Sheikh Hasina : ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್​ ದಾಖಲಿಸಿದ ಕೋರ್ಟ್​​ - Vistara News

ಪ್ರಮುಖ ಸುದ್ದಿ

Sheikh Hasina : ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್​ ದಾಖಲಿಸಿದ ಕೋರ್ಟ್​​

Sheikh Hasina : ಬಾಂಗ್ಲಾದೇಶದ ಕಾನೂನಿನ ಅಡಿಯಲ್ಲಿ ಕ್ರಿಮಿನಲ್ ತನಿಖೆಯಡಿ “ಆರೋಪಿಗಳ ವಿರುದ್ಧದ ಕೊಲೆ ಪ್ರಕರಣವನ್ನು” ಸ್ವೀಕರಿಸುವಂತೆ ಢಾಕಾ ಮೆಟ್ರೋಪಾಲಿಟನ್ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ ಎಂದು ಅವರು ವಿವರಿಸಿದ್ದಾರೆ. ಮಿಯಾ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಹಸೀನಾ ಅವರ ಮಾಜಿ ಗೃಹ ಸಚಿವ ಅಸಾದುಝಮಾನ್ ಖಾನ್ ಮತ್ತು ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಪ್ರಧಾನ ಕಾರ್ಯದರ್ಶಿ ಒಬೈದುಲ್ ಖಾದರ್ ಅವರ ಹೆಸರೂ ಇದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ಕಳೆದ ತಿಂಗಳು ಬಾಂಗ್ಲಾದೇಶದಲ್ಲಿ ನಡೆದ ಪ್ರತಭಟನೆ ವೇಳೆ ವ್ಯಕ್ತಿಯೊಬ್ಬನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ನ್ಯಾಯಾಲಯವು ಮಾಜಿ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಮತ್ತು ಅವರ ಆಡಳಿತದ ಆರು ಉನ್ನತ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. 76 ವರ್ಷದ ಹಸೀನಾ ಅವರು ಒಂದು ವಾರದ ಹಿಂದೆ ಹೆಲಿಕಾಪ್ಟರ್ ಮೂಲಕ ಭಾರತಕ್ಕೆ ಬಂದಿದ್ದರು. ದೇಶದಲ್ಲಿ ಉಂಟಾಗಿದ್ದ ಅಶಾಂತಿಯಿಂದ ತಮಗೆ ಆಗಬಹುದಾಗಿದ್ದ ಅಪಾಯವನ್ನು ಅರಿತು ಅವರು ಪಲಾಯನ ಮಾಡಿದ್ದರು.

ಅದಕ್ಕಿಂತ ಮೊದಲು ಅವರ ವಿರುದ್ಧ ಪ್ರತಿಭಟನೆ ಹಾಗೂ ಕ್ಷೋಭೆಯಲ್ಲಿ 450ಕ್ಕೂ ಹೆಚ್ಚು ಜನರು ಹತ್ಯೆಯಾಗಿದ್ದರು. ಶೇಖ್ ಹಸೀನಾ ಮತ್ತು ಇತರ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವಕೀಲ ಮಾಮುನ್ ಮಿಯಾ ಹೇಳಿದ್ದಾರೆ.

ಬಾಂಗ್ಲಾದೇಶದ ಕಾನೂನಿನ ಅಡಿಯಲ್ಲಿ ಕ್ರಿಮಿನಲ್ ತನಿಖೆಯಡಿ “ಆರೋಪಿಗಳ ವಿರುದ್ಧದ ಕೊಲೆ ಪ್ರಕರಣವನ್ನು” ಸ್ವೀಕರಿಸುವಂತೆ ಢಾಕಾ ಮೆಟ್ರೋಪಾಲಿಟನ್ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ ಎಂದು ಅವರು ವಿವರಿಸಿದ್ದಾರೆ. ಮಿಯಾ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಹಸೀನಾ ಅವರ ಮಾಜಿ ಗೃಹ ಸಚಿವ ಅಸಾದುಝಮಾನ್ ಖಾನ್ ಮತ್ತು ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಪ್ರಧಾನ ಕಾರ್ಯದರ್ಶಿ ಒಬೈದುಲ್ ಖಾದರ್ ಅವರ ಹೆಸರೂ ಇದೆ.

ಹಸೀನಾ ಅವರ ಸರ್ಕಾರ ನೇಮಿಸಿದ ನಾಲ್ವರು ಉನ್ನತ ಪೊಲೀಸ್ ಅಧಿಕಾರಿಗಳ ಹೆಸರುಗಳನ್ನು ಸಹ ಅದು ಪರಿಗಣಿಸಿದೆ. ಅವರೀಗ ತಮ್ಮ ಹುದ್ದೆಗಳನ್ನು ತೊರೆದಿದ್ದಾರೆ. ಪ್ರತಿಭಟನೆಯನ್ನು ಹಿಂಸಾತ್ಮಕವಾಗಿ ಹತ್ತಿಕ್ಕುತ್ತಿದ್ದ ಪೊಲೀಸರಿಂದ ಜುಲೈ 19 ರಂದು ಗುಂಡಿಕ್ಕಿ ಕೊಲ್ಲಲ್ಪಟ್ಟ ಕಿರಾಣಿ ಅಂಗಡಿ ಮಾಲೀಕರಾದ ಮಹಿಳೆಯೊಬ್ಬರ ಸಾವಿಗೆ ಏಳು ಮಂದಿ ಕಾರಣ ಎಂದು ಈ ಪ್ರಕರಣದಲ್ಲಿ ಆರೋಪಿಸಲಾಗಿದೆ.

ಗುಂಡಿನ ದಾಳಿ ನಡೆದ ಪ್ರದೇಶದ ನಿವಾಸಿ ಮತ್ತು ಸಂತ್ರಸ್ತೆಯ ಹಿತೈಷಿ ಅಮೀರ್ ಹಮ್ಜಾ ಶತಿಲ್ ಅವರು ಈ ಪ್ರಕರಣ ದಾಖಲಿಸಿದ್ದಾರೆ.

ನಾವು ಇದನ್ನು ಅಲ್ಲಗಳೆಯುವುದಿಲ್ಲ’

ಹಸೀನಾ ಅವರ ಸರ್ಕಾರವು ಸಾವಿರಾರು ರಾಜಕೀಯ ವಿರೋಧಿಗಳನ್ನು ಕಾನೂನುಬಾಹಿರವಾಗಿ ಹತ್ಯೆ ಮಾಡುವುದು ಸೇರಿದಂತೆ ವ್ಯಾಪಕ ಮಾನವ ಹಕ್ಕುಗಳ ಉಲ್ಲಂಘನೆಯ ಆರೋಪವನ್ನು ಎದುರಿಸುತ್ತಿದೆ. ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನುಸ್ ಅವರು ಪ್ರಜಾಪ್ರಭುತ್ವ ಸುಧಾರಣೆಗಳನ್ನು ಮುನ್ನಡೆಸುವ ದೊಡ್ಡ ಸವಾಲನ್ನು ಎದುರಿಸುತ್ತಿದ್ದು, ಅವರು ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾ ಹಿಂದೂಗಳ ಪರ ಸೋಶಿಯಲ್‌ ಮೀಡಿಯಾ ಅಭಿಯಾನ; All eyes on hindus ಭಾರೀ ಟ್ರೆಂಡ್!

