Award Ceremony: ಸಾಧಕರಿಗೆ ಬಸವ ರಾಷ್ಟ್ರೀಯ ಪುರಸ್ಕಾರ ಸೇರಿ ವಿವಿಧ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ - Vistara News

ಪ್ರಮುಖ ಸುದ್ದಿ

Award Ceremony: ಸಾಧಕರಿಗೆ ಬಸವ ರಾಷ್ಟ್ರೀಯ ಪುರಸ್ಕಾರ ಸೇರಿ ವಿವಿಧ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ

Award Ceremony: 2020-21 ರಿಂದ 2023-24ನೇ ಸಾಲಿನ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳನ್ನು ಸಾಧಕರಿಗೆ ಬುಧವಾರ ಪ್ರದಾನ ಮಾಡಲಾಯಿತು.

VISTARANEWS.COM


on

Award ceremony
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಧಕರಿಗೆ, 2021 ರಿಂದ 2024ನೇ ಸಾಲಿನ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳನ್ನು ಸಿಎಂ ಸಿದ್ದರಾಮಯ್ಯ ಅವರು ಪ್ರದಾನ ಮಾಡಿ ಗೌರವಿಸಿದರು.

2020-21 ರಿಂದ 2023-24ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರ, ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ, ಪಂಪ ಪ್ರಶಸ್ತಿ, ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ, ಪಂಡಿತ್ ಪಂಚಾಕ್ಷರಿ ಗವಾಯಿ ಪ್ರಶಸ್ತಿ, ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಅಕ್ಕಮಹಾದೇವಿ ಪ್ರಶಸ್ತಿ, ಕನಕಶ್ರೀ ಪ್ರಶಸ್ತಿ, ಶ್ರೀ ನಿಜಗುಣ ಪುರಂದರ ಪ್ರಶಸ್ತಿ, ಕುಮಾರವ್ಯಾಸ ಪ್ರಶಸ್ತಿ, ಶಾಂತಲಾನಾಟ್ಯ ರಾಣಿ ಪ್ರಶಸ್ತಿ, ಸಂತ ಶಿಶುನಾಳ ಷರೀಫ ಪ್ರಶಸ್ತಿ, ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ, ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಬಿ.ವಿ.ಕಾರಂತ ಪ್ರಶಸ್ತಿ, ಡಾ.ಗುಬ್ಬಿ ವೀರಣ್ಣ ಪ್ರಶಸ್ತಿ, ಡಾ.ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಜಾನಪದಶ್ರೀ ಪ್ರಶಸ್ತಿ ಪುರಸ್ಕೃತರಾದ ಒಟ್ಟು 75 ಮಂದಿಗೆ ಮುಖ್ಯಮಂತ್ರಿಗಳು ಪ್ರಶಸ್ತಿ ನೀಡಿ ಗೌರವಿಸಿದರು.

ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ. ನಾವು ಮೂಗು ತೂರಿಸುವುದಿಲ್ಲ. ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಉತ್ತೇಜನ ನೀಡುವುದು ಸಮಾಜ ಮತ್ತು ಸರ್ಕಾರದ ಜವಾಬ್ದಾರಿ. ನಮ್ಮ ಸರ್ಕಾರ ಕಲೆ, ಸಾಹಿತ್ಯ, ಸಂಸ್ಕೃತಿಗೆ ಪ್ರೋತ್ಸಾಹ ನೀಡುವುದರಲ್ಲಿ ಹಿಂದೆ ಬೀಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ | Sunday Read: ಹೊಸ ಪುಸ್ತಕ: ಕೆ.ಎನ್.‌ ಗಣೇಶಯ್ಯನವರ ʼಹೊಕ್ಕಳ ಮೆದುಳುʼ ಕಥಾಂಬರಿ

ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ. ನಾವು ಮೂಗು ತೂರಿಸುವುದಿಲ್ಲ. ಈ ವಿಚಾರದಲ್ಲಿ ನಾನು ಬಹಳ ನಿಷ್ಠುರವಾಗಿ ವರ್ತಿಸುತ್ತೇನೆ. ನನ್ನ ಮೇಲೆ ಒತ್ತಡ ಹಾಕುವ ಎಲ್ಲರಿಗೂ ನಾನು ಅಷ್ಟೆ ನಿಷ್ಠುರವಾಗಿ ಹೇಳಿಬಿಡುತ್ತೇನೆ ಎಂದರು.

ದೇವಸ್ಥಾನಕ್ಕೆ ಇಷ್ಟದ ಉಡುಪು ಧರಿಸಿ ಹೋಗಬಹುದು

ನಮ್ಮ ಸರ್ಕಾರ ಜನರ ನಂಬಿಕೆಗಳನ್ನು ಗೌರವಿಸುತ್ತದೆ. ಬಸವಣ್ಣನವರು ಮೌಢ್ಯ ಮುಕ್ತ, ಜಾತಿ ಮುಕ್ತ, ವರ್ಗ ಮುಕ್ತ ಸಮ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದ್ದರು. ಅದಕ್ಕೆ ದೇಹವೇ ದೇಗುಲ ಎಂದು ವಚನಕಾರರು ಪ್ರತಿಪಾದಿಸಿದ್ದಾರೆ. ಆದರೆ ಕೆಲವರು ದೇವಸ್ಥಾನದಲ್ಲಿ ಮಾತ್ರ ದೇವರಿದ್ದಾನೆ ಎಂಬುವ ನಂಬಿಕೆಯಿಂದ ಹೋಗುತ್ತಾರೆ. ಅವರ ನಂಬಿಕೆಯನ್ನೂ ಗೌರವಿಸುತ್ತೇವೆ. ದೇವಸ್ಥಾನಕ್ಕೆ ಹೋಗುವವರು ಅವರ ಇಷ್ಟದ ಉಡುಪು ಧರಿಸಿ ಹೋಗಬಹುದು. ಈ ವಿಚಾರದಲ್ಲೂ ನಮ್ಮದೇನೂ ಅಭ್ಯಂತರ ಇಲ್ಲ ಎಂದರು.

ದೇವರು, ಧರ್ಮದ ಬಗ್ಗೆ ಯಾರ ನಂಬಿಕೆ ಏನೇ ಇದ್ದರೂ ಎಲ್ಲರೂ ಮೊದಲು ಮನುಷ್ಯರಾಗಬೇಕು. ಮನುಷ್ಯ ಮನುಷ್ಯರನ್ನು ದ್ವೇಷಿಸಬಾರದು. ಇದೇ ಅತ್ಯುನ್ನತ ಮೌಲ್ಯ. ರವೀಂದ್ರ ಕಲಾ ಕ್ಷೇತ್ರ ಮತ್ತು ಸಂಸ ರಂಗ ಮಂದಿರ ನವೀಕರಣಕ್ಕೆ ಇಷ್ಟೆ ಖರ್ಚು ಮಾಡಬೇಕು ಎನ್ನುವ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. 24 ಕೋಟಿ ಖರ್ಚು ಮಾಡಿ ನವೀಕರಣ ಮಾಡುತ್ತಿದೆ ಎನ್ನುವುದು ಸರಿಯಲ್ಲ. ಮೊತ್ತದ ಬಗ್ಗೆ ಯಾವ ತೀರ್ಮಾನವೂ ಆಗಿಲ್ಲ ಎಂದು ಪುನರುಚ್ಚರಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಶರಣ ಶ್ರೇಷ್ಠರಾದ ಬಸವಣ್ಣನವರನ್ನು ಕನ್ನಡ ನಾಡಿನ ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಲಾಖೆ ಪರವಾಗಿ ಅಭಿನಂದನೆ ಸಲ್ಲಿಸಿದರು.

