Court Verdict: 31 ವರ್ಷ ಲೈಂಗಿಕ ಸಂಬಂಧ, ನಂತರ ಪುರುಷನ ಮೇಲೆ ರೇಪ್ ಕೇಸ್! ನ್ಯಾಯಾಲಯ ಹೇಳಿದ್ದೇನು ನೋಡಿ - Vistara News

ಪ್ರಮುಖ ಸುದ್ದಿ

Court Verdict: 31 ವರ್ಷ ಲೈಂಗಿಕ ಸಂಬಂಧ, ನಂತರ ಪುರುಷನ ಮೇಲೆ ರೇಪ್ ಕೇಸ್! ನ್ಯಾಯಾಲಯ ಹೇಳಿದ್ದೇನು ನೋಡಿ

Court Verdict: 31 ವರ್ಷಗಳಿಂದ ಪುರುಷನೊಂದಿಗೆ ಒಪ್ಪಿತ ದೈಹಿಕ ಸಂಬಂಧದಲ್ಲಿದ್ದು, ನಂತರ ಆತನ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ ಮಹಿಳೆಯ ದೂರನ್ನು ಬಾಂಬೇ ಹೈಕೋರ್ಟ್‌ ರದ್ದುಗೊಳಿಸಿದೆ.

VISTARANEWS.COM


on

court verdict
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: 31 ವರ್ಷಗಳಿಂದ ಪುರುಷನೊಂದಿಗೆ ಲೈಂಗಿಕ ಸಂಬಂಧ (Physical relationship) ಹೊಂದಿದ್ದು ನಂತರ ಆತನ ವಿರುದ್ಧ ರೇಪ್‌ ಕೇಸ್‌ (Physical abuse) ದಾಖಲಿಸಿದ ಮಹಿಳೆಯ ದೂರನ್ನು ಬಾಂಬೆ ಹೈಕೋರ್ಟ್ (Bombay High Court Verdict) ರದ್ದುಗೊಳಿಸಿದೆ. 73 ವರ್ಷದ ಪುರುಷನ ಈಕೆ ದೂರು ದಾಖಲಿಸಿದ್ದು, 1987ರಿಂದ 2017ರವರೆಗೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದಳು.

ಮಹಿಳೆ 2018ರವರೆಗೆ ಯಾವುದೇ ಪ್ರಕರಣವನ್ನು ಪುರುಷನ ವಿರುದ್ಧ ದಾಖಲಿಸಿಲ್ಲ. ಆದ್ದರಿಂದ ಇದು ಒಪ್ಪಿತ ಸಂಬಂಧವಾಗಿದ್ದು, ಇಬ್ಬರ ನಡುವಿನ ಸಂಬಂಧ ಹಳಸಿದಾಗ ದೂರು ದಾಖಲಿಸುವಂತಹ ಪ್ರಕರಣ ಇದಾಗಿದೆ ಎಂದು ನ್ಯಾಯಾಲಯ ಹೇಳಿದೆ. ವರದಿಗಳ ಪ್ರಕಾರ ಮಹಿಳೆ 1987ರಿಂದ ಪುರುಷನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಆ ಸಮಯದಲ್ಲಿ, ಪುರುಷನು ಬಲವಂತವಾಗಿ ಲೈಂಗಿಕ ಸಂಬಂಧ ಹೊಂದುವುದಾಗಿ ಮಹಿಳೆಗೆ ಒತ್ತಡ ಹಾಕಿದ್ದ ಎನ್ನಲಾಗಿದೆ.

ಎಫ್‌ಐಆರ್‌ನ ಪ್ರಕಾರ, 1987ರಿಂದ 2017 ರವರೆಗೆ ಕಲ್ಯಾಣ್, ಭಿವಂಡಿ ಮತ್ತು ಇತರ ಸ್ಥಳಗಳ ವಿವಿಧ ಹೋಟೆಲ್‌ಗಳಲ್ಲಿ 31 ವರ್ಷಗಳ ಕಾಲ ಪುರುಷ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈಗಾಗಲೇ ಮದುವೆಯಾಗಿದ್ದ ಪುರುಷ, ಮಹಿಳೆಯನ್ನು ತನ್ನ ಎರಡನೇ ಹೆಂಡತಿ ಎಂದು ಘೋಷಣೆ ಮಾಡಿ ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದನಂತೆ. 1993 ರಲ್ಲಿ ಅವಳ ಕುತ್ತಿಗೆಗೆ ಮಂಗಳಸೂತ್ರ ಕಟ್ಟಿದ್ದನಂತೆ. ಈ ಭರವಸೆಗಳೊಂದಿಗೆ ಆತ ಮಹಿಳೆಯನ್ನು ಬೇರೆಯವರೊಂದಿಗೆ ಮದುವೆಯಾಗದಂತೆ ತಡೆದಿದ್ದನಂತೆ.

1996 ರಲ್ಲಿ ಪುರುಷನಿಗೆ ಹೃದಯಾಘಾತವಾದ ನಂತರ ಮಹಿಳೆ ಆತನ ಕಂಪನಿಯನ್ನು ನೋಡಿಕೊಳ್ಳಲು ಪ್ರಾರಂಭಿಸಿದಳು. ಆದರೆ ನಂತರ ಸೆಪ್ಟೆಂಬರ್ 2017 ರಲ್ಲಿ ಮಹಿಳೆಯ ತಾಯಿಗೆ ಕ್ಯಾನ್ಸರ್ ಪತ್ತೆಯಾಗಿದ್ದರಿಂದ ಮಹಿಳೆ ತನ್ನ ಕೆಲಸಕ್ಕೆ ರಜೆ ಹಾಕಿದಳು. ಕಂಪನಿಗೆ ವಾಪಸ್ ಬಂದಾಗ ಕಂಪನಿ ಸೇರಿದಂತೆ ಕಚೇರಿ ಬಂದ್ ಆಗಿದ್ದನ್ನ ತಿಳಿದುಕೊಂಡಳಂತೆ. ಈ ವೇಳೆ ಆಕೆ ಕಂಪನಿ ಮಾಲೀಕನನ್ನು ಸಂಪರ್ಕಿಸಿದಾಗ ಆತ ಅವಳನ್ನು ಮದುವೆಯಾಗಲು ಮತ್ತು ಭೇಟಿಯಾಗಲು ನಿರಾಕರಿಸಿದನಂತೆ. ಜೊತೆಗೆ ಬ್ಯಾಂಕಿಂಗ್, ಆದಾಯ ತೆರಿಗೆ, ಕಂಪನಿಗೆ ಸಂಬಂಧಿಸಿದ ಒಪ್ಪಂದ ಮತ್ತು ಚಿನ್ನದ ಮಂಗಳಸೂತ್ರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳಲು ನಿರಾಕರಿಸಿದನಂತೆ.

