Donald Trump : ಡೊನಾಲ್ಡ್​ ಟ್ರಂಪ್​, ಎಲಾನ್​ ಮಸ್ಕ್​ ಮಸ್ತ್​ ಡಾನ್ಸ್​; ಇದು ಕೃತಕ ಬುದ್ದಿಮತ್ತೆಯ ಕರಾಮತ್ತು! - Vistara News

ಪ್ರಮುಖ ಸುದ್ದಿ

Donald Trump : ಡೊನಾಲ್ಡ್​ ಟ್ರಂಪ್​, ಎಲಾನ್​ ಮಸ್ಕ್​ ಮಸ್ತ್​ ಡಾನ್ಸ್​; ಇದು ಕೃತಕ ಬುದ್ದಿಮತ್ತೆಯ ಕರಾಮತ್ತು!

Donald Trump : 36 ಸೆಕೆಂಡುಗಳ ವೀಡಿಯೊದಲ್ಲಿ ಮಸ್ಕ್ ಮತ್ತು ಟ್ರಂಪ್ ಇಬ್ಬರೂ ಗರಿಗರಿಯಾದ ಸೂಟ್​ಗಳನ್ನುಧರಿಸಿ, ಉತ್ಸಾಹಭರಿತ ಹೆಜ್ಜೆಗಳನ್ನು ಹಾಕಿದ್ದಾರೆ. ಅವರಿಬ್ಬರ ನಡುವಿನ ಸಮನ್ವಯತೆ ಇಲ್ಲಿ ಹೆಚ್ಚು ಗಮನ ಸೆಳೆದಿದೆ. ಈ ಕ್ಲಿಪ್ ಅನ್ನು ಮೊದಲು ಅಮೆರಿಕ ಸೆನೆಟರ್ ಮೈಕ್ ಲೀ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದರು, ಸ್ಪೇಸ್ಎಕ್ಸ್ ಮುಖ್ಯಸ್ಥ ಮಸ್ಕ್ ಆಗಸ್ಟ್ 14 ರಂದು ಇದನ್ನು ಹಂಚಿಕೊಂಡಿದ್ದಾರೆ.

VISTARANEWS.COM


on

Donald Trump
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನವೆಂಬರ್ 5ರಂದು ನಡೆಯಲಿರುವ ಅಮೆರಿಕ ಚುನಾವಣೆಯ ಕಣದಲ್ಲಿರುವ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ (Donald Trump) ಗುರುವಾರ (ಆಗಸ್ಟ್ 15) ಎಐ-ರಚಿಸಿದ (ಕೃತಕ ಬುದ್ಧಿಮತ್ತೆ ಸೃಷ್ಟಿಸಿರುವ) ವೀಡಿಯೊವೊಂದರನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಮತ್ತು ಟೆಸ್ಲಾ ಮುಖ್ಯಸ್ಥ ಎಲೋನ್ ಮಸ್ಕ್ ಅವರೊಂದಿಗೆ ಬೀ ಗೀಸ್ ಟ್ರ್ಯಾಕ್ ‘ಸ್ಟೇಯಿನ್’ ಅಲೈವ್’ ಮ್ಯೂಸಿಕ್​ಗೆ ಹೆಜ್ಜೆ ಹಾಕಿದಂತೆ ಕಾಣುತ್ತದೆ. ಟ್ರಂಪ್ ತಮ್ಮ ಪೋಸ್ಟ್ಗೆ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಯಾವುದೇ ಶೀರ್ಷಿಕೆ ನೀಡದೇ ಶೇರ್ ಮಾಡಿದ್ದಾರೆ. ಆದರೆ ಮಸ್ಕ್​ ಇದನ್ನು ಶೇರ್ ಮಾಡುವಾಗ, ವಿರೋಧಿಗಳು ಇದನ್ನು ಎಐ ರಚಿತ ಎಂದು ಬರೆಯುತ್ತಾರೆ ಎಂದು ಶೀರ್ಷಿಕೆ ಕೊಟ್ಟಿದ್ದಾರೆ.

36 ಸೆಕೆಂಡುಗಳ ವೀಡಿಯೊದಲ್ಲಿ ಮಸ್ಕ್ ಮತ್ತು ಟ್ರಂಪ್ ಇಬ್ಬರೂ ಗರಿಗರಿಯಾದ ಸೂಟ್​ಗಳನ್ನುಧರಿಸಿ, ಉತ್ಸಾಹಭರಿತ ಹೆಜ್ಜೆಗಳನ್ನು ಹಾಕಿದ್ದಾರೆ. ಅವರಿಬ್ಬರ ನಡುವಿನ ಸಮನ್ವಯತೆ ಇಲ್ಲಿ ಹೆಚ್ಚು ಗಮನ ಸೆಳೆದಿದೆ. ಈ ಕ್ಲಿಪ್ ಅನ್ನು ಮೊದಲು ಅಮೆರಿಕ ಸೆನೆಟರ್ ಮೈಕ್ ಲೀ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದರು, ಸ್ಪೇಸ್ಎಕ್ಸ್ ಮುಖ್ಯಸ್ಥ ಮಸ್ಕ್ ಆಗಸ್ಟ್ 14 ರಂದು ಇದನ್ನು ಹಂಚಿಕೊಂಡಿದ್ದಾರೆ.

ಮಸ್ಕ್ ಅವರ ಪೋಸ್ಟ್ 100 ಮಿಲಿಯನ್ (10 ಕೋಟಿ) ವೀಕ್ಷಣೆಗಳನ್ನು ದಾಟಿದರೆ, ಮಾಜಿ ಯುಎಸ್ ಅಧ್ಯಕ್ಷರು ಪೋಸ್ಟ್ ಮಾಡಿದ ಪೋಸ್ಟ್ 30 ಮಿಲಿಯನ್ (3 ಕೋಟಿ) ವೀಕ್ಷಣೆಗಳನ್ನು ಹೊಂದಿದೆ. ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿಯಾಗಿರುವ ಡೊನಾಲ್ಡ್​ ಟ್ರಂಪ್​ ಜತೆ ಎಲೋನ್ ಮಸ್ಕ್ ಅವರ ಸಂದರ್ಶನದ ಹಿನ್ನೆಲೆಯಲ್ಲಿ ಈ ವೀಡಿಯೊ ಹೊರಬಂದಿದೆ. ಇದನ್ನು ಎಕ್ಸ್​​ನಲ್ಲಿ ನೇರ ಪ್ರಸಾರ ಮಾಡಲಾಗಿದೆ. ತಾಂತ್ರಿಕ ದೋಷದಿಂದಾಗಿ ಸುಮಾರು 40 ನಿಮಿಷ ಸಂದರ್ಶನ ವಿಳಂಬಗೊಂಡಿತ್ತು.

