Bypolls Results 2023: ಬಿಜೆಪಿಗೆ ಮುಖಭಂಗ; ದಾಖಲೆ ಬರೆದ ಕಾಂಗ್ರೆಸ್! ಬೈ ಎಲೆಕ್ಷನ್‌ನಲ್ಲಿ ಯಾರಿಗೆಲ್ಲ ಗೆಲುವು? - Vistara News

ಪ್ರಮುಖ ಸುದ್ದಿ

Bypolls Results 2023: ಬಿಜೆಪಿಗೆ ಮುಖಭಂಗ; ದಾಖಲೆ ಬರೆದ ಕಾಂಗ್ರೆಸ್! ಬೈ ಎಲೆಕ್ಷನ್‌ನಲ್ಲಿ ಯಾರಿಗೆಲ್ಲ ಗೆಲುವು?

Bypolls Results 2023: ಐದು ರಾಜ್ಯಗಳ ಆರು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಬೈ ಎಲೆಕ್ಷನ್‌ನಲ್ಲಿ ಒಟ್ಟು ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಉಳಿದ ಮೂರು ಕ್ಷೇತ್ರಗಳ ಪೈಕಿ ಎರಡು ಬಿಜೆಪಿ ಮತ್ತು ಒಂದರಲ್ಲಿ ಎಜೆಎಸ್‌ಯುಪಿ ಜಯ ಸಾಧಿಸಿದೆ.

VISTARANEWS.COM


on

Bypolls Results 2023: big blow to the BJP; Congress scripted history
ಪುಣೆಯ ಕಸಬಾ ಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌‌ಗೆ ಗೆಲುವು, ಕಾರ್ಯಕರ್ತರ ಸಂಭ್ರಮಾಚಾರಣೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
vistara-vishleshane-

ನವದೆಹಲಿ: ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ರಾಜ್ಯಗಳಲ್ಲಿ ತೀವ್ರ ಹಿನ್ನಡೆಯ ನಡುವೆ ದೇಶದ ವಿವಿಧೆಡೆ ನಡೆದ ಉಪ ಚುನಾವಣೆಗಳ ರಿಸಲ್ಟ್ ಮಾತ್ರ ಕಾಂಗ್ರೆಸ್ (Congress) ಪಕ್ಷಕ್ಕೆ ತುಸು ನೆಮ್ಮದಿಯನ್ನು ತಂದಿದೆ. ವಿಶೇಷವಾಗಿ ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದ ಬೈ ಎಲೆಕ್ಷನ್‌ನಲ್ಲಿ ಎಲ್ಲರ ನಿರೀಕ್ಷೆ ಹುಸಿ ಮಾಡಿ, ಕಾಂಗ್ರೆಸ್ ದಾಖಲೆ ಬರೆದಿದೆ. ತಮಿಳುನಾಡಿನಲ್ಲಿ ತನ್ನ ಸ್ಥಾನವನ್ನು ಕಾಯ್ದುಕೊಂಡಿದೆ. ಇನ್ನು ಬಲಾಢ್ಯ ಭಾರತೀಯ ಜನತಾ ಪಾರ್ಟಿ(BJP) ಎರಡು ಕಡೆ ಮತ್ತು ಬಿಜೆಪಿ ಬೆಂಬಲಿತ ಎಜೆಎಸ್‌ಯು(All Jharkhand Students Union) ಪಾರ್ಟಿ 1 ಕ್ಷೇತ್ರವನ್ನು ಗೆದ್ದುಕೊಂಡಿದೆ(Bypolls Results 2023:).

ಎಲ್ಲೆಲ್ಲಿ ಬೈ ಎಲೆಕ್ಷನ್?

ಮಹಾರಾಷ್ಟ್ರ(ಪುಣೆಯ ಚಿಂಚವಾಡ ಮತ್ತು ಕಸಬಾ ಪೇಟೆ), ಪಶ್ಚಿಮ ಬಂಗಾಳ(ಸಾಗರ್ದಿಘಿ), ಅರುಣಾಚಲ ಪ್ರದೇಶ(ಲುಮ್ಲಾ-ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ), ತಮಿಳುನಾಡು(ಈರೋಡ್ ವೆಸ್ಟ್) ಮತ್ತು ಜಾರ್ಖಂಡ್(ರಾಮಗಢ) ವಿಧಾನಸಭೆ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೆದಿತ್ತು.

ಮಹಾರಾಷ್ಟ್ರದಲ್ಲಿ ದಾಖಲೆ ಬರೆದ ಕಾಂಗ್ರೆಸ್

ಮಹಾರಾಷ್ಟ್ರದ ಪುಣೆಯ ಕಸಬಾ ಪೇಟೆಗೆ ನಡೆದ ಬೈಎಲೆಕ್ಷನ್‌ನಲ್ಲಿ ಬಿಜೆಪಿಯ ಹೇಮಂತ್ ರಸಾನೆ ಅವರನ್ನು ಸೋಲಿಸಿ, ಕಾಂಗ್ರೆಸ್ ಪಕ್ಷದ ರವೀಂದ್ರ ಧಾಂಗೇಕರ್ ಅವರು ಜಯಶಾಲಿಯಾಗಿದ್ದಾರೆ. ಇದರೊಂದಿಗೆ, ಆಡಳಿತಾರೂಢ ಏಕನಾಥ ಶಿಂಧೆಯ ಶಿವಸೇನೆ ಹಾಗೂ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಈ ಕ್ಷೇತ್ರವು ಬಿಜೆಪಿಯ ಭದ್ರಕೋಟೆಯಾಗಿತ್ತು. ಬಿಜೆಪಿಯು ಚುನಾವಣೆಯನ್ನು ಪ್ರತಿಷ್ಠೆಯ ವಿಷಯವನ್ನಾಗಿ ಮಾಡಿತ್ತು. ತನ್ನ ಎಲ್ಲಾ ಹಿರಿಯ ನಾಯಕರನ್ನು ಕ್ಷೇತ್ರದಲ್ಲಿ ವ್ಯಾಪಕ ಪ್ರಚಾರಕ್ಕೆ ನಿಯೋಜಿಸಿತ್ತು. ಆದರೆ, ಅವರ ಪ್ರಯತ್ನದ ಹೊರತಾಗಿಯೂ ಪಕ್ಷಕ್ಕೆ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಸಾನೆ ಪರ ಪ್ರಚಾರ ನಡೆಸಿದ್ದರು. 1995ರಿಂದ ಇದೇ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಬಿಜೆಪಿ ಸೋಲು ಕಂಡಿದೆ. ಈ ಫಲಿತಾಂಶವು ಬಿಜೆಪಿಗೆ ಶಾಕ್ ನೀಡಿದೆ.

