Baltimore Bridge : ಬಾಲ್ಟಿಮೋರ್ ಸೇತುವೆ ಕುಸಿಯಲು ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿ ಕಾರಣ? - Vistara News

ಪ್ರಮುಖ ಸುದ್ದಿ

Baltimore Bridge : ಬಾಲ್ಟಿಮೋರ್ ಸೇತುವೆ ಕುಸಿಯಲು ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿ ಕಾರಣ?

Baltimore Bridge: ಸಿಂಗಾಪುರ ಮೂಲದ ಸರಕು ಹಡಗು ಸೇತುವೆಗೆ ಡಿಕ್ಕಿ ಹೊಡೆಯಲು ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

VISTARANEWS.COM


on

Baltimore bridge collapse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನ್ಯೂಯಾರ್ಕ್: ಅಮೆರಿಕದ ಬಾಲ್ಟಿಮೋರ್ ನ ಪ್ರಮುಖ ಸೇತುವೆಗೆ (Baltimore Bridge) ಮಂಗಳವಾರ ಮುಂಜಾನೆ ಡಿಕ್ಕಿ ಹೊಡೆದ ಸರಕು ಹಡಗಿನ (Commercial Ship) ಸಂಪೂರ್ಣ 22 ಸಿಬ್ಬಂದಿ ಭಾರತೀಯರು (Indian’s) ಎಂದು ಕಂಪನಿ ತಿಳಿಸಿದೆ. ಸಿಂಗಾಪುರ ಧ್ವಜ (Singapore Flag) ಹೊಂದಿರುವ ಕಂಟೈನರ್ ಹಡಗು “ಡಾಲಿ” ಸ್ಥಳೀಯ ಸಮಯ ಮುಂಜಾನೆ 1: 30 ರ ಸುಮಾರಿಗೆ ಬಾಲ್ಟಿಮೋರ್​ನ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆಯ ಕಂಬವೊಂದಕ್ಕೆ ಡಿಕ್ಕಿ ಹೊಡೆದಿತ್ತು.

ಸಿನರ್ಜಿ ಮೆರೈನ್ ಗ್ರೂಪ್ ಒದಗಿಸಿದ ಹಡಗಿನ ಮಾಹಿತಿಯ ಪ್ರಕಾರ, ಸಿಬ್ಬಂದಿಗಳೆಲ್ಲರೂ ಭಾರತೀಯರಾಗಿದ್ದಾರೆ. “ಡಾಲಿ” 10,000 ಟಿಇಯು (10,000 20 ಅಡಿ ಉದ್ದದ ಕಂಟೈನರ್​ಗಳನ್ನು) ಸಾಮರ್ಥ್ಯ ಹೊಂದಿತ್ತು. ಗ್ರೇಸ್ ಓಷನ್ ಪ್ರೈವೇಟ್ ಲಿಮಿಟೆಡ್ ಹಡಗಿನ ಮಾಲೀಕತ್ವವನ್ನು ಹೊಂದಿದೆ. ಹಡಗು ಬಾಲ್ಟಿಮೋರ್ ನಿಂದ ಕೊಲಂಬೊಗೆ ಹೊರಹೋಗುತ್ತಿತ್ತು.

ಸಿಂಗಾಪುರ ಧ್ವಜ ಹೊಂದಿರುವ ಕಂಟೇನರ್ ಹಡಗು “ಡಾಲಿ” ಬಾಲ್ಟಿಮೋರ್​ನ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆಯ ಕಂಬಗಳಲ್ಲಿ ಒಂದಕ್ಕೆ ಡಿಕ್ಕಿ ಹೊಡೆದಿದೆ ಎಂದು ಹಡಗು ನಿರ್ವಹಣಾ ಕಂಪನಿ ಸಿನರ್ಜಿ ಮೆರೈನ್ ಗ್ರೂಪ್ ಹೇಳಿಕೆಯಲ್ಲಿ ತಿಳಿಸಿದೆ.

ಇಬ್ಬರು ಪೈಲೆಟ್​ಗಳು ಸೇರಿದಂತೆ ಎಲ್ಲಾ ಸಿಬ್ಬಂದಿಯನ್ನು ಲೆಕ್ಕಹಾಕಲಾಗಿದೆ. ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ. ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಘಟನೆಯ ನಿಖರ ಕಾರಣವನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಹೇಳಲಾಗಿದೆ.

20 ಮಂದಿಯ ಸಾವು

ಉಕ್ಕಿನ ಸೇತುವೆಗೆ ನೌಕೆಯೊಂದು ಡಿಕ್ಕಿ ಹೊಡೆದ ಪರಿಣಾಮ, ಸೇತುವೆ ಸಂಪೂರ್ಣವಾಗಿ (Baltimore bridge collapse) ನೀರುಗುರುಳಿದೆ. 20ಕ್ಕೂ ಅಧಿಕ ಮಂದಿ (Drowned) ನೀರುಪಾಲಾಗಿದ್ದಾರೆ.

ಇದನ್ನೂ ಓದಿ: Pakistan Terrorist : ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 5 ಚೀನೀ ಪ್ರಜೆಗಳ ಸಾವುa

ಡಿಕ್ಕಿಯ ರಭಸಕ್ಕೆ ಸೇತುವೆಯ ಮೇಲೆ ಚಲಿಸುತ್ತಿದ್ದ ಹಲವು ವಾಹನಗಳು ನೀರಿಗೆ ಬಿದ್ದಿವೆ. ಕನಿಷ್ಠ ಇಪ್ಪತ್ತು ಜನರು ನೀರಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಡುರಾತ್ರಿ ಈ ಘಟನೆ ನಡೆದ ಕಾರಣ ಸೇತುವೆಯ ಮೇಲೆ ಹೆಚ್ಚಿನ ವಾಹನಗಳು ಇರಲಿಲ್ಲ. ಜನದಟ್ಟಣೆಯ ಸಮಯದಲ್ಲಿ ಈ ಘಟನೆ ಸಂಬಂಧಿಸಿದ್ದರೆ ನೂರಾರು ಜನರ ಸಾವುನೋವು ಸಂಭವಿಸುವ ಸಾಧ್ಯತೆಯಿತ್ತು.

ವೈರಲ್‌ ಆಗಿರುವ ವಿಡಿಯೋದಲ್ಲಿ, ದೊಡ್ಡ ಹಡಗು ಸೇತುವೆಗೆ ಅಪ್ಪಳಿಸುತ್ತಿರುವುದು ಕಂಡುಬಂದಿದೆ. ಸೋಶಿಯಲ್ ಮೀಡಿಯಾ ಸೈಟ್ ಎಕ್ಸ್‌ನಲ್ಲಿ ವೈರಲ್ ಆಗುತ್ತಿರುವ ತುಣುಕಿನ ಪ್ರಕಾರ, ಸೇತುವೆ ಭಗ್ನಗೊಂಡು ಮುಳುಗುವ ಮೊದಲು ಬೆಂಕಿ ಹೊತ್ತಿಕೊಂಡಿತು. ಮತ್ತು ಅನೇಕ ವಾಹನಗಳು ಪಟಾಪ್ಸ್ಕೋ ನದಿಗೆ ಬೀಳುತ್ತಿರುವುದು ಕಂಡುಬಂದಿತು.

