ಕನ್ನಡ ರಾಜ್ಯೋತ್ಸವ | ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರಿಟ್ಟ ದೇವರಾಜ ಅರಸರು ಅಂದು ಹೇಳಿದ್ದೇನು? - Vistara News

ಕನ್ನಡ ರಾಜ್ಯೋತ್ಸವ

ಕನ್ನಡ ರಾಜ್ಯೋತ್ಸವ | ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರಿಟ್ಟ ದೇವರಾಜ ಅರಸರು ಅಂದು ಹೇಳಿದ್ದೇನು?

1973ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕಾರಣ ಮಾಡಲಾಯಿತು. ಈ ತೀರ್ಮಾನ ತೆಗೆದುಕೊಂಡಿದ್ದ ಆಗಿನ ಮುಖ್ಯಮಂತ್ರಿ ದೇವರಾಜ ಅರಸು ವಿಧಾನಸಭೆಯಲ್ಲಿ ಮಾಡಿದ್ದ ಐತಿಹಾಸಿಕ ಭಾಷಣದ ವಿವರ ಇಲ್ಲಿದೆ. ಇದು ಕನ್ನಡ ರಾಜ್ಯೋತ್ಸವದ ವಿಶೇಷ.

VISTARANEWS.COM


on

ಕನ್ನಡ ರಾಜ್ಯೋತ್ಸವ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಮಗೆಲ್ಲಾ ತಿಳಿದಿರುವಂತೆ ಭಾರತ ಸ್ವಾತಂತ್ರ್ಯಗೊಂಡ ನಂತರ ಕನ್ನಡ ಭಾಷಿಕರಿರುವ ವಿವಿಧ ಪ್ರದೇಶಗಳನ್ನು ಒಂದುಗೂಡಿಸಿ “ಮೈಸೂರು ರಾಜ್ಯʼʼವನ್ನು ರಚಿಸಲಾಗಿತ್ತು. ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಪ್ರದೇಶಗಳು ಈ ರಾಜ್ಯದಲ್ಲಿ ವಿಲೀನವಾಗಿದ್ದವು. ಆದರೆ ಈ ಪ್ರದೇಶದ ಜನರಿಗೆ ರಾಜ್ಯಕ್ಕೆ “ಮೈಸೂರು ರಾಜ್ಯʼʼ ಎಂದು ನಾಮಕರಣ ಮಾಡಿರುವುದು ಇಷ್ಟವಾಗಿರಲಿಲ್ಲ. ಈ ಹೆಸರಲ್ಲಿ ಬದಲಾವಣೆ ಮಾಡಬೇಕೆಂದು ಒತ್ತಾಯಿಸುತ್ತಿದ್ದರು.

ಈ ಕುರಿತು ಆಗ ರಾಜ್ಯದಲ್ಲಿ ಸುದೀರ್ಘ ಚರ್ಚೆಯ ಬಳಿಕ ೧೯೭೩ರ ನವೆಂಬರ್ ೧ರಂದು ರಾಜ್ಯಕ್ಕೆ “ಕರ್ನಾಟಕʼʼವೆಂದು ಪುನರ್ ನಾಮಕರಣ ಮಾಡಲಾಯಿತು. ಆಗಿನ ಮುಖ್ಯಮಂತ್ರಿಯಾಗಿದ್ದ ದೇವರಾಜ್ ಅರಸು ಅವರು ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದರು.

ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣ ಮಾಡಿದ ಶುಭದಿನದಂದು ರಾಜ್ಯವನ್ನು ಉದ್ದೇಶಿಸಿದ ಮಾತನಾಡಿದ ಅರಸರು ಈ ಬೆಳವಣಿಗೆಯನ್ನು ಹೀಗೆ ವಿವರಿಸಿದ್ದರು; ಕರ್ನಾಟಕದ ಏಕೀಕರಣದ ಹಂಬಲಕ್ಕೆ ಸ್ಫುಟವಾದ ರೂಪು ದೊರೆಕಿದ್ದು ೧೯೧೬ರಲ್ಲೇ. ಧಾರವಾಡದಲ್ಲಿ ಕರ್ನಾಟಕ ಸಭೆ ಸ್ಥಾಪನೆಯಾದಾಗ, ಏಕೀಕರಣ ಸಮ್ಮೇಳನವು ಧಾರವಾಡದಲ್ಲಿ ಮೊಟ್ಟ ಮೊದಲಿಗೆ ನಡೆಯಿತು. ೧೯೨೦ರಲ್ಲಿ ನಾಗಪುರ ಕಾಂಗ್ರೆಸ್ಸಿನ ಅಧಿವೇಶನದಲ್ಲಿ ಭಾಷಾವಾರು ಪ್ರಾಂತ್ಯರಚನೆ ಸ್ಪಷ್ಟವಾದ ರೂಪುರೇಷೆ ಪಡೆಯಿತು. ಆದರೆ ಕನ್ನಡಿಗರ ಕನಸು ನನಸಾಗಲು ಮುವತ್ತಾರು ವರ್ಷಗಳೇ ಬೇಕಾಯಿತು.

೧೯೫೬ರ ನವೆಂಬರ್ ಒಂದರಂದು ಕನ್ನಡನಾಡು ಉದಯಿಸಿತು. ಆದರೆ ಈ ನಾಡಿನ ಹಿರಿಮೆ, ಸಂಸ್ಕೃತಿ ಮತ್ತು ಒಗ್ಗಟ್ಟಿನ ಸಂಕೇತವಾದ ಹೆಸರು ಇರದೇ ಇದ್ದುದು ಜನಮನದ ಅಂತರಾಳವನ್ನು ಕಲಕಿತ್ತು. ಮತ್ತೆ ೧೭ ವರ್ಷಗಳ ನಂತರ ಕಾಲಮಾನ ಪರಿಸ್ಥಿತಿಗೆ ಅನುಗುಣವಾಗಿ ನಡೆದ ಪ್ರಾಮಾಣಿಕ ಪ್ರಯತ್ನದ ಫಲವಾಗಿ ಈಗ ಜನತೆಯ ಮಹತ್ವಾಕಾಂಕ್ಷೆ ಈಡೇರಿದೆ. ಹಲವಾರು ದಶಕಗಳ ಕಾಲ ನಾಡು-ನುಡಿಯ ಉತ್ಕಟ ಪ್ರೇಮಿಗಳ ತ್ಯಾಗ ಶ್ರಮದ ಸಾಕ್ಷಾತ್ಕಾರ ಈ ನಾಮಕರಣ. ಆ ಪ್ರಾತಃಸ್ಮರಣೀಯರಿಗೆಲ್ಲ ರಾಜ್ಯದ ಜನತೆಯ ಪರವಾಗಿ ಕೃತಜ್ಞತೆಗಳು ಎಂದು ಹೇಳಿದ್ದರು.

ರಾಜ್ಯದ ಹೆಸರನ್ನು ‘ಕರ್ನಾಟಕ’ ಎಂದು ಮಾರ್ಪಡಿಸುವ ಕುರಿತು ಸರ್ಕಾರದ ತೀರ್ಮಾನವನ್ನು ವಿಧಾನಸಭೆಯಲ್ಲಿ ಸ್ವತಃ ಮುಖ್ಯಮಂತ್ರಿ ದೇವರಾಜ ಅರಸು ಅವರೇ ಮಂಡಿಸಿದ್ದರು. ಆ ದಿನವನ್ನು ಅವರು ಇತಿಹಾಸದಲ್ಲಿ ಒಂದು ಹೊಸ ಅಧ್ಯಾಯದ ದಿವಸ ಎಂದು ಬಣ್ಣಿಸಿದ್ದರಲ್ಲದೆ, ‘ಕರ್ನಾಟಕ’ ಎನ್ನುವ ಹೆಸರನ್ನು ಹಿಂದೆ ರಾಜ್ಯ ಗುರುಗಳು ಉಪಯೋಗಿಸುತ್ತಿದ್ದರು. ಕರ್ನಾಟಕ ಸಿಂಹಾಸನಾಧೀಶ್ವರ ಎಂದು ಒಂದು ಕಾಲದಲ್ಲಿ ಮೈಸೂರು ರಾಜರು ಹೆಸರು ಇಟ್ಟುಕೊಂಡಿದ್ದರು. ಹೊಯ್ಸಳರು, ಕದಂಬರರೂ ಇಟ್ಟುಕೊಂಡಿದ್ದರು. ಹೀಗೆ ಒಂದಲ್ಲ ಒಂದು ರೀತಿಯಲ್ಲಿ ಈ ಹೆಸರು ಬರುತ್ತಲೇ ಇತ್ತು. ಸಾಹಿತಿಗಳು ಸಾಹಿತ್ಯದಲ್ಲಿ ‘ಕರ್ನಾಟಕ’ ಎಂಬ ಹೆಸರನ್ನು ಇಡಬಹುದು ಎಂದು ಹೇಳಿದ್ದಾರೆ. ಅದರಂತೆ ಇಲ್ಲಿ ನಿರ್ಣಯವನ್ನು ಮಂಡಿಸಿದ್ದೇನೆ ಎಂದು ವಿವರಣೆಯನ್ನೂ ನೀಡಿದ್ದರು.

