ವಿಸ್ತಾರ ಸಂಪಾದಕೀಯ: ಪಕ್ಷಾಂತರ ರಾಜಕಾರಣ; ನೈತಿಕತೆಯ ಅಧಃಪತನ! - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಪಕ್ಷಾಂತರ ರಾಜಕಾರಣ; ನೈತಿಕತೆಯ ಅಧಃಪತನ!

ರಾಜಕಾರಣಿಗಳು ಮಾತ್ರವಲ್ಲ, ಮತದಾರರು ಕೂಡ ನೈತಿಕತೆ ಕಳೆದುಕೊಳ್ಳುತ್ತಿದ್ದಾರೆ. ಇಂಥ ಅಪವಿತ್ರ ರಾಜಕಾರಣಕ್ಕೆ ಅಂತ್ಯ ಹಾಡಲು, ಪಕ್ಷಾಂತರಿಗಳಿಗೆ ಬುದ್ಧಿ ಕಲಿಸಲು ಮತದಾರರಿಂದ ಮಾತ್ರ ಸಾಧ್ಯ.

VISTARANEWS.COM


on

Defection politics; Decline of morality!
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Election) ದಿನಗಣನೆ ಆರಂಭವಾಗಿದೆ. ಚುನಾವಣೆ ಹತ್ತಿರ ಬರುತ್ತಿರುವಂತೆ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿತ ಅವ್ಯಾಹತವಾಗಿ ನಡೆಯುತ್ತದೆ. ಚುನಾವಣೆ ದಿನ ಘೋಷಣೆಗೆ ಮೊದಲೇ ಬಿಜೆಪಿಯಿಂದ ಕಾಂಗ್ರೆಸ್‌ಗೆ, ಕಾಂಗ್ರೆಸ್‌ನಿಂದ ಬಿಜೆಪಿಗೆ, ಜೆಡಿಎಸ್‌ನಿಂದ ಬಿಜೆಪಿ- ಕಾಂಗ್ರೆಸ್‌ಗೆ ಹಾರುವ ಪ್ರಕ್ರಿಯೆ ಚುರುಕಾಗಿದೆ. ಒಂದು ಪಕ್ಷದಲ್ಲಿ ಅತೃಪ್ತರಾದವರು ಇನ್ನೊಂದು ಕಡೆ ಮನ್ನಣೆ ಸಿಗಬಹುದು ಎಂಬ ಆಸೆಯಿಂದ ಬೇರೆ ಪಕ್ಷಗಳತ್ತ ಜಿಗಿಯುತ್ತಿದ್ದಾರೆ. ಹಿಂದೆಲ್ಲ ವಿರಳವಾಗಿರುತ್ತಿದ್ದ ಇಂಥ ನೆಗೆತ ಇತ್ತೀಚಿನ ವರ್ಷಗಳಲ್ಲಿ ಸಾಮಾನ್ಯ ಎನಿಸಿಬಿಟ್ಟಿದೆ. ಬೆಳಗ್ಗೆ ಒಂದು ಪಕ್ಷ, ಮಧ್ಯಾಹ್ನ ಮತ್ತೊಂದು ಪಕ್ಷ, ರಾತ್ರಿ ಮಗದೊಂದು ಪಕ್ಷಕ್ಕೆ ಹಾರಲೂ ಈಗಿನ ರಾಜಕಾರಣಿಗಳು ಮುಜುಗರಪಡುತ್ತಿಲ್ಲ! ಹಿಂದೆಲ್ಲಾ ಪಕ್ಷಾಂತರ ಹೊಂದುವವರು ʼನನಗೆ ಈ ಪಕ್ಷದಲ್ಲಿ ಉಸಿರುಗಟ್ಟುವ ಅನುಭವವಾಗುತ್ತಿದೆʼ ʼನನ್ನ ಯೋಗ್ಯತೆಯನ್ನು ಪರಿಗಣಿಸಲಾಗುತ್ತಿಲ್ಲʼ ʼಆ ಪಕ್ಷದ ತತ್ವ ಆದರ್ಶಗಳನ್ನು ಮೆಚ್ಚಿಕೊಂಡಿದ್ದೇನೆʼ ಎಂಬ ಮೇಲ್ನೋಟದ ಕಾರಣಗಳನ್ನಾದರೂ ಕೊಡುತ್ತಿದ್ದರು. ಈಗ ಅದೂ ಇಲ್ಲ. ಅಂದರೆ ಇವರಿಗೆಲ್ಲಾ ಅಧಿಕಾರವೇ ಪರಮೋದ್ದೇಶವಾಗಿದೆ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ನಿರ್ದಿಷ್ಟ ತತ್ವ ಸಿದ್ಧಾಂತ ಆಧರಿಸಿದ ರಾಜಕಾರಣ ಕಣ್ಮರೆಯಾಗುತ್ತಿರುವುದು, ಸ್ಥಾಪಿತ ಹಿತಾಸಕ್ತಿ, ಕುಟುಂಬ ರಾಜಕಾರಣಗಳು ವಿಜೃಂಭಿಸುತ್ತಿರುವುದು ಇವುಗಳೆಲ್ಲ ಪಕ್ಷಾಂತರದ ಜತೆಜತೆಗೇ ಜೋಡಿಸಿಕೊಂಡಿರುವ ಪೀಡೆಗಳು.

ಪಕ್ಷಾಂತರ ನಿಷೇಧ ಕಾಯಿದೆ ಎಂಬುದೊಂದಿದೆ. ಪಕ್ಷಾಂತರವು ದೊಡ್ಡ ಪಿಡುಗಾಗಿ ಪರಿಣಮಿಸಿದ್ದ ಸಂದರ್ಭದಲ್ಲಿ, 1985ರಲ್ಲಿ ತರಲಾದ ಈ ಕಾಯಿದೆಗೆ 2003ರಲ್ಲಿ ಮತ್ತಷ್ಟು ಬಲ ತುಂಬಲಾಗಿತ್ತು. ಆದರೆ ಇದು ನೀಡುವ ಪಕ್ಷಾಂತರದ ವ್ಯಾಖ್ಯೆ ಸೀಮಿತವಾದುದು. ಶಾಸಕ ಅಥವಾ ಸಂಸದ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡದೆ ಇನ್ನೊಂದು ರಾಜಕೀಯ ಪಕ್ಷಕ್ಕೆ ಸೇರಿದರೆ, ಮತದಾನದ ಸಮಯದಲ್ಲಿ ಹಾಜರಿರಬೇಕೆಂಬ ಪಕ್ಷದ ವಿಪ್‌ ಉಲ್ಲಂಘಿಸಿದರೆ, ಅದು ಪಕ್ಷಾಂತರ. ಅಂಥವರನ್ನು ಅನರ್ಹಗೊಳಿಸಬಹುದು. ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಇನ್ನೊಂದು ಪಕ್ಷ ಸೇರಿದರೆ ಪಕ್ಷಾಂತರ ಕಾಯಿದೆ ಅನ್ವಯವಾಗುವುದಿಲ್ಲ. ಕಾನೂನು ಚಾಪೆಯ ಕೆಳಗೆ ತೂರಿದರೆ ಪಕ್ಷಾಂತರಿಗಳು ರಂಗೋಲಿ ಕೆಳಗೆ ತೂರುತ್ತಾರೆ. 2019ರಲ್ಲಿ ರಾಜ್ಯ ವಿಧಾನಸಭೆಯಲ್ಲಿ ನಡೆದ ದೊಡ್ಡ ಡ್ರಾಮಾವನ್ನು ನೆನಪಿಸಿಕೊಂಡರೆ ಇದು ಅರ್ಥವಾಗುತ್ತದೆ. ಇದು ವಿಶ್ವಾಸಮತ ಸಂದರ್ಭದ ಪಕ್ಷಾಂತರವಾದರೆ, ಚುನಾವಣೆ ಸಂದರ್ಭದ ಪಕ್ಷಾಂತರವೂ ಇನ್ನೊಂದು ಬಗೆಯ ಅವಕಾಶವಾದವೇ ಆಗಿದೆ.

