Chandrayaan-3 moon importance and role in astrology in kannadaChandrayaan-3 : ಪುರಾಣದ ಪ್ರಕಾರ ಚಂದ್ರ ಹುಟ್ಟಿದ್ದಾದರೂ ಹೇಗೆ? ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು? - Vistara News

ಪ್ರಮುಖ ಸುದ್ದಿ

Chandrayaan-3 : ಪುರಾಣದ ಪ್ರಕಾರ ಚಂದ್ರ ಹುಟ್ಟಿದ್ದಾದರೂ ಹೇಗೆ? ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು?

ಚಂದ್ರಯಾನ-3 (Chandrayaan-3) ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ. ನಮ್ಮ ಜ್ಯೋತಿಷ್ಯ ಶಾಸ್ತ್ರ ಚಂದ್ರನ ಬಗ್ಗೆ ಏನು ಹೇಳುತ್ತದೆ? ಚಂದ್ರನ ಹುಟ್ಟು ಹೇಗೆ? ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

chandra in astrology
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತೀಯ ಬಾಹ್ಯಾಕಾಶ ಸಂಸ್ಥೆ ʻಇಸ್ರೊʼ (ISRO) ಚಂದ್ರಯಾನ ಸರಣಿಯ (moon mission) ಮೂರನೇ ಚಂದ್ರಯಾನ-3 (Chandrayaan-3) ಉಡಾವಣೆ ಇಂದು ನಡೆಯಲಿದೆ. ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ (south pole) ಹೆಜ್ಜೆಯೂರಲಿದ್ದು, ಚಂದ್ರನ ಕುರಿತು ಅಧ್ಯಯನ ನಡೆಸಲಿದೆ.

ಭಾರತೀಯರ ಪಾಲಿಗೆ ಚಂದ್ರ ಜೀವನದ ಅವಿಭಾಜ್ಯ ಅಂಗ. ʻಚಂದ ಮಾಮʼನ ಕತೆಗಳನ್ನು ಕೇಳಿಕೊಂಡೇ ಬೆಳೆದ ನಮಗೆಲ್ಲಾ ಚಂದ್ರನ ಕುರಿತು ಕುತೂಹಲ ಇದ್ದಿದ್ದೇ. ಈ ಕುತೂಹಲ ತಣಿಸುವ ಕೆಲಸವನ್ನು ಇಸ್ರೊ ಮಾಡಿಕೊಂಡು ಬಂದಿದೆ, ಮಾಡುತ್ತಲೇ ಇದೆ. ಹೀಗಾಗಿ ಇಂದಿನ ಚಂದ್ರಯಾನ-3 ಕ್ಕೆ ಸಾಕಷ್ಟು ಮಹತ್ವವಿದೆ.

ನಮ್ಮ ಜ್ಯೋತಿಷ್ಯ ಶಾಸ್ತ್ರದಲ್ಲಿ ಚಂದ್ರನಿಗೆ ಎಲ್ಲಿಲ್ಲದ ಪ್ರಾಮುಖ್ಯತೆ. ಏಕೆಂಧರೆ ಎಲ್ಲರ ಜನ್ಮ ರಾಶಿಯನ್ನು ನಿರ್ಧರಿಸುವವನು ಚಂದ್ರ. ನವಗ್ರಹಗಳಲ್ಲಿ ಚಂದ್ರನಿಗೆ ವಿಶೇಷ ಸ್ಥಾನ ನೀಡಲಾಗಿದೆ. ಪಾಶ್ಚಾತ್ಯ ಜ್ಯೋತಿಷ್ಯವು ಸೂರ್ಯ ಆಧಾರಿತವಾಗಿದೆ ಆದರೆ ಭಾರತೀಯ ಜ್ಯೋತಿಷ್ಯವು ಚಂದ್ರ ಆಧಾರಿತವಾಗಿದೆ. ಭಾರತದ ಬಹುತೇಕ ಹಬ್ಬಗಳು ಚಂದ್ರನ ಚಲನೆಯನ್ನು ಆಧರಿಸಿವೆ.

ಅತ್ಯಂತ ವೇಗವಾಗಿ ಸಂಚರಿಸುವ ಗ್ರಹ ಕೂಡ ಚಂದ್ರ. ಹೀಗಾಗಿ ಯಾವುದೇ ರಾಶಿಯಲ್ಲಿ ಕಡಿಮೆ ಅವಧಿ ಇರುವ ಗ್ರಹ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಚಂದ್ರನು ಸುಮಾರು ಎರಡೂವರೆ ದಿನಗಳಲ್ಲಿ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಂಚರಿಸುತ್ತಾನೆ. ಜಾತಕಗಳಲ್ಲಿ ಸೂರ್ಯನ ಸ್ಥಾನಕ್ಕೆ ಅತ್ಯಂತ ಹೆಚ್ಚಿನ ಪ್ರಾಮುಖ್ಯತೆ ನೀಡಿದರೆ, ನಂತರದ ಸ್ಥಾನ ಚಂದ್ರನಿಗೆ ನೀಡಲಾಗುತ್ತದೆ.

ಮಂಗಳಕರ ಗ್ರಹ ಚಂದ್ರ

ಚಂದ್ರನನ್ನು ಮಂಗಳಕರ ಗ್ರಹವೆಂದು ಪರಿಗಣಿಸಲಾಗಿದೆ. ಕಟಕ ರಾಶಿಯ ಅಧಿಪತಿ ಚಂದ್ರ. ಇದರೊಂದಿಗೆ ರೋಹಿಣಿ, ಹಸ್ತ ಮತ್ತು ಶ್ರವಣ ನಕ್ಷತ್ರದ ಅಧಿಪತಿಯೂ ಹೌದು. ಚಂದ್ರನನ್ನು ನೀರಿನ ಅಂಶದ ದೇವರು ಎಂದು ಪರಿಗಣಿಸಲಾಗುತ್ತದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಚಂದ್ರನು ಅತ್ರಿ ಋಷಿ ಮತ್ತು ತಾಯಿ ಅನುಸೂಯಾ ಅವರ ಮಗ.
ಚಂದ್ರ ಗ್ರಹದಲ್ಲಿ ಹದಿನಾರು ಗುಳಿಗಳಿವೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ವಾಯುವ್ಯ ದಿಕ್ಕಿನ ದೇವತೆ ಎಂದು ಚಂದ್ರನನ್ನು ಪರಿಗಣಿಸಲಾಗುತ್ತದೆ.

ಭೂಮಿಗೆ ಅತ್ಯಂತ ಹತ್ತಿರವಾಗಿರುವ ಗ್ರಹ ಚಂದ್ರ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಂದ್ರನು ನಮ್ಮ ಮನಸ್ಸು ಪ್ರತಿನಿಧಿಸುತ್ತಾನೆ. ಚಂದ್ರನು ನಮ್ಮ ತಾಯಿಯ ರೂಪದಲ್ಲಿ ನಮ್ಮನ್ನೆಲ್ಲಾ ಪ್ರೀತಿಯಿಂದ ಕಾಣುವ ದೇವತೆ. ಇದು ಸ್ತ್ರೀತ್ವ, ಮಾತೃತ್ವ, ಕಾಳಜಿ, ಸಹಾನುಭೂತಿ, ಪ್ರೀತಿ ಮತ್ತು ಸೂಕ್ಷ್ಮತೆಯ ಪ್ರಾತಿನಿಧ್ಯವಾಗಿದೆ.
ಚಂದ್ರನ ದಿಕ್ಕು ವಾಯುವ್ಯ, ಲೋಹ-ಬೆಳ್ಳಿ, ರತ್ನ-ಮುತ್ತು, ದಿನ-ಸೋಮವಾರ, ಬಣ್ಣ-ಬಿಳಿ, ಲಿಂಗ-ಹೆಣ್ಣು, ಸ್ನೇಹಿತರು-ಸೂರ್ಯ, ಮಂಗಳ, ಗುರು.

