BSNL 5G Service : ಬಿಎಸ್​ಎನ್​​ಎಲ್​ 5ಜಿ ಸಿಮ್​ಕಾರ್ಡ್​ಗಳು ವಿತರಣೆಗೆ ರೆಡಿ​; ಬೆಂಗಳೂರಿನಲ್ಲಿಯೂ ಲಭ್ಯವೇ? - Vistara News

ಪ್ರಮುಖ ಸುದ್ದಿ

BSNL 5G Service : ಬಿಎಸ್​ಎನ್​​ಎಲ್​ 5ಜಿ ಸಿಮ್​ಕಾರ್ಡ್​ಗಳು ವಿತರಣೆಗೆ ರೆಡಿ​; ಬೆಂಗಳೂರಿನಲ್ಲಿಯೂ ಲಭ್ಯವೇ?

BSNL 5G Service : ಸಾರ್ವಜನಿಕ ವಲಯದ ಉದ್ಯಮವಾಗಿರುವ ಬಿಎಸ್​​ಎನ್​​ 4 ಜಿ ಮತ್ತು 5 ಜಿ ಕಡೆಗೆ ಹೊರಳುವ ನಿಟ್ಟಿನಲ್ಲಿ ತನ್ನ ತಾಂತ್ರಿಕ ಸಾಮರ್ಥ್ಯವನ್ನು ಪರೀಕ್ಷೆ ಮಾಡುತ್ತಿದೆ. ವಾಯ್ಸ್ ಆಫ್ ಇಂಡಿಯನ್ ಕಮ್ಯುನಿಕೇಷನ್ ಟೆಕ್ನಾಲಜಿ ಎಂಟಪ್ರೈ ಸಸ್ (ವಿಒಐಸಿಇ) ವರದಿ ಪ್ರಕಾರ, ದೇಶೀಯ ಟೆಲಿಕಾಂ ಕಂಪನಿಗಳ ಗುಂಪು ಬಿಎಸ್ಎನ್ಎಲ್ ಮೂಲಸೌಕರ್ಯವನ್ನು ಬಳಸಿಕೊಂಡು 5 ಜಿ ಸೇವೆ ನೀಡಲು ಸಿದ್ಧವಾಗಿದೆ.

VISTARANEWS.COM


on

BSNL 5G Service
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಐದನೇ ಪೀಳಿಗೆಯ ನೆಟ್ವರ್ಕ್​ (5G) ಸೇವೆ ನೀಡುತ್ತಿರುವ ಜಿಯೊ ಹಾಗೂ ಏರ್​ಟೆಲ್​ ಇತ್ತೀಚಿಗೆ ತಮ್ಮ ರೀಚಾರ್ಜ್​ ಪ್ಲ್ಯಾನ್​ಗಳ ದರ ಹೆಚ್ಚಿಸಿ ಗ್ರಾಹಕರಿಗೆ ಆಘಾತ ಕೊಟ್ಟಿತ್ತು. ಹೀಗಾಗಿ ಜನರು ಕಡಿಮೆ ಬೆಲೆಗೆ ಸೇವೆ ಕೊಡುವ ಬಿಎಸ್​ಎನ್​ಎಲ್ ಕಡೆಗೆ ವಾಲುವ ಯೋಚನೆ ಮಾಡಿದ್ದರು. ಅವರೆಲ್ಲರಿಗೂ ಇಲ್ಲೊಂದು ಶುಭ ಸುದ್ದಿಯಿದೆ. ಸರ್ಕಾರಿ ಸ್ವಾಮ್ಯದ ಸಂಸ್ಥೆಯಾಗಿರುವ ಬಿಎಸ್​​ಎನ್​ಎಲ್ 5ಜಿ ನೆಟ್ವರ್ಕ್​ಗೆ (BSNL 5G Service) ಪ್ರವೇಶ ಪಡೆದಿದೆ. ಬಿಎಸ್​ಎನ್​​ಎಲ್ ಈ ಸೇವೆಯ ಟ್ರಯಲ್​ ರನ್​ ಮಾಡುತ್ತಿದ್ದು ಬಹುತೇಕ ಯಶಸ್ವಿಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಅದು ಗ್ರಾಹಕರಿಗೆ ಲಭ್ಯವಾಗಲಿದೆ. ಬಿಎಸ್​ಎನ್​ಎಲ್​ ಕಚೇರಿಗಳಿಗೆ 5ಜಿ ಸಿಮ್​ಗಳು ಇದಾಗಲೇ ತಲುಪಿದೆ ಎಂಬ ವಿಡಿಯೊಗಳು ಹರಿದಾಡುತ್ತಿವೆ.

ಕೇಂದ್ರ ಸರ್ಕಾರದ ಸಂವಹನ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ ತಮ್ಮ ಎಕ್ಸ್ (ಹಿಂದಿನ ಟ್ವಿಟರ್) ಹ್ಯಾಂಡಲ್ ಮೂಲಕ ವೀಡಿಯೊವೊಂದರನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಅವರು 5 ಜಿ ನೆಟ್ವರ್ಕ್​ ಮೂಲಕ ವೀಡಿಯೊ ಕಾಲ್ ಮಾಡಿದ್ದಾರೆ. “ಬಿಎಸ್ಎನ್ಎಲ್​​ನ 5ಜಿ ಫೋನ್ ಕರೆಯನ್ನು ಪರೀಕ್ಷಿಸಿದೆ ” ಎಂದು ಸಚಿವರು ಪೋಸ್ಟ್​​ನಲ್ಲಿ ಬರೆದಿದ್ದಾರೆ. ಅವರು ಸೆಂಟರ್​ ಫಾರ್​ ಡೆವಲಪ್​ಮೆಂಟ್​ ಆಫ್​ ಟೆಲಿಮ್ಯಾಟಿಕ್ಸ್​​ ಸಂಸ್ಥೆಯಲ್ಲಿ ಈ ಪರೀಕ್ಷೆ ನಡೆಸಿದ್ದಾರೆ.

ಸಚಿವರು ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಕರೆಯ ಮಾಡಿ ಮಾತನಾಡಿದ ಮಹಿಳೆಯನ್ನು ಕೋಣೆಯಿಂದ ಹೊರಗೆ ಹೋಗುವಂತೆ ಕೇಳುವುದನ್ನು ಕೇಳಬಹುದು. ಆ ಹೆಂಗಸು ಹೊರಗೆ ಹೋದಾಗಲೂ ಕರೆ ನಿರಂತರವಾಗಿ ಬರುತ್ತಿತ್ತು. ಜ್ಯೋತಿರಾದಿತ್ಯ ಅವರು ತಕ್ಷಣ ಈ ಸೇವೆಯನ್ನು ನೋಡಿ ಖುಷಿ ಪಟ್ಟರು. ಆ ಕಡೆ ಇದ್ದ ಮಹಿಳೆ “ಹೌದು, ಸರ್, ನಾನು ನಿಮ್ಮ ಮಾತನ್ನು ಕೇಳಬಲ್ಲೆ” ಎಂದು ಹೇಳಿದ್ದಾರೆ.