ಬಂಗಾಳದಲ್ಲಿ ಖಾತೆ ತೆರೆದ ಕಾಂಗ್ರೆಸ್

2021ರಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿತ್ತು. ಈವರೆಗಿನ ಅತಿ ಹೀನಾಯ ಪ್ರದರ್ಶನ ಅದಾಗಿತ್ತು. ಆದರೆ, ಸಾಗರ್ದಿಘಿ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ, ಕಾಂಗ್ರೆಸ್ ತನ್ನ ಖಾತೆ ತೆರೆದಿದೆ. ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ಅಧೀರ್ ರಂಜನ್ ಚೌಧರಿ ಅವರು ಈ ಬೈ ಎಲೆಕ್ಷನ್ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದರು. ಎಡ ಪಕ್ಷಗಳ ಬೆಂಬಲದೊಂದಿಗೆ ಟಿಎಂಸಿ ಪಕ್ಷವನ್ನು ಬಗ್ಗುಬಡಿದಿದ್ದಾರೆ. ಕಾಂಗ್ರೆಸ್‌ನ ಬೈರೋನ್ ಬಿಸ್ವಾಸ್ ಅವರು ಟಿಎಂಸಿಯ ದೇಬಶಿಷ್ ಬ್ಯಾನರ್ಜಿ ಅವರನ್ನು ಸೋಲಿಸಿದ್ದಾರೆ. ಶೂನ್ಯ ಸಾಧನೆ ಮಾಡಿದ್ದ ಕಾಂಗ್ರೆಸ್‌ ಈ ಬೈ ಎಲೆಕ್ಷನ್‌ ಗೆಲುವು ಬಲ ತಂದು ಕೊಟ್ಟಿದೆ.

ಈರೋಡ್ ವೆಸ್ಟ್ ಉಳಿಸಿಕೊಂಡ ಕೈ

ತಮಿಳುನಾಡಿನ ಈರೋಡ್ ವೆಸ್ಟ್ ಕ್ಷೇತ್ರವನ್ನು ಕಾಂಗ್ರೆಸ್ ತನ್ನಲ್ಲೇ ಉಳಿಸಿಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿಗೆ ಡಿಎಂಕೆ ಬೆಂಬಲ ನೀಡಿತ್ತು. ಕಾಂಗ್ರೆಸ್‌ನ ಇವಿಕೆಎಸ್ ಇಳಂಗೋವನ್ ಅವರು ಎಐಎಡಿಎಂಕೆ ಪಕ್ಷದ ಅಭ್ಯರ್ಥಿ ಕೆ ಎಸ್ ಥೆನ್ನನರಸು ವಿರುದ್ಧ ಗೆಲುವು ಸಾಧಿಸಿದ್ದಾರೆ.

ಎರಡು ಕಡೆ ಬಿಜೆಪಿಗೆ ಗೆಲವು

ಮಹಾರಾಷ್ಟ್ರ ಪುಣೆಯ ಚಿಂಚವಾಡಾ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿಯು ಯಶಸ್ವಿಯಾಗಿದೆ. ಬಿಜೆಪಿಯ ಅಶ್ವಿನಿ ಜಗತಾಪ್ ಅವರು ಎಂವಿಎ ಬೆಂಬಲಿತ ಎನ್‌ಸಿಪಿ ಅಭ್ಯರ್ಥಿ ನಾನಾ ಕಾಟೆ ವಿರುದ್ಧ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರವನ್ನು ಬಿಜೆಪಿ 35 ಸಾವಿರ ಮತಗಳ ಅಂತರದಿಂದ ಗೆದ್ದುಕೊಂಡಿದೆ. ಅರುಣಾಚಲ ಪ್ರದೇಶ ಲುಮ್ಲಾ ಕ್ಷೇತ್ರದಲ್ಲಿ ಬಿಜೆಪಿಯ ಶೇರಿಂಗ್ ಲಾಮ್ಲು ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು. ಆದರೆ, 1995ರಿಂದಲೂ ಬಿಜೆಪಿಯ ಭದ್ರಕೋಟೆಯಾಗಿದ್ದ ಪುಣೆಯ ಕಸಬಾ ಪೇಟೆ ಕ್ಷೇತ್ರವನ್ನು ಕಳೆದುಕೊಂಡಿದೆ. ಈ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಇದೇ ಮೊದಲ ಬಾರಿಗೆ ಗೆಲುವು ಸಾಧಿಸಿದೆ.

ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್‌ಗೆ ಹಿನ್ನಡೆ

ಹಾಲಿ ಶಾಸಕಿಗೆ ಶಿಕ್ಷೆಯಾದ ಹಿನ್ನೆಲೆಯಲ್ಲಿ ಜಾರ್ಖಂಡ್‌ನ ರಾಮಗಢ ಕ್ಷೇತ್ರಕ್ಕೆ ಬೈ ಎಲೆಕ್ಷನ್ ನಡೆದಿದ್ದು, ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಬಿಜೆಪಿ ಬೆಂಬಲಿತ ಎಜೆಎಸ್‌ಯುಪಿ ಅಭ್ಯರ್ಥಿ ಸುನಿತಾ ಚೌಧರಿ ಅವರು ಕಾಂಗ್ರೆಸ್‌ನ ಬಜರಂಗ್ ಮಹತೋ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: Northeast Assembly Election Result: ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಾಹಾಗೆ ಗೆಲುವು; ಸಂಭ್ರಮಾಚರಣೆ ಶುರು

ಯಾವ ಕಾರಣಕ್ಕೆ ಬೈ ಎಲೆಕ್ಷನ್?

