Trinity Golf Champions League : ಕಪಿಲ್ ದೇವ್​ ನೇತೃತ್ವದ ಟ್ರಿನಿಟಿ ಗಾಲ್ಫ್ ಚಾಂಪಿಯನ್ಸ್ ಲೀಗ್​​ನ 2ನೇ ಆವೃತ್ತಿಗೆ ಬೆಂಗಳೂರು ಆತಿಥ್ಯ - Vistara News

ಪ್ರಮುಖ ಸುದ್ದಿ

Trinity Golf Champions League : ಕಪಿಲ್ ದೇವ್​ ನೇತೃತ್ವದ ಟ್ರಿನಿಟಿ ಗಾಲ್ಫ್ ಚಾಂಪಿಯನ್ಸ್ ಲೀಗ್​​ನ 2ನೇ ಆವೃತ್ತಿಗೆ ಬೆಂಗಳೂರು ಆತಿಥ್ಯ

Trinity Golf Champions League: 2024ರ ಸೆಪ್ಟೆಂಬರ್​ನಲ್ಲಿ ಈ ಚಾಂಪಿಯನ್​ಷಿಪ್​ಗೆ ಬೆಂಗಳೂರು ಆತಿಥ್ಯ ವಹಿಸಲಿದ್ದು. ರೋಮಾಂಚಕ ಮುಖಾಮುಖಿಯಲ್ಲಿ ಭಾರತದ 7 ಹಾಗೂ ಶ್ರೀಲಂಕಾದ 1 ತಂಡ ಭಾಗವಹಿಸಲಿವೆ. ಈ ಪಂದ್ಯಾವಳಿಯು ವೈಯಕ್ತಿಕ ಪ್ರತಿಭೆ ಮತ್ತು ತಂಡಗಳ ಕಾರ್ಯತಂತ್ರಗಳು ಈ ಪಂದ್ಯಾವಳಿಯಲ್ಲಿ ಅನಾವರಣಗೊಳ್ಳಲಿವೆ.

VISTARANEWS.COM


on

Trinity Golf Champions League
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು, ಜುಲೈ 18: ಕ್ರಿಕೆಟ್ ದಂತಕತೆ ಕಪಿಲ್ ದೇವ್ (Kapil Dev)​ ನೇತೃತ್ವದ ಟ್ರಿನಿಟಿ ಗಾಲ್ಫ್ ಚಾಂಪಿಯನ್ಸ್ ಲೀಗ್​​ನ (Trinity Golf Champions League) ಎರಡನೇ ಆವೃತ್ತಿಯನ್ನು ಜುಲೈ 18ರಂದು ಘೋಷಿಸಲಾಯಿತು. ಇದು ಭಾರತೀಯ ಗಾಲ್ಫ್​ ಕ್ಷೇತ್ರವನ್ನು ಮರುವ್ಯಾಖ್ಯಾನಿಸುವ ಟೂರ್ನಿಯಾಗಿದೆ. 2024ರ ಸೆಪ್ಟೆಂಬರ್​ನಲ್ಲಿ ಈ ಚಾಂಪಿಯನ್​ಷಿಪ್​ಗೆ ಬೆಂಗಳೂರು ಆತಿಥ್ಯ ವಹಿಸಲಿದ್ದು. ರೋಮಾಂಚಕ ಮುಖಾಮುಖಿಯಲ್ಲಿ ಭಾರತದ 7 ಹಾಗೂ ಶ್ರೀಲಂಕಾದ 1 ತಂಡ ಭಾಗವಹಿಸಲಿವೆ. ಈ ಪಂದ್ಯಾವಳಿಯು ವೈಯಕ್ತಿಕ ಪ್ರತಿಭೆ ಮತ್ತು ತಂಡಗಳ ಕಾರ್ಯತಂತ್ರಗಳು ಈ ಪಂದ್ಯಾವಳಿಯಲ್ಲಿ ಅನಾವರಣಗೊಳ್ಳಲಿವೆ.

ಪಂದ್ಯಾವಳಿಯನ್ನು ಪ್ರಕಟಿಸಿದ ದಿಗ್ಗಜ ಕ್ರೀಡಾಪಟು ಕಪಿಲ್ ದೇವ್ “ಗಾಲ್ಫ್ ಅಪಾರ ಕೌಶಲ್ಯ ಮತ್ತು ಏಕಾಗ್ರತೆಯನ್ನು ಬೇಡುವ ಕ್ರೀಡೆಯಾಗಿದೆ, ಆದರೆ ಇದನ್ನು ಹೆಚ್ಚಾಗಿ ವೈಯಕ್ತಿಕ ಸಾಧನೆಯಾಗಿ ನೋಡಲು ಸಾಧ್ಯ. ಟಿಜಿಸಿಎಲ್​​ನ ಎರಡನೇ ಆವೃತ್ತಿಯು ವೃತ್ತಿಪರರು, ಹವ್ಯಾಸಿಗಳು ಮತ್ತು ಪ್ರಸಿದ್ಧ ಗಾಲ್ಫ್ ಆಟಗಾರರನ್ನು ತಂಡವಾಗಿ ಸ್ಪರ್ಧಿಸಲು ಒಂದೆಡೆ ಸೇರಿಸಲಿದೆ, ಈ ಕೂಟವು ಸ್ನೇಹಪರತೆ ಮತ್ತು ಕಾರ್ಯತಂತ್ರದ ಸಹಯೋಗದ ಮನೋಭಾವವನ್ನು ಬೆಳೆಸಲಿದೆ, ಇದು ಗಾಲ್ಫ್ ಅಭಿಮಾನಿಗಳು ಹಿಂದೆಂದೂ ಕಂಡರಿಯದ ರೀತಿಯಲ್ಲೂ ಕ್ರೀಡಾಕೂಟವಾಗಿರಲಿದೆ. ವಿದೇಶದ ತಂಡ ಸೇರಿದಂತೆ 8 ತಂಡಗಳನ್ನು ಈ ಪಂದ್ಯಾವಳಿಗೆ ಪರಿಚಯಿಸಲು ನಾವು ರೋಮಾಂಚನಗೊಂಡಿದ್ದೇವೆ. ಅತ್ಯುತ್ತಮ ತಂಡ ಸ್ವರೂಪ ಮತ್ತು ವಿಶ್ವದಾದ್ಯಂತದ ಪ್ರತಿಭಾವಂತ ಗಾಲ್ಫ್ ಆಟಗಾರರ ಭಾಗವಹಿಸುವಿಕೆಯೊಂದಿಗೆ, ಟಿಜಿಸಿಎಲ್​​ನ ಎರಡನೇ ಆವೃತ್ತಿಯು ಗಾಲ್ಫ್ ಉತ್ಸಾಹಿಗಳು ಮತ್ತು ಕ್ರೀಡಾ ಅಭಿಮಾನಿಗಳಿಗೆ ರೋಮಾಂಚನ ನೀಡಲಿದೆ ” ಎಂದು ಹೇಳಿದರು.