ಎಲ್ಲ ಪ್ರಶಸ್ತಿಗಳ ಪಟ್ಟಿ ಹೀಗಿದೆ

ಬಸವ ಪುರಸ್ಕಾರ: ಆನಂದ್‌ ತೇಲ್ತುಂಬಡೆ(2022-23), ಡಾ.ಎ.ಜಿ.ಮಹದೇವಪ್ಪ ಧಾರವಾಡ( 2023-24)
ಭಗವಾನ್‌ ಮಹಾವೀರ ಶಾಂತಿ ಪ್ರಶಸ್ತಿ: ಜಿನದತ್ತ ದೇಸಾಯಿ(2022-23), ಗುಜರಾತ್‌ನ ಗಾಂಧಿ (2023-24)
ಟಿ ಚೌಡಯ್ಯ ಪ್ರಶಸ್ತಿ: ನಿತ್ಯಾನಂದ ಹಳದಿಪುರ ಕೊಳಲು (2022-23), ಶ್ರೀರಾಮುಲು ನಾದಸ್ವರ ಕೋಲಾರ(2023-24)
ಗಾನಯೋಗಿ ಪಂಡಿತ್‌ ಪಂಚಾಕ್ಷರಿ ಗವಾಯಿ ಪ್ರಶಸ್ತಿ: ಪಂಡಿತ್‌ ಸೋಮನಾಥ ಮರಡೂರ ಧಾರವಾಡ (2022-23), ಡಾ.ನಾಗಮಣಿ ಶ್ರೀನಾಥ್‌ ಮೈಸೂರು(2023-24)
(ಈ ಪ್ರಶಸ್ತಿ ಆಯ್ಕೆಗೆ ಗೊ.ರು.ಚನ್ನಬಸಪ್ಪ ಅಧ್ಯಕ್ಷರಾಗಿದ್ದರು. ಪ್ರಶಸ್ತಿ 10 ಲಕ್ಷ ರೂ. ನಗದು ಒಳಗೊಂಡಿದೆ.)

ಪಂಪ ಪ್ರಶಸ್ತಿ: ನಾ.ಡಿಸೋಜಾ, ಸಾಗರ(2023-24)
ಪ್ರೊ. ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ: ಮಹಾರಾಷ್ಟ್ರದ ಡಾ. ಕೆ.ವಿಶ್ವನಾಥ್ ಕಾರ್ನಾಡ (2022–23), ಬೆಳಗಾವಿಯ ಚಂದ್ರಕಾಂತ ಪೋಕಳೆ (2023–24)
ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ: ಹಾಸನದ ಬಾನು ಮುಷ್ತಾಕ್ (2022–23), ರಾಯಚೂರಿನ ಎಚ್‌.ಎಸ್.ಮುಕ್ತಾಯಕ್ಕ (2023–24)
ಬಿ.ವಿ.ಕಾರಂತ ಪ್ರಶಸ್ತಿ: ಬೆಂಗಳೂರಿನ ಸಿ.ಬಸವಲಿಂಗಯ್ಯ (2022–23), ಮಂಗಳೂರಿನ ಸದಾನಂದ ಸುವರ್ಣ (2023–24)
ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ: ತುಮಕೂರಿನ ಚನ್ನಬಸಯ್ಯ ಗುಬ್ಬಿ (2022–23) , ವಿಜಯಪುರದ ಎಲ್.ಬಿ.ಶೇಖ್ ಮಾಸ್ತರ (2023–24)
ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ: ಡಾ. ಮೊಗಳ್ಳಿ ಗಣೇಶ್ (2021–22), ಉತ್ತಮ ಕಾಂಬ್ಳೆ (2022–23), ದಾವಣಗೆರೆಯ ಬಿ.ಟಿ.ಜಾಹ್ನವಿ (2023–24)
(ಈ ಪ್ರಶಸ್ತಿಗಳು ತಲಾ 5 ಲಕ್ಷ ರೂ. ನಗದು ಒಳಗೊಂಡಿದೆ. ಡಾ. ಬರಗೂರು ರಾಮಚಂದ್ರಪ್ಪ ಅವರು ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.)

ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ ವಿಭಾಗದ ಪ್ರಶಸ್ತಿ

ಸಂಗೊಳ್ಳಿ ರಾಯಣ್ಣ ಪ್ರಶಸ್ತಿ: ಬೆಂಗಳೂರಿನ ಕೆ. ಮರುಳಸಿದ್ದಪ್ಪ (2020–21), ಬೆಳಗಾವಿಯ ಹಸನ್‌ ನಯೀಂ ಸುರಕೋಡ (2021–22), ಕೋಲಾರದ ಕೆ. ರಾಮಯ್ಯ (2022–23), ಬಳ್ಳಾರಿಯ ವೀರಸಂಗಯ್ಯ (2023–24)
ಅಕ್ಕಮಹಾದೇವಿ ಪ್ರಶಸ್ತಿ: ಧಾರವಾಡದ ಜಗನ್ಮಾತೆ ಅಕ್ಕಮಹಾದೇವಿ ಆಶ್ರಮ ಟ್ರಸ್ಟ್ (2020–21), ಮಂಡ್ಯದ ಡಾ. ಆರ್.ಸುನಂದಮ್ಮ (2021–22), ಕಲಬುರಗಿಯ ಮೀನಾಕ್ಷಿ ಬಾಳಿ (2022–23), ಬೆಂಗಳೂರಿನ ಡಾ. ವಸುಂಧರಾ ಭೂಪತಿ (2023–24)
ಕನಕಶ್ರೀ ಪ್ರಶಸ್ತಿ: ಹಾವೇರಿಯ ಡಾ. ಲಿಂಗದಹಳ್ಳಿ ಹಾಲಪ್ಪ (2021–22), ಮಂಗಳೂರಿನ ಡಾ. ಬಿ.ಶಿವರಾಮ ಶೆಟ್ಟಿ (2022–23)
(ಈ ಪ್ರಶಸ್ತಿಗಳು ತಲಾ 5 ಲಕ್ಷ ರೂ. ನಗದು ಒಳಗೊಂಡಿದೆ. ಬಿ.ಟಿ.ಲಲಿತಾ ನಾಯಕ್ ಅಧ್ಯಕ್ಷರು)

