Dina Bhavishya : ಈ ರಾಶಿಯವರು ಇಂದು ಜಾಸ್ತಿ ಮಂಡೆ ಬಿಸಿ ಮಾಡಿಕೊಳ್ಳಬೇಡಿ! ಯಾವ ರಾಶಿಗಳಿಗೆ 9 ಲಕ್ಕಿ ನಂಬರ್? - Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರು ಇಂದು ಜಾಸ್ತಿ ಮಂಡೆ ಬಿಸಿ ಮಾಡಿಕೊಳ್ಳಬೇಡಿ! ಯಾವ ರಾಶಿಗಳಿಗೆ 9 ಲಕ್ಕಿ ನಂಬರ್?

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Horoscope Today 17 January 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಗುರುವಾರದವರೆಗೆ ಮೇಷ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಕನ್ಯಾ ರಾಶಿಯವರು ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆಕ್ರಮಿಸಿಕೊಳ್ಳಲು ಬಿಡಬೇಡಿ. ಶಾಂತವಾಗಿ ಮತ್ತು ಒತ್ತಡ ಮುಕ್ತವಾಗಿ ಉಳಿಯಲು ಪ್ರಯತ್ನಿಸಿ ಹಾಗೂ ಅದು ನಿಮ್ಮ ಮಾನಸಿಕ ದೃಢತೆಯನ್ನು ಹೆಚ್ಚಿಸುತ್ತದೆ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತವಾಗಿರಲಿದೆ. ಕುಂಭ ರಾಶಿಯವರಿಗೆ ಈ ದಿನ ಲಾಭವನ್ನು ತಂದು ಕೊಡಲಿದೆ. ಇನ್ನು ಆರೋಗ್ಯದ ಬಗ್ಗೆ ನೋಡುವುದಾದರೆ ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಮೂರನೇ ವ್ಯಕ್ತಿಯ ಹಸ್ತಕ್ಷೇಪ ಆಗುವ ಸಾಧ್ಯತೆ ಇದ್ದು, ಇದರಿಂದ ನಿಮ್ಮ ಪ್ರೀತಿಪಾತ್ರರ ಜತೆಗೆ ಕಂದಕ ಸೃಷ್ಟಿಯಾಗಬಹುದು. ಹೀಗಾಗಿ ಎಚ್ಚರಿಕೆ ವಹಿಸಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (17-01-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ
ತಿಥಿ: ಸಪ್ತಮಿ 22:06 ವಾರ: ಬುಧವಾರ
ನಕ್ಷತ್ರ: ರೇವತಿ 27:32 ಯೋಗ: ಶಿವ 17:11
ಕರಣ: ಗರಜ 10:58 ಅಮೃತ ಕಾಲ: ಮಧ್ಯರಾತ್ರಿ 01:16 ರಿಂದ 02:48ರ ವರೆಗೆ
ದಿನದ ವಿಶೇಷ: ತುಳುವಷಷ್ಠಿ, ಬಿಳಿಗಿರಿ ರಂಗನಾಥಸ್ವಾಮಿ ರಥ, ಘಾಟಿ ಸುಬ್ರಮಣ್ಯ ಸ್ವಾಮಿ ಉತ್ಸವ

