Electoral Bonds: ʼಲಾಟರಿ ಕಿಂಗ್‌ʼ ₹509 ಕೋಟಿ ನೀಡಿದ್ದು ಈ ಪಾರ್ಟಿಗೆ! - Vistara News

ಪ್ರಮುಖ ಸುದ್ದಿ

Electoral Bonds: ʼಲಾಟರಿ ಕಿಂಗ್‌ʼ ₹509 ಕೋಟಿ ನೀಡಿದ್ದು ಈ ಪಾರ್ಟಿಗೆ!

Electoral Bonds: ಫ್ಯೂಚರ್ ಗೇಮಿಂಗ್ ₹1,368 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಅದರಲ್ಲಿ ಸುಮಾರು 37 ಪ್ರತಿಶತವು ದ್ರಾವಿಡ ಮುನ್ನೇತ್ರ ಕಳಗಂ ಅಥವಾ ಡಿಎಂಕೆಗೆ ಹೋಗಿದೆ.

VISTARANEWS.COM


on

santiago martin lottery king
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಚುನಾವಣಾ ಬಾಂಡ್‌ಗಳ (Electoral Bonds) ಅಗ್ರ ಖರೀದಿದಾರರಾಗಿ ಹೊರಹೊಮ್ಮಿರುವ `ಲಾಟರಿ ಕಿಂಗ್’ (Lottery king) ಸ್ಯಾಂಟಿಯಾಗೊ ಮಾರ್ಟಿನ್ (Santiago Martin) ಅವರ ಫ್ಯೂಚರ್ ಗೇಮಿಂಗ್ ಮತ್ತು ಹೋಟೆಲ್ ಸೇವೆಗಳು ತಮಿಳುನಾಡಿನ ಆಡಳಿತ ಪಕ್ಷ ದ್ರಾವಿಡ ಮುನ್ನೇತ್ರ ಕಳಗಂಗೆ (DMK) ₹509 ಕೋಟಿ ದೇಣಿಗೆ ನೀಡಿದೆ.

ರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆಗೆ ಅನುಮತಿಸಿದ್ದ ಚುನಾವಣಾ ಬಾಂಡ್‌ಗಳಡಿ ಡಿಎಂಕೆ ₹656.5 ಕೋಟಿ ಮೌಲ್ಯದ ಬಾಂಡ್‌ಗಳನ್ನು ಸ್ವೀಕರಿಸಿದೆ ಎಂದು ಚುನಾವಣಾ ಆಯೋಗದ ಅಂಕಿಅಂಶಗಳು ತೋರಿಸಿವೆ. ಫ್ಯೂಚರ್ ಗೇಮಿಂಗ್ ₹1,368 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಅದರಲ್ಲಿ ಸುಮಾರು 37 ಪ್ರತಿಶತವು ದ್ರಾವಿಡ ಮುನ್ನೇತ್ರ ಕಳಗಂ ಅಥವಾ ಡಿಎಂಕೆಗೆ ಹೋಗಿದೆ.

ಮೇಘಾ ಇಂಜಿನಿಯರಿಂಗ್ (ರೂ. 105 ಕೋಟಿ), ಇಂಡಿಯಾ ಸಿಮೆಂಟ್ಸ್ (ರೂ. 14 ಕೋಟಿ) ಮತ್ತು ಸನ್ ಟಿವಿ (ರೂ. 10 ಕೋಟಿ) ಡಿಎಂಕೆಯ ಇತರ ಪ್ರಮುಖ ದಾನಿಗಳಾಗಿವೆ. ಇದುವರೆಗೆ ದಾನಿಗಳ ಗುರುತನ್ನು ಬಹಿರಂಗಪಡಿಸಿದ ಕೆಲವೇ ಕೆಲವು ರಾಜಕೀಯ ಪಕ್ಷಗಳಲ್ಲಿ ಡಿಎಂಕೆ ಒಂದು.

ಚುನಾವಣಾ ಆಯೋಗವು ಇಂದು ಚುನಾವಣಾ ಬಾಂಡ್‌ಗಳ ಕುರಿತು ತಾಜಾ ಡೇಟಾವನ್ನು ಬಹಿರಂಗಗೊಳಿಸಿದೆ. ಈ ವಿವರಗಳು ಏಪ್ರಿಲ್ 12, 2019ರ ಹಿಂದಿನ ಅವಧಿಯದ್ದಾಗಿವೆ. ಈ ದಿನಾಂಕದ ನಂತರದ ಚುನಾವಣಾ ಬಾಂಡ್ ವಿವರಗಳನ್ನು ಕಳೆದ ವಾರ ಚುನಾವಣಾ ಸಮಿತಿಯು ಸಾರ್ವಜನಿಕಗೊಳಿಸಿದೆ. ಏಪ್ರಿಲ್ 12, 2019ರ ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶದ ನಿರ್ದೇಶನದಂತೆ ರಾಜಕೀಯ ಪಕ್ಷಗಳು ಸೀಲ್ಡ್ ಕವರ್‌ನಲ್ಲಿ ಚುನಾವಣಾ ಬಾಂಡ್‌ಗಳ ಡೇಟಾವನ್ನು ಸಲ್ಲಿಸಿವೆ ಎಂದು ಚುನಾವಣಾ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.

