ಧವಳ ಧಾರಿಣಿ ಅಂಕಣ: ರಘುವಂಶದ ಘನತೆಯ ಚಕ್ರವರ್ತಿ ದಶರಥ - Vistara News

ಪ್ರಮುಖ ಸುದ್ದಿ

ಧವಳ ಧಾರಿಣಿ ಅಂಕಣ: ರಘುವಂಶದ ಘನತೆಯ ಚಕ್ರವರ್ತಿ ದಶರಥ

ಧವಳ ಧಾರಿಣಿ ಅಂಕಣ: ಮಹಾಪುರುಷನಾದ ಶ್ರೀರಾಮನಿಗೆ ಜನ್ಮವನ್ನು ಕೊಟ್ಟ ದಶರಥನೂ ಸಹ ಸಾಕಷ್ಟು ಘನತೆವೆತ್ತ ವ್ಯಕ್ತಿತ್ವದವನೇ ಆಗಿದ್ದ. ಇದನ್ನು ರಾಮಾಯಣದ ಪ್ರಾರಂಭದಲ್ಲಿಯೇ ವಾಲ್ಮೀಕಿ ವಿವರಿಸುತ್ತಾರೆ.

VISTARANEWS.COM


on

king dasharatha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಹಾಕಾವ್ಯದ ಮರೆಯಲ್ಲಿರುವ ಬಹುರೂಪಿ

dhavala dharini by Narayana yaji

ತಸ್ಯಾಂ ಪುರ್ಯಾಮಯೋಧ್ಯಾಯಾಂ ವೇದವಿತ್ಸರ್ವಸಙ್ಗ್ರಹಃ
ದೀರ್ಘದರ್ಶೀ ಮಹಾತೇಜಾಃ ಪೌರಜಾನಪದಪ್ರಿಯಃ ৷৷ಬಾ.ಕಾಂ.1৷৷

ಸಮಸ್ತ ವೇದವನ್ನು ಸಾಂಗವಾಗಿ ತಿಳಿದ ಧಶರಥನು (King Dasharatha) ಆ ಅಯೋಧ್ಯಾಪುರವನ್ನು (Ayodhya) ಆಳುತ್ತಿದ್ದನು. ಆತನು ಸರ್ವಜ್ಞನು. ಮುಂದೇನಾಗಬಹುದೆನ್ನುವುದನ್ನು ಇಂದೇ ಗ್ರಹಿಸಬಲ್ಲ ದೀರ್ಘದರ್ಶಿಯಾಗಿದ್ದನು. ಮಹಾತೇಜಸ್ವಿಯೂ ಪ್ರತಾಪಿಯೂ ಆಗಿದ್ದನು. ನಗರ ಮತ್ತು ಗ್ರಾಮಗಳ ಜನಪದರಿಗೆ ಅತಿಪ್ರಿಯನಾದ ರಾಜನಾಗಿದ್ದನು.

ಅಯೋಧ್ಯೆಯನ್ನು ಅರವತ್ತು ಸಾವಿರ ವರ್ಷಗಳ ಕಾಲ ಆಳಿದ ದಶರಥ ಮಹಾರಾಜನ ಕುರಿತು “ಓರ್ವ ತಿಕ್ಕಲು ದೊರೆಯಾಗಿದ್ದ, ತನ್ನ ಹೆಂಡತಿಯರಿಗೆ ಹೆದರಿದ್ದ, ಶತ್ರುಗಳಿಗೆ ಹೆದರುವ ಪುಕ್ಕಲನಾಗಿದ್ದ, ವಿಪರೀತ ಪುತ್ರಮೋಹಕ್ಕೊಳಗಾಗಿದ್ದ” ಎನ್ನುವ ಭಾವವೇ ಜನಜನಿತವಾಗಿವೆ. ರಾಮಾಯಣವೆಂದರೆ ಕೇವಲ ರಾಮನ ಕಥೆಯೆಂದು ಗ್ರಹಿಸಿದಾಗ ಇಂತಹ ವಿಪರೀತ ಅಭಿಪ್ರಾಯಕ್ಕೆ ಬರುವುದು ಸಹಜವೂ ಹೌದು. ಸ್ವಂತ ಅಸ್ತಿತ್ವವೇ ಇಲ್ಲದವನಂತೆ ಮತ್ತು ದುಃಖದಿಂದ ಕೊರಗಿ ಅಸುನೀಗುವ ದಶರಥನ ಮೇಲೆ ಅನುಕಂಪಕ್ಕಿಂತ ಇಂಥವನ ಕಾರಣದಿಂದಲೇ ರಾಮ ವನವಾಸಕ್ಕೆ ಹೋಗುವಂತಾಯಿತು ಎಂದು ತಿರಸ್ಕಾರಗೊಳ್ಳುವ ರೀತಿಯಲ್ಲಿ ಆತನ ಪಾತ್ರ ಚಿತ್ರಿತವಾಗಿದೆ. ಆತನ ಪಾತ್ರವೂ ಸಹ ಬಾಲಕಾಂಡ ಮತ್ತು ಅಯೋಧ್ಯಾ ಕಾಂಡಗಳಲ್ಲಿ ಮುಗಿದು ಹೋಗಿಬಿಡುತ್ತದೆ.

ಮುಂದೆ ಯುದ್ಧಕಾಂಡದಲ್ಲಿ ದೇವತೆಗಳ ಮತ್ತು ಬ್ರಹ್ಮನ ಸಂಗಡ ಆತ ಸಶರೀರನಾಗಿ ಬರುವಾಗ ಆತ ಇಂದ್ರನಿಗೆ ಸಮನಾದ ಪದವಿ ಮತ್ತು ಗೌರವದೊಂದಿಗೆ ದೇವರಥದಲ್ಲಿ ಗಮನಿಸಬಹುದು. ಅದು ಆತ ಕೇವಲ ರಾಮನ ತಂದೆಯಾಗಿರುವುದಕ್ಕೆ ಮಾತ್ರವೋ ಹೇಗೆ ಎನ್ನುವ ಸಂಶಯವೂ ಕಾಡಿದರೆ ಅದು ಸಹಜ. ಸುಮಾರು ಇಪ್ಪತ್ನಾಲ್ಕು ಸಾವಿರ ಶ್ಲೋಕಗಳ ಏಳು ಕಾಂಡಗಳ ಮಹಾಕಾವ್ಯವು ಇಡಿಯಾಗಿ ಜನಸಾಮಾನ್ಯರಿಗೆ ಸಿಗುವುದು ಅಷ್ಟು ಸುಲಭವಲ್ಲ. ಹೆಚ್ಚಿನವರಿಗೆ ಅದನ್ನು ಕೇಳುವ ವ್ಯವಧಾನ ಮತ್ತು ಸಮಯವೂ ಇಲ್ಲ. ಮಹಾಕಾವ್ಯದ ವಸ್ತುಗಳನ್ನು ನಾಟಕವನ್ನಾಗಿಸಿ ಅದರಲ್ಲಿ ಬರುವ ವಿಷಯವನ್ನು ಖಂಡ ಖಂಡವನ್ನಾಗಿಸಿ (ವಿಭಾಗಿಸಿ) ಮೊದಲು ಕೊಟ್ಟಿರುವುದು ಪ್ರಾಚೀನ ಸಂಸ್ಕೃತ ನಾಟಕಗಳು ಹಾಗೂ ಯಕ್ಷಗಾನ, ಕೂಚಿಪುಡಿ ಮತ್ತು ಚಾರಣರು ಆಡಿ ತೋರಿಸಿದ ಪ್ರದರ್ಶನಕಲೆಗಳು. ಯಕ್ಷಗಾನದಲ್ಲಿ ಒಂದೊಂದು ಸನ್ನಿವೇಶವನಾಗಿ ಕೊಟ್ಟಿರುವ ಕಥಾಭಾಗವನ್ನು ಪ್ರಸಂಗವೆಂದು ನಿರೂಪಿಸಲ್ಪಟ್ಟಿದೆ.

ಮಹಾಕಾವ್ಯವೊಂದು ರೂಪುಗೊಳ್ಳಬೇಕಾದರೆ ಅದರಲ್ಲಿ ಅನೇಕ ಲಕ್ಷಣಗಳಿರಬೇಕಾಗುತ್ತದೆ. ಕಾವ್ಯಗಳೆಲ್ಲವೂ ರೂಪುಗೊಂಡಿರುವುದರ ಹಿಂದೆ ಶಾಸ್ತ್ರ ಅಂದರೆ ವಿಧಿ, ನಿಷೇಧದ ರಿವಾಜಿದೆ. ಶಾಸ್ತ್ರವೆಂದರೆ ಧರ್ಮ, ಅರ್ಥ ಕಾಮ ಮೋಕ್ಷಗಳೆನ್ನುವ ಪುರುಷಾರ್ಥವನ್ನು ಮುಖ್ಯವಾಗಿ ಬೋಧಿಸುವ ಗ್ರಂಥ. ಇದು ಉಪದೇಶ ರೂಪದಲ್ಲಿ ಇರುತ್ತದೆ. ʼವಿಷ್ಣು ಧರ್ಮೋತ್ತರ ಪುರಾಣʼ ಶಾಸ್ತ್ರ ಮತ್ತು ಕಾವ್ಯದ ಕುರಿತು ವಿವರಿಸುವುದು ಹೀಗೆ –

ಮೋಕ್ಷಸ್ಯ ಯತ್ರೋಪನ್ಯಾಸಃ ಇತಿಹಾಸ ಸ ಉಚ್ಯತೇ
ತದೇವ ಕಾವ್ಯಮಿತ್ಯುಕ್ತಂ ಚೋಪದೇಶಂ ವಿನಾ ಕೃತಂ

ಮೋಕ್ಷವೆಂಬ ಪುರುಷಾರ್ಥವನ್ನೇ ಮುಖ್ಯವಾಗಿ ಬೋಧಿಸುವ ಗ್ರಂಥಕ್ಕೆ ಇತಿಹಾಸವೆಂದು ಹೆಸರು. ಅಂತಹ ಗ್ರಂಥವೇ ಉಪದೇಶರೂಪದಲ್ಲಿರದೇ ಒಬ್ಬಾನೊಬ್ಬ ಮಹಾಪುರುಷನ ಚರಿತ್ರೆಯಾಗಿದ್ದಲ್ಲಿ ಅದು ಕಾವ್ಯವೆಂದು ಹೇಳಲ್ಪಡುತ್ತಾರೆ.