ಸೂರ್ಯೋದಯ : 06:46  ಸೂರ್ಯಾಸ್ತ : 06:13

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯ ಸುಧಾರಣೆಗಾಗಿ ಮಾಡುವ ಪ್ರಯತ್ನಗಳು ಸಹಕಾರಿಯಾಗಲಿವೆ. ಆರ್ಥಿಕ ಭಾಗವು ಬಲಗೊಳ್ಳುವ ಪೂರ್ಣ ಸಾಧ್ಯತೆ ಇದೆ. ಸಾಲದ ಮರುಪಾವತಿ ಆಗಲಿದೆ. ಇತರರ ದೋಷಗಳನ್ನು ಹುಡುಕುತ್ತಾ ಸಮಯ ವ್ಯರ್ಥ ಮಾಡುವುದು ಬೇಡ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಇರಲಿದೆ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಅನಿವಾರ್ಯ ಕಾರಣಗಳಿಂದ ನೀವು ಯಾವುದಾದರೂ ಸಹಾಯ ಕೋರುವ ಸಾಧ್ಯತೆ ಇದೆ. ನಿಮ್ಮ ಪ್ರಯತ್ನಗಳು ಖಂಡಿತವಾಗಿಯೂ ಸಕಾರಾತ್ಮಕ ಫಲಿತಾಂಶವನ್ನು ತರುತ್ತವೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿ ಕಿರಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಮನೆಯ ಸದಸ್ಯರು ಇಂದು ನಿಮ್ಮೊಂದಿಗೆ ಅನೇಕ ಸಮಸ್ಯೆಗಳನ್ನು ಹಂಚಿಕೊಳ್ಳುತ್ತಾರೆ. ಹಿರಿಯರ ಸತತ ಮಾರ್ಗದರ್ಶನ ಸಿಗಲಿದೆ. ಅವಸರದಲ್ಲಿ ಮಾತನಾಡಿದ ಬಗ್ಗೆ ಪಶ್ಚಾತ್ತಾಪ ಉಂಟಾಗಲಿದೆ. ಆರ್ಥಿಕವಾಗಿ ಪ್ರಗತಿ ಸಾಧಾರಣವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ಸಾಮರಸ್ಯ ಇರಲಿದೆ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಗಾಳಿಯಲ್ಲಿ ಮನೆ ಕಟ್ಟುವ ವ್ಯರ್ಥ ಪ್ರಯತ್ನ ನಿಮ್ಮದಾಗದಿರಲಿ. ಬದಲಿಗೆ ಏನಾದರೂ ಅರ್ಥಪೂರ್ಣವಾದದ್ದನ್ನು ಮಾಡಲು ನಿಮ್ಮ ಶಕ್ತಿ ಮತ್ತು ಯುಕ್ತಿಯನ್ನು ವ್ಯಯಿಸಿ. ಇಂದು ನಿಮಗೆ ಹಣದ ಲಾಭವಾಗುವ ಪೂರ್ತಿ ಸಾಧ್ಯತೆ ಇದೆ. ಆದರೆ, ಇದರೊಂದಿಗೆ ನೀವು ದಾನವನ್ನು ಸಹ ಮಾಡಬೇಕು. ಏಕೆಂದರೆ ಇದರಿಂದ ನಿಮಗೆ ಮಾನಸಿಕ ಶಾಂತಿ ಸಿಗುತ್ತದೆ. ಆರೋಗ್ಯ ಕುರಿತಾಗಿ ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಸಂಶಯಾಸ್ಪದ ಹಣಕಾಸು ವ್ಯವಹಾರಗಳಲ್ಲಿ ಸಿಲುಕಿಕೊಳ್ಳದಂತೆ ಎಚ್ಚರಿಕೆ ವಹಿಸಿ. ನೀವು ಯಾವುದೇ ಬದ್ಧತೆಯನ್ನು ಮಾಡುವ ಮೊದಲು ಎಲ್ಲ ಸತ್ಯಾಸತ್ಯತೆಗಳನ್ನು ಅರಿತುಕೊಳ್ಳುವುದು ಅಗತ್ಯ. ಕುಟುಂಬದಲ್ಲಿ ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಮಾನಸಿಕ ಹಾಗೂ ದೈಹಿಕವಾಗಿ ಜರ್ಜರಿತರಾಗುವ ಬದಲು ಯೋಗ, ಧ್ಯಾನ ಮಾಡಿ. ಆಗ ಮನಸ್ಸಿನ ಮೂಲೆಯಲ್ಲಿ ಸಂತಸ ಚಿಗುರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿ ಕಿರಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆಕ್ರಮಿಸಿಕೊಳ್ಳಲು ಬಿಡಬೇಡಿ. ಶಾಂತವಾಗಿ ಮತ್ತು ಒತ್ತಡ ಮುಕ್ತವಾಗಿ ಉಳಿಯಲು ಪ್ರಯತ್ನಿಸಿ ಹಾಗೂ ಅದು ನಿಮ್ಮ ಮಾನಸಿಕ ದೃಢತೆಯನ್ನು ಹೆಚ್ಚಿಸುತ್ತದೆ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತವಾಗಿರಲಿದೆ. ಸಂಬಂಧಿಗಳ ಆಗಮನ ಸಂತಸ ತರಲಿದೆ. ಸಂಗಾತಿಯ ಹಸ್ತಕ್ಷೇಪ ಮುಜುಗರವನ್ನುಂಟು ಮಾಡಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಸಂತಸದ ಪ್ರಯಾಣ ಮತ್ತು ಸಾಮಾಜಿಕ ಕಾರ್ಯಕ್ರಮಗಳು ನಿಮಗೆ ಆರಾಮ ಮತ್ತು ಸಂತೋಷವನ್ನು ತರುತ್ತದೆ. ಈ ರಾಶಿಚಕ್ರದ ದೊಡ್ಡ ಉದ್ಯಮಿಗಳು ಇಂದು ಹೂಡಿಕೆ ಮಾಡಬೇಕಾದರೆ ತುಂಬಾ ಯೋಚಿಸಿ ತೀರ್ಮಾನಕ್ಕೆ ಬರಬೇಕು. ನಿಮ್ಮ ಸ್ಪರ್ಧಾತ್ಮಕ ಸ್ವಭಾವ ನೀವು ಪ್ರವೇಶಿಸುವ ಯಾವುದೇ ಸ್ಪರ್ಧೆಯಲ್ಲೂ ನಿಮ್ಮನ್ನು ಗೆಲ್ಲಿಸುತ್ತದೆ. ಪ್ರೇಮಿಗಳಿಗೆ ಮನೆಯಿಂದ ಹಸಿರು ನಿಶಾನೆ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಸ್ಥಿಮಿತವನ್ನು ಕಳೆದುಕೊಳ್ಳುವುದು ಬೇಡ. ಅಜಾಗರೂಕತೆಯಿಂದ ಹೂಡಿಕೆ ಮಾಡಿದರೆ ನಿಮಗೆ ಆರ್ಥಿಕ ನಷ್ಟ ಉಂಟಾಗಬಹುದು. ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಹಿರಿಯ ಅಧಿಕಾರಿಗಳಿಂದ ಕಿರಿ ಕಿರಿ ಉಂಟಾಗಲಿದೆ. ಕುಟುಂಬದಲ್ಲಿ ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ನೀವು ದೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಸಣ್ಣ ಉದ್ಯೋಗವನ್ನು ಮಾಡುವ ಜನರು, ಇಂದು ತಮ್ಮ ಆಪ್ತರಿಂದ ಯಾವುದೇ ಸಲಹೆಯನ್ನು ಪಡೆಯಬಹುದು. ಇದರಿಂದ ಅವರಿಗೆ ಆರ್ಥಿಕವಾಗಿ ಲಾಭ ಆಗುವ ಸಾಧ್ಯತೆ ಇದೆ. ಇಂದು ಹಣದ ಬಗ್ಗೆ ಕುಟುಂಬ ಸದಸ್ಯರಲ್ಲಿ ಗೊಂದಲ ಉಂಟಾಗಬಹುದು. ಆದಷ್ಟು ಸಾಲ ಮಾಡದಂತೆ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಮೇಲಧಿಕರಿಗಳು ನಿಮ್ಮ ಸಹನೆ ಪರೀಕ್ಷಿಸುವ ಸಾಧ್ಯತೆ ಇದೆ. ಹೀಗಾಗಿ ಆದಷ್ಟು ಮೌನದಿಂದ ಕೆಲಸವನ್ನು ಸಾಧಿಸಿಕೊಳ್ಳಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಮನಸ್ಸಿನ ಭಾವನೆಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಿ ಆ ಸಿಟ್ಟನ್ನು ಇತರರ ಮೇಲೆ ಹಾಕಿ ಪಶ್ಚಾತ್ತಾಪ ಪಡುವುದು ಬೇಡ. ಹಳೆಯ ಪ್ರೀತಿಯ ನೆನಪು ಮರುಕಳಿಸಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಸಿಗಲಿದೆ. ಆರೋಗ್ಯದ ಕುರಿತು ಕೊಂಚ ಕಾಳಜಿ ವಹಿಸಬೇಕಿದೆ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಈ ದಿನ ಲಾಭವನ್ನು ತಂದು ಕೊಡಲಿದೆ. ಇನ್ನು ಆರೋಗ್ಯದ ಬಗ್ಗೆ ನೋಡುವುದಾದರೆ ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಮೂರನೇ ವ್ಯಕ್ತಿಯ ಹಸ್ತಕ್ಷೇಪ ಆಗುವ ಸಾಧ್ಯತೆ ಇದ್ದು, ಇದರಿಂದ ನಿಮ್ಮ ಪ್ರೀತಿಪಾತ್ರರ ಜತೆಗೆ ಕಂದಕ ಸೃಷ್ಟಿಯಾಗಬಹುದು. ಹೀಗಾಗಿ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣ ಇರಲಿದೆ. ಉದ್ಯೋಗಿಗಳಿಗೆ ಕಿರಿ ಕಿರಿ ಆಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅಧ್ಯಾತ್ಮದ ಒಲವು ಹೆಚ್ಚಾಗಲಿದೆ. ನಿಮ್ಮ ಕನಸು ನನಸಾಗುವ ಕಾಲ ಇದು. ಆರೋಗ್ಯ ಪರಿಪೂರ್ಣವಾಗಿರಲಿದೆ. ನೀವು ಹಣಕಾಸಿನ ಲಾಭ ತರುವ ಅದ್ಭುತವಾದ ಹೊಸ ಕಲ್ಪನೆಗಳನ್ನು ಪ್ರಸ್ತುತಪಡಿಸುತ್ತೀರಿ. ಉದ್ಯೋಗಿಗಳಿಗೆ ಶುಭ ಫಲ ಉಂಟಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ಚುನಾವಣೆ ಫಲಿತಾಂಶಕ್ಕೆ ಮೊದಲೇ ಇಂಡಿಯಾ ಒಕ್ಕೂಟಕ್ಕೆ ದೀದಿ ಶಾಕ್; ಬಾಹ್ಯ ಬೆಂಬಲವಷ್ಟೇ ಎಂದು ಘೋಷಣೆ!

