Earthquake: ಉತ್ತರ ಪ್ರದೇಶದಲ್ಲಿ ಭೂಕಂಪ; ಊಟ ಬಿಟ್ಟು ಮನೆಯಿಂದ ಓಡಿದ ಜನ - Vistara News

ಪ್ರಮುಖ ಸುದ್ದಿ

Earthquake: ಉತ್ತರ ಪ್ರದೇಶದಲ್ಲಿ ಭೂಕಂಪ; ಊಟ ಬಿಟ್ಟು ಮನೆಯಿಂದ ಓಡಿದ ಜನ

ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ಗುರುವಾರ ಮಧ್ಯಾಹ್ನ ಭೂಕಂಪ ಸಂಭವಿಸಿದೆ. ಊಟದ ಸಮಯದಲ್ಲಿಯೇ ಭೂಮಿ ಕಂಪಿಸಿದ ಕಾರಣ ತುಂಬ ಜನ ಊಟ ಬಿಟ್ಟು ಮನೆಯಿಂದ ಹೊರಗೆ ಓಡಿಬಂದರು ಎಂದು ತಿಳಿದುಬಂದಿದೆ.

VISTARANEWS.COM


on

Earthquake
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯ (Sonbhadra District) ಹಲವೆಡೆ ಗುರುವಾರ (ಫೆಬ್ರವರಿ 8) ಮಧ್ಯಾಹ್ನ ಭೂಕಂಪ (Earthquake) ಸಂಭವಿಸಿದೆ. ಮಧ್ಯಾಹ್ನ 1.24ರ ಸುಮಾರಿಗೆ ಭೂಮಿ ಕಂಪಿಸಿದ್ದು, ಊಟದ ಸಮಯವಾದ ಕಾರಣ ಭೀತಿಗೊಳಗಾದ ಜನ ಊಟವನ್ನೇ ಬಿಟ್ಟು ಮನೆಯಿಂದ ಓಡಿಬಂದರು ಎಂದು ಮೂಲಗಳಿಂದ ತಿಳಿದುಬಂದಿದೆ. ರಿಕ್ಟರ್‌ ಮಾಪನದಲ್ಲಿ 3.2 ತೀವ್ರತೆಯ ಭೂಕಂಪ ದಾಖಲಾಗಿದೆ. ಸುಮಾರು 10 ಕಿಲೋಮೀಟರ್‌ ಆಳದಿಂದ ಭೂಮಿ ನಲುಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.

ಲಘು ಭೂಕಂಪ ಸಂಭವಿಸಿದ್ದರೂ ಮನೆಯಲ್ಲಿದ್ದ ಫ್ಯಾನ್‌ ಸೇರಿ ಹಲವು ವಸ್ತುಗಳು ಅಲುಗಾಡಿದ ಕಾರಣ ಜನರಲ್ಲಿ ಹೆಚ್ಚಿನ ಆತಂಕ ಮೂಡಿತ್ತು. ಆದಾಗ್ಯೂ, ಭೂಕಂಪದಿಂದ ಯಾವುದೇ ಕಟ್ಟಡಗಳಿಗೆ, ಮನುಷ್ಯರಿಗೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಮನೆಯಿಂದ ಹೊರಗೆ ಬಂದ ಜನ ಕೆಲ ಹೊತ್ತು ಹೊರಗಡೆಯೇ ಕಾಲ ಕಳೆದು, ನಂತರ ಆತಂಕದಲ್ಲಿಯೇ ಮನೆಯೊಳಗೆ ಹೋದರು ಎಂದು ಮೂಲಗಳು ತಿಳಿಸಿವೆ.

ಚೀನಾದಲ್ಲಿ ಕೆಲ ದಿನಗಳ ಹಿಂದಷ್ಟೇ ಸಂಭವಿಸಿದ್ದ ಭೂಕಂಪದಲ್ಲಿ 100ಕ್ಕೂ ಅಧಿಕ ಜನ ಮೃತಪಟ್ಟು, ಸಾವಿರಾರು ನಾಗರಿಕರು ಗಾಯಗೊಂಡಿದ್ದರು. ಜಪಾನ್‌ನಲ್ಲೂ ಹೊಸ ವರ್ಷದ ದಿನವೇ ಭೂಕಂಪ ಸಂಭವಿಸಿ 100ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಇದರ ಬೆನ್ನಲ್ಲೇ ಚೀನಾದಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿತ್ತು. ಅಫಘಾನಿಸ್ತಾನ, ಪಾಕಿಸ್ತಾನ, ಮ್ಯಾನ್ಮಾರ್‌ ಸೇರಿ ಹಲವೆಡೆ ಭೂಕಂಪ ಸಂಭವಿಸಿದರೆ, ದೆಹಲಿ ಹಾಗೂ ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪದ ಅನುಭವವಾಗುವುದು ಸಾಮಾನ್ಯವಾಗಿದೆ.