ಕಲಾ ಪ್ರಶಸ್ತಿ ವಿಭಾಗದ ಪ್ರಶಸ್ತಿಗೆ ಆಯ್ಕೆಯಾದವರು

ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ: ಮೈಸೂರಿನ ಜಿ.ಎಲ್.ಎನ್.ಸಿಂಹ (2022–23), ಕಲಬುರಗಿಯ ಬಸವರಾಜ್ ಎಲ್. ಜಾನೆ (2023–24)
ಜಾನಪದಶ್ರೀ ಪ್ರಶಸ್ತಿ(ವಾದನ): ದಕ್ಷಿಣ ಕನ್ನಡದ ಅರುವ ಕೊರಗಪ್ಪ ಶೆಟ್ಟಿ (2022–23), ಚಿಕ್ಕಮಗಳೂರಿನ ಜಿ.ಪಿ. ಜಗದೀಶ್ (2023–24)
ಜಾನಪದ ಶ್ರೀ ಪ್ರಶಸ್ತಿ(ಗಾಯನ): ಬೀದರ್‌ನ ಕಲ್ಲಪ್ಪ ಮಿರ್ಜಾಪುರ (2022–23), ಚಿತ್ರದುರ್ಗದ ಹಲಗೆ ದುರ್ಗಮ್ಮ (2023–24)
(ಈ ಪ್ರಶಸ್ತಿಗಳು ತಲಾ 5 ಲಕ್ಷ ರೂ. ನಗದು ಒಳಗೊಂಡಿದೆ. ಡಾ. ವಿ.ಟಿ.ಕಾಳೆ ಆಯ್ಕೆ ಸಮಿತಿ ಅಧ್ಯಕ್ಷ)

ಸಂಗೀತ, ನೃತ್ಯ ಪ್ರಶಸ್ತಿ ವಿಭಾಗದ ಪುರಸ್ಕೃತರು

ನಿಜಗುಣ–ಪುರಂದರ ಪ್ರಶಸ್ತಿ: ಮೈಸೂರಿನ ಎಂ.ಕೆ.ಸರಸ್ವತಿ (2022–23), ಧಾರವಾಡದ ಅಕ್ಕಮಹಾದೇವಿ ಮಠ (2023–24)
ಕುಮಾರವ್ಯಾಸ ಪ್ರಶಸ್ತಿ: ಗದುಗಿನ ಸಿದ್ದೇಶ್ವರ ಶಾಸ್ತ್ರಿ (2022–23), ಮೈಸೂರಿನ ಕೃ.ರಾಮಚಂದ್ರ (2023–24)
ಶಾಂತಲಾ ನಾಟ್ಯ ಪ್ರಶಸ್ತಿ: ಬೆಂಗಳೂರಿನ ಚಿತ್ರಾ ವೇಣುಗೋಪಾಲ್ (2022–23), ಬೆಂಗಳೂರಿನ ರೇವತಿ ನರಸಿಂಹನ್‌ (2023–24)
ಸಂತ ಶಿಶುನಾಳ ಷರೀಫ ಪ್ರಶಸ್ತಿ: ಬೆಂಗಳೂರಿನ ಕಸ್ತೂರಿ ಶಂಕರ್‌ (2022–23), ಶಿವಮೊಗ್ಗದ ಎನ್.ಬಿ.ಶಿವಲಿಂಗಪ್ಪ (2023–24)
(ಈ ಪ್ರಶಸ್ತಿಗಳು ತಲಾ 5 ಲಕ್ಷ ರೂ. ನಗದು ಒಳಗೊಂಡಿದೆ. ಡಾ. ನರಸಿಂಹಲು ವಡವಾಡಿ ಆಯ್ಕೆ ಸಮಿತಿ ಅಧ್ಯಕ್ಷ.)

ಇದನ್ನೂ ಓದಿ : Academy Awards : ಇದು ನಿಮ್ಮ ಮೊದಲ ಕೃತಿಯೇ?; ಹಾಗಿದ್ರೆ ಸಾಹಿತ್ಯ ಅಕಾಡೆಮಿ ಬಹುಮಾನಕ್ಕಾಗಿ ಅರ್ಜಿ ಸಲ್ಲಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

PM Narendra Modi: ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ ಎಂದು ಮೋದಿ ಹೇಳಿದ್ದಾರೆ.

VISTARANEWS.COM


on

pm narendra modi basava jayanti 2024
Koo

ಹೊಸದಿಲ್ಲಿ: ಭಕ್ತಿ ಭಂಡಾರಿ, ಸಮಾಜ ಸುಧಾರಕ, ವಚನ ಚಳವಳಿಯ ಆದ್ಯ ಪೂಜ್ಯ ಶ್ರೀ ಬಸವೇಶ್ವರ ಜಯಂತಿ (Basava Jayanti 2024) ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ತಮ್ಮ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸೋಶಿಯಲ್‌ ಮೀಡಿಯಾ (Social media) ಎಕ್ಸ್‌ನಲ್ಲಿ ಪಠ್ಯ ಸಂದೇಶ ಹಾಗೂ ವಿಡಿಯೋ ಸಂದೇಶಗಳೆರಡನ್ನೂ ಅವರು ನೀಡಿದ್ದಾರೆ.

“ಬಸವ ಜಯಂತಿಯ ಸಂದರ್ಭದಲ್ಲಿ ನಾನು, ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ. ನ್ಯಾಯಯುತ ಮತ್ತು ಸಮೃದ್ಧ ಸಮಾಜದ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

“ಭಗವಾನ್‌ ಬಸವೇಶ್ವರರ ಸಂದೇಶ ಹಾಗೂ ಅವರ ವಚನಗಳು ನನಗೆ ಹೊಸಹೊಸದಾಗಿ ಕಲಿಸುತ್ತಲೇ ಇರುತ್ತವೆ. ನಾವು ಅವರಿಂದ ಅವರ ದೈವೀಯ ಗುಣವನ್ನೂ ಕಲಿಯಬಹುದು; ಜೊತೆಗೆ ಅವರು ಉತ್ತಮ ಆಡಳಿತಗಾರ, ಸುಧಾರಕನೂ ಹೌದು. ಸಮಾಜ ಸುಧಾರಣೆಯ ಅವರ ಬದುಕು ನಮಗೆ ಪ್ರೇರಣೆಯಾಗುವಂಥದು. ಬಸವಣ್ಣನವರ ವಚನಗಳು ಹಾಗೂ ಸಂದೇಶಗಳು ಆಧ್ಯಾತ್ಮಿಕವೂ ಹೌದು, ಬದುಕಿನ ಪ್ರಾಯೋಗಿಕ ಮಾರ್ಗದರ್ಶಕ ಸೂತ್ರಗಳೂ ಹೌದು” ಎಂದು ಅವರು ಕೊಂಡಾಡಿದ್ದಾರೆ.

“ಅವರ ಉಪದೇಶಗಳು ನಮಗೆ ಉತ್ತಮ ಮಾನವರಾಗುವುದನ್ನು ಕಲಿಸುತ್ತವೆ. ಇನ್ನಷ್ಟು ದಯಾಳು, ಅಧಿಕ ಉದಾರಿ, ಹೆಚ್ಚಿನ ಮಾನವೀಯ ಸಂವೇದನೆಗಳನ್ನು ನಮ್ಮಲ್ಲಿ ತುಂಬುತ್ತದೆ. ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ. ಈ ಶುಭಸಂದರ್ಭದಲ್ಲಿ ನಿಮಗೆಲ್ಲರಿಗೂ ಶುಭಕಾಮನೆಗಳು” ಎಂದು ಅವರು ಹಾರೈಸಿದ್ದಾರೆ.