ಜಾರ್ಖಂಡ್‌ನ ರಾಮಗಢ ಹೊರತು ಪಡಿಸಿ ಉಳಿದ ಐದು ವಿಧಾನಸಭೆ ಕ್ಷೇತ್ರಗಳು ನಿಧನದಿಂದಾಗಿ, ಆ ಕ್ಷೇತ್ರಗಳು ತೆರವಾಗಿದ್ದವು. ರಾಮಗಢದಲ್ಲಿ ಮಾತ್ರ ಹಾಲಿ ಶಾಸಕಿ ಶಿಕ್ಷೆಯಾದ ಪರಿಣಾಮ ಅವರು ಶಾಸಕತ್ವದಿಂದ ಅನರ್ಹಗೊಂಡಿದ್ದರು. ಹಾಗಾಗಿ ಈ ಆರೂ ಕ್ಷೇತ್ರಗಳಿಗೆ ಚುನಾವಣಾ ಆಯೋಗವು ಉಪ ಚುನಾವಣೆಯನ್ನು ಕೈಗೊಂಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Covishield Vaccine: ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು: ತಪ್ಪು ಮಾಹಿತಿ ಕೊಟ್ಟ ಕಾಲೇಜುಗಳಿಗೆ ನೋಟಿಸ್

Covishield Vaccine: ಕೋವಿಶೀಲ್ಡ್ ಲಸಿಕೆ ಅಡ್ಡಪಾರಿಣಾಮಗಳ ಸಂಬಂಧ ಸೂಚನಾ ಪತ್ರ ಹೊರಡಿಸಿ ಎಡವಟ್ಟು ಮಾಡಿಕೊಂಡಿದ್ದ ಚಿಕ್ಕಬಳ್ಳಾಪುರದ ಹಲವು ಕಾಲೇಜು ಆಡಳಿತ ಮಂಡಳಿಗಳ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ.

VISTARANEWS.COM


on

Covishield Vaccine
Koo

ಚಿಕ್ಕಬಳ್ಳಾಪುರ: ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ದಿಢೀರ್‌ ಹೃದಯಾಘಾತ, ರಕ್ತ ಹೆಪ್ಪುಗಟ್ಟುವುದು ಸೇರಿ ಹಲವು ರೀತಿಯ ಅಡ್ಡಪರಿಣಾಮಗಳು ಉಂಟಾಗಲಿವೆ ಎಂಬ ಸುದ್ದಿಗಳು ವರದಿಯಾದ ಹಿನ್ನೆಲೆಯಲ್ಲಿ ಲಸಿಕೆ ಪಡೆದವರಲ್ಲಿ ಆತಂಕ ಮೂಡಿದೆ. ಈ ನಡುವೆ ಕೋವಿಶೀಲ್ಡ್ ಲಸಿಕೆ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ ಹಾಗೂ ತಂಪು ಪಾನೀಯ ಸೇವನೆ ಮಾಡದಂತೆ ಹಲವು ಕಾಲೇಜು ಆಡಳಿತ ಮಂಡಳಿಗಳು ಸೂಚನಾ ಪತ್ರದ ಮೂಲಕ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದವು. ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನ್ನಲ್ಲೇ, ತಪ್ಪು ಮಾಹಿತಿ ನೀಡಿದ ನಗರದ ವಿವಿಧ ಕಾಲೇಜುಗಳ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ.

ನಗರದ ಸಿದ್ದರಾಮಯ್ಯ ಲಾ ಕಾಲೇಜು ಹಾಗೂ ಜಚನಿ ಪ್ರಥಮ ದರ್ಜೆ ಕಾಲೇಜುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳಿಂದ ನೋಟಿಸ್ ನೀಡಲಾಗಿದೆ. ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ದಿಢೀರ್ ಹೃದಯಾಘಾತ, ರಕ್ತ ಹೆಪ್ಪುಗಟ್ಟುವ ಸಾಧ್ಯತೆ ಇದೆ. ಹೀಗಾಗಿ ಆರೋಗ್ಯ ಇಲಾಖೆ ಸೂಚನೆ ಪ್ರಕಾರ ಈ ಲಸಿಕೆ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ ಹಾಗೂ ತಂಪು ಪಾನೀಯಗಳು ಸೇವನೆ ಮಾಡಬಾರದು ಎಂದು ಕಾಲೇಜು ಆಡಳಿತ ಮಂಡಳಿಗಳು ಸೂಚನಾ ಪತ್ರ ಹೊರಡಿಸಿದ್ದವು.

ವಾಟ್ಸ್‌ಆ್ಯಪ್‌ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಕಾಲೇಜುಗಳ ಸೂಚನಾ ಪತ್ರಗಳು ವೈರಲ್‌ ಆಗಿದ್ದರಿಂದ ತಕ್ಷಣ ಎಚ್ಚೆತ್ತ ಜಿಲ್ಲಾಡಳಿತ, ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿದ ಹಿನ್ನೆಲೆ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ನೇತೃತ್ವದ ಡಿಜಾಸ್ಟರ್ ಮ್ಯಾನೇಜ್ಮೆಂಟ್ ಕಮಿಟಿ ಮುಂದಾಗಿದೆ. ಸೂಚನಾ ಪತ್ರಗಳ ಬಗ್ಗೆ ಸೂಕ್ತ ಸ್ಪಷ್ಟನೆ ನೀಡುವಂತೆ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿ | Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

ಆರೋಗ್ಯ ಇಲಾಖೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ

ಕೋವಿಶೀಲ್ಡ್‌ ಲಸಿಕೆ ಪಡೆದವರು ಫ್ರಿಡ್ಜ್‌ನಲ್ಲಿಟ್ಟ ನೀರು, ತಂಪು ಪಾನೀಯಗಳು ಹಾಗೂ ಐಸ್‌ಕ್ರೀಂ ಸೇವಿಸಬಾರದು ಎಂಬ ಕಾಲೇಜು ಆಡಳಿತ ಮಂಡಳಿಗಳ ಸೂಚನಾ ಪತ್ರ ವೈರಲ್‌ ಆಗಿದ್ದರಿಂದ ಸಾರ್ವಜನಿಕರಲ್ಲಿ ಗೊಂದಲ ಮೂಡಿತ್ತು. ಹೀಗಾಗಿ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮಗಳ ಬಗ್ಗೆ ಇಲಾಖೆಯಿಂದ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ತಿಳಿಸಿದೆ.

