CET Exam: ಸಿಇಟಿ ಕೀ ಉತ್ತರಗಳು ಪ್ರಕಟ, ಪಠ್ಯೇತರ ಪ್ರಶ್ನೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ - Vistara News

ಪ್ರಮುಖ ಸುದ್ದಿ

CET Exam: ಸಿಇಟಿ ಕೀ ಉತ್ತರಗಳು ಪ್ರಕಟ, ಪಠ್ಯೇತರ ಪ್ರಶ್ನೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ

CET Exam: ಸರ್ಕಾರ ರಚಿಸಿದ್ದ ವಿಷಯವಾರು ಪ್ರತ್ಯೇಕ ತಜ್ಞರ ಸಮಿತಿಯ ಅಭಿಪ್ರಾಯ ಆಧರಿಸಿ ಸಿಇಟಿ ಮರುಪರೀಕ್ಷೆ ನಡೆಸದೇ ಇರಲು ಹಾಗೂ ತಪ್ಪಾದ ಪ್ರಶ್ನೆಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

VISTARANEWS.COM


on

CET exam 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ (CET exam 2024) ಪಠ್ಯೇತರ ಪ್ರಶ್ನೆಗಳಿಂದ ಉಂಟಾಗಿದ್ದ ಗೊಂದಲವನ್ನು ಸರ್ಕಾರ ಪರಿಹರಿಸಿದೆ. ಇದರ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಯುಜಿಸಿಇಟಿ -2024ರ ನಾಲ್ಕು ವಿಷಯದ ಪರೀಕ್ಷೆಗಳಿಗೆ ತಾತ್ಕಾಲಿಕ ಸರಿ ಉತ್ತರಗಳನ್ನು (Key Answers) ಪ್ರಕಟಿಸಿದೆ.

ಮೇ 7ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ, ರಸಾಯನ ಶಾಸ್ತ್ರ, ಭೌತಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯದಿಂದ ಹೊರತಾದ 50 ಪ್ರಶ್ನೆಗಳನ್ನು ಕೇಳಿದ್ದು, ಇವುಗಳನ್ನು ಕೀ ಉತ್ತರದ ಪಟ್ಟಿಯಿಂದ ಕೈ ಬಿಡಲಾಗಿದೆ. ಉಳಿದ 190 ಪ್ರಶ್ನೆಗಳಿಗೆ ಕೀ ಉತ್ತರಗಳನ್ನು ಪ್ರಾಧಿಕಾರದ kea.kar.nic.in ವೆಬ್ಸೈಟ್‌ನನಲ್ಲಿ ಪ್ರಕಟಿಸಲಾಗಿದೆ. ಇವುಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ಆನ್ಲೈನ್ ಪೋರ್ಟಲ್‌ ಮೂಲಕ ಏಪ್ರಿಲ್ 30ರಂದು ಬೆಳಗ್ಗೆ 11ರಿಂದ ಮೇ 7ರ ಬೆಳಗ್ಗೆ 11ರೊಳಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

ಈ ಮೂಲಕ ಸಿಇಟಿ ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಕೇಳಿ ಉಂಟಾಗಿದ್ದ ಗೊಂದಲ, ಮರುಪರೀಕ್ಷೆಗಳ ಆತಂಕ ಬಗೆಹರಿದಿದೆ. ಸರ್ಕಾರ ರಚಿಸಿದ್ದ ವಿಷಯವಾರು ಪ್ರತ್ಯೇಕ ತಜ್ಞರ ಸಮಿತಿಯ ಅಭಿಪ್ರಾಯ ಆಧರಿಸಿ ಸಿಇಟಿ ಮರುಪರೀಕ್ಷೆ ನಡೆಸದೇ ಇರಲು ಹಾಗೂ ತಪ್ಪಾದ ಪ್ರಶ್ನೆಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದೇ ವೇಳೆ ಇನ್ನು ಮುಂದೆ ಸಿಇಟಿ ಪ್ರಶ್ನೆ ಪತ್ರಿಕೆಯಲ್ಲಿ ಈ ರೀತಿಯ ಲೋಪಗಳಾಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಯಿಂದ ಏ.18 ಮತ್ತು 19ರಂದು ನಡೆಸಲಾಗಿತ್ತು. ರಸಾಯನ ಶಾಸ್ತ್ರ ವಿಷಯದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5, ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು.

ಇದನ್ನೂ ಓದಿ: CET Exam: ಸಿಇಟಿ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಭಾರೀ ಗೊಂದಲ, ದೂರು ನೀಡಲು ಏ.27ರವರೆಗೆ ಕಾಲಾವಕಾಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat kohli : ಪಾಕಿಸ್ತಾನಕ್ಕೆ ಬರುವೆ ಎಂದು ಅಲ್ಲಿನ ಪರ್ವತಾರೋಹಿಗೆ ಭರವಸೆ ಕೊಟ್ಟಿದ್ದ ವಿರಾಟ್​ ಕೊಹ್ಲಿ! ಇಲ್ಲಿದೆ ವಿಡಿಯೊ

Virat Kohli: 2022 ರಲ್ಲಿ ನಾನು ನೇಪಾಳದಲ್ಲಿದ್ದಾಗ, ಮೂಲತಃ ಭಾರತದಿಂದ ಬಂದ ಅಪರಿಚಿತರೊಬ್ಬರು (ರಾಜಕೀಯ ಕಾರಣಗಳಿಂದಾಗಿ ಅವರು ಯಾವುದೇ ತೊಂದರೆಗೆ ಸಿಲುಕದಂತೆ ಅವರ ಹೆಸರನ್ನು ಹೇಳುವುದಿಲ್ಲ) ನನ್ನ ಕೆಲಸವನ್ನು ಶ್ಲಾಘಿಸಿದ್ದರು ಎಂದು ಹೇಳಿದ್ದಾರೆ.