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳಲ್ಲಿಯೇ ಒಮ್ಮತದ ಅಭಿಪ್ರಾಯ ಮೂಡದ ಕಾರಣ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಸೇರಿ ಹಲವೆಡೆ ಹಲವು ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಿವೆ. ಕೆಲವು ಕಡೆಯಂತೂ, ಇಂಡಿಯಾ ಒಕ್ಕೂಟದ ಪಕ್ಷಗಳ ಮಧ್ಯೆಯೇ ಪೈಪೋಟಿ ಇದೆ. ಇದರ ಮಧ್ಯೆಯೇ, ಮಮತಾ ಬ್ಯಾನರ್ಜಿ ಅವರು ಹೊಸ ಬಾಂಬ್‌ ಸಿಡಿಸಿದ್ದಾರೆ.

VISTARANEWS.COM


on

Mamata Banerjee
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯವಾಗಿದೆ. ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗ (Election Commission Of India) ಸಿದ್ಧತೆ ಮಾಡಿಕೊಳ್ಳುತ್ತಿದೆ. ರಾಜಕೀಯ ಪಕ್ಷಗಳು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಮುಳುಗಿವೆ. ಅಭ್ಯರ್ಥಿಗಳೂ ಇದೇ ಲೆಕ್ಕಾಚಾರದಲ್ಲಿದ್ದಾರೆ. ಇದರ ಬೆನ್ನಲ್ಲೇ, ಕೇಂದ್ರದ ಬಿಜೆಪಿ ಸರ್ಕಾರವನ್ನು ಕೆಳಗಿಳಿಸಬೇಕು ಎಂದೇ ಪ್ರತಿಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಶಾಕ್‌ ನೀಡಿದ್ದಾರೆ. “ಇಂಡಿಯಾ ಒಕ್ಕೂಟಕ್ಕೆ ನಮ್ಮದೇನಿದ್ದರೂ ಬಾಹ್ಯ ಬೆಂಬಲ” ಎಂದಿದ್ದಾರೆ.

“ಕೇಂದ್ರದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಟಿಎಂಸಿಯು ನಾಯಕತ್ವದ ಸಹಕಾರ ನೀಡುತ್ತದೆ. ಬಾಹ್ಯವಾಗಿಯೇ ಇಂಡಿಯಾ ಒಕ್ಕೂಟಕ್ಕೆ ಟಿಎಂಸಿಯು ಬೆಂಬಲ ನೀಡಲಿದೆ. ಪ್ರತಿಯೊಂದು ವಿಚಾರದಲ್ಲಿಯೂ ಇಂಡಿಯಾ ಒಕ್ಕೂಟಕ್ಕೆ ನಾವು ಸಹಕಾರ ನೀಡುತ್ತೇವೆ. ಅಷ್ಟೇ ಅಲ್ಲ, ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದರೆ, ಪಶ್ಚಿಮ ಬಂಗಾಳದ ಜನರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಅದರಲ್ಲೂ, 100 ದಿನಗಳ ಉದ್ಯೋಗ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವವರಿಗಂತೂ ಯಾವುದೇ ಸಮಸ್ಯೆ ಆಗುವುದಿಲ್ಲ” ಎಂದು ಹೇಳಿದ್ದಾರೆ.

ಇದೇ ವೇಳೆ, ಇಂಡಿಯಾ ಒಕ್ಕೂಟಕ್ಕೂ ಮಮತಾ ಬ್ಯಾನರ್ಜಿ ಅವರು ವ್ಯಾಖ್ಯಾನ ನೀಡಿದರು. “ಯಾವುದು ಇಂಡಿಯಾ ಒಕ್ಕೂಟ, ಎಲ್ಲಿ ಮೈತ್ರಿ ಎಂಬುದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಪಶ್ಚಿಮ ಬಂಗಾಳದ ಕಾಂಗ್ರೆಸ್‌ ಅಥವಾ ಸಿಪಿಎಂ ಬಗ್ಗೆ ಯೋಚನೆ ಮಾಡದಿರಿ. ಈ ಪಕ್ಷಗಳ ಲೆಕ್ಕಾಚಾರ ತೆಗೆದುಕೊಳ್ಳದಿರಿ. ಈ ಎರಡೂ ಪಕ್ಷಗಳು ಬಿಜೆಪಿ ಜತೆಗಿವೆ. ನಾನು ಮಾತನಾಡುತ್ತಿರುವುದು ದೆಹಲಿ ಮೈತ್ರಿಯ ಬಗ್ಗೆ ಮಾತ್ರ” ಎಂದು ಹೇಳಿದರು. ಆ ಮೂಲಕ ಚುನಾವಣೆ ಫಲಿತಾಂಶದ ಬಳಿಕದ ಮೈತ್ರಿಯ ಬಗ್ಗೆ ಸೂಚನೆ ನೀಡಿದರು.

ನರೇಂದ್ರ ಮೋದಿ ನೇತೃತ್ವದ ಸರ್ಕಾರದವನ್ನು ಅಧಿಕಾರದಿಂದ ಕೆಳಗಿಳಿಸುವ ಏಕಮಾತ್ರ ಉದ್ದೇಶದಿಂದ ಹಲವು ಪ್ರತಿಪಕ್ಷಗಳು ಒಗ್ಗೂಡಿ ಇಂಡಿಯಾ ಒಕ್ಕೂಟವನ್ನು ರಚಿಸಿವೆ. ಆದರೆ, ಚುನಾವಣೆ ಸಂದರ್ಭದಲ್ಲಿ ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳಲ್ಲಿಯೇ ಒಮ್ಮತದ ಅಭಿಪ್ರಾಯ ಮೂಡದ ಕಾರಣ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಸೇರಿ ಹಲವೆಡೆ ಹಲವು ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಿವೆ. ಕೆಲವು ಕಡೆಯಂತೂ, ಇಂಡಿಯಾ ಒಕ್ಕೂಟದ ಪಕ್ಷಗಳ ಮಧ್ಯೆಯೇ ಪೈಪೋಟಿ ಇದೆ. ಇದರ ಮಧ್ಯೆಯೇ, ನಮ್ಮದೇನಿದ್ದರೂ ಬಾಹ್ಯ ಬೆಂಬಲ ಎಂದು ಹೇಳುವ ಮೂಲಕ ಮಮತಾ ಬ್ಯಾನರ್ಜಿ ಅವರು ಶಾಕ್‌ ಕೊಟ್ಟಿದ್ದಾರೆ.