ರಕ್ಷಿತ್‌ ಗಣಪತಿ ಎಂಬುವವರು, ಎಕ್ಸ್‌ ಖಾತೆಯಲ್ಲಿ ಚಿಕ್ಕಬಳ್ಳಾಪುರದ ಸಿದ್ದರಾಮಯ್ಯ ಲಾ ಕಾಲೇಜಿನ ಸೂಚನಾ ಪತ್ರ ಹಾಕಿ, “ಇದು ನಿಜವೇ? ಈ ಪತ್ರ ನೆನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ, ದಯವಿಟ್ಟು ಸ್ಪಷ್ಟನೆ ನೀಡಿ ಎಂದು ಕೋರಿ, ಸಿಎಂ ಸಿದ್ದರಾಮಯ್ಯ, ಆರೋಗ್ಯ ಇಲಾಖೆಗೆ ಟ್ಯಾಗ್‌ ಮಾಡಿದ್ದರು. ಇದಕ್ಕೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

Continue Reading

ಪ್ರಮುಖ ಸುದ್ದಿ

T20 World Cup : ವಿಶ್ವ ಕಪ್​​ ಟೂರ್ನಿಗೆ ಭಾರತದ ಇಬ್ಬರು ಅಂಪೈರ್​ಗಳು ಆಯ್ಕೆ; ಯಾರೆಲ್ಲ ಅವರು?

T20 World Cup: ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಪುರುಷರ ಟಿ 20 ವಿಶ್ವಕಪ್ 2022 ಫೈನಲ್​​ನಲ್ಲಿ ಕಾಣಿಸಿಕೊಂಡ ಕುಮಾರ್ ಧರ್ಮಸೇನಾ, ಕ್ರಿಸ್ ಗಫಾನೆ ಮತ್ತು ಪಾಲ್ ರೀಫೆಲ್ ಅವರೊಂದಿಗೆ ಕಳೆದ ವರ್ಷ ಐಸಿಸಿ ವರ್ಷದ ಡೇವಿಡ್ ಶೆಫರ್ಡ್ ಟ್ರೋಫಿ ವಿಜೇತ ರಿಚರ್ಡ್ ಇಲ್ಲಿಂಗ್​ವರ್ತ್​​ ಎಲೈಟ್ ಅಂಪೈರ್​ಗಳ ಪಟ್ಟಿಯಲ್ಲಿ ಸೇರಿದ್ದಾರೆ.

VISTARANEWS.COM


on

T20 World Cup
Koo

ನವದೆಹಲಿ: ಜೂನ್ 1 ರಿಂದ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ 20 ವಿಶ್ವಕಪ್ 2024 ರ (T20 World Cup) ಮೊದಲ ಸುತ್ತಿನ ಪಂದ್ಯಗಳಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) 26 ಮ್ಯಾಚ್ ಅಧಿಕಾರಿಗಳ ಪಟ್ಟಿಯನ್ನು ಬಹಿರಂಗಪಡಿಸಿದೆ. ಈ ಪಟ್ಟಿಯಲ್ಲಿ 20 ಅಂಪೈರ್​ಗಳು ಮತ್ತು ಆರು ಮ್ಯಾಚ್ ರೆಫರಿಗಳು ಇದ್ದಾರೆ. ಭಾರತದಿಂದ ಅಂಪೈರ್​ಗಳಾಗಿ ನಿತಿನ್ ಮೆನನ್​ ಹಾಗೂ ಜಯರಾಮ್​ ಮದನ್​ಗೋಪಾಲ್ ಮತ್ತು ರೆಫರಿಯಾಗಿ ಜಾವಗಲ್ ಶ್ರೀನಾಥ್​ ಆಯ್ಕೆಯಾಗಿದ್ದಾರೆ.

ಅವರು ಒಂಬತ್ತನೇ ಪುರುಷರ ಟಿ 20 ವಿಶ್ವಕಪ್​​ ಟೂರ್ನಿಯಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. 28 ದಿನಗಳ ಕಾಲ 9 ಸ್ಥಳಗಳಲ್ಲಿ 55 ಪಂದ್ಯಗಳನ್ನು ಆಡಲಾಗಿದ್ದು, ಇದುವರೆಗಿನ ಅತಿದೊಡ್ಡ ಐಸಿಸಿ ಟಿ 20 ವಿಶ್ವಕಪ್ ಇದಾಗಿದೆ.

ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಪುರುಷರ ಟಿ 20 ವಿಶ್ವಕಪ್ 2022 ಫೈನಲ್​​ನಲ್ಲಿ ಕಾಣಿಸಿಕೊಂಡ ಕುಮಾರ್ ಧರ್ಮಸೇನಾ, ಕ್ರಿಸ್ ಗಫಾನೆ ಮತ್ತು ಪಾಲ್ ರೀಫೆಲ್ ಅವರೊಂದಿಗೆ ಕಳೆದ ವರ್ಷ ಐಸಿಸಿ ವರ್ಷದ ಡೇವಿಡ್ ಶೆಫರ್ಡ್ ಟ್ರೋಫಿ ವಿಜೇತ ರಿಚರ್ಡ್ ಇಲ್ಲಿಂಗ್​ವರ್ತ್​​ ಎಲೈಟ್ ಅಂಪೈರ್​ಗಳ ಪಟ್ಟಿಯಲ್ಲಿ ಸೇರಿದ್ದಾರೆ.

ಇದನ್ನೂ ಓದಿ: RCB vs GT: ಮಳೆ ಭೀತಿಯ ಮಧ್ಯೆ ಹ್ಯಾಟ್ರಿಕ್​ ಗೆಲುವಿನ ನಿರೀಕ್ಷೆಯಲ್ಲಿ ಆರ್​ಸಿಬಿ

ಮ್ಯಾಚ್ ರೆಫರಿಗಳ ತಂಡದಲ್ಲಿ 2022 ರ ಫೈನಲ್​​ನ ಅಂಪೈರ್ ಆಗಿದ್ದ ರಂಜನ್ ಮದುಗಲೆ ಮತ್ತು ಸ್ವರೂಪದ ಅತ್ಯಂತ ಅನುಭವಿ ರೆಫರಿ ಜೆಫ್ ಕ್ರೋವ್ ಇದ್ದಾರೆ.

