COMEDK UGET 2024 : ಇಂದು ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ; ರಿಸಲ್ಟ್​ ನೋಡೋದು, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ? - Vistara News

ಪ್ರಮುಖ ಸುದ್ದಿ

COMEDK UGET 2024 : ಇಂದು ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ; ರಿಸಲ್ಟ್​ ನೋಡೋದು, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

COMEDK UGET 2024: ಕಾಮೆಡ್‌ – ಕೆ ಪರೀಕ್ಷೆಯನ್ನು ದೇಶಾದ್ಯಂತ 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಡೆದಿತ್ತು. ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಸಲಾಗುವ ಈ ಪ್ರವೇಶ ಪರೀಕ್ಷೆ ಪದವಿ ಪೂರ್ವ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್‌ ಕೋರ್ಸ್‌ಗಳ ಪ್ರವೇಶಕ್ಕೆ ಹೆದ್ದಾರಿಯಾಗಿದೆ. ಶುಕ್ರವಾರ (ಮೇ 24) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುತ್ತದೆ. COMEDK UGET 2024ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ.

VISTARANEWS.COM


on

COMEDK UGET 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (COMEDK) ನಡೆಸಿರುವ 2024ರ ವರ್ಷದ ಪ್ರವೇಶ ಪರೀಕ್ಷೆಯ (UGET) ಫಲಿತಾಂಶವನ್ನು ಶುಕ್ರವಾರ (ಮೇ 24) ಮಧ್ಯಾಹ್ನ 2 ಗಂಟೆಗೆ ಪ್ರಕಟಗೊಳ್ಳಲಿದೆ . COMEDK UGET 2024ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್​​ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದ್ದು, ಡೌನ್‌ಲೋಡ್ ಮಾಡಿಕೊಳ್ಳುವ ಅವಕಾಶವನ್ನೂ ಕಲ್ಪಿಸಲಾಗಿದೆ.

ಕರ್ನಾಟಕದ 150 ಪ್ರೈವೇಟ್‌ ಎಂಜಿನಿಯರಿಂಗ್ ಕಾಲೇಜು, ದೇಶದ ಕೆಲವು ಕಡೆ ಇರುವ 40 ಖಾಸಗಿ ವಿವಿಗಳಲ್ಲಿನ ಸುಮಾರು 22 ಸಾವಿರ ಎಂಜಿನಿಯರಿಂಗ್ ಸೀಟುಗಳ ಪ್ರವೇಶಾತಿಗಾಗಿ ಈ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ದೇಶದ 1,03,799 (ಶೇಕಡಾ 87.96) ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಶುಕ್ರವಾರ ಅವರ ಭವಿಷ್ಯ ನಿರ್ಧಾರ ಆಗಲಿದೆ. ವಿದ್ಯಾರ್ಥಿಗಳು ತಮ್ಮ ಶ್ರೇಯಾಂಕದ ಪಟ್ಟಿಯನ್ನು ಪರಿಶೀಲಿಸಿಕೊಂಡು ಸ್ಕೋರ್‌ ಕಾರ್ಡ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

COMEDK UGET ಫಲಿತಾಂಶ 2024 ಪರಿಶೀಲನೆ ಹೇಗೆ?

  • ಹಂತ 1: ಕಾಮೆಡ್‌ಕೆ ಪರೀಕ್ಷಾ ಪೋರ್ಟಲ್‌ಗೆ ಭೇಟಿ ನೀಡಿ.
  • ಹಂತ 2: COMEDK UGET 2024 ಫಲಿತಾಂಶದ ಲಾಗಿನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಹಂತ 3: ನಿಮ್ಮ ಲಾಗಿನ್ ರುಜುವಾತುಗಳನ್ನು ನಮೂದಿಸಿ – ಅಪ್ಲಿಕೇಶನ್ ಸಂಖ್ಯೆ ಅಥವಾ ಬಳಕೆದಾರ ID ಮತ್ತು ಪಾಸ್‌ವರ್ಡ್ ಮತ್ತು ನಂತರ ಸಲ್ಲಿಸು ಮೇಲೆ ಕ್ಲಿಕ್ ಮಾಡಿ.
  • ಹಂತ 4: COMEDK UGET ಫಲಿತಾಂಶ 2024 ಪರದೆಯ ಮೇಲೆ ಕಾಣಿಸುತ್ತದೆ.
  • ಹಂತ 5: ಕೀ ಉತ್ತರವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ.

ವಾರದಲ್ಲಿ ಕೌನ್ಸೆಲಿಂಗ್‌ ನೋಂದಣಿ ಆರಂಭ

ಮೇ 24ರಂದು ಕಾಮೆಡ್‌ಕೆ ರಿಸಲ್ಟ್‌ ಪ್ರಕಟವಾಗಿ ವಾರದಲ್ಲಿ ಕೌನ್ಸೆಲಿಂಗ್‌ ನೋಂದಣಿ ಆರಂಭವಾಗಲಿದೆ. ಕರ್ನಾಟಕದಲ್ಲಿರುವ 150 ಖಾಸಗಿ ಎಂಜಿನಿಯರಿಂಗ್ ಕಾಲೇಜು ಮತ್ತು ದೇಶದ ವಿವಿಧ ಕಡೆ ಇರುವ 40 ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಯಾವ ಕಡೆಯಲ್ಲಾದರೂ ಪ್ರವೇಶ ಪಡೆಯಬೇಕೆಂದರೆ ಇಲ್ಲಿ ನೋಂದಣಿಯನ್ನು ಮಾಡಿಕೊಂಡಿರಬೇಕು.

