CM Siddaramaiah: ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಮೇಲೆ ಪ್ರಕರಣ, ಇಂದು ಕೋರ್ಟ್‌ ತೀರ್ಮಾನ - Vistara News

ಪ್ರಮುಖ ಸುದ್ದಿ

CM Siddaramaiah: ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಮೇಲೆ ಪ್ರಕರಣ, ಇಂದು ಕೋರ್ಟ್‌ ತೀರ್ಮಾನ

CM Siddaramaiah: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ. ಈಗಾಗಲೇ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದಾರೆ.

VISTARANEWS.COM


on

CM Siddaramaiah 1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಮುಡಾ ಹಗರಣ (MUDA Scam) ಸಂಬಂಧ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ದಾಖಲಾದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಮಾನಿಸಲಿದೆ.

ಕೋರ್ಟ್‌ನ ಈ ಆದೇಶವನ್ನು ಆಧರಿಸಿ ಸಿಎಂ ಸಿದ್ದರಾಮಯ್ಯ ಅವರು ವಿಚಾರಣೆ ಎದುರಿಸಲಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಗೊತ್ತಾಗಲಿದೆ. ಕೋರ್ಟ್ ನೀಡುವ ಆದೇಶವನ್ನು ನೋಡಿಕೊಂಡು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ನೀಡಿರುವ ದೂರನ್ನು ಪರಿಗಣಿಸಿ ಅಭಿಯೋಜನೆಗೆ ಅನುಮತಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ರಾಜ್ಯಪಾಲರು ನಿರ್ಧರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ. ಈಗಾಗಲೇ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದಾರೆ. ನಾಳೆ ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸುವ ಸಂಬಂಧ ನ್ಯಾಯಾಲಯವು ಆದೇಶ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣ ಒಂದು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಅಲ್ಲದೆ ಇತ್ತೀಚಿಗೆ ಬಿಜೆಪಿ ಮತ್ತು ಜೆಡಿಎಸ್ ಈ ಒಂದು ಹಗರಣವನ್ನು ಖಂಡಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬೆಂಗಳೂರಿನಿಂದ ಮೈಸೂರಿನವರೆಗೆ ಮೈಸೂರು ಚಲೋ ಪಾದಯಾತ್ರೆ ಕೂಡ ಮಾಡಿತ್ತು. ಇದಕ್ಕೆ ಕೌಂಟರ್ ಕೊಡಲು ಕಾಂಗ್ರೆಸ್ ಸಹ ಜನಾಂದೋಲನ ಸಭೆಯನ್ನು ಸಹ ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ.

6000ಕ್ಕೂ ಹೆಚ್ಚು ಗ್ರಂಥಾಲಯ ಮೇಲ್ಚಿಚಾರಕರು ಕನಿಷ್ಠ ವೇತನ ವ್ಯಾಪ್ತಿಗೆ;

ಬೆಂಗಳೂರು: ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ 6000ಕ್ಕೂ ಹೆಚ್ಚು ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಘೋಷಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ, ರಾಜ್ಯದಲ್ಲಿ 6599 ಹೊಸ ಗ್ರಾಮ ಗ್ರಂಥಾಲಯ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಪುಸ್ತಕಗಳು ಒಳ್ಳೆಯ ಸ್ನೇಹಿತನಿದ್ದಂತೆ. ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ ಉತ್ತಮ ಹವ್ಯಾಸ. ಗ್ರಾಮಗಳಲ್ಲಿ 6599 ಗ್ರಾಮ‌ಮಟ್ಟದ ಗ್ರಂಥಾಲಯಗಳನ್ಮು ತೆರೆಯುವ ನಿರ್ಧಾರ ಮಾಡಿ ಘೋಷಣೆ ಮಾಡಿದ್ದೇವೆ ಎಂದರು.

ಜ್ಞಾನ ವಿಕಾಸ ಕೇವಲ ಶಾಲಾ ಶಿಕ್ಷಣದಿಂದ ಮಾತ್ರ ಸಾಧ್ಯವಿಲ್ಲ. ಶಾಲೆಗಳ ಹೊರಗೂ ಕಲಿಕೆ ಅಗತ್ಯ. ಸಾವಿರಾರು ವರ್ಷಗಳ ಕಾಲ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಸಮುದಾಯಗಳಿಗೆ ಅಂಬೇಡ್ಕರ್ ಅವರ ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆಯುವ ಅವಕಾಶ ಸಿಕ್ಕಿದೆ. ನಾವು 78 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ ಬಂದು ಇಷ್ಡು ವರ್ಷಗಳಾದರೂ ನೂರಕ್ಕೆ ನೂರು ಸಾಕ್ಷರತೆ ಸಾಧ್ಯವಾಗಿಲ್ಲ. ಇದನ್ನು ಸಾಧಿಸುವ ದಿಕ್ಕಿನಲ್ಲಿ ನಾವು ಶ್ರಮಿಸಬೇಕಿದೆ ಎಂದರು.