ದೊಡ್ಡ ಮಟ್ಟದ ಸಿದ್ಧತೆ

ಸಾರ್ವಜನಿಕ ವಲಯದ ಉದ್ಯಮವಾಗಿರುವ ಬಿಎಸ್​​ಎನ್​​ 4 ಜಿ ಮತ್ತು 5 ಜಿ ಕಡೆಗೆ ಹೊರಳುವ ನಿಟ್ಟಿನಲ್ಲಿ ತನ್ನ ತಾಂತ್ರಿಕ ಸಾಮರ್ಥ್ಯವನ್ನು ಪರೀಕ್ಷೆ ಮಾಡುತ್ತಿದೆ. ವಾಯ್ಸ್ ಆಫ್ ಇಂಡಿಯನ್ ಕಮ್ಯುನಿಕೇಷನ್ ಟೆಕ್ನಾಲಜಿ ಎಂಟಪ್ರೈ ಸಸ್ (ವಿಒಐಸಿಇ) ವರದಿ ಪ್ರಕಾರ, ದೇಶೀಯ ಟೆಲಿಕಾಂ ಕಂಪನಿಗಳ ಗುಂಪು ಬಿಎಸ್ಎನ್ಎಲ್ ಮೂಲಸೌಕರ್ಯವನ್ನು ಬಳಸಿಕೊಂಡು 5 ಜಿ ಸೇವೆ ನೀಡಲು ಸಿದ್ಧವಾಗಿದೆ. ಈ ಉದ್ಯಮ ಗುಂಪಿನಲ್ಲಿ ಟಾಟಾ ಕನ್ಸಲ್ಟೆನ್ಸಿ, ತೇಜಸ್ ನೆಟ್ವರ್ಕ್ಸ್, ವಿಎನ್ಎಲ್, ಯುನೈಟೆಡ್ ಟೆಲಿಕಾಂ, ಕೋರಲ್ ಟೆಲಿಕಾಂ ಮತ್ತು ಎಚ್ಎಫ್​​ಎಸಿಎಲ್ ಸೇರಿವೆ. ಇದರ ಜತೆಗೆ ಬಿಎಸ್​ಎನ್​​ಎಲ್​ 5ಜಿಯೂ ಗ್ರಾಹಕರಿಗೆ ಸಿಗಲಿದೆ.

ಸಾಮರ್ಥ್ಯ ಎಷ್ಟು?

ಕೇಂದ್ರ ಸರ್ಕಾರವು 700 ಮೆಗಾಹರ್ಟ್ಸ್, 2200 ಮೆಗಾಹರ್ಟ್ಸ್, 3300 ಮೆಗಾಹರ್ಟ್ಸ್ ಮತ್ತು 26 ಗಿಗಾಹರ್ಟ್ಸ್ ಸ್ಪೆಕ್ಟ್ರಮ್ ಬ್ಯಾಂಡ್​ಗಳನ್ನು ಬಿಎಸ್ಎನ್ಎಲ್​ಗೆ ಹಂಚಿಕೆ ಮಾಡಿದೆ. ಈ ನೆಟ್ವರ್ಕ್​ ಸಾಮರ್ಥ್ಯದಲ್ಲಿ ಬಿಎಸ್ಎನ್ಎಲ್ ದೇಶಾದ್ಯಂತ 4 ಜಿ ಮತ್ತು 5 ಜಿ ಸೇವೆ ನೀಡಲಿದೆ.

ಬಿಎಸ್​ಎನ್​ಎಲ್​ 5ಜಿ ಸಿಮ್​ ವಿಡಿಯೊ ವೈರಲ್

ಮಹಾರಾಷ್ಟ್ರದ ಬಿಎಸ್ಎನ್ಎಲ್ ಕಚೇರಿಯ ಉದ್ಯೋಗಿಗಳು 5ಜಿ ಸಿಮ್ ಅನ್​ಬಾಕ್ಸಿಂಗ್ ಮಾಡುತ್ತಿದ್ದಾರೆ ಎನ್ನಲಾದ ವಿಡಿಯೊವೊಂದು ವೈರಲ್ ಆಗಿದೆ. ವೀಡಿಯೊದಲ್ಲಿ, ಬಿಎಸ್ಎನ್ಎಲ್ ಸಿಮ್​​ಗಳನ್ನು 5 ಜಿ ಲೋಗೋದೊಂದಿಗೆ ಸಿದ್ಧಪಡಿಸಲಾಗಿದೆ. ಇದು ಪರೀಕ್ಷಾರ್ಥ ಸಿಮ್​ ಅಥವಾ ಸಾರ್ವಜನಿಕರ ವಿತರಣೆಗಾ ಎಂಬುದು ಸ್ಪಷ್ಟವಾಗಿಲ್ಲ. ಯಾಕೆಂದರೆ ಸಂಸ್ಥೆಯು ಇನ್ನೂ 5 ಜಿ ಮತ್ತು 4 ಜಿ ಸೇವೆಗಳನ್ನು ಅಧಿಕೃತ ಪ್ರಾರಂಭಿಸಿಲ್ಲ.

ಬೆಂಗಳೂರಿನಲ್ಲಿ ಆರಂಭವಾಗಲಿದೆ ಪರೀಕ್ಷೆ

ಬಿಎಸ್​ಎನ್​​ಎಲ್​ 5 ಸೇವೆ ಬೆಂಗಳೂರಿನಲ್ಲಿಯೂ ಪರೀಕ್ಷೆಗೆ ಒಳಪಡಲಿವೆ. ಜತೆಗೆ ರಾಷ್ಟ್ರರಾಜಧಾನಿ ದೆಹಲಿ ಹಾಗೂ ದಕ್ಷಿಣದ ಪ್ರಮುಖ ನಗರ ಚೆನ್ನೈನ ಜನಪ್ರಿಯ ಸ್ಥಳಗಳಲ್ಲಿ 5 ಜಿ ಸೇವೆಗಳ ಪ್ರಯೋಗಗಳು ನಡೆಯಲಿವೆ. ಬೆಂಗಳೂರಿನ ಸರ್ಕಾರಿ ಕಚೇರಿ, ದೆಹಲಿಯ ಸಂಚಾರ್ ಭವನ, ಕನೌಟ್ ಪ್ಲೇಸ್, ಜೆಎಎನ್​​ಯು ಕ್ಯಾಂಪಸ್ ಮತ್ತು ಐಐಟಿ ದೆಹಲಿ, ದೆಹಲಿಯ ಇಂಡಿಯಾ ಹ್ಯಾಬಿಟಾಟ್ ಸೆಂಟರ್, ಗುರುಗ್ರಾಮ್ ಮತ್ತು ಐಐಟಿ ಹೈದರಾಬಾದ್​ನ ಆಯ್ದ ಸ್ಥಳಗಳಲ್ಲಿ 5 ಸೇವೆಯ ಪರೀಕ್ಷೆ ನಡೆಯಲಿದೆ.

ಬಿಎಸ್ಎನ್ಎಲ್​ಗೆ ಬಜೆಟ್​ನಲ್ಲಿ ಅನುದಾನ

ಈ ವರ್ಷದ ಕೇಂದ್ರ ಸರ್ಕಾರದ ಬಜೆಟ್​ನಲ್ಲಿ ಬಿಎಸ್ಎನ್ಎಲ್ ಪುನರುಜ್ಜೀವನಗೊಳಿಸುವ ಯೋಜನೆ ಪ್ರಕಟಿಸಲಾಗಿತ್ತು. ಅದಕ್ಕಾಗಿ 82 ಸಾವಿರ ಕೋಟಿ ರೂ.ಗಳನ್ನು ಮೀಸಲಿಡುವುದಾಗಿ ಘೋಷಿಸಲಾಗಿದೆ. ಟೆಲಿಕಾಂ ಕಂಪನಿಯ ಮೂಲಸೌಕರ್ಯವನ್ನು ಹೆಚ್ಚಿಸಲು ಮತ್ತು ಸಂಪೂರ್ಣವಾಗಿ ಭಾರತದಲ್ಲಿಯೇ ಅಭಿವೃದ್ಧಿಪಡಿಸಿದ 4 ಜಿ ಮತ್ತು 5 ಜಿ ತಂತ್ರಜ್ಞಾನವನ್ನು ಹೊರತರಲು ಅನುಕೂಲವಾಗುವಂತೆ ಈ ಹಣವನ್ನು ಬಳಸಲಾಗುವುದು ಎಂದು ಹೇಳಲಾಗಿತ್ತು. ಈ ಕ್ರಮವು ಭವಿಷ್ಯದಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಗಮನಾರ್ಹ ಸವಾಲನ್ನು ಒಡ್ಡಬಹುದು. ಪ್ರಮುಖವಾಗಿ ಈಗಾಗಲೇ ಈ ಕ್ಷೇತ್ರದಲ್ಲಿ ಬಲಾಢ್ಯ ಎನಿಸಿಕೊಂಡಿರುವ ಜಿಯೊ ಹಾಗೂ ಏರ್​ಟೆಲ್​ಗೆ ಸವಾಲೊಡ್ಡಲಿದೆ.

