ವಿಸ್ತಾರ ಸಂಪಾದಕೀಯ: ಇಂದಿರಾ ಗಾಂಧಿ ಹತ್ಯೆಯ ಸಂಭ್ರಮ; ಕೆನಡಾದಲ್ಲಿ ಖಲಿಸ್ತಾನಿಗಳ ಉದ್ಧಟತನ ಖಂಡನೀಯ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಇಂದಿರಾ ಗಾಂಧಿ ಹತ್ಯೆಯ ಸಂಭ್ರಮ; ಕೆನಡಾದಲ್ಲಿ ಖಲಿಸ್ತಾನಿಗಳ ಉದ್ಧಟತನ ಖಂಡನೀಯ

ಇಂದಿರಾ ಗಾಂಧಿ ಈ ದೇಶ ಕಂಡ ಅಪ್ರತಿಮ, ದಿಟ್ಟ ಪ್ರಧಾನಮಂತ್ರಿ. ದೇಶದ ಭದ್ರತೆ, ಸಾರ್ವಭೌಮತೆಗಳಿಗೆ ಸಂಬಂಧಿಸಿ ಅವರು ತೆಗೆದುಕೊಂಡ ಹಲವು ದಿಟ್ಟ ಕ್ರಮಗಳು ಅನುಕರಣೀಯ. ದೇಶಕ್ಕಾಗಿ ಪ್ರಾಣ ತೆತ್ತ ಅವರ ಅವಹೇಳನವನ್ನು ಯಾವ ಕಾರಣಕ್ಕೂ ಸಹಿಸಲಾಗದು.

VISTARANEWS.COM


on

Khalistanis Celebrate Indira Gandhi Assassination
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಿಖ್ ಪ್ರತ್ಯೇಕತಾವಾದಿಗಳನ್ನು ಹತ್ತಿಕ್ಕುವ ಬ್ಲ್ಯೂ ಸ್ಟಾರ್ ಕಾರ್ಯಾಚರಣೆಗೆ 39 ವರ್ಷ ತುಂಬುತ್ತಿದೆ. ಈ ಸಂದರ್ಭದಲ್ಲಿ, ಕೆನಡಾದಲ್ಲಿ ಖಲಿಸ್ತಾನಿ ಬೆಂಬಲಿಗರು ಇಂದಿರಾ ಗಾಂಧಿ ಹತ್ಯೆ ಕುರಿತ ಸ್ತಬ್ಧಚಿತ್ರ ಪ್ರದರ್ಶಿಸಿ ಉದ್ಧಟತನ ಮೆರೆದಿದ್ದಾರೆ. ಖಲಿಸ್ತಾನಿಗಳ ಈ ಉದ್ಧಟತನ ಮತ್ತು ಅವರ ಮೇಲೆ ಕ್ರಮ ಕೈಗೊಳ್ಳದ ಕೆನಡಾ ಸರ್ಕಾರದ ನಿಷ್ಕ್ರಿಯತೆ ಎರಡೂ ಖಂಡನೀಯ. ಒಂದು ಕಾಲದಲ್ಲಿ ಖಲಿಸ್ತಾನಿಗಳ ಬೆನ್ನೆಲುಬು ಮುರಿದ ಇಂದಿರಾ ಗಾಂಧಿಯವರು ಇಂದಿಗೂ ಅವರಿಗೆ ದುಃಸ್ವಪ್ನದಂತೆ ಕಾಡುತ್ತಿದ್ದಾರೆ ಎಂಬುದು ಇದರಿಂದ ಅರ್ಥವಾಗುತ್ತದೆ. ಕೆನಡಾದಲ್ಲಿರುವ ಖಲಿಸ್ತಾನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಆಗ್ರಹಿಸಿದೆ. ವಿದೇಶಾಂಗ ಸಚಿವ ಜೈಶಂಕರ್ ಕೂಡ ಈ ಘಟನೆಯನ್ನು ಖಂಡಿಸಿ, ಕೆನಡಾ ಸರ್ಕಾರಕ್ಕೆ ಕಠಿಣ ಸಂದೇಶ ರವಾನಿಸಿದ್ದಾರೆ.

ಇಂದಿರಾ ಗಾಂಧಿ ಈ ದೇಶ ಕಂಡ ಅಪ್ರತಿಮ, ದಿಟ್ಟ ಪ್ರಧಾನಮಂತ್ರಿ. ದೇಶದ ಭದ್ರತೆ, ಸಾರ್ವಭೌಮತೆಗಳಿಗೆ ಸಂಬಂಧಿಸಿ ಅವರು ತೆಗೆದುಕೊಂಡ ಹಲವು ದಿಟ್ಟ ಕ್ರಮಗಳು ಅನುಕರಣೀಯ. ಪಾಕಿಸ್ತಾನದೊಳಗೆ ಸೇನೆಯನ್ನು ನುಗ್ಗಿಸಿ, ಸಾವಿರಾರು ಪಾಕ್ ಸೈನಿಕರು ಭಾರತೀಯ ಸೇನೆ ಎದುರು ಮಂಡಿಯೂರುವಂತೆ ಮಾಡಿ ಬಾಂಗ್ಲಾ ದೇಶದ ಸೃಷ್ಟಿಗೆ ಕಾರಣರಾದವರು ಇಂದಿರಾ ಗಾಂಧಿ. ಪಂಜಾಬ್‌ನಲ್ಲಿ ಸಿಖ್ ಪ್ರತ್ಯೇಕತಾವಾದಿಗಳ ಅಟ್ಟಹಾಸ ಮಿತಿ ಮೀರಿದ ಸಂದರ್ಭದಲ್ಲಿ ಭಯೋತ್ಪಾದಕರು ಅವಿತು ಕುಳಿತಿದ್ದ ಸ್ವರ್ಣ ಮಂದಿರದೊಳಗೆ ಸೇನೆಯನ್ನು ನುಗ್ಗಿಸಿ, ಖಲಿಸ್ತಾನಿಗಳ ಬೆನ್ನುಮೂಳೆ ಮುರಿದವರು ಇಂದಿರಾ ಗಾಂಧಿ. ಅಂದು ಅವರು ಬ್ಲ್ಯೂ ಸ್ಟಾರ್ ಕಾರ್ಯಾಚರಣೆಯ ದಿಟ್ಟ ನಿರ್ಧಾರ ಕೈಗೊಳ್ಳದೆ ಹೋಗಿದ್ದರೆ ಪಂಜಾಬ್ ಭಾರತದಿಂದ ಪ್ರತ್ಯೇಕಗೊಳ್ಳುವ ಅಪಾಯ ಇತ್ತು. ಇದರ ಮೂಲಕ ಅವರು ಸಂಪ್ರದಾಯವಾದಿ ಸಿಕ್ಖರ ಕೋಪವನ್ನೂ ಎದುರಿಸಬೇಕಾಗಿ ಬಂದರೂ ಲೆಕ್ಕಿಸಲಿಲ್ಲ. ಆದರೆ ಇಂಥ ಧೀರ ನಿರ್ಧಾರಕ್ಕೆ ಅವರು ತಮ್ಮ ಪ್ರಾಣವನ್ನೇ ಅರ್ಪಿಸಬೇಕಾಯಿತು ಎಂಬುದು ದುಃಖಕರ.