ಇದನ್ನೂ ಓದಿ: Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

ಪ್ರತಿ ವರ್ಷ ಮೇ ತಿಂಗಳಲ್ಲಿ ಕಾಮೆಡ್‌-ಕೆ ಪರೀಕ್ಷೆ

ಕಾಮೆಡ್‌ – ಕೆ ಪರೀಕ್ಷೆಯನ್ನು ದೇಶಾದ್ಯಂತ ನಡೆಸಲಾಗಿದ್ದು, 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಈ ಪ್ರವೇಶ ಪರೀಕ್ಷೆಯು ಪದವಿ ಪೂರ್ವ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್‌ ಕೋರ್ಸ್‌ಗಳ ಪ್ರವೇಶಕ್ಕೆ ಬುನಾದಿಯಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Parenting Tips: ನೀವು ಹೊಸ ಅಪ್ಪ ಅಮ್ಮಂದಿರೇ? ನಿಮಗಿದೆ ಇಲ್ಲಿ ಮುಖ್ಯವಾದ ಟಿಪ್ಸ್!

Parenting Tips: ನಿದ್ದೆಯಿಲ್ಲದ ರಾತ್ರಿಗಳು, ಬಿಡುವಿಲ್ಲದ ಕೆಲಸ, ರಚ್ಚೆ ಹಿಡಿದು ಅಳುವ ರಾತ್ರಿಗಳು ಹೀಗೆ ಪ್ರತಿದಿನವೂ ಒಂದಿಲ್ಲೊಂದು ಸಮಸ್ಯೆಗಳು. ಮನೆಯಲ್ಲಿ ಹಿರಿಯರ ಮಾರ್ಗದರ್ಶನ, ಸಹಾಯ ಇದ್ದರೆ ಇಂತಹ ತೊಂದರೆಗಳಲ್ಲಿ ಕೊಂಚ ಧೈರ್ಯ, ನೆಮ್ಮದಿ ಇರಬಹುದಾದರೂ ಈ ಸಂದರ್ಭ ಸವಾಲೂ ಹೌದು. ಒಂಟಿಯಾಗಿ ನಗರಗಳಲ್ಲಿ ಇರುವ ಸಣ್ಣ ವಯಸ್ಸಿನ ಅಪ್ಪ ಅಮ್ಮಂದಿರಿಗೆ ಈ ಹೊಸ ಬದುಕು ಆರಂಭದಲ್ಲಿ ಬಹು ಕಷ್ಟವೂ ಹೌದು. ಅಂಥ ಹೊಸ ಹೆತ್ತವರಿಗೆ ಇಲ್ಲಿವೆ ಬಹುಮುಖ್ಯವಾದ ಟಿಪ್ಸ್‌.

VISTARANEWS.COM


on

Parenting Tips
Koo

ಅಪ್ಪ ಅಮ್ಮನಾಗುವುದು ಪ್ರತಿಯೊಬ್ಬರ ಜೀವನದ ಬಹುಮುಖ್ಯ ಘಟ್ಟ. ಆಗಷ್ಟೇ ಹೊಟ್ಟೆಯಿಂದ ಹೊರಬಂದ ಮಗುವಿಗೆ ಹೇಗೆ ಈ ಜಗತ್ತು ಹೊಸದೋ ಹಾಗೆಯೇ ಅಪ್ಪ ಅಮ್ಮಂದಿರಿಗೂ ಈ ಜಗತ್ತು ಹೊಸದೇ. ಮಗುವಿನ ಹಾಗೆ ಅವರೂ ಮಕ್ಕಳ ಲೋಕವನ್ನು ಕಣ್ಣು ಬಿಟ್ಟು ನೋಡಲು ಶುರು ಮಾಡುವ ಹೊತ್ತಿದು. ಮಗು ಬಂದ ಮೇಲೆ ಹೇಗಿರಬಹುದು ಎಂದು ಕನಸು ಕಾಣುತ್ತಾ ಒಂಬತ್ತು ತಿಂಗಳು ಕಳೆದ ಜೋಡಿಗೆ ಮಗುವಿನ ಲೋಕದ ಬಗ್ಗೆ ಕಂಡಿದ್ದ ಕನಸುಗಳೆಲ್ಲವೂ ಒಮ್ಮೆಲೆ ವಾಸ್ತವದಿಂದ ದೂರ ಇದೆ ಅನಿಸಬಹುದು. ಯಾಕೆಂದರೆ, ಆ ಸಮಯ ಬದುಕಿನ ಅತ್ಯಂತ ಮುಖ್ಯವಾದ ನೆನಪಿನಲ್ಲಿಟ್ಟುಕೊಳ್ಳುವ ಖುಷಿಯ ಗಳಿಗೆ ಎಂಬುದು ನಿಜವೇ ಆದರೂ, ಹೊಸ ಅಪ್ಪ ಅಮ್ಮಂದಿರಿಗೆ (Parenting Tips) ಈ ಹೊಸ ಲೋಕದಲ್ಲಿ ಸಾಕಷ್ಟು ಸವಾಲುಗಳು ದಿಢೀರ್‌ ಎದುರಾಗುತ್ತವೆ. ನಿದ್ದೆಯಿಲ್ಲದ ರಾತ್ರಿಗಳು, ಬಿಡುವಿಲ್ಲದ ಕೆಲಸ, ರಚ್ಚೆ ಹಿಡಿದು ಅಳುವ ರಾತ್ರಿಗಳು ಹೀಗೆ ಪ್ರತಿದಿನವೂ ಒಂದಿಲ್ಲೊಂದು ಸಮಸ್ಯೆಗಳು. ಮನೆಯಲ್ಲಿ ಹಿರಿಯರ ಮಾರ್ಗದರ್ಶನ, ಸಹಾಯ ಇದ್ದರೆ ಇಂತಹ ತೊಂದರೆಗಳಲ್ಲಿ ಕೊಂಚ ಧೈರ್ಯ, ನೆಮ್ಮದಿ ಇರಬಹುದಾದರೂ ಈ ಸಂದರ್ಭ ಸವಾಲೂ ಹೌದು. ಒಂಟಿಯಾಗಿ ನಗರಗಳಲ್ಲಿ ಇರುವ ಸಣ್ಣ ವಯಸ್ಸಿನ ಅಪ್ಪ ಅಮ್ಮಂದಿರಿಗೆ ಈ ಹೊಸ ಬದುಕು ಆರಂಭದಲ್ಲಿ ಬಹು ಕಷ್ಟವೂ ಹೌದು. ಅಂಥ ಹೊಸ ಹೆತ್ತವರಿಗೆ (Parents) ಇಲ್ಲಿವೆ ಬಹುಮುಖ್ಯವಾದ ಟಿಪ್ಸ್‌.

