CM Siddaramaiah: ಇಂದು ಮೈಸೂರಿನಲ್ಲಿ ಜನಾಂದೋಲನ ಸಮಾವೇಶ: ದೋಸ್ತಿಗಳ ವಿರುದ್ಧ ಅಬ್ಬರಿಸಲಿದೆ ಸಿದ್ದರಾಮಯ್ಯ ಪಡೆ, ʼಸಂಚುʼ ಕೃತಿ ಬಿಡುಗಡೆ - Vistara News

ಪ್ರಮುಖ ಸುದ್ದಿ

CM Siddaramaiah: ಇಂದು ಮೈಸೂರಿನಲ್ಲಿ ಜನಾಂದೋಲನ ಸಮಾವೇಶ: ದೋಸ್ತಿಗಳ ವಿರುದ್ಧ ಅಬ್ಬರಿಸಲಿದೆ ಸಿದ್ದರಾಮಯ್ಯ ಪಡೆ, ʼಸಂಚುʼ ಕೃತಿ ಬಿಡುಗಡೆ

ಸುಮಾರು 4 ಲಕ್ಷಕ್ಕೂ ಅಧಿಕ ಜನರನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ (CM Siddaramaiah) ಕೈ ಪಡೆ ಸೇರಿಸಲು ನಿರ್ಧಾರ ಮಾಡಿದ್ದು, ದೋಸ್ತಿಗಳ ವಿರುದ್ಧ ʼಸಂಚುʼ ಎಂಬ ಹೆಸರಿನ ಪುಸ್ತಕವನ್ನು ಬಿಡುಗಡೆ ಮಾಡಲೂ ಸಿದ್ಧತೆ ಮಾಡಿಕೊಂಡಿದೆ.

VISTARANEWS.COM


on

CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಜೆಪಿ-ಜೆಡಿಎಸ್‌ ನಡೆಸುತ್ತಿರುವ ಪಾದಯಾತ್ರೆಗೆ (BJP-JDS Padayatra) ಟಕ್ಕರ್‌ ನೀಡಲು ಮೈಸೂರಿನಲ್ಲಿ ಇಂದು ಆಯೋಜಿಸಲಾಗಿರುವ ಬೃಹತ್‌ ಜನಾಂದೋಲನ ಸಮಾವೇಶಕ್ಕೆ (Mysore Janandolana Samavesha) ನಗರ ಸಜ್ಜಾಗಿದೆ. ಸುಮಾರು 4 ಲಕ್ಷಕ್ಕೂ ಅಧಿಕ ಜನರನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ (CM Siddaramaiah) ಕೈ ಪಡೆ ಸೇರಿಸಲು ನಿರ್ಧಾರ ಮಾಡಿದ್ದು, ದೋಸ್ತಿಗಳ ವಿರುದ್ಧ ʼಸಂಚುʼ ಎಂಬ ಹೆಸರಿನ ಪುಸ್ತಕವನ್ನು ಬಿಡುಗಡೆ ಮಾಡಲೂ ಸಿದ್ಧತೆ ಮಾಡಿಕೊಂಡಿದೆ.

ಜನಾಂದೋಲನ ಸಮಾವೇಶದ ವೇದಿಕೆ ಮೇಲೆ ಸುಮಾರು 200 ಜನ ಕೂರಲು ವ್ಯವಸ್ಥೆ ಮಾಡಲಾಗಿದೆ. ಎಡ ಮತ್ತು ಬಲ ಭಾಗದಲ್ಲಿ ಮಾಜಿ ಶಾಸಕರು ಹಾಗೂ ಪರಿಷತ್ ಸದಸ್ಯರು ಕೂರಲು ವ್ಯವಸ್ಥೆ ಮಾಡಲಾಗಿದ್ದು, ಮಳೆ ಬಂದರೂ ಕಾರ್ಯಕ್ರಮ ಯಶಸ್ವಿಯಾಗಲು ಜರ್ಮನ್ ಪೆಂಡಾಲ್ ಅಳವಡಿಸಲಾಗಿದೆ. ʼಸಿದ್ದರಾಮೋತ್ಸವʼ ರೀತಿಯಲ್ಲಿಯೇ ಕಾರ್ಯಕ್ರಮ ಮಾಡಲಾಗುತ್ತಿದೆ.

ಜನಾಂದೋಲನ ಸಮಾವೇಶವನ್ನು ಸಿಎಂ ವೈಯಕ್ತಿಕ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಇಂದಿನ ಸಮಾವೇಶದಲ್ಲಿ 2 ಲಕ್ಷಕ್ಕೂ ಅಧಿಕ ಜನ ಸೇರಿಸಲಿದ್ದಾರೆ ಎಂದು ಭಾವಿಸಲಾಗಿದೆ. ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರದಿಂದ ಹೆಚ್ಚು ಜನ ಬರುವ ಸಾಧ್ಯತೆ ಇದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ, ಡಿಸಿಎಂ, ಸಚಿವರು ಶಾಸಕರು, ಎಂಎಲ್ಸಿಗಳು ಭಾಗವಹಿಸಲಿದ್ದಾರೆ.

ಜನಾಂದೋಲನ ಸಮಾವೇಶದ ಅಜೆಂಡಾ

ವಿಪಕ್ಷಗಳ ವಿರುದ್ಧ ದಾಖಲೆ ಸಮೇತ ಮಾತನಾಡುವುದು, ಮುಡಾದಲ್ಲಿ ಮಾಜಿ ಸಿಎಂ ಎಚ್ ಡಿ ದೇವೇಗೌಡ (HD Deve gowda) ಫ್ಯಾಮಿಲಿ ಖರೀದಿಸಿದ ಆಸ್ತಿಗಳ ಬಗ್ಗೆ ಮಾಹಿತಿ ಕೊಡುವುದು, ಎಚ್‌.ಡಿ ಕುಮಾರಸ್ವಾಮಿ (HD Kumaraswamy) ಕಾಲದಲ್ಲಿ ಆದ ನಿವೇಶನ ಹಂಚಿಕೆ, ಕುಮಾರಸ್ವಾಮಿ ವಿರುದ್ಧ ಇರೋ ಪ್ರಕರಣಗಳ ಬಗ್ಗೆ ದಾಖಲೆ ಸಮೇತ ಮಾತನಾಡುವುದು, ಮುಡಾದಲ್ಲಿ ಸಿದ್ದರಾಮಯ್ಯ ಪಾತ್ರ ಇಲ್ಲ ಅನ್ನೋದನ್ನ ಹೇಳುವುದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸುವುದು, ರಾಜ್ಯಪಾಲರು ಈ ಹಿಂದೆ ಯಾವೆಲ್ಲ ಪ್ರಕರಣಗಳಲ್ಲಿ ಮೌನ ವಹಿಸಿದ್ದಾರೆ ಅನ್ನೋದನ್ನ ಹೇಳುವುದು, ವಿರೋಧ ಪಕ್ಷಗಳ ನಾಯಕರ ಹಗರಣಗಳ ಬಗ್ಗೆ ಕಿರು ಹೊತ್ತಿಗೆ ಬಿಡುಗಡೆ ಮಾಡುವುದು ಜನಾಂದೋಲನ ಸಮಾವೇಶದ ಅಜೆಂಡಾ ಆಗಿದೆ.