ಇದನ್ನೂ ಓದಿ: Rajeev Chandrasekhar: 10 ವರ್ಷಗಳಲ್ಲಿ 80 ಕೋಟಿ ಮಂದಿ ಬಡತನದಿಂದ ಹೊರಗೆ; ವಿಶ್ವಸಂಸ್ಥೆಯಲ್ಲೇ ಮೋದಿ ಆಡಳಿತಕ್ಕೆ ಪ್ರಶಂಸೆ

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯಿಂದ ಎದುರಾಗುವ ಸ್ಪರ್ಧೆಯ ಹಿನ್ನೆಲೆಯಲ್ಲಿ, ಖಾಸಗಿ ಕಂಪನಿಗಳು ತಮಗೆ ಆಗಲಿರುವ ಗಣನೀಯ ನಷ್ಟವನ್ನು ತಪ್ಪಿಸಲು ಪ್ರತಿ ಬಳಕೆದಾರರಿಂದ ಆದಾಯ ಹೆಚ್ಚಿಸಲು ಪ್ರಯತ್ನಿಸಬಹುದು.

ಬಿಎಸ್ಎನ್ಎಲ್ ಬಳಕೆದಾರರ ಸಂಖ್ಯೆಯಲ್ಲಿ ಹೆಚ್ಚಳ

5ಸೇವೆಯ ಭರವಸೆ ಹಾಗೂ ಖಾಸಗಿ ಕಂಪನಿಗಳ ಟ್ಯಾರಿಫ್​ ಹೆಚ್ಚಳದ ಕಾರಣಕ್ಕೆ ಕಳೆದ 30 ದಿನಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಹೊಸ ಸಿಮ್​ಗಳು ಮಾರಾಟವಾಗಿವೆ ಎಂದು ಆಂಧ್ರಪ್ರದೇಶದ ಬಿಎಸ್ ಎನ್ ಎಲ್ ಘೋಷಿಸಿದೆ. ಈ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಆಂಧ್ರಪ್ರದೇಶದಲ್ಲಿ ಮಾತ್ರವಲ್ಲ, ಭಾರತದಾದ್ಯಂತ ವಿವಿಧ ಟೆಲಿಕಾಂ ವಲಯಗಳಲ್ಲಿ ಬಿಎಸ್ಎನ್ಎಲ್ ಚಂದಾದಾರರ ಸಂಖ್ಯೆಯೂ ಗಮನಾರ್ಹವಾಗಿ ಹೆಚ್ಚುತ್ತಿದೆ.

ಖಾಸಗಿ ಟೆಲಿಕಾಂ ಕಂಪನಿಗಳು ಪರಿಷ್ಕೃತ ದರ ಯೋಜನೆಗಳನ್ನು ಪರಿಚಯಿಸುವುದರೊಂದಿಗೆ ಬಳಕೆದಾರರು ತಮ್ಮ ಸಿಮ್ ಅನ್ನು ಬಿಎಸ್ಎನ್ಎಲ್​ಗೆ ಪೋರ್ಟ್​ ಮಾಡಲು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭಿಸಿದ್ದಾರೆ. ಪೂರಕವಾಗಿ ಬಿಎಸ್​ಎನ್​​ಎಲ್​ ಸಿಮ್ ಕಾರ್ಡ್ ಪೋರ್ಟಿಂಗ್​ಗೆ ಅನುಕೂಲವಾಗುವಂತೆ ದೇಶಾದ್ಯಂತ ವಿವಿಧ ನಗರಗಳಲ್ಲಿ ಕೇಂದ್ರಗಳನ್ನು ತೆರೆದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Wayanad landslide: ವಯನಾಡು ಭೂ ಕುಸಿತ; ಮೃತ ಬಾಲಕ ರೋಹಿತ್ ತಾಯಿಗೆ ಸಾಂತ್ವನ ಹೇಳಿ ಪರಿಹಾರ ಘೋಷಿಸಿದ ಸಿಎಂ

Kodagu News: ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಗುಹೆಯಾ ಗ್ರಾಮದ 4ನೇ ತರಗತಿ ವಿದ್ಯಾರ್ಥಿ ರೋಹಿತ್, ವಯನಾಡು ಭೂ ಕುಸಿತದಲ್ಲಿ ಮೃತಪಟ್ಟಿದ್ದ. ಹೀಗಾಗಿ ಕೊಡಗು ಪ್ರವಾಸದ ವೇಳೆ ಬಾಲಕನ ತಾಯಿಯೊಂದಿಗೆ ಸಿಎಂ ದೂರವಾಣಿ ಮೂಲಕ ಸಾಂತ್ವನ‌ ಹೇಳಿ, ಪರಿಹಾರ ಕೊಡುವ ಭರವಸೆ ನೀಡಿದ್ದಾರೆ.

VISTARANEWS.COM


on

Kodagu News
Koo

ಮಡಿಕೇರಿ: ವಯನಾಡಿನ ಅಜ್ಜ-ಅಜ್ಜಿ ಮನೆಗೆ ಹೋಗಿದ್ದ ವೇಳೆ ಭೂ ಕುಸಿತದಲ್ಲಿ (Wayanad landslide) ಮೃತಪಟ್ಟ ಬಾಲಕ ರೋಹಿತ್ ತಾಯಿಗೆ ಸಿಎಂ ಸಿದ್ದರಾಮಯ್ಯ ಅವರು ಸಾಂತ್ವನ ಹೇಳಿ ಪರಿಹಾರ ಘೋಷಿಸಿದ್ದಾರೆ. ಕೊಡಗು ಜಿಲ್ಲೆ (Kodagu News) ವಿರಾಜಪೇಟೆ ತಾಲೂಕಿನ ಗುಹೆಯಾ ಗ್ರಾಮದ 4ನೇ ತರಗತಿ ವಿದ್ಯಾರ್ಥಿ ರೋಹಿತ್ ತಾಯಿ ಕವಿತಾ ಜತೆ ದೂರವಾಣಿ ಮೂಲಕ ಮಾತನಾಡಿದ ಮುಖ್ಯಮಂತ್ರಿಯವರು ದುರಂತಕ್ಕೆ ಸಾಂತ್ವನ‌ ಹೇಳಿ ಪರಿಹಾರ ಕೊಡುವ ಭರವಸೆ ನೀಡಿದರು.