ಜಾತಕದಲ್ಲಿ ಚಂದ್ರನು ಧನಾತ್ಮಕ ಸ್ಥಾನದಲ್ಲಿದ್ದರೆ ಆ ವ್ಯಕ್ತಿಯು ಮಾನಸಿಕವಾಗಿ ಮತ್ತು ಭಾವನಾತ್ಮಕವಾಗಿ ಬಲಶಾಲಿಯಾಗಿರುತ್ತಾನೆ. ಜನರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿರುತ್ತಾನೆ. ಉತ್ತಮ ಏಕಾಗ್ರತೆ ಮತ್ತು ಎಲ್ಲ ರೀತಿಯ ಸಾಮರ್ಥ್ಯವನ್ನು ಹೊಂದಿರುತ್ತಾನೆ. ಜಾತಕದಲ್ಲಿ ಚಂದ್ರನು ದುರ್ಬಲ ಸ್ಥಾನದಲ್ಲಿದ್ದರೆ ವ್ಯಕ್ತಿಯು ಮಾನಸಿಕವಾಗಿ ದುರ್ಬಲವಾಗಿರುತ್ತಾನೆ. ಅಳುವುದು, ನಗುವುದು ಮಾಡುತ್ತಿರುತ್ತಾನೆ. ಜನರೊಂದಿಗೆ ವ್ಯವಹರಿಸುವಲ್ಲಿ ಎಡುವುತ್ತಿರುತ್ತಾನೆ.

ಚಂದ್ರ ಹುಟ್ಟಿದ್ದು ಹೇಗೆ?
ಚಿತ್ರಕೂಟ ಅರಣ್ಯದಲ್ಲಿ ಸಪ್ತರ್ಷಿಗಳಲ್ಲಿ ಒಬ್ಬರಾದ ಅತ್ರಿ ಮಹರ್ಷಿಗಳು ತಮ್ಮ ಧರ್ಮಪತ್ನಿ ಅನುಸೂಯಾದೇವಿಯೊಂದಿಗೆ ವಾಸವಾಗಿದ್ದರು. ಅನುಸೂಯ ಪರಮ ಪತಿವ್ರತೆ. ಅತ್ರಿ ಮುನಿಗಳ ತಪೋನುಷ್ಠಾನಗಳು ಮತ್ತು ಅನುಸೂಯಾಳ ಪರಮ ಪತಿವ್ರತವು ಎಲ್ಲ ಲೋಕವನನು ತಲೂಪಿತ್ತು. ಇಂದ್ರಾದಿ ದೇವತೆಗಳು ಎಲ್ಲಿ ಇವರಿಬ್ಬರು ತಮ್ಮ ಪುಣ್ಯದ ಪ್ರಭಾವದಿಂದ ಸ್ವರ್ಗದ ಅಧಿಪತಿಗಳಾಗುತ್ತಾರೋ ಎಂದು ಹೆದರಿ, ತ್ರಿಮೂರ್ತಿಗಳ ಹತ್ತಿರ ಹೋಗಿ ಈ ಬಗ್ಗೆ ಹೇಳಿದರು. ಅನುಸೂಯಾಳನ್ನು ಅತಿಯಾಗಿ ಪ್ರಶಂಸಿಸಿ ತ್ರಿಮೂರ್ತಿಗಳಿಗೆ ಕೋಪ ಬರುವಂತೆ ಮಾಡಿದರು. ಆಕೆಯ ವ್ರತಭಂಗ ಮಾಡದಿದ್ದರೆ ಮೂರು ಲೋಕವನ್ನೂ ಆಕ್ರಮಣಮಾಡಿಕೊಂಡು ಬಿಡುತ್ತಾಳೆ ಎಂದು ಹೆದರಿಸಿದರು.
ಹೀಗಾಗಿ ತ್ರಿಮೂರ್ತಿಗಳು ಆಕೆಯ ಪತಿವ್ರತವನ್ನು ಪರೀಕ್ಷಿಸಲು ಕಾರಣಿಕ ವೇಷ ಹಾಕಿಕೊಂಡು ಅನಸೂಯಳಿದ್ದ ಆಶ್ರಮಕ್ಕೆ ಬಂದು ಭಿಕ್ಷೆಬೇಡಿದರು. ಈ ಸಂದರ್ಭದಲ್ಲಿ ಅತ್ರಿ ಮಹರ್ಷಿಗಳು ತಪಸ್ಸಿಗೆಂದು ಹೊರ ಹೋಗಿದ್ದರು. ʼʼಸಾದ್ವೀಮಣಿಯೇ, ನಾವು ಮೂವರೂ ಇಚ್ಛಾಭೋಜನ ಮಾಡುವ ಆಸೆಯಿಂದ ಇಲ್ಲಿಗೆ ಬಂದಿದ್ದೇವೆ. ನಿಮಗೆ ನಮಗೆ ಭೋಜನ ವ್ಯವಸ್ಥೆ ಮಾಡಲು ಸಾಧ್ಯವೇʼʼ ಎಂದು ಕೇಳಲು ಅನುಸೂಯ ಸಂತೋಷದಿಂದ ಒಪ್ಪಿದಳು.
ಆಗ ಅತಿಥಿಗಳ ವೇಷದಲ್ಲಿದ್ದ ತ್ರಿಮೂರ್ತಿಗಳು , ʼʼನೀನು ನಗ್ನಳಾಗಿ ಬಂದು ಬಡಿಸಿದರೆ ಮಾತ್ರ ನಾವು ಭೋಜನ ಮಾಡುತ್ತೇವೆʼʼ ಎಂದು ಹೇಳಿದರು.
ಅತಿಥಿಗಳ ಈ ಅನಿರೀಕ್ಷಿತ ಅಪೇಕ್ಷೆ ಕೇಳಿ ಅನುಸೂಯಾದೇವಿಯು ಗೊಂದಲಕ್ಕೆ ಬಿದ್ದಳು. ಇವರ ಬೇಡಿಕೆಯನ್ನು ನೋಡಿದರೆ ನನ್ನ ಸತ್ವ ಪರೀಕ್ಷೆಗಾಗಿಯೇ ಬಂದವರಹಾಗೆ ಕಾಣಿಸುತ್ತದೆ, ಇವರು ಬಹುಶಃ ಅವತಾರ ಪುರುಷರೇ ಇರಬೇಕೆಂದುಕೊಂಡು, “ನಿಮ್ಮ ಇಚ್ಛೆಯಂತೆಯೇ ಊಟಕ್ಕೆ ಬಡಿಸುತ್ತೇನೆʼʼ ಎಂದು ಹೇಳಿ ಪಾಕ ಶಾಲೆಗೆ ಹೋದಳು. ಭೋಜನಕ್ಕೆ ತಯಾರು ಮಾಡಿದ ಬಗೆ ಬಗೆಯ ಪದಾರ್ಥಗಳನ್ನು ತೆಗದುಕೊಂಡ ಅನುಸೂಯ ಪತಿದೇವರ ಪ್ರಾರ್ಥನೆ ಮಾಡಿ; ʻʻನನಗೆ ಪರೀಕ್ಷೆಯ ಸಮಯ ಬಂದಿದೆ, ನಿಮ್ಮ ಸಹಕಾರವಿರಲಿʼʼ ಎಂದು ಕೋರಿಕೊಂಡು, ಅನ್ನಪೂರ್ಣೆಶ್ವರಿಯನ್ನು ಪ್ರಾರ್ಥಸಿ ,ನಗ್ನಳಾಗಿ ಬಡಿಸಳು ಹೋದಳು.
ಆಗ ಆಕೆಯ ಪತಿವ್ರತದ ಪ್ರಭಾವದಿಂದಾಗಿ ತ್ರಿಮೂರ್ತಿಗಳೂ ಶಿಶುಗಳಾಗಿ ಪರಿವರ್ತನೆಗೊಂಡಿದ್ದರು. ಕೂಡಲೇ ಅನುಸೂಯ ಮಾತೃಭಾವದಿಂದ ಈ ಶಿಶುಗಳನ್ನು ಎತ್ತಿಕೊಂಡು ಎದೆಹಾಲುಕುಡಿಸಿ, ತೊಟ್ಟಿಲಲ್ಲಿ ಮಲಗಿಸಿ ಜೋಗುಳ ಹಾಡಿದಳು. ಅಷ್ಟರಲ್ಲಿ ಅತ್ರಿ ಮಹರ್ಷಿಗಳು ಬಂದು ವಿಷಯವನ್ನೆಲ್ಲಾ ತಿಳಿದರು. ಅವರಿಗೆ ಶಿಶುಗಳಾಗಿರುವುದು ತ್ರಿಮೂರ್ತಿಗಳೇ ಎಂದು ತಿಳಿದು ಹೋಯಿತು. ಇಷ್ಟರಲ್ಲಿ ತ್ರಿಮೂರ್ತಿಗಳು ಪ್ರತ್ಯಕ್ಷರಾಗಿ, ಬೇಕಾದ ವರ ಕೇಳುವಂತೆ ಸೂಚಿಸಿದರು. ಆಗ ಅನುಸೂಯಾದೇವಿಯು ಈ ಮೂವರು ಶಿಶುಗಳನ್ನೂ ಬಿಟ್ಟು ಹೋಗುವಂತೆ ಕೇಳಿಕೊಳ್ಳುತ್ತಾರೆ. ಆಗ ತ್ರಿಮೂರ್ತಿಗಳು “ತಥಾಸ್ತುʼ ಎಂದು ಹೇಳಿ ತಮ್ಮ ಅಂಶದಿಂದ ಸೃಷ್ಟಿಯಾದ ಮೂವರು ಶಿಶುಗಳನ್ನು ಅಲ್ಲಿಯೇ ಬಿಟ್ಟು ಹೋಗುತ್ತಾರೆ. ಬ್ರಹ್ಮನ ಶಿಶುವಿಗೆ ಚಂದ್ರನೆಂದು, ವಿಷ್ಣುವಿನ ಶಿಶುವಿಗೆ ದತ್ತನೆಂದು, ಮಹೇಶ್ವರನ ಶಿಶುವಿಗೆ ದೂರ್ವಾಸನೆಂದು ನಾಮಕರಣ ಮಾಡಲಾಗುತ್ತದೆ. ಮುಂದೆ ತಾಯಿ ಅನುಸೂಯದೇವಿಯ ಅಪ್ಪಣೆ ಪಡೆದು ಚಂದ್ರನು ಚಂದ್ರ ಮಂಡಲಕ್ಕೆ ಹೋಗುತ್ತಾನೆ.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಭಾವಾಶ್ರಿತ ಗ್ರಹಫಲ ಏನು ಹೇಳುತ್ತದೆ?

