Faiz Hameed : ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​​ಐನ ಮಾಜಿ ಮುಖ್ಯಸ್ಥ ಫೈಜ್ ಹಮೀದ್ ಬಂಧನ - Vistara News

ಪ್ರಮುಖ ಸುದ್ದಿ

Faiz Hameed : ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​​ಐನ ಮಾಜಿ ಮುಖ್ಯಸ್ಥ ಫೈಜ್ ಹಮೀದ್ ಬಂಧನ

Faiz Hameed :

VISTARANEWS.COM


on

Faiz Hameed
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಸ್ಲಾಮಾಬಾದ್: ವಸತಿ ಯೋಜನೆ ಹಗರಣದಲ್ಲಿ ಸಿಲುಕಿಕೊಂಡಿರುವ ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾಗಿರುವ ಐಎಸ್​ಐ ಮಾಜಿ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ (Faiz Hameed) ಅವರನ್ನು ಪಾಕ್​ನ ಮಿಲಿಟರಿ ಬಂಧಿಸಿದೆ. ಪಾಕಿಸ್ತಾನ ಸೇನೆ ಸೋಮವಾರ ಈ ಮಾಹಿತಿಯನ್ನು ಪ್ರಕಟಿಸಿದೆ. ಪಾಕ್​ ಸುಪ್ರಿಂ ಕೋರ್ಟ್​​ ಆದೇಶಗಳಿಗೆ ಅನುಸಾರವಾಗಿ ಅವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಟಾಪ್ ಸಿಟಿ ವಸತಿ ಯೋಜನೆಯಲ್ಲಿ ಮಾಜಿ ಅಧಿಕಾರಿ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ವಿರುದ್ಧ ಮಾಡಲಾದ ಆರೋಪಗಳ ನಿಖರತೆ ಪತ್ತೆ ಹಚ್ಚಲು ಪಾಕಿಸ್ತಾನ ಸೇನೆಯು ವಿವರ ವಿಚಾರಣೆ ಕೈಗೊಂಡಿದೆ ಎಂದು ಸೇನೆಯ ಮಾಧ್ಯಮ ವಿಭಾಗವಾದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಪರಿಣಾಮವಾಗಿ, ಪಾಕಿಸ್ತಾನ ಸೇನಾ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ವಿರುದ್ಧ ಸೂಕ್ತ ಶಿಸ್ತು ಕ್ರಮ ಪ್ರಾರಂಭಿಸಲಾಗಿದೆ” ಎಂದು ಅದು ಹೇಳಿದೆ.

ನಿವೃತ್ತಿಯ ನಂತರ ಪಾಕಿಸ್ತಾನ ಸೇನಾ ಕಾಯ್ದೆಯ ಉಲ್ಲಂಘನೆಯ ಅನೇಕ ಆರೋಪಗಳು ಅವರ ಮೇಲಿವೆ. ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಮತ್ತು ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ಅವರನ್ನು ಮಿಲಿಟರಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಮುಖ್ಯಸ್ಥರ ವಿರುದ್ಧ ಅಧಿಕಾರ ದುರುಪಯೋಗದ ಆರೋಪದ ಬಗ್ಗೆ ತನಿಖೆ ನಡೆಸಲು ಮಿಲಿಟರಿ ಏಪ್ರಿಲ್ನಲ್ಲಿ ವಿಚಾರಣಾ ಸಮಿತಿಯನ್ನು ರಚಿಸಿದೆ.

ಫೈಜ್ ಹಮೀದ್ ಯಾರು?

ಲೆಫ್ಟಿನೆಂಟ್ ಜನರಲ್ (ನಿವೃತ್ತ) ಹಮೀದ್ ಅವರು ಜೂನ್ 2019 ರಿಂದ ಅಕ್ಟೋಬರ್2021 ರವರೆಗೆ ಗುಪ್ತಚರ ಸಂಸ್ಥೆಯ ಮಹಾನಿರ್ದೇಶಕರಾಗಿ ನೇತೃತ್ವ ವಹಿಸಿದ್ದರು. ಈ ವೇಳೆ ಅವರು ಪ್ರಭಾವಿ ಅಧಿಕಾರಿ ಎಂದು ಪರಿಗಣಿಸಲಾಗಿತ್ತು.

ಹಮೀದ್ ಅವರನ್ನು ಆಗಿನ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಆಪ್ತರೆಂದು ಪರಿಗಣಿಸಲಾಗಿದೆ. ಅವರು ಅವರನ್ನು ಮುಂದಿನ ಪಾಕಿಸ್ತಾನ ಸೇನಾ ಮುಖ್ಯಸ್ಥರನ್ನಾಗಿ ನೇಮಿಸಲು ಬಯಸಿದ್ದರು.