ಮೈಕ್ರೋಫೈನಾನ್ಸ್​​​ ಕ್ಷೇತ್ರದಲ್ಲಿ ಮಾಡಿದ ಕೆಲಸಕ್ಕಾಗಿ 84 ವರ್ಷದ ಯೂನುಸ್​ ಅವರು 2006ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪುರಸ್ಕೃತರಾಗಿದ್ದಾರೆ. ಲಕ್ಷಾಂತರ ಬಾಂಗ್ಲಾದೇಶಿಗಳನ್ನು ಬಡತನದಿಂದ ಹೊರಬರಲು ಸಹಾಯ ಮಾಡಿದ ಕೀರ್ತಿಗೆ ಅವರು ಪಾತ್ರರಾಗಿದ್ದಾರೆ.

ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಸೀನಾ ಅವರ ಅವಾಮಿ ಲೀಗ್ ಅನ್ನು ನಿಷೇಧಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಹುಸೇನ್ ಸೋಮವಾರ ಹೇಳಿದ್ದಾರೆ. ಪಕ್ಷವು ಬಾಂಗ್ಲಾದೇಶಕ್ಕೆ ಅನೇಕ ಕೊಡುಗೆಗಳನ್ನು ನೀಡಿದೆ. ನಾವು ಇದನ್ನು ನಿರಾಕರಿಸುವುದಿಲ್ಲ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Muda Scam: ಸಿಎಂ ವಿರುದ್ಧದ ಸ್ನೇಹಮಯಿ ಕೃಷ್ಣ ಅರ್ಜಿ ಆದೇಶ ಆ.20ಕ್ಕೆ ಕಾಯ್ದಿರಿಸಿದ ಕೋರ್ಟ್‌; ಅಬ್ರಹಾಂ ಅರ್ಜಿ ವಿಚಾರಣೆ ಮುಂದೂಡಿಕೆ

Muda Scam: ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ಟ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಎರಡು ಖಾಸಗಿ ದೂರಿನ ಅರ್ಜಿಗಳ ವಿಚಾರಣೆ ನಡೆಸಿದ್ದಾರೆ. ಸ್ನೇಹಮಯಿ ಕೃಷ್ಣ ದಾಖಲಿಸಿದ್ದ ಅರ್ಜಿಯ ಆದೇಶ ಆ.20ಕ್ಕೆ ಕಾಯ್ದಿರಿಸಿದ್ದು, ಟಿ.ಜೆ. ಅಬ್ರಹಾಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಆ.21ಕ್ಕೆ ಮುಂದೂಡಿದ್ದಾರೆ.

VISTARANEWS.COM


on

Muda Scam
Koo

ಬೆಂಗಳೂರು: ಮುಡಾ ಹಗರಣಕ್ಕೆ (Muda Scam) ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ದಾಖಲಿಸಿದ್ದ ಖಾಸಗಿ ದೂರಿನ ಅರ್ಜಿ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆ.20ಕ್ಕೆ ಕಾಯ್ದಿರಿಸಿದೆ. ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಸಲ್ಲಿಸಿದ್ದ ಖಾಸಗಿ ಅರ್ಜಿ ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಿದೆ.

ಮುಡಾದಲ್ಲಿ ಕಾನೂನು ಬಾಹಿರವಾಗಿ ನಿವೇಶನ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸುವಂತೆ ಸಲ್ಲಿಕೆಯಾಗಿದ್ದ ಎರಡು ಖಾಸಗಿ ದೂರಿನ ಅರ್ಜಿಗಳನ್ನು ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿದೆ. ಮೊದಲಿಗೆ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ಟ ಅವರು, ದೂರಿನ ಸಂಬಂಧ ಅಂತಿಮ ಆದೇಶವನ್ನು ಆ.20ಕ್ಕೆ ಕಾಯ್ದಿರಿಸಿದರು. ಅದೇ ರೀತಿ ಮಾಹಿತಿ ಆರ್‌ಟಿಐ ಟಿ.ಜೆ.ಅಬ್ರಹಾಂ ದಾಖಲಿಸಿದ್ದ ಅರ್ಜಿ ವಿಚಾರಣೆಯನ್ನು ಆ.21ಕ್ಕೆ ಮುಂದೂಡಿದರು.

ಟಿ.ಜೆ.ಅಬ್ರಹಾಂ ವಾದ ಮಂಡನೆ; ನಕಲಿ ದಾಖಲೆ ಸೃಷ್ಟಿಸಿ ಜಾಗ ಮಾರಾಟ ಆರೋಪ

ಪ್ರಕರಣದಲ್ಲಿ ದೂರುದಾರ ಅಬ್ರಹಾಂ ಅವರೇ ವಾದ ಮಂಡಿಸಿ, ಮೈಸೂರಿನ ಹೊರವಲಯದ ಕೆಸರೆ ಗ್ರಾಮ ಹಾಗೂ ದೇವನೂರು ಗ್ರಾಮಗಳಲ್ಲಿ ನಡೆದಿರುವ ಹಗರಣದ ಬಗ್ಗೆ ಮಾಹಿತಿ ನೀಡಿದರು. ಕೆಸರೆ ಗ್ರಾಮದಲ್ಲಿ ದೇವನೂರು ಬಡವಾಣೆ ನಿರ್ಮಾಣ ಮಾಡಲಾಗಿದೆ. ಆದರೆ, ಅಲ್ಲಿ ಜಮೀನೇ ಇಲ್ಲದಿದ್ದರೂ ದೇವರಾಜ್ ನಕಲಿ‌ ದಾಖಲೆ ಸೃಷ್ಟಿಸಿದ್ದಾನೆ. ನಕಲಿ ದಾಖಲೆಗಳ ಮೂಲಕ‌ ಸೃಷ್ಟಿಸಿದ ಜಾಗವನ್ನು ಮಲ್ಲಿಕಾರ್ಜುನಗೆ ಮಾರಾಟ ಮಾಡಿದ್ದ ಎಂದು ತಿಳಿಸಿದರು.