ಇದನ್ನೂ ಓದಿ: Natasa Stankovic : ಹಾರ್ದಿಕ್ ಪಾಂಡ್ಯಗೆ ಡೈವೋರ್ಸ್​ ನೀಡಿದ್ದೇನೆ; ಪತ್ನಿ ನತಾಶಾ ಹೇಳಿಕೆ

ಸೆಪ್ಟೆಂಬರ್ 2023ರಲ್ಲಿ ನಡೆದ ಉದ್ಘಾಟನಾ ಋತುವಿನ ಅದ್ಭುತ ಯಶಸ್ಸಿನ ಆಧಾರದ ಮೇಲೆ, ಈ ವರ್ಷ ಟಿಜಿಸಿಎಲ್ ಐಪಿಎಲ್ ಸ್ವರೂಪದಲ್ಲಿ ಕನಿಷ್ಠ ನಾಲ್ಕು ಟೂರ್ನಮೆಂಟ್ ಸುತ್ತುಗಳನ್ನು ಆಡುತ್ತಿದೆ, ಭಾರತದ ಏಳು ನಗರಗಳನ್ನು ಪ್ರತಿನಿಧಿಸುವ ತಂಡಗಳು ಮತ್ತು ಶ್ರೀಲಂಕಾದ ಒಂದು ತಂಡಗಳು ಸ್ಪರ್ಧಿಸಲಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ 741 ಹುದ್ದೆ; 10ನೇ ತರಗತಿ ಪಾಸಾದವರಿಗೂ ಇದೆ ಅವಕಾಶ

Indian Navy Recruitment: ಭಾರತೀಯ ನೌಕಾ ಪಡೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಚಾರ್ಜ್‌ಮ್ಯಾನ್‌, ಟ್ರೇಡ್ಸ್‌ಮ್ಯಾನ್‌, ಕುಕ್‌, ಫೈರ್‌ ಮ್ಯಾನ್‌ ಸೇರಿದಂತೆ ಒಟ್ಟು 741 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10, 12ನೇ ತರಗತಿ, ಡಿಪ್ಲೋಮಾ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಜುಲೈ 20ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆಯ ದಿನ ಆಗಸ್ಟ್‌ 2

VISTARANEWS.COM


on

Indian Navy Recruitment
Koo

ನವದೆಹಲಿ: ಭಾರತೀಯ ನೌಕಾ ಪಡೆ (Indian Navy)ಯಲ್ಲಿ ಉದ್ಯೋಗ ನಿರ್ವಹಿಸಬೇಕು ಎನ್ನುವ ಕನಸು ಯಾರಿಗೆ ಇಲ್ಲ ಹೇಳಿ? ಇಂತಹ ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಭಾರತೀಯ ನೌಕಾ ಪಡೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Indian Navy Recruitment). ಚಾರ್ಜ್‌ಮ್ಯಾನ್‌, ಟ್ರೇಡ್ಸ್‌ಮ್ಯಾನ್‌, ಕುಕ್‌, ಫೈರ್‌ ಮ್ಯಾನ್‌ ಸೇರಿದಂತೆ ಒಟ್ಟು 741 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10, 12ನೇ ತರಗತಿ, ಡಿಪ್ಲೋಮಾ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಜುಲೈ 20ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆಯ ದಿನ ಆಗಸ್ಟ್‌ 2 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಚಾರ್ಜ್‌ಮ್ಯಾನ್‌ (ಮದ್ದುಗುಂಡು ಕಾರ್ಯಾಗಾರ) 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ, ಬಿ.ಎಸ್‌ಸಿ
ಚಾರ್ಜ್‌ಮ್ಯಾನ್‌ (ಫ್ಯಾಕ್ಟರಿ) 10 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ, ಬಿ.ಎಸ್‌ಸಿ
ಟ್ರೇಡ್ಸ್‌ಮ್ಯಾನ್‌ ಮೇಟ್ 161 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಕೀಟ ನಿಯಂತ್ರಣ ಕಾರ್ಯಕರ್ತ (Pest Control Worker) 18 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಕುಕ್ 9 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) (ಮಿನಿಸ್ಟ್ರಿಯಲ್) 16 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಚಾರ್ಜ್‌ಮ್ಯಾನ್‌ (ಮೆಕ್ಯಾನಿಕ್) 18 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಸೈಂಟಿಫಿಕ್ ಅಸಿಸ್ಟೆಂಟ್ 4 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಡ್ರಾಟ್ಸ್‌ಮ್ಯಾನ್‌ (Draughtsman) (ಕನ್ಟ್ರಕ್ಷನ್‌) 2 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಫೈರ್ ಮ್ಯಾನ್ 444 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಅಗ್ನಿಶಾಮಕ ಎಂಜಿನ್ ಚಾಲಕ 58 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ

ವಯೋಮಿತಿ ಮತ್ತು ಅರ್ಜಿ ಸುಲ್ಕ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18ರಿಂದ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಮಾಜಿ ಯೋಧರು / ಪಿಡಬ್ಲ್ಯುಬಿಡಿ / ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಇತರ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 295 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