ನಿರ್ಣಯ ಮಂಡಿಸಿ ಅಂದು ದೇವರಾಜ ಅರಸು ಮಾಡಿದ ಭಾಷಣ ಐತಿಹಾಸಿಕ.
ಭಾಷಣದ ಮುಖ್ಯಾಂಶಗಳು ಇಂತಿದೆ;
ಈ ರೀತಿಯ ಬದಲಾವಣೆ ಮನುಷ್ಯನಿಗೆ ಆನಂದವನ್ನು ತರುವ ಒಂದು ಸಂಗತಿಯಾಗಿದೆ. ಇಂತಹ ಒಂದು ಆನಂದವನ್ನು ಅನುಭವಿಸುತ್ತಿರುವ ಸದಸ್ಯರಗಳನ್ನು ನೋಡಿ ನಾವೂ ಆ ಆನಂದಲ್ಲಿ ಭಾಗಿಯಾಗಬೇಕು. ನಮ್ಮ ರಾಜ್ಯದ ಹೆಸರಿನ ಬದಲಾವಣೆಯಿಂದಾಗಿ ಬಹುಜನರಿಗೆ ಆನಂದ ಹಾಗೂ ಸಂತೋಷ ಉಂಟಾಗುತ್ತದೆ. ಬಹುಜನರು ಎಂದರೆ ಈ ದೇಶದಲ್ಲಿರುವ ಬೇರೆ ಬೇರೆ ವರ್ಗದವರೂ ಸೇರುತ್ತಾರೆ. ಅನೇಕ, ಸಾಹಿತಿಗಳು ಕರ್ನಾಟಕದಲ್ಲಿ ಇದ್ದಾರೆ. ಇಂತಹ ಸಾಹಿತಿಗಳಲ್ಲಿ ಹಿರಿಯರಿಂದ ಕಿರಿಯರ ವರೆಗೂ ಎಂದರೆ ಶ್ರೀಮಾನ್ ಬೇಂದ್ರೆಯವರು ಹಾಗೂ ರಾಷ್ಟ್ರದ ದೊಡ್ಡ ಕವಿಗಳಾದ ಶ್ರೀಮಾನ್ ಕೆ.ವಿ.ಪುಟ್ಟಪ್ಪನವರು ಮತ್ತೆ ಇನ್ನಿತರ ಎಲ್ಲ ಸಾಹಿತಿಗಳೂ ಈಗಿರುವ ಹೆಸರನ್ನು ಬದಲಾವಣೆ ಮಾಡಿ, ‘ಕರ್ನಾಟಕ’ ಎಂದು ಮಾಡಬೇಕೆಂದು ಸತತವಾಗಿ ಒತ್ತಾಯ ಮಾಡುತ್ತಾ ಬಂದಿದ್ದಾರೆ. ಬುದ್ಧಿಜೀವಿಗಳು, ಮಧ್ಯಮ ವರ್ಗದ ಜನರೂ, ಬದಲಾವಣೆಯಾಗಬೇಕೆಂದು ಹೇಳಿಕೊಂಡು ಬರುತ್ತಿದ್ದಾರೆ. ಅದೇ ರೀತಿ ಆಡಳಿತ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿರತಕ್ಕ ಜನ ಅಭಿಪ್ರಾಯಪಟ್ಟಿದ್ದಾರೆ.

ಇದು ಅವರೆಲ್ಲರ ಹಿರಿದಾದ ಆಸೆ; ನಾವು ಜನತಾ ಪ್ರತಿನಿಧಿಗಳಾಗಿರುವುದರಿಂದ ಅವರ ಆಸೆಗೆ ಅಡ್ಡಿ ತರತಕ್ಕದ್ದು ಸೂಕ್ತವಲ್ಲ. ಇಷ್ಟೊಂದು ಜನಕ್ಕೆ ಸಂತೋಷವಾಗುತ್ತಿರುವಾಗ ಅಂತಹ ಸಂತೋಷವಾಗಿರುವ ಜನತೆಯಲ್ಲಿ ನಾವೂ ಸಹ ಭಾಗಿಯಾಗೋಣ. ನಮ್ಮ ಕೈಯಲ್ಲಾದ ಅಲ್ಪ ಸೇವೆಯನ್ನು ಸಲ್ಲಿಸೋಣ ಎನ್ನುವ ಒಂದು ಸಂತೋಷದಿಂದ ನಾನು ಇಲ್ಲಿ ಇಂತಹ ಒಂದು ನಿರ್ಣಯವನ್ನು ತರುವ ಕಾಲ ಬಂತಲ್ಲ ಎಂದು ಸಂತೋಷಿಸುತ್ತೇನೆ ಮತ್ತು ಇದರಲ್ಲಿ ನಮ್ಮ ಜವಾಬ್ದಾರಿಯೂ ಇದೆ ಎನ್ನುವ ಮಾತನ್ನು ಹೇಳಿ ಇಂತಹ ಒಂದು ನಿರ್ಣಯ ಇಲ್ಲಿ ಬಂದಿದೆ. ಇದನ್ನು ತಮ್ಮ ಅಪ್ಪಣೆ ಪಡೆದು ನಮ್ಮ ಈ ಸಭೆಯ ಮುಂದೆ ಇಟ್ಟಿದ್ದೇನೆ.

ಹಳೆಯ ಮೈಸೂರಿನ ಭಾಗದಿಂದ ಬಂದ ಜನರಿಗೆ ಮೈಸೂರು ರಾಜ್ಯದ ಹೆಸರಿನ ಬಗ್ಗೆ ಹಿಂದಿನಿಂದಲೂ ಚಾರಿತ್ರಿಕವಾಗಿ ಒಂದು ಅಭಿಮಾನ ಬೆಳೆದು ಬಂದಿದೆ. ಮೈಸೂರು ರಾಜ್ಯ ಎಂಬುದು ಇಡೀ ಇಂಡಿಯಾ ದೇಶದಲ್ಲಿ ಕೀರ್ತಿ ಪಡೆದಿರುವುದಲ್ಲದೆ, ಹೊರ ದೇಶಗಳಲ್ಲಿಯೂ ಸಹ ಕೀರ್ತಿ ಪಡೆದಿದೆ. ಮೈಸೂರು ಜನತೆಯ ವಿಚಾರದಲ್ಲಿ, ಮೈಸೂರು ಸಾಮಾನುಗಳ ವಿಚಾರದಲ್ಲಿ ತಿಳಿದಂತಹ ಜನರು ಹೊರ ದೇಶಗಳಲ್ಲಿ ಇದ್ದಾರೆ. ಅದಕೋಸ್ಕರ ಮೈಸೂರು ರಾಜ್ಯ ಹೆಚ್ಚಿನ ಗೌರವ ಹಾಗೂ ಕೀರ್ತಿ ಪಡೆದುಕೊಂಡಿದೆ. ಮೈಸೂರು ಎಂಬ ಹೆಸರಿಗೆ ಶಕ್ತಿ ಇದೆ.

