Channaptna By Election: ಚನ್ನಪಟ್ಟಣಕ್ಕೆ ನಾನೇ ಮೈತ್ರಿ ಅಭ್ಯರ್ಥಿ, ಎಚ್‌ಡಿಕೆ ಇದನ್ನು ಘೋಷಿಸಲಿ: ಸಿಪಿ ಯೋಗೇಶ್ವರ್‌ - Vistara News

ಪ್ರಮುಖ ಸುದ್ದಿ

Channaptna By Election: ಚನ್ನಪಟ್ಟಣಕ್ಕೆ ನಾನೇ ಮೈತ್ರಿ ಅಭ್ಯರ್ಥಿ, ಎಚ್‌ಡಿಕೆ ಇದನ್ನು ಘೋಷಿಸಲಿ: ಸಿಪಿ ಯೋಗೇಶ್ವರ್‌

Channaptna By Election: ‘ಕುಮಾರಸ್ವಾಮಿ ಅವರು ಚನ್ನಪಟ್ಟಣಕ್ಕೆ ಬಾರದೇ ಇದ್ದರೆ ನಾನು ಸೋಲನ್ನೇ ಕಾಣುತ್ತಿರಲಿಲ್ಲ. ಚನ್ನಪಟ್ಟಣದ ಜನ ನನ್ನನ್ನು ಕೈ ಬಿಡ್ತಿರಲಿಲ್ಲ. ನೀವು ಬಂದ ಮೇಲೆ ನಮ್ಮ ಸಮುದಾಯ ನಿಮ್ಮ ಕೈ ಹಿಡಿದು ಎರಡು ಬಾರಿ ಗೆಲ್ಲಿಸಿದೆ. ಹಾಗಾಗಿ ಕುಮಾರಸ್ವಾಮಿ ಅವರೇ ಬಂದು ನಮ್ಮ ಚುನಾವಣೆ ಮಾಡಬೇಕು’ ಎಂದಿದ್ದಾರೆ ಯೋಗೇಶ್ವರ್.‌

VISTARANEWS.COM


on

Channaptna By Election CP Yogeshwar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಚನ್ನಪಟ್ಟಣದಲ್ಲಿ ನಡೆಯುವ ಉಪಚುನಾವಣೆಯಲ್ಲಿ (Channaptna By Election) ನಾನೇ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿದ್ದು, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಕೂಡ ಇದನ್ನು ಅನುಮೋದಿಸಿದ್ದಾರೆ. ಅವರೇ ಅದನ್ನು ಘೋಷಿಸಬೇಕು ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ (CP Yogeshwar) ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಕಳೆದ ವಾರ ನಾನು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದೆ. ಈಗಾಗಲೇ ಕಾಂಗ್ರೆಸ್ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಹೀಗಾಗಿ ಆದಷ್ಟು ಬೇಗ ಮೈತ್ರಿ ಅಭ್ಯರ್ಥಿ ಆಯ್ಕೆ ಮಾಡಿ ಹೆಸರು ಸೂಚಿಸಿ. ಹೆಚ್‌ಡಿಕೆ ಅವರು ನನ್ನನ್ನೇ ನಿಲ್ಲುವಂತೆ ಹೇಳಿದ್ದಾರೆ. ಅದಕ್ಕೆ ಅಧಿಕೃತ ಅನುಮೋದನೆ ಅವರೇ ಕೊಡಬೇಕು. ಮೈತ್ರಿ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡಬೇಕು. ಹಾಗಾಗಿ ನೀವೇ ಬಂದು ಹೆಸರು ಘೋಷಣೆ ಮಾಡಿ ಎಂದು ಅವರನ್ನೇ ಕೇಳಿದ್ದೇನೆ ಎಂದು ಚನ್ನಪಟ್ಟಣದಲ್ಲಿ ಮಾಜಿ ಸಚಿವ ಸಿಪಿವೈ ಹೇಳಿದರು.

ಕುಮಾರಸ್ವಾಮಿ ಎನ್‌ಡಿಎ ಮೈತ್ರಿಯಿಂದ ಗೆದ್ದು ಕೇಂದ್ರ ಮಂತ್ರಿಯಾಗಿದ್ದಾರೆ. ಬಹಳ ಎತ್ತರದ ಸ್ಥಾನಕ್ಕೆ ಹೋಗಿದ್ದಾರೆ. ಕುಮಾರಸ್ವಾಮಿ ಅವರು ಚನ್ನಪಟ್ಟಣಕ್ಕೆ ಬಾರದೇ ಇದ್ದರೆ ನಾನು ಸೋಲನ್ನೇ ಕಾಣುತ್ತಿರಲಿಲ್ಲ. ಚನ್ನಪಟ್ಟಣದ ಜನ ನನ್ನನ್ನು ಕೈ ಬಿಡ್ತಿರಲಿಲ್ಲ. ನೀವು ಬಂದ ಮೇಲೆ ನಮ್ಮ ಸಮುದಾಯ ನಿಮ್ಮ ಕೈ ಹಿಡಿದು ಎರಡು ಬಾರಿ ಗೆಲ್ಲಿಸಿದೆ. ಹಾಗಾಗಿ ಕುಮಾರಸ್ವಾಮಿ ಅವರೇ ಬಂದು ನಮ್ಮ ಚುನಾವಣೆ ಮಾಡಬೇಕು. ನಾನು ಈ ಬಗ್ಗೆ ಕುಮಾರಸ್ವಾಮಿ ಅವರಲ್ಲಿ ಮನವಿ ಕೂಡಾ ಮಾಡಿದ್ದೇನೆ. ಅದಕ್ಕೆ ಅವರೂ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ತಾಲೂಕಿನ ಜನರ ಆತಂಕ, ಒತ್ತಡ ಹೆಚ್ಚಾಗ್ತಿದೆ. ಹಾಗಾಗಿ ಗೊಂದಲಕ್ಕೆ ಅವಕಾಶ ಕೊಡದೇ ಶೀಘ್ರದಲ್ಲೇ ಅಭ್ಯರ್ಥಿ ಘೋಷಣೆ ಆಗಬೇಕು. ಎಚ್‌ಡಿಕೆ ಇನ್ನೆರಡು ದಿನಗಳಲ್ಲಿ ಅಭ್ಯರ್ಥಿ ಹೆಸರು ಘೋಷಣೆ ಮಾಡುತ್ತಾರೆ ಎಂದರು ಯೋಗೇಶ್ವರ್.‌

ಮೈತ್ರಿ ಪಕ್ಷದಿಂದ ಟಿಕೆಟ್ ಸಿಗದಿದ್ದರೆ ಎಂಬ ಪ್ರಶ್ನೆಗೆ ಉತ್ತರಿಸಿದ ಯೋಗೇಶ್ವರ್, ʼಮೈತ್ರಿ ಧರ್ಮ ಪಾಲಿಸಬೇಕು ಅಂತ ಅಂದುಕೊಂಡರೆ ಯಾರೇ ಸ್ಪರ್ಧೆ ಮಾಡಿದರೂ ಸಪೋರ್ಟ್ ಮಾಡಬೇಕು. ಅದರೆ ಪ್ರಬಲ ಅಭ್ಯರ್ಥಿ ಹಾಕುವ ಅನಿವಾರ್ಯತೆ ಇದೆ. ನಾವು ಸೋಲು ಒಪ್ಪಿಕೊಳ್ಳಬಾರದು. ನನ್ನ ರಾಜಕೀಯ ಜೀವನದ ಗ್ರಾಫ್ ಯಾವತ್ತೂ ಕಡಿಮೆ ಆಗಿಲ್ಲ. ಪ್ರತಿ ಚುನಾವಣೆಯಲ್ಲೂ ಐದು ಸಾವಿರ ಮತಗಳು ಹೆಚ್ಚಾಗ್ತಿವೆ. ಜೊತೆಗೆ ಈಗ ನಾವು ಡಬಲ್ ಬ್ಯಾರೆಲ್ ಗನ್. ನಮ್ಮ ಗುರಿ ಫೇಲ್ ಆಗಲ್ಲʼ ಎಂದರು.