VISTARANEWS.COM


on

Virat Kohli
Koo

ನವದೆಹಲಿ: ಪಾಕಿಸ್ತಾನದ ಪರ್ವತಾರೋಹಿ ಶೆಹ್ರೋಜ್ ಕಾಶಿಫ್ ಅವರೊಂದಿಗೆ ಸಂವಹನ ನಡೆಸಿದ್ದ ವೇಳೆ ಭಾರತ ತಂಡದ ಸ್ಟಾರ್ ಬ್ಯಾಟರ್​ ವಿರಾಟ್​ ಕೊಹ್ಲಿ (Virat kohli) ಭವಿಷ್ಯದಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡುವ ಭರವಸೆಯಿದೆ ಎಂದು ಹೇಳಿರುವ ವಿಡಿಯೊ ವೈರಲ್ ಆಗಿದೆ. ಕಾಶಿಫ್ 2021 ರಲ್ಲಿ ಕೆ 2 ಶಿಖರವನ್ನು ಏರಿದ ವಿಶ್ವದ ಯುವ ಪರ್ವತಾರೋಹಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೇ ವೇಳೆ ಅವರಿಗೆ ಭಾರತೀಯ ಕ್ರಿಕೆಟ್ ಸೂಪರ್​ಸ್ಟಾರ್ ಜತೆ ಅವರೊಂದಿಗೆ ಮಾತನಾಡುವ ಅವಕಾಶ ಅವರಿಗೆ ಸಿಕ್ಕಿತು. ಅವರು 2022 ರಲ್ಲಿ ನೇಪಾಳದಲ್ಲಿದ್ದಾಗ ಭಾರತೀಯ ಕ್ರಿಕೆಟ್ ತಂಡದ ಜತೆ ಮಾತನಾಡಿದ್ದರು. ಈ ವೇಳೆ ಕೊಹ್ಲಿ ಅವರಿಗೆ ಪಾಕ್​ಗೆ ಹೋಗುವ ಭರವಸೆ ನೀಡಿದ್ದರು.

ಕಾಶಿಫ್ ವಿರಾಟ್ ಕೊಹ್ಲಿಯೊಂದಿಗೆ ಸಂಭಾಷಣೆ ನಡೆಸುವ ಬಯಕೆ ವ್ಯಕ್ತಪಡಿಸಿದ್ದರು. ಅಂತೆಯೇ ಪಾಕಿಸ್ತಾನದ ಪರ್ವತಾರೋಹಿ ಭಾರತದ ಮಾಜಿ ನಾಯಕನೊಂದಿಗೆ ಸಂಭಾಷಣೆ ನಡೆಸಿದ್ದರು ಅದರ ಕ್ಲಿಪ್ ಅನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

2022 ರಲ್ಲಿ ನಾನು ನೇಪಾಳದಲ್ಲಿದ್ದಾಗ, ಮೂಲತಃ ಭಾರತದಿಂದ ಬಂದ ಅಪರಿಚಿತರೊಬ್ಬರು (ರಾಜಕೀಯ ಕಾರಣಗಳಿಂದಾಗಿ ಅವರು ಯಾವುದೇ ತೊಂದರೆಗೆ ಸಿಲುಕದಂತೆ ಅವರ ಹೆಸರನ್ನು ಹೇಳುವುದಿಲ್ಲ) ನನ್ನ ಕೆಲಸವನ್ನು ಶ್ಲಾಘಿಸಿದ್ದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: Milind Kumar : ಆರ್​ಸಿಬಿಯ ಮಾಜಿ ಆಟಗಾರ ಕ್ರಿಕೆಟ್​ನಿಂದ ನಿವೃತ್ತಿ

ಅವರು ಕ್ರಿಕೆಟ್ ತಂಡದೊಂದಿಗೆ ಸಂಪರ್ಕ ಹೊಂದಿದ್ದರು. ಆದ್ದರಿಂದ ನಾನು ವಿರಾಟ್ ಕೊಹ್ಲಿಯೊಂದಿಗೆ ಮಾತನಾಡುವ ಬಯಕೆಯನ್ನು ತಮಾಷೆಯಾಗಿ ವ್ಯಕ್ತಪಡಿಸಿದೆ. ನನಗೆ ಆಶ್ಚರ್ಯವಾಗುವಂತೆ ಅವರು ನನ್ನ ಪರವಾಗಿ ಕೊಹ್ಲಿಗೆ ಸಂದೇಶ ಕಳುಹಿಸಿದ್ದರು. ವೀಡಿಯೊ ಕರೆ ಮೂಲಕ ಅವರೊಂದಿಗೆ ಚಾಟ್ ಮಾಡಲು ನನಗೆ ಅವಕಾಶ ಸಿಕ್ಕಿತು. ಒಬ್ಬ ಪಾಕಿಸ್ತಾನಿಯಾಗಿ, ಕೊಹ್ಲಿಯನ್ನು ಈ ಯುಗದ ಶ್ರೇಷ್ಠ ಬ್ಯಾಟ್ಸ್ಮನ್ ಎಂದು ನಾನು ಹೆಮ್ಮೆಯಿಂದ ಒಪ್ಪಿಕೊಳ್ಳುತ್ತೇನೆ ಎಂದು ಅವರು ಹೇಳಿದರು.