ಶುಕ್ಲಪಕ್ಷದ ಚಂದ್ರನು ಲಗ್ನದಲ್ಲಿದ್ದರೆ, ಶುಭವೇ ಆಗುತ್ತದೆ. ಈ ಜಾತಕದವರು ಸದೃಢ ಶರೀರ ಹೊಂದಿರುತ್ತಾರೆ, ದೀರ್ಘವಾದ ಆಯುಷ್ಯ ಇವರಿಗಿರುತ್ತದೆ. ಇವರು ಬಲವಂತರು ಹಾಗೂ ನಿರ್ಭಯರಾಗಿರುತ್ತಾರೆ. ಧನಸಂಪತ್ತಿನ ಕೊರತೆ ಇವರಿಗೆ ಬಾಧಿಸುವುದಿಲ್ಲ. ಆದರೆ, ಕೃಷ್ಣಪಕ್ಷದಲ್ಲಿ ಜನಿಸಿದಾಗ, ಚಂದ್ರನು ಲಗ್ನದಲ್ಲಿದ್ದರೆ, ಇದರ ವಿರುದ್ಧ ಫಲಗಳು ಉಂಟಾಗುತ್ತವೆ.

ಚಂದ್ರನು ದ್ವಿತೀಯದಲ್ಲಿದ್ದರೆ, ವಿಷಯಸುಖದಲ್ಲಿ ಆಸಕ್ತಿ ಉಂಟಾಗುತ್ತದೆ. ಈ ಜಾತಕದವರು ಸಹಜವಾಗಿ ವಿದ್ವಾಂಸರಾಗುತ್ತಾರೆ ಹಾಗೂ ಮೃದುಭಾಷಿಯಾಗಿರುತ್ತಾರೆ. ಆದರೆ, ಅಂಗವಿಕಲತೆಯ ದೋಷದಿಂದ ಬಲಳುವ ಸಾಧ್ಯತೆ ಇರುತ್ತದೆ. ತೃತೀಯ ಭಾವದಲ್ಲಿ ಚಂದ್ರನು ಮಾತೃಸುಖವನ್ನು ಪ್ರಾಪ್ತಿಸುತ್ತದೆ. ಹಾಗೂ ಕಾಮಾಂಧರಾದ ಸೋದರರು ಇವರಿಗುತ್ತಾರೆ. ಈ ಜಾತಕದವರು ಸಮಾನ್ಯವಾಗಿ ಬಲಶಾಲಿ, ಶೌರ್ಯವಂತರು, ಮತ್ತು ಅತ್ಯಂತ ಕೃಪಣರಾಗಿರುತ್ತಾರೆ.