ಹಕ್ಕಾನಿ ನೆಟ್ವರ್ಕ್​​ನ​ ಸಿರಾಜುದ್ದೀನ್ ಹಕ್ಕಾನಿ ಮತ್ತು ಮುಲ್ಲಾ ಯಾಕೂಬ್ ನೇತೃತ್ವದ ತಾಲಿಬಾನ್ ನಡುವಿನ ಸಂಧಾನ ನಡೆಸುವ ಮೂಲಕ ಫೈಜ್ ಹಮೀದ್ ಹೆಸರುವಾಸಿಯಾಗಿದ್ದರು.

ಇದನ್ನೂ ಓದಿ: Hindenburg Report : ಭಾರತೀಯ ಷೇರು ಮಾರುಕಟ್ಟೆಗೆ ಘಾಸಿ ಮಾಡುವ ಸಂಚು ವಿಫಲ; ಠುಸ್​ ಆದ ಹಿಂಡೆನ್​ಬರ್ಗ್ ವರದಿ

ಅವರ ಅಧಿಕಾರಾವಧಿಯಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡಿತ್ತು. ಆಗಸ್ಟ್ 15, 2021 ರಂದು ಯುನೈಟೆಡ್ ಸ್ಟೇಟ್ಸ್ ನಿರ್ಗಮನವನ್ನು ಕಂಡಿತು. ಅವರ ನೇತೃತ್ವದ ಐಎಸ್ಐ ಅಧಿಕಾರವನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ತಾಲಿಬಾನ್​​ಗೆ ಬೆಂಬಲಿಸಿದೆ ಎಂದು ನಂಬಲಾಗಿದೆ.

ತಾಲಿಬಾನ್ ಅಧಿಕಾರ ವಹಿಸಿಕೊಂಡ ಒಂದು ತಿಂಗಳ ನಂತರ ಹಮೀದ್ ಕಾಬೂಲ್​ಗೆ ಭೇಟಿ ನೀಡಿದ್ದರು. ಅಮೆರಿಕ ತೆರಳಿದ ನಂತರ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಿದ್ದರು. ಐಎಸ್ಐನಲ್ಲಿ ಕೆಲಸ ಮಾಡುವ ಮೊದಲು, ಅವರು ರಾವಲ್ಪಿಂಡಿಯ ಜನರಲ್ ಆರ್ಮಿ ಪ್ರಧಾನ ಕಚೇರಿಯಲ್ಲಿ ಅಡ್ಜುಟಂಟ್ ಜನರಲ್ ಆಗಿ ಸೇವೆ ಸಲ್ಲಿಸಿದರು. ನಿವೃತ್ತರಾಗುವ ಮೊದಲು ಪೇಶಾವರ ಮತ್ತು ಬಹವಾಲ್ಪುರ ಘಟಕಗಳಲ್ಲಿ ಕಾರ್ಪ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ.

    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
    Continue Reading
    Click to comment

    Leave a Reply

    Your email address will not be published. Required fields are marked *

    ಪ್ರಮುಖ ಸುದ್ದಿ

    Train Accident : ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲಿನ ಎರಡು ಬೋಗಿ

    Train Accident : ಭಾನುವಾರ, ಉತ್ತರ ಪ್ರದೇಶದ ಸೋನ್ಭದ್ರದ ಶಕ್ತಿನಗರ ಪ್ರದೇಶದಲ್ಲಿ ಗೂಡ್ಸ್ ರೈಲಿನ ಎರಡು ವ್ಯಾಗನ್​ಗಳು ಮತ್ತು ಅದರ ಎಂಜಿನ್ ಹಳಿ ತಪ್ಪಿತ್ತು . ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಈ ರೈಲು ಖಾಡಿಯಾದಲ್ಲಿನ ನಾರ್ದರ್ನ್ ಕೋಲ್​ಫೀಲ್ಡ್ ಲಿಮಿಟೆಡ್ (ಎನ್ಸಿಎಲ್) ನಿಂದ ಅನ್ಪಾರಾ ವಿದ್ಯುತ್ ಸ್ಥಾವರಕ್ಕೆ ಕಲ್ಲಿದ್ದಲನ್ನು ಸಾಗಿಸುತ್ತಿತ್ತು.