ಇದಕ್ಕೂ ಮೊದಲು ಪೊನ್ನಂಪೇಟೆ ತಾಲೂಕಿನ‌ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಸಿಎಂ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯರ ಜೊತೆ ಕೆಲಹೊತ್ತು ಚರ್ಚೆ ಮಾಡಿದ ಬಳಿಕ 20 ಕುಟುಂಬಗಳ ಸಂಕಷ್ಟ ಕೇಳಿ ಸಿಎಂ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚಿಸಿದರು

ಗುಡ್ಡ ಕುಸಿತದ ಪರಿಣಾಮ ಸುಮಾರು 20ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು, ಇಲ್ಲಿ ತೂಗು ಸೇತುವೆ ನಿರ್ಮಿಸುವ ಜೊತೆಗೆ ತುರ್ತಾಗಿ ರಸ್ತೆ ನಿರ್ಮಾಣದ ಜೊತೆಗೆ ಇತರೆ ದುರಸ್ತಿ ಕಾರ್ಯಗಳನ್ನು ಮುಗಿಸುವಂತೆ ಸಿಎಂ ಸೂಚಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸ್ ರಾಜು, ಶಾಸಕರಾದ ಪೊನ್ನಣ್ಣ , ಮಂಥರ್ ಗೌಡ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | Wayanad Landslide: 144 ಸೈನಿಕರು 31 ಗಂಟೆಯೊಳಗೆ 190 ಅಡಿ ಉದ್ದದ ಸೇತುವೆ ನಿರ್ಮಿಸಿದ್ದು ಹೇಗೆ?ಇದನ್ನೂ ಓದಿ |

ವಯನಾಡು ಹಿಂದೆ ಹೇಗಿತ್ತು? ಈಗ ಹೇಗಿದೆ? ದುರಂತ ಸ್ಥಳದ ದೃಶ್ಯ ಸೆರೆ ಹಿಡಿದ ಇಸ್ರೋ

Wayanad landslides
Wayanad landslides

ಹೈದರಾಬಾದ್‌: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ(Wayanad Landslide)ದ ಭೀಕರ ದೃಶ್ಯವನ್ನು ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಸೆರೆ ಹಿಡಿದಿದೆ. ಹೈದರಾಬಾದ್‌ನಲ್ಲಿರುವ ರಾಷ್ಟ್ರೀಯ ರಿಮೋಟ್‌ ಸೆನ್ಸಿಂಗ್‌ ಸೆಂಟರ್‌(NRSC) ಹೈ ರೆಸೊಲ್ಯೂಶನ್‌ ಉಪಗ್ರಹದ ಚಿತ್ರವನ್ನು ಬಿಡುಗಡೆ ಮಾಡಿದೆ. ಭೀಕರ ದುರಂತ ಸಂಭವಿಸಿದ ವಯನಾಡ್‌ ಜಿಲ್ಲೆಯ ಚೂರಲ್‌ಮಾಲದ ದುರಂತಕ್ಕೂ ಮುನ್ನ ಮತ್ತು ನಂತರದ ಚಿತ್ರವನ್ನು NRSC ಇಸ್ರೋ ರಿಲೀಸ್‌ ಮಾಡಿದೆ.

ಕಾರ್ಟೊಸ್ಯಾಟ್ 3 ಉಪಗ್ರಹವು ಮೇ 22 ರಂದು ಒಂದು ಚಿತ್ರವನ್ನು ತೆಗೆದುಕೊಂಡಿತು ಮತ್ತು ಜುಲೈ 31 ರಂದು ಭೂಕುಸಿತದ ಒಂದು ದಿನದ ನಂತರ RISAT ಉಪಗ್ರಹವು ಮತ್ತೊಂದು ಚಿತ್ರವನ್ನು ತೆಗೆದಿದೆ. ಬರೋಬ್ಬರಿ 86,000 ಚದರ ಮೀಟರ್‌ಗಳಷ್ಟು ಭೂಮಿ ಹಾನಿಗೊಳಗಾಗಿರುವುದನ್ನು ಸ್ಯಾಟಲೈಟ್‌ ಚಿತ್ರದಲ್ಲಿ ಕಾಣಬಹುದಾಗಿದೆ. ಸುಮಾರು ಎಂಟು ಕಿ.ಮೀಗಳಷ್ಟು ಭೂಮಿ ಸಂಪೂರ್ಣವಾಗಿ ನಾಶವಾಗಿದೆ.

ಭಾರಿ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೀಕರ ಭೂಕುಸಿತಕ್ಕೆ ಕೇರಳದ ವಯನಾಡು ಈಗ ಸೂತಕದ ಮನೆಯಂತಾಗಿದೆ. ಭೂಕುಸಿತದಲ್ಲಿ ಮೃತರ ಸಂಖ್ಯೆ ಈಗ 300ದಾಟಿದೆ. ಇನ್ನು ನಾಪತ್ತೆಯಾದವರ ಸಂಖ್ಯೆ ಅದೆಷ್ಟೋ… ಹೈ-ರೆಸಲ್ಯೂಷನ್‌ ಉಪಗ್ರಹ ಚಿತ್ರಗಳನ್ನು ರಿಲೀಸ್‌ ಮಾಡಿರುವ ಇಸ್ರೋ, ಕೇರಳದ ವಯನಾಡಿನಲ್ಲಿ ಸುಮಾರು 300 ಜನರನ್ನು ಬಲಿ ಪಡೆದ ಭೀಕರ ಭೂಕುಸಿತ ಹೇಗಾಯಿತು ಎಂಬುದನ್ನು ತೋರಿಸಿದೆ.

ಉಪಗ್ರಹ ಚಿತ್ರಗಳ ಪ್ರಕಾರ ಸಮುದ್ರ ಮಟ್ಟದಿಂದ 1500 ಮೀಟರ್‌ ಎತ್ತರದಲ್ಲಿರುವ ಗುಡ್ಡದ ಭೂಕುಸಿತದ ಪ್ರಭಾವ ಸುಮಾರು 8 ಕಿಮೀ ವ್ಯಾಪ್ತಿಯಲ್ಲಿ ಸಾಗಿದೆ. ಸುಮಾರು 86,000 ಚ.ಮೀ ಪ್ರದೇಶಕ್ಕೆ ಹಾನಿ ವ್ಯಾಪಿಸಿದೆ. ಇನ್ನು ಈ ಪ್ರದೇಶದಲ್ಲಿ ಭಾರೀ ಪ್ರಮಾಣದ ಹಾನಿ ಸಂಭವಿಸಿದೆ. ಇನ್ನು ಉಪಗ್ರಹದ ಮಾಹಿತಿಯ ಪ್ರಕಾರ ಈ ಹಿಂದೆ ಭೂ ಕುಸಿತ ಸಂಭವಿಸಿದ ಅದೇ ಸ್ಥಳದಲ್ಲೇ ಭೂ ಕುಸಿತವಾಗಿದೆ ಎಂದು ಹೇಳಲಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಯನಾಡ್‌ ಭೂಕುಸಿದ ಉಪಗ್ರಹ ಚಿತ್ರವನ್ನು ಬಿಡುಗಡೆಗೊಳಿಸಿ ಹಾನಿಯ ವ್ಯಾಪ್ತಿಯನ್ನು ತಿಳಿಸಿದೆ.

ಇದನ್ನೂ ಓದಿ: Wayanad Landslide: ವಯನಾಡು ಸ್ಥಿತಿ ನೋಡಿ ತಂದೆ ಸಾವು ನೆನಪಾಯ್ತು ಎಂದ ರಾಹುಲ್‌ ಗಾಂಧಿ; ಸಾವಿನ ಸಂಖ್ಯೆ 300ರ ಸನಿಹ

ಭಾರೀ ದೊಡ್ಡ ಪ್ರಮಾಣದ ಕುಸಿತ ಎಂಬುದು ಚಿತ್ರಗಳ ಮೂಲಕ ಸ್ಪಷ್ಟವಾಗಿದೆ.
ಭೂಕುಸಿತ ವಿನಾಶವನ್ನು ಸೆರೆಹಿಡಿಯಲು, ಹೈದರಾಬಾದ್‌ನಲ್ಲಿರುವ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ (ಎನ್‌ಆರ್‌ಎಸ್‌ಸಿ) ಇಸ್ರೋದ ಸುಧಾರಿತ ಕಾರ್ಟೊಸ್ಯಾಟ್-3 ಆಪ್ಟಿಕಲ್ ಉಪಗ್ರಹ ಮತ್ತು ಮೋಡದ ಹೊದಿಕೆಯನ್ನು ಭೇದಿಸಬಲ್ಲ RISAT ಉಪಗ್ರಹದ ಸಹಾಯದಿಂದ ಇಂ ಚಿತ್ರವನ್ನು ಸೆರೆ ಹಿಡಿದಿದೆ.