Indian Navy Recruitment ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (joinindiannavy.gov.in).
  • ಹೆಸರು ನಮೂದಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಪ್ಲೀಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: ಅಂಚೆ ಇಲಾಖೆಯಿಂದ ಗುಡ್‌ನ್ಯೂಸ್‌: 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

Continue Reading

ಪ್ರಮುಖ ಸುದ್ದಿ

Microsoft Windows Outage: ಮೈಕ್ರೊಸಾಫ್ಟ್​​ ಸಮಸ್ಯೆ ; ಬೆಂಗಳೂರು ಸೇರಿದಂತೆ ದೇಶದ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲಕಲ್ಲೋಲ

Microsoft Windows Outage: ಬೆಂಗಳೂರಿನಿಂದ ನಾನಾ ಪ್ರದೇಶಗಳಿಗೆ ಹೊರಟಿದ್ದ ವಿಮಾನಗಳಿಗೆ ಪ್ರಯಾಣಿಕರಿಗೆ ಬೋರ್ಡಿಂಗ್ ಆಗಲು ಸಾಧ್ಯವಾಗಲಿಲ್ಲ. ನಿಲ್ದಾಣದ ಅಲ್ಲಲ್ಲಿ ಪ್ರಯಾಣಿಕರು ಆತಂಕದಲ್ಲಿ ಕಂಡು ಬಂದರು. ವಿಳಂಬ ಮತ್ತು ಇತರ ಸಮಸ್ಯೆ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಲು ವಿಮಾನಯಾನ ಸಂಸ್ಥೆಗಳಿಗೆ ಸಲಹೆ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯದ (ಎಂಒಸಿಎ) ಮೂಲಗಳುತಿಳಿಸಿವೆ. ಅಲ್ಲದೆ, ಸಮಸ್ಯೆ ಪರಿಹರಿಸಲು ಸಮನ್ವಯ ಸಾಧಿಸಲಾಗುತ್ತದೆ ಎಂದೂ ತಿಳಿಸಿದರು.

VISTARANEWS.COM


on

Microsoft Windows Outage
Koo

ನವದೆಹಲಿ: ಜಾಗತಿಕವಾಗಿ ಮೈಕ್ರೋಸಾಫ್ಟ್ ಕಾರ್ಯನಿರ್ವಹಣೆ ಸ್ಥಗಿತಗೊಂಡ (Microsoft Windows Outage) ಕಾರಣ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BIAL) ಸೇರಿದಂತೆ ಭಾರತದ ಎಲ್ಲ ವಿಮಾನ ನಿಲ್ದಾಣಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಮಾಹಿತಿ ದೊರಕದೆ ಪ್ರಯಾಣಿಕರು ಸಮಸ್ಯೆ ಎದುರಿಸಿದ್ದು ಎಲ್ಲಡೆ ಅಲ್ಲೋಲಕಲ್ಲೋಲ ಉಂಟಾಗಿದೆ. ಇಂಡಿಗೊ, ಅಕಾಸಾ ಏರ್, ಸ್ಪೈಸ್ ಜೆಟ್, ಏರ್ ಇಂಡಿಯಾ, ವಿಸ್ತಾರಾ ಮತ್ತು ಇತರ ವಿಮಾನಯಾನ ಸಂಸ್ಥೆಗಳ ಚೆಕ್-ಇನ್ ವ್ಯವಸ್ಥೆಗಳಿಗೆ ಸಮಸ್ಯೆಯಾಗಿವೆ. ಹೀಗಾಗಿ ದೇಶಾದ್ಯಂತ ಹಲವಾರು ವಿಮಾನ ನಿಲ್ದಾಣಗಳ ಕಾರ್ಯಾಚರಣೆಗೆ ಅಡಚಣೆ ಉಂಟಾಯಿತು. ರಾಷ್ಟ್ರ ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಲವಾರು ವಿಮಾನಗಳನ್ನು ರದ್ದುಪಡಿಸಲಾಯಿತು.

ಬೆಂಗಳೂರಿನಿಂದ ನಾನಾ ಪ್ರದೇಶಗಳಿಗೆ ಹೊರಟಿದ್ದ ವಿಮಾನಗಳಿಗೆ ಪ್ರಯಾಣಿಕರಿಗೆ ಬೋರ್ಡಿಂಗ್ ಆಗಲು ಸಾಧ್ಯವಾಗಲಿಲ್ಲ. ನಿಲ್ದಾಣದ ಅಲ್ಲಲ್ಲಿ ಪ್ರಯಾಣಿಕರು ಆತಂಕದಲ್ಲಿ ಕಂಡು ಬಂದರು. ವಿಳಂಬ ಮತ್ತು ಇತರ ಸಮಸ್ಯೆ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಲು ವಿಮಾನಯಾನ ಸಂಸ್ಥೆಗಳಿಗೆ ಸಲಹೆ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯದ (ಎಂಒಸಿಎ) ಮೂಲಗಳುತಿಳಿಸಿವೆ. ಅಲ್ಲದೆ, ಸಮಸ್ಯೆ ಪರಿಹರಿಸಲು ಸಮನ್ವಯ ಸಾಧಿಸಲಾಗುತ್ತದೆ ಎಂದೂ ತಿಳಿಸಿದರು.

ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು ಸಾಲುಗಟ್ಟಿ ನಿಂತಿದ್ದರು. ಬೋರ್ಡಿಂಗ್ ಪಾಸ್​ ಪಡೆಯಲು ಸಾಧ್ಯವಾಗದೇ ಮುಂದಕ್ಕೆ ಸಾಗಲಾಗದೆ ತೊಂದರೆಗೆ ಒಳಪಟ್ಟರು. ಸ್ಥಳೀಯವಾಗಿ ಇದ್ದ ಸಿಬ್ಬಂದಿಗಳು ಕೂಡ ಅದಕ್ಕೊಂದು ಪರಿಹಾರ ಸೂಚಿಸಲು ಸಾಧ್ಯವಾಗಲಿಲ್ಲ. ದೂರದ ಊರಿಗೆ ಪ್ರಯಾಣಕ್ಕೆ ಹೊರಟ ಜನರು ಆತಂಕ್ಕೆ ಒಳಗಾದರು.