  1. ಮಗುವಿನ ಆಗಮನವಾದಾಗ ಅಷ್ಟರವರೆಗೆ ಮನೆಯಲ್ಲಿದ್ದ ಬದುಕಿನ ಕ್ರಮ, ವೇಳಾಪಟ್ಟಿ ಎಲ್ಲವೂ ಅಲ್ಲೋಲ ಕಲ್ಲೋಲವಾಗುತ್ತದೆ. ಇಂಥ ಸಂದರ್ಭ ಗಂಡ ತನ್ನ ಹೆಂಡತಿಯ ಬದಲಾದ ಹೊಸ ಪ್ರಪಂಚವನ್ನು ಪರಿಪೂರ್ಣ ಮನಸ್ಸಿನಿಂದ ಅರ್ಥ ಮಾಡಿಕೊಳ್ಳಬೇಕು. ಯಾಕೆಂದರೆ ಆಕೆಯ ದಿನಚರಿ ಸಂಪೂರ್ಣ ಬದಲಾಗಿರುತ್ತದೆಯಷ್ಟೇ ಅಲ್ಲ, ಆಕೆ, ಆಗಷ್ಟೇ ಹೆರಿಗೆಯಿಂದ ಮರುಜನ್ಮ ಪಡೆದಿರುತ್ತಾಳೆ. ಹೀಗಾಗಿ ಮಗುವಿಗೆ ಹೇಗೆ ಹೊಸ ಪ್ರಪಂಚವೋ ತಾಯಿಗೂ ಇದು ತಾಯಿಯಾಗಿ ಹೊಸ ಪ್ರಪಂಚ. ಹೊಸ ಜೀವದ ಪಾಲನೆ ಪೋಷಣೆ ಅಷ್ಟು ಸುಲಭದ ಕೆಲಸವಲ್ಲ. ಮಗುವಿನ ಪಾಲನೆಯಲ್ಲಿ ಆಕೆಗೆ ನೆರವಿನ ಹಸ್ತವಾಗಿ ಗಂಡ ಯಾವಾಗಲೂ ಜೊತೆಗಿರಬೇಕು.
  2. ಮಾನಸಿಕವಾಗಿ, ದೈಹಿಕವಾಗಿ ಆತನ ಸಪೋರ್ಟ್‌ ಅತ್ಯಂತ ಅಗತ್ಯ. ಮುಖ್ಯವಾಗಿ ಹೆಂಡತಿಯ ನಿದ್ದೆಗಾಗಿ ಗಂಡನಾದವನು ಕೊಂಚ ತನ್ನ ನಿದ್ದೆಯನ್ನೂ, ಕೆಲಸದ ಒತ್ತಡವನ್ನೂ ಬದಿಗಿಡಬೇಕಾಗುತ್ತದೆ. ಹೆಂಡತಿ ಇಡೀ ದಿನ ಮಗುವನ್ನು ನೋಡಿಕೊಂಡು ಸುಸ್ತಾಗಿರುತ್ತಾಳೆ ಎಂಬುದನ್ನು ಅರಿತುಕೊಂಡು, ಕೆಲ ಗಂಟೆಗಳ ಕಾಲ ತಾನು ಮಗುವನ್ನು ನೋಡಿಕೊಳ್ಳುವುದು, ಆ ಸಮಯದಲ್ಲಿ ಹೆಂಡತಿ ಮಲಗುವುದು ಮಾಡಿದರೆ ಆಕೆಗೂ ವಿಶ್ರಾಂತಿ ಸಿಗುತ್ತದೆ. ರಾತ್ರಿಯಲ್ಲಿ ನಾಲ್ಕಾರು ಬಾರಿ ಎದ್ದು ಮಗುವಿಗೆ ಹಾಲುಣಿಸುವ ಸಂದರ್ಭ ಮಗುವಿನ ಅಮ್ಮನಿಗೆ ನಿದ್ದೆ ಸರಿಯಾಗಿ ಆಗಿರುವುದಿಲ್ಲ ಎಂಬುದನ್ನು ಅರಿಯುವ ಗಂಡನಿದ್ದರೆ ಹೆಂಡತಿಗೆ ಅದೇ ದೊಡ್ಡ ಸಪೋರ್ಟ್‌. ಒಂದಿಷ್ಟು ಹೊತ್ತು ಮಗುವನ್ನು ನೋಡಿಕೊಳ್ಳುವ ಕೆಲಸವನ್ನು ಗಂಡನಾದವನು ಹಂಚಿಕೊಂಡರೆ, ಅದು ದೊಡ್ಡ ಸಹಾಯವಾಗುತ್ತದೆ. ಉದಾಹರಣೆಗೆ ವೀಕೆಂಡಿನಲ್ಲಿ ಅಥವಾ ರಜಾ ದಿನಗಳಲ್ಲಿ, ಅಥವಾ ನಿತ್ಯವೂ ಅಪ್ಪ ಆಫೀಸಿನಿಂದ ಬಂದ ಮೇಲಿನ ಸ್ವಲ್ಪ ಹೊತ್ತು ಅಪ್ಪನ ಜೊತೆಗಿನ ಸಮಯ ಎಂದು ನಿಗದಿ ಮಾಡಿದರೆ ಕೊಂಚ ಅಮ್ಮನಿಗೂ ಸಮಯ ಸಿಗುತ್ತದೆ.
