IND vs ENG : ಭಾರತದ ವಿರುದ್ಧ ಹೂಡಲಿರುವ ತಂತ್ರಗಳನ್ನು ವಿವರಿಸಿದ ಇಂಗ್ಲೆಂಡ್ ಕೋಚ್​ ಮ್ಯಾಥ್ಯೂ ಮಾಟ್​ - Vistara News

ಪ್ರಮುಖ ಸುದ್ದಿ

IND vs ENG : ಭಾರತದ ವಿರುದ್ಧ ಹೂಡಲಿರುವ ತಂತ್ರಗಳನ್ನು ವಿವರಿಸಿದ ಇಂಗ್ಲೆಂಡ್ ಕೋಚ್​ ಮ್ಯಾಥ್ಯೂ ಮಾಟ್​

IND vs ENG :ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮ್ಯಾಥ್ಯೂ , 2024 ರ ಟಿ 20 ವಿಶ್ವಕಪ್ನಲ್ಲಿ ಭಾರತ ತಂಡವು ಎಷ್ಟು ವಿಭಿನ್ನವಾಗಿ ಕಾಣುತ್ತದೆ. ಅಡಿಲೇಡ್ ಓವಲ್​​ನಲ್ಲಿ ಉತ್ತಮ ಪಿಚ್​ನಲ್ಲಿ 2022 ರ ಸೆಮೀಸ್​​ನಷ್ಟು ಸುಲಭವಿಲ್ಲ. ರೋಹಿತ್​ ಪಡೆಯ ವಿರುದ್ದ ಗೆಲ್ಲಬೇಕಾದರೆ ಎಷ್ಟು ರನ್​ ಬೇಕು ಎಂಬುದೇ ಪ್ರಶ್ನೆಯಾಗಿದೆ ಎಂದು ಹೇಳಿದ್ದಾರೆ.

VISTARANEWS.COM


on

IND vs ENG
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : 2024 ರ ಟಿ 20 ವಿಶ್ವಕಪ್ (T20 World Cup 2024)ಸೆಮಿಫೈನಲ್​ನಲ್ಲಿ ರೋಹಿತ್ ಶರ್ಮಾ (Rohit Sharma) ನೇತೃತ್ವದ ಭಾರತವು ಒಡ್ಡಲಿರುವ ತಂತ್ರಗಳ ಬಗ್ಗೆ ಬಗ್ಗೆ ಎಚ್ಚರಿಕೆಯಿಂದ ಇರಿ ಎಂದು ಇಂಗ್ಲೆಂಡ್ (IND vs ENG) ಮುಖ್ಯ ಕೋಚ್ ಮ್ಯಾಥ್ಯೂ ಮಾಟ್ ತನ್ನ ತಂಡದ ಆಟಗಾರರಿಗೆ ಹೇಳಿದ್ದಾರೆ. ಜತೆಗೆ ಭಾರತವು ಯಾವ ತಂತ್ರವನ್ನು ಹೂಡಲಿದೆ ಎಂಬುದನ್ನು ಹೇಳಿದ್ದಾರೆ. ಆದಾಗ್ಯೂ ಭಾರತಕ್ಕೆ ಸೆಡ್ಡು ಹೊಡೆಯುವುದು ಖಚಿತ ಎಂಬುದಾಗಿ ಹೇಳಿದ್ದಾರೆ.

ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್ 2024 ರ 2 ನೇ ಸೆಮಿಫೈನಲ್​ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಭಾರತ ಮುಖಾಮುಖಿಯಾಗಲಿವೆ. 2022 ರಲ್ಲಿ ಅಡಿಲೇಡ್ ಓವಲ್​ನಲ್ಲಿ ನಡೆದ ಹಿಂದಿನ ಟಿ 20 ವಿಶ್ವಕಪ್ ಸೆಮಿಯಲ್ಲಿ ಭಾರತ ತಂಡವನ್ನು ಇಂಗ್ಲೆಂಡ್ 10 ವಿಕೆಟ್​​ಗಳಿಂದ ಸೋಲಿಸಿತ್ತು. ಅದಕ್ಕೆ ಪ್ರತಿಕಾರ ತೀರಿಸಲು ಭಾರತ ಸಜ್ಜಾಗಿದೆ. ಆದರೆ, ಜೋಸ್​ ಬಟ್ಲರ್​ ಪಡೆ ಪ್ರಶಸ್ತಿ ಉಳಿಸಿಕೊಳ್ಳುವುದಕ್ಕೆ ಉತ್ತಮ ಅಭಿಯಾನ ಮಾಡಿದೆ. ತಂಡವು ಅತ್ಯುತ್ತಮವಾಗಿ ಕಾಣುತ್ತಿದೆ ಮತ್ತು ಉತ್ತಮ ಫಲಿತಾಂಶ ಪಡೆದುಕೊಂಡಿದೆ.

ಇಂಗ್ಲೆಂಡ್​ ಖಂಡಿತವಾಗಿಯೂ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಸಾಮರ್ಥ್ಯ ಹೊಂದಿರುವ ತಂಡವಾಗಿದೆ. ಕಳೆದ ವರ್ಷ 50 ಓವರ್​ಗಳ ವಿಶ್ವಕಪ್​ನಿಂದ ಸಾಕಷ್ಟು ಕಲಿತಿದೆ ಮತ್ತು ಆ ಸುಧಾರಣೆ ಈ ಟೂರ್ನಿಯಲ್ಲಿ ಅನಾವರಣಗೊಂಡಿದೆ. ಆದಾಗ್ಯೂ ಸೆಮಿಫೈನಲ್​​ನಲ್ಲಿ ಅಜೇಯ ಭಾರತ ತಂಡವನ್ನು ಸೋಲಿಸಬೇಕಾಗಿದೆ. ಹಿಂದಿನ ಟಿ 20 ವಿಶ್ವಕಪ್ ಸೆಮಿಫೈನಲ್​​ನಲ್ಲಿ ಜೋಸ್ ಬಟ್ಲರ್ ಬಳಗವು ಭಾರತವನ್ನು ಸುಲಭವಾಗಿ ಎದುರಿಸಿತ್ತು. ಈ ಬಾರಿ ಪರಿಸ್ಥಿತಿ ಹಾಗಿಲ್ಲ ಎಂದು ಹೇಳಿದ್ದಾರೆ.