ಇದನ್ನೂ ಓದಿ: Ram Mandir: 2,500 ವರ್ಷಗಳಿಗೊಮ್ಮೆ ಸಂಭವಿಸುವ ಭೀಕರ ಭೂಕಂಪಕ್ಕೂ ರಾಮ ಮಂದಿರ ಜಗ್ಗಲ್ಲ!

ನೇಪಾಳದಲ್ಲೂ ಕಳೆದ ವರ್ಷ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 157 ಜನ ಮೃತಪಟ್ಟಿದ್ದು, 250ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಸಾವಿರಾರು ಕಟ್ಟಡಗಳು ಧರೆಗುರುಳಿದ್ದ ಕಾರಣ ಜನರ ರಕ್ಷಣೆಗೆ ಹರಸಾಹಸ ಮಾಡಬೇಕಾಗಿತ್ತು. ಮಹಿಳೆಯರು, ಮಕ್ಕಳು, ಹಿರಿಯರು ಭೂಕಂಪಕ್ಕೆ ಬಲಿಯಾಗಿದ್ದರು. ಅಷ್ಟಕ್ಕೂ, ನೇಪಾಳದಲ್ಲಿ ಕಳೆದ ಮೂರು ದಿನಗಳಲ್ಲಿ ಮೂರ್ನಾಲ್ಕು ಬಾರಿ ಭೂಮಿ ಕಂಪಿಸಿದ ಕಾರಣ ಜನರಲ್ಲಿ ಭಯ ಮನೆಮಾಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

Narendra Modi: ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಛಾಯೆ ಇದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ನ್ಯೂಸ್ 18 ನೆಟ್‌ವರ್ಕ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರವಾಗಿಯೂ ವಿಪಕ್ಷ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ. ಪ್ರಧಾನಿಯಾಗಿ ದಾಖಲೆಯ ಮೂರನೇ ಅವಧಿಯನ್ನು ಹೊಂದುವ ವಿಶ್ವಾಸ ವ್ಯಕ್ತಪಡಿಸಿದ ಮೋದಿ, ಭವಿಷ್ಯದ ಯೋಜನೆ ಬಗ್ಗೆ ತಮಗಿರುವ ದೃಷ್ಟಿಕೋನವನ್ನೂ ವಿವರಿಸಿದ್ದಾರೆ. ಇನ್ನೂ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿರುವುದಾಗಿ ತಿಳಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆ (Lok Sabha Election 2024)ಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ(Congress manifesto)ಯಲ್ಲಿ ಮುಸ್ಲಿಂ ಲೀಗ್‌ನ ಛಾಯೆ ಇದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ನ್ಯೂಸ್ 18 ನೆಟ್‌ವರ್ಕ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಪುನರುಚ್ಚರಿಸಿದ್ದಾರೆ. ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರವಾಗಿಯೂ ವಿಪಕ್ಷ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.

“ಮಾಧ್ಯಮಗಳು ಪ್ರತಿಯೊಂದು ರಾಜಕೀಯ ಪಕ್ಷದ ಪ್ರಣಾಳಿಕೆಗಳನ್ನು ಅಧ್ಯಯನ ನಡೆಸುತ್ತವೆ. ನಾನು ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಮಾಧ್ಯಮಗಳು ಪ್ರತಿಕ್ರಿಯಿಸುವುದನ್ನು ಕಾಯುತ್ತಿದ್ದೆ. ನಾನು ಮೊದಲ ದಿನವೇ ಪ್ರಣಾಳಿಕೆಯ ಬಗ್ಗೆ ಮಾತನಾಡಿದ್ದೆ. ಪ್ರಣಾಳಿಕೆಯನ್ನು ಗಮನಿಸಿದ ಕೂಡಲೇ ಅದರಲ್ಲಿ ಮುಸ್ಲಿಂ ಲೀಗ್‌ನ ಮುದ್ರೆ ಇದೆ ಎಂದು ನಾನು ಕಂಡುಕೊಂಡಿದ್ದೆ. ಮಾಧ್ಯಮಗಳು ಈ ವಿಚಾರ ತಿಳಿದು ಆಘಾತಕ್ಕೊಳಗಾಗಬಹುದು ಎಂದು ಭಾವಿಸಿದ್ದೆʼʼ ಎಂದು ಮೋದಿ ಹೇಳಿದ್ದಾರೆ.