ಇದೇ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ವಿರುದ್ಧ ಕಿರುಹೊತ್ತಿಗೆ ಬಿಡುಗಡೆ ಮಾಡಲಾಗುತ್ತಿದೆ. ಎರಡೂ ಪಕ್ಷಗಳು ಕುಟಿಲ ರಾಜಕಾರಣ ನಡೆಸುತ್ತಿವೆ ಎಂದು ʼಸಂಚು’ ಹೆಸರಿನಲ್ಲಿ ಪುಸ್ತಕ ಬಿಡುಗಡೆ ಮಾಡಲಾಗುತ್ತಿದ್ದು, ಇದು ಮುಡಾ ಪ್ರಕರಣದ ಸಮಗ್ರ ವಿವರ ಮತ್ತು ದಾಖಲೆಗಳನ್ನೊಳಗೊಂಡಿದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಇಬ್ಬರನ್ನೂ ಒಂದೇ ಕಲ್ಲಲ್ಲಿ ಹೊಡೆಯಲು ಬಿಜೆಪಿ ಕುಟಿಲ ಕಾರಸ್ಥಾನ ನಡೆಸಿದೆ ಎಂದು ʼಸಂಚುʼ ಕೃತಿ ರೂಪಿಸಿರುವ ಸಿಎಂ‌ ಕಾನೂನು ಸಲಹೆಗಾರ ಪೊನ್ನಣ್ಣ ಬರೆದಿದ್ದಾರೆ ಎನ್ನಲಾಗಿದೆ.

ಕಿರುಹೊತ್ತಿಗೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬೊಮ್ಮಾಯಿ, ಹಾಲಿ ಕೇಂದ್ರ ಸಚಿವ ಹೆಚ್‌ಡಿಕೆ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ಅಕ್ರಮದ ಆರೋಪಗಳ ಕುರಿತು ಉಲ್ಲೇಖ ಮಾಡಲಾಗಿದೆ ಎನ್ನಲಾಗಿದೆ.

ದೇವೇಗೌಡರ ಕುಟುಂಬವೇ ಟಾರ್ಗೆಟ್‌

ಸಮಾವೇಶದ ಉದ್ದೇಶವೇ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ಕುಟುಂಬ ಆಗಿದೆ. ದೇವೇಗೌಡರ ಕುಟುಂಬಸ್ಥರು ಮುಡಾ ಸೈಟ್ ಪಡೆದ ಬಗ್ಗೆ ಕಾಂಗ್ರೆಸಿಗರು ಫ್ಲೆಕ್ಸ್ ಹಾಕಿದ್ದಾರೆ. ನಗರದ ಹಲವು ಭಾಗದ ಸರ್ಕಲ್‌ಗಳಲ್ಲಿ ಫ್ಲೆಕ್ಸ್‌ಗಳ ಅಳವಡಿಕೆ ಮಾಡಲಾಗಿದೆ. 2023ರ ಫೆಬ್ರವರಿ ತಿಂಗಳಿನಲ್ಲಿ ಬಿಜೆಪಿ ನೀಡಿರುವ ಜಾಹೀರಾತನ್ನು ಕಾಂಗ್ರೆಸ್‌ ಬಳಸಿಕೊಂಡಿದೆ. ಕುಮಾರಸ್ವಾಮಿ ಅವರಿಗೆ ಮುಡಾದಿಂದ ಕೊಟ್ಟಿರುವ ಸೈಟ್ ಬಗ್ಗೆ, ಮಾಜಿ ಪ್ರಧಾನಿ ದೇವೇಗೌಡರ 20 ಹೆಸರು ಬರೆದು ಎಷ್ಟು ಅಳತೆಯ ನಿವೇಶನ ಮಂಜೂರಾಗಿದೆ ಎಂಬ ಮಾಹಿತಿ ಫ್ಲೆಕ್ಸ್‌ನಲ್ಲಿದೆ. ಎಚ್‌ಡಿಕೆಯವರೇ ನೀವು ಬೇರೆಯವರ ಬಗ್ಗೆ ಪ್ರಶ್ನಿಸುವ ನೈತಿಕ ಹಕ್ಕು ಉಳಿಸಿಕೊಂಡಿದ್ದೀರಾ ಎಂದು ಫ್ಲೆಕ್ಸ್‌ನಲ್ಲಿ ಪ್ರಶ್ನಿಸಲಾಗಿದೆ.

ಇದನ್ನೂ ಓದಿ: CM Siddaramaiah: ನಾಳೆ ಮೈಸೂರಿನಲ್ಲಿ ಸಿದ್ದರಾಮಯ್ಯ ಅಬ್ಬರ; ʼಜನಾಂದೋಲನ ಸಮಾವೇಶʼ ಮೂಲಕ ದೋಸ್ತಿ ಪಾದಯಾತ್ರೆಗೆ ಟಕ್ಕರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Bangalore Traffic: ಬೆಂಗಳೂರಿನ ಟ್ರಾಫಿಕ್‌ ಸಿಗ್ನಲ್‌ನಲ್ಲಿ 15 ನಿಮಿಷ ನಿಲ್ಲೋ ಪರಿಸ್ಥಿತಿ ಬರಲಿದೆ, ಎಚ್ಚರ!