ಇದನ್ನೂ ಓದಿ | Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ರೆವಿನ್ಯೂ ಲ್ಯಾಂಡ್ ಅನ್ನು ಕನ್ವರ್ಷನ್ ಮಾಡಲಾಗಿದೆ. ಬಳಿಕ 2010ರಲ್ಲಿ ಕಾನೂನು ಬಾಹಿರವಾಗಿ ಗಿಫ್ಟ್ ಡೀಡ್ ಮಾಡಲಾಗಿದೆ. ಅದರ ಫಲಾನುಭವಿ ಸಿದ್ದರಾಮಯ್ಯ ಅವರ ಪತ್ನಿಯಾಗಿದ್ದಾರೆ.
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಬೋಗಸ್ ಕನ್ವರ್ಷನ್ ಆಗಿದೆ. ಜಿಲ್ಲಾಧಿಕಾರಿ ಜಾಗವನ್ನು ಪರಿಶೀಲನೆ ಮಾಡಿ ಕನ್ವರ್ಷನ್ ಮಾಡ್ಡಿದ್ದೇವೆ ಎನ್ನುವುದು ಸುಳ್ಳು. 2010ರಲ್ಲಿ ಪಾರ್ವತಿಯವರಿಗೆ ಕಾನೂನು ಬಾಹಿರವಾಗಿ ದಾನ ನೀಡಲಾಗಿದೆ ಎಂದು ಟಿ‌.ಜೆ. ಅಬ್ರಹಾಂ ತಿಳಿಸಿದ್ದಾರೆ.

2013ರ ಚುನಾವಣೆಯಲ್ಲಿ ಈ ಜಾಗದ ಮಾಹಿತಿಯನ್ನು ಸಿದ್ದರಾಮಯ್ಯ ಮುಚ್ಚಿಟ್ಟಿದ್ದಾರೆ. 2011 ರಿಂದ 2014 ರವರೆಗೆ ಲೋಕಾಯುಕ್ತಕ್ಕೆ ಸಿದ್ದರಾಮಯ್ಯ ನೀಡಿದ್ದ ಮಾಹಿತಿಯಲ್ಲೂ‌ ಮುಚ್ಚಿಡಲಾಗಿದೆ. ಇವರು ಹೇಗೆ ದೇವನೂರು ಬಡಾವಣೆಯನ್ನು ಕೆಸರೆ ಗ್ರಾಮ ಮಾಡುತ್ತಾರೆ. ಹೇಗೆ ಬಡಾವಣೆಯನ್ನು ಕೃಷಿ ಭೂಮಿಯಲ್ಲಿ ಮಾಡುತ್ತಾರೆ? ಆದರೂ ಬಹಳ ಅಭಿವೃದ್ಧಿ ಹೊಂದಿದ ಅರ್ಜಿಯನ್ನು 55 ಕೋಟಿ 80 ಲಕ್ಷ ಬೆಲೆಯ ಸೈಟ್‌ಗಳ ನೀಡಿದ್ದಾರೆ. ಅದು ಕೂಡ ತುಂಬಾ ಡೆವಲಪ್ಮೆಂಟ್ ಆಗಿರುವ ಲೇಔಟ್ ನಲ್ಲಿ ನೀಡ್ತಾರೆ.

ಸಿದ್ದರಾಮಯ್ಯ ಪತ್ನಿಯ ಸ್ವಾಧೀನದಲ್ಲೇ ಇಲ್ಲದ ಜಾಗವನ್ನು ಹೇಗೆ ರಿಲೀಸ್ ಡೀಡ್ ನೀಡಲು ಹೇಗೆ ಸಾಧ್ಯ.? ಪಾರ್ವತಿ ಅವರು ಕ್ಲೈಂ ಮಾಡುವ ರೀತಿ ಕೃಷಿ ಭೂಮಿ ಇರಲೇ ಇಲ್ಲ. ಕೇವಲ ದಾಖಲೆಗಳನ್ನು ಮಾತ್ರ ಸೃಷ್ಟಿ ಮಾಡಿ ಪರಿಹಾರ ಪಡೆದಿದ್ದಾರೆ. ಈ ಸಂಬಂಧ ಮೈಸೂರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿದೆ. ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಖಾಸಗಿ ದೂರು ಸಲ್ಲಿಸಲಾಗಿದೆ. ಭ್ರಷ್ಟಾಚಾರ ಕಾಯಿದೆ 17A ಸಿದ್ದರಾಮಯ್ಯ ಅವರಿಗೆ ಅನ್ವಯ ಆಗಲ್ಲ. ಪಿ.ಸಿ.ಆ್ಯಕ್ಟ್ 19ರ ಅಡಿ ಕಾಗ್ನಿಜೆನ್ಸ್ ತೆಗೆದುಕೊಳ್ಳಲು ಕೋರ್ಟ್‌ಗೆ ಟಿ.ಜೆ.ಅಬ್ರಹಾಂ ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್‌, ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಿತು.

ಏನಿದು ಕೋರ್ಟ್​ ಪ್ರಕರಣ?

ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನಗಳನ್ನು ತಮ್ಮ ಪತ್ನಿಯ ಹೆಸರಿಗೆ ಪಡೆದುಕೊಂಡಿರುವ ಆರೋಪ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸುವುದಕ್ಕೆ ಸೂಚನೆ ನೀಡಬೇಕು ಎಂದು ಕೋರಿ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೈಸೂರಿನ ಮಾಹಿತಿ ಹಕ್ಕು ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು. ಅದರ ವಿಚಾರಣೆ ನಡೆಯುತ್ತಿರುವ ನಡುವೆಯೇ ಬೆಂಗಳೂರಿನ ಮಾಹಿತಿ ಹಕ್ಕು ಕಾರ್ಯಕರ್ತ ಟಿ.ಜೆ. ಅಬ್ರಾಹಂ ಮತ್ತೊಂದು ದೂರು ಸಲ್ಲಿಸಿದ್ದರು.

ಮೂಲ ಜಮೀನಿಗೆ ಮಾಲೀಕರೇ ಇಲ್ಲ. ಆ ಜಮೀನು ಸಿದ್ದರಾಮಯ್ಯ ಸಂಬಂಧಿಕರ ಹೆಸರಿಗೆ ಬಂದಿದೆ. ಅಲ್ಲಿಂದ ಸಿದ್ದರಾಮಯ್ಯ ಪತ್ನಿ ಹೆಸರಿಗೆ ಉಡುಗೊರೆಯಾಗಿ ಬಂದಿದ್ದು, ಅಂತಹ ಜಮೀನಿಗೆ ಬದಲಿ ನಿವೇಶನ ಪಡೆದುಕೊಳ್ಳಲಾಗಿದೆ. ಇಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ | Muda Case : ಪಿಸಿಆರ್​ ಏನೆಂದು ಗೊತ್ತಿಲ್ಲದವರು ಸಿದ್ದರಾಮಯ್ಯ ಪರ ಅರ್ಜಿ ಸಲ್ಲಿಸಿದ್ದೀರಾ? ಸಿಎಂ ಪರ ಅರ್ಜಿ ಸಲ್ಲಿಸಿದವರಿಗೆ ಕೋರ್ಟ್ ತರಾಟೆ

ಮುಡಾದಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿದ್ದಾರೆ ಎಂಬ ಆರೋಪ ಸಂಬಂಧ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು.

Continue Reading

ಪ್ರಮುಖ ಸುದ್ದಿ

Arshad Nadeem : ಲಷ್ಕರ್ ಉಗ್ರನ ಜತೆ ಕಾಣಿಸಿಕೊಂಡ ಪಾಕಿಸ್ತಾನದ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ಅರ್ಷದ್​ ನದೀಮ್​!