ಇದನ್ನೂ ಓದಿ: Part Time Lecturers: ಅರೆಕಾಲಿಕ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವಧನದಲ್ಲಿ ಭಾರಿ ಹೆಚ್ಚಳ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Namma Metro: ಹಸಿರು ಮಾರ್ಗದಲ್ಲಿ ಇಂದಿನಿಂದ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

Namma Metro: ನಾಗಸಂದ್ರದಿಂದ ಮಾದಾವರ (BIEC)ವರೆಗಿನ ರೀಚ್-3ರ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಪರೀಕ್ಷೆಗಳನ್ನು ನಡೆಸಬೇಕಾಗಿರುವುದರಿಂದ, ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಮಯದಲ್ಲಿ ವ್ಯತ್ಯಯ ವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.

VISTARANEWS.COM


on

Namma Metro
Koo

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಆ. 13ರಿಂದ 15ರವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ತಿಳಿಸಿದೆ.

ನಾಗಸಂದ್ರದಿಂದ ಮಾದಾವರ (BIEC)ವರೆಗಿನ ರೀಚ್-3ರ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಪರೀಕ್ಷೆಗಳನ್ನು ನಡೆಸಬೇಕಾಗಿರುವುದರಿಂದ, ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಮಯದಲ್ಲಿ ವ್ಯತ್ಯಯ ವಾಗಲಿದ್ದು, ಇದರ ವಿವರ ಈ ಕೆಳಕಂಡಂತಿವೆ.

  1. ಆ. 13ರಂದು ಕೊನೆಯ ರೈಲು ಸೇವೆ ರಾತ್ರಿ 11ಕ್ಕೆ ಬದಲಾಗಿ 10 ಗಂಟೆಯವರೆಗೆ.
  2. ಆ. 14ರಂದು ಬೆಳಗ್ಗೆ 5ಕ್ಕೆ ಬದಲಾಗಿ 6ಕ್ಕೆ ಪ್ರಾರಂಭ ಮತ್ತು ಕೊನೆಯ ರೈಲು ಸೇವೆ ರಾತ್ರಿ 11ಕ್ಕೆ ಬದಲಾಗಿ 10 ಗಂಟೆಯವರೆಗೆ.
  3. ಆ. 15ರಂದು ಬೆಳಗ್ಗೆ 5ಕ್ಕೆ ಬದಲಾಗಿ 6ಕ್ಕೆ ಪ್ರಾರಂಭ

ನಾಗಸಂದ್ರ ನಿಲ್ದಾಣದಿಂದ ಆ.13 ಮತ್ತು 14 ರಂದು ಕೊನೆಯ ರೈಲು ಸೇವೆಯು ರಾತ್ರಿ 11.05 ಗಂಟೆಯ ಬದಲಾಗಿ 10.00 ಗಂಟೆಗೆ ಕೊನೆಗೊಳ್ಳುತ್ತದೆ. ಆ.14 ಮತ್ತು 15ರಂದು ನಾಗಸಂದ್ರದಿಂದ ಮೊದಲ ರೈಲು ಸೇವೆಯು ಬೆಳಗ್ಗೆ 5ಕ್ಕೆ ಬದಲಾಗಿ 6ಕ್ಕೆ ಪ್ರಾರಂಭವಾಗುತ್ತದೆ.

ಆದಾಗ್ಯೂ ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಆ.13 ಮತ್ತು 14ರಂದು ರಾತ್ರಿ 11.12 ಗಂಟೆಯವರೆಗೆ ಕೊನೆಯ ರೈಲು ಸೇವೆ ಲಭ್ಯವಿರುತ್ತದೆ. ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮೊದಲ ರೈಲು ಸೇವೆಯು ಆ.14 ಮತ್ತು 15ರಂದು ಬೆಳಗ್ಗೆ 5ಕ್ಕೆ ಪ್ರಾರಂಭವಾಗುತ್ತದೆ. ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನಕ್ಕೆ ನಮ್ಮ ಮೆಟ್ರೋ ಸಾಥ್

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನಕ್ಕೆ ನಮ್ಮ ಮೆಟ್ರೋ ಸಾಥ್ ನೀಡಿದೆ. ಆಗಸ್ಟ್ 15,17 ಹಾಗೂ 18ರಂದು ಟೋಕನ್ ಬದಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್ ನೀಡಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ. 30 ರೂ. ರಿಟರ್ನ್ ಟಿಕೆಟ್ ಮೂಲಕ ಯಾವುದೇ ನಿಲ್ದಾಣಕ್ಕೂ ಪ್ರಯಾಣದ ಅನುಕೂಲವಾಗಲಿದೆ. ಪ್ರಯಾಣಿಕರು ಟೋಕನ್ ಬದಲಿಗೆ ಪರ್ಯಾಯ ವ್ಯವಸ್ಥೆ ಬಳಸಲು ಬಿಎಂಆರ್‌ಸಿಎಲ್‌ ಮನವಿ ಮಾಡಿದೆ.