ಆಯ್ದ ಗುಂಪಿನಲ್ಲಿ ನಾವು ಅನುಭವಿ ಪಂದ್ಯದ ಅಧಿಕಾರಿಗಳು ಮತ್ತು ಇತರ ಉನ್ನತ ಕಾರ್ಯಕ್ಷಮತೆಯ ಸದಸ್ಯರನ್ನು ಹೊಂದಿದ್ದೇವೆ. ಅವರು ತಮ್ಮ ಬಲವಾದ ಮತ್ತು ಸ್ಥಿರ ಪ್ರದರ್ಶನಕ್ಕೆ ಖ್ಯಾತಿ ಪಡೆದವರು. ಉತ್ತಮ-ಗುಣಮಟ್ಟದ ಪಂದ್ಯದ ಅಧಿಕಾರಿಗಳ ಅಭಿವೃದ್ಧಿ ಮತ್ತು ಫಲಿತಾಂಶ ನಿರೀಕ್ಷೆ ಮಾಡಬಹುದು ಎಂದು ಐಸಿಸಿ ಹೇಳಿದೆ.

28 ದಿನಗಳಲ್ಲಿ 20 ತಂಡಗಳು ಮತ್ತು 55 ಪಂದ್ಯಗಳನ್ನು ಆಡಲಿವೆ. ಇದು ಇದುವರೆಗಿನ ಅತಿದೊಡ್ಡ ಟಿ 20 ವಿಶ್ವಕಪ್ ಆಗಿದೆ ಮತ್ತು ನಾವು ಒಟ್ಟುಗೂಡಿಸಿದ ತಂಡದ ಬಗ್ಗೆ ನಮಗೆ ಹೆಮ್ಮೆ ಇದೆ. ನಮ್ಮ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ ಎಂಬ ವಿಶ್ವಾಸ ನಮಗಿದೆ. ಅತ್ಯಂತ ರೋಮಾಂಚಕಾರಿ ಪಂದ್ಯಾವಳಿ ಎಂದು ಭರವಸೆ ನೀಡಿದ್ದಕ್ಕಾಗಿ ನಾವು ಅವರಿಗೆ ಶುಭ ಹಾರೈಸುತ್ತೇವೆ, “ಎಂದು ಹೇಳಿದರು.

ಅಂಪೈರ್​​ಗಳು:

ಕ್ರಿಸ್ ಬ್ರೌನ್, ಕುಮಾರ್ ಧರ್ಮಸೇನಾ, ಕ್ರಿಸ್ ಗಫಾನಿ, ಮೈಕೆಲ್ ಗೌಫ್, ಆಡ್ರಿಯನ್ ಹೋಲ್ಡ್ಸ್ಟಾಕ್, ರಿಚರ್ಡ್ ಇಲ್ಲಿಂಗ್ವರ್ತ್, ಅಲ್ಲಾಹುದ್ದೀನ್ ಪಾಲೇಕರ್, ರಿಚರ್ಡ್ ಕೆಟಲ್ಬರೋ, ಜಯರಾಮನ್ ಮದನಗೋಪಾಲ್, ನಿತಿನ್ ಮೆನನ್, ಸ್ಯಾಮ್ ನೊಗಾಜ್ಸ್ಕಿ, ಅಹ್ಸಾನ್ ರಾಜಾ, ರಶೀದ್ ರಿಯಾಜ್, ಪಾಲ್ ರೀಫೆಲ್, ಲ್ಯಾಂಗ್ಟನ್ ರುಸೆರೆ, ಶಾಹಿದ್ ಸೈಕತ್, ರಾಡ್ನಿ ಟಕರ್, ಅಲೆಕ್ಸ್ ವಾರ್ಫ್, ಜೋಯಲ್ ವಿಲ್ಸನ್ ಮತ್ತು ಆಸಿಫ್ ಯಾಕೂಬ್.

ಮ್ಯಾಚ್ ರೆಫರಿಗಳು:

ಡೇವಿಡ್ ಬೂನ್, ಜೆಫ್ ಕ್ರೋವ್, ರಂಜನ್ ಮದುಗಲೆ, ಆಂಡ್ರ್ಯೂ ಪೈಕ್ರಾಫ್ಟ್, ರಿಚಿ ರಿಚರ್ಡ್ಸನ್ ಮತ್ತು ಜಾವಗಲ್ ಶ್ರೀನಾಥ್.

Continue Reading

ದೇಶ

Namesake: ರಾಹುಲ್‌ಗಳು, ಲಾಲುಗಳು; ಒಂದೇ ಹೆಸರಿನವರ ಸ್ಪರ್ಧೆ ಕುರಿತು ಕೋರ್ಟ್‌ ಮಹತ್ವದ ಹೇಳಿಕೆ

Namesake: ಕೇರಳ ಮೂಲದ ವ್ಯಕ್ತಿಯೊಬ್ಬರು ಸಲ್ಲಿಸಿದ ಪಿಐಎಲ್‌ ವಿಚಾರಣೆ ನಡೆಸಿದ ನ್ಯಾಯಾಲಯವು, ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಪರಿಗಣನೆಗೆ ತೆಗೆದುಕೊಳ್ಳಲು ಆಗುವುದಿಲ್ಲ. ನಾಳೆ, ರಾಹುಲ್‌ ಗಾಂಧಿಯೋ, ಲಾಲು ಪ್ರಸಾದ್‌ ಅವರ ಹೆಸರಿನವರೋ ಚುನಾವಣೆಗೆ ಸ್ಪರ್ಧಿಸಲು ಮುಂದಾದರೆ, ನಾವು ಅವರನ್ನು ತಡೆಯಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ತಿಳಿಸಿತು.

VISTARANEWS.COM


on

Namesakes
Koo

ನವದೆಹಲಿ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಡಾ.ಸಿ.ಎನ್. ಮಂಜುನಾಥ್‌ (Dr C N Manjunath) ಅವರ ವಿರುದ್ಧ ರಾಜಕೀಯ ತಂತ್ರಗಾರಿಕೆಯ ಫಲವಾಗಿ ಮಂಜುನಾಥ್‌ ಹೆಸರಿನ ಹಲವು ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿಯೂ (Lok Sabha Election) ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಹೆಸರಿನ ಹಲವರು ಸ್ಪರ್ಧಿಸಿದ್ದರು. ಇದರ ಬೆನ್ನಲ್ಲೇ, ಒಂದೇ ಹೆಸರಿನ ಹಲವು ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ನಿಷೇಧ ಹೇರಬೇಕು ಎಂಬುದಾಗಿ ಕೋರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ (Supreme Court) ನಿರಾಕರಿಸಿದೆ.