Bangalore Traffic: ಲೆಕ್ಕಾಚಾರ ಗಮನಿಸಿದರೆ 2025ರಿಂದ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಮಿತಿ ಮೀರಲಿದೆ. ಬೆಂಗಳೂರಿನ 162 ಜಂಕ್ಷನ್‌ಗಳಲ್ಲಿ ಕನಿಷ್ಠ 10-11 ನಿಮಿಷ ಕಾಯುವ ಸಂಕಷ್ಟದ ಸ್ಥಿತಿ ತಲೆದೋರಲಿದೆ. ಕೆ.ಆರ್ ಸರ್ಕಲ್, ಸಿಲ್ಕ್ ಬೋರ್ಡ್, ಓಲ್ಡ್ ಏರ್‌ಪೋರ್ಟ್ ರಸ್ತೆ, ಚಾಲುಕ್ಯ, ಎಲೆಕ್ಟ್ರಾನಿಕ್ ಸಿಟಿ, ಟೌನ್‌ಹಾಲ್ ಸೇರಿದಂತೆ 162 ಜಂಕ್ಷನ್‌ಗಳು ಈ ಕಂಟಕ ಎದುರಿಸಲಿವೆ.

VISTARANEWS.COM


on

bangalore traffic signal
Koo

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಜನಗಳನ್ನು ಕಾಡುವ ಟ್ರಾಫಿಕ್ (Bangalore Traffic) ಸಂಕಟ ಈಗಾಗಲೇ ಕುಖ್ಯಾತವಾಗಿದೆ. ಇದು ಇನ್ನು ಮುಂದಿನ ಹಲವು ವರ್ಷಗಳಲ್ಲಿ ಇನ್ನಷ್ಟು ಬಿಗಡಾಯಿಸಲಿದೆಯಂತೆ. ಎಷ್ಟರ ಮಟ್ಟಿಗೆ ಎಂದರೆ, ಪ್ರತಿ ಸಿಗ್ನಲ್‌ನಲ್ಲಿಯೂ (Traffic Signal) 10-12 ನಿಮಿಷ ಕಾಯುವ ಸ್ಥಿತಿ ಶೀಘ್ರದಲ್ಲೇ ಬರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ!

ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆ (Traffic management) ಭಾರೀ ಕಷ್ಟಕರವಾಗಲಿದೆ ಎಂದು ಬಿಬಿಎಂಪಿ (BBMP), ಸಾರಿಗೆ ಇಲಾಖೆ (Transport Department), ಟ್ರಾಫಿಕ್ ಪೊಲೀಸ್ (Traffic Police), ನಗರ ಭೂ ಸಾರಿಗೆ ನಿರ್ದೇಶನಾಲಯದಿಂದ ನಡೆಸಿದ ಸಮೀಕ್ಷೆಯಿಂದ ಕಂಡುಬಂದಿದೆ.

ಹಾಲಿ ಬೆಂಗಳೂರಿನ ರಸ್ತೆಗಳು ಕೇವಲ 50 ಲಕ್ಷ ವಾಹನಗಳ ಓಡಾಟಕ್ಕೆ ಯೋಗ್ಯವಾಗಿವೆ. ಆದರೆ ರಾಜಧಾನಿಯಲ್ಲಿ ವಾಹನಗಳ ಸಂಖ್ಯೆ ಈ ಮಿತಿಯನ್ನು ಎಂದೋ ಮೀರಿದೆ. ಬೆಂಗಳೂರಿನ ರಸ್ತೆಗೆ ಪ್ರತಿ ದಿನ 2000 ಹೊಸ ವಾಹನಗಳು ಇಳಿಯುತ್ತಿವೆ. ಸದ್ಯ ರಾಜಧಾನಿಯಲ್ಲಿ ಸುಮಾರು 1.18 ಕೋಟಿ ವಾಹನಗಳು ಇವೆ.

ಮುಂದಿನ ನಾಲ್ಕು ತಿಂಗಳಲ್ಲಿ 2 ಲಕ್ಷ ಹೊಸ ವಾಹನಗಳು ನಗರಕ್ಕೆ ಸೇರ್ಪಡೆಯಾಗಲಿವೆ. 2024ರ ಅಂತ್ಯಕ್ಕೆ 1 ಕೋಟಿ 21 ಲಕ್ಷ ವಾಹನಗಳು ಬೆಂಗಳೂರಿನಲ್ಲಿ ನೋಂದಣಿಯಾಗಿರಲಿವೆ. ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಹೊಸದಾಗಿ ನೋಂದಣಿಯಾಗಿ ಬೆಂಗಳೂರಿಗೆ ಬರುವ ವಾಹನಗಳ ಸಂಖ್ಯೆ ನಿತ್ಯ ಸುಮಾರು 1000. ನಿತ್ಯ ಹೊರ ರಾಜ್ಯದಿಂದ, ಜಿಲ್ಲೆಯಿಂದ ಬೆಂಗಳೂರಿಗೆ ಬಂದು ಹೋಗುವ ವಾಹನಗಳ ಸಂಖ್ಯೆ 1 ಲಕ್ಷ ಮೀರಬಹುದು.

ಇದೆಲ್ಲ ಲೆಕ್ಕಾಚಾರ ಗಮನಿಸಿದರೆ 2025ರಿಂದ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಮಿತಿ ಮೀರಲಿದೆ. ಬೆಂಗಳೂರಿನ 162 ಜಂಕ್ಷನ್‌ಗಳಲ್ಲಿ ಕನಿಷ್ಠ 10-11 ನಿಮಿಷ ಕಾಯುವ ಸಂಕಷ್ಟದ ಸ್ಥಿತಿ ತಲೆದೋರಲಿದೆ. ಕೆ.ಆರ್ ಸರ್ಕಲ್, ಸಿಲ್ಕ್ ಬೋರ್ಡ್, ಓಲ್ಡ್ ಏರ್‌ಪೋರ್ಟ್ ರಸ್ತೆ, ಚಾಲುಕ್ಯ, ಎಲೆಕ್ಟ್ರಾನಿಕ್ ಸಿಟಿ, ಟೌನ್‌ಹಾಲ್ ಸೇರಿದಂತೆ 162 ಜಂಕ್ಷನ್‌ಗಳು ಈ ಕಂಟಕ ಎದುರಿಸಲಿವೆ. ಒಂದು ಜಂಕ್ಷನ್ ದಾಟಲು ಕನಿಷ್ಠ 10 ನಿಮಿಷವಾದರೂ ತೆಗೆದುಕೊಳ್ಳಬಹುದು. ಸಿಲ್ಕ್ ಬೋರ್ಡ್ ಸಿಗ್ನಲ್‌ನಲ್ಲಿ ಈಗಾಗಲೇ ಐದರಿಂದ ಎಂಟು ನಿಮಿಷ ಕಾಯಬೇಕಾಗಿ ಬರುತ್ತಿದೆ.

