ಧವಳ ಧಾರಿಣಿ ಅಂಕಣ: ರಘುವಂಶದ ಘನತೆಯ ಚಕ್ರವರ್ತಿ ದಶರಥ - Vistara News

ಪ್ರಮುಖ ಸುದ್ದಿ

ಧವಳ ಧಾರಿಣಿ ಅಂಕಣ: ರಘುವಂಶದ ಘನತೆಯ ಚಕ್ರವರ್ತಿ ದಶರಥ

ಧವಳ ಧಾರಿಣಿ ಅಂಕಣ: ಮಹಾಪುರುಷನಾದ ಶ್ರೀರಾಮನಿಗೆ ಜನ್ಮವನ್ನು ಕೊಟ್ಟ ದಶರಥನೂ ಸಹ ಸಾಕಷ್ಟು ಘನತೆವೆತ್ತ ವ್ಯಕ್ತಿತ್ವದವನೇ ಆಗಿದ್ದ. ಇದನ್ನು ರಾಮಾಯಣದ ಪ್ರಾರಂಭದಲ್ಲಿಯೇ ವಾಲ್ಮೀಕಿ ವಿವರಿಸುತ್ತಾರೆ.

VISTARANEWS.COM


on

king dasharatha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಹಾಕಾವ್ಯದ ಮರೆಯಲ್ಲಿರುವ ಬಹುರೂಪಿ

dhavala dharini by Narayana yaji

ತಸ್ಯಾಂ ಪುರ್ಯಾಮಯೋಧ್ಯಾಯಾಂ ವೇದವಿತ್ಸರ್ವಸಙ್ಗ್ರಹಃ
ದೀರ್ಘದರ್ಶೀ ಮಹಾತೇಜಾಃ ಪೌರಜಾನಪದಪ್ರಿಯಃ ৷৷ಬಾ.ಕಾಂ.1৷৷

ಸಮಸ್ತ ವೇದವನ್ನು ಸಾಂಗವಾಗಿ ತಿಳಿದ ಧಶರಥನು (King Dasharatha) ಆ ಅಯೋಧ್ಯಾಪುರವನ್ನು (Ayodhya) ಆಳುತ್ತಿದ್ದನು. ಆತನು ಸರ್ವಜ್ಞನು. ಮುಂದೇನಾಗಬಹುದೆನ್ನುವುದನ್ನು ಇಂದೇ ಗ್ರಹಿಸಬಲ್ಲ ದೀರ್ಘದರ್ಶಿಯಾಗಿದ್ದನು. ಮಹಾತೇಜಸ್ವಿಯೂ ಪ್ರತಾಪಿಯೂ ಆಗಿದ್ದನು. ನಗರ ಮತ್ತು ಗ್ರಾಮಗಳ ಜನಪದರಿಗೆ ಅತಿಪ್ರಿಯನಾದ ರಾಜನಾಗಿದ್ದನು.

ಅಯೋಧ್ಯೆಯನ್ನು ಅರವತ್ತು ಸಾವಿರ ವರ್ಷಗಳ ಕಾಲ ಆಳಿದ ದಶರಥ ಮಹಾರಾಜನ ಕುರಿತು “ಓರ್ವ ತಿಕ್ಕಲು ದೊರೆಯಾಗಿದ್ದ, ತನ್ನ ಹೆಂಡತಿಯರಿಗೆ ಹೆದರಿದ್ದ, ಶತ್ರುಗಳಿಗೆ ಹೆದರುವ ಪುಕ್ಕಲನಾಗಿದ್ದ, ವಿಪರೀತ ಪುತ್ರಮೋಹಕ್ಕೊಳಗಾಗಿದ್ದ” ಎನ್ನುವ ಭಾವವೇ ಜನಜನಿತವಾಗಿವೆ. ರಾಮಾಯಣವೆಂದರೆ ಕೇವಲ ರಾಮನ ಕಥೆಯೆಂದು ಗ್ರಹಿಸಿದಾಗ ಇಂತಹ ವಿಪರೀತ ಅಭಿಪ್ರಾಯಕ್ಕೆ ಬರುವುದು ಸಹಜವೂ ಹೌದು. ಸ್ವಂತ ಅಸ್ತಿತ್ವವೇ ಇಲ್ಲದವನಂತೆ ಮತ್ತು ದುಃಖದಿಂದ ಕೊರಗಿ ಅಸುನೀಗುವ ದಶರಥನ ಮೇಲೆ ಅನುಕಂಪಕ್ಕಿಂತ ಇಂಥವನ ಕಾರಣದಿಂದಲೇ ರಾಮ ವನವಾಸಕ್ಕೆ ಹೋಗುವಂತಾಯಿತು ಎಂದು ತಿರಸ್ಕಾರಗೊಳ್ಳುವ ರೀತಿಯಲ್ಲಿ ಆತನ ಪಾತ್ರ ಚಿತ್ರಿತವಾಗಿದೆ. ಆತನ ಪಾತ್ರವೂ ಸಹ ಬಾಲಕಾಂಡ ಮತ್ತು ಅಯೋಧ್ಯಾ ಕಾಂಡಗಳಲ್ಲಿ ಮುಗಿದು ಹೋಗಿಬಿಡುತ್ತದೆ.

ಮುಂದೆ ಯುದ್ಧಕಾಂಡದಲ್ಲಿ ದೇವತೆಗಳ ಮತ್ತು ಬ್ರಹ್ಮನ ಸಂಗಡ ಆತ ಸಶರೀರನಾಗಿ ಬರುವಾಗ ಆತ ಇಂದ್ರನಿಗೆ ಸಮನಾದ ಪದವಿ ಮತ್ತು ಗೌರವದೊಂದಿಗೆ ದೇವರಥದಲ್ಲಿ ಗಮನಿಸಬಹುದು. ಅದು ಆತ ಕೇವಲ ರಾಮನ ತಂದೆಯಾಗಿರುವುದಕ್ಕೆ ಮಾತ್ರವೋ ಹೇಗೆ ಎನ್ನುವ ಸಂಶಯವೂ ಕಾಡಿದರೆ ಅದು ಸಹಜ. ಸುಮಾರು ಇಪ್ಪತ್ನಾಲ್ಕು ಸಾವಿರ ಶ್ಲೋಕಗಳ ಏಳು ಕಾಂಡಗಳ ಮಹಾಕಾವ್ಯವು ಇಡಿಯಾಗಿ ಜನಸಾಮಾನ್ಯರಿಗೆ ಸಿಗುವುದು ಅಷ್ಟು ಸುಲಭವಲ್ಲ. ಹೆಚ್ಚಿನವರಿಗೆ ಅದನ್ನು ಕೇಳುವ ವ್ಯವಧಾನ ಮತ್ತು ಸಮಯವೂ ಇಲ್ಲ. ಮಹಾಕಾವ್ಯದ ವಸ್ತುಗಳನ್ನು ನಾಟಕವನ್ನಾಗಿಸಿ ಅದರಲ್ಲಿ ಬರುವ ವಿಷಯವನ್ನು ಖಂಡ ಖಂಡವನ್ನಾಗಿಸಿ (ವಿಭಾಗಿಸಿ) ಮೊದಲು ಕೊಟ್ಟಿರುವುದು ಪ್ರಾಚೀನ ಸಂಸ್ಕೃತ ನಾಟಕಗಳು ಹಾಗೂ ಯಕ್ಷಗಾನ, ಕೂಚಿಪುಡಿ ಮತ್ತು ಚಾರಣರು ಆಡಿ ತೋರಿಸಿದ ಪ್ರದರ್ಶನಕಲೆಗಳು. ಯಕ್ಷಗಾನದಲ್ಲಿ ಒಂದೊಂದು ಸನ್ನಿವೇಶವನಾಗಿ ಕೊಟ್ಟಿರುವ ಕಥಾಭಾಗವನ್ನು ಪ್ರಸಂಗವೆಂದು ನಿರೂಪಿಸಲ್ಪಟ್ಟಿದೆ.

ಮಹಾಕಾವ್ಯವೊಂದು ರೂಪುಗೊಳ್ಳಬೇಕಾದರೆ ಅದರಲ್ಲಿ ಅನೇಕ ಲಕ್ಷಣಗಳಿರಬೇಕಾಗುತ್ತದೆ. ಕಾವ್ಯಗಳೆಲ್ಲವೂ ರೂಪುಗೊಂಡಿರುವುದರ ಹಿಂದೆ ಶಾಸ್ತ್ರ ಅಂದರೆ ವಿಧಿ, ನಿಷೇಧದ ರಿವಾಜಿದೆ. ಶಾಸ್ತ್ರವೆಂದರೆ ಧರ್ಮ, ಅರ್ಥ ಕಾಮ ಮೋಕ್ಷಗಳೆನ್ನುವ ಪುರುಷಾರ್ಥವನ್ನು ಮುಖ್ಯವಾಗಿ ಬೋಧಿಸುವ ಗ್ರಂಥ. ಇದು ಉಪದೇಶ ರೂಪದಲ್ಲಿ ಇರುತ್ತದೆ. ʼವಿಷ್ಣು ಧರ್ಮೋತ್ತರ ಪುರಾಣʼ ಶಾಸ್ತ್ರ ಮತ್ತು ಕಾವ್ಯದ ಕುರಿತು ವಿವರಿಸುವುದು ಹೀಗೆ –

ಮೋಕ್ಷಸ್ಯ ಯತ್ರೋಪನ್ಯಾಸಃ ಇತಿಹಾಸ ಸ ಉಚ್ಯತೇ
ತದೇವ ಕಾವ್ಯಮಿತ್ಯುಕ್ತಂ ಚೋಪದೇಶಂ ವಿನಾ ಕೃತಂ

ಮೋಕ್ಷವೆಂಬ ಪುರುಷಾರ್ಥವನ್ನೇ ಮುಖ್ಯವಾಗಿ ಬೋಧಿಸುವ ಗ್ರಂಥಕ್ಕೆ ಇತಿಹಾಸವೆಂದು ಹೆಸರು. ಅಂತಹ ಗ್ರಂಥವೇ ಉಪದೇಶರೂಪದಲ್ಲಿರದೇ ಒಬ್ಬಾನೊಬ್ಬ ಮಹಾಪುರುಷನ ಚರಿತ್ರೆಯಾಗಿದ್ದಲ್ಲಿ ಅದು ಕಾವ್ಯವೆಂದು ಹೇಳಲ್ಪಡುತ್ತಾರೆ.

