IPL 2024 : ಶಿಮ್ರೋನ್ ಹೆಟ್ಮಾಯರ್​ಗೆ ದೊಡ್ಡ ಮೊತ್ತದ ದಂಡ ವಿಧಿಸಿದ ಬಿಸಿಸಿಐ - Vistara News

ಪ್ರಮುಖ ಸುದ್ದಿ

IPL 2024 : ಶಿಮ್ರೋನ್ ಹೆಟ್ಮಾಯರ್​ಗೆ ದೊಡ್ಡ ಮೊತ್ತದ ದಂಡ ವಿಧಿಸಿದ ಬಿಸಿಸಿಐ

IPL 2024 : ಅಭಿಷೇಕ್ ಶರ್ಮಾ ಅವರ ಅರೆಕಾಲಿಕ ಸ್ಪಿನ್ಗೆ ಔಟಾದ ನಂತರ, ಶಿಮ್ರಾನ್ ಹೆಟ್ಮೆಯರ್ ಹತಾಶೆಯಿಂದ ತಮ್ಮ ಬ್ಯಾಟ್ನಿಂದ ಸ್ಟಂಪ್​ಗಳ ಮೇಲೆ ಹೊಡೆದಿದ್ದರು. ಐಪಿಎಲ್ ನೀತಿ ಸಂಹಿತೆಯ ಪ್ರಕಾರ ಅವರು ಲೆವೆಲ್ 1 ಅಪರಾಧದಲ್ಲಿ ತಪ್ಪಿತಸ್ಥರೆಂದು ಕಂಡುಬಂದಿದೆ. ತಪ್ಪನ್ನು ಒಪ್ಪಿಕೊಂಡ ನಂತರ ಹೆಟ್ಮಾಯರ್​ಗೆ ಪಂದ್ಯದ ಶುಲ್ಕದ 10% ದಂಡ ವಿಧಿಸಲಾಗಿದೆ.

VISTARANEWS.COM


on

IPL 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಐಪಿಎಲ್ 2024 ರ (IPL 2024) ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ (ಎಸ್ಆರ್ಹೆಚ್) ರಾಜಸ್ಥಾನ್ ರಾಯಲ್ಸ್ ವಿರುದ್ಧ 36 ರನ್​ಗಳಿಂದ ಜಯಗಳಿಸುವ ಮೂಲಕ ಐಪಿಎಲ್​ 2024ರ ಫೈನಲ್​ಗೇರಿದೆ. ಈ ಸೋಲಿನಿಂದ ರಾಜಸ್ಥಾನ್​ ತಂಡದ ಕಪ್ ಗೆಲ್ಲುವ ಆಸೆ ಕೊನೆಗೊಂಡಿದೆ. ಸೋಲಿನೊಂದಿಗೆ ಆ ತಂಡದ ಆಟಗಾರರು ಸಾಕಷ್ಟು ದುಃಖಕ್ಕೆ ಒಳಗಾಗಿದ್ದಾರೆ. ಅವರೆಲ್ಲರೂ ಒಂದೊಂದು ರೀತಿಯಲ್ಲಿ ನಿರಾಸೆ ವ್ಯಕ್ತಪಡಿಸುತ್ತಿದ್ದಾರೆ. ಏತನ್ಮಧ್ಯೆ, ಮೈದಾನದಲ್ಲಿ ಹತಾಶೆಗೆ ಒಳಗಾಗಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟ್ಸ್ಮನ್ ಶಿಮ್ರಾನ್ ಹೆಟ್ಮಾಯರ್​​ಗೆ (Shimron Hetmyer) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ದಂಡ ವಿಧಿಸಿದೆ.

ಅಭಿಷೇಕ್ ಶರ್ಮಾ ಅವರ ಅರೆಕಾಲಿಕ ಸ್ಪಿನ್ಗೆ ಔಟಾದ ನಂತರ, ಶಿಮ್ರಾನ್ ಹೆಟ್ಮೆಯರ್ ಹತಾಶೆಯಿಂದ ತಮ್ಮ ಬ್ಯಾಟ್ನಿಂದ ಸ್ಟಂಪ್​ಗಳ ಮೇಲೆ ಹೊಡೆದಿದ್ದರು. ಐಪಿಎಲ್ ನೀತಿ ಸಂಹಿತೆಯ ಪ್ರಕಾರ ಅವರು ಲೆವೆಲ್ 1 ಅಪರಾಧದಲ್ಲಿ ತಪ್ಪಿತಸ್ಥರೆಂದು ಕಂಡುಬಂದಿದೆ. ತಪ್ಪನ್ನು ಒಪ್ಪಿಕೊಂಡ ನಂತರ ಹೆಟ್ಮಾಯರ್​ಗೆ ಪಂದ್ಯದ ಶುಲ್ಕದ 10% ದಂಡ ವಿಧಿಸಲಾಗಿದೆ.

ಇದನ್ನೂ ಓದಿ: Gautam Gambhir : ಗಂಭೀರ್​ ಟೀಮ್​ ಇಂಡಿಯಾ ಕೋಚ್ ಆಗದಂತೆ ತಡೆಯುತ್ತಿದ್ದಾರೆಯೇ ಶಾರುಖ್?