ಒಂದು ಕಾಲದಲ್ಲಿ ಅಬ್ಬರಿಸಿ ತಣ್ಣಗಾಗಿದ್ದ ಖಲಿಸ್ತಾನ ಉಗ್ರವಾದ ಮತ್ತೆ ತಲೆ ಎತ್ತುತ್ತಿರುವುದರ ಸೂಚನೆ ಇದು. 1980-90ರ ದಶಕದಲ್ಲಿ ಹುಟ್ಟಿಕೊಂಡ ಈ ಪ್ರತ್ಯೇಕತಾವಾದ ಮುಂದೆ ಭದ್ರತೆಗೆ ತಲೆನೋವಾಗಿ ಪರಿಣಮಿಸಿದ್ದು ನಮಗೆ ಗೊತ್ತಿದೆ. ಸುಮಾರು 12,000 ನಾಗರಿಕರು, 10,000 ಉಗ್ರರು ಆಗ ಬಲಿಯಾಗಿದ್ದರು. ಇದೀಗ ಇವರು ಮತ್ತೆ ಯಾವ ಮಟ್ಟಕ್ಕೆ ಹೋಗಿದ್ದಾರೆಂದರೆ, ಪಂಜಾಬ್‌ನ ಪೊಲೀಸ್ ಠಾಣೆಗಳ ಮೇಲೆಯೇ ರಾಕೆಟ್ ಲಾಂಚರ್ ಬಳಸಿ ದಾಳಿ ಮಾಡುವಷ್ಟು. ಪಂಜಾಬ್‌ಗೆ ಅಕ್ರಮವಾಗಿ ಪಾಕಿಸ್ತಾನ ಗಡಿಯಾಚೆಯಿಂದ ಒಳನುಸುಳುತ್ತಿರುವ ಡ್ರಗ್ಸ್‌ ಜಾಲದಲ್ಲೂ ಖಲಿಸ್ತಾನ್ ಶಕ್ತಿಗಳು ಕ್ರಿಯಾಶೀಲವಾಗಿರುವುದು ಗೊತ್ತಾಗಿದೆ.

ಇದನ್ನೂ ಓದಿ: Indira Gandhi: ಇಂದಿರಾ ಗಾಂಧಿ ಹತ್ಯೆಗೆ ಕೆನಡಾದಲ್ಲಿ ಖಲಿಸ್ತಾನಿಗಳ ಸಂಭ್ರಮ; ಖಡಕ್‌ ಎಚ್ಚರಿಕೆ ಕೊಟ್ಟ ಜೈಶಂಕರ್‌

ಅನೇಕ ಭಾರತ ವಿರೋಧಿ ಶಕ್ತಿಗಳು ಇಂದು ಹೊರಗಿನ ಕೆಲ ದೇಶಗಳಲ್ಲಿ ಕಾರ್ಯಪ್ರವೃತ್ತವಾಗಿರುವುದು ನಾವು ಗಮನಿಸಬಹುದು. ಇಸ್ಲಾಮಿಕ್‌ ಮತಾಂಧರು ಪಾಕಿಸ್ತಾನ, ಅಫಘಾನಿಸ್ತಾನ, ಸಿರಿಯಾ ಮುಂತಾದ ಕಡೆ ಕಾರ್ಯಾಚರಿಸುತ್ತಿದ್ದರೆ, ಖಲಿಸ್ತಾನ್‌ ಸಹಾನುಭೂತಿಪರರು ಕೆನಡಾ, ಆಸ್ಟ್ರೇಲಿಯಾಗಳಲ್ಲಿ ಇದ್ದುಕೊಂಡು ಪಂಜಾಬ್‌ನಲ್ಲಿರುವ ಉಗ್ರರಿಗೆ ತಾತ್ವಿಕ- ಧನಬೆಂಬಲ ನೀಡುತ್ತಿದ್ದಾರೆ. ಕೆನಡಾ, ಆಸ್ಟ್ರೇಲಿಯಗಳಲ್ಲಿ ಭಾರತದ ಎಂಬೆಸಿಗಳ ಮುಂದೆ ಪ್ರತಿಭಟನೆ, ದೇವಾಲಯಗಳ ವಿಧ್ವಂಸ ಮುಂತಾದ ಕೃತ್ಯಕ್ಕೂ ಮುಂದಾಗಿದ್ದಾರೆ. ಇದನ್ನು ಭಾರತ ಸರ್ಕಾರ ಕಟು ವಾಕ್ಯಗಳಲ್ಲಿ ಖಂಡಿಸಿ, ಅಂಥವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಆಯಾ ಸರ್ಕಾರಗಳನ್ನು ಒತ್ತಾಯಿಸದೇ ಹೋದರೆ ಈ ಪ್ರವೃತ್ತಿ ಹಾಗೇ ಮುಂದುವರಿದು ಇನ್ನಷ್ಟು ಮುಜುಗರ ಸೃಷ್ಟಿಸಲಿದೆ. ಭಾವಿ ಭಯೋತ್ಪಾದಕರ ಸ್ಲೀಪರ್‌ ಸೆಲ್‌ಗಳಾದ ಇವುಗಳನ್ನು ಮೊಳಕೆಯಲ್ಲೇ ಚಿವುಟಬೇಕಿದೆ. ಕೆನಡಾದಲ್ಲಿ ಮಿತಿ ಮೀರಿರುವ ಸಿಖ್ ಪ್ರತ್ಯೇಕತಾವಾದಿ ಭಯೋತ್ಪಾದಕರ ವಿರುದ್ಧ ಅಲ್ಲಿನ ಆಡಳಿತವಾಗಲೀ, ರಾಜಕೀಯ ಪಕ್ಷಗಳಾಗಲೀ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಯಾಕೆಂದರೆ ಅಲ್ಲಿ ಗಣನೀಯವಾಗಿರುವ ಸಿಖ್ಖರು ಹಾಗೂ ಅವರ ಮತ ಬ್ಯಾಂಕ್.‌ ಸಿಖ್ ಫಾರ್ ಜಸ್ಟಿಸ್ ಸಂಘಟನೆ ಕೆನಡಾದಿಂದಲೇ ಸಕ್ರಿಯವಾಗಿದ್ದುಕೊಂಡು ಪಂಜಾಬಿನಲ್ಲಿ ಮತ್ತೆ ಭಯೋತ್ಪಾದನೆ ಬಿತ್ತುತ್ತಿದೆ. ಸಿಖ್ ಪ್ರತ್ಯೇಕತಾವಾದಿಗಳಿಂದ ಅಲ್ಲಿಯ ಹಿಂದೂಗಳಿಗೆ ರಕ್ಷಣೆ ನೀಡುವಂತೆ ಕೆನಡಾ ಮೇಲೆ ಕೇಂದ್ರ ಸರ್ಕಾರ ಮತ್ತಷ್ಟು ಒತ್ತಡ ಹೇರಬೇಕು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಇಂಪ್ಯಾಕ್ಟ್​ ಪ್ಲೇಯರ್ ನಿಯಮಕ್ಕೆ ಆಕ್ಷೇಪ ಎತ್ತಿದ ರಿಕಿ ಪಾಂಟಿಂಗ್​

IPL 2024: ಸ್ಪೆಷಲಿಸ್ಟ್ ಬ್ಯಾಟರ್​ ಅನ್ನು 8 ನೇ ಕ್ರಮಾಂಕದವರೆಗೆ ಆಡಿಸಬಹುದು. ಆದರೆ ತರಬೇತುದಾರ ಮತ್ತು ಆಟಗಾರರಿಗೆ ಇಂಪ್ಯಾಕ್ಟ್​​ ಪ್ಲೇಯರ್​ ಬಹುಶಃ ಸೂಕ್ತವಲ್ಲ ಎಂದು ನಾನು ಭಾವಿಸುತ್ತೇನೆ. ಈ ವಿಧಾನವನ್ನು ಜನರನ್ನು ರಂಜಿಸಲು ಮಾಡಲಾಗುತ್ತಿದೆ ನಿಮಗೆ ತಿಳಿದಿದೆ ಎಂದು ನಾನು ಭಾವಿಸುತ್ತೇನೆ”ಎಂದು ಪಾಂಟಿಂಗ್ ವಿವರಿಸಿದರು.

