congress-plan-for-parliament-election: Is it Sumalatha VS Ramya in Mandya?Loksabha Election 2024: ಲೋಕಸಭೆಗೆ ಕಾಂಗ್ರೆಸ್‌ ತಯಾರಿ; ಮಂಡ್ಯದಲ್ಲಿ ಸುಮಲತಾ ವಿರುದ್ಧ ರಮ್ಯ? - Vistara News

ಪ್ರಮುಖ ಸುದ್ದಿ

Loksabha Election 2024: ಲೋಕಸಭೆಗೆ ಕಾಂಗ್ರೆಸ್‌ ತಯಾರಿ; ಮಂಡ್ಯದಲ್ಲಿ ಸುಮಲತಾ ವಿರುದ್ಧ ರಮ್ಯ?

ಲೋಕಸಭಾ ಚುನಾವಣೆ: ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್‌ ಲೋಕಸಭಾ ಚುನಾವಣೆಗೆ ಸಿದ್ಧವಾಗುತ್ತಿದೆ. ಯಾವ ಕ್ಷೇತ್ರಕ್ಕೆ ಯಾರು ಎಂಬ ಚರ್ಚೆ ಶುರುವಾಗಿದೆ.

VISTARANEWS.COM


on

Is it Sumalatha Vs Ramya in Mandya in Loksabha Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) 224 ಸ್ಥಾನಗಳ ಪೈಕಿ 135ರಲ್ಲಿ ಗೆಲುವು ಸಾಧಿಸಿ ಬೀಗುತ್ತಿರುವ ಕಾಂಗ್ರೆಸ್‌ ತನ್ನ ಗೆಲುವಿನ ಅಭಿಯಾನವನ್ನು (Congress politics) ಲೋಕಸಭಾ ಚುನಾವಣೆಗೂ (Loksabha Election 2024) ಮುಂದುವರಿಸಲು ಕಾರ್ಯತಂತ್ರ ರೂಪಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಸಾಕಷ್ಟು ಮೊದಲೇ ಕಾರ್ಯತಂತ್ರಗಳನ್ನು ರೂಪಿಸಿ ಜನರ ಮನಸ್ಸಿನಲ್ಲಿ ಅಚ್ಚೊತ್ತುವ ಮೂಲಕ ಗೆಲುವನ್ನು ದಾಖಲಿಸಿದ ಪಕ್ಷ ಲೋಕಸಭಾ ಚುನಾವಣೆಗೂ ಈಗಿನಿಂದಲೇ ತಯಾರಿಗೆ ಮುಂದಾಗಿದೆ. ಅದರಲ್ಲೂ ಮುಖ್ಯವಾಗಿ ಕ್ಷೇತ್ರವಾರು ಯಾರ ವಿರುದ್ಧ ಯಾರನ್ನು ನಿಲ್ಲಿಸಬೇಕು ಎಂಬ ವಿಚಾರದಲ್ಲಿ ಚರ್ಚೆಗಳು ಆರಂಭವಾಗಿವೆ.

2019ರ ಲೋಕಸಭಾ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 25ರಲ್ಲಿ ಗೆಲುವು ಸಾಧಿಸಿತ್ತು. ಹಾಸನದಲ್ಲಿ ಜೆಡಿಎಸ್‌ನ ಎಚ್.ಡಿ. ರೇವಣ್ಣ, ರಾಮನಗರದಲ್ಲಿ ಕಾಂಗ್ರೆಸ್‌ನ ಡಿ.ಕೆ. ಸುರೇಶ್‌, ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಗೆಲುವು ಸಾಧಿಸಿದರು. ಸುಮಲತಾ ಈಗ ಬಿಜೆಪಿ ಬೆಂಬಲಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದಲೇ ಕಣಕ್ಕಿಳಿಯುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಜನರಿಂದ ಮೂಡಿಬಂದಿರುವ ಉತ್ತಮ ಅಭಿಪ್ರಾಯವನ್ನು ಮತವಾಗಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸುವಂತೆ ಈಗಾಗಲೇ ಕಾಂಗ್ರೆಸ್‌ ನಾಯಕರು ಸೂಚನೆ ನೀಡಿದ್ದಾರೆ. ಇದು ಎಲ್ಲಿವರೆಗೆ ಹೋಗಿದೆ ಎಂದರೆ ಸಚಿವ ಸಂಪುಟ ವಿಸ್ತರಣೆಯಲ್ಲೂ ಮುಂದಿನ ಲೋಕಸಭಾ ಚುನಾವಣೆಯದ್ದೇ ಜಪ ಮಾಡಲಾಗಿದೆ.