ವೀಡಿಯೊದಲ್ಲಿ, ವಿರಾಟ್ ಕೊಹ್ಲಿ ಕಾಶಿಫ್ಗೆ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುವ ಭರವಸೆಯಿದೆ ಎಂದು ಹೇಳಿದ್ದಾರೆ.

ನಿಮ್ಮ ಕುಟುಂಬಕ್ಕೆ ಮತ್ತು ನಿಮ್ಮ ಎಲ್ಲಾ ಸ್ನೇಹಿತರಿಗೆ ನನ್ನ ನಮಸ್ಕಾರಗಳನ್ನು ತಿಳಿಸಿ. ನಾವು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇವೆ ಎಂದು ಆಶಿಸುತ್ತೇನೇ “ಎಂದು ಭಾರತದ ವಿರಾಟ್ ಕೊಹ್ಲಿ ಹೇಳಿದ್ದರು.

ವಿರಾಟ್ ಕೊಹ್ಲಿ ಇನ್ನೂ ಪಾಕಿಸ್ತಾನಕ್ಕೆ ಭೇಟಿ ನೀಡಿಲ್ಲ

ವಿರಾಟ್ ಕೊಹ್ಲಿ ವಿಶ್ವದ ಎಲ್ಲಾ ಪ್ರಮುಖ ಕ್ರಿಕೆಟ್ ರಾಷ್ಟ್ರಗಳಲ್ಲಿ ಆಡಿದ್ದರೂ, ರಾಜಕೀಯ ಕಾರಣಗಳಿಂದಾಗಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಸ್ಥಗಿತಗೊಳಿಸಿರುವುದರಿಂದ ಅವರು ಪಾಕಿಸ್ತಾನದಲ್ಲಿ ಇನ್ನೂ ಒಂದು ಪಂದ್ಯವನ್ನು ಆಡಿಲ್ಲ. 2008ರಲ್ಲಿ ಜೂನ್-ಜುಲೈನಲ್ಲಿ ನಡೆದ ಏಷ್ಯಾಕಪ್​ಗಾಗಿ ಭಾರತ ಕೊನೆಯ ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿತ್ತು.

ಕಾಕತಾಳೀಯವೆಂಬಂತೆ, ವಿರಾಟ್ ಕೊಹ್ಲಿ ಒಂದು ತಿಂಗಳ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದರು ಮತ್ತು ಭಾರತೀಯ ಆಟಗಾರನಾಗಿ ಇನ್ನೂ ಪಾಕಿಸ್ತಾನಕ್ಕೆ ಭೇಟಿ ನೀಡಿಲ್ಲ. ಆದಾಗ್ಯೂ, ಅವರು ಐಸಿಸಿ ಸ್ಪರ್ಧೆಗಳು ಮತ್ತು ಏಷ್ಯಾ ಕಪ್​ಗಳಲ್ಲಿ ಪಾಕಿಸ್ತಾನವನ್ನು ಹಲವಾರು ಬಾರಿ ಎದುರಿಸಿದ್ದಾರೆ. ಅವರ ವಿರುದ್ಧ ಅದ್ಭುತ ದಾಖಲೆಯನ್ನು ಹೊಂದಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಪಾಕಿಸ್ತಾನ ವಿರುದ್ಧ ಸೆಣಸಲಿದ್ದಾರೆ.

Continue Reading

ದೇಶ

Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

Narendra Modi: ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ, ಅವರು ಬುಲ್ಡೋಜರ್‌ಗಳನ್ನು ಕಳುಹಿಸಿ ರಾಮಮಂದಿರವನ್ನು ನೆಲಸಮಗೊಳಿಸುತ್ತಾರೆ. ಪೀಳಿಗೆಗಳಿಂದ ತ್ಯಾಗ ಮಾಡಿದ ಫಲವಾಗಿ, 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ನೀವು ನಮಗೆ ಮತ ನೀಡಿದ ಕಾರಣ ಇದೆಲ್ಲ ಸಾಧ್ಯವಾಗಿದೆ. ಆದರೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ರಾಮಮಂದಿರವನ್ನು ನೆಲಸಮಗೊಳಿಸುತ್ತದೆ ಎಂದು ನರೇಂದ್ರ ಮೋದಿ ಹೇಳಿದರು.