ಮಹಿಳೆಯ ಆರೋಪಗಳನ್ನು ಕೇಳಿದ ನ್ಯಾಯಮೂರ್ತಿಗಳಾದ ಎ ಎಸ್ ಗಡ್ಕರಿ ಮತ್ತು ನೀಲಾ ಗೋಖಲೆ ನೇತೃತ್ವದ ನ್ಯಾಯಾಲಯವು ವ್ಯಕ್ತಿಯನ್ನು ಅಪರಾಧಿ ಎಂದು ಪರಿಗಣಿಸಲು ನಿರಾಕರಿಸಿತು. ಪ್ರಕರಣವು ಒಮ್ಮತದ ಸಂಬಂಧವನ್ನು ಸ್ಪಷ್ಟವಾಗಿ ಸೂಚಿಸುತ್ತದೆ. ಕಕ್ಷಿದಾರರು 31 ವರ್ಷಗಳಿಂದ ಲೈಂಗಿಕ ಸಂಬಂಧದಲ್ಲಿ ತೊಡಗಿದ್ದರು. ಆದರೂ 31 ವರ್ಷದ ನಡುವೆ ಈ ಸಂಬಂಧಕ್ಕೆ ಯಾವುದೇ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಒಂದು ಮಾತನ್ನೂ ಹೇಳಲಿಲ್ಲ. ಇದೀಗ ಕಕ್ಷಿದಾರರ ನಡುವಿನ ಸಂಬಂಧವು ಹಳಸಿದ್ದು ಇದೇ ಕಾರಣದಿಂದ ಪೊಲೀಸ್ ದೂರು ದಾಖಲಿಸಿರುವಂತಹ ಪ್ರಕರಣ ಇದಾಗಿದೆ ಎಂದು ಹೇಳಿದರು.

ಮಹಿಳೆ ವಿದ್ಯಾವಂತಳಾಗಿದ್ದು, ಮೊದಲ ಪತ್ನಿಗೆ ವಿಚ್ಛೇದನ ನೀಡದೇ ಎರಡನೇ ಮದುವೆ ಕಾನೂನುಬಾಹಿರವಾಗಿದ್ದರೂ ಎರಡನೇ ಮದುವೆಯ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ. ವಿಚ್ಛೇದನ ಅಂಗೀಕಾರವಾಗುವವರೆಗೆ ಎರಡನೇ ಮದುವೆಗೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ತಿಳಿದಿದ್ದರೂ ಮಹಿಳೆ ಎರಡನೇ ಮದುವೆಯ ಭರವಸೆಯನ್ನು ಒಪ್ಪಿಕೊಂಡಿದ್ದಾಳೆ ಎಂದು ಎಫ್‌ಐಆರ್ ಸೂಚಿಸುತ್ತದೆ ಎಂದು ನ್ಯಾಯಾಧೀಶರು ಹೇಳಿದರು.

ಅಲ್ಲದೇ ಪುರುಷ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡಿ ನಿನ್ನನ್ನು ಮದುವೆಯಾಗುತ್ತೇನೆಂದು ಮಹಿಳೆಗೆ ಭರವಸೆ ನೀಡಿದ್ದನೆಂಬ ಬಗ್ಗೆಯೂ ದೂರಿನಲ್ಲಿ ಉಲ್ಲೇಖವಾಗಿಲ್ಲ. 31 ವರ್ಷದಲ್ಲಿ ಮಹಿಳೆ ಪುರುಷನ ಸಂಬಂಧದಿಂದ ಹಿಂದೆ ಸರಿಯುವ ಅಥವಾ ದೂರು ನೀಡುವ ಅವಕಾಶವಿದ್ದರೂ ಆಕೆ ಅಂತಹ ಕೆಲಸ ಮಾಡಿಲ್ಲ ಎಂದು ಹೇಳಿದ ನ್ಯಾಯಾಲಯವು ಪ್ರಕರಣವನ್ನು ರದ್ದುಗೊಳಿಸಿತು.

ಇದನ್ನೂ ಓದಿ: ಕೋರ್ಟ್‌ನಲ್ಲೇ ಅಳಿಯನನ್ನು ಗುಂಡಿಕ್ಕಿ ಕೊಂದ ಮಾಜಿ ಪೊಲೀಸ್‌ ಅಧಿಕಾರಿ; ಕೃತ್ಯಕ್ಕೆ ಕಾರಣವೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌? ಇಂದು ರಾಜ್ಯಪಾಲರಿಂದ ನಿರ್ಧಾರ

CM Siddaramaiah: ತನಿಖೆಗೆ ಅನುಮತಿ ಕೊಟ್ಟರೆ ಸಿಎಂ ಸಿದ್ದರಾಮಯ್ಯನವರಿಗೆ ಕಾನೂನು ಕಂಟಕ ಶುರುವಾಗಲಿದೆ. ಪ್ರಾಸಿಕ್ಯೂಶನ್‌ಗೆ ಅನುಮತಿ ಸಿಕ್ಕ ಬೆನ್ನಲ್ಲೇ ಅಬ್ರಾಹಂ ಖಾಸಗಿ ದೂರು ದಾಖಲಿಸಲಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯ ಇಲ್ಲವೇ ಲೋಕಾಯುಕ್ತದಲ್ಲಿ ಖಾಸಗಿ ದೂರು ದಾಖಲಿಸಬಹುದು.

VISTARANEWS.COM


on

thawar chand gehlot cm siddaramaiah Governor versus state
Koo

ಬೆಂಗಳೂರು: ಒಂದು ಕಡೆ ಪ್ರತಿಪಕ್ಷಗಳಿಂದ ʼಮೈಸೂರು ಚಲೋʼ (Mysore Chalo) ಪಾದಯಾತ್ರೆ (BJP-JDS Padayatra) ಮೂರನೇ ದಿನ ಪ್ರವೇಶಿಸುತ್ತಿದೆ. ಇನ್ನೊಂದೆಡೆ, ಒಂದು ವಾರದಿಂದ ದೆಹಲಿಯಲ್ಲಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Givernor Thavar Chand Gehlot) ಇಂದು ಬೆಂಗಳೂರಿಗೆ ಮರಳಿದ್ದು, ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಶನ್‌ಗೆ (Procecution) ನೀಡಲಾದ ಮನವಿಯ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಈಗಾಗಲೇ ಅನುಮತಿ ಕೇಳಿದ್ದಾರೆ. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಒಂದು ವಾರದಿಂದ ದೆಹಲಿಯಲ್ಲಿದ್ದು, ರಾಜ್ಯಪಾಲರುಗಳ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದರು. ಹೀಗಾಗಿ ಯಾವುದೇ ತೀರ್ಮಾನ ತೆಗೆದುಕೊಂಡಿರಲಿಲ್ಲ.

