Darshan Arrested : ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಬೀಗರೂಟವೇ? ಶಾಮಿಯಾನ ಹಾಕಿದ ಪೊಲೀಸರ ನಡೆ ಫುಲ್ ಟ್ರೋಲ್​! - Vistara News

ಪ್ರಮುಖ ಸುದ್ದಿ

Darshan Arrested : ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಬೀಗರೂಟವೇ? ಶಾಮಿಯಾನ ಹಾಕಿದ ಪೊಲೀಸರ ನಡೆ ಫುಲ್ ಟ್ರೋಲ್​!

Darshan Arrested: ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಬೀಗರ ಊಟ ನಡೆಯುತ್ತಿದೆಯೇ? ಅಲ್ಲಿ ಯಾಕೆ ಶಾಮಿಯಾನ ಹಾಕಿದ್ದಾರೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಠಾಣೆಯಲ್ಲೇ ಮದುವೆ ಮನೆ, ಬೀಗರ ಊಟ ಹೀಗೆ ಸಾಲು ಸಾಲು ಕಮೆಂಟ್​ಗಳು ಬಂದಿವೆ.

VISTARANEWS.COM


on

Darshan Arrested
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಕೊಲೆ ಪ್ರಕರಣದಲ್ಲಿ ಸೆರೆಯಾಗಿರುವ ನಟ ದರ್ಶನ್(Darshan Arrested) ಮತ್ತು ಆತನ ಗ್ಯಾಂಗ್​ ಸದ್ಯ ಅನ್ನಪೂರ್ಣೇಶ್ವರಿನಗರ ಪೊಲೀಸ್​ ಠಾಣೆಯ ಲಾಕ್​ಅಪ್​ನಲ್ಲಿದ್ದಾರೆ. ಕೋರ್ಟ್​​ನಿಂದ ಕಸ್ಟಡಿಗೆ ಪಡೆದಿರುವ ಪೊಲೀಸರು ಸ್ಥಳ ಮಹಜರು ಸೇರಿದಂತೆ ನಾನಾ ಕಾನೂನು ಹಾಗೂ ತನಿಖಾ ಪ್ರಕ್ರಿಯಗಳನ್ನು ನಡೆಸುತ್ತಿದ್ದಾರೆ. ಹೈಪ್ರೊಫೈಲ್ ಕೇಸ್​ ಆಗಿದ್ದರಿಂದ ಪೊಲೀಸ್​ ಠಾಣೆಯ ಕಡೆಗೆ ಮಾಧ್ಯಮಗಳು ಹಾಗೂ ಜನರ ದೃಷ್ಟಿ ನೆಟ್ಟಿರುವುದು ಸಹಜ. ಆದರೆ ಎಲ್ಲರ ಕಣ್ತಪ್ಪಿಸಲು ಉದ್ದೇಶಿಸಿರುವ ಪೊಲೀಸರು ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿದ್ದಾರೆ. ಇದು ಸಾರ್ವಜನಿಕರ ಅನುಮಾನಕ್ಕೆ ಕಾರಣವಾಗಿದೆ. ದರ್ಶನ್​ನಂಥ ಕೊಲೆಗಾರರು ಇರುವ ಸ್ಟೇಷನ್​​ಗೆ ಶಾಮಿಯಾನ ಹಾಕಿರುವ ಪೊಲೀಸರ ನಡೆ ಅನುಮಾನಕ್ಕೆ ಕಾರಣವಾಗಿದೆ. ಇವೆಲ್ಲದರ ನಡುವೆ ಪೊಲೀಸರ ಶಾಮಿಯಾನ ತಂತ್ರ ಸೋಶಿಯಲ್ ಮೀಡಿಯಾಗಳಲ್ಲಿ ಟ್ರೋಲ್ ಆಗಿದೆ.

ದರ್ಶನ್​ಗೆ ಸಿಗರೇಟ್​, ಹೆಂಡವೆಂದರೆ ಬಲು ಪ್ರೀತಿ. ಪೊಲೀಸರ ವಶದಲ್ಲಿದ್ದ ಸಮಯದಲ್ಲೂ ಎಣ್ಣೆ, ಕೊಡಿ ಎಂದು ಕೇಳಿದ್ದಾರೆ ಎಂಬುದಾಗಿಯೂ ಸುದ್ದಿಯಾಗಿತ್ತು. ನ್ಯಾಯಾಲಯದಿಂದ ತಮ್ಮ ಕಸ್ಟಡಿಗೆ ಪಡೆದ ಮೊದಲ ದಿನವೇ ಪೊಲೀಸರು ಚಿಕ್ಕಪೇಟೆ ಬಿರಿಯಾನಿ ತಂದುಕೊಟ್ಟು ಸುದ್ದಿಯಾಗಿದ್ದರು. ಹೀಗಾಗಿ ಪೊಲೀಸರು ತಮಗೆ ಬೇಕಾದ ರೀತಿಯಲ್ಲಿ ವರ್ತಿಸಲು ಹಾಗೂ ದರ್ಶನ್​ ಗ್ಯಾಂಗ್​ನ ಬೇಕು, ಬೇಡಗಳನ್ನು ಪೂರೈಸಲು ಶಾಮಿಯಾನ ಹಾಕಿದ್ದಾರೆ ಎಂಬ ಊಹಾಪೋಹಗಳೇ ಹೆಚ್ಚಾಗಿದೆ.

ತರೇಹವಾರಿ ಚರ್ಚೆ

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಬೀಗರ ಊಟ ನಡೆಯುತ್ತಿದೆಯೇ? ಅಲ್ಲಿ ಯಾಕೆ ಶಾಮಿಯಾನ ಹಾಕಿದ್ದಾರೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಠಾಣೆಯಲ್ಲೇ ಮದುವೆ ಮನೆ, ಬೀಗರ ಊಟ ಹೀಗೆ ಸಾಲು ಸಾಲು ಕಮೆಂಟ್​ಗಳು ಬಂದಿವೆ.