ಕೇರಳ ಮೂಲದ ವ್ಯಕ್ತಿಯೊಬ್ಬರು ಸಲ್ಲಿಸಿದ ಪಿಐಎಲ್‌ ವಿಚಾರಣೆ ನಡೆಸಿದ ನ್ಯಾಯಾಲಯವು, “ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಪರಿಗಣನೆಗೆ ತೆಗೆದುಕೊಳ್ಳಲು ಆಗುವುದಿಲ್ಲ. ನಾಳೆ, ರಾಹುಲ್‌ ಗಾಂಧಿಯೋ, ಲಾಲು ಪ್ರಸಾದ್‌ ಅವರ ಹೆಸರಿನವರೋ ಚುನಾವಣೆಗೆ ಸ್ಪರ್ಧಿಸಲು ಮುಂದಾದರೆ, ನಾವು ಅವರನ್ನು ತಡೆಯಲು ಆಗುವುದಿಲ್ಲ. ಯಾವುದೇ ವ್ಯಕ್ತಿಗಳ ಹೆಸರನ್ನು ಅವರ ತಂದೆ-ತಾಯಿ ಇಟ್ಟಿರುತ್ತಾರೆ. ಪರಿಸ್ಥಿತಿ ಹೀಗಿರುವಾಗ, ಒಂದೇ ಹೆಸರಿನ ಹಲವರು ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬುದಾಗಿ ಹೇಳಲು ಆಗುವುದಿಲ್ಲ” ಎಂದು ನ್ಯಾ.ಬಿ.ಆರ್‌.ಗವಾಯಿ ನೇತೃತ್ವದ ನ್ಯಾಯಪೀಠವು ಸ್ಪಷ್ಟಪಡಿಸಿತು.

“ದೇಶದಲ್ಲಿ ರಾಹುಲ್‌, ಲಾಲು ಪ್ರಸಾದ್‌ ಎಂಬ ಹೆಸರಿನ ತುಂಬ ಜನ ಇರುತ್ತಾರೆ. ಪ್ರಮುಖ ರಾಜಕೀಯ ನಾಯಕರ ಹೆಸರು ಇಟ್ಟುಕೊಂಡ ಮಾತ್ರಕ್ಕೆ, ಅವರು ಚುನಾವಣೆಯಲ್ಲಿ ಸ್ಪರ್ಧಿಸಬೇಡ ಎಂಬುದಾಗಿ ಆದೇಶಿಸಲು ಆಗುವುದಿಲ್ಲ. ವ್ಯಕ್ತಿಯ ತಂದೆ-ತಾಯಿ ಹೆಸರಿಟ್ಟರು ಎಂದ ಮಾತ್ರಕ್ಕೆ, ಅವರಿಗೆ ಚುನಾವಣೆಯಿಂದಲೇ ನಿಷೇಧ ಮಾಡುವುದು ಸರಿಯಲ್ಲ. ಹೆಸರಿನ ಕಾರಣಕ್ಕಾಗಿ ಯಾರನ್ನೂ ಸ್ಪರ್ಧಿಸದಂತೆ ತಡೆಯಲು ಆಗುವುದಿಲ್ಲ” ಎಂಬುದಾಗಿ ಕೋರ್ಟ್‌ ಸ್ಪಷ್ಟಪಡಿಸಿ, ಅರ್ಜಿಯನ್ನು ತಿರಸ್ಕರಿಸಿತು.

ಅರ್ಜದಾರರ ವಾದವೇನು?

ಕೇರಳದ ಸಬು ಸ್ಟೀಫನ್‌ ಎಂಬುವರು ಪಿಐಎಲ್‌ ಸಲ್ಲಿಸಿದ್ದು, ಅವರ ಪರವಾಗಿ ವಿ.ಕೆ.ಬಿಜು ಅವರು ವಾದ ಮಂಡಿಸಿದರು. “ಚುನಾವಣೆ ವೇಳೆ ಒಬ್ಬ ಅಭ್ಯರ್ಥಿಯ ಪ್ರತಿಸ್ಪರ್ಧಿಯು ಉದ್ದೇಶಪೂರ್ವಕವಾಗಿ ಪ್ರತಿ ಸ್ಪರ್ಧಿಯ ಹೆಸರಿರುವ ಹಲವರನ್ನು ಚುನಾವಣೆ ಕಣಕ್ಕೆ ಇಳಿಸಿ, ಮತಗಳನ್ನು ವಿಭಜಿಸುವ ಪ್ರಯತ್ನ ಮಾಡಲಾಗುತ್ತದೆ. ಜನರಲ್ಲಿ ಗೊಂದಲ ಮೂಡಿಸಿ ಮತಗಳನ್ನು ಒಡೆಯುವ ಕುತಂತ್ರ ನಡೆಯುತ್ತದೆ. ಹಾಗಾಗಿ, ಚುನಾವಣೆಯಲ್ಲಿ ಒಂದೇ ಹೆಸರಿನ ಹಲವರು ಸ್ಪರ್ಧಿಸದಂತೆ ನಿಷೇಧಿಸಬೇಕು” ಎಂಬುದಾಗಿ ಮನವಿ ಮಾಲಾಗಿತ್ತು.

ಇದನ್ನೂ ಓದಿ: Rajyasabha Election | ಖರ್ಗೆ ಡೆಲ್ಲಿಯಲ್ಲಿದ್ದರೆ ಸಿದ್ದು ವಿಪ್‌ ನೀಡಿದರು

Continue Reading

ದೇಶ

Stock Market: ಷೇರು ಪೇಟೆ ತಲ್ಲಣ; ಏಕಾಏಕಿ 700 ಅಂಕ ಕುಸಿದ ನಿಫ್ಟಿ, ಸಾವಿರಾರು ಕೋಟಿ ರೂ. ನಷ್ಟ

Stock Market: ಎನ್‌ಎಸ್‌ಇ ನಿಫ್ಟಿ 50 ದಿನದ ವಹಿವಾಟನ್ನು 22,456.65 ಪಾಯಿಂಟ್‌ಗಳಿಗೆ ಅಂತ್ಯಗೊಳಿಸಿತು. ಇನ್ನು ಬಿಎಸ್‌ಇ ಸೆನ್ಸೆಕ್ಸ್‌ 73,846 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಳಿಸಿತು. ಇದರಿಂದ ಹೂಡಿಕೆದಾರರು ಸಾವಿರಾರು ಕೋಟಿ ರೂ. ನಷ್ಟ ಅನುಭವಿಸಿದರು ಎಂದು ತಿಳಿದುಬಂದಿದೆ. ಕಳೆದ ಕೆಲ ದಿನಗಳಿಂದ ಷೇರು ಮಾರುಕಟ್ಟೆ ವಹಿವಾಟು ಉತ್ತಮವಾಗಿತ್ತು. ಆದರೆ, ಶುಕ್ರವಾರ ದಿಢೀರನೆ ಕುಸಿತ ಕಂಡಿತು.