ಇಂದು ರಾಜ್ಯಪಾಲರು ರಾಜ್ಯಕ್ಕೆ ವಾಪಸು ಆಗಿದ್ದಾರೆ. ರಾಜ್ಯ ಸರ್ಕಾರ ಕಳುಹಿಸಿರುವ ಕ್ಯಾಬಿನೆಟ್ ನಿರ್ಧಾರವನ್ನು ರಾಜ್ಯಪಾಲರು ಪರಿಶೀಲನೆ ಮಾಡಲಿದ್ದಾರೆ. ಸಿಎಂಗೆ ಕಳಿಸಿರುವ ನೋಟೀಸ್‌ ಅನ್ನು ವಾಪಸ್‌ ಪಡೆಯುವಂತೆ ರಾಜ್ಯಪಾಲರಿಗೆ ಕ್ಯಾಬಿನೆಟ್‌ ಮನವಿ ಮಾಡಿದೆ. ಇದು ಪ್ರಾಸಿಕ್ಯೂಷನ್‌ಗೆ ಅರ್ಹ ಪ್ರಕರಣವೇ ಅಲ್ಲವೇ ಎಂದು ತೀರ್ಮಾನ ತೆಗೆದುಕೊಳ್ಳುವ ಹಾಗೂ ಕಾನೂನು ಸಲಹೆ ಬೇಕಿದ್ದರೆ ಮತ್ತೊಮ್ಮೆ ವಕೀಲರ ಜತೆ ರಾಜ್ಯಪಾಲರು ಚರ್ಚೆ ನಡೆಸುವ ಸಂಭವ ಇದೆ.

ತನಿಖೆಗೆ ಅನುಮತಿ ಕೊಟ್ಟರೆ ಸಿಎಂ ಸಿದ್ದರಾಮಯ್ಯನವರಿಗೆ ಕಾನೂನು ಕಂಟಕ ಶುರುವಾಗಲಿದೆ. ಪ್ರಾಸಿಕ್ಯೂಶನ್‌ಗೆ ಅನುಮತಿ ಸಿಕ್ಕ ಬೆನ್ನಲ್ಲೇ ಅಬ್ರಾಹಂ ಖಾಸಗಿ ದೂರು ದಾಖಲಿಸಲಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯ ಇಲ್ಲವೇ ಲೋಕಾಯುಕ್ತದಲ್ಲಿ ಖಾಸಗಿ ದೂರು ದಾಖಲಿಸಬಹುದು. ಬಳಿಕ ಪ್ರಕರಣ ಸ್ವೀಕರಿಸುವ ಇಲ್ಲವೇ ತಿರಸ್ಕರಿಸುವ ಬಗ್ಗೆ ನ್ಯಾಯಾಲಯದಲ್ಲಿ ವಾದ ಹಾಗೂ ಪ್ರತಿವಾದ ನಡೆಯಲಿದೆ.

ಕೋರ್ಟ್ ಖಾಸಗಿ ದೂರನ್ನು ಸ್ವೀಕರಿಸಿದರೆ ಸಿಎಂಗೆ ಬಂಧನದ ಭೀತಿಯೂ ಶುರುವಾಗಬಹುದು. ತನಿಖೆಗೆ ಆದೇಶ ನೀಡಿದರೆ ರಾಜೀನಾಮೆಗೆ ಒತ್ತಡ ಇನ್ನಷ್ಟು ಹೆಚ್ಚಲಿದೆ. ಪ್ರತಿಪಕ್ಷಗಳ ಜೊತೆಗೆ, ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವ ಸ್ವಪಕ್ಷೀಯರು ಕೂಡ ಒಳ ಏಟು ಶುರು ಮಾಡಬಹುದು. ಸ್ವಪಕ್ಷದಲ್ಲೂ ಸಿಎಂ ರಾಜೀನಾಮೆಗೆ ಬೇಡಿಕೆ ಕೇಳಿಬರಬಹುದು. ಹೀಗಾಗಿ ರಾಜ್ಯ ರಾಜಕೀಯ ಇನ್ನಷ್ಟು ತಲ್ಲಣ ಸೃಷ್ಟಿಸಲಿದೆ.

ಸಿಎಂ ಮುಂದೆ ಇರೋ ಆಯ್ಕೆಗಳೇನು?

ಪ್ರಾಸಿಕ್ಯೂಶನ್‌ಗೆ ಅನುಮತಿ ಸಿಕ್ಕರೆ ಸಿಎಂ ಕಾನೂನು ಹೋರಾಟ ಮಾಡುವುದು ಅನಿವಾರ್ಯ. ತನಿಖೆಗೆ ಅನುಮತಿ ಕೊಟ್ಟಿರುವುದನ್ನು ಹೈಕೋರ್ಟ್‌ನಲ್ಲಿ ರಿಟ್ ಮೂಲಕ ಪ್ರಶ್ನಿಸಬಹುದು. ಜತೆಗೆ ಅಬ್ರಹಾಂ ಸಲ್ಲಿಸಿರುವ ದೂರು ರದ್ದು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ರಾಜ್ಯಪಾಲರ ನಡೆ ಪ್ರಶ್ನೆ ಮಾಡಿ ಸಂವಿಧಾನ ಪೀಠಕ್ಕೂ ಹೋಗಬಹುದು. ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವ ಅವಕಾಶ ಇರುವುದರಿಂದ ಸುಪ್ರೀಂ ಕೋರ್ಟ್‌ಗೆ ನೇರವಾಗಿ ಹೋಗುವುದು ಅನುಮಾನ.