ಬಾಲ್ಟಿಮೋರ್ ಅಗ್ನಿಶಾಮಕ ಇಲಾಖೆಯ ಸಂವಹನ ನಿರ್ದೇಶಕ ಕೆವಿನ್ ಕಾರ್ಟ್‌ರೈಟ್ ಪ್ರಕಾರ, ಕನಿಷ್ಠ ಇಪ್ಪತ್ತು ಜನರಿಗಾಗಿ ನೀರಿನಲ್ಲಿ ಹುಡುಕಾಟ ನಡೆದಿದೆ. ಸ್ಥಳೀಯ ಸಮಯ ರಾತ್ರಿ 1:30ರ ವೇಳೆಗೆ ಈ ಘಟನೆ ನಡೆದಿದೆ. ಬಾಲ್ಟಿಮೋರ್‌ನಿಂದ ಹೊರಹೋಗುತ್ತಿದ್ದ ಹಡಗು ಸೇತುವೆಯ ನಡುವಿನ ಸ್ತಂಭ ಹಾಗೂ ಮೇಲಿನ ಕಮಾನಿಗೆ ಬಡಿದು ಅದು ಕುಸಿಯಲು ಕಾರಣವಾಯಿತು. ಆ ಸಮಯದಲ್ಲಿ ಸೇತುವೆಯ ಮೇಲೆ ಹಲವಾರು ವಾಹನಗಳು ಇದ್ದವು. ಅದರಲ್ಲಿ ಒಂದು ಟ್ರಾಕ್ಟರ್-ಟ್ರೇಲರ್ ಕೂಡ ಸೇರಿದೆ.

ಶಿಪ್ ಮಾನಿಟರಿಂಗ್ ವೆಬ್‌ಸೈಟ್ MarineTraffic ಮಂಗಳವಾರ ಮುಂಜಾನೆ ಸೇತುವೆಯ ಕೆಳಗೆ ನಿಲ್ಲಿಸಿದ ಡಾಲಿ ಎಂಬ ಸಿಂಗಾಪುರದ ಧ್ವಜದ ಕಂಟೈನರ್ ಹಡಗನ್ನು ತೋರಿಸಿದೆ. I-695 ಕೀ ಬ್ರಿಡ್ಜ್‌ ಕುಸಿದ ಪರಿಣಾಮ ಇಲ್ಲಿ ಹಾದುಹೋಗುವ ಎಲ್ಲಾ ಲೇನ್‌ಗಳನ್ನು ಎರಡೂ ದಿಕ್ಕುಗಳಲ್ಲಿ ಮುಚ್ಚಲಾಗಿದೆ ಎಂದು ಮೇರಿಲ್ಯಾಂಡ್ ಸಾರಿಗೆ ಪ್ರಾಧಿಕಾರವು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಬಾಲ್ಟಿಮೋರ್‌ ಮುನ್ಸಿಪಲ್ ನಗರದ ನೈಋತ್ಯಕ್ಕೆ ಇರುವ ಪಟಾಪ್ಸ್ಕೋ ನದಿಗೆ ಅಡ್ಡಲಾಗಿ ಈ ನಾಲ್ಕು-ಲೇನ್ ಸೇತುವೆಯನ್ನು ಕಟ್ಟಲಾಗಿತ್ತು. ಇದು 1.6 ಮೈಲಿ (2.6-ಕಿಲೋಮೀಟರ್) ಉದ್ದವಿದೆ. 1977ರಲ್ಲಿ ಕಟ್ಟಲಾಗಿದ್ದ ಇದರ ಮೇಲೆ ವರ್ಷಕ್ಕೆ 1.10 ಕೋಟಿ ವಾಹನಗಳು ಓಡಾಡುತ್ತಿದ್ದವು. ಇದು ಬಾಲ್ಟಿಮೋರ್ ಸುತ್ತಮುತ್ತಲಿನ ರಸ್ತೆ ಜಾಲದ ಪ್ರಮುಖ ಭಾಗ. ಬಾಲ್ಟಿಮೋರ್‌, ರಾಜಧಾನಿ ವಾಷಿಂಗ್ಟನ್ DCಯ ಪಕ್ಕದಲ್ಲಿರುವ ಅಮೆರಿಕದ ಪೂರ್ವ ಕರಾವಳಿಯ ಕೈಗಾರಿಕಾ ನಗರವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

RCB vs GT: ಕಳೆದ ಪಂದ್ಯದಲ್ಲಿ ಆಮೆ ಗತಿಯ ಬ್ಯಾಟಿಂಗ್​ ನಡೆಸಿ ಟೀಕೆಗೆ ಗುರಿಯಾಗಿದ್ದ ವಿರಾಟ್​ ಕೊಹ್ಲಿ ಈ ಪಂದ್ಯದಲ್ಲಿ ಬ್ಯಾಟಿಂಗ್​ ಜೋಶ್​ ತೋರ್ಪಡಿಸಿದರು. ಅಜ್ಮತುಲ್ಲಾ ಒಮರ್ಜಾಯ್ ಎಸೆದ ಮೊದಲ ಓವರ್​ನಲ್ಲಿ ರನ್​ ಗಳಿಸಲು ಪರದಾಡಿದ ಕೊಹ್ಲಿ ಆ ಬಳಿಕ ಸಿಡಿದು ನಿಂತರು. 44 ಎಸೆತಗಳಿಂದ 70(6 ಬೌಂಡರಿ ಮತ್ತು 3 ಸಿಕ್ಸರ್​) ರನ್​ ಬಾರಿಸಿದರು.

VISTARANEWS.COM


on

RCB vs GT
Koo

ಅಹಮದಾಬಾದ್​: ವಿಲ್​ ಜ್ಯಾಕ್ಸ್ ​(100*) ಅವರ ಶತಕ ಮತ್ತು ವಿರಾಟ್​ ಕೊಹ್ಲಿಯ(70*) ಅರ್ಧಶತಕದ ಸೊಗಸಾದ ಬ್ಯಾಟಿಂಗ್​ ನೆರವಿನಿಂದ ರಾಯಲ್​ ಜಾಲೆಂಜರ್ಸ್​ ಬೆಂಗಳೂರು(RCB vs GT) ತಂಡ ಗುಜರಾತ್​ ಟೈಟಾನ್ಸ್​ ವಿರುದ್ಧ ಭರ್ಜರಿ 9 ವಿಕೆಟ್​ಗಳ ಗೆಲುವು ಸಾಧಿಸಿದೆ. ಇದು ಆರ್​ಸಿಬಿಗೆ 10 ಪಂದ್ಯಗಳಲ್ಲಿ ಒಳಿದ ಕೇವಲ ಮೂರನೇ ಗೆಲುವಾಗಿದೆ. ಗೆಲುವು ಕಂಡರೂ ಕೂಡ 6 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲೇ ಮುಂದುವರಿದಿದೆ.