“ಇದು ವ್ಯವಸ್ಥೆಯ ದೊಡ್ಡ ಹಗರಣವೆಂದು ನನಗೆ ತಿಳಿಯಿತು. ಪ್ರಣಾಳಿಕೆಯಲ್ಲಿನ ದುಷ್ಕೃತ್ಯಗಳನ್ನು ಯಾರಾದರೂ ಹೊರತರುತ್ತಾರೆ ಎಂದು ನಾನು 10 ದಿನಗಳವರೆಗೆ ಕಾಯುತ್ತಿದ್ದೆ. ಯಾಕೆಂದರೆ ಅದನ್ನು ನಿಷ್ಪಕ್ಷಪಾತವಾಗಿ ಹೊರತಂದರೆ ಉತ್ತಮ. ಅಂತಿಮವಾಗಿ ಈ ಸತ್ಯಗಳನ್ನು ನಾನೇ ಹೊರತರಬೇಕೆಂದು ನಿರ್ಧರಿಸಿದೆʼʼ ಎಂದು ಅವರು ವಿವರಿಸಿದ್ದಾರೆ.

ಸಂಪತ್ತು ಮರುಹಂಚಿಕೆ

ಮುಸ್ಲಿಮರಿಗೆ ಸಂಪತ್ತನ್ನು ಮರುಹಂಚಿಕೆ ಮಾಡಲು ಕಾಂಗ್ರೆಸ್ ಬಯಸಿದೆ ಎನ್ನುವ ವಿಚಾರ ಅಷ್ಟೊಂದು ಅಪಾಯಕಾರಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ, ತಮ್ಮ ಚುನಾವಣಾ ಪ್ರಚಾರವನ್ನು ಸೂಕ್ಷ್ಮವಾಗಿ ಗಮನಿಸುವಂತೆ ಕರೆ ನೀಡಿದರು. “ನನ್ನ ಇಡೀ ಚುನಾವಣಾ ಪ್ರಚಾರವು ಎರಡು ವಿಷಯಗಳ ಮೇಲೆ ಕೇಂದ್ರೀಕೃತವಾಗಿದೆ ಎನ್ನುವುದನ್ನು ನೀವು ಗಮನಿಸಿರಬಹುದು. ನಾವು ಸಮಾಜದ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದೇವೆ. ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ನಮ್ಮ ಸರ್ಕಾರ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ ತಲುಪಿಸಿದೆ. ನೋಡಿ, ಕೆಟ್ಟದ್ದನ್ನು ಮಾಡಲು ಯಾವುದೇ ಸರ್ಕಾರವನ್ನು ರಚಿಸುವುದಿಲ್ಲ. ಸರ್ಕಾರ ಜನರಿಗೆ ಒಳ್ಳೆಯದನ್ನು ಮಾಡಲು ಬಯಸುತ್ತದೆ. ಕೆಲವು ಜನರಿಗೆ ಇತರರಿಗೆ ಒಳ್ಳೆಯದನ್ನು ಹೇಗೆ ಮಾಡಬೇಕೆಂದು ತಿಳಿದಿದೆ. ಕೆಲವರು ನಮಗೂ ಒಳಿತಾಗಲಿ ಎಂದು ಕಾಯುತ್ತಾರೆ. ಕಷ್ಟಪಟ್ಟು ಕೆಲಸ ಮಾಡುವುದರಿಂದ ಒಳ್ಳೆಯದಾಗುತ್ತದೆ ಎನ್ನುವುದನ್ನು ನಾನು ನಂಬುತ್ತೇನೆʼʼ ಎಂದು ಮೋದಿ ತಿಳಿಸಿದ್ದಾರೆ.

ಬಡವರಿಗಾಗಿ 4 ಕೋಟಿ ಮನೆ

ತಮ್ಮ ಸರ್ಕಾರ ಜನರಿಗಾಗಿ ಕೈಗೊಂಡ ಉಪಕ್ರಮಗಳನ್ನು ವಿವರಿಸಿದ ಪಿಎಂ ಮೋದಿ, “ನಾವು ಬಡವರಿಗಾಗಿ 4 ಕೋಟಿ ಮನೆಗಳನ್ನು ನಿರ್ಮಿಸಿದ್ದೇವೆ. ನೀವು ಚುನಾವಣಾ ಪ್ರಚಾರಕ್ಕೆ ಹೋದಾಗ ಇನ್ನೂ ವಸತಿ ರಹಿತರಾಗಿರುವ ಜನರ ಪಟ್ಟಿಯನ್ನು ಸಿದ್ಧಪಡಿಸಿ ನನಗೆ ನೀಡಿ ಎಂದು ನಾನು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದೇನೆ. ನನ್ನ ಮೂರನೇ ಅವಧಿ ಪ್ರಾರಂಭವಾದ ಕೂಡಲೇ ಆದ್ಯತೆ ಮೇರೆಗೆ ನಾನು ಈ ಕೆಲಸ ಮುಂದುವರಿಸುತ್ತೇನೆʼʼ ಎಂದು ಅವರು ಭರವಸೆ ನೀಡಿದ್ದಾರೆ.