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮೇ 24 ರಂದು ನಡೆದ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಕ್ವಾಲಿಫೈಯರ್ 2ರ ಸಂದರ್ಭದಲ್ಲಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ರಾಜಸ್ಥಾನ್ ರಾಯಲ್ಸ್​ನ ಶಿಮ್ರಾನ್ ಹೆಟ್ಮಾಯರ್​ಗೆ ಪಂದ್ಯದ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದ ಮಾಜಿ ವೇಗಿ ಜಾವಗಲ್ ಶ್ರೀನಾಥ್ ದಂಡ ವಿಧಿಸಿದ್ದಾರೆ. ಬಿಸಿಸಿಐ ನಿಖರವಾದ ಕಾರಣವನ್ನು ನಿರ್ದಿಷ್ಟಪಡಿಸದಿದ್ದರೂ ಔಟಾದ ನಂತರ ಹೆಟ್ಮೆಯರ್ ಅವರ ಪ್ರತಿಕ್ರಿಯೆ ಬಹುಶಃ ಕಾರಣವಾಗಿರಬಹುದು ಎಂದು ವರದಿ ಮಾಡಲಾಗಿದೆ.

ನಿರ್ಣಾಯಕ ಪರಿಸ್ಥಿತಿಯಲ್ಲಿ ಹೆಟ್ಮೆಯರ್ ಔಟಾಗಿದ್ದರು. ಕ್ರೀಸ್​ನಲ್ಲಿ ಅವರಿದ್ದಿದ್ದರೆ ಪಂದ್ಯ ಆರ್​ಆರ್​ ಪರವಾಗಿರುತ್ತಿತ್ತು.

ಟಾಸ್ ಗೆದ್ದ ಆರ್​ಆರ್​​ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇಬ್ಬನಿ ಅಂಶವನ್ನು ಲಾಭ ಮಾಡಿಕೊಳ್ಳುವ ಭರವಸೆಯಲ್ಲಿದ್ದರು. ಆದರೆ, ರಾಹುಲ್ ತ್ರಿಪಾಠಿ (15 ಎಸೆತಗಳಲ್ಲಿ 37 ರನ್) ಮತ್ತು ಹೆನ್ರಿಕ್ ಕ್ಲಾಸೆನ್ (34 ಎಸೆತಗಳಲ್ಲಿ 50 ರನ್) ಅವರ ನಿರ್ಣಾಯಕ ಕೊಡುಗೆಗಳೊಂದಿಗೆ ಎಸ್ಆರ್ಹೆಚ್ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು.

ಪ್ರತಿಕ್ರಿಯೆಯಾಗಿ, ಎಸ್ಆರ್​ಎಚ್​ ಸ್ಪಿನ್ ದಾಳಿಯ ವಿರುದ್ಧ ಆರ್​ಆರ್​ ಹೆಣಗಾಡಿತು. ಇಬ್ಬನಿಯ ಕೊರತೆಯು ಎಸ್ಆರ್​ಎಚ್​​ ಪರವಾಗಿ ಕೆಲಸ ಮಾಡಿತು. 35 ಎಸೆತಗಳಲ್ಲಿ 56 ರನ್ ಗಳಿಸಿದ ಜುರೆಲ್ ಅವರ ದಿಟ್ಟ ಪ್ರಯತ್ನದ ಹೊರತಾಗಿಯೂ, ಆರ್​ಆರ್​ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಲಷ್ಟೇ ಶಕ್ತವಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Yogi Adithyanath: ಎರಡು ವರ್ಷಗಳ ಬಳಿಕ ತಾಯಿಯನ್ನು ಭೇಟಿಯಾದ ಯೋಗಿ ಆದಿತ್ಯನಾಥ್

Yogi Adityanath: ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ. ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿಯವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಅವರು ಉತ್ತರಾಖಂಡದ ಹೃಷಿಕೇಶದಲ್ಲಿರುವ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಯೋಗಿ ಆದಿತ್ಯನಾಥ್ ಸುಮಾರು 20 ನಿಮಿಷಗಳ ಕಾಲ ತಮ್ಮ ತಾಯಿಯ ಜೊತೆ ಸಮಯ ಕಳೆದಿದ್ದಾರೆ.

VISTARANEWS.COM


on

Yogi Adithyanath
Koo

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adithyanath) ಅವರು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿಯವರು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಉತ್ತರಾಖಂಡದ ಹೃಷಿಕೇಶದಲ್ಲಿರುವ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಾಗಾಗಿ ಮುಖ್ಯಮಂತ್ರಿಗಳು ಭಾನುವಾರದಂದು ಆಸ್ಪತ್ರೆಗೆ ಭೇಟಿ ನೀಡಿ ತಮ್ಮ ತಾಯಿಯ ಯೋಗ ಕ್ಷೇಮ ವಿಚಾರಿಸಿದ್ದಾರೆ. ಅವರು ಸುಮಾರು 20 ನಿಮಿಷಗಳ ಕಾಲ ತಮ್ಮ ತಾಯಿಯ ಜೊತೆ ಸಮಯ ಕಳೆದಿದ್ದಾರೆ.