ಇದನ್ನೂ ಓದಿ: Vinesh Phogat : ತೂಕ ಇಳಿಸಲು ಹೋಗಿ ಸಾವಿನ ಬಾಗಿಲು ತಟ್ಟಿದ್ದ ವಿನೇಶ್​ ಫೋಗಟ್​; ಭಯಾನಕ ಕ್ಷಣಗಳನ್ನು ವಿವರಿಸಿದ ಕೋಚ್​!

ಪೆನ್ಸಿಲ್ವೇನಿಯಾದ ಬಟ್ಲರ್ನ್​​ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆ ಪ್ರಯತ್ನದಿಂದ ಬದುಕುಳಿದ ಕೆಲವೇ ದಿನಗಳ ನಂತರ ಜುಲೈನಲ್ಲಿ ಎಲೋನ್ ಮಸ್ಕ್ ಡೊನಾಲ್ಡ್ ಟ್ರಂಪ್​​ಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದರು.

ಆಗಸ್ಟ್ 13 ರಂದು ತಮ್ಮ ಸಂದರ್ಶನದಲ್ಲಿ, ಟ್ರಂಪ್ ಹಾಲಿ ಸರ್ಕಾರದ ಕುಂದುಕೊರತೆಗಳು, ವೈಯಕ್ತಿಕ ದಾಳಿಗಳು ಮತ್ತು ದಿಟ್ಟ ಹೇಳಿಕೆಗಳನ್ನು ತೆರೆದಿಟ್ಟರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Indian Economy : 2027ರ ವೇಳೆಗೆ ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಐಎಂಎಫ್​ನ ಗೀತಾ ಗೋಪಿನಾಥ್

Indian Economy :

VISTARANEWS.COM


on

Indian Economy
Koo

ಬೆಂಗಳೂರು : ಭಾರತದ ಆರ್ಥಿಕತೆಯ (Indian Economy ) ಬೆಳವಣಿಗೆಯೂ ನಿರೀಕ್ಷೆಯನ್ನೂ ಮೀರುತ್ತಿದೆ ಎಂಬುದಾಗಿ ಅಂತರರಾಷ್ಟ್ರೀಯ ಹಣಕಾಸು ನಿಧಿಯ (IMF) ಮೊದಲ ಉಪ ವ್ಯವಸ್ಥಾಪಕ ನಿರ್ದೇಶಕಿ ಡಾ.ಗೀತಾ ಗೋಪಿನಾಥ್ ಅಭಿಪ್ರಾಯಪಟ್ಟಿದ್ದಾರೆ. 2027 ರ ವೇಳೆಗೆ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಭರವಸೆಯಿದೆ ಎಂದು ಅವರ ಹೇಳಿದ್ದಾರೆ.

ಇಂಡಿಯಾ ಟುಡೇಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು ಭಾರತದ ಆರ್ಥಿಕ ಬೆಳವಣಿಗೆಯು ನಿರೀಕ್ಷೆಗಿಂತ ಉತ್ತಮವಾಗಿದೆ. ಇದು ವಿವಿಧ ಅಂಶಗಳಿಂದ ಪ್ರೇರಿತವಾಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಭಾರತದ ಬೆಳವಣಿಗೆಯು ಕಳೆದ ಹಣಕಾಸು ವರ್ಷದಲ್ಲಿ ನಾವು ನಿರೀಕ್ಷಿಸಿದ್ದಕ್ಕಿಂತ ಉತ್ತಮವಾಗಿ ಸಾಗಿದೆ. ಅದೇ ರೀತಿಯ ಪರಿಣಾಮಗಳು ಮುಂದಿನ ಹಲವು ವರ್ಷಗಳವರೆಗೆ ಸಾಗಲಿದೆ. ಈ ವರ್ಷದ ಮುನ್ಸೂಚನೆಯೂ ಪರಿಣಾಮ ಬೀರುತ್ತಿವೆ. ಮತ್ತೊಂದು ಅಂಶವೆಂದರೆ ಖಾಸಗಿ ಉದ್ಯಮಗಳು ಚೇತರಿಸಿಕೊಳ್ಳುತ್ತಿರುವುದರಿಂದ ಉತ್ತಮ ಫಲಿತಾಂಶ ನಿರೀಕ್ಷಿಸಬಹುದು ಎಂದು ಗೋಪಿನಾಥ್ ಹೇಳಿದ್ದಾರೆ.

ಎಫ್ಎಂಸಿಜಿ ಮತ್ತು ದ್ವಿಚಕ್ರ ವಾಹನ ಮಾರಾಟದ ಹೊಸ ಅಂಕಿ ಅಂಶಗಳು ಮತ್ತು ಅನುಕೂಲಕರವಾಗಿ ಮಾನ್ಸೂನ್ ಮಳೆ ಸುರಿದಿರುವ ಆಧಾರದ ಮೇಲೆ, 2024-25ರ ಆರ್ಥಿಕ ವರ್ಷದಲ್ಲಿ ಭಾರತದ ಬೆಳವಣಿಗೆಯ ಮುನ್ಸೂಚನೆಯನ್ನು 7% ಕ್ಕೆ ಐಎಂಎಫ್ ನಿರೀಕ್ಷಿಸಿದೆ. ಇದು ಆರ್ಥಿಕ ಸಮೀಕ್ಷೆಯಲ್ಲಿ ಕೇಂದ್ರ ಸರ್ಕಾರ ನೀಡಿದ 6.5% ಅಂದಾಜಿಗಿಂತ ಹೆಚ್ಚಿನ ಅಂಕಿ ಅಂಶವಾಗಿದೆ. 2027 ರ ವೇಳೆಗೆ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಐಎಂಎಫ್ ಭವಿಷ್ಯ ನುಡಿದಿದೆ.

ಇದನ್ನೂ ಓದಿ: Donald Trump : ಡೊನಾಲ್ಡ್​ ಟ್ರಂಪ್​, ಎಲಾನ್​ ಮಸ್ಕ್​ ಮಸ್ತ್​ ಡಾನ್ಸ್​; ಇದು ಕೃತಕ ಬುದ್ದಿಮತ್ತೆಯ ಕರಾಮತ್ತು!