ಅಂಕಿಅಂಶಗಳ ಪ್ರಕಾರ, ಆಡಳಿತಾರೂಢ ಬಿಜೆಪಿಯು 2018ರಲ್ಲಿ ಬಾಂಡ್‌ಗಳನ್ನು ಪರಿಚಯಿಸಿದಾಗಿನಿಂದ ಒಟ್ಟಾರೆಯಾಗಿ 6,986.5 ಕೋಟಿ ರೂ. ಬಾಂಡ್‌ಗಳನ್ನು ಸ್ವೀಕರಿಸಿದೆ. ತೃಣಮೂಲ ಕಾಂಗ್ರೆಸ್ ಎರಡನೇ ಅತಿ ದೊಡ್ಡ ಸ್ವೀಕೃತದಾರ- ರೂ. 1,397 ಕೋಟಿ. ನಂತರ ಕಾಂಗ್ರೆಸ್- ರೂ. 1,334 ಕೋಟಿ. ಬಿಆರ್‌ಎಸ್- 1,322 ಕೋಟಿ ರೂ. ಮತ್ತು ಒಡಿಶಾದ ಆಡಳಿತ ಪಕ್ಷ ಬಿಜೆಡಿ ₹944.5 ಕೋಟಿ. ಡಿಎಂಕೆ ದೇಣಿಗೆ ಪಡೆದವರಲ್ಲಿ ಆರನೇ ಅತಿ ದೊಡ್ಡ ಪಕ್ಷ.

ಸ್ಯಾಂಟಿಯಾಗೊ ಮಾರ್ಟಿನ್‌ ಸಂಸ್ಥೆ ಜಾರಿ ನಿರ್ದೇಶನಾಲಯದ ಪರಿಶೀಲನೆಯ ಅಡಿಯಲ್ಲಿದೆ. ಡಿಎಂಕೆ ಪಕ್ಷ ಬಹಿರಂಗಪಡಿಸಿದ ₹656.5 ಕೋಟಿ ಎಲೆಕ್ಟೋರಲ್ ಬಾಂಡ್ ರಸೀದಿಗಳಲ್ಲಿ 77 ಪ್ರತಿಶತದಷ್ಟು ಕೊಡುಗೆಯನ್ನು ಈತನ ಫ್ಯೂಚರ್ ಗೇಮಿಂಗ್ ನೀಡಿದೆ. ಫ್ಯೂಚರ್ ಗೇಮಿಂಗ್ ಖರೀದಿಸಿದ ಉಳಿದ ₹859 ಕೋಟಿ ಮೌಲ್ಯದ ಬಾಂಡ್‌ಗಳ ಫಲಾನುಭವಿಗಳು ಯಾವ ಪಕ್ಷಗಳು ಎಂಬ ಮಾಹಿತಿ ಬಹಿರಂಗಪಡಿಸಲಾಗಿಲ್ಲ.

ಇದನ್ನೂ ಓದಿ: Electoral Bonds: ₹1368 ಕೋಟಿ ದೇಣಿಗೆ ನೀಡಿದ ‘ಲಾಟರಿ ಕಿಂಗ್’ ಯಾರು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

IPL 2024: ಐಪಿಎಲ್​​ನ ಕನ್ಕಷನ್ ಬದಲಿ ಇತಿಹಾಸವನ್ನು ಹಿಂತಿರುಗಿ ನೋಡಿದರೆ, ಯುಧ್ವೀರ್ ಎರಡನೇ ಆಟಗಾರರಾದರು. ಮುಂಬೈ ಇಂಡಿಯನ್ಸ್ ವಿಕೆಟ್ ಕೀಪರ್ ವಿಷ್ಣು ವಿನೋದ್ ಈ ಪಟ್ಟಿಯಲ್ಲಿ ಮೊದಲಿಗರು. ಐಪಿಎಲ್ 2023 ರ ಎರಡನೇ ಕ್ವಾಲಿಫೈಯರ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಇಶಾನ್ ಕಿಶನ್ ಬದಲಿಗೆ ವಿನೋದ್ ಆಡಿದ್ದರು.

