ಪಂದ್ಯದಲ್ಲಿ (T20 World Cup) ಯುಎಸ್ಎ ಕ್ರಿಕೆಟ್ ತಂಡವು ಪಾಕಿಸ್ತಾನವನ್ನು ರೋಮಾಂಚಕ ಸೂಪರ್ ಓವರ್​ನಲ್ಲಿ ಸೋಲಿಸುವ ಮೂಲಕ ಐತಿಹಾಸಿಕ ಗೆಲುವು ಸಾಧಿಸಿದೆ. ಈ ಗೆಲುವು ಯುಎಸ್ಎ ತಂಡದ ಪಂದ್ಯಾವಳಿಯಲ್ಲಿ ಅತ್ಯಂತ ಮಹತ್ವದ ಸಾಧನೆಯಾಗಿದೆ. ಸತತ ಎರಡು ಗೆಲುವುಗಳೊಂದಿಗೆ ಎ ಗುಂಪಿನ ಅಗ್ರಸ್ಥಾನಕ್ಕೆ ಏರಿದೆ.

ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ತಂಡ ಸೋಲುತ್ತಿದ್ದಂತೆ ತಂಡದ ಆಟಗಾರರನ್ನು ಲೇವಡಿ ಮಾಡುವ ತಮಾಷೆಯ ವೀಡಿಯೊಗಳನ್ನು ಮಾಡಿದರು. ವಿದೇಶದಲ್ಲಿ ವಾಸಿಸುವ ಪಾಕಿಸ್ತಾನಿಗಳ ಉತ್ಸಾಹದ ಬಗ್ಗೆ ತಂಡವು ಕಾಳಜಿ ವಹಿಸುವುದಿಲ್ಲ. ಅವರು ಉತ್ತಮವಾಗಿ ಆಡುವ ಬದಲು ಮಜಾ ಮಾಡುತ್ತಿದ್ದಾರೆ ಎಂದು ಪಾಕಿಸ್ತಾನದ ಯುವತಿಯೊಬ್ಬಳು ಹೇಳುತ್ತಿರುವ ವೀಡಿಯೊ ಈಗ ವೈರಲ್ ಆಗಿದೆ.

ಎಕ್ಸ್ ಬಳಕೆದಾರರೊಬ್ಬರು ಈ ವೀಡಿಯೊಗೆ ಪ್ರತಿಕ್ರಿಯಿಸಿ, “ಪಾಕಿಸ್ತಾನ ಆಟಗಾರರು ಅವಳನ್ನು ಅಳುವಂತೆ ಮಾಡಿದ್ದಾರೆ. ಅವರಿಗೆ ಸ್ವರ್ಗ ಪ್ರಾಪ್ತಿಯಾಗುವುದಿಲ್ಲ. ಇನ್ನೊಬ್ಬರು ಹೇಳಿದರು, “ಅವಳು ಒಂದು ಹಂತದಲ್ಲಿ ಶರ್ಟ್ ತೆಗೆದು ಎಸೆಯುತ್ತಾಳೆ ಎಂದು ನಾನು ಭಾವಿಸಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Shreyas Iyer : ಬಿಸಿಸಿಐ ಕೇಂದ್ರ ಗುತ್ತಿಗೆ ತಪ್ಪಿದ ಕುರಿತು ಮಾತನಾಡಿದ ಶ್ರೇಯಸ್ ಅಯ್ಯರ್​; ಏನಂದ್ರು ಅವರು?

ಸಾಲಕ್ಕಾಗಿ ಸೋತ ಪಾಕ್​

ಮತ್ತೊಂದು ವೀಡಿಯೊದಲ್ಲಿ, ಪಾಕಿಸ್ತಾನದ ಪ್ರಸಿದ್ಧ ಬರಹಗಾರ, ಕವಿ ಮತ್ತು ಹಾಸ್ಯಗಾರ ಅನ್ವರ್ ಮಕ್ಸೂದ್, ಪಾಕಿಸ್ತಾನವು ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ 8 ಬಿಲಿಯನ್ ಡಾಲರ್ ಸಾಲವನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ತಂಡ ಸೋತಿರಬೇಕು ಎಂದು ತಮಾಷೆ ಮಾಡಿದ್ದಾರೆ. ಈ ಸೋಲಿಗೆ ಬೇರೆ ಯಾವುದೇ ಸಮರ್ಥನೀಯ ವಿವರಣೆ ಇಲ್ಲ ಎಂದು ಹೇಳಿದ್ದಾರೆ. ಭಾರತ ವಿರುದ್ಧದ ಪಾಕಿಸ್ತಾನದ ಬಹು ನಿರೀಕ್ಷಿತ ಪಂದ್ಯದ ಬಗ್ಗೆ ಮಾತನಾಡಿದ ಮಕ್ಸೂದ್, ಪಂದ್ಯಕ್ಕೆ ಟಿಕೆಟ್ ಖರೀದಿಸಿದ ಪಾಕಿಸ್ತಾನಿಗಳು ಅದನ್ನು ಅರ್ಧ ಬೆಲೆಗೆ ಮಾರಾಟ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಸೋಲಿನ ಬಗ್ಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು ಮೀಮ್ ಗಳಿಂದ ತುಂಬಿ ಕೊಂಡಿದ್ದವು. ಆಟಗಾರರ ಪ್ರದರ್ಶನವನ್ನು ಒಂದೊಂದು ರೀತಿಯಲ್ಲಿ ಲೇವಡಿ ಮಾಡಲಾಗಿದೆ. ಸರಿಯಾಗಿ ಆಡದ ಆಟಗಾರರ ಬಗ್ಗೆ ಕಾಮೆಂಟ್ ಮಾಡಲಾಗಿದೆ.