ಕಳೆದ ವಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಮೂರು ದಿನ ಜನಸ್ಪಂದನಾ ಕಾರ್ಯಕ್ರಮ ಮಾಡಿದ್ದಾರೆ.‌ ಇದು ಉಪಚುನಾವಣೆ ದೃಷ್ಠಿಯಲ್ಲಿ ಮಾಡಿರೋ ಸರ್ಕಾರಿ ಸಂತೆ. ಯಾವುದೇ ಗುರಿ ಇಲ್ಲದೇ, ಯೋಜನೆ ಇಲ್ಲದೇ ಮಾಡಿರೋ ಕಾರ್ಯಕ್ರಮ. ಅಧಿಕಾರಿಗಳನ್ನು ಚನ್ನಪಟ್ಟಣಕ್ಕೆ ಕರೆತಂದು ಹೆದರಿಸಿ ಜನರಿಗೆ ಆಸೆ ತೋರಿಸುವ ಕೆಲಸ. ಕಳೆದ ಒಂದು ಕಾಲು ವರ್ಷದ ಅವಧಿಯಲ್ಲಿ ಸರ್ಕಾರ ಸಾರ್ವಜನಿಕರಿಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ. ಸರ್ಕಾರ ಬಂದಾಗಿನಿಂದಲೂ ಚನ್ನಪಟ್ಟಣಕ್ಕೆ ಬಂದಿರಲಿಲ್ಲ. ಈಗ ಚನ್ನಪಟ್ಟಣ ಖಾಲಿ ಇದೆ, ಬಂದಿದ್ದೇನೆ ಅಂತ ಸುಳ್ಳು ಹೇಳ್ತಿದ್ದಾರೆ. ಜನರಿಗೆ ಮನೆ ಕೊಡ್ತೀನಿ, ಸೈಟ್ ಕೊಡ್ತೀನಿ ಅಂತ ಸುಳ್ಳು ಆಸ್ವಾಸನೆ ಕೊಡ್ತಿದ್ದಾರೆ ಎಂದರು ಯೋಗೇಶ್ವರ್.‌

ಟೌನ್ ವ್ಯಾಪ್ತಿ ಬಿಟ್ಟರೆ ಬಹುತೇಕ ತಾಲೂಕಿನ ಜನತೆಗೆ ಮನೆ ಸಮಸ್ಯೆ ಇಲ್ಲ. ಚುನಾವಣೆ ಸಮಯದಲ್ಲಿ ಮನೆ ಕೊಡುತ್ತೇವೆ ಅನ್ನೋದು ಸುಳ್ಳು. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಒನ್ ಮ್ಯಾನ್ ಶೋ ಮಾಡಿದ್ದಾರೆ. ಎಂಪಿಗೆ ಆಹ್ವಾನ ನೀಡಿಲ್ಲ, ನನಗೆ ಆಹ್ವಾನ ನೀಡಿಲ್ಲ. ಸರ್ಕಾರದ ಪ್ರೋಟೋಕಾಲ್ ಸರಿಯಾಗಿ ಫಾಲೋ ಮಾಡದೇ ಕಾರ್ಯಕ್ರಮ ಮಾಡಿದ್ದಾರೆ. ಕೇವಲ ಚುನಾವಣಾ ತಂತ್ರಕ್ಕೆ ಜನ ಸೇರಿಸಿ ಜಾತ್ರೆ ಮಾಡಿದ್ದಾರೆ ಎಂದರು ಅವರು.

ಕ್ಷೇತ್ರದಲ್ಲಿ ಡಿಕೆಶಿ ಅವರ ಕೊಡುಗೆ ಏನೂ ಇಲ್ಲ. ಚನ್ನಪಟ್ಟಣದಿಂದಲೇ ರಾಜಕೀಯ ಜೀವನ ಆರಂಭಿಸಿದ್ರೂ ಅವರ 40 ವರ್ಷದ ಅವಧಿಯಲ್ಲಿ ಅವರ ಕೊಡುಗೆ ಶೂನ್ಯ. ಕೇವಲ ಚುನಾವಣೆ ಸಂದರ್ಭದಲ್ಲಿ ಬಂದು ಜಾತ್ರೆ ಮಾಡ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದು ಮುಂದುವರೆದ್ರೆ ಆ ಕಾರ್ಯಕ್ರಮಕ್ಕೆ ಹೋಗಿ ಖಂಡಿಸುತ್ತೇವೆ. ಪ್ರೋಟೋಕಾಲ್ ಫಾಲೋ ಮಾಡದಿದ್ದರೆ ಮೈತ್ರಿ ಪಕ್ಷದ ನಾಯಕರು ತಡೆ ಮಾಡುತ್ತೇವೆ. ಮುಂದಿನ ಕಾರ್ಯಕ್ರಮಗಳಿಗೆ ಪ್ರತಿಭಟನೆ ಮಾಡ್ತೇವೆ ಎಂದರು.

ಅವರ ಸರ್ಕಾರ ಕುಸಿಯುವ ಹಂತ ತಲುಪಿದೆ. ಅವರಲ್ಲೇ ಸಾಕಷ್ಟು ಗೊಂದಲ ಇದೆ. ನೂರೆಂಟು ಹಗರಣಗಳು ಬೆಳಕಿಗೆ ಬರ್ತಿದೆ. ಮೂಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ ನೋಡಿದ್ದೇವೆ. ಉಪಚುನಾವಣೆ ಹೊತ್ತಿಗೆ ಅವರ ಸರ್ಕಾರ ಇರುತ್ತೋ, ಇರಲ್ವೋ ಗೊತ್ತಿಲ್ಲ ಎಂದು ಡಿಕೆಶಿಗೆ ಸಿ.ಪಿ.ಯೋಗೇಶ್ವರ್ ಟಾಂಗ್ ನೀಡಿದರು.

ಸರ್ಕಾರದ ಹಣದಲ್ಲಿ ಉಪಚುನಾವಣೆ ಮಾಡ್ತಿದ್ದಾರೆ. ಡಿಕೆಶಿ ಕನಕಪುರದಿಂದ ಗೆದ್ದು ರಾಮನಗರ ಉಸ್ತುವಾರಿ ತೆಗೆದುಕೊಂಡಿಲ್ಲ. ಹೋಗಿ ಬೆಂಗಳೂರು ಉಸ್ತುವಾರಿ ತೆಗೆದುಕೊಂಡಿರೋದು ಯಾಕೆ? ಈಗ ಚುನಾವಣೆ ಸಮಯದಲ್ಲಿ ಮಾತ್ರ ಚನ್ನಪಟ್ಟಣ ನೆನಪಾಗಿರೋದಾ? ಚನ್ನಪಟ್ಟಣ ಜನ ಬುದ್ಧಿವಂತರಿದ್ದಾರೆ. ಇಂತಹ ನಾಟಕಗಳಿಗೆ ನಮ್ಮ ಜನ ಉತ್ತರ ಕೊಡ್ತಾರೆ ಎಂದು ಹೇಳಿದರು.