VISTARANEWS.COM


on

IPL 2024
Koo

ಲಖನೌ : ಐಪಿಎಲ್​ 2024ನೇ (IPL 2024) ಆವೃತ್ತಿಯ ಮೊದಲ ಕನ್​ಕಷನ್​​ (ಗಾಯಗೊಂಡ ಆಟಗಾರನಿಗೆ ಬದಲಿ) ಆಟಗಾರ ಎಂಬ ಖ್ಯಾತಿಗೆ ಯದ್ವೀರ್​ ಸಿಂಗ್ (Yudhvir Singh) ಪಾತ್ರರಾಗಿದ್ದಾರೆ. ಎಲ್ಎಸ್​ಜಿ ಮತ್ತು ಕೆಕೆಆರ್ ನಡುವಿನ ಐಪಿಎಲ್ ಪಂದ್ಯದಲ್ಲಿ, ಲಕ್ನೊ ಪರ ಅವರು ಆಡಲು ಇಳಿದರು. ಲಕ್ನೊ ವೇಗಿ ಮೊಹ್ಸಿನ್ ಖಾನ್ ಥರ್ಡ್​ ಮ್ಯಾನ್​ ಪ್ರದೇಶದಲ್ಲಿ ಫೀಲ್ಡಿಂಗ್ ಮಾಡುವಾಗ ತಲೆಗೆ ಗಾಯವಾಗಿತ್ತು. ಚಿಕಿತ್ಸೆಗಾಗಿ ಮೈದಾನವನ್ನು ತೊರೆಯಬೇಕಾಯಿತು. ಹೀಗಾಗಿ ಯಧ್ವೀರ್ ಸಿಂಗ್​ ಆಡಲು ಬರಬೇಕಾಯಿತು.

ಮೊಹ್ಸಿನ್ ಖಾನ್ ತಲೆಗೆ ಪೆಟ್ಟು ಬಿದ್ದ ನಂತರ ನೆಲದ ಮೇಲೆ ಮಲಗಿ ಹೆಣಗಾಡುತ್ತಿರುವುದು ಕಂಡುಬಂತು. ನರೈನ್ ಬ್ಯಾಟಿಂಗ್ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮೊಹ್ಸಿನ್​ ಖಾನ್ ಚೆಂಡನ್ನು ಹಿಡಿಯಲು ಓಡಿದ್ದರು. ಆದರೆ ದುರದೃಷ್ಟವಶಾತ್ ಅವರ ತಲೆ ಮೊದಲು ನೆಲಕ್ಕೆ ಅಪ್ಪಳಿಸಿತ್ತು. ಪರಿಣಾಮವಾಗಿ 16 ನೇ ಓವರ್ ಪ್ರಾರಂಭವಾಗುವ ಮೊದಲು ಮೊಹ್ಸಿನ್ ಖಾನ್ ಬದಲಿಗೆ ಯುಧ್ವೀರ್ ಸಿಂಗ್ ಅವರನ್ನು ಕನ್ಕಷನ್ ಬದಲಿಯಾಗಿ ಕಳುಹಿಸಲಾಯಿತು.

ಯುಧ್ವೀರ್ ಸಿಂಗ್ ಚರಕ್ ಐಪಿಎಲ್ 2024 ರ ಮೊದಲ ಕನ್ಕಷನ್ ಬದಲಿ ಆಟಗಾರರಾದರು. ಇದು ಮಾತ್ರವಲ್ಲ, ಅವರು ತಮ್ಮ ಮೊದಲ ಓವರ್​​ನಲ್ಲಿ ಕೆಕೆಆರ್​​ನ ಆಂಗ್ರಿಶ್ ರಘುವಂಶಿ ಅವರನ್ನು ತಮ್ಮ ಮೊದಲ ಓವರ್​ನಲ್ಲಿ ಔಟ್ ಮಾಡಿದರು.

ಐಪಿಎಲ್​​ನ ಕನ್ಕಷನ್ ಬದಲಿ ಇತಿಹಾಸವನ್ನು ಹಿಂತಿರುಗಿ ನೋಡಿದರೆ, ಯುಧ್ವೀರ್ ಎರಡನೇ ಆಟಗಾರರಾದರು. ಮುಂಬೈ ಇಂಡಿಯನ್ಸ್ ವಿಕೆಟ್ ಕೀಪರ್ ವಿಷ್ಣು ವಿನೋದ್ ಈ ಪಟ್ಟಿಯಲ್ಲಿ ಮೊದಲಿಗರು. ಐಪಿಎಲ್ 2023 ರ ಎರಡನೇ ಕ್ವಾಲಿಫೈಯರ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಇಶಾನ್ ಕಿಶನ್ ಬದಲಿಗೆ ವಿನೋದ್ ಆಡಿದ್ದರು.