VISTARANEWS.COM


on

Narendra modi
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕು ಹಂತದ ಮತದಾನ ಮುಗಿದರೂ ಚುನಾವಣೆ ಅಬ್ಬರ ಮಾತ್ರ ಮುಗಿದಿಲ್ಲ. ಇನ್ನೂ ಮೂರು ಹಂತದ ಮತದಾನ ಬಾಕಿ ಇರುವುದರಿಂದ ರಾಜಕೀಯ ನಾಯಕರು ತೀಕ್ಷ್ಣ ಹೇಳಿಕೆ, ವಾಗ್ದಾಳಿ, ಆರೋಪ, ಪ್ರತ್ಯಾರೋಪ ಮಾಡುತ್ತಿದ್ದಾರೆ. ಅದರಲ್ಲೂ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಮಮಂದಿರ ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್‌ ಸೇರಿ ಎಲ್ಲ ಪ್ರತಿಪಕ್ಷಳ ವಿರುದ್ಧ ವಾಗ್ಬಾಣ ಬಿಡುತ್ತಿದ್ದಾರೆ. “ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಬುಲ್ಡೋಜರ್‌ನಿಂದ ರಾಮಮಂದಿರವನ್ನು (Ram Mandir) ನೆಲಸಮಗೊಳಿಸುತ್ತಾರೆ” ಎಂದು ಶುಕ್ರವಾರ (ಮೇ 17) ವಾಗ್ದಾಳಿ ನಡೆಸಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ನರೇಂದ್ರ ಮೋದಿ ಮಾತನಾಡಿದರು. “ದೇಶದಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಅಧಿಕಾರಕ್ಕೆ ಬಂದರೆ ಅವರು ರಾಮಲಲ್ಲಾನನ್ನು ಮತ್ತೆ ಟೆಂಟ್‌ಗೆ ಕಳುಹಿಸುತ್ತಾರೆ. ಅವರು ಬುಲ್ಡೋಜರ್‌ಗಳನ್ನು ಕಳುಹಿಸಿ ರಾಮಮಂದಿರವನ್ನು ನೆಲಸಮಗೊಳಿಸುತ್ತಾರೆ. ಪೀಳಿಗೆಗಳಿಂದ ತ್ಯಾಗ ಮಾಡಿದ ಫಲವಾಗಿ, 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ನೀವು ನಮಗೆ ಮತ ನೀಡಿದ ಕಾರಣ ಇದೆಲ್ಲ ಸಾಧ್ಯವಾಗಿದೆ. ಆದರೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ರಾಮಮಂದಿರವನ್ನು ನೆಲಸಮಗೊಳಿಸುತ್ತದೆ” ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟವನ್ನು ಉಲ್ಲೇಖಿಸಿ ಮೋದಿ ಕಾಂಗ್ರೆಸ್‌ಗೆ ಕುಟುಕಿದರು. “ದೇಶಾದ್ಯಂತ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಯುವಾಗ ದೇಶವನ್ನು ವಿಭಜನೆ ಮಾಡಲಾಗುತ್ತದೆ ಎಂಬ ಮಾತು ಕೇಳಿಬಂತು. ಆಗ ಇಡೀ ದೇಶ ಅಚ್ಚರಿಗೀಡಾಯಿತು. ದೇಶವನ್ನು ವಿಭಜನೆ ಮಾಡಲಾಗುತ್ತದೆಯೇ ಎಂಬ ಆತಂಕ ಮೂಡಿತು. ಆದರೆ, ಕಾಂಗ್ರೆಸಿಗರು ದೇಶವನ್ನು ಇಬ್ಭಾಗ ಮಾಡಿದರು. ಅವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಕಾಂಗ್ರೆಸಿಗರಿಗೆ ದೇಶ ಮುಖ್ಯವಲ್ಲ. ಅವರಿಗೆ ತಮ್ಮ ಕುಟುಂಬ ಮುಖ್ಯ, ಅಧಿಕಾರ ಮುಖ್ಯ” ಎಂದು ಟೀಕಿಸಿದರು.

ಬೀಗ ಜಡಿಯುತ್ತಾರೆ ಎಂದಿದ್ದ ಮೋದಿ

ಕೆಲ ದಿನಗಳ ಹಿಂದೆಯೂ ಮೋದಿ ಅವರು ರಾಮಮಂದಿರ ಹಾಗೂ ಕಾಂಗ್ರೆಸ್‌ ಬಗ್ಗೆ ಮಾತನಾಡಿದ್ದರು. “ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 400 ಕ್ಷೇತ್ರಗಳಲ್ಲಿ ಗೆಲ್ಲಿಸಿ ಎಂಬುದಾಗಿ ನಾನು ನಿಮ್ಮಲ್ಲಿ ಮನವಿ ಮಾಡಲು ಹಲವು ಕಾರಣಗಳಿವೆ. ನೀವು ಬಹುಮತ ನೀಡಿದ ಕಾರಣಕ್ಕಾಗಿಯೇ ನಾವು 370ನೇ ವಿಧಿಯನ್ನು ರದ್ದುಗೊಳಿಸಿದೆವು. ಹಾಗಾಗಿ, ಕಾಂಗ್ರೆಸ್‌ 370ನೇ ವಿಧಿಯನ್ನು ಮತ್ತೆ ಜಾರಿಗೆ ತರಬಾರದು, ಅಯೋಧ್ಯೆಯ ರಾಮಮಂದಿರಕ್ಕೆ ಬಾಬ್ರಿ ಮಸೀದಿ ಬೀಗ ಜಡಿಯಬಾರದು, ನಮ್ಮ ದೇಶದ ದ್ವೀಪಗಳನ್ನು ಬೇರೆ ದೇಶಗಳಿಗೆ ನೀಡಬಾರದು, ಒಬಿಸಿ ಮೀಸಲಾತಿಯನ್ನು ಕಿತ್ತು ಧರ್ಮದ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ನೀಡಬಾರದು ಎಂಬ ಕಾರಣಕ್ಕಾಗಿ ಬಿಜೆಪಿಗೆ ಬಹುಮತ ನೀಡಿ” ಎಂದಿದ್ದರು.