Arshad Nadeem : ಪುರುಷರ ಜಾವೆಲಿನ್ ಥ್ರೋ ಫೈನಲ್​ನಲ್ಲಿ ನದೀಮ್ 92.97 ಮೀಟರ್ ಎಸೆದು ಒಲಿಂಪಿಕ್ಸ್​​ ದಾಖಲೆ ನಿರ್ಮಿಸಿದ್ದರು. . 27ರ ಹರೆಯದ ನೀರಜ್ ಚೋಪ್ರಾ 89.35 ಮೀಟರ್ ದೂರ ಎಸೆಯುವ ಮೂಲಕ ಬೆಳ್ಳಿ ಗೆದ್ದಿದ್ದಾರೆ. ಇಬ್ಬರೂ ಕ್ರೀಡಾಪಟುಗಳು ಪರಸ್ಪರ ಉತ್ತಮ ಸ್ನೇಹಿತರು ಎಂಬುದು ಒಲಿಂಪಿಕ್ಸ್​ ಬಳಿಕದ ದೊಡ್ಡ ಹೈಲೈಟ್​

VISTARANEWS.COM


on

Arshad Nadeem
Koo

ಬೆಂಗಳೂರು : ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕವನ್ನು ಗೆದ್ದ ಪಾಕಿಸ್ತಾನದ ಜಾವೆಲಿನ್​ ಎಸೆತಗಾಗ ಅರ್ಷದ್ ನದೀಮ್ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ನಾಯಕ ಹ್ಯಾರಿಸ್ ಧರ್ ಜತೆ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಒಂದು ವರ್ಗದ ಜನರು ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನದೀಮ್ ಅವರು ಒಲಿಂಪಿಕ್ಸ್​​ನಲ್ಲಿ ಚಿನ್ನದ ಪದಕ ಗೆದ್ದು ತನ್ನ ದೇಶದ 32 ವರ್ಷಗಳ ಚಿನ್ನದ ಪದಕ ಬರಗಾಲವನ್ನು ಕೊನೆಗೊಳಿಸಿದ್ದರು. ಆದಾಗ್ಯೂ, ವಿಶ್ವ ಸಂಸ್ಥೆಯೇ ಭಯೋತ್ಪಾದಕ ಸಂಘಟನೆ ಎಂದು ಕರೆದಿರುವ ಲಷ್ಕರ್-ಎ-ತೈಬಾದ ನಾಯಕನ ಜತೆ ಕಾಣಿಸಿಕೊಂಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ಪುರುಷರ ಜಾವೆಲಿನ್ ಥ್ರೋ ಫೈನಲ್​ನಲ್ಲಿ ನದೀಮ್ 92.97 ಮೀಟರ್ ಎಸೆದು ಒಲಿಂಪಿಕ್ಸ್​​ ದಾಖಲೆ ನಿರ್ಮಿಸಿದ್ದರು. . 27ರ ಹರೆಯದ ನೀರಜ್ ಚೋಪ್ರಾ 89.35 ಮೀಟರ್ ದೂರ ಎಸೆಯುವ ಮೂಲಕ ಬೆಳ್ಳಿ ಗೆದ್ದಿದ್ದಾರೆ. ಇಬ್ಬರೂ ಕ್ರೀಡಾಪಟುಗಳು ಪರಸ್ಪರ ಉತ್ತಮ ಸ್ನೇಹಿತರು ಎಂಬುದು ಒಲಿಂಪಿಕ್ಸ್​ ಬಳಿಕದ ದೊಡ್ಡ ಹೈಲೈಟ್​

ಪ್ಯಾರಿಸ್​​ನಿಂದ ಲಾಹೋರ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ನದೀಮ್ ಅವರಿಗೆ ಭವ್ಯ ಸ್ವಾಗತ ದೊರಕಿದೆ. ಅಲ್ಲಿನ ಸರ್ಕಾರವು ಅವರಿಗೆ ವಿಜಯ ಮೆರವಣಿಗೆಯನ್ನು ಸಹ ಆಯೋಜಿಸಿತ್ತು. ಇದಲ್ಲದೆ, ನದೀಮ್ ಅವರು ಪಾಕಿಸ್ತಾನದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಯನ್ನೂ ಪಡೆದಿದ್ದಾರೆ. ದೊಡ್ಡ ಪ್ರಮಾಣದ ಬಹುಮಾನಗಳು ಅವರ ಕಡೆಗೆ ಬರುತ್ತಿದೆ. ಕಾರು, ಹಣ,ಪ್ರಶಸ್ತಿಗಳು ಅವರನ್ನು ಸುತ್ತುವರಿಯುತ್ತಿವೆ. ಆದರೆ ಅವರು ಲಷ್ಕರ್​ ನಾಯಕನೊಂದಿಗೆ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

ಎಕ್ಸ್ನಲ್ಲಿನ ಒಎಸ್ಐಎನ್​ಟಿ (ಓಪನ್ ಸೋರ್ಸ್ ಇಂಟೆಲಿಜೆನ್ಸ್) ಖಾತೆಯು ನದೀಮ್ ಮತ್ತು ದಾರ್ ಸಂಭಾಷಣೆಯ ವೀಡಿಯೊವನ್ನು ಹಂಚಿಕೊಂಡಿದೆ. ವೀಡಿಯೊದಲ್ಲಿ, ದಾರ್ ನದೀಮ್ ಅವರ ಒಲಿಂಪಿಕ್ ಯಶಸ್ಸಿಗೆ ಅಭಿನಂದನೆ ಸಲ್ಲಿಸಿದ್ದಾನೆ. ಅಲ್ಲದೆ, ನದೀಮ್ ಸಾಧನೆಯು ಮುಸ್ಲಿಂಮರನ್ನು ಹೆಮ್ಮೆಪಡುವಂತೆ ಮಾಡಿದೆ ಎಂದು ಹೇಳಿದ್ದಾನೆ. ದಾರ್ ಅವರ ಹೊಗಳಿಕೆ ಮತ್ತು ಇಬ್ಬರನ್ನು ಒಟ್ಟಿಗೆ ಕಾಣಿಸಿಕೊಂಡಿರುವುದು ನದೀಮ್ ಅವರ ಜಾಗತಿಕ ಮನ್ನಣೆಗೆ ಹಾನಿ ಮಾಡಲಿದೆ ಎನ್ನಲಾಗಿದೆ.

