Bus Accident: ಬಸ್‌ ಕಂದಕಕ್ಕೆ ಉರುಳಿ 12 ಕಾರ್ಮಿಕರ ಸಾವು; ಪ್ರಧಾನಿ ಮೋದಿ ಸಂತಾಪ - Vistara News

ಪ್ರಮುಖ ಸುದ್ದಿ

Bus Accident: ಬಸ್‌ ಕಂದಕಕ್ಕೆ ಉರುಳಿ 12 ಕಾರ್ಮಿಕರ ಸಾವು; ಪ್ರಧಾನಿ ಮೋದಿ ಸಂತಾಪ

Bus Accident: ಮಂಗಳವಾರ ರಾತ್ರಿ ದುರ್ಗದ ಗಣಿಯಲ್ಲಿ ಕಾರ್ಮಿಕರಿಂದ ತುಂಬಿದ್ದ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸಿಲುಕಿರುವ ಜನರನ್ನು ಹೊರತರುವ ಪ್ರಕ್ರಿಯೆ ನಡೆಯುತ್ತಿದೆ. ಬಸ್‌ ಕಾರ್ಮಿಕರಿಂದ ತುಂಬಿ ತುಳುಕುತ್ತಿತ್ತು ಎಂದು ದುರ್ಗ್ ಕಲೆಕ್ಟರ್ ರಿಚಾ ಪ್ರಕಾಶ್ ಚೌಧರಿ ಹೇಳಿದ್ದಾರೆ.

VISTARANEWS.COM


on

bus accident chattisgarh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುರ್ಗ: ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ಬಸ್ಸೊಂದು (Bus Accident) ಕಂದಕಕ್ಕೆ ಉರುಳಿ ಬಿದ್ದ (Road Accident) ಪರಿಣಾಮ ಖಾಸಗಿ ಸಂಸ್ಥೆಯೊಂದರ ಕನಿಷ್ಠ 12 ಮಂದಿ ಕಾರ್ಮಿಕರು (workers death) ಸಾವನ್ನಪ್ಪಿದ್ದಾರೆ. 14 ಮಂದಿ ಗಾಯಗೊಂಡಿದ್ದಾರೆ.

ಮಂಗಳವಾರ ರಾತ್ರಿ ದುರ್ಗದ ಗಣಿಯಲ್ಲಿ ಕಾರ್ಮಿಕರಿಂದ ತುಂಬಿದ್ದ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸಿಲುಕಿರುವ ಜನರನ್ನು ಹೊರತರುವ ಪ್ರಕ್ರಿಯೆ ನಡೆಯುತ್ತಿದೆ. ಬಸ್‌ ಕಾರ್ಮಿಕರಿಂದ ತುಂಬಿ ತುಳುಕುತ್ತಿತ್ತು ಎಂದು ದುರ್ಗ್ ಕಲೆಕ್ಟರ್ ರಿಚಾ ಪ್ರಕಾಶ್ ಚೌಧರಿ ಹೇಳಿದ್ದಾರೆ. ಮಂಗಳವಾರ ರಾತ್ರಿ ಬಸ್ ʼಮುರುಂ’ ಮಣ್ಣಿನ ಗಣಿ ಹೊಂಡಕ್ಕೆ ಬಿದ್ದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರಾತ್ರಿ 8.30ರ ಸುಮಾರಿಗೆ ಕುಮ್ಹಾರಿ ಬಳಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಹಳ್ಳಕ್ಕೆ ಬಿದ್ದಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಚೌಧರಿ ತಿಳಿಸಿದರು. ಗಾಯಾಳುಗಳನ್ನು ಏಮ್ಸ್ (ರಾಯಪುರ) ಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು.

ಗಾಯಗೊಂಡವರಲ್ಲಿ ಹನ್ನೆರಡು ಜನರನ್ನು ಎಐಐಎಂಎಸ್ (ರಾಯಪುರ) ಗೆ ಸ್ಥಳಾಂತರಿಸಲಾಗಿದೆ, ಉಳಿದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ ಮತ್ತು ನಾವು ಅವರಿಗೆ ಸಾಧ್ಯವಾದಷ್ಟು ಉತ್ತಮವಾದ ಆರೈಕೆಯನ್ನು ನೀಡುತ್ತಿದ್ದೇವೆ ಎಂದು ಅವರು ಹೇಳಿದರು. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಅಪಘಾತದ ಕುರಿತು ಸ್ಥಳೀಯ ಆಡಳಿತ ತನಿಖೆ ಆರಂಭಿಸಿದೆ.

ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾರ್ಮಿಕರ ಸಾವಿಗೆ ಸಂತಾಪ ಸೂಚಿಸಿದ್ದಾರೆ. “ಛತ್ತೀಸ್‌ಗಢದ ದುರ್ಗ್‌ನಲ್ಲಿ ಸಂಭವಿಸಿದ ಬಸ್ ಅಪಘಾತವು ಅತ್ಯಂತ ದುಃಖಕರವಾಗಿದೆ. ಇದರಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯ ಮಾಡುವಲ್ಲಿ ತೊಡಗಿಸಿಕೊಂಡಿದೆ” ಎಂದು ಅವರು Xನಲ್ಲಿ ಬರೆದಿದ್ದಾರೆ.

ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಘಟನೆಯ ಬಗ್ಗೆ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. “ಖಾಸಗಿ ಸಂಸ್ಥೆಯೊಂದರ ಉದ್ಯೋಗಿಗಳಿಂದ ತುಂಬಿ ತುಳುಕುತ್ತಿದ್ದ ಬಸ್, ದುರ್ಗ್‌ನ ಕುಮ್ಹಾರಿ ಬಳಿ ಅಪಘಾತಕ್ಕೀಡಾದ ಸುದ್ದಿಯಿಂದ ನನಗೆ ದುಃಖವಾಯಿತು. ಅಗಲಿದ ಆತ್ಮಗಳಿಗೆ ಶಾಂತಿ ಮತ್ತು ದುಃಖತಪ್ತ ಕುಟುಂಬಗಳಿಗೆ ಶಕ್ತಿ ನೀಡಲೆಂದು ನಾನು ಪರಮಾತ್ಮನಲ್ಲಿ ಪ್ರಾರ್ಥಿಸುತ್ತೇನೆ. ಗಾಯಗೊಂಡ ನೌಕರರ ಚಿಕಿತ್ಸೆಗೆ ಸಾಕಷ್ಟು ವ್ಯವಸ್ಥೆ ಮಾಡಲಾಗಿದೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Road Accident: ಬೈಕ್‌ ಚಲಾಯಿಸುತ್ತಿದ್ದ ತಂದೆ- ಮಗ ಅಪಘಾತದಲ್ಲಿ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Shatru Bhairavi Yaga: ಶತ್ರು ಭೈರವಿ ಯಾಗ ನಡೆದಿಲ್ಲ, ಪ್ರಾಣಿಬಲಿಯೂ ಇಲ್ಲ: ಕೇರಳ ಸರಕಾರದಿಂದಲೇ ತನಿಖೆ, ಸ್ಪಷ್ಟನೆ

Shatru Bhairavi Yaga: ಕೇರಳ ರಾಜ್ಯ ಗುಪ್ತಚರ ಹಾಗೂ ಪೊಲೀಸ್ ಇಲಾಖೆ (Kerala police) ಈ ಕುರಿತು ವಿಶೇಷ ತನಿಖಾ ತಂಡ (SIT) ರಚಿಸಿದ್ದು, ಅದರ ಮೂಲಕ ತನಿಖೆ ನಡೆಸಲಾಗಿದೆ. ಕೇರಳ ರಾಜ್ಯದ ಕಣ್ಣೂರು, ತಳಿಪರಂಬ ಭಾಗದಲ್ಲಿ ಓಡಾಡಿ ಕೇರಳ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

VISTARANEWS.COM


on

shatru bhairavi yaga
ತಳಿಪರಂಬ ಶ್ರೀ ರಾಜರಾಜೇಶ್ವರ ದೇವಾಲಯ
Koo

ಮಂಗಳೂರು: ʼತಮ್ಮನ್ನು ಮುಗಿಸಲು ಕೇರಳದಲ್ಲಿ ಶತ್ರು ಭೈರವಿ ಯಾಗ (Shatru Bhairavi Yaga) ನಡೆದಿದೆʼ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ನೀಡಿದ್ದ ಹೇಳಿಕೆ ಕೇರಳದಲ್ಲಿ (Kerala) ಸಂಚಲನ ಸೃಷ್ಟಿಸಿದ್ದು, ಈ ಬಗ್ಗೆ ಅಲ್ಲಿನ ಸರ್ಕಾರ ತನಿಖೆ ನಡೆಸಿದೆ. ಅಂಥ ಯಾವುದೇ ಯಾಗ ನಡೆದಿಲ್ಲ, ಪ್ರಾಣಿ ಬಲಿ (animal sacrifice) ನೀಡಲಾಗಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಕೇರಳ ರಾಜ್ಯ ಗುಪ್ತಚರ ಹಾಗೂ ಪೊಲೀಸ್ ಇಲಾಖೆ (Kerala police) ಈ ಕುರಿತು ವಿಶೇಷ ತನಿಖಾ ತಂಡ (SIT) ರಚಿಸಿದ್ದು, ಅದರ ಮೂಲಕ ತನಿಖೆ ನಡೆಸಲಾಗಿದೆ. ಕೇರಳ ರಾಜ್ಯದ ಕಣ್ಣೂರು, ತಳಿಪರಂಬ ಭಾಗದಲ್ಲಿ ಓಡಾಡಿ ಕೇರಳ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಪ್ರಾಣಿ ಬಲಿ ಕೊಟ್ಟು ಶತ್ರು ಭೈರವಿ ಯಾಗ ನಡೆದಿದೆಯಾ ಎಂದು ತನಿಖೆ ನಡೆಸಿ ಸಮಗ್ರ ಮಾಹಿತಿ ಸಂಗ್ರಹಿಸಿ ಕೇರಳ ಡಿಜಿಪಿಗೆ ವಿಶೇಷ ತನಿಖಾ ತಂಡ ವರದಿ ಸಲ್ಲಿಸಿದೆ.

ತಳಿಪರಂಬ ಶ್ರೀ ರಾಜರಾಜೇಶ್ವರಿ ದೇವರು

ತಳಿಪರಂಬ, ರಾಜರಾಜೇಶ್ವರಂ ಹಾಗೂ ಕಣ್ಣೂರು ಸುತ್ತಮುತ್ತ ಪ್ರದೇಶದಲ್ಲಿ ತನಿಖೆ ನಡೆಸಿದ ಕೇರಳ ಟೀಂ, ಅಂಥ ಯಾವುದೇ ಪ್ರಾಣಿ ಬಲಿ ಯಾಗ ನಡೆದಿಲ್ಲ ಎಂದು ಕೇರಳ ಡಿಜಿಪಿಗೆ ವರದಿ ಸಲ್ಲಿಸಿದೆ. ಈ ನಡುವೆ ಕರ್ನಾಟಕ ಪೊಲೀಸ್ ವಿಶೇಷ ತಂಡದಿಂದಲೂ ಗುಪ್ತವಾಗಿ ಮಾಹಿತಿ ಸಂಗ್ರಹ ನಡೆದಿದೆ. ಆದರೆ ಯಾರ ತನಿಖೆಯಲ್ಲೂ ಯಾಗದ ಕುರಿತು ಸುಳಿವು ದೊರೆತಿಲ್ಲ.