ಇದನ್ನೂ ಓದಿ: Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

Continue Reading

ಪ್ರಮುಖ ಸುದ್ದಿ

Prajwal Revanna Case: “ಟ್ರಾನ್ಸ್‌ಫರ್‌ಗಾಗಿ ಪೀಡಿಸಿ ತಿಂದ…” ಪ್ರಜ್ವಲ್‌ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಯಿಂದಲೂ ದೂರು!

Prajwal Revanna Case: ಮೊದಲಿಗೆ, ಈ ವಿಚಾರದಲ್ಲಿ ನಮ್ಮನ್ನ ಎಳೆಯಬೇಡಿ ಎಂದು ಮಹಿಳೆಯರು ಹೇಳಿದ್ದರು. ತಾವು ಮದುವೆಯಾಗಿ ಸಂಸಾರದೊಂದಿಗೆ ಇದ್ದು, ತಮ್ಮನ್ನು ಅನಗತ್ಯವಾಗಿ ಪ್ರಕರಣದಲ್ಲಿ ತನಿಖೆ, ವಿಚಾರಣೆಗಾಗಿ ಕರೆಯುವುದರಿಂದ ಕುಟುಂಬದ ಶಾಂತಿ, ಮನಶ್ಶಾಂತಿ ಕೆಡಲಿದೆ. ಸಾಮಾಜಿಕವಾಗಿಯೂ ಕೆಟ್ಟ ಪರಿಸ್ಥಿತಿ ಎದುರಿಸಲಿದ್ದೇವೆ ಎಂದು ಸಂತ್ರಸ್ತೆಯರು ಆತಂಕ ತೋಡಿಕೊಂಡಿದ್ದರು.

VISTARANEWS.COM


on

prajwal revanna case women
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna Case) ಅವರಿಂದ ಆಗಿದೆ ಎನ್ನಲಾದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಕೊನೆಗೂ ವಿಡಿಯೋದಲ್ಲಿ (obscene video) ಕೆಲವು ಮಹಿಳಾ ಸರ್ಕಾರಿ ಅಧಿಕಾರಿಗಳು ಮೌನ ಮುರಿದಿದ್ದು, ಎಸ್‌ಐಟಿಗೆ (SIT) ದೂರು ಕೊಡಲು ಮುಂದೆ ಬಂದಿದ್ದಾರೆ.

ಇಬ್ಬರು ಸರ್ಕಾರಿ ಇಲಾಖೆಗಳ ಮಹಿಳಾ ಅಧಿಕಾರಿಗಳಿಂದ ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದಾರೆ. “ಟ್ರಾನ್ಸ್‌ಫರ್ ಲೆಟರ್ ಕೊಡುವುದಾಗಿ ಕರೆಸಿಕೊಂಡು ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಎಸಗಿದ್ದರು. ಅದನ್ನು ವೀಡಿಯೊ ಮಾಡಿಟ್ಟುಕೊಂಡು ಪದೇ ಪದೆ ಕರೆಸಿ ಬಟ್ಟೆಬಿಚ್ಚುವಂತೆ ಒತ್ತಾಯ ಮಾಡಿದ್ದರು. ವೀಡಿಯೊ ಇಟ್ಟುಕೊಂಡು ವೀಡಿಯೊ ಕಾಲ್ ಮಾಡಿ ಬಟ್ಟೆ ಬಿಚ್ಚಿ ತೋರಿಸುವಂತೆ ಬೆದರಿಕೆ ಹಾಕುತ್ತಿದ್ದರು” ಎಂದು ಹೇಳಿಕೆ ನೀಡಿದ್ದಾರೆ.

ಇಬ್ಬರು ಸರ್ಕಾರಿ ಅಧಿಕಾರಿಗಳ ಹೇಳಿಕೆಯ ಮೇಲೆ ಪೊಲೀಸರು ಕಾನೂನು ತಜ್ಞರ ಮೊರೆ ಹೋಗಿದ್ದಾರೆ. ಸಂತ್ರಸ್ತ ಮಹಿಳೆಯರ ಹೇಳಿಕೆಯನ್ನು ಪ್ರತ್ಯೇಕ ಎಫ್ಐಆರ್‌ನಲ್ಲಿ ದಾಖಲಿಸಬೇಕೇ, ಅಥವಾ ಹಳೆಯ ಎಫ್ಐಆರ್‌ಗೆ ಸೇರಿಸಬೇಕೆ ಎಂದು ಕಾನೂನು ತಜ್ಞರ ಜೊತೆ ಚರ್ಚೆ ನಡೆಸಲಾಗುತ್ತಿದೆ.

ಮೊದಲಿಗೆ, ಈ ವಿಚಾರದಲ್ಲಿ ನಮ್ಮನ್ನ ಎಳೆಯಬೇಡಿ ಎಂದು ಮಹಿಳೆಯರು ಹೇಳಿದ್ದರು. ತಾವು ಮದುವೆಯಾಗಿ ಸಂಸಾರದೊಂದಿಗೆ ಇದ್ದು, ತಮ್ಮನ್ನು ಅನಗತ್ಯವಾಗಿ ಪ್ರಕರಣದಲ್ಲಿ ತನಿಖೆ, ವಿಚಾರಣೆಗಾಗಿ ಕರೆಯುವುದರಿಂದ ಕುಟುಂಬದ ಶಾಂತಿ, ಮನಶ್ಶಾಂತಿ ಕೆಡಲಿದೆ. ಸಾಮಾಜಿಕವಾಗಿಯೂ ಕೆಟ್ಟ ಪರಿಸ್ಥಿತಿ ಎದುರಿಸಲಿದ್ದೇವೆ ಎಂದು ಸಂತ್ರಸ್ತೆಯರು ಆತಂಕ ತೋಡಿಕೊಂಡಿದ್ದರು. ಕೆಲವರು ರಜೆ ಪಡೆದು ತನಿಖೆಯಿಂದ ದೂರ ಉಳಿದಿದ್ದರು.

ಎಸ್‌ಐಟಿ ಇವರ ಮನವೊಲಿಸಲು ಪ್ರಯತ್ನಿಸಿತ್ತು. ಇದೀಗ ಒತ್ತಡಕ್ಕೆ ಮಣಿದು ಎಸ್ಐಟಿ ಮುಂದೆ ಹೇಳಿಕೆ ಕೊಟ್ಟರೇ ಎಂಬ ಅನುಮಾನವೂ ಮೂಡಿದೆ.