ಇದನ್ನೂ ಓದಿ: Sheikh Hasina : ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್​ ದಾಖಲಿಸಿದ ಕೋರ್ಟ್​​

ಉಗ್ರಗಾಮಿ ಸಂಘಟನೆ

ವಿಶ್ವಸಂಸ್ಥೆಯಿಂದ ಭಯೋತ್ಪಾದಕ ಸಂಘಟನೆ ಎಂದು ಗುರುತಿಸಲ್ಪಟ್ಟಿರುವ ಲಷ್ಕರ್-ಎ-ತೈಬಾ ಹಲವಾರು ಹಿಂಸಾಚಾರ ಮತ್ತು ಭಯೋತ್ಪಾದಕ ಕೃತ್ಯಗಳೊಂದಿಗೆ ಸಂಪರ್ಕ ಹೊಂದಿದೆ. ಮಿಲ್ಲಿ ಮುಸ್ಲಿಂ ಲೀಗ್ (ಎಂಎಂಎಲ್) ನಲ್ಲಿ ಜಂಟಿ ಕಾರ್ಯದರ್ಶಿ ಸ್ಥಾನ ಹೊಂದಿರುವ ಮುಹಮ್ಮದ್ ಹ್ಯಾರಿಸ್ ದಾರ್ ಎಲ್ಇಟಿಯೊಂದಿಗೆ ಸಂಪರ್ಕ ಹೊಂದಿದ್ದಾನೆ. ಎಲ್ಇಟಿ ನಾಯಕ ಹಫೀಜ್ ಸಯೀದ್ ಸ್ಥಾಪಿಸಿದ ಎಂಎಂಎಲ್ ಅನ್ನು ಭಯೋತ್ಪಾದಕ ಗುಂಪಿನ ಮುಂಚೂಣಿ ಸಂಘಟನೆ ಎಂದು ಪರಿಗಣಿಸಲಾಗಿದೆ. 166 ಜನರ ಸಾವಿಗೆ ಕಾರಣವಾದ 26/11 ಮುಂಬೈ ದಾಳಿಯ ರೂವಾರಿ ಹಫೀಜ್​ ಸಯೀದ್.

2018 ರಲ್ಲಿ, ಅಮೆರಿಕ ಎಂಎಂಎಲ್ ಮತ್ತು ಅದರ ನಾಯಕತ್ವವನ್ನು ಜಾಗತಿಕ ಭಯೋತ್ಪಾದಕ ಸಂಘಟನೆ ಎಂದು ಹೆಸರಿಸಿತ್ತು. ಅದರಲ್ಲಿ ಮುಹಮ್ಮದ್ ಹ್ಯಾರಿಸ್ ದಾರ್ ಕೂಡ ಇದ್ದಾನೆ. ಆತ ಎಲ್ಇಟಿಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ವಿಶೇಷವಾಗಿ ಎಲ್ಇಟಿಯ ವಿದ್ಯಾರ್ಥಿ ವಿಭಾಗವಾದ ಅಲ್-ಮುಹಮ್ಮದಿಯಾ ಸ್ಟೂಡೆಂಟ್ಸ್ (ಎಎಂಎಸ್) ನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆನ. ಪ್ರಥಮ ಚಿಕಿತ್ಸೆ, ಅಗ್ನಿಶಾಮಕ, ಶಸ್ತ್ರಾಸ್ತ್ರ ಕೌಶಲ್ಯಗಳು ಮತ್ತು ದಾಳಿ ತಂತ್ರಗಳನ್ನು ಒಳಗೊಂಡ ಎಲ್ಇಟಿ ಶಿಬಿರಗಳಲ್ಲಿ ದಾರ್ ತರಬೇತಿ ಪಡೆದಿದ್ದಾನೆ.

ಚಿನ್ನ ಗೆಲ್ಲುವ ವಿಶ್ವಾಸ ಇತ್ತು

ನಾನು ರಾಷ್ಟ್ರಕ್ಕೆ ಕೃತಜ್ಞನಾಗಿದ್ದೇನೆ. ಎಲ್ಲರೂ ನನಗಾಗಿ ಪ್ರಾರ್ಥಿಸಿದ್ದರು. ಮತ್ತು ನಾನು ಉತ್ತಮವಾಗಿ ಆಡುವ ಭರವಸೆ ಹೊಂದಿದ್ದೆ. ವರ್ಷಗಳಲ್ಲಿ, ನಾನು ಮೊಣಕಾಲು ಗಾಯಕ್ಕೆ ಒಳಗಾಗಿ ಚೇತರಿಸಿಕೊಂಡೆ ಮತ್ತು ನನ್ನ ಫಿಟ್ನೆಸ್​ಗಾಗಿ ಶ್ರಮಿಸಿದೆ. ನಾನು 92.97 ಮೀಟರ್ ಮೀರಿ ಎಸೆಯುವ ವಿಶ್ವಾಸದಲ್ಲಿದ್ದೆ, ಆದರೆ ಚಿನ್ನ ಗೆಲ್ಲಲು ಆ ಎಸೆತ ಸಾಕು. ನಾನು ಕಷ್ಟಪಟ್ಟು ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ ಮತ್ತು ಮುಂಬರುವ ದಿನಗಳು ಮತ್ತು ತಿಂಗಳುಗಳಲ್ಲಿ ನನ್ನ ಅತ್ಯುತ್ತಮವಾದದ್ದನ್ನು ನೀಡುತ್ತೇನೆ ಎಂದು ಗೆದ್ದ ಬಳಿಕ ಅರ್ಷದ್​ ಹೇಳಿದ್ದಾರೆ.

Continue Reading

ಆರೋಗ್ಯ

World Organ Donation Day: ಇಂದು ವಿಶ್ವ ಅಂಗಾಂಗದಾನ ದಿನ; ಯಾರದ್ದೋ ಬದುಕಿಗೆ ಭರವಸೆಯಾಗೋಣ! ನೋಂದಣಿ ಹೇಗೆ?

World Organ Donation Day: ಇಂದು ವಿಶ್ವ ಅಂಗದಾನ ದಿನ. ಅಂಗಗಳ ದಾನ ಬೇಡುವುದಕ್ಕೆ ಬಹಳಷ್ಟು ಕಾರಣಗಳು ಇರಬಹುದು. ಕಣ್ಣು, ಯಕೃತ್‌, ಮೂತ್ರಪಿಂಡ, ಹೃದಯ, ಪುಪ್ಪುಸ ಮುಂತಾದ ಹಲವು ಅಂಗಗಳನ್ನು ಕಸಿ ಮಾಡುವುದಕ್ಕೆ ವೈದ್ಯ ವಿಜ್ಞಾನಕ್ಕೆ ಇಂದು ಸಾಧ್ಯವಿದೆ. ಆದರೆ ದಾನಿಗಳ ಕೊರತೆ ಕಾಡುತ್ತದೆ. ಈ ಕುರಿತ ಲೇಖನ ಇಲ್ಲಿದೆ.