ಈ ವೇಳೆ ಮುಖ್ಯಮಂತ್ರಿಗಳ ಜೊತೆ ಉತ್ತರಾಖಂಡದ ಆರೋಗ್ಯ ಸಚಿವ ಧನ್ ಸಿಂಗ್ ರಾವತ್ ಮತ್ತು ಹರಿದ್ವಾರ ಸಂಸದ ತ್ರಿವೇಂದ್ರ ಸಿಂಗ್ ಜೊತೆಗಿದ್ದರು ಎನ್ನಲಾಗಿದೆ. ಹಾಗೇ ಶನಿವಾರದಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಕೂಡ ಮುಖ್ಯಮಂತ್ರಿ ಯೋಗಿಯವರ ತಾಯಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇದು ಮುಖ್ಯಮಂತ್ರಿಯವರು ಎರಡು ವರ್ಷಗಳ ಬಳಿಕ ತಮ್ಮ ತಾಯಿಯನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿರುವುದಾಗಿದೆ. ಅವರ ತಾಯಿ ಸಾವಿತ್ರಿ ದೇವಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಈ ಹಿಂದೆ ಅವರು ಕಣ್ಣಿನ ಸೋಂಕಿಗೂ ಕೂಡ ಒಳಗಾಗಿದ್ದರು ಎಂಬುದಾಗಿ ತಿಳಿದುಬಂದಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೂಲತಃ ಉತ್ತರಾಖಂಡದವರಾಗಿದ್ದು, ಅವರ ಕುಟುಂಬದವರು ಪೌರಿ ಗಢವಾಲ್ ನ ಪಚೌರ್ ಗ್ರಾಮದಲ್ಲಿ ನೆಲೆಸಿದ್ದಾರೆ. ಮುಖ್ಯಮಂತ್ರಿಗಳು ಈ ಹಿಂದೆ 2022ರಲ್ಲಿ ತಮ್ಮ ಕುಟುಂಬದವರಿರುವ ಗ್ರಾಮಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದಿದ್ದರು.

ಇದನ್ನೂ ಓದಿ: Head Shave: ಪೋಷಕರು ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ದಲಿತ ಹುಡುಗನ ತಲೆ ಬೋಳಿಸಿದರು!

ಮುಖ್ಯಮಂತ್ರಿ ಯೋಗಿ ಅವರು ತಮ್ಮ ತಾಯಿಯನ್ನು ಭೇಟಿ ಬಳಿಕ ರುದ್ರಪ್ರಯಾಗ ರಸ್ತೆ ಅಪಘಾತದಲ್ಲಿ ಗಾಯಗೊಂಡ ಸಂತ್ರಸ್ತರನ್ನು ಭೇಟಿ ಮಾಡಿ ಅವರ ಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಅವರಿಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಹಾಗೇ ಗಾಯಾಳುಗಳು ಹಾಗೂ ವೈದ್ಯರ ಜೊತೆ ಮಾತುಕತೆ ನಡೆಸಿ ಅವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ರಾಜ್ಯ ಸರ್ಕಾರದ ಕಡೆಯಿಂದ ಭರವಸೆ ನೀಡಿದ್ದಾರೆ. ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಶನಿವಾರ 26 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟೆಂಪೊವೊಂದು ಆಳವಾದ ಕಣಿವೆಗೆ ಬಿದ್ದ ಪರಿಣಾಮ ಕನಿಷ್ಠ 14 ಮಂದಿ ಸಾವನಪ್ಪಿದ್ದಾರೆ. ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಉತ್ತರಾಖಂಡ ಸರ್ಕಾರ ಆದೇಶಿಸಿತ್ತು.

Continue Reading

Latest

Bakrid: ಬಕ್ರೀದ್ ಹಿನ್ನೆಲೆಯಲ್ಲಿ ಮಾರಾಟಕ್ಕಿಟ್ಟಿದ್ದ ಈ ಮೇಕೆಯ ಬೆಲೆ 69 ಲಕ್ಷ ರೂ!

Bakrid ಬಕ್ರೀದ್ ಹಬ್ಬದಂದು ಬಲಿದಾನದ ಫಲ ಸಿಗಬೇಕೆಂದರೆ ಮೇಕೆಯನ್ನು ಮುಸ್ಲಿಂರು ಅವರ ಸ್ವಂತ ಹಣದಿಂದ ಖರೀದಿಸಬೇಕಂತೆ. ಈ ರೀತಿ ಮಾಡುವುದರಿಂದ ಅವರಿಗೆ ಬಲಿದಾನದ ಸಂಪೂರ್ಣ ಫಲ ಸಿಗುತ್ತದೆ ಎನ್ನುವುದು ಅವರ ನಂಬಿಕೆ. ಹಾಗಾಗಿ ಮುಸ್ಲಿಂರು ಮೇಕೆಗಳನ್ನು ಕಷ್ಟಪಟ್ಟು ದುಡಿದ ಹಣದಿಂದ ಖರೀದಿಸುತ್ತಾರಂತೆ. ಆದರೆ ಬಕ್ರೀದ್ ದಿನ ಮೇಕೆಗಳ ಬೆಲೆ ಮಾತ್ರ ಕೇಳಿದ್ರೆ ಎಲ್ಲರೂ ಶಾಕ್ ಆಗುತ್ತಾರೆ. ಇನ್ನು ಒಂದೊಂದು ಮೇಕೆಗೂ ಒಂದೊಂದು ಬೆಲೆ ಇರುತ್ತದೆ. ಆದರೆ ಈ ಮೇಕೆಗಳಲ್ಲಿ ಒಂದು ಬಹಳ ದುಬಾರಿ ಮೇಕೆ ಇದೆ.ಅದುವೇ ಬ್ರಾಡ್ ಹೆಸರಿನ ಮೇಕೆ.