ಮಹಾಕಾವ್ಯವಾಗಬೇಕಾದರೆ ಅಲ್ಲಿ ನಾಯಕ ಮತ್ತು ಪ್ರತಿನಾಯಕನ ಗುಣಗಳ ವಿಸ್ತ್ರತ ವಿವರಗಳಿರಬೇಕು. ಪ್ರಯಾಣ ಸನ್ನದ್ಧನಾದ ಪುರುಷನ ಮತ್ತು ದೂತಪ್ರೇಷಣಾದಿಗಳ ಹಾಗೂ ಯುದ್ಧವೃತ್ತಾಂತದ ವರ್ಣನೆಗಳೆಲ್ಲವನ್ನು ಒಳಗೊಂಡಿರಬೇಕು. ನಾಯಕನ ಅಭ್ಯುದಯದಿಂದ ಕೂಡಿರಬೇಕು. ನಾಯಕ ಸನ್ಮಾರ್ಗಗಾಮಿಯಾಗಿಯೂ ಧರ್ಮವಿಜಯಿಯಾಗಿಯೂ ಇರಬೇಕು. ಹಾಗೇ ಪ್ರತಿನಾಯಕನೂ ಸಹ ಜಗದ್ವಿಜಯಿಯೇ ಆಗಿರಬೇಕು. ದೇಶ, ಪಟ್ಟಣ, ರಾಜರು, ಋತುಗಳು, ಅಗ್ನಿ, ನದಿಗಳು, ಸ್ತ್ರೀಯರು ಇವೆಲ್ಲವೂ ವಿವರಿಸಲ್ಪಟ್ಟಿರಬೇಕು. ಶೃಂಗಾರ, ಹಾಸ್ಯ, ಕರುಣ, ರೌದ್ರ, ವೀರ, ಭೀಭತ್ಸ, ಅದ್ಭುತ ಮತ್ತು ಶಾಂತವೆನ್ನುವ ನವರಸಗಳಿಂದ ಶೋಭಿಸಬೇಕು. ಭರತನ ನಾಟ್ಯ ಶಾಸ್ತ್ರಕ್ಕಿಂತಲೂ ಮೊದಲೇ ರಚಿತವಾಗಿದೆಯೆಂದು ನಂಬಲಾಗಿರುವ “ವಿಷ್ಣು ಧರ್ಮೋತ್ತರ ಪುರಾಣದಲ್ಲಿ” ಶಾಸ್ತ್ರ, ಮಹಾಕಾವ್ಯ ಮತ್ತು ನಾಟಕಗಳ ಲಕ್ಷಣಗಳನ್ನು ಹೀಗೆ ಸ್ಪಷ್ಟವಾಗಿ ವಿಭಾಗಿಸಿ ಹೇಳಿದೆ.

ಮಹಾಕಾವ್ಯ ಲಕ್ಷಣಕ್ಕೆ ಅನುಗುಣವಾಗಿ ವಾಲ್ಮೀಕಿ ರಾಮಾಯಣವನ್ನು ರಚಿಸಿರುವುದನ್ನು ಗಮನಿಸಿದರೆ ಆತನ ಕಾಲದಲ್ಲಿಯೇ ಕಾವ್ಯಲಕ್ಷಣಗಳು ಪ್ರಚಲಿತದಲ್ಲಿ ಇತ್ತು ಎನ್ನಬಹುದಾಗಿದೆ. ಅಥವಾ ಅದನ್ನು ಆಧಾರವನ್ನಾಗಿರಿಸಿಕೊಂಡು ನಾಟ್ಯಶಾಸ್ತ್ರವನ್ನು ರಚಿಸಿದ್ದಾರೆನ್ನುವ ದುರ್ಬಲವಾದ ವಾದವನ್ನೂ ಕೆಲ ವಿಮರ್ಶಕರು ಅಭಿಪ್ರಾಯ ಪಡುತ್ತಾರೆ. ಅದೇನೆ ಇರಲಿ, ನಾಯಕನ ಚರಿತ್ರೆಯನ್ನು ಹೇಳುವ ಮಹಾಕಾವ್ಯದಲ್ಲಿ ಎಲ್ಲಾ ಪಾತ್ರಗಳೂ ನಾಯಕನ ಗುಣಗಳ ನೆರಳಿನಲ್ಲಿ ಬೆಳೆಯುತ್ತವೆ. ಪೋಷಕ ಪಾತ್ರಗಳ ಗುಣಗಳು ನಾಯಕನನ್ನು ಮೀರಿ ಹೋಗದಂತೆ ಎಚ್ಚರದಿಂದ ಪಾತ್ರವನ್ನು ಹೆಣೆಯಲಾಗುತ್ತದೆ. ಇದಕ್ಕೆ ರಾಜಾ ದಶರಥನ ಪಾತ್ರವೂ ಹೊರತಲ್ಲ. ಮಹಾವಿಷ್ಣು ಸಹಿತವಾಗಿ ದೇವತೆಗಳು ತಮ್ಮ ಅವತಾರಕ್ಕೆ ಕೇಂದ್ರವನ್ನಾಗಿ ಅಯೋಧ್ಯೆಯನ್ನು ಆರಿಸಿಕೊಂಡಾಗ ಅಲ್ಲಿನ ಚಕ್ರವರ್ತಿಯೂ ಘನತೆಯಿಂದಲೇ ಕೂಡಿರಬೇಕಾಗುತ್ತದೆ. ಕೇವಲ ಅಶ್ವಮೇಧ ಯಾಗ ಮತ್ತು ಪುತ್ರಕಾಮೇಷ್ಟಿ ಯಾಗದ ಮೂಲಕ ಅವತಾರಿ ಪುರುಷನಿಗೆ ಕ್ಷೇತ್ರವಾಗಲು ಸಾಧ್ಯವಿಲ್ಲ.

ayodhya

ರಾಮಾಯಣದ ಮೂಲತಃ ಮಾನವ ಸಂಬಂಧಗಳ ಗುಣಗಳನ್ನು ಮೈಗೂಡಿಸಿಕೊಂಡ ಕಾವ್ಯ. ಪ್ರತೀ ಪಾತ್ರದಲ್ಲಿಯೂ ಗುಣ, ದೋಷ ಎರಡೂ ಇವೆ. ರಾಮ ಆದರ್ಶ ಪುರುಷ ಹೇಗೋ ಅದೇ ರೀತಿ ತನ್ನ ನಿಷ್ಠುರ ನಡವಳಿಕೆಯ ಮೂಲಕ ತನ್ನನ್ನು ನೆಚ್ಚಿಕೊಂಡ ಪಾತ್ರಗಳಿಗೆ ನೋವನ್ನು ಅದೇ ಪ್ರಮಾಣದಲ್ಲಿ ಕೊಟ್ಟಂತವನೂ ಹೌದು. ಇದನ್ನು ದಶರಥನಿಂದ ಪ್ರಾರಂಭಿಸಿ ಕೊನೆಗೆ ಲಕ್ಷ್ಮಣನಿಗೆ ದೇಹಾಂತ ಶಿಕ್ಷೆಯನ್ನು ವಿಧಿಸುವವವರೆಗೆ ನಿರಂತರವಾಗಿ ಗಮನಿಸಬಹುದಾಗಿದೆ. ಅದಕ್ಕೆ ಕಾರಣಗಳನ್ನು ಹುಡುಕಿ ರಾಮನ ಆದರ್ಶವನ್ನು ಲೋಕಕ್ಕೆ ವಿಮರ್ಶಕರು ಕೊಟ್ಟಿದ್ದಾರೆ ಎನ್ನುವುದೂ ಸಹ ಅಷ್ಟೇ ಗಮನಾರ್ಹ. ಮನುಷ್ಯರಲ್ಲಿ ಪರಿಪೂರ್ಣನಾದ ವ್ಯಕ್ತಿಗಳು ಇದ್ದಾರೆಯೋ ಎನ್ನುವ ವಾಲ್ಮೀಕಿಯ ಸಂಶಯಕ್ಕೆ (ಕೋ ನ್ವಸ್ಮಿನ್ಸಾಂಪ್ರತಂ ಲೋಕೇ ಗುಣವಾನ್ಕಶ್ಚ ವೀರ್ಯವಾನ್) ನಾರದರು ಆತನ ಹದಿನಾರು ಗುಣಗಳನ್ನು ವರ್ಣಿಸಿ ರಾಮಾಯಣ ಕಥೆಯನ್ನು ಹೇಳಿರುವ ವಿಷಯವನ್ನು ಈ ಹಿಂದೆಯೇ ಪ್ರಸ್ತಾಪಿಸಿಯಾಗಿದೆ. ಇಂತಹ ಮಹಾಪುರುಷನಿಗೆ ಜನ್ಮವನ್ನು ಕೊಟ್ಟ ದಶರಥನೂ ಸಹ ಸಾಮಾನ್ಯರ ತಿಳುವಳಿಕೆಯಂತೆ ಅಳುಮುಂಜಿಯಾಗಿರದೇ, ಸಾಕಷ್ಟು ಘನವೆತ್ತ ವ್ಯಕ್ತಿತ್ವದವನೇ ಆಗಿದ್ದ ಎನ್ನುವುದನ್ನು ರಾಮಾಯಣದ ಪ್ರಾರಂಭದಲ್ಲಿಯೇ ವಾಲ್ಮೀಕಿ ವಿವರಿಸುತ್ತಾರೆ.