VISTARANEWS.COM


on

World Organ Donation Day
Koo

ಇಂದು ವಿಶ್ವ ಅಂಗಾಂಗ (World Organ Donation Day) ದಾನ ದಿನ. ನಮ್ಮೊಂದಿಗೇ ನಮ್ಮ ಅಮೂಲ್ಯ ಅಂಗಾಂಗಗಳು ಮಣ್ಣುಗೂಡಬಾರದೆಂಬ ಜಾಗೃತಿಯನ್ನು ಎಲ್ಲರಲ್ಲಿ ಮೂಡಿಸುವುದು ಈ ದಿನದ ಉದ್ದೇಶ. ನಮ್ಮ ಬುದಕಿನ ನಂತರ, ಅಗತ್ಯ ಇರುವವರಿಗೆ ಅಂಗಾಂಗಳನ್ನು ದಾನ ಮಾಡಲು ನಾವು ಬದುಕಿದ್ದಾಗಲೇ ನಿರ್ಧಾರಗಳನ್ನು ಮಾಡಬೇಕೆಂಬ ಸರಳ ಸತ್ಯಗಳನ್ನು ಅರಿವಿಗೆ ತರಿಸುವುದಕ್ಕೆ ಇದನ್ನು ಆಚರಿಸಲಾಗುತ್ತದೆ. ಅಂದಹಾಗೆ, ಅಂಗಾಂಗ ದಾನವನ್ನು ಬದುಕಿರುವವರೂ ಮಾಡಬಹುದು. ಈ ಬಾರಿಯ ಘೋಷವಾಕ್ಯ: ಯಾರದ್ದೋ ನಗುವಿಗೆ ನೀವು ಇಂದೇ ಕಾರಣರಾಗಿ! ದಿನದಿಂದ ದಿನಕ್ಕೆ ಅಂಗಾಂಗ ದಾನ ಬಯಸುವವರ ಸಂಖ್ಯೆ ಹೆಚ್ಚುತ್ತಿದೆ. ಆದರೆ ದಾನಿಗಳ ಸಂಖ್ಯೆ ಕಡಿಮೆಯಿದೆ. ಜನ್ಮಜಾತ ಸಮಸ್ಯೆ ಇರುವವರು, ಬದುಕಿನ ಯಾವುದೋ ಹಂತದಲ್ಲಿ ಕ್ಯಾನ್ಸರ್‌ ಅಥವಾ ಇನ್ನಾವುದೋ ರೋಗಕ್ಕೆ ತುತ್ತಾಗಿ ಅಂಗಗಳ ಕಸಿ ಅಗತ್ಯವಾದವರು, ಅಪಘಾತಕ್ಕೆ ತುತ್ತಾಗಿ ಅಂಗಗಳನ್ನು ಕಳೆದುಕೊಂಡವರು- ಹೀಗೆ ಅಂಗಗಳ ದಾನ ಬೇಡುವುದಕ್ಕೆ ಬಹಳಷ್ಟು ಕಾರಣಗಳು ಇರಬಹುದು. ಕಣ್ಣು, ಯಕೃತ್‌, ಮೂತ್ರಪಿಂಡ, ಹೃದಯ, ಪುಪ್ಪುಸ ಮುಂತಾದ ಹಲವು ಅಂಗಗಳನ್ನು ಕಸಿ ಮಾಡುವುದಕ್ಕೆ ವೈದ್ಯ ವಿಜ್ಞಾನಕ್ಕೆ ಇಂದು ಸಾಧ್ಯವಿದೆ. ಆದರೆ ದಾನಿಗಳ ಕೊರತೆ ಕಾಡುತ್ತದೆ.

World Organ Donation Day 2024
World Organ Donation Day 2024

ಇತಿಹಾಸ

ಅಂಗದಾನದ ಮೂಲ 20ನೇ ಶತಮಾನದಲ್ಲಿದೆ. 1954ರಲ್ಲಿ ಮೊದಲ ಬಾರಿಗೆ ಮೂತ್ರಪಿಂಡದ ಕಸಿಯನ್ನು ಯಶಸ್ವಿಯಾಗಿ ಮಾಡಲಾಯಿತು. ರೊನಾಲ್ಡ್‌ ಲೀ ಹೆರಿಕ್‌ ಎಂಬಾತ ತನ್ನ ಅವಳಿ ಸೋದರನಿಗೆ ದಾನ ಮಾಡಿದ್ದ ಮೂತ್ರಪಿಂಡವನ್ನು ಡಾ. ಜೋಸೆಫ್‌ ಮರ್ರೆ ಯಶಸ್ವಿಯಾಗಿ ಕಸಿ ಮಾಡಿದ್ದರು. ಆನಂತರದಿಂದ ಅಂಗದಾನ ಮತ್ತು ಕಸಿಯ ಬಗ್ಗೆ ವೈದ್ಯ ವಿಜ್ಞಾನ ಬಹಳ ಮುಂದುವರಿದಿದ್ದು, 1994ರಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಹೃದಯವನ್ನೂ ಯಶಸ್ವಿಯಾಗಿ ಕಸಿ ಮಾಡಲಾಗಿತ್ತು. ಅಂಗದಾನದ ಬಗ್ಗೆ ಅರಿವು ಮೂಡಿಸಿ, ನಿಸ್ವಾರ್ಥ ಭಾವದಿಂದ ಅಂಗದಾನ ಮಾಡಿದವರ ಮತ್ತು ಅವರ ಕುಟುಂಬದವರ ಉಪಕಾರವನ್ನು ಸ್ಮರಿಸುವ ನಿಟ್ಟಿನಲ್ಲಿ ಆಗಸ್ಟ್‌ ತಿಂಗಳ ೧೩ನೇ ದಿನವನ್ನು ವಿಶ್ವದೆಲ್ಲೆಡೆ ಅಂಗದಾನ ದಿನವೆಂದು ಗುರುತಿಸಲಾಗಿದೆ.
ವಿಶ್ವದಲ್ಲಿ ಇಂದಿಗೂ ಲಕ್ಷಾಂತರ ಮಂದಿ ಅಂಗಾಂಗ ಕಸಿಗಾಗಿ ಕಾಯುತ್ತಿದ್ದಾರೆ. ಪ್ರತಿಯೊಬ್ಬ ದಾನಿಯೂ ತನ್ನ ನಂತರ ಮಾಡುವ ಅಂಗದಾನದಿಂದ 8 ಮಂದಿಯ ಜೀವ ಉಳಿಸಿ, 75 ಜನರ ಬದುಕನ್ನು ಹಸನು ಮಾಡಬಹುದು. ಹಾಗಾಗಿ ಈ ಜೀವ ಉಳಿಸುವ ಕ್ರಿಯೆಯಲ್ಲಿ ಪಾಲ್ಗೊಳ್ಳಿ, ನಿಮ್ಮ ನಂತರ ಇತರರ ಬದುಕನ್ನು ಸುಂದರವಾಗಿಸಿ ಎನ್ನುವ ಸಂದೇಶವನ್ನು ಸಾರಲಾಗುತ್ತಿದೆ.

ಇದನ್ನೂ ಓದಿ: Ghee For Health: ನಾವು ಆರೋಗ್ಯವಾಗಿರಲು ದಿನಕ್ಕೆಷ್ಟು ತುಪ್ಪ ತಿನ್ನಬೇಕು?

ಭಾರತದಲ್ಲಿ ಹೇಗೆ?