ಪ್ರಮಾಣಿಕವಾಗಿ ತನಿಖೆ ನಡೆಸುವವರಿಗೆ ಯಾಕೆ ಬೇಕು ಈ ಶಾಮಿಯಾನದ ಮರೆಯಾಕೆ ಇನ್ನೊಬ್ಬರು ಪ್ರಶ್ನಿಸಿದ್ದಾರೆ. ಪೊಲೀಸರ ಮೊದಲ ದಿನದ ಅರ್ಭಟ ಈಗ ಕಡಿಮೆಯಾಗಿದೆ, ಶಾಮಿಯಾನದ ಕಳ್ಳಾಟಕ್ಕೆ ಬಂದಿದ್ದೇಕೆ ಎಂದು ಪ್ರಶ್ನಿಸಿದ್ದಅರೆ. ನಿಜವಾಗ್ಲೋ ಇದು ಪೊಲೀಸ್ ಠಾಣೆಯೋ ಮದುವೆ ಮಂಟಪವೊ ಎಂದು ಇನ್ನೊಬ್ಬರು ಪ್ರಶ್ನಿಸಿದ್ದಾರೆ. ಇನ್ನೊಬ್ಬರು ನಾವೂ ಠಾಣೆಗೆ ಹೋದರೆ ಊಟ ಇದೆಯಾ ಎಂದು ಕೇಳಿದ್ದಾರೆ.

ಇದನ್ನೂ ಓದಿ: V Somanna : ತಮ್ಮನ್ನು ಕಡೆಗಣಿಸಿದ ಜಿಲ್ಲಾಧಿಕಾರಿ, ಸಿಇಒಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

ಪೊಲೀಸ್ ಠಾಣೆಯ ಗೇಟೂಗೂ ಶಾಮಿಯಾನ ಯಾಕೆ? ಒಳಗೆ ಆತ ಎಣ್ಣೆ ಹೊಡೆಯೋದು ಸಿಗರೇಟು ಸೇದೋದು ಕಾಣಬಾರದು ಅಂಥನಾ ಇನ್ನೊಬ್ಬರು ಪ್ರಶ್ನಿಸಿದ್ದಾರೆ. ಅನ್ನಪೂರ್ಣೇಶ್ವರಿ ಸ್ಟೇಷನ್​ನಲ್ಲಿ ಇನ್ವೆಸ್ಟಿಗೇಷನ್ ನಡಿತಿಯೆಯಾ ಅಥವಾ ಫಂಕ್ಷನ್ ನಡೆಯುತ್ತಿದೆಯಾ ಎಂದು ಇನ್ನೊಬ್ಬರು ಪ್ರಶ್ನಿಸಿದ್ದಾರೆ.

ಶಾಮಿಯಾನ, ಪರ್ದಾ ಎಲ್ಲ ಪೊಲೀಸ್​ ಸ್ಟೇಷನ್​ಗೆ ಯಾಕೆ ಹಾಕುತ್ತಾರೆ. ಆರಕ್ಷಕ ಠಾಣೆ ಅರ್ಥ ಕಳೆದುಕೊಳ್ಳುತ್ತದೆ. ಇಸ್ಸಿ ಮೊದಲು ತೆಗಿರಿ ಇದನ್ನು ಎಂದು ಬರೆದುಕೊಂಡಿದ್ದಾರೆ. ಪೊಲೀಸರು ಶಾಮಿಯಾನ ಹಾಕಿದ್ದು ಯಾಕೆ ಗೊತ್ತಾ? ಒಳಗೆ ಪ್ರೈವೆಸಿ ಮ್ಯಾಟರ್ ನಡೀತಿದೆ ಎಂದು ಇನ್ನೊಬ್ಬರು ಬರೆದಿದ್ದಾರೆ. ಇವತ್ತು ಶಾಮಿಯಾನ ಹಾಕ್ತಾರೆ, ನಾಳೆ ತಗಡು ಹೊಡೆಸ್ತಾರೆ ಎಂದು ಇನ್ನೊಬ್ಬರು ಬರೆದುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

SBI: ನಿಮ್ಮೂರಿಗೂ ಬರಲಿದೆ ಎಸ್‌ಬಿಐ ಹೊಸ ಬ್ರ್ಯಾಂಚ್;‌ 400 ಶಾಖೆ ತೆರೆಯಲು ಬ್ಯಾಂಕ್‌ ನಿರ್ಧಾರ

SBI: ದೇಶಾದ್ಯಂತ ನಗರಗಳು ಹಾಗೂ ಗ್ರಾಮೀಣ ಪ್ರದೇಶಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ಬ್ಯಾಂಕ್‌ ಸೇವೆ ಒದಗಿಸುವ ನಿಟ್ಟಿನಲ್ಲಿ ಹೊಸ ಬ್ಯಾಂಕ್‌ ಶಾಖೆಗಳನ್ನು ತೆರೆಯಲು ಎಸ್‌ಬಿಐ ತೀರ್ಮಾನಿಸಿದೆ. ದೇಶಾದ್ಯಂತ 2024-25ನೇ ಹಣಕಾಸು ವರ್ಷದಲ್ಲಿ 400 ಹೊಸ ಶಾಖೆಗಳನ್ನು ತೆರೆಯಲು ನಿರ್ಧರಿಸಿದೆ. ಈ ಕುರಿತು ಎಸ್‌ಬಿಐ ಚೇರ್ಮನ್‌ ಮಾಹಿತಿ ನೀಡಿದ್ದಾರೆ.

VISTARANEWS.COM


on

SBI
Koo

ಮುಂಬೈ: ದೇಶದಲ್ಲೇ ಬೃಹತ್‌ ಬ್ಯಾಂಕ್‌ ಎನಿಸಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ (SBI) ಹೊಸ ಶಾಖೆಗಳನ್ನು (SBI New Branches) ಇನ್ನು ನಿಮ್ಮೂರಿಗೂ ಬರುವ ದಿನಗಳು ದೂರವಿಲ್ಲ. ಹೌದು, 2024-25ನೇ ಹಣಕಾಸು ವರ್ಷದಲ್ಲಿ ದೇಶಾದ್ಯಂತ ಗ್ರಾಮೀಣ ಭಾಗಗಳೂ ಸೇರಿ 400 ಹೊಸ ಶಾಖೆಗಳನ್ನು ತೆರೆಯಲು ಎಸ್‌ಬಿಐ ತೀರ್ಮಾನಿಸಿದೆ. ಇದರಿಂದಾಗಿ, ಗ್ರಾಮೀಣ ಪ್ರದೇಶಗಳಲ್ಲೂ ಜನ ಬ್ಯಾಂಕ್‌ಗಳನ್ನು ಹೊಂದಬಹುದಾಗಿದೆ. ಹೊಸ ಶಾಖೆಗಳನ್ನು ತೆರೆಯುವ ಕುರಿತು ಎಸ್‌ಬಿಐ ಚೇರ್ಮನ್‌ ದಿನೇಶ್‌ ಕುಮಾರ್‌ ಖಾರಾ (Dinesh Kumar Khara) ಅವರು ಮಾಹಿತಿ ನೀಡಿದ್ದಾರೆ.

ಪಿಟಿಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು, “ದೇಶದಲ್ಲಿ ಶೇ.89ರಷ್ಟು ವಹಿವಾಟುಗಳು ಡಿಜಿಟಲ್‌ ಮೂಲಕ ಹಾಗೂ ಶೇ.98ರಷ್ಟು ವಹಿವಾಟು ಬ್ಯಾಂಕ್‌ ಹೊರತಾಗಿ ನಡೆಯುತ್ತಿವೆ. ಹೀಗಿರುವಾಗ ಬ್ಯಾಂಕ್‌ಗಳ ಬ್ರ್ಯಾಂಚ್‌ಗಳು ಏಕೆ ಬೇಕು ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಆದರೆ, ದೇಶದ ಪ್ರತಿಯೊಂದು ಭಾಗದಲ್ಲೂ, ಹೊಸ ಹೊಸ ಪಟ್ಟಣ, ಗ್ರಾಮಗಳಿಗೂ ಬ್ಯಾಂಕ್‌ ಬ್ರ್ಯಾಂಚ್‌ಗಳ ಅವಶ್ಯಕತೆ ಇದೆ. ಇದೇ ಕಾರಣಕ್ಕಾಗಿಯೇ 2024-25ನೇ ಹಣಕಾಸು ವರ್ಷದಲ್ಲಿ ದೇಶದ ನಗರಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಬ್ರ್ಯಾಂಚ್‌ಗಳನ್ನು ತೆರೆಯಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದರು.

electoral bonds

“ದೇಶಾದ್ಯಂತ ಹೊಸ ಹೊಸ ಪ್ರದೇಶಗಳಲ್ಲಿ ಬ್ಯಾಂಕ್‌ ಶಾಖೆಗಳನ್ನು ಸ್ಥಳಗಳ ಹುಡುಕಾಟ ನಡೆಯುತ್ತಿದೆ. ಜನರಿಗೆ ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಬ್ಯಾಂಕ್‌ ಸೇವೆಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ. ಇದಕ್ಕಾಗಿ ಸ್ಥಳಗಳನ್ನು ನಿರ್ಧರಿಸುವ ಕೆಲಸ ನಡೆಯುತ್ತಿದೆ. ದೇಶದ ಜನರಿಗೆ ಬ್ಯಾಂಕ್‌ಗಳ ಅವಶ್ಯಕತೆ ಹೆಚ್ಚಿಲ್ಲ ಎಂಬ ವಾದವನ್ನು ನಾನು ಒಪ್ಪುವುದಿಲ್ಲ. ದೇಶದ ಪ್ರತಿಯೊಂದು ಭಾಗದಲ್ಲಿ ಬ್ಯಾಂಕ್‌ ಬ್ರ್ಯಾಂಚ್‌ಗಳ ಅವಶ್ಯಕತೆ ಇದೆ. ಆ ಅವಶ್ಯಕತೆಯನ್ನು ಪೂರೈಸುವುದು ನಮ್ಮ ಆದ್ಯತೆಯಾಗಿದೆ” ಎಂದು ಪಿಟಿಐಗೆ ವಿವರಿಸಿದರು.

2023-24ನೇ ಹಣಕಾಸು ವರ್ಷದಲ್ಲಿ ದೇಶಾದ್ಯಂತ 59 ಗ್ರಾಮಗಳು ಸೇರಿ 137 ಕಡೆ ಹೊಸ ಶಾಖೆಗಳನ್ನು ಎಸ್‌ಬಿಐ ತೆರೆದಿದೆ ಹಾಗೂ ಅವುಗಳಲ್ಲಿ ವಹಿವಾಟು ನಡೆಯುತ್ತಿದೆ. 2024ರ ಮಾರ್ಚ್‌ ಅಂತ್ಯಕ್ಕೆ ದೇಶಾದ್ಯಂತ ಎಸ್‌ಬಿಐ 22,542 ಬ್ರ್ಯಾಂಚ್‌ಗಳನ್ನು ಹೊಂದಿರುವ ಬೃಹತ್‌ ನೆಟ್‌ವರ್ಕ್‌ ಎನಿಸಿದೆ. ದೇಶದ ವಿಶ್ವಾಸಾರ್ಹ, ಗ್ರಾಹಕರನ್ನು ಸೆಳೆಯುವ ಬ್ಯಾಂಕ್‌ ಎಂಬ ಖ್ಯಾತಿಯನ್ನೂ ಎಸ್‌ಬಿಐ ಗಳಿಸಿದೆ.

ಇದನ್ನೂ ಓದಿ: SBI Rates: ಎಸ್‌ಬಿಐನಲ್ಲಿ ಎಫ್‌ಡಿ ಇಟ್ಟವರಿಗೆ ಬಂಪರ್‌ ನ್ಯೂಸ್;‌ ಭಾರಿ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್!

Continue Reading

ಪ್ರಮುಖ ಸುದ್ದಿ

IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

ದೀಪ್ತಿ ಶರ್ಮಾ ಮತ್ತು ಅರುಂಧತಿ ರೆಡ್ಡಿ ತಲಾ ಎರಡು ವಿಕೆಟ್​ ಕಬಳಿಸಿ ಎದುರಾಳಿ ತಂಡ ರನ್​ ಗಳಿಕೆಗೆ ಕಡಿವಾಣ ಹಾಕಿದರು. ಪರಿಣಾಮವಾಗಿ ದಕ್ಷಿಣ ಆಫ್ರಿಕಾ 50 ಓವರ್​​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಭಾರತ ಇನ್ನೂ 56 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್​ ನಷ್ಟಕ್ಕೆ 220 ರನ್ ಬಾರಿಸಿ ಗೆಲುವು ಸಾಧಿಸಿತು.