VISTARANEWS.COM


on

Bakrid
Koo

ಬೆಂಗಳೂರು : ಬಕ್ರೀದ್‌ ಮುಸ್ಲಿಂ ಭಾಂದವರು ಆಚರಿಸುವ ಹಬ್ಬ. ಬಕ್ರೀದ್‌ (Bakrid) ಹಬ್ಬದಂದು ಮೇಕೆಗಳನ್ನು ಬಲಿಕೊಡುವುದು ಅವರ ಸಂಪ್ರದಾಯ. ಇನ್ನು ವಿಶೇಷವೆಂದರೆ ಈ ಬಕ್ರೀದ್‌ ಹಬ್ಬದಂದು ಬಲಿದಾನದ ಫಲ ಸಿಗಬೇಕೆಂದರೆ ಮೇಕೆಯನ್ನು ಅವರ ಸ್ವಂತ ಹಣದಿಂದ ಖರೀದಿಸಬೇಕಂತೆ. ಈ ರೀತಿ ಮಾಡುವುದರಿಂದ ಅವರಿಗೆ ಬಲಿದಾನದ ಸಂಪೂರ್ಣ ಫಲ ಸಿಗುತ್ತದೆ ಎನ್ನುವುದು ಅವರ ನಂಬಿಕೆ. ಹಾಗಾಗಿ ಮುಸ್ಲಿಂರು ಮೇಕೆಗಳನ್ನು ಕಷ್ಟಪಟ್ಟು ದುಡಿದ ಹಣದಿಂದ ಖರೀದಿಸುತ್ತಾರಂತೆ. ಆದರೆ ಬಕ್ರೀದ್ ದಿನ ಮೇಕೆಗಳ ಬೆಲೆ ಮಾತ್ರ ಗಗನಕ್ಕೇರಿರುತ್ತದೆ.

ಇನ್ನು ಈ ಸಂದರ್ಭದಲ್ಲಿ ಲಕ್ಷಾಂತರ ಬೆಲೆಗೆ ಮೇಕೆಗಳು ಮಾರಾಟವಾಗುತ್ತವೆ. ಒಂದೊಂದು ಮೇಕೆಗೂ ಒಂದೊಂದು ಬೆಲೆ ಇರುತ್ತದೆ. ಆದರೆ ಈ ಮೇಕೆಗಳಲ್ಲಿ ಒಂದು ಬಹಳ ದುಬಾರಿ ಮೇಕೆ ಇದೆ. ಅದರ ಬಗ್ಗೆ ತಿಳಿದುಕೊಳ್ಳಿ.
ಬ್ರಾಡ್ ಎಂಬ ಹೆಸರಿನ ಮೇಕೆ ವಿಶ್ವದಲ್ಲಿ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ. ಹಾಗಾಗಿ ಅದರ ಹೆಸರು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ದಾಖಲಾಗಿದೆ.. ವರ್ಲ್ಡ್ ರೆಕಾರ್ಡ್ಸ್ ನ ಪ್ರಕಾರ, ಈ ಮೇಕೆಯ ಬೆಲೆ 82,600 ಯುಎಸ್ ಡಿ ಆಗಿದೆ. ಅಂದರೆ ಭಾರತೀಯ ರೂಪಾಯಿಗಳಲ್ಲಿ ಹೇಳುವುದಾದರೆ ಇದರ ಬೆಲೆ ಅಂದಾಜು 69 ಲಕ್ಷ ರೂ.ಗಳಾಗಿವೆ. ಇಂತಹ ಅತ್ಯಂತ ದುಬಾರಿ ಬೆಲೆಯ ಮೇಲೆ ಬ್ರಿಟನ್ ನಲ್ಲಿ ಹೆಚ್ಚು ಮಾರಾಟವಾಗುತ್ತದೆಯಂತೆ. ಇದಕ್ಕೆ ಇತ್ತೀಚಿನ ದಿನಗಳಲ್ಲಿ ಈ ಬೆಲೆ ನಿಗದಿಯಾಗಿಲ್ಲ ಬಹಳ ಹಿಂದೆ ಅಂದರೆ 1985ರಲ್ಲಿಯೇ ಈ ಮೇಕೆಗೆ ದುಬಾರಿ ಬೆಲೆ ನೀಡಲಾಗುತ್ತಿತ್ತಂತೆ.

ಅಂಗೋರಾ ಮೇಕೆಯ ವಿಶೇಷತೆಗಳು:

ಬಿಳಿ ಬಣ್ಣದ ಕೂದಲನ್ನು ಹೊಂದಿರುವ ಈ ಅಂಗೋರಾ ಮೇಕೆಗಳು ವಿಶ್ವದ ಅತ್ಯುತ್ತಮ ಮೇಕೆ ತಳಿಗಳಲ್ಲಿ ಒಂದಾಗಿದೆ. ಈ ಮೇಕೆಗಳನ್ನು ಉಣ್ಣೆಗಳಿಗಾಗಿ ಹೆಚ್ಚಿನ ಜನರು ಸಾಕುತ್ತಾರೆ. ಇದರಿಂದ ದೊರೆಯುವ ಉಣ್ಣೆಗಳಿಗೆ ಮೊಹೇರ್ ಎಂದು ಕರೆಯುತ್ತಾರೆ. ಇದರ ಉಣ್ಣೆ ಉತ್ತಮ ಗುಣಮಟ್ಟದಾಗಿರುತ್ತದೆ. ಹಾಗಾಗಿ ಈ ಮೇಕೆಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತದೆ. ಬಕ್ರೀದ್ ಸಮಯದಲ್ಲಿ ಅನೇಕ ಜನರು ಹಣಕ್ಕಾಗಿ ಅವುಗಳನ್ನು ಮಾರಾಟ ಮಾಡುತ್ತಾರೆ.
ಮೇಕೆಗಳು ಅವುಗಳ ತಳಿಗಳ ಆಧಾರದ ಮೇಲೆ ವಿಶೇಷತೆಯನ್ನು ಹೊಂದಿರುತ್ತವೆ. ಮೇಕೆಗಳಲ್ಲಿ ಕೆಲವು ಕಪ್ಪು, ಬಿಳಿ ಬಣ್ಣದಲ್ಲಿದ್ದರೆ ಕೆಲವು ತಳಿಗಳ ಮೇಕೆಗಳ ಮೈಮೇಲೆ ವಿಶಿಷ್ಟವಾದ ಗುರುತುಗಳಿರುತ್ತದೆ. ಹಾಗಾಗಿ ಅವುಗಳನ್ನು ವಿಶೇಷವಾದವು ಎನ್ನಲಾಗುತ್ತದೆ.

ಇದನ್ನೂ ಓದಿ:ಸೇಬು ಹಣ್ಣುಗಳ ಮೇಲೆ ಸ್ಟಿಕ್ಕರ್; ಏನಿದರ ಹಿಂದಿರುವ ರಹಸ್ಯ?

ಇದೇ ರೀತಿ 2023ರಲ್ಲಿ ಮೈಮೇಲೆ ವಿಶಿಷ್ಟ ಗುರುತುಗಳನ್ನು ಹೊಂದಿರುವ ಮೇಕೆಯೊಂದು ಬಹಳ ಪ್ರಸಿದ್ಧವಾಗಿತ್ತು. ಅದು ಮೈಮೇಲೆ ವಿಶಿಷ್ಟ ಗುರುತುಗಳನ್ನು ಹೊಂದಿರುವ ಕಾರಣ ಅದರ ಮಾಲೀಕ 1 ಕೋಟಿ 12 ಲಕ್ಷದ 786 ರೂ. ಎಂಬುದಾಗಿ ತಿಳಿಸಿದ್ದ. ಈ ಮೇಕೆಯ ಹೆಸರು ಶೇರು. ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಮೇಕೆ ಮಾಲೀಕನೊಬ್ಬನ ಬಳಿ ಇದು ಇತ್ತು. ಇದರ ದೇಹದ ಮೇಲೆ ಇದ್ದ ಗುರುತುಗಳನ್ನು ಹತ್ತಿರದಿಂದ ನೋಡಿದರೆ ಅದು “ ಅಲ್ಲಾ” ಮತ್ತು “ಮೊಹಮ್ಮದ್” ಎಂದು ಉರ್ದುವಿನಲ್ಲಿ ಬರೆದಿರುವುದನ್ನು ಕಾಣಬಹುದು. ಆದರೆ ಈ ಮೇಕೆ ಮಾರಾಟವಾಗುವ ಮುನ್ನವೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Continue Reading

Latest

Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

Actress Nayanathara: ಬಾಹುಬಲಿ…. ಈ ಸಿನಿಮಾದ ಹೆಸರು ಕೇಳುತ್ತಲೇ ಮೈ ನವಿರೇಳುತ್ತದೆ. ಜನಮಾನಸದಲ್ಲಿ ಹಾಸುಹೊಕ್ಕಾಗಿರುವ ಸಿನಿಮಾವಿದು. ದಕ್ಷಿಣ ಭಾರತದ ಹಿಟ್ ಚಲನಚಿತ್ರಗಳಲ್ಲಿ ಒಂದಾದ ಬಾಹುಬಲಿ ಚಿತ್ರ ಜನರ ಮೆಚ್ಚುಗೆಯನ್ನು ಪಡೆದ ಸೂಪರ್ ಹಿಟ್ ಚಿತ್ರವಾಗಿತ್ತು. ಅದರ ಒಂದೊಂದು ದೃಶ್ಯವು ಅಮೋಘವಾಗಿ ಮೂಡಿಬಂದಿತ್ತು. ಈ ಸೂಪರ್ ಹಿಟ್ ಚಿತ್ರದ ದೃಶ್ಯವೊಂದನ್ನು ನಯನತಾರಾ ಹಾಗೂ ವಿಘ್ನೇಶ್ ಪುತ್ರರು ಮರುಸೃಷ್ಟಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೊವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ನಟಿ ನಯನತಾರಾ ವಿಘ್ನೇಶ್ ಶಿವನ್ ಅವರಿಗೆ ತಂದೆಯ ದಿನದ ಶುಭಾಶಯ ತಿಳಿಸಿದ್ದಾರೆ.