ಅಂಗ ದಾನ ಮಾಡಲು ಆಸಕ್ತಿ ಇರುವವರು ಇದಕ್ಕಾಗಿ ನೋಂದಣಿ ಮಾಡಿಸಿಕೊಳ್ಳುವುದು ಅಗತ್ಯ. ಇದನ್ನು ಭಾರತದಲ್ಲಿ ಹೇಗೆ ಮಾಡಬೇಕು? ನಮ್ಮ ದೇಶದಲ್ಲಿ ಇದಕ್ಕಾಗಿಯೇ ಪ್ರತ್ಯೇಕ ಕಾನೂನು ರೂಪಿಸಲಾಗಿದೆ. ಮಾನವ ಅಂಗ ಮತ್ತು ಅಂಗಾಂಶ ಕಸಿ ಕಾಯ್ದೆ 1994ರ ಅನ್ವಯ ಇದನ್ನು ನಿರ್ವಹಿಸಲಾಗುತ್ತದೆ. 18 ವರ್ಷಕ್ಕೆ ಮೇಲ್ಪಟ್ಟವರು- ಯಾವುದೇ ಲಿಂಗ, ವಯಸ್ಸು, ಜಾತಿ, ಮತ ಇತ್ಯಾದಿಗಳ ಭೇದವಿಲ್ಲದೆ, ಎಲ್ಲರೂ ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದು. ಇದಕ್ಕಾಗಿ ಪ್ರತ್ಯೇಕ ವೆಬ್‌ಸೈಟ್‌ ಇದ್ದು, ಇದರ ಮೂಲಕ ನೋಂದಣಿ ಮಾಡಿಕೊಳ್ಳಬಹುದು.
https://www.organindia.org/pledge-to-be-an-organ-donor/
ಈ ವೆಬ್‌ಸೈಟ್‌ನಲ್ಲಿ ಅರ್ಜಿ ತುಂಬಿದ ಮೇಲೆ, ಸರಕಾರದಿಂದಲೇ ನೀಡಲಾದ ಪ್ರತ್ಯೇಕ ನೋಂದಣಿ ಸಂಖ್ಯೆ ಹೊಂದಿದ ʻಡೋನರ್‌ ಕಾರ್ಡ್‌ʼ ಲಭಿಸುತ್ತದೆ. ಈ ಬಗ್ಗೆ ಕುಟುಂಬದವರ ಜೊತೆ ಚರ್ಚಿಸಿದ ನಂತರವೇ ನಿರ್ಧಾರ ತೆಗೆದುಕೊಳ್ಳಬೇಕಾದ್ದು ದಾನಿಗಳ ಕರ್ತವ್ಯ. ಕಾರಣ, ದಾನಿಯ ದೇಹಾಂತ್ಯದ ನಂತರ ಅವರ ವಾರಸುದಾರರೇ ಈ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಒಂದೊಮ್ಮೆ ಅಂಗದಾನದ ನೋಂದಣಿ ಮಾಡಿದ್ದರೂ, ವಾರಸುದಾರರು ಪ್ರತಿಕೂಲವಾಗಿ ನಿರ್ಧರಿಸಿದರೆ, ಅದನ್ನು ನೆರವೇರಿಸಲು ಸಾಧ್ಯವಿಲ್ಲ. ಹಾಗಾಗಿ ಕುಟುಂಬದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅಗತ್ಯ.

Continue Reading

ಪ್ರಮುಖ ಸುದ್ದಿ

Hindenburg Report : ಸೆಬಿ ಅಧ್ಯಕ್ಷರ ವಜಾಗೆ ಆಗ್ರಹಿಸಿದ ಕಾಂಗ್ರೆಸ್​ನಿಂದ ಆಗಸ್ಟ್​​ 22ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ

Hindenburg Report : ದೇಶದಲ್ಲಿ ಈಗ ನಡೆಯುತ್ತಿರುವ ಅತಿದೊಡ್ಡ ಹಗರಣಗಳಲ್ಲೊಂದನ್ನು ಹಿಂಡೆನ್​ಬರ್ಗ್​​ ಬಹಿರಂಗಪಡಿಸಿದೆ. ಅದಾನಿ ಮತ್ತು ಸೆಬಿಗೆ ಸಂಬಂಧಿಸಿದ ಹಗರಣದ ಬಗ್ಗೆ ನಾವು ಚರ್ಚಿಸಿದ್ದೇವೆ ಎಂದು ಜೈರಾಮ್ ರಮೇಶ್ ಹೇಳಿದರು. ಅದಾನಿ ಹಗರಣದ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಆಂದೋಲನ ನಡೆಸಲು ಪಕ್ಷದ ನಾಯಕತ್ವ ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಅವರು ಹೇಳಿದರು.

VISTARANEWS.COM


on

Hindenburg Report
Koo

ಬೆಂಗಳೂರು: ಸೆಬಿ ಅಧ್ಯಕ್ಷರು ಮತ್ತು ಅದಾನಿ ಗ್ರೂಪ್ ನಡುವೆ ಸಂಬಂಧವಿದೆ ಎಂದು ಆರೋಪಿಸಿ ಅಮೆರಿಕ ಮೂಲಕ ಶಾರ್ಟ್ ಸೆಲ್ಲರ್​ ಸಂಸ್ಥೆ ಹಿಂಡೆನ್​​ಬರ್ಗ್ (Hindenburg Report) ಮಾಡಿರುವ ​​ವರದಿಯ ವಿರುದ್ಧ ಆಗಸ್ಟ್ 22 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಮಂಗಳವಾರ ಘೋಷಿಸಿದೆ. ವರದಿಯ ಆರೋಪಗಳ ಹಿನ್ನೆಲೆಯಲ್ಲಿ ಸೆಬಿ ಅಧ್ಯಕ್ಷ ಸ್ಥಾನದಿಂದ ಮಾಧಾಬಿ ಬುಚ್ ಅವರನ್ನು ತೆಗೆದುಹಾಕಬೇಕೆಂದು ಕಾಂಗ್ರೆಸ್​ ಒತ್ತಾಯಿಸುತ್ತಿದೆ.

ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು ಮತ್ತು ರಾಜ್ಯ ಮುಖ್ಯಸ್ಥರ ಸಭೆಯ ನಂತರ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಈ ಘೋಷಣೆ ಮಾಡಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಮಲ್ಲಿಕಾರ್ಜುನ ಖರ್ಗೆ ವಹಿಸಿದ್ದರು.

ದೇಶದಲ್ಲಿ ಈಗ ನಡೆಯುತ್ತಿರುವ ಅತಿದೊಡ್ಡ ಹಗರಣಗಳಲ್ಲೊಂದನ್ನು ಹಿಂಡೆನ್​ಬರ್ಗ್​​ ಬಹಿರಂಗಪಡಿಸಿದೆ. ಅದಾನಿ ಮತ್ತು ಸೆಬಿಗೆ ಸಂಬಂಧಿಸಿದ ಹಗರಣದ ಬಗ್ಗೆ ನಾವು ಚರ್ಚಿಸಿದ್ದೇವೆ ಎಂದು ಜೈರಾಮ್ ರಮೇಶ್ ಹೇಳಿದರು. ಅದಾನಿ ಹಗರಣದ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಆಂದೋಲನ ನಡೆಸಲು ಪಕ್ಷದ ನಾಯಕತ್ವ ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಅವರು ಹೇಳಿದರು.