ಕಾಂಗ್ರೆಸ್‌ ಟಾರ್ಗೆಟ್‌ 20 ಸೀಟು

ಕಳೆದ ಬಾರಿ ಒಂದೇ ಸ್ಥಾನದಲ್ಲಿ ಗೆದ್ದಿದ್ದ ಕಾಂಗ್ರೆಸ್‌ ಈ ಬಾರಿ 20 ಸ್ಥಾನಗಳಲ್ಲಿ ಗೆಲ್ಲಬೇಕು ಎನ್ನುವ ಪ್ಲ್ಯಾನ್‌ ಹಾಕಿಕೊಂಡಿದೆ. ಈ ಬಾರಿ ಅದು 42% ಮತಗಳನ್ನು ಪಡೆದುಕೊಂಡಿರುವುದು ನೋಡಿದರೆ, ವಿಧಾನಸಭಾ ಕ್ಷೇತ್ರವಾರು ನೋಡಿದರೆ ಇದು ಕಷ್ಟಸಾಧ್ಯವಲ್ಲ. ಆದರೆ, ಕರ್ನಾಟಕಕ್ಕೆ ಮತ್ತು ಕೇಂದ್ರಕ್ಕೆ ಪ್ರತ್ಯೇಕವಾದ ಯೋಚನೆಗಳೊಂದಿಗೆ ಜನರು ಮತ ಹಾಕುವುದರಿಂದ ಅಷ್ಟರ ಮಟ್ಟಿಗೆ ಸೀಟು ಬರಬಹುದೇ ಎನ್ನುವ ಸಂಶಯ ಕಾಂಗ್ರೆಸ್‌ನ ಒಳಗೂ ಇದೆ. ಆದರೆ, ಪ್ರಯತ್ನ ಪಟ್ಟರೆ ಕನಿಷ್ಠ 15 ಸೀಟು ಆದರೂ ಬರಬಹುದು ಎನ್ನುವ ನಿರೀಕ್ಷೆ ಪಕ್ಷದ್ದು. ಕಳೆದ ಬಾರಿ ಜೆಡಿಎಸ್‌ ಜತೆಗೂ ಸಂಸತ್‌ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅದು ಕೂಡಾ ಹಿನ್ನಡೆಯಾಯಿತು ಎಂಬ ಅಭಿಪ್ರಾಯದಲ್ಲಿದೆ. ಹೀಗಾಗಿ ಈ ಬಾರಿ ಸ್ವತಂತ್ರವಾಗಿ ಕಣಕ್ಕಿಳಿಯುವುದು ಕೂಡಾ ಲಾಭ ತರಲಿದೆ ಎಂಬ ನಿರೀಕ್ಷೆ ಹೊತ್ತಿದೆ.

ಕ್ಷೇತ್ರವಾರು ಫೈಟ್‌

ಈ ಬಾರಿ ಕಾಂಗ್ರೆಸ್‌ ಒಟ್ಟಾರೆಯಾಗಿ ಸ್ಪರ್ಧೆ ಮಾಡದೆ ಕ್ಷೇತ್ರವಾರು ಪ್ಲ್ಯಾನಿಂಗ್‌ ಮಾಡಲು ನಿರ್ಧರಿಸಿದೆ. ಈಗಿನಿಂದಲೇ ಹಾಲಿ ಸಂಸದರದ ಬಲ ಮತ್ತು ದೌರ್ಬಲ್ಯಗಳನ್ನು ಅಧ್ಯಯನ ಮಾಡಲಾಗುತ್ತಿದೆ. ಜತೆಗೆ ಅವರ ವಿರುದ್ಧ ಕಾಂಗ್ರೆಸ್‌ ನಿಂದ ಯಾರನ್ನು ಕಣಕ್ಕಿಳಿಸಬಹುದು ಎಂಬ ಚರ್ಚೆಯೂ ಆರಂಭಗೊಂಡಿದೆ.

ಪ್ರತಿಯೊಂದು ಕ್ಷೇತ್ರದಲ್ಲಿ ಯಾರ ವಿರುದ್ಧ ಯಾರು ಎಂಬ ವಿಚಾರ ಚರ್ಚೆಯಲ್ಲಿದೆ. ಸದ್ಯಕ್ಕೆ ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ, ಬಿ.ವೈ. ರಾಘವೇಂದ್ರ, ಪ್ರಹ್ಲಾದ ಜೋಶಿ ಅವರ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕೆ ಇಳಿಸಲು ಪ್ಲ್ಯಾನ್‌ ರೂಪಿಸಲಾಗಿದೆ. ಸುಮಲತಾ ವಿರುದ್ಧ ಅತ್ಯಂತ ಕಠಿಣ ಅಭ್ಯರ್ಥಿಯನ್ನು ಇಳಿಸುವುದು ಕಾಂಗ್ರೆಸ್‌ ಚಿಂತನೆ.

ಯಾರ ವಿರುದ್ಧ ಯಾರ ಸ್ಪರ್ಧೆ?

ತೇಜಸ್ವಿ ಸೂರ್ಯ ವಿರುದ್ಧ ಸೌಮ್ಯಾ ರೆಡ್ಡಿ?