ಪ್ರಧಾನಿಯಾಗಿ ದಾಖಲೆಯ ಮೂರನೇ ಅವಧಿಯನ್ನು ಹೊಂದುವ ವಿಶ್ವಾಸ ವ್ಯಕ್ತಪಡಿಸಿದ ಮೋದಿ, ಭವಿಷ್ಯದ ಯೋಜನೆ ಬಗ್ಗೆ ತಮಗಿರುವ ದೃಷ್ಟಿಕೋನವನ್ನೂ ವಿವರಿಸಿದ್ದಾರೆ. ʼʼನಾನು ಇನ್ನೂ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದೇನೆ. ಈಗ ಆಯುಷ್ಮಾನ್ ಭಾರತ್ ವಿಶ್ವದ ಅತಿದೊಡ್ಡ ಆರೋಗ್ಯ ವಿಮಾ ಯೋಜನೆ ಎನಿಸಿಕೊಂಡಿದೆ. ಇದು ಜನರಿಗೆ ಆರೋಗ್ಯದ ಭರವಸೆ ನೀಡುತ್ತದೆ. ಸುಮಾರು 55 ಕೋಟಿ ಮಂದಿಗೆ ಇದು ನೆರವಾಗುತ್ತದೆ. ಮೋದಿ ಸರ್ಕಾರ ನಿಮ್ಮೊಂದಿಗಿದೆ ಎಂಬ ಭರವಸೆ ಇದು. ಯಾವುದೇ ವರ್ಗ, ಸಮಾಜ, ಹಿನ್ನೆಲೆಗೆ ಸೇರಿದ 70 ವರ್ಷಕ್ಕಿಂತ ಮೇಲಿನ ಪುರುಷ ಅಥವಾ ಮಹಿಳೆಗೆ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಘೋಷಿಸಿದ್ದೇವೆ. ಜತೆಗೆ ನಾವು ಈ ಪ್ರಯೋಜನವನ್ನು ಆಶಾ ಕಾರ್ಯಕರ್ತೆಯರಿಗೆ ನೀಡುತ್ತೇವೆ ಎಂದು ಹೇಳಿದ್ದೇವೆ. ತೃತೀಯ ಲಿಂಗಿಗಳಿಗೆ ಅವರ ವಯಸ್ಸು ಯಾವುದೇ ಇರಲಿ ನಾವು ನೆರವು ನೀಡಲು ಬದ್ಧʼʼ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: BJP Manifesto: ಬಿಜೆಪಿ ಪ್ರಣಾಳಿಕೆ; ರೈತನಿಗೆ ಮೊದಲ ಪ್ರತಿ ನೀಡಿದ ಮೋದಿ, 14 ಗ್ಯಾರಂಟಿ ಘೋಷಣೆ

ಬ್ಯಾಂಕಿಂಗ್‌ ವ್ಯವಸ್ಥೆ

“ನಮ್ಮ ದೇಶದಲ್ಲಿ ಬ್ಯಾಂಕುಗಳ ಸ್ಥಿತಿ ಕಳಪೆಯಾಗಿತ್ತು. ದೇಶದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರು ಹಣ ನೀಡಿದ್ದರೂ ಬ್ಯಾಂಕುಗಳಲ್ಲಿ ಅವರ ಹೆಸರಿನಲ್ಲಿ ಖಾತೆ ತೆರೆದಿರಲಿಲ್ಲ. ನಮ್ಮ ಸರ್ಕಾರ ಬಂದ ಬಳಿಕ 52 ಕೋಟಿ ಬ್ಯಾಂಕ್ ಖಾತೆಗಳನ್ನು ತೆರೆಯಲಾಯಿತು. ಅನೇಕರು ಅದರ ಲಾಭವನ್ನು ಪಡೆದುಕೊಂಡರು. ಹಲವರಿಗೆ ಜನ್ ಧನ್ ಖಾತೆ ಮತ್ತು ನೇರ ಲಾಭ ವರ್ಗಾವಣೆಯ ಮೂಲಕ ಪ್ರಯೋಜನ ಲಭಿಸಿತು. 36 ಲಕ್ಷ ಕೋಟಿ ರೂ.ಗಳಷ್ಟು ಮೊತ್ತವು ಜನರ ಖಾತೆಗಳಿಗೆ ನೇರ ವರ್ಗಾವಣೆಯಾಗಿದೆʼʼ ಎಂದು ತಿಳಿಸಿದ್ದಾರೆ.