ಇದನ್ನೂ ಓದಿ: Amit Shah: ಭಾರತದ ಜತೆ ಪಿಒಕೆ ವಿಲೀನ ಮಾಡುವುದೇ ನಮ್ಮ ಗುರಿ, ಬದ್ಧತೆ; ಅಮಿತ್‌ ಶಾ ಘೋಷಣೆ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಸಿಎಎ ಅನುಷ್ಠಾನ ಮೋದಿ ಸರ್ಕಾರದ ದಿಟ್ಟ ನಿರ್ಧಾರ

ಅಲ್ಪಸಂಖ್ಯಾತರನ್ನು ಗುರಿಯಾಗಿಸಲು ಸಿಎಎ ಮತ್ತು ಅಷ್ಟೇ ವಿವಾದಾತ್ಮಕ ಎನ್ಆರ್​​ಸಿ ಅಥವಾ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ತರಲಾಗಿದೆ ಎಂಬ ಭಯವನ್ನು ಗೃಹ ಸಚಿವರು ಆಗಾಗ ಹೇಳಿಕೆಗಳ ಮೂಲಕ ನಿವಾರಿಸುತ್ತ ಬಂದಿದ್ದಾರೆ. ಸಿಎಎ ಬಗ್ಗೆ ಅಪಪ್ರಚಾರಗಳ ಮೂಲಕ ಈಗಲೂ ಮುಸ್ಲಿಮರನ್ನು ದಾರಿ ತಪ್ಪಿಸಲು ಯತ್ನಿಸಲಾಗುತ್ತಿದೆ. ಇದು ಯಾರ ಪೌರತ್ವವನ್ನೂ ಕಸಿದುಕೊಳ್ಳಲು ಇರುವುದಲ್ಲ.

VISTARANEWS.COM


on

CAA
Koo

ಭಾರಿ ಆಕ್ಷೇಪದ ಮಧ್ಯೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಡಿ (ಸಿಎಎ) ಮೊದಲ ಕಂತಿನಲ್ಲಿ 14 ಜನರಿಗೆ ಭಾರತೀಯ ನಾಗರಿಕತ್ವವನ್ನು ನೀಡಲಾಗಿದೆ. ಎಲ್ಲರಿಗೂ ಪೌರತ್ವ ಪ್ರಮಾಣಪತ್ರವನ್ನು ಬುಧವಾರ ವಿತರಿಸಲಾಯಿತು. ಈ ಮೂಲಕ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ರಾಷ್ಟ್ರೀಯತೆ ನೀಡುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಅಧಿಕೃತ ಚಾಲನೆ ನೀಡಿದೆ. ದೆಹಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು, 14 ಜನರು ಆನ್​ಲೈನ್​ ಮೂಲಕ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿದ ನಂತರ ಭಾರತೀಯ ಪೌರತ್ವ ನೀಡಿದ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದರು. ಜಿಲ್ಲಾ ಮಟ್ಟದ ಸಮಿತಿಗಳು ಗೊತ್ತುಪಡಿಸಿದ ಅಧಿಕಾರಿಗಳ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆಯ ನಂತರ ಅರ್ಜಿಗಳನ್ನು ಅಖೈರು ಮಾಡಲಾಗಿದೆ.

ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ನಾಲ್ಕು ವರ್ಷಗಳ ನಂತರ ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯಿದೆಯನ್ನು ಈ ವರ್ಷ ಜಾರಿ ಮಾಡಿದೆ. ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರು 2014ರ ಡಿಸೆಂಬರ್ 31ಕ್ಕೂ ಮೊದಲು ಭಾರತಕ್ಕೆ ಬಂದಿದ್ದಲ್ಲಿ ಅವರಿಗೆ ಭಾರತದ ನಾಗರಿಕತ್ವ ನೀಡಲು ಕೇಂದ್ರ ಸರ್ಕಾರ ಸಿಎಎ ಕಾಯ್ದೆ ಜಾರಿಗೆ ತಂದಿದೆ. 2019ರಲ್ಲಿ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಇದರಲ್ಲಿ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಕಾಯ್ದೆಯಡಿ ಬರುತ್ತಾರೆ. 2019ರಲ್ಲಿ ಜಾರಿಯಾದರೂ ಇದರ ನಿಯಮಗಳನ್ನು ರೂಪಿಸಲು ಸರ್ಕಾರ 4 ವರ್ಷ ಸಮಯಾವಕಾಶ ತೆಗೆದುಕೊಂಡಿತು. 2024ರ ಮಾರ್ಚ್ 11ರಂದು ಅಧಿಕೃತ ನಿಯಮಾವಳಿಗಳನ್ನು ರೂಪಿಸಿ ಆದೇಶ ಹೊರಡಿಸಿತು. ನಿಗದಿಪಡಿಸಿದ ಪೋರ್ಟಲ್​ ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ಇವುಗಳನ್ನು ಜಿಲ್ಲಾ ಮಟ್ಟದ ಸಮಿತಿ (ಡಿಎಲ್​ಸಿ), ರಾಜ್ಯ ಮಟ್ಟದ ಸಶಕ್ತ ಸಮಿತಿಯಿಂದ (ಇಸಿ) ಪರಿಶೀಲನೆ ಮಾಡಿದ ಬಳಿಕ ಪೌರತ್ವ ನೀಡಬೇಕೆ ಬೇಡವೇ ಎಂಬುದನ್ನು ನಿರ್ಧರಿಸಲಾಗುತ್ತದೆ.

ಇದೊಂದು ಐತಿಹಾಸಿಕ ಘಟ್ಟ. ಇತಿಹಾಸದ ಸಂಕಷ್ಟಗಳಲ್ಲಿ ನೊಂದವರು ಒಂದು ನೆಲೆಯನ್ನು ಪಡೆಯಲು ಇಂದು ಸಾಧ್ಯವಾಗಿದೆ. ಯಥಾಪ್ರಕಾರ, ಕೇಂದ್ರ ಸರ್ಕಾರದ ಎದುರಾಳಿಗಳು ಈ ಕ್ರಮವನ್ನು ಹಳಿಯುತ್ತಿದ್ದಾರೆ. ಇದು ಸಂಸತ್​ನಲ್ಲಿ ಅಂಗೀಕಾರಗೊಂಡಾಗ ದೆಹಲಿಯಯಲ್ಲಿ ಮತ್ತು ಅಸ್ಸಾಂನಲ್ಲಿ ಭಾರಿ ಪ್ರತಿಭಟನೆಗಳು ನಡೆದಿದ್ದವು. ಇದೀಗ ಸರ್ಕಾರ ಎಲ್ಲ ಸಿದ್ಧತೆಗಳ ಬಳಿಕ ಜಾರಿಗೆ ತಂದಿದೆ. ಪಶ್ಚಿಮ ಬಂಗಾಳ, ಕೇರಳದಂಥ ಕೆಲವು ರಾಜ್ಯಗಳು ಇದನ್ನು ಜಾರಿಗೆ ತರುವುದಿಲ್ಲ ಎಂದು ಹೇಳಿದ್ದೂ ಉಂಟು. ಆದರೆ ಕಾಲಕ್ರಮೇಣ ಇದರ ಕುರಿತು ಇದ್ದ ಪ್ರತಿಭಟನೆಯ ಅಂಶ ಕಡಿಮೆಯಾಗಿದೆ. ಆದರೆ ಇದರ ಬಗೆಗೆ ಕೆಲವು ವಲಯದಲ್ಲಿ ಇನ್ನೂ ತಪ್ಪು ಕಲ್ಪನೆ ಉಳಿದಂತಿದೆ. ಇದು ನಿವಾರಣೆ ಆಗುವುದು ಮತ್ತು ಎಲ್ಲರೂ ಇದರ ಜಾರಿಗೆ ಸಹಕರಿಸುವುದು ಮುಖ್ಯ.