ಕಳೆದ ವರ್ಷ ಖಾಸಗಿ ಕ್ಷೇತ್ರದ ಬೆಳವಣಿಗೆಯನ್ನು ನೋಡಿದರೆ, ಸುಮಾರು 4% ರಷ್ಟಿತ್ತು. ಗ್ರಾಮೀಣ ಬಳಕೆಯ ಚೇತರಿಕೆಯಿಂದ ಅದು ಹೆಚ್ಚಾಗುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ. ನೀವು ದ್ವಿಚಕ್ರ ವಾಹನ ಮಾರಾಟ ಪ್ರಗತಿ ನೋಡಿದರೆ ಆಟೋಮೊಬೈಲ್ ಕ್ಷೇತ್ರವೂ ಉತ್ತಮವಾಗಿದೆ. ಉತ್ತಮ ಮಾನ್ಸೂನ್ ಮಳೆ ಬಿದ್ದರೆ ಉತ್ತಮ ಫಸಲನ್ನು ನೋಡಬಹುದು ಎಂದು ನಾವು ನಿರೀಕ್ಷಿಸುತ್ತೇವೆ. ಕೃಷಿ ಆದಾಯವು ಹೆಚ್ಚುತ್ತಿರುವುದರಿಂದ, ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕ ಚೇತರಿಕೆಯನ್ನು ನೋಡಬಹುದು ಎಂದು ಹೇಳಿದ ಗೋಪಿನಾಥ್, 2024-25ರ ಹಣಕಾಸು ವರ್ಷದಲ್ಲಿ ಭಾರತದ ಬೆಳವಣಿಗೆಯ ಮುನ್ಸೂಚನೆಯನ್ನು 7% ಕ್ಕೆ ಹೆಚ್ಚಿಸಲಾಗಿದೆ ಎಂದು ನುಡಿದರು.

Continue Reading

Latest

Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

Kolkata Doctor Murder Case: ಕೋಲ್ಕತ್ತಾದ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಇಡೀ ದೇಶದ ಜನರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ತಾರೆಯರು ಸೋಶಿಯಲ್ ಮೀಡಿಯಾದ ಮೂಲಕ ತಮ್ಮ ಬೆಂಬಲ ಮತ್ತು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.ಹೃತಿಕ್ ರೋಶನ್, ಜೆನಿಲಿಯಾ ದೇಶ್‌ಮುಖ್‌, ಆಯುಷ್ಮಾನ್ ಖುರಾನಾ, ರಿಚಾ ಚಡ್ಡಾ, ನವ್ಯಾ ನವೇಲಿ ನಂದಾ, ಜೋಯಾ ಅಖ್ತರ್ ಮುಂತಾದ ನಟನಟಿಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Kolkata Doctor Murder Case
Koo


ಕೋಲ್ಕತಾ: ಕೋಲ್ಕತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ನೀಡುತ್ತಿದ್ದ ವೈದ್ಯೆಯ (Kolkata Doctor Murder Case) ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದೇಶದ ಜನರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ತಾರೆಯರು ಸೋಶಿಯಲ್ ಮೀಡಿಯಾದ ಮೂಲಕ ತಮ್ಮ ಬೆಂಬಲ ಮತ್ತು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

Kolkata Doctor Murder Case
Kolkata Doctor Murder Case

ಬಾಲಿವುಡ್ ಸೆಲೆಬ್ರಿಟಿಗಳಾದ ಜೆನಿಲಿಯಾ ದೇಶ್‌ಮುಖ್‌, ಆಯುಷ್ಮಾನ್ ಖುರಾನಾ, ರಿಚಾ ಚಡ್ಡಾ, ನವ್ಯಾ ನವೇಲಿ ನಂದಾ, ಜೋಯಾ ಅಖ್ತರ್ ಮತ್ತು ಇತರರು ದೇಶದಲ್ಲಿ ಮಹಿಳೆಯರ ಸುರಕ್ಷತೆಯ ಕೊರತೆಯ ವಿರುದ್ಧ ತಮ್ಮ ಆಕ್ರೋಶವನ್ನು ಕಟುವಾದ ಪದಗಳ ಮೂಲಕ ಹೊರಹಾಕಿದ್ದಾರೆ ಮತ್ತು ಅಪರಾಧಿಗಳಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿದ್ದಾರೆ.

ಕವಿತೆ ರಚಿಸುವ ಕಲೆ ಹೊಂದಿರುವಂತಹ ನಟ ಆಯುಷ್ಮಾನ್ ಖುರಾನಾ ಅವರು ಕಾಶ್ ಮೈ ಭಿ ಲಡ್ಕಾ ಹೋತಿ (ನಾನು ಹುಡುಗನಾಗಬೇಕೆಂದು ಬಯಸುತ್ತೇನೆ) ಎಂಬ ಭಾವನಾತ್ಮಕ ಕವಿತೆಯನ್ನು ಬರೆದು ಆ ಕವಿತೆಯನ್ನು ಹೇಳುತ್ತಾ ವಿಡಿಯೊ ಮಾಡಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಆ ಕವಿತೆಯಲ್ಲಿ ಅವರು ನಾನು ಹುಡುಗನಾಗಬೇಕೆಂದು ಬಯಸುತ್ತೇನೆ. ಯಾಕೆಂದರೆ ನಾನು ಬಾಗಿಲನ್ನು ಲಾಕ್ ಮಾಡದೆ ಮಲಗಬಹುದು. ನಿರಾತಂಕವಾಗಿ ಎಲ್ಲಿ ಬೇಕಾದರೂ ಓಡಾಡಬಹುದು, ಹಾರಾಡಬಹುದು, ರಾತ್ರಿಯಿಡೀ ಸ್ನೇಹಿತರೊಂದಿಗೆ ತಿರುಗಾಡಬಹುದು. ಆದರೆ ಈ ಸ್ವಾತಂತ್ರ್ಯ ಮಹಿಳೆಯರಿಗೆ ಇಲ್ಲವಲ್ಲ ಎಂಬುದನ್ನು ತಮ್ಮ ಕವಿತೆಯ ಮೂಲಕ ಮಾರ್ಮಿಕವಾಗಿ ತಿಳಿಸಿದ್ದಾರೆ.

Kolkata Doctor Murder Case
Kolkata Doctor Murder Case

ಈ ಪ್ರಕರಣದ ಬಗ್ಗೆ ಬೇಸರ ವ್ಯಕ್ತಪಡಿಸಿದ ನಟಿ ಕೃತಿ “ನಾವು ನಮ್ಮ 78ನೇ ಸ್ವಾತಂತ್ರ್ಯ ವರ್ಷವನ್ನು ಆಚರಿಸುತ್ತಿರುವಾಗ ಜಾಗತಿಕವಾಗಿ ಒಂದು ದೇಶವಾಗಿ ನಾವು ಎಷ್ಟು ದೂರ ಬಂದಿದ್ದೇವೆ ಎಂಬುದರ ಬಗ್ಗೆ ಹೆಮ್ಮೆಪಡುತ್ತೇವೆ. ಆದರೆ ತಮ್ಮ ದೇಶದಲ್ಲಿ ಮಹಿಳೆಯರು ಇನ್ನೂ ಸುರಕ್ಷಿತವಾಗಿಲ್ಲ ಎಂಬ ಭಯಾನಕ ವಾಸ್ತವವನ್ನು ನೋಡಿದಾಗ ನನಗೆ ಬೇಸರವಾಗುತ್ತದೆ. ಈ ಅಮಾನವೀಯ ಕೃತ್ಯಗಳನ್ನು ಮಾಡುವ ಜನರಿಗೆ ಯಾವುದೇ ಭಯವಿರುವುದಿಲ್ಲ. ಆದರೆ ಇಂದಿಗೂ, ಇದರಲ್ಲಿ ಬಲಿಪಶುವಾಗಿರುವುದಕ್ಕೆ ಮಹಿಳೆಯನ್ನು ದೂಷಿಸಲಾಗುತ್ತಿದೆ ಎಂದು ವಿಷಾದಿಸಿದ್ದಾರೆ.