VISTARANEWS.COM


on

IND vs SA
Koo

ಬೆಂಗಳೂರು: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ (IND VS SA) ಹರ್ಮನ್​ಪ್ರೀತ್ ಕೌರ್ ನೇತೃತ್ವದ ಭಾರತದ ಮಹಿಳೆಯರ ತಂಡ 3-0 ಕ್ಲೀನ್ ಸ್ವೀಪ್​ ಸಾಧನೆ ಮಾಡಿದೆ. ಬೆಂಗಳೂರಿನಲ್ಲಿ ಭಾನುವಾರ ನಡೆದ ಮೂರನೇ ಹಾಗೂ ಕೊನೇ ಪಂದ್ಯದಲ್ಲಿ 6 ವಿಕೆಟ್​ ವಿಜಯ ಸಾಧಿಸಿದ ಭಾರತದ ವನಿತೆಯರು ಅವಿಸ್ಮರಣೀಯ ಸಾಧನೆ ಮಾಡಿದರು. ಸರಣಿಯ ಮೊದಲ ಪಂದ್ಯದಲ್ಲಿ ಭರ್ಜರಿ 143 ರನ್​ಗಳ ಗೆಲುವು ಸಾಧಿಸಿದ್ದ ಮಹಿಳೆಯರು ಎರಡನೇ ಪಂದ್ಯದಲ್ಲಿ 4 ರನ್​ಗಳ ವಿಜಯ ತಮ್ಮದಾಗಿಸಿಕೊಂಡಿದ್ದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೂರು ಪಂದ್ಯಗಳು ಆಯೋಜನೆಗೊಂಡಿದ್ದವು. ಮೂರನೇ ಪಂದ್ಯದಲ್ಲಿ ಆರಂಭಿಕ ಎಡಗೈ ಬ್ಯಾಟರ್​ ಸ್ಮೃತಿ ಮಂಧಾನ ಮತ್ತೊಮ್ಮೆ ಭರ್ಜರಿ ಇನ್ನಿಂಗ್ಸ್ ಕಟ್ಟುವ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅವರು ಈ ಹಿಂದಿನ ಎರಡೂ ಪಂದ್ಯಗಳಲ್ಲಿ ಶತಕ ಬಾರಿಸಿ ಮಿಂಚಿದ್ದರು. ಮೂರನೇ ಶತಕವನ್ನು 10 ರನ್​ಗಳ ಕೊರತೆಯಿಂದ ಕಳೆದುಕೊಂಡಿದ್ದಾರೆ.ಒಂದು ವೇಳೆ ಶತಕ ಬಾರಿಸಿದ್ದರೆ ಪುರುಷರ ತಂಡದ ವಿರಾಟ್ ಕೊಹ್ಲಿಯ ಸಾಧನೆಯನ್ನು ಸರಿಗಟ್ಟುವ ಅವಕಾಶ ಇತ್ತು. ಅದನ್ನವರು ನಷ್ಟ ಮಾಡಿಕೊಂಡರು.

ಮೊದಲೆರಡು ಪಂದ್ಯಗಳು ಗೆದ್ದ ಕಾರಣ ಸರಣಿ ಭಾರತದ ಕೈವಶವಾಗಿತ್ತು. ಹೀಗಾಗಿಔಪಚಾರಿಕ ಎನಿಸಿದ್ದ ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಸೌತ್ ಆಫ್ರಿಕಾ, ಉತ್ತಮ ಪ್ರದರ್ಶನ ನೀಡುವ ಉದ್ದೇಶ ಹೊಂದಿತ್ತು. ಆದರೆ ಭಾರತೀಯ ಬೌಲರ್​ಗಳು ಅದಕ್ಕೆ ಅವಕಾಶ ನೀಡಲಿಲ್ಲ. ಮೊದಲ ವಿಕೆಟ್​ಗೆ ಶತಕದ ಜೊತೆಯಾಟ ಬಂದರೂ ಉಳಿದ ಬ್ಯಾಟರ್​​ಗಳು ವೈಫಲ್ಯ ಕಂಡರು. ದೀಪ್ತಿ ಶರ್ಮಾ ಮತ್ತು ಅರುಂಧತಿ ರೆಡ್ಡಿ ತಲಾ ಎರಡು ವಿಕೆಟ್​ ಕಬಳಿಸಿ ಎದುರಾಳಿ ತಂಡ ರನ್​ ಗಳಿಕೆಗೆ ಕಡಿವಾಣ ಹಾಕಿದರು. ಪರಿಣಾಮವಾಗಿ ದಕ್ಷಿಣ ಆಫ್ರಿಕಾ 50 ಓವರ್​​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಭಾರತ ಇನ್ನೂ 56 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್​ ನಷ್ಟಕ್ಕೆ 220 ರನ್ ಬಾರಿಸಿ ಗೆಲುವು ಸಾಧಿಸಿತು.

ಸ್ಮೃತಿ ಮಂಧಾನ ಭರ್ಜರಿ ಬ್ಯಾಟಿಂಗ್​

219 ರನ್​ಗಳ ಗುರಿ ಬೆನ್ನಟ್ಟಿದ ಭಾರತ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್​ಗೆ 61 ರನ್​ ಪೇರಿಸಿತು. ಶಫಾಲಿ ವರ್ಮಾ 25 ರನ್​ಗೆ ಔಟಾಗಿ ಮತ್ತೊಮ್ಮೆ ನಿರಾಸೆ ಮೂಡಿಸಿದರು. ಬಳಿಕ ಪ್ರಿಯಾ ಪೂನಿಯಾ ಅವರು ಸ್ಮೃತಿ ಮಂಧಾನ ಜೊತೆಗೂಡಿ ಇನಿಂಗ್ಸ್​ ಕಟ್ಟಿದರು. ಈ ಜೋಡಿಯೂ 2ನೇ ವಿಕೆಟ್​​ಗೆ ಅರ್ಧ ಶತಕದ ಜತೆಯಾಟ ನೀಡಿತು.