ಇದನ್ನೂ ಓದಿ: HD Kumaraswamy: ಸಿಎಂ ಕುರ್ಚಿ ಮೇಲೆ ಟವಲ್‌ ಹಾಕಿದವರಿಂದಲೇ ಮುಡಾ ಹಗರಣ ಬಯಲು: ಎಚ್‌ಡಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Deepika Padukone: 1.92 ಲಕ್ಷ ರೂ. ಬೆಲೆಯ ʼಹುಕುಮ್‌ ಕಿ ರಾಣಿʼ ಸೀರೆಯಲ್ಲಿ ಮಿಂಚಿದ ದೀಪಿಕಾ ಪಡುಕೋಣೆ!

Deepika Padukone: ತಾಯ್ತನ ಎನ್ನುವುದು ಹೆಣ್ಣಿಗೆ ಒಂದು ಸಂಭ್ರಮ. ನಟಿ ದೀಪಿಕಾ ಪಡುಕೋಣೆ ಕೂಡ ಈಗ ಆ ಸಂಭ್ರಮದಲ್ಲಿ ತೇಲುತ್ತಿದ್ದಾರೆ. ಈಗಾಗಲೇ ತಮ್ಮ ಬೇಬಿ ಬಂಪ್ ತೋರಿಸಿ ಸಖತ್ ಸುದ್ದಿಯಲ್ಲಿರುವ ದೀಪಿಕಾ ಈಗ ರಾಧಿಕಾ ಮರ್ಚೆಂಟ್ ಮತ್ತು ಅನಂತ್ ಅಂಬಾನಿ ಅವರ ಸಂಗೀತ ಸಮಾರಂಭದಲ್ಲಿ ವಿಶೇಷವಾದ ಸೀರೆಯೊಂದನ್ನು ಧರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.ತೋರಣಿಯ ಹುಕುಮ್ ಕಿ ರಾಣಿ ಸೀರೆಯಲ್ಲಿ ಸಖತ್ ಆಗಿ ಕಂಗೊಳಿಸಿದ್ದಾರೆ. ಈ ಸೀರೆಯ ವಿಶೇಷತೆ ಏನೆಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Deepika Padukone
Koo

ಮುಂಬೈ : ಸಿನಿಮಾ ತಾರೆಯರು ಹಾಗೂ ಪ್ರಸಿದ್ಧ ಶ್ರೀಮಂತ ಕುಟುಂಬದವರು ಯಾವುದೇ ವಸ್ತುಗಳನ್ನು ಧರಿಸಿದರೂ ಅದು ಹೆಚ್ಚು ಸುದ್ದಿಯಾಗುತ್ತದೆ. ಅದರಲ್ಲೂ ಬಾಲಿವುಡ್ ನಟಿಯರು ತೊಡುವ ಸೀರೆ, ಫ್ಯಾಶನ್ ಡ್ರೆಸ್‌ಗಳು ಹೆಚ್ಚು ಜನರ ಗಮನವನ್ನು ಸೆಳೆಯುತ್ತದೆ. ಇದೀಗ ನಟಿ ದೀಪಿಕಾ ಪಡುಕೋಣೆ(Deepika Padukone )ಯವರ ಸೀರೆಯೊಂದು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ.

ತಾಯಿಯಾಗುವ ಸಂಭ್ರಮದಲ್ಲಿರುವ ನಟಿ ದೀಪಿಕಾ ಪಡುಕೋಣೆ ತನ್ನ ಬೇಬಿ ಬಂಪ್ ಅನ್ನು ತುಂಬಾ ವಿಶೇಷವಾದ ಲುಕ್‌ನಲ್ಲಿ ತೋರಿಸಲು ಪ್ರಾರಂಭಿಸಿದ್ದಾರೆ. ಹಾಗೇ ಗರ್ಭಿಣಿಯರು ತಮ್ಮ ಬೇಬಿ ಬಂಪ್‌ನಲ್ಲಿ ಯಾವ ರೀತಿ ಫ್ಯಾಷನ್ ಡ್ರೆಸ್ ಧರಿಸಬಹುದು ಎಂದು ತೋರಿಸಿಕೊಡುತ್ತಿದ್ದಾರೆ.

ಇತ್ತೀಚೆಗೆ ರಾಧಿಕಾ ಮರ್ಚೆಂಟ್ ಮತ್ತು ಅನಂತ್ ಅಂಬಾನಿ ಅವರ ಸಂಗೀತ ಸಮಾರಂಭಕ್ಕಾಗಿ ಅವರು ಧರಿಸಿದ ಸೀರೆ ಅನೇಕರನ್ನು ಆಕರ್ಷಿಸಿದೆ. ದೀಪಿಕಾ ಪಡುಕೋಣೆ ಸೊಗಸಾದ ತೋರಣಿ ಸೀರೆಯಲ್ಲಿ ಸಖತ್‌ ಆಗಿ ಕಾಣಿಸಿಕೊಂಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ನಟಿ ದೀಪಿಕಾ ಪಡುಕೋಣೆಯವರು ತೋರಣಿಯ ‘ಹುಕುಮ್‌ ಕಿ ರಾಣಿ’ ಸೀರೆಯನ್ನು ಧರಿಸಿದ್ದರು, ಇದರ ಬೆಲೆ 1.92 ಲಕ್ಷ ರೂ.ಗಳಾಗಿವೆ. ಈ ಸೀರೆ ಸಮಕಾಲೀನ ವಿನ್ಯಾಸದೊಂದಿಗೆ ಐಷಾರಾಮಿ ಮತ್ತು ಸಾಂಪ್ರದಾಯಿಕ ಸೌಂದರ್ಯವನ್ನು ಒಳಗೊಂಡಿದೆ ಎನ್ನಲಾಗಿದೆ. ನಟಿ ದೀಪಿಕಾ ಅವರು ನೇರಳೆ ಬಣ್ಣದಲ್ಲಿ ವಿನ್ಯಾಸಗೊಳಿಸಲಾದ ಸೀರೆಯನ್ನು ಧರಿಸಿದ್ದು, ಸೆರಗಿನ ಮೇಲಿನ ಫ್ರೇಮಿಂಗ್ ಅನ್ನು ಸುಚಾ ಜರ್ದೋಜ್‌ನಲ್ಲಿ ರಚಿಸಲಾಗಿದೆ. ಮತ್ತು ಕೈ ಕಸೂತಿ ಡೋರಿಯಾ ಕೂಡ ಎಲ್ಲರ ಕಣ್ಮನ ಸೆಳೆಯುವಂತಿದೆ.