    VISTARANEWS.COM


    on

    Koo

    ಬೆಂಗಳೂರು: ಮತ್ತೊಂದು ರೈಲು ದುರ್ಘಟನೆಯಲ್ಲಿ ರಾಣಿ ಕಮಲಾಪತಿ-ಸಹರ್ಸಾ ವಿಶೇಷ ಪ್ಯಾಸೆಂಜರ್ ರೈಲಿನ ಎರಡು ಬೋಗಿಗಳು ಮಧ್ಯಪ್ರದೇಶದಲ್ಲಿ ಸೋಮವಾರ ಸಂಜೆ ಹಳಿ ತಪ್ಪಿವೆ (Train Accident ). ಸಂಜೆ 6:10 ಕ್ಕೆ ರೈಲು ಇಟಾರ್ಸಿ ನಿಲ್ದಾಣವನ್ನು ಪ್ರವೇಶಿಸುತ್ತಿದ್ದಾಗ ಈ ಘಟನೆ ನಡೆದಿದೆ/ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರೈಲು ಪ್ಲಾಟ್ ಫಾರ್ಮ್ ಸಂಖ್ಯೆ 2 ಅನ್ನು ಪ್ರವೇಶಿಸುತ್ತಿದ್ದಾಗ ಅದರ ಎರಡು ಬೋಗಿಗಳು ಹಳಿ ತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಳಿ ತಪ್ಪಿದಾಗ ರೈಲು 5 ಕಿ.ಮೀ.ಗಿಂತ ಕಡಿಮೆ ವೇಗದಲ್ಲಿ ಚಲಿಸುತ್ತಿದ್ದರಿಂದ ಸಂಭವನೀಯ ದುರಂತ ತಪ್ಪಿದೆ. ಅಪಘಾತ ಸಂಭವಿಸಿದ ಎರಡೂವರೆ ಗಂಟೆಗಳ ನಂತರವೂ ರೈಲು ಹೋಶಂಗಾಬಾದ್ ಜಿಲ್ಲೆಯ ಇಟಾರ್ಸಿ ಜಂಕ್ಷನ್ನಲ್ಲಿ ನಿಂತಿತ್ತು.

    ಭಾನುವಾರ, ಉತ್ತರ ಪ್ರದೇಶದ ಸೋನ್ಭದ್ರದ ಶಕ್ತಿನಗರ ಪ್ರದೇಶದಲ್ಲಿ ಗೂಡ್ಸ್ ರೈಲಿನ ಎರಡು ವ್ಯಾಗನ್​ಗಳು ಮತ್ತು ಅದರ ಎಂಜಿನ್ ಹಳಿ ತಪ್ಪಿತ್ತು . ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಈ ರೈಲು ಖಾಡಿಯಾದಲ್ಲಿನ ನಾರ್ದರ್ನ್ ಕೋಲ್​ಫೀಲ್ಡ್ ಲಿಮಿಟೆಡ್ (ಎನ್ಸಿಎಲ್) ನಿಂದ ಅನ್ಪಾರಾ ವಿದ್ಯುತ್ ಸ್ಥಾವರಕ್ಕೆ ಕಲ್ಲಿದ್ದಲನ್ನು ಸಾಗಿಸುತ್ತಿತ್ತು.

    ಆಗಸ್ಟ್ 9 ರಂದು ಉತ್ತರ ಪ್ರದೇಶದ ಅಲಿಗಢದ ಬಳಿ ಕಲ್ಲಿದ್ದಲು ಸೈಡಿಂಗ್​ನಲ್ಲಿ ಸರಕು ರೈಲಿನ ಎರಡು ಖಾಲಿ ವ್ಯಾಗನ್​ಗಳು ಹಳಿ ತಪ್ಪಿದ್ದವು. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಕುಮೇದ್ಪುರ ನಿಲ್ದಾಣದ ಬಳಿ ಸರಕು ರೈಲಿನ ಐದು ವ್ಯಾಗನ್ಗಳು ಹಳಿ ತಪ್ಪಿವೆ. ಬಿಹಾರದ ಕಟಿಹಾರ್ ಜಿಲ್ಲೆಯ ಕುಮೇದ್ಪುರ ಸೇತುವೆ ಬಳಿ ಸರಕು ರೈಲಿನ ಐದು ಟ್ಯಾಂಕ್ ವ್ಯಾಗನ್ಗಳು ಹಳಿ ತಪ್ಪಿವೆ. ಹಳಿ ತಪ್ಪಿದ ಕಾರಣ ಹಳಿಗೆ ಅಡ್ಡಿಯುಂಟಾಗಿದ್ದು, ಸುಗಮ ರೈಲು ಕಾರ್ಯಾಚರಣೆಗಾಗಿ ಮಾರ್ಗಗಳನ್ನು ತೆರವುಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ.