ದಶರಥನಲ್ಲಿರುವ ಮೊದಲ ಗುಣವೇ ಆತ ವೇದವಿತ್ ಎನ್ನುವುದರ ಮೂಲಕವಾಗಿ. ವೇದ್ ಎನ್ನುವುದು ಜ್ಞಾನಿ ಎನ್ನುವ ಅರ್ಥದಲ್ಲಿಯೂ ಬಳಸಲಾಗುತ್ತಿದೆ. 2. ಸರ್ವಜ್ಞನಾಗಿದ್ದನು, 3. ಮುಂದೆ ಬರಬಹುದಾದ ವಿಪ್ಪತ್ತನ್ನು ಗ್ರಹಿಸಿ ಅದಕ್ಕೆ ತಕ್ಕ ಪರಿಹಾರವನ್ನು ಮೊದಲೇ ಕೈಗೊಳ್ಳುತ್ತಿದ್ದನು. (Pro Active), 4, ಮಹಾತೇಜಸ್ವಿಯು, 5, ಪೌರಜಾನಪದಪ್ರಿಯ – ಆತ ನಗರವಾಸಿ ಮತ್ತು ಗ್ರಾಮವಾಸಿಗಳಿಗೂ ಪ್ರೀತಿಪಾತ್ರ ದೊರೆಯಾಗಿದ್ದನು. ಆತನ ಮಿತ್ರರಲ್ಲಿ ಕೇವಲ ಕ್ಷತ್ರಿಯರು ಮಾತ್ರ ಇರದೇ ಗುಹನಂತಹ ಬೇಡರು, ಜಟಾಯು, ಸಂಪಾತಿಯಂತಹ ಪಕ್ಷಿಗಳೂ ಸಹ ಸೇರಿದ್ದರು. ಎಲ್ಲರನ್ನೂ ಸಮಭಾವ ಸಮಚಿತ್ತದಿಂದ ಆದರಿಸುವ ದೊರೆ ಆತ ಆಗಿದ್ದನು. 6. ಇಕ್ಷ್ವಾಕುವಂಶವೆಂದರೆ ಆ ಕಾಲದ ಶ್ರೇಷ್ಠ ವಂಶವಾಗಿತ್ತು. ಮನುವಿನಿಂದ ದಶರಥನ ವರೆಗೆ ಸುಮಾರು ಎಪ್ಪತ್ತು ರಾಜರುಗಳು ಈ ವಂಶವನ್ನು ಆಳಿಹೋಗಿದ್ದರು. ಈ ಸಂಖ್ಯೆ ನಿಖರವಲ್ಲ, ವಿವಿಧ ರಾಮಾಯಣದಲ್ಲಿ ಅನೇಕ ವಿಧಗಳಲ್ಲಿ ವಿವರಿಸಲಾಗಿದೆ. ಆದರೂ ಬಲು ದೀರ್ಘವಾದ ಶೂರರ ಪರಂಪರೆಯನ್ನು ಈ ವಂಶ ಹೊಂದಿತ್ತು. ಅಂತಹ ಇಕ್ಷಾಕುಗಳಲ್ಲಿಯೇ ಅತಿರಥನೆನ್ನುವ ಖ್ಯಾತಿಯನ್ನು ಧಶರಥ ಹೊಂದಿದ್ದನು. ಹತ್ತುಸಾವಿರ ಮಹಾರಥಿಗಳನ್ನು ಏಕಾಂಗಿಯಾಗಿ ಎದುರಿಸುವ ಸಾಮರ್ಥ್ಯ ಆತನಿಗಿತ್ತು. 7. ಲೋಕದಲ್ಲಿ ಶ್ರೇಷ್ಠವೆನಿಸಿದ ಯಾಗಗಳನ್ನೆಲ್ಲವನ್ನೂ ದಶರಥ ನೆರವೇರಿಸಿದ್ದನು. ರಾಜಸೂಯ ಯಾಗವನ್ನೂ ಮಾಡಿದ್ದ ಎನ್ನುವುದನ್ನು ಸೀತೆ ಚಿತ್ರಕೂಟದಲ್ಲಿ ದಶರಥನ ಗುಣಗಳನ್ನು ನೆನೆದು ದುಃಖಿಸುವಾಗ ಹೇಳುತ್ತಾಳೆ. 8. ಆತ ಧರ್ಮರಥ ಅಂದರೆ ಸದಾ ಕಾಲ ಧರ್ಮದಲ್ಲಿ ತನ್ನ ಬುದ್ಧಿಯನ್ನು ಸ್ಥಿರವಾಗಿ ಇಟ್ಟವನಾಗಿದ್ದನು, 9. ದಕ್ಷ ಆಡಳಿತದ ಮೂಲಕ ಪ್ರಜೆಗಳನ್ನು ತನ್ನ ವಶದಲ್ಲಿ ಇಟ್ಟುಕೊಂಡಿದ್ದನು. ಪ್ರಜೆಗಳಿಗೆ ಅನುಕೂಲವಾಗುವಂತೆ ಕೆರೆ, ಬಾವಿಗಳನ್ನು ತೋಡಿಸಿದ ಪ್ರಜಾನುರಾಗಿ ದೊರೆಯಾಗಿದ್ದನು. 10. ಕ್ಷತ್ರಿಯ ಧರ್ಮಗಳನ್ನು ನುರಿತವನಾದರೂ ಧರ್ಮದ ವಿಷಯದಲ್ಲಿ ಮಹರ್ಷಿಗಳಿಗೆ ಸಮನಾಗಿದ್ದನು. ಮಹರ್ಷಿಕಲ್ಪನೆನ್ನುವ ಗೌರವಕ್ಕೆ ಪಾತ್ರನಾಗಿದ್ದನು. 11. ಆತ್ಮಬಲ, ತೇಜೋ ಬಲ ಮತ್ತು ಜ್ಞಾನಬಲವುಳ್ಳವನಾಗಿದ್ದನು. ಈ ಕಾರಣಕ್ಕೆ ಮೂರು ಲೋಕದಲ್ಲಿಯೂ ಕೀರ್ತಿಯನ್ನು ಗಳಿಸಿಕೊಂಡಿದ್ದನು. ಶತ್ರುಗಳನ್ನು ನಿಗ್ರಹಮಾಡುವ ಆತನ ಸಾಮರ್ಥ್ಯದ ಕಾರಣದಿಂದ ಆತನನ್ನು ನಿಹತಾಮಿತ್ರನೆಂದು ಕರೆಯುತ್ತಾರೆ. ಸದ್ವಂಶದಲ್ಲಿ ಜನಿಸಿದವರನ್ನು ಮತ್ತು ಸುಗುಣ ಸಂಪನ್ನರನ್ನು ತನ್ನ ಸ್ನೇಹಿತರನಾಗಿಸಿಕೊಳ್ಳುವುದರಲ್ಲಿ ಹಿಂದೆ ಮುಂದೆ ನೋಡುತ್ತಿರಲಿಲ್ಲ. 12. ಮನುಷ್ಯರು ಪಾಲಿಸಬೇಕಾದ ದೇವಋಣ, ಪಿತೃ ಋಣ, ಋಷಿ ಋಣಗಳೆನ್ನುವ ಮೂರು ಋಣಗಳ ಜೊತೆಗೆ ಕ್ಷತ್ರಿಯರು ಪಾಲಿಸಬೇಕಾದ ವಿಪ್ರಋಣ ಮತ್ತು (ಬ್ರಾಹ್ಮಣರಿಗೆ ದಾನಧರ್ಮಮಾಡುವ ಮೂಲಕ) ಅತ್ಮಋಣ – ವಿಹತವಾದ ಸುಖಭೋಗಗಳನ್ನು ಅನುಭವಿಸುವುದು ಇವುಗಳನ್ನು ಆತ ಸದಾಕಾಲದಲ್ಲಿಯೂ ಪಾಲಿಸುತ್ತಿದ್ದನು. 13. ಧನ ಮತ್ತು ಅನರ್ಘ್ಯವಾದ ವಸ್ತುಗಳ ಸಂಗ್ರಹಣೆಯಲ್ಲಿ ಆತ ಕುಬೇರ ಮತ್ತು ಇಂದ್ರನಿಗೆ ಸಮನಾದ ದೊರೆಯೆನಿಸಿದ್ದನು. 14. ಹಿಂದೆ ವೈವಸ್ವತ ಮನುವು ಮಹಾ ತೇಜಸ್ಸಿನಿಂದ ಕೂಡಿದವನಾಗಿ ಲೋಕವನ್ನು ಹೇಗೆ ರಕ್ಷಣೆಯನ್ನು ಮಾಡುತ್ತಿದ್ದನೋ ಅದೇ ರೀತಿಯಲ್ಲಿ ಮಾನವಕುಲಾವತಂಸನಾದ ದಶರಥನೂ ಅಯೋಧ್ಯೆಯಲ್ಲಿ ಸತ್ಯವ್ರತನಾಗಿ ಧರ್ಮಾರ್ಥಕಾಮಗಳೆಂಬ ಪುರುಷಾರ್ಥವನ್ನು ಅನುಸರಿಸುತ್ತಾ ಅಮರಾವತಿಯನ್ನು ಪಾಲನೆ ಮಾಡುತ್ತಿದ್ದ ಇಂದ್ರನಂತೆಯೆ ಶೋಭಿಸುತ್ತಿದ್ದನು.

ಭಗವಂತ ತನ್ನ ಅವತಾರಕ್ಕಾಗಿ ಒಂದು ಕ್ಷೇತ್ರವನ್ನು ಆಯ್ದುಕೊಳ್ಳುವಾಗ ದುರ್ಬಲರಾದವರನ್ನು ಆಯ್ಕೆ ಮಾಡಿಕೊಂಡರೆ ಕಾವ್ಯ ವೈಕಲತೆಯಿಂದ ಸೊರಗುತ್ತದೆ. ವಾಲ್ಮೀಕಿಯಲ್ಲಿ ಈ ಪ್ರಜ್ಞೆ ಸದಾ ಜಾಗ್ರತವಾಗಿದೆ. ರಾಮಾಯಣ ಮಹಾ ಕಾವ್ಯವಾಗುವ ಜೊತೆಗೆ ಸನಾತನ ಪರಂಪರೆಯ ಇತಿಹಾಸವೂ ಆಗಿದೆ. ಶಾಸ್ತ್ರಗಳಲ್ಲಿ ಧರ್ಮವನ್ನು ಮಂತ್ರಗಳ ಮೂಲಕ ಹೇಳುತ್ತಾರೆ. ಈ ಮಂತ್ರಗಳ ಅರ್ಥವನ್ನು, ಸೃಷ್ಟಿ, ಸಂಹಾರ, ಅವುಗಳನ್ನು ವಿನಿಯೋಗಿಸುವ ವಿಧಾನವನ್ನು ವಿವರಿಸುವುದೇ ಬ್ರಾಹ್ಮಣಗಳು. ಇದು ಕಾವ್ಯಕ್ಕೆ ಬಂದಾಗ ಪ್ರಕ್ರಿಯಾ, ಉಪೋದ್ಘಾತ, ಅನುಸಂಗ ಮತ್ತು ಉಪಸಂಹಾರ ಹೀಗೆ ನಾಲ್ಕು ಬಗೆಗಳಿವೆ. ಈ ಎಲ್ಲ ಸಂಗತಿಗಳನ್ನು ಅರ್ಥ ಮಾಡಿಕೊಂಡಾಗ ದಶರಥನ ಶ್ರೇಷ್ಠತೆಯನ್ನು ಮನಗಾಣ ಬಹುದಾಗಿದೆ.