VISTARANEWS.COM


on

Actress Nayanathara
Koo

ಬೆಂಗಳೂರು: ಕಾಲಿವುಡ್ ನಟಿ ನಯನತಾರಾ(Actress Nayanathara) ಹಾಗೂ ನಿರ್ಮಾಪಕ ವಿಘ್ನೇಶ್ ದಂಪತಿ ಉಯಿರ್ ಮತ್ತು ಉಲಗ್ ಎಂಬ ಅವಳಿ ಮಕ್ಕಳನ್ನು ಹೊಂದಿರುವ ವಿಚಾರ ಎಲ್ಲರಿಗೂ ತಿಳಿದಿದೆ. ಈ ದಂಪತಿ ಇತ್ತೀಚಿಗೆ ತಮ್ಮ ಮುದ್ದಿನ ಮಕ್ಕಳೊಂದಿಗೆ ಖುಷಿ ಖುಷಿಯಾಗಿ ಸಮಯವನ್ನು ಕಳೆಯುತ್ತಿದ್ದಾರೆ. ಈ ನಡುವೆ ಈ ದಂಪತಿ ಸೂಪರ್ ಹಿಟ್ ಸಿನಿಮಾವೊಂದರ ದೃಶ್ಯವನ್ನು ತಮ್ಮ ಮಕ್ಕಳ ಮೂಲಕ ಮರು ಸೃಷ್ಟಿ ಮಾಡಿದ್ದಾರೆ.

ದಕ್ಷಿಣ ಭಾರತದ ಹಿಟ್ ಚಲನಚಿತ್ರಗಳಲ್ಲಿ ಒಂದಾದ ಬಾಹುಬಲಿ ಚಿತ್ರ ಜನರ ಮೆಚ್ಚುಗೆಯನ್ನು ಪಡೆದ ಸೂಪರ್ ಹಿಟ್ ಚಿತ್ರವಾಗಿತ್ತು. ಅದರ ಒಂದೊಂದು ದೃಶ್ಯವು ಅಮೋಘವಾಗಿ ಮೂಡಿಬಂದಿತ್ತು. ಹಾಗಾಗಿ ಅದು ಹೆಚ್ಚಿನ ಪ್ರೇಕ್ಷಕರನ್ನು ಆಕರ್ಷಿಸಿತ್ತು. ಇಂತಹ ಸೂಪರ್ ಹಿಟ್ ಚಿತ್ರ ದೃಶ್ಯವೊಂದನ್ನು ನಯನತಾರಾ ಹಾಗೂ ವಿಘ್ನೇಶ್ ಪುತ್ರರು ಮರುಸೃಷ್ಟಿ ಮಾಡಿದ್ದಾರೆ.

ಈ ಚಿತ್ರದಲ್ಲಿ ರಮ್ಯಕೃಷ್ಣರವರು ಶಿವಗಾಮಿ ಪಾತ್ರದಲ್ಲಿ ನೀರಿನಲ್ಲಿ ಮುಳುಗುತ್ತಿರುವಾಗ ಬಾಹುಬಲಿಯನ್ನು ಕೈಯಲ್ಲಿ ಎತ್ತಿ ಹಿಡಿದಿರುವ ದೃಶ್ಯ ಇಂದಿಗೂ ಎಲ್ಲರ ಮನದಲ್ಲಿ ನೆಲೆಯೂರಿದೆ. ಅಂತಹ ದೃಶ್ಯವನ್ನು ಇದೀಗ ವಿಘ್ನೇಶ್‌ ಅವರು ಮರುಸೃಷ್ಟಿ ಮಾಡಿದ್ದಾರೆ. ತಮ್ಮ ಮಕ್ಕಳಿಗೆ ಬಾಹುಬಲಿ ಸಾಂಪ್ರದಾಯಿಕ ಉಡುಗೆಯನ್ನು ತೊಡಿಸಿ, ವಿಘ್ನೇಶ್ ಅವರು ನೀರಿನಲ್ಲಿ ಮುಳುಗಿಕೊಂಡು ತಮ್ಮ ಮಕ್ಕಳನ್ನು ಕೈಯಲ್ಲಿ ಎತ್ತಿ ಹಿಡಿದಿದ್ದಾರೆ. ಹಾಗೇ ಇದಕ್ಕೆ ಸಂಬಂಧಿಸಿದ ಫೋಟೊವನ್ನು ನಯನತಾರಾ ಅವರು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡು “My dear Baahubali 1&2 cos of U 2. It’s a Happy Father’s Day. Life with U boys sooo sooo amazingly satisfying. Love you my uyir & ulag @nayanathara(sic)” ಎಂಬ ಶೀರ್ಷಿಕೆ ನೀಡಿದ್ದಾರೆ.

ನಯನತಾರಾ ಈ ಫೋಟೊವನ್ನು ಹಂಚಿಕೊಳ್ಳುವ ಮೂಲಕ ವಿಘ್ನೇಶ್ ಶಿವನ್ ಅವರಿಗೆ ತಂದೆಯ ದಿನದ ಶುಭಾಶಯ ತಿಳಿಸಿದ್ದಾರೆ. ಹಾಗೇ ಮಕ್ಕಳ ಆಗಮನದಿಂದ ಅವರ ಜೀವನ ಎಷ್ಟು ತೃಪ್ತಿಕರವಾಗಿದೆ ಎಂಬುದನ್ನು ವಿವರಿಸಿದ್ದಾರೆ.
ನಯನತಾರಾ ಹಾಗೂ ವಿಘ್ನೇಶ್ ತಮ್ಮ ಅವಳಿ ಗಂಡುಮಕ್ಕಳಾದ ಉಯಿರ್ ಮತ್ತು ಉಲಗ್ ಅವರನ್ನು ಅಕ್ಟೋಬರ್ 2022ರಲ್ಲಿ ಬಾಡಿಗೆ ತಾಯ್ತನದ ಮೂಲಕ ಸ್ವಾಗತಿಸಿದರು. ಅಂದಿನಿಂದ ಅವರು ತಮ್ಮ ಮುದ್ದಾದ ಮಕ್ಕಳೊಂದಿಗಿನ ಫೋಟೊಗಳು ಮತ್ತು ವಿಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಅವರು ತಮ್ಮ ಮಕ್ಕಳೊಂದಿಗೆ ಮೋಜು ಮಸ್ತಿ ಮಾಡಲು ಹಾಂಗ್‌ಕಾಂಗ್‌ಗೆ ಹೋಗಿದ್ದರು.