ಮಹಾಕಾವ್ಯವಾಗಬೇಕಾದರೆ ಅಲ್ಲಿ ನಾಯಕ ಮತ್ತು ಪ್ರತಿನಾಯಕನ ಗುಣಗಳ ವಿಸ್ತ್ರತ ವಿವರಗಳಿರಬೇಕು. ಪ್ರಯಾಣ ಸನ್ನದ್ಧನಾದ ಪುರುಷನ ಮತ್ತು ದೂತಪ್ರೇಷಣಾದಿಗಳ ಹಾಗೂ ಯುದ್ಧವೃತ್ತಾಂತದ ವರ್ಣನೆಗಳೆಲ್ಲವನ್ನು ಒಳಗೊಂಡಿರಬೇಕು. ನಾಯಕನ ಅಭ್ಯುದಯದಿಂದ ಕೂಡಿರಬೇಕು. ನಾಯಕ ಸನ್ಮಾರ್ಗಗಾಮಿಯಾಗಿಯೂ ಧರ್ಮವಿಜಯಿಯಾಗಿಯೂ ಇರಬೇಕು. ಹಾಗೇ ಪ್ರತಿನಾಯಕನೂ ಸಹ ಜಗದ್ವಿಜಯಿಯೇ ಆಗಿರಬೇಕು. ದೇಶ, ಪಟ್ಟಣ, ರಾಜರು, ಋತುಗಳು, ಅಗ್ನಿ, ನದಿಗಳು, ಸ್ತ್ರೀಯರು ಇವೆಲ್ಲವೂ ವಿವರಿಸಲ್ಪಟ್ಟಿರಬೇಕು. ಶೃಂಗಾರ, ಹಾಸ್ಯ, ಕರುಣ, ರೌದ್ರ, ವೀರ, ಭೀಭತ್ಸ, ಅದ್ಭುತ ಮತ್ತು ಶಾಂತವೆನ್ನುವ ನವರಸಗಳಿಂದ ಶೋಭಿಸಬೇಕು. ಭರತನ ನಾಟ್ಯ ಶಾಸ್ತ್ರಕ್ಕಿಂತಲೂ ಮೊದಲೇ ರಚಿತವಾಗಿದೆಯೆಂದು ನಂಬಲಾಗಿರುವ “ವಿಷ್ಣು ಧರ್ಮೋತ್ತರ ಪುರಾಣದಲ್ಲಿ” ಶಾಸ್ತ್ರ, ಮಹಾಕಾವ್ಯ ಮತ್ತು ನಾಟಕಗಳ ಲಕ್ಷಣಗಳನ್ನು ಹೀಗೆ ಸ್ಪಷ್ಟವಾಗಿ ವಿಭಾಗಿಸಿ ಹೇಳಿದೆ.

ಮಹಾಕಾವ್ಯ ಲಕ್ಷಣಕ್ಕೆ ಅನುಗುಣವಾಗಿ ವಾಲ್ಮೀಕಿ ರಾಮಾಯಣವನ್ನು ರಚಿಸಿರುವುದನ್ನು ಗಮನಿಸಿದರೆ ಆತನ ಕಾಲದಲ್ಲಿಯೇ ಕಾವ್ಯಲಕ್ಷಣಗಳು ಪ್ರಚಲಿತದಲ್ಲಿ ಇತ್ತು ಎನ್ನಬಹುದಾಗಿದೆ. ಅಥವಾ ಅದನ್ನು ಆಧಾರವನ್ನಾಗಿರಿಸಿಕೊಂಡು ನಾಟ್ಯಶಾಸ್ತ್ರವನ್ನು ರಚಿಸಿದ್ದಾರೆನ್ನುವ ದುರ್ಬಲವಾದ ವಾದವನ್ನೂ ಕೆಲ ವಿಮರ್ಶಕರು ಅಭಿಪ್ರಾಯ ಪಡುತ್ತಾರೆ. ಅದೇನೆ ಇರಲಿ, ನಾಯಕನ ಚರಿತ್ರೆಯನ್ನು ಹೇಳುವ ಮಹಾಕಾವ್ಯದಲ್ಲಿ ಎಲ್ಲಾ ಪಾತ್ರಗಳೂ ನಾಯಕನ ಗುಣಗಳ ನೆರಳಿನಲ್ಲಿ ಬೆಳೆಯುತ್ತವೆ. ಪೋಷಕ ಪಾತ್ರಗಳ ಗುಣಗಳು ನಾಯಕನನ್ನು ಮೀರಿ ಹೋಗದಂತೆ ಎಚ್ಚರದಿಂದ ಪಾತ್ರವನ್ನು ಹೆಣೆಯಲಾಗುತ್ತದೆ. ಇದಕ್ಕೆ ರಾಜಾ ದಶರಥನ ಪಾತ್ರವೂ ಹೊರತಲ್ಲ. ಮಹಾವಿಷ್ಣು ಸಹಿತವಾಗಿ ದೇವತೆಗಳು ತಮ್ಮ ಅವತಾರಕ್ಕೆ ಕೇಂದ್ರವನ್ನಾಗಿ ಅಯೋಧ್ಯೆಯನ್ನು ಆರಿಸಿಕೊಂಡಾಗ ಅಲ್ಲಿನ ಚಕ್ರವರ್ತಿಯೂ ಘನತೆಯಿಂದಲೇ ಕೂಡಿರಬೇಕಾಗುತ್ತದೆ. ಕೇವಲ ಅಶ್ವಮೇಧ ಯಾಗ ಮತ್ತು ಪುತ್ರಕಾಮೇಷ್ಟಿ ಯಾಗದ ಮೂಲಕ ಅವತಾರಿ ಪುರುಷನಿಗೆ ಕ್ಷೇತ್ರವಾಗಲು ಸಾಧ್ಯವಿಲ್ಲ.

ayodhya

ರಾಮಾಯಣದ ಮೂಲತಃ ಮಾನವ ಸಂಬಂಧಗಳ ಗುಣಗಳನ್ನು ಮೈಗೂಡಿಸಿಕೊಂಡ ಕಾವ್ಯ. ಪ್ರತೀ ಪಾತ್ರದಲ್ಲಿಯೂ ಗುಣ, ದೋಷ ಎರಡೂ ಇವೆ. ರಾಮ ಆದರ್ಶ ಪುರುಷ ಹೇಗೋ ಅದೇ ರೀತಿ ತನ್ನ ನಿಷ್ಠುರ ನಡವಳಿಕೆಯ ಮೂಲಕ ತನ್ನನ್ನು ನೆಚ್ಚಿಕೊಂಡ ಪಾತ್ರಗಳಿಗೆ ನೋವನ್ನು ಅದೇ ಪ್ರಮಾಣದಲ್ಲಿ ಕೊಟ್ಟಂತವನೂ ಹೌದು. ಇದನ್ನು ದಶರಥನಿಂದ ಪ್ರಾರಂಭಿಸಿ ಕೊನೆಗೆ ಲಕ್ಷ್ಮಣನಿಗೆ ದೇಹಾಂತ ಶಿಕ್ಷೆಯನ್ನು ವಿಧಿಸುವವವರೆಗೆ ನಿರಂತರವಾಗಿ ಗಮನಿಸಬಹುದಾಗಿದೆ. ಅದಕ್ಕೆ ಕಾರಣಗಳನ್ನು ಹುಡುಕಿ ರಾಮನ ಆದರ್ಶವನ್ನು ಲೋಕಕ್ಕೆ ವಿಮರ್ಶಕರು ಕೊಟ್ಟಿದ್ದಾರೆ ಎನ್ನುವುದೂ ಸಹ ಅಷ್ಟೇ ಗಮನಾರ್ಹ. ಮನುಷ್ಯರಲ್ಲಿ ಪರಿಪೂರ್ಣನಾದ ವ್ಯಕ್ತಿಗಳು ಇದ್ದಾರೆಯೋ ಎನ್ನುವ ವಾಲ್ಮೀಕಿಯ ಸಂಶಯಕ್ಕೆ (ಕೋ ನ್ವಸ್ಮಿನ್ಸಾಂಪ್ರತಂ ಲೋಕೇ ಗುಣವಾನ್ಕಶ್ಚ ವೀರ್ಯವಾನ್) ನಾರದರು ಆತನ ಹದಿನಾರು ಗುಣಗಳನ್ನು ವರ್ಣಿಸಿ ರಾಮಾಯಣ ಕಥೆಯನ್ನು ಹೇಳಿರುವ ವಿಷಯವನ್ನು ಈ ಹಿಂದೆಯೇ ಪ್ರಸ್ತಾಪಿಸಿಯಾಗಿದೆ. ಇಂತಹ ಮಹಾಪುರುಷನಿಗೆ ಜನ್ಮವನ್ನು ಕೊಟ್ಟ ದಶರಥನೂ ಸಹ ಸಾಮಾನ್ಯರ ತಿಳುವಳಿಕೆಯಂತೆ ಅಳುಮುಂಜಿಯಾಗಿರದೇ, ಸಾಕಷ್ಟು ಘನವೆತ್ತ ವ್ಯಕ್ತಿತ್ವದವನೇ ಆಗಿದ್ದ ಎನ್ನುವುದನ್ನು ರಾಮಾಯಣದ ಪ್ರಾರಂಭದಲ್ಲಿಯೇ ವಾಲ್ಮೀಕಿ ವಿವರಿಸುತ್ತಾರೆ.