Continue Reading

ಪ್ರಮುಖ ಸುದ್ದಿ

Paris Olympics 2024 : ಪ್ಯಾರಿಸ್​​ನಲ್ಲಿ ಸಿಕ್ಕಾಪಟ್ಟೆ ಸೆಖೆ; ಅಥ್ಲೀಟ್​ಗಳಿಗಾಗಿ 40 ಎಸಿ ಕಳುಹಿಸಿದ ಕ್ರೀಡಾ ಸಚಿವಾಲಯ

Paris Olympics 2024: ಎರಡು ಪ್ರಮುಖ ಒಲಿಂಪಿಕ್ ಕ್ರೀಡಾಕೂಟದ ಸ್ಥಳಗಳಾದ ಪ್ಯಾರಿಸ್ ಮತ್ತು ಚಟೌರೌಕ್ಸ್ ಎರಡರಲ್ಲೂ ತಾಪಮಾನ ಮಿತೀಮೀರಿದೆ. ಪುರುಷರ 50 ಮೀಟರ್ ರೈಫಲ್ 3-ಪೊಸಿಷನ್ಸ್ ಸ್ಪರ್ಧೆಯ ವೇಲೆ ಭಾರತದ ಕಂಚಿನ ವಿಜೇತ ಸ್ವಪ್ನಿಲ್ ಕುಸಾಲೆ ಸೇರಿದಂತೆ ಎಲ್ಲಾ ಎಂಟು ಅಂತಿಮ ಸ್ಪರ್ಧಿಗಳು ಚಟೌರೌಕ್ಸ್ ಶೂಟಿಂಗ್ ರೇಂಜ್​ನಲ್ಲಿ ಸಾಕಷ್ಟು ಸಮಸ್ಯೆ ಎದುರಿಸಿದರು. ಅವರಿಗೆ ಸ್ಪರ್ಧೆ ಮಾಡಲೂ ಸಮಸ್ಯೆ ಆಯಿತು.

VISTARANEWS.COM


on

Paris Olympics 2024
Koo

ಪ್ಯಾರಿಸ್: ಒಲಿಂಪಿಕ್ಸ್​ ನಡೆಯುತ್ತಿರುವ ಪ್ಯಾರಿಸ್​​ನಲ್ಲಿ (Paris Olympics 2024) ತಾಪಮಾನ ಹೆಚ್ಚುತ್ತಿದೆ. ಹೀಗಾಗಿ ಕ್ರೀಡಾ ಗ್ರಾಮದಲ್ಲಿರುವ ತಮ್ಮ ಕೊಠಡಿಗಳಲ್ಲಿ ಅಥ್ಲೀಟ್​ಗಳು ಪರಿತಪಿಸುವಂತಾಗಿದೆ. ಸೆಖೆಯ ಸಮಸ್ಯೆಯಿಂದ ಹೋರಾಡುತ್ತಿರುವ ಭಾರತೀಯ ಕ್ರೀಡಾಪಟುಗಳ ಅನುಕೂಲಕ್ಕಾಗಿ ಕ್ರೀಡಾ ಸಚಿವಾಲಯವು 40 ಪೋರ್ಟಬಲ್ ಹವಾನಿಯಂತ್ರ ವ್ಯವಸ್ಥೆಯನ್ನು ಕಳುಹಿಸಿದೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಮತ್ತು ಫ್ರೆಂಚ್ ರಾಯಭಾರ ಕಚೇರಿಯೊಂದಿಗೆ ಚರ್ಚಿಸಿದ ನಂತರ ಹವಾನಿಯಂತ್ರಣಗಳನ್ನು ಕ್ರೀಡಾಕೂಟದ ಗ್ರಾಮಕ್ಕೆ ಕಳುಹಿಸಲಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಪ್ಯಾರಿಸ್ನಲ್ಲಿನ ತಾಪಮಾನ ಮತ್ತು ಆರ್ದ್ರತೆಯಿಂದಾಗಿ ಒಲಿಂಪಿಕ್ ಗೇಮ್ಸ್ ಗ್ರಾಮದಲ್ಲಿ ಕ್ರೀಡಾಪಟುಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗಣನೆಗೆ ತೆಗೆದುಕೊಂಡು, ಭಾರತೀಯ ಕ್ರೀಡಾಪಟುಗಳು ತಂಗಿರುವ ಗೇಮ್ಸ್ ವಿಲೇಜ್ ಕೊಠಡಿಗಳಲ್ಲಿ 40 ಎಸಿಗಳನ್ನು ಒದಗಿಸಲು ಕ್ರೀಡಾ ಸಚಿವಾಲಯ ನಿರ್ಧರಿಸಿದೆ” ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.

ಎರಡು ಪ್ರಮುಖ ಒಲಿಂಪಿಕ್ ಕ್ರೀಡಾಕೂಟದ ಸ್ಥಳಗಳಾದ ಪ್ಯಾರಿಸ್ ಮತ್ತು ಚಟೌರೌಕ್ಸ್ ಎರಡರಲ್ಲೂ ತಾಪಮಾನ ಮಿತೀಮೀರಿದೆ. ಪುರುಷರ 50 ಮೀಟರ್ ರೈಫಲ್ 3-ಪೊಸಿಷನ್ಸ್ ಸ್ಪರ್ಧೆಯ ವೇಲೆ ಭಾರತದ ಕಂಚಿನ ವಿಜೇತ ಸ್ವಪ್ನಿಲ್ ಕುಸಾಲೆ ಸೇರಿದಂತೆ ಎಲ್ಲಾ ಎಂಟು ಅಂತಿಮ ಸ್ಪರ್ಧಿಗಳು ಚಟೌರೌಕ್ಸ್ ಶೂಟಿಂಗ್ ರೇಂಜ್​ನಲ್ಲಿ ಸಾಕಷ್ಟು ಸಮಸ್ಯೆ ಎದುರಿಸಿದರು. ಅವರಿಗೆ ಸ್ಪರ್ಧೆ ಮಾಡಲೂ ಸಮಸ್ಯೆ ಆಯಿತು.

ಇದನ್ನೂ ಓದಿ: Paris Olympics 2024 : 52 ವರ್ಷಗಳ ಬಳಿಕ ಒಲಿಂಪಿಕ್ಸ್​​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿದ ಭಾರತದ ಹಾಕಿ ತಂಡ

ಪ್ಯಾರಿಸ್​​ನಲ್ಲಿ ಕೆಲವು ದಿನಗಳಲ್ಲಿ ತಾಪಮಾನವು ಅಸಹನೀಯ 40 ಡಿಗ್ರಿ ಸೆಲ್ಸಿಯಸ್ ತಲುಪಿದೆ ಎಂದು ವರದಿಗಳಿವೆ. ಡಾಕೂಟ ಪ್ರಾರಂಭವಾಗುವ ಮೊದಲೇ,ಇಂಗಾಲದ ಡೈಆಕ್ಸೈಡ್​ ಹೊರಸೂಸುವಿಕೆಯನ್ನು ತಡೆಯಲು ಹವಾನಿಯಂತ್ರಣ ವ್ಯವಸ್ಥೆ ಬಳಸುವುದಿಲ್ಲ ಸಂಘಟಕರು ಹೇಳಿದ್ದರು. ಹೀಗಾಗಿ ಹಲವಾರು ತಂಡಗಳು ಪ್ಯಾರಿಸ್ನ ತಾಪಮಾನದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು.