VISTARANEWS.COM


on

IPL 2024
Koo

ನವದೆಹಲಿ: ಐಪಿಎಲ್​ 2024ರಲ್ಲಿ (IPL 2024) ಜಾರಿಯಾಗಿರುವ ಇಂಪ್ಯಾಕ್ಟ್ ಪ್ಲೇಯರ್ ನಿಯಮವು ಆಲ್ರೌಂಡರ್​ಗಳ ಬೆಳವಣಿಗೆಗೆ ಅಡ್ಡಿಯಾಗಬಹುದು ಎಂದು ಡೆಲ್ಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಶುಕ್ರವಾರ ಹೇಳಿದ್ದಾರೆ. ಅಲ್ಲದೆ ಇದರ ಪರಿಣಾಮ ಅಭಿಮಾನಿಗಳೇ ಅರಿತುಕೊಳ್ಳಬಹುದು ಎಂದು ಹೇಳಿದ್ದಾರೆ.

ಪಾಂಟಿಂಗ್ ಆರಂಭದಿಂದಲೂ ಇಂಪ್ಯಾಕ್ಟ್ ಪ್ಲೇಯರ್​ ವ್ಯವಸ್ಥೆಯ ಪ್ರತಿಪಾದಕರಾಗಿರಲಿಲ್ಲ. ಇತ್ತೀಚಿನ ಯೂಟ್ಯೂಬ್ ಪಾಡ್​ಕಾಸ್ಟ್​​ನಲ್ಲಿ ರೋಹಿತ್ ಶರ್ಮಾ ಅವರು “ನಿಯಮದ ಅಭಿಮಾನಿಯಲ್ಲ” ಎಂದು ಹೇಳಿದ್ದರು. ಅಲ್ಲಿ.ದ ನಂತರ ಈ ಚರ್ಚೆಯು ವೇಗ ಪಡೆದುಕೊಂಡಿದೆ. ಏಕೆಂದರೆ ಇದು ಭಾರತೀಯ ಆಲ್​ರೌಂಡರ್​ಗಳ ಅಭಿವೃದ್ಧಿಗೆ ಧಕ್ಕೆ ತರುತ್ತದೆ ಎಂದು ಪಾಟಿಂಗ್ ಹೇಳಿದ್ದಾರೆ. . “ನೋಡಿ, ರೋಹಿತ್ ಶರ್ಮಾ ಅವರಿಂದ ಕೆಲವು ನಿಜವಾಗಿಯೂ ಆಸಕ್ತಿದಾಯಕ ನೀಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ಈ ಇಂಪ್ಯಾಕ್ಟ್ ಪ್ಲೇಯರ್ ಆಲ್ರೌಂಡರ್​ಗಳನ್ನು ಆಟದಿಂದ ಸ್ವಲ್ಪ ಹೊರಗಿಡುತ್ತಿದೆ” ಎಂದು ಪಾಂಟಿಂಗ್ ಹೇಳಿದ್ದಾರೆ.

ಸ್ಪೆಷಲಿಸ್ಟ್ ಬ್ಯಾಟರ್​ ಅನ್ನು 8 ನೇ ಕ್ರಮಾಂಕದವರೆಗೆ ಆಡಿಸಬಹುದು. ಆದರೆ ತರಬೇತುದಾರ ಮತ್ತು ಆಟಗಾರರಿಗೆ ಇಂಪ್ಯಾಕ್ಟ್​​ ಪ್ಲೇಯರ್​ ಬಹುಶಃ ಸೂಕ್ತವಲ್ಲ ಎಂದು ನಾನು ಭಾವಿಸುತ್ತೇನೆ. ಈ ವಿಧಾನವನ್ನು ಜನರನ್ನು ರಂಜಿಸಲು ಮಾಡಲಾಗುತ್ತಿದೆ ನಿಮಗೆ ತಿಳಿದಿದೆ ಎಂದು ನಾನು ಭಾವಿಸುತ್ತೇನೆ”ಎಂದು ಪಾಂಟಿಂಗ್ ವಿವರಿಸಿದರು.

ಟಿ20 ಆಟವು ಮನರಂಜನಾ ಪ್ಯಾಕೇಜ್ ಆಗಿದೆ. ಪ್ರಭಾವಶಾಲಿ ಆಟಗಾರನ ಬಗ್ಗೆ ಪ್ರೇಕ್ಷಕರು ಏನು ಯೋಚಿಸುತ್ತಾರೆ ಎಂದು ಕೇಳುವುದು ಉತ್ತಮ. ಏಕೆಂದರೆ ತಂಡಗಳು ಬಹಳಷ್ಟು ಪಂದ್ಯಗಳಲ್ಲಿ 220 ರಿಂದ 250 ರವರೆಗೆ ಗಳಿಸುತ್ತಿವೆ ಎಂಬ ಅಂಶವನ್ನು ಪ್ರತಿಯೊಬ್ಬರೂ ಇಷ್ಟಪಡುತ್ತಾರೆ. ಆದರೆ ಆಟಗಾರರ ಬೆಳವಣಿಗೆಗೆ ಅಡ್ಡಿಯಾಗಲಿದೆ ಎಂದು ಹೇಳಿದರು. ಪ್ರೇಕ್ಷಕರು ಅದನ್ನು ಹೆಚ್ಚು ಇಷ್ಟಪಡದಿದ್ದರೆ. ಹಳೆಯ ಮಾದರಿಗೆ ಹಿಂದಿರುಗಬೇಕ ಎಂದು ಹೇಳಿದ್ದಾರೆ.