ನಗರ ಭೂ ಸಾರಿಗೆ ನಿರ್ದೇಶನಾಲಯದ ಸರ್ವೆಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ. ಆದರೆ ರಸ್ತೆ ಅಗಲೀಕರಣದ ಮೂಲಕ ವಾಹನ ಓಡಾಟಕ್ಕೆ ಅವಕಾಶ ಮಾಡಿಕೊಡೋಣ ಅಂದರೆ, ಅದಕ್ಕೆ ಅವಕಾಶವೇ ಇಲ್ಲದ ಸ್ಥಿತಿ ಇದೆ. ಬಿಬಿಎಂಪಿಯಿಂದ ರಸ್ತೆ ಅಗಲೀಕರಣದ ಬಗ್ಗೆ ಸರ್ವೆ ನಡೆಯುತ್ತಿದೆ. ಆದರೆ ಇದು ದೊಡ್ಡ ಮಟ್ಟದಲ್ಲಿ ಕಾನೂನಾತ್ಮಕ ಸಮರಕ್ಕೆ ಹಾದಿ ಮಾಡಿಕೊಡಲಿದೆ. ಇದಕ್ಕಾಗಿ ಸರ್ಕಾರ ಸುರಂಗ ಮಾರ್ಗ, ಫ್ಲೈಓವರ್‌, ಅಂಡರ್‌ಪಾಸ್‌, ಮ್ಯಾಜಿಕ್‌ ಬಾಕ್ಸ್ ಇತ್ಯಾದಿಗಳ ಮೊರೆ ಹೋಗುತ್ತಿದೆ.

ಇದರೊಂದಿಗೆ ಪಾರ್ಕಿಂಗ್‌ ಕೂಡ ದೊಡ್ಡ ಸಮಸ್ಯೆಯಾಗಿ ಕಾಡಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಕಿಂಗ್‌ ಈಗಾಗಲೇ ಇಕ್ಕಟ್ಟಿನ ಪ್ರಶ್ನೆಯಾಗಿದೆ. ಸಾಕಷ್ಟು ಸಾರ್ವಜನಿಕ ಪಾರ್ಕಿಂಗ್‌ ತಾಣಗಳಿಲ್ಲ. ಮನೆಗಳನ್ನು ಕಟ್ಟುತ್ತಿರುವವರು ಕೂಡ ಮನೆಯೊಳಗೆ ಪಾರ್ಕಿಂಗ್‌ ಸ್ಪೇಸ್‌ ಬಿಡುತ್ತಿಲ್ಲ. ಹೀಗಾಗಿ ರಸ್ತೆಯ ಪಕ್ಕದಲ್ಲೇ ವಾಹನಗಳನ್ನು ಪಾರ್ಕ್‌ ಮಾಡುತ್ತಿರುವುದರಿಂದ ರಸ್ತೆಗಳು ಕೂಡ ವಾಹನಗಳ ಓಡಾಟಕ್ಕೆ ಇಕ್ಕಟ್ಟಾಗುತ್ತಿವೆ. ಬಿಬಿಎಂಪಿ ಇದನ್ನು ಬಗೆಹರಿಸಲು ಕಠಿಣ ಎಚ್ಚರಿಕೆಗಳನ್ನು ನೀಡುತ್ತಿದ್ದರೂ ಅದು ಫಲ ನೀಡಿಲ್ಲ.

ಇದನ್ನೂ ಓದಿ: Bangalore Traffic: ಬೆಂಗಳೂರಿಗೆ ಪ್ರತಿ ತಿಂಗಳು 50 ಸಾವಿರ ಹೊಸ ವಾಹನ ಸೇರ್ಪಡೆ; ಟ್ರಾಫಿಕ್‌ ನರಕ ಆಗೋದು ಗ್ಯಾರಂಟಿ

Continue Reading

ಕ್ರೀಡೆ

Vinesh Phogat: ಕೆಲವೇ ಗಂಟೆಗಳಲ್ಲಿ ವಿನೇಶ್ ಫೋಗಟ್​ ಬೆಳ್ಳಿ ಪದಕದ ತೀರ್ಪು ಪ್ರಕಟ

Vinesh Phogat: ಗುರುವಾರವೇ ರಾತ್ರಿ 9.30ರ ವೇಳೆಗೆ ವಿಚಾರಣೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ವಿನೇಶ್​ಗೆ ಭಾರತೀಯ ವಕೀಲರನ್ನು ನೇಮಿಸಿಕೊಳ್ಳಲು ಹೆಚ್ಚಿನ ಸಮಯ ನೀಡುವ ಸಲುವಾಗಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿತ್ತು.

VISTARANEWS.COM


on

Vinesh Phogat
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ ಫೈನಲ್​ ಅನರ್ಹತೆಯ ಬಳಿಕ ಜಂಟಿ ಬೆಳ್ಳಿ ಪದಕ ನೀಡಬೇಕೆಂದು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಕ್ಕೆ(ಸಿಎಎಸ್​) ವಿನೇಶ್ ಫೋಗಟ್(Vinesh Phogat) ಅವರು ಸಲ್ಲಿದ್ದ ಮನವಿಯನ್ನು ಗುರುವಾರ (ಆಗಸ್ಟ್ 8) ಆರ್ಬಿಟ್ರೇಷನ್ ನ್ಯಾಯಾಲಯವು (CAS) ಸ್ವೀಕರಿಸಿತ್ತು. ಇದೀಗ ಶುಕ್ರವಾರ ಮಧ್ಯಾಹ್ನ 1.30ರಿಂದ ವಿಚಾರಣೆ ನಡೆಯಲಿದೆ. ಗುರುವಾರವೇ ರಾತ್ರಿ 9.30ರ ವೇಳೆಗೆ ವಿಚಾರಣೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ವಿನೇಶ್​ಗೆ ಭಾರತೀಯ ವಕೀಲರನ್ನು ನೇಮಿಸಿಕೊಳ್ಳಲು ಹೆಚ್ಚಿನ ಸಮಯ ನೀಡುವ ಸಲುವಾಗಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿತ್ತು. ಇಂದು ನಡೆಯುವ ವಿಚಾರಣೆಯಲ್ಲಿ ವಿನೇಶ್​ಗೆ ಗೆಲುವು ಸಿಕ್ಕಿ ಅವರಿಗೆ ಪದಕ ಒಲಿಯಲಿ ಎಂದು ಇಡೀ ದೇಶವೇ ಪ್ರಾರ್ಥಿಸುತ್ತಿದೆ.