ಬ್ರಾಂಡ್ ಪ್ರಕಾರ, ಇದರೊಂದಿಗೆ ಬರುವ ರವಿಕೆಯು ಸಾಂಪ್ರದಾಯಿಕ ರಜಪೂತಾನಾ ಚನಿಯಾ ಚೋಲಿಯಿಂದ ಸ್ಫೂರ್ತಿ ಪಡೆದಿದೆ. ಆದರೆ ಸುಚಾ ಜರ್ದೋಜ್ ಮತ್ತು ಶುದ್ಧ ಮೋಟಿಯಾ ಕೈಯಿಂದ ನೇಯ್ದ ಟ್ಯಾಸೆಲ್‌ಗಳಲ್ಲಿನ ಚಿಡಿ ವಿನ್ಯಾಸಗಳು ಸುಂದರವಾಗಿದೆ. ದೀಪಿಕಾ ಅವರು ಈ ಸೊಗಸಾದ ಸೀರೆಗೆ ಸರಿ ಹೊಂದುವಂತಹ ಆಭರಣಗಳನ್ನು ಧರಿಸಿದ್ದು, ಅವರ ನೋಟವನ್ನು ಮತ್ತಷ್ಟು ಹೆಚ್ಚಿಸಿದೆ. ಕಿವಿಯೋಲೆಗಳು ಮತ್ತು ಚೋಕರ್ ಸೇರಿದಂತೆ ಅವರು ಧರಿಸಿದ ಆಭರಣ ಆ ಸೀರೆಯ ವಿನ್ಯಾಸಗಳಿಗೆ ಸಖತ್‌ ಮ್ಯಾಚಿಂಗ್‌ ಆಗಿದೆ.

ಭದ್ರ ಸಂಜಲಿ ಎಂಬ ಹೆಸರಿನ ಸೀರೆಯು ತೋರಣಿ ಕ್ಲಾಸಿಕ್ಸ್‌ನ ಒಂದು ಭಾಗವಾಗಿದೆ. ಭದ್ರ ಸಂಜಲಿ ಸೀರೆಯು ಸುಂದರವಾದ ಕಸೂತಿಯಿಂದ ಅಲಂಕರಿಸಲ್ಪಟ್ಟಿದೆ. ಸಂಗೀತ ಸಮಾರಂಭದಂತಹ ಭವ್ಯವಾದ ಆಚರಣೆಗಳಿಗೆ ಇದು ಪರಿಪೂರ್ಣವಾಗಿ ಹೊಂದಿಕೊಳ್ಳುತ್ತದೆ. ಸೀರೆಯ ಮೇಲಿನ ವಿನ್ಯಾಸಗಳು ಕರಣ್ ತೋರಣಿಯವರ ವಿನ್ಯಾಸಗಳ ವಿಶಿಷ್ಟ ಲಕ್ಷಣವನ್ನು ಮತ್ತು ಕುಶಲಕರ್ಮಿಗಳ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ ಎನ್ನಲಾಗಿದೆ. ಭಾರತದ ಸಂಪ್ರದಾಯದ ಸೌಂದರ್ಯವನ್ನು ಎತ್ತಿ ತೋರಿಸುವಲ್ಲಿ ಹೆಸರುವಾಸಿಯಾದ ಕರಣ್ ತೋರಣಿ ಅವರು ಭದ್ರ ಸಂಜಲಿ ಸೀರೆಯೊಂದಿಗೆ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

ಇದನ್ನೂ ಓದಿ: ಸ್ವಾಗತಿಸಲು ಖುಷಿಯಿಂದ ಕಾಯುತ್ತಿದ್ದ ಕಪ್ಪು ವರ್ಣದ ಮಹಿಳೆಗೆ ಜೋ ಬೈಡನ್ ಅವಮಾನ; ನಾಚಿಕೆಯಾಗಬೇಕು ಅಮೆರಿಕಕ್ಕೆ!

ಆದರೆ ಈ ಸೀರೆಯನ್ನು ತಯಾರು ಮಾಡಲು ಸುಮಾರು 3400 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಂಡಿತು ಎನ್ನಲಾಗಿದೆ. 16ನೇ ಶತಮಾನದ ಹೈದರಾಬಾದ್‌ನ ಚೌ ಮೊಹಲ್ಲಾ ಅರಮನೆಯಿಂದ ಇದು ಸ್ಫೂರ್ತಿ ಪಡೆದಿದೆ.

Continue Reading

ಕರ್ನಾಟಕ

CM Siddaramaiah: ಡಿಸಿಗಳು ಮಹಾರಾಜರಲ್ಲ; ಬೀದಿಗಿಳಿದು ಡೆಂಗ್ಯು ನಿಯಂತ್ರಿಸದಿದ್ದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

CM Siddaramaiah: ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ. DC, DHO ಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಿ ಎಂದು ಸೂಚಿಸಿದರು. ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

VISTARANEWS.COM


on

CM Siddaramaiah
Koo

ಬೆಂಗಳೂರು: ಜಿಲ್ಲಾಧಿಕಾರಿಗಳಿಗೆ (District commissioners) ತಾವು ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜ್ಯದಲ್ಲಿ ಕೂಡಲೇ ಡೆಂಗ್ಯು (Dengue Fever) ನಿಯಂತ್ರಣಕ್ಕೆ ತರದಿದ್ದರೆ ಮೇಲಿನ ಅಧಿಕಾರಿಗಳ ಮೇಲೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕಠಿಣ ಎಚ್ಚರಿಕೆ ನೀಡಿದರು.

ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಮಾತ್ರವಲ್ಲ, ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ. ಜಿಲ್ಲಾಧಿಕಾರಿಗಳಿಗೆ ತಾವು ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿ ಈ ಸೂಚನೆ ನೀಡಿದರು.

ಸಮರೋಪಾದಿಯಲ್ಲಿ ಕೆಲಸ ಮಾಡಿ

ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು DC-SP-CEO ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ. ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ. DC, DHO ಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಿ ಎಂದು ಸೂಚಿಸಿದರು. ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

ರಾಜಕಾರಣಿಗಳು, ಅಧಿಕಾರಿಗಳ ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಿ ಆಗಬೇಕಿತ್ತು.‌ 40 ವರ್ಷಗಳ ಹಿಂದೆ ಅಧಿಕಾರಿಗಳು ಕೆಲಸ ನಿರ್ವಹಿಸುವ ರೀತಿಗೂ, ಇವತ್ತಿನ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ರೀತಿಗೂ ಹೋಲಿಸಿದರೆ ಕಾರ್ಯಾಂಗ ಮತ್ತು ಶಾಸಕಾಂಗ ಈಗ ಹೆಚ್ಚು ಪರಿಣಾಮಕಾರಿಯಾಗಿ, ಗುಣಾತ್ಮಕವಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದು ಗೊತ್ತಾಗುತ್ತಿದೆ. ಇದು ಬಹಳ ಬೇಸರದ ಸಂಗತಿ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ಪರಸ್ಪರ ಪೂರಕ. ಒಂದು ಇಲ್ಲದಿದ್ದರೆ ಮತ್ತೊಂದು ಇರಲು ಸಾಧ್ಯವಿಲ್ಲ. ಕರ್ನಾಟಕ ಗುಡ್ ಗೌರ್ನೆನ್ಸ್‌ನಲ್ಲಿ ಮಾದರಿ ರಾಜ್ಯವಾಗಿದೆ ಎನ್ನುವುದನ್ನು ಮರೆಯಬಾರದು. ಈ ಹೆಗ್ಗಳಿಕೆಯನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮಗಳ ಮೇಲಿದೆ ಎಂದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಿಸಲೇಬೇಕು

ಜಿಲ್ಲಾಧಿಕಾರಿಗಳು ಯಾವುದೇ ಜಿಲ್ಲೆಗೆ ಹೋಗುವ ಮೊದಲು ಆಯಾ ಜಿಲ್ಲೆಗಳ ಮಾನವ ಅಭಿವೃದ್ಧಿ ಸೂಚ್ಯಂಕಗಳ ಜೊತೆಗೆ ಜಿಲ್ಲೆಯ ಸಮಗ್ರ ಮಾಹಿತಿ ತಿಳಿದುಕೊಳ್ಳಬೇಕು. SSLC ಫಲಿತಾಂಶದಲ್ಲಿ ಕೆಲವು ಜಿಲ್ಲೆಗಳಲ್ಲಿ ಕುಸಿತ ಕಂಡಿರುವುದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಈ ಬಾರಿ ಕಾಪಿಯನ್ನು ಸಂಪೂರ್ಣ ನಿಲ್ಲಿಸಿದ್ದು ಶ್ಲಾಘನೀಯ. ಆದರೆ ಈ ಕಾರಣಕ್ಕೆ ಫಲಿತಾಂಶ ಕುಸಿತ ಆಯಿತು ಎನ್ನುವ ಸಮರ್ಥನೆ ಸರಿಯಲ್ಲ. DC, CEO, ಇಲಾಖಾ ಕಾರ್ಯದರ್ಶಿಗಳ ಜವಾಬ್ದಾರಿ ಇಲ್ಲವಾ? ಆತ್ಮಾವಲೋಕನ ಮಾಡಿಕೊಂಡು ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸಲೇಬೇಕು. DDPI, DC, CEO ಗಳು ಒಟ್ಟಿಗೇ ಕುಳಿತು ಚರ್ಚಿಸಿ ಪರಿಸ್ಥಿತಿ ಸುಧಾರಿಸಬೇಕು ಎನ್ನುವ ಸೂಚನೆ ನೀಡಿದರು

ಜನಸಂಪರ್ಕ ಸಭೆಗೆ ಅಧಿಕಾರಿಗಳ ವೈಫಲ್ಯ ಕಾರಣ

ಜನಸಂಪರ್ಕ, ಜನಸ್ಪಂದನ ಸಭೆಗಳಲ್ಲಿ 15-20 ಸಾವಿರ ಅರ್ಜಿಗಳು ಬರುತ್ತವೆ. ನೀವು ಸರಿಯಾಗಿ ಸ್ಥಳೀಯವಾಗಿ ಕೆಲಸ ಮಾಡಿದ್ದರೆ ಇಷ್ಟೊಂದು ಮಂದಿ ನನ್ನ ಬಳಿಗೆ ಏಕೆ ಬರುತ್ತಾರೆ ಎಂದು ಪ್ರಶ್ನಿಸಿದರು. DC, CEOಗಳು ಇರೋದು ಜನಸಂಪರ್ಕ ಸಭೆಗಳಿಗೆ ಬಂದ ಅರ್ಜಿಗಳನ್ನು Forward ಮಾಡಿ ಮುಚ್ಚಳಿಕೆ ಕೊಟ್ಟು ಕೈತೊಳೆದುಕೊಳ್ಳೋಕಾ ಇರೋದು ? ಪರಿಹಾರ ಕೊಡಿಸುವವರು ಯಾರು? ಇದಕ್ಕೇನಾ ನೀವು ಇರೋದು ಎಂದು ಖಾರವಾಗಿ ಪ್ರಶ್ನಿಸಿದರು. ನೀವು ಪರಿಹಾರ ಕೊಡಲಿಲ್ಲ ಅಂತ ನನ್ನ ತನಕ ಬಂದಿದ್ದಾರೆ. ಜನರ ಸಮಸ್ಯೆಗಳ ಅರ್ಜಿಗಳು ಸಕಾರಾತ್ಮಕವಾಗಿ ವಿಲೇವಾರಿ ಆಗಿಲ್ಲ, ಗುಣಾತ್ಮಕವಾಗಿ ವಿಲೇವಾರಿ ಆಗಿಲ್ಲ ಅಂದರೆ ನಿಮ್ಮ ವಿರುದ್ಧ ಕ್ರಮ ಖಚಿತ ಎಂದು ಎಚ್ಚರಿಸಿದರು

ತಹಶೀಲ್ದಾರ್, ಜಿಲ್ಲಾಧಿಕಾರಿಗಳ ಸಮೇತ ಜಿಲ್ಲಾ , ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರನ್ನು ನೇರ ಭೇಟಿ ಮಾಡುತ್ತಿಲ್ಲ. ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕಡೆಯೇ ಉಳಿಯಬೇಕು ಎನ್ನುವ ನನ್ನ ಸೂಚನೆ ಸರಿಯಾಗಿ ಪಾಲನೆ ಆಗುತ್ತಿಲ್ಲ. PDOಗಳು, VAಗಳು ಕೆಲಸ ಮಾಡುವ ಜಾಗದಲ್ಲೇ ಉಳಿಯಬೇಕು. ಈ ಬಗ್ಗೆ DC, CEO ಗಳು ಗಮನ ಹರಿಸಬೇಕು. ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು, ಕುರಿ-ಮೇಕೆಗಳ ಟೆಂಟ್ ಹಾಕಿರುವ ಸ್ಥಳಕ್ಕೇ ಹೋಗಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಬೇಕು, ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವುದು ಕಡ್ಡಾಯ. ಕುರಿ ಕಳ್ಳತನ ತಡೆಯಲು ಇದು ಅಗತ್ಯ ಎನ್ನುವ ಸ್ಪಷ್ಟ ಸೂಚನೆಗಳನ್ನು ನೀಡಿದರು.

ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತಿದೆ. ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು. ಈ ಎಲ್ಲಾ ಕೆಲಸಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎನ್ನುವ ಸೂಚನೆ ನೀಡಿದರು.

ಪ್ರಕರಣಗಳನ್ನು ಬಾಕಿ ಇಡಬೇಡಿ

ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 8234 ಪ್ರಕರಣಗಳು ಬಾಕಿ ಇವೆ. ಉಪವಿಭಾಗಾಧಿಕಾರಿಗಳ ಬಳಿ RRT (ಹಕ್ಕು ಬದಲಾವಣೆ) ಪ್ರಕರಣಗಳು 37587 ಬಾಕಿ ಇವೆ. ಇವುಗಳಲ್ಲಿ 5 ವರ್ಷಕ್ಕೂ ಮೇಲ್ಪಟ್ಟವು 7522 ಪ್ರಕರಣಗಳಿವೆ, DCಗಳ ಬಳಿ 10838 ಪ್ರಕರಣಗಳು ಬಾಕಿ ಇವೆ. 5 ವರ್ಷಕ್ಕೂ ಮೇಲ್ಪಟ್ಟವು 4207 ಪ್ರಕರಣಗಳಿವೆ. DC ಗಳೇ ಬಾಕಿ ಉಳಿಸಿಕೊಂಡರೆ ನೀವು AC ಮತ್ತು ತಹಶೀಲ್ದಾರ್‌ಗಳಿಗೆ ಏನು ಸೂಚನೆ ಕೊಡ್ತೀರಿ ಎಂದು ಖಾರವಾಗಿ ಪ್ರಶ್ನಿಸಿದರು. ಕೆಲವು DCಗಳ ಬಳಿ ಒಂದೂ ಪ್ರಕರಣಗಳೂ ಬಾಕಿ ಇಲ್ಲ. ಉಳಿದ DCಗಳಿಂದ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಸಂಪುಟದ ಎಲ್ಲ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ: CM Siddaramaiah: ಪ್ರತಿ ಠಾಣೆಗೂ ತೆರಳಿ ಪರಿಶೀಲಿಸಬೇಕು: ಪೊಲೀಸ್‌ ಮೇಲಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Continue Reading

ಪ್ರಮುಖ ಸುದ್ದಿ

Sourav Ganguly : ಸೌರವ್​ ಗಂಗೂಲಿಗೆ 52ನೇ ಜನ್ಮದಿನ; ದಾದಾನ ಅಭೂತಪೂರ್ವ ವೃತ್ತಿ ಜೀವನದ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿವರ

Sourav Ganguly: ಆಟದ ಸಮಯದಲ್ಲಿ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ್ದ ಅವರು ಬಳಿಕ ಕೊಲ್ಕೊತಾ ಕ್ರಿಕೆಟ್ ಸಂಸ್ಥೆ ಹಾಗೂ ಬಿಸಿಸಿಐ ಅಧ್ಯಕ್ಷರಾಗಿಯೂ ಅದ್ಭುತ ಕೆಲಸಗಳನ್ನು ಮಾಡಿದ್ದರು. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್​ನಲ್ಲಿ ನಿರ್ದೇಶಕರಾಗಿದ್ದಾರೆ. ಹೀಗೆ ಸುಮಾರು ಎರಡು ದಶಕಗಳ ವೃತ್ತಿಜೀವನದಲ್ಲಿ ಅಪಾರ ಸಾಧನೆ ಮಾಡಿದ್ದಾರೆ.