ಇದನ್ನೂ ಓದಿ:T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

ಕಳೆದ ಎರಡು ಪಂದ್ಯಗಳಲ್ಲಿ ಶತಕ ಸಿಡಿಸಿದ್ದ ಸ್ಮೃತಿ, ಈ ಪಂದ್ಯದಲ್ಲೂ ಶತಕ ಸಿಡಿಸುವ ಭರವಸೆ ಮೂಡಿಸಿದ್ದರು. ಆದರೆ 90 ರನ್ ಗಳಿಸಿದ್ದ ಆತುರ ಮಾಡಿ ವಿಕೆಟ್ ಒಪ್ಪಿಸಿದರು. 83 ಎಸೆತಗಳಲ್ಲಿ 11 ಬೌಂಡರಿ ಸಹಿತ 90 ರನ್ ಗಳಿಸಿ ಮಿಂಚಿದರು. ಸರಣಿಯಯ ಹಿಂದಿನ 2 ಪಂದ್ಯಗಳಲ್ಲಿ ಕ್ರಮವಾಗಿ 117 ಮತ್ತು 135 ರನ್ ಗಳಿಸಿದ್ದರು. ಹರ್ಮನ್​ಪ್ರೀತ್​ ಕೌರ್ಕೂ 42 ರನ್ ಗಳಿಸಿದರು. ಜೆಮಿಮಾ ರೊಡ್ರಿಗಸ್ (19) ಮತ್ತು ರಿಚಾ ಘೋಷ್​ (6) ಗೆಲುವು ತಂದುಕೊಟ್ಟು.

ಭಾರತದ ಮಾರಕ ಬೌಲಿಂಗ್


ಮೊದಲು ಬ್ಯಾಟಿಂಗ್ ಮಾಡಿದ ಸೌತ್ ಆಫ್ರಿಕಾ ಉತ್ತಮ ಆರಂಭ ಪಡೆಯಿತು ನಾಯಕಿ ಲಾರಾ ವೊಲ್ವಾರ್ಡ್ಟ್ ಅರ್ಧಶತಕ ಸಿಡಿಸಿ ಮಿಂಚಿದರು. ತಜ್ಮಿನ್ ಬ್ರಿಟ್ಸ್ ಕೂಡ 38 ರನ್​ಗಳ ಉಪಯುಕ್ತ ಕಾಣಿಕೆ ನೀಡಿದರು. ಹೀಗಾಗಿ 100 ರನ್​ಗಳ ಆರಂಭಿಕ ಜತೆಯಾಟ ಸಿಕ್ಕಿತು. ನಂತರ ಮರಿಜಾನ್ನೆ ಕಪ್ 7, ಆನ್ನೆಕೆ ಬೋಷ್ 5, ಸುನೆ ಲೂಸ್ 13 ರನ್ ಗಳಿಸಿ ವಿಕೆಟ್​ ಒಪ್ಪಿಸಿ ನಿರಾಸೆ ಮೂಡಿಸಿದರು. ಶಂಗಾಸೆ (16) ನಾಡಿನ್ ಡಿ ಕ್ಲರ್ಕ್ (26) ಕೂಡ ಔಟಾದರು. ಭಾರತೀಯ ಬೌಲರ್​ಗಳು ಪ್ರಭಾವ ಬೀರಿದರು. ಮೈಕೆ ಡಿ ರಿಡ್ಡರ್ ಕೊನೆ ಹಂತದಲ್ಲಿ ಅಜೇಯ 26 ರನ್ ಪೇರಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ದೀಪ್ತಿ , ಅರುಂಧತಿ ಜತೆಗೆ ಶ್ರೇಯಾಂಕಾ ಪಾಟೀಲ್, ಪೂಜಾ ವಸ್ತ್ರಾಕರ್ ತಲಾ 1 ವಿಕೆಟ್ ಉರುಳಿಸಿದರು.

Continue Reading

ಪ್ರಮುಖ ಸುದ್ದಿ

T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

T20 world Cup 2024: ಇತ್ತೀಚೆಗೆ ನಡೆದ ಸಂಸತ್ ಅಧಿವೇಶನದಲ್ಲಿ, ಫೆಡರಲ್ ಸಚಿವರೊಬ್ಬರು ಬಾಬರ್ ಅಜಂ ಬೇಜವಾಬ್ದಾರಿಯನ್ನು ಪ್ರಶ್ನಿಸಿದ್ದಾರೆ. ಅವರ ವಿರುದ್ಧ ತಂಡದ ಆಟಗಾರರು ಪಿತೂರಿ ನಡೆಸಿದ್ದಾರೆ ಎಂದು ಹೇಳುವ ವೀಡಿಯೊ ವೈರಲ್ ಆಗಿದೆ.

VISTARANEWS.COM


on

T20 world cup 2024
Koo

ನವದೆಹಲಿ: 2024 ರ ಟಿ 20 ವಿಶ್ವಕಪ್​ನಲ್ಲಿ (T20 World Cup 2024) ಪಾಕ್​ ತಂಡದ ಕಳಪೆ ಪ್ರದರ್ಶನ ಕ್ರಿಕೆಟ್​ ಕ್ಷೇತ್ರದಲ್ಲಿ ಚರ್ಚೆಯ ವಸ್ತು. ಆ ತಂಡದ ಹುಂಬತನಕ್ಕೂ ಆಟಕ್ಕೂ ತಾಳಮೇಳ ಇಲ್ಲದಿರುವ ಬಗ್ಗೆ ದೊಡ್ಡ ಚರ್ಚೆಗಳು ನಡೆಯುತ್ತಿವೆ. ಈ ವಿಷಯ ಇದೀಗ ಅಲ್ಲಿನ ಪಾರ್ಲಿಮೆಂಟ್​​ನಲ್ಲಿ ಅನುರಣಿಸಿದೆ. ಆಟದ ವೈಖರಿಗೆ ಅಲ್ಲಿನ ರಾಜಕಾರಣಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ಕ್ರಿಕೆಟ್ ಶಿಶು ಅಮೆರಿಕ ವಿರುದ್ಧವೂ ಸೋತಿದ್ದು ಅವರಿಗೆ ಪ್ರಶ್ನಾಹ್ನ ಸಂಗತಿಯಾಗಿದೆ.