ಇದನ್ನೂ ಓದಿ: ಪಾಕ್‌ ಬಳಿ ಅಣು ಬಾಂಬ್‌ ಇದೆ, ಆದ್ರೆ, ಮೆಂಟೇನ್ ಮಾಡೋಕೂ ಅವರ ಬಳಿ ದುಡ್ಡಿಲ್ಲ ಎಂದ ಮೋದಿ; ಕಾಂಗ್ರೆಸ್‌ಗೆ ಚಾಟಿ

Continue Reading

ಪ್ರಮುಖ ಸುದ್ದಿ

Milind Kumar : ಆರ್​ಸಿಬಿಯ ಮಾಜಿ ಆಟಗಾರ ಕ್ರಿಕೆಟ್​ನಿಂದ ನಿವೃತ್ತಿ

Milind Kumar: ಹೌದು, ಭಾರತದಲ್ಲಿ ಕ್ರಿಕೆಟ್​ನಿಂದ ನಿವೃತ್ತರಾಗುವ ನನ್ನ ನಿರ್ಧಾರವನ್ನು ನಾನು ಬಿಸಿಸಿಐಗೆ ತಿಳಿಸಿದ್ದೇನೆ. ವಿರಾಟ್ ಕೊಹ್ಲಿ, ಶಿಖರ್ ಧವನ್ ಮತ್ತು ಇಶಾಂತ್ ಶರ್ಮಾ ಅವರಂತಹ ಶ್ರೇಷ್ಠ ಆಟಗಾರರೊಂದಿಗೆ ದೆಹಲಿ ಪರ ಆಡು

VISTARANEWS.COM


on

dilip Kumar
Koo

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಭಾಗವಾಗಿದ್ದ ಮಿಲಿಂದ್ ಕುಮಾರ್ (Milind Kumar) ಭಾರತೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅವರು ಈಗ ಯುಎಸ್ಎಯಲ್ಲಿ ಮೈನರ್ ಲೀಗ್ ಕ್ರಿಕೆಟ್​ನೊಂದಿಗೆ ಸಹಿ ಹಾಕಿದ್ದಾರೆ. ಅಲ್ಲಿ ಅವರು ಫಿಲಡೆಲ್ಫಿಯನ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ. ಭಾರತದ ಅಂಡರ್-19 ತಂಡದ ಮಾಜಿ ನಾಯಕ ಉನ್ಮುಕ್ತ್ ಚಾಂದ್​ ಅವರು ಭಾರತೀಯ ಕ್ರಿಕೆಟ್​ನಿಂದ ನಿವೃತ್ತರಾಗಿ ಅಮೆರಿಕಕ್ಕೆ ತೆರಳಿದ್ದರು. ಇದಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಸ್ಮಿತ್ ಪಟೇಲ್, ಹರ್ಮೀತ್ ಸಿಂಗ್ ಮತ್ತು ಸಿದ್ಧಾರ್ಥ್ ತ್ರಿವೇದಿ ಎಂಐಎಲ್​​ಸಿ ಸೇರಿದ್ದರು.

ಬಿಸಿಸಿಐ ನಿಯಮದ ಪ್ರಕಾರ, ಒಬ್ಬ ಆಟಗಾರ (ಪುರುಷ) ಭಾರತೀಯ ಕ್ರಿಕೆಟ್​ನಿಂದ ನಿವೃತ್ತರಾಗದಿದ್ದರೆ ಇತರ ಲೀಗ್​ಗಳಲ್ಲಿ ಆಡಲು ಸಾಧ್ಯವಿಲ್ಲ. “ಹೌದು, ಭಾರತದಲ್ಲಿ ಕ್ರಿಕೆಟ್​ನಿಂದ ನಿವೃತ್ತರಾಗುವ ನನ್ನ ನಿರ್ಧಾರವನ್ನು ನಾನು ಬಿಸಿಸಿಐಗೆ ತಿಳಿಸಿದ್ದೇನೆ. ವಿರಾಟ್ ಕೊಹ್ಲಿ, ಶಿಖರ್ ಧವನ್ ಮತ್ತು ಇಶಾಂತ್ ಶರ್ಮಾ ಅವರಂತಹ ಶ್ರೇಷ್ಠ ಆಟಗಾರರೊಂದಿಗೆ ದೆಹಲಿ ಪರ ಆಡುವುದನ್ನು ನಾನು ಆನಂದಿಸಿದೆ. ಇದು ಮುಂದುವರಿಯುವ ಸಮಯ ಎಂದು ಮಿಲಿಂದ್ ಕುಮಾರ್ ತಿಳಿಸಿದ್ದಾರೆ.

ರಣಜಿ ವಿವರ

2018-19ರ ರಣಜಿ ಟ್ರೋಫಿ ಋತುವಿನಲ್ಲಿ 1000 ಕ್ಕೂ ಹೆಚ್ಚು ರನ್ ಗಳಿಸಿದ್ದ ಮಿಲಿಂದ್ ಕುಮಾರ್, 2014 ರ ಐಪಿಎಲ್​​ನಲ್ಲಿ ದೆಹಲಿ ತಂಡದ ಭಾಗವಾಗಿದ್ದರು. 2019 ರ ಋತುವಿನಲ್ಲಿ ಆರ್​ಸಿಬಿಯೊಂದಿಗೆ ಇದ್ದರು. ಆದಾಗ್ಯೂ, ಆ ಎರಡು ಋತುಗಳಲ್ಲಿ ಐಪಿಎಲ್​ಗೆ ಪಾದಾರ್ಪಣೆ ಮಾಡಲು ಅವರಿಗೆ ಅವಕಾಶ ಸಿಗಲಿಲ್ಲ.

ಇದನ್ನೂ ಓದಿ: Gautam Gambhir : ಗೌತಮ್​ ಗಂಭೀರ್ ಟೀಮ್ ಇಂಡಿಯಾದ ಮುಂದಿನ ಕೋಚ್​​?