ವಿಭಿನ್ನ ತಂಡ

ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ವಿಭಿನ್ನವಾಗಿ ಕಾಣುತ್ತಿದೆ ಎಂದು ಮ್ಯಾಥ್ಯೂ ಮಾಟ್​​ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮ್ಯಾಥ್ಯೂ , 2024 ರ ಟಿ 20 ವಿಶ್ವಕಪ್ನಲ್ಲಿ ಭಾರತ ತಂಡವು ಎಷ್ಟು ವಿಭಿನ್ನವಾಗಿ ಕಾಣುತ್ತದೆ. ಅಡಿಲೇಡ್ ಓವಲ್​​ನಲ್ಲಿ ಉತ್ತಮ ಪಿಚ್​ನಲ್ಲಿ 2022 ರ ಸೆಮೀಸ್​​ನಷ್ಟು ಸುಲಭವಿಲ್ಲ. ರೋಹಿತ್​ ಪಡೆಯ ವಿರುದ್ದ ಗೆಲ್ಲಬೇಕಾದರೆ ಎಷ್ಟು ರನ್​ ಬೇಕು ಎಂಬುದೇ ಪ್ರಶ್ನೆಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Chris Silverwood : ಲಂಕಾ ಕೋಚ್​ ಕ್ರಿಸ್​ ಸಿಲ್ವರ್​ವುಡ್​​ ಏಕಾಏಕಿ ರಾಜೀನಾಮೆ

ರೋಹಿತ್ ಶರ್ಮಾ ಮತ್ತು ಅವರ ಮೆನ್ ಇನ್ ಬ್ಲೂ ಈ ಬಾರಿ ಇಂಗ್ಲೆಂಡ್ ವಿರುದ್ಧ ಕಠಿಣ ಹೋರಾಟ ನಡೆಸಲಿದೆ ಎಂದು ಮ್ಯಾಥ್ಯೂ ಮೊಟ್ ಹೇಳಿದ್ದಾರೆ. ಭಾರತವು ದೊಡ್ಡ ಮೊತ್ತವನ್ನು ದಾಖಲಿಸಲಿದೆ ಮತ್ತು ಹಾಲಿ ಚಾಂಪಿಯನ್ಸ್ ಆಗಿರುವ ತಮ್ಮ ತಂಡದ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತದೆ ಎಂದು ಮೊಟ್ ಅಭಿಪ್ರಾಯಪಟ್ಟಿದ್ದಾರೆ. 2024 ರ ಟಿ 20 ವಿಶ್ವಕಪ್​​ನಲ್ಲಿ ಅತ್ಯಂತ ಸಮತೋಲಿತ ಎರಡು ತಂಡಗಳ ನಡುವೆ ಉತ್ತಮ ಸ್ಪರ್ಧೆಯಾಗಲಿದೆ ಎಂದು ಇಂಗ್ಲೆಂಡ್ ಕೋಚ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ ತಂಡ ಪವರ್​ಪ್ಲೇ ಅವಧಿಯನ್ನು ಬಳಸಿಕೊಳ್ಳಲಿದೆ. ಸ್ಕೋರ್ ನಮ್ಮ ಕೈಗೆಟುಕದಂತೆ ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ. ಇಂದಿನ ಪಂದ್ಯವು ಎರಡು ಉತ್ತಮ ಬ್ಯಾಟಿಂಗ್ ಲೈನ್ಅಪ್​ಗಳನ್ನು ಹೊಂದಿದೆ ಎಂದು ನಾನು ಭಾವಿಸುತ್ತೇನೆ, ಬೌಲರ್​ಗಳು ಸಹ ಕ್ಲಾಸ್ ಆಗಿದ್ದಾರೆ. ಆದ್ದರಿಂದ ಆ ಪರಿಸ್ಥಿತಿಗಳನ್ನು ಯಾರು ಬಳಸಿಕೊಳ್ಳುತ್ತಾರೆ ಎಂಬುದೇ ನಿರ್ಣಾಯಕ ಮ್ಯಾಥ್ಯೂ ಮಾಟ್ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rohit Sharma : ಕೊಹ್ಲಿ ಹಾದಿ ತುಳಿದ ರೋಹಿತ್​, ಟಿ20 ಐ ಕ್ರಿಕೆಟ್​​ಗೆ ವಿದಾಯ ಹೇಳಿದ ಟೀಮ್ ಇಂಡಿಯಾ ನಾಯಕ

Rohit Sharma : ನಾನು ಈ ಮಾದರಿಯ ಪ್ರತಿಯೊಂದು ಕ್ಷಣವನ್ನು ಪ್ರೀತಿಸುತ್ತೇನೆ. ನಾನು ಈ ಸ್ವರೂಪದಲ್ಲಿ ಆಡುವ ಮೂಲಕ ನನ್ನ ಭಾರತ ವೃತ್ತಿಜೀವನವನ್ನು ಪ್ರಾರಂಭಿಸಿದೆ. ನಾನು ಈಗ ಏನು ಮಾಡಿದ್ದೇನೋ ಅದನ್ನೇ ಮಾಡಲು ಬಯಸಿದ್ದೆ. ಕಪ್ ಗೆದ್ದು ವಿದಾಯ ಹೇಳಿದೆ ಎಂದು ಬಾರ್ಬಡೋಸ್​ನಲ್ಲಿ ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