ಸಿಎಎಸ್ ಎನ್ನುವುದು 1984ರಲ್ಲಿ ಸ್ಥಾಪಿತವಾದ ಸ್ವತಂತ್ರ ಸಂಸ್ಥೆಯಾಗಿದ್ದು, ಕ್ರೀಡಾಸಂಬಂಧಿ ವ್ಯಾಜ್ಯಗಳನ್ನು ಮಧ್ಯಸ್ಥಿಕೆ ಮೂಲಕ ಬಗೆಹರಿಸುತ್ತದೆ. ಸ್ವಿಡ್ಜರ್ಲೆಂಡ್ ನ ಲೌಸನ್ ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಿಎಎಸ್, ನ್ಯೂಯಾರ್ಕ್ ಹಾಗೂ ಸಿಡ್ನಿಯಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಹೊಂದಿದ್ದು, ಒಲಿಂಪಿಕ್ ಆತಿಥ್ಯ ವಹಿಸುವ ದೇಶಗಳಲ್ಲಿ ತಾತ್ಕಾಲಿಕ ಕೋರ್ಟ್ ಗಳನ್ನು ಹೊಂದಿರುತ್ತದೆ.

ಮಂಗಳವಾರ ನಡೆದ ಅರ್ಹತಾ ಸುತ್ತಿಗೂ ಮುನ್ನ ವಿನೇಶ್‌ ಅವರ ತೂಕವನ್ನು ಲೆಕ್ಕ ಮಾಡಲಾಗಿತ್ತು. ಈ ವೇಳೆ ಅವರು 49.9 ಕೆಜಿ ತೂಕವಿದ್ದರು. 3 ಬೌಟ್‌ಗಳು ಮುಗಿಯುವ ವೇಳೆಗೆ ಶಕ್ತಿ ಕಾಪಾಡಿಕೊಳ್ಳಲು ಹೈ ಎನರ್ಜಿ ಆಹಾರ ಸೇವಿಸಿದ ಕಾರಣ ಅವರ ತೂಕ 2.8 ಕೆಜಿ ಹೆಚ್ಚಳವಾಗಿತ್ತು. ಈ 2.8 ಕೆಜಿಯನ್ನು ಕಡಿಮೆ ಮಾಡಲು ವಿನೇಶ್‌ ರಾತ್ರಿಯಿಡೀ ಯಾವುದೇ ಆಹಾರ ಸೇವಿಸದೇ, ಸೈಕ್ಲಿಂಗ್‌ ನಡೆಸಿ, ಸ್ಕಿಪ್ಪಿಂಗ್‌ ಮಾಡಿದ್ದರು. ತೂಕ ಇಳಿಸಲು ಬೇಕಾಗುವ ಎಲ್ಲ ಕಸರತ್ತುಗಳನ್ನು ಕೈಗೊಂಡಿದ್ದರು. ಈ ಮೂಲಕ ಅವರು ಸಾಕಷ್ಟು ತೂಕ ಇಳಿಸಿದ್ದರು. ಕೊನೆ ಕ್ಷಣದಲ್ಲಿ ಅವರ ಕೂದಲು ಕತ್ತರಿಸಿ, ಬಟ್ಟೆಗಳ ಗಾತ್ರವನ್ನು ಕುಗ್ಗಿಸಿ ಪರೀಕ್ಷೆಗೆ ಕಳುಹಿಸಲಾಯಿತು. ಆದರೂ 100 ಗ್ರಾಂ ಹೆಚ್ಚಿದ್ದ ಕಾರಣ ಅನರ್ಹಗೊಂಡರು.

ಇದನ್ನೂ ಓದಿ Vinesh Phogat: ಒಲಿಂಪಿಕ್ಸ್​ ಆರಂಭಕ್ಕೂ ಮುನ್ನವೇ ಪಿತೂರಿಯ ಬಗ್ಗೆ ಗಂಭೀರ ಆರೋಪ ಮಾಡಿದ್ದ ವಿನೇಶ್​; ವೈರಲ್​ ಟ್ವೀಟ್​ ಇಲ್ಲಿದೆ

ವಿನೇಶ್‌ ಫೋಗಟ್‌ ಅವರ ಸಹಾಯಕ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು ಎಂದು ಭಾರತೀಯ ಕುಸ್ತಿ ಪ್ರಾಧಿಕಾರದ ಅಧ್ಯಕ್ಷ ಸಂಜಯ್‌ ಸಿಂಗ್‌ ಈಗಾಗಲೇ ಆಗ್ರಹಿಸಿದ್ದಾರೆ. ಇದು ವಿನೇಶ್‌ ಅವರ ತಪ್ಪಾಗಿರಲು ಸಾಧ್ಯವಿಲ್ಲ. ಅವರು ಉತ್ತಮವಾಗಿ ಭಾಗಿಯಾಗಿದ್ದರು. ಅವರ ಕೋಚ್‌, ನ್ಯೂಟ್ರಿಶಿಯನ್‌ ಮತ್ತು ಬೆಂಬಲ ಸಿಬ್ಬಂದಿ ಇದರ ಜವಾಬ್ದಾರಿ ಹೊರಬೇಕು ಎಂದು ಅವರು ಹೇಳಿದ್ದರು. ವಿನೇಶ್‌ ತೂಕ ಹೆಚ್ಚಳವಾಗದಂತೆ ಅವರು ನೋಡಿಕೊಳ್ಳಬೇಕಿತ್ತು. ಇದಕ್ಕೆ ಕಾರಣರಾದವರ ವಿರುದ್ಧ ಭಾರತ ಸರಕಾರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಬ್ರಿಜ್​ ಭೂಷಣ್​ಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿ ದೇಶದ ಉನ್ನತ ಕುಸ್ತಿಪಟುಗಳ ಜತೆ ಸೇರಿಕೊಂಡು ಕಳೆದ ವರ್ಷ ಜನವರಿಯಲ್ಲಿ ವಿನೇಶ್ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು. ಬಂಧನಕ್ಕೂ ಒಳಗಾಗಿದ್ದರು.