ಮೈಕ್ರೋಸಾಫ್ಟ್ ವಕ್ತಾರರೊಬ್ಬರು ಮಾಹಿತಿ ನೀಡಿ, ಥರ್ಡ್​ ಪಾರ್ಟಿ ಸಾಫ್ಟ್​ವೇರ್ ಅಪ್​ಡೇಟ್​ನಿಂದಾಗಿ ವಿಂಡೋಸ್ ಸಾಧನಗಳ ಮೇಲೆ ಪರಿಣಾಮ ಬೀರಿದೆ. ನಾವು ಶೀಘ್ರದಲ್ಲೇ ಪರಿಹಾರವನ್ನು ಒದಗಿಸುತ್ತೇವೆ ಎಂದು ಹೇಳಿದ್ದಾರೆ.

ಟರ್ಮಿನಲ್​ನಲ್ಲಿ ಸಿಕ್ಕಿ ಹಾಕಿಕೊಂಡ ಪ್ರಯಾಣಿಕರು

ತಾಂತ್ರಿಕ ದೋಷದ ಕಾರಣ ವಿಮಾನ ನಿಲ್ದಾಣದ ಒಳಗಿನ ದೃಶ್ಯಗಳು ಸಮಸ್ಯಾತ್ಮಕವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಜನರು ತಮ್ಮ ಕಷ್ಟಗಳನ್ನು ವಿವರಿಸಿದ್ದರು. ಪ್ರಯಾಣಿಕರು ಟರ್ಮಿನಲ್​ನಲ್ಲಿ ಸಿಲುಕಿಕೊಂಡಿರುವ ವಿಡಿಯೊಗಳಿಗೆ.

ಮೈಕ್ರೋಸಾಫ್ಟ್ ಸಮಸ್ಯೆಯು ಬ್ಯಾಂಕುಗಳು ಹಣ ವರ್ಗಾವಣೆಗೂ ಬಾಧಿಸಿದೆ. ವಿಶ್ವಾದ್ಯಂತ ಮೈಕ್ರೋಸಾಫ್ಟ್ ಬಳಕೆದಾರು ನಾನಾ ರೀತಿಯ ಸಮಸ್ಯೆಗೆ ಒಳಗಾಗಿದ್ದಾಎತ. ಮೈಕ್ರೋಸಾಫ್ಟ್ 365 ಅಪ್ಲಿಕೇಶ ನ್​​ಗಳು ಮತ್ತು ಸೇವೆಗಳಿಗೆ ತೊಂದರೆಯಾಗಿದೆ. ಸಮಸ್ಯೆಗೆ ನಿಖರ ಕಾರಣ, ಸ್ವರೂಪ ಅಸ್ಪಷ್ಟ. ಮೈಕ್ರೋಸಾಫ್ಟ್ ತನ್ನ ಎಕ್ಸ್ ಪೋಸ್ಟ್​​ನಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ ಎಂದು ಸೂಚಿಸಿದ್ದರೂಹೇಳಿದಂತೆ ಆಗಿಲ್ಲ.

ಡೌನ್​ಡಿಟೆಕ್ಟರ್​ ವೀಸಾ, ಎಡಿಟಿ ಸೆಕ್ಯುರಿಟಿ, ಅಮೆಜಾನ್ ಮತ್ತು ಅಮೆರಿಕನ್ ಏರ್​ಲೈನ್ಸ್​ ಮತ್ತು ಡೆಲ್ಟಾದಂತಹ ವಿಮಾನಯಾನ ಸಂಸ್ಥೆಗಳಿಗೆ ಹೆಚ್ಚಿನ ತೊಂದರೆ ಆಗಿವೆ.

ವಿಮಾನ ನಿಲ್ದಾಣಗಳಲ್ಲಿ ಅಧ್ವಾನ

ಐಟಿ ಸಮಸ್ಯೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಕೆಲವು ಸೇವೆಗಳ ಮೇಲೆ ತಾತ್ಕಾಲಿಕವಾಗಿ ಪರಿಣಾಮ ಬೀರಿದೆ ಎಂದು ದೆಹಲಿ ವಿಮಾನ ನಿಲ್ದಾಣವು ಸೋಶಿಯಲ್ ಮೀಡಿಯಾ ಪೋಸ್ಟ್​​ನಲ್ಲಿ ತಿಳಿಸಿದೆ. ನಮ್ಮ ಪ್ರಯಾಣಿಕರ ತೊಂದರೆ ಕಡಿಮೆ ಮಾಡಲು ನಾವು ಎಲ್ಲಾ ಪಾಲುದಾರರೊಂದಿಗೆ ಸತತವಾಗಿ ಕೆಲಸ ಮಾಡುತ್ತಿದ್ದೇವೆ. ವಿಮಾನ ಮಾಹಿತಿಗಾಗಿ ಪ್ರಯಾಣಿಕರು ಸಂಬಂಧಪಟ್ಟ ವಿಮಾನಯಾನ ಸಂಸ್ಥೆ ಅಥವಾ ಸಹಾಯ ಕೇಂದ್ರಕ್ಕೆ ಸಂಪರ್ಕಿಸಲು ತಿಳಿಸಲಾಗಿದೆ ಹೇಳಿದೆ.

ವಿಮಾನಯಾನ ಸಂಸ್ಥೆ ಇಂಡಿಗೊ ಎಕ್ಸ್ ಪೋಸ್ಟ್​ ಮಾಡಿ ” ಮೈಕ್ರೋಸಾಫ್ಟ್ ಸ್ಥಗಿತದಿಂದ ನಮ್ಮ ವ್ಯವಸ್ಥೆಗಳಿಗೆ ತೊಂದರೆ ಆಗಿವೆ. ಇದು ಇತರ ಕಂಪನಿಗಳ ಮೇಲೂ ಪರಿಣಾಮ ಬೀರುತ್ತಿದೆ. ಬುಕಿಂಗ್, ಚೆಕ್-ಇನ್, ನಿಮ್ಮ ಬೋರ್ಡಿಂಗ್ ಪಾಸ್ ಮತ್ತು ​ವಿಮಾನಗಳ ಹಾರಾಟದ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದೆ.