ಕಂಕಷನ್ ಬದಲಿ ಆಟಗಾರರ ವಿವರ

ಇಶಾನ್ ಕಿಶನ್ ಮುಂಬೈ ಇಂಡಿಯನ್ಸ್ ವಿಷ್ಣು ವಿನೋದ್
ಮೊಹ್ಸಿನ್ ಖಾನ್ ಲಕ್ನೋ ಸೂಪರ್ ಜೈಂಟ್ಸ್: ಯುಧ್ವೀರ್ ಸಿಂಗ್

ಪಂದ್ಯದಲ್ಲಿ ಏನಾಯಿತು?

ಲಖನೌ: ಬ್ಯಾಟಿಂಗ್​ ಹಾಗೂ ಬೌಲಿಂಗ್​ನಲ್ಲಿ ಅಸಾಮಾನ್ಯ ಪ್ರದರ್ಶನ ನೀಡಿದ ಕೋಲ್ಕೊತಾ ನೈಟ್​ ರೈಡರ್ಸ್​ ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 54ನೇ ಪಂದ್ಯದಲ್ಲಿ ಲಕ್ನೊ ಸೂಪರ್​ ಜೈಂಟ್ಸ್​ ವಿರುದ್ಧ 98 ರನ್​ಗಳ ಬೃಹತ್​ ಅಂತರದ ಗೆಲುವು ಸಾಧಿಸಿದೆ. ಇದರೊಂದಿಗೆ ಆಡಿರುವ 11 ಪಂದ್ಯಗಳಲ್ಲಿ 8 ಗೆಲುವಿನೊಂದಿಗೆ 16 ಅಂಕಗಳನ್ನು ಸಂಪಾದಿಸಿರುವ ಶ್ರೇಯಸ್​ ಅಯ್ಯರ್ ನೇತೃತ್ವದ ಕೋಲ್ಕೊತಾ ಬಳಗ ಪ್ಲೇಆಫ್​ ಹಂತಕ್ಕೆ ಬಹುತೇಕ ತೇರ್ಗಡೆ ಗೊಂಡಿದೆ. ಇದೇ ವೇಳೆ 11 ಪಂದ್ಯಗಳಲ್ಲಿ 5ನೇ ಸೋಲಿಗೆ ಒಳಗಾಗಿದ್ದು 12 ಅಂಕಗಳ ಸಮೇತ ಐದನೇ ಸ್ಥಾನದಲ್ಲಿ ಉಳಿದಿದೆ.

ಇದನ್ನೂ ಓದಿ: Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

ಇಲ್ಲಿನ ಶ್ರೀ ಭಾರತ ರತ್ನ ಅಟಲ್​ ಬಿಹಾರಿ ವಾಜಪೇಯಿ ಏಕನಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಅರ್​ ಬಳಗ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 235 ರನ್​ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಪ್ರತಿಯಾಗಿ ಆಡಿದ ತವರಿನ ತಂಡ 16.1 ಓವರ್​ಗಳಲ್ಲಿ 137 ರನ್​ಗಳಿಗೆ ಆಲ್​ಔಟ್​ ಆಗಿ ಹೀನಾಯ ಸೋಲಿಗೆ ಒಳಗಾಯಿತು.

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

Prajwal Revanna Case: ಅಶ್ಲೀಲ ವಿಡಿಯೊಗಳನ್ನು ಹಂಚಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

ಅಶ್ಲೀಲ ವಿಡಿಯೊಗಳನ್ನು ಹಂಚಿಕೆ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ ಮೆಸೇಜಿಂಗ್ ಆ್ಯಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ವಿಡಿಯೋ ಹಂಚಿಕೆ ಸಂತ್ರಸ್ತ ಮಹಿಳೆಯರ ಘನತೆ ಹಾಗೂ ಗೌಪ್ಯತೆಗೆ ಕುಂದುಂಟು ಮಾಡುವುದಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದೆ.

ಈ ಪ್ರಕರಣದ ಯಾವುದೇ ಸಂತ್ರಸ್ತ ವ್ಯಕ್ತಿಯು ಈಗಾಗಲೇ ಆರಂಭಿಸಲಾಗಿರುವ ನಮ್ಮ ಹೆಲ್ಸ್ ಲೈನ್ ನಂ.
6360938947 ಅನ್ನು ಬೆಳಗ್ಗೆ 8ರಿಂದ ರಾತ್ರಿ 8ರ ನಡುವೆ ಯಾವಾಗ ಬೇಕಾದರೂ ಸಂಪರ್ಕಿಸಬಹುದಾಗಿದೆ. ಈ ನಂಬರಿಗೆ ಕರೆ ಮಾಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಡಲಾಗುವುದು. ಅವರು ಎಸ್‌ಐಟಿ ಕಚೇರಿಗೆ ಬರುವ ಅಗತ್ಯವೂ ಇಲ್ಲ. ಸಂತ್ರಸ್ತರಿಗೆ ಅಗತ್ಯವಿರುವ ನೆರವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದೆ.

ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡಬಾರದು. ತಪ್ಪಿದರೆ ಈ ವಿಚಾರದಲ್ಲಿ ಅಗತ್ಯ ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು.

ಇದನ್ನೂ ಓದಿ | Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

ಯಾವುದೇ ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧವೆಸಗಿದ ವ್ಯಕ್ತಿ ನಾಚಿಕೆ, ಹಿಂಜರಿಕೆ, ಅವಮಾನ ಪಡಬೇಕೇ ಹೊರತು, ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ಅರಿಯಬೇಕು. ಸೂಕ್ತ ಸಂವೇದನೆಯಿಂದ ಪ್ರವರ್ತಿಸುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಈ ವಿಚಾರದಲ್ಲಿ ಎಸ್‌ಐಟಿಯು ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊಳ್ಳಲಿದೆ. ಈಗಾಗಲೇ ಇದಕ್ಕೆ ಅಗತ್ಯವಿರುವ ವೃತ್ತಿಪರ ಕೌನ್ಸೆಲರ್‌, ವೈದ್ಯರು ಇಂತಹ ಕಾರ್ಯದಲ್ಲಿ ಅನುಭವವಿರುವ ಸಂಸ್ಥೆಗಳ ನೆರವನ್ನು ಎಸ್‌ಐಟಿ ಪಡೆದುಕೊಂಡಿದೆ. ಸಾರ್ವಜನಿಕರೂ ಈ ವಿಚಾರದಲ್ಲಿ ಸ್ಪಂದಿಸುವುದು ಅಗತ್ಯ ಎಂದು ಸಿಐಡಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರು ತಿಳಿಸಿದ್ದಾರೆ.

Continue Reading

ಕ್ರೀಡೆ

IPL 2024 : ಲಕ್ನೊ ವಿರುದ್ಧ ಕೆಕೆಆರ್​​ಗೆ 98 ರನ್​ಗಳ ಬೃಹತ್​ ಜಯ

IPL 2024: ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಅರ್​ ಬಳಗ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 235 ರನ್​ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಪ್ರತಿಯಾಗಿ ಆಡಿದ ತವರಿನ ತಂಡ 16.1 ಓವರ್​ಗಳಲ್ಲಿ 137 ರನ್​ಗಳಿಗೆ ಆಲ್​ಔಟ್​ ಆಗಿ ಹೀನಾಯ ಸೋಲಿಗೆ ಒಳಗಾಯಿತು.

VISTARANEWS.COM


on

IPL 2024
Koo

ಲಖನೌ: ಬ್ಯಾಟಿಂಗ್​ ಹಾಗೂ ಬೌಲಿಂಗ್​ನಲ್ಲಿ ಅಸಾಮಾನ್ಯ ಪ್ರದರ್ಶನ ನೀಡಿದ ಕೋಲ್ಕೊತಾ ನೈಟ್​ ರೈಡರ್ಸ್​ ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 54ನೇ ಪಂದ್ಯದಲ್ಲಿ ಲಕ್ನೊ ಸೂಪರ್​ ಜೈಂಟ್ಸ್​ ವಿರುದ್ಧ 98 ರನ್​ಗಳ ಬೃಹತ್​ ಅಂತರದ ಗೆಲುವು ಸಾಧಿಸಿದೆ. ಇದರೊಂದಿಗೆ ಆಡಿರುವ 11 ಪಂದ್ಯಗಳಲ್ಲಿ 8 ಗೆಲುವಿನೊಂದಿಗೆ 16 ಅಂಕಗಳನ್ನು ಸಂಪಾದಿಸಿರುವ ಶ್ರೇಯಸ್​ ಅಯ್ಯರ್ ನೇತೃತ್ವದ ಕೋಲ್ಕೊತಾ ಬಳಗ ಪ್ಲೇಆಫ್​ ಹಂತಕ್ಕೆ ಬಹುತೇಕ ತೇರ್ಗಡೆ ಗೊಂಡಿದೆ. ಇದೇ ವೇಳೆ 11 ಪಂದ್ಯಗಳಲ್ಲಿ 5ನೇ ಸೋಲಿಗೆ ಒಳಗಾಗಿದ್ದು 12 ಅಂಕಗಳ ಸಮೇತ ಐದನೇ ಸ್ಥಾನದಲ್ಲಿ ಉಳಿದಿದೆ.