ಈ ಪ್ರಕರಣದಲ್ಲಿ ಭಾಗಿಯಾದವರಿಗೆ ಮರಣದಂಡನೆ ವಿಧಿಸಬೇಕೆಂದು ನಟಿ ಜೆನಿಲಿಯಾ ದೇಶ್‌ಮುಖ್‌ ಆಗ್ರಹಿಸಿದ್ದಾರೆ. ತಮ್ಮ ಎಕ್ಸ್ (ಹಿಂದೆ ಟ್ವಿಟರ್) ಖಾತೆಯಲ್ಲಿ ಅವರು, “ರಾಕ್ಷಸರನ್ನು ಗಲ್ಲಿಗೇರಿಸಬೇಕಾಗಿದೆ. ಬಲಿಪಶು ಅನುಭವಿಸಿದ್ದನ್ನು ಓದಿದಾಗ ನನ್ನ ರಕ್ತ ಕುದಿಯುತ್ತದೆ. ಸೆಮಿನಾರ್ ಹಾಲ್‍ನಲ್ಲಿ ಕರ್ತವ್ಯದಲ್ಲಿದ್ದ ಒಬ್ಬ ಮಹಿಳೆ, ಇಂತಹ ಘೋರ ಭಯಾನಕತೆಯನ್ನು ಎದುರಿಸಿದಳು. ಅವಳ ಕುಟುಂಬದವರು ಮತ್ತು ಪ್ರೀತಿಪಾತ್ರರು ಈ ದುರಂತವನ್ನು ಹೇಗೆ ಎದುರಿಸುತ್ತಿದ್ದಾರೆಂದು ಊಹಿಸಲು ಸಹ ಸಾಧ್ಯವಿಲ್ಲʼʼ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಟ ಹೃತಿಕ್ ರೋಷನ್ ಕೂಡ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ತೀವ್ರ ಕೋಪ ಮತ್ತು ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ಎಕ್ಸ್ ಖಾತೆಯಲ್ಲಿ, ನಾವೆಲ್ಲರೂ ಸಮಾನವಾಗಿ ಸುರಕ್ಷಿತರೆಂದು ಭಾವಿಸುವ ಸಮಾಜವನ್ನು ನಿರ್ಮಿಸಬೇಕು. ಆದರೆ ಅದಕ್ಕೆ ಹಲವು ವರ್ಷಗಳು ಬೇಕಾಗುತ್ತದೆ. ನಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿದರೆ ಮುಂದಿನ ತಲೆಮಾರು ಉತ್ತಮವಾಗಿರುತ್ತದೆ. ಇದೀಗ ಇಂತಹ ದೌರ್ಜನ್ಯಗಳಿಗೆ ಕಠಿಣ ಕ್ರಮ ಕೈಗೊಳ್ಳುವುದು ನ್ಯಾಯವಾಗಿದೆ. ಮತ್ತು ಅದನ್ನು ಮಾಡಲು ಇರುವ ಏಕೈಕ ಮಾರ್ಗವೆಂದರೆ ಅಂತಹ ಅಪರಾಧಿಗಳಿಗೆ ಹಾಡುಹಗಲಿನಲ್ಲೇ ಕಠಿಣ ಶಿಕ್ಷೆ ನೀಡುವುದು ಎಂದು ತಿಳಿಸಿದ್ದಾರೆ ಮತ್ತು ತಾನು ಸಂತ್ರಸ್ತೆಗೆ ನ್ಯಾಯ ದೊರಕಿಸಲು ಆಕೆಯ ಕುಟುಂಬದೊಂದಿಗೆ ನಿಲ್ಲುತ್ತೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಕೋಲ್ಕತ್ತಾದಲ್ಲಿ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯನ್ನು ನಟಿ ಕರೀನಾ ಕಪೂರ್ ಖಾನ್ ಕೂಡ ಖಂಡಿಸಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಕರೀನಾ, “12 ವರ್ಷಗಳ ನಂತರ; ಅದೇ ಕಥೆ; ಅದೇ ಪ್ರತಿಭಟನೆ. ಆದರೆ ನಾವು ಇನ್ನೂ ಬದಲಾವಣೆಗಾಗಿ ಕಾಯುತ್ತಿದ್ದೇವೆʼʼ ಎಂದಿದ್ದಾರೆ.

ಆಘಾತಕಾರಿ ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ನಟಿ ಪ್ರೀತಿ ಜಿಂಟಾ, ಮಹಿಳೆಯರ ಸುರಕ್ಷತೆಗೆ ಸರ್ಕಾರವು ಆದ್ಯತೆ ನೀಡಬೇಕು ಎಂದು ತಿಳಿಸುವ ಮೂಲಕ ಅವರು ಮಹಿಳೆಯರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಅಲ್ಲದೇ ಅತ್ಯಾಚಾರ ಮತ್ತು ಹಿಂಸಾತ್ಮಕ ಲೈಂಗಿಕ ಅಪರಾಧದ ಸಂತ್ರಸ್ತರ ಹೆಸರುಗಳು ಮತ್ತು ಮುಖಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಿರುವಾಗ, ಅತ್ಯಾಚಾರಿಯ ಮುಖವನ್ನು ಮರೆಮಾಚುವುದನ್ನು ನೋಡಿದರೆ ಅಸಹ್ಯವಾಗುತ್ತದೆ. ಇಂತಹ ಘೋರ ಕೃತ್ಯಗಳಿಗೆ ಬೇಗ ನ್ಯಾಯ ಸಿಗುವುದಿಲ್ಲ, ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವುದಿಲ್ಲ. ಹಾಗಾಗಿ ಅನ್ಯಾಯಕ್ಕೊಳಗಾದ ಪ್ರತಿಯೊಬ್ಬ ಹೆಣ್ಣುಮಗಳ ಬಗ್ಗೆ ತಾನು ವಿಷಾದ ವ್ಯಕ್ತಪಡಿಸುತ್ತೇನೆ. ಕ್ಷಮಿಸಿ ಎಂದು ಅವರು ಬರೆದಿದ್ದಾರೆ