ದಶರಥನ ರಾಜ್ಯಭಾರ –

ಆಡಳಿತದ ವಿಷಯದಲ್ಲಿ ದಶರಥ ಸಮರ್ಥ ಆಡಳಿತಗಾರನಾಗಿದ್ದ. ಆತನ ಕಾಲದಲ್ಲಿ ಪ್ರಜೆಗಳು ನಿತ್ಯಸಂತುಷ್ಟರಾಗಿದ್ದರು. ಎಲ್ಲರೂ ಎಲ್ಲಾ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದರು. ತಮಗೆ ಸಿಕ್ಕಿದುದರಲ್ಲಿಯೇ ನಿತ್ಯತೃಪ್ತಿಯನ್ನು ಹೊಂದಿದ್ದರು. ಅಯೋಧ್ಯೆಯಲ್ಲಿ ವಿಶೇಷ ಕಾಮಾಸಕ್ತರಾಗಲಿ, ಕ್ರೂರಕರ್ಮಿಗಳಾಗಲಿ, ಅಜ್ಞರಾಗಲಿ, ನಾಸ್ತಿಕರಾಗಲಿ, ದರಿದ್ರರಾಗಲಿ ಇರಲಿಲ್ಲ. ಅಯೋಧ್ಯೆಯ ವರ್ಣನೆಯನ್ನು ಮಾಡುವಾಗ ದಶರಥನ ಸೇನೆ ಮತ್ತು ಅಯೋಧ್ಯೆಯ ಜನರ ಗುಣಸ್ವಭಾವವನ್ನು ವಿವರಿಸಿದ್ದೇನೆ. ಯಾವುದೇ ರಾಜನ ಆಡಳಿತ ಬಿಗಿಯಾಗಬೇಕಾದರೆ ಅದಕ್ಕೆ ಸಂಬಂಧಿಸಿದ ಅಧಿಕಾರ ವರ್ಗ ದಕ್ಷತೆಯಿಂದ ಕೂಡಿರಬೇಕು, ಯೋಗ್ಯರಾದ ಸಚಿವರು ಮತ್ತು ಧರ್ಮಮಾರ್ಗದಲ್ಲಿ ರಾಜ ಸದಾ ಇರುವಂತೆ ನೋಡಿಕೊಳ್ಳುವ ಪುರೋಹಿತರು ಬಹು ಮುಖ್ಯ. ರಾಜನಿಗೆ ಕೆಟ್ಟ ಹೆಸರಾಗಲಿ, ಒಳ್ಳೆಯ ಹೆಸರಾಗಲಿ ಬರುವುದರಲ್ಲಿ ಅಮಾತ್ಯ ಮತ್ತು ಪುರೋಹಿತರ ಪಾತ್ರ ದೊಡ್ಡದು. ದಶರಥನಿಗೆ ಸಹಾಯಮಾಡಲು ಮಂತ್ರಾಲೋಚನೆಯಲ್ಲಿ ಸಮರ್ಥರಾದ, ಸದಾ ಕಾರ್ಯತತ್ಪರರಾದ ಮತ್ತು ಪರರ ಮನಸ್ಸಿನಲ್ಲಿರುವ ವಿಷಯಗಳನ್ನು ಅವರ ಮುಖಭಾವದಿಂದಲೇ ತಿಳಿಯಬಲ್ಲ ಇಂಗಿತಜ್ಞರಾದ ಧೃಷ್ಟಿ, ಜಯಂತ, ವಿಜಯ, ಸಿದ್ಧಾರ್ಥ, ಅರ್ಥಸಾಧಕ, ಅಶೋಕ, ಮಂತ್ರಪಾಲ ಮತ್ತು ಸುಮಂತ್ರ ಎನ್ನುವ ಎಂಟು ಮಂತ್ರಿಗಳು ಆತನ ಆಸ್ಥಾನದಲ್ಲಿ ಇದ್ದರು. ಅವರು ವಂಶಪರಂಪರೆಯಿಂದ ಬಂದವರು ಎನ್ನುವ ಕಾರಣಕ್ಕಾಗಿ ತಮ್ಮ ಹುದ್ದೆಯಲ್ಲಿ ಇದ್ದವರಲ್ಲ. ಹಾಗಂತ ರಾಜಕಾರಣಕ್ಕೆ ಹೊಸಬರೂ ಆಗಿರಲಿಲ್ಲ.

king dasharatha

ಯಾರನ್ನಾದರೂ ಹುದ್ದೆಗೆ ನಿಯಕ್ತಿಗೊಳಿಸುವ ಮುನ್ನ ಅವರನ್ನು ಚನ್ನಾಗಿ ಪರೀಕ್ಷಿಸಲಾಗುತ್ತಿತ್ತು. ಅರ್ಥಶಾಸ್ತ್ರದಲ್ಲಿ ರಾಜನ ಆಸ್ಥಾನದಲ್ಲಿರುವವರನ್ನು ಪರೀಕ್ಷಿಸುವ ವಿಧಾನವನ್ನು ಹೇಳುವಾಗ ಧರ್ಮಾದಿ ಉಪಧಾ, ಅರ್ಥೋಪಧಾ, ಕಾಮೋಪಧಾ, ಭಯೋಪಧಾಗಳ ಮೂಲಕ ಪರೀಕ್ಷಿಸಬೇಕು ಎಂದು ಹೇಳುತ್ತದೆ. ಅಂದರೆ ರಾಜನಲ್ಲಿ ಅಧರ್ಮವನ್ನು ಕಲ್ಪಿಸಿ ಅವನನ್ನು ಪಟ್ಟದಿಂದ ಇಳಿಸೋಣವೇ ಎನ್ನುವ ಆಮಿಷಕ್ಕೆ ಒಡ್ಡಿದಾಗಲೂ ಅದನ್ನು ಯಾವಾತ ತಿರಸ್ಕರಿಸುತ್ತಾನೋ, ಹಣದ ಆಮಿಷದ ಮೂಲಕ ರಾಜನಿಂದ ಬೇರ್ಪಡಿಸಲು ಸಾಧ್ಯವೋ ಎನ್ನುವುದನ್ನು ಪರೀಕ್ಷಿಸುವುದು, ರಾಣಿ ನಿನ್ನನ್ನು ಬಯಸಿದ್ದಾಳೆ, ಅವಳನ್ನು ಸೇರಿದರೆ ನಿನಗೆ ಕೈತುಂಬಾ ಹಣ ಸಿಗುವುದು ಎನ್ನುವ ಆಮಿಷವನ್ನು ಒಡ್ಡಿದಾಗಲೂ ಅದನ್ನು ತಿರಸ್ಕರಿಸುವಂಥವರು, ರಾಜನಿಂದ ಅವಮಾನಿತರಾದ (ಹಾಗೇ ನಟಿಸಿ) ಅಮಾತ್ಯನಾದವ ಇತರರನ್ನು ನಾವೆಯಲ್ಲಿ ಕರೆದುಕೊಂಡು ಹೋಗಿ ರಾಜನ ವಿರುದ್ಧ ಅವರನ್ನು ಎತ್ತಿಕಟ್ಟಿದಾಗ ಯಾರು ತಿರಸ್ಕರಿಸಿ ರಾಜನಿಗೆ ನಿಷ್ಠೆಯುಳ್ಳವರಾಗಿರುತ್ತಾರೆಯೋ ಅಂಥವರು ಮಾತ್ರ ಅಮಾತ್ಯರಾಗಲು ಯೋಗ್ಯರು ಎನ್ನುತ್ತದೆ. ದಶರಥನ ಈ ಅಷ್ಟ ಮಂತ್ರಿಗಳು ರಾಜದ್ರೋಹ-ಪ್ರಜಾದ್ರೋಹ-ಸ್ವಾರ್ಥಗಳಿಂದ ಮುಕ್ತರಾಗಿದ್ದರು. ರಾಮನನ್ನು ಅರಣ್ಯಕ್ಕೆ ಕಳಿಸು ಎನ್ನುವ ಸಂದರ್ಭದಲ್ಲಿ ಸುಮಂತ್ರ ರಾಜನ ಎದುರಿಗೇ ಕೈಕೇಯನ್ನು ದೂಷಿಸುವಾಗ ಮತ್ತು ವಶಿಷ್ಠರು ಆಕೆಯನ್ನು ಕಟುವಾಗಿ ನಿಂದಿಸುವಾಗ ಅವರ ರಾಜನಿಷ್ಟೆ, ನಿಸ್ವಾರ್ಥಪರತೆ ಎದ್ದು ಕಾಣುತ್ತದೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಗಂಧವತಿಗೆ ಸಿರಿಗಂಧಲೇಪನನ ಆಗಮನ