ಇಲ್ಲಿನ ಶ್ರೀ ಭಾರತ ರತ್ನ ಅಟಲ್​ ಬಿಹಾರಿ ವಾಜಪೇಯಿ ಏಕನಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಅರ್​ ಬಳಗ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 235 ರನ್​ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಪ್ರತಿಯಾಗಿ ಆಡಿದ ತವರಿನ ತಂಡ 16.1 ಓವರ್​ಗಳಲ್ಲಿ 137 ರನ್​ಗಳಿಗೆ ಆಲ್​ಔಟ್​ ಆಗಿ ಹೀನಾಯ ಸೋಲಿಗೆ ಒಳಗಾಯಿತು.

ಇದನ್ನೂ ಓದಿ: Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

ಬ್ಯಾಟಿಂಗ್​ಗೆ ಆಹ್ವಾನ ಪಡೆದ ಕೆಕೆಆರ್ ತಂಡ ಅದ್ಭುತ್ ಪ್ರದರ್ಶನ ನೀಡಿತು. ಸುನೀಲ್​ ನರೈನ್​ (39 ಎಸೆತ 81 ರನ್​) ಅವರ ಸ್ಫೋಟಕ ಬ್ಯಾಟಿಂಗ್ ಮೂಲಕ ಅತ್ಯುತ್ತಮ ಆರಂಭ ಪಡೆಯಿತು. ಫಿಲ್​ ಸಾಲ್ಟ್​ ಕೂಡ 14 ಎಸೆತಕ್ಕೆ 32 ರನ್ ಬಾರಿಸಿ ಮಿಂಚಿದರು. ಈ ಜೋಡಿ ಮೊದಲ ವಿಕೆಟ್​ಗೆ 61 ರನ್ ಬಾರಿಸಿತು. ನಂತರ ಅಂಗ್​ಕ್ರಿಶ್​ ರಘವಂಶಿ 32 ರನ್ ಬಾರಿಸಿದರೆ ರಸೆಲ್ 12 ರನ್​ಗೆ ಔಟಾದರು. ರಿಂಕು ಸಿಂಗ್ ವೈಫಲ್ಯ ಅನುಭವಿಸಿ 16 ರನ್​ಗೆ ಸೀಮಿತಗೊಂಡರೆ ಕೊನೆಯಲ್ಲಿ ಶ್ರೇಯಸ್ ಅಯ್ಯರ್​2 23 ರನ್​ ಹಾಗೂ ರಮಣ್​ದೀಪ್​ ಸಿಂಗ್ 6 ಎಸೆತಕ್ಕೆ 25 ರನ್ ಬಾರಿಸಿ ದೊಡ್ಡ ಮೊತ್ತ ಬಾರಿಸಲು ನೆರವಾದರು. ಲಕ್ನೊ ಪರ ನವೀನ್ ಉಲ್ ಹಕ್​ 3 ವಿಕೆಟ್ ಪಡೆದರು.

ಬ್ಯಾಟಿಂಗ್ ವೈಫಲ್ಯ

ಗುರಿ ಬೆನ್ನಟ್ಟಲು ಆರಂಭಿಸಿದ ಲಕ್ನೊ ತಂಡ ಕೆಕೆಆರ್​ ಬೌಲರ್​ಗಳ ನಿಖರ ಎಸೆತಗಳಿಗೆ ಹಾಗೂ ಫೀಲ್ಡಿಂಗ್​ಗೆ ಬಲಿಯಾದರು. ಅರ್ಶಿನ್​ ಕುಲ್ಕರ್ಣಿ 9 ರನ್​ಗೆ ಸೀಮಿತಗೊಂಡರೆ ರಾಹುಲ್​ 21 ರನ್​ ಬಾರಿಸಿದರು. ಮಾರ್ಕಸ್​ ಸ್ಟೊಯ್ನಿಸ್​ 36 ರನ್​ ಗೆ ಔಟಾದಾಗ ಲಕ್ನೊ ಆಸೆ ಕರಗಿತು. ದೀಪಕ್ ಹೂಡ 6 ರನ್​ಗೆ ಸೀಮಿತಗೊಂಡರೆ ಪೂರನ್​ 10 ರನ್, ಬದೋನಿ 15 ರನ್​ ಹಾಗೂ ಆಸ್ಟನ್​ ಟರ್ನರ್​ 16 ರನ್ ಕೊಡುಗೆ ಕೊಟ್ಟರು. ಆದರೆ, ದೊಡ್ಡ ಮೊತ್ತದ ಸನಿಹಕ್ಕೆ ಹೋಗಲೂ ಸಾಧ್ಯವಾಗಲಿಲ್ಲ.