ಕ್ರೀಡಾಕೂಟದ ಆಯೋಜಕ ಸಮಿತಿಯು ಗೇಮ್ಸ್ ವಿಲೇಜ್​ನಲ್ಲಿ ತಾಪಮಾನ ಕಡಿಮೆ ಮಾಡಲು ಅಂಡರ್ಫ್ಲೋರ್ ಕೂಲಿಂಗ್ ಕಾರ್ಯವಿಧಾನ ಮತ್ತು ಅಂತರ್ನಿರ್ಮಿತ ಇನ್ಸುಲೇಷನ್ ಅನಾವರಣಗೊಳಿಸಿತು. ಆದಾಗ್ಯೂ, ಕ್ರಮಗಳ ಬಗ್ಗೆ ಸಮಾಧಾನಗೊಳ್ಳದ ಯುಎಸ್ಎ ತುಕಡಿ ಪೋರ್ಟಬಲ್ ಏರ್ ಕಂಡೀಷನರ್​​ ಜತೆಗೆ ಪ್ರಯಾಣಿಸಿತ್ತು.

ಶಾಖವನ್ನು ನಿರ್ವಹಿಸಲು ಇತರ ದೇಶಗಳು ಪೋರ್ಟಬಲ್ ಎಸಿಗಳನ್ನು ಖರೀದಿಸಲು ಆಶ್ರಯಿಸಿವೆ ಎಂದು ವರದಿಗಳು ಸೂಚಿಸಿವೆ. ಭಾರತ ಈಗ ಈ ಸಾಲಿಗೆ ಸೇರಿಕೊಂಡಿದೆ. “ಶುಕ್ರವಾರ ಮುಂಜಾನೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ವೆಚ್ಚವನ್ನು ಸಚಿವಾಲಯವು ಭರಿಸುತ್ತಿದೆ” ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಎಸಿಗಳು ಪ್ಲಗ್ ಮತ್ತು ಪ್ಲೇ ಘಟಕಗಳಾಗಿವೆ. ಕ್ರೀಡಾಪಟುಗಳು ಈಗಾಗಲೇ ಅವುಗಳನ್ನು ಬಳಸಲು ಪ್ರಾರಂಭಿಸಿದ್ದಾರೆ. ಇದರೊಂದಿಗೆ ಅವರು ಹೆಚ್ಚು ಆರಾಮದಾಯಕವಾಗಿ ಉಳಿದುಕೊಳ್ಳಬಹುದು. ಉತ್ತಮ ಪ್ರದರ್ಶನವನ್ನು ನೀಡಬಹುದು “ಎಂದು ಮೂಲಗಳು ಹೇಳಿವೆ.

Continue Reading

ಪ್ರಮುಖ ಸುದ್ದಿ

Paris Olympics 2024 : 52 ವರ್ಷಗಳ ಬಳಿಕ ಒಲಿಂಪಿಕ್ಸ್​​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿದ ಭಾರತದ ಹಾಕಿ ತಂಡ

Paris Olympics 2024: ಈ ವರ್ಷ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 8 ನೇ ಪಂದ್ಯ ಇದಾಗಿದೆ. ಹಿಂದಿನ 7 ಪಂದ್ಯಗಳನ್ನು ಆಸೀಸ್ ಗೆದ್ದಿತ್ತು. ಇದೀಗ ಭಾರತ ತಿರುಗೇಟು ನೀಡಿತು. ಅಲ್ಲದೆ ಬೆಲ್ಜಿಯಂ ವಿರುದ್ಧದ ಸೋಲಿನಿಂದ ಚೇತರಿಸಿಕೊಳ್ಳಲು ಭಾರತಕ್ಕೆ ಉತ್ತಮ ಕಾರಣ ಸಿಕ್ಕಿತು ಹಾಗೂ ಕ್ವಾರ್ಟರ್ ಫೈನಲ್​​ ಗೆಲುವಿಗೆ ಪ್ರೇರಣೆಯಾಯಿತು.

VISTARANEWS.COM


on

Paris Olympics 2024
Koo

ಬೆಂಗಳೂರು: ಹರ್ಮನ್ ಪ್ರೀತ್ ಸಿಂಗ್ ಅವರ ಆಕರ್ಷಕ ಎರಡು ಗೋಲುಗಳ ನೆರವಿನಿಂದ ಮಿಂಚಿದ ಭಾರತ ಹಾಕಿ ತಂಡ ಪ್ಯಾರಿಸ್ ಒಲಿಂಪಿಕ್ಸ್​​ನ (Paris Olympics 2024) ಗ್ರೂಪ್ ಹಂತದಲ್ಲಿ ಆಸ್ಟ್ರೇಲಿಯಾ ವಿರುದ್ಧ 3-2 ಗೋಲುಗಳ ಅಂತರದಲ್ಲಿ ಜಯ ಸಾಧಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. ಒಲಿಂಪಿಕ್ಸ್​​ನಲ್ಲಿ ಆಸ್ಟ್ರೇಲಿಯಾ ವಿರುದ್ಧ 52 ವರ್ಷಗಳ ಬಳಿಕ ಭಾರತ ಗೆಲುವು ಸಾಧಿಸಿದ್ದು ಈ ಫಲಿತಾಂಶದವ ವಿಶೇಷವಾಗಿದೆ. ಈ ಮೂಲಕ ಭಾರತ ಹಾಕಿ ತಂಡ ಪ್ಯಾರಿಸ್​​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವುದನ್ನು ಮುಂದುವರಿಸಿತು. ಈ ಗೆಲುವು ಭಾರತದ ಪಾಲಿಗೆ ಸಂಘಟಿತ ಹೋರಾಟವಾಗಿತ್ತು.

ಈ ವರ್ಷ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 8 ನೇ ಪಂದ್ಯ ಇದಾಗಿದೆ. ಹಿಂದಿನ 7 ಪಂದ್ಯಗಳನ್ನು ಆಸೀಸ್ ಗೆದ್ದಿತ್ತು. ಇದೀಗ ಭಾರತ ತಿರುಗೇಟು ನೀಡಿತು. ಅಲ್ಲದೆ ಬೆಲ್ಜಿಯಂ ವಿರುದ್ಧದ ಸೋಲಿನಿಂದ ಚೇತರಿಸಿಕೊಳ್ಳಲು ಭಾರತಕ್ಕೆ ಉತ್ತಮ ಕಾರಣ ಸಿಕ್ಕಿತು ಹಾಗೂ ಕ್ವಾರ್ಟರ್ ಫೈನಲ್​​ ಗೆಲುವಿಗೆ ಪ್ರೇರಣೆಯಾಯಿತು.

ಡಿ ಗುಂಪಿನ ಈ ಪಂದ್ಯದಲ್ಲಿ ಭಾರತವು ಆಕ್ರಮಣಕಾರಿ ಆಟವಾಡಿತು. ಭಾರತದ ದಾಳಿಯ ಬೆದರಿಕೆಯನ್ನು ಎದುರಿಸಲು ಆಸ್ಟ್ರೇಲಿಯಾದ ಆಟಗಾರ ನಿಧಾನವಾಗಿ ಆಟ ಪ್ರಾರಂಭಿಸಿತು.