ದಶರಥನಲ್ಲಿರುವ ಮೊದಲ ಗುಣವೇ ಆತ ವೇದವಿತ್ ಎನ್ನುವುದರ ಮೂಲಕವಾಗಿ. ವೇದ್ ಎನ್ನುವುದು ಜ್ಞಾನಿ ಎನ್ನುವ ಅರ್ಥದಲ್ಲಿಯೂ ಬಳಸಲಾಗುತ್ತಿದೆ. 2. ಸರ್ವಜ್ಞನಾಗಿದ್ದನು, 3. ಮುಂದೆ ಬರಬಹುದಾದ ವಿಪ್ಪತ್ತನ್ನು ಗ್ರಹಿಸಿ ಅದಕ್ಕೆ ತಕ್ಕ ಪರಿಹಾರವನ್ನು ಮೊದಲೇ ಕೈಗೊಳ್ಳುತ್ತಿದ್ದನು. (Pro Active), 4, ಮಹಾತೇಜಸ್ವಿಯು, 5, ಪೌರಜಾನಪದಪ್ರಿಯ – ಆತ ನಗರವಾಸಿ ಮತ್ತು ಗ್ರಾಮವಾಸಿಗಳಿಗೂ ಪ್ರೀತಿಪಾತ್ರ ದೊರೆಯಾಗಿದ್ದನು. ಆತನ ಮಿತ್ರರಲ್ಲಿ ಕೇವಲ ಕ್ಷತ್ರಿಯರು ಮಾತ್ರ ಇರದೇ ಗುಹನಂತಹ ಬೇಡರು, ಜಟಾಯು, ಸಂಪಾತಿಯಂತಹ ಪಕ್ಷಿಗಳೂ ಸಹ ಸೇರಿದ್ದರು. ಎಲ್ಲರನ್ನೂ ಸಮಭಾವ ಸಮಚಿತ್ತದಿಂದ ಆದರಿಸುವ ದೊರೆ ಆತ ಆಗಿದ್ದನು. 6. ಇಕ್ಷ್ವಾಕುವಂಶವೆಂದರೆ ಆ ಕಾಲದ ಶ್ರೇಷ್ಠ ವಂಶವಾಗಿತ್ತು. ಮನುವಿನಿಂದ ದಶರಥನ ವರೆಗೆ ಸುಮಾರು ಎಪ್ಪತ್ತು ರಾಜರುಗಳು ಈ ವಂಶವನ್ನು ಆಳಿಹೋಗಿದ್ದರು. ಈ ಸಂಖ್ಯೆ ನಿಖರವಲ್ಲ, ವಿವಿಧ ರಾಮಾಯಣದಲ್ಲಿ ಅನೇಕ ವಿಧಗಳಲ್ಲಿ ವಿವರಿಸಲಾಗಿದೆ. ಆದರೂ ಬಲು ದೀರ್ಘವಾದ ಶೂರರ ಪರಂಪರೆಯನ್ನು ಈ ವಂಶ ಹೊಂದಿತ್ತು. ಅಂತಹ ಇಕ್ಷಾಕುಗಳಲ್ಲಿಯೇ ಅತಿರಥನೆನ್ನುವ ಖ್ಯಾತಿಯನ್ನು ಧಶರಥ ಹೊಂದಿದ್ದನು. ಹತ್ತುಸಾವಿರ ಮಹಾರಥಿಗಳನ್ನು ಏಕಾಂಗಿಯಾಗಿ ಎದುರಿಸುವ ಸಾಮರ್ಥ್ಯ ಆತನಿಗಿತ್ತು. 7. ಲೋಕದಲ್ಲಿ ಶ್ರೇಷ್ಠವೆನಿಸಿದ ಯಾಗಗಳನ್ನೆಲ್ಲವನ್ನೂ ದಶರಥ ನೆರವೇರಿಸಿದ್ದನು. ರಾಜಸೂಯ ಯಾಗವನ್ನೂ ಮಾಡಿದ್ದ ಎನ್ನುವುದನ್ನು ಸೀತೆ ಚಿತ್ರಕೂಟದಲ್ಲಿ ದಶರಥನ ಗುಣಗಳನ್ನು ನೆನೆದು ದುಃಖಿಸುವಾಗ ಹೇಳುತ್ತಾಳೆ. 8. ಆತ ಧರ್ಮರಥ ಅಂದರೆ ಸದಾ ಕಾಲ ಧರ್ಮದಲ್ಲಿ ತನ್ನ ಬುದ್ಧಿಯನ್ನು ಸ್ಥಿರವಾಗಿ ಇಟ್ಟವನಾಗಿದ್ದನು, 9. ದಕ್ಷ ಆಡಳಿತದ ಮೂಲಕ ಪ್ರಜೆಗಳನ್ನು ತನ್ನ ವಶದಲ್ಲಿ ಇಟ್ಟುಕೊಂಡಿದ್ದನು. ಪ್ರಜೆಗಳಿಗೆ ಅನುಕೂಲವಾಗುವಂತೆ ಕೆರೆ, ಬಾವಿಗಳನ್ನು ತೋಡಿಸಿದ ಪ್ರಜಾನುರಾಗಿ ದೊರೆಯಾಗಿದ್ದನು. 10. ಕ್ಷತ್ರಿಯ ಧರ್ಮಗಳನ್ನು ನುರಿತವನಾದರೂ ಧರ್ಮದ ವಿಷಯದಲ್ಲಿ ಮಹರ್ಷಿಗಳಿಗೆ ಸಮನಾಗಿದ್ದನು. ಮಹರ್ಷಿಕಲ್ಪನೆನ್ನುವ ಗೌರವಕ್ಕೆ ಪಾತ್ರನಾಗಿದ್ದನು. 11. ಆತ್ಮಬಲ, ತೇಜೋ ಬಲ ಮತ್ತು ಜ್ಞಾನಬಲವುಳ್ಳವನಾಗಿದ್ದನು. ಈ ಕಾರಣಕ್ಕೆ ಮೂರು ಲೋಕದಲ್ಲಿಯೂ ಕೀರ್ತಿಯನ್ನು ಗಳಿಸಿಕೊಂಡಿದ್ದನು. ಶತ್ರುಗಳನ್ನು ನಿಗ್ರಹಮಾಡುವ ಆತನ ಸಾಮರ್ಥ್ಯದ ಕಾರಣದಿಂದ ಆತನನ್ನು ನಿಹತಾಮಿತ್ರನೆಂದು ಕರೆಯುತ್ತಾರೆ. ಸದ್ವಂಶದಲ್ಲಿ ಜನಿಸಿದವರನ್ನು ಮತ್ತು ಸುಗುಣ ಸಂಪನ್ನರನ್ನು ತನ್ನ ಸ್ನೇಹಿತರನಾಗಿಸಿಕೊಳ್ಳುವುದರಲ್ಲಿ ಹಿಂದೆ ಮುಂದೆ ನೋಡುತ್ತಿರಲಿಲ್ಲ. 12. ಮನುಷ್ಯರು ಪಾಲಿಸಬೇಕಾದ ದೇವಋಣ, ಪಿತೃ ಋಣ, ಋಷಿ ಋಣಗಳೆನ್ನುವ ಮೂರು ಋಣಗಳ ಜೊತೆಗೆ ಕ್ಷತ್ರಿಯರು ಪಾಲಿಸಬೇಕಾದ ವಿಪ್ರಋಣ ಮತ್ತು (ಬ್ರಾಹ್ಮಣರಿಗೆ ದಾನಧರ್ಮಮಾಡುವ ಮೂಲಕ) ಅತ್ಮಋಣ – ವಿಹತವಾದ ಸುಖಭೋಗಗಳನ್ನು ಅನುಭವಿಸುವುದು ಇವುಗಳನ್ನು ಆತ ಸದಾಕಾಲದಲ್ಲಿಯೂ ಪಾಲಿಸುತ್ತಿದ್ದನು. 13. ಧನ ಮತ್ತು ಅನರ್ಘ್ಯವಾದ ವಸ್ತುಗಳ ಸಂಗ್ರಹಣೆಯಲ್ಲಿ ಆತ ಕುಬೇರ ಮತ್ತು ಇಂದ್ರನಿಗೆ ಸಮನಾದ ದೊರೆಯೆನಿಸಿದ್ದನು. 14. ಹಿಂದೆ ವೈವಸ್ವತ ಮನುವು ಮಹಾ ತೇಜಸ್ಸಿನಿಂದ ಕೂಡಿದವನಾಗಿ ಲೋಕವನ್ನು ಹೇಗೆ ರಕ್ಷಣೆಯನ್ನು ಮಾಡುತ್ತಿದ್ದನೋ ಅದೇ ರೀತಿಯಲ್ಲಿ ಮಾನವಕುಲಾವತಂಸನಾದ ದಶರಥನೂ ಅಯೋಧ್ಯೆಯಲ್ಲಿ ಸತ್ಯವ್ರತನಾಗಿ ಧರ್ಮಾರ್ಥಕಾಮಗಳೆಂಬ ಪುರುಷಾರ್ಥವನ್ನು ಅನುಸರಿಸುತ್ತಾ ಅಮರಾವತಿಯನ್ನು ಪಾಲನೆ ಮಾಡುತ್ತಿದ್ದ ಇಂದ್ರನಂತೆಯೆ ಶೋಭಿಸುತ್ತಿದ್ದನು.

ಭಗವಂತ ತನ್ನ ಅವತಾರಕ್ಕಾಗಿ ಒಂದು ಕ್ಷೇತ್ರವನ್ನು ಆಯ್ದುಕೊಳ್ಳುವಾಗ ದುರ್ಬಲರಾದವರನ್ನು ಆಯ್ಕೆ ಮಾಡಿಕೊಂಡರೆ ಕಾವ್ಯ ವೈಕಲತೆಯಿಂದ ಸೊರಗುತ್ತದೆ. ವಾಲ್ಮೀಕಿಯಲ್ಲಿ ಈ ಪ್ರಜ್ಞೆ ಸದಾ ಜಾಗ್ರತವಾಗಿದೆ. ರಾಮಾಯಣ ಮಹಾ ಕಾವ್ಯವಾಗುವ ಜೊತೆಗೆ ಸನಾತನ ಪರಂಪರೆಯ ಇತಿಹಾಸವೂ ಆಗಿದೆ. ಶಾಸ್ತ್ರಗಳಲ್ಲಿ ಧರ್ಮವನ್ನು ಮಂತ್ರಗಳ ಮೂಲಕ ಹೇಳುತ್ತಾರೆ. ಈ ಮಂತ್ರಗಳ ಅರ್ಥವನ್ನು, ಸೃಷ್ಟಿ, ಸಂಹಾರ, ಅವುಗಳನ್ನು ವಿನಿಯೋಗಿಸುವ ವಿಧಾನವನ್ನು ವಿವರಿಸುವುದೇ ಬ್ರಾಹ್ಮಣಗಳು. ಇದು ಕಾವ್ಯಕ್ಕೆ ಬಂದಾಗ ಪ್ರಕ್ರಿಯಾ, ಉಪೋದ್ಘಾತ, ಅನುಸಂಗ ಮತ್ತು ಉಪಸಂಹಾರ ಹೀಗೆ ನಾಲ್ಕು ಬಗೆಗಳಿವೆ. ಈ ಎಲ್ಲ ಸಂಗತಿಗಳನ್ನು ಅರ್ಥ ಮಾಡಿಕೊಂಡಾಗ ದಶರಥನ ಶ್ರೇಷ್ಠತೆಯನ್ನು ಮನಗಾಣ ಬಹುದಾಗಿದೆ.