ಕೆಕೆಆರ್ ಬೌಲಿಂಗ್​ನಲ್ಲಿ ಹರ್ಷಿತ್​ ರಾಣಾ ಹಾಗೂ ವರುಣ್ ಚಕ್ರವರ್ತಿ ತಲಾ 3 ವಿಕೆಟ್ ಪಡೆದರೆ ಆ್ಯಂಡ್ರೆ ರಸೆಲ್​ 2 ವಿಕೆಟ್​ ಉರುಳಿಸಿದರು.

Continue Reading

ದೇಶ

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Narendra Modi: ಉತ್ತರ ಪ್ರದೇಶದ ದೌರಾಹ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರ‍್ಯಾಲಿ ನಡೆಸಿದರು. ಇದೇ ವೇಳೆ ಮಾತನಾಡಿದ ಅವರು, “ದೇಶದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಯಾವುದೇ ಜಾತಿ, ಧರ್ಮದ ತಾರತಮ್ಯ ಇಲ್ಲದೆ ಜನರಿಗೆ ತಲುಪುತ್ತಿವೆ. ಮುಸ್ಲಿಂ ಸಹೋದರ-ಸಹೋದರಿಯರು ಕೂಡ ನೋಡುತ್ತಿದ್ದಾರೆ. ಪಿಎಂ ಆವಾಸ್‌ ಯೋಜನೆ, ಉಜ್ವಲ ಯೋಜನೆ ಸೇರಿ ಎಲ್ಲ ಯೋಜನೆಗಳ ಸೌಲಭ್ಯಗಳು ಮುಸ್ಲಿಮರಿಗೂ ತಲುಪುತ್ತಿವೆ” ಎಂದು ತಿಳಿಸಿದರು.

VISTARANEWS.COM


on

Narendra Modi
Koo

ಲಖನೌ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ (ಮೇ 5) ಉತ್ತರ ಪ್ರದೇಶದಲ್ಲಿ (Uttar Pradesh) ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ದೌರಾಹ್ರದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಅದರಲ್ಲೂ, “ಮುಸ್ಲಿಮರು ಈಗ ಮತಬ್ಯಾಂಕ್‌ನ ಗುತ್ತಿಗೆದಾರರಿಂದ ಪ್ರತ್ಯೇಕವಾಗಿದ್ದಾರೆ. ಅವರು ಅಭಿವೃದ್ಧಿಯ ಪರವಾಗಿದ್ದಾರೆ” ಎಂದು ಕಾಂಗ್ರೆಸ್‌ಗೆ ಮೋದಿ ಟಾಂಗ್‌ ಕೊಟ್ಟರು.

“ದೇಶದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಯಾವುದೇ ಜಾತಿ, ಧರ್ಮದ ತಾರತಮ್ಯ ಇಲ್ಲದೆ ಜನರಿಗೆ ತಲುಪುತ್ತಿವೆ. ಮುಸ್ಲಿಂ ಸಹೋದರ-ಸಹೋದರಿಯರು ಕೂಡ ನೋಡುತ್ತಿದ್ದಾರೆ. ಪಿಎಂ ಆವಾಸ್‌ ಯೋಜನೆ, ಉಜ್ವಲ ಯೋಜನೆ ಸೇರಿ ಎಲ್ಲ ಯೋಜನೆಗಳ ಸೌಲಭ್ಯಗಳು ಮುಸ್ಲಿಮರಿಗೂ ತಲುಪುತ್ತಿವೆ. ಯಾವುದೇ ಭೇದ-ಭಾವ ಇಲ್ಲದೆ, ಪ್ರತಿಯೊಬ್ಬರಿಗೂ ಯೋಜನೆಗಳು ತಲುಪುತ್ತವೆ. ಹಾಗಾಗಿ, ಮುಸ್ಲಿಮರು ಕೂಡ ಮತಬ್ಯಾಂಕ್‌ನ ಗುತ್ತಿಗೆದಾರರ ಸಹವಾಸ ಬಿಟ್ಟಿದ್ದಾರೆ” ಎಂದು ಹೇಳಿದರು.