ಯುಎಸ್ಎ ಮತ್ತು ಭಾರತದ ವಿರುದ್ಧ ಪಾಕಿಸ್ತಾನದ ಅನಿರೀಕ್ಷಿತ ಸೋಲಿನ ನಂತರ ಈ ಟೀಕೆ ಬಂದಿದೆ/ ಇದು ಸೂಪರ್ 8 ಗೆ ಪ್ರವೇಶಿಸುವ ಅವಕಾಶಗಳಿಗೆ ಗಮನಾರ್ಹವಾಗಿ ಅಡ್ಡಿಯಾಗಿದೆ. ಇತ್ತೀಚೆಗೆ ನಡೆದ ಸಂಸತ್ ಅಧಿವೇಶನದಲ್ಲಿ, ಫೆಡರಲ್ ಸಚಿವರೊಬ್ಬರು ಬಾಬರ್ ಅಜಂ ಬೇಜವಾಬ್ದಾರಿಯನ್ನು ಪ್ರಶ್ನಿಸಿದ್ದಾರೆ. ಅವರ ವಿರುದ್ಧ ತಂಡದ ಆಟಗಾರರು ಪಿತೂರಿ ನಡೆಸಿದ್ದಾರೆ ಎಂದು ಹೇಳುವ ವೀಡಿಯೊ ವೈರಲ್ ಆಗಿದೆ.

ಪಾಕಿಸ್ತಾನದ ಸತತ ಸೋಲಿಗೆ ಪ್ರತಿಕ್ರಿಯೆಯಾಗಿ ಈ ವ್ಯಂಗ್ಯದ ಹೇಳಿಕೆ ಬಂದಿದೆ. ಇದು ಅಭಿಮಾನಿಗಳು ಮತ್ತು ಮಾಜಿ ಕ್ರಿಕೆಟಿಗರನ್ನು ಕೆರಳಿಸಿದೆ. ಈ ವಿಷಯವನ್ನು ರಾಜಕೀಯಗೊಳಿಸಲಾಗಿದೆ. ಪಿಎಂಎಲ್ (ಎನ್) ಸದಸ್ಯರೊಬ್ಬರು ರಾಜಕೀಯ ಎದುರಾಳಿ, ಮಾಜಿ ಕ್ರಿಕೆಟ್ ನಾಯಕ ಇಮ್ರಾನ್ ಖಾನ್ ಅವರನ್ನು ಟೀಕಿಸಲು ಸೋಲಿನ ಅವಕಾಶವನ್ನು ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಾಬರ್ ಸೋಲಿನ ಚರ್ಚೆಯ ಸಭೆಯನ್ನು ನಡೆಸಬೇಕು. ತಂಡದ ವೈಫಲ್ಯಕ್ಕೆ ಇತರ ಆಟಗಾರರನ್ನು ದೂಷಿಸಬೇಕು ಎಂದು ಸಂಸದರು ತಮಾಷೆಯಾಗಿ ಹೇಳಿದ್ದಾರೆ. ಇದು ಹಿರಿಯ ಕ್ರಿಕೆಟಿಗರ ಇಮ್ರಾನ್ ಅವರನ್ನು ಪರೋಕ್ಷವಾಗಿ ದೂಷಿಸುವುದಾಗಿದೆ.

2024 ರ ಟಿ 20 ವಿಶ್ವಕಪ್​​ಗೆ ಸ್ವಲ್ಪ ಮೊದಲು ವೈಟ್-ಬಾಲ್ ನಾಯಕನಾಗಿ ಮರು ನೇಮಕಗೊಂಡ ಬಾಬರ್ ಅಜಮ್, ತಂಡದ ಕಳಪೆ ಪ್ರದರ್ಶನಕ್ಕಾಗಿ ತೀವ್ರ ಹಿನ್ನಡೆಯನ್ನು ಎದುರಿಸಬೇಕಾಯಿತು. ಏಕದಿನ ವಿಶ್ವಕಪ್ 2023 ರಲ್ಲಿ ಪಾಕಿಸ್ತಾನದ ಕಳಪೆ ಪ್ರದರ್ಶನದ ನಂತರ ಶಾಹೀನ್ ಅಫ್ರಿದಿ ನಾಯಕನಾಗಿ ವಿಫಲಗೊಂಡ ನಂತರ, ಬಾಬರ್ ತಮ್ಮ ಪಾತ್ರವನ್ನು ಪುನರಾರಂಭಿಸಿದ್ದರು. ಆದರೆ ತಂಡದ ಅದೃಷ್ಟವನ್ನು ತಿರುಗಿಸಲು ಅವರಿಗೆ ಸಾಧ್ಯವಾಗಲಿಲ್ಲ. ತಂಡದ ಆಟಗಾರರೇ ಅವರ ವಿರುದ್ಧ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ : Babar Azam: ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದವನ ಮೇಲೆ 1 ಕೋಟಿ ರೂ. ಮಾನನಷ್ಠ ಮೊಕದ್ದಮೆ ಹೂಡಿದ ಬಾಬರ್ ಅಜಮ್​

ಬಾಬರ್ ತನ್ನ ಕುಟುಂಬದೊಂದಿಗೆ ಲಂಡನ್​ನಲ್ಲಿ ರಜಾದಿನಗಳನ್ನು ಆನಂದಿಸುತ್ತಿದ್ದರೆ, ತಂಡದ ಉಳಿದವರು ಪಾಕಿಸ್ತಾನಕ್ಕೆ ಮರಳಿದ್ದಾರೆ. ಬಾಬರ್​​ಗೆ ಪಂದ್ಯಾವಳಿಯಿಂದ ತಂಡವು ಬೇಗನೆ ನಿರ್ಗಮಿಸಿರುವ ಬಗ್ಗೆ ವರದಿಯನ್ನು ನೀಡುವಂತೆ ಕೇಳಲಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ವರದಿಯನ್ನು ಪರಿಶೀಲಿಸಲಿದ್ದು, ಇದು ನಾಯಕನಾಗಿ ಬಾಬರ್ ಅವರ ಭವಿಷ್ಯವನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ.

ಪಿಸಿಬಿ ಈಗ ಈ ಕಳವಳಗಳನ್ನು ಪರಿಹರಿಸುವ ಮತ್ತು ಪಾಕಿಸ್ತಾನ ಕ್ರಿಕೆಟ್​​ನ ಭವಿಷ್ಯವನ್ನು ರೂಪಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುವ ಸವಾಲಿನ ಕಾರ್ಯವನ್ನು ಎದುರಿಸುತ್ತಿದೆ.