ಪ್ರಜ್ವಲ್‌ ರೇವಣ್ಣ ಮೇಲೆ ಸುಳ್ಳು ಆರೋಪ ನೀಡಲು ಒತ್ತಡ: ಮಹಿಳೆ ದೂರು

ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna case) ವಿರುದ್ಧ ಸುಳ್ಳು ಕೇಸ್ (Fake case) ಹಾಕಲು ತನಗೆ ಒತ್ತಾಯಿಸಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (National Commission for Women) ಮಹಿಳೆಯೊಬ್ಬರು ದೂರು ನೀಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD revanna jailed) ಅವರ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ ಎಂದು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ದೂರು ಮಹತ್ವ ಪಡೆದುಕೊಂಡಿದೆ. ಸೂಕ್ತ ಭದ್ರತೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ನನಗೆ ಒತ್ತಡ ಹಾಕಲಾಗುತ್ತಿದೆ. ಮೂವರು ಸಿವಿಲ್ ಡ್ರೆಸ್‌ನಲ್ಲಿ ಬಂದವರು ಒತ್ತಡ ಹಾಕಿದ್ದು, ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

ಮಹಿಳೆ ಪತ್ರ ಬರೆದಿರುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಮಾಹಿತಿ ನೀಡಿದೆ. ಹಾಸನ ಮೂಲದ ಮಹಿಳೆ ಪತ್ರ ಬರೆದಿದ್ದು, ಪತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮಾಹಿತಿ ನೀಡಲಾಗಿದೆ. ದೂರಿನ ಪ್ರತಿ ಹಾಗೂ ಸೂಕ್ತ ಭದ್ರತೆಗೆ ಮನವಿ ಮಾಡಲಾಗಿದೆ.

ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಗೆ ದೂರು ನೀಡುವಂತೆ ಒತ್ತಡ ಹಾಕಲಾಗ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆಯೋಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಇಂದು ಮತ್ತೆ ಪತ್ರ ಬರೆಯುತ್ತೇವೆ. ಆಯೋಗದ ಅಧಿಕಾರಿಗಳು ಪತ್ರ ಬರೆದ ಮಹಿಳೆಯನ್ನು ಭೇಟಿ ಮಾಡುತ್ತೇವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

ವಕೀಲ ದೇವರಾಜೇಗೌಡ ಮೇಲೂ ಲೈಂಗಿಕ ದೌರ್ಜನ್ಯ ದೂರು

ಪೆನ್ ಡ್ರೈವ್ ಪ್ರಕರಣದಲ್ಲಿ (Prajwal Revanna Case) ಹೋರಾಟ ನಡೆಸುತ್ತಿದ್ದ ವಕೀಲ ದೇವರಾಜೇಗೌಡ (Devaraje Gowda) ವಿರುದ್ದ ಎಫ್ಐಆರ್ ದಾಖಲಾಗಿದೆ. ಮಹಿಳೆಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಹತ್ತು ತಿಂಗಳ ಹಿಂದೆ ಪರಿಚಯವಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಪತಿಯು ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ವಾಟ್ಸ್​ಆ್ಯಪ್​ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪ ದೇವರಾಜ್ ವಿರುದ್ಧ ಕೇಳಿ ಬಂದಿದೆ. ಅದೇ ರೀತಿ ಬಳಿಕ ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪವೂ ಕೇಳಿ ಬಂದಿದೆ.

ಮಹಿಳೆಗೆ ಫೋನ್ ಮಾಡಿ ತಾವು ಜೊತೆಯಲ್ಲಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡೋದಾಗಿ ಬೆದರಿಕೆ ಹಾಕಿದ ಆರೋಪವೂ ದಾಖಲಾಗಿದೆ. ಅದೇ ರೀತಿ ಮಹಿಳೆಗೆ ವಿಡಿಯೋ ಕಾಲ್‌ ಮಾಡಿ‌ ಖಾಸಗಿ ಅಂಗಗಳನ್ನು ಪ್ರದರ್ಶನದ ಮಾಡಿರುವ ಆರೋಪವೂ ದಾಖಲಾಗಿದೆ.

ತಾನು ಹೇಳಿದ ಹಾಗೆ ಕೇಳಬೇಕು.ಇಲ್ಲದೇ ಹೋದರೆ ಪತಿಯ ಜೀವಕ್ಕೆ ಪಾಯ ತಂದೊಡ್ಡುವುದಾಗಿ ದೇವರಾಜೇಗೌಡ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ತನ್ನ ಬೆಂಬಲಿಗರನ್ನು ಕಳುಹಿಸಿ ಜೀವ ಬೆದರಿಕೆ ಹಾಕಿದ ಅರೋಪವೂ ಕೇಳಿ ಬಂದಿದೆ. ಹಲವಾರು ಆರೋಪಗಳ ಮೇಲೆ ದೂರು ದಾಖಲಾಗಿದೆ. ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Continue Reading

ಪ್ರಮುಖ ಸುದ್ದಿ

Sanjiv Goenka: ರಾಹುಲ್‌ಗೆ ಬೈದ ಗೋಯೆಂಕಾ; ಈ ಹಿಂದೆ ಧೋನಿಯನ್ನೇ ಕ್ಯಾಪ್ಟನ್ಸಿಯಿಂದ ತೆಗೆದಿದ್ದರು!

Sanjiv Goenka: ಪ್ರಸಕ್ತ ಐಪಿಎಲ್‌ ಟೂರ್ನಿಯಲ್ಲಿ ಸಂಜೀವ್‌ ಗೋಯೆಂಕಾ ಮಾಲೀಕತ್ವದ ಎಲ್‌ಎಸ್‌ಜಿಯು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಅದರಲ್ಲೂ ಕಳೆದ ಪಂದ್ಯದಲ್ಲಿ ಎಸ್‌ಆರ್‌ಎಚ್‌ ವಿರುದ್ಧ ಎಲ್‌ಎಸ್‌ಜಿ ಹೀನಾಯವಾಗಿ ಸೋತ ಬಳಿಕ ನಾಯಕ ರಾಹುಲ್‌ ಅವರಿಗೆ ಬೈದಿದ್ದಾರೆ. ಈ ಕುರಿತು ಗೋಯೆಂಕಾ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ತುಸು ಮುಂಗೋಪಿಯಾಗಿರುವ ಸಂಜೀವ್‌ ಗೋಯೆಂಕಾ ಅವರು 2017ರಲ್ಲೂ ಧೋನಿ ಅವರನ್ನೇ ನಾಯಕತ್ವದಿಂದ ವಜಾಗೊಳಿಸಿದ್ದರು.

