Site icon Vistara News

Earthquake: ಉತ್ತರ ಪ್ರದೇಶದಲ್ಲಿ ಭೂಕಂಪ; ಊಟ ಬಿಟ್ಟು ಮನೆಯಿಂದ ಓಡಿದ ಜನ

Earthquake

Back-to-back earthquakes strike Maharashtra's Hingoli district within 10 minutes

ಲಖನೌ: ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯ (Sonbhadra District) ಹಲವೆಡೆ ಗುರುವಾರ (ಫೆಬ್ರವರಿ 8) ಮಧ್ಯಾಹ್ನ ಭೂಕಂಪ (Earthquake) ಸಂಭವಿಸಿದೆ. ಮಧ್ಯಾಹ್ನ 1.24ರ ಸುಮಾರಿಗೆ ಭೂಮಿ ಕಂಪಿಸಿದ್ದು, ಊಟದ ಸಮಯವಾದ ಕಾರಣ ಭೀತಿಗೊಳಗಾದ ಜನ ಊಟವನ್ನೇ ಬಿಟ್ಟು ಮನೆಯಿಂದ ಓಡಿಬಂದರು ಎಂದು ಮೂಲಗಳಿಂದ ತಿಳಿದುಬಂದಿದೆ. ರಿಕ್ಟರ್‌ ಮಾಪನದಲ್ಲಿ 3.2 ತೀವ್ರತೆಯ ಭೂಕಂಪ ದಾಖಲಾಗಿದೆ. ಸುಮಾರು 10 ಕಿಲೋಮೀಟರ್‌ ಆಳದಿಂದ ಭೂಮಿ ನಲುಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.

ಲಘು ಭೂಕಂಪ ಸಂಭವಿಸಿದ್ದರೂ ಮನೆಯಲ್ಲಿದ್ದ ಫ್ಯಾನ್‌ ಸೇರಿ ಹಲವು ವಸ್ತುಗಳು ಅಲುಗಾಡಿದ ಕಾರಣ ಜನರಲ್ಲಿ ಹೆಚ್ಚಿನ ಆತಂಕ ಮೂಡಿತ್ತು. ಆದಾಗ್ಯೂ, ಭೂಕಂಪದಿಂದ ಯಾವುದೇ ಕಟ್ಟಡಗಳಿಗೆ, ಮನುಷ್ಯರಿಗೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಮನೆಯಿಂದ ಹೊರಗೆ ಬಂದ ಜನ ಕೆಲ ಹೊತ್ತು ಹೊರಗಡೆಯೇ ಕಾಲ ಕಳೆದು, ನಂತರ ಆತಂಕದಲ್ಲಿಯೇ ಮನೆಯೊಳಗೆ ಹೋದರು ಎಂದು ಮೂಲಗಳು ತಿಳಿಸಿವೆ.

ಚೀನಾದಲ್ಲಿ ಕೆಲ ದಿನಗಳ ಹಿಂದಷ್ಟೇ ಸಂಭವಿಸಿದ್ದ ಭೂಕಂಪದಲ್ಲಿ 100ಕ್ಕೂ ಅಧಿಕ ಜನ ಮೃತಪಟ್ಟು, ಸಾವಿರಾರು ನಾಗರಿಕರು ಗಾಯಗೊಂಡಿದ್ದರು. ಜಪಾನ್‌ನಲ್ಲೂ ಹೊಸ ವರ್ಷದ ದಿನವೇ ಭೂಕಂಪ ಸಂಭವಿಸಿ 100ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಇದರ ಬೆನ್ನಲ್ಲೇ ಚೀನಾದಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿತ್ತು. ಅಫಘಾನಿಸ್ತಾನ, ಪಾಕಿಸ್ತಾನ, ಮ್ಯಾನ್ಮಾರ್‌ ಸೇರಿ ಹಲವೆಡೆ ಭೂಕಂಪ ಸಂಭವಿಸಿದರೆ, ದೆಹಲಿ ಹಾಗೂ ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪದ ಅನುಭವವಾಗುವುದು ಸಾಮಾನ್ಯವಾಗಿದೆ.

ಇದನ್ನೂ ಓದಿ: Ram Mandir: 2,500 ವರ್ಷಗಳಿಗೊಮ್ಮೆ ಸಂಭವಿಸುವ ಭೀಕರ ಭೂಕಂಪಕ್ಕೂ ರಾಮ ಮಂದಿರ ಜಗ್ಗಲ್ಲ!

ನೇಪಾಳದಲ್ಲೂ ಕಳೆದ ವರ್ಷ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 157 ಜನ ಮೃತಪಟ್ಟಿದ್ದು, 250ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಸಾವಿರಾರು ಕಟ್ಟಡಗಳು ಧರೆಗುರುಳಿದ್ದ ಕಾರಣ ಜನರ ರಕ್ಷಣೆಗೆ ಹರಸಾಹಸ ಮಾಡಬೇಕಾಗಿತ್ತು. ಮಹಿಳೆಯರು, ಮಕ್ಕಳು, ಹಿರಿಯರು ಭೂಕಂಪಕ್ಕೆ ಬಲಿಯಾಗಿದ್ದರು. ಅಷ್ಟಕ್ಕೂ, ನೇಪಾಳದಲ್ಲಿ ಕಳೆದ ಮೂರು ದಿನಗಳಲ್ಲಿ ಮೂರ್ನಾಲ್ಕು ಬಾರಿ ಭೂಮಿ ಕಂಪಿಸಿದ ಕಾರಣ ಜನರಲ್ಲಿ ಭಯ ಮನೆಮಾಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version