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಗುಜರಾತ್​ ಟೈಟಾನ್ಸ್​ ಸಾಯಿ ಸುದರ್ಶನ್​(84*) ಮತ್ತು ಶಾರೂಖ್​ ಖಾನ್​(58) ಅರ್ಧಶತಕದ ಉಪಯುಕ್ತ ಬ್ಯಾಟಿಂಗ್​ ನೆರವಿನಿಂದ 20 ಓವರ್​ಗೆ 3 ವಿಕೆಟ್​ ಕಳೆದುಕೊಂಡು ಭರ್ತಿ 200 ರನ್​ ಪೇರಿಸಿತು. ಜವಾಬಿತ್ತ ಆರ್​ಸಿಬಿ ಫುಲ್​ ಬ್ಯಾಟಿಂಗ್​ ಜೋಶ್​ನೊಂದಿಗೆ ಕೇವಲ 16 ಓವರ್​ಗಳಲ್ಲಿ 1 ವಿಕೆಟ್​ನಷ್ಟಕ್ಕೆ 206 ರನ್​ ಬಾರಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು.

ಕೊಹ್ಲಿ-ಜ್ಯಾಕ್ಸ್ ಬೊಂಬಾಟ್​ ಅರ್ಧಶತಕ


ಕಳೆದ ಪಂದ್ಯದಲ್ಲಿ ಆಮೆ ಗತಿಯ ಬ್ಯಾಟಿಂಗ್​ ನಡೆಸಿ ಟೀಕೆಗೆ ಗುರಿಯಾಗಿದ್ದ ವಿರಾಟ್​ ಕೊಹ್ಲಿ ಈ ಪಂದ್ಯದಲ್ಲಿ ಬ್ಯಾಟಿಂಗ್​ ಜೋಶ್​ ತೋರ್ಪಡಿಸಿದರು. ಅಜ್ಮತುಲ್ಲಾ ಒಮರ್ಜಾಯ್ ಎಸೆದ ಮೊದಲ ಓವರ್​ನಲ್ಲಿ ರನ್​ ಗಳಿಸಲು ಪರದಾಡಿದ ಕೊಹ್ಲಿ ಆ ಬಳಿಕ ಸಿಡಿದು ನಿಂತರು. ಅಘಫಾನಿಸ್ತಾನದ ಸಿನ್ನರ್​ಗಳಾದ ರಶೀದ್​ ಖಾನ್​, ನೂರ್​ ಅಹ್ಮದ್​ಗೆ ಸತತ ಸಿಕ್ಸರ್​ ಮತ್ತು ಬೌಂಡರಿಗಳ ರುಚಿ ತೋರಿಸಿದರು. ಇವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್​ ನೀಡಿದ ವಿಲ್​ ಜಾಕ್ಸ್​ ವಿಸ್ಫೋಟಕ ಬ್ಯಾಟಿಂಗ್​ ನಡೆಸಿ ಅಜೇಯ ಶತಕ ಬಾರಿಸಿ ಮಿಂಚಿದರು. ಗೆಲುವಿನ ರನ್​ ಮತ್ತು ಶತಕವನ್ನು ಸಿಕ್ಸರ್​ ಮೂಲಕ ಪೂರ್ತಿಗೊಳಿಸಿದರು.

ಇದನ್ನೂ ಓದಿ IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

ವಿರಾಟ್​ ಕೊಹ್ಲಿ 44 ಎಸೆತಗಳಿಂದ 70(6 ಬೌಂಡರಿ ಮತ್ತು 3 ಸಿಕ್ಸರ್​) ರನ್​ ಬಾರಿಸಿದರು. ವಿಲ್​ ಜಾಕ್ಸ್​ 41 ಎಸೆತಗಳಿಂದ ಬರೋಬ್ಬರಿ 10 ಸಿಕ್ಸರ್​ ಮತ್ತು 5 ಬೌಂಡರಿ ಬಾರಿಸಿ ಭರ್ತಿ 100 ರನ್​ ಪೇರಿಸಿದರು. ಇದು ಅವರ ಚೊಚ್ಚಲ ಐಪಿಎಲ್​ ಶತಕವಾಗಿದೆ. ಆರ್​ಸಿಬಿ ಇದೇ ಆಟವನ್ನು ಆರಂಭಿಕ ಹಂತದಲ್ಲಿ ತೋರುತ್ತಿದ್ದರೆ ಇಂದು ಪ್ಲೇ ಆಫ್​ ಸನಿಹಕ್ಕೆ ಬಂದು ನಿಲ್ಲುತ್ತಿತ್ತು. ಗುಜರಾತ್​ ಪರ ರಶೀದ್​ ಖಾನ್​ 51 ರನ್​ ಬಿಟ್ಟುಕೊಟ್ಟರೆ, ಮೋಹಿತ್​ ಶರ್ಮ ಕೇವಲ 2 ಓವರ್​ಗೆ 41 ರನ್​ ಬಿಟ್ಟುಕೊಟ್ಟರು.

ಸಾಯಿ -ಶಾರೂಖ್ ಜತೆಯಾಟ ವ್ಯರ್ಥ


ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಗುಜರಾತ್​ ತಂಡಕ್ಕೆ ಸಿನ್ನರ್​ಗಳಾದ ಸ್ವಪ್ನಿಲ್ ಸಿಂಗ್ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ಆರಂಭದಲ್ಲೇ ಆಘಾತವಿಕ್ಕಿದರು. ಸ್ವಪ್ನಿಲ್ ಸಿಂಗ್ ಅವರು ವೃದ್ಧಿಮಾನ್​ ಸಾಹಾ(5) ವಿಕೆಟ್​ ಕಡೆವಿದರೆ, ಮ್ಯಾಕ್ಸ್​ವೆಲ್ ನಾಯಕ ಶುಭಮನ್​ ಗಿಲ್​(16) ವಿಕೆಟ್​ ಕಿತ್ತರು. ಆರಂಭಿಕ ಆಘಾತ ಕಂಡ ಗುಜತಾರ್​ ತಂಡವನ್ನು ಮೇಲೆತ್ತಿದ್ದು ತಮಿಳುನಾಡು ಮೂಲಕದ ಆಟಗಾರರಾದ ಸಾಯಿ ಸುದರ್ಶನ್​ ಮತ್ತು ಶಾರೂಖ್​ ಖಾನ್​.

ಉಭಯ ಆಟಗಾರರು ಆರ್​ಸಿಬಿ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸಿ ನಿಂತು ಅರ್ಧಶತಕ ಪೂರ್ತಿಗೊಳಿಸಿದರು. ಜತೆಗೆ ತಂಡದ ಮೊತ್ತವನ್ನು ಹಿಗ್ಗಿಸಿದರು. ಈ ಜೋಡಿ ಮೂರನೇ ವಿಕೆಟ್​ಗೆ ಅತ್ಯಮೂಲ್ಯ 86 ರನ್​ ಜತೆಯಾಟ ನಡೆಸಿತು. ಅರ್ಧಶತಕ ಪೂರ್ತಿಗೊಂಡು ಅಪಾಯಕಾರಿಯಾಗಿ ಗೋಚರಿಸಿದ್ದ ಶಾರೂಖ್​ ಖಾನ್​ ಮೊಹಮ್ಮದ್​ ಸಿರಾಜ್​ ಅವರ ಯಾರ್ಕರ್​ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಒಟ್ಟು 30 ಎಸೆತ ಎದುರಿಸಿ 5 ಸಿಕ್ಸರ್​ ಮತ್ತು 3 ಬೌಂಡರಿ ನೆರವಿನಿಂದ 58 ರನ್​ ಬಾರಿಸಿದರು. ಪಂದ್ಯ ಸೋತ ಕಾರಣ ಉಭಯ ಆಟಗಾರರ ಈ ಉತ್ತಮ ಜತೆಯಾಟ ವ್ಯರ್ಥಗೊಂಡಿತು.