ಲಾಲ್‌ಬಾಗ್ ನಲ್ಲಿ ಆಯೋಜಿಸಲಾಗಿರುವ ತೋಟಗಾರಿಕಾ ಫಲಪುಷ್ಪ ಪ್ರದರ್ಶನದ ಹಿನ್ನಲೆಯಲ್ಲಿ, ನಮ್ಮ ಮೆಟ್ರೋದಿಂದ ಆ. 15, 17 ಮತ್ತು 18ರಂದು ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ತ್ವರಿತ ಪ್ರಯಾಣಕ್ಕಾಗಿ ಬೆಳಗ್ಗೆ 10 ರಿಂದ ರಾತ್ರಿ 8ರವರೆಗೆ ಟೋಕನ್‌ಗಳ ಬದಲಿಗೆ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 30 ರೂ.ಗೆ ವಿತರಿಸಲಾಗುತ್ತದೆ.

ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳು ಖರೀದಿಸಿದ ದಿನದಂದು ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಮಾನ್ಯವಾಗಿರುತ್ತದೆ. ಸಾರ್ವಜನಿಕರು ಟೋಕನ್, ಕಾರ್ಡ್, ಕ್ಯೂಆರ್ ಟಿಕೆಟ್‌ಗಳ ಮೂಲಕ ಲಾಲ್‌ಬಾಗ್ ನಿಲ್ದಾಣಕ್ಕೆ ಪ್ರಯಾಣಿಸಬಹುದು ಹಾಗೂ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಹಿಂತಿರುಗಲು ಟೋಕನ್‌ಗಳ ಬದಲಿಗೆ ಪೇಪರ್ ಟಿಕೆಟ್, ಕಾರ್ಡ್, ಮತ್ತು ಕ್ಯೂಆರ್ ಟಿಕೆಟ್ ಮೂಲಕ ಮಾತ್ರ ಪ್ರಯಾಣಿಸಬಹುದು. ಮೇಲಿನ ದಿನಾಂಕಗಳಲ್ಲಿ ಮತ್ತು ಅವಧಿಯಲ್ಲಿ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಟೋಕನ್‌ಗಳನ್ನು ನೀಡಲಾಗುವುದಿಲ್ಲ. ಟಿಕೆಟ್‌ಗಳನ್ನು ಖರೀದಿಸಲು ಕಾಯುವ ಸಮಯವನ್ನು ತಪ್ಪಿಸಲು ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಮುಂಚಿತವಾಗಿ ಕ್ಯೂಆರ್ ಟಿಕೆಟ್‌ಗಳನ್ನು ಖರೀದಿಸಬೇಕು ಎಂದು ಬಿಎಂಆರ್‌ಸಿಎಲ್‌ ಮನವಿ ಮಾಡಿದೆ.

Continue Reading

ಪ್ರಮುಖ ಸುದ್ದಿ

IISc Bangalore: ರಾಷ್ಟ್ರೀಯ ರ‍್ಯಾಂಕಿಂಗ್‌ನಲ್ಲಿ ಬೆಂಗಳೂರಿನ ಐಐಎಸ್‌ಸಿ; ರಾಜ್ಯದ ಹಲವು ಸಂಸ್ಥೆಗಳಿಗೆ ಗರಿ

IISc Bangalore: ರಾಷ್ಟ್ರೀಯ ರ‍್ಯಾಂಕಿಂಗ್‌ನಲ್ಲಿ ಬೆಂಗಳೂರಿನ ಐಐಎಸ್‌ಸಿ; ರಾಜ್ಯದ ಹಲವು ಸಂಸ್ಥೆಗಳಿಗೆ ಗರಿಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಬೆಂಗಳೂರು) ದೇಶದ ಅತ್ಯುತ್ತಮ ವಿಶ್ವವಿದ್ಯಾನಿಲಯ ಎಂದು ಶ್ರೇಯಾಂಕ ಪಡೆದಿದೆ. ದೇಶದ ಟಾಪ್‌ ಐದು ರಿಸರ್ಚ್‌ ಇನ್‌ಸ್ಟಿಟ್ಯೂಟ್‌ಗಳಲ್ಲಿ ಐಐಎಸ್‌ಸಿ ಅಗ್ರಸ್ಥಾನದಲ್ಲಿದೆ.

VISTARANEWS.COM


on

IISc Bangalore
Koo

ಹೊಸದಿಲ್ಲಿ: ಕೇಂದ್ರ ಪ್ರಕಟಿಸಿರುವ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (Indian Institute of Science, IISC Bangalore) ದೇಶದ ಅತ್ಯುತ್ತಮ ಯೂನಿವರ್ಸಿಟಿ (Best University) ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ಇಂದು ಕೇಂದ್ರ ಶಿಕ್ಷಣ ಸಚಿವಾಲಯ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು (NIRF) 2024 ಅನ್ನು ಪ್ರಕಟಿಸಿದ್ದು, ಇದರಲ್ಲಿನ ವಿವಿಧ ವಿಭಾಗಗಳಲ್ಲಿ ಬೆಂಗಳೂರಿನ ಹಲವು ಸಂಸ್ಥೆಗಳು ಸ್ಥಾನ ಪಡೆದಿವೆ.