    ಇದನ್ನೂ ಓದಿ: S Jaishankar’s Maldives visit : ಚೀನಾ ವಿರುದ್ಧ ಭಾರತಕ್ಕೆ ರಾಜತಾಂತ್ರಿಕ ಗೆಲುವು, 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟುಕೊಟ್ಟ ಮಾಲ್ಡೀವ್ಸ್​​

    ಆಗಸ್ಟ್ 4 ರಂದು ಸಹರಾನ್ಪುರ ರೈಲ್ವೆ ನಿಲ್ದಾಣದಿಂದ ವಾಷಿಂಗ್ ಶೆಡ್​ಗೆ ಕರೆದೊಯ್ಯುವಾಗ ಖಾಲಿ ಸ್ಥಳೀಯ ರೈಲಿನ ಮೂರು ಬೋಗಿಗಳು ಹಳಿ ತಪ್ಪಿದ್ದವು. ಜುಲೈ 30 ರಂದು ಜಾರ್ಖಂಡ್​​ನ ಚಕ್ರಧರ್ಪುರ ಬಳಿ ಹೌರಾ-ಸಿಎಸ್ಎಂಟಿ ಎಕ್ಸ್​ಪ್ರೆಸ್​​ ಹಲವಾರು ಬೋಗಿಗಳು ಹಳಿ ತಪ್ಪಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದರು. ಆರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಐವರಲ್ಲಿ ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೇ ದಿನ ಒಡಿಶಾದ ಸಂಬಲ್ಪುರ ವಿಭಾಗದ ಯಾರ್ಡ್ನಲ್ಲಿ ಖಾಲಿ ಗೂಡ್ಸ್ ರೈಲಿನ ಒಂದು ಟ್ರಾಲಿ ಹಳಿ ತಪ್ಪಿತ್ತು.

    Continue Reading

    ದೇಶ

    Pralhad Joshi: ಪ್ರತಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನಕ್ಕೆ ಕ್ರಮ; ಪ್ರಲ್ಹಾದ್‌ ಜೋಶಿ

    Pralhad Joshi: ಪಿಎಂ ಸೂರ್ಯ ಘರ್ ಯೋಜನೆಯಡಿ ಪ್ರತಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿರುವ ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ, ಮಾದರಿ ಸೌರ ಗ್ರಾಮ ಅನುಷ್ಠಾನಕ್ಕೆ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ ಕಾರ್ಯಾಚರಣೆ ಮಾರ್ಗಸೂಚಿ ಸಹ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

    VISTARANEWS.COM


    on

    Pralhad Joshi
    Koo

    ನವದೆಹಲಿ: ಪಿಎಂ ಸೂರ್ಯ ಘರ್ ಯೋಜನೆಯಡಿ ಪ್ರತಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ. ಮಾದರಿ ಸೌರ ಗ್ರಾಮ ಅನುಷ್ಠಾನಕ್ಕೆ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ ಕಾರ್ಯಾಚರಣೆ ಮಾರ್ಗಸೂಚಿ ಸಹ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

    ಇದನ್ನೂ ಓದಿ: Tungabhadra Dam: ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರ ಜಲಾಶಯ ನಿರ್ಮಿಸಲು ಬೊಮ್ಮಾಯಿ ಆಗ್ರಹ

    800 ಕೋಟಿ ರೂ. ನಿಗದಿ

    ದೇಶಾದ್ಯಂತ ಪ್ರತಿ ಜಿಲ್ಲೆಗೆ ಒಂದು ಮಾದರಿ ಸೌರ ಗ್ರಾಮವನ್ನು ರಚಿಸಲು ಒತ್ತು ನೀಡಿದ್ದು, ಇದಕ್ಕಾಗಿ ಒಟ್ಟು ರೂ. 800 ಕೋಟಿ ಆರ್ಥಿಕ ವೆಚ್ಚವನ್ನು ನಿಗದಿಪಡಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

    ಮಾದರಿ ಗ್ರಾಮಕ್ಕೆ 1 ಕೋಟಿ ನೆರವು

    ಸೌರ ಮಾದರಿ ಗ್ರಾಮದಲ್ಲಿ ಪ್ರತಿ ಜಿಲ್ಲೆಯ ವಿಜೇತ ಗ್ರಾಮವು ಕೇಂದ್ರದಿಂದ ಹಣಕಾಸು ನೆರವಾಗಿ ರೂ. 1 ಕೋಟಿ ಅನುದಾನ ಪಡೆಯುತ್ತದೆ ಎಂದು ಮಾಹಿತಿ ನೀಡಿರುವ ಸಚಿವ ಪ್ರಲ್ಹಾದ್‌ ಜೋಶಿ, ಸೌರಶಕ್ತಿ ಅಳವಡಿಕೆಯನ್ನು ಉತ್ತೇಜಿಸುವ ಮತ್ತು ಗ್ರಾಮ ಸಮುದಾಯಗಳನ್ನು ಸ್ವಾವಲಂಬಿಯಾಗಿಸುವ ನಿಟ್ಟಿನಲ್ಲಿ ಈ ಹೆಜ್ಜೆ ಇರಿಸಿ ಮಾದರಿ ಸೌರ ಗ್ರಾಮ ರಚಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.

    ಸೌರ ಮೇಲ್ಛಾವಣಿಯ ಸೂರ್ಯ ಘರ್ ಯೋಜನೆ 75,021 ಕೋಟಿ ರೂ. ವೆಚ್ಚವನ್ನು ಹೊಂದಿದ್ದು, 2026-27ರ ಆರ್ಥಿಕ ವರ್ಷದವರೆಗೆ ಅನ್ವಯಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ.