VISTARANEWS.COM


on

Rohit Sharma
Koo

ಬೆಂಗಳೂರು: ಭಾರತ ತಂಡದ ನಾಯಕ ಹಾಗೂ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ (Rohit Sharma) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ್ದಾರೆ. ಈ ಮೂಲಕ ಅವರು ತಮ್ಮ ಸಹ ಆಟಗಾರ ವಿರಾಟ್ ಕೊಹ್ಲಿಯ ಹಾದಿಯನ್ನೇ ತುಳಿದಿದ್ದಾರೆ. ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ತಮ್ಮ ನಿವೃತ್ತಿಯ ವಿಷಯವನ್ನು ಘೋಷಿಸಿದರೆ ರೋಹಿತ್ ಶರ್ಮಾ ಗೆಲುವಿನ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಅದು ನನ್ನ ಕೊನೆಯ ಪಂದ್ಯವೂ ಆಗಿತ್ತು. ಪ್ರಾಮಾಣಿಕವಾಗಿ, ನಾನು ಈ ಸ್ವರೂಪವನ್ನು ಆಡಲು ಪ್ರಾರಂಭಿಸಿದ ಸಮಯದಿಂದ ನಾನು ಸಿಕ್ಕಾಪಟ್ಟೆ ಖುಷಿಯಲ್ಲಿದ್ದೆ. ಈ ಸ್ವರೂಪಕ್ಕೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ನಾನು ಈ ಮಾದರಿಯ ಪ್ರತಿಯೊಂದು ಕ್ಷಣವನ್ನು ಪ್ರೀತಿಸುತ್ತೇನೆ. ನಾನು ಈ ಸ್ವರೂಪದಲ್ಲಿ ಆಡುವ ಮೂಲಕ ನನ್ನ ಭಾರತ ವೃತ್ತಿಜೀವನವನ್ನು ಪ್ರಾರಂಭಿಸಿದೆ. ನಾನು ಈಗ ಏನು ಮಾಡಿದ್ದೇನೋ ಅದನ್ನೇ ಮಾಡಲು ಬಯಸಿದ್ದೆ. ಕಪ್ ಗೆದ್ದು ವಿದಾಯ ಹೇಳಿದೆ ಎಂದು ಬಾರ್ಬಡೋಸ್​ನಲ್ಲಿ ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಇದನ್ನೂ ಓದಿ: T20 World Cup 2024 : 13 ವರ್ಷಗಳ ಕಾಯುವಿಕೆ ಅಂತ್ಯ, ಕೊನೆಗೂ ವಿಶ್ವ ಕಪ್​ ಗೆದ್ದ ಭಾರತ

ಟೆಸ್ಟ್ ಮತ್ತು ಏಕದಿನ ಸ್ವರೂಪಗಳಲ್ಲಿ ಭಾರತಕ್ಕಾಗಿ ಮುಂದುವರಿಯುವುದಾಗಿ ರೋಹಿತ್ ಹೇಳಿದರು, ಆದರೆ ಅವರು ಕಡಿಮೆ ಫಾರ್ಮ್ನಿಂದ ಹಿಂದೆ ಸರಿಯುತ್ತಿದ್ದಾರೆ ಎಂದು ಹೇಳಿದರು.

ವಿರಾಟ್ ಕೊಹ್ಲಿ ಮೊದಲ ವಿದಾಯ ಹೇಳಿದ್ದರು

ಬೆಂಗಳೂರು: ಆಧುನಿಕ ಯುಗದ ಅತ್ಯಂತ ಪ್ರಭಾವಿ ಕ್ರಿಕೆಟಿಗ, ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್​ ಕೊಹ್ಲಿ (Virat Kohli) ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ವಿಶ್ವ ಕಪ್​ನ ಫೈನಲ್​​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ ಬಾರಿಸಿ ಗೆಲುವಿನ ಸೂತ್ರಧಾರ ಎನಿಸಿಕೊಳ್ಳುವ ಜತೆಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಅವರು ಈ ಘೋಷಣೆಯನ್ನು ಮಾಡಿದರು. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡ ಬಳಿಕ ಮಾತನಾಡಿದ ಅವರು ಇದು ನನ್ನ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯ ಹಾಗೂ ಕೊನೇ ಟಿ20 ವಿಶ್ವ ಕಪ್ ಎಂದು ಹೇಳಿದರು. ಈ ಮೂಲಕ ಅವರು ದೀರ್ಘ ಕಾಲದ ಟಿ20 ಅಂತಾರಾಷ್ಟ್ರೀಯ ಅಭಿಯಾನವನ್ನು ಕೊನೆಗೊಳಿಸಿದ್ದಾರೆ.

ವಿರಾಟ್​ ಕೊಹ್ಲಿ ಕೇವಲ ಟಿ20 ಮಾತ್ರ ಎಂದು ಹೇಳಿರುವ ಕಾರಣ ಅವರು ಏಕ ದಿನ ಹಾಗೂ ಟೆಸ್ಟ್​ ಪಂದ್ಯಗಳಲ್ಲಿ ಆಡಲಿದ್ದಾರೆ. ಅದೇ ರೀತಿ ಅವರು ಅತಿ ಹೆಚ್ಚು ಆರಾಧಿಸಲ್ಪಡುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ತಮ್ಮ ಸೇವೆ ಮುಂದುವರಿಸಲಿದ್ದಾರೆ.

ಇದು ನನ್ನ ಕೊನೇ ಟಿ20 ಅಂತಾರಾಷ್ಟ್ರಿಯ ಪಂದ್ಯ. ಅದೇ ರೀತಿ ನನ್ನ ಟಿ20 ಅಂತಾರಾಷ್ಟ್ರೀಯ ಪಂದ್ಯ. ಇದು ಎಲ್ಲರಿಗೂ ಗೊತ್ತಿದ್ದ ಗುಟ್ಟಾಗಿತ್ತು. ನಾನು ಈ ಪಂದ್ಯದಲ್ಲಿ ಸೋತು ಟ್ರೋಫಿ ಗೆಲ್ಲದೇ ಹೋಗಿದ್ದರೂ ಕೊನೇ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. ಆದರೆ ಈ ಗೆದ್ದಿದ್ದೇನೆ . ಈ ಸಂತೋಷಕ್ಕೆ ಪಾರವೇ ಇಲ್ಲ. ಹೊಸ ಪೀಳಿಗೆಯ ಆಟಗಾರರಿಗೆ ನಾನು ಸ್ಥಳಾವಕಾಶ ಮಾಡಿಕೊಡಲೇಬೇಕು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Virat Kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ವಿರಾಟ್​​ ಕೊಹ್ಲಿ

VIrat Kohli: ವಿರಾಟ್​ ಕೊಹ್ಲಿ ಕೇವಲ ಟಿ20 ಮಾತ್ರ ಎಂದು ಹೇಳಿರುವ ಕಾರಣ ಅವರು ಏಕ ದಿನ ಹಾಗೂ ಟೆಸ್ಟ್​ ಪಂದ್ಯಗಳಲ್ಲಿ ಆಡಲಿದ್ದಾರೆ. ಅದೇ ರೀತಿ ಅವರು ಅತಿ ಹೆಚ್ಚು ಆರಾಧಿಸಲ್ಪಡುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ತಮ್ಮ ಸೇವೆ ಮುಂದುವರಿಸಲಿದ್ದಾರೆ.