ಇದನ್ನೂ ಓದಿ: Viral Video: ನಾಯಿ ಜತೆ ವಾಕಿಂಗ್ ನೋಡಿರುತ್ತೀರಿ, ಹುಲಿ ಜತೆ? ಈ ವಿಡಿಯೊ ನೋಡಿ!

ಪ್ರಸ್ತುತ ನಯನತಾರಾ ಅವರು ನಿವಿನ್ ಪೌಲಿ ಅವರೊಂದಿಗೆ ‘ಡಿಯರ್ ಸ್ಟೂಡೆಂಟ್ಸ್’ ಚಿತ್ರದ ಚಿತ್ರೀಕರಣದಲ್ಲಿದ್ದಾರೆ. ಹಾಗೇ ಟೆಸ್ಟ್’ ಮತ್ತು ‘ಮನ್ನಂಗಟ್ಟಿ 1960’ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ನಿರ್ಮಾಪಕ, ನಿರ್ದೇಶಕ ವಿಘ್ನೇಶ್ ಅವರು ಪ್ರದೀಪ್ ರಂಗನಾಥನ್, ಕೃತಿ ಶೆಟ್ಟಿ ಮತ್ತು ಎಸ್.ಜೆ ಸೂರ್ಯ ಅಭಿನಯದ ‘ಲವ್ ಇನ್ಶೂರೆನ್ಸ್ ಕಾರ್ಪೊರೇಷನ್’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

Continue Reading

ದೇಶ

Train Accident: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್​ ರೈಲು ಡಿಕ್ಕಿ; 5 ಮಂದಿ ಸಾವು

Train Accident: ಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

VISTARANEWS.COM


on

Train Accident
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ (Kanchanjunga Express) ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ (Train Accident).

ʼʼಅಪಘಾತದಲ್ಲಿ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 20-25 ಮಂದಿಗೆ ಗಂಭೀರ ಗಾಯವಾಗಿವೆ. ಪರಿಸ್ಥಿತಿ ಗಂಭೀರವಾಗಿದೆ. ಗೂಡ್ಸ್ ರೈಲು ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ” ಎಂದು ಡಾರ್ಜಿಲಿಂಗ್ ಎಸ್‌ಪಿ ಅಭಿಷೇಕ್ ರಾಯ್ ಮಾಹಿತಿ ನೀಡಿದ್ದಾರೆ. ಗಾಯಗೊಂಡಿರುವವರನ್ನು ನ್ಯೂ ಜಲ್‌ಪೈಗುರಿ ಜಂಕ್ಷನ್‌ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗರ್ತಲಾದಿಂದ ಸೀಲ್ದಾಹ್‌ಗೆ ಪ್ರಯಾಣಿಸುತ್ತಿದ್ದ 13174 ಸಂಖ್ಯೆಯ ಕಾಂಚನಜುಂಗಾ ಎಕ್ಸ್‌ಪ್ರೆಸ್ ರಂಗಪಾಣಿ ಮತ್ತು ಚಥರ್‌ಹತ್ ನಿಲ್ದಾಣದ ಮಧ್ಯೆ ಅಪಘಾತಕ್ಕೀಡಾಗಿ ಹಳಿ ತಪ್ಪಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ʼʼಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಯಿತು. ಕಾಂಚನಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ವೈದ್ಯಕೀಯ ನೆರವಿಗಾಗಿ ಡಿಎಂ, ಎಸ್ಪಿ, ವೈದ್ಯರು, ಆಂಬ್ಯುಲೆನ್ಸ್‌ಗಳು ಮತ್ತು ವಿಪತ್ತು ತಂಡಗಳು ಸ್ಥಳಕ್ಕೆ ಧಾವಿಸಿವೆʼʼ ಎಂದು ತಿಳಿಸಿದ್ದಾರೆ.

ಡಿಕ್ಕಿ ಹಿಡೆದ ರಭಸಕ್ಕೆ ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿ ತಪ್ಪಿವೆ ಎಂದು ತಿಳಿದುಬಂದಿದೆ. ಕಾಂಚನಜುಂಗಾ ಎಕ್ಸ್‌ಪ್ರೆಸ್‌ ಬಂಗಾಳವನ್ನು ಈಶಾನ್ಯ ನಗರಗಳಾದ ಸಿಲ್ಚಾರ್ ಮತ್ತು ಅಗರ್ತಲಾದೊಂದಿಗೆ ಸಂಪರ್ಕಿಸುತ್ತದೆ. ಈ ಮಾರ್ಗವು ಚಿಕನ್ಸ್ ನೆಕ್ ಕಾರಿಡಾರ್‌ನಲ್ಲಿದೆ. ಈ ಮಾರ್ಗದಲ್ಲಿನ ಅಪಘಾತವು ಹಲವು ರೈಲುಗಳ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಸಹಾಯವಾಣಿ

ರೈಲ್ವೆ ಇಲಾಖೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. 033-23508794 ಮತ್ತು 033-23833326 (ಸೀಲ್ಡಾ) ಹಾಗೂ 03612731621, 03612731622 ಮತ್ತು 03612731623 (ಗುವಾಹಟಿ) ಸಂಖ್ಯೆಯನ್ನು ಸಂಪರ್ಕಿಸಬಹುದು.