ಇದನ್ನೂ ಓದಿ:ಲೈಂಗಿಕ ಕಿರುಕುಳ ನೀಡಿದವನನ್ನು ನಡು ರಸ್ತೆಯಲ್ಲಿ ಥಳಿಸಿದ ಅಕ್ಕತಂಗಿ; ವಿಡಿಯೊ ವೈರಲ್

ಆಗಸ್ಟ್ 9ರಂದು ಕೋಲ್ಕತಾದ ಆರ್‌ ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‍ನಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯೆಯೊಬ್ಬರು ಶವವಾಗಿ ಪತ್ತೆಯಾಗಿದ್ದರು. ಸಂತ್ರಸ್ತೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ. ಸ್ನಾತಕೋತ್ತರ ತರಬೇತಿ (ಪಿಜಿಟಿ) ವೈದ್ಯೆಯ ಕೊಲೆ ಮತ್ತು ಲೈಂಗಿಕ ದೌರ್ಜನ್ಯದ ವಿರುದ್ಧ ದೇಶಾದ್ಯಂತ ವೈದ್ಯರು ಪ್ರತಿಭಟನೆ ಮುಂದುವರಿಸಿದ್ದು, ಸಂತ್ರಸ್ತೆಗೆ ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Vinesh Phogat : ವಿನೇಶ್​ ಫೈನಲ್ ತಲುಪಿದ್ದೇ ಹೆಮ್ಮೆಯ ವಿಷಯ; ಫೋಗಟ್ ಸಾಧನೆಯನ್ನು ಕೊಂಡಾಡಿದ ಮೋದಿ

Vinesh Phogat: ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಮಹಿಳೆಯರ 50 ಕೆ.ಜಿ ಚಿನ್ನದ ಪದಕದ ಸ್ಪರ್ಧೆಯಿಂದ ವಿನೇಶ್ ಅನರ್ಹಗೊಂಡಿದ್ದರು. ಅವರು ಮಿತಿಗಿಂತ 100 ಗ್ರಾಂ ಹೆಚ್ಚುವರಿ ತೂಕ ಹೊಂದಿದ್ದಕ್ಕೆ ಅನರ್ಹಗೊಳಿಸಲಾಯಿತು. ಗ್ರ್ಯಾಂಡ್ ಸ್ಪೋರ್ಟ್ಸ್ ಅಖಾಡದಲ್ಲಿ ಆದ ನೋವಿನಿಂದಾಗಿ ಅವರು ಕುಸ್ತಿಯಿಂದ ನಿವೃತ್ತರಾಗುವ ನಿರ್ಧಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದರು.

VISTARANEWS.COM


on

Vinesh Phogat
Koo

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಸ್ಪರ್ಧಿಸಿದ್ದ ಭಾರತೀಯ ಕ್ರೀಡಾಪಟುಗಳು ಮತ್ತು ಪದಕ ವಿಜೇತರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯಂದು ತಮ್ಮ ನಿವಾಸದಲ್ಲಿ ಸತ್ಕರಿಸಿದ್ದಾರೆ. ಈ ವೇಳೆ ವಿನೇಶ್ ಅವರ ಸಾಧನೆಯನ್ನು ಉಲ್ಲೇಖಿಸಿದ್ದಾರೆ. ಒಲಿಂಪಿಕ್ಸ್​ ಕುಸ್ತಿಯಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯ (ಮಹಿಳೆ) ಎಂಬ ಹೆಗ್ಗಳಿಕೆಗೆ ವಿನೇಶ್ ಪಾತ್ರರಾಗಿದ್ದನ್ನು ಅವರು ಕೊಂಡಾಡಿದ್ದಾರೆ. ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಹೇಳಿದರು.

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಮಹಿಳೆಯರ 50 ಕೆ.ಜಿ ಚಿನ್ನದ ಪದಕದ ಸ್ಪರ್ಧೆಯಿಂದ ವಿನೇಶ್ ಅನರ್ಹಗೊಂಡಿದ್ದರು. ಅವರು ಮಿತಿಗಿಂತ 100 ಗ್ರಾಂ ಹೆಚ್ಚುವರಿ ತೂಕ ಹೊಂದಿದ್ದಕ್ಕೆ ಅನರ್ಹಗೊಳಿಸಲಾಯಿತು. ಗ್ರ್ಯಾಂಡ್ ಸ್ಪೋರ್ಟ್ಸ್ ಅಖಾಡದಲ್ಲಿ ಆದ ನೋವಿನಿಂದಾಗಿ ಅವರು ಕುಸ್ತಿಯಿಂದ ನಿವೃತ್ತರಾಗುವ ನಿರ್ಧಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದರು.

ಹರಿಯಾಣದ ಕುಸ್ತಿಪಟು ಮೂರು ಕಾಮನ್ವೆಲ್ತ್ ಗೇಮ್ಸ್ ಚಿನ್ನ, ಎರಡು ವಿಶ್ವ ಚಾಂಪಿಯನ್ಶಿಪ್ ಕಂಚಿನ ಪದಕ ಮತ್ತು ಒಂದು ಏಷ್ಯನ್ ಗೇಮ್ಸ್ ಚಿನ್ನದ ಪದಕ ಗೆದ್ದಿದ್ದಾರೆ. ಅವರು 2021ರಲ್ಲಿ ಏಷ್ಯನ್ ಚಾಂಪಿಯನ್ ಕಿರೀಟವನ್ನು ಪಡೆದವರು. ಅವರು ಒಲಿಂಪಿಕ್ ಅನರ್ಹತೆಯ ವಿರುದ್ಧ ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ಸ್ (ಸಿಎಎಸ್) ಗೆ ಮೇಲ್ಮನವಿ ಸಲ್ಲಿಸಿದರು. 50 ಕೆಜಿ ವಿಭಾಗದಲ್ಲಿ ಜಂಟಿ ಬೆಳ್ಳಿ ಪದಕವನ್ನು ಒತ್ತಾಯಿಸಿದರು. ಸಿಎಎಸ್​​ನ ತಾತ್ಕಾಲಿಕ ವಿಭಾಗವು ಅನರ್ಹತೆಯ ವಿರುದ್ಧ ವಿನೇಶ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು. ಇದು ಅವರ ಚೊಚ್ಚಲ ಒಲಿಂಪಿಕ್ ಪದಕವನ್ನು ಗೆಲ್ಲುವ ಕನಸನ್ನು ಭಗ್ನಗೊಳಿಸಿತು.

ಇದನ್ನು ಓದಿ: Vinesh Phogat : ತೂಕ ಇಳಿಸಲು ಹೋಗಿ ಸಾವಿನ ಬಾಗಿಲು ತಟ್ಟಿದ್ದ ವಿನೇಶ್​ ಫೋಗಟ್​; ಭಯಾನಕ ಕ್ಷಣಗಳನ್ನು ವಿವರಿಸಿದ ಕೋಚ್​!