ಚಂದ್ರನ ಚತುರ್ಥದಲ್ಲಿ ಬಲಿಷ್ಠ. ಈ ಜಾತಕದವರು ಸದಾ ಸುಖಿಯಾಗಿರುತ್ತಾರೆ. ಇವರು ಸಾಮಾನ್ಯವಾಗಿ ಭೋಗಿಯು, ತ್ಯಾಗಿಯೂ ಆಗಿರುತ್ತಾರೆ. ಇವರಿಗೆ ಮಿತ್ರರು ಮತ್ತು ವಾಹನ ಸುಖದ ಕೊರತೆ ಇರುವುದಿಲ್ಲ. ಇವರು ಜೀವನದಲ್ಲಿ ಯಶಸ್ವಿಯಾಗಿ ಬಾಳುತ್ತಾರೆ. ಪಂಚಮಭಾವದಲ್ಲಿ ಚಂದ್ರನಿದ್ದ ಜಾತಕದವರು ಮೇಧಾವಿಯಾಗಿರುತ್ತಾರೆ. ಇವರು ಉತ್ತಮ ಸಲಹೆಯನ್ನ ನಿಡುವ ಸಾಮರ್ಥ್ಯದವರಾಗಿರುತ್ತಾರೆ. ಇವರ ನಡೆ ಮಂದಗತಿಯಲ್ಲಿರುತ್ತದೆ. ಸತ್ಪುತ್ರರನ್ನು ಪಡೆದು ಸುಖವಾಗಿರುತ್ತಾರೆ.

ಷಷ್ಟಮದಲ್ಲಿ ಚಂದ್ರನಿದ್ದರೆ ಫಲಗಳು ಸಾಮಾನ್ಯವಾಗಿ ಶುಭದಾಯಕವಾಗಿರುವುದಿಲ್ಲ. ಇವರು ಉತ್ತಮ ಬುದ್ಧಿಮಟ್ಟದವರಾಗಿರುವುದಿಲ್ಲ. ಉದರ ವ್ಯಾಧಿಯಂತಹ ಖಾಯಿಲೆಯಿಂದ ಪೀಡಿತರಾಗುತ್ತಾರೆ ಹಾಗೂ ಅಲ್ಪಾಯುವಾಗಿರುತ್ತಾರೆ.

ಚಂದ್ರನಿಗೆ 27 ಹೆಂಡತಿಯರು!
ಈ ಜ್ಯೋತಿಷ್ಯದ ಪ್ರಕಾರ ನಮ್ಮಲ್ಲಿರುವುದು 27 ನಕ್ಷತ್ರಗಳು. ಬ್ರಹ್ಮನ ಮಗ ದಕ್ಷನ ಹೆಣ್ಣುಮಕ್ಕಳು ಇವರು. ಅವರನ್ನು ಚಂದ್ರನಿಗೆ ಕೊಟ್ಟು ವಿವಾಹ ಮಾಡಿದ್ದನು. ಚಂದ್ರನು ದಿನಕ್ಕೆ ಒಬ್ಬರಂತೆ ಅಶ್ವಿನಿ ಮೊದಲಾದ ಸತಿ-ನಕ್ಷತ್ರಗಳ ಜೊತೆ ಇರುತ್ತಾನೆ. (ಅವೇ ಚಂದ್ರ ನಕ್ಷತ್ರ) ಆದರೆ ಅವಲ್ಲಿ ಕೆಲವು ನಕ್ಷತ್ರಗಳನ್ನು ಪುಲ್ಲಿಂಗದಲ್ಲಿ ಕರೆಯುವ ರೂಢಿ ಇದೆ!
ಹಿಮಾಂಶು, ಚಂದ್ರಮಾ, ಇಂದು, ಕುಮುದಬಾಂಧವ, ವಿಧು, ಸುಧಾಂಶು, ಶುಭ್ರಾಂಶು, ಓಷಧೀಶ, ತುಹಿನಕರ, ನಿಶಾಪತಿ, ಅಬ್ಜ, ಜೈವಾತೃಕ, ಸೋಮ, ಗ್ಲೌ, ಮೃಗಾಂಕ, ಕಲಾನಿಧಿ, ದ್ವಿಜರಾಜ, ಶಶಧರ, ನಕ್ಷತ್ರೇಶ, ಕ್ಷಪಾಕರ, ರಜನೀಶ, ದೋಷಾಕರ ಹೀಗೆ ಚಂದ್ರನನ್ನು ವಿವಿದ ಹೆಸರುಗಳಿಂದ ಕರೆಯಲಾಗುತ್ತದೆ.

ಚಂದ್ರನು ಸಪ್ತಮ ಭಾವದಲ್ಲಿದ್ದರೆ ಸೌಭಾಗ್ಯವಂತರಾಗಿರುತ್ತಾರೆ. ಇವರು ರೂಪವಂತರು ಹಾಗೂ ಎಲ್ಲರಿಗೆ ತ್ಯಂತ ಪ್ರೀತಿಪಾತ್ರರಾಗಿರುತ್ತಾರೆ.

ಅಷ್ಟಮದಲ್ಲಿ ಚಂದ್ರನಿದ್ದಾಗ ಅಶುಭ ಫಲಗಳು ಪ್ರಧಾನವಾಗಿರುತ್ತದೆ. ಈ ಜಾತಕದವರು ರೋಗಪೀಡಿತರಾಗುತ್ತಾರೆ ಹಾಗೂ ಅಲ್ಪಾಯುವಾಗಿರುತ್ತಾರೆ.

ಚಂದ್ರನು ನವಮದಲ್ಲಿ ಸುಖವನ್ನು ನೀಡುತ್ತಾನೆ.ಈ ಜಾತಕದವರು ಧರ್ಮಾತ್ಮರಾಗಿದ್ದು, ಉತ್ತಮ ಸಂತಾನ ಸುಖವುಳ್ಳುತ್ತಾರೆ. ದಶಮಭಾವದಲ್ಲಿ ಚಂದ್ರನಿರುವ ಜಾತಕದವರು ಜೀವನದಲ್ಲಿ ಯಶಸ್ವಿಯಾಗುತ್ತಾರೆ. ಸತ್ಕರ್ಮನಿರತರಾಗಿದ್ದು, ಸಜ್ಜನರಿಗೆ ಸಹಾಯ ಮಾಡುವ ಮನೋಭಾವ ಹೊಂದಿರುತ್ತಾರೆ.

ಇದನ್ನೂ ಓದಿ: ವಿಸ್ತಾರ Explainer: Chandrayaan- 3; ಚಂದ್ರಯಾನ- 3ಕ್ಕೆ ಕ್ಷಣಗಣನೆ; ದಕ್ಷಿಣ ಧ್ರುವಕ್ಕೆ ಪ್ರಥಮ ಚುಂಬನ ಸೇರಿದಂತೆ ಹಲವು ವಿಶೇಷತೆ!