    ಮಾರ್ಗಸೂಚಿ ವಿವರ

    ಮಾದರಿ ಸೌರ ಗ್ರಾಮವೆಂದು ಪರಿಗಣಿಸಲು, ಗ್ರಾಮವು 5,000 (ವಿಶೇಷ ವರ್ಗದ ರಾಜ್ಯಗಳಿಗೆ 2,000) ಜನಸಂಖ್ಯೆಯುಳ್ಳ ಕಂದಾಯ ಗ್ರಾಮವಾಗಿರಬೇಕು.

    ಆಯ್ಕೆ ಪ್ರಕ್ರಿಯೆ ಸ್ಪರ್ಧಾತ್ಮಕವಾಗಿದ್ದು, ಅಲ್ಲಿ ಜಿಲ್ಲಾ ಮಟ್ಟದ ಸಮಿತಿಯು (DLC) ಸಂಭಾವ್ಯ ಅಭ್ಯರ್ಥಿಯ ಘೋಷಣೆಯ ನಂತರ 6 ತಿಂಗಳ ನಂತರ ಸ್ಥಾಪಿಸಲಾದ ಒಟ್ಟಾರೆ ವಿತರಿಸಿದ ನವೀಕರಿಸಬಹುದಾದ ಶಕ್ತಿ (RE) ಸಾಮರ್ಥ್ಯದ ಮೇಲೆ ಗ್ರಾಮಗಳನ್ನು ಮೌಲ್ಯಮಾಪನ ಮಾಡಲಾಗುತ್ತದೆ.

    ಅತಿ ಹೆಚ್ಚು ಆರ್‌ಇ ಸಾಮರ್ಥ್ಯ ಹೊಂದಿರುವ ಪ್ರತಿ ಜಿಲ್ಲೆಯ ವಿಜೇತ ಗ್ರಾಮಕ್ಕೆ ರೂ.1 ಕೋಟಿ ಕೇಂದ್ರ ಹಣಕಾಸು ನೆರವು ಸಿಗಲಿದೆ.

    ಇದನ್ನೂ ಓದಿ: Namma Metro: ಹಸಿರು ಮಾರ್ಗದಲ್ಲಿ ಆ.13ರಿಂದ 15ರವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

    ಈ ಯೋಜನೆಯ ಅನುಷ್ಠಾನವನ್ನು ರಾಜ್ಯ/UT ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಏಜೆನ್ಸಿಯು ಜಿಲ್ಲಾ ಮಟ್ಟದ ಸಮಿತಿಯ (DLC) ಮೇಲ್ವಿಚಾರಣೆಯಲ್ಲಿ ಮಾಡುತ್ತದೆ. ಆಯ್ದ ಗ್ರಾಮಗಳು ಸೌರಶಕ್ತಿ-ಚಾಲಿತ ಸಮುದಾಯಗಳಿಗೆ ಪರಿಣಾಮಕಾರಿಯಾಗಿ ಪರಿವರ್ತನೆಯಾಗುವುದನ್ನು ಖಚಿತಪಡಿಸುತ್ತದೆ ಮತ್ತು ದೇಶದಾದ್ಯಂತ ಇತರ ಹಳ್ಳಿಗಳಿಗೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತದೆ.

    Continue Reading

    ಕರ್ನಾಟಕ

    CM Siddaramaiah: 6000ಕ್ಕೂ ಹೆಚ್ಚು ಗ್ರಂಥಾಲಯ ಮೇಲ್ಚಿಚಾರಕರು ಕನಿಷ್ಠ ವೇತನ ವ್ಯಾಪ್ತಿಗೆ; ಸಿದ್ದರಾಮಯ್ಯ ಮಹತ್ವದ ಘೋಷಣೆ

    CM Siddaramaiah: ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ, ರಾಜ್ಯದಲ್ಲಿ 6599 ಹೊಸ ಗ್ರಾಮ ಗ್ರಂಥಾಲಯ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

    VISTARANEWS.COM


    on

    CM Siddaramaiah
    Koo

    ಬೆಂಗಳೂರು: ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ 6000ಕ್ಕೂ ಹೆಚ್ಚು ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಘೋಷಿಸಿದರು.

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ, ರಾಜ್ಯದಲ್ಲಿ 6599 ಹೊಸ ಗ್ರಾಮ ಗ್ರಂಥಾಲಯ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

    ಪುಸ್ತಕಗಳು ಒಳ್ಳೆಯ ಸ್ನೇಹಿತನಿದ್ದಂತೆ. ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ ಉತ್ತಮ ಹವ್ಯಾಸ. ಗ್ರಾಮಗಳಲ್ಲಿ 6599 ಗ್ರಾಮ‌ಮಟ್ಟದ ಗ್ರಂಥಾಲಯಗಳನ್ಮು ತೆರೆಯುವ ನಿರ್ಧಾರ ಮಾಡಿ ಘೋಷಣೆ ಮಾಡಿದ್ದೇವೆ ಎಂದರು.