VISTARANEWS.COM


on

Sanjiv Goenka
Koo

ನವದೆಹಲಿ: ಸನ್‌ ರೈಸರ್ಸ್‌ ಹೈದರಾಬಾದ್‌ (Sun Risers Hyderabad) ತಂಡದ ವಿರುದ್ಧ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ಮಹತ್ವದ ಪಂದ್ಯದಲ್ಲಿ ಹೀನಾಯವಾಗಿ ಸೋಲುಂಡ ಬಳಿಕ ಎಲ್‌ಎಸ್‌ಜಿ ಮಾಲೀಕ ಸಂಜೀವ್‌ ಗೋಯೆಂಕಾ (Sanjiv Goenka) ಅವರು ನಾಯಕ ಕೆ.ಎಲ್.ರಾಹುಲ್‌ (KL Rahul) ಜತೆ ಬಹಿರಂಗವಾಗಿಯೇ ವಾಗ್ವಾದ ನಡೆಸಿದ, ಟೀಕಿಸಿದ ವಿಡಿಯೊ ವೈರಲ್‌ ಆಗಿದೆ. ಅಷ್ಟೇ ಅಲ್ಲ, ಕೆ.ಎಲ್‌.ರಾಹುಲ್‌ ಅವರನ್ನು ಎಲ್‌ಎಸ್‌ಜಿ ನಾಯಕತ್ವದಿಂದ ವಜಾಗೊಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ಸಂಜೀವ್‌ ಗೋಯೆಂಕಾ, 7 ವರ್ಷದ ಹಿಂದೆ ಮಹೇಂದ್ರ ಸಿಂಗ್‌ ಧೋನಿ (Mahendra Singh Dhoni) ಅವರನ್ನೇ ನಾಯಕತ್ವದಿಂದ ವಜಾಗೊಳಿಸಿದ್ದರು. ಧೋನಿ ನಾಯಕತ್ವವನ್ನೇ ಪ್ರಶ್ನಿಸಿ ಅವರು ಇಂತಹ ತೀರ್ಮಾನ ತೆಗೆದುಕೊಂಡಿದ್ದರು.

ಹೌದು, 2017ರಲ್ಲಿ ಸಂಜೀವ್‌ ಗೋಯೆಂಕಾ ಅವರು ರೈಸಿಂಗ್‌ ಪುಣೆ ಸೂಪರ್‌ಜೈಂಟ್ಸ್‌ (RPS) ತಂಡದ ಮಾಲೀಕರಾಗಿದ್ದರು. ಅವರು ಇದೇ ಆವೃತ್ತಿಯ ಐಪಿಎಲ್‌ನಲ್ಲಿ ಧೋನಿ ಅವರನ್ನು ನಾಯಕತ್ವದಿಂದ ವಜಾಗೊಳಿಸಿ ಸ್ಟೀವ್‌ ಸ್ಮಿತ್‌ ಅವರನ್ನು ಆರ್‌ಪಿಎಸ್‌ ನಾಯಕನನ್ನಾಗಿ ಘೋಷಿಸಿದರು. 2016ನೇ ಆವೃತ್ತಿಯ ಕೊನೆಗೆ ಧೋನಿ ನಾಯಕತ್ವದಲ್ಲಿ ಆರ್‌ಪಿಎಸ್‌ 7ನೇ ಸ್ಥಾನ ಪಡೆದ ಕಾರಣದಿಂದಾಗಿ ಗೋಯೆಂಕಾ ಅವರು ಧೋನಿ ಅವರನ್ನು ಮುಂದಿನ ಆವೃತ್ತಿಯಲ್ಲಿ ನಾಯಕತ್ವದಿಂದ ವಜಾಗೊಳಿಸಿದ್ದರು.

ಸಂಜೀವ್‌ ಗೋಯೆಂಕಾ ಅವರು 2017ರಲ್ಲಿ ಸ್ಟೀವ್‌ ಸ್ಮಿತ್‌ ಅವರಿಗೆ ನಾಯಕತ್ವ ನೀಡಿದ್ದು ಭಾರಿ ಚರ್ಚೆಗೆ ಕಾರಣವಾಗಿತ್ತು. ಮಹೇಂದ್ರ ಸಿಂಗ್‌ ಧೋನಿ ಅಭಿಮಾನಿಗಳು ಇವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ, 2017ರಲ್ಲಿ ಸ್ಟೀವ್‌ ಸ್ಮಿತ್‌ ನಾಯಕತ್ವದಲ್ಲಿ ಆರ್‌ಪಿಎಸ್‌ ತಂಡವು ಫೈನಲ್‌ ತಲುಪಿತ್ತು. ಆದರೆ, ಫೈನಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ಆರ್‌ಪಿಎಸ್‌ ಕೇವಲ ಒಂದು ರನ್‌ನಿಂದ ಸೋತು ರನ್ನರ್‌ ಸ್ಥಾನಕ್ಕೆ ತೃಪ್ತಿಕೊಳ್ಳಬೇಕಾಯಿತು. ಸಿಎಸ್‌ಕೆ ಬ್ಯಾನ್‌ ಆದ ಕಾರಣ 2016, 2017ರಲ್ಲಿ ಆರ್‌ಪಿಎಸ್‌ ಪರವಾಗಿ ಆಡಿದ್ದ ಧೋನಿ, 2018ರಲ್ಲಿ ಸಿಎಸ್‌ಕೆಗೆ ಮರಳಿದರು. ಮಹತ್ವದ ವಿಚಾರ ಎಂದರೆ, ಧೋನಿ ನಾಯಕತ್ವದಲ್ಲಿ 2018ರಿಂದ 2023ರ ಅವಧಿಯಲ್ಲಿ ಸಿಎಸ್‌ಕೆ ಮೂರು ಬಾರಿ ಚಾಂಪಿಯನ್‌ ಆಯಿತು.

ಪ್ರಸಕ್ತ ಐಪಿಎಲ್‌ ಟೂರ್ನಿಯಲ್ಲಿ ಸಂಜೀವ್‌ ಗೋಯೆಂಕಾ ಮಾಲೀಕತ್ವದ ಎಲ್‌ಎಸ್‌ಜಿಯು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಅದರಲ್ಲೂ ಕಳೆದ ಪಂದ್ಯದಲ್ಲಿ ಎಸ್‌ಆರ್‌ಎಚ್‌ ವಿರುದ್ಧ ಎಲ್‌ಎಸ್‌ಜಿ ಹೀನಾಯವಾಗಿ ಸೋತ ಬಳಿಕ ನಾಯಕ ರಾಹುಲ್‌ ಅವರಿಗೆ ಬೈದಿದ್ದಾರೆ. ಈ ಕುರಿತು ಗೋಯೆಂಕಾ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇಷ್ಟಾದರೂ, ಮೊಂಡುತನ ಬಿಡದ ಗೋಯೆಂಕಾ, ಪ್ರಸಕ್ತ ಸೀಸನ್‌ನ ಕೊನೆಯ ಎರಡು ಪಂದ್ಯಗಳಿಗೆ ರಾಹುಲ್‌ ಬದಲಿಗೆ ನಿಕೋಲಸ್‌ ಪೂರನ್‌ ಅವರಿಗೆ ನಾಯಕತ್ವ ವಹಿಸಲಿದ್ದಾರೆ ಎನ್ನಲಾಗುತ್ತಿದೆ. 2025ರಲ್ಲೂ ಬೇರೆ ನಾಯಕನನ್ನು ನೇಮಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Viral Video: ಪಂದ್ಯ ಸೋತ ಸಿಟ್ಟಿನಲ್ಲಿ ರಾಹುಲ್​ಗೆ ಮೈದಾನದಲ್ಲೇ ಬೈದ ಲಕ್ನೋ ತಂಡದ ಮಾಲಿಕ

Continue Reading

ಐಪಿಎಲ್ 2024

Virat Kohli: ಮೈದಾನದಲ್ಲೇ ರುಸ್ಸೊ AK 47ಗೆ ಕಲಾಶ್‌ನಿಕಾವೋ ಗನ್ ತೆಗೆದ ಕೊಹ್ಲಿ; ವಿಡಿಯೊ ನೋಡಿ