ಚಂದ್ರನು ಏಕಾದಶಸ್ಥನಾಗಿದ್ದ ಜಾತಕದಲ್ಲಿ ಆಯಸ್ಸು ದೀರ್ಘವಾಗಿರುತ್ತದೆ. ಇವರು ಧನಿಕರು ಹಾಗೂ ಸಂತತಿಯನ್ನು ಹೊಂದುತ್ತಾರೆ. ಇವರ ಕಾರ್ಯಗಳಿಗೆ ಸೇವಕರನ್ನು ಹೊಂದಿರುವ ನಾಯಕರಾಗುತ್ತಾರೆ. ದ್ವಾದಶದಲ್ಲಿ ಚಂದ್ರನಿದ್ದರೆ ಆಲಸ್ಯ ಉಂಟಾಗುತ್ತದೆ. ಈ ಜಾತಕದವರು ದುಃಖಿಯಾಗಿರುತ್ತಾರೆ ಹಾಗೂ ಪರಾಭವ ಹೊಂದಿರುತ್ತಾರೆ. ಇವರು ಸಾಮನ್ಯವಾಗಿ ಸ್ನೇಹಜೀವಿಯಾಗಿರುವುದಿಲ್ಲ, ಎಲ್ಲರನ್ನೂ ದ್ವೇಷಿಸುವ ಗುಣ ಇವರಲ್ಲಿರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

Jay Shah: ದುಲೀಪ್ ಟ್ರೋಫಿ ತಂಡಗಳು ಮತ್ತು ಮಹಿಳಾ ಅಂತರ-ವಲಯ ಪಂದ್ಯಾವಳಿಗಳು ಸೇರಿದಂತೆ ತಂಡದ ಆಯ್ಕೆಯಲ್ಲಿ ರಾಷ್ಟ್ರೀಯ ಆಯ್ಕೆದಾರರ ಹೆಚ್ಚಿನ ಪಾಲ್ಗೊಳ್ಳುವಿಕೆಯ ಯೋಜನೆಗಳನ್ನು ಜಯ್ ಶಾ ಗಮಿನಿದ್ದಾರೆ. ಈ ಕ್ರಮವು ಪ್ರತಿಭೆ ಗುರುತಿಸುವಿಕೆ ಮತ್ತು ತಂಡದ ಸಂಯೋಜನೆ ಸುಗಮಗೊಳಿಸುವ ಗುರಿ ಹೊಂದಿರುವ ವಲಯ ಆಯ್ಕೆ ಸಮಿತಿಗಳಿಂದ ನಿರ್ಗಮನ ಸೂಚಿಸುತ್ತದೆ.

VISTARANEWS.COM


on

jay Shah
Koo

ನವದೆಹಲಿ: ಭಾರತದ ದೇಶೀಯ ಕ್ರಿಕೆಟ್ ಭವಿಷ್ಯವನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬರುವ ಋತುವಿನಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಲು ಮುಂದಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ಅವರು ಆಟಗಾರರ ಕಲ್ಯಾಣ ಮತ್ತು ಸ್ಪರ್ಧಾತ್ಮಕ ಸಮತೋಲನಕ್ಕೆ ಒತ್ತು ನೀಡಿ ಬಿಸಿಸಿಐ ಮುಂದೆ ಪ್ರಸ್ತಾಪಗಳನ್ನು ಮಂಡಿಸಿದ್ದಾರೆ. ಹೀಗಾಗಿ ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳು ಆಗಲಿವೆ.

ದಿನದಿಂದ ದಿನಕ್ಕೆ ಪಂದ್ಯಗಳ ಹೆಚ್ಚಳದ ಬಗ್ಗೆ ಬಗ್ಗೆ ಶಾರ್ದೂಲ್ ಠಾಕೂರ್ ಅವರಂತಹ ಆಟಗಾರರು ಎತ್ತಿರುವ ಕಳವಳಗಳನ್ನು ಪರಿಹರಿಸಲು, ರಣಜಿ ಟ್ರೋಫಿ ಮುಂದಿನ ವರ್ಷ ಎರಡು ಲೆಗ್ (ಚರಣಗಳನ್ನು) ಹೊಂದಿರಲಿವೆ. ಈ ಹೊಂದಾಣಿಕೆಯು ಆಟಗಾರರ ದೈಹಿಕ ಮತ್ತು ಮಾನಸಿಕ ಯೋಗಕ್ಷೇಮ ರಕ್ಷಿಸುವ ಗುರಿ ಹೊಂದಿದೆ. 23 ವರ್ಷದೊಳಗಿನವರ ಸಿಕೆ ನಾಯ್ಡು ಟ್ರೋಫಿಯಲ್ಲಿ ಕಾಯಿನ್ ಟಾಸ್ ಅನ್ನು ತೆಗೆದುಹಾಕಲು ಪ್ರಸ್ತಾಪಿಸಿದ ಬಿಸಿಸಿಐ ಕಾರ್ಯದರ್ಶಿ ಸಿಕೆ ನಾಯ್ಡು ಟ್ರೋಫಿಯಲ್ಲಿ ಟಾಸ್ ಅನ್ನು ಇನ್ನು ಮುಂದೆ ಘೋಷಿಸಲಿಲ್ಲ. ಪ್ರವಾಸಿ ತಂಡಗಳು ತಂಡಗಳು ಬ್ಯಾಟಿಂಗ್ ಅಥವಾ ಬೌಲಿಂಗ್ ಅನ್ನು ಆಯ್ಕೆ ಮಾಡಬಹುದು. ಪಂದ್ಯದ ಸಮತೋಲನಕ್ಕಾಗಿ ಪರಿಷ್ಕೃತ ಅಂಕಗಳ ವ್ಯವಸ್ಥೆಯನ್ನು ಜಾರಿ ಮಾಡಲಾಗುತ್ತದೆ. ಯಶಸ್ವಿಯಾದರೆ ಈ ಬದಲಾವಣೆಗಳು ಭವಿಷ್ಯದಲ್ಲಿ ದೊಡ್ಡ ಹಂತದ ಸ್ಪರ್ಧೆಗಳಿಗೆ ವಿಸ್ತರಿಸಬಹುದು.

ದುಲೀಪ್ ಟ್ರೋಫಿ ತಂಡಗಳು ಮತ್ತು ಮಹಿಳಾ ಅಂತರ-ವಲಯ ಪಂದ್ಯಾವಳಿಗಳು ಸೇರಿದಂತೆ ತಂಡದ ಆಯ್ಕೆಯಲ್ಲಿ ರಾಷ್ಟ್ರೀಯ ಆಯ್ಕೆದಾರರ ಹೆಚ್ಚಿನ ಪಾಲ್ಗೊಳ್ಳುವಿಕೆಯ ಯೋಜನೆಗಳನ್ನು ಜಯ್ ಶಾ ಗಮಿನಿದ್ದಾರೆ. ಈ ಕ್ರಮವು ಪ್ರತಿಭೆ ಗುರುತಿಸುವಿಕೆ ಮತ್ತು ತಂಡದ ಸಂಯೋಜನೆ ಸುಗಮಗೊಳಿಸುವ ಗುರಿ ಹೊಂದಿರುವ ವಲಯ ಆಯ್ಕೆ ಸಮಿತಿಗಳಿಂದ ನಿರ್ಗಮನ ಸೂಚಿಸುತ್ತದೆ.