ಮೊದಲ ಕ್ವಾರ್ಟರ್ನಲ್ಲಿ ಹರ್ಮನ್ಪ್ರೀತ್ ಸಿಂಗ್ ನೇತೃತ್ವದ ತಂಡ ಎರಡು ಗೋಲುಗಳ ಮುನ್ನಡೆ ಸಾಧಿಸಿತು. ಫಾರ್ವರ್ಡ್ ಆಟಗಾರ ಅಭಿಷೇಕ್ 12ನೇ ನಿಮಿಷದಲ್ಲಿ ಭಾರತದ ಪರ ಮೊದಲ ಗೋಲು ಗಳಿಸಿದರು. ಒಂದು ನಿಮಿಷದ ನಂತರ ಹರ್ಮನ್ ಪ್ರೀತ್ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ಗಳಿಸಿ ತಂಡಕ್ಕೆ 2-0 ಮುನ್ನಡೆ ತಂದುಕೊಟ್ಟರು.

25ನೇ ನಿಮಿಷದಲ್ಲಿ ಕ್ರೇಗ್ ಥಾಮಸ್ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ಬಾರಿಸಿ ಅಂತರವನ್ನು ಒಂದು ಗೋಲಿಗೆ ಇಳಿಸಿದರು. 32ನೇ ನಿಮಿಷದಲ್ಲಿ ಹರ್ಮನ್ ಪ್ರೀತ್ ಮತ್ತೊಂದು ಪೆನಾಲ್ಟಿ ಕಾರ್ನರ್ ಮೂಲಕ ಭಾರತಕ್ಕೆ ಮುನ್ನಡೆ ತಂದುಕೊಟ್ಟರು. 55ನೇ ನಿಮಿಷದಲ್ಲಿ ಬ್ಲೇಕ್ ಗ್ರೋವರ್ ಗಳಿಸಿದ ಪೆನಾಲ್ಟಿ ಸ್ಟ್ರೋಕ್ ಮೂಲಕ ಆಸ್ಟ್ರೇಲಿಯಾ ನಾಲ್ಕನೇ ಕ್ವಾರ್ಟರ್​ನಲ್ಲಿ ಭಾರತಕ್ಕೆ ಬೆದರಿಕೆ ಒಡ್ಡಿತು. ಕೊನೆಯ ನಿಮಿಷಗಳಲ್ಲಿ ಸಮಬಲದ ಹೋರಾಟ ತೋರಿದ ಆಸೀಸ್ ಕಠಿಣ ಪ್ರಯತ್ನ ನಡೆಸಿದರೂ ಗೋಲು ಗಳಿಸಲು ವಿಫಲವಾಯಿತು.

ಇದನ್ನೂ ಓದಿ: Manu Bhaker : 25 ಮೀಟರ್ ಪಿಸ್ತೂಲ್ ವಿಭಾಗದಲ್ಲಿ ಮನು ಭಾಕರ್​ ಫೈನಲ್​ಗೆ​​; ಒಂದೇ ಒಲಿಂಪಿಕ್ಸ್​ನಲ್ಲಿ ಮೂರನೇ ಬಾರಿ ಫೈನಲ್​ಗೆ

ಭಾರತ ಗ್ರೂಪ್ ಹಂತವನ್ನು ಕೇವಲ ಒಂದು ಸೋಲಿನೊಂದಿಗೆ ಕೊನೆಗೊಳಿಸಿದೆ. ನ್ಯೂಜಿಲೆಂಡ್ ತಂಡವನ್ನು 3-2 ಅಂತರದಿಂದ ಮಣಿಸಿ ಭಾರತ ತನ್ನ ಅಭಿಯಾನವನ್ನು ಆರಂಭಿಸಿತ್ತು. ಆ ಗೆಲುವಿನ ನಂತರ ಅರ್ಜೆಂಟೀನಾ ವಿರುದ್ಧ 1-1 ಡ್ರಾ ಸಾಧಿಸಿತು. ನಂತರ ಭಾರತ ಐರ್ಲೆಂಡ್ ತಂಡವನ್ನು 2-0 ಅಂತರದಿಂದ ಸೋಲಿಸಿತು. ಒಲಿಂಪಿಕ್ ಚಾಂಪಿಯನ್ ಬೆಲ್ಜಿಯಂ ವಿರುದ್ಧ 2-1 ಗೋಲುಗಳ ಅಂತರದಲ್ಲಿ ಸೋತಿದ್ದ ಭಾರತ, ಆಸೀಸ್ ವಿರುದ್ಧ ಐತಿಹಾಸಿಕ ಗೆಲುವು ದಾಖಲಿಸಿತ್ತು.

‘ಬಿ’ ಗುಂಪಿನಲ್ಲಿ ಬೆಲ್ಜಿಯಂ ನಂತರ ಎರಡನೇ ಸ್ಥಾನ ಪಡೆದಿರುವ ಭಾರತ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. ನಾಕೌಟ್​​ನಲ್ಲಿ ಯಾವ ತಂಡವನ್ನು ಎದುರಿಸುತ್ತಾರೆ ಎಂದು ತಿಳಿಯಲು ತಂಡವು ಈಗ ಗ್ರೇಟ್ ಬ್ರಿಟನ್ ಮತ್ತು ಸ್ಪೇನ್ ನಡುವಿನ ಪಂದ್ಯದ ವಿಜೇತರಿಗಾಗಿ ಕಾಯುತ್ತಿದೆ.

Continue Reading

Latest

Wayanad Tragedy: ಇಡೀ ಊರು ಭೂಕುಸಿತದಿಂದ ನಾಶ; ಮೂರು ದಿನ ಬಳಿಕ ಒಂದೇ ಕುಟುಂಬದ ನಾಲ್ವರು ಜೀವಂತವಾಗಿ ಪತ್ತೆ!

Wayanad Tragedy: ಭಾರಿ ಭೂಕುಸಿತಕ್ಕೆ ಒಳಗಾದ ವಯನಾಡಿನ ಮುಂಡಕ್ಕೈ ಪ್ರದೇಶದಲ್ಲಿ ಭಾರಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆ ವೇಳೆ ಒಂದೇ ಮನೆಯಲ್ಲಿ ವಾಸವಾಗಿದ್ದ ಕುಟುಂಬದ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಜೀವಂತವಾಗಿ ಪತ್ತೆಯಾಗಿದ್ದಾರೆ. ಅವರನ್ನು ಕಂಜಿರಕಥೋಟೆ ಕುಟುಂಬದ ಜಾನಿ, ಜೋಮೋಲ್, ಅಬ್ರಹಾಂ ಮತ್ತು ಕ್ರಿಸ್ಟಿ ಎಂದು ಗುರುತಿಸಲಾಗಿದೆ.ರಕ್ಷಣಾ ಕಾರ್ಯಕರ್ತರು ಅವರನ್ನು ರಕ್ಷಿಸಿ ಹೆಲಿಕಾಪ್ಟರ್ ಮೂಲಕ ಸುರಕ್ಷಿತ ಸ್ಥಳಕ್ಕೆ ಕಳುಹಿಸಿದ್ದಾರೆ.

VISTARANEWS.COM


on

Wayanad Tragedy
Koo


ಕೇರಳದ ವಯನಾಡ್(Wayanad Tragedy) ಜಿಲ್ಲೆಯ ಮೂರು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿ ಮೂರು ದಿನ ಕಳೆದಿದೆ. ಈ ನಡುವೆ ಪವಾಡ ಎಂಬಂತೆ, ಮುಂಡಕ್ಕೈ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಕಾರ್ಯಕರ್ತರು ಶುಕ್ರವಾರ ಪಡವೆಟ್ಟಿ ಕುನ್ನು ಬಳಿಯ ಪ್ರದೇಶದಲ್ಲಿ ಒಂದೇ ಕುಟುಂಬದ ನಾಲ್ಕು ಜನರನ್ನು ಜೀವಂತವಾಗಿ ಪತ್ತೆ ಮಾಡಿದ್ದಾರೆ!