ಕಾಂಗ್ರೆಸ್‌ ಒಗ್ಗಟ್ಟಿನಿಂದ ಹೋರಾಡಲಿದೆ: ಕೆಸಿ ವೇಣುಗೋಪಾಲ್

ಬೆಂಗಳೂರು: ಬಿಜೆಪಿ–ಜೆಡಿಎಸ್‌ ಪಕ್ಷಗಳ (BJP-JDS Padayatra) ಪಿತೂರಿಗೆ ನಾವು ಜಗ್ಗುವುದಿಲ್ಲ. ನಾವು ಜನರ ಬಳಿಗೆ ಹೋಗುತ್ತೇವೆ. ಅವರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ ಇತಿಹಾಸವನ್ನು ಹೊಂದಿದೆ ಎಂದು ತಿಳಿಸಿದರು.

2018ರಲ್ಲಿ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಬಿಜೆಪಿ ಕೇಂದ್ರ ನಾಯಕತ್ವದ ಪಿತೂರಿಯಿಂದ. ಅದೇ ರೀತಿಯ ಸ್ಪಷ್ಟ ಉದ್ದೇಶದಿಂದ ಈಗಲೂ ಕರ್ನಾಟಕ ಕಾಂಗ್ರೆಸ್‌ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ.
ತಮ್ಮ ಪಕ್ಷವನ್ನು ಉಳಿಸಿಕೊಳ್ಳಲು ಈ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.‌

ಇದನ್ನೂ ಓದಿ | MB Patil: ಕುಮಾರಸ್ವಾಮಿಯದು ಅವಕಾಶವಾದಿ ಮೈತ್ರಿ ಎಂದ ಎಂ.ಬಿ. ಪಾಟೀಲ್

Continue Reading

ರಾಜಕೀಯ

Parliament Session: ವಕ್ಫ್ ಕಾಯ್ದೆ 1995ರ ತಿದ್ದುಪಡಿ ಮಸೂದೆ ಇಂದು ಮಂಡನೆ ಸಾಧ್ಯತೆ; ಅಧಿವೇಶನದ Live ಇಲ್ಲಿ ನೋಡಿ

Parliament Session: ಸಂಸತ್‌ನಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನ ಎರಡು ದಿನಗಳ ಬಿಡುವಿನ ಬಳಿಕ ಇಂದು ಪುನರಾರಂಭವಾಗಲಿದೆ. ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದು, ಇಂದು ಸಂಸತ್‌ನಲ್ಲಿ ವಿಧೇಯಕ ಮಂಡಿಸುವ ಸಾಧ್ಯತೆ ಇದೆ. ಈಗಾಗಲೇ ಇದಕ್ಕೆ ವಿರೋಧ ವ್ಯಕ್ತವಾಗಿದ್ದು, ಸಂಸತ್‌ನಲ್ಲಿ ಕೋಲಾಹಲ ನಡೆಯಲಿದೆ.

VISTARANEWS.COM


on

Parliament Session
Koo

ನವದೆಹಲಿ: ಸಂಸತ್‌ನಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನ (Parliament Session) ಎರಡು ದಿನಗಳ ಬಿಡುವಿನ ಬಳಿಕ ಇಂದು ಪುನರಾರಂಭವಾಗಲಿದ್ದು, ಕಾವೇರಿದ ಚರ್ಚೆಗೆ ಉಭಯ ಸದನಗಳು ಸಾಕ್ಷಿಯಾಗಲಿವೆ. ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆಗೆ (Waqf Act) ತಿದ್ದುಪಡಿ ತರಲು ಮುಂದಾಗಿದ್ದು, ಇಂದು ಸಂಸತ್‌ನಲ್ಲಿ ವಿಧೇಯಕ ಮಂಡಿಸುವ ಸಾಧ್ಯತೆ ಇದೆ. ಈಗಾಗಲೇ ಇದಕ್ಕೆ ವಿರೋಧ ವ್ಯಕ್ತವಾಗಿದ್ದು, ಸಂಸತ್‌ನಲ್ಲಿ ಕೋಲಾಹಲ ನಡೆಯಲಿದೆ.

ಜತೆಗೆ ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಧನವಿನಿಯೋಗ ಮಸೂದೆ ಮತ್ತು ಹಣಕಾಸು ಮಸೂದೆಯನ್ನು ಮಂಡಿಸಲಿದ್ದಾರೆ. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಮೀಸಲಾತಿ ನೀಡುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಪ್ರಸ್ತುತ ಗೋವಾ ವಿಧಾನಸಭೆಯಲ್ಲಿ ಎಸ್‌ಟಿ ಸಮುದಾಯಕ್ಕೆ ಯಾವುದೇ ಸ್ಥಾನಗಳನ್ನು ಕಾಯ್ದಿರಿಸಲಾಗಿಲ್ಲ.

ರಾಜ್ಯಸಭೆಯಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ತೈಲ ಕ್ಷೇತ್ರಗಳು (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಮಸೂದೆಯನ್ನು ಪರಿಚಯಿಸಲಿದ್ದಾರೆ.

ಚರ್ಚೆ ಹುಟ್ಟು ಹಾಕಿದ ವಕ್ಫ್‌ ಕಾಯ್ದೆ ತಿದ್ದುಪಡಿ ಪ್ರಸ್ತಾವ

ಸದ್ಯ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮುಂದಾದ ಕೇಂದ್ರ ಸರ್ಕಾರದ ನಿರ್ಧಾರ ವ್ಯಾಪಕ ಚರ್ಚೆ ಹುಟ್ಟು ಹಾಕಿದೆ. ʼʼಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ತರಲು ಕಾನೂನನ್ನು ತಿದ್ದುಪಡಿ ಮಾಡಬೇಕೆಂದು ಮುಸ್ಲಿಂ ಸಮುದಾಯದಿಂದ ಬೇಡಿಕೆಗಳು ಬಂದಿವೆ. ಪ್ರಸ್ತುತ ವಕ್ಫ್ ಮಂಡಳಿಗಳು ತೆಗೆದುಕೊಂಡ ನಿರ್ಧಾರವನ್ನು ನ್ಯಾಯಾಲಯಗಳಲ್ಲಿ ಪ್ರಶ್ನಿಸಲು ಸಾಧ್ಯವಿಲ್ಲ ಎನ್ನುವ ನಿಯಮವಿದೆ. ಈಗ ತಿದ್ದುಪಡಿ ಮಸೂದೆಯು ಅದನ್ನು ಸರಿಪಡಿಸಲು ಪ್ರಯತ್ನಿಸುತ್ತದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಕಾಯ್ದೆಗೆ ಏನೆಲ್ಲ ತಿದ್ದುಪಡಿ?

ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಮಂಡಳಿಗೆ ಸೇರಿಸಲು ಪಾರದರ್ಶಕ ನಿಯಮಗಳ ಪಾಲನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅದರಲ್ಲೂ, ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಿಸುವ ಪರಮಾಧಿಕಾರ ತೆಗೆಯಲಿದೆ. ಇನ್ನು, ವಕ್ಫ್‌ ಆಸ್ತಿಗಳ ಮೇಲೆ ನಿಗಾ ಇರಿಸುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಇದುವರೆಗೆ ವಕ್ಫ್‌ ಮಂಡಳಿಯಲ್ಲಿ ಹೆಣ್ಣುಮಕ್ಕಳ ಸಹಭಾಗಿತ್ವವೇ ಇರಲಿಲ್ಲ. ಹಾಗಾಗಿ, ಪ್ರತಿಯೊಂದು ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಹೆಣ್ಣುಮಕ್ಕಳಿಗೂ ಸ್ಥಾನ ನೀಡುವುದು. ರಾಜ್ಯಗಳ ಮಂಡಳಿಗಳಲ್ಲಿ ಕನಿಷ್ಠ ಇಬ್ಬರು ಮಹಿಳೆಯರಿಗೆ ಸ್ಥಾನ ನೀಡುವುದು. ಕೇಂದ್ರ ಸಮಿತಿಗಳಲ್ಲೂ ಇಬ್ಬರೂ ಹೆಣ್ಣುಮಕ್ಕಳು ಇರಬೇಕು ಎಂಬ ನಿಯಮ ಜಾರಿಗೆ ತರುವುದು. ಮುಸ್ಲಿಮರು ಕೂಡ ವಕ್ಫ್‌ ಆಸ್ತಿಯನ್ನು ಸೃಷ್ಟಿಸಬಹುದು ಎಂಬ ನಿಯಮ ಜಾರಿಗೊಳಿಸುವುದು ಸೇರಿ ಹಲವು ತಿದ್ದುಪಡಿಗಳಿಗೆ ಪ್ರಸ್ತಾವನೆ ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಾರ್ವಜನಿಕ ಲೆಕ್ಕಪತ್ರ ಸಮಿತಿ ರಚನೆ

ಅದೇ ರೀತಿ ಸಾರ್ವಜನಿಕ ಲೆಕ್ಕಪತ್ರ ಸಮಿತಿ (Public Accounts Committee) ಸೇರಿದಂತೆ ಪ್ರಮುಖ ಸಂಸದೀಯ ಸಮಿತಿಗಳು ರಚಿಸಲಾಗುತ್ತಿದೆ. ಕಾಂಗ್ರೆಸ್‌ನ ಹಿರಿಯ ನಾಯಕ ಕೆ.ಸಿ.ವೇಣುಗೋಪಾಲ್, ಡಿಎಂಕೆ ನಾಯಕ ಟಿ.ಆರ್.ಬಾಲು, ಬಿಜೆಪಿ ಮುಖಂಡರಾದ ಅನುರಾಗ್ ಠಾಕೂರ್, ರವಿಶಂಕರ್ ಪ್ರಸಾದ್, ತೇಜಸ್ವಿ ಸೂರ್ಯ, ಟಿಎಂಸಿ ನಾಯಕ ಸೌಗತ ರೇ ಮತ್ತು ಎಸ್‌ಪಿ ಮುಖಂಡ ಧರ್ಮೇಂದ್ರ ಯಾದವ್ ಪಿಎಸಿಯ ಸದಸ್ಯರಾಗಿದ್ದಾರೆ.

ಪಿಎಸಿ ಹೊರತುಪಡಿಸಿ ಸಾರ್ವಜನಿಕ ಉದ್ಯಮಗಳ ಸಮಿತಿ, ಅಂದಾಜುಗಳ ಸಮಿತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿ, ಲಾಭದಾಯಕ ಹುದ್ದೆಯ ಜಂಟಿ ಸಮಿತಿ ಮತ್ತು ಇತರ ಹಿಂದುಳಿದ ವರ್ಗಗಳ ಕಲ್ಯಾಣ ಸಮಿತಿಯನ್ನು ಚುನಾವಣೆ ಇಲ್ಲದೆ ರಚಿಸಲಾಗಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರದಲ್ಲೇ ಸಮಿತಿಗಳ ಅಧ್ಯಕ್ಷರನ್ನು ನಾಮನಿರ್ದೇಶನ ಮಾಡುವ ನಿರೀಕ್ಷೆಯಿದೆ.

ಇದನ್ನೂ ಓದಿ: Waqf Act: ವಕ್ಫ್‌ ಮಂಡಳಿ ಪರಮಾಧಿಕಾರಕ್ಕೆ ಮೋದಿ ಮೂಗುದಾರ; ಏನೆಲ್ಲ ತಿದ್ದುಪಡಿ? 9.4 ಲಕ್ಷ ಎಕರೆ ಯಾರ ಪಾಲು?

Continue Reading

ಕ್ರೈಂ

Rameshwaram Cafe Blast: ಬಾಂಬ್‌ ಇರಿಸಿದ ಉಗ್ರನನ್ನು ರಾಮೇಶ್ವರಂ ಕೆಫೆಗೆ ಕರೆತಂದು ಸೀನ್‌ ರಿಕ್ರಿಯೇಟ್‌ ಮಾಡಿದ ಎನ್‌ಐಎ

Rameshwaram Cafe Blast: ರಾಮೇಶ್ವರಂ ಕೆಫೆಯ ಸುತ್ತಮುತ್ತಲಿನ ಪ್ರದೇಶವನ್ನು ಇಂದು ಸಾರ್ವಜನಿಕರಿಗೆ ಬಂದ್‌ ಮಾಡಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಿ ಬ್ಲಾಸ್ಟ್‌ ಸೀನ್ ರೀಕ್ರಿಯೇಟ್ ಮಾಡಿಸಲಾಯಿತು. ಆರೋಪಿ ಮುಜಾವೀರ್ ಹುಸೇನ್ ಶಾಜಿಬ್ ಕೃತ್ಯದ ದಿನ ಎಲ್ಲಿಂದ, ಹೇಗೆ ನಡೆದುಕೊಂಡು ಬಂದ, ಕೆಫೆಯ ಒಳಗಡೆ ಎಲ್ಲೆಲ್ಲಿ ಸುತ್ತಾಡಿದ್ದ, ಎಲ್ಲಿ ಬ್ಯಾಗ್‌ ಇಟ್ಟಿದ್ದ, ನಂತರ ತೆರಳಿದ್ದು ಹೇಗೆ, ಇದೆಲ್ಲವನ್ನೂ ಉಗ್ರನಿಂದಲೇ ರೀಕ್ರಿಯೆಟ್ ಮಾಡಿಸಿ ವಿಡಿಯೋ ಮಾಡಿಕೊಳ್ಳಲಾಯಿತು.