ಶಾರೂಖ್ ವಿಕೆಟ್​ ಪತನದ ಬಳಿಕ ಆಡಲಿಳಿದ ಡೇವಿಡ್​ ಮಿಲ್ಲರ್ ಕೂಡ ಅಂತಿಮ ಹಂತದಲ್ಲಿ ಬಿರುಸಿನ ಬ್ಯಾಟಿಂಗ್​ ಮೂಲಕ ಅಜೇಯ 26 ರನ್​ ಬಾರಿಸಿದರು. ಸಾಯಿ ಸುದರ್ಶನ್ ಬರೋಬ್ಬರಿ 8 ಬೌಂಡರಿ ಮತ್ತು 4 ಸಿಕ್ಸರ್​ ನೆರವಿನಿಂದ 84 ರನ್​ ಗಳಿಸಿ ಅಜೇಯರಾಗಿ ಉಳಿದರು. ಆರ್​ಸಿಬಿ ಪರ ಸಿರಾಜ್​, ಸ್ವಪ್ನಿಲ್ ಸಿಂಗ್ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ತಲಾ ಒಂದು ವಿಕೆಟ್​ ಪಡೆದರು. ಗ್ರೀನ್​ ಮೂರು ಓವರ್​ಗೆ 42 ರನ್​ ಬಿಟ್ಟುಕೊಟ್ಟು ದುಬಾರಿಯಾಗಿ ಕಂಡುಬಂದರು.

Continue Reading

ಕರ್ನಾಟಕ

PM Narendra Modi: ನೇಹಾ ಹಿರೇಮಠ ಹತ್ಯೆ ಕೇಸ್ ನಾಚಿಕೆಗೇಡು;‌ ಹೊಸಪೇಟೆಯಲ್ಲಿ ಕಾಂಗ್ರೆಸ್‌ಗೆ ಮೋದಿ ಚಾಟಿ!

PM Narendra Modi: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಬ್ಬರದ ಭಾಷಣ ಮಾಡಿದರು. ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸುವ ಜತೆಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಸೇರಿ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

VISTARANEWS.COM


on

PM Narendra Modi
Koo

ಹೊಸಪೇಟೆ (ವಿಜಯನಗರ): ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅಬ್ಬರದ ಪ್ರಚಾರ ನಡೆಸಿದರು. ಇದೇ ವೇಳೆ, ಸಮಾವೇಶದಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್‌ (Congress) ವಿರುದ್ಧ ವಾಗ್ದಾಳಿ ನಡೆಸಿದರು. ಹಾಗೆಯೇ, ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಯುವತಿ ನೇಹಾ ಹಿರೇಮಠ (Neha Hiremath) ಪ್ರಕರಣವನ್ನೂ ಪ್ರಸ್ತಾಪಿಸಿ ಕಾಂಗ್ರೆಸ್‌ಗೆ ಚಾಟಿ ಬೀಸಿದರು. ರಾಮೇಶ್ವರಂ ಬಾಂಬ್‌ ಸ್ಫೋಟದ ಕುರಿತು ಕೂಡ ಮಾತನಾಡಿದರು.

“ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಅವರ ಹತ್ಯೆಯಾಯಿತು. ನೇಹಾ ಹಿರೇಮಠ ಅವರ ಇಡೀ ಕುಟುಂಬವೇ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಅಷ್ಟಕ್ಕೂ, ನೇಹಾ ಹಿರೇಮಠ ಅವರ ತಂದೆ ಕಾಂಗ್ರೆಸ್‌ ಕಾರ್ಯಕರ್ತರಾಗಿದ್ದಾರೆ. ಕಾಂಗ್ರೆಸ್‌ ಆಡಳಿತದ ರಾಜ್ಯಗಳಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ನೇಹಾ ಹಿರೇಮಠ ಹತ್ಯೆಯಂತಹ ಪ್ರಕರಣಗಳು ಎಲ್ಲೂ ನಡೆಯಬಾರದು. ಇಂತಹ ಕೃತ್ಯಗಳು ನಡೆದರೂ ಕಾಂಗ್ರೆಸ್‌ಗೆ ಚಿಂತೆ ಇಲ್ಲ” ಎಂದು ಟೀಕಿಸಿದರು.

“ಕರ್ನಾಟಕದಲ್ಲಿ ಬಿಜೆಪಿ ಆಡಳಿತ ಇದ್ದಾಗ ಉದ್ಯಮದ ಏಳಿಗೆಗೆ ಬಿಜೆಪಿ ಆದ್ಯತೆ ನೀಡಿತ್ತು. ಆದರೆ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌, ವಿದ್ಯುತ್‌ ಸಮಸ್ಯೆ ಸೃಷ್ಟಿಸಿತು. ವಿದ್ಯುತ್‌ ಸಮಸ್ಯೆ ಉಂಟಾದರೆ, ಉದ್ಯಮಗಳಿಗೆ ಭಾರಿ ಹೊಡೆತ ಬೀಳುತ್ತಿದೆ. ರೈತರು ನೀರಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ರೈತರ ಹಣವನ್ನೂ ಕಾಂಗ್ರೆಸ್‌ ನುಂಗಿಹಾಕಿದೆ. ರಾಜ್ಯ ಸರ್ಕಾರ ನೀಡುತ್ತಿದ್ದ ಕಿಸಾನ್‌ ಸಮ್ಮಾನ್‌ ನಿಧಿಯನ್ನೂ ಕಾಂಗ್ರೆಸ್‌ ನಿಲ್ಲಿಸಿದೆ. ರಾಜ್ಯ ಹಾಗೂ ದೇಶಕ್ಕೆ ಕಾಂಗ್ರೆಸ್‌ ಅಪಾಯಕಾರಿಯಾಗಿದೆ. ಮತ ಬ್ಯಾಂಕ್‌ಗಾಗಿ ಕಾಂಗ್ರೆಸ್‌ ಮೂಲಭೂತವಾದಿ ಸಂಘಟನೆಯ ಜತೆಗೂ ನಿಲ್ಲುತ್ತದೆ” ಎಂದು ತಿರುಗೇಟು ನೀಡಿದರು.

“ಬಿಜೆಪಿಯು ದೇಶ, ರಾಜ್ಯಗಳ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಅದರಲ್ಲೂ, ಮೂಲಭೂತವಾದಿ ಸಂಘಟನೆಗಳು ಬಾಲ ಬಿಚ್ಚಲು ನಾವು ಬಿಡುವುದಿಲ್ಲ. ಎಂತಹ ಸಂದರ್ಭದಲ್ಲೂ ನಾವು ಮೂಲಭೂತವಾದಿ ಸಂಘಟನೆ ವಿರುದ್ಧ ಕ್ರಮ ತೆಗೆದುಕೊಳ್ಳದೆ ಇರುವುದಿಲ್ಲ. ಇದೇ ಮೂಲಭೂತವಾದಿ ಸಂಘಟನೆಯೊಂದರ ನಾಯಕರು ಈಗ ಜೈಲಿನಲ್ಲಿದ್ದಾರೆ. ಆದರೆ, ಇದೇ ಕಾಂಗ್ರೆಸ್‌ಗೆ ಮೂಲಭೂತವಾದಿ ಸಂಘಟನೆಯು ಲೈಫ್‌ಲೈನ್‌ ಆಗಿದೆ” ಎಂದು ಟೀಕಿಸಿದರು.