ಈ ಹೆಸರು ಅಸ್ತಂಗತದವಾದರೂ ಸಹ ಇನ್ನೊಂದು ಹೆಸರು ಉದಯವಾಗುತ್ತಿದೆ. ಹೊಸ ಹೆಸರಿನಲ್ಲಿ ಭಾವೈಕ್ಯತೆ ಇದೆ. ವಿಶ್ವಾಸವಿದೆ. ಹೆಚ್ಚಿನ ಜನರಿಗೆ ಸಂತೋಷ, ಆನಂದ ಉಂಟಾಗುತ್ತಿದೆ. ಬದಲಾವಣೆಯಲ್ಲಿ ಹಳೆಯದು ಹೋಗಿ, ಹೊಸದು ಬರುವಾಗ ತೊಂದರೆ ಇಲ್ಲ, ಆನಂದ ಬರುತ್ತದೆ. ಆದ್ದರಿಂದ ಈ ಬಗ್ಗೆ ಹೆಚ್ಚು ಚಿಂತನೆ ಮಾಡಬೇಕಿಲ್ಲ. ಹೊಸದನ್ನು ನೋಡಿ, ನಲಿದು ಸಂತೋಷ ಪಡುವ ಕಾಲ ಇದು. ಆದ್ದರಿಂದ ಈ ನಿರ್ಣಯಕ್ಕೆ ಮಾನ್ಯ ಸಭೆ ಒಪ್ಪಿಗೆ ಕೊಡುತ್ತದೆಂಬ ಪೂರ್ಣವಿಶ್ವಾಸ ನನಗೆ ಇದೆ. ಬಹುಮತದ ವಿಶ್ವಾಸವಲ್ಲ, ನಾವೆಲ್ಲರೂ ಸೇರಿ ಒಮ್ಮತದಿಂದ ಈ ಹೆಸರನ್ನು ಕರೆಯೋಣ. ಆ ರೀತಿ ನಾವು ಆನಂದದಿಂದ, ಸಂತೋಷದಿಂದ ಕರೆಯುವಾಗ ಕನ್ನಡ ಜನತೆಯ ಏಳಿಗೆಯಾಗಲಿ ಮತ್ತು ಈ ಶುಭ ಮೂಹೂರ್ತದಲ್ಲಿ ಈ ಹೆಸರನ್ನು ಕರೆದು ರಾಜ್ಯ ಉನ್ನತವಾಗಿ ಬೆಳೆದು, ಹಿಂದಿನಿಂದ ಈ ರಾಜ್ಯ ಚರಿತ್ರೆಯಲ್ಲಿ ಏನು ಒಂದು ಒಳ್ಳೆಯ ಕೀರ್ತಿ, ಹೆಸರನ್ನು ಪಡೆದಿತ್ತೋ ಅದಕ್ಕಿಂತ ಹೆಚ್ಚಿನ ಕೀರ್ತಿಯನ್ನು ಪಡೆದು ಕನ್ನಡ ಜನಕೋಟಿ ಏನಿದ್ದಾರೆ ಅವರ ಬಾಳ್ವೆ ಹಸನಾಗಬೇಕು. ಜನತೆ ಬೆಳೆಯಬೇಕು. ಎಲ್ಲರೂ ಸುಖ-ಸಮೃದ್ಧಿಯಿಂದ ಆನಂದಿತರಾಗಬೇಕು.

ನಮ್ಮ ಸಂಸ್ಕೃತಿ, ಸಾಹಿತ್ಯ, ಕಲೆ ಇವೆಲ್ಲವೂ ಬೆಳೆದು ಇಡೀ ಭಾರತದಲ್ಲಿಯೇ ಅಲ್ಲ, ಇಡೀ ಪ್ರಪಂಚದಲ್ಲಿಯೇ ಹೆಚ್ಚಿನ ಕೀರ್ತಿ ಪಡೆಯುವಂತಾಗಬೇಕು. ಅಂತಹ ಕಾರ್ಯಕ್ಕೆ ಇವೊತ್ತು ನಾವು ಅಂಕುರಾರ್ಪಣ ಮಾಡೋಣ ಎನ್ನುವ ಮಾತನ್ನು ತಿಳಿಸಿ ಠರಾವನ್ನು ತಮ್ಮ ಒಪ್ಪಿಗೆಗಾಗಿ ಮಂಡಿಸುತ್ತಿದ್ದೇನೆ.

ನಾನು ಸರಕಾರದ ವತಿಯಿಂದ ಮಂಡಿಸಿದಂಥ ನಿರ್ಣಯಕ್ಕೆ ಎಲ್ಲ ಕಡೆಯಿಂದಲೂ, ಎಲ್ಲಾ ಪಕ್ಷಗಳಿಂದಲೂ ಸರ್ವತೋಮುಖವಾದ ಬೆಂಬಲ ಬಂದಿರತಕ್ಕದ್ದು ನನಗಂತೂ, ಬಹಳ ಸಂತೋಷ ಉಂಟುಮಾಡಿದೆ. ನಾನು ಮೊದಲೇ ಈ ಸಭೆಯಲ್ಲಿ ಅರಿಕೆ ಮಾಡಿಕೊಂಡ ಹಾಗೆ ಏನಾದರೂ ಇಲ್ಲಿ ಸ್ಪಲ್ಪ ಭಿನ್ನಾಭಿಪ್ರಾಯ ಇದ್ದರೂ ಹೆಸರು ಬದಲಾವಣೆ ಅಗತಕ್ಕ ಕಾಲದಲ್ಲಿ ಮನಸ್ಸಿಗೆ ಸ್ವಲ್ಪ ನೋವು ಅದಂಥವರು ಕೂಡ ಅಂತಿಮವಾಗಿ, ನಿರ್ಣಯಕ್ಕೆ ಬೆಂಬಲ ಕೊಟ್ಟಿದ್ದಾರೆ. ಮತ್ತು ಬದಲಾವಣೆಯನ್ನು ಸ್ವಾಗತಿಸಿದ್ದಾರೆ. ನಾವು ‘ಕರ್ನಾಟಕ’ ಎಂಬ ಹೆಸರು ಇಡಬೇಕು ಎಂಬುದನ್ನು ಕೂಡ ಒಪ್ಪಿದ್ದಾರೆ. ಆದಕಾರಣ ಮೂರು ದಿವಸಗಳಿಂದ ಮಾತನಾಡಿ ತಮ್ಮ ಹೃದಯದಿಂದ ಬಂದ ಬೆಂಬಲವನ್ನು ಕೊಟ್ಟಂಥ ಮಾನ್ಯ ಸದಸ್ಯರಿಗೂ, ಈ ಚರ್ಚೆಯಲ್ಲಿ ಭಾಗವಹಿಸದೆ ಮೌನದಿಂದ ಕುಳಿತು ಮಾತುಗಳನ್ನು ಕೇಳಿದವರಿಗೂ ಮತ್ತು ಮೌನದಿಂದಲೇ ಬೆಂಬಲಕೊಟ್ಟಂಥ ಎಲ್ಲ ಸದಸ್ಯರಿಗೂ ನನ್ನ ಧನ್ಯವಾದಗಳನ್ನು ಅರ್ಪಿಸುವುದಕ್ಕೆ ನಾನು ಅಪ್ಪಣೆ ಬೇಡುತ್ತೇನೆ.

ಈ ಸಂದರ್ಭದಲ್ಲಿ ನಾನು ಈ ನಿರ್ಣಯವನ್ನು ಮಂಡಿಸುವುದಕ್ಕೆ ಮನಸ್ಸು ಮಾಡಿದ್ದಕ್ಕಾಗಿ ಅಥವಾ ತಂದಿದ್ದಕ್ಕಾಗಿ ನನ್ನ ಬಗ್ಗೆ ಕೆಲವರು ಒಳ್ಳೆಯ ಭಾಷಣವನ್ನು ಮಾಡಿದ್ದಾರೆ. ಮೆಚ್ಚಿಗೆಯನ್ನು ನನ್ನ ಮಿತ್ರು, ಎದುರು ಪಕ್ಷದಲ್ಲಿರತಕ್ಕ ನಾಯಕರು ವ್ಯಕ್ತಪಡಿಸಿದ್ದಾರೆ.