“ಮುಸ್ಲಿಮರನ್ನು ಕಾಂಗ್ರೆಸ್‌ ಸೇರಿ ಇಂಡಿಯಾ ಒಕ್ಕೂಟದ ಪಕ್ಷಗಳು ಮತಬ್ಯಾಂಕ್‌ಗಾಗಿ ಬಳಸಿಕೊಂಡವು. ಆದರೆ, ಈಗ ಮುಸ್ಲಿಮರು ಅಂತ ತುಷ್ಟೀಕರಣದ ಕುತಂತ್ರದಿಂದ ಹೊರಬಂದಿದ್ದಾರೆ. ಆದರೆ, ಕಾಂಗ್ರೆಸ್‌ ಸೇರಿ ಇಂಡಿಯಾ ಒಕ್ಕೂಟದ ಪಕ್ಷಗಳು ಮಾತ್ರ ಈಗಲೂ ಓಲೈಕೆಯಲ್ಲಿಯೇ ತೊಡಗಿವೆ. ಮುಸ್ಲಿಮರನ್ನು ಮತ ಬ್ಯಾಂಕ್‌ಗಾಗಿಯೇ ಬಳಸಿಕೊಳ್ಳಲು ಯತ್ನಿಸುತ್ತಿವೆ. ಇದೇ ಕಾರಣಕ್ಕಾಗಿಯೇ, ಮುಸ್ಲಿಂ ಲೀಗ್‌ನ ಪ್ರತಿರೂಪದಂತಿರುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ” ಎಂಬುದಾಗಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

“2014ಕ್ಕಿಂತ ಮೊದಲು ದೇಶದಲ್ಲಿ ತುಷ್ಟೀಕರಣದ ಆಡಳಿತ ನಡೆಯುತ್ತಿತ್ತು. ಉಗ್ರವಾದದ ವಿರುದ್ಧ ಕ್ರಮ ತೆಗೆದುಕೊಳ್ಳಲು ತನಿಖಾ ಸಂಸ್ಥೆಗಳಿಗೆ ಅಧಿಕಾರವೇ ಇರಲಿಲ್ಲ. ಇನ್ನು, ಸಮಾಜವಾದಿ ಪಕ್ಷವಂತೂ ಉಗ್ರರ ವಿರುದ್ಧದ ಪ್ರಕರಣಗಳನ್ನು ವಾಪಸ್‌ ಪಡೆಯುತ್ತಿತ್ತು. ಆದರೀಗ ಉಗ್ರರನ್ನು ಹೆಡೆಮುರಿ ಕಟ್ಟಲಾಗುತ್ತಿದೆ. ನನಗೆ ಕುಟುಂಬ ಇಲ್ಲ. ಆದರೆ, ದೇಶದ ಜನರೇ ನನ್ನ ಕುಟುಂಬ. ಜನರ ಏಳಿಗೆಗಾಗಿ, ವಿಕಸಿತ ಭಾರತದ ನಿರ್ಮಾಣಕ್ಕಾಗಿ ನಾನು ನಿರಂತರವಾಗಿ ಶ್ರಮಿಸುತ್ತೇನೆ” ಎಂದರು.

ಇದನ್ನೂ ಓದಿ: Pralhad Joshi: ಕಾಂಗ್ರೆಸ್‌ನಿಂದ ಮೋದಿ ಎಂಬ ಆಕಾಶಕ್ಕೆ ಉಗುಳೋ ಕೃತ್ಯ: ಪ್ರಲ್ಹಾದ್ ಜೋಶಿ

Continue Reading
Advertisement
IPL 2024
ಪ್ರಮುಖ ಸುದ್ದಿ6 mins ago

IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

Prajwal Revanna Case
ಪ್ರಮುಖ ಸುದ್ದಿ15 mins ago

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

IPL 2024
ಕ್ರೀಡೆ18 mins ago

IPL 2024 : ಲಕ್ನೊ ವಿರುದ್ಧ ಕೆಕೆಆರ್​​ಗೆ 98 ರನ್​ಗಳ ಬೃಹತ್​ ಜಯ

Narendra Modi
ದೇಶ24 mins ago

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Prajwal Revanna Case
ಕರ್ನಾಟಕ44 mins ago

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

IPL 2024
ಪ್ರಮುಖ ಸುದ್ದಿ59 mins ago

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

Farooq Abdullah
ದೇಶ1 hour ago

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

Champions Trophy
Latest1 hour ago

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Fire Accident
ಕರ್ನಾಟಕ2 hours ago

Fire Accident: ಬೆಂಗಳೂರಿನ ಎಂ.ಜಿ. ರಸ್ತೆಯ ಆಪ್ಟಿಕಲ್ಸ್‌ ಮಳಿಗೆಯಲ್ಲಿ ಬೆಂಕಿ ಅವಘಡ

IPL 2024
ಕ್ರೀಡೆ2 hours ago

IPL 2024 : ಧೋನಿಯನ್ನು ಬೌಲ್ಡ್​ ಮಾಡಿ ಸಂಭ್ರಮಿಸದ ಹರ್ಷಲ್​ ಪಟೇಲ್​; ಕಾರಣ ನೀಡಿದ ಬೌಲರ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ4 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ6 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ6 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ19 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