ಕೇರಳ ಸಚಿವರಿಂದಲೂ ಸ್ಪಷ್ಟನೆ

ಕೇರಳದ ದೇವಸ್ವಂ ಬೋರ್ಡ್ ಸಚಿವ ರಾಧಾಕೃಷ್ಣನ್ ಅವರೂ ಡಿಕೆ ಶಿವಕುಮಾರ್ ಆರೋಪವನ್ನು ನಿರಾಕರಿಸಿದ್ದಾರೆ. ನಮ್ಮ ರಾಜ್ಯದ ಯಾವುದೇ ದೇವಸ್ಥಾನಗಳಲ್ಲೂ ಪ್ರಾಣಿ ಬಲಿ ನಡೆಯಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ದೇವಳ ಆಡಳಿತ ಮಂಡಳಿ ನಿರಾಕರಣೆ

“ದೇವಸ್ವಂ ಬೋರ್ಡ್ ಅಧೀನದಲ್ಲಿರುವ ಯಾವುದೇ ದೇವಾಲಯಗಳಲ್ಲಿ ಪ್ರಾಣಿ ಬಲಿಯನ್ನು ಒಳಗೊಂಡ ಯಾವುದೇ ಪೂಜೆ ಅಥವಾ ನೈವೇದ್ಯಗಳು ನಡೆಯುವುದಿಲ್ಲ. ಕೇರಳದ ಮಲಬಾರ್ ದೇವಸ್ವಂ ಬೋರ್ಡ್ ಅಧೀನದಲ್ಲಿರುವ ರಾಜರಾಜೇಶ್ವರಂ ದೇವಸ್ಥಾನದ ಹೆಸರಿನ ಬಗ್ಗೆ ದೃಶ್ಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಅಸತ್ಯ ಮತ್ತು ದುರದೃಷ್ಟಕರ” ಎಂದು ಅಧಿಕೃತ ಪತ್ರಿಕಾ ಹೇಳಿಕೆ‌ ಮೂಲಕ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ದೇವಾಲಯ ಆಡಳಿತ ಮಂಡಳಿ ಸ್ಪಷ್ಟನೆ

“ಶ್ರೀ ರಾಜರಾಜೇಶ್ವರಿ ದೇವಸ್ಥಾನವು ಕೇರಳದ ಅತ್ಯಂತ ಹಳೆಯ ಮತ್ತು ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ. ಕಣ್ಣೂರು ತಳಿಪರಂಬ ಶ್ರೀ ರಾಜರಾಜೇಶ್ವರಂ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಅಂತಹ ಯಾವುದೇ ಪೂಜೆ ಅಥವಾ ಶತ್ರು ಭೈರವಿ ಯಾಗವನ್ನು ನಡೆಸಲಾಗುವುದಿಲ್ಲ. ಮಲಬಾರ್ ದೇವಸ್ವಂ ಬೋರ್ಡ್ ಅಧೀನದಲ್ಲಿರುವ ಯಾವುದೇ ದೇವಾಲಯಗಳಲ್ಲಿ ಪ್ರಾಣಿ ಬಲಿಯನ್ನು ಒಳಗೊಂಡ ಯಾವುದೇ ಪೂಜೆ ಅಥವಾ ನೈವೇದ್ಯಗಳಿಲ್ಲ. ದೇವಾಲಯದ ಹಿತಾಸಕ್ತಿಗಳ ವಿರುದ್ಧದ ಪ್ರಚಾರಗಳನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ” ಎಂದು ಪತ್ರಿಕಾ ಹೇಳಿಕೆ ಮೂಲಕ ತಳಿಪರಂಬ ಶ್ರೀ ರಾಜರಾಜೇಶ್ವರಂ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹೇಳಿಕೆ ನೀಡಿದ್ದಾರೆ.

ಡಿಕೆಶಿ ಆರೋಪ ಏನಿತ್ತು?

ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ತಳಿಪರಂಬ ಶ್ರೀ ರಾಜರಾಜೇಶ್ವರಂ ದೇವಸ್ಥಾನದಲ್ಲಿ ಸಿಎಂ ಹಾಗೂ ನನ್ನ ವಿರುದ್ಧ ಶತ್ರು ಭೈರವಿ ಯಾಗ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿಕೆಶಿ ಮೊನ್ನೆ ಹೇಳಿದ್ದರು. “ಇದು ಶತ್ರು ಸಂಹಾರಕ್ಕಾಗಿ ಮಾಡುತ್ತಿರುವ ಶತ್ರು ಭೈರವಿ ಯಾಗವಾಗಿದ್ದು, ಇದನ್ನು ಮಾಡಿಸುತ್ತಿರುವವರು ಯಾರೆಂದು ಗೊತ್ತಿದೆ. ರಾಜಕೀಯ ವೈರಿಗಳು ಮಾಡಿಸುತ್ತಿದ್ದಾರೆ. ಯಾಗದಲ್ಲಿ ಮೇಕೆ, ಹಂದಿ, ಕುರಿ, ಹೀಗೆ ಪಂಚಬಲಿ ಕೊಟ್ಟಿದ್ದಾರೆ. ಅಘೋರಿಗಳು ಇದರಲ್ಲಿ ಪಾಲ್ಗೊಂಡಿದ್ದಾರೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದ ಆಸುಪಾಸು ಚೆಕ್ ಮಾಡಿ, ನಿಮಗೇ ಗೊತ್ತಾಗುತ್ತೆ. ಇದರಲ್ಲಿ ಭಾಗವಹಿಸಿದವರೇ ನನಗೆ ಮಾಹಿತಿ ನೀಡಿದ್ದಾರೆ” ಎಂದು ಡಿಕೆಶಿ ಆರೋಪಿಸಿದ್ದರು.