ರಕ್ಷಣಾ ಕಾರ್ಯಾಚರಣೆಗಳು ಸಮರೋಪಾದಿಯಲ್ಲಿ ಪ್ರಾರಂಭವಾಗಿವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಎಕ್ಸ್ ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. “ಎನ್ಎಫ್ಆರ್ ವಲಯದಲ್ಲಿ ಅಪಘಾತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿದೆ. ರೈಲ್ವೆ, ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ಕಾರ್ಯನಿರ್ವಹಿಸುತ್ತಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ” ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಜೂನ್‌ನಲ್ಲಿ ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ 238ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಒಡಿಶಾದ ಬಾಲಾಸೋರ್‌ ಜಿಲ್ಲೆಯಲ್ಲಿ ಶಾಲಿಮಾರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್‌ ರೈಲು, ಬೆಂಗಳೂರು-ಹೌರಾ ರೈಲು ಹಾಗೂ ಗೂಡ್ಸ್‌ ರೈಲು ಡಿಕ್ಕಿಯಾಗಿದ್ದು ಈ ಅಪಘಾತ ಸಂಭವಿಸಿತ್ತು. ಈ ದುರಂತದಲ್ಲಿ 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಅದೇ ವರ್ಷ ಅಕ್ಟೋಬರ್‌ನಲ್ಲಿ ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಸಂಭವಿಸಿದ ಎರಡು ರೈಲುಗಳ ಡಿಕ್ಕಿಯಲ್ಲಿ 13 ಮಂದಿ ಅಸುನೀಗಿದ್ದರು. ಆ ಆಘಾತಗಳು ಮರೆಯುವ ಮುನ್ನ ಮತ್ತೊಂದು ದೊಡ್ಡ ದುರಂತ ನಡೆದಿದೆ.

ಇದನ್ನೂ ಓದಿ: Andhra train accident: 13 ಜನರ ಬಲಿ ಪಡೆದ ಆಂಧ್ರ ರೈಲು ಅಪಘಾತದ‌ ಮೂಲ ಕಾರಣ ಬಹಿರಂಗ

Continue Reading
Advertisement
Sandeep Lamichhane
ಕ್ರೀಡೆ2 mins ago

Sandeep Lamichhane: ಪಾಕ್​ ಆಟಗಾರನನ್ನು ಹಿಂದಿಕ್ಕಿ ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ನೇಪಾಳ ಸ್ಪಿನ್ನರ್​

Yogi Adithyanath
Latest4 mins ago

Yogi Adithyanath: ಎರಡು ವರ್ಷಗಳ ಬಳಿಕ ತಾಯಿಯನ್ನು ಭೇಟಿಯಾದ ಯೋಗಿ ಆದಿತ್ಯನಾಥ್

Reasi Terror Attack
ವೈರಲ್ ನ್ಯೂಸ್14 mins ago

Reasi Terror Attack: ಪಾಕಿಸ್ತಾನದಲ್ಲಿ ರಿಯಾಸಿ ಭಯೋತ್ಪಾದಕ ದಾಳಿಯ ಮಾಸ್ಟರ್‌ ಮೈಂಡ್‌ನ ಹತ್ಯೆ; ವಿಡಿಯೊ ವೈರಲ್‌

Bakrid 2024
ಬೆಂಗಳೂರು28 mins ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Actor Darshan Please leave Pavitra Darshan request to police
ಸಿನಿಮಾ39 mins ago

Actor Darshan: ಪ್ಲೀಸ್‌ ಪವಿತ್ರಾಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿರುವ ದರ್ಶನ್‌?

Bakrid
Latest40 mins ago

Bakrid: ಬಕ್ರೀದ್ ಹಿನ್ನೆಲೆಯಲ್ಲಿ ಮಾರಾಟಕ್ಕಿಟ್ಟಿದ್ದ ಈ ಮೇಕೆಯ ಬೆಲೆ 69 ಲಕ್ಷ ರೂ!

Real Estate
ವಾಣಿಜ್ಯ46 mins ago

Real Estate: ಹಲವರಿಗೆ ಮನೆ ಇಲ್ಲ, ಇದ್ದವರು ಬಳಸುತ್ತಿಲ್ಲ! ದೇಶದಲ್ಲಿ 1 ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ಖಾಲಿ ಬಿದ್ದಿವೆ!

Smriti Mandhana
ಕ್ರೀಡೆ47 mins ago

Smriti Mandhana: ಶತಕ ಬಾರಿಸಿ ವಿಶೇಷ ದಾಖಲೆ ಬರೆದ ಸ್ಮೃತಿ ಮಂಧಾನ

Actress Nayanathara
Latest57 mins ago

Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

Actor Darshan Rakshak Bullet Not Celebrating His Birthday Due To Darshan Arrest
ಸ್ಯಾಂಡಲ್ ವುಡ್1 hour ago

Actor Darshan: ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿದ್ದಾರೆ; ಬರ್ತ್‌ಡೇ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು28 mins ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ19 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ20 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