VISTARANEWS.COM


on

Sourav Ganguly
Koo

ನವದೆಹಲಿ: ಬಿಸಿಸಿಐ ಮಾಜಿ ಅಧ್ಯಕ್ಷ ಹಾಗೂ ಭಾರತ ಕ್ರಿಕೆಟ್ ತಂಡ ಅತ್ಯಂತ ಯಶಸ್ವಿ ನಾಯಕ ಸೌರವ್ ಗಂಗೂಲಿ (Sourav Ganguly) 52ನೇ ವರ್ಷದ ಜನುಮ ದಿನದ ಸಂಭ್ರಮದಲ್ಲಿದ್ದಾರೆ. ಅವರು ತಮ್ಮ ಸಹ ಆಟಗಾರ ರಾಹುಲ್ ದ್ರಾವಿಡ್ ಅವರಿಂದ ‘ಆಫ್ ಸೈಡ್ ದೇವರು’ ಎಂದು ಕರೆಸಿಕೊಂಡವರು. ಇಂಥ ಪ್ರಚಂಡ ಕ್ರಿಕೆಟಿಗ ಅನೇಕ ಅದ್ಭುತ ಕೊಡುಗೆಗಳನ್ನು ಕ್ರಿಕೆಟ್ ಕ್ಷೇತ್ರಕ್ಕೆ ನೀಡಿದ್ದಾರೆ ಆಟದ ಸಮಯದಲ್ಲಿ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ್ದ ಅವರು ಬಳಿಕ ಕೊಲ್ಕೊತಾ ಕ್ರಿಕೆಟ್ ಸಂಸ್ಥೆ ಹಾಗೂ ಬಿಸಿಸಿಐ ಅಧ್ಯಕ್ಷರಾಗಿಯೂ ಅದ್ಭುತ ಕೆಲಸಗಳನ್ನು ಮಾಡಿದ್ದರು. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್​ನಲ್ಲಿ ನಿರ್ದೇಶಕರಾಗಿದ್ದಾರೆ. ಹೀಗೆ ಸುಮಾರು ಎರಡು ದಶಕಗಳ ವೃತ್ತಿಜೀವನದಲ್ಲಿ ಅಪಾರ ಸಾಧನೆ ಮಾಡಿದ್ದಾರೆ.

ಗಂಗೂಲಿ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕರಾಗಿದ್ದರು. ಪ್ರತಿಭಾನ್ವಿತ ಆಟಗಾರರ ಗುಂಪಿನಿಂದ ವಿಜೇತ ತಂಡವನ್ನು ಮುನ್ನಡೆಸಿದ್ದರು ಅವರು ಇತಿಹಾಸದ ಅತ್ಯುತ್ತಮ ಏಕದಿನ ಬ್ಯಾಟರ್​ಗಳಲ್ಲಿ ಒಬ್ಬರಾಗಿದ್ದಾರೆ. ಅವರು 1996 ರಲ್ಲಿ ಲಾರ್ಡ್ಸ್​​ನಲ್ಲಿ ನಡೆದ ಚೊಚ್ಚಲ ಪಂದ್ಯದಲ್ಲಿ ಅದ್ಭುತ ಶತಕವನ್ನು ಗಳಿಸಿದ್ದರು. ಆ ವರ್ಷದ ಕೊನೆಯಲ್ಲಿ ಅವರನ್ನು ಏಕದಿನ ಕ್ರಮಾಂಕದ ಅಗ್ರಸ್ಥಾನಕ್ಕೆ ಏರಿದ್ದರು. ಸೌರವ್​ ಗಂಗೂಲಿ ಮತ್ತು ಸಚಿನ್ ತೆಂಡೂಲ್ಕರ್ ಒಟ್ಟಾಗಿ ಕ್ರಿಕೆಟ್​ ಇತಿಹಾಸದ ಅತ್ಯಂತ ಪ್ರಬಲ ಆರಂಭಿಕ ಬ್ಯಾಟರ್​ಗಳೆನಿಸಿಕೊಂಡಿದ್ದರು.

ಗಂಗೂಲಿ ಮೈದಾನದಲ್ಲಿ ಇದ್ದ ತಮ್ಮ ಸಮಯದುದ್ದಕ್ಕೂ ತಮ್ಮ ವಿಶಿಷ್ಟ ನಾಯಕತ್ವದ ಮೂಲಕ ಹೆಸರುವಾಸಿಯಾಗಿದ್ದರು. 1996 ರ ಬೇಸಿಗೆಯಲ್ಲಿ, ಅವರು ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ‘ದಾದಾ’ ಎಂಬ ಅಡ್ಡಹೆಸರನ್ನು ಗಳಿಸಿಕೊಂಡ ಅವರು ಲಾರ್ಡ್ಸ್​​ನಲ್ಲಿ ತಮ್ಮ ಮೊದಲ ಟೆಸ್ಟ್​​ನಲ್ಲಿ ಶತಕ ಗಳಿಸಿದ ನಂತರ ಸುದ್ದಿಯಾದರು. ನಂತರ ‘ಪ್ರಿನ್ಸ್ ಆಫ್ ಕೋಲ್ಕತ್ತಾ’ ಎಂಬ ಹೆಸರಿನಿಂದ ಕರೆಸಲ್ಪಟ್ಟರು. ಬಳಿಕ ಅವರು ಎರಡನೇ ಟೆಸ್ಟ್​​ ಪಂದ್ಯದಲ್ಲೂ ಶತಕ ಬಾರಿಸಿದ್ದರು. ಇತಿಹಾಸದಲ್ಲಿ ತಮ್ಮ ಮೊದಲ ಎರಡು ಟೆ್ಸ್ಟ್​ ಇನ್ನಿಂಗ್ಸ್​ಗಳಲ್ಲಿ ಶತಕ ಗಳಿಸಿದ ಮೂರನೇ ಬ್ಯಾಟರ್​​ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇದನ್ನೂ ಓದಿ: Team India : ಭಾರತ ತಂಡಕ್ಕೆ ಸಿಕ್ಕಿದ 125 ಕೋಟಿ ರೂ. ಬಹುಮಾನದಲ್ಲಿ ಯಾರಿಗೆ ಎಷ್ಟು? ಮಾಹಿತಿ ಬಹಿರಂಗ

2000ನೇ ಇಸವಿಯಲ್ಲಿ ಟೀಮ್ ಇಂಡಿಯಾ ಮ್ಯಾಚ್ ಫಿಕ್ಸಿಂಗ್ ಹಗರಣದಲ್ಲಿ ಸಿಲುಕಿಕೊಂಡಿತ್ತು. ನಂತರ ಗಂಗೂಲಿ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಯಿತು. ಅಲ್ಲಿ ಅವರು ಹೊಸ ಪ್ರತಿಭೆಗಳನ್ನು ಬೆಳೆಸಲು ಪ್ರಾರಂಭಿಸಿದರು.