ರ‍್ಯಾಂಕಿಂಗ್‌ಗಳ ಒಂಬತ್ತನೇ ಆವೃತ್ತಿಯನ್ನು ಪ್ರಕಟಿಸಲಾಗಿದ್ದು, ಇದನ್ನು ಅಧಿಕೃತ NIRF ವೆಬ್‌ಸೈಟ್ nirfindia.orgನಲ್ಲಿ ನೋಡಬಹುದು. NIRF ಶ್ರೇಯಾಂಕವು ವಿಶ್ವವಿದ್ಯಾಲಯಗಳು, ಕಾಲೇಜುಗಳು, ಸಂಶೋಧನಾ ಸಂಸ್ಥೆಗಳು ಮತ್ತು ಎಂಜಿನಿಯರಿಂಗ್, ನಿರ್ವಹಣೆ ಮತ್ತು ವೈದ್ಯಕೀಯ ಶಿಕ್ಷಣದಂತಹ ವಿವಿಧ ವಿಶೇಷ ಕ್ಷೇತ್ರಗಳನ್ನು ಒಳಗೊಂಡಂತೆ 13 ವಿಭಾಗಗಳನ್ನು ಒಳಗೊಂಡಿದೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಬೆಂಗಳೂರು) ದೇಶದ ಅತ್ಯುತ್ತಮ ವಿಶ್ವವಿದ್ಯಾನಿಲಯ ಎಂದು ಶ್ರೇಯಾಂಕ ಪಡೆದಿದೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ದೆಹಲಿ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ನಂತರದ ಸ್ಥಾನಗಳಲ್ಲಿವೆ. ದೇಶದ ಟಾಪ್‌ ಐದು ರಿಸರ್ಚ್‌ ಇನ್‌ಸ್ಟಿಟ್ಯೂಟ್‌ಗಳಲ್ಲಿ ಐಐಎಸ್‌ಸಿ ಅಗ್ರಸ್ಥಾನದಲ್ಲಿದೆ. ಟಾಪ್‌ ಟೆನ್‌ ಸಂಸ್ಥೆಗಳ ಪಟ್ಟಿಯಲ್ಲಿಯೂ ಐಐಟಿ ಮದ್ರಾಸ್‌ ನಂತರ ಐಐಎಸ್‌ಸಿ ಬೆಂಗಳೂರು 2ನೇ ಸ್ಥಾನದಲ್ಲಿದೆ. ನಾವೀನ್ಯತೆಯ ವಿಭಾಗದಲ್ಲಿಯೂ ಐಐಎಸ್‌ಸಿ 4ನೇ ಸ್ಥಾನದಲ್ಲಿದೆ.

ಮ್ಯಾನೇಜ್‌ಮೆಂಟ್‌ ರ‍್ಯಾಂಕಿಂಗ್‌ನಲ್ಲಿ ಐಐಎಂ ಬೆಂಗಳೂರು 2ನೇ ಸ್ಥಾನದಲ್ಲಿದೆ. ದೇಶದ ಟಾಪ್‌ 5 ಮೆಡಿಕಲ್‌ ಕಾಲೇಜುಗಳಲ್ಲಿ ಬೆಂಗಳೂರಿನ ನಿಮ್ಹಾನ್ಸ್‌ 4ನೇ ಸ್ಥಾನದಲ್ಲಿದೆ. ಟಾಪ್‌ ಕಾನೂನು ಕಾಲೇಜುಗಳಲ್ಲಿ ಬೆಂಗಳೂರಿನ ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾ ಯೂನಿವರ್ಸಿಟಿ ಮೊದಲ ಸ್ಥಾನದಲ್ಲಿದೆ.

ಮೈಸೂರು ಅರಸರ ಅಧಿಕಾರ ಮೊಟಕು ಮಾಡಲು ಮುಂದಾದ ಕಾಯಿದೆಗೆ ಹೈಕೋರ್ಟ್‌ ಮಧ್ಯಂತರ ತಡೆ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟ (Mysore Chamundi Hill) ಹಾಗೂ ಚಾಮುಂಡೇಶ್ವರಿ ದೇವಾಲಯದ (Chamundeshwari Temple) ದೇವಸ್ಥಾನದ ಅಭಿವೃದ್ಧಿ ಹಾಗೂ ನಿರ್ವಹಣೆಯಲ್ಲಿ ರಾಜಮನೆತನದವರ (Mysore dynasty) ಅಧಿಕಾರ ಮೊಟಕುಗೊಳಿಸುವ ‘ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ-2024’ ಜಾರಿಗೊಳಿಸದಂತೆ ರಾಜ್ಯ ಸರ್ಕಾರಕ್ಕೆ (Karnataka Govt) ನಿರ್ದೇಶಿಸಿ ಹೈಕೋರ್ಟ್‌ (Karnataka High Court) ಮಧ್ಯಂತರ ಆದೇಶ ನೀಡಿದೆ.

ರಾಜ್ಯ ಸರ್ಕಾರ ಜಾರಿ ಮಾಡಿರುವ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ-2024ರ ಹಲವು ಸೆಕ್ಷನ್‌ಗಳನ್ನು ಪ್ರಶ್ನಿಸಿ ಮೈಸೂರು ಒಡೆಯರ್‌ ವಂಶಸ್ಥೆ ಪ್ರಮೋದಾದೇವಿ ಒಡೆಯರ್‌ (Pramodadevi wadiyer) ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಪೀಠ, ಕಾಯಿದೆಯನ್ನು ಆ.22ರವರೆಗೆ ಜಾರಿಗೊಳಿಸದಂತೆ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಮೈಸೂರು ಅರಮನೆ ಮುಜರಾಯಿ ಸಂಸ್ಥೆಯ ಮುಖ್ಯಸ್ಥರೂ ಆದ ಜಿಲ್ಲಾಧಿಕಾರಿಗೆ ನೋಟಿಸ್‌ ಜಾರಿ ಮಾಡಿದೆ.