VISTARANEWS.COM


on

rameshwaram cafe blast scene
Koo

ಬೆಂಗಳೂರು: ಬೆಂಗಳೂರಿನ (Bangalore Bomb Blast) ವೈಟ್‌ಫೀಲ್ಡ್‌ನಲ್ಲಿರುವ (Whitfield) ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿ (Rameshwaram Cafe Blast) ಬೆಚ್ಚಿ ಬೀಳಿಸಿದ್ದ ಪ್ರಕರಣದಲ್ಲಿ, ಬಾಂಬ್‌ ಇರಿಸಿದ ಉಗ್ರನನ್ನು (Terrorist) ಕರೆತಂದು ಇಡೀ ಘಟನೆಯನ್ನು ರಿಕ್ರಿಯೇಟ್‌ ಮಾಡಿ ದಾಖಲಿಸಿಕೊಳ್ಳಲಾಗುತ್ತಿದೆ. ಇಂದು ಬೆಳಗ್ಗೆ ಎನ್‌ಐಎ (NIA) ಟೀಮ್‌ ಬಂಧಿತ ಉಗ್ರನನ್ನು ಸ್ಥಳಕ್ಕೆ ಕರೆತಂದು ಹಲವು ಬಾರಿ ಈ ಡ್ರಿಲ್‌ ನಡೆಸಿತು.

ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌ ತನಿಖೆ ಭರದಿಂದ ಸಾಗಿದ್ದು, ಇಂದು ಮುಂಜಾನೆ ರಾಮೇಶ್ವರಂ ಕೆಫೆಗೆ ಎನ್ಐಎ ಅಧಿಕಾರಿಗಳು ಭೇಟಿ ನೀಡಿದರು. ಜೊತೆಗೆ ಬಾಂಬ್‌ ಇರಿಸಿದ ಭಯೋತ್ಪಾದಕ ಮುಜಾವೀರ್ ಹುಸೇನ್ ಶಾಜಿಬ್‌ನನ್ನೂ ಕರೆತರಲಾಗಿದೆ. ಕಳೆದ ಮಾರ್ಚ್ 1ರಂದು ನಡೆದಿದ್ದ ಬಾಂಬ್ ಬ್ಲಾಸ್ಟ್‌ಗೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಎನ್ಐಎ, ಪ್ರಮುಖ ಶಂಕಿತ ಉಗ್ರರನ್ನು ಈಗಾಗಲೇ ಬಂಧಿಸಿದೆ.

ರಾಮೇಶ್ವರಂ ಕೆಫೆಯ ಸುತ್ತಮುತ್ತಲಿನ ಪ್ರದೇಶವನ್ನು ಇಂದು ಸಾರ್ವಜನಿಕರಿಗೆ ಬಂದ್‌ ಮಾಡಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಿ ಬ್ಲಾಸ್ಟ್‌ ಸೀನ್ ರೀಕ್ರಿಯೇಟ್ ಮಾಡಿಸಲಾಯಿತು. ಆರೋಪಿ ಮುಜಾವೀರ್ ಹುಸೇನ್ ಶಾಜಿಬ್ ಕೃತ್ಯದ ದಿನ ಎಲ್ಲಿಂದ, ಹೇಗೆ ನಡೆದುಕೊಂಡು ಬಂದ, ಕೆಫೆಯ ಒಳಗಡೆ ಎಲ್ಲೆಲ್ಲಿ ಸುತ್ತಾಡಿದ್ದ, ಎಲ್ಲಿ ಬ್ಯಾಗ್‌ ಇಟ್ಟಿದ್ದ, ನಂತರ ತೆರಳಿದ್ದು ಹೇಗೆ, ಇದೆಲ್ಲವನ್ನೂ ಉಗ್ರನಿಂದಲೇ ರೀಕ್ರಿಯೆಟ್ ಮಾಡಿಸಿ ವಿಡಿಯೋ ಮಾಡಿಕೊಳ್ಳಲಾಯಿತು.

ಕೃತ್ಯ ನಡೆಸಿದ ಸಂದರ್ಭದಲ್ಲಿ ಆತ ಧರಿಸಿದ್ದ ಬಟ್ಟೆ ಹಾಗೂ ಕ್ಯಾಪ್ ಅನ್ನು ಆತನಿಗೆ ತೊಡಿಸಲಾಗಿದೆ. ಅವತ್ತಿನ ರೀತಿ ಬ್ಲಾಕ್ ಬ್ಯಾಗ್ ಹೆಗಲಿಗೆ ಹಾಕಿಕೊಂಡು ವಿಡಿಯೋ ಮರುಸೃಷ್ಟಿ ಮಾಡಿಸಲಾಗಿದೆ. ಎಲ್ಲವನ್ನೂ ಎನ್ಐಎ ಅಧಿಕಾರಿಗಳು ವಿಡಿಯೋ ರೆಕಾರ್ಡ್ ಮಾಡಿಕೊಂಡರು. ಹಲವು ಬಾರಿ ಈ ದೃಶ್ಯವನ್ನು ಚಿತ್ರೀಕರಿಸಿಕೊಳ್ಳಲಾಯಿತು. ಕೆಫೆಗೆ ಸಮೀಪದ ಬಸ್‌ ನಿಲ್ದಾಣದಲ್ಲಿಯೂ ಈ ಚಿತ್ರಣವನ್ನು ಚಿತ್ರೀಕರಿಸಲಾಗಿದೆ. ಬಸ್ಸಿಗಾಗಿ ಎಷ್ಟು ಹೊತ್ತು, ಎಲ್ಲಿ ಕುಳಿತು ಕಾದಿದ್ದ ಎಂಬುದನ್ನು ವಿಡಿಯೋ ಮಾಡಿಕೊಳ್ಳಲಾಗಿದೆ.