VISTARANEWS.COM


on

Virat Kohli
Koo

ಬೆಂಗಳೂರು: ಆಧುನಿಕ ಯುಗದ ಅತ್ಯಂತ ಪ್ರಭಾವಿ ಕ್ರಿಕೆಟಿಗ, ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್​ ಕೊಹ್ಲಿ (Virat Kohli) ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ವಿಶ್ವ ಕಪ್​ನ ಫೈನಲ್​​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ ಬಾರಿಸಿ ಗೆಲುವಿನ ಸೂತ್ರಧಾರ ಎನಿಸಿಕೊಳ್ಳುವ ಜತೆಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಅವರು ಈ ಘೋಷಣೆಯನ್ನು ಮಾಡಿದರು. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡ ಬಳಿಕ ಮಾತನಾಡಿದ ಅವರು ಇದು ನನ್ನ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯ ಹಾಗೂ ಕೊನೇ ಟಿ20 ವಿಶ್ವ ಕಪ್ ಎಂದು ಹೇಳಿದರು. ಈ ಮೂಲಕ ಅವರು ದೀರ್ಘ ಕಾಲದ ಟಿ20 ಅಂತಾರಾಷ್ಟ್ರೀಯ ಅಭಿಯಾನವನ್ನು ಕೊನೆಗೊಳಿಸಿದ್ದಾರೆ.

ವಿರಾಟ್​ ಕೊಹ್ಲಿ ಕೇವಲ ಟಿ20 ಮಾತ್ರ ಎಂದು ಹೇಳಿರುವ ಕಾರಣ ಅವರು ಏಕ ದಿನ ಹಾಗೂ ಟೆಸ್ಟ್​ ಪಂದ್ಯಗಳಲ್ಲಿ ಆಡಲಿದ್ದಾರೆ. ಅದೇ ರೀತಿ ಅವರು ಅತಿ ಹೆಚ್ಚು ಆರಾಧಿಸಲ್ಪಡುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ತಮ್ಮ ಸೇವೆ ಮುಂದುವರಿಸಲಿದ್ದಾರೆ.

ಇದು ನನ್ನ ಕೊನೇ ಟಿ20 ಅಂತಾರಾಷ್ಟ್ರಿಯ ಪಂದ್ಯ. ಅದೇ ರೀತಿ ನನ್ನ ಟಿ20 ಅಂತಾರಾಷ್ಟ್ರೀಯ ಪಂದ್ಯ. ಇದು ಎಲ್ಲರಿಗೂ ಗೊತ್ತಿದ್ದ ಗುಟ್ಟಾಗಿತ್ತು. ನಾನು ಈ ಪಂದ್ಯದಲ್ಲಿ ಸೋತು ಟ್ರೋಫಿ ಗೆಲ್ಲದೇ ಹೋಗಿದ್ದರೂ ಕೊನೇ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. ಆದರೆ ಈ ಗೆದ್ದಿದ್ದೇನೆ . ಈ ಸಂತೋಷಕ್ಕೆ ಪಾರವೇ ಇಲ್ಲ. ಹೊಸ ಪೀಳಿಗೆಯ ಆಟಗಾರರಿಗೆ ನಾನು ಸ್ಥಳಾವಕಾಶ ಮಾಡಿಕೊಡಲೇಬೇಕು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ಇದು ನನ್ನ ಕೊನೆಯ ಟಿ 20 ವಿಶ್ವಕಪ್, ಇದನ್ನು ನಾವು ಸಾಧಿಸಲು ಬಯಸಿದ್ದೆವು. ದೇವರು ದೊಡ್ಡವನು. ಕೇವಲ ಭಾರತಕ್ಕಾಗಿ ಆಡುವ ನನ್ನ ಕೊನೆಯ ಟಿ 20 ಪಂದ್ಯವಾಗಿತ್ತು. ನಾವು ಆ ಕಪ್ ಅನ್ನು ಎತ್ತಲು ಬಯಸಿದ್ದೆವು. ಹೌದು, ಇದು ಬಹಿರಂಗ ರಹಸ್ಯವಾಗಿತ್ತು ಎಂದು ಕೊಹ್ಲಿ ಹೇಳಿದ್ದಾರೆ.

ನಾವು ಸೋತರೂ ನಾನು ಅದನ್ನು ಘೋಷಿಸಲು ಹೋಗುತ್ತಿರಲಿಲ್ಲ. ಮುಂದಿನ ಪೀಳಿಗೆಯು ಟಿ 20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ. ಐಸಿಸಿ ಪಂದ್ಯಾವಳಿಯನ್ನು ಗೆಲ್ಲಲು ಕಾಯುತ್ತಿರುವ ನಮಗೆ ಇದು ಬಹಳ ಸಮಯದ ಕಾಯುವಿಕೆಯಾಗಿತ್ತು. ನೀವು ರೋಹಿತ್ ಅವರನ್ನು ನೋಡಿ. ಅವರು 9 ಟಿ 20 ವಿಶ್ವಕಪ್​ಗಳನ್ನು ಆಡಿದ್ದಾರೆ ಮತ್ತು ಇದು ನನ್ನ ಆರನೇ ಪಂದ್ಯವಾಗಿದೆ. ಟ್ರೋಫಿಗೆ ಅವರು ಅರ್ಹರು. ಭಾವನೆಗಳನ್ನು ತಡೆಹಿಡಿಯುವುದು ಕಷ್ಟ ಎಂದು ನಾನು ಭಾವಿಸುತ್ತೇನೆ. ಇದು ಅದ್ಭುತ ದಿನ ಮತ್ತು ನಾನು ಕೃತಜ್ಞನಾಗಿದ್ದೇನೆ ಎಂದು ಕೊಹ್ಲಿ ಹೇಳಿದ್ದಾರೆ.