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆಯ ಪ್ರಕಾರ, ಚಾಮುಂಡೇಶ್ವರಿ ಬೆಟ್ಟದ ಅಭಿವೃದ್ಧಿ, ದೇವಸ್ಥಾನದ ಆಡಳಿತ ನಿರ್ವಹಣೆ, ಪೂಜಾ ಕೈಂಕರ್ಯ ನಡೆಸಲು ಪ್ರಾಧಿಕಾರದ ರಚನೆ ಮಾಡಲಾಗುತ್ತದೆ. ಆ ಪ್ರಾಧಿಕಾರದ ರಚನೆಯ ಸಂಪೂರ್ಣ ಅಧಿಕಾರ ಸರ್ಕಾರಕ್ಕೆ ಸೇರಿರುತ್ತದೆ. ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಲಿದ್ದಾರೆ. ಪದಾಧಿಕಾರಿಗಳಾಗಿ ಸ್ಥಳೀಯ ಶಾಸಕರು, ಸಚಿವರು, ಸಂಸದರು ಹಾಗೂ ಅಧಿಕಾರಿಗಳು ಇರಲಿದ್ದಾರೆ.

ಇದನ್ನೂ ಓದಿ: NIRF 2024 Rank: ದೇಶದಲ್ಲೇ ಮದ್ರಾಸ್ ಐಐಟಿ ಬೆಸ್ಟ್; ಬೆಂಗಳೂರಿನ ಐಐಎಸ್‌ಸಿ ನೆಕ್ಸ್ಟ್;‌ ಇಲ್ಲಿದೆ ಪೂರ್ಣ ಪಟ್ಟಿ

Continue Reading

ಪ್ರಮುಖ ಸುದ್ದಿ

Chamundi Hill: ಚಾಮುಂಡಿ ಬೆಟ್ಟದಲ್ಲಿ ಮೈಸೂರು ಅರಸರ ಅಧಿಕಾರ ಮೊಟಕು ಮಾಡಲು ಮುಂದಾದ ಕಾಯಿದೆಗೆ ಹೈಕೋರ್ಟ್‌ ಮಧ್ಯಂತರ ತಡೆ

Chamundi Hill: ರಾಜ್ಯ ಸರ್ಕಾರ ಜಾರಿ ಮಾಡಿರುವ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ-2024ರ ಹಲವು ಸೆಕ್ಷನ್‌ಗಳನ್ನು ಪ್ರಶ್ನಿಸಿ ಮೈಸೂರು ಒಡೆಯರ್‌ ವಂಶಸ್ಥೆ ಪ್ರಮೋದಾದೇವಿ ಒಡೆಯರ್‌ (Pramodadevi wadiyer) ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಪೀಠ, ಕಾಯಿದೆಯನ್ನು ಆ.22ರವರೆಗೆ ಜಾರಿಗೊಳಿಸದಂತೆ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

VISTARANEWS.COM


on

chamundi hill mysore high court
Koo

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟ (Mysore Chamundi Hill) ಹಾಗೂ ಚಾಮುಂಡೇಶ್ವರಿ ದೇವಾಲಯದ (Chamundeshwari Temple) ದೇವಸ್ಥಾನದ ಅಭಿವೃದ್ಧಿ ಹಾಗೂ ನಿರ್ವಹಣೆಯಲ್ಲಿ ರಾಜಮನೆತನದವರ (Mysore dynasty) ಅಧಿಕಾರ ಮೊಟಕುಗೊಳಿಸುವ ‘ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ-2024’ ಜಾರಿಗೊಳಿಸದಂತೆ ರಾಜ್ಯ ಸರ್ಕಾರಕ್ಕೆ (Karnataka Govt) ನಿರ್ದೇಶಿಸಿ ಹೈಕೋರ್ಟ್‌ (Karnataka High Court) ಮಧ್ಯಂತರ ಆದೇಶ ನೀಡಿದೆ.

ರಾಜ್ಯ ಸರ್ಕಾರ ಜಾರಿ ಮಾಡಿರುವ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ-2024ರ ಹಲವು ಸೆಕ್ಷನ್‌ಗಳನ್ನು ಪ್ರಶ್ನಿಸಿ ಮೈಸೂರು ಒಡೆಯರ್‌ ವಂಶಸ್ಥೆ ಪ್ರಮೋದಾದೇವಿ ಒಡೆಯರ್‌ (Pramodadevi wadiyer) ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಪೀಠ, ಕಾಯಿದೆಯನ್ನು ಆ.22ರವರೆಗೆ ಜಾರಿಗೊಳಿಸದಂತೆ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಮೈಸೂರು ಅರಮನೆ ಮುಜರಾಯಿ ಸಂಸ್ಥೆಯ ಮುಖ್ಯಸ್ಥರೂ ಆದ ಜಿಲ್ಲಾಧಿಕಾರಿಗೆ ನೋಟಿಸ್‌ ಜಾರಿ ಮಾಡಿದೆ.