ಇದನ್ನೂ ಓದಿ: ಮಾರಣ ಶತ್ರು ಭೈರವಿ ಯಾಗ ಎದುರಿಸಲು ರಕ್ಷಣಾಕವಚ ಮಾಡಿಸಿದ ಡಿಕೆಶಿ! ಹೀಗಿರುತ್ತೆ ನೋಡಿ ಯಾಗ

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

Prajwal Revanna Case: ಪ್ರಜ್ವಲ್‌ ರೇವಣ್ಣ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು, ತಮ್ಮ ಮೊಬೈಲ್‌ ಕಳೆದುಹೋಗಿದೆ ಎಂದಿದ್ದಾರೆ. ತಮ್ಮ ಮೊಬೈಲ್‌ ಒಂದು ವರ್ಷದ ಹಿಂದೆಯೇ ಕಳೆದುಹೋಗಿದ್ದು, ಆ ಕುರಿತು ಹೊಳೆನರಸೀಪುರ ಠಾಣೆಯಲ್ಲಿ ಮೊಬೈಲ್ ಕಳ್ಳತನದ ಬಗ್ಗೆ ದೂರು ನೀಡಿರುವುದಾಗಿಯೂ ಹೇಳಿದ್ದಾರೆ.

VISTARANEWS.COM


on

prajwal revanna case mobile
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ (physical abuse) ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna case) ನಿನ್ನೆ ಇಡೀ ಕೋರ್ಟ್‌ ಹಾಗೂ ವೈದ್ಯಕೀಯ ಪರೀಕ್ಷೆಗಳ (medical test) ನಡುವೆ ಸಮಯ ಕಳೆದರು. ಈ ನಡುವೆ ಎಸ್‌ಐಟಿ (SIT) ಹಲವಾರು ಪ್ರಶ್ನೆಗಳ ಮೂಲಕ ಗ್ರಿಲ್‌ ಮಾಡಿದ್ದು, ಅದರಲ್ಲಿ ಮುಖ್ಯವಾದುದು ಅವರು ಅಶ್ಲೀಲ ವಿಡಿಯೋಗಳನ್ನು (obscene video) ಚಿತ್ರೀಕರಿಸಿಕೊಂಡ ಮೊಬೈಲ್‌ ಎಲ್ಲಿದೆ ಎಂಬುದಾಗಿತ್ತು.

ಈ ಸಂದರ್ಭದಲ್ಲಿ ಪ್ರಜ್ವಲ್‌ ರೇವಣ್ಣ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು, ತಮ್ಮ ಮೊಬೈಲ್‌ ಕಳೆದುಹೋಗಿದೆ ಎಂದಿದ್ದಾರೆ. ತಮ್ಮ ಮೊಬೈಲ್‌ ಒಂದು ವರ್ಷದ ಹಿಂದೆಯೇ ಕಳೆದುಹೋಗಿದ್ದು, ಆ ಕುರಿತು ಹೊಳೆನರಸೀಪುರ ಠಾಣೆಯಲ್ಲಿ ಮೊಬೈಲ್ ಕಳ್ಳತನದ ಬಗ್ಗೆ ದೂರು ನೀಡಿರುವುದಾಗಿಯೂ ಹೇಳಿದ್ದಾರೆ.

ಪ್ರಜ್ವಲ್‌ ಅವರ ವಿಚಾರಣೆ ಮಾಡಿ 161 ಹೇಳಿಕೆಯನ್ನು ಎಸ್‌ಐಟಿ ದಾಖಲಿಸಿದೆ. ಅದರಲ್ಲಿ ಮೊಬೈಲ್‌ ಕುರಿತು ದಾಖಲಿಸಿದೆ. ನೀವು ಹೇಳುತ್ತಿರುವ ಮೊಬೈಲ್ ನನ್ನ ಬಳಿ ಇಲ್ಲ. ಕಳೆದ ವರ್ಷವೇ ಫೋನ್ ಕಳೆದು ಹೋಗಿದ್ದು, ಆ ಬಗ್ಗೆ ಹೊಳೆನರಸೀಪುರ ಠಾಣೆಯಲ್ಲಿ ದೂರು ಕೂಡ ನೀಡಿದ್ದೇನೆ ಎಂದು ಪ್ರಜ್ವಲ್‌ ಹೇಳಿದ್ದಾರೆ. ಈ ಹೇಳಿಕೆ ಸತ್ಯಾಸತ್ಯತೆಯನ್ನು ಎಸ್‌ಐಟಿ ಪರಿಶೀಲಿಸಲಿದೆ.

ನೀವು ತೋರಿಸಿರುವ ವಿಡಿಯೋಗಳಲ್ಲಿ ಇರುವುದು ನಾನಲ್ಲ. ಅವರೆಲ್ಲ ನನಗೆ ಪರಿಚಯ ಅಷ್ಟೇ. ನಾನು ಯಾರನ್ನೂ ಅತ್ಯಾಚಾರ ಮಾಡಿಲ್ಲ. ಅತ್ಯಾಚಾರ ಆರೋಪಗಳಿಗೂ ನನಗೂ ಯಾವ ಸಂಬಂಧವೂ ಇಲ್ಲ. ವಿಡಿಯೋಗಳ ಬಗ್ಗೆ ನಂಗಷ್ಟು ಗೊತ್ತಿಲ್ಲ ಎಂದು ಪ್ರಜ್ವಲ್‌ ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋಗಳನ್ನು ತೋರಿಸಿ ಪ್ರಶ್ನಿಸಿದಾಗ ಈ ಉತ್ತರ ದೊರೆತಿದೆ. ತನ್ನ ಮೇಲಿರುವ ಎಲ್ಲ ಆರೋಪಗಳನ್ನು ಪ್ರಜ್ವಲ್‌ ತಳ್ಳಿ ಹಾಕಿದ್ದಾರೆ.

ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿಕೊಂಡಿರುವ ಮೊಬೈಲ್‌ ಪ್ರಜ್ವಲ್‌ ವಿರುದ್ಧದ ಪ್ರಕರಣದಲ್ಲಿ ಪ್ರಬಲವಾದ ಸಾಕ್ಷ್ಯವಾಗಿದೆ. ಈ ಮೊಬೈಲ್‌ ಸಿಕ್ಕಿದರೆ, ಒಂದು ವೇಳೆ ವಿಡಿಯೋಗಳನ್ನು ಅಳಿಸಿದ್ದರೂ ಅದರಿಂದ ರಿಟ್ರೀವ್‌ ಮಾಡಬಹುದು. ಆದರೆ ಮೊಬೈಲ್‌ ಸಂಪೂರ್ಣ ನಾಶವಾಗಿದ್ದರೆ, ಯಾವುದೇ ಮೂಲ ರೆಕಾರ್ಡ್‌ಗಳು ಸಿಗಲಾರದು. ಅದರಿಂದ ಫಾರ್‌ವರ್ಡ್‌ ಆಗಿರುವ ವಿಡಿಯೋಗಳು ಸೆಕೆಂಡರಿ ಸಾಕ್ಷ್ಯಗಳೆನಿಸಿಕೊಳ್ಳುತ್ತವೆ. ಹೀಗಾಗಿ ಮೊಬೈಲ್‌ ಪಡೆಯಲು ಎಸ್‌ಐಟಿ ಪ್ರಯತ್ನ ನಡೆಸಬೇಕಿದೆ.

6 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪ್ರಜ್ವಲ್

ಹಾಸನ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna back in India ) ಅವರನ್ನು 6 ದಿನಗಳ ಕಾಲ ಎಸ್​ಐಟಿ ಪೊಲೀಸರ ಕಸ್ಟಡಿಗೆ ನೀಡಲಾಗಿದೆ. ಎಸಿಎಮ್​ಎಮ್​​ ನ್ಯಾಯಾಲಯದ ನ್ಯಾಯಧೀಶ ಎನ್​. ಶಿವಕುಮಾರ್​​ ಈ ಆದೇಶ ಹೊರಡಿಸಿದ್ದಾರೆ. ಗುರುವಾರ ರಾತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್​ ರೇವಣ್ಣ ಅವರನ್ನು ಬಂಧಿಸಿದ್ದ ಎಸ್​ಐಟಿ ಪೊಲೀಸರು ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಗಂಭೀರ ಆರೋಪಗಳನ್ನು ಹೊತ್ತಿರುವ ಅವರ ತನಿಖೆಗಾಗಿ ಎಸ್​ಐಟಿ ತನ್ನ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಅದನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.

ಬೆಂಗಳೂರಿನ 42ನೇ ಎಸಿಎಮ್​ಸಿ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು ಪ್ರಜ್ವಲ್ ಅವರಿಗೆ ಯಾವುದೇ ಕಿರಕುಗಳ ನೀಡಬಾರದು ಎಂದು ಎಸ್​ಐಟಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ ವೈದ್ಯಕೀಯ ಪರೀಕ್ಷೆ ಸೇರಿದಂತೆ ತನಿಖೆಗೆ ಎಲ್ಲ ರೀತಿಯಲ್ಲೂ ಸಹಕಾರ ನೀಡುವಂತೆ ಪ್ರಜ್ವಲ್ ರೇವಣ್ಣ ಅವರಿಗೂ ಸೂಚನೆ ನೀಡಿದ್ದಾರೆ. ಎಸ್ಐಟಿ ಅಧಿಕಾರಿಗಳು ಶುಕ್ರವಾರ ಸೇರಿದಂತೆ ಒಟ್ಟು 15 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಕೋರಿದ್ದರು. ಆದರೆ, ಪ್ರಜ್ವಲ್ ಪರ ವಕೀಲರು 1 ದಿನ ಸಾಕು ಎಂದು ವಾದಿಸಿದ್ದರು. ಆದರೆ, ನ್ಯಾಯಾಧೀಶರು 6 ದಿನಗಳನ್ನು ಮಾನ್ಯ ಮಾಡಿದ್ದಾರೆ.

ಗುರುವಾರ ರಾತ್ರಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿದ್ದ ಪೊಲೀಸರು ಬೆಳಗ್ಗೆ ತನಕ ಎಸ್​ಐಟಿ ಕಚೇರಿಯಲ್ಲೇ ವಿಶ್ರಾಂತಿ ಪಡೆಯಲು ಅನುಕೂಲ ಮಾಡಿಕೊಟ್ಟಿದ್ದರು. ಬೆಳಗ್ಗೆ ಅವರ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಅವರಿಂದ ಅಗತ್ಯ ದಾಖಲೆಗಳಿಗೆ ಸಹಿ ಮಾಡಿಕೊಂಡರು. ಆ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.‌

ಇದನ್ನೂ ಓದಿ: Prajwal Revanna Case: ಭವಾನಿ ರೇವಣ್ಣ ಕಾರು ಚಾಲಕನನ್ನು ವಶಕ್ಕೆ ಪಡೆದ ಎಸ್‌ಐಟಿ

Continue Reading

ವಾಣಿಜ್ಯ

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

LPG Price Cut: ಜೂನ್‌ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 69.50 ರೂ. ಕಡಿಮೆ ಮಾಡಿವೆ. ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 69.50 ರೂ. ಕಡಿತಗೊಂಡು 1,756 ರೂ.ಗೆ ತಲುಪಿದೆ.

VISTARANEWS.COM


on

LPG Price Cut
Koo

ನವದೆಹಲಿ: ಜೂನ್‌ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 69.50 ರೂ. ಕಡಿಮೆ ಮಾಡಿವೆ (LPG Price Cut). ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 69.50 ರೂ. ಕಡಿತಗೊಂಡು 1,756 ರೂ.ಗೆ ತಲುಪಿದೆ.