ಸ್ಪೈಸ್ ಜೆಟ್ ಸಂಸ್ಥೆ, ನಾವು ಪ್ರಸ್ತುತ ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಈ ಸಮಸ್ಯೆಯನ್ನು ಪರಿಹರಿಸಲು ನಮ್ಮ ತಂಡವು ಕೆಲಸ ಮಾಡುತ್ತಿದೆ. ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ. ಸಮಸ್ಯೆ ಪರಿಹರಿಸಿದ ನಂತರ ವಿಷಯ ತಿಳಿಸುತ್ತೇವೆ ಎಂದು ಹೇಳಿದೆ.

ಏರ್​ ಇಂಡಿಯಾ ಪ್ರತಿಕ್ರಿಯಿಸಿ, ಪ್ರಸ್ತುತ ಮೈಕ್ರೋಸಾಫ್ಟ್ ಸ್ಥಗಿತದಿಂದಾಗಿ ನಮ್ಮ ಡಿಜಿಟಲ್ ವ್ಯವಸ್ಥೆಗಳ ಮೇಲೆ ತಾತ್ಕಾಲಿಕವಾಗಿ ಪರಿಣಾಮ ಬೀರಿವೆ. ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ. ಸಂದರ್ಭಕ್ಕೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸಿ ಎಂದಿದೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್ ಭದ್ರತೆಗಾಗಿ ಭಾರತೀಯ ಸೇನೆಯ ಶ್ವಾನದಳ!

ಏರ್ ಇಂಡಿಯಾ ಎಕ್ಸ್​​ಪ್ರೆಸ್​ “ಡಿಜಿಟಲ್ ಸಮಸ್ಯೆಗಳು ಜಾಗತಿಕವಾಗಿ ಅನೇಕ ವಿಮಾನಯಾನ ಸಂಸ್ಥೆಗಳು ಮತ್ತು ವಿಮಾನ ನಿಲ್ದಾಣಗಳ ಕಾರ್ಯಾಚರಣೆಗಳ ಮೇಲೆ ತಾತ್ಕಾಲಿಕವಾಗಿ ಪರಿಣಾಮ ಬೀರಿವೆ. ದಯವಿಟ್ಟು ನಿಮ್ಮ ಪ್ರಯಾಣವನ್ನು ಯೋಜಿಸಿ ಎಂದಿದೆ.

ಆಕಾಸಾ ಏರ್​​, ನಮ್ಮ ಸೇವಾ ಪೂರೈಕೆದಾರರೊಂದಿಗಿನ ಮೂಲಸೌಕರ್ಯ ಸಮಸ್ಯೆಗಳಿಂದಾಗಿ, ಬುಕಿಂಗ್, ಚೆಕ್-ಇನ್ ಮತ್ತು ಬುಕಿಂಗ್ ಸೇವೆಗಳನ್ನು ನಿರ್ವಹಿಸುವುದು ಸೇರಿದಂತೆ ನಮ್ಮ ಕೆಲವು ಆನ್ಲೈನ್ ಸೇವೆಗಳು ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ ಎಂದು ತಿಳಿಸಿದೆ.

ವಿಸ್ತಾರಾ ಏರ್​ಲೈನ್ಸ್ “ನಮ್ಮ ಸೇವಾ ಪೂರೈಕೆದಾರರು ಎದುರಿಸಿದ ಜಾಗತಿಕ ಸ್ಥಗಿತದಿಂದಾಗಿ ನಮ್ಮ ಕಾರ್ಯಾಚರಣೆಗಳಲ್ಲಿ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಸಾಧ್ಯವಾದಷ್ಟು ಬೇಗ ಸಮಸ್ಯೆಯನ್ನು ಪರಿಹರಿಸುತ್ತೇವೆ ಎಂದು ಹೇಳದೆ.

Continue Reading

Latest

Accident Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್‌ಸ್ಟೇಬಲ್‌

Accident Video: ಅತೀ ವೇಗ ಒಳ್ಳೆಯದಲ್ಲ ಎಂದು ಎಷ್ಟು ಹೇಳಿದರೂ ಜನ ಮುನ್ನುಗ್ಗಿ ಬಿಡುತ್ತಾರೆ. ಇದರಿಂದಲೇ ಸಾಕಷ್ಟು ಅಪಘಾತಗಳಿಗೆ ತುತ್ತಾಗುತ್ತಾರೆ. ವೇಗವಾಗಿ ಚಲಿಸುತ್ತಿದ್ದ ಕಾರೊಂದು ಟರ್ನ್ ಮಾಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎದುರಿನಿಂದ ಬರುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಕೂಟರ್‌ಗೆ ಮುಂಭಾಗದಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳಾ ಪೊಲೀಸ್ ಪೇದೆ ಹಾರಿ ಹೋಗಿ 30 ಅಡಿ ದೂರಕ್ಕೆ ಬಿದ್ದಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

VISTARANEWS.COM


on

Hit and Run Case
Koo


ಚೆನ್ನೈ: ಅತಿ ವೇಗ ಅಪಘಾತಕ್ಕೆ ಕಾರಣವೆಂದು (Accident Video) ತಿಳಿದರೂ ಕೂಡ ಕೆಲವರು ವೇಗವಾಗಿ ವಾಹನಗಳನ್ನು ಚಲಾಯಿಸಿ ತಮ್ಮ ಜೀವದ ಜೊತೆಗೆ ಜನರ ಜೀವಕ್ಕೂ ಅಪಾಯವನ್ನು ತಂದೊಡ್ಡುತ್ತಾರೆ. ಇದೀಗ ಅಂತಹದೊಂದು ಅಪಘಾತದ (Hit and Run Case) ಘಟನೆ ಚೆನ್ನೈನಲ್ಲಿ ನಡೆದಿದ್ದು, ಈ ಅಪಘಾತದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ಆ ಗಿದೆ. ಚೆನ್ನೈನಲ್ಲಿ ವೇಗವಾಗಿ ಬಂದ ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ಮಹಿಳಾ ಪೊಲೀಸ್ ಅಧಿಕಾರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚೆನ್ನೈನಲ್ಲಿ ಬುಧವಾರ ನಡೆದಿದೆ.