  3. ತಾಯಿಯಾದವಳು ಆರಂಭದಲ್ಲಿ ಮಗು ಮಲಗುವಾಗ ನಿದ್ದೆ ಮಾಡಿಬಿಡಬೇಕು. ಇದು ಹಿರಿಯರಾದಿಯಾಗಿ ಎಲ್ಲರೂ ನೀಡುವ ಬೆಸ್ಟ್‌ ಸಲಹೆ. ಯಾಕೆಂದರೆ, ಮಗು ಎದ್ದರೆ, ಆಕೆಗೆ ನಿದ್ದೆ ಸಿಗದು. ಮಗುವಿಗೆ ಒಂದು ನಿಗದಿತ ಸಮಯದಲ್ಲಿ ಮಲಗುವ ಅಭ್ಯಾಸ ಮಾಡಿಸಿದರೆ ಒಳ್ಳೆಯದು. ಅದೇ ಸಮಯದಲ್ಲಿ ಬೇರೆ ಕೆಲಸಗಳಿಗೆ ಕೈ ಹಾಕದೆ, ನಿದ್ದೆಯ ಮೇಲೆ ಗಮನ ಕೊಡುವುದು ಹೊಸ ತಾಯಂದಿರಿಗೆ ಅತ್ಯಂತ ಸೂಕ್ತ.
  4. ಬಾಟಲಿ ಹಾಲೂ ಅಭ್ಯಾಸ ಮಾಡಿ. ಎದೆ ಹಾಲು ಕುಡಿಸುವುದು ಒಂದು ದಿವ್ಯ ಅನುಭವ ಹೌದಾದರೂ ಅದು ಬೆಳೆಯುತ್ತಾ ಹೋದ ಮೇಲೆ ಕಷ್ಟ. ಆರಂಭದ ಆರು ತಿಂಗಳಲ್ಲಿ ಎದೆ ಹಾಲೇ ಹೆಚ್ಚು ಕುಡಿಸಿದರೂ ನಂತರ ನಿಧಾನವಾಗಿ ಬಾಟಲಿಯನ್ನು ಮಧ್ಯೆ ಮಧ್ಯೆ ಅಭ್ಯಾಸ ಮಾಡಿಸಿದರೆ, ಅಮ್ಮ ಹೊರಗೆ ಹೋಗಬೇಕಾದಾಗ ಸುಲಭವಾಗುತ್ತದೆ. ಮಗು ಬೇಗನೆ ಪರಿಸ್ಥಿತಿಗೆ ಹೊಂದಿಕೊಳ್ಳುತ್ತದೆ.
  5. ತೂಗುವ ತೊಟ್ಟಿಲನ್ನು ಮಗುವಿಗೆ ಬಳಸಿ. ಮಗುವನ್ನು ತೂಗಿ ಮಲಗಿಸುವುದನ್ನು ಅಭ್ಯಾಸ ಮಾಡಿ. ಕೈಯಲ್ಲಿ ಹಿಡಿದೇ ಮಲಗಿಸುವುದನ್ನು ಅಭ್ಯಾಸ ಮಾಡಿಸಿ ಬಿಟ್ಟರೆ ಮಗು ಬೇಗನೆ ಅಮ್ಮನ ಬೆಚ್ಚನೆಯ ಸ್ಪರ್ಶಕ್ಕೇ ಹೊಂದಿಕೊಂಡು ಬಿಡುತ್ತದೆ. ಅಮ್ಮ ಇಲ್ಲದಿದ್ದರೆ, ಸ್ಪರ್ಶ ಸಿಗದಿದ್ದರೆ ನಿದ್ದೆ ಮಾಡುವುದೇ ಇಲ್ಲ.
  6. ಮಗುವಿಗೆ ಹಾಲುಣಿಸುವ ಸಂದರ್ಭ ಆಗಾಗ ಏಳುವ ಕಾರಣ ಅಮ್ಮಂದಿರಿಗೆ ಹಸಿವಾಗುತ್ತದೆ. ಇಂತಹ ಸಂದರ್ಭಕ್ಕಾಗಿ, ಒಂದಿಷ್ಟು ಆರೋಗ್ಯಕರ ಹಣ್ಣು, ಒಣಹಣ್ಣು- ಬೀಜಗಳು ಇತ್ಯಾದಿಗಳನ್ನು ಜೊತೆಗಿಡಿ. ಇಲ್ಲವಾದರೆ ಹಾಲುಣಿಸುವ ತಾಯಿಗೇ ನಿಶ್ಯಕ್ತಿಯ ಸಮಸ್ಯೆ ಆರಂಭವಾಗುತ್ತದೆ.