“ಹಲೋ ಪೊಲೀಸ್, ನಾನು 9/11 ಅನ್ನು ವರದಿ ಮಾಡಲು ಬಯಸುತ್ತೇನೆ” ಎಂದು ಕ್ರಿಕೆಟಿಗರಾದ ಮೊಹಮ್ಮದ್ ರಿಜ್ವಾನ್ ಮತ್ತು ಫಖರ್ ಜಮಾನ್ ಗಳಿಸಿದ ಸ್ಕೋರ್​ಗಳನ್ನು ಗೇಲಿ ಮಾಡುವ ಒಂದು ಮೀಲ್​ ಎಕ್ಸ್​ನಲ್ಲಿ ಹರಿದಾಡುತ್ತಿದೆ. ರಿಜ್ವಾನ್ 8 ಎಸೆತಗಳಲ್ಲಿ 9 ರನ್ ಗಳಿಸಿದರೆ, ಜಮಾನ್ 7 ಎಸೆತಗಳಲ್ಲಿ 11 ರನ್ ಗಳಿಸಿದ್ದರು.

ಅಜಯ್ ದೇವಗನ್ (ಗೋಪಾಲ್), ಶರ್ಮನ್ ಜೋಶಿ (ಲಕ್ಷ್ಮಣ್), ಅರ್ಷದ್ ವಾರ್ಸಿ (ಮಾಧವ್) ಮತ್ತು ತುಷಾರ್ ಕಪೂರ್ (ಲಕ್ಕಿ) ಅವರು ನಟಿಸಿರುವ ಗೋಲ್​ಮಾಲ್​ ವೀಡಿಯೊ ಕ್ಲಿಪ್ ಅನ್ನು ಬಳಕೆದಾರರು ಹಂಚಿಕೊಂಡಿದ್ದಾರೆ. ಈ ದೃಶ್ಯದಲ್ಲಿ, “ಪಾಗಲ್ ಹೋ ಗಯಾ ಹು ಮೈ (ನಾನು ಹುಚ್ಚನಾಗಿದ್ದೇನೆ)” ಎಂದು ಕೂಗುವುದನ್ನು ಕಾಣಬಹುದು.

Continue Reading
Advertisement
T20 World Cup
ಪ್ರಮುಖ ಸುದ್ದಿ4 hours ago

T20 World Cup : ವಿಶ್ವ ಕಪ್​ ಇತಿಹಾಸದಲ್ಲಿ ಮೊದಲ ಗೆಲುವು ದಾಖಲಿಸಿದ ಕೆನಡಾ; ಐರ್ಲೆಂಡ್​ಗೆ ನಿರಾಸೆ

Narendra Modi
ದೇಶ4 hours ago

Narendra Modi: ಹಂಗಾಮಿ ಪ್ರಧಾನಿ ಮೋದಿಗೆ ಮೊಸರು-ಸಕ್ಕರೆ ತಿನ್ನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು!

Narendra Modi
ಸಂಪಾದಕೀಯ4 hours ago

ವಿಸ್ತಾರ ಸಂಪಾದಕೀಯ: ಮೋದಿ ಮೂರನೇ ಅವಧಿ, ಆಗಲಿ ಇನ್ನಷ್ಟು ವಿಕಾಸದ ಬುನಾದಿ

T20 World Cup
ಪ್ರಮುಖ ಸುದ್ದಿ4 hours ago

T20 World Cup : ಪಾಕಿಸ್ತಾನ ತಂಡ ಅಮೆರಿಕ ವಿರುದ್ಧ ಸೋತಿದ್ದು ಐಎಮ್​ಎಫ್​ ನೀಡುವ 80 ಕೋಟಿ ಸಾಲಕ್ಕಾಗಿ!

Naxals
ದೇಶ4 hours ago

ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಹತ್ಯೆ, ಮೂವರು ಯೋಧರಿಗೆ ಗಾಯ

Gas leak
ಪ್ರಮುಖ ಸುದ್ದಿ5 hours ago

Gas Leakage : ಮೈಸೂರಿನ ಗುಜರಿ ಗೋಡೌನ್​ನಲ್ಲಿ ಅನಿಲ ಸೋರಿಕೆ, 30 ಮಂದಿ ಅಸ್ವಸ್ಥ

soraba BJP Mandala president prakash talakaalukoppa pressmeet
ಶಿವಮೊಗ್ಗ5 hours ago

Shivamogga News: ಸೊರಬದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತ ಆರೋಪ

Chandrababu Naidu
ದೇಶ5 hours ago

Chandrababu Naidu: 5 ದಿನದಲ್ಲಿ 870 ಕೋಟಿ ರೂ. ಗಳಿಸಿದ ‘ಕಿಂಗ್‌ ಮೇಕರ್’‌ ಚಂದ್ರಬಾಬು ನಾಯ್ಡು; ಹೇಗಂತೀರಾ?

Shreyas Iyer
ಕ್ರೀಡೆ6 hours ago

Shreyas Iyer : ಬಿಸಿಸಿಐ ಕೇಂದ್ರ ಗುತ್ತಿಗೆ ತಪ್ಪಿದ ಕುರಿತು ಮಾತನಾಡಿದ ಶ್ರೇಯಸ್ ಅಯ್ಯರ್​; ಏನಂದ್ರು ಅವರು?

assault case
ಕ್ರೈಂ6 hours ago

Assault Case: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ; ಯುವಕನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ9 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ10 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