ಕೊಹ್ಲಿಯ ಭರ್ಜರಿ ಬ್ಯಾಟಿಂಗ್​

ಫೈನಲ್ ಪಂದ್ಯದಲ್ಲ ವಿರಾಟ್ ಕೊಹ್ಲಿ ಭಾರತ ತಂಡಕ್ಕೆ ಆಧಾರವಾಗಿದ್ದರು. ಈ ಮೂಲಕ ಅವರು ಕೊನೇ ಪಂದ್ಯವನ್ನು ಸ್ಮರಣೀಯಗೊಳಿಸಿದರು. ಇಡೀ ಟೂರ್ನಿಯಲ್ಲಿ ವೈಫಲ್ಯ ಕಂಡಿದ್ದ ಅವರು ಫೈನಲ್​ನಲ್ಲಿ 59 ಎಸೆತಕ್ಕೆ 76 ರನ್ ಮಿಂಚಿದರು. ಅವರ ಕೊಡುಗೆಯಿಂದಾಗಿ ಭಾರತ 176 ರನ್​ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತು ಹಾಗೂ ಕೊನೇ ಹಂತದ ಬೌಲರ್​ಗಳ ಹೋರಾಟದಿಂದ ಗೆದ್ದಿತು.

Continue Reading

ಪ್ರಮುಖ ಸುದ್ದಿ

T20 World Cup 2024 : 13 ವರ್ಷಗಳ ಕಾಯುವಿಕೆ ಅಂತ್ಯ, ಕೊನೆಗೂ ವಿಶ್ವ ಕಪ್​ ಗೆದ್ದ ಭಾರತ

VISTARANEWS.COM


on

T20 World Cup
Koo

ಬಾರ್ಬಡೋಸ್​: ಕಿಂಗ್ ಕೊಹ್ಲಿಯ ಅಬ್ಬರದ ಅರ್ಧ ಶತಕ (76 ರನ್​) ರನ್ ಹಾಗೂ ಆಲ್​ರೌಂಡರ್ ಅಕ್ಷರ್ ಪಟೇಲ್​ ಅವರ ಸ್ಫೋಟಕ ಬ್ಯಾಟಿಂಗ್​ (47 ರನ್​, 31 ಎಸೆತ, 4 ಸಿಕ್ಸರ್​, 1 ಫೋರ್​) ನೆರವು ಹಾಗೂ ಕೊನೇ ಕ್ಷಣದ ರೋಚಕ ಹೋರಾಟ ಫಲವಾಗಿ ಭಾರತ ತಂಡ ವಿಶ್ವ ಕಪ್​ ಗೆದ್ದುಕೊಂಡಿತು. ಫೈನಲ್​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್​ಗಳ ರೋಚಕ ಗೆಲುವು ದಾಖಲಿಸಿ ಟ್ರೋಫಿ ಮುಡಿಗೇರಿಸಿಕೊಂಡಿತು. ಭಾರತದ ಪಾಲಿಗೆ ಇದು ಸ್ಮರಣೀಯ ಟ್ರೋಫಿ. ಹಿರಿಯ ಆಟಗಾರರಾದ ರೋಹಿತ್​ ಶರ್ಮಾ ಹಾಗೂ ವಿರಾಟ್​ ಕೊಹ್ಲಿಗೆ ಅಪೇಕ್ಷಿತ ಚಾಂಪಿಯನ್ ಪಟ್ಟ. ಅತ್ತ ದಕ್ಷಿಣ ಆಫ್ರಿಕಾ ತಂಡ ತನ್ನ ಚೋಕರ್ಸ್​ ಹಣೆಪಟ್ಟಿಯನ್ನು ಮತ್ತಷ್ಟು ದಿನ ಕಟ್ಟಿಕೊಳ್ಳುವಂತಾಯಿತು. 4 ದಶಕಗಳ ತನ್ನ ವಿಶ್ವ ಕಪ್​ ಅಭಿಯಾನದಲ್ಲಿ ಒಂದೇ ಒಂದು ಟ್ರೋಫಿ ಗೆಲ್ಲಲು ಸಾಧ್ಯವಾಗದೇ ನಿರಾಸೆ ಎದುರಿಸಿತು.

ಇದು ಭಾರತ ತಂಡಕ್ಕೆ 13 ವರ್ಷಗಳ ಬಳಿಕ ಸಿಕ್ಕ ವಿಶ್ವ ಕಪ್​ ಹಾಗೂ 17 ವರ್ಷಗಳ ಬಳಿಕ ದೊರೆತ ಟಿ20 ವಿಶ್ವ ಕಪ್​. ಭಾರತ ತಂಡ 2007ರ ಉದ್ಘಾಟನಾ ಆವೃತ್ತಿಯ ಟಿ20 ವಿಶ್ವ ಕಪ್​ ಗೆದ್ದಿದ್ದರೆ 2011ರ ಏಕ ದಿನ ವಿಶ್ವ ಕಪ್ ಗೆದ್ದುಕೊಂಡಿದೆ.

ಇಲ್ಲಿನ ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅಂತೆಯೇ ನಿಗದಿತ 20 ಓವರ್​ಗಳು ಮುಕ್ತಾಯಗೊಳ್ಳುವಾಗ 7 ವಿಕೆಟ್​ ನಷ್ಟ ಮಾಡಿಕೊಂಡು 176 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 169 ರನ್ ಬಾರಿಸಿ ಸೋಲೊಪ್ಪಿಕೊಂಡಿತು