ಅವರೆಲ್ಲ ವಿದ್ಯಾವಿನೀತಾ- ಎಲ್ಲ ವಿಷಯಗಳಲ್ಲಿಯೂ ಪಾರಂಗತರಾಗಿದ್ದರು. ಹಿಮನ್ತಃ-ಅಕಾರ್ಯವನ್ನು ಮಾಡಲು ಲಜ್ಜೆಪಡುತ್ತಿದ್ದರು, ಕುಶಲಾ-ನೀತಿಶಾಸ್ತ್ರ ಕೋವಿದರು, ನಿಯತೇಂದ್ರಿಯಾ-ಇಂದ್ರಿಯ ನಿಗ್ರಹವನ್ನು ಸ್ಥಾಪಿಸಿದವರು, ಶ್ರೀಮನ್ತಃ – ಭಾಗ್ಯಸಂಪನ್ನರು, ನೀತಿ ಶಾಸ್ತ್ರ ಬಲ್ಲವರು, ದೃಢವಿಕ್ರಮಿಗಳು, ಕೀರ್ತಿವಂತರು, ಪ್ರಣಿಹೀತಾ-ಕೊಟ್ಟಮಾತಿನಂತೆ ನಡೆಯುವವರು, ಎಲ್ಲಕ್ಕಿಂತ ಮುಖ್ಯವಾಗಿ ತಾಳ್ಮೆಯುಳ್ಳವರು, ಸದಾ ನಗುಮುಖದಿಂದಲೇ ಮಾತನಾಡುತ್ತಾ ಎದುರಿನಲ್ಲಿರುವವರ ಅಂತರಂಗವನ್ನು ಶೋಧಿಸುವಂತವರು, ಆಡಿದ ಮಾತಿನಂತೆ ನಡೆಯುವವರು-ಯಥಾವಚನಕಾರಿಣಃ ಹೀಗೆ ರಾಜಕಾರಣದ ಸಮಗ್ರವನ್ನು ಅರ್ಥಮಾಡಿಕೊಂಡವರಾಗಿದ್ದರು. ತಮ್ಮ ಮಕ್ಕಳೇ ತಪ್ಪು ಮಾಡಿದರೂ ಅವರನ್ನು ಶಿಕ್ಷಿಸುವಂತಹ ದಂಡಕೋವಿದರಾಗಿದ್ದರು.. ಹಾಗಂತ ಇವರನ್ನು ನೇಮಿಸಿಕೊಳ್ಳುವಾಗ ಸುಖಾಸುಮ್ಮನೆ ನೇಮಿಸಿಕೂಳ್ಳಲಿಲ್ಲ. ಅವರ ರಾಜನಿಷ್ಠೆಯನ್ನು ಚನ್ನಾಗಿ ಪರೀಕ್ಷಿಸಿದ–ಸೌಹ್ಯದೇಷು ಪರೀಕ್ಷಿತಾಃ, ನಂತರವೇ ಅವರನ್ನು ಆಯಾ ಹುದ್ಧೆಗಳಿಗೆ ನಿಯುಕ್ತಿಗೊಳಿಸಲಾಗುತ್ತಿತ್ತು. ದಶರಥ ನಿಧನನಾದಾಗ ಭರತನನ್ನು ಕರೆತರಲು ಹೋದವರಲ್ಲಿ ಅಶೋಕ ಮತ್ತು ವಿಜಯ ಪ್ರಮುಖರಾದವರು. ಆಗ ಅವರು ಭರತ ಎಷ್ಟೇ ಒತ್ತಾಯಿಸಿದರೂ ಅಯೋಧ್ಯೆಯಲ್ಲಿ ಏನಾಗಿದೆ ಎನ್ನುವುದನ್ನು ಹೇಳದೇ ಆತನನ್ನು ಅಯೋಧ್ಯೆಗೆ ಕರೆತರುವಲ್ಲಿ ನಡೆಸಿದ ಕಾರ್ಯವನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ಪ್ರಾಚೀನ ಕಾಲದಲ್ಲಿ ಧಾರ್ಮಿಕ ವಿಚಾರದಲ್ಲಿಯೂ ರಾಜನ ಆಸ್ಥಾನದಲ್ಲಿ ತುಂಬಾ ಮಹತ್ವವಿತ್ತು. ಈ ಪುರೋಹಿತ ವರ್ಗ ತಮಗಾಗಿ ಏನನ್ನೂ ಬಯಸುತ್ತಿರಲಿಲ್ಲ. ರಾಜ ತಪ್ಪಿ ನಡೆದಾಗ ಆತನನ್ನು ಎಚ್ಚರಿಸಿ ಅಗತ್ಯಬಿದ್ದರೆ ಆತನನ್ನು ಅಧಿಕಾರದಿಂದ ಇಳಿಸುವ “ಧರ್ಮದಂಡ್ಯೋಸಿ” ಧರ್ಮದಂಡವನ್ನು ಹೊಂದಿದ್ದರು. ವಶಿಷ್ಠ ಮತ್ತು ವಾಮದೇವರೆನ್ನುವ ಇಬ್ಬರು ಪುರೋಹಿತರಾಗಿ ಅಯೋಧ್ಯೆಯ ಹಿತವನ್ನು ಸದಾಕಾಲವೂ ಬಯಸಿದ್ದರು. ವಸಿಷ್ಠರೂ ಸಹ ನಿಷ್ಟುರವಾದಿಗಳು. ತ್ರಿಶಂಕು ತನಗಾಗಿ ಇಂದ್ರಪದವಿಯ ಯಜ್ಞವನ್ನು ಮಾಡಿ ಎಂದಾಗ ನಿಷ್ಟುರವಾಗಿ ತಿರಸ್ಕರಿಸಿದ್ದರು. ಶಶಾದನೆನ್ನುವವ ಇಕ್ಷ್ವಾಕುವಿನ ಮಗ. ಆತ ನಡತೆ ತಪ್ಪಿದಾಗ ಆತನಿಗೆ ಶಿಕ್ಷೆ ವಿಧಸಲೇಬೇಕು ಎಂದು ಇಕ್ಷ್ವಾಕುವಿಗೆ ಹೇಳಿದವರು. ಇಲ್ಲಿ ನೆನಪಿಡಬೇಕಾದದ್ದು ವಸಿಷ್ಠನೆನ್ನುವುದು ಒಂದು ಪರಂಪರೆ. ವಂಶವಾಹಿನಿ. ಶಂಕರಪೀಠವನ್ನೇರುವ ಎಲ್ಲರೂ ಶಂಕರಾಚಾರ್ಯರು ಎಂದು ಕರೆಯಿಸಿಕೊಳ್ಳುವ ಹಾಗೆ, ಆಗಿನ ಕಾಲದಲ್ಲಿ ಬ್ರಹ್ಮರ್ಷಿಗಳನ್ನು ಅದೇ ಹೆಸರಿನಿಂದ ಕರೆಯಲಾಗುತ್ತಿತ್ತು ಎನ್ನಬಹುದು. ನಂತರ ಇದೇ ಗೋತ್ರವಾಗಿ ಬದಲಾಗಿರಬೇಕು. ಹೀಗೆ ಒಂದು ಪ್ರಬಲ ರಾಜ್ಯವೊಂದರ ಅಧಿಕಾರಿಯಾಗಿ ದಶರಥ ಆಳುತ್ತಿದ್ದ. ರಾಮನಂತವ ಅವತರಿಸಬೇಕಾದ ಕ್ಷೇತ್ರಕ್ಕೆ ಆ ಕಾಲದಲ್ಲಿ ಭೂಮಂಡಲದಲ್ಲಿ ಇದಕ್ಕಿಂತ ಮತ್ತೊಂದು ಯುಕ್ತವಾದ ಮನೆತನವಿರಲಿಲ್ಲವೆನ್ನುವುದನ್ನು ವಾಲ್ಮೀಕಿ ಇಲ್ಲಿ ತಿಳಿಸುತ್ತಾನೆ.

ಮುಂದಿನ ಸಂಚಿಕೆಯಲ್ಲಿ ಆತನ ವ್ಯಕ್ತಿತ್ವದ ವಿಶೇಷಗಳ ಕುರಿತು ನೋಡೋಣ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಾವತಾರಕ್ಕೊಂದು ಪೀಠಿಕಾ ಪ್ರಕರಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ದಶಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶುಕ್ರವಾರವು ಮೀನ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅನಗತ್ಯವಾಗಿ ಮಾನಸಿಕ ಒತ್ತಡ ತಂದುಕೊಳ್ಳುವುದು ಬೇಡ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು. ಮಿಥುನ ರಾಶಿಯವರು ಅನಾವಶ್ಯಕ ವಿಚಾರಗಳಿಂದ ಮಾನಸಿಕವಾಗಿ ವಿಚಲಿತರಾಗುವುದು ಬೇಡ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (03-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ದಶಮಿ 23:23 ವಾರ: ಶುಕ್ರವಾರ
ನಕ್ಷತ್ರ: ಶತಭಿಷಾ 24:05 ಯೋಗ: ಬ್ರಹ್ಮ 14:17
ಕರಣ: ವಣಿಜ 12:40 ಅಮೃತಕಾಲ: ಸಂಜೆ 05:25 ರಿಂದ 06:54
ದಿನದ ವಿಶೇಷ: ಚಂದ್ರಮೌಳೇಶ್ವರ ಉತ್ಸವ

ಸೂರ್ಯೋದಯ : 05:58   ಸೂರ್ಯಾಸ್ತ : 06:35

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನಗತ್ಯವಾಗಿ ಮಾನಸಿಕ ಒತ್ತಡ ತಂದುಕೊಳ್ಳುವುದು ಬೇಡ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಉತ್ಸಾಹದಿಂದ ಕಾಲ ಕಳೆಯುವಿರಿ. ಯಾರಾದರೂ ಆರ್ಥಿಕ ಸಹಾಯವನ್ನು ಕೇಳಬಹುದು. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ‌ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ:ಅನಾವಶ್ಯಕ ವಿಚಾರಗಳಿಂದ ಮಾನಸಿಕವಾಗಿ ವಿಚಲಿತರಾಗುವುದು ಬೇಡ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಉತ್ತಮ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ:ಅನೇಕ ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುರಿ. ಸಂಗಾತಿಯೊಂದಿಗೆ ಪ್ರಮುಖ ಯೋಜನೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ವಿಚಲಿತರಾಗುವಂತೆ ಮಾಡಬಹುದು. ಕುಲ ದೇವರ ಆರಾಧನೆ, ಕ್ಷೇತ್ರ ದರ್ಶನದಿಂದ ಮಾನಸಿಕ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಜವಾಬ್ದಾರಿ ಹೆಚ್ಚಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬ ಸದಸ್ಯರ ಬೆಂಬಲ ದೊರೆಯಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಮಾನಸಿಕ ಒತ್ತಡದಿಂದ ದೂರವಿರಲು ಯೋಗ, ಪ್ರಾಣಾಯಾಮ, ಧ್ಯಾನ ಮಾಡಿ. ಆರ್ಥಿಕ ಸಹಾಯ ಬೇಡುವ ಪರಿಸ್ಥಿತಿ ಬರಬಹುದು. ಆಪ್ತರೊಂದಿಗೆ ಸಮಯ ಕಳೆಯಲು ಅವಕಾಶ ಸಿಗುವುದು. ಕುಟುಂಬದವರ ಸಹಕಾರ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಅನಿರೀಕ್ಷಿತ ಪ್ರಯಾಣ ಬೆಳೆಸಬೇಕಾಗಬಹುದು. ದೇಹದ ಆಯಾಸ ಹೆಚ್ಚಾಗುವ ಸಾಧ್ಯತೆ ಇದೆ. ಒತ್ತಡದಿಂದ ಮನಸ್ಸಿನ ಹತೋಟಿ ತಪ್ಪುವ ಸಾಧ್ಯತೆ ಇದೆ. ತಾಳ್ಮೆ ಅವಶ್ಯಕ. ವ್ಯಾಪಾರ ವ್ಯವಹಾರದಲ್ಲಿ ಇಮ್ಮಡಿ ಲಾಭ. ಆರ್ಥಿಕವಾಗಿ ಬಲಿಷ್ಠರಾಗಿ ಇರುವಿರಿ. ಆದಾಯದ ಮೂಲಗಳು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು:ಆರೋಗ್ಯದ ಕಡೆಗೆ ಹೆಚ್ಚು ಗಮನ ಇರಲಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆಪ್ತರೊಂದಿಗೆ ಸಮಯ ಕಳೆಯವಿರಿ. ಅನೇಕ ಭಿನ್ನಾಭಿಪ್ರಾಯಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡಬಹುದು, ಮಾನಸಿಕ ಆರೋಗ್ಯಕ್ಕಾಗಿ ದತ್ತಾತ್ರೇಯ ಗುರುಗಳ ಆರಾಧನೆ ಮಾಡಿ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಉತ್ತಮ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಅನಾವಶ್ಯಕವಾಗಿ ಒತ್ತಡಕ್ಕೆ ಒಳಗಾಗುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತರಿಂದ ಉಡುಗೊರೆ ಸಿಗುವುದು. ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವ ಬುದ್ಧಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮೀನ: ದೈಹಿಕ ಆರೋಗ್ಯ ಉತ್ತಮ, ಮಾನಸಿಕ ಆರೋಗ್ಯ ವಾಗಿ ಇರಲು ನೀವು ನಡೆದಿರುವ ಘಟನೆ ನೆನಪಿಸಿ ಕೊರಗುವುದು ಬೇಡ. ಸಂಗಾತಿಯ ಮಾತುಗಳು ಅಹಿತಕರ ಎನಿಸಬಹುದು. ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು. ಆಪ್ತರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Lok Sabha Election : ಕುರುಬರಿಗೆ ಟಿಕೆಟ್ ಕೊಡದ ಮೋದಿ ಕಂಬಳಿ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ

Lok Sabha Election: ಬಸವಣ್ಣ ಹುಟ್ಟಿದ ಸ್ಥಳವಾಗಿರುವ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ. 2013 ರಲ್ಲಿ ಬಸವಣ್ಣನವರ ಜನ್ಮದಿಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ. ನನಗೆ ಬಸವಾದಿ ಶರಣರ ತತ್ವಾದರ್ಶಗಳ ಮೇಲೆ ಅಪಾರ ನಂಬಿಕೆಯಿದೆ. ಶರಣರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ.

VISTARANEWS.COM


on

Lok Sabha Election
Koo

ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ (Narendra modi) ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ ಹೇಳಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಅವರು ಇಂದು ಪ್ರಜಾಧ್ವನಿ-02 ಲೋಕಸಭಾ ಚುನಾವಣಾ ಪ್ರಚಾರ (Lok Sabha Election) ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.

ಬಸವಣ್ಣ ಹುಟ್ಟಿದ ಸ್ಥಳವಾಗಿರುವ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ. 2013 ರಲ್ಲಿ ಬಸವಣ್ಣನವರ ಜನ್ಮದಿಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ. ನನಗೆ ಬಸವಾದಿ ಶರಣರ ತತ್ವಾದರ್ಶಗಳ ಮೇಲೆ ಅಪಾರ ನಂಬಿಕೆಯಿದೆ. ಶರಣರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ. ಬಸವಣ್ಣನವರ ವಿಚಾರಧಾರೆಯನ್ನು ಪಾಲಿಸಬೇಕೆಂಬ ಉದ್ದೇಶದಿಂದ ಅವರ ಭಾವಚಿತ್ರವನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಇಡಬೇಕೆಂದು ಆದೇಶ ಮಾಡಿದೆ. ಜಾತಿ ವರ್ಗ ವ್ಯವಸ್ಥೆ ತೊಲಗಿ ಸಮಾನತೆ ಸ್ಥಾಪನೆಯಾಗಿ, ಜಾತ್ಯಾತೀತ ಸಮಾಜ ನಿರ್ಮಾಣವಾಗಬೇಕೆಂಬ ಆಶಯವನ್ನು ಬಸವಣ್ಣನವರು ಹೊಂದಿದ್ದರು. ವಿಶ್ವಗುರು ಬಸವಣ್ಣನವರನ್ನು ‘ಸಾಂಸ್ಕೃತಿಕ ನಾಯಕ’ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿದೆ. ಈ ಕಾರ್ಯವನ್ನು ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರಾಗಲಿ ಮಾಡಲಿಲ್ಲ ಎಂದರು.

ಮೋದಿಯವರು ಕಂಬಳಿ ಹಾಕಿಕೊಂಡು ಮಾಡಿದ ಭಾಷಣ ಕೇವಲ ನಾಟಕ

ಕಾಂಗ್ರೆಸ್ ನವರು ಶಿವಾಜಿ ಮಹಾರಾಜರು ಹಾಗೂ ಕಿತ್ತೂರು ರಾಣಿ ಚೆನ್ನಮ್ಮನಿಗೆ ಗೌರವ ನೀಡಲಿಲ್ಲ ಎಂದು ಮೋದಿಯವರು ಸುಳ್ಳು ಹೇಳಿದ್ದರು , ಆದರೆ ಸರ್ಕಾರದ ವತಿಯಿಂದ ಕಿತ್ತೂರು ಚೆನ್ನಮ್ಮ ದಿನಾಚರಣೆಯನ್ನು ಆಚರಿಸಬೇಕೆಂಬ ಆದೇಶವನ್ನು ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರವೇ. ಮೋದಿಯವರು ಕರಿಕಂಬಳಿ ವೇಷ ಹಾಕಿಕೊಂಡು ಭಾಷಣ ಮಾಡಿರುವುದು ಕೇವಲ ನಾಟಕವೇ ಹೊರತು, ಕುರುಬ ಸಮುದಾಯದ ಮೇಲಿನ ಪ್ರೀತಿಯಿಂದಲ್ಲ. ಇವರ ವೇಷ ಭೂಷಣ ನಾಟಕಗಳು ಭಾರತೀಯರಿಗೆ ಈಗ ಅರ್ಥವಾಗಿದೆ ಎಂದರು.

ಕರ್ನಾಟಕದ 28 ಲೋಕಸಭಾ ಚುನಾವಣೆಯಲ್ಲಿ ಒಬ್ಬ ಕುರುಬ ಸಮುದಾಯದವರಿಗಾದರೂ ಟಿಕೇಟನ್ನು ಬಿಜೆಪಿಯ ಮೋದಿ ನೀಡಿಲ್ಲ , ಒಬ್ಬ ಮುಸಲ್ಮಾನನಿಗಾಗಲಿ, ಒಬ್ಬ ಕ್ರಿಶ್ಚಯನ್ನರಿಗಾಗಲಿ ಟಿಕೇಟು ನೀಡಿಲ್ಲ. ಏಕೆಂದರೆ ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯೇ ಇಲ್ಲ ಎಂದರು.

ಬಿಜೆಪಿ ರೈತ ಸಾಲ ಮನ್ನಾ ಮಾಡಿಲ್ಲ

ಸ್ವಾಮಿನಾಥನ್ ವರದಿ ಜಾರಿಯಾಗದೇ , ರೈತರು ತಮ್ಮ ಬೆಳೆಗಳಿಗೆ ನ್ಯಾಯಯುತ ಬೆಲೆ ನೀಡಲು ಹೋರಾಟ ಮಾಡುತ್ತಲೇ ಇದ್ದಾರೆ. ಈ ಹೋರಾಟದಲ್ಲಿ 700 ಕ್ಕೂ ಹೆಚ್ಚು ರೈತರು ಮೃತಪಟ್ಟರು. ಮೋದಿಯವರು 10 ವರ್ಷಗಳ ಪ್ರಧಾನಿಯ ಅವಧಿಯಲ್ಲಿ ಒಮ್ಮೆಯೂ ರೈತರ ಸಾಲ ಮನ್ನಾ ಮಾಡಲಿಲ್ಲ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, 76 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದರು. ನಾನು ಸಿಎಂ ಆದ ನಂತರ 27 ಲಕ್ಷ ರೈತರಿಗೆ 8165 ಕೋಟಿ ರೈತ ಸಾಲ ಮನ್ನಾ ಮಾಡಿದೆ. ಬಿಜೆಪಿಯವರು ರೈತ ಸಾಲ ಮನ್ನಾ ಮಾಡಲೇ ಇಲ್ಲ. ಯಡಿಯೂರಪ್ಪನವರು ‘ರೈತ ಸಾಲ ಮನ್ನಾ ಮಾಡಲು ಮನವಿ ಮಾಡಿದಾಗ,’ನಮ್ಮಲ್ಲಿ ನೋಟು ಪ್ರಿಂಟ್ ಮಾಡುವ ಮಷೀನು ಇಲ್ಲ ’ ಎಂದಿದ್ದರು. ರೈತ ಸಾಲ ಮನ್ನಾ ಮಾಡದಿದ್ದ ಮೋದಿಯವರು ದೇಶದ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಮೋದಿಯವರು ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದರು.

ಇದನ್ನೂ ಓದಿ: Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳು ಎಲ್ಲ ಜಾತಿ ಧರ್ಮದವರಿಗೆ ತಲುಪುತ್ತಿದೆ. ಶಕ್ತಿ ಯೋಜನೆ ಸೇರಿದಂತೆ ಎಲ್ಲ ಗ್ಯಾರಂಟಿಗಳಿಗೆ ರಾಜ್ಯದ ಮಹಿಳೆಯರಿಂದ ಹೆಚ್ಚಿನ ಪ್ರಶಂಸೆ ದೊರೆತಿದೆ ಎಂದರು.

ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ

ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ನರೇಂದ್ರ ಮೋದಿಯವರು ದಲಿತರಿಗೆ, ಹಿಂದುಳಿದವರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ಕಾಂಗ್ರೆಸ್ ಕೊಡುತ್ತಾರೆ ಎಂದು ಸುಳ್ಳು ತಮ್ಮ ಪ್ರಚಾರ ಭಾಷಣದಲ್ಲಿ ಹೇಳುತ್ತಾರೆ. ಮೋದಿಯವರು ನಮ್ಮ ಸಂವಿಧಾನವನ್ನು ಓದಬೇಕು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಜಾತಿ ಧರ್ಮ ಭೇದವಿಲ್ಲದೆ ಎಲ್ಲರೂ ಮೀಸಲಾತಿಗೆ ಅರ್ಹರು ಎಂದು ಸಂವಿಧಾನ ಸ್ಪಷ್ಟವಾಗಿ ಹೇಳುತ್ತದೆ. ನರೇಂದ್ರ ಮೋದಿಗೆ ದಲಿತರು, ಹಿಂದುಳಿದವರನ್ನು ಮುಸಲ್ಮಾನರ ವಿರುದ್ಧ ಎತ್ತಿ ಕಟ್ಟುತ್ತಾ ದ್ವೇಶದ ರಾಜಕಾರಣ ಮಾಡಲು ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಗಳನ್ನು ಜಾರಿಗೆ ತಂದ ಮೇಲೆ ಸರ್ಕಾರದಲ್ಲಿ ಸಂಬಳ ಕೊಡಲು ದುಡ್ಡಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಅವರಿಗೆ ಕರ್ನಾಟಕದ ಹಣಕಾಸಿನ ಪರಿಸ್ಥಿತಿ ಗೊತ್ತಿದೆಯೋ ಇಲ್ಲವೋ ತಿಳಿದಿಲ್ಲ.ಖಜಾನೆ ಖಾಲಿಯಾಗಿದ್ದರೆ ನಾವು ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಾಗುತ್ತಿ ತ್ತೇ? 36000 ಕೋಟಿ ರೂಗಳನ್ನು ವೆಚ್ಚ ಮಾಡಲು ಸಾಧ್ಯವಾಗುತ್ತಿತ್ತೆ. ಯಾರಾದರೂ ಸರ್ಕಾರಿ ನೌಕರ ನಮಗೆ ಸಂಬಳ ನಿಂತುಹೋಗಿದೆ ಎಂದರೆ ನಾನು ರಾಜಕೀಯ ನಿವೃತಿ ಪಡೆಯುತ್ತೇನೆ. ಸುಳ್ಳು ಹೇಳಲು ಇತಿಮಿತಿ ಇರಬೇಕು ಎಂದರು.

ಅಪಪ್ರಚಾರವನ್ನು ಬಿಜೆಪಿ ಕೂಡಲೇ ನಿಲ್ಲಿಸಬೇಕು.

1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಹಾಗೂ ಗ್ಯಾರಂಟಿಗಳಿಗೆ ಮೀಸಲಿರಿಸಲಾಗಿದೆ ನರೇಂದ್ರ ಮೋದಿಯವರೇ ಎಂದರು. ಕಾಂಗ್ರೆಸ್ ಸರ್ಕಾರದ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಮೊದಲು ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತಾರೆ ಎನ್ನುತ್ತಿದ್ದವರು ಈಗ ಚುನಾವಣೆ ಯಾಗುವರೆಗೆ ಮಾತ್ರ ಗ್ಯಾರಂಟಿಗಳು ಇರಲಿವೆ ಎನ್ನುತ್ತಿದ್ದಾರೆ. ಅಪಪ್ರಚಾರವನ್ನು ಬಿಜೆಪಿ ಕೂಡಲೇ ನಿಲ್ಲಿಸಬೇಕು. ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದರು. ಇದು ನಿರಂತರ. ಜನ ಆಶೀರ್ವದಿಸಿ ಮತ್ತೆ ಅಧಿಕಾರ ಕೊಟ್ಟರೇ ಮುಂದೆಯೂ ಜಾರಿಯಾಗಲಿದೆ ಎಂದರು.

ಸಾಮಾಜಿಕವಾಗಿ ಶಕ್ತಿ ತುಂಬುವವರು

ಮೋದಿಯವರು ಲೂಟಿ ಹೊಡೆಯುವ ಗ್ಯಾಂಗ್ ಬಂದಿದೆ ಎಂದಿದ್ದಾರೆ. ನಾವು ಲೂಟಿ ಹೊಡೆಯುವವರಲ್ಲ. ಈ ರಾಜ್ಯದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬುವವರು. ಸಮಾಜದ ಮುಖ್ಯವಾಹಿನಿಗೆ ಅವರು ಬರಬೇಕೆಂದು ನಂಬಿಕೆ ಇಟ್ಟವರು ಕಾಂಗ್ರೆಸ್ ನವರು . ಲೂಟಿ ಮಾಡಲು ಬಂದಿದ್ದವರು ಬಿಜೆಪಿಯವರು ಎಂದರು.

40% ಆರೋಪ ಸಾಬೀತಾದರೆ ಲೂಟಿ ಹೊಡೆದ ಗ್ಯಾಂಗ್ ನ್ನು ಪತ್ತೆ ಹಚ್ಚಿ ಶಿಕ್ಷೆ

ಗುತ್ತಿಗೆದಾರರ ಸಂಘದವರು 40% ಸರ್ಕಾರ ಎಂದು ಹೇಳಿದ್ದರು. ಇದರ ತನಿಖೆಗೆ ಆಯೋಗ ಈಗಾಗಲೇ ರಚನೆಯಾಗಿ ತನಿಖೆ ನಡೆಯುತ್ತಿದೆ. ಆರೋಪ ಸಾಬೀತಾದರೆ ಲೂಟಿ ಹೊಡೆದ ಗ್ಯಾಂಗ್ ನ್ನು ಪತ್ತೆ ಹಚ್ಚಿ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತೇವೆ. ನಾವು ನುಡಿದಂತೆ ನಡೆದಿದ್ದೇವೆ. ಮತ ಹಾಕುವ ಮುನ್ನ ನುಡಿದಂತೆ ಯಾರು ನಡೆದಿದ್ದಾರೆ ಎಂದು ಮತದಾರರು ಪರಿಶೀಲಿಸಬೇಕು ಎಂದರು.

ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ

ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. ಅವನ್ನೂ ಭರ್ತಿ ಮಾಡಿಲ್ಲ.ಭರ್ತಿ ಮಾಡಿದ್ದರೆ ದಲಿತರು ಹಿಂದುಳಿದವರಿಗೆ 50% ಮೀಸಲಾತಿ ದೊರೆಯುತ್ತಿತ್ತು. ಉಳಿದದ್ದು ಇತರರಿಗೆ ದೊರೆಯುತ್ತಿತ್ತು. ನರೇಂದ್ರ ಮೋದಿಯವರು ಅದನ್ನೂ ಮಾಡಲಿಲ್ಲ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಇವನ್ನು ಕಡಿಮೆ ಮಾಡುವುದಾಗಿ ಹೇಳಿದ್ದರು. ಯಾವುದರ ಬೆಲೆಯೂ ಕಡಿಮೆ ಮಾಡಲು ಆಗಲಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದು ಹೇಳಿ ಹತ್ತು ವರ್ಷ ಗಳಾದರೂ ಬಡವರ ಜೀವನ ಸುಧಾರಣೆ ಆಗಲಿಲ್ಲ. ಬದಲಿಗೆ ಕಷ್ಟಕ್ಕೆ ಸಿಲುಕಿದ್ದಾರೆ ಎಂದರು. ರೈತರು ವ್ಯವಸಾಯಕ್ಕೆ ವೆಚ್ಚ ಮಾಡುವ ಹಣ ಮೂರು ಪಟ್ಟು ಹೆಚ್ಚಾಯಿತು ಹೊರತು ಆದಾಯ ದುಪ್ಪಟ್ಟು ಆಗಲಿಲ್ಲ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದರು.

Continue Reading

ದೇಶ

Tsering Namgyal: ಲಡಾಕ್‌ನಲ್ಲಿ ತ್ಸೆರಿಂಗ್‌ ನಾಮ್‌ಗ್ಯಾಲ್‌ಗೆ ಟಿಕೆಟ್‌ ಕೊಟ್ಟ ಕಾಂಗ್ರೆಸ್; ಭಾರಿ ಹೈಡ್ರಾಮಾ

Tsering Namgyal: ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರೀಗ ಗುರುವಾರ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಐದನೇ ಹಂತದಲ್ಲಿ ಅಂದರೆ ಮೇ 20ರಂದು ಲಡಾಕ್‌ನಲ್ಲಿ ಮತದಾನ ನಡೆಯಲಿದೆ.

VISTARANEWS.COM


on

Tsering Namgyal
Koo

ನವದೆಹಲಿ: ಕಾಂಗ್ರೆಸ್‌ ನಾಯಕ ತ್ಸೆರಿಂಗ್‌ ನಾಮ್‌ಗ್ಯಾಲ್‌ (Tsering Namgyal) ಅವರು ಲಡಾಕ್‌ (Ladakh) ಲೋಕಸಭೆ ಕ್ಷೇತ್ರದಲ್ಲಿ ಗುರುವಾರ (ಮೇ 2) ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರು ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಚುನಾವಣೆ ಆಯೋಗವೂ ಅನುಮತಿ ನೀಡಿದೆ. ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ನಾಮಪತ್ರ ಸಲ್ಲಿಸುತ್ತಲೇ ತುಸು ಗೊಂದಲ ಉಂಟಾಗಿತ್ತು. ಇದಾದ ಬಳಿಕ ಚುನಾವಣೆ ಆಯೋಗವು ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಬಹುದು ಎಂದು ತಿಳಿಸಿದೆ. ಲಡಾಕ್‌ನಲ್ಲಿ ಮೇ 20ರಂದು ಮತದಾನ ನಡೆಯಲಿದೆ.

ಲಡಾಕ್‌ನಲ್ಲಿ ಹೈಡ್ರಾಮಾ

ಲೋಕಸಭೆ ಚುನಾವಣೆಯ ಎರಡು ಹಂತದ ಮತದಾನ ಮುಗಿದರೂ, ಲಡಾಕ್‌ನಲ್ಲಿ ರಾಜಕೀಯ ಹೈಡ್ರಾಮಾ ಮಾತ್ರ ಮುಂದುವರಿದಿದೆ. ಲಡಾಕ್‌ನಲ್ಲಿ ಕಾಂಗ್ರೆಸ್‌ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಹಾಜಿ ಹನಿಫಾ ಅವರು ಹೊರಹೊಮ್ಮಿದ್ದರು. ಆದರೆ, ಗುರುವಾರ (ಮೇ 2) ಬೆಳಗ್ಗೆ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದು ಹೈಡ್ರಾಮಾಗೆ ಕಾರಣವಾಗಿತ್ತು. ಗೊಂದಲದ ಬಳಿಕ ಕಾಂಗ್ರೆಸ್‌ ನಾಯಕ ರಿಗ್ಜಿನ್‌ ಜೋರಾ ಅವರು ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಎಂಬುದಾಗಿ ಘೋಷಿಸಿದರು.