ಮಂಗಳವಾರ ಭಾರಿ ಭೂಕುಸಿತಕ್ಕೆ ಒಳಗಾದ ವಯನಾಡಿನ ಮುಂಡಕ್ಕೈ ಪ್ರದೇಶದಲ್ಲಿ ಭಾರಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆ ವೇಳೆ ಒಂದೇ ಮನೆಯಲ್ಲಿ ವಾಸವಾಗಿದ್ದ ಕುಟುಂಬದ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಜೀವಂತವಾಗಿ ಪತ್ತೆಯಾಗಿದ್ದಾರೆ. ಅವರನ್ನು ಕಂಜಿರಕಥೋಟೆ ಕುಟುಂಬದ ಜಾನಿ, ಜೋಮೋಲ್, ಅಬ್ರಹಾಂ ಮತ್ತು ಕ್ರಿಸ್ಟಿ ಎಂದು ಗುರುತಿಸಲಾಗಿದೆ.

ರಕ್ಷಣಾ ಕಾರ್ಯಕರ್ತರು ಅವರನ್ನು ರಕ್ಷಿಸಿ ಹೆಲಿಕಾಪ್ಟರ್ ಮೂಲಕ ಸುರಕ್ಷಿತ ಸ್ಥಳಕ್ಕೆ ಕಳುಹಿಸಿದ್ದಾರೆ. ಇದರಲ್ಲಿ ಒಬ್ಬ ಮಹಿಳೆಯ ಕಾಲಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮೇಲ್ನೋಟಕ್ಕೆ, ಭೂಕುಸಿತದಿಂದ ಅವರ ಮನೆಯ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಹಾಗಾಗಿ ಅವರು ಜೀವಂತವಾಗಿ ಉಳಿದಿದ್ದಾರೆ ಎನ್ನಲಾಗಿದೆ.

ಕೇರಳದಲ್ಲಿ ಜುಲೈ 30ರಂದು ಮುಂಜಾನೆ ಭಾರಿ ಮಳೆಯಿಂದಾಗಿ ವಯನಾಡ್ ಜಿಲ್ಲೆಯ ವೈತಿರಿ ತಾಲ್ಲೂಕಿನ ಸುಮಾರು ಮೂರು ಹಳ್ಳಿಗಳಾದ ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲಾ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿದೆ. ಮುಂಜಾನೆ 2 ಮತ್ತು 4.10ರ ಸುಮಾರಿಗೆ ಭೂಕುಸಿತ ಸಂಭವಿಸಿದ್ದು, ಈ ಸಮಯದಲ್ಲಿ ಜನರು ಮಲಗಿದ್ದರಿಂದ ಇದು ಹೆಚ್ಚಿನ ಸಂಖ್ಯೆಯ ಸಾವುನೋವುಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲು; ಪ್ರಯಾಣಿಕರಿಗೆ ಏನು ಲಾಭ?

ಈಗಾಗಲೇ ಈ ಭೂಕುಸಿತದಲ್ಲಿ 201 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಕಾಣೆಯಾದ ಸುಮಾರು 300 ಜನರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಹಾಗೇ ಅನೇಕ ದೇಹದ ಭಾಗಗಳನ್ನು ಸಂಗ್ರಹಿಸಲಾಗಿದೆ ಮತ್ತು ಅವಶೇಷಗಳನ್ನು ಗುರುತಿಸಲು ಡಿಎನ್‌ಎ ಪರೀಕ್ಷೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement
Kodagu News
ಪ್ರಮುಖ ಸುದ್ದಿ4 mins ago

Wayanad landslide: ವಯನಾಡು ಭೂ ಕುಸಿತ; ಮೃತ ಬಾಲಕ ರೋಹಿತ್ ತಾಯಿಗೆ ಸಾಂತ್ವನ ಹೇಳಿ ಪರಿಹಾರ ಘೋಷಿಸಿದ ಸಿಎಂ

Paris Olympics 2024
ಪ್ರಮುಖ ಸುದ್ದಿ7 mins ago

Paris Olympics 2024 : ಪ್ಯಾರಿಸ್​​ನಲ್ಲಿ ಸಿಕ್ಕಾಪಟ್ಟೆ ಸೆಖೆ; ಅಥ್ಲೀಟ್​ಗಳಿಗಾಗಿ 40 ಎಸಿ ಕಳುಹಿಸಿದ ಕ್ರೀಡಾ ಸಚಿವಾಲಯ

Kriti Sanon
Latest12 mins ago

Kriti Sanon: ನಟಿ ಕೃತಿ ಸನೋನ್‌ ಡೇಟಿಂಗ್‌ ಮಾಡುತ್ತಿರುವ ಈ ಕಬೀರ್ ಬಹಿಯಾ ಯಾರು?

Viral Video
Latest26 mins ago

Reels in Railway Station: ರೈಲ್ವೆ ನಿಲ್ದಾಣದಲ್ಲಿ ರೀಲ್ಸ್‌ ಮಾಡುತ್ತ ಯುವತಿಯ ಅಸಭ್ಯ ವರ್ತನೆ; ಕಿಡಿಕಾರಿದ ನೆಟ್ಟಿಗರು!

Dog attack
ಕ್ರೈಂ37 mins ago

Dog Attack: ವೃದ್ಧ ತಾಯಿಯನ್ನು ಮನೆಯ ಹೊರಗೆ ಮಲಗಿಸಿದ್ದ ಪುತ್ರರು; ಜೀವಂತವಾಗಿ ತಿಂದು ಹಾಕಿದ ಬೀದಿ ನಾಯಿಗಳು!

karnataka Weather Forecast
ಮಳೆ41 mins ago

Karnataka Weather : ವಾರಾಂತ್ಯದಲ್ಲಿ ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಎಚ್ಚರಿಕೆ

Paris Olympics 2024
ಪ್ರಮುಖ ಸುದ್ದಿ42 mins ago

Paris Olympics 2024 : 52 ವರ್ಷಗಳ ಬಳಿಕ ಒಲಿಂಪಿಕ್ಸ್​​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿದ ಭಾರತದ ಹಾಕಿ ತಂಡ

Wayanad Tragedy
Latest49 mins ago

Wayanad Tragedy: ಇಡೀ ಊರು ಭೂಕುಸಿತದಿಂದ ನಾಶ; ಮೂರು ದಿನ ಬಳಿಕ ಒಂದೇ ಕುಟುಂಬದ ನಾಲ್ವರು ಜೀವಂತವಾಗಿ ಪತ್ತೆ!

Nice road
ಕರ್ನಾಟಕ54 mins ago

NICE Road: ನೈಸ್ ರಸ್ತೆಯಲ್ಲಿ ವೇಗದ ಚಾಲನೆಗೆ ಬ್ರೇಕ್; ರಾತ್ರಿ ವೇಳೆ‌ ದ್ವಿಚಕ್ರ ವಾಹನ ಸಂಚಾರಕ್ಕೂ ನಿಷೇಧ!

Wayanad Landslide
ದೇಶ2 hours ago

Wayanad Landslide: 144 ಸೈನಿಕರು 31 ಗಂಟೆಯೊಳಗೆ 190 ಅಡಿ ಉದ್ದದ ಸೇತುವೆ ನಿರ್ಮಿಸಿದ್ದು ಹೇಗೆ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