ಅಲ್ಪಸಂಖ್ಯಾತರನ್ನು ಗುರಿಯಾಗಿಸಲು ಸಿಎಎ ಮತ್ತು ಅಷ್ಟೇ ವಿವಾದಾತ್ಮಕ ಎನ್ಆರ್​​ಸಿ ಅಥವಾ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ತರಲಾಗಿದೆ ಎಂಬ ಭಯವನ್ನು ಗೃಹ ಸಚಿವರು ಆಗಾಗ ಹೇಳಿಕೆಗಳ ಮೂಲಕ ನಿವಾರಿಸುತ್ತ ಬಂದಿದ್ದಾರೆ. ಸಿಎಎ ಬಗ್ಗೆ ಅಪಪ್ರಚಾರಗಳ ಮೂಲಕ ಈಗಲೂ ಮುಸ್ಲಿಮರನ್ನು ದಾರಿ ತಪ್ಪಿಸಲು ಯತ್ನಿಸಲಾಗುತ್ತಿದೆ. ಇದು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಬಂದವರಿಗೆ ಮಾತ್ರ ಪೌರತ್ವ ನೀಡುವ ಉದ್ದೇಶವನ್ನು ಹೊಂದಿದೆ. ಇದು ಯಾರ ಪೌರತ್ವವನ್ನೂ ಕಸಿದುಕೊಳ್ಳಲು ಇರುವುದಲ್ಲ. ಈ ಕಾಯ್ದೆಯಲ್ಲಿ ಮುಸ್ಲಿಮರನ್ನು ಕೈಬಿಟ್ಟ ಕಾರಣ ವಿರೋಧ ಪಕ್ಷಗಳಿಂದ ಮತ್ತು ಮುಸ್ಲಿಂ ಸಮುದಾಯದಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಆದರೆ ಇದರಲ್ಲಿ ಹುರುಳಿಲ್ಲ. ಮುಸ್ಲಿಮರಿಗೂ ಈ ಕಾಯಿದೆಗೂ ಯಾವುದೇ ಸಂಬಂಧವಿಲ್ಲ.

ಹಿಂದೂ, ಸಿಖ್, ಬೌದ್ಧರಿಗೆ ಭಾರತ ಹೊರತುಪಡಿಸಿ ಪೌರತ್ವ ಪಡೆಯಲು ಬೇರೆ ದೇಶಗಳೇ ಇಲ್ಲ. ಇತಿಹಾಸವನ್ನು ನೋಡಿದರೆ, ಭಾರತ, ಅಫ್ಘಾನಿಸ್ಥಾನ, ಪಾಕಿಸ್ಥಾನ ಮತ್ತು ಬಾಂಗ್ಲಾದೇಶದ ಗಡಿಯುದ್ದಕ್ಕೂ ವಲಸೆ ನಡೆದಿರುವುದು ತಿಳಿಯುತ್ತದೆ. ಧರ್ಮದ ಕಾರಣಕ್ಕಾಗಿ ದೌರ್ಜನ್ಯಕ್ಕೆ ಒಳಗಾಗಿ ಭಾರತಕ್ಕೆ ಆಶ್ರಯ ಕೋರಿ ಬಂದಿರುವ ಸಮುದಾಯಗಳಲ್ಲಿ ಅನೇಕರ ಟ್ರಾವೆಲ್‌ ಡಾಕ್ಯುಮೆಂಟ್‌ಗಳ ಅವಧಿ ಮುಗಿದಿದೆ ಅಥವಾ ಅಪೂರ್ಣ ದಾಖಲೆಗಳಿವೆ ಅಥವಾ ಅವರ ಬಳಿ ದಾಖಲೆಗಳೇ ಇಲ್ಲ. ಮೋದಿ ಸರ್ಕಾರವು ತನ್ನ ಮೊದಲನೇ ಅವಧಿಯಲ್ಲಿ ಈ ರೀತಿಯ ವಲಸಿಗರಿಗೆ ಪಾಸ್‌ಪೋರ್ಟ್‌ ಅಧಿನಿಯಮ (ಭಾರತ ಪ್ರವೇಶಕ್ಕೆ) 1920ರ ಹಾಗೂ ವಿದೇಶಿ ಅಧಿನಿಯಮ 1946ರ ಪ್ರತಿಕೂಲ ದಂಡನಾರ್ಹ ಅಂಶಗಳಿಂದಲೂ ವಿನಾಯಿತಿ ನೀಡಿದೆ. ಇದಷ್ಟೇ ಅಲ್ಲದೇ 2016ರಲ್ಲಿ ಮೋದಿ ಸರ್ಕಾರ ಈ ನಿರಾಶ್ರಿತರಿಗೆ ದೀರ್ಘ‌ಕಾಲಿಕ ವೀಸಾ ಪಡೆಯಲೂ ಅರ್ಹರನ್ನಾಗಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆಯು ಒಟ್ಟಲ್ಲಿ, ಧಾರ್ಮಿಕ ಹಿಂಸೆಗೆ ತುತ್ತಾಗಿರುವವರಿಗೆ ನಾಗರಿಕತೆ ದೊರಕುವಂತೆ ಮಾಡಲು ಸಶಕ್ತಗೊಳಿಸುತ್ತದೆ.

ಸಂವಿಧಾನದ ಅನುಚ್ಛೇದ 25, ಪ್ರತಿಯೊಬ್ಬ ವ್ಯಕ್ತಿಗೂ ತನಗೆ ಇಷ್ಟವಾದ ಧರ್ಮವನ್ನು ಮುಕ್ತವಾಗಿ ಅನುಸರಿಸಲು, ಆಚರಿಸಲು ಸಮಾನ ಹಕ್ಕನ್ನು ನೀಡುತ್ತದೆ. ಪೌರತ್ವ ತಿದ್ದುಪಡಿ ಕಾಯ್ದೆಯು ಯಾವುದೇ ರೀತಿಯಲ್ಲೂ ಈ ಅಂಶಗಳನ್ನು ಉಲ್ಲಂಘಿಸಿಲ್ಲ. ಸಿಎಎಯಿಂದಾಗಿ ಭಾರತೀಯ ಅಲ್ಪಸಂಖ್ಯಾತರ ಹಕ್ಕುಗಳ, ಭಾರತೀಯ ಜಾತ್ಯತೀತ ಮೌಲ್ಯಗಳ ಮತ್ತು ಸಂಪ್ರದಾಯಗಳ ಹನನವಾಗುವುದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ. ಸಿಎಎ ಎನ್ನುವುದು ಅನ್ಯಾಯವನ್ನು ಎದುರಿಸುತ್ತಿರುವ ಸಾವಿರಾರು ನಿರ್ವಸಿತ ಕುಟುಂಬಗಳನ್ನು ಸಬಲೀಕರಣಗೊಳಿಸುವ ಐತಿಹಾಸಿಕ ಹೆಜ್ಜೆಯಾಗಿದೆ. ಇದು ಸಮರ್ಪಕವಾಗಿ ಅನುಷ್ಠಾನಕ್ಕೂ ಬರುತ್ತಿದೆ ಎಂದು ಸಂತೋಷಪಡೋಣ.

ಇದನ್ನೂ ಓದಿ: CAA: ಸಿಎಎ ಕಾಯ್ದೆಯಡಿ 14 ವಲಸಿಗರಿಗೆ ಭಾರತದ ಪೌರತ್ವ; ಏನಿದು ಕಾಯ್ದೆ? ಭಾರತದ ಮುಸ್ಲಿಮರಿಗೆ ತೊಂದರೆ ಇದೆಯೇ?