ಇತ್ತೀಚೆಗಷ್ಟೇ ಮೇಘಾಲಯದಲ್ಲಿ ಚುನಾವಣೆ ಮುಗಿದಿದೆ. ತಮಾಷೆಯೆಂದರೆ, ಮಹಾರಾಷ್ಟ್ರದಲ್ಲಿ ಬಿಜೆಪಿ ವಿರುದ್ಧ ಸಿಡಿಯುತ್ತಿರುವ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಮೇಘಾಲಯದಲ್ಲಿ ಮಾತ್ರ ಬಿಜೆಪಿ ಮಿತ್ರಕೂಟವನ್ನು ಬೆಂಬಲಿಸುತ್ತಿದೆ! ಹಾಗಿದ್ದರೆ ತತ್ವ, ಸಿದ್ಧಾಂತ ಎಂಬುದಕ್ಕೆ ಬೆಲೆ ಎಲ್ಲಿದೆ? ಕರ್ನಾಟಕದಲ್ಲಿ ಅತಂತ್ರ ಫಲಿತಾಂಶ ಉಂಟಾದರೆ ಜೆಡಿಎಸ್‌ ಪಕ್ಷ ಬಿಜೆಪಿ ಜತೆಗೆ ಹೋಗುತ್ತದೋ, ಕಾಂಗ್ರೆಸ್‌ ಜತೆಗೋ ಎಂಬುದು ಕೊನೆಯ ಕ್ಷಣದವರೆಗೂ ಹೇಳಲು ಸಾಧ್ಯವಿಲ್ಲ. ಪಕ್ಷದ ತಾತ್ವಿಕತೆ ಎಂಬುದು ಇಂದು ಬರಿಯ ಬಾಯಿಮಾತಾಗಿ ಉಳಿದಿದೆ ಎಂಬುದೇ ಇದರರ್ಥ. ದುರದೃಷ್ಟಕರ ವಿಚಾರ ಎಂದರೆ, ಮತದಾರರು ಕೂಡ ಈ ಹೊಸ ಅಪವಿತ್ರ ರಾಜಕೀಯ ಸೂತ್ರಗಳಿಗೆ ಹೊಂದಿಕೊಂಡು ಬಿಟ್ಟಿದ್ದಾರೆ. ಚುನಾವಣೆಯಲ್ಲಿ ಹಣವೇ ಪ್ರಧಾನ ಪಾತ್ರ ವಹಿಸುತ್ತಿದೆ. ಹಣ ಚೆಲ್ಲಿದರೆ ಯಾವ ಪಕ್ಷದಿಂದ ನಿಂತರೂ ಗೆಲ್ಲಬಹುದು ಎಂಬ ಉಢಾಪೆಯನ್ನು ರಾಜಕಾರಣಿಗಳು ಮೈಗೂಡಿಸಿಕೊಂಡಿದ್ದಾರೆ. ಈಗಾಗಲೇ ಭಾವಿ ಅಭ್ಯರ್ಥಿಗಳು ಕುಕ್ಕರ್‌ ಮುಂತಾದ ಆಮಿಷಗಳ ಮೂಲಕ ಮತದಾರರನ್ನು ಓಲೈಸುತ್ತಿದ್ದರೆ, ಮತದಾರರು ಯಾವುದೇ ಪಾಪಪ್ರಜ್ಞೆಯೂ ಇಲ್ಲದೇ, ಪ್ರತಿರೋಧದ ಧ್ವನಿಯೂ ಇಲ್ಲದೇ, ಅವುಗಳನ್ನು ಸ್ವೀಕರಿಸುತ್ತಿದ್ದಾರೆ.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ವಲಯ ಏಕೆ?

ಚುನಾವಣೆಯಲ್ಲಿ ಗೆಲ್ಲಲು ಕೋಟಿ ಕೋಟಿ ಹಣ ಹಂಚಿಕೆ, ಹೀಗೆ ಹಂಚಿದ ಹಣ ವಾಪಸ್ ಪಡೆಯಲು ಭ್ರಷ್ಟಾಚಾರ… ಈ ಕರಾಳ ಸರಣಿ ಮುಂದುವರಿಯುತ್ತದೆ. ರಾಜಕಾರಣಿಗಳು ಮಾತ್ರವಲ್ಲ, ಮತದಾರರು ಕೂಡ ನೈತಿಕತೆ ಕಳೆದುಕೊಳ್ಳುತ್ತಿದ್ದಾರೆ. ಇಂಥ ಅಪವಿತ್ರ ರಾಜಕಾರಣಕ್ಕೆ ಅಂತ್ಯ ಹಾಡಲು, ಪಕ್ಷಾಂತರಿಗಳಿಗೆ ಬುದ್ಧಿ ಕಲಿಸಲು ಮತದಾರರಿಂದ ಮಾತ್ರ ಸಾಧ್ಯ. ಮತದಾರರು ಕ್ಷಣಿಕ ಲಾಭಕ್ಕಾಗಿ ನೈತಿಕ ಪ್ರಜ್ಞೆ ತೊರೆದರೆ ಪ್ರಜಾಪ್ರಭುತ್ವಕ್ಕೇ ಅಪಾಯವಿದೆ. ಇಂಥ ನೀತಿಗೆಟ್ಟ ರಾಜಕಾರಣ ಮತ್ತಷ್ಟು ವಿಜೃಂಭಿಸಲಿದೆ. ಮತದಾರರು ಪ್ರಜ್ಞಾವಂತರಾಗಿ, ಆಮಿಷಗಳಿಗೆ ʼನೋʼ ಎನ್ನುವುದು, ಪಕ್ಷಾಂತರಿಗಳಿಗೆ ಬುದ್ಧಿ ಕಲಿಸುವುದು- ಇವುಗಳನ್ನು ಮಾಡಿದರೆ ಮಾತ್ರ ಪ್ರಜಾಪ್ರಭುತ್ವದ ಅಂತಃಸ್ಸತ್ವ ಉಳಿಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಹೃದಯಾಘಾತಕ್ಕೆ 3 ಬಲಿ; ಮೈಸೂರು, ತುಮಕೂರಿನಲ್ಲಿ ಮತ ಹಾಕಿದ್ದ, ಕೊಡಗಲ್ಲಿ ವೋಟ್‌ ಹಾಕಲು ನಿಂತಿದ್ದವ ಸಾವು!