ತಮ್ಮ ಸರ್ಕಾರದ ಕಾರ್ಯಕ್ಷಮತೆಯನ್ನು 2014ರ ಹಿಂದಿನ ಪರಿಸ್ಥಿತಿಗೆ ಹೋಲಿಸಿದ ಪ್ರಧಾನಿ ಮೋದಿ, “ನೋಡಿ 2014 ಕ್ಕಿಂತ ಮೊದಲು ದೇಶದ ಪರಿಸ್ಥಿತಿ ಹೇಗಿತ್ತು? ಆರ್ಥಿಕತೆ ದುರ್ಬಲವಾಗಿತ್ತು. ಇಂದು ನಾವು ಅದನ್ನು ಬದಲಾಯಿಸಿದ್ದೇವೆ. ಐಎಂಎಫ್‌ನಲ್ಲಿ ಈಗ ಚೀನಾ ಮತ್ತು ಭಾರತ ಸೇರಿದಂತೆ ವಿಶ್ವದ 150 ದೇಶಗಳ ಗುಂಪು ಇದೆ. ಇದನ್ನು ನಾವು ಅಭಿವೃದ್ಧಿಶೀಲ ದೇಶಗಳು ಅಥವಾ ಉದಯೋನ್ಮುಖ ಆರ್ಥಿಕತೆ ಹೊಂದಿರುವ ದೇಶಗಳು ಎಂದು ಕರೆಯಬಹುದುʼʼ ಎಂದು ಪ್ರಧಾನಿ ವಿವರಿಸಿದ್ದಾರೆ.

ಇದನ್ನೂ ಓದಿ: Wealth Redistribution: ಸಂಪತ್ತು ಮರು ಹಂಚಿಕೆ ವಿವಾದದ ಬೆಂಕಿಗೆ ತುಪ್ಪ ಸುರಿದ ಸ್ಯಾಮ್ ಪಿತ್ರೊಡಾ; ಕಾಂಗ್ರೆಸ್‌ಗೆ ಫಜೀತಿ!

ಪಿತ್ರಾರ್ಜಿತ ಆಸ್ತಿ ತೆರಿಗೆ

ಸಾಗರೋತ್ತರ ಕಾಂಗ್ರೆಸ್​ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ಪಿತ್ರಾರ್ಜಿತ ಆಸ್ತಿ ತೆರಿಗೆ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ಮೋದಿ ಪ್ರತಿಕ್ರಿಯಿಸಿ, “ಅಮೆರಿಕದಲ್ಲಿ ಸಂದರ್ಶನ ನೀಡಿದ ಅವರು ಪಿತ್ರಾರ್ಜಿತ ತೆರಿಗೆ ಬಗ್ಗೆ ಪ್ರಸ್ತಾವಿಸಿದರು. ನಿಮ್ಮ ಆಸ್ತಿಯ ಮೇಲೆ ಸುಮಾರು 55% ತೆರಿಗೆ ವಿಧಿಸುವ ಬಗ್ಗೆ ಹೇಳಿದರು. ಈಗ ನಾನು ಅಭಿವೃದ್ಧಿ ಮತ್ತು ಉತ್ತರಾಧಿಕಾರದ ಬಗ್ಗೆ ಮಾತನಾಡುತ್ತಿದ್ದೇನೆ ಮತ್ತು ಅವರು ಆ ಪಿತ್ರಾರ್ಜಿತ ಆಸ್ತಿಯನ್ನು ಲೂಟಿ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ಎಚ್ಚರಿಸುವುದು ನನ್ನ ಜವಾಬ್ದಾರಿ. ಈಗ ಈ ಬಗ್ಗೆ ನಿರ್ಧರಿಸಬೇಕಾದವರು ನೀವುʼʼ ಎಂದು ಮೋದಿ ಹೇಳಿದ್ದಾರೆ.

Continue Reading

ಕರ್ನಾಟಕ

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

CET 2024: ತಜ್ಞರ ವರದಿ ಆಧರಿಸಿ ಮರು ಪರೀಕ್ಷೆ ನಡೆಸದೇ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈ ಬಿಡಲು ಉನ್ನತ ಶಿಕ್ಷಣ ‌ಇಲಾಖೆ ನಿರ್ಧಾರ ಮಾಡಿದೆ. ಮೇ ಕೊನೇ ವಾರದಲ್ಲಿ ಸಿಇಟಿ 2024 ಫಲಿತಾಂಶ ಬಿಡುಗಡೆಯಾಗಲಿದೆ.

VISTARANEWS.COM


on

cet exam karnataka exam authority
Koo

ಬೆಂಗಳೂರು: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೇಳಿದ್ದ ಹಿನ್ನೆಲೆಯಲ್ಲಿ ಮರು ಪರೀಕ್ಷೆ (CET 2024) ನಡೆಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು, ಆದರೆ, ಇದೀಗ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು (Out Of Syllabus Questions) ಕೈ ಬಿಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದ್ದು, ಮರು ಪರೀಕ್ಷೆ ನಡೆಸದೇ ಫಲಿತಾಂಶ ಬಿಡುಗಡೆ ಮಾಡಲು ತೀರ್ಮಾನಿಸಿದೆ.