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಈಗ ಬಿಜೆಪಿಯ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿರುವ ತೇಜಸ್ವಿ ಸೂರ್ಯ ಅವರ ವಿರುದ್ಧ ಜಯನಗರದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆದಿದೆ. ಕಳೆದ ಚುನಾವಣೆಯಲ್ಲಿ ಸೌಮ್ಯ ರೆಡ್ಡಿ ಅವರು ಕೇವಲ 16 ಮತಗಳಿಂದ ಸೋಲು ಕಂಡಿದ್ದರು. ಅವರ ತಂದೆ ರಾಮಲಿಂಗಾ ರೆಡ್ಡಿ ಅವರು ಈಗ ಸಚಿವರಾಗಿದ್ದಾರೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ಇವರಿಬ್ಬರಿಗೂ ಚೆನ್ನಾಗಿ ಹಿಡಿತ ಇರುವುದರಿಂದ ಬಿಜೆಪಿಗೆ ಪ್ರಬಲ ಸ್ಪರ್ಧೆ ಒಡ್ಡಬಹುದು ಎನ್ನುವುದು ಕಾಂಗ್ರೆಸ್‌ ಲೆಕ್ಕಾಚಾರ.

ಬೆಂಗಳೂರು ಉತ್ತರದಲ್ಲಿ ಸದಾನಂದ ಗೌಡ VS ಕೃಷ್ಣ ಬೈರೇಗೌಡ

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರ ವಿರುದ್ಧವಾಗಿ ಬ್ಯಾಟರಾಯನಪುರದ ಹಾಲಿ ಶಾಸಕರಾಗಿರುವ ಕೃಷ್ಣಭೈರೇಗೌಡರನ್ನು ಕಣಕ್ಕಿಳಿಸಲು ಈಗಿನಿಂದಲೇ ಸಿದ್ಧಪಡಿಸುವ ಯೋಚನೆ ನಡೆಯುತ್ತಿದೆ. ಇದು ಒಕ್ಕಲಿಗರೇ ದೊಡ್ಡ ಪ್ರಮಾಣದಲ್ಲಿರುವ ಕ್ಷೇತ್ರವಾಗಿದೆ.

ಮೈಸೂರಿನಲ್ಲಿ ಪ್ರತಾಪಸಿಂಹ ವಿರುದ್ಧ ಯತೀಂದ್ರ?

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಈಗ ಬಿಜೆಪಿ ಹಿಡಿತ ಕಡಿಮೆಯಾಗಿದೆ ಎನ್ನುವುದು ಕಾಂಗ್ರೆಸ್‌ನ ಲೆಕ್ಕಾಚಾರ. ಇದಕ್ಕೆ ಪೂರಕವಾಗಿಯೇ ಕೊಡಗಿನ ಎರಡೂ ಕ್ಷೇತ್ರಗಳನ್ನು ಅದು ಗೆದ್ದುಕೊಂಡಿದೆ. ಹೀಗಾಗಿ ಲೋಕಸಭಾ ಕ್ಷೇತ್ರವನ್ನೂ ಗೆಲ್ಲಬಹುದು ಎಂಬ ಲೆಕ್ಕಾಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆದಿದೆ.

ಶಿವಮೊಗ್ಗದಲ್ಲಿ ರಾಘವೇಂದ್ರ ವಿರುದ್ಧ ಗೀತಾ ಶಿವರಾಜ್‌ ಕುಮಾರ್?

Raghavendra VS Geetha Shivarajkumar

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರ ವಿರುದ್ಧ ಗೀತಾ ಶಿವರಾಜ್‌ ಕುಮಾರ್‌ ಅವರು ಕಣಕ್ಕಿಳಿಯಬೇಕು ಎನ್ನುವುದು ಕಾಂಗ್ರೆಸ್‌ ನಿರೀಕ್ಷೆ. ಕಳೆದ ಚುನಾವಣೆಯಲ್ಲಿ ಅವರು ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಬಾರಿ ಮಧು ಬಂಗಾರಪ್ಪ ಅವರು ಕಾಂಗ್ರೆಸ್‌ನಿಂದ ಗೆದ್ದಿದ್ದಾರೆ. ಹೀಗಾಗಿ ಇದನ್ನೇ ಬಂಡವಾಳ ಮಾಡಿಕೊಂಡು ಗೆಲುವು ಪಡೆಯುವ ಪ್ರಯತ್ನ ನಡೆಯಲಿದೆ. ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಸ್ವಲ್ಪ ಅಸಮಾಧಾನ ಇದೆ ಎಂಬ ಮಾತು ಕೇಳಿಬರುತ್ತಿತ್ತು. ಅದಾದ ಬಳಿಕ ಕಾಂಗ್ರೆಸ್‌ ನಾಯಕ, ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ತಾವೇ ಶಿವರಾಜ್‌ ಕುಮಾರ್‌ ಅವರ ಮನೆಗೆ ಹೋಗಿ ಮಾತುಕತೆ ನಡೆಸಿದ್ದರು. ಈ ವೇಳೆ, ಶಿವಮೊಗ್ಗದಲ್ಲಿ ಕಣಕ್ಕಿಳಿಯಬೇಕು ಎಂಬ ವಿನಂತಿಯನ್ನೂ ಗೀತಾ ಅವರಿಗೆ ಮಾಡಿದ್ದಾರೆ ಎನ್ನಲಾಗಿದೆ.

ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಲ್ಹಾದ್‌ ಜೋಶಿ ವಿರುದ್ಧ ಶೆಟ್ಟರ್‌?

pralhad Joshi vs Jagadish Shettar?

ಕೇಂದ್ರ ಸಚಿವರಾಗಿರುವ ಪ್ರಲ್ಹಾದ್‌ ಜೋಶಿ ಅವರ ವಿರುದ್ಧ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ಜಗದೀಶ್‌ ಶೆಟ್ಟರ್‌ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಯೋಚಿಸುತ್ತಿದೆ. ಬಿಜೆಪಿಯಲ್ಲಿ ಟಿಕೆಟ್‌ ಸಿಗದೆ ಕಾಂಗ್ರೆಸ್‌ಗೆ ಹೋಗಿ ಸ್ಪರ್ಧಿಸಿದ್ದ ಶೆಟ್ಟರ್‌ ಅವರು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಈಗ ಪ್ರಲ್ಹಾದ್‌ ಜೋಶಿ ವಿರುದ್ಧ ಕಠಿಣ ಸ್ಪರ್ಧೆ ನೀಡಲು ಶೆಟ್ಟರ್‌ ಸೂಕ್ತವೇ ಎಂಬ ಚರ್ಚೆ ನಡೆದಿದೆ. ಒಟ್ಟಾರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಈ ಬಾರಿ ಬಲ ಬಂದಿರುವುದರಿಂದ ಅದು ಸಂಸತ್‌ ಚುನಾವಣೆಯಲ್ಲೂ ಮತವಾಗಿ ಉಳಿದರೆ ಗೆಲುವು ಸಾಧಿಸಬಹುದು ಎನ್ನುವುದು ಕೈ ಲೆಕ್ಕಾಚಾರ.

ಮಂಡ್ಯದಲ್ಲಿ ನಡೆಯುತ್ತಾ ರಮ್ಯ ಮತ್ತು ಸುಮಲತಾ ಕದನ?

ರಾಜ್ಯಾದ್ಯಂತ ಮಾತ್ರವಲ್ಲ ದೇಶದೆಲ್ಲೆಡೆ ಕುತೂಹಲ ಕೆರಳಿಸಿದ ಕಣ ಮಂಡ್ಯ. ಇಲ್ಲಿ ಕಳೆದ ಬಾರಿ ಪಕ್ಷೇತರರಾಗಿ ಕಣಕ್ಕಿಳಿದ ಸುಮಲತಾ ಅವರು ಜೆಡಿಎಸ್‌ನ ನಿಖಿಲ್‌ ಕುಮಾರಸ್ವಾಮಿ ಅವರನ್ನು ದೊಡ್ಡ ಅಂತರದಿಂದ ಸೋಲಿಸಿದ್ದರು. ಬಿಜೆಪಿ ನೇರವಾಗಿ ಸುಮಲತಾ ಅವರನ್ನು ಬೆಂಬಲಿಸಿದ್ದರು ಕಾಂಗ್ರೆಸ್‌ ಕಾರ್ಯಕರ್ತರು ಕೂಡಾ ಬೆಂಗಾವಲಾಗಿ ನಿಂತಿದ್ದರು.