ಸ್ಥಳೀಯವಾಗಿ ಬೆಳಗಿನ ಅವಧಿಯಾಗಿದ್ದ ಕಾರಣ ಸ್ವಲ್ಪ ಮಟ್ಟಿನ ತೇವಾಂಶ ಪಿಚ್​ ಮೇಲೆ ಇತ್ತು .ಅದರ ಲಾಭ ಪಡೆಯಲು ರೋಹಿತ್ ಮುಂದಾದರು. ಆದರೆ, ದಕ್ಷಿಣ ಆಫ್ರಿಕಾ ಬೌಲರ್​​ಗಳು ಅದಕ್ಕೆ ಆಸ್ಪದ ಕೊಡಲಿಲ್ಲ .ಮೊದಲ ಓವರ್​ನಲ್ಲಿ ಭಾರತಕ್ಕೆ ಉತ್ತಮ ರನ್ ಬಂದ ಹೊರತಾಗಿಯೂ ಕಳೆದ ಎರಡು ಪಂಂದ್ಯಗಳ ಹೀರೋ ರೋಹಿತ್ ಶರ್ಮಾ 9 ರನ್​ಗೆ ಔಟಾದರು. ಅವರು ಅದಕ್ಕೆ ಮೊದಲು ಸತತ 2 ಫೋರ್​ ಬಾರಿಸಿದ್ದರು. ಆದರೆ, ನಾಯಕ ಮಾರ್ಕ್ರಮ್​ ಹಿಡಿದ ಅದ್ಭುತ ಕ್ಯಾಚ್​ಗೆ ಬಲಿಯಾದು. ರೋಹಿತ್ ಔಟಾದ ತಕ್ಷಣವೇ ಭಾರತಕ್ಕೆ ಆಘಾತ ಉಂಟಾಯಿತು. ಆದರೆ ರಿಷಭ್ ಪಂತ್ ಸರಿಪಡಿಸುವರೆಂಬ ವಿಶ್ವಾಸ ಇತ್ತು. ಆದರೆ, ಅವರು ಶೂನ್ಯಕ್ಕೆ ನಿರ್ಗಮಿಸಿದರು. 2 ಎಸೆತ ಎದುರಿಸಿದ ಅವರು ಸ್ವೀಪ್​ ಮಾಡಲು ಹೋಗಿ ಅನಗತ್ಯ ಕ್ಯಾಚ್ ನೀಡಿ ಔಟಾದರು.

ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ಸೂರ್ಯಕುಮಾರ್ 4 ಎಸೆತ ಎದುರಿಸಿ 3 ರನ್​ಗೆ ಔಟಾದ ತಕ್ಷಣ ಭಾರತಕ್ಕೆ ಆಘಾತ ಉಂಟಾಯಿತು. ಹೆನ್ರಿಚ್ ಕ್ಲಾಸೆನ್ ಬೌಂಡರಿ ಲೈನ್​ನಲ್ಲಿ ಹಿಡಿದ ಅದ್ಭುತ ಕ್ಯಾಚ್ ಗೆ ಅವರು ಔಟಾದರು. ಈ ವೇಳೆ 4.3 ಓವರ್​ಗಳಲ್ಲಿ ಭಾರತ 3 ವಿಕೆಟ್ ಕಳೆದುಕೊಂಡಿತು.

ಮಿಂಚಿದ ಕೊಹ್ಲಿ

ಭಾರತ ತಂಡದ ವಿಕೆಟ್​ಗಳು ಪತನಗೊಳ್ಳುತ್ತಿದ್ದಂತೆ ವಿರಾಟ್ ಕೊಹ್ಲಿ ಜಾಗೃತರಾದರು. ಅವರು ನಿಧಾನಗತಿಯ ಆಟಕ್ಕೆ ಮೊರೆ ಹೋಗಿ ಇನಿಂಗ್ಸ್ ಕಟ್ಟಲು ಆರಂಭಿಸಿದರು. ಆದರೆ, ಮುಂಬಡ್ತಿ ಪಡೆದುಕೊಂಡು ಕ್ರೀಸ್​ಗೆ ಬಂದ ಅಕ್ಷರ್ ಪಟೇಲ್ ಇದೇ ತಕ್ಕ ಸಮಯ ಎಂಬಂತೆ ಆಡಿದರು. ಅಗತ್ಯ ಸಂದರ್ಭದಲ್ಲಿ ಬಿಡುಬೀಸಿನ ಆಟವಾಡಿದರು. ಹೀಗಾಗಿ ಭಾರತ ತಂಡದ ಸ್ಕೋರ್​ ಪಟ್ಟಿ ಬೆಳೆಯಲು ಆರಂಭಗೊಂಡಿತು. ಕೊಹ್ಲಿ ಜತೆ ಉತ್ತಮ ಜತೆಯಾಟವಾಡಿದ ಅಕ್ಷರ್​ ತಂಡದ ಮೊತ್ತವನ್ನು 100ರ ಗಡಿ ದಾಟಿಸಿದರು. ಆದರೆ, ರನ್​ಗಾಗಿ ಓಡುವ ವೇಳೆ ಯಾಮಾರಿ ಔಟಾದರು. ಅವರು 3 ರನ್ ಕೊರತೆಯಿಂದ ಅರ್ಧ ಶತಕದ ಅವಕಾಶ ಕಳೆದುಕೊಂಡರು.

ಇದನ್ನೂ ಓದಿ: Hardik Pandya : ಕಪಿಲ್​ ದೇವ್​ ರೀತಿ ಮೀಸೆ ಬಿಟ್ಟುಕೊಂಡು ಫೈನಲ್ ಪಂದ್ಯ ಆಡಲು ಬಂದ ಹಾರ್ದಿಕ್ ಪಾಂಡ್ಯ

ಶಿವಂ ದುಬೆ ಹಿಂಬಡ್ತಿ ಪಡೆದುಕೊಂಡು ಬಂದು ತಮ್ಮ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸಿದರು. ಅವರು 16 ಎಸೆತಕ್ಕೆ 27 ರನ್ ಬಾರಿಸಿದರು. ಏತನ್ಮಧ್ಯೆ, 48 ಎಸೆತಕ್ಕೆ ಅರ್ಧ ಶತಕ ಪೂರೈಸಿದ ವಿರಾಟ್ ಕೊಹ್ಲಿ ಅಬ್ಬರಿಸಲು ಆರಂಭಿಸಿದರು. ಬೌಂಡರಿ ಸಿಕ್ಸರ್​ಗಳನ್ನು ಬಾರಿಸುವ ಮೂಲಕ ಬೆದರಿಕೆ ಹುಟ್ಟಿಸಿದರು. ಇದು ಫೈನಲ್​ ಪಂದ್ಯದಲ್ಲಿ ಅವರ ಪಾಲಿಗೆ ಸ್ಮರಣೀಯ ಇನಿಂಗ್ಸ್ ಎನಿಸಿತು.