Virat Kohli: ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ರೀಲಿ ರುಸ್ಸೊ ಅವರು ಗನ್‌ ಶಾಟ್‌ ರೀತಿಯ ಭಂಗಿ ಮೂಲಕ ಸಂಭ್ರಮಾಚರಿಸಿದರು. ಆದರೆ, ಅರ್ಧಶತಕದ ಬಳಿಕ ಕರಣ್‌ ಶರ್ಮಾ ಎಸೆತದಲ್ಲಿ ವಿಲ್‌ ಜಾಕ್ಸ್‌ಗೆ ಕ್ಯಾಚಿತ್ತು ರೀಲಿ ರುಸ್ಸೋ ಔಟಾದರು. ರುಸ್ಸೋ ಔಟಾಗುತ್ತಲೇ ವಿರಾಟ್‌ ಕೊಹ್ಲಿ ಅವರೂ ಗನ್‌ನಿಂದ ಶೂಟ್‌ ಮಾಡುವ ರೀತಿ ಸಂಭ್ರಮಿಸುವ ಮೂಲಕ ಅವರಿಗೆ ತಿರುಗೇಟು ನೀಡಿದರು.

VISTARANEWS.COM


on

Virat Kohli
Koo

ಧರ್ಮಶಾಲಾ: ಮೈದಾನದಲ್ಲಿ ವಿರಾಟ್‌ ಕೊಹ್ಲಿ (Virat Kohli) ಇರುವುದೇ ಹಾಗೆ. ಅದು ಗೌತಮ್‌ ಗಂಭೀರ್‌ ಇರಲಿ, ಸ್ಟ್ರೈಕ್‌ ರೇಟ್‌ ಕುರಿತು ಕಾಮೆಂಟರಿ ನೀಡಿದ ಸುನೀಲ್‌ ಗವಾಸ್ಕರ್ ಇರಲಿ, ಹೆಲ್ಮೆಟ್‌ ಬಿಸಾಡಿದ ಆವೇಶ್‌ ಖಾನ್‌ ಇರಲಿ, ನವೀನ್‌ ಹುಲ್‌ ಹಕ್‌ ಇರಲಿ. ಅವರು ಮೈದಾನದಲ್ಲಿಯೇ ತಿರುಗೇಟು ನೀಡದೆ ಬಿಡುವುದಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಪ್ರಸಕ್ತ ಐಪಿಎಲ್‌ ಆವೃತ್ತಿಯ (IPL 2024) ಪಂಜಾಬ್‌ ಕಿಂಗ್ಸ್‌ (PBKS) ವಿರುದ್ಧ ನಡೆದ ಐಪಿಎಲ್‌ ಪಂದ್ಯದಲ್ಲಿ ರೀಲಿ ರುಸ್ಸೊ (Rilee Rossouw) ಅವರಿಗೆ ಅವರದ್ದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ.

ಆರ್‌ಸಿಬಿ ನೀಡಿದ 242 ರನ್‌ಗಳ ಬೃಹತ್‌ ಮೊತ್ತ ಬೆನ್ನತ್ತುವಾಗ ರೀಲಿ ರುಸ್ಸೊ ಅವರು ಬಿರುಸಿನ ಅರ್ಧಶತಕ ಬಾರಿಸಿದರು. ಅರ್ಧಶತಕ ಬಾರಿಸಿದ ಬಳಿಕ ಅವರು ಗನ್‌ ಶಾಟ್‌ ರೀತಿಯ ಭಂಗಿ ಮೂಲಕ ಸಂಭ್ರಮಾಚರಿಸಿದರು. ಆದರೆ, ಅರ್ಧಶತಕದ ಬಳಿಕ ಕರಣ್‌ ಶರ್ಮಾ ಎಸೆತದಲ್ಲಿ ವಿಲ್‌ ಜಾಕ್ಸ್‌ಗೆ ಕ್ಯಾಚಿತ್ತು ರೀಲಿ ರುಸ್ಸೊ ಔಟಾದರು. ರುಸ್ಸೊ ಔಟಾಗುತ್ತಲೇ ವಿರಾಟ್‌ ಕೊಹ್ಲಿ ಅವರೂ ಗನ್‌ನಿಂದ ಶೂಟ್‌ ಮಾಡುವ ರೀತಿ ಸಂಭ್ರಮಿಸುವ ಮೂಲಕ ಅವರಿಗೆ ತಿರುಗೇಟು ನೀಡಿದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಪಂಜಾಬ್ ತಂಡ ಆರ್​ಸಿಬಿಯನ್ನು ಬ್ಯಾಟ್ ಮಾಡಲು ಆಹ್ವಾನಿಸಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ರೆಡ್ ಆರ್ಮಿ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್​ಗೆ 241 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಪಂಜಾಬ್ ಬಳಗ 17 ಓವರ್​ಗಳಲ್ಲಿ 181 ರನ್​ಗಳಿಗೆ ಆಲ್​ಔಟ್ ಆಯಿತು. ಇದರೊಂದಿಗೆ ಆರ್‌ಸಿಬಿಯು ಸತತ ನಾಲ್ಕನೇ ಜಯ ದಾಖಲಿಸಿತು.

ಕೊಹ್ಲಿಯ ಪ್ರದರ್ಶನ ‘ಕಿಂಗ್’

ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಫಾಫ್​ ಡು ಪ್ಲೆಸಿಸ್​ ಮತ್ತೊಂದು ಬಾರಿ ಕಳಪೆ ಪ್ರದರ್ಶನ ನೀಡಿದರು. 9 ರನ್​ಗೆ ಅವರು ಔಟಾದರು. ಹೀಗಾಗಿ 19 ರನ್​ಗೆ ಒಂದು ವಿಕೆಟ್​ ಕಳೆದುಕೊಂಡ ಆರ್​ಸಿಬಿಗೆ ಸಂಕಷ್ಟ ಶುರುವಾಯಿತು. ಬಳಿಕ ಬಂದ ವಿಲ್​ ಜ್ಯಾಕ್ಸ್​ ಕೂಡ 12 ರನ್​ಗೆ ಸೀಮಿತಗೊಂಡರು. ಆದರೆ, ಮತ್ತೊಂದು ಬದಿಯಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಇನಿಂಗ್ಸ್ ಕಟ್ಟಲು ಆರಂಭಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಇವರಿಗೆ ಜತೆಯಾದ ರಜತ್​ ಪಾಟೀದರ್ ಮತ್ತೊಂದು ವಿಸ್ಫೋಟಕ ಆಟ ಆಡಿದರು. ಅವರು 23 ಎಸೆತಕ್ಕೆ 55 ರನ್ ಬಾರಿಸಿದ್ದ ಕಾರಣ ಆರ್​ಸಿಬಿಯ ರನ್​ ಗಳಿಕೆ ಏರುಗತಿಯಲ್ಲಿ ಸಾಗಿತು.