ಈಗ ಸುಮಲತಾ ಅವರು ಅಧಿಕೃತವಾಗಿ ಬಿಜೆಪಿಯನ್ನು ಬೆಂಬಲಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧಿಸುವ ಸಾಧ್ಯತೆ ಇದೆ. ಇಲ್ಲಿ ಈಗ ಸುಮಲತಾ ಅವರ ಪ್ರಭಾವ ಕಡಿಮೆಯಾಗಿದ್ದರೆ ಕಾಂಗ್ರೆಸ್‌ ಬಲ ಹೆಚ್ಚಾಗಿದೆ. ಹೀಗಾಗಿ, ಸುಮಲತಾ ಅವರನ್ನು ಸೋಲಿಸಬಹುದು ಎನ್ನುವುದು ಕೈ ಲೆಕ್ಕಾಚಾರ. ಒಂದು ವೇಳೆ ಹೀಗಾದರೆ ಇಲ್ಲಿ ಕಾಂಗ್ರೆಸ್‌-ಜೆಡಿಎಸ್‌-ಬಿಜೆಪಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ. ಇಂಥ ಪರಿಸ್ಥಿತಿಯಲ್ಲಿ ಅತ್ಯಧಿಕ ಜನರನ್ನು ಸೆಳೆಯಬಲ್ಲ ಒಬ್ಬ ತಾರೆಯನ್ನು ಸುಮಲತಾ ವಿರುದ್ಧ ಕಣಕ್ಕಿಳಿಸಬೇಕು ಎಂಬ ಲೆಕ್ಕಾಚಾದರಲ್ಲಿದೆ ಕಾಂಗ್ರೆಸ್‌. ಹೀಗೆ ಯೋಚಿಸಿದಾಗ ಕಂಡದ್ದೇ ಕಾಂಗ್ರೆಸ್‌ನ ಸ್ಟಾರ್‌ ಪ್ರಚಾರಕಿ ಹಾಗೂ ಈ ಹಿಂದೆ ಮಂಡ್ಯದ ಸಂಸದೆಯಾಗಿ ದೊಡ್ಡ ಹೆಸರು ಮಾಡಿದ್ದ ಚಿತ್ರನಟಿ ರಮ್ಯಾ. ಮಂಡ್ಯದ ಜನರ ನಡುವೆ ನಿರಂತರ ಸಂಪರ್ಕ ಇಟ್ಟುಕೊಂಡಿರುವ ರಮ್ಯಾ ಅವರಿಗೆ ದೊಡ್ಡ ಪ್ರಮಾಣದಲ್ಲಿ ಅಭಿಮಾನಿಗಳಿದ್ದಾರೆ. ಇದನ್ನು ನಗದೀಕರಿಸಿಕೊಂಡು ಗೆಲ್ಲಬಹುದು ಎಂಬುದು ಕಾಂಗ್ರೆಸ್‌ ಪ್ಲ್ಯಾನ್‌. ರಮ್ಯಾ ಅವರು ಸುಮಲತಾ ವಿರುದ್ಧ ಕಣಕ್ಕಿಳಿಯುತ್ತಾರಾ ಎನ್ನುವುದು ಕುತೂಹಲ.

ಇದೇ ರೀತಿ ಬೇರೆ ಕ್ಷೇತ್ರಗಳಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ : Karnataka Election: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಸಾಧ್ಯ: ಸುಮಲತಾ ಅಂಬರೀಶ್
ಇದನ್ನೂ ಓದಿ: Actress Ramya : ನಾನು ಮಂಡ್ಯದ ಗೌಡ್ತಿ, ನೀವೇ ನಂಗೊಬ್ಬ ಒಳ್ಳೆ ಗೌಡ್ರ ಹುಡುಗನ್ನ ಹುಡುಕಿ ಕೊಡಿ ಪ್ಲೀಸ್‌ ಅಂದ್ರು ರಮ್ಯಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election: ಇಂದು 5ನೇ ಹಂತದ ಮತದಾನ; ರಾಹುಲ್‌ ಗಾಂಧಿ, ಸ್ಮೃತಿ ಸೇರಿ ಹಲವರ ಭವಿಷ್ಯ ನಿರ್ಧಾರ

Lok Sabha Election: ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಶಾಂತಿಯುತ ಮತ್ತು ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ.

VISTARANEWS.COM


on

Lok Sabha Election
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಮತದಾನ (Fifth Phase Voting) ನಡೆಯಲಿದ್ದು, ಶಾಂತಿಯುತ ಮತ್ತು ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ. ಹಾಗೆಯೇ, ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಬಿಗಿ ಭದ್ರತೆ ಒದಗಿಸಲಾಗಿದೆ.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಸೋಮವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

ದೇಶದಲ್ಲಿ ಈಗಾಗಲೇ ನಾಲ್ಕು ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಈಗ ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗವು ಸಿದ್ಧಗೊಂಡಿದೆ. ಇನ್ನು ಸೋಮವಾರವೇ ಅಯೋಧ್ಯೆಯ ಜಿಲ್ಲೆಯನ್ನು ಒಳಗೊಂಡಿರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಬಿಜೆಪಿಯ ಹಾಲಿ ಸಂಸದ ಲಲ್ಲು ಸಿಂಗ್‌ ಅವರೇ ಮತ್ತೆ ಕಣಕ್ಕಿಳಿದಿದ್ದಾರೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ.

4ನೇ ಹಂತದಲ್ಲಿ ಹೆಚ್ಚಿದ ಮತದಾನ

ನಾಲ್ಕನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಮೂರು ಹಂತಗಳಿಗಿಂತ ಗರಿಷ್ಠ ಮತದಾನ ದಾಖಲಾಗಿದೆ. ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಮೂರೂ ಹಂತಗಳಲ್ಲಿ 2019ಕ್ಕಿಂತ ಕಡಿಮೆ ಮತದಾನ ದಾಖಲಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು. ಆದರೀಗ, 4ನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಬಾರಿಗಿಂತ ಕೇವಲ 0.40ರಷ್ಟು ಕಡಿಮೆಯಾಗಿದೆ. ಹಾಗಾಗಿ, ನಾಲ್ಕನೇ ಹಂತದ ಮತದಾನವು ಸಕಾರಾತ್ಮಕ ಬೆಳವಣಿಗೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Voter Turnout: 4ನೇ ಹಂತದಲ್ಲಿ ಹೆಚ್ಚಿದ ಮತದಾನ; ಪುರುಷರಿಗಿಂತ ಸ್ತ್ರೀಯರಿಂದಲೇ ಹೆಚ್ಚು ಮತ ಚಲಾವಣೆ; ಹೀಗಿದೆ ಆಯೋಗದ ಮಾಹಿತಿ