Lok Sabha Election 2024: ಜನರು ಬಿಸಿಲನ್ನೂ ಲೆಕ್ಕಿಸದೆ ಮತದಾನ ಮಾಡುತ್ತಿದ್ದಾರೆ. ಇದೇ ವೇಳೆ ತುಮಕೂರಿನಲ್ಲಿ ಮತ ಚಲಾಯಿಸಿ ಬಂದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮತ್ತೊಂದು ಕಡೆ ಕೊಡಗಿನ ವಿರಾಜಪೇಟೆಯಲ್ಲಿಯೂ ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದಾಗ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜಯನಗರದಲ್ಲಿ ವೃದ್ಧೆಯೊಬ್ಬರು ಆಕ್ಸಿಜನ್‌ ಸಹಾಯದಿಂದಲೇ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. ಮೈಸೂರು ಲೋಕಸಭಾ ಕ್ಷೇತ್ರದ ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ವೃದ್ಧೆಯೊಬ್ಬರು ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172ರಲ್ಲಿ ಮತ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಹೊರ ಬರುತ್ತಿದ್ದಂತೆ ಅವರು ಕುಸಿದು ಮೃತಪಟ್ಟಿದ್ದಾರೆ.

VISTARANEWS.COM


on

Lok Sabha Election 2024 Two die of heart attack in Tumakuru and Kodagu
Koo

ತುಮಕೂರು/ ಕೊಡಗು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನಕ್ಕೆ (First phase of polling) ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಜನರು ಬಿಸಿಲನ್ನೂ ಲೆಕ್ಕಿಸದೆ ಮತದಾನ ಮಾಡುತ್ತಿದ್ದಾರೆ. ಇದೇ ವೇಳೆ ತುಮಕೂರಿನಲ್ಲಿ ಮತ ಚಲಾಯಿಸಿ ಬಂದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮತ್ತೊಂದು ಕಡೆ ಕೊಡಗಿನ ವಿರಾಜಪೇಟೆಯಲ್ಲಿಯೂ ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದಾಗ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಇಹಲೋಕ ತ್ಯಜಿಸಿದ್ದಾರೆ.

ತುಮಕೂರಲ್ಲಿ ಹೃದಯಾಘಾತಕ್ಕೆ ವ್ಯಕ್ತಿ ಬಲಿ

ತುಮಕೂರು ನಗರದ ಎಸ್.ಎಸ್.ಪುರಂನಲ್ಲಿ ಮತ ಚಲಾಯಿಸಿ ಮನೆಗೆ ಬಂದಿದ್ದ ರಮೇಶ್ (54) ಎಂಬುವವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Lok Sabha Election 2024 Two die of heart attack in Tumakuru and Kodagu

ಬಟ್ಟೆ ಅಂಗಡಿ ವ್ಯಾಪಾರಿಯಾಗಿದ್ದ ರಮೇಶ್ ಅವರು ಶುಕ್ರವಾರ ಬೆಳಗ್ಗೆ ನಗರದ ಎಸ್.ಎಸ್. ಪುರಂನಲ್ಲಿರುವ ಎಸ್‌ವಿಕೆ ಸ್ಕೂಲ್‌ನಲ್ಲಿರುವ ಮತಗಟ್ಟೆ ಸಂಖ್ಯೆ 149ರಲ್ಲಿ ಪತ್ನಿಯ ಜತೆ ಹೋಗಿ ಮತ ಚಲಾಯಿಸಿ ಬಂದಿದ್ದರು. ಮನೆಗೆ ಬಂದವರಿಗೆ ತೀವ್ರ ಎದೆ ನೋವು ಬಂದಿದೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕೊಡಗಿನಲ್ಲಿ ಮತದಾನಕ್ಕೆ ನಿಂತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ವೀರಾಜಪೇಟೆ ತಾಲೂಕಿನ ಬಿ.ಶೆಟ್ಟಿಗೇರಿ ಗ್ರಾಮದ ಮತಗಟ್ಟೆ ಸಮೀಪ ಮತ ಹಾಕಲು ಸರತಿ ಸಾಲಿನಲ್ಲಿ ನಿಂತಿದ್ದ ಪದಾರ್ಥಿ ಮನೋಹರ (58) ಎಂಬುವವರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.

Lok Sabha Election 2024 Two die of heart attack in Tumakuru and Kodagu
ಪದಾರ್ಥಿ ಮನೋಹರ

ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ವೃದ್ಧೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರೂ, ಆಕ್ಸಿಜನ್‌ ಸಮೇತ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ. ಇನ್ನು ಮೈಸೂರಿನ ಹುಣಸೂರಿನಲ್ಲಿ ವೃದ್ಧೆಯೊಬ್ಬರು ಮತ ಚಲಾಯಿಸಿ ಮೃತಪಟ್ಟಿದ್ದಾರೆ.

ವೋಟು ಹಾಕಿ ಬಂದು ವೃದ್ಧೆ ನಿಧನ

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ (Mysore Lok Sabha constituency) ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ವೃದ್ಧೆಯೊಬ್ಬರು ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172ರಲ್ಲಿ ಮತ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಹೊರ ಬರುತ್ತಿದ್ದಂತೆ ಅವರು ಕುಸಿದು ಮೃತಪಟ್ಟಿದ್ದಾರೆ.

Lok Sabha Election 2024 Woman casts her vote with the help of oxygen elderly woman dies after casting her vote

ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ಪುಟ್ಟಮ್ಮ (90) ಮೃತರು. ಇವರು ಪ್ರತಿ ಚುನಾವಣೆಯಂತೆ ಈ ಬಾರಿಯೂ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಅದೇ ಖುಷಿಯಲ್ಲಿ ವಾಪಸಾಗುತ್ತಿದ್ದಾಗ ದಿಢೀರ್‌ ಕುಸಿದುಬಿದ್ದಿದ್ದು, ಅಲ್ಲಿಯೇ ಮೃತಪಟ್ಟಿದ್ದಾರೆ.

ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ (Bangalore South Lok Sabha constituency) ಜಯನಗರದಲ್ಲಿ ವೃದ್ಧೆಯೊಬ್ಬರು ಆಕ್ಸಿಜನ್‌ ಸಹಾಯದಿಂದಲೇ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. 78 ವರ್ಷದ ಕಲಾವತಿ ಎಂಬುವವರೇ ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆಯಾಗಿದ್ದಾರೆ. ಕಲಾವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರನ್ನು ಏಪ್ರಿಲ್‌ 23ರಂದು ಜಯನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅವರನ್ನು ಆಂಬ್ಯುಲೆನ್ಸ್‌ ಮೂಲಕ ವೈದ್ಯಕೀಯ ಸಿಬ್ಬಂದಿ ಜತೆ ಕರೆತರಲಾಗಿದ್ದು, ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗಿತ್ತು. ಕೊನೆಗೂ ಅವರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (First phase of polling) ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ (cardiac arrest) ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ.

ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Continue Reading

ಪ್ರಮುಖ ಸುದ್ದಿ

IPL 2024 : ಡೆಲ್ಲಿ ಕ್ಯಾಪಿಟಲ್ಸ್​ ತಂಡ ಸೇರಿದ ಅಫಘಾನಿಸ್ತಾನ ತಂಡದ ಆಟಗಾರ

IPL 2024: ನೈಬ್ ಅವರ ಮೂಲ ಬೆಲೆ 50 ಲಕ್ಷ ರೂ.ಗೆ ಸಹಿ ಹಾಕಿದ್ದಾರೆ. ನಗದು ಸಮೃದ್ಧ ಲೀಗ್ನಲ್ಲಿ ಫ್ರಾಂಚೈಸಿಯನ್ನು ಪ್ರತಿನಿಧಿಸಲು ಅವರು ಆಯ್ಕೆಯಾಗಿರುವುದು ಇದೇ ಮೊದಲು. ರಶೀದ್ ಖಾನ್, ಮೊಹಮ್ಮದ್ ನಬಿ ಮತ್ತು ಇನ್ನೂ ಅನೇಕ ಸ್ಟಾರ್​​ಗಳು ಸೇರಿದಂತೆ 10 ತಂಡಗಳ ಪಂದ್ಯಾವಳಿ ಸೇರಿದ ಇತರ ಅಫ್ಘಾನಿಸ್ತಾನ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಅಫ್ಘಾನಿಸ್ತಾನದ ಮಾಜಿ ನಾಯಕ ಗುಲ್ಬಾದಿನ್ ನೈಬ್ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ ಸೇರಿಕೊಂಡಿದ್ದಾರೆ. ಗಾಯಗೊಂಡಿರುವ ಮಿಚೆಲ್ ಮಾರ್ಷ್ ಬದಲಿಗೆ ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಐಪಿಎಲ್ 2024 ರ (IPL 2024) ಉಳಿದ ಭಾಗಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಂಡಿದೆ. ಆಸ್ಟ್ರೇಲಿಯಾದ ಆಲ್​ರೌಂಡರ್​​ ಮಾರ್ಷ್ 17ನೇ ಆವೃತ್ತಿಯ ಐಪಿಎಲ್​ನಲ್ಲಿ ಭಾಗವಹಿಸುವುದಿಲ್ಲ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಸೋಮವಾರ ಖಚಿತಪಡಿಸಿದ್ದಾರೆ. ಅನುಭವಿ ಆಟಗಾರ ಕ್ಯಾಪಿಟಲ್ಸ್ ಪರ ಕೇವಲ 4 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ. ಆದರೆ ಹೆಚ್ಚು ಪ್ರಭಾವ ಬೀರದೇ ಕೇವಲ 61 ರನ್ ಗಳಿಸಿದ್ದಾರೆ. ಮೂರು ಇನ್ನಿಂಗ್ಸ್​​ಗಳಲ್ಲಿ ಅವರು ಏಕೈಕ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಹಿಂದೆ ಅಫ್ಘಾನಿಸ್ತಾನದ ವೈಟ್-ಬಾಲ್ ತಂಡಗಳನ್ನು ಮುನ್ನಡೆಸಿದ ಅನುಭವ ಹೊಂದಿರುವ ಮತ್ತೊಬ್ಬ ಸೀಮ್ ಬೌಲಿಂಗ್ ಆಲ್ರೌಂಡರ್ ನೈಬ್ ಈಗ ಮಾರ್ಷ್ ಅವರ ಸ್ಥಾನ ತುಂಬಲಿದ್ದಾರೆ. ನೈಬ್ ಬ್ಲೂ ಟೈಗರ್ಸ್ ಪರ 82 ಏಕದಿನ ಮತ್ತು 64 ಟಿ 20 ಪಂದ್ಯಗಳನ್ನು ಆಡಿದ್ದಾರೆ. ತಮ್ಮ ಟಿ20 ವೃತ್ತಿಜೀವನದಲ್ಲಿ, 32 ವರ್ಷದ ಧೋನಿ 21.68 ಸರಾಸರಿಯಲ್ಲಿ 802 ರನ್ ಗಳಿಸಿದ್ದಾರೆ ಮತ್ತು 127.30 ಸ್ಟ್ರೈಕ್ ರೇಟ್ ಹೊಂದಿದ್ದಾರೆ. 31.27ರ ಸರಾಸರಿಯಲ್ಲಿ 8.20ರ ಎಕಾನಮಿ ರೇಟ್​​ನಲ್ಲಿ 26 ವಿಕೆಟ್​​ಗಳನ್ನು ಪಡೆದಿದ್ದಾರೆ. ಐಪಿಎಲ್ 2024 ಕ್ಕೆ ಮುಂಚಿತವಾಗಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟಿ 20 ಐ ಸರಣಿಯಲ್ಲಿ ಅವರು ಸಾಕಷ್ಟು ಪ್ರಭಾವಶಾಲಿಯಾಗಿದ್ದರು. ಲೋಗರ್ ಮೂಲದ ಆಟಗಾರ ಮೂರು ಪಂದ್ಯಗಳಿಂದ 112 ರನ್ ಗಳಿಸಿದ್ದಾರೆ ಮತ್ತು ಎರಡು ಅರ್ಧಶತಕಗಳನ್ನು ದಾಖಲಿಸಿದ್ದಾರೆ. ಸರಣಿಯಲ್ಲಿ ಅವರು 193 .10 ರ ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿದ್ದರು.

ನೈಬ್ ಅವರ ಮೂಲ ಬೆಲೆ 50 ಲಕ್ಷ ರೂ.ಗೆ ಸಹಿ ಹಾಕಿದ್ದಾರೆ. ನಗದು ಸಮೃದ್ಧ ಲೀಗ್ನಲ್ಲಿ ಫ್ರಾಂಚೈಸಿಯನ್ನು ಪ್ರತಿನಿಧಿಸಲು ಅವರು ಆಯ್ಕೆಯಾಗಿರುವುದು ಇದೇ ಮೊದಲು. ರಶೀದ್ ಖಾನ್, ಮೊಹಮ್ಮದ್ ನಬಿ ಮತ್ತು ಇನ್ನೂ ಅನೇಕ ಸ್ಟಾರ್​​ಗಳು ಸೇರಿದಂತೆ 10 ತಂಡಗಳ ಪಂದ್ಯಾವಳಿ ಸೇರಿದ ಇತರ ಅಫ್ಘಾನಿಸ್ತಾನ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ.

ಇದನ್ನೂ ಓದಿ: Virat Kohli : ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್​ ಬಗ್ಗೆ ಬೇಸರ ವ್ಯಕ್ತಪಡಿಸಿದ ಗವಾಸ್ಕರ್; ಏನಂದ್ರು ಅವರು?

ಪ್ರಸಕ್ತ ಋತುವಿನಲ್ಲಿ ಕಳಪೆ ಆರಂಭದ ನಂತರ, ರಿಷಭ್ ಪಂತ್ ನೇತೃತ್ವದ ತಂಡವು ಕಳೆದ ನಾಲ್ಕು ಪಂದ್ಯಗಳಲ್ಲಿ ಮೂರನ್ನು ಗೆದ್ದು ಬಲವಾಗಿ ಪುಟಿದೆದ್ದಿದೆ. ಆಡಿರುವ 9 ಪಂದ್ಯಗಳಲ್ಲಿ 4ರಲ್ಲಿ ಗೆಲುವು ಸಾಧಿಸಿರುವ ಡೆಲ್ಲಿ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 27 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ.