ಈ ವಿಷಯದ ಬಗ್ಗೆ ಎರಡು ವಿಷಯಗಳಿಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಆಂದೋಲನ ನಡೆಸಲು ನಾವು ಸರ್ವಾನುಮತದಿಂದ ನಿರ್ಧರಿಸಿದ್ದೇವೆ. ಒಂದು ಅದಾನಿ ಮೆಗಾ ಹಗರಣದ ಬಗ್ಗೆ ಜೆಪಿಸಿ ತನಿಖೆ ನಡೆಸಬೇಕು. ಇದರಲ್ಲಿ ಪ್ರಧಾನಿ ಸಂಪೂರ್ಣವಾಗಿ ಭಾಗಿಯಾಗಿದ್ದಾರೆ. ಷೇರು ಮಾರುಕಟ್ಟೆ ನಿಯಂತ್ರಣವು ಈಗ ತೀವ್ರವಾಗಿ ಸ್ವಜನಪಕ್ಷಪಾತ ನಡೆಸಿರುವುದು ಕಂಡುಬಂದಿದೆ. ಜೈರಾಮ್ ರಮೇಶ್ ಹೇಳಿದರು.

ಹಿಂಡೆನ್​ಬರ್ಗ್​ ರಿಸರ್ಚ್ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸೆಬಿ ಮತ್ತು ಅದರ ಮುಖ್ಯಸ್ಥ ಮಾಧಾಬಿ ಬುಚ್ ವಿರುದ್ಧ ಆರೋಪ ಮಾಡಿದ ಬಳಿಕ ಕಾಂಗ್ರೆಸ್ ಸಂಸದೀಯ ತನಿಖೆಗೆ ಒತ್ತಾಯಿಸಿದೆ.

ಇದನ್ನೂ ಓದಿ: Sheikh Hasina : ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್​ ದಾಖಲಿಸಿದ ಕೋರ್ಟ್​​

ಅದಾನಿ ಮನಿ ಸ್ಪೋನಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ವಿದೇಶಿ ಸಂಸ್ಥೆಗಳಲ್ಲಿ ಸೆಬಿ ಮುಖ್ಯಸ್ಥೆ ಮಾಧಾಬಿ ಪುರಿ ಬುಚ್ ಮತ್ತು ಅವರ ಪತಿ ಪಾಲನ್ನು ಹೊಂದಿದ್ದಾರೆ ಎಂದು ಹಿಂಡೆನ್​ಬರ್ಗ್​​ ರಿಸರ್ಚ್ ಹೇಳಿದೆ. ಆದರೆ ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಗ್ರೂಪ್ ಆಫ್ ಕಂಪನಿಗಳಿಗೆ ಪಕ್ಷಪಾತ ಮಾಡಿರುವ ಆರೋಪಗಳನ್ನು ಸೆಬಿ, ಮಾಧಾಬಿ ಬುಚ್ ಮತ್ತು ಅವರ ಪತಿ ನಿರಾಕರಿಸಿದ್ದಾರೆ.

Continue Reading
Advertisement
Muda Scam
ಕರ್ನಾಟಕ2 mins ago

Muda Scam: ಸಿಎಂ ವಿರುದ್ಧದ ಸ್ನೇಹಮಯಿ ಕೃಷ್ಣ ಅರ್ಜಿ ಆದೇಶ ಆ.20ಕ್ಕೆ ಕಾಯ್ದಿರಿಸಿದ ಕೋರ್ಟ್‌; ಅಬ್ರಹಾಂ ಅರ್ಜಿ ವಿಚಾರಣೆ ಮುಂದೂಡಿಕೆ

Lakshmi Hebbalkar
ಕರ್ನಾಟಕ10 mins ago

Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

Independence day 2024
ದೇಶ16 mins ago

Independence day 2024: ಆಗಸ್ಟ್ 15ರಂದು ಪ್ರಧಾನಿ ಮೋದಿ ಭಾಷಣವನ್ನು ಎಷ್ಟು ಹೊತ್ತಿಗೆ, ಎಲ್ಲಿ ವೀಕ್ಷಿಸಬಹುದು?

Ian Bell
ಕ್ರಿಕೆಟ್21 mins ago

Ian Bell : ಲಂಕಾ ತಂಡದ ನೂತನ ಬ್ಯಾಟಿಂಗ್​ ಕೋಚ್​ ಆಗಿ ಇಯಾನ್ ಬೆಲ್​ ನೇಮಕ

Prime fashion week
ಫ್ಯಾಷನ್28 mins ago

Prime Fashion week: ಪ್ರೈಮ್‌ ಫ್ಯಾಷನ್‌ ವೀಕ್‌ನಲ್ಲಿ ಸಂಜಯ್‌ ಚೊಲಾರಿಯಾ ಡಿಸೈನರ್‌ ವೇರ್ಸ್ ಅನಾವರಣ

Physical abuse
ಧಾರವಾಡ35 mins ago

Physical Abuse : ಅಪ್ರಾಪ್ತೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೊ ಹರಿಬಿಟ್ಟ ಯುವಕ!

Kaun Banega Crorepati Season 16
ಬಾಲಿವುಡ್51 mins ago

Kaun Banega Crorepati Season 16: 25 ಲಕ್ಷ ರೂ. ಪ್ರಶ್ನೆಗೆ ಉತ್ತರಿಸಲು ವಿಫಲರಾದ ಬೆಂಗಳೂರಿನ ಎಂಜಿನಿಯರ್! ಏನಿತ್ತು ಆ ಪ್ರಶ್ನೆ?

Tata Nexon EV
ಆಟೋಮೊಬೈಲ್1 hour ago

Tata Nexon EV: ಕೇವಲ 200 ರೂ. ಖರ್ಚಿನಲ್ಲಿ ಈ ಕಾರು 323 ಕಿ.ಮೀ ದೂರ ಸಾಗುತ್ತದೆ!

Arshad Nadeem
ಪ್ರಮುಖ ಸುದ್ದಿ1 hour ago

Arshad Nadeem : ಲಷ್ಕರ್ ಉಗ್ರನ ಜತೆ ಕಾಣಿಸಿಕೊಂಡ ಪಾಕಿಸ್ತಾನದ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ಅರ್ಷದ್​ ನದೀಮ್​!

World Organ Donation Day
ಆರೋಗ್ಯ1 hour ago

World Organ Donation Day: ಇಂದು ವಿಶ್ವ ಅಂಗಾಂಗದಾನ ದಿನ; ಯಾರದ್ದೋ ಬದುಕಿಗೆ ಭರವಸೆಯಾಗೋಣ! ನೋಂದಣಿ ಹೇಗೆ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