Continue Reading

ದೇಶ

Rahul Gandhi: ಎಲ್ಲರೂ ಬೈಯುವಾಗ ನೀವು ಪ್ರೀತಿ ಕೊಟ್ರಿ; ವಯನಾಡು ಜನತೆಗೆ ರಾಹುಲ್‌ ಗಾಂಧಿ ಭಾವುಕ ಪತ್ರ

Rahul Gandhi: Rahul Gandhiರಾಹುಲ್‌ ಗಾಂಧಿ ಅವರು 2019ರಲ್ಲಿ ಉತ್ತರ ಪ್ರದೇಶ ಅಮೇಥಿ ಹಾಗೂ ವಯನಾಡಿನಿಂದ ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಸೋಲನುಭವಿಸಿದ ಕಾರಣ ಅವರು ವಯನಾಡು ಸಂಸದರಾಗಿ ಮುಂದುವರಿದಿದ್ದರು. ಆದರೆ, 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿ ಅವರು 2004ರಿಂದಲೂ ಪ್ರತಿನಿಧಿಸುತ್ತಿದ್ದ ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಈಗ ರಾಹುಲ್‌ ಗಾಂಧಿ ಅವರು ರಾಯ್‌ಬರೇಲಿ ಸಂಸದರಾಗಿ ಮುಂದುವರಿಯಲು ತೀರ್ಮಾನಿಸಿದ್ದಾರೆ. ಇದರ ಬೆನ್ನಲ್ಲೇ ವಯನಾಡಿನ ಜನತೆಗೆ ರಾಹುಲ್‌ ಗಾಂಧಿ ಭಾವನಾತ್ಮಕ ಪತ್ರ ಬರೆದಿದ್ದಾರೆ.

VISTARANEWS.COM


on

Rahul Gandhi
Koo

ತಿರುವನಂತಪುರಂ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ರಾಯ್‌ಬರೇಲಿ (Rae Bareli) ಸಂಸದರಾಗಿಯೇ ಮುಂದುವರಿಯಲು ತೀರ್ಮಾನಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ರಾಯ್‌ಬರೇಲಿ ಹಾಗೂ ವಯನಾಡು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿದ ಅವರು ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ತಾಯಿ ಸೋನಿಯಾ ಗಾಂಧಿ ಅವರು ಇದಕ್ಕೂ ಮೊದಲು ಸ್ಪರ್ಧಿಸುತ್ತಿದ್ದ ರಾಯ್‌ಬರೇಲಿ ಕ್ಷೇತ್ರದ ಸಂಸದರಾಗಿ ಉಳಿಯಲು ತೀರ್ಮಾನಿಸಿದ್ದಾರೆ. ಇದರ ಬೆನ್ನಲ್ಲೇ, ವಯನಾಡಿನ ಜನತೆಗೆ ರಾಹುಲ್‌ ಗಾಂಧಿ ಅವರು ಭಾವನಾತ್ಮಕ ಪತ್ರ ಬರೆದಿದ್ದಾರೆ.

“ನಾನು ಪ್ರತಿ ದಿನವೂ ಬೈಗುಳ, ನಿಂದನೆಯನ್ನೇ ಕೇಳುತ್ತಿರುವುದರ ಮಧ್ಯೆ ನೀವು ನನಗೆ ನಿಸ್ಪೃಹವಾದ ಪ್ರೀತಿ ನೀಡಿದಿರಿ. ನಿಮ್ಮ ಪ್ರೀತಿಯೇ ನನ್ನನ್ನು ಎಲ್ಲದರಿಂದಲೂ ಕಾಪಾಡಿತು. ನೀವೇ ನನ್ನ ಮನೆ, ನೀವೇ ನನ್ನ ಕುಟುಂಬ ಆಗಿದ್ದಿರಿ. ನೀವು ಒಂದು ಕ್ಷಣವೂ ನನ್ನನ್ನು ಅವಮಾನಿಸಲಿಲ್ಲ. ನೀವು ನನ್ನನ್ನು ನಂಬುತ್ತ ಹೋದಂತೆ ನಾನು ಮತ್ತಷ್ಟು ಗಟ್ಟಿಯಾಗುತ್ತ ಹೋದೆ. ನಿಮ್ಮ ಪ್ರೀತಿಯೇ ನನ್ನನ್ನು ಅನುದಿನವೂ ಮುನ್ನಡೆಸಿತು, ಅನುದಿನವೂ ನನಗೆ ಮಾರ್ಗದರ್ಶನ ನೀಡಿತು, ಪ್ರತಿದಿನವೂ ನನಗೆ ಹೊಸ ಹುಮ್ಮಸ್ಸು ನೀಡಿತು” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಧನ್ಯವಾದ ಹೇಳಲು ಮಾತೇ ಬಾರದು

“ನೀವು ಯಾವ ಧರ್ಮದವರೋ ನನಗೆ ಗೊತ್ತಿಲ್ಲ, ನಿಮ್ಮ ಸಮುದಾಯ ಯಾವುದು ಎಂಬುದು ನನಗೆ ಬೇಕಾಗಿಲ್ಲ, ನೀವು ಆಡುವ ಭಾಷೆ ಯಾವುದು ಎಂಬುದು ಕೂಡ ನನಗೆ ನಗಣ್ಯ. ಆದರೆ, ನೀವು ತೋರಿದ ಪ್ರೀತಿ, ವಾತ್ಸಲ್ಯ, ನೀವು ತುಂಬಿದ ಧೈರ್ಯ, ಪ್ರಾಂಜಲ ಮನಸ್ಸಿನಿಂದ ನೀವು ಹರಸಿದ ರೀತಿಗೆ ನನ್ನ ಮನಸ್ಸು ಉಕ್ಕಿಬಂದಿದೆ. ನಿಮಗೆ ಹೇಗೆ ಧನ್ಯವಾದ ಹೇಳುವುದೋ ತಿಳಿಯದು, ನಿಮ್ಮನ್ನು ಹೇಗೆ ಸಂತೈಸುವುದೋ ಗೊತ್ತಾಗದು. ಆದರೂ, ರಾಯ್‌ಬರೇಲಿಯಲ್ಲಿ ನನ್ನನ್ನು ಇಷ್ಟಪಡುವ ಜನ ಇದ್ದಾರೆ. ನಿಮ್ಮ ಪ್ರೀತಿಯೊಂದಿಗೆ ನಾನು ಅವರ ಬಳಿ ಹೋಗುತ್ತಿದ್ದೇನೆ. ನಿಮ್ಮ ನೆನಪುಗಳ ಬುತ್ತಿ ಕಟ್ಟಿಕೊಂಡು ಮುಂದಡಿ ಇಡುತ್ತಿದ್ದೇನೆ” ಎಂದು ರಾಹುಲ್‌ ಗಾಂಧಿ ಭಾವುಕರಾಗಿದ್ದಾರೆ.