ಚೆನ್ನೈ ಪೊಲೀಸರ ಪ್ರಕಾರ, ಚೆನ್ನೈನ ತಿರುಮುಲ್ಲೈವಾಯಲ್ ಪ್ರದೇಶದ ನಿವಾಸಿ ಪವಿತ್ರಾ ಅವರು ಪೋರೂರಿನ ಮಹಿಳಾ ಪೊಲೀಸ್ ಠಾಣೆಯಿಂದ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರನ್ನು ಚಾಲಕ ಟರ್ನ್ ಮಾಡಲು ಹೋದಾಗ ನಿಯಂತ್ರಣ ಕಳೆದುಕೊಂಡು ರಸ್ತೆಯ ಎದುರಿನಿಂದ ಬರುತ್ತಿದ್ದ ಪವಿತ್ರಾ ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪವಿತ್ರಾ ಅವರ ಸ್ಕೂಟರ್ ಹಿಂದೆ ಕಪ್ಪು ಕಾರೊಂದು ಬರುತ್ತಿತ್ತು. ಹಾಗೇ ಅದರ ಹಿಂದೆ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತಿರುವ ಟೆಂಪೊ ಬರುತ್ತಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೊದಲ್ಲಿ ಪವಿತ್ರಾ ಅವರ ಸ್ಕೂಟರ್ ಅನ್ನು ಮುಂಭಾಗದಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರ ಸ್ಕೂಟರ್ ಹಿಂದೆ ಇದ್ದ ಕಪ್ಪು ಕಾರಿಗೆ ಡಿಕ್ಕಿ ಹೊಡೆದು ಅವರು ಹಾರಿ ಹೋಗಿ 30 ಅಡಿ ದೂರಕ್ಕೆ ಬಿದ್ದಿರುವುದು ಕಂಡುಬಂದಿದೆ.

ಅದೃಷ್ಟವಶಾತ್, ಗ್ಯಾಸ್ ಸಿಲಿಂಡರ್‌ಗಳನ್ನು ಹೊಂದಿರುವ ಟೆಂಪೊ ಕಪ್ಪು ಕಾರಿನ ಹಿಂದೆ ಇದ್ದ ಕಾರಣ ದೊಡ್ಡ ಅಪಘಾತ ಸಂಭವಿಸಲಿಲ್ಲ ಎನ್ನಲಾಗಿದೆ. ಪವಿತ್ರಾ ಅವರ ಸ್ಥಿತಿ ಬಹಳ ಗಂಭೀರವಾಗಿದ್ದು, ತಕ್ಷಣ ಅವರನ್ನು ರಾಮಚಂದ್ರ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಚಾಲಕನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬಸ್‌ ಡ್ರೈವರ್‌ನ ರೀಲ್ಸ್‌ ಕ್ರೇಜ್‌ಗೆ 2 ಎತ್ತುಗಳು ಬಲಿ; ರೈತನ ಸ್ಥಿತಿ ಗಂಭೀರ

ಪ್ರತಿದಿನ ಒಂದಲ್ಲ ಒಂದು ಅಪಘಾತದ ಪ್ರಕರಣಗಳು ವರದಿಯಾಗುತ್ತಿರುತ್ತದೆ. ಜುಲೈ 8ರಂದು ರಸ್ತೆ ದಾಟಲು ಕಾಯುತ್ತಿದ್ದ 61 ವರ್ಷದ ಮಹಿಳೆಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಕಾಣಿಯೂರು ನಿವಾಸಿ ಗೋಮತಿ ಎಂದು ಗುರುತಿಸಲಾಗಿದೆ. ಸಿಸಿಟಿವಿಯಲ್ಲಿ ಈ ಘಟನೆಯನ್ನು ಸೆರೆಹಿಡಿಯಲಾಗಿದ್ದು, ಗೋಮತಿ ಜೀಬ್ರಾ ಕ್ರಾಸಿಂಗ್ ಬಳಿ ನಿಂತಿದ್ದಾಗ ಅತಿ ವೇಗದಲ್ಲಿ ಬಂದ ಕಾರು ನಿಂತಿದ್ದ ಆಕೆಗೆ ಡಿಕ್ಕಿ ಹೊಡೆದಿದೆ.

Continue Reading

ಕ್ರೀಡೆ

Indian Olympics History: ಭಾರತಕ್ಕೆ ಒಲಿಂಪಿಕ್ಸ್​ನಲ್ಲಿ ವೈಯಕ್ತಿಕ ಚಿನ್ನ ಗೆದ್ದ ಮೊದಲ ಸಾಧಕ ಅಭಿನವ್‌ ಬಿಂದ್ರಾ

Indian Olympics History: ಶೂಟಿಂಗ್​ ವಿಭಾಗದಲ್ಲಿ ನೀಡುವ ಪ್ರತಿಷ್ಠಿತ ‘ಬ್ಲೂ ಕ್ರಾಸ್‌’ ಪ್ರಶಸ್ತಿಯೂ ಬಿಂದ್ರಾಗೆ ಲಭಿಸಿದೆ. ‘ಬ್ಲೂ ಕ್ರಾಸ್‌’ ಎಂಬುದು ಇಂಟರ್‌ನ್ಯಾಶನಲ್‌ ಶೂಟಿಂಗ್‌ ಸ್ಪೋರ್ಟ್ಸ್ ಫೆಡರೇಶನ್‌ ನೀಡುವ ಅತ್ಯುನ್ನತ ಗೌರವವಾಗಿದೆ. ಈ ಪ್ರಶಸ್ತಿಗೆ ಭಾಜನರಾದ ಭಾರತದ ಮೊದಲ ಶೂಟರ್‌ ಎಂಬುದು ಅಭಿನವ್‌ ಬಿಂದ್ರಾ ಪಾಲಿನ ಹೆಗ್ಗಳಿಕೆ.