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆಯ ಪ್ರಕಾರ, ಚಾಮುಂಡೇಶ್ವರಿ ಬೆಟ್ಟದ ಅಭಿವೃದ್ಧಿ, ದೇವಸ್ಥಾನದ ಆಡಳಿತ ನಿರ್ವಹಣೆ, ಪೂಜಾ ಕೈಂಕರ್ಯ ನಡೆಸಲು ಪ್ರಾಧಿಕಾರದ ರಚನೆ ಮಾಡಲಾಗುತ್ತದೆ. ಆ ಪ್ರಾಧಿಕಾರದ ರಚನೆಯ ಸಂಪೂರ್ಣ ಅಧಿಕಾರ ಸರ್ಕಾರಕ್ಕೆ ಸೇರಿರುತ್ತದೆ. ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಲಿದ್ದಾರೆ. ಪದಾಧಿಕಾರಿಗಳಾಗಿ ಸ್ಥಳೀಯ ಶಾಸಕರು, ಸಚಿವರು, ಸಂಸದರು ಹಾಗೂ ಅಧಿಕಾರಿಗಳು ಇರಲಿದ್ದಾರೆ.

ದೇವಸ್ಥಾನಕ್ಕೆ ಅರ್ಚಕರನ್ನು ನೇಮಕ ಮಾಡುವ ಅಧಿಕಾರವನ್ನು ಸರ್ಕಾರ ಹೊಂದಿರುತ್ತದೆ. ಪ್ರಾಧಿಕಾರದ ತೀರ್ಮಾನಗಳನ್ನು ಜಾರಿ ಮಾಡುವ ಹೊಣೆ ಕಾರ್ಯದರ್ಶಿಗೆ ನೀಡಲಾಗಿದೆ. ಆ ಮೂಲಕ ದೇವಸ್ಥಾನದ ನಿರ್ವಹಣೆ, ಜವಾಬ್ದಾರಿಗಳಲ್ಲಿ ಮೈಸೂರು ರಾಜಮನೆತನದವರು ಹೊಂದಿದ್ದ ಅಧಿಕಾರವನ್ನು ಮೊಟಕುಗೊಳಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಚಾಮುಂಡೇಶ್ವರಿಯು ಮೈಸೂರು ರಾಜಮನೆತನದ ದೇವತೆ. ಮೈಸೂರು ಮಹಾರಾಜರು ದೇವಸ್ಥಾನದ ಅಭಿವೃದ್ಧಿ, ನಿರ್ವಹಣೆ ಮತ್ತು ಪೂಜಾ ಕಾರ್ಯಗಳಲ್ಲಿ ಸದಾ ಪಾಲುದಾರರಾಗಿದ್ದಾರೆ. ಬೆಟ್ಟ ಹಾಗೂ ದೇವಸ್ಥಾನದ ಅಭಿವೃದ್ಧಿಗೆ ಅಪಾರವಾಗಿ ಶ್ರಮಿಸಿದ್ದಾರೆ. ದೇವಸ್ಥಾನಕ್ಕೆ ತಮ್ಮ ಅಮೂಲ್ಯ ಹಾಗೂ ಬೆಳೆಬಾಳುವ ಆಭರಣ, ಭೂಮಿ ನೀಡಿದ್ದಾರೆ. ಹೀಗಿದ್ದರೂ, ದೇವಸ್ಥಾನದ ಆಡಳಿತದಿಂದ ರಾಜಮನೆತನದವರು ಹೊಂದಿರುವ ಅಧಿಕಾರ ಮೊಟಕುಗೊಳಿಸಲು ಸರ್ಕಾರ ಈ ಕಾಯಿದೆ ರೂಪಿಸಿ ಜಾರಿಗೆ ತರಲು ಉದ್ದೇಶಿಸಿದೆ. ಆದ್ದರಿಂದ ಕಾಯಿದೆಯನ್ನು ಸಂವಿಧಾನಬಾಹಿರ ಹಾಗೂ ಅಕ್ರಮ ಎಂಬುದಾಗಿ ಘೋಷಿಸಬೇಕು ಎಂದು ಪ್ರಮೋದಾ ದೇವಿ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.

ಇದನ್ನೂ ಓದಿ: Ram Charan: ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆದ ರಾಮ್​ ಚರಣ್​!

Continue Reading

ಭವಿಷ್ಯ

Dina Bhavishya : ಅನಿರೀಕ್ಷಿತ ಸುದ್ದಿಯಿಂದಾಗಿ ಈ ರಾಶಿಯವರಿಗೆ ಇಡೀ ದಿನ ಖುಷಿಯೋ ಖುಷಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ವೃಶ್ಚಿಕ ರಾಶಿಯಿಂದ ಮಂಗಳವಾರ ಬೆಳಗ್ಗೆ 06:00 ಗಂಟೆಗೆ ಧನಸ್ಸು ರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಿಯವರಿಗೆ ದಿನದಲ್ಲಿ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷ ಮತ್ತು ಆನಂದ ತೆರೆದಿಡುತ್ತದೆ. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಅದರ ಬಗ್ಗೆ ಅನುಭವಿ ಜನರೊಂದಿಗೆ ಮಾತನಾಡಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (13-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ.
ತಿಥಿ: ಅಷ್ಟಮಿ 09:30 ವಾರ: ಮಂಗಳವಾರ
ನಕ್ಷತ್ರ: ವಿಶಾಖ 10:43 ಯೋಗ: ಬ್ರಹ್ಮ 16:32
ಕರಣ: ಭವ 09:30 ಅಮೃತಕಾಲ: ಮಧ್ಯರಾತ್ರಿ 01:10 ರಿಂದ 02:52
ದಿನದ ವಿಶೇಷ: ಮಂಗಳ ಗೌರೀ ವ್ರತ