ಗಂಗೂಲಿ ನಾಯಕತ್ವದಲ್ಲಿ ಭಾರತ ತಂಡ 2000ರಲ್ಲಿ ನಡೆದ ಐಸಿಸಿ ನಾಕೌಟ್ ಟ್ರೋಫಿಯಲ್ಲಿ ಮೊದಲ ಬಾರಿಗೆ ಫೈನಲ್ ತಲುಪಿತ್ತು. 2001ರಲ್ಲಿ ಗಂಗೂಲಿ ನೇತೃತ್ವದ ಭಾರತ ತಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾವನ್ನು 2-1 ಅಂತರದಿಂದ ಸೋಲಿಸಿತ್ತು. ಸ್ಟೀವ್ ವಾ ನೇತೃತ್ವದ ಆಸ್ಟ್ರೇಲಿಯಾ ತಂಡವು ಸರಣಿಯಲ್ಲಿ ಭಾರತಕ್ಕೆ ಸವಾಲು ಹಾಕಿತು. ಆದರೆ ವಿವಿಎಸ್ ಲಕ್ಷ್ಮಣ್ ಮತ್ತು ರಾಹುಲ್ ದ್ರಾವಿಡ್ ಭಾರತೀಯ ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದರು.

ಅಂಗಿ ಬಿಚ್ಚಿ ಕುಣಿದಿದ್ದರು

2002 ರಲ್ಲಿ ನಾಟ್​ವೆಸ್ಟ್​​ ಟ್ರೋಫಿ ಫೈನಲ್​​ನಲ್ಲಿ ಭಾರತವು ಇಂಗ್ಲೆಂಡ್ ವಿರುದ್ದ ಗೆದ್ದಿತ್ತು. ಭಾರತವನ್ನು ಸೋಲಿನ ದವಡೆಯಿಂದ ಯುವರಾಜ್ ಸಿಂಗ್ ಹಾಗೂ ಮೊಹಮ್ಮದ್​ ಕೈಫ್​ ಕಾಫಾಡಿದ್ದರು. ಈ ವೇಲೆ ಲಾರ್ಡ್ಸ್ ಬಾಲ್ಕನಿಯಲ್ಲಿ ತನ್ನ ಅಂಗಿ ಬಿಚ್ಚಿದ ಕುಣಿದಿದ್ದರು ಗಂಗೂಲಿ. ಅದು ಕ್ರಿಕೆಟ್ ಇತಿಹಾಸದ ಸ್ಮರಣೀಯ ವಿಷಯವಾಗಿ ದಾಖಲಾಗಿದೆ.

ಗಂಗೂಲಿ 2003 ರಲ್ಲಿ ಭಾರತವನ್ನು ವಿಶ್ವಕಪ್ ಫೈನಲ್​ ತನಕ ಮುನ್ನಡೆಸಿದ್ದರು. ಅಲ್ಲಿ ಅವರ ನೇತೃತ್ವದ ತಂಡ ಆಸ್ಟ್ರೇಲಿಯಾ ವಿರುದ್ಧ ಸೋತಿತ್ತು. 2004 ರಲ್ಲಿ, ಅವರು ಪಾಕಿಸ್ತಾನದಲ್ಲಿ ಏಕದಿನ ಮತ್ತು ಟೆಸ್ಟ್ ಸರಣಿಯ ಮುಂದಾಳತ್ವ ವಹಿಸಿದ್ದರು. ಪಾಕಿಸ್ತಾನದ ನೆಲದಲ್ಲಿ ಭಾರತದ ಮೊದಲ ಟೆಸ್ಟ್ ಸರಣಿ ಗೆಲುವು ತಂದುಕೊಟ್ಟಿದ್ದರು.

2005-06ರಲ್ಲಿ ಆಗಿನ ಕೋಚ್ ಗ್ರೆಗ್ ಚಾಪೆಲ್ ಅವರೊಂದಿಗೆ ಗಲಾಟೆ ಸುದ್ದಿಯಾಗಿತ್ತು. ಮತ್ತೊಂದೆಡೆ, ಗಂಗೂಲಿ ತಂಡಕ್ಕೆ ಮರಳಿದ್ದರು ಮತ್ತು ದಕ್ಷಿಣ ಆಫ್ರಿಕಾದ ಜೋಹಾನ್ಸ್​ಬರ್ಗ್​ನಲ್ಲಿ 50ಪ್ಲಸ್ ಸ್ಕೋರ್ ದಾಖಲಿಸಿದ್ದರು.

ಗಂಗೂಲಿ 2008ರಲ್ಲಿ ನಾಗ್ಪುರದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದರು. 2012ರಲ್ಲಿ ದೇಶೀಯ ಕ್ರಿಕೆಟ್​​ನಿಂದ ನಿವೃತ್ತರಾಗುವವರೆಗೂ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡಿದ್ದರು. ದಾದಾ ಭಾರತ ಪರ 113 ಟೆಸ್ಟ್ ಮತ್ತು 311 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ, ಎಡಗೈ ಬ್ಯಾಟ್ಸ್ಮನ್ ಎಲ್ಲಾ ಸ್ವರೂಪಗಳಲ್ಲಿ ಸೇರಿ 18,575 ರನ್ ಗಳಿಸಿದ್ದಾರೆ.

ಗಂಗೂಲಿ ಎಲ್ಲಾ ಸ್ವರೂಪಗಳಲ್ಲಿ 195 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದರು/ ಅವುಗಳಲ್ಲಿ 97 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಮಾಜಿ ನಾಯಕ ನಂತರ ಕ್ರಿಕೆಟ್ ಅಸೋಸಿಯೇಷನ್ ಆಫ್ ಬಂಗಾಳದ (ಸಿಎಬಿ) ಅಧ್ಯಕ್ಷರಾದರು ಮತ್ತು ಬಿಸಿಸಿಐನ ಮಾಜಿ ಅಧ್ಯಕ್ಷರಾಗಿದ್ದಾರೆ.

ಆಡಳಿತಾತ್ಮಕ ಬುದ್ಧಿವಂತಿಕೆ

ಭಾರತದಲ್ಲಿ ಹಗಲು-ರಾತ್ರಿ ಟೆಸ್ಟ್​ ಕ್ರಿಕೆಟ್​ ಕ ಲ್ಪನೆ ಹೊರಹೊಮ್ಮಲು ಗಂಗೂಲಿ ಪ್ರಮುಖ ಕಾರಣಗಳಲ್ಲಿ ಒಬ್ಬರು. ಅವರು ಈ ಅವಧಿಯಲ್ಲಿ ಬಿಸಿಸಿಐ ಅಧ್ಯಕ್ಷರಾಗಿದ್ದರು. 2019 ರಲ್ಲಿ ಈಡನ್ ಗಾರ್ಡನ್ಸ್​ನಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ತನ್ನ ಮೊದಲ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಆಡಿತ್ತು.