ತಜ್ಞರ ವರದಿ ಆಧರಿಸಿ ಮರು ಪರೀಕ್ಷೆ ನಡೆಸದೇ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈ ಬಿಡಲು ಉನ್ನತ ಶಿಕ್ಷಣ ‌ಇಲಾಖೆ ನಿರ್ಧಾರ ಮಾಡಿದೆ. ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ಔಟ್ ಆಫ್‌ ಸಿಲಬಸ್ ಪ್ರಶ್ನೆ ಕೈ ಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ತಜ್ಞರ ಸಮಿತಿ ಶಿಫಾರಸಿಗೆ ಒಪ್ಪಿಗೆ ನೀಡಿದ ಉನ್ನತ ಶಿಕ್ಷಣ ಇಲಾಖೆ, ಔಟ್ ಆಫ್ ಸಿಲಬಸ್ ಪ್ರಶ್ನೆ ಬಿಟ್ಟು ಉಳಿದ ಪ್ರಶ್ನೆಗಳನ್ನು ಫಲಿತಾಂಶಕ್ಕೆ ಪರಿಗಣಿಸಲು ನಿರ್ಧಾರ ಮಾಡಿದೆ.

ಇದನ್ನೂ ಓದಿ | PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

ತಪ್ಪಾದ 2 ಪ್ರಶ್ನೆಗಳಿಗೆ ಮಾತ್ರ ಗ್ರೇಸ್ ಅಂಕ ನೀಡಲು ‌ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ತಪ್ಪಾದ 2 ಪ್ರಶ್ನೆಗೆ ಗ್ರೇಸ್ ಅಂಕಗಳನ್ನು ಕೆಇಎ ನೀಡಲಿದೆ. ಉಳಿದಂತೆ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಟ್ಟು ಉಳಿದ ಪ್ರಶ್ನೆಗಳ‌ನ್ನು ಅಂಕಗಳಾಗಿ ಪರಿಗಣಿಸಲಾಗುತ್ತದೆ. ಇನ್ನು ಮೇ ಕೊನೇ ವಾರದಲ್ಲಿ ಸಿಇಟಿ ಫಲಿತಾಂಶವನ್ನು ಕೆಇಎ ಪ್ರಕಟ ಮಾಡಲಿದೆ.

ಸಿಇಟಿ ಪರೀಕ್ಷೆಯಲ್ಲಿ (CET 2024) ಪಠ್ಯಕ್ರಮದ ಹೊರತಾದ ಪ್ರಶ್ನೆಗಳಿಂದ (Out of syllabus questions) ವಿದ್ಯಾರ್ಥಿಗಳಲ್ಲಿ ಆತಂಕ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲು ರಾಜ್ಯ ಸರ್ಕಾರದಿಂದ ಇತ್ತೀಚೆಗೆ ತಜ್ಞರ ಸಮಿತಿ ರಚನೆ ಮಾಡಲಾಗಿತ್ತು. ಪ್ರತಿ 4 ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ತಜ್ಞರ ಸಮಿತಿ ರಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು.

ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ‘ಕೆಇಎ’ ಯು ಕಾರ್ಯನಿರ್ವಹಿಸಲಿದೆ. ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀಕರ್‌ ಎಂ.ಎಸ್‌ ತಿಳಿಸಿದ್ದರು.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಏ.18 ಮತ್ತು 19ರಂದು ನಡೆಸಲಾಗಿತ್ತು. 4 ವಿಷಯಗಳಿಗೆ (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ) ನಡೆದಿದ್ದ ಸಿಇಟಿ ಪರೀಕ್ಷೆಗೆ ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ನಡೆದ ನಂತರ, ಪತ್ರಿಕೆಗಳಲ್ಲಿ ಹಲವು ಪ್ರಶ್ನೆಗಳು ಸಿಇಟಿಯ ಪಠ್ಯಕ್ರಮದ ಹೊರತಾಗಿವೆ ಎಂದು ವಿದ್ಯಾರ್ತಿಗಳು ಆರೋಪಿಸಿದ್ದರು. ಆದ್ದರಿಂದ, ಗ್ರೇಸ್ ಅಂಕಗಳನ್ನು ಒದಗಿಸುವಂತೆ ಅಥವಾ ಪರೀಕ್ಷೆಯನ್ನು ಮರು ನಡೆಸುವಂತೆ ಒತ್ತಾಯ ಕೇಳಿಬಂದಿತ್ತು. ಆದರೆ ಇದೀಗ ಮರು ಪರೀಕ್ಷೆ ನಡೆಸದಿರಲ್ಲಿ ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

Continue Reading

ಕರ್ನಾಟಕ

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

PM Narendra Modi: ನರೇಂದ್ರ ಮೋದಿ ಅವರು ಸೋಮವಾರ ಬಾಗಲಕೋಟೆಯಲ್ಲಿ ಅಬ್ಬರದ ಪ್ರಚಾರ ಮಾಡಲಿದ್ದಾರೆ. ಬಾಗಲಕೋಟೆಯ ನವನಗರದಲ್ಲಿ 100 ಎಕರೆ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ. ಹಾಗೆಯೇ, ಭದ್ರತಾ ವ್ಯವಸ್ಥೆಯನ್ನೂ ಕೈಗೊಳ್ಳಲಾಗಿದೆ.