ಸೂರ್ಯೋದಯ : 06:07   ಸೂರ್ಯಾಸ್ತ : 06:41

ರಾಹುಕಾಲ: ಮಧ್ಯಾಹ್ನ 03:33ರಿಂದ 05:07
ಗುಳಿಕಕಾಲ: ಮಧ್ಯಾಹ್ನ 12:24ರಿಂದ01:59
ಯಮಗಂಡಕಾಲ: ಬೆಳಗ್ಗೆ 09:16 ರಿಂದ 10:50

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬೆಂಬಲ ನೀಡುವ ಸ್ನೇಹಿತರು ನಿಮ್ಮನ್ನು ಸಂತೋಷವಾಗಿ ಇರಿಸುತ್ತಾರೆ. ಇಂದು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್ಥಿಕವಾಗಿ ಸುದೃಢ ಇರಲಿದೆ. ಆರೋಗ್ಯ ಪರಿಪೂರ್ಣ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ದಿನದಲ್ಲಿ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷ ಮತ್ತು ಆನಂದ ತೆರೆದಿಡುತ್ತದೆ. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಅದರ ಬಗ್ಗೆ ಅನುಭವಿ ಜನರೊಂದಿಗೆ ಮಾತನಾಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಭಲತೆ ಇರಲಿದೆ. ಕೌಟಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ನಿಮ್ಮ ಸಭ್ಯ ನಡವಳಿಕೆ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ವಿದೇಶಕ್ಕೆ ಹೋಗಿ ಅಧ್ಯಯನ ಮಾಡಲು ಬಯಸುತ್ತಿದ್ದರೆ ಆರ್ಥಿಕ ಬಿಕ್ಕಟ್ಟು ಆಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ:ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತವಾಗಿರಲಿದೆ. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು ತೊಂದರೆಗೆ ಕಾರಣವಾಗುತ್ತದೆ. ಆರೋಗ್ಯ ಪರಿಪೂರ್ಣವಾಗಿ ಇದ್ದರೂ, ದೈಹಿಕ ಶ್ರಮ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದುವ ಸಾಧ್ಯತೆ ಇದೆ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಮಕ್ಕಳಿಂದ ಅನಿರೀಕ್ಷಿತ ಸುದ್ದಿ ಸಂತೋಷದ ಕ್ಷಣಗಳನ್ನು ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭವಾಗಲಿ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಸ್ನೇಹಿತರು ನಿಮ್ಮ ಆಲೋಚನೆಗಳ ಮೇಲೆ ಗಮನಾರ್ಹ ಪ್ರಭಾವ ಬೀರಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಅತಿಥಿಗಳ ಆಗಮನವಾಗಲಿದೆ. ಸಕರಾತ್ಮಕ ಆಲೋಚನೆಗಳು ನಿಮ್ಮ ಉತ್ಸಾಹ ಇಮ್ಮಡಿಗೊಳಿಸಿಲಿದೆ. ಆರೋಗ್ಯ ಪರಿಪೂರ್ಣ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಕಾರಾತ್ಮಕ ಆಲೋಚನೆಗಳು ತಲೆದೊರಲಿವೆ. ಆದಷ್ಟು ಯೋಗ ಧ್ಯಾನದ ಮೂಲಕ ನೆಮ್ಮದಿ ತಂದುಕೊಳ್ಳುವುದು ಉತ್ತಮ. ಸ್ನೇಹಿತರೊಂದಿಗೆ ಕಾಲಕಳಿಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಇಂದು ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ ಹಣ ಮಾಡುತ್ತೀರಿ. ನಿಮ್ಮ ಭವಿಷ್ಯವನ್ನು ಯೋಜಿಸಲು ಸೂಕ್ತ ದಿನವಿದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ನಿಮ್ಮ ಆರೋಗ್ಯ ಇಂದು ಪರಿಪೂರ್ಣವಾಗಿಲ್ಲದಿದ್ದರಿಂದ ನೀವು ನಿಮ್ಮ ಕೆಲಸದ ಮೇಲೆ ಗಮನ ಕೊಡುವುದು ಕಷ್ಟವಾಗಬಹುದು. ಸಣ್ಣ ಉದ್ಯೋಗವನ್ನು ಮಾಡುವ ಜನರು, ಇಂದು ತಮ್ಮ ಆಪ್ತರಿಂದ ಯಾವುದೇ ಸಲಹೆಯನ್ನು ಪಡೆಯಬಹುದು. ಇದರಿಂದ ಅವರಿಗೆ ಆರ್ಥಿಕವಾಗಿ ಲಾಭ ಪಡೆಯುವ ಸಾಧ್ಯತೆ ಇದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಸ್ನೇಹಿತರೊಂದಿಗೆ ವಿರಾಮ ಭೋಜನದಲ್ಲಿ ಭಾಗಿಯಾಗುವಿರಿ. ಇದು ಒತ್ತಡದಿಂದ ಕೂಡಿದ್ದರೂ ಹೆಚ್ಚು ಲಾಭದಾಯಕವಾಗಿರುತ್ತದೆ.ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಇಂದು ನಿಮಗೆ ಖರ್ಚಿನ ದಿನವಾಗಿರಲಿದೆ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಆಭರಣದ ಹೂಡಿಕೆ ವ್ಯವಹಾರಗಳಲ್ಲಿ ಲಾಭ ಇರಲಿದೆ. ಸಮೃದ್ಧಿ ತುಂಬಿದ ದಿನವಿರಲಿದೆ. ನಿಮ್ಮ ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಅನಿರಿಕ್ಷಿತ ಲಾಭ ಸಿಗಲಿದೆ. ಸಮಸ್ಯೆಗಳ ಕುರಿತು ಚಿಂತೆ ಮಾಡುವುದು ಬೇಡ. ಆರೋಗ್ಯ ಪರಿಪೂರ್ಣ ಇರಲಿದೆ. ಆರ್ಥಿಕವಾಗಿ ಸುದೃಢ ವಾತಾವರಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Namma Metro
ಪ್ರಮುಖ ಸುದ್ದಿ7 mins ago