Continue Reading

ಪ್ರಮುಖ ಸುದ್ದಿ

Bus Accident : ಶಾಲಾ ಬಸ್​ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ

Bus Accident: ಪೊಲೀಸರ ಪ್ರಕಾರ, ಬಸ್ ಚಾಲಕನ ಅತಿಯಾದ ವೇಗದಿಂದಾಗಿ ಅಪಘಾತ ಸಂಭವಿಸಿದೆ. ಇದರೊಂದಿಗೆ, ಬಸ್ ತನ್ನ ಸಾಮರ್ಥ್ಯವನ್ನು ಮೀರಿ ಪ್ರಯಾಣಿಕರಿಂದ ತುಂಬಿಕೊಂಡಿತ್ತು ಎನ್ನಲಾಗಿದೆ. ಓವರ್ಲೋಡ್ ಮತ್ತು ಕಳಪೆ ರಸ್ತೆ ಪರಿಸ್ಥಿತಿಗಳು ಸಹ ಅಪಘಾತಕ್ಕೆ ಹೆಚ್ಚುವರಿ ಕಾರಣಗಳಾಗಿವೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

VISTARANEWS.COM


on

Bus Accident
Koo

ನವದೆಹಲಿ: ಹರಿಯಾಣದ ಪಂಚಕುಲ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಶಾಲಾ ಬಸ್ ಒಂದು ಪಲ್ಟಿಯಾದ ಪರಿಣಾಮ (Bus Accident ) ಹಲವಾರು ಶಾಲಾ ಮಕ್ಕಳು ಸೇರಿದಂತೆ ಕನಿಷ್ಠ 40 ಜನರು ಗಾಯಗೊಂಡಿದ್ದಾರೆ. ಪಿಂಜೋರ್ ಪಟ್ಟಣದ ನೌಲತಾ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಮಕ್ಕಳ ನಿಖರ ಸಂಖ್ಯೆಯನ್ನು ಇನ್ನೂ ಗುರುತಿಸಲಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬಸ್ ಅಪಘಾತದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಪಂಚಕುಲದ ಪಿಂಜೋರ್ ಆಸ್ಪತ್ರೆ ಮತ್ತು ಸೆಕ್ಟರ್ 6 ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ ಗಾಯಗೊಂಡ ಹಲವಾರು ಶಾಲಾ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: Pakistan: ಛೇ..ಇವನೆಂಥಾ ಪಾಪಿ ತಂದೆ! ಚಿಕಿತ್ಸೆಗೆ ಹಣ ಇಲ್ಲವೆಂದು 15 ದಿನದ ಹಸುಳೆಯ ಜೀವಂತ ಸಮಾಧಿ

ಪೊಲೀಸರ ಪ್ರಕಾರ, ಬಸ್ ಚಾಲಕನ ಅತಿಯಾದ ವೇಗದಿಂದಾಗಿ ಅಪಘಾತ ಸಂಭವಿಸಿದೆ. ಇದರೊಂದಿಗೆ, ಬಸ್ ತನ್ನ ಸಾಮರ್ಥ್ಯವನ್ನು ಮೀರಿ ಪ್ರಯಾಣಿಕರಿಂದ ತುಂಬಿಕೊಂಡಿತ್ತು ಎನ್ನಲಾಗಿದೆ. ಓವರ್​ಲೋಡ್ ಮತ್ತು ಕಳಪೆ ರಸ್ತೆ ಪರಿಸ್ಥಿತಿಗಳು ಸಹ ಅಪಘಾತಕ್ಕೆ ಹೆಚ್ಚುವರಿ ಕಾರಣಗಳಾಗಿವೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಮಾಧ್ಯಮ ವರದಿಗಳ ಪ್ರಕಾರ, ಗಂಭೀರ ಗಾಯಗೊಂಡ ಮಹಿಳೆಯರೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಿಜಿಐ ಚಂಡೀಗಢಕ್ಕೆ ಕಳುಹಿಸಲಾಗಿದೆ. ಬಸ್ ಚಾಲಕನ ಅತಿಯಾದ ವೇಗದಿಂದ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಪೊಲೀಸ್ ವರದಿಗಳು ಸೂಚಿಸುತ್ತವೆ.

ಪಂಚಕುಲದ ಕಲ್ಕಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಚೌಧರಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

Continue Reading
Advertisement
Paris Olympics 2024
ದೇಶ10 mins ago

Paris Olympics 2024: ಸರ್ಕಾರಿ, ಖಾಸಗಿ ವಲಯದ ಪಾಲುದಾರಿಕೆಯಿಂದ ಕ್ರೀಡೆಗಳ ಭವಿಷ್ಯ ನಿರ್ಧಾರ: ಪಾರ್ಥ್ ಜಿಂದಾಲ್

gold rate today
ಕರ್ನಾಟಕ14 mins ago

Gold Rate Today: ಬಂಗಾರ ಖರೀದಿಸುವ ಪ್ಲ್ಯಾನ್‌ ಇದೆಯೇ? ಚಿನ್ನದ ದರ ಹೀಗಿದೆ ನೋಡಿ

Self Harming
ಕ್ರೈಂ17 mins ago

Self Harming: ನವೋದಯ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

Karnataka weather Forecast
ಮಳೆ27 mins ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Deepika Padukone
Latest30 mins ago

Deepika Padukone: 1.92 ಲಕ್ಷ ರೂ. ಬೆಲೆಯ ʼಹುಕುಮ್‌ ಕಿ ರಾಣಿʼ ಸೀರೆಯಲ್ಲಿ ಮಿಂಚಿದ ದೀಪಿಕಾ ಪಡುಕೋಣೆ!

CM Siddaramaiah
ಕರ್ನಾಟಕ32 mins ago

CM Siddaramaiah: ಡಿಸಿಗಳು ಮಹಾರಾಜರಲ್ಲ; ಬೀದಿಗಿಳಿದು ಡೆಂಗ್ಯು ನಿಯಂತ್ರಿಸದಿದ್ದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

Sourav Ganguly
ಪ್ರಮುಖ ಸುದ್ದಿ50 mins ago

Sourav Ganguly : ಸೌರವ್​ ಗಂಗೂಲಿಗೆ 52ನೇ ಜನ್ಮದಿನ; ದಾದಾನ ಅಭೂತಪೂರ್ವ ವೃತ್ತಿ ಜೀವನದ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿವರ

Riteish Deshmukh Genelia Deshmukh Pledge To Donate Their Organ
ಬಾಲಿವುಡ್52 mins ago

Riteish Deshmukh: ಅಂಗಾಗ ದಾನ ಮಾಡುವ ಘೋಷಣೆ ಮಾಡಿದ  ರಿತೇಶ್- ಜೆನಿಲಿಯಾ ದಂಪತಿ!

Mumbai hit and run
ದೇಶ1 hour ago

Mumbai Hit And Run: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ಘಟನೆಗೂ ಮುನ್ನ ಬಾರ್‌ಗೆ ಹೋಗಿದ್ದ ಆರೋಪಿ, 18 ಸಾವಿರ ಬಿಲ್‌!

Actor Darshan Will Attend The Court Hearing From Online
ಕ್ರೈಂ1 hour ago

Actor Darshan: ಆರೋಪಿಗಳಿಗೆ ಗಂಟಲು ಮುಳ್ಳಾದ ಗುರುತು ಪತ್ತೆ ಪರೇಡ್‌, ಬೆಟ್ಟು ಮಾಡಿ ತೋರಿಸಿದ ಸಾಕ್ಷಿಗಳು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ27 mins ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

karnataka weather Forecast
ಮಳೆ17 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ20 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ20 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

ಟ್ರೆಂಡಿಂಗ್‌