IPL 2024 : ಐಪಿಎಲ್ ವಿಕ್ಷಣೆಯಲ್ಲಿ ಹೊಸ ದಾಖಲೆ ಬರೆದ ಡಿಸ್ನಿ ಹಾಟ್​​ಸ್ಟಾರ್​

ಮುಂಬೈ: ಐಪಿಎಲ್ 2024ರ (IPL 2024 ) ಆವೃತ್ತಿಯು ತನ್ನ ಅರ್ಧದ ಗಡಿ ದಾಟುತ್ತಿದೆ. 41 ಪಂದ್ಯ ಮುಗಿದಿರುವ ನಡುವೆ ಪಂದ್ಯಾವಳಿಯ ಅಧಿಕೃತ ಪ್ರಸಾರಕ ಡಿಸ್ನಿ ಸ್ಟಾರ್ ವೀಕ್ಷಕರ ಸಂಖ್ಯೆಯಲ್ಲಿ ಹೊಸ ದಾಖಲೆ ಮಾಡಿದೆ. ಟಿವಿ ಪ್ರಸಾರದ ವಿಚಾರದಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸಿದೆ. ಬಾರ್ಕ್ ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ, ಡಿಸ್ನಿ ಸ್ಟಾರ್ 47.5 ಕೋಟಿ ವೀಕ್ಷಕರನ್ನು ತಲುಪಿದೆ. ಒಟ್ಟು ವೀಕ್ಷಣೆಯ ಸಮಯವು ಆಶ್ಚರ್ಯಕರ ರೀತಿಯಲ್ಲಿ 24,500 ಕೋಟಿ ನಿಮಿಷಗಳನ್ನು ಸಾಧಿಸಿದೆ. ಇದು ಹಿಂದಿನ ಆವೃತ್ತಿಗೆ ಹೋಲಿಸಿದರೆ ಬಳಕೆಯಲ್ಲಿ 18% ಹೆಚ್ಚಳವಾಗಿದೆ. 2019 ರಲ್ಲಿ ದಾಖಲಾದ ಹಿಂದಿನ ಗರಿಷ್ಠಕ್ಕೆ ಹೋಲಿಸಿದರೆ ಪ್ರಸಾರಕರು ಲೈವ್ ಬ್ರಾಡ್ಕಾಸ್ಟ್ಗಾಗಿ ಟಿವಿ ವ್ಯಾಪ್ತಿಯಲ್ಲಿ 5% ಬೆಳವಣಿಗೆ ದಾಖಲಿಸಿದೆ. ಹಿಂದಿನ ಆವೃತ್ತಿಗೆ ಹೋಲಿಸಿದರೆ ಡಿಸ್ನಿ ಸ್ಟಾರ್ ಮೊದಲ 34 ಪಂದ್ಯಗಳಲ್ಲಿ ಟಿವಿಆರ್​ನಲ್ಲಿ 19% ಬೆಳವಣಿಗೆಯನ್ನು ಕಂಡಿದೆ.

ವಾರದಲ್ಲಿ ನಡೆದ ಮುಂಬಯಿ ಮತ್ತು ಸಿಎಸ್​ಕೆ ನಡುವಿನ ರೋಚಕ ಮುಖಾಮುಖಿಯು ಪಂದ್ಯಾವಳಿಯ ಅತಿದೊಡ್ಡ ಹೋರಾಟಗಳಲ್ಲಿ ಒಂದಾಗಿದೆ. ವಾಂಖೆಡೆಯಲ್ಲಿ ಸಿಎಸ್​​ಕೆ ಗೆದ್ದ ಪಂದ್ಯವು ಎಂಎಸ್ ಧೋನಿ ಅವರ ಅದ್ಭುತ ಬ್ಲಿಟ್ಜ್ (4 ಎಸೆತಗಳಲ್ಲಿ 20 ರನ್) ಸಮಯದಲ್ಲಿ ಟಿವಿಯಲ್ಲಿ 6.3 ಕೋಟಿ ಮಂದಿ ಏಕಕಾಲಕ್ಕೆ ವಿಕ್ಷಿಸಿದ್ದಾರೆ. ಇದು ಪ್ರಸ್ತುತ ಮತ್ತು ಹಿಂದಿನ ಋತುವಿನಲ್ಲಿ ಯಾವುದೇ ಲೀಗ್ ಪಂದ್ಯದಲ್ಲಿ ಅತಿ ದೊಡ್ಡ ದಾಖಲೆಯಾಗಿದೆ. ಎಂಐ ಮತ್ತು ಸಿಎಸ್​ಕೆ ನಡುವಿನ ಪಂದ್ಯದ ಸಮಯದಲ್ಲಿ ಸ್ಟಾರ್ ಸ್ಪೋರ್ಟ್ಸ್ ಶೋರ್ ಮೀಟರ್ ಕ್ರೀಡಾಂಗಣದಲ್ಲಿ 131 ಡೆಸಿಬಲ್​ಗೆ ಏರಿತ್ತು. ಇದು ಈ ಋತುವಿನಲ್ಲಿ ನಡೆದ ಪಂದ್ಯಗಳಲ್ಲಿ ಅತಿ ಹೆಚ್ಚು ರೇಟಿಂಗ್ ಪಡೆದ ಲೀಗ್ ಪಂದ್ಯವಾಗಿದೆ. ಈ ಪಂದ್ಯವು 2024 ರ ಏಪ್ರಿಲ್ 14 ರಂದು 1540 ಕೋಟಿ ನಿಮಿಷಗಳ ವೀಕ್ಷಣೆಯ ಸಮಯದೊಂದಿಗೆ ಟಿವಿಯಲ್ಲಿ 17.4 ಕೋಟಿ ವೀಕ್ಷಕರನ್ನು ಆಕರ್ಷಿಸಿತ್ತು.

Continue Reading

ದೇಶ

X Server Down: ದೇಶಾದ್ಯಂತ ಎಕ್ಸ್‌ ಜಾಲತಾಣದ ಸರ್ವರ್‌ ಡೌನ್;‌ ನಿಮ್ಮ ಖಾತೆ ಚೆಕ್‌ ಮಾಡಿಕೊಳ್ಳಿ

X Server Down: ಎಕ್ಸ್‌ ಸಾಮಾಜಿಕ ಜಾಲತಾಣದ ಸರ್ವರ್‌ ಡೌನ್‌ ಆಗಿದ್ದು, ಬಳಕೆದಾರರು ಪರದಾಡುತ್ತಿದ್ದಾರೆ. ಭಾರತದಲ್ಲಿ ಮಾತ್ರ ಸರ್ವರ್‌ ಡೌನ್‌ ಆಗಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಇದರ ಕುರಿತು ಎಕ್ಸ್‌ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ, ಸರ್ವರ್‌ ಡೌನ್‌ ಆಗಿರುವ ಬಗ್ಗೆ ಜಾಲತಾಣಗಳಲ್ಲಿ ಟ್ರೋಲ್‌ಗಳು, ಮೀಮ್‌ಗಳು ಹರಿದಾಡುತ್ತಿವೆ.