ವಾರ್ನರ್ ಶೇ.85ರಿಂದ 90ರಷ್ಟು ಫಿಟ್

ಬೆರಳಿನ ಗಾಯದಿಂದಾಗಿ ಕಳೆದ ಪಂದ್ಯದಿಂದ ಹೊರಗುಳಿದಿದ್ದ ಡೇವಿಡ್ ವಾರ್ನರ್, ನೆಟ್ಸ್​​ನಲ್ಲಿ ಬ್ಯಾಟಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಥ್ರೋಡೌನ್​ಗಳನ್ಉ ಎದುರಿಸುವಾಗ ಸಿಕ್ಸರ್​ಗಳನ್ನು ಬಾರಿಸಿದ್ದಾರೆ. ಪಾಂಟಿಂಗ್ ಅವರು ಸುಮಾರು 85 ರಿಂದ 90% ಫಿಟ್ ಆಗಿದ್ದಾರೆ ಎಂದು ಪಾಂಟಿಂಗ್ ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಪಾಂಡ್ಯ ಅಂದ್ರೆ ಡೋಂಟ್​ ಕೇರ್​, ರೋಹಿತ್​ಗೆ ಫುಲ್​ ರೆಸ್ಪೆಕ್ಟ್​; ಯುವ ಬೌಲರ್​ನ ನಡೆ ಫುಲ್ ವೈರಲ್​

“ಡೇವಿಡ್ ಆಟದ ದಿನದಂದು ಫಿಟ್ನೆಸ್ ಪರೀಕ್ಷೆಯನ್ನು ಮಾಡಿದ್ದಾರೆ. ಒಂದೆರಡು ದಿನಗಳ ಹಿಂದೆ ಅವನಿಗೆ ಬಹುಶಃ 85 ಅಥವಾ 90% ಆಗಿದ್ದಾರೆ. ಇನ್ನೂ ಹೆಚ್ಚಿನ ಸುಧಾರಣೆಯಾಗಲಿದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಪಾಂಟಿಂಗ್ ಹೇಳಿದ್ದಾರೆ.

Continue Reading

ಶಿಕ್ಷಣ

CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

CET 2024 Exam: ಗುರುವಾರ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ಸಂಬಂಧ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ದೂರು ನೀಡಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಇಎ, ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ (ಏಪ್ರಿಲ್‌ 24) ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡುವುದಾಗಿ ಹೇಳಿದೆ. ಈಗ ಎರಡನೇ ದಿನವೂ ಇದೇ ಗೊಂದಲವಾಗಿದೆ. ಹೀಗಾಗಿ ಈ ಎರಡೂ ಸಮಸ್ಯೆಗಳ ಬಗ್ಗೆ ಬುಧವಾರ ಚರ್ಚೆ ನಡೆಸಲಾಗುತ್ತದೆ.

VISTARANEWS.COM


on

Day 2 of CET 2024 Exam 26 out of syllabus question KEA asks to raise objections by April 27
Koo

ಬೆಂಗಳೂರು: ಎಂಜಿನಿಯರಿಂಗ್, ಕೃಷಿ ಸೇರಿದಂತೆ ಹಲವು ವೃತ್ತಿಪರ ಕೋರ್ಸ್‌ಗಳಿಗೆ ಗುರುವಾರ ನಡೆದಿದ್ದ ಮೊದಲ ದಿನದ ಸಿಇಟಿ-2024 ಪರೀಕ್ಷೆಯಲ್ಲಿ (CET 2024 exam) ಗಣಿತ ಹಾಗೂ ಜೀವಶಾಸ್ತ್ರದ ವಿಷಯದಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಲಾಗಿತ್ತು. ಈಗ ಎರಡನೇ ದಿನದ ಪರೀಕ್ಷೆಯಲ್ಲಿಯೂ ಈ ಸಮಸ್ಯೆ ಪುನರಾವರ್ತನೆಯಾಗಿದೆ. ಭೌತಶಾಸ್ತ್ರದಲ್ಲಿ 8 ಹಾಗೂ ರಸಾಯನಶಾಸ್ತ್ರ ವಿಷಯದಲ್ಲಿ 18 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಲಾಗಿದೆ. ಇದು ವಿದ್ಯಾರ್ಥಿಗಳ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಗುರುವಾರ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ಸಂಬಂಧ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ದೂರು ನೀಡಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಇಎ, ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ (ಏಪ್ರಿಲ್‌ 24) ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡುವುದಾಗಿ ಹೇಳಿದೆ. ಈಗ ಎರಡನೇ ದಿನವೂ ಇದೇ ಗೊಂದಲವಾಗಿದೆ. ಹೀಗಾಗಿ ಈ ಎರಡೂ ಸಮಸ್ಯೆಗಳ ಬಗ್ಗೆ ಬುಧವಾರ ಚರ್ಚೆ ನಡೆಸಲಾಗುತ್ತದೆ.

ಏಪ್ರಿಲ್‌ 27ರವರೆಗೆ ಆಕ್ಷೇಪಣೆ ಸಲ್ಲಿಕೆಗೆ KEA ಅವಕಾಶ

ಈ ಬಾರಿ ಸಿಇಟಿಯಲ್ಲಿ ನೋಂದಣಿ ಮಾಡಿಕೊಂಡಿದ್ದ 3,49,637 ವಿದ್ಯಾರ್ಥಿಗಳ ಪೈಕಿ ಶೇ.92ರಷ್ಟು ಮಂದಿ ಪರೀಕ್ಷೆ ಬರೆದಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಅಲ್ಲದೆ, ಈಗ ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳ ಬಗ್ಗೆ‌ ಆಕ್ಷೇಪಣೆಗಳು ಇದ್ದರೆ, ಇದೇ ಏಪ್ರಿಲ್ 27ರೊಳಗೆ ‌ದೂರು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿನ ಯಾವುದೇ ಪ್ರಶ್ನೆಗಳ ಬಗ್ಗೆ ಆಕ್ಷೇಪಣೆಗಳು ಇದ್ದರೆ, ವಿಷಯ, ವರ್ಷನ್‌ ಕೋಡ್, ಪ್ರಶ್ನೆ ಸಂಖ್ಯೆಗಳನ್ನು ನಮೂದಿಸಿ keaugcet24@gmail.com ಗೆ ಇ – ಮೇಲ್‌ ಮೂಲಕ ಸಂಜೆ 5.30ರ ಒಳಗೆ ದೂರು ಸಲ್ಲಿಸಲು ಕೆಇಎ ಸೂಚಿಸಿದೆ. ಇದಕ್ಕೆ ತಜ್ಞರ ಸಮಿತಿಯು ಪರಿಶೀಲಿಸಿ ಸೂಕ್ತ ಪರಿಹಾರವನ್ನು ನೀಡಲಿದೆ ಎಂದು ಕೆಇಎ ಸ್ಪಷ್ಟಪಡಿಸಿದೆ.

ಗಣಿತ, ಜೀವಶಾಸ್ತ್ರದ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ವಿರುದ್ಧ ದೂರು

ಜೀವಶಾಸ್ತ್ರದ 11 ಪ್ರಶ್ನೆಗಳು ಹಾಗೂ ಗಣಿತದ 9 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಕೇಳಲಾಗಿದೆ ಎಂದು ವಿದ್ಯಾರ್ಥಿಗಳು ಕೆಇಎಗೆ ದೂರು ನೀಡಿದ್ದಾರೆ. ಇವುಗಳಿಗೆ ಗ್ರೇಸ್ ಮಾರ್ಕ್ಸ್ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಪಠ್ಯಪುಸ್ತಕದಲ್ಲಿ ಇಲ್ಲದ ಪ್ರಶ್ನೆಗಳು ಬಂದಿವೆ. ಒಟ್ಟು 14 ಮಾರ್ಕ್ಸ್ ಔಟ್ ಆಫ್ ಸಿಲೆಬಸ್ ಬಂದಿದೆ ಎಂದು ಗುರುವಾರ ವಿದ್ಯಾರ್ಥಿಗಳು ಆರೋಪ ಮಾಡಿದ್ದರು. ಈಗ 11 ಮಾರ್ಕ್ಸ್ ಬಗ್ಗೆ ದೂರಿದ್ದಾರೆ.