Continue Reading

ದೇಶ

Manish Sisodia: ದೆಹಲಿ ಅಬಕಾರಿ ನೀತಿ ಅಕ್ರಮ: ಮನೀಶ್‌ ಸಿಸೋಡಿಯಾಗೆ ಜಾಮೀನು

Manish Sisodia: ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು ಜಾಮೀನು ಅರ್ಜಿ ವಿಚಾರಣೆ ನಡೆಸಿ ಅದನ್ನು ಪುರಸ್ಕರಿಸಿದೆ. ಎರಡು ಶ್ಯೂರಿಟಿಗಳೊಂದಿಗೆ ₹ 10 ಲಕ್ಷ ಜಾಮೀನು ಬಾಂಡ್ ನೀಡುವಂತೆ ನ್ಯಾಯಾಲಯವು ಸಿಸೋಡಿಯಾ ಅವರಿಗೆ ಸೂಚಿಸಿದೆ. ಅಲ್ಲದೇ ಅವರ ಪಾಸ್‌ಪೋರ್ಟ್ ಕೋರ್ಟ್‌ ಅನ್ನು ಒಪ್ಪಿಸಿ ಮತ್ತು ವಾರಕ್ಕೆ ಎರಡು ಬಾರಿ ಅಂದರೆ ಸೋಮವಾರ ಮತ್ತು ಗುರುವಾರ ತನಿಖಾ ಅಧಿಕಾರಿಯ ಮುಂದೆ ಹಾಜರಾಗುವಂತೆ ಸೂಚನೆ ನೀಡಿದೆ

VISTARANEWS.COM


on

Manish Sisodia
Koo

ನವದೆಹಲಿ: ದೆಹಲಿ ಅಬಕಾರಿ ನೀತಿ ಅಕ್ರಮ ಹಗರಣದಲ್ಲಿ (Delhi Liquor Policy Case) ಆರೋಪಿಯಾಗಿ ಜೈಲು ಸೇರಿರುವ ಆಪ್​ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ (Manish Sisodia) ಅವರಿಗೆ ಸುಪ್ರೀಂ ಕೋರ್ಟ್‌(Supreme Court) ಜಾಮೀನು ನೀಡಿದೆ. ಇದೀಗ ರದ್ದುಗೊಂಡಿರುವ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಪ್ರಕರಣಗಳಲ್ಲಿ ಮನೀಶ್ ಸಿಸೋಡಿಯಾಗೆ ನ್ಯಾಯಾಲಯವು ನಿಯಮಿತ ಜಾಮೀನು ಮಂಜೂರು ಮಾಡಿದೆ. 17 ತಿಂಗಳ ಬಳಿಕ ಸಿಸೋಡಿಯಾ ಜೈಲಿನಿಂದ ಹೊರಬರಲಿದ್ದಾರೆ.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು ಜಾಮೀನು ಅರ್ಜಿ ವಿಚಾರಣೆ ನಡೆಸಿ ಅದನ್ನು ಪುರಸ್ಕರಿಸಿದೆ. ಎರಡು ಶ್ಯೂರಿಟಿಗಳೊಂದಿಗೆ ₹ 10 ಲಕ್ಷ ಜಾಮೀನು ಬಾಂಡ್ ನೀಡುವಂತೆ ನ್ಯಾಯಾಲಯವು ಸಿಸೋಡಿಯಾ ಅವರಿಗೆ ಸೂಚಿಸಿದೆ. ಅಲ್ಲದೇ ಅವರ ಪಾಸ್‌ಪೋರ್ಟ್ ಕೋರ್ಟ್‌ ಅನ್ನು ಒಪ್ಪಿಸಿ ಮತ್ತು ವಾರಕ್ಕೆ ಎರಡು ಬಾರಿ ಅಂದರೆ ಸೋಮವಾರ ಮತ್ತು ಗುರುವಾರ ತನಿಖಾ ಅಧಿಕಾರಿಯ ಮುಂದೆ ಹಾಜರಾಗುವಂತೆ ಸೂಚನೆ ನೀಡಿದೆ. ಇನ್ನು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಅಥವಾ ಸಾಕ್ಷ್ಯವನ್ನು ಹಾಳುಮಾಡುವ ಯಾವುದೇ ಪ್ರಯತ್ನವನ್ನು ಮಾಡಬಾರದು ಎಂದು ಅದು ಹೇಳಿದೆ. ಈ ಪ್ರಕರಣದ ಆದೇಶವನ್ನು ಆಗಸ್ಟ್ 6 ರಂದು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು.

ಏನಿದು ಪ್ರಕರಣ?

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್‌ ಈ ಹಿಂದೆಯೇ ಆದೇಶಿಸಿತ್ತು. ಅದರಂತೆ ಅವರು ಜೈಲಿಗೆ ತೆರಳಿದ್ದರು. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಉಪ ಮುಖ್ಯಮಂತ್ರಿಯಾಗಿದ್ದ ಮನೀಶ್‌ ಸಿಸೋಡಿಯಾ ಸೇರಿ ಹಲವರನ್ನು ಬಂಧಿಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ಪುತ್ರಿ ಕೆ. ಕವಿತಾ ಅವರನ್ನೂ ಇ.ಡಿ ವಿಚಾರಣೆ ನಡೆಸಿದೆ.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಸ್ವಾತಿ ಮಾಲಿವಾಲ್‌ ಕೇಸ್‌ನಲ್ಲೂ ಸಿಎಂ ವಿರುದ್ಧ ಚಾರ್ಜ್‌ಶೀಟ್!

Continue Reading

ಪ್ರಮುಖ ಸುದ್ದಿ

CM Siddaramaiah: ಮೈಸೂರು ಜನಾಂದೋಲನ ಸಮಾವೇಶ ಸ್ಥಳಕ್ಕೆ ಆಗಮಿಸುತ್ತಿರುವ ಕಾಂಗ್ರೆಸ್‌ ಪಡೆ; ಲೈವ್‌ ಇಲ್ಲಿದೆ ವೀಕ್ಷಿಸಿ

CM Siddaramaiah: ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರದಿಂದ ಜನ ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ, ಡಿಸಿಎಂ, ಸಚಿವರು ಶಾಸಕರು, ಎಂಎಲ್ಸಿಗಳು ಭಾಗವಹಿಸುತ್ತಿದ್ದಾರೆ.

VISTARANEWS.COM


on

Koo

ಬೆಂಗಳೂರು: ಬಿಜೆಪಿ-ಜೆಡಿಎಸ್‌ ನಡೆಸುತ್ತಿರುವ ಪಾದಯಾತ್ರೆಗೆ (BJP-JDS Padayatra) ಟಕ್ಕರ್‌ ನೀಡಲು ಮೈಸೂರಿನಲ್ಲಿ ಇಂದು ಆಯೋಜಿಸಲಾಗಿರುವ ಬೃಹತ್‌ ಜನಾಂದೋಲನ (Janandolana samavesha) ಸಮಾವೇಶದ ಸ್ಥಳಕ್ಕೆ ಕಾಂಗ್ರೆಸ್‌ (Congress) ಪಡೆ ಆಗಮಿಸುತ್ತಿದೆ. ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಮುಂತಾದವರು ಸಮಾವೇಶದ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ.