VISTARANEWS.COM


on

Stock Market
Koo

ಮುಂಬೈ: ಷೇರು ಮಾರುಕಟ್ಟೆಯಲ್ಲಿ (Stock Market) ಶುಕ್ರವಾರ (ಮೇ 3) ತಲ್ಲಣ ಸೃಷ್ಟಿಯಾಗಿದ್ದು, ಎನ್‌ಎಸ್‌ಇ ನಿಫ್ಟಿ (NSE Nifty) ಹಾಗೂ ಬಿಎಸ್‌ಇ ಸೆನ್ಸೆಕ್ಸ್‌ ಭಾರಿ ಕುಸಿತ ಕಂಡ ಕಾರಣ ಹೂಡಿಕೆದಾರರಿಗೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ ಎಂದು ತಿಳಿದುಬಂದಿದೆ. ದಿನದ ವಹಿವಾಟಿನ ಅಂತ್ಯಕ್ಕೆ ಎನ್‌ಎಸ್‌ಇ ನಿಫ್ಟಿ 50 ಸುಮಾರು 172.35 ಪಾಯಿಂಟ್‌ಗಳ ಕುಸಿತ ಕಂಡರೆ, ಬಿಎಸ್‌ಇ ಸೆನ್ಸೆಕ್ಸ್‌ (BSE Sensex) 733 ಪಾಯಿಂಟ್‌ಗಳ ಕುಸಿತ ಕಂಡಿದೆ. ಆರಂಭದಲ್ಲಿ ಲಾಭ ಕಂಡ ಹೂಡಿಕೆದಾರರು ದಿನದ ಅಂತ್ಯಕ್ಕೆ ನಷ್ಟ ಅನುಭವಿಸಿದರು.

ಎನ್‌ಎಸ್‌ಇ ನಿಫ್ಟಿ 50 ದಿನದ ವಹಿವಾಟನ್ನು 22,456.65 ಪಾಯಿಂಟ್‌ಗಳಿಗೆ ಅಂತ್ಯಗೊಳಿಸಿತು. ಇನ್ನು ಬಿಎಸ್‌ಇ ಸೆನ್ಸೆಕ್ಸ್‌ 73,846 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಳಿಸಿತು. ಷೇರು ಮಾರುಕಟ್ಟೆಯಲ್ಲಿ ತಲ್ಲಣ ಉಂಟಾದರೂ ಎಲ್‌&ಟಿ. ಮಾರುತಿ ಸುಜುಕಿ, ರಿಲಯನ್ಸ್‌ ಇಂಡಸ್ಟ್ರೀಸ್‌, ನೆಸ್ಲೆ ಇಂಡಿಯಾ, ಭಾರ್ತಿ ಏರ್‌ಟೆಲ್‌ ಸೇರಿ ಹಲವು ಕಂಪನಿಗಳು ಲಾಭ ಗಳಿಸಿವೆ. ಕೋಲ್‌ ಇಂಡಿಯಾ, ಗ್ರಾಸಿಂ ಇಂಡಸ್ಟ್ರೀಸ್‌, ಒಎನ್‌ಜಿಸಿ, ಡಾ.ರೆಡ್ಡೀಸ್‌ ಲ್ಯಾಬೊರೇಟರೀಸ್‌ ಹಾಗೂ ಹಿಂಡಾಲ್ಕೋ ಇಂಡಸ್ಟ್ರೀಸ್‌ ಸೇರಿ ಹಲವು ಕಂಪನಿಗಳು ನಷ್ಟ ಅನುಭವಿಸಿವೆ.

ಶುಕ್ರವಾರ ಬೆಳಗ್ಗೆ ಷೇರು ಮಾರುಕಟ್ಟೆ ವಹಿವಾಟು ಆರಂಭವಾಗುತ್ತಲೇ ಸುಮಾರು 50 ಪಾಯಿಂಟ್‌ಗಳ ಏರಿಕೆಯಾಯಿತು. ಇದರಿಂದ ಹೂಡಿಕೆದಾರರಿಗೆ ಖುಷಿಯಾಯಿತು. ಆದರೆ, ಇದಾದ ಕೆಲವೇ ಗಂಟೆಗಳಲ್ಲಿ ಪಾಯಿಂಟ್‌ಗಳ ಕುಸಿತ ಜಾಸ್ತಿಯಾಗುತ್ತಲೇ ಹೋಯಿತು. ಇದರಿಂದ ಹೂಡಿಕೆದಾರರು ಸಾವಿರಾರು ಕೋಟಿ ರೂ. ನಷ್ಟ ಅನುಭವಿಸಿದರು ಎಂದು ತಿಳಿದುಬಂದಿದೆ. ಕಳೆದ ಕೆಲ ದಿನಗಳಿಂದ ಷೇರು ಮಾರುಕಟ್ಟೆ ವಹಿವಾಟು ಉತ್ತಮವಾಗಿತ್ತು. ಆದರೆ, ಶುಕ್ರವಾರ ದಿಢೀರನೆ ಕುಸಿತ ಕಂಡಿತು.

ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಅವರು ಕೆಲ ದಿನಗಳ ಹಿಂದಷ್ಟೇ ತಮ್ಮ ನಾಲ್ಕು ತಿಂಗಳ ಮೊಮ್ಮಗ ಏಕಾಗ್ರಹ್‌ ರೋಹನ್ ಮೂರ್ತಿಗೆ 240 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಉಡುಗೊರೆಯಾಗಿ ನೀಡಿದ್ದರು. ಈ ಮೂಲಕ ಏಕಾಗ್ರಹ್‌ ಇನ್ಫೋಸಿಸ್‌ನ 15 ಲಕ್ಷ ಷೇರುಗಳನ್ನು ಅಂದರೆ ಕಂಪನಿಯಲ್ಲಿ ಶೇಕಡಾ 0.04ರಷ್ಟು ಪಾಲನ್ನು ಹೊಂದಿದಂತಾಗಿದೆ ಎಂದು ಎಕ್ಸ್‌ಚೇಂಜ್‌ ಫೈಲಿಂಗ್ ಬಹಿರಂಗಪಡಿಸಿದೆ. ಈ ವ್ಯವಹಾರವನ್ನು ʼಆಫ್-ಮಾರ್ಕೆಟ್ʼನಲ್ಲಿ ನಡೆಸಲಾಯಿತು ಎಂದು ಫೈಲಿಂಗ್ ತಿಳಿಸಿದೆ.