ಕೆಇಎ ಹೇಳೋದೇನು?

ಗ್ರೇಸ್ ಮಾರ್ಕ್ಸ್ ನೀಡುವ ಬಗ್ಗೆ ಕೆಇಎ ಈವರೆಗೆ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿಲ್ಲ. ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡಲಾಗುವುದು. ನಂತರ ಗ್ರೇಸ್ ಮಾರ್ಕ್ಸ್ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ವಿಸ್ತಾರ ನ್ಯೂಸ್‌ಗೆ ಕೆಇಎ ಮಂಡಳಿ ಮಾಹಿತಿ ನೀಡಿದೆ. ಈ ಸಮಿತಿ ರಚನೆಯಾದ ಬಳಿಕ ಅಧ್ಯಯನ ಮಾಡಿ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಗುವುದು.

ದಾಖಲೆ ಸಂಖ್ಯೆಯಲ್ಲಿ ಸಿಇಟಿ ಬರೆದಿರುವ ವಿದ್ಯಾರ್ಥಿಗಳು

ಈ ವರ್ಷ ಸಿಇಟಿ ಪರೀಕ್ಷೆಗೆ ದಾಖಲೆಯ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಸಿಇಟಿ ಪರೀಕ್ಷೆಯನ್ನು ಬರೆದಿದ್ದಾರೆ. ಈ ಹಿಂದೆ ಯಾವತ್ತೂ ಇಷ್ಟು ಪ್ರಮಾಣದಲ್ಲಿ ವಿದ್ಯಾರ್ಥಿಗಳು ನೋಂದಣಿ ಮಾಡಿರಲಿಲ್ಲ. ರಾಜ್ಯದಲ್ಲಿ 737 ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಲ್ಲಿ 167 ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಯನ್ನು ನಡೆಸಲಾಗಿದೆ.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಭೇಟಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಗುರುವಾರ ಮಲ್ಲೇಶ್ವರಂ ಪಿಯು ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಶುಕ್ರವಾರ ನಡೆಯುವ ಪರೀಕ್ಷೆಗೂ ಬಿಗಿ ಭದ್ರತೆ ಇರಲಿದೆ ಎಂದು ಹೇಳಿದ್ದರು.

ಸಿಇಟಿಗೆ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್‌ನ್ಯೂಸ್‌ ನೀಡಿದೆ. ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಯಾವುದರಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೋ ಅದನ್ನೇ ಸಿಇಟಿ (CET 2024)ಗೆ ಪರಿಗಣಿಸಲು ಕೆಇಎ ಸಮ್ಮತಿ ಸೂಚಿಸಿದೆ. ಇದರಿಂದ ನೂರಾರು ವಿದ್ಯಾರ್ಥಿಗಳು ನಿರಾಳವಾಗಿದ್ದಾರೆ. ಎಂಜಿನಿಯರ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಪ್ರತಿವರ್ಷ ಸಿಇಟಿ ನಡೆಸುತ್ತದೆ.

ಸಿಇಟಿ ಜತೆಗೆ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕವನ್ನೂ ರ‍್ಯಾಂಕಿಂಗ್​ಗೆ ಪರಿಗಣಿಸಲಾಗುತ್ತದೆ. ಇದುವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದರೆ ಪೂರಕ ಪರೀಕ್ಷೆ ಬರೆದು ತೇರ್ಗಡೆಯಾಗಬೇಕಿತ್ತು. ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕ್ರೋಡೀಕರಿಸಿ ಅಂಕಪಟ್ಟಿ ನೀಡಲಾಗುತ್ತಿತ್ತು.

ನಿಯಮದಲ್ಲಿ ಬದಲಾವಣೆ

ಈ ಬಾರಿ ಈ ನಿಯಮದಲ್ಲಿ ಕೊಂಚ ಬದಲಾವಣೆ ತರಲಾಗಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದಿದ್ದರೆ ಅದನ್ನು ಉತ್ತಮಪಡಿಸಿಕೊಳ್ಳಲು ವಿದ್ಯಾರ್ಥಿಗಳು ಇನ್ನು ಉಳಿದ ಎರಡು ಪರೀಕ್ಷೆಗಳನ್ನೂ ಬರೆಯಬಹುದು. ಹೆಚ್ಚು ಅಂಕ ಬಂದಿರುವುದನ್ನೇ ಪರಿಗಣಿಸಿ ಅಂತಿಮ ಅಂಕಪಟ್ಟಿ ನೀಡಲಾಗುತ್ತದೆ.

ಇದನ್ನೂ ಓದಿ: Neha Murder Case: ಐಸಿಸ್‌ ಮಾದರಿಯಲ್ಲಿ ನೇಹಾಗೆ ಚಾಕು ಇರಿತ; ಲವ್‌ ಜಿಹಾದ್‌ ಫಲಿಸದ್ದಕ್ಕೆ ಕೃತ್ಯ: ಪ್ರಮೋದ್‌ ಮುತಾಲಿಕ್

ಇದೀಗ ಆ ಹೆಚ್ಚುವರಿ ಅಂಕವನ್ನೇ ಸಿಇಟಿ ರ‍್ಯಾಂಕಿಂಗ್‌ಗೂ ಪರಿಣಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌.ರಮ್ಯಾ ಮಾತನಾಡಿ, ʼʼಹೆಚ್ಚು ಅಂಕ ಬಂದಿರುವ ಅಂತಿಮ ಅಂಕ ಪಟ್ಟಿಯನ್ನು ಸಿಇಟಿ ಅಂಕಗಳ ಜತೆ ರ‍್ಯಾಂಕಿಂಗ್‌ ಪಟ್ಟಿ ಸಿದ್ಧಪಡಿಸಲು ಪರೀಕ್ಷಾ ಪ್ರಾಧಿಕಾರ ಪರಿಗಣಿಸಲಿದೆʼʼ ಎಂದು ತಿಳಿಸಿದ್ದಾರೆ.

Continue Reading

ಕ್ರೀಡೆ

IPL 2024 : ಪಾಂಡ್ಯ ಅಂದ್ರೆ ಡೋಂಟ್​ ಕೇರ್​, ರೋಹಿತ್​ಗೆ ಫುಲ್​ ರೆಸ್ಪೆಕ್ಟ್​; ಯುವ ಬೌಲರ್​ನ ನಡೆ ಫುಲ್ ವೈರಲ್​

IPL 2024: ಕೊನೆಯ ಓವರ್ ಎಸೆಯುವ ಮೊದಲು, ಮಧ್ವಾಲ್ ತಮ್ಮ ಮೊದಲ ಮೂರು ಓವರ್​ಗಳಲ್ಲಿ 44 ರನ್​ ಬಿಟ್ಟುಕೊಟ್ಟಿದ್ದರು. ವಿಕೆಟ್ ಪಡೆದಿರಲಿಲ್ಲ. ರೊಮಾರಿಯೊ ಶೆಫರ್ಡ್​ಗೆ ಚೆಂಡನ್ನು ನೀಡುವ ಆಯ್ಕೆಯನ್ನು ಹಾರ್ದಿಕ್ ಹೊಂದಿದ್ದರು. ಆದರೆ, ರೋಹಿತ್​​ ಮಧ್ವಾಲ್ ಅವರನ್ನು ಆಯ್ಕೆ ಮಾಡಿದರು. ಬರೋಡಾ ಆಲ್​ರೌಂಡರ್​ ಬೌಲಿಂಗ್​ಗೆ ಮೊದಲು ರೋಹಿತ್ ಜತೆ ಸುದೀರ್ಘ ಚರ್ಚೆ ನಡೆಸಿದ್ದರು.