ದಶರಥನ ರಾಜ್ಯಭಾರ –

ಆಡಳಿತದ ವಿಷಯದಲ್ಲಿ ದಶರಥ ಸಮರ್ಥ ಆಡಳಿತಗಾರನಾಗಿದ್ದ. ಆತನ ಕಾಲದಲ್ಲಿ ಪ್ರಜೆಗಳು ನಿತ್ಯಸಂತುಷ್ಟರಾಗಿದ್ದರು. ಎಲ್ಲರೂ ಎಲ್ಲಾ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದರು. ತಮಗೆ ಸಿಕ್ಕಿದುದರಲ್ಲಿಯೇ ನಿತ್ಯತೃಪ್ತಿಯನ್ನು ಹೊಂದಿದ್ದರು. ಅಯೋಧ್ಯೆಯಲ್ಲಿ ವಿಶೇಷ ಕಾಮಾಸಕ್ತರಾಗಲಿ, ಕ್ರೂರಕರ್ಮಿಗಳಾಗಲಿ, ಅಜ್ಞರಾಗಲಿ, ನಾಸ್ತಿಕರಾಗಲಿ, ದರಿದ್ರರಾಗಲಿ ಇರಲಿಲ್ಲ. ಅಯೋಧ್ಯೆಯ ವರ್ಣನೆಯನ್ನು ಮಾಡುವಾಗ ದಶರಥನ ಸೇನೆ ಮತ್ತು ಅಯೋಧ್ಯೆಯ ಜನರ ಗುಣಸ್ವಭಾವವನ್ನು ವಿವರಿಸಿದ್ದೇನೆ. ಯಾವುದೇ ರಾಜನ ಆಡಳಿತ ಬಿಗಿಯಾಗಬೇಕಾದರೆ ಅದಕ್ಕೆ ಸಂಬಂಧಿಸಿದ ಅಧಿಕಾರ ವರ್ಗ ದಕ್ಷತೆಯಿಂದ ಕೂಡಿರಬೇಕು, ಯೋಗ್ಯರಾದ ಸಚಿವರು ಮತ್ತು ಧರ್ಮಮಾರ್ಗದಲ್ಲಿ ರಾಜ ಸದಾ ಇರುವಂತೆ ನೋಡಿಕೊಳ್ಳುವ ಪುರೋಹಿತರು ಬಹು ಮುಖ್ಯ. ರಾಜನಿಗೆ ಕೆಟ್ಟ ಹೆಸರಾಗಲಿ, ಒಳ್ಳೆಯ ಹೆಸರಾಗಲಿ ಬರುವುದರಲ್ಲಿ ಅಮಾತ್ಯ ಮತ್ತು ಪುರೋಹಿತರ ಪಾತ್ರ ದೊಡ್ಡದು. ದಶರಥನಿಗೆ ಸಹಾಯಮಾಡಲು ಮಂತ್ರಾಲೋಚನೆಯಲ್ಲಿ ಸಮರ್ಥರಾದ, ಸದಾ ಕಾರ್ಯತತ್ಪರರಾದ ಮತ್ತು ಪರರ ಮನಸ್ಸಿನಲ್ಲಿರುವ ವಿಷಯಗಳನ್ನು ಅವರ ಮುಖಭಾವದಿಂದಲೇ ತಿಳಿಯಬಲ್ಲ ಇಂಗಿತಜ್ಞರಾದ ಧೃಷ್ಟಿ, ಜಯಂತ, ವಿಜಯ, ಸಿದ್ಧಾರ್ಥ, ಅರ್ಥಸಾಧಕ, ಅಶೋಕ, ಮಂತ್ರಪಾಲ ಮತ್ತು ಸುಮಂತ್ರ ಎನ್ನುವ ಎಂಟು ಮಂತ್ರಿಗಳು ಆತನ ಆಸ್ಥಾನದಲ್ಲಿ ಇದ್ದರು. ಅವರು ವಂಶಪರಂಪರೆಯಿಂದ ಬಂದವರು ಎನ್ನುವ ಕಾರಣಕ್ಕಾಗಿ ತಮ್ಮ ಹುದ್ದೆಯಲ್ಲಿ ಇದ್ದವರಲ್ಲ. ಹಾಗಂತ ರಾಜಕಾರಣಕ್ಕೆ ಹೊಸಬರೂ ಆಗಿರಲಿಲ್ಲ.

king dasharatha

ಯಾರನ್ನಾದರೂ ಹುದ್ದೆಗೆ ನಿಯಕ್ತಿಗೊಳಿಸುವ ಮುನ್ನ ಅವರನ್ನು ಚನ್ನಾಗಿ ಪರೀಕ್ಷಿಸಲಾಗುತ್ತಿತ್ತು. ಅರ್ಥಶಾಸ್ತ್ರದಲ್ಲಿ ರಾಜನ ಆಸ್ಥಾನದಲ್ಲಿರುವವರನ್ನು ಪರೀಕ್ಷಿಸುವ ವಿಧಾನವನ್ನು ಹೇಳುವಾಗ ಧರ್ಮಾದಿ ಉಪಧಾ, ಅರ್ಥೋಪಧಾ, ಕಾಮೋಪಧಾ, ಭಯೋಪಧಾಗಳ ಮೂಲಕ ಪರೀಕ್ಷಿಸಬೇಕು ಎಂದು ಹೇಳುತ್ತದೆ. ಅಂದರೆ ರಾಜನಲ್ಲಿ ಅಧರ್ಮವನ್ನು ಕಲ್ಪಿಸಿ ಅವನನ್ನು ಪಟ್ಟದಿಂದ ಇಳಿಸೋಣವೇ ಎನ್ನುವ ಆಮಿಷಕ್ಕೆ ಒಡ್ಡಿದಾಗಲೂ ಅದನ್ನು ಯಾವಾತ ತಿರಸ್ಕರಿಸುತ್ತಾನೋ, ಹಣದ ಆಮಿಷದ ಮೂಲಕ ರಾಜನಿಂದ ಬೇರ್ಪಡಿಸಲು ಸಾಧ್ಯವೋ ಎನ್ನುವುದನ್ನು ಪರೀಕ್ಷಿಸುವುದು, ರಾಣಿ ನಿನ್ನನ್ನು ಬಯಸಿದ್ದಾಳೆ, ಅವಳನ್ನು ಸೇರಿದರೆ ನಿನಗೆ ಕೈತುಂಬಾ ಹಣ ಸಿಗುವುದು ಎನ್ನುವ ಆಮಿಷವನ್ನು ಒಡ್ಡಿದಾಗಲೂ ಅದನ್ನು ತಿರಸ್ಕರಿಸುವಂಥವರು, ರಾಜನಿಂದ ಅವಮಾನಿತರಾದ (ಹಾಗೇ ನಟಿಸಿ) ಅಮಾತ್ಯನಾದವ ಇತರರನ್ನು ನಾವೆಯಲ್ಲಿ ಕರೆದುಕೊಂಡು ಹೋಗಿ ರಾಜನ ವಿರುದ್ಧ ಅವರನ್ನು ಎತ್ತಿಕಟ್ಟಿದಾಗ ಯಾರು ತಿರಸ್ಕರಿಸಿ ರಾಜನಿಗೆ ನಿಷ್ಠೆಯುಳ್ಳವರಾಗಿರುತ್ತಾರೆಯೋ ಅಂಥವರು ಮಾತ್ರ ಅಮಾತ್ಯರಾಗಲು ಯೋಗ್ಯರು ಎನ್ನುತ್ತದೆ. ದಶರಥನ ಈ ಅಷ್ಟ ಮಂತ್ರಿಗಳು ರಾಜದ್ರೋಹ-ಪ್ರಜಾದ್ರೋಹ-ಸ್ವಾರ್ಥಗಳಿಂದ ಮುಕ್ತರಾಗಿದ್ದರು. ರಾಮನನ್ನು ಅರಣ್ಯಕ್ಕೆ ಕಳಿಸು ಎನ್ನುವ ಸಂದರ್ಭದಲ್ಲಿ ಸುಮಂತ್ರ ರಾಜನ ಎದುರಿಗೇ ಕೈಕೇಯನ್ನು ದೂಷಿಸುವಾಗ ಮತ್ತು ವಶಿಷ್ಠರು ಆಕೆಯನ್ನು ಕಟುವಾಗಿ ನಿಂದಿಸುವಾಗ ಅವರ ರಾಜನಿಷ್ಟೆ, ನಿಸ್ವಾರ್ಥಪರತೆ ಎದ್ದು ಕಾಣುತ್ತದೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಗಂಧವತಿಗೆ ಸಿರಿಗಂಧಲೇಪನನ ಆಗಮನ