ಇದನ್ನೂ ಓದಿ | Health Tips: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ

Continue Reading

ದೇಶ

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Amit Shah: ಕೆಲ ದಿನಗಳ ಹಿಂದಷ್ಟೇ ನರೇಂದ್ರ ಮೋದಿ ಅವರು ಕೂಡ ಜಮ್ಮು-ಕಾಶ್ಮೀರ ಭದ್ರತೆ ಕುರಿತಂತೆ ಉನ್ನತಮಟ್ಟದ ಸಭೆ ನಡೆಸಿದ್ದರು. ಎಲ್ಲ ಸೈನಿಕರನ್ನು ಗಡಿ ಸೇರಿ ಆಯಕಟ್ಟಿನ ಪ್ರದೇಶಗಳಿಗೆ ನಿಯೋಜಿಸಬೇಕು ಎಂಬುದಾಗಿ ಸೂಚಿಸಿದ್ದರು. ಈಗ ಅಮಿತ್‌ ಶಾ ಅವರೂ ಉನ್ನತ ಮಟ್ಟದ ಸಭೆ ನಡೆಸಿ, ಕಾಶ್ಮೀರದಲ್ಲಿ ಉಗ್ರವಾದವನ್ನು ನಿರ್ಮೂಲನೆ ಮಾಡಬೇಕು ಎಂಬುದಾಗಿ ಅಧಿಕಾರಿಗಳು, ಭದ್ರತಾ ಸಿಬ್ಬಂದಿಗೆ ಸೂಚಿಸಿದ್ದಾರೆ.

VISTARANEWS.COM


on

Amit Shah
Koo

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಇತ್ತೀಚೆಗೆ ಉಗ್ರರ ದಾಳಿಗಳು ಜಾಸ್ತಿಯಾಗಿವೆ. ಅದರಲ್ಲೂ, ಯಾತ್ರೆಗೆ ತೆರಳುವ ಹಿಂದುಗಳು, ನಾಗರಿಕರನ್ನು ಗುರಿಯಾಗಿಸಿ ಉಗ್ರರು ದಾಳಿ ಮಾಡುತ್ತಿದ್ದು, ಕಣಿವೆಯಲ್ಲಿ ಭದ್ರತೆ ಕುರಿತು ಆತಂಕ ಎದುರಾಗಿದೆ. ಇದರ ಬೆನ್ನಲ್ಲೇ, ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ಜಮ್ಮು-ಕಾಶ್ಮೀರ ಭದ್ರತೆ ಕುರಿತು ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. “ಜಮ್ಮುವಿನಲ್ಲಿ ಉಗ್ರವಾದವನ್ನು ಸಂಪೂರ್ಣವಾಗಿ ನಿಗ್ರಹಿಸಬೇಕು” ಎಂಬುದು ಸೇರಿ ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದ್ದಾರೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌, ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ, ಗೃಹ ಕಾರ್ಯದರ್ಶಿ ಅಜಯ್‌ ಭಲ್ಲಾ, ಗುಪ್ತಚರ ಸಂಸ್ಥೆ (IB) ನಿರ್ದೇಶಕ ತಪನ್‌ ದೇಕಾ, ಸಿಆರ್‌ಪಿಎಫ್‌ ಮಹಾ ನಿರ್ದೇಶಕ ದಯಾಳ್‌ ಸಿಂಗ್‌ ಸೇರಿ ಹಲವು ಅಧಿಕಾರಿಗಳೊಂದಿಗೆ ಅಮಿತ್‌ ಶಾ ಅವರು ಉನ್ನತ ಮಟ್ಟದ ಸಭೆ ನಡೆಸಿದರು. ಜೂನ್‌ 26ರಿಂದ ಅಮರನಾಥ್‌ ಯಾತ್ರೆ ಕೈಗೊಳ್ಳಲಾಗುತ್ತದೆ. ಜೂನ್‌ 21ರಂದು ಶ್ರೀನಗರದಲ್ಲಿ ನಡೆಯುವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಹಾಗಾಗಿ, ಕಾಶ್ಮೀರದ ಭದ್ರತೆಯು ಪ್ರಮುಖವಾಗಿದೆ.

“ಜಮ್ಮು-ಕಾಶ್ಮೀರದಲ್ಲಿ ಉಗ್ರವಾದವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಕಾಶ್ಮೀರದಲ್ಲಿ ನಿಗ್ರಹಿಸಿದಂತೆ ಜಮ್ಮುವಿನಲ್ಲೂ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು. ಗಡಿಗಳನ್ನು ಇನ್ನಷ್ಟು ಭದ್ರಗೊಳಿಸಬೇಕು. ಒಳನುಸುಳುಕೋರರ ಮೇಲೆ ಹದ್ದಿನ ಕಣ್ಣಿಡಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು” ಎಂದು ಭದ್ರತಾ ಪಡೆಗಳಿಗೆ ಅಮಿತ್‌ ಶಾ ಸೂಚಿಸಿದರು. ಕೆಲ ದಿನಗಳ ಹಿಂದಷ್ಟೇ ನರೇಂದ್ರ ಮೋದಿ ಅವರು ಕೂಡ ಜಮ್ಮು-ಕಾಶ್ಮೀರ ಭದ್ರತೆ ಕುರಿತಂತೆ ಉನ್ನತಮಟ್ಟದ ಸಭೆ ನಡೆಸಿದ್ದರು. ಎಲ್ಲ ಸೈನಿಕರನ್ನು ಗಡಿ ಸೇರಿ ಆಯಕಟ್ಟಿನ ಪ್ರದೇಶಗಳಿಗೆ ನಿಯೋಜಿಸಬೇಕು ಎಂಬುದಾಗಿ ಸೂಚಿಸಿದ್ದರು.

ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಜೂನ್ 9ರಂದು ನಡೆದ ಭಯೋತ್ಪಾದಕರ ಗುಂಡಿನ ದಾಳಿಯ ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಮೃತಪಟ್ಟಿದ್ದರು. ಜಮ್ಮು-ಕಾಶ್ಮೀರದಲ್ಲಿರುವ ಶಿವ ಖೋರಿ ದೇವಸ್ಥಾನಕ್ಕೆ ಹಿಂದು ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಪಾಕಿಸ್ತಾನದ ಲಷ್ಕರೆ ತಯ್ಬಾ ಉಗ್ರ ಸಂಘಟನೆಯು ದಾಳಿ ನಡೆಸಿದ್ದು, ಉಗ್ರನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಅಲ್ಲದೆ, ಉಗ್ರನ ಕುರಿತು ಸುಳಿವು ನೀಡಿದರೆ 20 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Terrorist Attack : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯೋಧ ಹುತಾತ್ಮ , ಆರು ಯೋಧರಿಗೆ ಗಾಯ

Continue Reading

ಪ್ರಮುಖ ಸುದ್ದಿ

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Actor Darshan: ಚಿತ್ರರಂಗದಿಂದ ಒಬ್ಬರನ್ನು ಬ್ಯಾನ್ ಮಾಡುವುದಕ್ಕಿಂತ ನ್ಯಾಯ ಮುಖ್ಯ. ಫಿಲ್ಮ್‌ ಚೇಂಬರ್ ಇರುವುದು ನಿರ್ಮಾಪಕ, ಕಲಾವಿದರಿಗೆ ನ್ಯಾಯ ಕೊಡಿಸಲು. ಹಾಗೆಯೇ ರೇಣುಕಾಸ್ವಾಮಿ ಸಾವಿಗೂ ನ್ಯಾಯ ಸಿಗಬೇಕು ಎಂದು ನಟ ಕಿಚ್ಚ ಸುದೀಪ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಬಂಧನವಾಗಿರುವ ಬಗ್ಗೆ ನಟ ಕಿಚ್ಚ ಸುದೀಪ್‌ (Kiccha Sudeep) ಮೊದಲ ಬಾರಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಕೊಲೆ ಕೇಸ್‌ನಲ್ಲಿ ಬಂಧನವಾಗಿರುವ ದರ್ಶನ್‌ ಅವರನ್ನು ಚಿತ್ರರಂಗದಿಂದ ಬ್ಯಾನ್‌ ಮಾಡಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬ್ಯಾನ್ ಅನ್ನೋದಕ್ಕಿಂತ ನ್ಯಾಯ ಮುಖ್ಯ. ಫಿಲ್ಮ್‌ ಚೇಂಬರ್ ಇರುವುದು ನಿರ್ಮಾಪಕ, ಕಲಾವಿದರಿಗೆ ನ್ಯಾಯ ಕೊಡಿಸಲು. ರೇಣುಕಾಸ್ವಾಮಿ ಸಾವಿಗೂ ನ್ಯಾಯ ಬೇಕು, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು ಎಂದು ಹೇಳಿದ್ದಾರೆ.

ದರ್ಶನ್‌ ಬಂಧನದ ಬಗ್ಗೆ ಪ್ರತಿಕ್ರಿಯಿಸಿ, ನೀವು ಮಾಧ್ಯಮಗಳಲ್ಲಿ ಏನು ತೋರಿಸುತ್ತಿದ್ದೀರಿ ಅಷ್ಟು ಮಾತ್ರ ನನಗೆ ಗೊತ್ತು. ಮಾಧ್ಯಮ, ಪೊಲೀಸ್ ಸಿಬ್ಬಂದಿ ಪ್ರಯತ್ನದಿಂದ ಸತ್ಯಾಂಶಗಳು ಬೆಳಕಿಗೆ ಬಂದಿವೆ. ಸಿಎಂ ಸಿದ್ದರಾಮಯ್ಯ ಹಠ ಹಿಡಿದು ಕುಳಿತ ಮೇಲೆ ಈ ಕೇಸ್ ಎಫೆಕ್ಟ್ ಗೊತಾಗ್ತಿದೆ. ಆ ಕುಟುಂಬದ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು. ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿಗೆ ನ್ಯಾಯ ಬೇಕು. ನ್ಯಾಯದ ಮೇಲೆ ನಂಬಿಕೆ ಹುಟ್ಟಬೇಕೆಂದರೆ ನ್ಯಾಯ ಸಿಗಬೇಕು. ಚಿತ್ರರಂಗಕ್ಕೂ ನ್ಯಾಯ ಸಿಗಬೇಕು ತಿಳಿಸಿದರು.

ದರ್ಶನ್ ಬ್ಯಾನ್ ಕುರಿತು ಮಾತನಾಡಿ, ನ್ಯಾಯ ಬೇರೆ, ಫ್ರೆಂಡ್‌ಶಿಪ್‌ ಬೇರೆ. ಚಿತ್ರರಂಗದ ಮೇಲೆ ಕಪ್ಪು ಚುಕ್ಕೆ ಬರುವುದು ನಮಗೂ ಇಷ್ಟವಿಲ್ಲ. ಯಾರೋ ಒಬ್ಬರಿಂದ ಚಿತ್ರರಂಗ ಹಾಳಾಗಬಾರದು. ನಾವು ಯಾರೂ ಕಾನೂನು ಅಲ್ಲ. ಈ ಕೇಸ್‌ನಿಂದ ಹೊರಬಂದರೆ ಬ್ಯಾನ್ ಅನ್ನೋದು ಬರೋದಿಲ್ಲ. ಬ್ಯಾನ್ ಅನ್ನೋದಕ್ಕಿಂತ ನ್ಯಾಯ ಮುಖ್ಯ. ಚೇಂಬರ್ ಇರುವುದು ನಿರ್ಮಾಪಕ, ಕಲಾವಿದರಿಗೆ ನ್ಯಾಯ ಕೊಡಿಸಲು. ಬ್ಯಾನ್ ಅನ್ನೋ ಪದ ಕಟ್ಟಬೇಡಿ. ಪೊಲೀಸ್ ಸಿಬ್ಬಂದಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿ ಅಷ್ಟು ಸಾಕು ಎಂದು ಕೋರಿದರು.