ಮಾರ್ಚ್ 1, 2024ರ ಮಧ್ಯಾಹ್ನ 12:56ಕ್ಕೆ ಬಾಂಬ್ ಸ್ಫೋಟಿಸಲಾಗಿತ್ತು. ಮೂವರು ಹೋಟೆಲ್ ಸಿಬ್ಬಂದಿ ಸೇರಿ ಹತ್ತು ಜನರಿಗೆ ಗಾಯವಾಗಿತ್ತು. ಆರಂಭದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರಿಂದ‌ ತನಿಖೆ ನಡೆದಿದ್ದು, ಮಾರ್ಚ್ 3ರಂದು ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿತ್ತು. ಮಾರ್ಚ್ 5ರಂದು ಎನ್‌ಐಎನಿಂದ ಶಂಕಿತ ಆರೋಪಿಗಳ ಸುಳಿವು ನೀಡಿದರೆ 10 ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು.

ಮಾರ್ಚ್ 15ರಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜ್ ಮುನೀರ್ ಆಹಮ್ಮದ್‌ನನ್ನು, ಮಾರ್ಚ್ 28ರಂದು ಚಿಕ್ಕಮಗಳೂರಿನಲ್ಲಿ ಮುಜಾಮಿಲ್ ಷರೀಪ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಮಾರ್ಚ್ 29ರಂದು ಪ್ರಮುಖ ಆರೋಪಿಗಳಾದ ಮುಸಾವೀರ್ ಹಾಗೂ ಅಬ್ದುಲ್ ಮತೀನ್ ತಾಹ ಇಬ್ಬರ ಫೋಟೋ ಬಿಡುಗಡೆ ಮಾಡಲಾಗಿತ್ತು. ಏಪ್ರಿಲ್ 12ರಂದು ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮತೀನ್ ತಾಹರನ್ನು ಪಶ್ಚಿಮ ಬಂಗಾಳದಲ್ಲಿ ಎನ್‌ಐಎ ಬಂಧಿಸಿತ್ತು.

ಮೇ 21ರಂದು ಈ ಪ್ರಕರಣದ ಸಂಬಂಧಿಸಿ ದೇಶದ 11 ಕಡೆ ಎನ್ಐಎ ದಾಳಿ ನಡೆಸಿತ್ತು. ಮೇ 24ರಂದು ಪ್ರಕರಣದಲ್ಲಿ ಐದನೆ ಆರೋಪಿಯಾಗಿ ಶೋಯೆಬ್ ಅಹಮ್ಮದ್ ಮಿರ್ಜಾ ಎಂಬವನನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: Rameshwaram Cafe: ಗ್ರಾಹಕರ ಕ್ಷಮೆ ಕೋರಿದರೂ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಾಮೇಶ್ವರಂ ಕೆಫೆ ಮಾಲೀಕ; ಕಾರಣ ಇದು

Continue Reading

ಪ್ರಮುಖ ಸುದ್ದಿ

Jobs Alert: ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

Jobs Alert: ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಲ್ಲಿ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಷರತ್ತುಗಳಿಗೊಳಪಟ್ಟು ಭರ್ತಿಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ.

VISTARANEWS.COM


on

teacher jobs alert
Koo

ಬೆಂಗಳೂರು: ಖಾಸಗಿ ಅನುದಾನಿತ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ (Teacher) ಹುದ್ದೆಗಳನ್ನು ಭರ್ತಿ ಮಾಡಲು (Jobs Alert) ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಶಿಕ್ಷಕ, ಉಪನ್ಯಾಸಕ ಹುದ್ದೆಗಳ ಶೋಧದಲ್ಲಿರುವವರಿಗೆ ಇದು ಗುಡ್ ನ್ಯೂಸ್ (Good news) ಆಗಿದೆ.

ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. 1987ರಿಂದ 1994-95ರ ಶೈಕ್ಷಣಿಕ ಅವಧಿಯಲ್ಲಿ ಪ್ರಾರಂಭಗೊಂಡು ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಲ್ಲಿ ದಿನಾಂಕ:01-01-2016ರಿಂದ ದಿನಾಂಕ:31-12-2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಭರ್ತಿಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ.

ಷರತ್ತುಗಳು:

ಹುದ್ದೆಗಳನ್ನು ಭರ್ತಿ ಮಾಡಿಕೊಂಡ ನಂತರ ನೇಮಕಾತಿ ಅನುಮೋದನೆಗಾಗಿ ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ಸಂಖ್ಯೆ:ಆಇ 384 ವೆಚ್ಚ-8/2013, ದಿನಾಂಕ:09-04- 2013ರಲ್ಲಿನ ಚೆಕ್‌ಲಿಸ್ಟ್ ಅನುಬಂಧ-3ರನ್ವಯ ಸಂಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವುದು. ಮೇಲ್ಕಂಡಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಾರಿಯಲ್ಲಿರುವ ಅನುದಾನ ಸಂಹಿತೆ ಮತ್ತು ಸರ್ಕಾರದ ಆದೇಶ ಮತ್ತು ಸುತ್ತೋಲೆಗಳ ನಿಯಮಗಳನ್ನು ಪಾಲಿಸಿರುವುದನ್ನು ಖಚಿತಪಡಿಸಿಕೊಳ್ಳುವುದು.

ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಟರ್ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. 2016-2017 ರಿಂದ 2023-24ನೇ ಸಾಲಿನವರೆಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಫಲಿತಾಂಶ ಮತ್ತು ಖಚಿತಪಡಿಸಿಕೊಳ್ಳುವುದು. ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಶಾಲಾ/ಕಾಲೇಜುಗಳು ಪ್ರಾರಂಭವಾದಾಗಿನಿಂದ ಅವಿಚ್ಛಿನ್ನವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು.

ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳು ಆನ್‌ಲೈನ್ ಮೂಲಕ ವಿವರಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸುವುದು. ಈ ತಂತ್ರಾಂಶದ ಮೂಲಕ ಪ್ರಸ್ತಾವನೆಗಳನ್ನು ವ್ಯವಹರಿಸುವುದು. ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿನ ಹುದ್ದೆಗಳನ್ನು ಅನುಮೋದಿಸಲು ಪ್ರತ್ಯಾಯೋಜಿಸಲಾದ ಆದೇಶ ಸಂಖ್ಯೆ: ಇಡಿ 16 ಟಿಪಿಯು 2011. ದಿನಾಂಕ:30-09-2011 ಅನ್ನು ಹಿಂಪಡೆದು, ಹುದ್ದೆಗಳ ಅನುಮೋದನೆಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಗಳನ್ನು ಸಲ್ಲಿಸುವುದು.