ಅವರೆಲ್ಲ ವಿದ್ಯಾವಿನೀತಾ- ಎಲ್ಲ ವಿಷಯಗಳಲ್ಲಿಯೂ ಪಾರಂಗತರಾಗಿದ್ದರು. ಹಿಮನ್ತಃ-ಅಕಾರ್ಯವನ್ನು ಮಾಡಲು ಲಜ್ಜೆಪಡುತ್ತಿದ್ದರು, ಕುಶಲಾ-ನೀತಿಶಾಸ್ತ್ರ ಕೋವಿದರು, ನಿಯತೇಂದ್ರಿಯಾ-ಇಂದ್ರಿಯ ನಿಗ್ರಹವನ್ನು ಸ್ಥಾಪಿಸಿದವರು, ಶ್ರೀಮನ್ತಃ – ಭಾಗ್ಯಸಂಪನ್ನರು, ನೀತಿ ಶಾಸ್ತ್ರ ಬಲ್ಲವರು, ದೃಢವಿಕ್ರಮಿಗಳು, ಕೀರ್ತಿವಂತರು, ಪ್ರಣಿಹೀತಾ-ಕೊಟ್ಟಮಾತಿನಂತೆ ನಡೆಯುವವರು, ಎಲ್ಲಕ್ಕಿಂತ ಮುಖ್ಯವಾಗಿ ತಾಳ್ಮೆಯುಳ್ಳವರು, ಸದಾ ನಗುಮುಖದಿಂದಲೇ ಮಾತನಾಡುತ್ತಾ ಎದುರಿನಲ್ಲಿರುವವರ ಅಂತರಂಗವನ್ನು ಶೋಧಿಸುವಂತವರು, ಆಡಿದ ಮಾತಿನಂತೆ ನಡೆಯುವವರು-ಯಥಾವಚನಕಾರಿಣಃ ಹೀಗೆ ರಾಜಕಾರಣದ ಸಮಗ್ರವನ್ನು ಅರ್ಥಮಾಡಿಕೊಂಡವರಾಗಿದ್ದರು. ತಮ್ಮ ಮಕ್ಕಳೇ ತಪ್ಪು ಮಾಡಿದರೂ ಅವರನ್ನು ಶಿಕ್ಷಿಸುವಂತಹ ದಂಡಕೋವಿದರಾಗಿದ್ದರು.. ಹಾಗಂತ ಇವರನ್ನು ನೇಮಿಸಿಕೊಳ್ಳುವಾಗ ಸುಖಾಸುಮ್ಮನೆ ನೇಮಿಸಿಕೂಳ್ಳಲಿಲ್ಲ. ಅವರ ರಾಜನಿಷ್ಠೆಯನ್ನು ಚನ್ನಾಗಿ ಪರೀಕ್ಷಿಸಿದ–ಸೌಹ್ಯದೇಷು ಪರೀಕ್ಷಿತಾಃ, ನಂತರವೇ ಅವರನ್ನು ಆಯಾ ಹುದ್ಧೆಗಳಿಗೆ ನಿಯುಕ್ತಿಗೊಳಿಸಲಾಗುತ್ತಿತ್ತು. ದಶರಥ ನಿಧನನಾದಾಗ ಭರತನನ್ನು ಕರೆತರಲು ಹೋದವರಲ್ಲಿ ಅಶೋಕ ಮತ್ತು ವಿಜಯ ಪ್ರಮುಖರಾದವರು. ಆಗ ಅವರು ಭರತ ಎಷ್ಟೇ ಒತ್ತಾಯಿಸಿದರೂ ಅಯೋಧ್ಯೆಯಲ್ಲಿ ಏನಾಗಿದೆ ಎನ್ನುವುದನ್ನು ಹೇಳದೇ ಆತನನ್ನು ಅಯೋಧ್ಯೆಗೆ ಕರೆತರುವಲ್ಲಿ ನಡೆಸಿದ ಕಾರ್ಯವನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ಪ್ರಾಚೀನ ಕಾಲದಲ್ಲಿ ಧಾರ್ಮಿಕ ವಿಚಾರದಲ್ಲಿಯೂ ರಾಜನ ಆಸ್ಥಾನದಲ್ಲಿ ತುಂಬಾ ಮಹತ್ವವಿತ್ತು. ಈ ಪುರೋಹಿತ ವರ್ಗ ತಮಗಾಗಿ ಏನನ್ನೂ ಬಯಸುತ್ತಿರಲಿಲ್ಲ. ರಾಜ ತಪ್ಪಿ ನಡೆದಾಗ ಆತನನ್ನು ಎಚ್ಚರಿಸಿ ಅಗತ್ಯಬಿದ್ದರೆ ಆತನನ್ನು ಅಧಿಕಾರದಿಂದ ಇಳಿಸುವ “ಧರ್ಮದಂಡ್ಯೋಸಿ” ಧರ್ಮದಂಡವನ್ನು ಹೊಂದಿದ್ದರು. ವಶಿಷ್ಠ ಮತ್ತು ವಾಮದೇವರೆನ್ನುವ ಇಬ್ಬರು ಪುರೋಹಿತರಾಗಿ ಅಯೋಧ್ಯೆಯ ಹಿತವನ್ನು ಸದಾಕಾಲವೂ ಬಯಸಿದ್ದರು. ವಸಿಷ್ಠರೂ ಸಹ ನಿಷ್ಟುರವಾದಿಗಳು. ತ್ರಿಶಂಕು ತನಗಾಗಿ ಇಂದ್ರಪದವಿಯ ಯಜ್ಞವನ್ನು ಮಾಡಿ ಎಂದಾಗ ನಿಷ್ಟುರವಾಗಿ ತಿರಸ್ಕರಿಸಿದ್ದರು. ಶಶಾದನೆನ್ನುವವ ಇಕ್ಷ್ವಾಕುವಿನ ಮಗ. ಆತ ನಡತೆ ತಪ್ಪಿದಾಗ ಆತನಿಗೆ ಶಿಕ್ಷೆ ವಿಧಸಲೇಬೇಕು ಎಂದು ಇಕ್ಷ್ವಾಕುವಿಗೆ ಹೇಳಿದವರು. ಇಲ್ಲಿ ನೆನಪಿಡಬೇಕಾದದ್ದು ವಸಿಷ್ಠನೆನ್ನುವುದು ಒಂದು ಪರಂಪರೆ. ವಂಶವಾಹಿನಿ. ಶಂಕರಪೀಠವನ್ನೇರುವ ಎಲ್ಲರೂ ಶಂಕರಾಚಾರ್ಯರು ಎಂದು ಕರೆಯಿಸಿಕೊಳ್ಳುವ ಹಾಗೆ, ಆಗಿನ ಕಾಲದಲ್ಲಿ ಬ್ರಹ್ಮರ್ಷಿಗಳನ್ನು ಅದೇ ಹೆಸರಿನಿಂದ ಕರೆಯಲಾಗುತ್ತಿತ್ತು ಎನ್ನಬಹುದು. ನಂತರ ಇದೇ ಗೋತ್ರವಾಗಿ ಬದಲಾಗಿರಬೇಕು. ಹೀಗೆ ಒಂದು ಪ್ರಬಲ ರಾಜ್ಯವೊಂದರ ಅಧಿಕಾರಿಯಾಗಿ ದಶರಥ ಆಳುತ್ತಿದ್ದ. ರಾಮನಂತವ ಅವತರಿಸಬೇಕಾದ ಕ್ಷೇತ್ರಕ್ಕೆ ಆ ಕಾಲದಲ್ಲಿ ಭೂಮಂಡಲದಲ್ಲಿ ಇದಕ್ಕಿಂತ ಮತ್ತೊಂದು ಯುಕ್ತವಾದ ಮನೆತನವಿರಲಿಲ್ಲವೆನ್ನುವುದನ್ನು ವಾಲ್ಮೀಕಿ ಇಲ್ಲಿ ತಿಳಿಸುತ್ತಾನೆ.

ಮುಂದಿನ ಸಂಚಿಕೆಯಲ್ಲಿ ಆತನ ವ್ಯಕ್ತಿತ್ವದ ವಿಶೇಷಗಳ ಕುರಿತು ನೋಡೋಣ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಾವತಾರಕ್ಕೊಂದು ಪೀಠಿಕಾ ಪ್ರಕರಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: 3ನೇ ಸಲ ಗೆಲ್ಲಿಸಿದ ವಾರಾಣಸಿ ಜನತೆಗೆ ಧನ್ಯವಾದ ಎಂದ ಮೋದಿ; ಗೆದ್ದ ಬಳಿಕ ಮೊದಲ ಭೇಟಿ!

Narendra Modi: ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ ನರೇಂದ್ರ ಮೋದಿ ಅವರು 1.5 ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದಾರೆ. ವಾರಾಣಸಿಯಿಂದ ಮೂರನೇ ಬಾರಿಗೆ ಗೆದ್ದು, ಮೂರನೇ ಬಾರಿಗೆ ಪ್ರಧಾನಿಯಾಗಿ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ವಾರಾಣಸಿಗೆ ಭೇಟಿ ನೀಡಿದ್ದಾರೆ.

VISTARANEWS.COM


on

Narendra Modi
Koo

ವಾರಾಣಸಿ: ಲೋಕಸಭೆ ಚುನಾವಣೆ (Lok Sabha Election 2024) ಬಳಿಕ ಇದೇ ಮೊದಲ ಬಾರಿಗೆ ತಮ್ಮ ಲೋಕಸಭೆ ಕ್ಷೇತ್ರವಾದ ವಾರಾಣಸಿಗೆ (Varanasi) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ (ಜೂನ್‌ 18) ಭೇಟಿ ನೀಡಿದ್ದಾರೆ. ವಾರಾಣಸಿಯಲ್ಲಿ ನಡೆದ ಕಿಸಾನ್ ಸಮ್ಮೇಳನದಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ (PM Kisan Nidhi Samman) ಯೋಜನೆಯ 20 ಸಾವಿರ ಕೋಟಿ ರೂಪಾಯಿಯನ್ನು ದೇಶದ 9.26 ಕೋಟಿ ರೈತರ ಖಾತೆಗಳಿಗೆ ಜಮೆ ಮಾಡಿದ ಬಳಿಕ ಅವರು ಮಾತನಾಡಿದರು. “ಲೋಕಸಭೆ ಚುನಾವಣೆಯಲ್ಲಿ ನೀವು ನನ್ನನ್ನು ಮೂರನೇ ಬಾರಿಗೆ ಸಂಸದನಾಗಿ ಮಾತ್ರವಲ್ಲ, ಮೂರನೇ ಬಾರಿಗೆ ದೇಶದ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದೀರಿ. ನಿಮಗೆ ನನ್ನ ಧನ್ಯವಾದಗಳು” ಎಂದು ಹೇಳಿದರು.