Continue Reading

ಭವಿಷ್ಯ

Dina Bhavishya : ಮಾನಸಿಕ ಒತ್ತಡದಿಂದ ಮುಕ್ತರಾಗುವಿರಿ; ಹೂಡಿಕೆ ವ್ಯವಹಾರವು ಹೆಚ್ಚು ಲಾಭ ತರುವುದು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ತುಲಾ ರಾಶಿಯಿಂದ ಸೋಮವಾರ ಸಂಜೆ 06:34ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವೃಷಭ ರಾಶಿಯವರು ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (20-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ದ್ವಾದಶಿ 15:58 ವಾರ:ಸೋಮವಾರ
ನಕ್ಷತ್ರ: ಚಿತ್ತಾ 29:45 ಯೋಗ:ಸಿದ್ಧಿ 12:08
ಕರಣ: ಕೌಲವ 28:52 ಅಮೃತ ಕಾಲ: ರಾತ್ರಿ 10:42ರಿಂದ 12:28ರವರಗೆ
ದಿನದ ವಿಶೇಷ: ಶ್ರೀರಂಗಪಟ್ಟಣ ರಥ, ತೊರವಿ ನರಸಿಂಹ ರಥ, ಕೊಳ್ಳೇಗಾಲದ ವಿಶ್ವೇಶ್ವರ ರಥ

ಸೂರ್ಯೋದಯ : 05:53   ಸೂರ್ಯಾಸ್ತ : 06:39

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ:ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತೀರ್ಮಾನಗಳನ್ನು ಮಾಡಬೇಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ ಮಾಡುವಿರಿ. ಹೂಡಿಕೆ ವ್ಯವಹಾರವು ಹೆಚ್ಚು ಲಾಭ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ ವಹಿಸುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸಲಿದೆ, ಆದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ ಇದೆ. ಅತಿರೇಕವಾಗಿ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣವು ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಅರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ವಿದೇಶ

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Ebrahim Raisi: ಅಜರ್‌ಬೈಜಾನ್‌ನಲ್ಲಿ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್‌ ಪತನಗೊಂಡಿದೆ ಎಂಬುದಾಗಿ ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇರಾನ್‌ ಮಾಧ್ಯಮ ಸಂಸ್ಥೆಯೊಂದು ವರದಿ ಮಾಡಿದೆ. ಆದರೆ, ಹೆಲಿಕಾಪ್ಟರ್ ಗುಡ್ಡಗಾಡು ಪ್ರದೇಶದಲ್ಲಿ ಪತನಗೊಂಡಿರುವ ಕಾರಣ ಹುಡುಕಾಟ ನಡೆಯುತ್ತಲೇ ಇದೆ. ಇದುವರೆಗೆ ಹೆಲಿಕಾಪ್ಟರ್‌ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

VISTARANEWS.COM


on

Ebrahim Raisi
Koo

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದ್ದು, ಹಲವು ಗಂಟೆಗಳ ಕಾರ್ಯಾಚರಣೆ ಬಳಿಕವೂ ಹೆಲಿಕಾಪ್ಟರ್‌ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್‌ ಪತ್ತೆಗಾಗಿ ಸುಮಾರು 40 ತಂಡಗಳು ಶೋಧ ಕಾರ್ಯ ನಡೆಸುತ್ತಲೇ ಇವೆ. ಇಷ್ಟಾದರೂ ಹೆಲಿಕಾಪ್ಟರ್‌ ಪತ್ತೆಯಾಗಿರುವ ಕಾರಣ ಇಬ್ರಾಹಿಂ ರೈಸಿ ಸೇರಿ ಹಲವರ ಪ್ರಾಣಕ್ಕೆ ಕುತ್ತುಂಟಾಗಿರುವ ಸಾಧ್ಯತೆ ಇದೆ ಎಂದು ಇರಾನ್‌ ಅಧಿಕಾರಿಗಳು ತಿಳಿಸಿದ್ದಾರೆ.