ಇಂತಹ ಮಹತ್ವದ ಕಾರ್ಯಗಳು ಆಗುವಾಗ ನಾವು ಒಂದೊಂದು ಕಾಲಕ್ಕೆ ನಿಮಿತ್ತ ಮಾತ್ರರಾಗುತ್ತೇವೆ ಅಷ್ಟೇ ಎಂದು ನಾನು ತಿಳಿದುಕೊಂಡಿದ್ದೇನೆ. ಇದು ನನಗೆ ವೈಯುಕ್ತಿಕವಾಗಿ ಹೆಮ್ಮೆ ಎಂದಲ್ಲ. ನಾನು ಒಂದು ನಿಮಿತ್ತವಾಗಿದ್ದೇನೆ, ಅದಕ್ಕೆ ಸಂದರ್ಭ ಕಾರಣ. ಇದರಿಂದ ಬರತಕ್ಕ ಕೀರ್ತಿ, ಮೆಚ್ಚಿಗೆ ಇಡೀ ಸದನಕ್ಕೆ ಸೇರಿದ್ದು, ಇದರಲ್ಲಿ ನಾನೂ ಒಬ್ಬ ಇದ್ದೇನೆ ಅಷ್ಟೇ. ವೈಯುಕ್ತಿಕವಾಗಿ ಇದರಲ್ಲಿ ನನ್ನ ಪ್ರತಿಷ್ಠೆ ಇಲ್ಲ, ಜನಮನಕ್ಕೆ ಸ್ಪಂದಿಸಿದ್ದೇನೆ. ನುಡಿದಂತೆ ನಡೆದಿದ್ದೇನೆ ಎಂಬ ನಂಬಿಕೆ. ತಿಳಿವಳಿಕೆ ಇಲ್ಲದೆ ಧೈರ್ಯ ಬರುವುದಿಲ್ಲ. ನಡೆದ ವಿಚಾರವನ್ನು ಸರಿಯಾಗಿ ತಿಳಿಯಬೇಕಾದರೆ ನಿರ್ವೀಕಾರ ಮನಸ್ಸು ಬೇಕು. ಈ ದೃಷ್ಟಿಯಿಂದ ನಡೆಯುವುದಕ್ಕೆ ಧೈರ್ಯ ಮಾಡಿದೆ ಅಷ್ಟೇ.

ಯುಗಯುಗಾಂತರಗಳಿಂದ ಸಾಮಾಜಿಕವಾಗಿ, ಆರ್ಥಿಕವಾಗಿ ನೊಂದು, ಬೆಂದು ಹಿಂದುಳಿದಿರತಕ್ಕ ಜನ-ಜನಾಂಗಗಳ ಉದ್ದಾರ ಆಗಬೇಕು. ಆ ದಿಕ್ಕಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದೇನೆ. ಅದಕ್ಕೆ ಎಲ್ಲರ ತೆರೆದ ಹೃದಯದ ಸಹಕಾರಬೇಕು. ಆ ದಿಕ್ಕಿನಲ್ಲಿ ಅಂಜದೆ ನಾವು ನುಡಿದಂತೆ ನಡೆಯಬೇಕಾದುದ್ದು ನಮ್ಮ ಧರ್ಮ, ಕರ್ತವ್ಯ. ಅದನ್ನು ಮಾಡುತ್ತೇವೆಂದು ಹೇಳಿ ನಾನು ತಮಗೆ ಆಶ್ವಾಸನೆ ಕೊಡಬಲ್ಲೆ. ಕೆಲವು ಭಾಗಗಳಲ್ಲಿ ಕೆಲವು ತೊಂದರೆಗಳಿವೆ. ನೀರಿನ ಅಭಾವ, ಮಳೆ ಇಲ್ಲದೆ ತೊಂದರೆ. ಯಾವ ಭಾಗದವರಿಗೆ ತೊಂದರೆಯಾಗಿದ್ದರೂ ಅದನ್ನು ಪರಿಹರಿಸುವುದು ಸರಕಾರದ ಕರ್ತವ್ಯ. ಎಲ್ಲಿಯವರೆಗೆ ನಮಗೆ ಸರಕಾರ ನಡೆಸುವ ಜವಾಬ್ದಾರಿ ಇರುತ್ತದೆಯೋ ಅಲ್ಲಿಯವರೆಗೆ ಆ ಭಾಗ, ಈ ಭಾಗ ನಮ್ಮವರು, ನಿಮ್ಮವರು ಎಂಬ ಪಕ್ಷಪಾತಕ್ಕೆ ಎಡೆಯಿಲ್ಲ. ಎಲ್ಲ ಭಾಗಗಳೂ ನಮ್ಮ ರಾಜ್ಯ ನಮ್ಮ ಜನ ಎಂಬ ಒಂದೇ ಗುರಿ, ಎನ್ನುವ ಆಶ್ವಾಸನೆಯನ್ನು ಕೂಡಾ ನಾನು ಕೊಡುತ್ತೇನೆ.

ಕೊನೆಯದಾಗಿ ಒಂದು ಮಾತು. ಈ ನಿರ್ಣಯವನ್ನು ನನ್ನ ಒಂದು ಸ್ಥಾನದಿಂದ ತಂದಿರತಕ್ಕದ್ದು ಸಂತೋಷ ಎಂಬ ಅಭಿಪ್ರಾಯ. ಇವರು ಅರಸು ಮನೆತನದವರು ಆಗಿದ್ದರೂ ಇದನ್ನು ತಂದಿದ್ದಾರೆಂದು ಹೇಳಿದ್ದಾರೆ. ಇದರ ಬಗ್ಗೆ ನಾನು ಏನೂ ಹೇಳಬೇಕಾದ ಅಗತ್ಯವಿಲ್ಲ. ನಾನು ಯಾವಾಗ ರಾಜಕೀಯದಲ್ಲಿ ಕಾಲಿಟ್ಟನೋ ಆವಾಗಿನಿಂದ ನಾನು ಅರಸು ಮನೆತನಕ್ಕೆ ಸೇರಿದವನು, ‘ಜನತೆಯೇ ಬೇರೆ ನಾನೇ ಬೇರೆ’ ಎಂದು ತಿಳಿದವನಲ್ಲ. ನಾನು ಹುಟ್ಟಿದ್ದು ಹಳ್ಳಿಯಲ್ಲಿ, ಬೆಳೆದಿದ್ದು ಹಳ್ಳಿಯಲ್ಲಿ. ಇದ್ದದ್ದೂ ಹಳ್ಳಿಯಲ್ಲಿ. ದೇಶದ ವಿಚಾರ ಬಂದಾಗ ದೇಶಾಭಿಮಾನ ಇರುವಂಥವನು ಯಾವ ಜಾತಿ, ಮತ ಭೇದವಿಲ್ಲದೆ, ಯರ‍್ಯಾರಿಗೆ ಸ್ವಾತಂತ್ರಾö್ಯಭಿಮಾನ ಇದೆಯೋ, ಅವರೆಲ್ಲರೂ ದೇಶಕ್ಕಾರಿ ಹೋರಾಟವನ್ನು ಮಾಡಿದ್ದಾರೆ. ಅಂತಹ ಹೋರಾಟ ಮಾಡಿದ ಲಕ್ಷೋಪಲಕ್ಷ ಜನರಲ್ಲಿ ನಾನೂ ಒಬ್ಬ.