VISTARANEWS.COM


on

IPL 2024
Koo

ಬೆಂಗಳೂರು: ಪಂಜಾಬ್ ಕಿಂಗ್ಸ್ (PBKS) ವಿರುದ್ಧದ ರೋಮಾಂಚಕ ಐಪಿಎಲ್​ 2024ರ (IPL 2024) ಪಂದ್ಯದ ಕೊನೆಯ ಓವರ್​​ನಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ತಮ್ಮ ತಂಡಕ್ಕೆ ಫೀಲ್ಡ್​ ಸೆಟ್ ಮಾಡುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಹಾಲಿ ನಾಯಕ ಪಾಂಡ್ಯ ಇದ್ದ ಹೊರತಾಗಿಯೂ ಅವರು ಬೌಲರ್​ ಜತೆ ಸೇರಿಕೊಂಡು ಫೀಲ್ಡ್​ ಸೆಟ್ ಮಾಡುವ ವಿಡಿಯೊ ವೈರಲ್ ಆಗಿದೆ ಯುವ ಬೌಲರ್ ಕೂಡ ಪಾಂಡ್ಯನ ಮಾತುಗಳಿಗೆ ಕಿಮ್ಮತ್ತು ಕೊಡದೇ ಕೇವಲ ರೋಹಿತ್​ ಮಾತುಗಳನ್ನು ಮಾತ್ರ ಕೇಳಿಸಿಕೊಳ್ಳುತ್ತಿರುವುದು ದೃಶ್ಯಗಳಲ್ಲಿ ಸೆರೆಯಾಗಿದೆ.

ಪಂದ್ಯವನ್ನು ಮುಂಬಯಿ ತಂಡ ಬಹುತೇಕ ಕಳೆದುಕೊಳ್ಳುವ ಹಂತದಲ್ಲಿ ಇತ್ತು. ಆದರೆ, ಕೊನೇ ಹಂತದಲ್ಲಿ ಗೆಲುವು ಲಭಿಸಿತು. ಮುಲ್ಲಾನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 193 ರನ್​ಗಳ ಗುರಿ ಬೆನ್ನತ್ತಿದ ಕಿಂಗ್ಸ್ ಎರಡನೇ ಓವರ್​​ನಲ್ಲಿ 4 ವಿಕೆಟ್ ನಷ್ಟಕ್ಕೆ 14 ರನ್ ಗಳಿಸಿತ್ತು. ಆದರೆ ಅಶುತೋಷ್ ಶರ್ಮಾ 28 ಎಸೆತಗಳಲ್ಲಿ 61 ರನ್ ಗಳಿಸಿ ಗೆಲುವು ಸಾಧಿಸುವ ಭರವಸೆ ಮೂಡಿಸಿದರು. ಕೊನೆಯ ಓವರ್​ನಲ್ಲಿ ಆತಿಥೇಯರಿಗೆ ಗೆಲ್ಲಲು 12 ರನ್​ಗಳ ಅವಶ್ಯಕತೆಯಿತ್ತು. ಆದರೆ ಕೇವಲ ಒಂದು ವಿಕೆಟ್ ಮಾತ್ರ ಉಳಿದಿತ್ತು. ಮುಂಬೈ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವ ಜವಾಬ್ದಾರಿಯನ್ನು ಬೌಲರ್​​ ಆಕಾಶ್ ಮಧ್ವಾಲ್ ಅವರಿಗೆ ನೀಡಲಾಯಿತು.

ಕೊನೆಯ ಓವರ್ ಎಸೆಯುವ ಮೊದಲು, ಮಧ್ವಾಲ್ ತಮ್ಮ ಮೊದಲ ಮೂರು ಓವರ್​ಗಳಲ್ಲಿ 44 ರನ್​ ಬಿಟ್ಟುಕೊಟ್ಟಿದ್ದರು. ವಿಕೆಟ್ ಪಡೆದಿರಲಿಲ್ಲ. ರೊಮಾರಿಯೊ ಶೆಫರ್ಡ್​ಗೆ ಚೆಂಡನ್ನು ನೀಡುವ ಆಯ್ಕೆಯನ್ನು ಹಾರ್ದಿಕ್ ಹೊಂದಿದ್ದರು. ಆದರೆ, ರೋಹಿತ್​​ ಮಧ್ವಾಲ್ ಅವರನ್ನು ಆಯ್ಕೆ ಮಾಡಿದರು. ಬರೋಡಾ ಆಲ್​ರೌಂಡರ್​ ಬೌಲಿಂಗ್​ಗೆ ಮೊದಲು ರೋಹಿತ್ ಜತೆ ಸುದೀರ್ಘ ಚರ್ಚೆ ನಡೆಸಿದ್ದರು. ಆದರೆ, ನಾಯಕ ಪಾಂಡ್ಯನ ಬಳಿ ಒಂದೇ ಒಂದು ಮಾತು ಆಡಿರಲಿಲ್ಲ. ಮಾಜಿ ನಾಯಕ ಹಾಗೂ ಬೌಲರ್ ಫೀಲ್ಡ್​ ಸೆಟ್ ಮಾಡುವಾಗ ಪಾಂಡ್ಯ ಪೆಚ್ಚು ಮೋರೆ ಹಾಕಿ ನೋಡುತ್ತಿದ್ದರು.

ಇದನ್ನೂ ಓದಿ: Royal Challenges Bangalore : ಬೆಂಗಳೂರಿನ ಮೂರು ಕೆರೆಗಳನ್ನೂ ಅಭಿವೃದ್ಧಿ ಮಾಡಿದ ಆರ್​ಸಿಬಿ

ರೋಹಿತ್ ಶರ್ಮಾ ಅವರ ನಾಯಕತ್ವದ ಕೌಶಲ್ಯಗಳ ಬಗ್ಗೆ ಮುಕ್ತವಾಗಿ ಮೆಚ್ಚುಗೆ ವ್ಯಕ್ತಪಡಿಸಿರುವ ಆಕಾಶ್ ಮಧ್ವಾಲ್, ಮೈದಾನದ ಫೀಲ್ಡ್​ ಸೆಟಿಂಗ್​ನಲ್ಲಿ ಅವರ ನೆರವು ಕೇಳಿದ್ದಾರೆ. ಕೊನೆಯಲ್ಲಿ, ಹಾರ್ದಿಕ್ ರೋಹಿತ್​ ಹೇಳಿದ್ದನ್ನೇ ಒಪ್ಪಿಕೊಂಡರು.