ಅಜರ್‌ಬೈಜಾನ್‌ ಸಮೀಪದ ಜೋಲ್ಫಾ ಎಂಬ ಪ್ರದೇಶ ಬೆಟ್ಟಗಳ ಮಧ್ಯೆ ಹೆಲಿಕಾಪ್ಟರ್‌ ಪತನಗೊಂಡಿರುವ ಕಾರಣ ಶೋಧ ಕಾರ್ಯ ವಿಳಂಬವಾಗುತ್ತಿದೆ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್‌ ಪತ್ತೆಗಾಗಿ ಹಲವು ಸಿಬ್ಬಂದಿ ಇರುವ ಸುಮಾರು 40 ತಂಡಗಳನ್ನು ಇರಾನ್‌ ರಚಿಸಿದೆ. ಬೆಟ್ಟಗಳಲ್ಲಿ ಭದ್ರತಾ ಸಿಬ್ಬಂದಿಯು ಎಡೆಬಿಡದೆ ಶೋಧ ಕಾರ್ಯ ಕೈಗೊಂಡರೂ ಮುನ್ನಡೆ ಸಿಗುತ್ತಿಲ್ಲ. ಹೆಲಿಕಾಪ್ಟರ್‌ ಪತನದ ಬಳಿಕ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದ್ದು, ಬದುಕುಳಿಯುವ ಸಾಧ್ಯತೆ ತೀರಾ ಕ್ಷೀಣ ಎಂದು ಹೇಳಲಾಗುತ್ತಿದೆ.

ಹೆಲಿಕಾಪ್ಟರ್‌ನಲ್ಲಿ ಯಾರಿದ್ದರು?

ಹೆಲಿಕಾಪ್ಟರ್‌ನಲ್ಲಿ ಇಬ್ರಾಹಿಂ ರೈಸಿ ಜತೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ, ಪೂರ್ವ ಅಜರ್‌ಬೈಜಾನ್‌ ಗವರ್ನರ್‌ ಮಲೇಕ್‌ ರಹಮತಿ ಹಾಗೂ ಪೂರ್ವ ಅಜರ್‌ಬೈಜಾನ್‌ನಲ್ಲಿರುವ ಇರಾನ್‌ ಸುಪ್ರೀಂ ಲೀಡರ್‌ನ ಪ್ರತಿನಿಧಿ ಅಯೊತೊಲ್ಲಾ ಮೊಹಮ್ಮದ್‌ ಅಲಿ ಅಲೆ-ಹಶೇಮ್‌ ಅವರು ಕೂಡ ಇದ್ದರು. ಇದುವರೆಗೆ ಹೆಲಿಕಾಪ್ಟರ್‌ ಎಲ್ಲಿದೆ ಎಂಬುದರ ಸುಳಿವೇ ಸಿಗದ ಕಾರಣ ಇವರೆಲ್ಲರ ಪ್ರಾಣಕ್ಕೆ ಕುತ್ತು ಎದುರಾಗಿರಬಹುದು ಎಂದು ಹೇಳಲಾಗುತ್ತಿದೆ.

ಇಬ್ರಾಹಿಂ ರೈಸಿಗಾಗಿ ಮೋದಿ ಪ್ರಾರ್ಥನೆ

ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತನಗೊಂಡಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ. “ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್‌ ಪತನದ ಸುದ್ದಿ ತಿಳಿದು ಆತಂಕವಾಗಿದೆ. ಇರಾನ್‌ ಜನರ ಭಾವನೆಗಳ ಜತೆ ನಾವಿದ್ದೇವೆ. ಇಬ್ರಾಹಿಂ ರೈಸಿ ಹಾಗೂ ಅವರ ಜತೆಗಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಮೋದಿ ಪೋಸ್ಟ್‌ ಮಾಡಿದ್ದಾರೆ.

ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಅವರು ಅಜರ್‌ಬೈಜಾನ್‌ಗೆ ತೆರಳಿದ್ದರು. ಇದೇ ವೇಳೆ ಹೆಲಿಕಾಪ್ಟರ್‌ ಪತನಗೊಂಡಿದೆ ಎಂದು ತಿಳಿದುಬಂದಿದೆ. ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್‌ ಪತನಗೊಂಡಿರಬಹುದು ಎಂದು ಇರಾನ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹವಾಮಾನ ವೈಪರೀತ್ಯವು ಶೋಧ ಕಾರ್ಯಾಚರಣೆಗೂ ಅಡ್ಡಿಯಾಗಿದೆ ಎಂದು ತಿಳಿದುಬಂದಿದೆ. 2021ರಿಂದಲೂ ಇಬ್ರಾಹಿಂ ರೈಸಿ ಅವರು ಇರಾನ್‌ ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ: Helicopter Crash: ಶಿವಸೇನೆ ನಾಯಕಿ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ ಪತನ;ವಿಡಿಯೋ ವೈರಲ್‌

Continue Reading

ಕ್ರೀಡೆ

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

RR vs KKR: ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು.

VISTARANEWS.COM


on

RR vs KKR
Koo

ಗುವಾಹಟಿ: 17ನೇ ಆವೃತ್ತಿಯ ಐಪಿಎಲ್​ನ(IPL 2024) ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​(RR vs KKR) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಬೇಕಿತ್ತು. ಆದರೆ ಮಳೆಯಿಂದ ಒಂದೂ ಎಸೆತ ಕಾಣದೆ ಈ ಪಂದ್ಯ ರದ್ದಾದ ಕಾರಣ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಯಿತು.