VISTARANEWS.COM


on

X Server Down
Koo

ಬೆಂಗಳೂರು: ಕರ್ನಾಟಕ (Karnataka) ಸೇರಿ ದೇಶಾದ್ಯಂತ ಎಕ್ಸ್‌ (ಮೊದಲು ಟ್ವಿಟರ್)‌ ಸಾಮಾಜಿಕ ಜಾಲತಾಣದ ಸರ್ವರ್‌ ಡೌನ್‌ (X Server Down) ಆಗಿದೆ. ಅದರಲ್ಲೂ, ವೆಬ್‌ ಯೂಸರ್‌ಗಳು (ಲ್ಯಾಪ್‌ಟಾಪ್‌, ಕಂಪ್ಯೂಟರ್ ಬಳಕೆದಾರರು)‌ ಹೆಚ್ಚಿನ ತೊಂದರೆ ಅನುಭವಿಸಿದ್ದು, ಬಳಕೆದಾರರು ಪರದಾಡುವಂತಾಗಿದೆ. ಕೆಲವರಿಗೆ ಅಪ್ಲಿಕೇಶನ್‌ನಲ್ಲೂ ಸಮಸ್ಯೆಯಾಗಿದೆ ಎಂದು ವರದಿಯಾಗಿದೆ.

ಶುಕ್ರವಾರ (ಏಪ್ರಿಲ್‌ 26) ಮಧ್ಯಾಹ್ನ 3.23ರ ಸುಮಾರಿಗೆ ಟ್ವಿಟರ್‌ ಸರ್ವರ್‌ ಡೌನ್‌ ಆಗಿದೆ ಎಂದು ಡೌನ್‌ಡಿಟೆಕ್ಟರ್‌ ಮಾಹಿತಿ ನೀಡಿದೆ. ಶೇ.53ರಷ್ಟು ಜನ ವೆಬ್‌ನಲ್ಲಿ ಸಮಸ್ಯೆ ಎದುರಿಸಿದರೆ, ಶೇ.29ರಷ್ಟು ಮಂದಿಗೆ ಸರ್ವರ್‌ನಲ್ಲಿ ಸಮಸ್ಯೆ ಎದುರಾಗಿದೆ ಹಾಗೂ ಶೇ.18ರಷ್ಟು ಬಳಕೆದಾರರು ಅಪ್ಲಿಕೇಶನ್‌ನಲ್ಲಿ (App) ಸಮಸ್ಯೆ ಎದುರಿಸಿದ್ದಾರೆ. ಒಂದಷ್ಟು ಜನರಿಗೆ ಪೋಸ್ಟ್‌ಗಳು, ಅಪ್‌ಡೇಟ್‌ಗಳು ಕಾಣಿಸಿಲ್ಲ. ಇನ್ನೂ ಒಂದಷ್ಟು ಜನರ ಖಾತೆಗಳು ಲಾಗೌಟ್‌ ಆಗಿವೆ. ಕೆಲವೊಂದಿಷ್ಟು ಮಂದಿಗೆ ತಮ್ಮ ಪೋಸ್ಟ್‌ಗಳು ಅಪ್‌ಲೋಡ್‌ ಆಗಿಲ್ಲ.

ಎಕ್ಸ್‌ ಸಾಮಾಜಿಕ ಜಾಲತಾಣದ ಸರ್ವರ್‌ ಡೌನ್‌ ಆಗುತ್ತಲೇ ಬೇರೆ ಸಾಮಾಜಿಕ ಜಾಲತಾಣಗಳಲ್ಲಿ ಸರ್ವರ್‌ ಡೌನ್‌ ಕುರಿತು ದೂರುಗಳು, ಮೀಮ್‌ಗಳು ಹರಿದಾಡಿವೆ. ಇನ್ನೊಂದಿಷ್ಟು ಜನ ಎಕ್ಸ್‌ನಲ್ಲೂ ಟ್ರೋಲ್‌ ಮಾಡಿದ್ದಾರೆ. ಸರ್ವರ್‌ ಡೌನ್‌ ಆಗಿರುವ ಕುರಿತು ಇದುವರೆಗೆ ಟ್ವಿಟರ್‌ ಯಾವುದೇ ಮಾಹಿತಿ ನೀಡಿಲ್ಲ. ಬೇರೆ ದೇಶಗಳಲ್ಲೂ ಸಮಸ್ಯೆಯಾಗಿದೆ ಎಂಬುದರ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಕೆಲ ತಿಂಗಳ ಹಿಂದಷ್ಟೇ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಹಾಗೂ ಯುಟ್ಯೂಬ್‌ ಸರ್ವರ್‌ಗಳು ಒಂದೇ ಕಾಲಕ್ಕೆ ಡೌನ್‌ ಆಗಿದ್ದವು. ಇಂಟರ್‌ನೆಟ್‌ ಟ್ರಾಫಿಕ್‌ ಮೇಲೆ ನಿಗಾ ಇರಿಸುವ ಡೌನ್‌ ಡಿಟೆಕ್ಟರ್‌ ಸಂಸ್ಥೆಯು ಯುಟ್ಯೂಬ್‌ ಬಳಕೆದಾರರ ಸಮಸ್ಯೆ ಕುರಿತು ಮಾಹಿತಿ ನೀಡಿತ್ತು. ಗೂಗಲ್‌ ಕಂಪನಿಯ ಯುಟ್ಯೂಬ್‌ನಲ್ಲಿ ವಿಡಿಯೊಗಳು ಸ್ಟ್ರೀಮ್‌ ಆಗುತ್ತಿಲ್ಲ. ಹೊಸ ವಿಡಿಯೊಗಳನ್ನು ಅಪ್‌ಲೋಡ್‌ ಮಾಡಲು ಕೂಡ ಆಗುತ್ತಿಲ್ಲ ಎಂಬುದಾಗಿ ನೂರಾರು ಜನ ದೂರುತ್ತಿದ್ದಾರೆ ಎಂಬುದಾಗಿ ತಿಳಿಸಿತ್ತು. ಯುಟ್ಯೂಬ್‌ ಬಳಕೆದಾರರು ಕೂಡ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊಗಳು ಸ್ಟ್ರೀಮ್‌, ಡೌನ್‌ಲೋಡ್‌ ಆಗದಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Banking service down : ಸರ್ವರ್‌ ಸಮಸ್ಯೆಯಿಂದ ನೆಟ್ ಬ್ಯಾಂಕಿಂಗ್‌ ಸೇವೆಗಳಿಗೆ ಅಡಚಣೆ, ಗ್ರಾಹಕರ ಪರದಾಟ

Continue Reading

Lok Sabha Election 2024

Lok Sabha Election 2024: 2ನೇ ಬಾರಿಗೆ ಬಂದು ಮತದಾನ ಮಾಡಿದ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು!