ಕನ್ನಡಿಗರಿಗೆ ಉದ್ಯೋಗ ಕಡ್ಡಾಯಕ್ಕೆ ಕಾನೂನು ಸಮಸ್ಯೆ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ಉದ್ಯಮಗಳಲ್ಲಿ ಮೀಸಲು (Karnataka Jobs Reservation) ಕಡ್ಡಾಯ ಮಾಡುವ ಕುರಿತು ರಾಜ್ಯ ಸರ್ಕಾರದ (Karnataka Government) ನಿಲುವಿನಿಂದಾಗಿ ಸೃಷ್ಟಿಯಾದ ಗೊಂದಲದ ನಡುವೆ, ನಾಲ್ವರು ಸಚಿವರು ಇಂದು ವಿಧಾನಸಭೆಯಲ್ಲಿ (Vidhan sabha) ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು. ಈ ವಿಚಾರದಲ್ಲಿ ಕಾನೂನಾತ್ಮಕ ಸಮಸ್ಯೆ ಇದ್ದು, ಇದರ ಬಗ್ಗೆ ಇನ್ನಷ್ಟು ಚರ್ಚೆ ನಡೆಯಬೇಕಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಹೇಳಿದ್ದಾರೆ.

ಖಾಸಗಿ ಕ್ಷೇತ್ರದ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಮಂಗಳವಾರ (ಜು.16) ಅನುಮೋದನೆ ನೀಡಿತ್ತು. ಇದಕ್ಕೆ ಉದ್ಯಮಿ ಕಿರಣ್‌ ಮಜುಂದಾರ್‌ ಶಾ, ಮೋಹನ್​ ದಾಸ್​ ಪೈ ಸೇರಿದಂತೆ ಇನ್ನೂ ಅನೇಕ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಮಸೂದೆಗೆ ಉದ್ಯಮಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಮುಜುಗರಕ್ಕೆ ಒಳಗಾದ ಸರಕಾರ, ವಿಧೇಯಕ ಜಾರಿಗೆ ಹಿಂದೇಟು ಹಾಕಿದೆ. ಈ ಹಿನ್ನೆಲೆಯಲ್ಲಿ ಇಂದು (ಜು.18) ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಾಲ್ವರು ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸಚಿವರಾದ ದಿನೇಶ್‌ ಗುಂಡೂರಾವ್​, ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್‌ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡರು.

ಇದನ್ನೂ ಓದಿ: Karnataka Jobs Reservation: ಉದ್ಯೋಗ ವಿಚಾರದಲ್ಲಿ ಕನ್ನಡಿಗರೊಂದಿಗೆ ಸರ್ಕಾರ ಚೆಲ್ಲಾಟ: ವಿಜಯೇಂದ್ರ ಆಕ್ರೋಶ

Continue Reading
Advertisement
Drowned in water
ಚಿಕ್ಕೋಡಿ2 mins ago

Drowned in water : ಆಟವಾಡುತ್ತಾ ಕಾಲುವೆಗೆ ಕಾಲು ಜಾರಿ ಬಿದ್ದು 4 ವರ್ಷದ ಬಾಲಕ ಸಾವು

Gold Rate Today
ಚಿನ್ನದ ದರ15 mins ago

Gold Rate Today: ಸತತ ಎರಡನೆ ದಿನವೂ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Actor Darshan wife Vijayalakshmi darshan temple run
ಸ್ಯಾಂಡಲ್ ವುಡ್15 mins ago

Actor Darshan: ದರ್ಶನ್‌ ಬಿಡುಗಡೆಗಾಗಿ ವಿಜಯಲಕ್ಷ್ಮಿ ಹಾಗೂ ಅಳಿಯ ಟೆಂಪಲ್ ರನ್‌

Road Accident
ಬೆಂಗಳೂರು30 mins ago

Road Accident: ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಕ್ಲೀನರ್ ಸಾವು; ಬೈಕ್‌ ಅಪಘಾತದಲ್ಲಿ ಸವಾರರಿಬ್ಬರು ಮೃತ್ಯು

Rahul Gandhi
ವೈರಲ್ ನ್ಯೂಸ್38 mins ago

Rahul Gandhi: ರಾಹುಲ್ ಗಾಂಧಿ ಅಲ್ಲ, ರಾಹುಲ್ ಖಾನ್! ಪಾಕಿಸ್ತಾನದ ಟಿವಿಯಲ್ಲಿ ಬಿಸಿಬಿಸಿ ಚರ್ಚೆ!

police inspector death thimmegowda
ಬೆಂಗಳೂರು51 mins ago

Inspector Death: ಮತ್ತೊಬ್ಬ ಪೊಲೀಸ್‌ ಇನ್‌ಸ್ಪೆಕ್ಟರ್‌ ಆತ್ಮಹತ್ಯೆ, ಎರಡು ತಿಂಗಳ ಹಿಂದೆ ಟ್ರಾನ್ಸ್‌ಫರ್‌ ಆಗಿದ್ದ ಸಿಸಿಬಿ ಎಸ್‌ಐ

Road Accident
ತುಮಕೂರು51 mins ago

Road Accident : ಬಲ ತಿರುವು ಪಡೆಯುವಾಗ ಬೈಕ್‌ ಸವಾರನ ಮೇಲೆ ಹರಿದ ಕೆಎಸ್‌ಆರ್‌ಟಿಸಿ ಬಸ್‌; ಸಿಸಿ ಕ್ಯಾಮೆರಾದಲ್ಲಿ ಅಪಘಾತ ಸೆರೆ

Pot holes in Belgavi
ಬೆಳಗಾವಿ54 mins ago

Pot Holes: ರಾಜ್ಯ ಹೆದ್ದಾರಿಯ ಯಮಸ್ವರೂಪಿ ರಸ್ತೆ ಗುಂಡಿಗೆ ಗ್ರಾಪಂ ಸದಸ್ಯ ಬಲಿ

Double Ismart Trailer Ram Pothineni Sanjay Dutt
ಟಾಲಿವುಡ್60 mins ago

Double iSmart Trailer:  ಡಬಲ್ ಇಸ್ಮಾರ್ಟ್ ಟ್ರೈಲರ್‌ ಔಟ್‌; ಅಬ್ಬರಿಸಿದ ಸಂಜಯ್ ದತ್‌!

thawar chand gehlot cm siddaramaiah Governor versus state
ಪ್ರಮುಖ ಸುದ್ದಿ1 hour ago

CM Siddaramaiah: ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌? ಇಂದು ರಾಜ್ಯಪಾಲರಿಂದ ನಿರ್ಧಾರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ22 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