ದಕ್ಷಿಣ ಆಫ್ರಿಕಾ ತಂಡಕ್ಕೆ ನಿರಾಸೆ

ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಆರಂಭದಲ್ಲಿ ಬೇಗನೆ ವಿಕೆಟ್ ಕಳೆದುಕೊಂಡಿತು. ಆದರೆ, ನಂತರದಲ್ಲಿ ಚೇತರಿಸಿಕೊಂಡು ಪೈಪೋಟಿ ಒಡ್ಡಿತು. ಒಂದು ಹಂತದಲ್ಲಿ ಭಾರತದ ಗೆಲುವು ನಷ್ಟವಾಯಿತು ಎಂದು ಅಂದುಕೊಳ್ಳಲಾಯಿತು. ಆದರೆ ಕೊನೇ ಹಂತದಲ್ಲಿ ಮ್ಯಾಜಿಕ್ ಮಾಡಿದ ಹಾರ್ದಿಕ್ ಪಾಂಡ್ಯ, ಜಸ್​ಪ್ರಿತ್​ ಬುಮ್ರಾ ಹಾಗೂ ಅರ್ಶ್​ ದೀಪ್​ ಗೆಲುವು ತಂದುಕೊಟ್ಟರು. ದಕ್ಷಿಣ ಆಫ್ರಿಕಾ ಪರ ಕ್ವಿಂಟನ್ ಡಿ ಕಾಕ್​, 39 ರನ್ , ಟ್ರಿಸ್ಟಾನ್ಸ್ ಸ್ಟಬ್ಸ್​ 31 ರನ್​, ಬಾರಿಸಿದರೆ ಕೊನೆಯಲ್ಲಿ ಹೆನ್ರಿಚ್ ಕ್ಲಾಸೆನ್​ 52 ರನ್ ಬಾರಿಸಿ ಭಾರತಕ್ಕೆ ಭಯ ಹುಟ್ಟಿಸಿದರು. ಕೊನೆಯಲ್ಲಿ ಡೇವಿಡ್​ ಮಿಲ್ಲರ್​ 21 ರನ್ ಬಾರಿಸಿದರೂ ಭಾರತದ ಕೊನೇ ಹಂತದ ಪ್ರಯತ್ನಕ್ಕೆ ಅವರ ಹೋರಾಟ ಮಂಕಾಯಿತು.

Continue Reading

ಪ್ರಮುಖ ಸುದ್ದಿ

DK Shivakumar: ರಾಜ್ಯಕ್ಕೊಂದು ಗಿಫ್ಟ್‌ ಸಿಟಿಗೆ ಪ್ರಧಾನಿ ಮುಂದೆ ಬೇಡಿಕೆ: ಡಿಸಿಎಂ ಡಿ‌.ಕೆ.ಶಿವಕುಮಾರ್

ಗುಜರಾತಿನಲ್ಲಿ ಇರುವಂತೆ ಕರ್ನಾಟಕಕ್ಕೂ ಗಿಫ್ಟ್ ಸಿಟಿ ಅವಕಾಶ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಲಾಯಿತು. ದೇಶದಲ್ಲಿ ಒಂದು ಕಡೆ ಮಾತ್ರ ಮಾಡಲು ಅವಕಾಶವಿದೆ. ಇದರ ಬಗ್ಗೆ ಆಲೋಚನೆ ಮಾಡಲಾಗುವುದು ಎಂದು ಪ್ರಧಾನಿಯವರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ತಿಳಿಸಿದರು.

VISTARANEWS.COM


on

narendra modi dk shivakumar siddaramaiah
Koo

ಬೆಂಗಳೂರು: ರಾಜ್ಯಕ್ಕೆ ಒಂದು ಗಿಫ್ಟ್‌ ಸಿಟಿ (GIFT City) ಮಾದರಿಯ ಹಬ್‌ ನೀಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರಲ್ಲಿ ಮನವಿ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ಅವರು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಬಳಿಕ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ಗುಜರಾತಿನಲ್ಲಿ ಇರುವಂತೆ ಕರ್ನಾಟಕಕ್ಕೂ ಗಿಫ್ಟ್ ಸಿಟಿ ಅವಕಾಶ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಲಾಯಿತು. ದೇಶದಲ್ಲಿ ಒಂದು ಕಡೆ ಮಾತ್ರ ಮಾಡಲು ಅವಕಾಶವಿದೆ. ಇದರ ಬಗ್ಗೆ ಆಲೋಚನೆ ಮಾಡಲಾಗುವುದು ಎಂದು ಪ್ರಧಾನಿಯವರು ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು. ಕರ್ನಾಟಕದ ತೆರಿಗೆ ಪಾವತಿಗೆ ಅನುಗುಣವಾಗಿ ಅನುದಾನ ನೀಡಬೇಕೆಂಬ ಬೇಡಿಕೆಯನ್ನು ಕೂಲಂಕುಷವಾಗಿ ಪರಿಶೀಲಿಸುವ ಭರವಸೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದಾರೆ ಎಂದರು.

ಅತ್ಯಂತ ಸೌಹಾರ್ದಯುತ ಭೇಟಿ ಇದಾಗಿತ್ತು. ಸುಮಾರು 40 ನಿಮಿಷಗಳ ಕಾಲ ನಾನು, ಸಿಎಂ ಸಿದ್ದರಾಮಯ್ಯ (CM Siddaramaiah) ಅವರು, ಸಚಿವರಾದ ಪರಮೇಶ್ವರ, ಮಹದೇವಪ್ಪ ಅವರು ಪ್ರಧಾನಿ ಮೋದಿ ಅವರ ಜೊತೆ ಚರ್ಚೆ ನಡೆಸಿದೆವು. ರಾಜ್ಯದ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಭದ್ರಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಬೆಂಗಳೂರಿನ ಮೆಟ್ರೋ, ಪೆರಿಫೆರಲ್ ರಿಂಗ್ ರಸ್ತೆ, ಟನಲ್ ರಸ್ತೆ ಸೇರಿದಂತೆ ರಾಜ್ಯದಲ್ಲಿ ಬಾಕಿ ಇರುವ ಯೋಜನೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಯಿತು ಎಂದು ಡಿಕೆಶಿ ನುಡಿದರು.

ಬೆಂಗಳೂರಿನ ಅಭಿವೃದ್ಧಿಗಾಗಿ ಮನವಿ

ಬೆಂಗಳೂರಿನ ಜಲಸಂಪನ್ಮೂಲ, ನಗರಾಭಿವೃದ್ಧಿ, ಫೆರಿಫೆರಲ್ ರಿಂಗ್ ರಸ್ತೆ, ಮೆಟ್ರೋ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ಇನ್ನೊಮ್ಮೆ ಕೆಲವು ಮಾಹಿತಿಗಳ ಜತೆ ಬನ್ನಿ ಎಂದು ತಿಳಿಸಿದ್ದಾರೆ‌. ಮಂತ್ರಿಗಳು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು. ಒಟ್ಟಾರೆ ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ, ನೀವು ಅವಕಾಶ ಕೊಡಿ ಎಂದು ಮನವಿ ಮಾಡಿದ್ದೇವೆ ಎಂದರು.