“ಕಳೆದ 60 ವರ್ಷದಲ್ಲಿಯೇ ದೇಶದಲ್ಲಿ ಯಾವುದೇ ಪಕ್ಷದ ಸರ್ಕಾರವನ್ನು ಸತತ ಮೂರನೇ ಬಾರಿಗೆ ಆಯ್ಕೆ ಮಾಡಿರಲಿಲ್ಲ. ಆದರೆ, ದೇಶದ ಜನರು ನನ್ನನ್ನು ಸತತ ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ನೇಮಕ ಮಾಡಿದ್ದಾರೆ. ವಾರಾಣಸಿಯ ಜನರೂ ನನ್ನ ಜತೆ ನಿಂತಿದ್ದಾರೆ. ಇದು ಐತಿಹಾಸಿಕವಾಗಿದ್ದು, ಮುಂದಿನ 5 ವರ್ಷಗಳವರೆಗೆ ನಿಮ್ಮ ಸೇವೆ ಮಾಡುತ್ತೇನೆ. ವಿಕಸಿತ ಭಾರತದ ನಿರ್ಮಾಣಕ್ಕಾಗಿ ಶ್ರಮ ವಹಿಸುತ್ತೇನೆ. ರೈತರು, ಯುವಕರು ಹಾಗೂ ಮಹಿಳೆಯರು ದೇಶದ ಮೂರು ಸ್ತಂಭಗಳಾಗಿದ್ದು, ಇವರೆಲ್ಲರ ಏಳಿಗೆಗೆ ಆಡಳಿತ ನಡೆಸುತ್ತೇವೆ” ಎಂದು ತಿಳಿಸಿದರು.

“ಕೇಂದ್ರದಲ್ಲಿ ನಮ್ಮ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ದೇಶದ 9.26 ಕೋಟಿ ರೈತರಿಗೆ ಹಣಕಾಸು ನೆರವು ನೀಡುವ ಕಡತಕ್ಕೆ ನಾನು ಮೊದಲು ಸಹಿ ಹಾಕಿದೆ. ಆ ಮೂಲಕ ರೈತರಿಗೆ ಅನುಕೂಲ ಮಾಡುವುದು ನಮ್ಮ ಉದ್ದೇಶವಾಗಿತ್ತು. ಇನ್ನು ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ ಬಡವರಿಗೆ 3 ಕೋಟಿ ಬಡವರಿಗೆ ಮನೆ ನಿರ್ಮಿಸುವ ಕುರಿತು ಕೂಡ ತೀರ್ಮಾನಿಸಲಾಗಿದೆ. ಲಕ್‌ಪತಿ ದೀದಿ ಸೇರಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಇದರಿಂದ ರೈತರು ಸಕಲ ರೀತಿಯಲ್ಲಿ ಏಳಿಗೆ ಹೊಂದಲಿದ್ದಾರೆ” ಎಂದರು.

“ಮೂರನೇ ಅವಧಿಯಲ್ಲಿ ದೇಶದ ಏಳಿಗೆಗೆ ಜತೆಗೆ ವಾರಾಣಸಿಯನ್ನೂ ಇನ್ನಷ್ಟು ಅಭಿವೃದ್ಧಿ ಮಾಡಲಾಗುವುದು. ಈಗಾಗಲೇ ಕಾಶಿಯ ಯುವಕ, ಯುವತಿಯರು, ರೈತರ ಏಳಿಗೆಗೆ ಹತ್ತಾರು ಕ್ರಮಗಳು, ರೈಲು ನಿಲ್ದಾಣ ಅಭಿವೃದ್ಧಿ, ಸಾಂಸ್ಕೃತಿಕ ಹಿರಿಮೆ, ಪರಂಪರೆಯನ್ನು ಮರುಕಳಿಸಲಾಗಿದೆ. ಧಾರ್ಮಿಕ ನಗರಿಯು ಅಭಿವೃದ್ಧಿಯ ನಗರವಾಗಿಯೂ ರೂಪುಗೊಂಡಿದ್ದನ್ನು ಎಲ್ಲರೂ ಕಾಣಬಹುದು. ಕಾಶಿ ವಿಶ್ವನಾಥನ ಕೃಪಾಶೀರ್ವಾದದಿಂದ ಮುಂದಿನ ವರ್ಷಗಳಲ್ಲಿಯೂ ಏಳಿಗೆಗೆ ಶ್ರಮ ವಹಿಸುತ್ತೇವೆ. ನನಗೆ ಆಶೀರ್ವಾದ ಮಾಡಿದ ಎಲ್ಲರಿಗೂ ಮತ್ತೊಮ್ಮೆ ಹೃದಯಾಂತರಾಳದ ಧನ್ಯವಾದ” ಎಂದು ಹೇಳಿದರು.

ಇದನ್ನೂ ಓದಿ: ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Continue Reading

ವಿದೇಶ

ಭಾರತದಿಂದ ಅಮೆರಿಕಕ್ಕೆ ತೆರಳಿ, 29 ವರ್ಷದ ಯುವತಿಯನ್ನು ಕೊಂದ ಪಂಜಾಬ್‌ ವ್ಯಕ್ತಿ; ಇಷ್ಟೇಕೆ ಸೇಡು?

ಅಮೆರಿಕದ ನ್ಯೂಜೆರ್ಸಿಯಲ್ಲಿ ಪಂಜಾಬ್‌ ಮೂಲದ, 19 ವರ್ಷದ ಗೌರವ್‌ ಗಿಲ್ಲ ಎಂಬಾತನು 29 ವರ್ಷದ ಜಸ್ವೀರ್‌ ಕೌರ್‌ ಎಂಬ ಮಹಿಳೆಯನ್ನು ಕೊಂದಿದ್ದಾನೆ. ಗುಂಡಿನ ದಾಳಿಯಲ್ಲಿ 20 ವರ್ಷದ ಗಗನ್‌ದೀಪ್‌ ಕೌರ್‌ ಎಂಬ ಯುವತಿಯು ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆ ಮಾಡಲೆಂದೇ ಆತನು ಅಮೆರಿಕಕ್ಕೆ ತೆರಳಿದ್ದ ಎಂದು ತಿಳಿದುಬಂದಿದೆ.

VISTARANEWS.COM


on

Indian Women
ಜಸ್ವೀನ್‌ ಕೌರ್‌ ಹಾಗೂ ಗಗನ್‌ದೀಪ್‌ ಕೌರ್.‌
Koo

ವಾಷಿಂಗ್ಟನ್‌: ಇತ್ತೀಚಿನ ಯುವಕ-ಯುವತಿಯರಲ್ಲಿ ಸೇಡಿನ ಕೃತ್ಯಗಳು, ಲವ್‌ ಬ್ರೇಕಪ್‌ (Love Breakup) ಆದ ಕೂಡಲೇ ಪ್ರೇಯಸಿಯನ್ನು ಕೊಲ್ಲುವುದು, ಆಸಿಡ್‌ ದಾಳಿ ಮಾಡುವುದು ಸೇರಿ ಹಲವು ಕೃತ್ಯಗಳು ನಡೆಯುತ್ತಲೇ ಇರುತ್ತವೆ. ಇನ್ನು ಪಂಜಾಬ್‌ ಯುವಕನೊಬ್ಬ ಭಾರತದಿಂದ ಅಮೆರಿಕಕ್ಕೆ (America) ತೆರಳಿ, ಅಲ್ಲಿ 29 ವರ್ಷದ ಮಹಿಳೆಯ ಮೇಲೆ 7 ಬಾರಿ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಈ ಭೀಕರ ಹತ್ಯೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಅಮೆರಿಕದ ನ್ಯೂಜೆರ್ಸಿಯಲ್ಲಿ ಪಂಜಾಬ್‌ ಮೂಲದ, 19 ವರ್ಷದ ಗೌರವ್‌ ಗಿಲ್ಲ ಎಂಬಾತನು 29 ವರ್ಷದ ಜಸ್ವೀರ್‌ ಕೌರ್‌ ಎಂಬ ಮಹಿಳೆಯನ್ನು ಕೊಂದಿದ್ದಾನೆ. ಗುಂಡಿನ ದಾಳಿಯಲ್ಲಿ 20 ವರ್ಷದ ಗಗನ್‌ದೀಪ್‌ ಕೌರ್‌ ಎಂಬ ಯುವತಿಯು ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತದಿಂದ ಅಮೆರಿಕಕ್ಕೆ ತೆರಳಿ, ಅಲ್ಲಿ ಯುವತಿಯನ್ನು ಹುಡುಕಿ, ಅವರ ಮನೆಗೇ ತೆರಳಿ ಗುಂಡಿನ ದಾಳಿ ಮಾಡಲು ನಿಖರ ಕಾರಣ ತಿಳಿದುಬಂದಿಲ್ಲ. ಕೃತ್ಯದ ಬಳಿಕ ಪೊಲೀಸರು ಗೌರವ್‌ ಗಿಲ್‌ನನ್ನು ಬಂಧಿಸಿದ್ದಾರೆ.