ಪ್ಯಾರಿಸ್ ಕ್ರೀಡಾಕೂಟದಲ್ಲಿ ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಈಕ್ವೆಸ್ಟ್ರಿಯನ್​​, ಗಾಲ್ಫ್, ಹಾಕಿ, ಜೂಡೋ, ರೋಯಿಂಗ್, ನೌಕಾಯಾನ, ಶೂಟಿಂಗ್, ಈಜು, ಕುಸ್ತಿ, ಟೇಬಲ್ ಟೆನಿಸ್ ಮತ್ತು ಟೆನಿಸ್ ಸೇರಿದಂತೆ 16 ಕ್ರೀಡೆಗಳಲ್ಲಿ ಒಟ್ಟು 117 ಭಾರತೀಯ ಕ್ರೀಡಾಪಟುಗಳು ಭಾಗವಹಿಸಿದ್ದರು.

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಭಾರತ ಆರು ಪದಕಗಳನ್ನು ಗೆದ್ದಿದೆ. ಒಂದು ಬೆಳ್ಳಿ ಮತ್ತು ಐದು ಕಂಚು. ಪ್ರದರ್ಶನದ ನಿರೀಕ್ಷೆಗಳು ಹೆಚ್ಚಿದ್ದರೂ, 2021 ರಲ್ಲಿ ಟೋಕಿಯೊ ಒಲಿಂಪಿಕ್ಸ್​ನಲ್ಲಿ ದೇಶವು ಏಳು ಪದಕಗಳನ್ನು (1 ಚಿನ್ನ, 2 ಬೆಳ್ಳಿ ಮತ್ತು 4 ಕಂಚು) ಗಳಿಸಿ 48 ನೇ ಸ್ಥಾನದಲ್ಲಿತ್ತು.

Continue Reading

ಕ್ರೀಡೆ

Vinesh Phogat : ತೂಕ ಇಳಿಸಲು ಹೋಗಿ ಸಾವಿನ ಬಾಗಿಲು ತಟ್ಟಿದ್ದ ವಿನೇಶ್​ ಫೋಗಟ್​; ಭಯಾನಕ ಕ್ಷಣಗಳನ್ನು ವಿವರಿಸಿದ ಕೋಚ್​!

Vinesh Phogat : 100 ಗ್ರಾಮ್​​ ತೂಕ ಹೆಚ್ಚಿದ ಕಾರಣ ವಿನೇಶ್ ಫೋಗಟ್ ಅವರನ್ನು 50 ಕೆ.ಜಿ ಫೈನಲ್​ನಿಂದ ಅನರ್ಹಗೊಂಡ ಬಳಿಕ ಹಂಗೇರಿಯಾದ ಕೋಚ್ ಕೂಟ ಟೀಕೆಗಳನ್ನು ಎದುರಿಸಿದ್ದಾರೆ. ತೂಕ ಮತ್ತಿತರ ವಿಷಯ ಸ್ಪರ್ಧಿ ಮತ್ತು ಕೋಚ್​ಗೆ ಸಂಬಂಧಿಸಿದ್ದು ಎಂಬುದು ಟೀಕಾಕಾರರ ವಾದವಾಗಿದೆ. ಅದಕ್ಕೆ ಉತ್ತರ ನೀಡಿರುವ ಅವರು, ಮ್ಯಾಟ್​ಗೆ ಹತ್ತುವ ಮೊದಲು ವಿನೇಶ್​ ತಮಗೆ ಸಾಧ್ಯವಿರುವ ಎಲ್ಲವನ್ನೂ ಮಾಡಿದ್ದಾರೆ ಎಂಬುದನ್ನು ವಿವರಿಸಿದ್ದಾರೆ. ಎಲ್ಲಿತನಕ ಎಂದರೆ ತೂಕ ಇಳಿಸಲು ಹೋಗಿ ಸಾಯುವ ಹಂತಕ್ಕೆ ಹೋಗಿದ್ದರು ಎಂಬುದನ್ನು ಹೇಳಿದ್ದಾರೆ.

VISTARANEWS.COM


on

Vinesh Phogat
Koo

ಬೆಂಗಳೂರು: ಭಾರತದ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರ ಪ್ಯಾರಿಸ್ ಒಲಿಂಪಿಕ್ಸ್​ ಕನಸು ನುಚ್ಚು ನೂರಾಗಿದೆ. ಅವರು ಸಲ್ಲಿಸಿದ್ದ ಮೇಲ್ಮನವಿಯೂ ತಿರಸ್ಕಾರಗೊಂಡಿದೆ. ಮಹಿಳೆಯರ 50 ಕೆ.ಜಿ ವಿಭಾಗದಲ್ಲಿ ಫೈನಲ್ ತಲುಪಿದ್ದ ಅವರು ಕೇವಲ 100 ಗ್ರಾಮ್ ಹೆಚ್ಚುವರಿ ತೂಕ ಹೊಂದಿದ್ದ ಕಾರಣ ಬೆಳ್ಳಿ ಪದಕವನ್ನೂ ಪಡೆಯದೇ ಅನರ್ಹತೆಗೆ ಒಳಗಾಗಿದ್ದರು. ಅವರ ಪಾಲಿಗೆ ವೃತ್ತಿ ಕುಸ್ತಿಯ ಅತ್ಯಂತ ಕಠಿಣ ದಿನಗಳು ಎಂಬುದರಲ್ಲಿ ಎರಡು ಮಾತಿಲ್ಲ. ಇಷ್ಟೆಲ್ಲ ಮುಗಿಯುವ ವೇಳೆ ಅವರ ತರಬೇತುದಾರ ವೊಲ್ರ್ ಅಕೋಸ್ ಭಯಾನಕ ಸತ್ಯವೊಂದನ್ನು ಬಿಚ್ಚಿಟ್ಟಿದ್ದಾರೆ. ಫೈನಲ್​ ಮೊದಲು ತೂಕ ಇಳಿಸಲು ಮುಂದಾದ ಅವರು ಸಾವಿನ ಮನೆಯ ಕದ ತಟ್ಟಿ ಬಂದಿದ್ದರು ಎಂಬುದನ್ನು ಬೇಸರದಿಂದ ಹೇಳಿಕೊಂಡಿದ್ದಾರೆ.