Lok Sabha Election 2024: ಅದಮಾರು ಶ್ರೀಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಎರಡು ಬಾರಿ ಮತದಾನ ಮಾಡುವಂತಾಗಿದೆ. ಶುಕ್ರವಾರ ಬೆಳಗ್ಗೆಯೇ ಮತಗಟ್ಟೆ ಮುಂದೆ ಇದ್ದ ಅದಮಾರು ಶ್ರೀಗಳು ಮೊದಲಿಗರಾಗಿ ಮತದಾನ ಮಾಡಿದರು. ನೋಂದಣಿ ಮಾಡಿ, ಕೈಗೆ ಇಂಕ್ ಹಾಕಿಸಿಕೊಂಡು, ಬಟನ್ ಪ್ರೆಸ್ ಮಾಡಿದ್ದರು. ಆದರೆ, ಬೀಪ್‌ ಸೌಂಡ್‌ ಕೇಳಲೇ ಇಲ್ಲ. ಈ ಬಗ್ಗೆ ಮತಗಟ್ಟೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅದಕ್ಕೆ ಅಧಿಕಾರಿಗಳು ಮತದಾನವಾಗಿದೆ ಎಂದು ಉತ್ತರ ಹೇಳಿದ್ದಾರೆ. ಹೀಗಾಗಿ ಅದಮಾರು ಶ್ರೀ ಮತಗಟ್ಟೆಯಿಂದ ವಾಪಾಸ್ ಆಗಿದ್ದರು. ಪುನಃ ಪರಿಶೀಲನೆ ಮಾಡಿದ್ದರಿಂದ ಅವರಿಗೆ ಮತ್ತೊಂದು ಸುತ್ತು ಮತದಾನ ಮಾಡಲು ಅವಕಾಶವನ್ನು ಕಲ್ಪಿಸಲಾಯಿತು.

VISTARANEWS.COM


on

Lok Sabha Election 2024 Sri Vishwapriya Theertha Swamiji of Adamaru Mutt casts his vote for second time
Koo

ಉಡುಪಿ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ (Udupi Chikkamagaluru Lok Sabha constituency) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ, ಉಡುಪಿಯಲ್ಲಿ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು (Adamaru Mutt Sri Vishwapriya Theertha Swamiji) ಎರಡೆರಡು ಬಾರಿ ಮತ ಚಲಾವಣೆ ಮಾಡಿದ ಪ್ರಸಂಗ ನಡೆದಿದೆ.

ಅದಮಾರು ಶ್ರೀಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಎರಡು ಬಾರಿ ಮತದಾನ ಮಾಡುವಂತಾಗಿದೆ. ಶುಕ್ರವಾರ ಬೆಳಗ್ಗೆಯೇ ಮತಗಟ್ಟೆ ಮುಂದೆ ಇದ್ದ ಅದಮಾರು ಶ್ರೀಗಳು ಮೊದಲಿಗರಾಗಿ ಮತದಾನ ಮಾಡಿದರು. ನೋಂದಣಿ ಮಾಡಿ, ಕೈಗೆ ಇಂಕ್ ಹಾಕಿಸಿಕೊಂಡು, ಬಟನ್ ಪ್ರೆಸ್ ಮಾಡಿದ್ದರು. ಆದರೆ, ಬೀಪ್‌ ಸೌಂಡ್‌ ಕೇಳಲೇ ಇಲ್ಲ. ಈ ಬಗ್ಗೆ ಮತಗಟ್ಟೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅದಕ್ಕೆ ಅಧಿಕಾರಿಗಳು ಮತದಾನವಾಗಿದೆ ಎಂದು ಉತ್ತರ ಹೇಳಿದ್ದಾರೆ. ಹೀಗಾಗಿ ಅದಮಾರು ಶ್ರೀ ಮತಗಟ್ಟೆಯಿಂದ ವಾಪಾಸ್ ಆಗಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯ ಬಗ್ಗೆ ಶ್ರೀಗಳ ಶಿಷ್ಯರ ಬೇಸರ

ಬಳಿಕ ಮಾಧ್ಯಮಗಳ ಬಳಿ ಈ ಬಗ್ಗೆ ಅದಮಾರು ಶ್ರೀಗಳು ಮಾಹಿತಿ ನೀಡುತ್ತಿದ್ದಾಗ ಮತಗಟ್ಟೆ ಅಧಿಕಾರಿಗಳು ಸ್ಥಳಕ್ಕೆ ಬಂದು ಶ್ರೀಗಳನ್ನು ಮತ್ತೆ ಒಳಗೆ ಕರೆದು ಮತದಾನ ಮಾಡುವಂತೆ ಹೇಳಿದರು. ಹೀಗಾಗಿ ಅಧಿಕಾರಿಗಳ ಸೂಚನೆ ಬಳಿಕ ಎರಡನೇ ಬಾರಿ ಬಂದು ಶ್ರೀಗಳು ಮತದಾನ ಮಾಡಿದ್ದಾರೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಶ್ರೀಗಳ ಶಿಷ್ಯರು ಬೇಸರ ಹೊರಹಾಕಿದ್ದಾರೆ.

ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯಿಂದ ಮತದಾನ

ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಶುಕ್ರವಾರ ಬೆಳಗ್ಗೆ ಮತಗಟ್ಟೆ ಸಂಖ್ಯೆ 185ರಲ್ಲಿ ಮತದಾನ ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ತಮಗೆ ಬೇಕಾಗಿರುವ ಸರ್ಕಾರ ರೂಪಿಸುವ ದೊಡ್ಡ ಬದ್ಧತೆ ಪ್ರಜೆಗಳ ಮೇಲೆ ಇದೆ. ಎಲ್ಲ ಪ್ರಜೆಗಳು ಅವಶ್ಯವಾಗಿ ಮತದಾನ ಮಾಡಬೇಕು. ಯಾರು ಕೂಡ ಮತದಾನದಿಂದ ದೂರ ಉಳಿಯಬಾರದು. ಮತದಾನ ಮಾಡಲು ತುಂಬಾ ಹೆಮ್ಮೆ ಅನಿಸುತ್ತಿದೆ. ರಾಮದೇವರ ಪ್ರಾಣ ಪ್ರತಿಷ್ಠೆ ಮಾಡಿದಾಗ ಅನುಭವಿಸಿದ ಧನ್ಯತಾಭಾವವನ್ನು ಈಗಲೂ ಅನುಭವಿಸಿದ್ದೇವೆ. ದೇಶದಲ್ಲಿ ಎಲ್ಲ ಬಗೆಯ ಜನ ಎಲ್ಲ ಕಾಲಕ್ಕೂ ಇರುತ್ತಾರೆ. ನೆಲದ ಸಂಸ್ಕೃತಿಯನ್ನು ಗೌರವಿಸುವ ಸರ್ಕಾರವನ್ನು ರೂಪಿಸುವ ಅವಕಾಶ ನಮಗೆ ಇದೆ.‌ ಸಮಾಜದ ಪ್ರಸಕ್ತ ವಾತಾವರಣವನ್ನು ಅರ್ಥ ಮಾಡಿಕೊಂಡು ಮತದಾನ ಮಾಡಬೇಕು. ನಮಗೆ ಬೇಕಾಗಿರುವ ಸರ್ಕಾರವನ್ನು ರೂಪಿಸಬೇಕು. ರಾಜನಾದವ ಸರಿಯಾಗಿದ್ದರೆ ಕಾಲ ಯಾವತ್ತೂ ಹಾಳಾಗುವುದಿಲ್ಲ. ಈಗ ಪ್ರಜೆಗಳೇ ರಾಜರು ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಚಾಮರಾಜನಗರದಲ್ಲಿ ಮತ ಯಂತ್ರ ಪೀಸ್‌ ಪೀಸ್‌; ಮತಗಟ್ಟೆ ಧ್ವಂಸ, ಲಾಠಿ ಚಾರ್ಜ್‌!

ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಿ ಆಡಳಿತ ನಡೆಸುತ್ತಿರುವ ಬಗ್ಗೆ ಪ್ರತಿಪಕ್ಷಗಳ ಆರೋಪದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪೇಜಾವರ ಶ್ರೀಗಳು, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರಧಾನಿ ಇದ್ದಾರೆ ಎಂದಾದರೆ ಅವರು ಸರ್ವಾಧಿಕಾರಿ ಆಗುವುದು ಹೇಗೆ? ಪ್ರಜೆಗಳು ತಮಗೆ ಬೇಕಾದ ಸರ್ಕಾರವನ್ನು ರೂಪಿಸುತ್ತಿದ್ದಾರೆ. ಅದನ್ನು ಆಕ್ಷೇಪಿಸಿದರೆ ಸಾರ್ವಕಾಲಿಕ ಆಕ್ಷೇಪವಾಗುತ್ತದೆ. ಮತದಾನ ಪ್ರಮಾಣ ಕಡಿಮೆ ಆಗಬಾರದು. ವ್ಯವಸ್ಥೆ ನಮಗೆ ಅನುಕೂಲವಾಗಿಲ್ಲ ಅಂತ ದೂರುತ್ತೇವೆ. ಹಾಗಾದರೆ ವ್ಯವಸ್ಥೆಯನ್ನು ಸರಿ ಮಾಡುವುದು ಯಾರು? ಮತದಾನದಿಂದ ದೂರ ಉಳಿದವರು ಈ ದೇಶದ ನಾಗರಿಕರೇ ಅಲ್ಲ. ಅವರಿಗೆ ಸಿಟಿಜನ್‌ಶಿಪ್ ಕೊಡಬಾರದು. ಅದು ಕಠೋರ ನಿಲುವು ಆಗುತ್ತದೆ. ಆದರೆ, ಅವಶ್ಯವಾಗಿ ಬೇಕು. ಸರ್ಕಾರ ನೀಡುವ ಸವಲತ್ತುಗಳನ್ನು ಬಂದ್ ಮಾಡಬೇಕು. ಅವರನ್ನು ದ್ವಿತೀಯ, ತೃತೀಯ ದರ್ಜೆಯ ನಾಗರಿಕರನ್ನಾಗಿ ಪರಿಗಣಿಸಬೇಕು. ಆಗ ಪರಿಸ್ಥಿತಿ ಸುಧಾರಿಸಬಹುದು ಎಂದು ಹೇಳಿದರು.

Continue Reading
Advertisement
Rinku Singh
ಕ್ರೀಡೆ3 mins ago

Rinku Singh : ಹಠ ಹಿಡಿದು ಕೊಹ್ಲಿಯಿಂದ ಮತ್ತೊಂದು ಬ್ಯಾಟ್ ಪಡೆದುಕೊಂಡ ರಿಂಕು ಸಿಂಗ್​​

Tejasvi Surya
ಕರ್ನಾಟಕ11 mins ago

Tejasvi Surya: ಧರ್ಮಾಧಾರಿತ ಮತಯಾಚನೆ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೇಸ್‌

Lok Sabha Election 2024 Two die of heart attack in Tumakuru and Kodagu
Lok Sabha Election 202438 mins ago

Lok Sabha Election 2024: ಹೃದಯಾಘಾತಕ್ಕೆ 3 ಬಲಿ; ಮೈಸೂರು, ತುಮಕೂರಿನಲ್ಲಿ ಮತ ಹಾಕಿದ್ದ, ಕೊಡಗಲ್ಲಿ ವೋಟ್‌ ಹಾಕಲು ನಿಂತಿದ್ದವ ಸಾವು!

Lok Sabha Election 2024 Anant Nag outrage against non-voters
ಸ್ಯಾಂಡಲ್ ವುಡ್45 mins ago

Lok Sabha Election 2024: ಮತ ಹಾಕದವರನ್ನು ಮತ ಪಟ್ಟಿಯಿಂದ ತೆಗೆದುಹಾಕಬೇಕು: ಅನಂತ್ ನಾಗ್ ಸಲಹೆಗೆ ಏನಂತೀರಿ?

Healthcare Tips For Women
ಆರೋಗ್ಯ47 mins ago

Healthcare Tips For Women: 30 ವರ್ಷದ ಬಳಿಕ ಮಹಿಳೆಯರು ಮಾಡಿಸಿಕೊಳ್ಳಲೇಬೇಕಾದ ಆರೋಗ್ಯ ಪರೀಕ್ಷೆಗಳಿವು

Lok Sabha Election 2024
ಬೆಂಗಳೂರು52 mins ago

Lok Sabha Election 2024: ಮೋದಿ ಮತ್ತೊಮ್ಮೆ ಎಂಬ ನುಡಿ ಸತ್ಯವಾಗಲಿದೆ: ಎಂಎಲ್‌ಸಿ ಟಿ.ಎ.ಶರವಣ

Lok sabha election 2024
Lok Sabha Election 20241 hour ago

Lok Sabha Election 2024 : ವೋಟ್‌ ಮಾಡಲು ಒಂದೂವರೆ ಲಕ್ಷ ರೂ. ಖರ್ಚು; ಲಂಡನ್‌ನಿಂದ ಮಂಡ್ಯಕ್ಕೆ ಬಂದ ಮಹಿಳೆ

IPL 2024
ಪ್ರಮುಖ ಸುದ್ದಿ1 hour ago

IPL 2024 : ಡೆಲ್ಲಿ ಕ್ಯಾಪಿಟಲ್ಸ್​ ತಂಡ ಸೇರಿದ ಅಫಘಾನಿಸ್ತಾನ ತಂಡದ ಆಟಗಾರ

Lok Sabha Election 2024 union minister pralhad joshi latest statement at hubballi
ಕರ್ನಾಟಕ1 hour ago

Lok Sabha Election 2024: ಕಾಂಗ್ರೆಸಿಗರಿಗೆ ಚೊಂಬು ಹಿಡಿದು ಅಭ್ಯಾಸವಾಗಿದೆ: ಜೋಶಿ ಗೇಲಿ

X Server Down
ದೇಶ1 hour ago

X Server Down: ದೇಶಾದ್ಯಂತ ಎಕ್ಸ್‌ ಜಾಲತಾಣದ ಸರ್ವರ್‌ ಡೌನ್;‌ ನಿಮ್ಮ ಖಾತೆ ಚೆಕ್‌ ಮಾಡಿಕೊಳ್ಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ6 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20246 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20247 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ13 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