VISTARANEWS.COM


on

PM Narendra Modi
Koo

ಬಾಗಲಕೋಟೆ: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಭಾನುವಾರ (ಏಪ್ರಿಲ್‌ 28) ಕರ್ನಾಟಕದ (Karnataka) ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಲ್ಲೆಗಳಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸೋಮವಾರವೂ (ಏಪ್ರಿಲ್‌ 29) ಬಾಗಲಕೋಟೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಮೋದಿ ಸಮಾವೇಶದ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದಲ್ಲಿ 100 ಎಕರೆ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ.

ಸೋಮವಾರ ಮಧ್ಯಾಹ್ನ 12 ಗಂಟೆಗೆ ನರೇಂದ್ರ ಮೋದಿ ಅವರು ಬಾಗಲಕೋಟೆಗೆ ಆಗಮಿಸಲಿದ್ದಾರೆ. ಮೋದಿ ಭಾಷಣಕ್ಕಾಗಿ 90/100 ಅಡಿ ಮುಖ್ಯ ವೇದಿಕೆ ಪೆಂಡಾಲು ಹಾಕಲಾಗಿದೆ. 60/40 ಅಡಿಯ ಮುಖ್ಯ ವೇದಿಕೆಯಲ್ಲಿ, 32 ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಬಿಸಿಲು ಹೆಚ್ಚಾದ ಕಾರಣ ವೇದಿಕೆ ಹವಾನಿಯಂತ್ರಿತವಾಗಿ ಇರಲಿದೆ. ಇನ್ನು ಸಾರ್ವಜನಿಕರಿಗೆ 400 ಅಡಿ ಅಗಲ, 600 ಅಡಿ ಉದ್ದದ ಬೃಹತ್ ಪೆಂಡಾಲ್ ವೇದಿಕೆ ನಿರ್ಮಿಸಲಾಗಿದೆ. ಜರ್ಮನ್ ಮಾದರಿಯಲ್ಲಿ ವೇದಿಕೆ ನಿರ್ಮಿಸಲಾಗಿದೆ.

ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್‌ ಹಾಗೂ ವಿಜಯಪುರ ಅಭ್ಯರ್ಥಿ ರಮೇಶ್‌ ಜಿಗಜಿಣಗಿ ಪರವಾಗಿ ಪ್ರಧಾನಿ ಮತಯಾಚನೆ ಮಾಡಲಿದ್ದಾರೆ. ಒಟ್ಟು 70ರ ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಭದ್ರತೆಗೆ 1,100ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಮೂವರು ಎಸ್‌ಪಿ, ನಾಲ್ವರು ಎಎಸ್‌ಪಿ, 12 ಡಿಎಸ್‌ಪಿ, 32 ಸಿಪಿಐ, 88 ಪಿಎಸ್‌ಐ, 1,049 ಪೊಲೀಸ್‌ ಪೇದೆಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ವೇದಿಕೆ ಬಲಭಾಗ ಮೂರು ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದೆ.

ಮೋದಿ ಅವರ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎರಡೂ ಕ್ಷೇತ್ರಗಳ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಸೇರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಭಾನುವಾರ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ಮಾಡಿದ ನರೇಂದ್ರ ಮೋದಿ ಅವರು ಹೊಸಪೇಟೆಯಲ್ಲಿಯೇ ಉಳಿದುಕೊಂಡಿದ್ದಾರೆ. ಪ್ರಚಾರದುದ್ದಕ್ಕೂ ಕೇಂದ್ರ ಸರ್ಕಾರದ ಸಾಧನೆ ಜತೆಗೆ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

Continue Reading

ಕರ್ನಾಟಕ

PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

PUC Exam 2024: ಪಿಯುಸಿ ಎರಡನೇ ವಾರ್ಷಿಕ ಪರೀಕ್ಷೆಯನ್ನು ಬರೆಯಲು ರಾಜ್ಯಾದ್ಯಂತ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 84,933 ವಿದ್ಯಾರ್ಥಿಗಳು ಹಾಗೂ 64,367 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು, 32,848 ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಮಂಡಳಿಯು ಸಕಲ ಸಿದ್ಧತೆ ಮಾಡಿಕೊಂಡಿದೆ.

VISTARANEWS.COM


on

PUC Exam 2024
Koo

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು (KSEAB) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 (PUC Exam 2024) ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು, ಅವಶ್ಯಕತೆ ಇರುವ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಇನ್ನು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್‌ ಸಂಚಾರ ಸೇವೆಯು ಉಚಿತವಾಗಿ ಸಿಗಲಿದೆ.