ದೇಶೀಯ ಕ್ರಿಕೆಟ್​ನಲ್ಲಿ ದೆಹಲಿ, ಸಿಕ್ಕಿಂ ಮತ್ತು ತ್ರಿಪುರಾವನ್ನು ಪ್ರತಿನಿಧಿಸಿದ ಅವರು 46.68 ಸರಾಸರಿಯಲ್ಲಿ 9 ಶತಕಗಳು ಮತ್ತು 15 ಅರ್ಧಶತಕಗಳೊಂದಿಗೆ 2988 ಪ್ರಥಮ ದರ್ಜೆ ರನ್ ಗಳಿಸಿದ್ದಾರೆ. ಅವರು 2023 ರ ಲಿಸ್ಟ್-ಎ ರನ್ಗಳನ್ನು 43.04 ಸರಾಸರಿಯಲ್ಲಿ ಮತ್ತು 1176 ಟಿ 20 ರನ್​ಗಳನ್ನು 29.40 ಸರಾಸರಿಯಲ್ಲಿ ಗಳಿಸಿದ್ದಾರೆ.

2013 ರಲ್ಲಿ ಇಂಗ್ಲೆಂಡ್ ತಂಡವನ್ನು ಅಭ್ಯಾಸ ಪಂದ್ಯದಲ್ಲಿ ಸೋಲಿಸಿದ ದೆಹಲಿ ತಂಡದ ಭಾಗವಾಗಿದ್ದರು, ಅಲ್ಲಿ ಅವರು 85 ಎಸೆತಗಳಲ್ಲಿ 78* ರನ್ ಗಳಿಸಿದ್ದರು. ಅವರು 2017ರಲ್ಲಿ ರಲ್ಲಿ ನ್ಯೂಜಿಲೆಂಡ್ ವಿರುದ್ಧ ಮಂಡಳಿಯ ಅಧ್ಯಕ್ಷರ ಇಲೆವೆನ್ ಅನ್ನು ಪ್ರತಿನಿಧಿಸಿದರು.

ಬಿಸಿಸಿಐ ಅಡಿಯಲ್ಲಿ ಕ್ರಿಕೆಟ್ ತೊರೆದ ನಂತರ, ಮಿಲಿಂದ್ ಕುಮಾರ್ ಈಗ ಇತರ ಫ್ರ್ಯಾಂಚೈಸ್ ಲೀಗ್​ಗಳಲ್ಲಿ ಆಡಲು ಅರ್ಹರಾಗಿದ್ದಾರೆ. ಈ ವರ್ಷದ ಆರಂಭದಲ್ಲಿ ಭಾರತೀಯ ಕ್ರಿಕೆಟ್​​ನಲ್ಲಿ ವಿದಾಯ ಹೇಳಿದ ಸ್ಮಿತ್ ಪಟೇಲ್ ಅವರನ್ನು ಈ ವರ್ಷದ ಕೆರಿಬಿಯನ್ ಪ್ರೀಮಿಯರ್ ಲೀಗ್ಗೆ ಬಾರ್ಬಡೋಸ್ ಟ್ರೈಡೆಂಟ್ಸ್ ಆಯ್ಕೆ ಮಾಡಿದೆ.

Continue Reading

ವಿದೇಶ

Gopi Hinduja: ನಮ್ಮನ್ನಾಳಿದ ಬ್ರಿಟನ್‌ನಲ್ಲಿ ಭಾರತದ ಉದ್ಯಮಿಯೇ ಅತ್ಯಂತ ಸಿರಿವಂತ; ಯಾರಿವರು?

Gopi Hinduja: ಗೋಪಿಚಂದ್‌ ಅವರ ಆಸ್ತಿಯ ಮೌಲ್ಯವು ಕಳೆದ ವರ್ಷ 35 ಶತಕೋಟಿ ಪೌಂಡ್ಸ್‌ ಇತ್ತು. ಈಗ ಅದು 37 ಶತಕೋಟಿ ಪೌಂಡ್ಸ್‌ಗೆ ಏರಿಕೆಯಾಗಿದೆ. ಸಂಡೇ ಟೈಮ್ಸ್‌ ರಿಚ್‌ ಲಿಸ್ಟ್‌ ಕಳೆದ ಹಲವು ವರ್ಷಗಳಿಂದಲೂ ಪ್ರಕಟವಾಗುತ್ತಿದೆ. ಆದರೆ, ಹಿಂದುಜಾ ಗ್ರೂಪ್, ಕಳೆದ 3 ವರ್ಷದಿಂದಲೂ ಮೊದಲ ಸ್ಥಾನದಲ್ಲಿದೆ.