    ಜ್ಞಾನ ವಿಕಾಸ ಕೇವಲ ಶಾಲಾ ಶಿಕ್ಷಣದಿಂದ ಮಾತ್ರ ಸಾಧ್ಯವಿಲ್ಲ. ಶಾಲೆಗಳ ಹೊರಗೂ ಕಲಿಕೆ ಅಗತ್ಯ. ಸಾವಿರಾರು ವರ್ಷಗಳ ಕಾಲ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಸಮುದಾಯಗಳಿಗೆ ಅಂಬೇಡ್ಕರ್ ಅವರ ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆಯುವ ಅವಕಾಶ ಸಿಕ್ಕಿದೆ. ನಾವು 78 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ ಬಂದು ಇಷ್ಡು ವರ್ಷಗಳಾದರೂ ನೂರಕ್ಕೆ ನೂರು ಸಾಕ್ಷರತೆ ಸಾಧ್ಯವಾಗಿಲ್ಲ. ಇದನ್ನು ಸಾಧಿಸುವ ದಿಕ್ಕಿನಲ್ಲಿ ನಾವು ಶ್ರಮಿಸಬೇಕಿದೆ ಎಂದರು.

    ಇದನ್ನೂ ಓದಿ: Part Time Lecturers: ಅರೆಕಾಲಿಕ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವಧನದಲ್ಲಿ ಭಾರಿ ಹೆಚ್ಚಳ

    ಮೌಢ್ಯ, ಕಂದಾಚಾರಗಳು ತೊಲಗಬೇಕಾದರೆ ಓದು ಮುಖ್ಯ. ಮೌಢ್ಯದ ಕಾರಣದಿಂದ ಗ್ರಾಮೀಣ ಜನರ ಬದುಕು ಬಹಳ ಹಿಂದುಳಿಯುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಪ್ರತಿಯೊಬ್ಬ ಯುವಕ, ಯುವತಿಯರು ಹಾಗೂ ಮಕ್ಕಳು ಗ್ರಂಥಾಲಯಗಳ ಸದುಪಯೋಗ ಪಡಿಸಿಕೊಂಡು ಜ್ಞಾನಾರ್ಜನೆ ಮಾಡಬೇಕು. ಇದೇ ಅಂಬೇಡ್ಕರ್ ಅವರ ಕನಸಾಗಿತ್ತು ಎಂದು ಸಿಎಂ ತಿಳಿಸಿದರು.

    ಜ್ಞಾನ ಪಡೆಯುವುದು ಎಂದರೆ ಮನುಷ್ಯರಾಗಿ ಬಾಳುವುದು. ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟುತ್ತಾರೆ. ಸಾಮಾಜಿಕ ಪ್ರಭಾವದಿಂದ ಬೆಳೆಯುತ್ತಾ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎಂದು ಕುವೆಂಪು ಅವರು ಹೇಳಿದ್ದಾರೆ. ಆದ್ದರಿಂದ ಬೆಳೆಯುತ್ತಲೂ ನಾವು ವಿಶ್ವ ಮಾನವರಾಗಿ ಉಳಿಯುವಂತಹ ಪ್ರಯತ್ನ ಮಾಡಬೇಕು. ಆಗ ಮಾತ್ರ ಮಾನವನ ಹುಟ್ಟು ಸಾರ್ಥಕ ಆಗುತ್ತದೆ ಎಂದರು.

    ಓದುವ ಹವ್ಯಾಸ ಬೆಳೆಸುವ ಉದ್ದೇಶದಿಂದಲೇ ಗ್ರಾಮ ಮಟ್ಟದಲ್ಲೂ ಉತ್ತಮ ಗ್ರಂಥಾಲಯಗಳನ್ನು ಆರಂಭಿಸುತ್ತಿದೆ ಎಂದು ತಿಳಿಸಿದ ಅವರು, ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

    ಇದನ್ನೂ ಓದಿ: Government Employees Sports: ಆ.17ರಿಂದ 19ರವರೆಗೆ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

    ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ‌ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.