ಕರ್ನಾಟಕ ಎಂಬ ಹೆಸರಿಟ್ಟಾಗ ಮಲ್ಲಿಗೆ ಸುರಿದಿದ್ದರು!
ಅಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ದೇವಾರಾಜ ಅರಸು ಅವರು ನಿರ್ಣಯದ ಮೇಲೆ ಮಾತನಾಡಿದ ಮೇಲೆ ಸಭಾಧ್ಯಕ್ಷರು ‘ನಾನು ಈ ನಿರ್ಣಯವನ್ನು ಸಭೆಯ ಒಪ್ಪಿಗೆಗೆ ಹಾಕುತ್ತೇನೆ, ಅದು ಹೀಗೆದೆ; ಭಾರತದ ಸಂವಿಧಾನದಲ್ಲಿ ನಮೂದಿಸಿದ ಈ ರಾಜ್ಯದ ಹೆಸರನ್ನು ‘ಕರ್ನಾಟಕ’ ಎಂಬುದಾಗಿ ಬದಲಾಯಿಸಬೇಕೆಂದು ಈ ಸಭೆಯವರು ತಮ್ಮ ಖಚಿತ ಅಭಿಪ್ರಾಯವನ್ನು ಘೊಷಿಸಿ ಈ ಬಗ್ಗೆ ಅಗತ್ಯವಾದ ಸಂವಿಧಾನದ ತಿದ್ದುಪಡಿಗಳನ್ನು ರಾಜ್ಯ ಸರಕಾರದವರು ಪಡೆದುಕೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಈ ಸಭೆಯವರು ಶಿಫಾರಸು ಮಾಡುತ್ತಾರೆ’
ಸಭಾಧ್ಯಕ್ಷರು ನಿರ್ಣಯವನ್ನು ಓದುತ್ತಿದ್ದಂತೆಯೇ ಎಲ್ಲ ಸದಸ್ಯರು ಜಯಕಾರ ಮಾಡಿದ್ದರು. ಆಗ ಮತ್ತೆ ಅಧ್ಯಕ್ಷರು : ನಿರ್ಣಯದ ವಿರೋಧ ಯಾರು ಇಲ್ಲವಾದ್ದರಿಂದ ನಿರ್ಣಯವು ಸರ್ವಾನುಮತದಿಂದ ಅಂಗೀಕರಿಸಲ್ಪಟ್ಟಿತು. ‘the resolution was adopted’ಎಂದು ಘೋಷಿಸಿದರು.
ಆಗ ವಾಟಾಳ್ ನಾಗರಾಜ್: ಈ ಶುಭ ಸಂತೋಷದ ಸಮಯದಲ್ಲಿ ಸಂತೋಷ ಸೂಚಕವಾಗಿ ನಾನು ಈ ಮಲ್ಲಿಗೆ ಹೂಗಳನ್ನು ಎಲ್ಲರ ಮೇಲೆಯೂ ಚೆಲ್ಲುತ್ತೇನೆ ಎಂದರು. ಅಲ್ಲದೆ ವಾಟಾಳ್ ನಾಗರಾಜ್ ಮತ್ತು ಎಸ್.ಬಂಗಾರಪ್ಪ ಮಲ್ಲಿಗೆ ಹೂಗಳನ್ನು ಸದಸ್ಯರ ಮೇಲೆ ಚೆಲ್ಲಿದರು. ಆಗ ದೇವರಾಜ ಅರಸು ಅವರು: ನಾನು ಈಗ ‘ಕರ್ನಾಟಕಕ್ಕೆ’ ಎಂದು ಹೇಳುತ್ತೇನೆ ತಾವೆಲ್ಲರೂ ಒಕ್ಕಂಠದಿAದ ‘ಜಯವಾಗಲಿ’ ಎಂದು ಹೇಳಬೇಕು ಎಂದರು.
ದೇವರಾಜು ಅರಸ್: ‘ಕರ್ನಾಟಕಕ್ಕೆ’
ಎಲ್ಲ ಸದಸ್ಯರು : ‘ಜಯವಾಗಲಿ’
ಆಗ ಎಲ್ಲ ಸದಸ್ಯರೂ ‘ಕರ್ನಾಟಕಕ್ಕೆ ಜಯವಾಗಲಿ’ ಎಂದು ಘೋಷಣೆಯನ್ನು ಮತ್ತು ಕರತಾಡವನ್ನು ಮಾಡಿದ್ದರು. ಇದೊಂದು ಐತಿಹಾಸಿಕ ಸಂದರ್ಭವಾಗಿತ್ತು.

ನನಗೆ ತನ್ನ ಜಾತಿಯೆಂದು ಏನೂ ಹೆಚ್ಚಿನ ರೀತಿಯ ಪ್ರೀತಿಯೂ ಇಲ್ಲ ಅಥವಾ ಬೇರೆ ಜಾತಿಯವರಲ್ಲಿ ಕಡಿಮೆ ರೀತಿಯ ಪ್ರೀತಿಯೂ ಇಲ್ಲ. ನಾವೆಲ್ಲರೂ ಒಂದೇ ಜಾತಿಯವರು ಎಂಬ ಭಾವನೆ. ಈ ರಾಜತತ್ವಕ್ಕೆ ನಾನು ಎಂದೂ ವಿರೋಧಿ. ಗಾಂಧೀಜಿಯವರು ಈ ರಾಜರುಗಳ ಬಗ್ಗೆ ಹೇಳಿದಾಗ ಅದು ಸರಿ ಎಂದು ನನಗೆ ತೋರಿ ಆಗಿನಿಂದಲೇ ವಿರೋಧವಾದ ಮನೋಭಾವ ಬೆಳೆದು ಬಂದಿತ್ತು. ಅದರ ವಿರುದ್ಧವಾಗಿ ಎದ್ದು ನಿಂತಿದ್ದೇನೆ.

ತಾವೆಲ್ಲರೂ ಈ ನಿರ್ಣಯವನ್ನು ವಿರೋಧ ಮಾಡದೆ ಸರ್ವಾನುಮತದ ಸ್ವಾಗತ ಮಾಡಿದ್ದಕ್ಕಾಗಿ ತಮಗೆಲ್ಲರಿಗೂ ನಾನು ಅಭಿನಂದಿಸುತ್ತೇನೆ. ಈ ನಿರ್ಣಯಕ್ಕೆ ತಮ್ಮೆಲ್ಲರ ಬೆಂಬಲವನ್ನು ಕೊಡಬೇಕೆಂದು ಪ್ರಾರ್ಥನೆಮಾಡಿಕೊಂಡು ನನ್ನ ಮಾತುಗಳನ್ನು ಮುಗಿಸುತ್ತೇನೆ.

ಹೀಗೆ ದೇವರಾಜ ಅರಸು ಅವರು ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ಹೆಸರಿಡುವ ನಿರ್ಣಯವನ್ನು ಮಂಡಿಸಿ ಮಾತನಾಡಿದಾಗ ಶಾಸಕರೆಲ್ಲರೂ ಮೇಜುಕುಟ್ಟಿ, ಕರತಾಡವ ಮಾಡಿ ಸಂತೋಷ ವ್ಯಕ್ತಪಡಿಸಿದ್ದರು. ರಾಜ್ಯದ ಹೆಸರನ್ನು ಬದಲಾಯಿಸಬೇಕಾದ ಅನಿವಾರ್ಯತೆಯನ್ನು, ಹೆಸರು ಬದಲಾವಣೆಗೊಂಡ ರಾಜ್ಯವು ಹೇಗಿರಬೇಕೆಂಬುದನ್ನು ಅರಸರು ಈ ಭಾಷಣದಲ್ಲಿ ನೇರವಾಗಿ ಮತ್ತು ಸ್ಪಷ್ಟವಾಗಿ ಹೇಳಿದ್ದನ್ನು ನೀವು ಗಮನಿಸಬಹುದು.

ಅರಸರು ನಾಡಿಗೆ ‘ಕರ್ನಾಟಕ’ ಎಂದು ನಾಮಕರಣ ಮಾಡಿ, ಅತ್ಯಂತ ಸೂಕ್ಷವೂ, ಜಟಿಲವೂ ಆಗಿದ್ದ ಈ ಭಾವನಾತ್ಮಕ ಸಮಸ್ಯೆಯನ್ನು ತಮ್ಮ ಜಾಣ್ಮೆಯಿಂದ ಪರಿಹರಿಸಿ ಜಾಣರಾದರು, ದೂರದೃಷ್ಟಿಗೆ ಸಾಕ್ಷಿಯಾದರು. ದಿಟ್ಟತನಕ್ಕೂ ನಿದರ್ಶನವಾಗಿ ಇತಿಹಾಸದಲ್ಲಿ ಶಾಶ್ವತ ಸ್ಥಾನವನ್ನು ಗಳಿಸಿಕೊಂಡರು. ಜನತೆಯಲ್ಲಿ ನಂಬಿಕೆ, ಭರವಸೆ, ವಿಶ್ವಾಸವನ್ನು ಹುಟ್ಟಿಸಿದರು. ಈ ಒಂದು ನಿರ್ಧಾರದಿಂದ ಅವರ ವರ್ಚಸ್ಸು ಇಡೀ ರಾಜ್ಯದಲ್ಲಿ ಹರಡಿತು. ವಿಶೇಷ ಮನ್ನಣೆಯ ಜನಪ್ರಿಯತೆಗೆ ಅವರು ಪಾತ್ರರಾದರು.

ಇದನ್ನೂ ಓದಿ | ಅಮೆರಿಕದ ವಿಸ್ಕಾನ್ಸಿನ್ ರಾಜ್ಯದಲ್ಲಿ ನ.1 ಕನ್ನಡ ಭಾಷೆ ಮತ್ತು ರಾಜ್ಯೋತ್ಸವ ದಿನ; ಅಲ್ಲಿನ ರಾಜ್ಯಪಾಲರ ಘೋಷಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Kannada Pride: ಇನ್ನು ಕನ್ನಡದಲ್ಲೇ ಸಿಆರ್‌ಪಿಎಫ್, ಬಿಎಸ್‌ಎಫ್, ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಎಕ್ಸಾಮ್!