“ವಯನಾಡಿನ ಹಿರಿಯರು, ಯುವಕರು, ಅಪಾರ ಶಕ್ತಿ ಹೊಂದಿರುವ ಯುವತಿಯರು ನನ್ನ ಶಕ್ತಿ ಆಗಿದ್ದರು. ವಯನಾಡಿನ ಜನರ ಪರವಾಗಿ ನಾನು ಸಂಸತ್ತಿನಲ್ಲಿ ಧ್ವನಿ ಎತ್ತಲು ಇದೇ ಸ್ಫೂರ್ತಿಯಾಯಿತು. ಈಗ ವಯನಾಡಿನಲ್ಲಿ ನನ್ನ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ನನಗೆ ನೀಡಿದ ಪ್ರೀತಿಯನ್ನೇ ಅವಳಿಗೆ ನೀಡುತ್ತೀರಿ ಎಂಬ ನಂಬಿಕೆ ಇದೆ. ಆ ಮೂಲಕ ದ್ವೇಷವನ್ನು ಹೊಡೆದೋಡಿಸಲು ಕೈ ಜೋಡಿಸುತ್ತೀರಿ ಎಂಬ ವಿಶ್ವಾಸವಿದೆ” ಎಂಬುದಾಗಿ ಅವರು ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಪ್ರವೇಶ ಪಡೆದಿರುವ ಕಾರಣ ರಾಯ್‌ಬರೇಲಿ ಕ್ಷೇತ್ರದಿಂದ ರಾಹುಲ್‌ ಗಾಂಧಿ ಸ್ಪರ್ಧಿಸುವಂತಾಗಿತ್ತು. ಈಗ ಪ್ರಿಯಾಂಕಾ ವಾದ್ರಾ ಅವರು ವಯನಾಡು ಕ್ಷೇತ್ರದಿಂದ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ. ಇವರಿಗೆ ಇದೇ ಮೊದಲ ಚುನಾವಣೆ ಆಗಿದೆ. ಚುನಾವಣೆಗೂ ಮೊದಲು, ಪ್ರಿಯಾಂಕಾ ವಾದ್ರಾ ಅವರು ರಾಯ್‌ಬರೇಲಿಯಿಂದ, ರಾಹುಲ್‌ ಗಾಂಧಿ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.

ಇದನ್ನೂ ಓದಿ: UGC-NET: ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿರುವ ಮೋದಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಕೆ ತಡೆಯುತ್ತಿಲ್ಲ? ರಾಹುಲ್‌ ಗಾಂಧಿ ವ್ಯಂಗ್ಯ

Continue Reading
Advertisement
SBI
ದೇಶ4 mins ago

SBI: ನಿಮ್ಮೂರಿಗೂ ಬರಲಿದೆ ಎಸ್‌ಬಿಐ ಹೊಸ ಬ್ರ್ಯಾಂಚ್;‌ 400 ಶಾಖೆ ತೆರೆಯಲು ಬ್ಯಾಂಕ್‌ ನಿರ್ಧಾರ

IND vs SA
ಪ್ರಮುಖ ಸುದ್ದಿ13 mins ago

IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

T20 world cup 2024
ಪ್ರಮುಖ ಸುದ್ದಿ46 mins ago

T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

Rahul Gandhi
ದೇಶ1 hour ago

Rahul Gandhi: ಎಲ್ಲರೂ ಬೈಯುವಾಗ ನೀವು ಪ್ರೀತಿ ಕೊಟ್ರಿ; ವಯನಾಡು ಜನತೆಗೆ ರಾಹುಲ್‌ ಗಾಂಧಿ ಭಾವುಕ ಪತ್ರ

Babar Azam
ಪ್ರಮುಖ ಸುದ್ದಿ2 hours ago

Babar Azam: ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದವನ ಮೇಲೆ 1 ಕೋಟಿ ರೂ. ಮಾನನಷ್ಠ ಮೊಕದ್ದಮೆ ಹೂಡಿದ ಬಾಬರ್ ಅಜಮ್​

Abbi Falls
ಕರ್ನಾಟಕ2 hours ago

Abbi Falls: ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ; ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಹಲ್ಲೆ

Shakib Al Hasan
ಪ್ರಮುಖ ಸುದ್ದಿ2 hours ago

Shakib Al Hasan : ನಿವೃತ್ತಿಯಾಗು ಶಕಿಬ್…, ಬಾಂಗ್ಲಾ ಮಾಜಿ ನಾಯಕನ ಮೇಲೆ ಮತ್ತೆ ಗುಡುಗಿದ ಸೆಹ್ವಾಗ್​

Vashu Bhagnani
ಸಿನಿಮಾ2 hours ago

Vashu Bhagnani: ‘ಬೆಲ್ ಬಾಟಮ್’ ಚಿತ್ರದ ನಿರ್ಮಾಪಕ ದಿವಾಳಿ; ಕಚೇರಿ ಕಟ್ಟಡ ಸೇಲ್!

Sonakshi Sinha
ಬಾಲಿವುಡ್2 hours ago

Sonakshi Sinha: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್;‌ Photos ಇಲ್ಲಿವೆ

Money Guide
ಮನಿ ಗೈಡ್3 hours ago

Money Guide: 30 ಸಾವಿರ ಸಂಬಳ ಪಡೆಯುವವರೂ ಕೆಲವೇ ವರ್ಷಗಳಲ್ಲಿ ಕೋಟ್ಯಧಿಪತಿ ಆಗಲು ಸಾಧ್ಯ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