VISTARANEWS.COM


on

Indian Olympics History
Koo

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿರುವ ಪ್ಯಾರಿಸ್(Paris 2024 Olympics)​ ಒಲಿಂಪಿಕ್ಸ್(Paris Olympics 2024)​ ಕ್ರೀಡಾಕೂಟದಲ್ಲಿ ಭಾರತದ 117 ಕ್ರೀಡಾಪಟುಗಳು ಪದಕ ನಿರೀಕ್ಷೆಯೊಂದಿಗೆ ಸ್ಪರ್ಧಿಸಲಿದ್ದಾರೆ. ಇದುವರೆಗಿನ ಒಲಿಂಪಿಕ್ಸ್​ ಇತಿಹಾಸದಲ್ಲಿ ಭಾರತ(Indian Olympics History) ಗೆದ್ದಿರುವುದು ಒಟ್ಟು 35 ಪದಕಗಳನ್ನು ಮಾತ್ರ. ಇದರಲ್ಲಿ 10 ಚಿನ್ನ, 9 ಬೆಳ್ಳಿ ಮತ್ತು 16 ಕಂಚು ಒಳಗೊಂಡಿದೆ. ವೈಯಕ್ತಿಕ ವಿಭಾಗದಲ್ಲಿ ದೇಶಕ್ಕೆ ಮೊದಲ ಚಿನ್ನ ಗೆದ್ದ ಸಾಧಕ ಯಾರು? ಯಾವ ಒಲಿಂಪಿಕ್ಸ್​ನಲ್ಲಿ ಈ ಸಾದನೆ ಮಾಡಿದರು? ಎನ್ನುವ ಕುತೂಹಲಕಾರಿ ಮಾಹಿತಿ ಇಲ್ಲಿದೆ.

ಹೌದು, ಭಾರತದ ಒಲಿಂಪಿಕ್ಸ್‌ ಇತಿಹಾಸದಲ್ಲಿ ವೈಯಕ್ತಿಕ ಚಿನ್ನದ ಪದಕ ಗೆದ್ದ ಮೊದಲ ಸಾಧಕನೆಂಬ ಹೆಗ್ಗಳಿಕೆ ಲೆಜೆಂಡ್ರಿ ಶೂಟರ್‌ ಅಭಿನವ್‌ ಬಿಂದ್ರಾ(Abhinav Bindra) ಅವರಿಗೆ ಸಲ್ಲುತ್ತದೆ. 2008ರ(2008 Summer Olympics) ಬೀಜಿಂಗ್ ಒಲಿಂಪಿಕ್ಸ್​ನಲ್ಲಿ ಅವರು 10 ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದ್ದರು. ಇದು ಭಾರತಕ್ಕೆ ವೈಯಕ್ತಿಕ ವಿಭಾಗದಲ್ಲಿ ದೊರೆತ ಮೊದಲ ಚಿನ್ನದ ಪದಕ. ಇದಾದ ಬಳಿಕ ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ನೀರಜ್​ ಚೋಪ್ರಾ ಜಾವೆಲಿನ್​ನಲ್ಲಿ ಚಿನ್ನ ಗೆದ್ದಿದ್ದರು. ಒಟ್ಟಾರೆಯಾಗಿ ಭಾರತಕ್ಕೆ ಒಲಿಂಪಿಕ್ಸ್​ನಲ್ಲಿ ಕೇವಲ 2 ವೈಯಕ್ತಿಕ ಚಿನ್ನ ಮಾತ್ರ ಲಭಿಸಿದೆ. ಈ ಬಾರಿ ಕನಿಷ್ಠ ಮೂರು ವೈಯಕ್ತಿಕ ಚಿನ್ನ ನಿರೀಕ್ಷೆ ಮಾಡಲಾಗಿದೆ.

ಇದನ್ನೂ ಓದಿ India at the Olympics: ಒಲಿಂಪಿಕ್ಸ್​ನಲ್ಲಿ ಭಾರತದ ಪದಕ ಸಾಧನೆಯ ಇಣುಕು ನೋಟ

ಒಂದು ಒಲಿಂಪಿಕ್ಸ್​ ಪದಕ, ಏಳು ಕಾಮನ್‌ವೆಲ್ತ್ ಗೇಮ್ಸ್ ಪದಕ, ಮೂರು ಏಷ್ಯನ್ ಗೇಮ್ಸ್ ಪದಕ ಹಾಗೂ 2006ರಲ್ಲಿ ವಿಶ್ವ ಚಾಂಪಿಯನ್‌ಶಿಪ್ ಚಿನ್ನದ ಪದಕವನ್ನೂ ಗಳಿಸಿರುವ ಬಿಂದ್ರಾ ಭಾರತೀಯ ಶೂಟಿಂಗ್ ದ್ರುವತಾರೆ ಎಂದರೂ ತಪ್ಪಾಗಲಾರದು. ಅಭಿನವ್ ಬಿಂದ್ರಾ ಅವರ ಸಾಧನೆಗೆ ಖೇಲ್‌ ರತ್ನ (2001), ಅರ್ಜುನ (2000), ಪದ್ಮ ಭೂಷಣ (2009) ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಬ್ಲೂ ಕ್ರಾಸ್‌’ ಪ್ರಶಸ್ತಿ

ಶೂಟಿಂಗ್​ ವಿಭಾಗದಲ್ಲಿ ನೀಡುವ ಪ್ರತಿಷ್ಠಿತ ‘ಬ್ಲೂ ಕ್ರಾಸ್‌’ ಪ್ರಶಸ್ತಿಯೂ ಬಿಂದ್ರಾಗೆ ಲಭಿಸಿದೆ. ‘ಬ್ಲೂ ಕ್ರಾಸ್‌’ ಎಂಬುದು ಇಂಟರ್‌ನ್ಯಾಶನಲ್‌ ಶೂಟಿಂಗ್‌ ಸ್ಪೋರ್ಟ್ಸ್ ಫೆಡರೇಶನ್‌ ನೀಡುವ ಅತ್ಯುನ್ನತ ಗೌರವವಾಗಿದೆ. ಈ ಪ್ರಶಸ್ತಿಗೆ ಭಾಜನರಾದ ಭಾರತದ ಮೊದಲ ಶೂಟರ್‌ ಎಂಬುದು ಅಭಿನವ್‌ ಬಿಂದ್ರಾ ಪಾಲಿನ ಹೆಗ್ಗಳಿಕೆ.