Continue Reading

ದೇಶ

Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

Amit Shah: ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಿದ ಕೋರ್ಟ್‌ ತೀರ್ಮಾನದ ಕುರಿತೂ ಅಮಿತ್‌ ಶಾ ವಿಶ್ಲೇಷಣೆ ಮಾಡಿದರು. “ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಎಲ್ಲ ಸಾಮಾನ್ಯ ಪ್ರಕರಣದಂತೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳು ಜಾಮೀನು ಮಂಜೂರು ಮಾಡಿಲ್ಲ. ಕೇಜ್ರಿವಾಲ್‌ ಅವರಿಗೆ ವಿಶೇಷ ಕೇಸ್‌ ಎಂದು ಪರಿಗಣಿಸಿ ಜಾಮೀನು ನೀಡಲಾಗಿದೆ” ಎಂದು ಹೇಳಿದರು.

VISTARANEWS.COM


on

Amit Shah
Koo

ನವದೆಹಲಿ: ಅಬಕಾರಿ ನೀತಿ ಜಾರಿ ಹಗರಣದಲ್ಲಿ (Delhi Excise Policy Case) ತಿಹಾರ ಜೈಲು ಸೇರಿ, ಮಧ್ಯಂತರ ಜಾಮೀನಿನ ಬಿಡುಗಡೆಯಾಗಿರುವ, ಬಿಡುಗಡೆಯಾಗಿ ಬರುತ್ತಲೇ ಅಬ್ಬರದ ಚುನಾವಣೆ ಪ್ರಚಾರದ ಜತೆಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿರುಗೇಟು ನೀಡಿದ್ದಾರೆ. “ಚುನಾವಣೆ ಪ್ರಚಾರದ ವೇಳೆ ಅರವಿಂದ್‌ ಕೇಜ್ರಿವಾಲ್‌ ನೀಡಿದ ಹೇಳಿಕೆಯು ನ್ಯಾಯಾಂಗ ನಿಂದನೆಯ ಪ್ರಕರಣವಾಗಿದೆ” ಎಂದಿದ್ದಾರೆ.

ಎಎನ್‌ಐ ಸುದ್ದಿಸಂಸ್ಥೆಗೆ ಸಂದರ್ಶನ ನೀಡಿರುವ ಅಮಿತ್‌ ಶಾ, ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಹರಿಹಾಯ್ದರು. “ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಬ್ಯಾಡ್‌ ನ್ಯೂಸ್‌ ಇದೆ. 2029ರವರೆಗೆ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಿ ಆಡಳಿತ ನಡೆಸಲಿದ್ದಾರೆ. ಇನ್ನು, ಯಾರಾದರೂ ಬಿಜೆಪಿಗೆ ಮತ ನೀಡಿದರೆ, ಕಮಲದ ಗುರುತಿಗೆ ಮತ ಹಾಕಿದರೆ, ಮತ್ತೆ ನನ್ನನ್ನು ಜೈಲಿಗೆ ಕಳುಹಿಸಲಾಗುತ್ತದೆ ಎಂಬುದಾಗಿ ಕೇಜ್ರಿವಾಲ್‌ ಹೇಳಿರುವುದು ಸಂಪೂರ್ಣವಾಗಿ ನ್ಯಾಯಾಂಗ ನಿಂದನೆಯ ಕೇಸ್‌ ಆಗಿದೆ. ಇದು ಸುಪ್ರೀಂ ಕೋರ್ಟ್‌ ತೀರ್ಪಿಗೆ ಮಾಡಿದ ಅಗೌರವ” ಎಂದು ಹೇಳಿದರು.

ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಿದ ಕೋರ್ಟ್‌ ತೀರ್ಮಾನದ ಕುರಿತೂ ಅಮಿತ್‌ ಶಾ ವಿಶ್ಲೇಷಣೆ ಮಾಡಿದರು. “ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಎಲ್ಲ ಸಾಮಾನ್ಯ ಪ್ರಕರಣದಂತೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳು ಜಾಮೀನು ಮಂಜೂರು ಮಾಡಿಲ್ಲ. ಕೇಜ್ರಿವಾಲ್‌ ಅವರಿಗೆ ವಿಶೇಷ ಕೇಸ್‌ ಎಂದು ಪರಿಗಣಿಸಿ ಜಾಮೀನು ನೀಡಲಾಗಿದೆ. ಅಷ್ಟಕ್ಕೂ, ಅರವಿಂದ್‌ ಕೇಜ್ರಿವಾಲ್‌ ಅಪರಾಧಿ ಎಂದು ಸಾಬೀತಾದರೂ ಕೋರ್ಟ್‌ ಅವರನ್ನು ಜೈಲಿಗೆ ಕಳುಹಿಸುವುದಿಲ್ಲ. ತಮ್ಮ ತೀರ್ಪು ಸದ್ಬಳಕೆಯಾಗಿದೆಯೋ, ದುರ್ಬಳಕೆ ಮಾಡಿಕೊಳ್ಳಲಾಗಿದೆಯೋ ಎಂಬುದನ್ನು ತಿಳಿಯಲು ಕೋರ್ಟ್‌ ಜಾಮೀನು ನೀಡಿದೆ” ಎಂದರು.

ಫಾರೂಕ್‌ ಅಬ್ದುಲ್ಲಾಗೆ ಚಾಟಿ

ಪಾಕಿಸ್ತಾನವನ್ನು ಗೌರವಿಸಬೇಕು ಎಂದು ಹೇಳಿದ ಫಾರೂಕ್‌ ಅಬ್ದುಲ್ಲಾ ಅವರಿಗೆ ಅಮಿತ್‌ ಶಾ ತಿರುಗೇಟು ನೀಡಿದ್ದಾರೆ. “ಪಾಕಿಸ್ತಾನ ಅಣುಬಾಂಬ್‌ ಹೊಂದಿದೆ. ಅದಕ್ಕೆ ಭಾರತ ಗೌರವ ನೀಡಬೇಕು ಎಂಬುದಾಗಿ ಫಾರೂಕ್‌ ಅಬ್ದುಲ್ಲಾ ಹಾಗೂ ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಅದರೆ, ಅಣ್ವಸ್ತ್ರ ಸಾಮರ್ಥ್ಯ ಹೊಂದಿರುವ, 130 ಕೋಟಿ ಜನಸಂಖ್ಯೆಯ ಭಾರತವು ತನ್ನ ಹಕ್ಕನ್ನು ಪ್ರತಿಪಾದಿಸಲು ಪಾಕಿಸ್ತಾನಕ್ಕೆ ಹೆದರಬೇಕೇ? ರಾಹುಲ್‌ ಗಾಂಧಿ ಅವರು ಇದಕ್ಕೆ ಉತ್ತರ ನೀಡಬೇಕು. ಪಾಕಿಸ್ತಾನವನ್ನು ಗೌರವಿಸಬೇಕಾ? ಪಾಕ್‌ ಆಕ್ರಮಿತ ಕಾಶ್ಮೀರವನ್ನು ಬಿಟ್ಟುಕೊಡಬೇಕಾ ಎಂಬುದರ ಕುರಿತು ರಾಹುಲ್‌ ಗಾಂಧಿ ಉತ್ತರಿಸಲಿ” ಎಂದರು.