VISTARANEWS.COM


on

Gopi Hinduja
Koo

ಲಂಡನ್‌: ಬ್ರಿಟಿಷರು ನಮ್ಮನ್ನು ಆಳಿದರು, ಶತಮಾನಗಳವರೆಗೆ ಭಾರತದ ಸಂಪತ್ತನ್ನು ಕೊಳ್ಳೆ ಹೊಡೆದರು ಎಂಬ ಬೇಸರವು ಪ್ರತಿ ಭಾರತೀಯನನ್ನೂ ಕಾಡುತ್ತದೆ. ಆದರೆ, ಭಾರತ ಮೂಲದ ರಿಷಿ ಸುನಕ್‌ ಅವರು ಬ್ರಿಟನ್‌ ಪ್ರಧಾನಿಯಾದರೆ, ಭಾರತವು ಆರ್ಥಿಕತೆ ಸೇರಿ ಯಾವುದೇ ವಿಷಯದಲ್ಲಿ ಹಿಂದಿಕ್ಕಿದರೆ ನಮಗೆ ಖುಷಿಯಾಗುತ್ತದೆ. ಇಂತಹ ಖುಷಿಗೆ ಮತ್ತೊಂದು ಕಾರಣ ಸಿಕ್ಕಿದೆ. ಭಾರತ ಮೂಲದ ಗೋಪಿಚಂದ್‌ ಹಿಂದುಜಾ (Gopi Hinduja) ಹಾಗೂ ಅವರ ಕುಟುಂಬವು ಬ್ರಿಟನ್‌ನ ಶ್ರೀಮಂತ (UK’s Richest) ಕುಟುಂಬ ಅಥವಾ ಉದ್ಯಮಿ ಎಂಬ ಖ್ಯಾತಿಗೆ ಭಾಜನವಾಗಿದೆ. ಅಷ್ಟೇ ಅಲ್ಲ, ಸತತ ಮೂರನೇ ವರ್ಷವೂ ಹಿಂದುಜಾ ಕುಟುಂಬವೇ ಅತ್ಯಂತ ಶ್ರೀಮಂತ ಎಂಬ ಖ್ಯಾತಿಗೆ ಪಾತ್ರವಾಗಿದೆ.

‘ಸಂಡೇ ಟೈಮ್ಸ್‌ ರಿಚ್‌ ಲಿಸ್ಟ್‌’ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಗೋಪಿಚಂದ್‌ ಹಿಂದುಜಾ ಅವರೇ ಬ್ರಿಟನ್‌ನ ಶ್ರೀಮಂತ ಉದ್ಯಮಿ ಎನಿಸಿದ್ದಾರೆ. ಇವರ ಆಸ್ತಿಯ ಒಟ್ಟು ಮೌಲ್ಯವು 37 ಶತಕೋಟಿ ಪೌಂಡ್ಸ್‌ (ಸುಮಾರು 3.9 ಲಕ್ಷ ಕೋಟಿ ರೂ.) ಇದೆ. ಬ್ರಿಟನ್‌ನವರೇ ಆದ ಸರ್‌ ಲೆನಾರ್ಡ್‌ ಬ್ಲಾವಾಟ್ನಿಕ್‌ (29 ಶತಕೋಟಿ ಪೌಂಡ್ಸ್)‌, ಡೇವಿಡ್‌, ಸೈಮನ್‌ ರುಬೇನ್‌ ಮತ್ತು ಕುಟುಂಬ (24.98 ಶತಕೋಟಿ ಪೌಂಡ್ಸ್)‌, ಸರ್‌ ಜಿಮ್‌ ರ‍್ಯಾಟ್‌ಕ್ಲಿಫ್‌ (23 ಶತಕೋಟಿ ಪೌಂಡ್ಸ್)‌ ಆಸ್ತಿಯೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ.

ಗೋಪಿಚಂದ್‌ ಹಿಂದುಜಾ ಅವರು ಭಾರತ ಮೂಲದವರಾಗಿದ್ದು, ಬ್ರಿಟನ್‌ನಲ್ಲಿ ನೆಲೆಸಿದ್ದಾರೆ. ಇವರ ತಂದೆಯೂ ಉದ್ಯಮಿಯಾಗಿದ್ದರು. ಹಿಂದುಜಾ ಗ್ರೂಪ್‌ಗೆ ಗೋಪಿಚಂದ್‌ ಹಿಂದುಜಾ ಅವರು ಸಹ ಚೇರ್ಮನ್‌ ಆಗಿದ್ದಾರೆ. ಇವರ ಆಸ್ತಿಯ ಮೌಲ್ಯವು ಕಳೆದ ವರ್ಷ 35 ಶತಕೋಟಿ ಪೌಂಡ್ಸ್‌ ಇತ್ತು. ಈಗ ಅದು 37 ಶತಕೋಟಿ ಪೌಂಡ್ಸ್‌ಗೆ ಏರಿಕೆಯಾಗಿದೆ. ಸಂಡೇ ಟೈಮ್ಸ್‌ ರಿಚ್‌ ಲಿಸ್ಟ್‌ ಕಳೆದ ಹಲವು ವರ್ಷಗಳಿಂದಲೂ ಪ್ರಕಟವಾಗುತ್ತಿದೆ. ಆದರೆ, ಹಿಂದುಜಾ ಗ್ರೂಪ್, ಕಳೆದ 3 ವರ್ಷದಿಂದಲೂ ಮೊದಲ ಸ್ಥಾನದಲ್ಲಿದೆ.