ಇದನ್ನೂ ಓದಿ | Actor Darshan:  ಇನ್​ಸ್ಟಾಗ್ರಾಮ್‌ ಖಾತೆಯನ್ನು ಸಕ್ರಿಯಗೊಳಿಸಿದ ದರ್ಶನ್‌ ಪತ್ನಿ; ಮಾಧ್ಯಮದ ಮುಂದೆ ಬರ್ತಾರಾ?

ಚಿತ್ರರಂಗದಲ್ಲಿ ಹಿರಿಯರು ಇದ್ದಾರೆ. ಒಳ್ಳೆ ಸಿನಿಮಾ ಬಂದರೆ ಜನ ಥಿಯೇಟರ್‌ಗೆ ಬಂದೇ ಬರುತ್ತಾರೆ. ಪ್ರಯತ್ನ ಮಾಡೋಣ, ಚಿತ್ರರಂಗ ಬೆಳಿಯುತ್ತದೆ. ಮ್ಯಾಕ್ಸ್ ಸಿನಿಮಾ ಶೂಟಿಂಗ್ ಮುಕ್ತಾಯಗೊಂಡಿದೆ. ಆಗಸ್ಟ್‌ನಲ್ಲಿ ತೆರೆಗೆ ಬರೋ ಸಾಧ್ಯತೆ ಇದೆ ಎಂದು ಹೇಳಿದರು.

Continue Reading

ದೇಶ

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Lok Sabha Speaker: ಟಿಡಿಪಿಯ ಅಭ್ಯರ್ಥಿಯನ್ನೇ ಲೋಕಸಭೆ ಸ್ಪೀಕರ್‌ ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂಬ ಮಾತುಗಳನ್ನು ನಾನು ಕೇಳಿದೆ. ಹಾಗೊಂದು ವೇಳೆ, ಟಿಡಿಪಿಯ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗುವುದಾದರೆ, ಇಂಡಿಯಾ ಒಕ್ಕೂಟದ ಪಕ್ಷಗಳು ಚರ್ಚಿಸುತ್ತವೆ. ಆ ಮೂಲಕ ಟಿಡಿಪಿ ಅಭ್ಯರ್ಥಿಗೇ ಬೆಂಬಲ ಸೂಚಿಸುವ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಉದ್ಧವ್‌ ಠಾಕ್ರೆ ಬಣದ ಶಿವಸೇನೆ ವಕ್ತಾರ ಸಂಜಯ್‌ ರಾವತ್‌ ತಿಳಿಸಿದ್ದಾರೆ.

VISTARANEWS.COM


on

Lok Sabha Speaker
Koo

ನವದೆಹಲಿ: ದೇಶಕ್ಕೆ ದೇಶವೇ ಕುತೂಹಲದಿಂದ ಕಾಯುತ್ತಿದ್ದ ಲೋಕಸಭೆ ಚುನಾವಣೆ (Lok Sabha Speaker) ಮುಗಿದಿದ್ದು, ಎನ್‌ಡಿಎ ಮೈತ್ರಿಕೂಟದ ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈಗ ಲೋಕಸಭೆ ಸ್ಪೀಕರ್‌ ಆಯ್ಕೆಗೆ ಕಸರತ್ತು ನಡೆದಿದೆ. ಇದರ ಮಧ್ಯೆಯೇ, ಟಿಡಿಪಿ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗುವುದಾದರೆ, ಇಂಡಿಯಾ ಒಕ್ಕೂಟದ (INDIA Bloc) ಬೆಂಬಲವು ಟಿಡಿಪಿಗೆ ಇರಲಿದೆ ಎಂದು ಶಿವಸೇನೆ (ಉದ್ಧವ್‌ ಠಾಕ್ರೆ ಬಣ) ವಕ್ತಾರ ಸಂಜಯ್‌ ರಾವತ್‌ (Sanjay Raut) ಹೇಳಿದ್ದಾರೆ.

“ಟಿಡಿಪಿಯ ಅಭ್ಯರ್ಥಿಯನ್ನೇ ಲೋಕಸಭೆ ಸ್ಪೀಕರ್‌ ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂಬ ಮಾತುಗಳನ್ನು ನಾನು ಕೇಳಿದೆ. ಹಾಗೊಂದು ವೇಳೆ, ಟಿಡಿಪಿಯ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗುವುದಾದರೆ, ಇಂಡಿಯಾ ಒಕ್ಕೂಟದ ಪಕ್ಷಗಳು ಚರ್ಚಿಸುತ್ತವೆ. ಆ ಮೂಲಕ ಟಿಡಿಪಿ ಅಭ್ಯರ್ಥಿಗೇ ಬೆಂಬಲ ಸೂಚಿಸುವ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಹಾಗೊಂದು ವೇಳೆ, ಬಿಜೆಪಿಯವರೇ ಕಣಕ್ಕಿಳಿರೆ, ಎನ್‌ಡಿಎ ಮೈತ್ರಿಕೂಟವೇ ಛಿದ್ರವಾಗಲಿದೆ” ಎಂದು ಸಂಜಯ್‌ ರಾವತ್‌ ಎಚ್ಚರಿಸಿದರು.