ಕೆಫೆ ಬಾಂಬ್‌ ಸ್ಫೋಟದ ಕುರಿತೂ ಉಲ್ಲೇಖ

ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟದ ಕುರಿತು ನರೇಂದ್ರ ಮೋದಿ ಪ್ರಸ್ತಾಪಿಸಿದರು. ಕೆಫೆ ಬಾಂಬ್‌ ಸ್ಫೋಟದ ಬಳಿಕ ಕಾಂಗ್ರೆಸ್‌ ನಾಯಕರು ಮೃದುವಾಗಿ ಮಾತನಾಡಲು ಶುರು ಮಾಡಿದರು. ಇದು ಸಿಲಿಂಡರ್‌ ಸ್ಫೋಟ ಎಂದರು, ಔದ್ಯಮಿಕ ವೈಷಮ್ಯದಿಂದ ಹೀಗೆ ಮಾಡಿದರು ಎಂದರು. ಆದರೆ, ದೋಷಿಗಳನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಯಿತು. ಆಗ ಕಾಂಗ್ರೆಸ್‌ ನಾಯಕರು ಓಲೈಸುವುದನ್ನು ನಿಲ್ಲಿಸಿದರು” ಎಂದು ಗುಡುಗಿದರು.

“ಬಿಜೆಪಿ ನೇತೃತ್ವದ ಸರ್ಕಾರವು ದೇಶದಲ್ಲಿ ಬಾಂಬ್‌ ದಾಳಿಯನ್ನು ನಿಯಂತ್ರಿಸಿದೆ. ಮಂಗಳೂರು, ಅಯೋಧ್ಯೆ, ಮುಂಬೈ ಸೇರಿ ಯಾವುದೇ ನಗರಗಳಲ್ಲಿ ಬಾಂಬ್‌ ದಾಳಿಯನ್ನು ನಿಯಂತ್ರಿಸಿದೆ. ಬಾಂಬ್‌ ದಾಳಿಕೋರರನ್ನು ನಾವು ಮಟ್ಟಹಾಕಿದ್ದೇವೆ. ಒಂದು ಕಾಲದಲ್ಲಿ ಯೋಧರನ್ನು ಅಪಹರಿಸಿ, ಅವರ ರುಂಡ ಕತ್ತರಿಸಿ ಕಳುಹಿಸಲಾಗುತ್ತಿತ್ತು. ಆದರೆ, ಈಗ ಕೇಂದ್ರದಲ್ಲಿ ಮೋದಿ ಸರ್ಕಾರವಿದೆ. ಮನೆಯೊಳಗೆ ನುಗ್ಗಿ ಹೊಡೆಯುವ ಸಾಮರ್ಥ್ಯ ನಮ್ಮದಾಗಿದೆ” ಎಂದರು.

“ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾನು ದೇಶದ ಹಲವು ಭಾಗಗಳಿಗೆ ಭೇಟಿ ನೀಡಿದ್ದೇನೆ. ಜನರೊಂದಿಗೆ ನಾನು ಒಡನಾಡಿದ್ದೇನೆ. ದೇಶದ ಜನರು ನಮ್ಮ ಸರ್ಕಾರದ ಆಡಳಿತವನ್ನು ಮೆಚ್ಚಿದ್ದಾರೆ ಎಂಬುದಕ್ಕೆ ಅವರು ತೋರಿದ ಪ್ರೀತಿಯೇ ಸಾಕ್ಷಿಯಾಗಿದೆ. ಅಷ್ಟೇ ಅಲ್ಲ, ಪ್ರಸಕ್ತ ಚುನಾವಣೆಯಲ್ಲೂ ಬಿಜೆಪಿ ನೇತೃತ್ವದ ಎನ್‌ಡಿಎಗೆ 400 ಕ್ಷೇತ್ರಗಳಿಗಿಂತ ಹೆಚ್ಚಿನ ಸ್ಥಾನಗಳನ್ನು ಕೊಡಲು ತೀರ್ಮಾನಿಸಿದ್ದಾರೆ” ಎಂದು ಹೇಳಿದರು.

ದಲ್ಲಾಳಿಗಳ ಹಾವಳಿಗೆ ಮುಕ್ತಿ

“2014ಕ್ಕೂ ಮೊದಲು ದೆಹಲಿಯಲ್ಲಿ ದಲ್ಲಾಳಿಗಳ ಆಡಳಿತ ಜೋರಾಗಿತ್ತು. ದಲ್ಲಾಳಿಗಳ ಹೆಸರಿನಲ್ಲಿ ಹೋಟೆಲ್‌ಗಳಲ್ಲಿ ರೂಮ್‌ಗಳು ಬುಕ್‌ ಆಗಿರುತ್ತಿದ್ದವು. ದಲ್ಲಾಳಿಗಳ ಮೂಲಕವೇ ಕೆಲಸಗಳು ನಡೆಯುತ್ತಿದ್ದವು. ಆದರೆ, 2014ರ ಬಳಿಕ ದಲ್ಲಾಳಿಗಳನ್ನು ದೆಹಲಿಯಿಂದ ಓಡಿಸಲಾಗಿದೆ. ದೆಹಲಿಯನ್ನು ಬಿಟ್ಟಿರುವ ದಲ್ಲಾಳಿಗಳು ಈಗ ಕೆಲವು ರಾಜ್ಯಗಳಲ್ಲಿ ಬೀಡು ಬಿಟ್ಟಿದ್ದಾರೆ” ಎಂದರು.

ಕಲ್ಯಾಣ ಕರ್ನಾಟಕ ಪ್ರಸ್ತಾಪ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ನರೇಂದ್ರ ಮೋದಿ ಹೇಳಿದರು. “ಬೀದರ್‌, ಬಳ್ಳಾರಿ, ಬಾಗಲಕೋಟೆ, ಕಲಬುರಗಿ, ಗದಗ ಸೇರಿ ಉತ್ತರ ಕರ್ನಾಟಕದ ಹಲವೆಡೆ ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಲಾಗಿದೆ. ಬಳ್ಳಾರಿಯಲ್ಲಿ ಜೀನ್ಸ್‌ ಉದ್ಯಮವು ಏಳಿಗೆ ಹೊಂದುತ್ತಿದೆ. ಪಿಎಲ್‌ಐ ಯೋಜನೆ ಮೂಲಕ ಇಲ್ಲಿನ ಸ್ಟೀಲ್‌ ಉದ್ಯಮವೂ ಅಭಿವೃದ್ಧಿಯತ್ತ ಸಾಗುತ್ತಿದೆ. ಕೊಪ್ಪಳದ ಆಟಿಕೆ ಉದ್ಯಮವು ಕೂಡ ಔದ್ಯಮಿಕ ಜಗತ್ತಿನಲ್ಲಿ ಗುರುತಿಸಿಕೊಳ್ಳುತ್ತಿದೆ” ಎಂದು ಮಾಹಿತಿ ನೀಡಿದರು. ‌