ರಾಜ್ಯಾದ್ಯಂತ 301 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಂಡಳಿಯು ನಾಳೆಯಿಂದ ಪ್ರಾರಂಭವಾಗಿ ಮೇ 16ರವರೆಗೂ ಈ ಪರೀಕ್ಷೆ ನಡೆಸಲಿದೆ. ದ್ವಿತೀಯ ಪಿಯುಸಿ ಮೊದಲ ವಾರ್ಷಿಕ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಎರಡನೇ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಅನುತ್ತೀರ್ಣರಾದ ಕೆಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

SSLC exam

1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಎರಡನೇ ವಾರ್ಷಿಕ ಪರೀಕ್ಷೆಯನ್ನು ಬರೆಯಲು ರಾಜ್ಯಾದ್ಯಂತ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 84,933 ವಿದ್ಯಾರ್ಥಿಗಳು ಹಾಗೂ 64,367 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು, 32,848 ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಮಂಡಳಿಯು ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.

ಮೇ 9 ರಂದು ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ, ಮೇ 11 ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಮೇ 13 ರಂದು ಅರ್ಥಶಾಸ್ತ್ರ, ಮೇ 14 ರಂದು ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಮೇ 15 ರಂದು ಹಿಂದಿ ಪರೀಕ್ಷೆಗಳು ನಡೆಯಲಿವೆ. ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌ ಭಾಷಾ ಪರೀಕ್ಷೆಗಳು ಮೇ 16 ರಂದು ಬೆಳಗಿನ ಅವಧಿಯಲ್ಲಿ ನಡೆಯಲಿವೆ.

ಇತರೆ ಕಲಾ ಮತ್ತು ಕೌಶಲ ವಿಭಾಗಕ್ಕೆ ಸಂಬಂಧಪಟ್ಟ ವಿಷಯಗಳಾದ ಹಿಂದುಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೋಮೊಬೈಲ್‌, ಬ್ಯೂಟಿ ಅಂಡ್‌ ವೆಲ್‌ನೆಸ್‌ ಪರೀಕ್ಷೆಗಳು ಮಧ್ಯಾಹ್ನ 2.15 ರಿಂದ ಸಂಜೆ 4.30 ರವರೆಗೆ ನಡೆಯಲಿವೆ. ಆದರೆ, ದ್ವಿತೀಯ ಪಿಯುಸಿ ಪರೀಕ್ಷೆ 2 ನಡೆಯುತ್ತಿರುವುದರಿಂದ ಸಿಇಟಿ ಬರೆಯುವ ಮಕ್ಕಳಿಗೆ ತೊಂದರೆಯಾಗುತ್ತಿದೆ. ಇದರಿಂದ ಮಕ್ಕಳು ಗೊಂದಲಕ್ಕೀಡಾಗಿದ್ದಾರೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೆಕ್ಷನ್‌ 144 ಜಾರಿ

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷೆಯು ದ್ವಿತೀಯ ಪಿಯುಸಿ ಪರೀಕ್ಷೆ ನಡೆದ ಮಾದರಿಯಲ್ಲೇ ನಡೆಯಲಿದೆ. ಆದರೆ ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಮೆರಾ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

Continue Reading
Advertisement
Narendra Modi
Lok Sabha Election 20243 mins ago

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

cet exam karnataka exam authority
ಕರ್ನಾಟಕ31 mins ago

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

PM Narendra Modi
ಕರ್ನಾಟಕ38 mins ago

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Paris Olympics
ಕ್ರೀಡೆ47 mins ago

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Arecanut cultivation
ಚಿತ್ರದುರ್ಗ1 hour ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

IPL 2024
ಕ್ರೀಡೆ2 hours ago

IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

PUC Exam 2024
ಕರ್ನಾಟಕ2 hours ago

PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

Money Guide
ಮನಿ-ಗೈಡ್2 hours ago

Money Guide: ಫೊರೆಕ್ಸ್‌ ಕಾರ್ಡ್‌ V/S ಕ್ರೆಡಿಟ್‌ ಕಾರ್ಡ್‌: ವಿದೇಶ ಪ್ರವಾಸಕ್ಕೆ ಯಾವುದು ಸೂಕ್ತ?

lehar singh siroya
ದಾವಣಗೆರೆ2 hours ago

Lehar Singh Siroya: ಹರಿಹರದ ಪಂಚಮಸಾಲಿ ಜಗದ್ಗುರು ಪೀಠಕ್ಕೆ ರಾಜ್ಯಸಭಾ ಸದಸ್ಯ ಲೆಹರ್​ಸಿಂಗ್ ಭೇಟಿ

Car Accident
ಬೆಂಗಳೂರು2 hours ago

Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20247 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20249 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202411 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202411 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ14 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