Kannada Pride: ಕೇಂದ್ರ ಸಶಸ್ತ್ರ ಮೀಸಲು ಪಡೆಗಳ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ 13 ಪ್ರಾದೇಿಕ ಭಾಷೆಗಳಲ್ಲಿ ನಡೆಸಲು ಕೇಂದ್ರ ಗೃಹ ಇಲಾಖೆಯು ಕಳೆದ ವರ್ಷವೇ ನಿರ್ಧರಿಸಿತ್ತು.

VISTARANEWS.COM


on

Karnataka Candidate can write CRPF, BSF, CIS Constable Exam in Kannada, Kannada Pride
Koo

ನವದೆಹಲಿ: ಸಿಆರ್‌ಪಿಎಫ್(CRPF), ಬಿಎಸ್‌ಎಫ್ (BSF) ಮತ್ತು ಸಿಐಎಸ್ಎಫ್‌ನಂಥ (CISF) ಅರೆ ಸೇನಾ ಪಡೆಗಳ ಕಾನ್ಸ್‌ಟೇಬ್ ನೇಮಕಾತಿ ಪರೀಕ್ಷೆಯನ್ನು (Constable Exam) ಇಂಗ್ಲಿಷ್ ಮತ್ತು ಹಿಂದಿ ಮಾತ್ರವಲ್ಲದೇ, ಕನ್ನಡವೂ (Kannada Pride) ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯವು ಭಾನುವಾರ ಹೇಳಿದೆ.

ದೇಶಾದ್ಯಂತ 128 ನಗರಗಳಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳು ಎಕ್ಸಾಮ್ ಬರೆಯಲಿದ್ದಾರೆ. ಈ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ನಡೆಯಲು ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಸಚಿವಾಲಯವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಾದೇಶಿಕ ಭಾಷೆಗಳಿಗೆ ಉತ್ತೇಜನ ಮತ್ತು ಕೇಂದ್ರ ಸಶಸ್ತ್ರ ಮೀಸಲು ಪಡೆಯಲ್ಲಿ ಸ್ಥಳೀಯ ಯುವಕರು ಪಾಲ್ಗೊಳ್ಳುವುದನ್ನು ಹೆಚ್ಚಿುವುದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದಿ ಮತ್ತು ಇಂಗ್ಲಿಷ್ ಮಾತ್ರವಲ್ಲದೇ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸ್ಟಾಫ್ ಸೆಲಕ್ಷನ್ ಕಮಿಷನ್(SSC) ಈ ಕಾನ್‌ಸ್ಟೇಬಲ್(ಸಾಮಾನ್ಯ ಕರ್ತವ್ಯ) ಪರೀಕ್ಷೆಯನ್ನು ಕೈಗೊಳ್ಳುತ್ತಿದೆ. ಈ ಮೂಲಕ ಕೇಂದ್ರ ಸಶಸ್ತ್ರ ಪಡೆಗಳಿಗೆ ಲಕ್ಷಾಂತರ ಯುವಕರನ್ನು ಆಕರ್ಷಿಸಲಾಗುತ್ತಿದೆ. ಪರೀಕ್ಷೆಗಳನ್ನು ಸ್ಥಳೀಯ ಭಾಷೆಗಳಲ್ಲಿ ನಡೆಸಲು ಎಸ್ಎಸ್‌ಸಿ ಮತ್ತು ಕೇಂದ್ರ ಗೃಹ ಸಚಿವಾಲಯವು ತಿಳಿವಳಿಕಾ ಒಪ್ಪಂದಕ್ಕೆ ಸಹಿ ಹಾಕಿವೆ.

ಈ ಸುದ್ದಿಯನ್ನೂ ಓದಿ: ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ; ಕನ್ನಡ ಸೇರಿ 15 ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆ, ಯಾವ ಹುದ್ದೆಗೆ ಅನ್ವಯ?

Continue Reading

ಕನ್ನಡ ರಾಜ್ಯೋತ್ಸವ

Kannada Koota Luxembourg: ಲಕ್ಸಂಬರ್ಗ್ ಕನ್ನಡ ಕೂಟದಿಂದ ಅದ್ಧೂರಿ ಕನ್ನಡೋತ್ಸವ-2023

Kannada Koota Luxembourg: ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಲಕ್ಸಂಬರ್ಗ್ ಕನ್ನಡ ಕೂಟ, ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

VISTARANEWS.COM


on

Kannada Koota Luxembourg
Koo

ಲಕ್ಸಂಬರ್ಗ್: ಕನ್ನಡದ ಕಂಪನ್ನು ಪಸರಿಸುವ ಮತ್ತು ಕನ್ನಡದ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿರುವ ಕನ್ನಡ ಕೂಟ ಲಕ್ಸಂಬರ್ಗ್ (ಕೆಕೆಎಲ್) (Kannada Koota Luxembourg) ಅದ್ಧೂರಿಯಾಗಿ `ಕನ್ನಡೋತ್ಸವ -2023’ ನಡೆಸುವ ಮೂಲಕ ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

ಲಕ್ಸಂಬರ್ಗ್‌ನ ಬೆಗ್ಗೆನ್ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಲ್ಲಿ ನೆಲೆಸಿರುವ ಕನ್ನಡಿಗರೆಲ್ಲರೂ ಪಾಲ್ಗೊಂಡು ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಿದರು. ಈ ಮೂಲಕ ಕನ್ನಡಿಗರೆಲ್ಲರೂ ಒಂದೆಡೆ ಸೇರಿ ಕನ್ನಡ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು.

ಬೆಂಗಳೂರು ನಗರ ಜಿಲ್ಲೆಯಷ್ಟು ದೊಡ್ಡದಿರುವ ಲಕ್ಸಂಬರ್ಗ್‌ನಲ್ಲಿ ಸುಮಾರು 6 ಲಕ್ಷ ಜನಸಂಖ್ಯೆ ಇದೆ. ಚಿಕ್ಕದಾದರೂ ಇಲ್ಲಿ ವೈವಿಧ್ಯಮಯ ಸಂಸ್ಕೃತಿ ಶ್ರೀಮಂತವಾಗಿದೆ. ಈ ಬಹುಸಾಂಸ್ಕೃತಿಕ ಪ್ರದೇಶದಲ್ಲಿ ಭಾರತೀಯರು ಅದರಲ್ಲೂ ವಿಶೇಷವಾಗಿ ಕನ್ನಡಿಗರು ಗಮನಾರ್ಹವಾದ ರೀತಿಯಲ್ಲಿ ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಪಸರಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಇಲ್ಲಿ 100ಕ್ಕೂ ಹೆಚ್ಚು ಕನ್ನಡಿಗ ಕುಟುಂಬಗಳು ವಾಸ ಮಾಡುತ್ತಿದ್ದು, 2022ರ ಅಂತ್ಯದಲ್ಲಿ ಆರಂಭವಾದ ಕನ್ನಡ ಕೂಟ ಲಕ್ಸಂಬರ್ಗ್ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು, ಕಾರ್ಯಾಗಾರಗಳು ಹಾಗೂ ಹಬ್ಬಗಳ ಮೂಲಕ ಕನ್ನಡಿಗರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಇದನ್ನೂ ಓದಿ | ದಶಮುಖ ಅಂಕಣ: ನಿದ್ದೆಗೊಮ್ಮೆ ನಿತ್ಯ ಮರಣ, ಎದ್ದ ಸಲ ನವೀನ ಜನನ!