ಮಳೆಯ ಸಮಸ್ಯೆಗೆ ಪರಿಹಾರ

ಜಯ್ ಶಾ ಹವಾಮಾನ ಸಂಬಂಧಿತ ಸವಾಲುಗಳನ್ನು ತಗ್ಗಿಸುವ ಯೋಜನೆಗಳನ್ನು ವಿವರಿಸಿದರು/ ವಿಶೇಷವಾಗಿ ಚಳಿಗಾಲದಲ್ಲಿ ಉತ್ತರ ಭಾರತದಲ್ಲಿ ಕ್ರಿಕೆಟ್​ ಋತು ಆರಂಭವಾಗಲಿದೆ. ಈ ಋತುವು ದುಲೀಪ್ ಟ್ರೋಫಿಯೊಂದಿಗೆ ಪ್ರಾರಂಭವಾಗುತ್ತದೆ. ನಂತರ ಇರಾನಿ ಕಪ್ ಮತ್ತು ರಣಜಿ ಟ್ರೋಫಿ ಎರಡು ಹಂತಗಳಲ್ಲಿ ನಡೆಯಲಿದೆ. ಸೂಕ್ತ ಆಟಗಾರರ ವಿಶ್ರಾಂತಿ ಮತ್ತು ಚೇತರಿಕೆಗಾಗಿ ವೈಟ್-ಬಾಲ್ ಪಂದ್ಯಾವಳಿಗಳನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು

ಈ ಸುಧಾರಣೆಗಳು ಸ್ಪರ್ಧಾತ್ಮಕ ಮತ್ತು ಆಟಗಾರ ಕೇಂದ್ರಿತ ದೇಶೀಯ ಕ್ರಿಕೆಟ್ ಪರಿಸರ ವ್ಯವಸ್ಥೆಯನ್ನು ಬೆಳೆಸುವ ಬಿಸಿಸಿಐನ ಬದ್ಧತೆ ಒತ್ತಿಹೇಳುತ್ತವೆ. ಪ್ರತಿಭೆಗಳನ್ನು ಪೋಷಿಸುವ ಮತ್ತು ಸಮಾನ ಅವಕಾಶಗಳನ್ನು ಖಾತ್ರಿಪಡಿಸುವ ದೃಷ್ಟಿಯಿಂದ ಈ ಬದಲಾವಣೆಗಳು ತಳಮಟ್ಟದಲ್ಲಿ ಭಾರತೀಯ ಕ್ರಿಕೆಟ್​​ನ ಹೊಸ ಯುಗವನ್ನು ಸೂಚಿಸುತ್ತವೆ.

Continue Reading

ಕ್ರಿಕೆಟ್

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

IPL 2024: ಪಂಜಾಬ್​​ನ ಗುರ್ನೂರ್ ಬ್ರಾರ್ ಕಳೆದ ಆವೃತ್ತಿಯ ಐಪಿಎಲ್​​ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದರು. ಐಪಿಎಲ್ 2024 ಹರಾಜಿನಲ್ಲಿ ಮಾರಾಟವಾಗಲಿಲ್ಲ. ಐಪಿಎಲ್ 2023 ರಲ್ಲಿ ಅವರು ಪಂಜಾಬ್ ಮೂಲದ ತಂಡದ ಪರವಾಗಿ ಒಂದು ಪಂದ್ಯವನ್ನು ಆಡಿದ್ದಾರೆ. ಬ್ರಾರ್ ಈವರೆಗೆ 5 ಪ್ರಥಮ ದರ್ಜೆ ಪಂದ್ಯಗಳನ್ನು ಮತ್ತು ಒಂದು ಲಿಸ್ಟ್-ಎ ಪಂದ್ಯವನ್ನು ಆಡಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ರ (IPL 2024) ಉಳಿದ ಭಾಗಕ್ಕೆ ಸುಶಾಂತ್ ಮಿಶ್ರಾ ಅಲಭ್ಯರಾಗಿರುವ ಕಾರಣ ಗುಜರಾತ್ ಟೈಟಾನ್ಸ್ ಗುರ್ನೂರ್ ಬ್ರಾರ್ ಅವರನ್ನು ಆಯ್ಕೆ ಮಾಡಿದೆ. ಐಪಿಎಲ್​ನ ಅಧಿಕೃತ ಪ್ರಕಟಣೆ ಶನಿವಾರ (ಮೇ 11) ಈ ಬೆಳವಣಿಗೆಯನ್ನು ದೃಢಪಡಿಸಿದೆ. ಆದಾಗ್ಯೂ, ಸುಶಾಂತ್ ಮಿಶ್ರಾ ಪ್ರಸ್ತುತ ನಡೆಯುತ್ತಿರುವ ಟೂರ್ನಿಯಿಂದ ಹೊರಗುಳಿಯುವ ಹಿಂದಿನ ಕಾರಣವನ್ನು ಬಿಡುಗಡೆ ಬಹಿರಂಗಪಡಿಸಿಲ್ಲ. ದೇಶೀಯ ಕ್ರಿಕೆಟ್​ನಲ್ಲಿ ಜಾರ್ಖಂಡ್ ಪರ ಆಡುವ ಎಡಗೈ ವೇಗಿ, ಐಪಿಎಲ್ 2024 ರಲ್ಲಿ ಒಂದೇ ಒಂದು ಪಂದ್ಯದಲ್ಲಿ ಆಡುವ ಅವಕಾಶ ಪಡೆದಿಲ್ಲ. ಅಂದ ಹಾಗೆ ಪ್ರಸ್ತುತ ಋತುವು ಅವರ ಮೊದಲ ಐಪಿಎಲ್ ಸೀಸನ್ ಆಗಿತ್ತು.

ಪಂಜಾಬ್​​ನ ಗುರ್ನೂರ್ ಬ್ರಾರ್ ಕಳೆದ ಆವೃತ್ತಿಯ ಐಪಿಎಲ್​​ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದರು. ಐಪಿಎಲ್ 2024 ಹರಾಜಿನಲ್ಲಿ ಮಾರಾಟವಾಗಲಿಲ್ಲ. ಐಪಿಎಲ್ 2023 ರಲ್ಲಿ ಅವರು ಪಂಜಾಬ್ ಮೂಲದ ತಂಡದ ಪರವಾಗಿ ಒಂದು ಪಂದ್ಯವನ್ನು ಆಡಿದ್ದಾರೆ. ಬ್ರಾರ್ ಈವರೆಗೆ 5 ಪ್ರಥಮ ದರ್ಜೆ ಪಂದ್ಯಗಳನ್ನು ಮತ್ತು ಒಂದು ಲಿಸ್ಟ್-ಎ ಪಂದ್ಯವನ್ನು ಆಡಿದ್ದಾರೆ.

ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಉಳಿದ ಭಾಗಕ್ಕೆ ಸುಶಾಂತ್ ಮಿಶ್ರಾ ಅವರ ಬದಲಿಯಾಗಿ ಗುಜರಾತ್ ಟೈಟಾನ್ಸ್ ವೇಗದ ಬೌಲರ್ ಗುರ್ನೂರ್ ಸಿಂಗ್ ಬ್ರಾರ್ ಅವರನ್ನು ಒಪ್ಪಂದ ಮಾಡಿಕೊಂಡಿದೆ ಎಂದು ಐಪಿಎಲ್ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: IPL 2024 : ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ತಂಡದ ನಾಯಕ ಬದಲು; ಮಾಹಿತಿ ಬಹಿರಂಗ

“ಗುರ್ನೂರ್ ದೇಶೀಯ ಕ್ರಿಕೆಟ್​​ನಲ್ಲಿ ಪಂಜಾಬ್ ತಂಡವನ್ನು ಐದು ಪ್ರಥಮ ದರ್ಜೆ ಮತ್ತು ಒಂದು ಲಿಸ್ಟ್ ಎ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ. 2023ರಲ್ಲಿ ಟಾಟಾ ಐಪಿಎಲ್​​ನಲ್ಲಿ ಪಂಜಾಬ್ ಕಿಂಗ್ಸ್ ಪರ ಏಕೈಕ ಪಂದ್ಯವನ್ನಾಡಿದ್ದರು. ಅವರು ತಮ್ಮ ಮೀಸಲು ಬೆಲೆ 50 ಲಕ್ಷ ರೂ.ಗೆ ಸಹಿ ಹಾಕುತ್ತಾರೆ” ಎಂದು ಅದು ಹೇಳಿದೆ.