10 ಗಂಟೆ ಸುಮಾರಿಗೆ ಮಳೆ ನಿಂತಿತು. ಮಳೆ ನಿಂತ ಕಾರಣ ಪಂದ್ಯವನ್ನು ಡಕ್​ವರ್ತ್​ ನಿಯಮದ ಪ್ರಕಾರ 7 ಓವರ್​ಗೆ ಸೀಮಿತಗೊಳಿಸಿ ಟಾಸ್​ ಕೂಡ ಹಾರಿಸಲಾಯಿತು. ಟಾಸ್​ ಗೆದ್ದು ಕೆಕೆಆರ್​ ಫೀಲ್ಡಿಂಗ್​ ಆಯ್ದುಕೊಂಡಿತು. ಇನ್ನೇನು ಆಟಗಾರರು ಮೈದಾನಕ್ಕೆ ಇಳಿಯಬೇಕು ಎನ್ನುವಷ್ಟರಲ್ಲಿ ಮಳೆ ಮತ್ತೆ ಆರಂಭಗೊಂಡಿತು. ಹೀಗಾಗಿ ಅಂಪೈರ್​ಗಳು ಕೊನೆಗೆ ಪಂದ್ಯವನ್ನು ರದ್ದು ಎಂದು ಘೋಷಣೆ ಮಾಡಿದರು.

ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ರಾಜಸ್ಥಾನ್​ ಮತ್ತು ಹೈದರಾಬಾದ್ ಸಮಾನ 17 ಅಂಕ ಹೊಂದಿದರೂ ರನ್​ ರೇಟ್​ನಲ್ಲಿ ಮುಂದಿದ್ದ ಕಾರಣ ಈ ಲಾಭ ಕಮಿನ್ಸ್​ ಪಡೆಗೆ ಲಭಿಸಿತು. ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ. ಈ ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ.

ಆರ್​ಸಿಬಿ-ರಾಜಸ್ಥಾನ್​ ಮಧ್ಯೆ ಎಲಿಮಿನೇಟರ್​ ಪಂದ್ಯ


ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಆಫ್​ಗೆ ಲಗ್ಗೆಯಿಟ್ಟ ಆರ್​ಸಿಬಿಗೆ ಎಲಿಮಿನೇಟರ್​ ಪಂದ್ಯದಲ್ಲೂ ಲಕ್​ ಹೈ ಹಿಡಿಯುವುದೇ ಎಂದು ಕಾದು ನೋಡಬೇಕಿದೆ.

ಪಂಜಾಬ್​ ವಿರುದ್ಧ ಗೆದ್ದ ಹೈದರಾಬಾದ್​


ದಿನದ ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡ ಪಂಜಾಬ್​ ಕಿಂಗ್ಸ್​ ವಿರುದ್ಧ 4 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿತು. ಬ್ಯಾಟಿಂಗ್​ ಸ್ನೇಹಿಯಾದ ಉಪ್ಪಳದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

Continue Reading
Advertisement
Lok Sabha Election
ದೇಶ13 mins ago

Lok Sabha Election: ಇಂದು 5ನೇ ಹಂತದ ಮತದಾನ; ರಾಹುಲ್‌ ಗಾಂಧಿ, ಸ್ಮೃತಿ ಸೇರಿ ಹಲವರ ಭವಿಷ್ಯ ನಿರ್ಧಾರ

Karnataka Weather Forecast
ಮಳೆ13 mins ago

Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

Dina Bhavishya
ಭವಿಷ್ಯ2 hours ago

Dina Bhavishya : ಮಾನಸಿಕ ಒತ್ತಡದಿಂದ ಮುಕ್ತರಾಗುವಿರಿ; ಹೂಡಿಕೆ ವ್ಯವಹಾರವು ಹೆಚ್ಚು ಲಾಭ ತರುವುದು

Pralhad Joshi
ಕರ್ನಾಟಕ6 hours ago

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Ebrahim Raisi
ವಿದೇಶ7 hours ago

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Mrs India Karnataka
ದಕ್ಷಿಣ ಕನ್ನಡ7 hours ago

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

IPL 2024 Eliminato
ಕ್ರೀಡೆ7 hours ago

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

Tourist boat capsizes
ಕರ್ನಾಟಕ8 hours ago

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

RR vs KKR
ಕ್ರೀಡೆ8 hours ago

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

Parliament Security
ದೇಶ8 hours ago

Parliament Security: ನಾಳೆಯಿಂದ ಸಂಸತ್‌ಗೆ ಸಿಆರ್‌ಪಿಎಫ್‌ ಬದಲು ಸಿಐಎಸ್‌ಎಫ್‌ ಭದ್ರತೆ; ಏಕಿಂಥ ನಿರ್ಧಾರ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ15 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ16 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ17 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