Modi 3.0 Government

ಸಂಜಯ್‌ ರಾವತ್‌ ಹೇಳಿಕೆಯ ಬೆನ್ನಲ್ಲೇ ಜೆಡಿಯು ಪ್ರತಿಕ್ರಿಯಿಸಿದೆ. “ಲೋಕಸಭೆ ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಬಿಜೆಪಿ ತೀರ್ಮಾನವೇ ಅಂತಿಮ” ಎಂಬುದಾಗಿ ತಿಳಿಸಿದೆ. ಹಾಗಾಗಿ, ಎನ್‌ಡಿಎ ಮೈತ್ರಿಕೂಟದಿಂದ ಲೋಕಸಭೆ ಸ್ಪೀಕರ್‌ ಚುನಾವಣೆಗೆ ಯಾವ ಪಕ್ಷದವರು ಕಣಕ್ಕಿಳಿಯಲಿದ್ದಾರೆ ಎಂಬುದು ಕುತೂಹಲಕ್ಕೆ ಈಡುಮಾಡಿದೆ. ಮೊದಲಿನಿಂದಲೂ ಟಿಡಿಪಿಯು ತಮ್ಮ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗಬೇಕು ಎಂಬ ಅಭಿಲಾಷೆ ಹೊಂದಿದೆ ಎಂದು ತಿಳಿದುಬಂದಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ತೆಗೆದುಕೊಳ್ಳುವ ತೀರ್ಮಾನವು ಪ್ರಮುಖವಾಗಿದೆ.

ಜೆಡಿಯು ಪಕ್ಷವು 12 ಸಂಸದರನ್ನು ಹೊಂದಿದ್ದರೆ, ಟಿಡಿಪಿ 16 ಸಂಸದರನ್ನು ಹೊಂದಿದೆ. ಎರಡೂ ಪಕ್ಷಗಳ ನಾಯಕರಾದ ನಿತೀಶ್‌ ಕುಮಾರ್‌ ಹಾಗೂ ಚಂದ್ರಬಾಬು ನಾಯ್ಡು ಅವರು ನಾವು ಎನ್‌ಡಿಎ ಜತೆ ನಿಲ್ಲುತ್ತೇವೆ ಎಂದಿದ್ದಾರೆ. ನರೇಂದ್ರ ಮೋದಿ ಅವರು ಸಂಪುಟ ರಚನೆಯ ವೇಳೆಯೂ ಪ್ರಾಬಲ್ಯ ಸಾಧಿಸಿದ್ದರು. ಕೇಂದ್ರ ಗೃಹ, ರಕ್ಷಣೆ, ಹಣಕಾಸು ಹಾಗೂ ವಿದೇಶಾಂಗ ಖಾತೆಗಳನ್ನು ಬಿಜೆಪಿಯೇ ಉಳಿಸಿಕೊಂಡಿದೆ. ಹಾಗಾಗಿ, ಟಿಡಿಪಿ ಅಭ್ಯರ್ಥಿಯೇ ಸ್ಪೀಕರ್‌ ಚುನಾವಣೆ ಕಣಕ್ಕೆ ಇಳಿಬಹುದು ಎನ್ನಲಾಗಿದೆ. ಜೂನ್‌ 24ರಿಂದ ಜುಲೈ 3ರವರೆಗೆ ಸಂಸತ್‌ ವಿಶೇಷ ಅಧಿವೇಶನ ನಡೆಯಲಿದ್ದು, ಜೂನ್‌ 26ರಂದು ಸ್ಪೀಕರ್‌ ಆಯ್ಕೆ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: RSS V/S BJP: ಮೋಹನ್ ಭಾಗವತ್ ʼಅಹಂಕಾರʼದ ಹೇಳಿಕೆ ಮೋದಿ ವಿರುದ್ಧವೆ? ಆರ್‌ಎಸ್‌ಎಸ್ ಸ್ಪಷ್ಟನೆ ಇದು!

Continue Reading
Advertisement
Parenting Tips
ಪ್ರಮುಖ ಸುದ್ದಿ26 mins ago

Parenting Tips: ನೀವು ಹೊಸ ಅಪ್ಪ ಅಮ್ಮಂದಿರೇ? ನಿಮಗಿದೆ ಇಲ್ಲಿ ಮುಖ್ಯವಾದ ಟಿಪ್ಸ್!

Drowns in Lake
ಕರ್ನಾಟಕ49 mins ago

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Petrol Diesel Price
ಕರ್ನಾಟಕ1 hour ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Amit Shah
ದೇಶ1 hour ago

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Karnataka Weather Forecast
ಮಳೆ2 hours ago

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Actor Darshan
ಪ್ರಮುಖ ಸುದ್ದಿ2 hours ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Lok Sabha Speaker
ದೇಶ2 hours ago

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Renukaswamy murder case The location of the accused is complete
ಸಿನಿಮಾ3 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Petrol Diesel Price
ಕರ್ನಾಟಕ3 hours ago

Petrol Diesel Price: ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ತೈಲ ದರ ಏರಿಸಿದ ಕಾಂಗ್ರೆಸ್ ಸರ್ಕಾರ: ಆರ್‌. ಅಶೋಕ್‌ ಕಿಡಿ

Renuka swamy murder
ಚಿತ್ರದುರ್ಗ4 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ3 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ9 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