ಬಿಜೆಪಿಯಿಂದ ತಾಶಿ ಗ್ಯಾಲ್ಸನ್‌ ಅವರು ಬುಧವಾರ (ಮೇ 1) ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಬಿಜೆಪಿ ಸಂಸದ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಲಡಾಕ್‌ನಲ್ಲಿ ಬಿಜೆಪಿಯ ಪ್ರಮುಖ ನಾಯಕರಾಗಿದ್ದು, ಇತ್ತೀಚೆಗೆ ಪಕ್ಷದಲ್ಲಿಯೇ ಅವರನ್ನು ಮರೆಗೆ ಸರಿಸಲಾಗುತ್ತಿತ್ತು. ಅಲ್ಲದೆ, ಅವರಿಗೆ ಟಿಕೆಟ್‌ ಕೂಡ ನಿರಾಕರಿಸಿದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಮೇ 3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಕಾರಣ ಬಿಜೆಪಿ ಸಂಸದ ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

ಇದಕ್ಕೂ ಮೊದಲು ಬಿಜೆಪಿ ಸಂಸದ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರೇ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ ಎಂದು ಹೇಳಲಾಗುತ್ತಿತ್ತು. ಕೆಲ ಮಾಧ್ಯಮಗಳಲ್ಲಿ ಕಾಂಗ್ರೆಸ್‌ ಮಾಸ್ಟರ್‌ ಸ್ಟ್ರೋಕ್‌ ಎಂದೇ ವರದಿಯಾಗಿತ್ತು. ಆದರೆ, ಕೆಲ ಹೊತ್ತಿನ ಬಳಿಕ ಕಣಕ್ಕಿಳಿದವರು ಕಾಂಗ್ರೆಸ್‌ ನಾಯಕನೇ ಹೊರತು, ಬಿಜೆಪಿ ಸಂಸದ ಅಲ್ಲ ಎಂಬ ವಿಷಯ ಗೊತ್ತಾಯಿತು. ಇಬ್ಬರ ಹೆಸರೂ ಒಂದೇ ಇರುವುದರಿಂದ ಗೊಂದಲ ಉಂಟಾಗಿತ್ತು.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

Continue Reading

ಪ್ರಮುಖ ಸುದ್ದಿ

IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

IPL 2024: ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ಹೈದರಾಬಾದ್​​: ಕೊನೇ ಓವರ್​ನ ಕೊನೇ ಎಸೆತದ ತನಕವೂ ಕುತೂಹಲ ಮೂಡಿಸಿದ್ದ ರಾಜಸ್ಥಾನ್​ ರಾಯಲ್ಸ್​ ಹಾಗೂ ಸನ್​ ರೈಸರ್ಸ್​ ಹೈದರಾಬಾದ್​ ನಡುವಿನ ಪಂದ್ಯದಲ್ಲಿ ರೋಚಕ ಒಂದು ರನ್ ಗೆಲುವಿನ ಫಲಿತಾಂಶ ಮೂಡಿ ಬಂತು. ಇದರೊಂದಿಗೆ ಐಪಿಎಲ್​ 17ನೇ ಆವೃತ್ತಿಯಲ್ಲಿ (IPL 2024) ಸತತ ಎರಡು ಸೋಲುಗಳ ಮೂಲಕ ನಿರಾಸೆ ಎದುರಿಸಿದ್ದ ಹೈದರಾಬಾದ್ ತಂಡ ಗೆಲುವಿನ ಹಾದಿಗೆ ಮರಳಿತು. ಅತ್ತ ರಾಜಸ್ಥಾನ್​ ​ ತಂಡ ಎರಡನೇ ಸೋಲಿಗೆ ಒಳಗಾಯಿತು. ಕೊನೇ ಎಸೆತದಲ್ಲಿ ರಾಯಲ್ಸ್ ತಂಡದ ಗೆಲುವಿಗೆ ಎರಡು ರನ್​ ಬೇಕಾಗಿದ್ದವು. ಆದರೆ, ಭುವನೇಶ್ವರ್ ಕುಮಾರ್​ ರಾಯಲ್ಸ್​ ಬ್ಯಾಟರ್​ ಪೊವೆಲ್​ ರೊವ್ಮನ್​ ಪೊವೆಲ್​ ಅವರನ್ನು ಎಲ್​ಬಿಡಬ್ಲ್ಯು ಮಾಡಿ ತವರು ತಂಡಕ್ಕೆ ಗೆಲುವು ತಂದುಕೊಟ್ಟರು.

ಇಲ್ಲಿನ ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್​ನಲ್ಲಿ ರಾಯಲ್ಸ್ ತಂಡಕ್ಕೆ 13 ರನ್​ಗಳು ಬೇಕಾಗಿತ್ತು. ಪೊವೆಲ್​ ನಿಖರವಾಗಿ ರನ್​ ಗಳಿಸಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದ್ದರು. ಆದರೆ, ಭುವನೇಶ್ವರ್ ಕುಮಾರ್​ ಲೊ ಪುಲ್​ಟಾಸ್​ ಹಾಕುವ ಮೂಲಕ ಪೊವೆಲ್ ಅವರನ್ನು ಎಲ್​ಬಿಡಬ್ಲ್ಯು ಬಲೆಗೆ ಕೆಡವಿದರು.

ನಿತೀಶ್ ಅರ್ಧ ಶತಕ

ಬ್ಯಾಟಿಂಗ್ ಆರಂಭಿಸಿದ ಎಸ್​ಆರ್​​ಎಚ್​ ತಂಡ ಅಭಿಶೇಕ್​ ಶರ್ಮಾ ಅವರನ್ನು 12 ರನ್​ಗೆ ಕಳೆದುಕೊಂಡಿತು. ಈ ವೇಳೆ ತಂಡದ ಮೊತ್ತ 25 ಆಗಿತ್ತು. ನಂತರ ಬಂದ ಅನ್ಮೋಲ್ ಪ್ರೀತ್ ಸಿಂಗ್​ 5 ರನ್​ಗೆ ಔಟಾಗಿ ನಿರಾಸೆ ಮೂಡಿಸಿದರು. ಆ ಬಳಿಕ ಜತೆಯಾದ ನಿತೀಶ್​ ಕುಮಾರ್ ರೆಡ್ಡಿ ಅರಂಭಿಕ ಬ್ಯಾಟರ್​ ಟ್ರಾವಿಸ್​ ಹೆಡ್​ ಜತೆ ಉತ್ತಮವಾಗಿ ಬ್ಯಾಟ್ ಬೀಸಿದರು. ಅವರಿಬ್ಬರೂ ನಾಲ್ಕನೇ ವಿಕೆಟ್​ಗೆ 96 ರನ್ ಜತೆಯಾಟ ನೀಡಿದರು. ಹೆಡ್​ 58 ರನ್ ಬಾರಿಸಿದರೆ ನಿತೀಶ್​ 76 ರನ್ ಬಾರಿಸಿ ಅಜೇಯವಾಗಿ ಉಳಿದರು. ಕೊನೆಯಲ್ಲಿ ಹೆನ್ರಿಚ್ ಕ್ಲಾಸೆನ್​ 19 ಎಸೆತಕ್ಕೆ 42 ರನ್​ ಬಾರಿಸುವ ಮೂಲಕ ತಂಡದ ಮೊತ್ತವನ್ನು 200 ರ ಗಡಿ ದಾಟಿಸಲು ನೆರವಾದರು.

ಇದನ್ನೂ ಓದಿ: M S Dhoni : ಧೋನಿಯನ್ನು ರನ್​ಔಟ್ ಮಾಡಿದ ಜಿತೇಶ್​ ಶರ್ಮಾ ನಿಂದಿಸಿದ ಅಭಿಮಾನಿಗಳು!

ದೊಡ್ಡ ಗುರಿ ಬೆನ್ನಟ್ಟಲು ಅರಂಭಿಸಿದ ಎಸ್​ಆರ್​​ಎಚ್​ 1 ರನ್​ಗೆ 2 ವಿಕೆಟ್ ಕಳೆದುಕೊಂಡಿತು. ಜೋಸ್ ಬಟ್ಲರ್​ ಹಾಗೂ ನಾಯಕ ಸಂಜು ಸ್ಯಾಮ್ಸನ್​ ಶೂನ್ಯಕ್ಕೆ ಔಟಾಗಿದ್ದರು. ಆದರೆ, ಆರಂಭಿಕ ಬ್ಯಾಟರ್​ ಜೈಸ್ವಾಲ್ 67 ರನ್ ಬಾರಿಸಿ ವಿಕೆಟ್​ ಬೀಳದಂತೆ ನೋಡಿಕೊಂಡರು. ರಿಯಾನ್ ಪರಾಗ್​ 77 ರನ್ ಬಾರಿಸಿ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದರು. ಆದರೆ, ಆ ಬಳಿಕ ಸತತವಾಗಿ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು. ಭುವನೇಶ್ವರ್ ಕುಮಾರ್​ 3 ವಿಕೆಟ್​ ಪಡೆದು ಮಿಂಚಿದರು.

Continue Reading
Advertisement
Dina Bhavishya
ಭವಿಷ್ಯ37 mins ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Lok Sabha Election
ಪ್ರಮುಖ ಸುದ್ದಿ6 hours ago

Lok Sabha Election : ಕುರುಬರಿಗೆ ಟಿಕೆಟ್ ಕೊಡದ ಮೋದಿ ಕಂಬಳಿ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ

Tsering Namgyal
ದೇಶ6 hours ago

Tsering Namgyal: ಲಡಾಕ್‌ನಲ್ಲಿ ತ್ಸೆರಿಂಗ್‌ ನಾಮ್‌ಗ್ಯಾಲ್‌ಗೆ ಟಿಕೆಟ್‌ ಕೊಟ್ಟ ಕಾಂಗ್ರೆಸ್; ಭಾರಿ ಹೈಡ್ರಾಮಾ

IPL 2024
ಪ್ರಮುಖ ಸುದ್ದಿ6 hours ago

IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

Ragini Khanna
ಸಿನಿಮಾ6 hours ago

Ragini Khanna: ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದಕ್ಕೆ ಕ್ಷಮೆ ಕೇಳಿದ ನಟ ಗೋವಿಂದ ಸೋದರ ಸೊಸೆ!

Rain News
ಪ್ರಮುಖ ಸುದ್ದಿ6 hours ago

Rain News : ಬೆಂಗಳೂರಿನಲ್ಲಿ ಸಂಜೆ ಸುರಿದ ಸಣ್ಣ ಮಳೆಗೆ ಕೆಲವೆಡೆ ಅನಾಹುತ

Election campaign for Congress candidate Samyukta Patil in Prajadhwani convention at Bagalkot
ರಾಜಕೀಯ6 hours ago

Lok Sabha Election 2024: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

Lok Sabha Election
ದೇಶ7 hours ago

Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

Amit Shah
ದೇಶ7 hours ago

Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

K. Annamalai
ಪ್ರಮುಖ ಸುದ್ದಿ7 hours ago

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ37 mins ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ11 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