ಇದನ್ನೂ ಓದಿ: Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

Continue Reading

ಕ್ರೀಡೆ

PBKS vs RR: ಸ್ಯಾಮ್‌ ಕರನ್‌ ಏಕಾಂಗಿ ಬ್ಯಾಟಿಂಗ್​ ಹೋರಾಟಕ್ಕೆ ತಲೆ ಬಾಗಿದ ರಾಜಸ್ಥಾನ್​

PBKS vs RR: ಪ್ಲೇ ಆಫ್​ ರೇಸ್​ನಿಂದ ಈಗಾಗಲೇ ಹೊರಬಿದ್ದಿರುವ ಕಾರಣ ಪಂಜಾಬ್​ಗೆ ಈ ಗೆಲುವು ಕೇವಲ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಮೇಲೇರುವಲ್ಲಿ ಮಾತ್ರ ಸಹಾಯ ಮಾಡಿತು. ಹಾಲಿ ಚಾಂಪಿಯನ್​ ಕೊನೆಯ ಸ್ಥಾನಕ್ಕೆ ಕುಸಿಯಿತು. ಸದ್ಯ ಪಂಜಾಬ್​​ 9ನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ

VISTARANEWS.COM


on

PBKS vs RR
Koo

ಗುವಾಹಟಿ: ಬುಧವಾರದ ಸಣ್ಣ ಮೊತ್ತದ ಐಪಿಎಲ್(IPL 2024)​ ಮೇಲಾಟದಲ್ಲಿ ಪಂಜಾಬ್​ ಕಿಂಗ್ಸ್​(PBKS vs RR) ತಂಡ ರಾಜಸ್ಥಾನ್​ ರಾಯಲ್ಸ್​(Rajasthan Royals) ವಿರುದ್ಧ 5 ವಿಕೆಟ್​ ಅಂತರದ ಗೆಲುವು ಸಾಧಿಸಿದೆ. ಲಕ್ನೋ ಸೋಲಿನಿಂದ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಸಂಜು ಪಡೆಗೆ ಈ ಸೋಲು ಯಾವುದೇ ಪರಿಣಾಮ ಬೀರಲಿಲ್ಲ. ಒಂದೊಮ್ಮೆ ಡೆಲ್ಲಿ ವಿರುದ್ಧ ಲಕ್ನೋ ಮಂಗಳವಾರದ ಪಂದ್ಯದಲ್ಲಿ ಗೆಲುವು ಸಾಧಿಸುತ್ತಿದ್ದರೆ, ಈ ಸೋಲು ರಾಜಸ್ಥಾನ್​ಗೆ ಬಿಸಿ ತುಪ್ಪವಾಗಿ ಪರಿಣಮಿಸುತ್ತಿತ್ತು.

ರಾಜಸ್ಥಾನ್​ ತಂಡಕ್ಕೆ​ 2ನೇ ತವರಾದ ಗುವಾಹಟಿಯ ಬರ್ಸಾಪರಾ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 65ನೇ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ರಾಜಸ್ಥಾನ್​ ರಾಯಲ್ಸ್ ಬ್ಯಾಟಿಂಗ್​ ವೈಫಲ್ಯ ಕಂಡು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು ಕೇವಲ 144 ರನ್​ ಗಳಿಸಿತು. ಸಣ್ಣ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್(Punjab Kings)​ ಕೂಡ ಒಂದು ಹಂತದಲ್ಲಿ ಆಘಾತ ಎದುರಿಸಿ ಬಳಿಕ ಚೇತರಿಕೆ ಹಾದಿ ಹಿಡಿದು 18.5 ಓವರ್​ನಲ್ಲಿ 5 ವಿಕೆಟ್​ ನಷ್ಟಕ್ಕೆ 145 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

ಪ್ಲೇ ಆಫ್​ ರೇಸ್​ನಿಂದ ಈಗಾಗಲೇ ಹೊರಬಿದ್ದಿರುವ ಕಾರಣ ಪಂಜಾಬ್​ಗೆ ಈ ಗೆಲುವು ಕೇವಲ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಮೇಲೇರುವಲ್ಲಿ ಮಾತ್ರ ಸಹಾಯ ಮಾಡಿತು. ಹಾಲಿ ಚಾಂಪಿಯನ್​ ಕೊನೆಯ ಸ್ಥಾನಕ್ಕೆ ಕುಸಿಯಿತು. ಸದ್ಯ ಪಂಜಾಬ್​​ 9ನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ. ತನ್ನ ಅಂತಿಮ ಲೀಗ್​ ಪಂದ್ಯವನ್ನು ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧ ಆಡಲಿದೆ. ಈ ಪಂದ್ಯ ಮೇ 19ರಂದು ನಡೆಯಲಿದೆ.

ಚೇಸಿಂಗ್​ ವೇಳೆ ಪಂಜಾಬ್​ ಕೂಡ ಅಗ್ರ ಕ್ರಮಾಂಕದ ಆಟಗಾರರನ್ನು ಅಗ್ಗಕ್ಕೆ ಕಳೆದುಕೊಂಡು ರಾಜಸ್ಥಾನ್​ ತಂಡದ ಹಾಗೆ ಆರಂಭಿಕ ಆಘಾತಕ್ಕೆ ಸಿಲುಕಿತು. ಪ್ರಭಾಸಿಮ್ರಾನ್ ಸಿಂಗ್(6) ಮತ್ತು ಜಾನಿ ಬೇರ್​ಸ್ಟೋ(14) ರನ್​ ಗಳಿಸಿ ಪೆವಿಲಿಯನ್​ ಸೇರಿದರು. ಈ ವಿಕೆಟ್​ ಪತನದ ಬಳಿಕ ಆಡಲಿಳಿದ, ಈ ಬಾರಿಯ ಐಪಿಎಲ್​ನಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿ ಸಂಚಲನ ಸೃಷ್ಟಿಸಿದ್ದ ಶಶಾಂಕ್​ ಸಿಂಗ್​ ಶೂನ್ಯಕ್ಕೆ ವಿಕೆಟ್​ ಕಳೆದುಕೊಂಡರು. 36 ರನ್​ಗೆ 3 ವಿಕೆಟ್​ ಕಳೆದುಕೊಂಡ ಪಂಜಾಬ್​, ಚೇತರಿಕೆ ಕಾಣುವಷ್ಟರಲ್ಲಿ ಉತ್ತಮವಾಗಿ ಆಡುತ್ತಿದ್ದ ರೀಲಿ ರೋಸೊ(22) ವಿಕೆಟ್ ಕೂಡ​ ಕಳೆದುಕೊಂಡಿತು. ತಂಡದ ಮೊತ್ತ 50 ಗಡಿ ದಾಟುವ ಮುನ್ನ 4 ವಿಕೆಟ್​ ಕಳೆದುಕೊಂಡು ಮತ್ತಷ್ಟು ತೀವ್ರ ಸಂಕಟಕ್ಕೆ ಒಳಗಾಯಿತು.