ಪಂಜಾಬ್ ವಿರುದ್ಧ ಮುಂಬೈಗೆ ಗೆಲುವು

ಪಂಜಾಬ್ ಕಿಂಗ್ಸ್ ಇನ್ನಿಂಗ್ಸ್ ಮುಗಿಸಲು ಮುಂಬೈ ಇಂಡಿಯನ್ಸ್​​ 20 ನೇ ಓವರ್​ನಲ್ಲಿ ಕೇವಲ ಒಂದು ವಿಕೆಟ್​​ ಅಗತ್ಯವಿತ್ತು. ಕಗಿಸೊ ರಬಾಡ ಎರಡು ರನ್​ ಗಳಿಸುವ ಯೋಜನೆಯಲ್ಲಿ ಓಡಿದರು. ಅವರು ರನ್​ಔಟ್ ಆದರು. ಈ ಪಂದ್ಯವನ್ನು ಹಾರ್ದಿಕ್ ಬಳಗ 9 ರನ್ ಗಳಿಂದ ಗೆದ್ದುಕೊಂಡಿತು. 4 ಓವರ್​ಗಳಲ್ಲಿ 21 ರನ್​ಗೆ 3 ವಿಕೆಟ್ ಕಬಳಿಸಿದ ಜಸ್ಪ್ರೀತ್ ಬುಮ್ರಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಮತ್ತೊಂದು ಗಮನಾರ್ಹ ಪ್ರದರ್ಶನದಲ್ಲಿ, ದಕ್ಷಿಣ ಆಫ್ರಿಕಾದ ಜೆರಾಲ್ಡ್ ಕೊಟ್ಜೆ ಕೂಡ ಬುಮ್ರಾಗೆ ಉತ್ತಮ ಬೆಂಬಲ ನೀಡಿ 3 ವಿಕೆಟ್ ಪಡೆದರು. ಐಪಿಎಲ್ 2024 ರ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ಇನ್ನು ರಾಜಸ್ಥಾನ್ ರಾಯಲ್ಸ್ (ಆರ್​ಆರ್​ ವಿರುದ್ಧ ಆಡಲಿದೆ.

Continue Reading

ಕ್ರೀಡೆ

Royal Challenges Bangalore : ಬೆಂಗಳೂರಿನ ಮೂರು ಕೆರೆಗಳನ್ನೂ ಅಭಿವೃದ್ಧಿ ಮಾಡಿದ ಆರ್​ಸಿಬಿ

Royal Challenges Bangalore: ರಾಜಾನುಕುಂಟೆ ಸಮೀಪದ ಇಟ್ಟಗಲ್ಲಪುರ ಕೆರೆ ಮತ್ತು ಸಾದೇನಹಳ್ಳಿ ಕೆರೆಯಲ್ಲಿ ಆರ್​ಸಿಬಿ ಹೂಳೆತ್ತುವ ಮತ್ತು ಅಭಿವೃದ್ಧಿಪಡಿಸುವ ಕೆಲಸ ಮಾಡಿದೆ. ಅಕ್ಟೋಬರ್ 2023 ರಲ್ಲಿ ಆರ್​ಸಿಬಿ ಈ ಯೋಜನೆ ಪ್ರಾರಂಭಿಸಿತ್ತು. ಈ ಪ್ರದೇಶದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು ಬೋರ್​ವೆಲ್​ಗಳನ್ನು 1000 ರಿಂದ 1500 ಅಡಿಗಳವರೆಗೆ ಕೊರೆಸಬೇಕಾಗಿದೆ. ಈ ಪ್ರದೇಶಗಳು ಕಾವೇರಿ ನದಿಯ ನೀರಿನ ಲಭ್ಯತೆಯನ್ನು ಹೊಂದಿಲ್ಲ. ಹೀಗಾಗಿ ಈ ಕೆರೆಗಳನ್ನು ಅಭಿವೃದ್ಧಿ ಮಾಡಲಾಗಿದೆ.

VISTARANEWS.COM


on

Royal Challengers Banaglore
Koo

ಬೆಂಗಳೂರು: ಇಂಡಿಯಾ ಕೇರ್ಸ್ ಫೌಂಡೇಶನ್​ನ ಇತ್ತೀಚಿನ ವರದಿಯ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challenges Bangalore) ಬೆಂಗಳೂರಿನ ಎರಡು ಪ್ರಮುಖ ಕೆರೆಗಳ ಪುನರುಜ್ಜೀವನ ಕಾರ್ಯವನ್ನು ಪೂರ್ಣಗೊಳಿಸಿದೆ, ಈ ಕೆರೆಗಳ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿದೆ ಮತ್ತು ಮೂರನೇ ಕೆರೆ ಪಕ್ಕದಲ್ಲಿ ನಾಗರಿಕ ಸೌಲಭ್ಯಗಳನ್ನು ಸೇರಿಸಿದೆ.

ರಾಜಾನುಕುಂಟೆ ಸಮೀಪದ ಇಟ್ಟಗಲ್ಲಪುರ ಕೆರೆ ಮತ್ತು ಸಾದೇನಹಳ್ಳಿ ಕೆರೆಯಲ್ಲಿ ಆರ್​ಸಿಬಿ ಹೂಳೆತ್ತುವ ಮತ್ತು ಅಭಿವೃದ್ಧಿಪಡಿಸುವ ಕೆಲಸ ಮಾಡಿದೆ. ಅಕ್ಟೋಬರ್ 2023 ರಲ್ಲಿ ಆರ್​ಸಿಬಿ ಈ ಯೋಜನೆ ಪ್ರಾರಂಭಿಸಿತ್ತು. ಈ ಪ್ರದೇಶದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು ಬೋರ್​ವೆಲ್​ಗಳನ್ನು 1000 ರಿಂದ 1500 ಅಡಿಗಳವರೆಗೆ ಕೊರೆಸಬೇಕಾಗಿದೆ. ಈ ಪ್ರದೇಶಗಳು ಕಾವೇರಿ ನದಿಯ ನೀರಿನ ಲಭ್ಯತೆಯನ್ನು ಹೊಂದಿಲ್ಲ. ಹೀಗಾಗಿ ಈ ಕೆರೆಗಳನ್ನು ಅಭಿವೃದ್ಧಿ ಮಾಡಲಾಗಿದೆ.

ವರದಿಯ ಪ್ರಕಾರ, ಇಟ್ಟಗಲ್ಲಪುರ ರ ಕೆರೆ ಮತ್ತು ಸಾದೇನಹಳ್ಳಿ ಕೆರೆಯಿಂದ 1.20 ಲಕ್ಷ ಟನ್ ಹೂಳು ಮತ್ತು ಮರಳನ್ನು ತೆಗೆಯಲಾಗಿದೆ. ಇದನ್ನು ಕೆರೆಗಳಿಗೆ ಅಡ್ಡಲಾಗಿ ಕಟ್ಟೆಗಳು ಮತ್ತು ಮಾರ್ಗಗಳನ್ನು ನಿರ್ಮಿಸಲು ಬಳಸಲಾಗಿದೆ. 52 ರೈತರು ತಮ್ಮ ಹೊಲಗಳಿಗೆ ಮೇಲ್ಮಣ್ಣು ಬಳಸಲು ಮಣ್ಣನ್ನು ತೆಗೆದುಕೊಂಡಿದ್ದಾರೆ.

ಒಟ್ಟು ಒಂಬತ್ತು ಎಕರೆ ಕೆರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಪರಿಣಾಮವಾಗಿ ಕೊಳಗಳು ಮತ್ತು ಗದ್ದೆಗಳು ಸೃಷ್ಟಿಯಾಗಿವೆ. ಈ ವೈಶಿಷ್ಟ್ಯಗಳು ಸರೋವರಗಳಲ್ಲಿ ವಾಸಿಸುವ ಪಕ್ಷಿಗಳು ಮತ್ತು ಪ್ರಾಣಿಗಳಿಗೆ ಪ್ರಯೋಜನವನ್ನು ನೀಡುತ್ತಿವೆ ಕೆರೆಗಳ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವೂ ೧೭ ಎಕರೆಗಳವರೆಗೆ ಹೆಚ್ಚಾಗಿದೆ.