ರಾಮಮಂದಿರ ಕುರಿತು ಮೋದಿ ಮಾತು

“ನನಗೆ 140 ಕೋಟಿ ಜನರೂ ಕುಟುಂಬಸ್ಥರಾಗಿದ್ದಾರೆ. ಅವರ ಶ್ರೇಯೋಭಿವೃದ್ಧಿಗಾಗಿ ನಾನು ಇಡೀ ಜೀವನವನ್ನು ಸಮರ್ಪಿಸುತ್ತೇನೆ. 500 ವರ್ಷಗಳವರೆಗೆ ದೇಶದ ಜನರು ರಾಮಮಂದಿರ ಕನಸು ಕಾಣುತ್ತಿದ್ದರು. 500 ವರ್ಷದಲ್ಲಿ ಎಷ್ಟೋ ಪೀಳಿಗೆಗಳು ಕನಸು ಕಾಣುತ್ತಲೇ ಮಾಯವಾದವು. ರಾಮಮಂದಿರಕ್ಕಾಗಿ ಹೋರಾಡಿ ಎಷ್ಟೋ ಜನ ಪ್ರಾಣ ಕಳೆದುಕೊಂಡರು. ಅಷ್ಟಾದರೂ, ನಮ್ಮ ರಾಮಲಲ್ಲಾನಿಗೆ ಮನೆಯೊಂದು ಇರಲಿಲ್ಲ. ಆದರೆ, ಈಗ ರಾಮಮಂದಿರದ ಕನಸು ನನಸಾಗಿದೆ. ನಿಮ್ಮ ಕಣ್ಣೆದುರೇ, ನಿಮ್ಮ ಕನಸು ನನಸಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿ: PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

Continue Reading

ಕರ್ನಾಟಕ

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾದ ಸೆಕ್ಷನ್‌ಗಳು ಏನು ಹೇಳುತ್ತವೆ? ಆರೋಪ ಸಾಬೀತಾದ್ರೆ ಶಿಕ್ಷೆ ಏನು?

Hassan Pen Drive Case: ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354A, 354D, 506, 509 ಅಡಿ ಕೇಸ್‌ ದಾಖಲಾಗಿದ್ದು ಕೇಸ್‌ ದಾಖಲಾಗಿದೆ. ಒಂದು ವೇಳೆ ಆರೋಪ ಸಾಬೀತಾದರೆ ಏನು ಶಿಕ್ಷೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

VISTARANEWS.COM


on

Hassan Pen Drive Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ (Hassan Pen Drive Case) ದಾಖಲಾಗಿದೆ. ಐಪಿಸಿ ಸೆಕ್ಷನ್ 354A, 354D, 506, 509 ಅಡಿ ಕೇಸ್‌ ದಾಖಲಾಗಿದ್ದು, ಆರೋಪ ಸಾಬೀತಾದರೆ ಏನೆಲ್ಲಾ ಶಿಕ್ಷೆ ಆಗುತ್ತದೆ ಎಂಬ ಚರ್ಚೆಗಳು ನಡೆಯುತ್ತಿವೆ. ಸಂಸದರ ವಿರುದ್ಧ ದಾಖಲಾಗಿರುವ ಸೆಕ್ಷನ್‌ಗಳು ಏನು ಹೇಳುತ್ತವೆ? ಕೃತ್ಯಕ್ಕೆ ಎಷ್ಟು ವರ್ಷ ಶಿಕ್ಷೆ ಎಂಬ ಮಾಹಿತಿ ಇಲ್ಲಿದೆ.

ಯಾವ ಸೆಕ್ಷನ್‌ಗೆ ಏನು ಶಿಕ್ಷೆ?

ಐಪಿಸಿ ಸೆಕ್ಷನ್ 354A: ಮಹಿಳೆಯ ಜತೆ ಲೈಂಗಿಕ ಸಂಪರ್ಕ ಬೆಳೆಸುವುದು, ಲೈಂಗಿಕ‌ ಅನುಕೂಲಕ್ಕಾಗಿ ಬೇಡಿಕೆ ಇಡುವುದು. ಮಹಿಳೆಗೆ ಇಚ್ಛೆಗೆ ವಿರುದ್ಧವಾಗಿ ಅಶ್ಲೀಲತೆ ತೋರಿಕೆ ಮಾಡಿದವರ ವಿರುದ್ಧ ಐಪಿಸಿ ಸೆಕ್ಷನ್ 354A ಅಡಿ ಸೆಕ್ಷನ್ ದಾಖಲು ಮಾಡಲಾಗುತ್ತದೆ. ಈ ಸೆಕ್ಷನ್ ಅಡಿ ಆರೋಪಿತ ವ್ಯಕ್ತಿಗೆ ಒಂದು ವರ್ಷ ಜೈಲು ಅಥವಾ ದಂಡ ವಿಧಿಸಲಾಗುತ್ತದೆ.

ಐಪಿಸಿ ಸೆಕ್ಷನ್ 354D– ಪದೇ ಪದೇ ಮಹಿಳೆಯರ ಸಂಪರ್ಕ ಬೆಳೆಸಲು ಪ್ರಯತ್ನ, ಇಂಟರ್ನೆಟ್ ಅಥವಾ ಇಮೇಲ್ ಅಥವಾ ವಿಡಿಯೊ ಕಾಲ್ ಸಂವಹನ ಮಾಡಿದರೆ ಈ ಸೆಕ್ಷನ್ ಅಡಿ ಪ್ರಕರಣ ದಾಖಲಾಗುತ್ತದೆ. ಇದಕ್ಕೆ ದಂಡ ಅಥವಾ ಮೂರು ವರ್ಷ ಜೈಲು ವಿಧಿಸುವ ಸಾಧ್ಯತೆ.

ಐಪಿಸಿ ಸೆಕ್ಷನ್ 506-ಕ್ರಿಮಿನಲ್ ಬೆದರಿಕೆ ಒಡ್ಡುವುದು. ಕೊಲೆ ಬೆದರಿಕೆ ಅಥವಾ ತೀವ್ರ ದುಃಖ ಉಂಟುಮಾಡುವುದು. ಮಹಿಳೆಗೆ ಅಶ್ಲೀಲವಾಗಿ ಆರೋಪಿಸುವುದು. ಈ ಸೆಕ್ಷನ್ ಅಡಿ ಏಳು ವರ್ಷದ ವರೆಗೆ ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತದೆ.

ಐಪಿಸಿ ಸೆಕ್ಷನ್ 509: ಮಹಿಳೆಯ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಪದ, ಸನ್ನೆ ಅಥವಾ ಕ್ರಿಯೆ.ಈ ಸೆಕ್ಷನ್ ಅಡಿ 3ವರ್ಷ ಸರಳ ಜೈಲು ಅಥವಾ ದಂಡ ವಿಧಿಸುವ ಸಾಧ್ಯತೆ ಇದೆ.

ಸದ್ಯ ಈ ಎಲ್ಲಾ ಸೆಕ್ಷನ್‌ಗಳ ಅಡಿ ಸಂಸದ ಪ್ರಜ್ವಲ್‌ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೀಗಾಗಿ ಪ್ರಕರಣದ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಎಲ್ಲಾ ಮಾಹಿತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ಜತೆಗೆ ಎಚ್‌.ಡಿ.ರೇವಣ್ಣ ಮೇಲೂ ಎಫ್‌ಐಆರ್‌; ದೂರಿನಲ್ಲಿದೆ ಭಯಾನಕ ಡಿಟೇಲ್ಸ್‌!

ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

Hassan Pen Drive Case

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣದ (Hassan Pen Drive Case) ತನಿಖೆಗಾಗಿ ಎಸ್‌ಐಟಿ ರಚನೆಗೆ ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಆದೇಶಿಸಿದ್ದರು. ಇದೀಗ ಅಧಿಕೃತವಾಗಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ಇದರಲ್ಲಿ ಇಬ್ಬರು ಮಹಿಳಾ ಐಪಿಎಸ್‌ ಅಧಿಕಾರಿಗಳು ಇದ್ದಾರೆ.

ಎಡಿಜಿಪಿ ಬಿ.ಕೆ. ಸಿಂಗ್ ಅವರು ಎಸ್‌ಐಟಿ ಮುಖ್ಯಸ್ಥರಾಗಿದ್ದು, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ ಸೀಮಾ ಲಾಟ್ಕರ್ ಸದಸ್ಯರಾಗಿದ್ದಾರೆ. ಸಿಐಡಿಯಲ್ಲಿ ಎಡಿಜಿಪಿಯಾಗಿರುವ ಬಿ.ಕೆ ಸಿಂಗ್ ಅವರು, ಈ ಹಿಂದೆ ಗೌರಿ ಲಂಕೇಶ್ ಕೊಲೆ ಕೇಸ್‌ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಹಾಸನ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿ ಕ್ರಮ ಜರುಗಿಸುವಂತೆ ರಾಜ್ಯ ಮಹಿಳಾ ಆಯೋಗ ದೂರು ನೀಡಿತ್ತು. ಅದೇ ರೀತಿ ಮಹಿಳೆಯೊಬ್ಬರು ಏ.28ರಂದು ನೀಡಿದ ದೂರಿನ ಅನ್ವಯ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 107/2024 ಕಲಂ 354A, 354D, 506, 509 ಐಪಿಸಿ ಅಡಿ ದಾಖಲಾದ ಪ್ರಕರಣದ ತನಿಖೆಗಾಗಿ ಸಿಐಡಿಯ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಲಾಗಿದೆ ಎಂದು ಒಳಾಡಳಿತ ಇಲಾಖೆಯ(ಅಪರಾಧಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಎಸ್‌.ಅಂಬಿಕಾ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವಿಡಿಯೊ ಚಿತ್ರೀಕರಣವು ಮಾಧ್ಯಮಗಳಲ್ಲಿ ಪ್ರಚಾರವಾಗಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕ ಪಡಿಸಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಲು ಆದೇಶ ನೀಡಬೇಕೆಂದು ಹಾಗೂ ಆರೋಪಿಗಳ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗ ಕೋರಿತ್ತು. ಈ ಹಿನ್ನೆಲೆ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಒಂದು ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಕರಣದ ಸಮಗ್ರ ತನಿಖೆ ನಡೆಸಲು ರಚಿಸಿರುವ ಎಸ್‌ಐಟಿ ಮುಖ್ಯಸ್ಥರಾಗಿ ಸಿಐಡಿ ಅಪರ ಪೊಲೀಸ್ ಮಹಾ ನಿರ್ದೇಶಕ ಬಿಜಯ ಕುಮಾರ್ ಸಿಂಗ್, ಸದಸ್ಯರಾಗಿ ಪೊಲೀಸ್ ಪ್ರಧಾನ ಕಚೇರಿಯ ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ ಪೆನ್ನೇಕರ್, ಮೈಸೂರು ಪೊಲೀಸ್ ಅಧೀಕ್ಷಕರಾದ ಸೀಮಾ ಲಾಟ್ಕರ್ ಅವರನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

ಈ ಪ್ರಕರಣದ ಕುರಿತು ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ, ದಾಖಲಾಗಬಹುದಾದ ಪ್ರಕರಣಗಳನ್ನು ಡಿಜಿ & ಐಜಿಪಿ ಅವರು, ಈ ವಿಶೇಷ ತನಿಖಾ ತಂಡ (Special Investigation Team) ಕ್ಕೆ ವರ್ಗಾಯಿಸಬೇಕು ಹಾಗೂ ತನಿಖೆಗಾಗಿ ಇತರೆ ಸದಸ್ಯರ ಅವಶ್ಯವಿದ್ದಲ್ಲಿ ಡಿಜಿ & ಐಜಿಪಿ ಅವರ ಅನುಮೋದನೆಯೊಂದಿಗೆ ತನಿಖಾ ತಂಡಕ್ಕೆ ಸೇರಿಸಿಕೊಳ್ಳಬೇಕು. ಸಿಐಡಿ ಪೊಲೀಸ್ ಮಹಾ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ (Special Investigation Team) ವು ಕಾರ್ಯನಿರ್ವಹಿಸಬೇಕು ಹಾಗೂ ಪ್ರಕರಣದ ಸಮಗ್ರ ತನಿಖೆಯನ್ನು ನಡೆಸಿ, ತನಿಖಾ ವರದಿಯನ್ನು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಮುಖಾಂತರ ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

Continue Reading

ರಾಜಕೀಯ

Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ

Karnataka Drought: ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ 4,860 ಕೋಟಿ ರೂಪಾಯಿ ಕೊಟ್ಟರೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಈಗ ಕೇಂದ್ರ ಸರ್ಕಾರ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು ₹18172 ಕೋಟಿ ಕೇಳಿದ್ದು ಎಂದು ಹೇಳುತ್ತಿದ್ದಾರೆ. ಇವರು ಪದೇ ಪದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಎಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

VISTARANEWS.COM


on

Karnataka Drought Relief HDK accuses Congress government of lying says HD Kumarswamy
Koo

ಬೆಂಗಳೂರು: ಕರ್ನಾಟಕದ ಬರ ಪರಿಹಾರ (Karnataka Drought Relief) ವಿಷಯದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ ಆಗಿದೆ. ಯುಪಿಎ ನೇತೃತ್ವದ ಕಾಂಗ್ರೆಸ್ ಸರ್ಕಾರ ಶೇ. 8ರಷ್ಟು ಬರ ಪರಿಹಾರವನ್ನು ಕೊಟ್ಟಿದ್ದರೆ, ಎನ್‌ಡಿಎ ಸರ್ಕಾರ ಈಗಿನ ಅನುದಾನವನ್ನು ಹೊರತುಪಡಿಸಿಯೇ ಶೇ. 38ರಷ್ಟು ಹಣವನ್ನು ಕರ್ನಾಟಕಕ್ಕೆ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ‌ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು.

ಬೆಂಗಳೂರಿನಲ್ಲಿ ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಅತ್ಯಲ್ಪ ಪರಿಹಾರ ಕೊಟ್ಟು ರಾಜ್ಯದ ಜನರಿಗೆ ವಂಚನೆ ಎಸಗಿದ್ದು ಯುಪಿಎ ಸರ್ಕಾರ ಎಂದು ಹೇಳಿದರು.

ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ಕಡಿಮೆ ಹಣ ಕೊಟ್ಟಿದೆ ಎಂಬ ಕಾಂಗ್ರೆಸ್‌ ಸರ್ಕಾರದ ಆರೋಪವನ್ನು ಟೀಕಿಸಿದ ಮಾಜಿ ಮುಖ್ಯಮಂತ್ರಿ‌ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ 4,860 ಕೋಟಿ ರೂಪಾಯಿ ಕೊಟ್ಟರೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಈಗ ಕೇಂದ್ರ ಸರ್ಕಾರ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು ₹18172 ಕೋಟಿ ಕೇಳಿದ್ದು ಎಂದು ಹೇಳುತ್ತಿದ್ದಾರೆ. ಇವರು ಪದೇ ಪದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ನನಗಿರುವ ಮಾಹಿತಿ ಪ್ರಕಾರ ಮನಮೋಹನ್ ಸಿಂಗ್ ಅವರ ಯುಪಿಎ ಸರಕಾರದ 2004ರಿಂದ 2013ರವರೆಗಿನ ಅವಧಿಯಲ್ಲಿ ವಿವಿಧ ಸಂದರ್ಭದಲ್ಲಿ ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಬರ ಪರಿಹಾರಕ್ಕಾಗಿ ಕೇವಲ ಶೇ. 8ರಷ್ಟು ಹಣ ನೀಡಿದ್ದಾರೆ. ನರೇಂದ್ರ ಮೋದಿ ಅವರು ಬಂದ ಮೇಲೆ ಅಂದರೆ, 2014ರಿಂದ ಇಲ್ಲಿಯವರೆಗೆ ಈಗ ಬಿಡುಗಡೆ ಆಗಿರುವ 3,454 ಕೋಟಿ ರೂಪಾಯಿ ಹೊರತುಪಡಿಸಿ ಶೇ. 38ರಷ್ಟು ಬರ ಪರಿಹಾರ ಹಣ ರಾಜ್ಯಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರ 8% ಕೊಟ್ಟರೆ, ಎನ್‌ಡುಎ ಸರ್ಕಾರ 38% ಹಣ ಕೊಟ್ಟಿದೆ. ಅನ್ಯಾಯ ಯಾರಿಂದ ಆಗಿದೆ ಎಂಬುದು ಇಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ ಎಂದು‌ ಎಚ್.ಡಿ. ಕುಮಾರಸ್ವಾಮಿ ಅವರು ಅಂಕಿ-ಅಂಶ ನೀಡಿದರು.

ಇವರು ಕೇಂದ್ರ ಸರ್ಕಾರದ ಸುಳ್ಳುಗಳನ್ನು ಹೇಳುತ್ತಾ ಅಪಪ್ರಚಾರ ಮಾಡುವುದನ್ನು ಬಿಟ್ಟು ಕೇಂದ್ರದಿಂದ ಬಂದಿರುವ ಹಣವನ್ನು ಸಮರ್ಪಕವಾಗಿ ಜನರಿಗೆ ಮುಟ್ಟಿಸುವ ಕೆಲಸ ಮಾಡಲಿ ಎಂದು ಎಚ್.ಡಿ. ಕುಮಾರಸ್ವಾಮಿ ಕಿವಿಮಾತು ಹೇಳಿದರು.‌

ಹಾಸನ ಪ್ರಕರಣ: ಉಪ್ಪು ತಿಂದವರು ನೀರು ಕುಡಿಯುತ್ತಾರೆ

ಹಾಸನ ಜಿಲ್ಲೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ನಡೆದಿದೆ ಎನ್ನಲಾದ ಪ್ರಕರಣದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: PM Narendra Modi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ; ಕರ್ನಾಟಕದಲ್ಲಿ ಶಿಕ್ಷಣ ನೀತಿಯಲ್ಲೂ ರಾಜಕೀಯ: ಮೋದಿ ಕಿಡಿ

ತನಿಖೆಯ ಮೂಲಕ ಎಲ್ಲ ಸತ್ಯಾಂಶಗಳು ಹೊರಗೆ ಬರಲಿ. ಯಾರೇ ತಪ್ಪೆಸಗಿದ್ದರೂ, ಅವರು ಯಾರೇ ಆಗಿದ್ದರೂ ಯಾವುದೇ ಕಾರಣಕ್ಕೂ ಅವರನ್ನು ಕ್ಷಮಿಸುವ ಪ್ರಶ್ನೆ ಬರುವುದಿಲ್ಲ. ಆದ್ದರಿಂದ ತನಿಖೆಯ ವರದಿ ಸಂಪೂರ್ಣವಾಗಿ ಹೊರ ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

Continue Reading
Advertisement
RCB vs GT
ಕ್ರೀಡೆ27 seconds ago

RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

PM Narendra Modi
ಕರ್ನಾಟಕ12 mins ago

PM Narendra Modi: ನೇಹಾ ಹಿರೇಮಠ ಹತ್ಯೆ ಕೇಸ್ ನಾಚಿಕೆಗೇಡು;‌ ಹೊಸಪೇಟೆಯಲ್ಲಿ ಕಾಂಗ್ರೆಸ್‌ಗೆ ಮೋದಿ ಚಾಟಿ!

Hassan Pen Drive Case
ಕರ್ನಾಟಕ27 mins ago

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾದ ಸೆಕ್ಷನ್‌ಗಳು ಏನು ಹೇಳುತ್ತವೆ? ಆರೋಪ ಸಾಬೀತಾದ್ರೆ ಶಿಕ್ಷೆ ಏನು?

KKR vs DC
ಕ್ರಿಕೆಟ್46 mins ago

KKR vs DC: ಮೊದಲ ಸೋಲಿಗೆ ಸೇಡು ತೀರಿಸಿಕೊಂಡೀತೇ ಡೆಲ್ಲಿ?; ಕೆಕೆಆರ್​ ಎದುರಾಳಿ

Karnataka Drought Relief HDK accuses Congress government of lying says HD Kumarswamy
ರಾಜಕೀಯ48 mins ago

Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ

Parliament Flashback
Lok Sabha Election 202449 mins ago

Parliament Flashback: ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ ಮತ್ತು ಸುಷ್ಮಾ ಸ್ವರಾಜ್‌ ಮಧ್ಯೆ ನಡೆದಿತ್ತು ಐತಿಹಾಸಿಕ ಕದನ!

Hassan Pen Drive Case
ಕರ್ನಾಟಕ1 hour ago

Hassan Pen Drive Case: ಪ್ರಜ್ವಲ್‌ ಜತೆಗೆ ಎಚ್‌.ಡಿ.ರೇವಣ್ಣ ಮೇಲೂ ಎಫ್‌ಐಆರ್‌; ದೂರಿನಲ್ಲಿದೆ ಭಯಾನಕ ಡಿಟೇಲ್ಸ್‌!

Delivery Boy
ಕರ್ನಾಟಕ1 hour ago

Delivery Boy: ಬೆಂಗಳೂರಲ್ಲಿ ವ್ಯಕ್ತಿಯ ಗುಪ್ತಾಂಗ ಮುಟ್ಟಿ ದುರ್ವರ್ತನೆ ತೋರಿದ ಡೆಲಿವರಿ ಬಾಯ್‌ ಅಹ್ಮದ್!

Job Alert
ಉದ್ಯೋಗ1 hour ago

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆ ಖಾಲಿ ಇದೆ; ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

POCSO Case 7 year old girl attempted to rape on pretext of giving her chocolates
ಕರ್ನಾಟಕ1 hour ago

POCSO Case: ಚಾಕೋಲೆಟ್‌ ಕೊಡೋದಾಗಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಇಬ್ಬರು ಯುವಕರಿಗೆ ಧರ್ಮದೇಟು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20242 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20246 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20247 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ10 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