ವಿರಾಟ್​ ಕೊಹ್ಲಿ ಜತೆ ಮತ್ತೊಂದು ಉತ್ತಮ ಜತೆಯಾಟ ನೀಡಿದ ವಿಲ್ ಜ್ಯಾಕ್ಸ್​ 46 ರನ್​ ಬಾರಿಸಿದರು. ಕೊಹ್ಲಿ 6 ಫೋರ್ ಹಾಗೂ 4 ಸಿಕ್ಸರ್ ಸಮೇತ ಭರ್ಜರಿ ಆಟವಾಡಿ ಶತಕದ ಹಾದಿಯಲ್ಲಿದ್ದರು. ಆದರೆ, ಕೊನೇ ಹಂತದಲ್ಲಿ ರನ್ ಬಾಚುವ ಒತ್ತಡಕ್ಕೆ ಬಿದ್ದ ಅವರು 8 ರನ್​ಗಳಿಂದ ಶತಕ ವಂಚಿತರಾದರು.

ದೊಡ್ಡ ಗುರಿಯನ್ನು ಬೆನ್ನಟ್ಟಲು ಹೊರಟ ಪಂಜಾಬ್ ಹೀನಾಯ ಪ್ರದರ್ಶನ ನೀಡಿತು. ಪ್ರಭ್​ ಸಿಮ್ರಾನ್ ಸಿಂಗ್ 6 ರನ್​ಗೆ ಜಾಗ ಖಾಲಿ ಮಾಡಿದರು. ಬೈರ್​ಸ್ಟೋವ್ 27 ರನ್​ ಬಾರಿಸಿ ಔಟಾದರು. ಆದರೆ, ಮೂರನೇ ಕ್ರಮಾಂಕದಲ್ಲಿ ಆಡಲು ಇಳಿದ ರೀಲಿ ರೊಸ್ಸೊ 27 ಎಸೆತಕ್ಕೆ 61 ರನ್ ಬಾರಿಸಿ ಗೆಲುವಿನ ಹುಮ್ಮಸ್ಸು ತಂದರು. ಆದರೆ, ತಲೆಗೆ ಚೆಂಡು ಬಡಿಸಿಕೊಂಡ ಮರು ಎಸೆತದಲ್ಲಿಯೇ ಸ್ಪಿನ್ನರ್​ ಕರಣ್ ಶರ್ಮಾ ಬೌಲಿಂಗ್​ನಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಅಲ್ಲಿಂ ದ ಪಂಜಾಬ್ ಇನಿಂಗ್ಸ್ ಕುಸಿಯಿತು. ನಡುವೆ ಶಶಾಂಕ್​ ಶರ್ಮಾ 37 ರನ್ ಬಾರಿಸಿದರು. ಆದರೆ, ಕೊಹ್ಲಿ ಮಾಡಿದ ಅದ್ಭುತ ರನ್​ಔಟ್​ಗೆ ಅವರು ಬಲಿಯಾದರು. ಸ್ಯಾಮ್​ ಕರ್ರನ್​ 22 ರನ್​ ಕೊಡುಗೆ ಕೊಟ್ಟರು. ಆರ್​ಸಿಬಿ ಪರ ಮೊಹಮ್ಮಸ್ ಸಿರಾಜ್​ 3 ವಿಕೆಟ್​, ಸ್ವಪ್ನಿಲ್ ಸಿಂಗ್, ಲಾಕಿ ಫರ್ಗ್ಯೂಸನ್​ ಹಾಗೂ ಕರಣ್ ಶರ್ಮಾ ತಲಾ 1 ವಿಕೆಟ್ ಉರುಳಿಸಿದರು.

ಇದನ್ನೂ ಓದಿ: IPL 2024 : ಆರ್​ಸಿಬಿಗೆ ಐದನೇ ವಿಜಯ, ಪಂಜಾಬ್​ ವಿರುದ್ಧ 60 ರನ್ ಭರ್ಜರಿ ಗೆಲುವು

Continue Reading
Advertisement
murder case kalaburagi
ಕಲಬುರಗಿ11 mins ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

gold rate today
ಚಿನ್ನದ ದರ25 mins ago

Gold Rate Today: ಅಕ್ಷಯ ತದಿಗೆಯಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ; ಬಂಗಾರ ಕೊಳ್ಳಲು ಮುಗಿಬಿದ್ದ ಜನ; ದರಗಳು ಹೀಗಿವೆ

Yogi Adityanath
ದೇಶ25 mins ago

Yogi Adityanath: ʼಅಕ್ಬರ್‌ಪುರʼದ ಮೇಲೆ ಯೋಗಿ ಆದಿತ್ಯನಾಥ್ ಮಾಸ್ಟರ್‌ ಸ್ಟ್ರೋಕ್‌; ಹೆಸರು ಬದಲಾವಣೆಯ ಸೂಚನೆ

mani shankar iyer
ದೇಶ29 mins ago

Mani Shankar Aiyar: ಪಾಕಿಸ್ತಾನವನ್ನು ಕೆಣಕಿದರೆ ಅಣು ಬಾಂಬ್ ಬೀಳಬಹುದು ಹುಷಾರ್! ಮೋದಿಗೆ ಮಣಿಶಂಕರ್ ಅಯ್ಯರ್ ಎಚ್ಚರಿಕೆ!

ICMR Dietary Guidelines
ಆರೋಗ್ಯ42 mins ago

ICMR Dietary Guidelines: ಬೊಜ್ಜು ತಡೆಯಲು ಏನು ಮಾಡಬೇಕು? ಮಾರ್ಗಸೂಚಿ ಬಿಡುಗಡೆ ಮಾಡಿದ ಸಂಶೋಧನಾ ಸಂಸ್ಥೆ

Murder Case
ಬೆಂಗಳೂರು46 mins ago

Murder case : ಪ್ರೀತಿ ವಿಷ್ಯಕ್ಕೆ ಬೀದಿ ಹೆಣವಾದ! ಮಗನ ಡೆಡ್‌ಬಾಡಿ ನೋಡಿ ಮೂರ್ಛೆ ಹೋದ ತಾಯಿ

pm narendra modi basava jayanti 2024
ಪ್ರಮುಖ ಸುದ್ದಿ1 hour ago

PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

Sharia law
ವಿದೇಶ1 hour ago

Sharia Law: “ಅಮೆರಿಕನ್ನರ ಮೇಲೂ ಷರಿಯಾ ಕಾನೂನು ಹೇರಲಾಗುತ್ತದೆ…”; ಸಂಚಲನ ಮೂಡಿಸಿದ ವೈರಲ್‌ ವಿಡಿಯೋ

Rain Effect In karnataka
ಮಳೆ2 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

NEET-UG
ದೇಶ2 hours ago

NEET-UG: ನೀಟ್‌ ಪರೀಕ್ಷೆ ವೇಳೆ ವಂಚನೆ; 10 ಲಕ್ಷ ರೂ.ಗೆ ಬೇಡಿಕೆ ಇಟ್ಟ ಶಿಕ್ಷಕ ಸೇರಿ ಮೂವರ ವಿರುದ್ಧ ಬಿತ್ತು ಕೇಸು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect In karnataka
ಮಳೆ2 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ8 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ15 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ16 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ17 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ23 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ24 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು1 day ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ1 day ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

ಟ್ರೆಂಡಿಂಗ್‌