“ಗೋಪಿಚಂದ್‌ ಹಿಂದುಜಾ ಹಾಗೂ ಅವರ ಕುಟುಂಬವು ಜಗತ್ತಿನಾದ್ಯಂತ 48 ದೇಶಗಳಲ್ಲಿ ಉದ್ಯಮಗಳನ್ನು ಹೊಂದಿದೆ. ಆಟೋಮೋಟಿವ್‌, ತೈಲ, ಕೆಮಿಕಲ್‌, ಬ್ಯಾಂಕಿಂಗ್‌, ಐಟಿ, ಫೈನಾನ್ಸ್‌, ಸೈಬರ್‌ ಸೆಕ್ಯುರಿಟಿ, ಆರೋಗ್ಯ, ಮೂಲ ಸೌಕರ್ಯ ಅಭಿವೃದ್ಧಿ, ಮನರಂಜನೆ, ಮಾಧ್ಯಮ, ರಿಯಲ್‌ ಎಸ್ಟೇಟ್‌ ಸೇರಿ ಹತ್ತಾರು ಕ್ಷೇತ್ರಗಳಲ್ಲಿ ಹಿಂದುಜಾ ಗ್ರೂಪ್‌ ಪ್ರಾಬಲ್ಯ ಸಾಧಿಸಿದೆ” ಎಂದು ದಿ ಸಂಡೇ ಟೈಮ್ಸ್‌ ಬಣ್ಣಿಸಿದೆ. ಹಿಂದುಜಾ ಕುಟುಂಬಸ್ಥರು ಮುಂಬೈನಲ್ಲಿ ಸಣ್ಣದೊಂದು ಉದ್ಯಮ ಆರಂಭಿಸಿ, ಈಗ ಬ್ರಿಟನ್‌ನ ಶ್ರೀಮಂತ ಔದ್ಯಮಿಕ ಕುಟುಂಬ ಎನಿಸಿದೆ. ಇವರ ಮನೆಯು ಬ್ರಿಟನ್‌ ಅರಸ ವಾಸಿಸುವ ಬಕಿಂಗ್‌ಹ್ಯಾಮ್‌ ಪ್ಯಾಲೇಸ್‌ ಬಳಿಯೇ ಇದೆ.

ಇದನ್ನೂ ಓದಿ: Indian billionaires: ಭಾರತದಲ್ಲಿ 200 ಬಿಲಿಯನೇರ್‌ಗಳು! ಅತಿ ಶ್ರೀಮಂತರ ಸಂಖ್ಯೆಯಲ್ಲಿ ಭಾರತ ನಂ.3

Continue Reading
Advertisement
Virat Kohli
ಕ್ರೀಡೆ6 mins ago

Virat kohli : ಪಾಕಿಸ್ತಾನಕ್ಕೆ ಬರುವೆ ಎಂದು ಅಲ್ಲಿನ ಪರ್ವತಾರೋಹಿಗೆ ಭರವಸೆ ಕೊಟ್ಟಿದ್ದ ವಿರಾಟ್​ ಕೊಹ್ಲಿ! ಇಲ್ಲಿದೆ ವಿಡಿಯೊ

Narendra modi
ದೇಶ13 mins ago

Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

ಕರ್ನಾಟಕ44 mins ago

Rain News: ಮುಧೋಳದಲ್ಲಿ ಸಿಡಿಲಿಗೆ ಬಾಲಕಿ ಬಲಿ; ಚನ್ನರಾಯಪಟ್ಟಣ, ಗುಂಡ್ಲುಪೇಟೆ ಸೇರಿ ವಿವಿಧೆಡೆ ವರುಣಾರ್ಭಟ

dilip Kumar
ಪ್ರಮುಖ ಸುದ್ದಿ46 mins ago

Milind Kumar : ಆರ್​ಸಿಬಿಯ ಮಾಜಿ ಆಟಗಾರ ಕ್ರಿಕೆಟ್​ನಿಂದ ನಿವೃತ್ತಿ

Fan Code OTT Subscription Now for Jio AirFiber JioFiber Jio Mobility Customers
ದೇಶ1 hour ago

Reliance Jio: ಜಿಯೋ ಏರ್‌ಫೈಬರ್, ಜಿಯೋಫೈಬರ್, ಜಿಯೋ ಮೊಬಿಲಿಟಿ ಗ್ರಾಹಕರಿಗೆ ಫ್ಯಾನ್ ಕೋಡ್ ಒಟಿಟಿ ಸಬ್‌ಸ್ಕ್ರಿಪ್ಷನ್!

Gopi Hinduja
ವಿದೇಶ1 hour ago

Gopi Hinduja: ನಮ್ಮನ್ನಾಳಿದ ಬ್ರಿಟನ್‌ನಲ್ಲಿ ಭಾರತದ ಉದ್ಯಮಿಯೇ ಅತ್ಯಂತ ಸಿರಿವಂತ; ಯಾರಿವರು?

AC visited Gandabommanahalli Goshala and inspected
ವಿಜಯನಗರ2 hours ago

Vijayanagara News: ಗಂಡಬೊಮ್ಮನಹಳ್ಳಿಯ ಗೋಶಾಲೆಗೆ ಉಪ ವಿಭಾಗಾಧಿಕಾರಿ ಭೇಟಿ, ಪರಿಶೀಲನೆ

Application Invited for TTTI and Toyota Skill Courses from Toyota Technical Training Institute
ಕರ್ನಾಟಕ2 hours ago

Toyota: ಟೊಯೊಟಾ ಕೌಶಲ್ಯ ಕೋರ್ಸ್‌ಗೆ ಅರ್ಜಿ ಆಹ್ವಾನ; ಗ್ರಾಮೀಣ ಯುವಕರೇ ಈ ಅವಕಾಶ ಬಳಸಿಕೊಳ್ಳಿ

SSLC Exam 2024
ಕರ್ನಾಟಕ2 hours ago

SSLC 2024 Exam 2: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

ಕ್ರಿಕೆಟ್2 hours ago

Gautam Gambhir : ಗೌತಮ್​ ಗಂಭೀರ್ ಟೀಮ್ ಇಂಡಿಯಾದ ಮುಂದಿನ ಕೋಚ್​​?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ16 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ18 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