ಪ್ಲೇ ಆಫ್ ಹಂತದಿಂದ ಹೊರಗುಳಿಯುವ ಸಾಧ್ಯತೆ

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ಗುಜರಾತ್ ಟೈಟಾನ್ಸ್ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಅವರು ಈ ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ. ಗುಜರಾತ್ ಮೂಲದ ತಂಡ ಇದೇ ಮೊದಲ ಬಾರಿಗೆ ಪ್ಲೇ ಆಫ್ ಹಂತದಿಂದ ಹೊರಗುಳಿಯಲಿದೆ. ಅವರು 2022 ರಲ್ಲಿ ತಮ್ಮ ಚೊಚ್ಚಲ ಋತುವಿನಲ್ಲಿ ಐಪಿಎಲ್ ಪ್ರಶಸ್ತಿ ಗೆದ್ದಿದ್ದರು. 2023 ರಲ್ಲಿ ರನ್ನರ್ ಅಪ್ ಸ್ಥಾನ ಪಡೆದುಕೊಂಡಿತ್ತು.

ಹಾರ್ದಿಕ್ ಪಾಂಡ್ಯ ನಿರ್ಗಮನದ ನಂತರ ಅವರು ಶುಬ್ಮನ್ ಗಿಲ್ ಅವರನ್ನು ಹೊಸ ನಾಯಕನಾಗಿ ನೇಮಿಸಲಾಗಿದೆ. ಅವರು ಹೆಚ್ಚು ಪರಿಣಾಮ ಬೀರಿಲ್ಲ. ಟೈಟಾನ್ಸ್ ಇನ್ನೂ ಸ್ಪರ್ಧೆಯಲ್ಲಿ ಲೆಕ್ಕಾಚಾರದ ಪ್ರಕಾರ ಜೀವಂತವಾಗಿದ್ದರೂ, ಅವರ ಅವಕಾಶಗಳು ಬಹುತೇಕ ಶೂನ್ಯವಾಗಿದೆ.

ಸದ್ಯ ಆಡಿರುವ 12 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಅವರು ತಮ್ಮ ಉಳಿದ ಎರಡು ಲೀಗ್ ಪಂದ್ಯಗಳನ್ನು ಗೆದ್ದರೂ, ಸತತ ಮೂರನೇ ಬಾರಿಗೆ ಪ್ಲೇಆಫ್ಗೆ ಪ್ರವೇಶಿಸಲು ಅವರಿಗೆ ಹಲವಾರು ಫಲಿತಾಂಶಗಳು ಬೇಕಾಗುತ್ತವೆ.

Continue Reading

ಕರ್ನಾಟಕ

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಹೊಳೆನರಸೀಪುರದ ಜೆಎಂಎಫ್‌ಸಿ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದೆ.

VISTARANEWS.COM


on

Devarajegowda
Koo

ಹಾಸನ: ಮಹಿಳೆಗೆ ಲೈಂಗಿಕ ಕಿರುಕುಳ, ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡ (Devaraje Gowda) ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಮೇ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಹೊಳೆನರಸೀಪುರದ ಜೆಎಂಎಫ್‌ಸಿ ನ್ಯಾಯಾಲಯವು ಆದೇಶ ಹೊರಡಿಸಿದೆ. ಇದರೊಂದಿಗೆ, ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ನಲ್ಲಿ (Prajwal Revanna Case) ಸುದ್ದಿಯಾಗಿದ್ದ ದೇವರಾಜೇಗೌಡ ಅವರೂ ಜೈಲುಪಾಲಾದಂತಾಗಿದೆ.

ಹಿರಿಯೂರಿನಲ್ಲಿ ವಕೀಲ ದೇವರಾಜೇಗೌಡ ಅವರನ್ನು ಮೇ 10ರಂದು ಪೊಲೀಸರು ವಶಕ್ಕೆ ಪಡೆದಿದ್ದರು. ಹೊಳೆನರಸೀಪುರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ಏ.1ರಂದು ಕೇಸ್‌ ದಾಖಲಾಗಿತ್ತು. ಹಾಗಾಗಿ, ಅವರನ್ನು ವಶಕ್ಕೆ ಪಡೆಯಲಾಗಿತ್ತು.

Prajwal Revanna Case

ಆಡಿಯೊ ವೈರಲ್‌

ಪೊಲೀಸರು ವಶಕ್ಕೆ ಪಡೆಯುವ ಮುನ್ನ ವಿಡಿಯೊದಲ್ಲಿ ಮಾತನಾಡಿದ್ದ ವಕೀಲ ದೇವರಾಜೇಗೌಡ, ನಾನು ಎಲ್ಲೂ ಕಾಣೆ ಆಗಿಲ್ಲ. ಮೂರು ದಿನ ರಜೆ ಇರುವುದರಿಂದ ದೇವಾಲಯಕ್ಕೆ ಹೊಗುತ್ತಿದ್ದೇನೆ. ಕಾಣೆ ಆಗುವ ಪರಿಸ್ಥಿತಿ ನನಗೆ ಬಂದಿಲ್ಲ. ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿದ್ದೇನೆ. ಆಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಇನ್ನು ಇದೇ ವೇಳೆ ಹಾಸನ ಅಶ್ಲೀಲ‌ ವಿಡಿಯೋ ಪ್ರಕರಣದ ಸಂಬಂಧ ಅಜ್ಞಾತ ಸ್ಥಳದಿಂದ ದೇವರಾಜೇಗೌಡ ಮೂರು ಆಡಿಯೊ ಕ್ಲಿಪ್ ಬಿಡುಗಡೆ ಮಾಡಿದ್ದರು. ಮಾಜಿ ಸಂಸದ ಶಿವರಾಮೇಗೌಡ ಜತೆ ಮಾತನಾಡಿರುವ ಎನ್ನಲಾದ ಎರಡು ಆಡಿಯೊ ತುಣುಕು ವೈರಲ್‌ ಆಗಿದ್ದವು. ಹನಿಟ್ರ್ಯಾಪ್ ಸಂಬಂಧ ಮಹಿಳೆ ಗಂಡನ ಜತೆ ಮಾತನಾಡಿದ ಒಂದು ಆಡಿಯೊ ಇದೆ. ಇನ್ನು ಡಿಕೆಶಿ ವಿಚಾರ ಶಿವರಾಮೇಗೌಡ ಜತೆ ದೇವರಾಜೇಗೌಡ ಮಾತನಾಡುತ್ತಿರುವ ಆಡಿಯೊ ಕೂಡ ಇದ್ದು, ಎಸ್‌ಐಟಿ ವಿಚಾರಣೆಯಲ್ಲಿ ಡಿಕೆಶಿ ಹೆಸರೇಳದಂತೆ ಶಿವರಾಮೇಗೌಡ ಸೂಚಿಸಿದ್ದರು.