ಪಂಜಾಬ್‌ನ ಗೌರವ್‌ ಗಿಲ್‌ ಇತ್ತೀಚೆಗೆ ಅಮೆರಿಕಕ್ಕೆ ತೆರಳಿದ್ದು, ವಾಷಿಂಗ್ಟನ್‌ ಜಿಲ್ಲೆಯ ಕೆಂಟ್‌ ಪಟ್ಟಣದಲ್ಲಿ ವಾಸಿಸುತ್ತಿದ್ದ. ನ್ಯೂಜೆರ್ಸಿಯ ಕಾರ್ಟರೆಟ್‌ನಲ್ಲಿ ಘಟನೆ ನಡೆದಿದೆ. ಗೌರವ್‌ ಗಿಲ್‌ ಹಾಗೂ ಗಗನ್‌ದೀಪ್‌ ಕೌರ್‌ ಅವರು ಪಂಜಾಬ್‌ನ ನಾಕೋದರ್‌ನಲ್ಲಿ ಕೋಚಿಂಗ್‌ ಸೆಂಟರ್‌ನಲ್ಲಿ ಅಧ್ಯಯನ ಮಾಡುವಾಗ ಪರಸ್ಪರ ಪರಿಚಯವಾಗಿದ್ದರು ಎಂದು ತಿಳಿದುಬಂದಿದೆ. ಜಸ್ವೀರ್‌ ಅವರು ಗಗನ್‌ದೀಪ್‌ ಕಸಿನ್‌ ಆಗಿದ್ದು, ಗಗನ್‌ದೀಪ್‌ ಅವರು ಜಸ್ವೀರ್‌ ಮನೆಗೆ ಹೋಗಿದ್ದರು. ಆಗ ಗೌರವ್‌ ಗಿಲ್‌ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಜಸ್ವೀರ್‌ ಕೌರ್‌ ಅವರಿಗೆ ಈಗಾಗಲೇ ಮದುವೆಯಾಗಿದ್ದು, ಅಮೆಜಾನ್‌ ಫೆಸಿಲಿಟಿಯಲ್ಲಿ ಇದಕ್ಕೂ ಮೊದಲು ಕೆಲಸ ಮಾಡುತ್ತಿದ್ದರು. ಜಸ್ವೀರ್‌ ಕೌರ್‌ ಅವರ ಪತಿಯು ವಾಹನ ಚಾಲಕರಾಗಿದ್ದು, ಘಟನೆ ನಡೆದಾಗ ಅವರು ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ಜಸ್ವೀರ್‌ ಅವರು ಐದು ವರ್ಷದ ಹಿಂದೆಯೇ ಅಮೆರಿಕಕ್ಕೆ ತೆರಳಿದ್ದಾರೆ. ಇನ್ನು ಗಗನ್‌ದೀಪ್‌ ಅವರು ಅಧ್ಯಯನ ವೀಸಾ ಪಡೆದು ಇತ್ತೀಚೆಗೆ ಅಮೆರಿಕಕ್ಕೆ ಹೋಗಿದ್ದರು ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ಗೌರವ್‌ ಗಿಲ್‌ ಹಾಗೂ ಗಗನ್‌ದೀಪ್‌ ಕೌರ್‌ ಪ್ರೀತಿಸುತ್ತಿದ್ದರು. ಇಬ್ಬರ ಮಧ್ಯೆ ಬ್ರೇಕಪ್‌ ಆಗಿತ್ತು. ಇದರಿಂದ ಕುಪಿತಗೊಂಡ ಗೌರವ್‌ ಗಿಲ್‌, ಗಗನ್‌ದೀಪ್‌ ಕೌರ್‌ ಅವರನ್ನು ಕೊಲೆ ಮಾಡಲು ಗುಂಡು ಹಾರಿಸಿದ್ದಾನೆ. ಆಗ ಜಸ್ವೀರ್‌ ಕೌರ್‌ಗೆ ಗುಂಡು ತಗುಲಿ, ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಜಸ್ವೀರ್‌ ತಂದೆ ಹೇಳುವುದೇನು?

“ನನ್ನ ಪುತ್ರಿ ಜಸ್ವೀರ್‌ ಕೌರ್‌ ಮನೆಯಲ್ಲಿ ಗಗನ್‌ದೀಪ್‌ ಕೌರ್‌ ಇದ್ದಳು. ಘಟನೆ ನಡೆಯುವಾಗ ಜಸ್ವೀರ್‌ ಕೌರ್‌ ಮಲಗಿದ್ದಳು. ಮನೆಯ ಹೊರಗೆ ಗಗನ್‌ದೀಪ್‌ ಕೌರ್‌ ಹಾಗೂ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಮಧ್ಯೆ ವಾಗ್ವಾದ ನಡೆದಿದೆ. ಆಗ ಸಹಾಯಕ್ಕಾಗಿ ಗಗನ್‌ದೀಪ್‌ ಕೌರ್‌ ನನ್ನ ಮಗಳನ್ನು ಕರೆದಿದ್ದಾಳೆ. ಆಗ ಜಸ್ವೀರ್‌ ಕೌರ್‌ ಜಗಳ ಬಿಡಿಸಲು ಹೋಗಿದ್ದು, ಆರೋಪಿಯು ನನ್ನ ಮಗಳ ಮುಖಕ್ಕೆ ಏಳು ಗುಂಡು ಹಾರಿಸಿ ಕೊಂದಿದ್ದಾನೆ” ಎಂದು ಜಸ್ವೀರ್‌ ಕೌರ್‌ ತಂದೆ ಕೇವಾಲ್‌ ಸಿಂಗ್‌ ಹೇಳಿದ್ದಾರೆ.

ಇದನ್ನೂ ಓದಿ: Actor Darshan: ಹಾಸ್ಯನಟ ಚಿಕ್ಕಣ್ಣಗೆ ಮೂರು ಗಂಟೆ ಪೊಲೀಸರ ಡ್ರಿಲ್‌, ರೇಣುಕಾಸ್ವಾಮಿ ಕೊಲೆ ವಿಷಯ ಬಂತಾ ಪಾರ್ಟಿಯಲ್ಲಿ?

Continue Reading

ಪ್ರಮುಖ ಸುದ್ದಿ

Pavithra Gowda: ಪೊಲೀಸ್ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್‌

Pavithra Gowda: ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವೈದ್ಯರು ತೆರಳಿ ತಪಾಸಣೆ ನಡೆಸಿದ್ದರು. ಆದರೆ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಪವಿತ್ರಾಗೌಡಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

VISTARANEWS.COM


on

Pavithra Gowda
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಪವಿತ್ರಾಗೌಡ ಅಸ್ವಸ್ಥಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ (Pavithra Gowda), ಅಸ್ವಸ್ಥಗೊಂಡಿದ್ದರಿಂದ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ.

ಕೆಲವೇ ಕ್ಷಣಗಳ ಹಿಂದೆ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವೈದ್ಯರು ಬಂದಿದ್ದರು. ಆದರೆ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಪವಿತ್ರಾಗೌಡಳನ್ನು ಮಲ್ಲತ್ತಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Bhavani Revanna: ಭವಾನಿ ರೇವಣ್ಣ‌ ನಿರಾಳ, ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್

ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌; ಬುಲ್ಡೋಜರ್‌ ರೆಡಿ ಮಾಡುತ್ತಿದೆ ಬಿಬಿಎಂಪಿ

Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮವಾಗಿ ರಾಜಕಾಲುವೆ ಮೇಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಮನೆ ಒತ್ತುವರಿ ತೆರವು ಮಾಡಲು ರಾಜ್ಯ ಸರ್ಕಾರ ಸೂಚಿಸಿದೆ. ನಟ ದರ್ಶನ್ (Actor Darshan) ಮನೆ ತೆರವಿಗೆ ಪಾಲಿಕೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದ ಮೌಕಿಕ ಸೂಚನೆ ಸಿಕ್ಕಿದೆ ಎನ್ನಲಾಗಿದ್ದು, ಯಾರೇ ಒತ್ತುವರಿ ಮಾಡಿ ಸ್ಟೇ ತಂದಿದ್ದರೂ ಕಾನೂನಿನ ಪ್ರಕಾರ ತೆರವು ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ನಟ ದರ್ಶನ್ ಮನೆ ರಾಜಕಾಲುವೆ ‌ಮೇಲೆ ಇದ್ದರೂ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಇದೀಗ ಒತ್ತುವರಿಗೆ ತೆರವಿಗೆ ಸೂಚನೆ ಹಿನ್ನೆಲೆಯಲ್ಲಿ ಕ್ರಮಕ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿ ಮಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಕೂಡ ಒತ್ತುವರಿ ವಿಚಾರದಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ.

ರಾಜಧಾನಿಯಲ್ಲಿ 2016ರಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾದಾಗ ರಾಜ ಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಕಟ್ಟಡಗಳನ್ನು ತೆರವುಗೊಳಿಸಲು ಅಂದಿನ ಸಿದ್ದರಾಮಯ್ಯ ಸರ್ಕಾರ ಬಿಬಿಎಂಪಿಗೆ ಸೂಚನೆ ನೀಡಿತ್ತು. ಆಗ ಆರ್‌.ಆರ್‌. ನಗರದ ದರ್ಶನ್‌ ಅವರ ನಿವಾಸ ಕೂಡ ರಾಜ ಕಾಲುವೆಯ ಬಫರ್‌ ಜೋನ್‌ ಮೇಲೆ ನಿರ್ಮಿಸಿರುವುದು ತಿಳಿದುಬಂದಿತ್ತು.

ಇದನ್ನೂ ಓದಿ | Self Harming: ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಇನ್ಫೋಸಿಸ್‌ ಉದ್ಯೋಗಿ ಆತ್ಮಹತ್ಯೆ; ರೈಲಿಗೆ ತಲೆಕೊಟ್ಟ ಫ್ಲಿಪ್‌ಕಾರ್ಟ್‌ ಉದ್ಯೋಗಿ

ಐಡಿಯಲ್‌ ಹೋಮ್ಸ್‌, ದರ್ಶನ್‌, ಶಾಮನೂರು ಅವರ ಆಸ್ಪತ್ರೆ ಸೇರಿ ಹಲವು ಕಟ್ಟಡಗಳನ್ನು ತೆರವುಗೊಳಿಸುವಂತೆ ನೋಟಿಸ್‌ ನೀಡಲಾಗಿತ್ತು. ನೋಟಿಸ್‌ ನೀಡಿದ್ದರಿಂದ ದರ್ಶನ್‌ ಮತ್ತಿತರರು ಸಿವಿಲ್‌ ನ್ಯಾಯಾಲಯದಿಂದ ತಡೆಯಾಜ್ಞೆ ತಂದು, ಬಳಿಕ 2016 ಅಕ್ಟೋಬರ್‌ನಲ್ಲಿ ತೆರವು ಮಾಡದಂತೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಹೀಗಾಗಿ ಅಂದು ಒತ್ತುವರಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ದರ್ಶನ್‌ ಇದೀಗ ಬಂಧನವಾಗಿರುವ ಹಿನ್ನೆಲೆಯಲ್ಲಿ ಮನೆ ಒತ್ತುವರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