ಇನ್ನು ದೆಹಲಿಯಲ್ಲಿ ಪರಿಷ್ಕೃತ ದರ 1,676 ರೂ. ಆಗಿದೆ. ಹಿಂದೆ 1745.50 ರೂ. ಆಗಿತ್ತು. ಮುಂಬೈಯಲ್ಲಿಯೂ 69.50 ರೂ. ಇಳಿಕೆಯಾಗಿದ್ದು ಹೊಸ ಬೆಲೆಯನ್ನು 1,629 ರೂ.ಗೆ ನಿಗದಿಪಡಿಸಲಾಗಿದೆ. ಚೆನ್ನೈನಲ್ಲಿ 1,840.5೦ ರೂ., ಕೋಲ್ಕತ್ತಾದಲ್ಲಿ ದರ ಪರಿಷ್ಕರಣೆಯ ಬಳಿಕ 1,787 ರೂ. ಇದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ರೀತಿಯ ಏರಿಳಿತಗಳು ಸಾಮಾನ್ಯವಾಗಿ ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್ ಬದಲಾವಣೆಗಳಿಂದ ಪ್ರಭಾವಿತವಾಗಿರುತ್ತವೆ.

ವಾಣಿಜ್ಯ ಎಲ್‌ಪಿಜಿ ಬೆಲೆಗಳ ಕಡಿತವು ಈ ಸಿಲಿಂಡರ್‌ಗಳನ್ನೇ ಅವಲಂಬಿಸಿರುವ ವ್ಯವಹಾರಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ. ಜಾಗತಿಕ ತೈಲ ಮಾರುಕಟ್ಟೆಯ ಪ್ರವೃತ್ತಿಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುವುದಾಗಿ ಮತ್ತು ದೇಶಾದ್ಯಂತದ ಗ್ರಾಹಕರಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಹೊಂದಾಣಿಕೆಗಳನ್ನು ಮಾಡುವುದಾಗಿ ಒಎಂಸಿಗಳು ಭರವಸೆ ನೀಡಿವೆ.

ಸತತ ಇಳಿಕೆ

ಕಳೆದ ತಿಂಗಳು ಕೂಡ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಲಾಗಿತ್ತು. ಮೇ 1ರಂದು ದರ ಪರಿಷ್ಕರಿಸಿ 19 ರೂ. ಇಳಿಕೆ ಮಾಡಲಾಗಿತ್ತು. ಏಪ್ರಿಲ್‌ನಲ್ಲಿಯೂ 19 ಕೆಜಿಯ ಸಿಲಿಂಡರ್‌ ಬೆಲೆಯನ್ನು 30.50 ರೂ. ಇಳಿಸಲಾಗಿತ್ತು. ತೈಲ ಮಾರುಕಟ್ಟೆ ಕಂಪನಿಗಳು ಹಿಂದಿನ ಘೋಷಣೆಯನ್ನು ಮಾರ್ಚ್ 1ರಂದು ಮಾಡಿದ್ದು, ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ದರಗಳನ್ನು ಹೆಚ್ಚಿಸಿದ್ದವು. ಆ ಸಮಯದಲ್ಲಿ, OMCಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಗ್ಯಾಸ್ ಸಿಲಿಂಡರ್ ಬೆಲೆಗಳಲ್ಲಿ 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು 25 ರೂ. ಹೆಚ್ಚಿಸಿದ್ದವು.

ವಿವಿಧ ನಗರಗಳಲ್ಲಿ ಪರಿಷ್ಕೃತ ದರ

ನಗರಪರಿಷ್ಕೃತ ದರಹಿಂದಿನ ದರ
ಬೆಂಗಳೂರು1,756 ರೂ.1,825.50
ಕೋಲ್ಕತ್ತಾ1,787 ರೂ.1,859 ರೂ.
ಮುಂಬೈ1,629 ರೂ.1,698.50 ರೂ.
ಚೆನ್ನೈ1,840.50 ರೂ.1,911 ರೂ.
ನವದೆಹಲಿ1,676 ರೂ.1745.50 ರೂ.

ಗೃಹಬಳಕೆಯ ಸಿಲಿಂಡರ್‌ ಬೆಲೆ ಯಥಾಸ್ಥಿತಿ

ಈ ಮಧ್ಯೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಇಳಿಕೆ ಅಥವಾ ಏರಿಕೆ ಆಗಿಲ್ಲ. ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್‌ ಬೆಲೆ 805.50 ರೂ. ಇದೆ.

ಇದನ್ನೂ ಓದಿ: LPG Aadhaar Link: ಎಲ್‌ಪಿಜಿ ಕನೆಕ್ಷನ್‌ಗೆ ಆಧಾರ್ ಲಿಂಕ್ ಮಾಡಿಸುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

Continue Reading

ಪ್ರಮುಖ ಸುದ್ದಿ

Bhavani Revanna: `ಮನೆಗೆ ಬನ್ನಿʼ ಎಂದ ಭವಾನಿ ರೇವಣ್ಣ ಮನೆಯಲ್ಲಿಲ್ಲ! ಹಾಗಾದ್ರೆ ಎಲ್ಲಿ?