ಜನಾಂದೋಲನ ಸಮಾವೇಶದ ವೇದಿಕೆ ಮೇಲೆ ಸುಮಾರು 200 ಜನ ಕೂರಲು ವ್ಯವಸ್ಥೆ ಮಾಡಲಾಗಿದೆ. ಎಡ ಮತ್ತು ಬಲ ಭಾಗದಲ್ಲಿ ಮಾಜಿ ಶಾಸಕರು ಹಾಗೂ ಪರಿಷತ್ ಸದಸ್ಯರು ಕೂರಲು ವ್ಯವಸ್ಥೆ ಮಾಡಲಾಗಿದ್ದು, ಮಳೆ ಬಂದರೂ ಕಾರ್ಯಕ್ರಮ ಯಶಸ್ವಿಯಾಗಲು ಜರ್ಮನ್ ಪೆಂಡಾಲ್ ಅಳವಡಿಸಲಾಗಿದೆ. ʼಸಿದ್ದರಾಮೋತ್ಸವʼ ರೀತಿಯಲ್ಲಿಯೇ ಕಾರ್ಯಕ್ರಮ ಮಾಡಲಾಗುತ್ತಿದೆ.

ಜನಾಂದೋಲನ ಸಮಾವೇಶವನ್ನು ಸಿಎಂ ವೈಯಕ್ತಿಕ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಇಂದಿನ ಸಮಾವೇಶದಲ್ಲಿ 2 ಲಕ್ಷಕ್ಕೂ ಅಧಿಕ ಜನ ಸೇರಿಸಲಿದ್ದಾರೆ ಎಂದು ಭಾವಿಸಲಾಗಿದೆ. ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರದಿಂದ ಹೆಚ್ಚು ಜನ ಬರುವ ಸಾಧ್ಯತೆ ಇದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ, ಡಿಸಿಎಂ, ಸಚಿವರು ಶಾಸಕರು, ಎಂಎಲ್ಸಿಗಳು ಭಾಗವಹಿಸಲಿದ್ದಾರೆ.

ವಿಪಕ್ಷಗಳ ವಿರುದ್ಧ ದಾಖಲೆ ಸಮೇತ ಮಾತನಾಡುವುದು, ಮುಡಾದಲ್ಲಿ ಮಾಜಿ ಸಿಎಂ ಎಚ್ ಡಿ ದೇವೇಗೌಡ ಫ್ಯಾಮಿಲಿ ಖರೀದಿಸಿದ ಆಸ್ತಿಗಳ ಬಗ್ಗೆ ಮಾಹಿತಿ ಕೊಡುವುದು, ಕುಮಾರಸ್ವಾಮಿ ಕಾಲದಲ್ಲಿ ಆದ ನಿವೇಶನ ಹಂಚಿಕೆ, ಕುಮಾರಸ್ವಾಮಿ ವಿರುದ್ಧ ಇರೋ ಪ್ರಕರಣಗಳ ಬಗ್ಗೆ ದಾಖಲೆ ಸಮೇತ ಮಾತನಾಡುವುದು, ಮುಡಾದಲ್ಲಿ ಸಿದ್ದರಾಮಯ್ಯ ಪಾತ್ರ ಇಲ್ಲ ಅನ್ನೋದನ್ನ ಹೇಳುವುದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸುವುದು, ರಾಜ್ಯಪಾಲರು ಈ ಹಿಂದೆ ಯಾವೆಲ್ಲ ಪ್ರಕರಣಗಳಲ್ಲಿ ಮೌನ ವಹಿಸಿದ್ದಾರೆ ಅನ್ನೋದನ್ನ ಹೇಳುವುದು, ವಿರೋಧ ಪಕ್ಷಗಳ ನಾಯಕರ ಹಗರಣಗಳ ಬಗ್ಗೆ ಕಿರು ಹೊತ್ತಿಗೆ ಬಿಡುಗಡೆ ಮಾಡುವುದು ಜನಾಂದೋಲನ ಸಮಾವೇಶದ ಅಜೆಂಡಾ ಆಗಿದೆ.

ಇದೇ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ವಿರುದ್ಧ ಕಿರುಹೊತ್ತಿಗೆ ಬಿಡುಗಡೆ ಮಾಡಲಾಗುತ್ತಿದೆ. ಎರಡೂ ಪಕ್ಷಗಳು ಕುಟಿಲ ರಾಜಕಾರಣ ನಡೆಸುತ್ತಿವೆ ಎಂದು ʼಸಂಚು’ ಹೆಸರಿನಲ್ಲಿ ಪುಸ್ತಕ ಬಿಡುಗಡೆ ಮಾಡಲಾಗುತ್ತಿದ್ದು, ಇದು ಮುಡಾ ಪ್ರಕರಣದ ಸಮಗ್ರ ವಿವರ ಮತ್ತು ದಾಖಲೆಗಳನ್ನೊಳಗೊಂಡಿದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಇಬ್ಬರನ್ನೂ ಒಂದೇ ಕಲ್ಲಲ್ಲಿ ಹೊಡೆಯಲು ಬಿಜೆಪಿ ಕುಟಿಲ ಕಾರಸ್ಥಾನ ನಡೆಸಿದೆ ಎಂದು ʼಸಂಚುʼ ಕೃತಿ ರೂಪಿಸಿರುವ ಸಿಎಂ‌ ಕಾನೂನು ಸಲಹೆಗಾರ ಪೊನ್ನಣ್ಣ ಬರೆದಿದ್ದಾರೆ ಎನ್ನಲಾಗಿದೆ.

ಕಿರುಹೊತ್ತಿಗೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬೊಮ್ಮಾಯಿ, ಹಾಲಿ ಕೇಂದ್ರ ಸಚಿವ ಹೆಚ್‌ಡಿಕೆ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ಅಕ್ರಮದ ಆರೋಪಗಳ ಕುರಿತು ಉಲ್ಲೇಖ ಮಾಡಲಾಗಿದೆ ಎನ್ನಲಾಗಿದೆ.