ನಾರಾಯಣಮೂರ್ತಿ ಅವರು ಈಗ ಇನ್ಫೋಸಿಸ್‌ನ ಆಡಳಿತ ನಿರ್ವಹಣೆಯಲ್ಲಿ ಯಾವುದೇ ಪಾತ್ರ ಹೊಂದಿಲ್ಲ. ಅದರ ಪ್ರಮುಖ ಷೇರುಪಾಲುದಾರರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಇನ್ಫೋಸಿಸ್​ನಲ್ಲಿ ಮೂರ್ತಿ ಅವರ ಬಳಿ 1.51 ಕೋಟಿ ಷೇರುಗಳಿದ್ದವು. ಈಗ ಮೊಮ್ಮಗನಿಗೆ 15 ಲಕ್ಷ ಷೇರುಗಳನ್ನು ಕೊಟ್ಟ ಬಳಿಕ ಅವರ ಬಳಿ ಉಳಿರುವ ಷೇರುಗಳ ಸಂಖ್ಯೆ 1.36 ಕೋಟಿ. ಈ ಮೂಲಕ ಇನ್ಫೋಸಿಸ್​ನಲ್ಲಿ ಅವರು ಹೊಂದಿದ್ದ ಶೇ. 0.40ರಷ್ಟು ಷೇರುಪಾಲು ಶೇ. 0.36ಕ್ಕೆ ಇಳಿದಿದೆ.

ಇದನ್ನೂ ಓದಿ: Kotak Bank: ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಕೊಟಕ್‌ ಬ್ಯಾಂಕ್‌ ಷೇರು ಭಾರಿ ಕುಸಿತ; ಹೂಡಿಕೆದಾರರಿಗೆ ನಷ್ಟ!

Continue Reading
Advertisement
Covishield Vaccine
ಪ್ರಮುಖ ಸುದ್ದಿ9 mins ago

Covishield Vaccine: ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು: ತಪ್ಪು ಮಾಹಿತಿ ಕೊಟ್ಟ ಕಾಲೇಜುಗಳಿಗೆ ನೋಟಿಸ್

T20 World Cup
ಪ್ರಮುಖ ಸುದ್ದಿ14 mins ago

T20 World Cup : ವಿಶ್ವ ಕಪ್​​ ಟೂರ್ನಿಗೆ ಭಾರತದ ಇಬ್ಬರು ಅಂಪೈರ್​ಗಳು ಆಯ್ಕೆ; ಯಾರೆಲ್ಲ ಅವರು?

Namesakes
ದೇಶ18 mins ago

Namesake: ರಾಹುಲ್‌ಗಳು, ಲಾಲುಗಳು; ಒಂದೇ ಹೆಸರಿನವರ ಸ್ಪರ್ಧೆ ಕುರಿತು ಕೋರ್ಟ್‌ ಮಹತ್ವದ ಹೇಳಿಕೆ

Saanya Iyer
ಫ್ಯಾಷನ್38 mins ago

Saanya Iyer: ಗ್ರ್ಯಾಂಡ್‌ ಲೆಹೆಂಗಾದಲ್ಲಿ ರಾಣಿಯಂತೆ ಕಂಗೊಳಿಸಿದ ನಟಿ ಸಾನ್ಯಾ ಅಯ್ಯರ್‌

Bharti Singh admitted to hospital
ಬಾಲಿವುಡ್42 mins ago

Bharti Singh: ಬಾಲಿವುಡ್‌ ಖ್ಯಾತ ನಿರೂಪಕಿ ಆಸ್ಪತ್ರೆಗೆ ದಾಖಲು

RCB vs GT
ಕ್ರೀಡೆ53 mins ago

RCB vs GT: ಬೆಂಗಳೂರಿನಲ್ಲಿ ನಾಳೆ ಐಪಿಎಲ್‌ ಹಬ್ಬ: ತಡರಾತ್ರಿಯೂ ಇದೆ ಮೆಟ್ರೋ ಸೇವೆ, ಪಾರ್ಕಿಂಗ್‌ ಎಲ್ಲೆಲ್ಲಿ?

Kidnap case in Bengaluru
ಬೆಂಗಳೂರು55 mins ago

Kidnap Case : ಗಾಂಜಾ ಮತ್ತಲ್ಲಿ ಆರ್ಮಿ ಆಫೀಸರ್ ಮಗನನ್ನೇ ಕಿಡ್ನ್ಯಾಪ್ ಮಾಡಿದ ಗೆಳೆಯರು

Costly wedding gift
ವಾಣಿಜ್ಯ1 hour ago

Costly wedding gift: ಮಗನಿಗೆ ಬಂಗಲೆ, ಸೊಸೆಗೆ ನೆಕ್ಲೇಸ್ ಗಿಫ್ಟ್‌ ಕೊಟ್ಟ ಅಂಬಾನಿ; ಬೆಲೆ ಕೇಳಿದರೆ ಅಚ್ಚರಿ!

kareena kapoor out from yash starrer toxic
ಬಾಲಿವುಡ್1 hour ago

Kareena Kapoor:‌ ರಾಕಿಂಗ್‌ ಸ್ಟಾರ್ ಯಶ್‌ ಸಿನಿಮಾದಿಂದ ಕರೀನಾ ಕಪೂರ್‌ ಔಟ್?

Shrirasthu Shubhamasthu serial will be end
ಕಿರುತೆರೆ1 hour ago

Shrirasthu Shubhamasthu: ಅಂತ್ಯ ಹಾಡಲಿದೆಯಾ ‘ಶ್ರೀರಸ್ತು ಶುಭಮಸ್ತು’? ಶಾರ್ವರಿ ರಹಸ್ಯ ಬಯಲಾಗೇ ಬಿಡ್ತಾ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ1 hour ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ13 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ23 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