100 ಗ್ರಾಮ್​​ ತೂಕ ಹೆಚ್ಚಿದ ಕಾರಣ ವಿನೇಶ್ ಫೋಗಟ್ ಅವರನ್ನು 50 ಕೆ.ಜಿ ಫೈನಲ್​ನಿಂದ ಅನರ್ಹಗೊಂಡ ಬಳಿಕ ಹಂಗೇರಿಯಾದ ಕೋಚ್ ಕೂಟ ಟೀಕೆಗಳನ್ನು ಎದುರಿಸಿದ್ದಾರೆ. ತೂಕ ಮತ್ತಿತರ ವಿಷಯ ಸ್ಪರ್ಧಿ ಮತ್ತು ಕೋಚ್​ಗೆ ಸಂಬಂಧಿಸಿದ್ದು ಎಂಬುದು ಟೀಕಾಕಾರರ ವಾದವಾಗಿದೆ. ಅದಕ್ಕೆ ಉತ್ತರ ನೀಡಿರುವ ಅವರು, ಮ್ಯಾಟ್​ಗೆ ಹತ್ತುವ ಮೊದಲು ವಿನೇಶ್​ ತಮಗೆ ಸಾಧ್ಯವಿರುವ ಎಲ್ಲವನ್ನೂ ಮಾಡಿದ್ದಾರೆ ಎಂಬುದನ್ನು ವಿವರಿಸಿದ್ದಾರೆ. ಎಲ್ಲಿತನಕ ಎಂದರೆ ತೂಕ ಇಳಿಸಲು ಹೋಗಿ ಸಾಯುವ ಹಂತಕ್ಕೆ ಹೋಗಿದ್ದರು ಎಂಬುದನ್ನು ಹೇಳಿದ್ದಾರೆ.

ಹಂಗರಿ ಭಾಷೆಯಲ್ಲಿ ಪೋಸ್ಟ್ ಬರೆದ ಅಕೋಸ್​

ಹಂಗೇರಿಯನ್ ಭಾಷೆಯಲ್ಲಿ ಫೇಸ್ಬುಕ್ ಪೋಸ್ಟ್​​ನಲ್ಲಿ ಅಕೋಸ್ ತನ್ನ ಮೊದಲ ಒಲಿಂಪಿಕ್ ಪದಕವನ್ನು ಪಡೆಯುವ ವಿನೇಶ್ ಫೋಗಟ್ ಅವರ ಬದ್ಧತೆಯನ್ನು ಎತ್ತಿ ತೋರಿಸಿದರು. ಸೆಮಿಫೈನಲ್ ಬಳಿಕ 2.7 ಕೆಜಿ ಹೆಚ್ಚುವರಿ ತೂಕ ಉಳಿದಿತ್ತು. ಒಂದು ಗಂಟೆ ಇಪ್ಪತ್ತು ನಿಮಿಷಗಳ ಕಾಲ ವ್ಯಾಯಾಮ ಮಾಡಿಸಿದೆ. ಆದರೆ 1.5 ಕೆ.ಜಿ ಇನ್ನೂ ಉಳಿದಿತ್ತು. , 50 ನಿಮಿಷಗಳ ದೇಹ ದಂಡನೆ ಬಳಿಕ ಆಕೆಯ ದೇಹ ಸಂಪೂರ್ಣವಾಗಿ ನೀರಿನಂಶ ಕೊರತೆಯಿಂದ ಸೊರಗಿತು. ಮಧ್ಯರಾತ್ರಿಯಿಂದ ಬೆಳಿಗ್ಗೆ 5:30 ರವರೆಗೆ, ಅವರು ವಿವಿಧ ಕಾರ್ಡಿಯೋ ಯಂತ್ರಗಳು ಮತ್ತು ಕುಸ್ತಿ ಚಲನೆಗಳಲ್ಲಿ ಕೆಲಸ ಮಾಡಿದರು. ಒಂದೇ ಬಾರಿಗೆ ಸುಮಾರು ಮುಕ್ಕಾಲು ಗಂಟೆಗಳ ಕಾಲ ಶ್ರಮವಹಿಸಿದು. ಎರಡು-ಮೂರು ನಿಮಿಷಗಳ ವಿಶ್ರಾಂತಿಯೊಂದಿಗೆ ನಂತರ ಅವಳು ತೂಕ ಇಳಿಸಲು ಯತ್ನಿಸಿದರು. ಒಂದು ಹಂತದಲ್ಲಿ ಕುಸಿದುಬಿದ್ದರು. ಹೇಗೋ ನಾವು ಆಕೆಯನ್ನು ಎಬ್ಬಿಸಿದೆವು. ಆ ಬಳಿಕ ಏನು ಮಾಡಲು ಸಾಧ್ಯವಾಗಲಿಲ್ಲ. ಯಾಕೆಂದರೆ ನನ್ನ ಹೇಳಿಕೆಗಳು ನಾಟಕೀಯವಲ್ಲ. ಮುಂದೇನಾದರೂ ತೂಕ ಇಳಿಸಲು ಯತ್ನಿಸಿದ್ದರೆ ಆಕೆ ಸತ್ತು ಹೋಗುತ್ತಿದ್ದಳು ಎಂದು ಕೋಚ್ ಬರೆದಿದ್ದಾರೆ.

ಇದನ್ನೂ ಓದಿ: Jasprit Bumrah : ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಪಂದ್ಯಕ್ಕೂ ಜಸ್​ಪ್ರಿತ್​ ಬುಮ್ರಾ ಅಲಭ್ಯ?

ಅನರ್ಹಗೊಂಡ ನಂತರ ವಿನೇಶ್ ಫೋಗಟ್ ಕಣ್ಣೀರು ಹಾಕುತ್ತಿದ್ದರೂ ಧೈರ್ಯ ಕಳೆದುಕೊಂಡಿರಲಿಲ್ಲ ಎಂದು ಕೋಚ್ ಹೇಳಿದ್ದಾರೆ. ವಿನೇಶ್ ಫೋಗಟ್ ನಡೆಸಿದ ಮಾತುಕತೆಯನ್ನು ಕೋಚ್​ ಬರೆದುಕೊಂಡಿದ್ದಾರೆ. ಕೋಚ್, ದುಃಖಪಡಬೇಡಿ ಏಕೆಂದರೆ ನಾನು ಕಠಿಣ ಪರಿಸ್ಥಿತಿಯಲ್ಲಿ ಇದ್ದರೂ ಹೆಚ್ಚುವರಿ ಶಕ್ತಿ ತುಂಬಿಕೊಳ್ಳುತ್ತೇನೆ. ನಾನು ವಿಶ್ವದ ಅತ್ಯುತ್ತಮ ಮಹಿಳಾ ಕುಸ್ತಿಪಟುವನ್ನು (ಜಪಾನ್ನ ಯುಯಿ ಸುಸಾಕಿ) ಸೋಲಿಸಿದ್ದೇನೆ. ನಾನು ನನ್ನ ಗುರಿಯನ್ನು ಸಾಧಿಸಿದೆ. ನಾನು ವಿಶ್ವದ ಅತ್ಯುತ್ತಮರಲ್ಲಿ ಒಬ್ಬಳೆಂದು ಸಾಬೀತುಪಡಿಸಿದ್ದೇನೆ. ಆಟದ ಯೋಜನೆಗಳು ಕೆಲಸ ಮಾಡುತ್ತವೆ ಎಂದು ನಾವು ಸಾಬೀತುಪಡಿಸಿದ್ದೇವೆ. ಪದಕಗಳು, ವೇದಿಕೆಗಳು ಕೇವಲ ವಸ್ತುಗಳು. ಪ್ರದರ್ಶನವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ’ ಎಂದು ವಿನೇಶ್​ ಹೇಳಿದ್ದನ್ನು ಅಕೋಸ್ ಅಕ್ಷರ ರೂಪಕ್ಕೆ ಇಳಿಸಿದ್ದಾರೆ.