ಕೆಕೆಎಲ್ ಕನ್ನಡೋತ್ಸವ 2023 ಎರಡನೇ ಕರ್ನಾಟಕ ರಾಜ್ಯೋತ್ಸವವನ್ನು ಆಯೋಜಿಸಿದ್ದು, ಇದರಲ್ಲಿ 120ಕ್ಕೂ ಹೆಚ್ಚು ಕನ್ನಡದ ಮನಸುಗಳು ಪಾಲ್ಗೊಂಡಿದ್ದವು. ಇದರ ವಿಶೇಷವೆಂದರೆ ದೊಡ್ಡ ಮಟ್ಟದಲ್ಲಿ ಭಾರತೀಯರು ಮತ್ತು ಕೆಲವು ಯೂರೋಪಿಯನ್ನರೂ ಪಾಲ್ಗೊಂಡಿದ್ದರು. ಕನ್ನಡದ ಶ್ರೀಮಂತ ಪರಂಪರೆಯನ್ನು ಬಿಂಬಿಸುವ ಹಾಗೂ ಸಾಂಸ್ಕೃತಿಕ ಸಂಪ್ರದಾಯವನ್ನು ಬಿಂಬಿಸುವ ರೀತಿಯಲ್ಲಿ ಹಚ್ಚೇವು ಕನ್ನಡದ ದೀಪ ಹಾಡಿನೊಂದಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಮತ್ತು ನಾಡಗೀತೆಯನ್ನು ಹಾಡಲಾಯಿತು.

ಕನ್ನಡಿಗ ಸಮುದಾಯಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿರುವ ವನಜಾಕ್ಷಿ ಜಗದೀಶ್ ಮತ್ತು ಡಾ.ಪುನೀತ್ ಜುಬ್ಬ ಹೊನ್ನಯ್ಯ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಶರಣ್ಯ ಮತ್ತು ಪ್ರಮೋದ್ ಈಶ್ವರ್ ಅವರು ಈ ಕಾರ್ಯಕ್ರಮದ ನಿರೂಪಣೆ ಮಾಡಿದರು.

ಶಾಸ್ತ್ರೀಯ ಸಂಗೀತ, ಸಿನಿಮಾ ಹಾಡುಗಳ ಗಾಯನ, ನೃತ್ಯ ಮತ್ತು ಆರ್ಕೆಸ್ಟ್ರಾ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ವಿಶೇಷವೆಂದರೆ ಈ ಕಾರ್ಯಕ್ರಮಗಳ ಅರ್ಧದಷ್ಟು ಕಾರ್ಯಕ್ರಮಗಳನ್ನು ಮಕ್ಕಳೇ ನಡೆಸಿಕೊಟ್ಟರು. ಈ ಮೂಲಕ ಮಕ್ಕಳು ಕನ್ನಡದ ಸಂಸ್ಕೃತಿಯನ್ನು ಬಿಂಬಿಸಿದರು. ಇದೇ ವೇಳೆ, ಆದರ್ಶ ದಂಪತಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು. ಈ ಪೈಕಿ 5 ಅತ್ಯುತ್ತಮ ಜೋಡಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯೆಂದರೆ ಕನ್ನಡಿಗರಾದ ಅಚಲ್ ಮೂರ್ತಿ ಮತ್ತು ಲಕ್ಸಂಬರ್ಗ್ ಮೂಲದ ಬ್ಯಾಂಡ್ `ಅಹ್ಮದ್ ರಾದ್ವಾನ್ & ಲೆಸ್ ಹಿರೋಂಡೆಲ್ಸ್’ ನ ಕಲಾವಿದರು ತಮ್ಮ ಕಲೆಯನ್ನು ಪ್ರದರ್ಶನ ಮಾಡಿ ಎಲ್ಲರ ಗಮನ ಸೆಳೆದರು. ಅಲ್ಲದೇ, ಇಲ್ಲಿ ಆಯೋಜಿಸಲಾಗಿದ್ದ ವಿವಿಧ ಖಾದ್ಯಗಳ ಪ್ರದರ್ಶನ ತಿಂಡಿ ಪ್ರಿಯರಿಗೆ ಆಹ್ಲಾದವನ್ನು ಉಂಟು ಮಾಡಿತು.

ಕೆಕೆಎಲ್ ಅಧ್ಯಕ್ಷರಾದ ಭವಾನಿ ಶಂಕರ್ ಅವರು ಈ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
“ಲಕ್ಸಂಬರ್ಗ್ ಮತ್ತು ಕರ್ನಾಟಕದ ಕನ್ನಡಿಗರ ನಡುವಿನ ಬಾಂಧವ್ಯ ಬಲವರ್ಧನೆಗೆ ಈ ಕಾರ್ಯಕ್ರಮ ನಾಂದಿ ಹಾಡಿದೆ. ಈ ಕನ್ನಡೋತ್ಸವ 2023 ಕೇವಲ ನಮ್ಮ ನಡುವಿನ ಪ್ರತಿಭೆಗಳನ್ನು ಹೊರ ಜಗತ್ತಿಗೆ ಅನಾವರಣ ಮಾಡಲಷ್ಟೇ ಕಾರಣವಾಗಿಲ್ಲ. ಇದರೊಂದಿಗೆ ಒಗ್ಗಟ್ಟು ಮತ್ತು ಪ್ರೀತಿ ವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಹಕಾರಿಯಾಗಿದೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಹೊರ ಜಗತ್ತಿಗೆ ತೋರಿಸುವಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿದೆ’’ ಎಂದರು.

ಸಂಧ್ಯಾ ಸುರೇಶ್, ಪುನೀತಾ ರೆಡ್ಡಿ, ಕಾರ್ತೀಕ್ ರಾಮಮೂರ್ತಿ, ನರಸಿಂಹ ಹೆಬ್ಬಾರ್, ಮಂಜುನಾಥ್ ಪ್ರಸಾದ್, ನಿರಂಜನ್ ವಿಶ್ವಮೂರ್ತಿ, ಹಿತೇಶ್ ಚಿಡ್ಗಲ್, ಪ್ರಶಾಂತ್ ಅಳವಂಡಿ, ರಮೇಶ್ ಪಾಂಡುರಂಗ ಸೇರಿದಂತೆ ಇನ್ನಿತರ ಆಡಳಿತ ಮಂಡಳಿ ಸದಸ್ಯರು ನೇತೃತ್ವದಲ್ಲಿ ಹಾಗೂ ಸ್ವಯಂಸೇವಕರ ಶ್ರಮದ ಫಲವಾಗಿ ಈ ಕಾರ್ಯಕ್ರಮದಲ್ಲಿ ಯಶಸ್ವಿಯಾಗಿ ನಡೆಯಲು ಕಾರಣವಾಗಿದೆ.

ಇದನ್ನೂ ಓದಿ | Cultural Events : ಡಿ.13-14ರಂದು ನೃತ್ಯ ವೈಭವದ ತ್ಯಾಗರಾಜ ಹೃತ್ಸದನ

ಈ ಕನ್ನಡೋತ್ಸವ 2023 ಕನ್ನಡದ ಸಮುದಾಯದ ಒಗ್ಗಟ್ಟನ್ನು ಪ್ರದರ್ಶಿಸುವುದರೊಂದಿಗೆ ಕನ್ನಡೇತರರು ಮತ್ತು ಸ್ಥಳೀಯ ನಾಗರಿಕರೊಂದಿಗೆ ಸಂಬಂಧ ಬೆಳೆಸುವುದು ಮತ್ತು ಸಂಸ್ಕೃತಿ ವಿನಿಮಯಕ್ಕೆ ಒಂದು ಉತ್ತಮವಾದ ವೇದಿಕೆಯನ್ನು ಒದಗಿಸಿಕೊಟ್ಟಿತು.

Continue Reading

ಕನ್ನಡ ರಾಜ್ಯೋತ್ಸವ

RK Balachandra: ʼಕರ್ನಾಟಕ ಸಾಧಕ ರತ್ನʼ ಪ್ರಶಸ್ತಿಗೆ ಕುಶಾಲನಗರದ ಆರ್.ಕೆ. ಬಾಲಚಂದ್ರ ಆಯ್ಕೆ

R. K. Balachandra: ಬಳ್ಳಾರಿಯ ಸ್ಮಿಯಾಕ ಚಾರಿಟಬಲ್ ಟ್ರಸ್ಟ್‌ನಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ʼಕರ್ನಾಟಕ ಸಾಧಕ ರತ್ನʼ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.