ಕಾರ್ತಿಕ್‌, ದೇವರಾಜೇಗೌಡ ಪೆನ್‌ಡ್ರೈವ್‌ ರೂವಾರಿಗಳು

ದೇವರಾಜೇಗೌಡ ಬಂಧನದ ಬಳಿಕ ಮಾತನಾಡಿದ್ದ ಮಾಜಿ ಸಂಸದ ಶಿವರಾಮೇಗೌಡ, ಹಲವು ಆರೋಪ ಮಾಡಿದ್ದಾರೆ. “ಪೆನ್‌ಡ್ರೈವ್‌ ರಿಲೀಸ್‌ ಮಾಡಿರುವುದರ ಹಿಂದೆ ಕಾರು ಚಾಲಕ ಕಾರ್ತಿಕ್‌ ಹಾಗೂ ದೇವರಾಜೇಗೌಡ ಇದ್ದಾರೆ. ಏಟ್ರಿಯಾ ಹೋಟೆಲ್‌ನಲ್ಲಿ ಮಾತನಾಡುವಾಗ ನನ್ನ ವಿರುದ್ಧ ತನಿಖೆ ಮಾಡಬೇಕು ಅಂತಿದ್ದಾರೆ ಎಂದ. ಡಿ.ಕೆ.ಶಿವಕುಮಾರ್‌ ಹಾಗೂ ಮುಖ್ಯಮಂತ್ರಿ ಬಗ್ಗೆ ಪದೇಪದೆ ಮಾತನಾಡಬೇಡ ಎಂದೆ. ನಿನ್ನದು ನೀನು ಸರಿಮಾಡಿಕೊ. ಉಳಿದ ಉಸಾಬರಿ ನಿನಗೆ ಬೇಡ ಎಂಬುದಾಗಿ ಹೇಳಿದ್ದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Continue Reading

ಕರ್ನಾಟಕ

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ಐವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆರು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ ಐದು ಹಾಗೂ ಜೆಡಿಎಸ್‌ ಒಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದೆ.

VISTARANEWS.COM


on

Legislative Council Election
Koo

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಯಲ್ಲೂ (Legislative Council Election) ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಆರು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳನ್ನು ಬಿಜೆಪಿ (BJP) ಇಟ್ಟುಕೊಂಡರೆ, ಒಂದು ಕ್ಷೇತ್ರವನ್ನು ಜೆಡಿಎಸ್‌ಗೆ (JDS) ಬಿಟ್ಟುಕೊಟ್ಟಿದೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ ಹಾಗೂ ಬಿಜೆಪಿ ಈಗ ವಿಧಾನ ಪರಿಷತ್‌ ಚುನಾವಣೆಯಲ್ಲೂ ಒಗ್ಗೂಡಿ ಸ್ಪರ್ಧಿಸಲು ತೀರ್ಮಾನಿಸಿವೆ. ಜೂನ್‌ 3ರಂದು ಮೇಲ್ಮನೆಗೆ ಚುನಾವಣೆ ನಡೆಯಲಿದೆ.

ಬಿಜೆಪಿಯಿಂದ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಅಮರನಾಥ ಪಾಟೀಲ್, ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಡಾ. ಧನಂಜಯ ಸರ್ಜಿ, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ವೈ.ಎ. ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಇ.ಸಿ. ನಿಂಗರಾಜು ಕಣಕ್ಕಿಳಿದಿದ್ದಾರೆ. ನೈಋತ್ಯ ಶಿಕ್ಷಕರ ಕ್ಷೇತ್ರವು ಜೆಡಿಎಸ್ ಪಾಲಾಗಿದ್ದು, ಎಸ್.ಎಲ್ ಭೋಜೆಗೌಡ ಕಣಕ್ಕೆ ಇಳಿದಿದ್ದಾರೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಬಿಜೆಪಿಗೆ ನಾಲ್ಕು ಕ್ಷೇತ್ರ ಎಂದಿದ್ದ ಬಿಎಸ್‌ವೈ

ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಕುರಿತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದರು. ಬಿಜೆಪಿ ನಾಲ್ಕು ಹಾಗೂ ಜೆಡಿಎಸ್‌ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಎಂದಿದ್ದರು. ಮೈಸೂರಿನಲ್ಲಿ ಮಾತನಾಡಿದ್ದ ಅವರು, “ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಹಾಗೂ ಜೆಡಿಎಸ್‌ ನಡುವಿನ ಹೊಂದಾಣಿಕೆಯ ಮೈತ್ರಿಗೆ ಧಕ್ಕೆ ಬರುವುದಿಲ್ಲ. ಮುಂದೆಯೂ ಎರಡೂ ಪಕ್ಷಗಳ ನಡುವಿನ ಮೈತ್ರಿ ಮುಂದುವರಿಯುತ್ತದೆ. ವಿಧಾನ ಪರಿಷತ್‌ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ಪರಿಷತ್‌ನ 6 ಸ್ಥಾನಗಳ ಪೈಕಿ ಜೆಡಿಎಸ್‌ಗೆ 2 ಹಾಗೂ ನಾವು 4 ಸ್ಥಾನಗಳಿಗೆ ಸ್ಪರ್ಧಿಸುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನ ಆಗಿಲ್ಲ” ಎಂದಿದ್ದರು.

ಇದಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಭೆಯೂ ನಡೆದಿತ್ತು. ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಯಕರ ಜತೆ ವಿಜಯೇಂದ್ರ ಚರ್ಚೆ ಮಾಡಿದ್ದರು. ಈಗ ಬಿಜೆಪಿಯು ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: BS Yediyurappa: ಪ್ರಜ್ವಲ್‌ ಕೇಸ್‌ನಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಧಕ್ಕೆ? ಯಡಿಯೂರಪ್ಪ ಹೇಳಿದ್ದಿಷ್ಟು

Continue Reading
Advertisement
car catches fire
ಕ್ರೈಂ52 mins ago

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

jay Shah
ಪ್ರಮುಖ ಸುದ್ದಿ2 hours ago

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

ಬೆಂಗಳೂರು2 hours ago

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

ಬೆಂಗಳೂರು2 hours ago

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

IPL 2024
ಕ್ರಿಕೆಟ್2 hours ago

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

Devarajegowda
ಕರ್ನಾಟಕ4 hours ago

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

Murder Case
ಕರ್ನಾಟಕ4 hours ago

Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Richard Hansen
ಕರ್ನಾಟಕ4 hours ago

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Legislative Council Election
ಕರ್ನಾಟಕ4 hours ago

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

Rain News
ಮಳೆ5 hours ago

Rain News: ಮಳೆ ಆರ್ಭಟ: ಸಿಡಿಲು ಬಡಿದು ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ; ನೆಲಕಚ್ಚಿದ ಬಾಳೆ ತೋಟ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು9 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ20 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