ಒಲಿಂಪಿಕ್ ಪದಕಕ್ಕೆ ವಿನೇಶ್ ಫೋಗಟ್ ಎಷ್ಟು ಬೆಲೆ ನೀಡುತ್ತಾರೆ ಎಂಬುದನ್ನು ಅವರು ಇದೇ ವೇಳೆ ಬರೆದುಕೊಂಡಿದ್ದಾರೆ. ಕಳೆದ ವರ್ಷ ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪೂನಿಯಾ ಮತ್ತು ಸಾಕ್ಷಿ ಮಲಿಕ್ ಅವರೊಂದಿಗೆ ಹರಿದ್ವಾರದಲ್ಲಿ ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಬಿಡಲು ಮುಂದಾಗಿದ್ದನ್ನು ಅವರು ಸ್ಮರಿಸಿಕೊಂಡಿದ್ದಾರೆ. ಒಲಿಂಪಿಕ್ ಪದಕಗಳನ್ನು ನದಿಗೆ ಎಸೆಯಬೇಡಿ ಎಂದು ಸಾಕ್ಷಿ ಮತ್ತು ಬಜರಂಗ್ ಗೆ ವಿನೇಶ್​ ತಿಳೀ ಹೇಳಿದ್ದನ್ನೂ ಅವರು ಬರೆದಿದ್ದಾರೆ.

ವಿನೇಶ್ ಫೋಗಟ್ ಅವರ ಅನರ್ಹತೆಯ ಹೊರತಾಗಿಯೂ, ಅವರ ಪಂದ್ಯಗಳ ಮೊದಲ ದಿನದಂದು ಅವರು ಏನು ಸಾಧಿಸಿದರು ಎಂಬುದನ್ನು ಜಗತ್ತು ನೆನಪಿಸಿಕೊಳ್ಳುತ್ತದೆ ಕೋಚ್ ಬರೆದಿದ್ದಾರೆ. ನಮ್ಮ ಕೆಲಸದಿಂದಾಗಿ ವಿಶ್ವದ ಅತ್ಯುತ್ತಮ ಮಹಿಳಾ ಕುಸ್ತಿಪಟುವನ್ನು ಸೋಲಿಸಲು ಮತ್ತು ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತೀಯ ಮಹಿಳಾ ಕುಸ್ತಿಪಟುವನ್ನು ಒಲಿಂಪಿಕ್ ಫೈನಲ್ಸ್​​ಗೆ ಕರೆದೊಯ್ಯಲು ಸಾಧ್ಯವಾಗಿದೆ ಎಂದು ಅಕೋಸ್ ಬರೆದುಕೊಂಡಿದ್ದಾರೆ.

Continue Reading
Advertisement
Doctors protest
ಕರ್ನಾಟಕ2 mins ago

Doctors Protest: ನಾಳಿನ ಪ್ರತಿಭಟನೆಗೆ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ; ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ ಬಂದ್

Medicine
ಆರೋಗ್ಯ8 mins ago

Red Line on Medicine Strip: ಔಷಧ ಪ್ಯಾಕೇಟ್‌ ಮೇಲೆ ಕೆಂಪು ಗೆರೆ ಏಕಿರುತ್ತದೆ ಅನ್ನೋದು ಗೊತ್ತಾ?

Vijay Surya drusti bottu serial will start
ಕಿರುತೆರೆ17 mins ago

Vijay Surya: `ದೃಷ್ಟಿಬೊಟ್ಟು’ ಧಾರಾವಾಹಿ ಮೂಲಕ ಖಡಕ್‌ ಎಂಟ್ರಿ ಕೊಟ್ಟ ವಿಜಯ್ ಸೂರ್ಯ!

Visa Free Countries
ಪ್ರವಾಸ20 mins ago

Visa Free Countries: ಪ್ರವಾಸಿ ತಾಣಗಳಿಗೆ ಹೆಸರಾದ ಈ 10 ದೇಶಗಳಿಗೆ ಹೋಗಲು ವೀಸಾ ಬೇಕಿಲ್ಲ!

Indian Economy
ಪ್ರಮುಖ ಸುದ್ದಿ58 mins ago

Indian Economy : 2027ರ ವೇಳೆಗೆ ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಐಎಂಎಫ್​ನ ಗೀತಾ ಗೋಪಿನಾಥ್

Kolkata Doctor Murder Case
Latest60 mins ago

Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

Shiva Rajkumar 131st film set on Varamahalakshmi festival
ಸ್ಯಾಂಡಲ್ ವುಡ್1 hour ago

Shiva Rajkumar: ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಸೆಟ್ಟೇರಿತು ಶಿವರಾಜ್ ಕುಮಾರ್ 131ನೇ ಸಿನಿಮಾ!

Vinesh Phogat
ಪ್ರಮುಖ ಸುದ್ದಿ1 hour ago

Vinesh Phogat : ವಿನೇಶ್​ ಫೈನಲ್ ತಲುಪಿದ್ದೇ ಹೆಮ್ಮೆಯ ವಿಷಯ; ಫೋಗಟ್ ಸಾಧನೆಯನ್ನು ಕೊಂಡಾಡಿದ ಮೋದಿ

Donald Trump
ಪ್ರಮುಖ ಸುದ್ದಿ2 hours ago

Donald Trump : ಡೊನಾಲ್ಡ್​ ಟ್ರಂಪ್​, ಎಲಾನ್​ ಮಸ್ಕ್​ ಮಸ್ತ್​ ಡಾನ್ಸ್​; ಇದು ಕೃತಕ ಬುದ್ದಿಮತ್ತೆಯ ಕರಾಮತ್ತು!

70th National Film Awards Mammootty rishab shetty competition
ಸಿನಿಮಾ2 hours ago

70th National Film Awards: 70ನೇ ರಾಷ್ಟ್ರೀಯ ಪ್ರಶಸ್ತಿ ಕ್ಷಣಗಣನೆ; ರಿಷಬ್‌ ಶೆಟ್ಟಿ ಮೇಲೆ ಸಿನಿಪ್ರಿಯರ ಕಣ್ಣು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