Bhavani Revanna: ಇಂದು ಹೊಳೆನರಸೀಪುರದ ಅವರ ಮನೆಗೆ ತನಿಖೆಗೆ ಬರುವುದಾಗಿ ಎಸ್‌ಐಟಿ ನೋಟೀಸ್‌ (SIT Notice) ನೀಡಿತ್ತು. ಆದರೆ ಭವಾನಿ ರೇವಣ್ಣ ತಮ್ಮ ನಿವಾಸದಲ್ಲಿ ಇಲ್ಲ ಎಂದು ತಿಳಿದುಬಂದಿರುವ ಕಾರಣ ಅವರು ಎಲ್ಲಿದ್ದಾರೆ ಎಂದು SIT ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

VISTARANEWS.COM


on

bhavani revanna case
Koo

ಹಾಸನ: ನಿನ್ನೆ ಭವಾನಿ ರೇವಣ್ಣ (Bhavani revanna) ಅವರ ಜಾಮೀನು ಅರ್ಜಿ (bail plea) ರದ್ದಾಗಿದ್ದು, ಇಂದು ಅವರ ಬಂಧನ (Arrest) ಸಾಧ್ಯತೆ ಇದೆ. ಕೆ.ಆರ್‌ ನಗರದ ಸಂತ್ರಸ್ತ ಮಹಿಳೆ ಕಿಡ್ನಾಪ್ ಕೇಸಿನಲ್ಲಿ (kidnap case) ಎಸ್‌ಐಟಿಗೆ (SIT) ಭವಾನಿ ರೇವಣ್ಣ ಬೇಕಾಗಿದ್ದು, ಇಂದು ಹೊಳೆನರಸೀಪುರದ ಅವರ ಮನೆಗೆ ತನಿಖೆಗೆ ಬರುವುದಾಗಿ ಎಸ್‌ಐಟಿ ನೋಟೀಸ್‌ (SIT Notice) ನೀಡಿತ್ತು. ಆದರೆ ಭವಾನಿ ಹೊಳೆನರಸೀಪುರದ ಮನೆಯಲ್ಲೂ, ಬೆಂಗಳೂರಿನ ಮನೆಯಲ್ಲೂ ಕಾಣಿಸಿಕೊಂಡಿಲ್ಲ.

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ನಿನ್ನೆ ರದ್ದಾಗಿರುವ ಹಿನ್ನೆಲೆಯಲ್ಲಿ, ಯಾವುದೇ ಕ್ಷಣದಲ್ಲಿ ಭವಾನಿ ರೇವಣ್ಣ ಬಂಧನ ಸಾಧ್ಯತೆ ಇದ್ದು, ಅದಕ್ಕಾಗಿ ಎಸ್ಐಟಿ ಬಲೆ ಬೀಸಿದೆ. ಇಂದು ಭವಾನಿ ರೇವಣ್ಣ ವಿಚಾರಣೆಗಾಗಿ ಹೊಳೆನರಸೀಪುರಕ್ಕೆ ಎಸ್ಐಟಿ ಟೀಂ ಆಗಮಿಸಲಿದೆ. ಕಿಡ್ನಾಪ್ ಆರೋಪ ಪ್ರಕರಣದಲ್ಲಿ ತಮ್ಮ ತನಿಖೆ ಅವಶ್ಯಕತೆ ಇದ್ದು, ತನಿಖೆಗೆ ಸಹಕರಿಸಬೇಕಾಗಿ ಎಸ್‌ಐಟಿ ಹೇಳಿತ್ತು. ತನಿಖೆಗೆ ಹೊಳೆನರಸೀಪುರದ ನಿವಾಸದಲ್ಲಿ ತಾವು ಲಭ್ಯವಿರುವುದಾಗಿ ಮೇ 15ರಂದು ಎಸ್ಐಟಿಗೆ ಭವಾನಿ ಲಿಖಿತ ಪತ್ರ ನೀಡಿದ್ದರು.

ಭವಾನಿ ಅವರ ಪತ್ರವನ್ನೇ ಉಲ್ಲೇಖಿಸಿ ನಿನ್ನೆ ಎಸ್‌ಐಟಿ ನೋಟೀಸ್ ನೀಡಿತ್ತು. ಪ್ರಕರಣ ಸಂಬಂಧ ತಮ್ಮ ವಿಚಾರಣೆ ಅಗತ್ಯ ಇದೆ, ಹಾಗಾಗಿ ಜೂನ್ 1ರಂದು ವಿಚಾರಣೆಗೆ ಬರುವುದಾಗಿ ತಿಳಿಸಿತ್ತು. ಜೂನ್ 1ರ ಶನಿವಾರ ಮಹಿಳಾ ಅಧಿಕಾರಿ ಜೊತೆ ಹೊಳೆನರಸೀಪುರದ ಚನ್ನಾಂಬಿಕ ನಿವಾಸಕ್ಕೆ ತಾವು ಬರುವುದಾಗಿ ಎಸ್‌ಐಟಿ ಮುಖ್ಯಸ್ಥ ಹೇಮಂತ್‌ ಕುಮಾರ್‌ ತಿಳಿಸಿದ್ದರು. ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ನಡುವೆ ನೀವು ತಿಳಿಸಿದ ವಿಳಾಸಕ್ಕೆ ಬರುತ್ತೇವೆ. ಈ ಸಮಯದಲ್ಲಿ ನೀವು ಖುದ್ದು ಹಾಜರಿರಬೇಕು ಎಂದು ಸೂಚಿಸಿದ್ದರು. ಆದರೆ ಭವಾನಿ ರೇವಣ್ಣ ತಮ್ಮ ನಿವಾಸದಲ್ಲಿ ಇಲ್ಲ ಎಂದು ತಿಳಿದುಬಂದಿರುವ ಕಾರಣ ಅವರು ಎಲ್ಲಿದ್ದಾರೆ ಎಂದು SIT ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಭವಾನಿ ರೇವಣ್ಣ ಅವರಿಗೆ ಕ್ಯಾನ್ಸರ್‌ (Cancer) ಇದೆ. ಚಿಕಿತ್ಸೆ ಪಡೆಯಲು ನಿರೀಕ್ಷಣಾ ಜಾಮೀನು ನೀಡಬೇಕೆಂದು ಭವಾನಿ ಪರ ವಕೀಲರು ಕೋರ್ಟ್‌ನಲ್ಲಿ (Bengaluru Court) ವಾದ ಮಾಡಿದ್ದರು. ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯನ್ನು ಕಿಡ್ನಾಪ್‌ ಮಾಡಿದ ಆರೋಪ ಎದುರಿಸುತ್ತಿರುವ ಭವಾನಿ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು. ಬಂಧನ ಭೀತಿಯಿಂದ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್, ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣದಲ್ಲಿ ದಾಖಲಾಗಿದ್ದ IPC ಸೆಕ್ಷನ್ 120ಬಿ ಕ್ರಿಮಿನಲ್ ಕಾನ್ಸ್‌ಪಿರೆಸಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೊರ್ಟ್, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ.