ಇದನ್ನೂ ಓದಿ IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

ಅರ್ಧಶತಕ ಬಾರಿಸಿದ ಕರನ್​

ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ನೆರವಾದದ್ದು ನಾಯಕ ಸ್ಯಾಮ್​ ಕರನ್​ ಮತ್ತು ಜಿತೇಶ್​ ಶರ್ಮ. ಉಭಯ ಆಟಗಾರರು ತಾಳ್ಮೆಯುತ ಬ್ಯಾಟಿಂಗ್​ ನಡೆಸಿ ಉತ್ತಮ ಜತೆಯಾಟವೊಂದನ್ನು ಸಂಘಟಿಸಿದರು. 5ನೇ ವಿಕೆಟ್​ಗೆ 63 ರನ್​ ಒಟ್ಟುಗೂಡಿಸಿದರು. ಈ ಉಪಯುಕ್ತ ಜತೆಯಾಟದ ಸಹಾಯದಿಂದ ಪಂಜಾಬ್​ ಗೆಲುವಿನ ದಡ ಸೇರಿತು. ಜಿತೇಶ್​ ಶರ್ಮ 20 ಎಸೆತಗಳಿಂದ 22 ರನ್​ ಬಾರಿಸಿ ಪರಾಗ್​ಗೆ ವಿಕೆಟ್​ ಒಪ್ಪಿಸಿದರು. ಕರನ್ ಅಜೇಯರಾಗಿ ಉಳಿದು ಅರ್ಧಶತಕ ಬಾರಿಸಿದರು. ಇದು ಅವರ ಈ ಆವೃತ್ತಿಯ 2ನೇ ಅರ್ಧಶತಕವಾಗಿದೆ. ಒಟ್ಟು 41 ಎಸೆತ ಎದುರಿಸಿದ ಕರನ್​ 63* ರನ್​ ಬಾರಿಸಿದರು. ಈ ವೇಳೆ ಇವರ ಬ್ಯಾಟ್​ನಿಂದ 5 ಬೌಂಡರಿ ಮತ್ತು 3 ಸಿಕ್ಸರ್​ ಸಿಡಿಯಿತು. ​

ರಾಜಸ್ಥಾನ್​ಗೆ ಆಸರೆಯಾದ ಪರಾಗ್-ಅಶ್ವಿನ್​

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ರಾಜಸ್ಥಾನ್​ ಪರ ಯಶಸ್ವಿ ಜೈಸ್ವಾಲ್​(4) ಜಾಸ್​ ಬಟ್ಲರ್​ ಅನುಪಸ್ಥಿತಿಯಲ್ಲಿ ಆಡಲಿಳಿದ ಕೊಹ್ಲರ್-ಕಾಡ್ಮೋರ್(18), ನಾಯಕ ಸಂಜು ಸ್ಯಾಮ್ಸನ್​(18), ಧೃವ್​ ಜುರೇಲ್​(0), ರೋಮನ್​ ಪೋವೆಲ್(4) ಬ್ಯಾಟಿಂಗ್​ ವೈಫಲ್ಯ ಕಂಡು ಪೆವಿಲಿಯನ್​ ಪರೇಡ್​ ನಡೆಸಿದರು. ರಿಯಾನ್​ ಪರಾಗ್​(48) ಮತ್ತು ಆರ್​.ಅಶ್ವಿನ್​(28) ಅವರ ಅಸಾಮಾನ್ಯ ಬ್ಯಾಟಿಂಗ್​ನಿಂದಾಗಿ ತಂಡ 100 ಗಡಿ ದಾಟಿ ಸ್ಪರ್ಧಾತ್ಮಕ ಮೊತ್ತ ಗಳಿಸುವಲ್ಲಿ ಯಶಸ್ಸು ಕಂಡಿತು. ಪಂಜಾಬ್​ ಪರ 2 ವಿಕೆಟ್​ ಪಡೆದ ಹರ್ಷಲ್​ ಪಟೇಲ್​ ಪರ್ಪಲ್​ ಕ್ಯಾಪ್​ ರೇಸ್​ನಲ್ಲಿ ಅಗ್ರಸ್ಥಾನ ಪಡೆದರು. ಉಳಿದಂತೆ ಕರನ್​, ಮತ್ತು ರಾಹುಲ್​ ಚಹರ್​ ತಲಾ 2 ವಿಕೆಟ್​ ಉರುಳಿಸಿದರು.

Continue Reading
Advertisement
Mamata Banerjee
ಪ್ರಮುಖ ಸುದ್ದಿ2 hours ago

ಚುನಾವಣೆ ಫಲಿತಾಂಶಕ್ಕೆ ಮೊದಲೇ ಇಂಡಿಯಾ ಒಕ್ಕೂಟಕ್ಕೆ ದೀದಿ ಶಾಕ್; ಬಾಹ್ಯ ಬೆಂಬಲವಷ್ಟೇ ಎಂದು ಘೋಷಣೆ!

Bengaluru News
ಕರ್ನಾಟಕ2 hours ago

Bengaluru News: ಹಸುಗೂಸನ್ನು ರಸ್ತೆ ಬದಿ ಎಸೆದು ಹೋದ ಅನಾಮಿಕರು!

CAA
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಸಿಎಎ ಅನುಷ್ಠಾನ ಮೋದಿ ಸರ್ಕಾರದ ದಿಟ್ಟ ನಿರ್ಧಾರ

Amit Shah
ದೇಶ2 hours ago

Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

PBKS vs RR
ಕ್ರೀಡೆ3 hours ago

PBKS vs RR: ಸ್ಯಾಮ್‌ ಕರನ್‌ ಏಕಾಂಗಿ ಬ್ಯಾಟಿಂಗ್​ ಹೋರಾಟಕ್ಕೆ ತಲೆ ಬಾಗಿದ ರಾಜಸ್ಥಾನ್​

Anjali Murder Case
ಕ್ರೈಂ3 hours ago

Anjali Murder Case: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

Isha Ambani
ದೇಶ3 hours ago

Isha Ambani: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಇಶಾ ಅಂಬಾನಿ

Retired Teacher G T Bhatt Bommanahalli 80th celebration programme on May 19
ಉತ್ತರ ಕನ್ನಡ3 hours ago

Uttara Kannada News: ಮೇ 19ರಂದು ನಿವೃತ್ತ ಶಿಕ್ಷಕ ಜಿ. ಟಿ. ಭಟ್ ಬೊಮ್ಮನಹಳ್ಳಿ 80ರ ಸಂಭ್ರಮ

Dalita Sangharsha samiti demands that Minister HK Patil should be dismissed from the Cabinet
ರಾಯಚೂರು3 hours ago

Raichur News: 371 ಜೆ ಮೀಸಲಾತಿ ಮುಂದುವರಿಸದಂತೆ ಸಿಎಂಗೆ ಪತ್ರ ಬರೆದ ಎಚ್.ಕೆ. ಪಾಟೀಲ್ ವಜಾಗೆ ದಸಂಸ ಆಗ್ರಹ

Sandeep Lamichhane
ಕ್ರೀಡೆ3 hours ago

Sandeep Lamichhane: ಅತ್ಯಾಚಾರ ಆರೋಪದಲ್ಲಿ 8 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕ್ರಿಕೆಟಿಗ ಲಮಿಚಾನೆಗೆ ರಿಲೀಫ್; ನಿರಪರಾಧಿ ಎಂದ ಕೋರ್ಟ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ18 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ21 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