VISTARANEWS.COM


on

RK Balachandra
Koo

ಮಡಿಕೇರಿ: 68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಳ್ಳಾರಿಯ ಸ್ಮಿಯಾಕ ಚಾರಿಟಬಲ್ ಟ್ರಸ್ಟ್‌ನಿಂದ ನೀಡುವ ʼಕರ್ನಾಟಕ ಸಾಧಕ ರತ್ನʼ ರಾಜ್ಯೋತ್ಸವ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕುಶಾಲನಗರದ ಆರ್.ಕೆ. ಬಾಲಚಂದ್ರ (RK Balachandra) ಅವರು ಆಯ್ಕೆಯಾಗಿದ್ದಾರೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬಹುಮುಖ್ಯವಾಗಿ ಅನ್ಯ ರಾಜ್ಯದ ಕನ್ನಡೇತರರಿಗೆ ಕನ್ನಡ ಕಲಿಸುವಿಕೆ ಹಾಗೂ ರಾಜ್ಯಾದಂತ ಉಚಿತವಾಗಿ ಬ್ಯಾಂಕಿಂಗ್ ಹಾಗೂ ಇತರೆ ಸ್ಪರ್ಧಾತ್ಮಗಳ ಪರೀಕ್ಷೆ ತರಬೇತಿಯ ಸೇವೆಯನ್ನು ಗುರುತಿಸಿ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಇವರಿಗೆ ʼಕರ್ನಾಟಕ ಸಾಧಕ ರತ್ನʼ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ರಾಮಾಯಣ, ಮಹಾಭಾರತ ಕಲಿಕೆ ಶಿಫಾರಸು ಸ್ವಾಗತಾರ್ಹ

ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್‌ 26ರಂದು ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆರ್.ಕೆ. ಬಾಲಚಂದ್ರ ಸೇರಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕನ್ನಡ ರಾಜ್ಯೋತ್ಸವ

Karnataka Sambhrama 50: ಹೋರಾಟ, ತ್ಯಾಗ-ಬಲಿದಾನದಿಂದ ಕನ್ನಡ ನಾಡು ಉದಯ: ಸಿದ್ದರಾಮಯ್ಯ

Karnataka Sambhrama 50: ಗದಗದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಂಭ್ರಮ-50ʼ ರಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

VISTARANEWS.COM


on

CM Siddaramaiah
Koo

ಗದಗ: ಹೋರಾಟ, ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು (Karnataka Sambhrama 50) ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಂಭ್ರಮ-50ʼ ಅದ್ಧೂರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್. ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗತಿಗಳನ್ನು ಇಂದು ನಾನು ಸ್ಮರಿಸುತ್ತೇನೆ. ಅವತ್ತು ಕೆ.ಎಚ್.ಪಾಟೀಲ್, ಇಂದು ಎಚ್.ಕೆ.ಪಾಟೀಲ್, ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದರು.

ಇಂಗ್ಲಿಷ್‌ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದು ಕನ್ನಡ ಭಾಷಾ ಹಿರಿಮೆಯನ್ನು ಉದಾಹರಿಸಿದರು.

ಇದನ್ನೂ ಓದಿ | Karnataka Drought : 324 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ ಎಂದರು.

CM Siddaramaiah talks in Karnataka sambhrama at Gadag

ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ ಎಂದರು.

ಈ ಹಿಂದೆ ಕೆ.ಎಚ್.ಪಾಟೀಲರು ಇಡೀ ಜಿಲ್ಲೆಗೆ ಕುಡಿಯುವ ನೀರು ಕೊಟ್ಟರು. ಅವರ ಪುತ್ರ ಎಚ್.ಕೆ.ಪಾಟೀಲರೂ ಇಡೀ ರಾಜ್ಯಕ್ಕೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸಿದರೆ ಸಾಕು, ನೀವೆಲ್ಲಾ ಎಚ್.ಕೆ.ಪಾಟೀಲರನ್ನು ಗೆಲ್ಲಿಸಬೇಕು. ಇಡೀ ರಾಜ್ಯಕ್ಕೆ ಅಷ್ಟೊಂದು ಕೆಲಸ ಮಾಡಿರುವ ಎಚ್.ಕೆ.ಪಾಟೀಲರು ಮತ ಕೇಳಬಾರದು. ನೀವೆಲ್ಲಾ ಅವರನ್ನೂ ಹಾಗೇ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಅವಳಿ ನಗರಕ್ಕೆ 61 ಕೋಟಿ ಕೊಟ್ಟಿದ್ದೇವೆ

ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ 61 ಕೋಟಿ ರೂ. ನೀಡಿದ್ದೇವೆ. ಅಗತ್ಯಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಚಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾಡಳಿತ ಜಂಟಿಯಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರವಾಸೋದ್ಯಮ ಸಚಿವರೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಎಚ್.ಕೆ.ಪಾಟೀಲ್ ಅವರು ವಹಿಸಿದ್ದರು.

ಇದನ್ನೂ ಓದಿ | Cauvery Dispute : ರಾಜ್ಯಕ್ಕೆ ಮತ್ತೆ ಕಾವೇರಿ ಜಲಾಘಾತ; ಇನ್ನು 20 ದಿನ ನಿರಂತರ ನೀರು ಹರಿಸಲು ಪ್ರಾಧಿಕಾರ ಸೂಚನೆ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಮಂಕಾಳ ವೈದ್ಯ, ಶರಣ ಪ್ರಕಾಶ್ ಪಾಟೀಲ್, ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸೇರಿ ಹಲವಾರು ಶಾಸಕರು, ಇಲಾಖಾ ಕಾರ್ಯದರ್ಶಿಗಳು-ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
Drown in Mekedatu
ಕರ್ನಾಟಕ2 mins ago

Drown in Mekedatu: ಮೇಕೆದಾಟು ಬಳಿ ಈಜಲು ಹೋಗಿದ್ದ ಐವರು ಪ್ರವಾಸಿಗರ ಸಾವು

T20 World Cup 2024
ಕ್ರೀಡೆ10 mins ago

T20 World Cup 2024: ವಿಶ್ವಕಪ್​ಗೆ ಪಂತ್​ ಮೊದಲ ಆಯ್ಕೆಯ ಕೀಪರ್​​ ಅಲ್ಲ; ಮತ್ಯಾರು?

S M Krishna
ಕರ್ನಾಟಕ23 mins ago

S M Krishna: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ವೈರಲ್ ನ್ಯೂಸ್27 mins ago

Viral Video: ಪಾಪಿ ಮಗನಿಂದ ತಂದೆ ಮೇಲೆ ಇದೆಂಥಾ ಕ್ರೌರ್ಯ! ವಿಡಿಯೋ ನೋಡಿ

facebook whatsapp instagram
ಪ್ರಮುಖ ಸುದ್ದಿ30 mins ago

WhatsApp Exit India: ವಾಟ್ಸ್ಯಾಪ್‌ ಜೊತೆಗೇ ಭಾರತ ತೊರೆಯಲಿವೆಯೇ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ?

Dubai Airport
EXPLAINER40 mins ago

Dubai Airport : ದುಬೈನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಏರ್​ಪೋರ್ಟ್​​; ಏನಿದರ ವಿಶೇಷತೆ? ಎಲ್ಲ ಮಾಹಿತಿ ಇಲ್ಲಿದೆ

IPL 2024 Points Table
ಕ್ರೀಡೆ50 mins ago

IPL 2024 Points Table: ಚೆನ್ನೈ ಗೆಲುವಿನಿಂದ ಅಂಕಪಟ್ಟಿಯಲ್ಲಿ 3 ತಂಡಗಳಿಗೆ ಭಾರೀ ಹೊಡೆತ

Minister Lakshmi hebbalkar Latest statement in Belagavi
ಬೆಳಗಾವಿ1 hour ago

Lakshmi Hebbalkar: ಪ್ರಜ್ವಲ್ ಹಗರಣದ ಬಗ್ಗೆ ಬಿಜೆಪಿ ನಾಯಕರ ಮೌನವೇಕೆ? ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ

Sahil Khan Travelled 1,800 km In 4 Days To Avoid Arrest
ಬಾಲಿವುಡ್1 hour ago

Sahil Khan: ಪೊಲೀಸರಿಂದ ತಪ್ಪಿಸಿಕೊಳ್ಳಲು 1,800 ಕಿ.ಮೀ ಪ್ರಯಾಣಿಸಿದ್ದ ನಟ ಸಾಹಿಲ್ ಖಾನ್!

Hassan Pen Drive Case Deve Gowda refuses to expel Prajwal and What is the reason
ಕರ್ನಾಟಕ1 hour ago

Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20243 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202423 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