ಇದನ್ನೂ ಓದಿ Paris Olympics: ಅತಿ ಹೆಚ್ಚು ಒಲಿಂಪಿಕ್ಸ್ ಆತಿಥ್ಯ ವಹಿಸಿದ ದೇಶ ಯಾವುದು?

ನೀರಜ್​ ಮೇಲೆ ಮತ್ತೊಂದು ಚಿನ್ನ ನಿರೀಕ್ಷೆ


ಒಲಿಂಪಿಕ್ಸ್‌ನ ಟ್ರ್ಯಾಕ್‌ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಹೊಂದಿರುವ ಸ್ಟಾರ್​ ಜಾವೆಲಿನ್​ ಎಸೆತಗಾರ ನೀರಜ್​ ಚೋಪ್ರಾ ಮೇಲೆ ಈ ಬಾರಿಯ ಒಲಿಂಪಿಕ್ಸ್​ನಲ್ಲಿಯೂ ಚಿನ್ನದ ಪದಕ ನಿರೀಕ್ಷೆ ಮಾಡಲಾಗಿದೆ. ಟೋಕಿಯೊದಲ್ಲಿ 87.58ಮೀ ದೂರಕ್ಕೆ ಜಾವೆಲಿನ್​ ಎಸೆದು ಐತಿಹಾಸಿಕ ಚಿನ್ನ ಗೆದ್ದಿದ್ದರು. ಈ ಬಾರಿ 29 ಸದಸ್ಯರನ್ನು ಒಳಗೊಂಡ ಟ್ರ್ಯಾಕ್ ಆ್ಯಂಡ್ ಫೀಲ್ಡ್ ತಂಡಕ್ಕೆ ಚೋಪ್ರಾ ಅವರು ನಾಯಕನಾಗಿದ್ದಾರೆ.

ಇದನ್ನೂ ಓದಿ Olympic Games: ಒಲಿಂಪಿಕ್ಸ್​ನಲ್ಲಿ ಮಹಿಳೆಯರು ಮೊದಲ ಬಾರಿಗೆ ಸ್ಪರ್ಧಿಸಿದ್ದು ಯಾವಾಗ?

ನೀರಜ್​ ಚೋಪ್ರಾ ಕಳೆದ ವರ್ಷ ನಡೆದಿದ್ದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರು. ಅಲ್ಲದೆ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಗೆದ್ದಿದ್ದರು. ನೀರಜ್​ರ ಇದುವರೆಗಿನ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು.

Continue Reading
Advertisement
Indian Navy Recruitment
ಉದ್ಯೋಗ2 mins ago

Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ 741 ಹುದ್ದೆ; 10ನೇ ತರಗತಿ ಪಾಸಾದವರಿಗೂ ಇದೆ ಅವಕಾಶ

Microsoft Windows Outage
ಪ್ರಮುಖ ಸುದ್ದಿ8 mins ago

Microsoft Windows Outage: ಮೈಕ್ರೊಸಾಫ್ಟ್​​ ಸಮಸ್ಯೆ ; ಬೆಂಗಳೂರು ಸೇರಿದಂತೆ ದೇಶದ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲಕಲ್ಲೋಲ

Dengue Fever
ಬೆಂಗಳೂರು16 mins ago

Dengue Fever : ಡೆಂಗ್ಯೂ ಭೀತಿ- ಸೊಳ್ಳೆಗಳ ನಾಶಕ್ಕೆ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Hit and Run Case
Latest19 mins ago

Accident Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್‌ಸ್ಟೇಬಲ್‌

Indian Olympics History
ಕ್ರೀಡೆ27 mins ago

Indian Olympics History: ಭಾರತಕ್ಕೆ ಒಲಿಂಪಿಕ್ಸ್​ನಲ್ಲಿ ವೈಯಕ್ತಿಕ ಚಿನ್ನ ಗೆದ್ದ ಮೊದಲ ಸಾಧಕ ಅಭಿನವ್‌ ಬಿಂದ್ರಾ

Sexual Abuse
Latest31 mins ago

Sexual Abuse : ಬಿಸ್ಕೆಟ್‌ಗೆ ಆಸೆ ಪಟ್ಟು ಹೋಗಿದ್ದ ಪುಟ್ಟ ಬಾಲಕಿ ಕಾಮುಕನ ಕೈಗೆ ಸಿಕ್ಕಿ ಕೊಲೆಯಾದಳು

KPSC Recruitment 2024
ಕರ್ನಾಟಕ41 mins ago

KPSC Recruitment 2024: ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Dengue Fever
ಹಾಸನ41 mins ago

Dengue Fever: ಹಾಸನದಲ್ಲಿ ಡೆಂಗ್ಯೂಗೆ ಎಂಬಿಬಿಎಸ್‌ ವಿದ್ಯಾರ್ಥಿ ಬಲಿ; ಧಾರವಾಡದಲ್ಲಿ 5 ತಿಂಗಳ ಮಗು ಸಾವು

Tharun Sudhir says Darshan Will Attend My Marriage
ಸ್ಯಾಂಡಲ್ ವುಡ್45 mins ago

Tharun Sudhir: ಮದುವೆ ಡೇಟ್‌ ಚೇಂಜ್‌ ಮಾಡಬೇಡ, ನಾನು ಬರ್ತೀನಿ ಅಂದ್ರು ದರ್ಶನ್‌ ಎಂದ ತರುಣ್​ ಸುಧೀರ್

ದೇಶ46 mins ago

Kangana Ranaut: “ರಾಜಕಾರಣಿಗಳು ರಾಜಕೀಯ ಬಿಟ್ಟು ಪಾನಿಪೂರಿ ಮಾರಬೇಕೆ?”- ಕಂಗನಾ ಕೆಂಡಾಮಂಡಲ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ4 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ24 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