Namma Metro: ಹಸಿರು ಮಾರ್ಗದಲ್ಲಿ ಇಂದಿನಿಂದ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

Vinesh Phogat
ಕ್ರೀಡೆ12 mins ago

Vinesh Phogat: ಇಂದು ವಿನೇಶ್ ಫೋಗಟ್ ಬೆಳ್ಳಿ ಪದಕದ ತೀರ್ಪು ಪ್ರಕಟ

Gowri Movie
ಸ್ಯಾಂಡಲ್ ವುಡ್19 mins ago

Gowri Movie: ʼಗೌರಿʼ ಚಿತ್ರದ ಅದ್ಧೂರಿ ಪ್ರೀ ರಿಲೀಸ್ ಇವೆಂಟ್‌; ರಿಯಲ್‌ ಸ್ಟಾರ್‌ ಉಪೇಂದ್ರ ಸಾಥ್‌

IISc Bangalore
ಪ್ರಮುಖ ಸುದ್ದಿ43 mins ago

IISc Bangalore: ರಾಷ್ಟ್ರೀಯ ರ‍್ಯಾಂಕಿಂಗ್‌ನಲ್ಲಿ ಬೆಂಗಳೂರಿನ ಐಐಎಸ್‌ಸಿ; ರಾಜ್ಯದ ಹಲವು ಸಂಸ್ಥೆಗಳಿಗೆ ಗರಿ

Sheikh Hasina
ವಿದೇಶ46 mins ago

ಶೇಖ್‌ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿರುವುದು ದ್ವಿಪಕ್ಷೀಯ ಸಂಬಂಧದ ಮೇಲೆ ಪರಿಣಾಮ ಬೀರುತ್ತಾ? ಬಾಂಗ್ಲಾದೇಶ ಹೇಳಿದ್ದೇನು?

Bengaluru Power Cut
ಕರ್ನಾಟಕ1 hour ago

Bengaluru Power Cut: ಬೆಂಗಳೂರಿನಲ್ಲಿ ಇಂದು ಪವರ್‌ ಕಟ್‌- ಈ ಪ್ರದೇಶಗಳಲ್ಲಿ ಕರೆಂಟ್‌ ಇರೋದಿಲ್ಲ

chamundi hill mysore high court
ಪ್ರಮುಖ ಸುದ್ದಿ1 hour ago

Chamundi Hill: ಚಾಮುಂಡಿ ಬೆಟ್ಟದಲ್ಲಿ ಮೈಸೂರು ಅರಸರ ಅಧಿಕಾರ ಮೊಟಕು ಮಾಡಲು ಮುಂದಾದ ಕಾಯಿದೆಗೆ ಹೈಕೋರ್ಟ್‌ ಮಧ್ಯಂತರ ತಡೆ

Ceramic Cookware
ಆರೋಗ್ಯ2 hours ago

Ceramic Cookware: ಪಿಂಗಾಣಿ ಪಾತ್ರೆಗಳನ್ನು ಅಡುಗೆಗೆ ಬಳಸಿದರೆ ಏನಾಗುತ್ತದೆ?

CM Siddaramaiah 1
ಪ್ರಮುಖ ಸುದ್ದಿ2 hours ago

CM Siddaramaiah: ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಮೇಲೆ ಪ್ರಕರಣ, ಇಂದು ಕೋರ್ಟ್‌ ತೀರ್ಮಾನ

karnataka weather forecast
ಮಳೆ3 hours ago

Karnataka Weather : ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಈ ನಾಲ್ಕು ಜಿಲ್ಲೆಗಳಿಗೆ ಎಚ್ಚರಿಕೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ7 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