ಜುಲೈ 3ರ ನಂತರ ರಾಹುಲ್ ಗಾಂಧಿ ಭೇಟಿ

ರಾಹುಲ್ ಗಾಂಧಿ (Rahul Gandhi) ಅವರ ಭೇಟಿಯ ಬಗ್ಗೆ ಕೇಳಿದಾಗ “ಶನಿವಾರ ಸಂಜೆ ದೆಹಲಿಗೆ ಬಂದ ಕಾರಣ ಭೇಟಿ ಸಾಧ್ಯವಾಗಲಿಲ್ಲ. ಸಂಸತ್ ಅಧಿವೇಶನ ಮುಗಿದ ನಂತರ ಜುಲೈ 3 ರ ನಂತರ ಭೇಟಿ ಮಾಡಿ ಅನೇಕ ವಿಚಾರಗಳ ಬಗ್ಗೆ ಅವರ ಜತೆ ಚರ್ಚೆ ನಡೆಸಲಾಗುವುದು. ಶನಿವಾರ ಮಧ್ಯಾಹ್ನ ಕರ್ನಾಟಕದ ನಾಯಕರ ಭೇಟಿಗೆ ಸಮಯ ನಿಗದಿ ಆಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಭೇಟಿಯಾಗಲು ಆಗಲಿಲ್ಲ” ಎಂದು ತಿಳಿಸಿದರು.

ಇದನ್ನೂ ಓದಿ: Gujarat GIFT City: ಗುಜರಾತ್‌ನ ಗಿಫ್ಟ್‌ ಸಿಟಿಯಲ್ಲಿ ಮದ್ಯ ಸೇವನೆಗೆ ಅವಕಾಶ!

Continue Reading
Advertisement
Rohit Sharma
ಪ್ರಮುಖ ಸುದ್ದಿ54 mins ago

Rohit Sharma : ಕೊಹ್ಲಿ ಹಾದಿ ತುಳಿದ ರೋಹಿತ್​, ಟಿ20 ಐ ಕ್ರಿಕೆಟ್​​ಗೆ ವಿದಾಯ ಹೇಳಿದ ಟೀಮ್ ಇಂಡಿಯಾ ನಾಯಕ

Virat Kohli
ಪ್ರಮುಖ ಸುದ್ದಿ3 hours ago

Virat Kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ವಿರಾಟ್​​ ಕೊಹ್ಲಿ

T20 World Cup
ಪ್ರಮುಖ ಸುದ್ದಿ4 hours ago

T20 World Cup 2024 : 13 ವರ್ಷಗಳ ಕಾಯುವಿಕೆ ಅಂತ್ಯ, ಕೊನೆಗೂ ವಿಶ್ವ ಕಪ್​ ಗೆದ್ದ ಭಾರತ

Progress review meeting at Karwar ZP office
ಉತ್ತರ ಕನ್ನಡ4 hours ago

Uttara Kannada News: ಕೂಸಿನ ಮನೆ ಯೋಜನೆ ಯಶಸ್ವಿಗೊಳಿಸಿ: ಉಮಾ ಮಹಾದೇವನ್

Tupolev fighter jet INS Chapel warship open for public viewing
ಉತ್ತರ ಕನ್ನಡ4 hours ago

Uttara Kannada News: ಟುಪಲೇವ್ ಯುದ್ಧ ವಿಮಾನ, ಐ.ಎನ್.ಎಸ್.ಚಾಪೆಲ್ ಯುದ್ಧನೌಕೆ ಸಾರ್ವಜನಿಕ ವೀಕ್ಷಣೆಗೆ ಮುಕ್ತ

narendra modi dk shivakumar siddaramaiah
ಪ್ರಮುಖ ಸುದ್ದಿ4 hours ago

DK Shivakumar: ರಾಜ್ಯಕ್ಕೊಂದು ಗಿಫ್ಟ್‌ ಸಿಟಿಗೆ ಪ್ರಧಾನಿ ಮುಂದೆ ಬೇಡಿಕೆ: ಡಿಸಿಎಂ ಡಿ‌.ಕೆ.ಶಿವಕುಮಾರ್

T20 World Cup
ಪ್ರಮುಖ ಸುದ್ದಿ5 hours ago

T20 World Cup : ಘರ್ಜಿಸಿದ ಕಿಂಗ್ ಕೊಹ್ಲಿ, 176 ರನ್ ಬಾರಿಸಿದ ಭಾರತ, ಇದು ವಿಶ್ವ ಕಪ್​ ಫೈನಲ್​ನಲ್ಲಿ ಗರಿಷ್ಠ ಸ್ಕೋರ್​

cm siddaramaiah T20 World Cup Final
ಪ್ರಮುಖ ಸುದ್ದಿ5 hours ago

T20 World Cup Final: ವಿಮಾನ ನಿಲ್ದಾಣದಲ್ಲೂ ಸಿದ್ದರಾಮಯ್ಯಗೆ ವಿಶ್ವಕಪ್‌ ಕ್ರಿಕೆಟ್‌ ಧ್ಯಾನ!

Hardik Pandya
ಪ್ರಮುಖ ಸುದ್ದಿ6 hours ago

Hardik Pandya : ಕಪಿಲ್​ ದೇವ್​ ರೀತಿ ಮೀಸೆ ಬಿಟ್ಟುಕೊಂಡು ಫೈನಲ್ ಪಂದ್ಯ ಆಡಲು ಬಂದ ಹಾರ್ದಿಕ್ ಪಾಂಡ್ಯ

CM Siddaramaiah pm narendra modi
ಪ್ರಮುಖ ಸುದ್ದಿ6 hours ago

Siddaramaiah: ಮೇಕೆದಾಟು ಕೂಡಲೇ ಕ್ಲಿಯರ್‌ ಮಾಡಿ: ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ10 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ16 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ1 day ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