Continue Reading

ದೇಶ

‘ಯಾಕ್‌ ಹೀಗ್‌ ಮೋಸ ಮಾಡ್ದೆ’ ಎನ್ನುತ್ತಲೇ ಪ್ರೇಯಸಿಯನ್ನು ನಡು ರಸ್ತೆಯಲ್ಲಿ ಬಡಿದು ಕೊಂದ ಪ್ರೇಮಿ; Video ಇದೆ

ಆರತಿ ಯಾದವ್‌ ಹಾಗೂ ರೋಹಿತ್‌ ಯಾದವ್‌ ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಆತನ ನೋವಿಗೆ ಈಕೆ ಮುಲಾಮು ಆಗುತ್ತಿದ್ದಳು. ಈಕೆಯ ಮುನಿಸನ್ನು ಆತ ಪಿಸುಮಾತಿನಿಂದಲೇ ಸಮಾಧಾನ ಮಾಡುತ್ತಿದ್ದ. ಆದರೆ, ಕೆಲ ದಿನಗಳ ಹಿಂದಷ್ಟೇ ಆರತಿ ಯಾದವ್‌, ಬ್ರೇಕಪ್‌ ಮಾಡಿಕೊಳ್ಳೋಣ ಎಂದಿದ್ದಳು. ಈಕೆಯು ಇನ್ನೊಬ್ಬನನ್ನು ಪ್ರೀತಿಸುತ್ತಿದ್ದಾಳೆ ಎಂಬ ಶಂಕೆಯೂ ರೋಹಿತ್‌ ಯಾದವ್‌ ಮನಸ್ಸಲ್ಲಿ ಮೂಡಿತ್ತು. ಹಾಗಾಗಿಯೇ, ನಡು ರಸ್ತೆಯಲ್ಲಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Mumbai News
Koo

ಮುಂಬೈ: ಬದಲಾದ ಕಾಲಘಟ್ಟದಲ್ಲಿ ಲವ್‌ ಬ್ರೇಕಪ್‌ (Love Breakup) ಎನ್ನುವುದು ತುಂಬ ಸಾಮಾನ್ಯ ಎನಿಸಿದೆ. ಆಕರ್ಷಣೆಗೆ ಒಳಗಾಗಿ ಪ್ರೀತಿಸುವುದು, ಒಂದು ವರ್ಷ ಜತೆಗೆ ತಿರುಗಾಡಿ, ಸಣ್ಣ ಭಿನ್ನಾಭಿಪ್ರಾಯ ಬಂದರೂ ಪ್ರೀತಿಗೆ ತಿಲಾಂಜಲಿ ಇಡುವುದು ಯುವಕ-ಯುವತಿಯರಿಗೆ ರೂಢಿಯಾಗಿದೆ. ಆದರೆ, ಕೆಲವೊಂದು ಪ್ರಕರಣಗಳಲ್ಲಿ ಬ್ರೇಕಪ್‌ಗಳು ಹಿಂಸೆ, ಕೊಲೆಗೂ ಕಾರಣವಾಗುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದ (Maharashtra) ಮುಂಬೈನಲ್ಲಿ (Mumbai) ವ್ಯಕ್ತಿಯೊಬ್ಬ ಲವ್‌ ಬ್ರೇಕಪ್‌ ಎಂದಿದ್ದಕ್ಕೆ ಪ್ರೇಯಸಿಯನ್ನು ನಡು ರಸ್ತೆಯಲ್ಲಿಯೇ ಸ್ಪ್ಯಾನರ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಈ ಕೃತ್ಯದ ಭೀಕರ ವಿಡಿಯೊ ಈಗ ವೈರಲ್‌ ಆಗಿದೆ.

ಮುಂಬೈ ಬಳಿಯ ವಸಾಯ್‌ ಪ್ರದೇಶದ ರಸ್ತೆಯೊಂದರಲ್ಲಿ 20 ವರ್ಷದ ಆರತಿ ಯಾದವ್ ನಡೆದುಕೊಂಡು ಹೋಗುತ್ತಿರುತ್ತಾರೆ. ಆಗ 29 ವರ್ಷದ ರೋಹಿತ್‌ ಯಾದವ್‌ ಎಂಬಾತ ಸ್ಪ್ಯಾನರ್‌ ಹಿಡಿದುಕೊಂಡೇ ಓಡಿ ಬಂದು ಯುವತಿ ಮೇಲೆ ದಾಳಿ ಮಾಡಿದ್ದಾನೆ. ಯುವತಿ ತಲೆಗೆ, ಎದೆಗೆ ಸ್ಪ್ಯಾನರ್‌ನಿಂದ ಹೊಡೆದು, ಆಕೆ ನೆಲಕ್ಕೆ ಬಿದ್ದ ಮೇಲೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಇದೇ ವೇಳೆ ಒಂದಿಬ್ಬರು ವ್ಯಕ್ತಿಯನ್ನು ತಡೆಯಲು ಪ್ರಯತ್ನಿಸಿದರೂ ಅಷ್ಟೊತ್ತಿಗಾಗಲೇ ಗಂಭೀರವಾಗಿ ಗಾಯಗೊಂಡಿದ್ದ ಆರತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಲವ್‌ ಬ್ರೇಕಪ್‌ ಆಗಿದ್ದೇ ಕಾರಣ?

ಆರತಿ ಯಾದವ್‌ ಹಾಗೂ ರೋಹಿತ್‌ ಯಾದವ್‌ ಅವರು ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರ ನಡುವೆ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ, ಕೆಲ ದಿನಗಳ ಹಿಂದೆ ಆರತಿ ಯಾದವ್‌ ಈತನಿಗೆ ಬ್ರೇಕಪ್‌ ಎಂದಿದ್ದಳು. ಇನ್ಯಾವತ್ತೂ ನನ್ನನ್ನು ನೋಡಲು ಬರಬೇಡ, ಮಾತನಾಡಿಸಬೇಡ, ಕಾಲ್‌ ಮಾಡಿ ತೊಂದರೆ ಕೊಡಬೇಡ ಎಂದಿದ್ದಳು. ಇದರಿಂದ ರೋಹಿತ್‌ ಯಾದವ್‌ ನೊಂದಿದ್ದ. ಅಲ್ಲದೆ, ಆರತಿ ಯಾದವ್‌ ಬೇರೊಬ್ಬನ ಜತೆ ಪ್ರೀತಿಯ ಬಲೆಗೆ ಸಿಲುಕಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿತ್ತು.

ಬೇರೆಯವನನ್ನು ಪ್ರೀತಿಸುತ್ತಿದ್ದಾಳೆ ಎಂದು ಭಾವಿಸಿದ ರೋಹಿತ್‌ ಯಾದವ್‌, ನನಗೆ ಸಿಗದವಳು ಯಾರಿಗೂ ಸಿಗಬಾರದು ಎಂದು ಭಾವಿಸಿದ್ದಾನೆ. ಇದೇ ಕಾರಣಕ್ಕಾಗಿ ತುಂಬಿದ ರಸ್ತೆಯಲ್ಲಿಯೇ ಸ್ಪ್ಯಾನರ್‌ನಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯ ಬಳಿಕ, “ನನಗೇಕೆ ಹೀಗೆ ಮಾಡಿದೆ” ಎಂದು ಹತಾಶಯ ಧ್ವನಿಯಲ್ಲಿ ಕಿರುಚಿದ್ದಾನೆ. ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Continue Reading
Advertisement
Narendra Modi
ದೇಶ4 mins ago

Narendra Modi: 3ನೇ ಸಲ ಗೆಲ್ಲಿಸಿದ ವಾರಾಣಸಿ ಜನತೆಗೆ ಧನ್ಯವಾದ ಎಂದ ಮೋದಿ; ಗೆದ್ದ ಬಳಿಕ ಮೊದಲ ಭೇಟಿ!

Electric Shock
ವಿಜಯಪುರ17 mins ago

Electric shock : ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

Woman having headache. stressed, Migraine, World Brain Tumor day
ಆರೋಗ್ಯ23 mins ago

Migraine Problem: ಮೈಗ್ರೇನ್‌ ಉಪಶಮನಕ್ಕೆ ರೋಸ್‌ಮೆರಿ ಸುಗಂಧ ತೈಲ ಮದ್ದು!

Indian Women
ವಿದೇಶ38 mins ago

ಭಾರತದಿಂದ ಅಮೆರಿಕಕ್ಕೆ ತೆರಳಿ, 29 ವರ್ಷದ ಯುವತಿಯನ್ನು ಕೊಂದ ಪಂಜಾಬ್‌ ವ್ಯಕ್ತಿ; ಇಷ್ಟೇಕೆ ಸೇಡು?

Pavithra Gowda
ಪ್ರಮುಖ ಸುದ್ದಿ40 mins ago

Pavithra Gowda: ಪೊಲೀಸ್ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್‌

International Yoga Day 2024
ಫ್ಯಾಷನ್55 mins ago

International Yoga Day 2024: ಯುವತಿಯರ ಯೋಗಾಭ್ಯಾಸಕ್ಕೆ ಸಾಥ್‌ ನೀಡುವ 3 ಶೈಲಿಯ ಫ್ಯಾಷನ್‌ವೇರ್ಸ್

wild animals Attack
ಕೊಡಗು60 mins ago

Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

Viral Video
ಕ್ರಿಕೆಟ್1 hour ago

Viral Video: ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ ಪಾಕ್​ ವೇಗಿ; ತಡೆದು ನಿಲ್ಲಿಸಿದ ಪತ್ನಿ

Kempegowda Jayanti
ಕರ್ನಾಟಕ1 hour ago

Kempegowda Jayanti: ಬೆಂಗಳೂರಲ್ಲಿ ಜೂನ್ 27ಕ್ಕೆ ಕೆಂಪೇಗೌಡ ಜಯಂತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Train Accident
ದೇಶ1 hour ago

Train Accident: ಸಿಬ್ಬಂದಿ ನಿರ್ಲಕ್ಷ್ಯ, ಸಿಗ್ನಲ್‌ ದೋಷ; ಬಂಗಾಳ ರೈಲು ಅಪಘಾತಕ್ಕೇನು ಕಾರಣ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