ನಿನ್ನೆ ಅವರ ಪುತ್ರ, ಪ್ರಕರಣದ ಪ್ರಧಾನ ಆರೋಪಿ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರನ್ನು ಬಂಧಿಸಿ ಕೋರ್ಟ್‌ ಮುಂದೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಪೊಲೀಸ್‌ ಕಸ್ಟಡಿಗೆ ಕೋರ್ಟ್‌ ನೀಡಿದೆ. ಪ್ರಜ್ವಲ್‌ ಅವರ ವೈದ್ಯಕೀಯ ತಪಾಸಣೆ ಕೂಡ ನಡೆಸಲಾಗಿದೆ. ಪ್ರಜ್ವಲ್‌ ಅವರನ್ನು ಕರೆದೊಯ್ದು ಸ್ಥಳ ಮಹಜರು ನಡೆಸಲು ಎಸ್‌ಐಟಿ ಮುಂದಾಗಿದೆ.

ಇದನ್ನೂ ಓದಿ: Prajwal Revanna Case: ಭವಾನಿ ರೇವಣ್ಣ ಕಾರು ಚಾಲಕನನ್ನು ವಶಕ್ಕೆ ಪಡೆದ ಎಸ್‌ಐಟಿ

Continue Reading
Advertisement
shatru bhairavi yaga
ಪ್ರಮುಖ ಸುದ್ದಿ33 mins ago

Shatru Bhairavi Yaga: ಶತ್ರು ಭೈರವಿ ಯಾಗ ನಡೆದಿಲ್ಲ, ಪ್ರಾಣಿಬಲಿಯೂ ಇಲ್ಲ: ಕೇರಳ ಸರಕಾರದಿಂದಲೇ ತನಿಖೆ, ಸ್ಪಷ್ಟನೆ

Bigg Boss OTT 3 Anil Kapoor Replaces Salman Khan As Host
ಒಟಿಟಿ37 mins ago

Bigg Boss OTT 3: ಶುರುವಾಗಲಿದೆ ಬಿಗ್​ ಬಾಸ್​ ಒಟಿಟಿ 3: ನಿರೂಪಣೆಗೆ ಸಲ್ಮಾನ್​ ಖಾನ್​ ಬದಲು ಅನಿಲ್​ ಕಪೂರ್!

Lok Sabha Election
Lok Sabha Election 202444 mins ago

Lok Sabha Election: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದಿರುವ 6 ಅಭ್ಯರ್ಥಿಗಳ ಸಾಮರ್ಥ್ಯ ಎಷ್ಟಿದೆ?

IND vs PAK
ಕ್ರೀಡೆ50 mins ago

IND vs PAK T20 World Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ ಗೆಲುವು ಖಚಿತ ಎಂದ ಪಾಕ್​ ಆಟಗಾರ

Lok Sabha Election 2024 Mithun Chakraborty casting his vote
ಬಾಲಿವುಡ್60 mins ago

Lok Sabha Election 2024: ಕೊನೇ ಹಂತದ ಮತದಾನ; ವೋಟ್‌ ಮಾಡಿದ ನಟ ಮಿಥುನ್ ಚಕ್ರವರ್ತಿ

IND vs BAN
ಕ್ರೀಡೆ2 hours ago

IND vs BAN: ಇಂದು ಬಾಂಗ್ಲಾ ವಿರುದ್ಧ ಅಭ್ಯಾಸ ಪಂದ್ಯ; ಕೊಹ್ಲಿ ಆಡುವುದು ಅನುಮಾನ

Exit Poll
Lok Sabha Election 20242 hours ago

Exit Poll: ಇಂದು ಸಂಜೆ 6.30ಕ್ಕೆ ಎಕ್ಸಿಟ್ ಪೋಲ್ ರಿಸಲ್ಟ್; ಮತಗಟ್ಟೆ ಸಮೀಕ್ಷೆ ಹೇಗೆ ನಡೆಸುತ್ತಾರೆ?

Kannada Cinema In OTT bad manners 02 Kannada Movie
ಸ್ಯಾಂಡಲ್ ವುಡ್2 hours ago

Kannada Cinema In OTT: ಒಟಿಟಿಗೆ ಲಗ್ಗೆ ಇಟ್ಟ ʼಬ್ಯಾಡ್‌ ಮ್ಯಾನರ್ಸ್‌ʼ, ‘O2’; ಸ್ಟ್ರೀಮಿಂಗ್ ಎಲ್ಲಿ?

hum do humare barah
ಕರ್ನಾಟಕ2 hours ago

Hum Do Humare Barah: ʼಹಮ್ ದೋ, ಹಮಾರೇ ಬಾರಹ್ʼ ಚಿತ್ರ ಬಿಡುಗಡೆಗೆ ಮುಸ್ಲಿಮರ ವಿರೋಧ: “ಪೆನ್‌ಡ್ರೈವ್‌ ಕೇಸ್‌ ಮೇಲೆ ಮಾಡಿ” ಎಂದು ಗರಂ!

Neeraj Chopra
ಕ್ರೀಡೆ2 hours ago

Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