ಸಮಾವೇಶದ ಉದ್ದೇಶವೇ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ಕುಟುಂಬ ಆಗಿದೆ. ದೇವೇಗೌಡರ ಕುಟುಂಬಸ್ಥರು ಮುಡಾ ಸೈಟ್ ಪಡೆದ ಬಗ್ಗೆ ಕಾಂಗ್ರೆಸಿಗರು ಫ್ಲೆಕ್ಸ್ ಹಾಕಿದ್ದಾರೆ. ನಗರದ ಹಲವು ಭಾಗದ ಸರ್ಕಲ್‌ಗಳಲ್ಲಿ ಫ್ಲೆಕ್ಸ್‌ಗಳ ಅಳವಡಿಕೆ ಮಾಡಲಾಗಿದೆ. 2023ರ ಫೆಬ್ರವರಿ ತಿಂಗಳಿನಲ್ಲಿ ಬಿಜೆಪಿ ನೀಡಿರುವ ಜಾಹೀರಾತನ್ನು ಕಾಂಗ್ರೆಸ್‌ ಬಳಸಿಕೊಂಡಿದೆ. ಕುಮಾರಸ್ವಾಮಿ ಅವರಿಗೆ ಮುಡಾದಿಂದ ಕೊಟ್ಟಿರುವ ಸೈಟ್ ಬಗ್ಗೆ, ಮಾಜಿ ಪ್ರಧಾನಿ ದೇವೇಗೌಡರ 20 ಹೆಸರು ಬರೆದು ಎಷ್ಟು ಅಳತೆಯ ನಿವೇಶನ ಮಂಜೂರಾಗಿದೆ ಎಂಬ ಮಾಹಿತಿ ಫ್ಲೆಕ್ಸ್‌ನಲ್ಲಿದೆ. ಎಚ್‌ಡಿಕೆಯವರೇ ನೀವು ಬೇರೆಯವರ ಬಗ್ಗೆ ಪ್ರಶ್ನಿಸುವ ನೈತಿಕ ಹಕ್ಕು ಉಳಿಸಿಕೊಂಡಿದ್ದೀರಾ ಎಂದು ಫ್ಲೆಕ್ಸ್‌ನಲ್ಲಿ ಪ್ರಶ್ನಿಸಲಾಗಿದೆ.

ಇದನ್ನೂ ಓದಿ: BJP-JDS Padayatra: ಅಸಮಾಧಾನಗೊಂಡ ಬಿಜೆಪಿ ಶಾಸಕರಿಂದ ಕಾಂಗ್ರೆಸ್ ಜನಾಂದೋಲನಕ್ಕೆ ಬೆಂಬಲ?

Continue Reading
Advertisement
Theft Case
ಬೆಂಗಳೂರು5 mins ago

Theft Case : ಬೆಂಗಳೂರಿನಲ್ಲಿ ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯತಮ! ಮದುವೆಯಾಗಲು ಹೊರಟವರು ಜೈಲುಪಾಲು

Actor Yash called the actor that if you grow beyond all of us dance karnataka dance
ಸ್ಯಾಂಡಲ್ ವುಡ್11 mins ago

Actor Yash: ನಮ್ಮನ್ನೆಲ್ಲ ಮೀರಿಸಿ ನೀವು ಬೆಳೆದರೆ ಅದೇ ನಮಗೆ ನೀವು ಕೊಡುವ ಗೌರವ ಎಂದು ನಟನಿಗೆ ಕರೆ ಮಾಡಿದ ‘ರಾಕಿಂಗ್ ಸ್ಟಾರ್’ ಯಶ್!

bangalore traffic signal
ಪ್ರಮುಖ ಸುದ್ದಿ12 mins ago

Bangalore Traffic: ಬೆಂಗಳೂರಿನ ಟ್ರಾಫಿಕ್‌ ಸಿಗ್ನಲ್‌ನಲ್ಲಿ 15 ನಿಮಿಷ ನಿಲ್ಲೋ ಪರಿಸ್ಥಿತಿ ಬರಲಿದೆ, ಎಚ್ಚರ!

Vinesh Phogat
ಕ್ರೀಡೆ31 mins ago

Vinesh Phogat: ಕೆಲವೇ ಗಂಟೆಗಳಲ್ಲಿ ವಿನೇಶ್ ಫೋಗಟ್​ ಬೆಳ್ಳಿ ಪದಕದ ತೀರ್ಪು ಪ್ರಕಟ

Manish Sisodia
ದೇಶ40 mins ago

Manish Sisodia: ದೆಹಲಿ ಅಬಕಾರಿ ನೀತಿ ಅಕ್ರಮ: ಮನೀಶ್‌ ಸಿಸೋಡಿಯಾಗೆ ಜಾಮೀನು

Antim Panghal
ಕ್ರೀಡೆ1 hour ago

Antim Panghal: 3 ವರ್ಷ ನಿಷೇಧ ಶಿಕ್ಷೆಯಿಂದ ಪಾರಾದ ಕುಸ್ತಿಪಟು ಅಂತಿಮ್‌ ಪಂಘಲ್‌

train service
ಹಾಸನ1 hour ago

Train services: ಎಡಕುಮೇರಿಯಲ್ಲಿ ದುರಸ್ಥಿ ಪೂರ್ಣ; ರೈಲುಗಳ ಪುನರ್‌ ಆರಂಭವಾದರೂ ವೇಗದ ಮಿತಿಗೆ ನಿರ್ಬಂಧ

ದೇಶ1 hour ago

Kangana v/s Rahul Gandhi: ರಾಹುಲ್‌ ಗಾಂಧಿಯ ತಿರುಚಿದ ಫೊಟೋ ಶೇರ್‌; ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ

ಪ್ರಮುಖ ಸುದ್ದಿ2 hours ago

CM Siddaramaiah: ಮೈಸೂರು ಜನಾಂದೋಲನ ಸಮಾವೇಶ ಸ್ಥಳಕ್ಕೆ ಆಗಮಿಸುತ್ತಿರುವ ಕಾಂಗ್ರೆಸ್‌ ಪಡೆ; ಲೈವ್‌ ಇಲ್ಲಿದೆ ವೀಕ್ಷಿಸಿ

Laapataa Ladies to be screened in Supreme Court
ಬಾಲಿವುಡ್2 hours ago

Laapataa Ladies: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರದರ್ಶನಗೊಳ್ಳುತ್ತಿದೆ ‘ಲಾಪತಾ ಲೇಡೀಸ್’!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ19 hours ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ21 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ22 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