ಇದನ್ನೂ ಓದಿ: IPL 2024 : ಆರ್​ಸಿಬಿ, ಕೊಹ್ಲಿಯ ನೆರವು ಸ್ಮರಿಸಿದ ಕೆ. ಎಲ್ ರಾಹುಲ್​

ಈ ಸರೋವರಗಳು ಅಂತರ್ಜಲ ಮರುಪೂರಣಕ್ಕೆ ಅನುಕೂಲವಾಗುವುದಲ್ಲದೆ, ಕುಡಿಯುವ ನೀರಿನ ಪ್ರಮುಖ ಮೂಲಗಳಾಗಿ ಕಾರ್ಯನಿರ್ವಹಿಸುತ್ತವೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳನ್ನು ಬೆಂಬಲಿಸುತ್ತವೆ. ಇದು ಎರಡು ಸರೋವರಗಳ ಮೀನುಗಾರರು ಮತ್ತು ರೈತರಿಗೆ ಹೆಚ್ಚುವರಿ ಜೀವನೋಪಾಯದ ಅವಕಾಶಗಳನ್ನು ನೀಡುತ್ತದೆ. ಈಗ ಮೊದಲಿಗಿಂತ ಮೂರು ಪಟ್ಟು ಹೆಚ್ಚು ಮೀನು ಪಡೆಯಬಹುದು. ಪ್ರಸ್ತುತ ಕೃಷಿಗಾಗಿ ಕೊಳವೆಬಾವಿಗಳನ್ನು ಅವಲಂಬಿಸಿರುವ ರೈತರು ಈಗ ಈ ಪುನರುಜ್ಜೀವನಗೊಂಡ ಸರೋವರಗಳನ್ನು ಕೃಷಿ ಮತ್ತು ಇತರ ಉದ್ದೇಶಗಳಿಗಾಗಿ ಬಳಸಬಹುದು.

ಕಣ್ಣೂರು ಕರೆಯ ವ್ಯಾಪ್ತಿಯಲ್ಲಿ ನಾಗರಿಕ ಸೌಲಭ್ಯಗಳನ್ನು ನೀಡಲಾಗಿದೆ. ಎಲ್ಲಾ ಮೂರು ಸರೋವರಗಳಲ್ಲಿ ಜನಾಂಗೀಯ-ಔಷಧೀಯ ಸಸ್ಯಗಳ ಉದ್ಯಾನವನಗಳು, ಬಿದಿರು ಉದ್ಯಾನಗಳು ಮತ್ತು ಚಿಟ್ಟೆ ಉದ್ಯಾನಗಳನ್ನು ನಿರ್ಮಿಸಲಾಗಿದೆ. ಏಕೆಂದರೆ ಈ ಉಪಕ್ರಮವು ಸರೋವರಗಳ ಜೀವವೈವಿಧ್ಯತೆಯನ್ನು ಸುಧಾರಿಸುವ ಮತ್ತು ಸುಸ್ಥಿರಗೊಳಿಸುವ ಗುರಿ ಹೊಂದಿದೆ, ಪರಿಸರ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳಲು ಮಕ್ಕಳಿಗೆ ಶೈಕ್ಷಣಿಕ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತದೆ.

Continue Reading
Advertisement
IPL 2024
ಪ್ರಮುಖ ಸುದ್ದಿ2 mins ago

IPL 2024 : ಇಂಪ್ಯಾಕ್ಟ್​ ಪ್ಲೇಯರ್ ನಿಯಮಕ್ಕೆ ಆಕ್ಷೇಪ ಎತ್ತಿದ ರಿಕಿ ಪಾಂಟಿಂಗ್​

Lok Sabha Election 2024
Lok Sabha Election 20245 mins ago

Lok Sabha Election 2024: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ; ಕಾರಣ ಇದು

Day 2 of CET 2024 Exam 26 out of syllabus question KEA asks to raise objections by April 27
ಶಿಕ್ಷಣ46 mins ago

CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

Maldives Tourism
ವಿದೇಶ49 mins ago

Maldives Tourism: ಪರಿಣಾಮ ಬೀರಿದ ಮಾಲ್ಡೀವ್ಸ್ ಬಹಿಷ್ಕಾರದ ಕೂಗು; ಭೇಟಿ ನೀಡುವ ಭಾರತೀಯರ ಸಂಖ್ಯೆಯಲ್ಲಿ ಭಾರೀ ಕುಸಿತ

IPL 2024
ಕ್ರೀಡೆ51 mins ago

IPL 2024 : ಪಾಂಡ್ಯ ಅಂದ್ರೆ ಡೋಂಟ್​ ಕೇರ್​, ರೋಹಿತ್​ಗೆ ಫುಲ್​ ರೆಸ್ಪೆಕ್ಟ್​; ಯುವ ಬೌಲರ್​ನ ನಡೆ ಫುಲ್ ವೈರಲ್​

Party symbols
ರಾಜಕೀಯ55 mins ago

Party Symbols: ವಿವಿಧ ಪಕ್ಷಗಳ ಚುನಾವಣಾ ಚಿಹ್ನೆ ಹಿಂದೆ ಹೇಗಿತ್ತು, ಈಗ ಏನಾಗಿದೆ? ಸಂಗ್ರಹಯೋಗ್ಯ ಮಾಹಿತಿ

letter to President
ಕರ್ನಾಟಕ56 mins ago

letter to President: ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ: ನ್ಯಾಯ ಕೊಡಿಸಲು ರಾಷ್ಟ್ರಪತಿಗಳಿಗೆ ಕರವೇ ನಾರಾಯಣಗೌಡ ಮನವಿ

Surapura assembly constituency by election Congress candidate Rajavenugopal Nayaka filed nomination
ಯಾದಗಿರಿ1 hour ago

Yadgiri News: ರಾಜಾವೇಣುಗೋಪಾಲ ನಾಯಕಗೆ ಬೆಂಬಲಿಸಿ, ಗೆಲ್ಲಿಸಿ: ಸಚಿವ ದರ್ಶನಾಪುರ

Royal Challengers Banaglore
ಕ್ರೀಡೆ1 hour ago

Royal Challenges Bangalore : ಬೆಂಗಳೂರಿನ ಮೂರು ಕೆರೆಗಳನ್ನೂ ಅಭಿವೃದ್ಧಿ ಮಾಡಿದ ಆರ್​ಸಿಬಿ

Video Viral Parameshwara statement on ballot paper bogus voting
ವೈರಲ್ ನ್ಯೂಸ್1 hour ago

Video Viral: ಬ್ಯಾಲೆಟ್‌ ಪೇಪರ್‌ ಕಳ್ಳ ಮತದಾನದ ರಹಸ್ಯ ಬಿಚ್ಚಿಟ್ಟ ಪರಮೇಶ್ವರ್;‌ ಕಾಂಗ್ರೆಸ್‌ EVM ಬೇಡ ಎನ್ನಲು ಇದೇ ಕಾರಣವೆಂದ ಜೆಡಿಎಸ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ6 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ16 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