    Continue Reading

    ಪ್ರಮುಖ ಸುದ್ದಿ

    S Jaishankar’s Maldives visit : ಚೀನಾ ವಿರುದ್ಧ ಭಾರತಕ್ಕೆ ರಾಜತಾಂತ್ರಿಕ ಗೆಲುವು, 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟುಕೊಟ್ಟ ಮಾಲ್ಡೀವ್ಸ್​​

    S Jaishankar’s Maldives visit : ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದಾಗ ಮಾಲ್ಡೀವ್ಸ್​ ಗೊಂದಲಕ್ಕೆ ಬಿದ್ದು ತಪ್ಪು ಮಾಡಿತ್ತು. ಅಲ್ಲಿನ ರಾಜಕಾರಣಿಗಳು ಭಾರತ ವಿರೋಧಿ ಹೇಳಿಕೆ ನೀಡುವ ಮೂಲಕ ಭಾರತೀಯರ ಕೆಂಗಣ್ಣಿಗೆ ಗುರಿಯಾದರು. ಹೀಗಾಗಿ ಅಲ್ಲಿಗೆ ಹೋಗುವ ಭಾರತೀಯ ಪ್ರವಾಸಿಗರ ಸಂಖ್ಯೆ ಇಳಿಯಿತು. ಹೀಗಾಗಿ ಆ ದೇಶಕ್ಕೆ ಚೀನಾದ ನೆರವು ಅಗತ್ಯವಾಯಿತು. ಆದರೆ, ಇದೀಗ ಪರಿಸ್ಥಿತಿ ಬದಲಾಗಿದೆ. ದ್ವೀಪ ರಾಷ್ಟ್ರವು ತನ್ನ ಭಾರತದೊಂದಿಗೆ ಶಾಂತಿ ಸ್ಥಾಪಿಸಲು ಸಿದ್ಧವಾಗಿದೆ.

    VISTARANEWS.COM


    on

    S Jaishankar's Maldives visit
    Koo

    ಬೆಂಗಳೂರು : ಭಾರತ ವಿರುದ್ಧ ಮಾಲ್ಡೀವ್ಸ್​ ಹೊಂದಿರುವ ಅಸಮಾಧಾನವನ್ನು ತಮ್ಮ ಪರ ಬಳಸಿಕೊಳ್ಳಲು ಯತ್ನಿಸುತ್ತಿದ್ದ ಚೀನಾಕ್ಕೆ ಹಿನ್ನಡೆಯಾಗಿದೆ. ದ್ವೀಪಗಳ ರಾಷ್ಟ್ರ ಮಾಲ್ಡೀವ್ಸ್​​ ತನ್ನ 28 ದ್ವೀಪಗಳ ಅಭಿವೃದ್ಧಿ ಕಾರ್ಯವನ್ನು ಭಾರತಕ್ಕೆ ವಹಿಸಿ ಕೊಡಲು ತೀರ್ಮಾನಿಸಿರುವುದಾಗಿ ಇತ್ತೀಚಿನ ವರದಿ ತಿಳಿಸಿದೆ. ಇದು ವಿದೇಶಾಂಗ ಸಚಿವ ಎಸ್​. ಜೈಶಂಕರ್ ಅವರ ಭೇಟಿಯ (S Jaishankar’s Maldives visit) ಫಲವೂ ಹೌದು. ಅಂತೆಯೇ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ದೊಡ್ಡ ಮಟ್ಟದ ರಾಜತಾಂತ್ರಿಕ ಗೆಲುವಾಗಿದೆ.

    ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದಾಗ ಮಾಲ್ಡೀವ್ಸ್​ ಗೊಂದಲಕ್ಕೆ ಬಿದ್ದು ತಪ್ಪು ಮಾಡಿತ್ತು. ಅಲ್ಲಿನ ರಾಜಕಾರಣಿಗಳು ಭಾರತ ವಿರೋಧಿ ಹೇಳಿಕೆ ನೀಡುವ ಮೂಲಕ ಭಾರತೀಯರ ಕೆಂಗಣ್ಣಿಗೆ ಗುರಿಯಾದರು. ಹೀಗಾಗಿ ಅಲ್ಲಿಗೆ ಹೋಗುವ ಭಾರತೀಯ ಪ್ರವಾಸಿಗರ ಸಂಖ್ಯೆ ಇಳಿಯಿತು. ಹೀಗಾಗಿ ಆ ದೇಶಕ್ಕೆ ಚೀನಾದ ನೆರವು ಅಗತ್ಯವಾಯಿತು. ಆದರೆ, ಇದೀಗ ಪರಿಸ್ಥಿತಿ ಬದಲಾಗಿದೆ. ದ್ವೀಪ ರಾಷ್ಟ್ರವು ತನ್ನ ಭಾರತದೊಂದಿಗೆ ಶಾಂತಿ ಸ್ಥಾಪಿಸಲು ಸಿದ್ಧವಾಗಿದೆ.

    ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರು ಭಾನುವಾರ ಮಾಲ್ಡೀವ್ಸ್ ಭೇಟಿ ಮುಕ್ತಾಯಗೊಳಿಸಿದ್ದರು. ರಾಜಧಾನಿ ಮಾಲೆಯಲ್ಲಿದ್ದಾಗ ಜೈಶಂಕರ್ ಹಲವಾರು ಒಡಂಬಡಿಕೆಗಳಿಗೆ ಸಹಿ ಹಾಕಿದ್ದರು. ಅಧಿಕ ಪರಿಣಾಮ ಬೀರುವ ಸಮುದಾಯ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದರು. ಭಾರತದಲ್ಲಿ ಹೆಚ್ಚುವರಿ 1,000 ಮಾಲ್ಡೀವ್ಸ್ ನಾಗರಿಕ ಸೇವಕರ ಸಾಮರ್ಥ್ಯ ವರ್ಧನೆ ಮತ್ತು ಮಾಲ್ಡೀವ್ಸ್ ನಲ್ಲಿ ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಪರಿಚಯಿಸುವ ಒಪ್ಪಂದಗಳು ನಡೆಯಿತು.

    ಭಾರತಕ್ಕೆ 28 ದ್ವೀಪಗಳ ಅಭಿವೃದ್ಧಿ ಭಾರತಕ್ಕೆ

    ಮಾಲ್ಡೀವ್ಸ್​​ 28 ದ್ವೀಪಗಳಲ್ಲಿ ನೀರು ಮತ್ತು ಒಳಚರಂಡಿ ವ್ಯವಸ್ಥೇ ಭಾರತದ ಲೈನ್ ಆಫ್ ಕ್ರೆಡಿಟ್ (ಎಲ್ಒಸಿ) ನೆರವಿನ ಯೋಜನೆಯನ್ನು ಅಧ್ಯಕ್ಷ ಮುಯಿಝು ಅವರ ಸಮ್ಮುಖದಲ್ಲಿ ವಿದೇಶಾಂಗ ಸಚಿವ ಜೈಶಂಕರ್ ಮತ್ತು ವಿದೇಶಾಂಗ ಸಚಿವರು ಜಂಟಿಯಾಗಿ ಉದ್ಘಾಟಿಸಿದರು. ಮುಯಿಝು ಈಗ 28 ದ್ವೀಪಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಭಾರತಕ್ಕೆ ಅನುಮತಿ ನೀಡಿದ್ದಾರೆ.

    ಇದನ್ನೂ ಓದಿ: Faiz Hameed : ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​​ಐನ ಮಾಜಿ ಮುಖ್ಯಸ್ಥ ಫೈಜ್ ಹಮೀದ್ ಬಂಧನ

    ಮಾಲ್ಡೀವ್ಸ್ ಗೆ ಬಜೆಟ್ ನೆರವು

    ಜುಲೈ 23 ರಂದು ಮಂಡಿಸಲಾದ ಕೇಂದ್ರ ಬಜೆಟ್ 2024 ಹಿಂದಿನ ವರ್ಷಕ್ಕೆ ಹೋಲಿಸಿದರೆ 2024-25ರ ಆರ್ಥಿಕ ವರ್ಷದಲ್ಲಿ ದ್ವೀಪ ರಾಷ್ಟ್ರಕ್ಕೆ ಸಹಾಯದಲ್ಲಿ ಶೇಕಡಾ 48ರಷ್ಟು ಗಮನಾರ್ಹ ಕಡಿತ ಮಾಡಲಾಗಿತ್ತು. ಪ್ರಸಕ್ತ ಹಣಕಾಸು ವರ್ಷದಲ್ಲಿ ಮಾಲ್ಡೀವ್ಸ್​ಗೆ 400 ಕೋಟಿ ರೂ.ಗಳನ್ನು “ಅನುದಾನ” ಎಂದು ನಿಗದಿಪಡಿಸಲಾಗಿದೆ. ಇದು ಕಳೆದ ವರ್ಷ ಒದಗಿಸಲಾದ 770 ಕೋಟಿ ರೂ.ಗಿಂತ ಗಣನೀಯ ಇಳಿಕೆ.

    ಭಾರತವನ್ನು ಹೊಗಳಿದ ಮುಯಿಝು

    ಮಾಲ್ಡೀವ್ಸ್​ ಅಧ್ಯಕ್ಷ ಮುಹಮ್ಮದ್ ಮುಯಿಝು ಅವರು ಭಾರತದ ನಿರಂತರ ಅಭಿವೃದ್ಧಿ ನೆರವನ್ನು ಶ್ಲಾಘಿಸಿದ್ದಾರೆ. ಭಾರತ-ಮಾಲ್ಡೀವ್ಸ್ ಸಂಬಂಧವನ್ನು ಮತ್ತಷ್ಟು ಆಳಗೊಳಿಸುವ ಬದ್ಧತೆ ಪುನರುಚ್ಚರಿಸಿದ್ದಾರೆ. ಜೈಶಂಕರ್ ಅವರ ಭೇಟಿಯ ಸಮಯದಲ್ಲಿ, ಮಾಲ್ಡೀವ್ಸ್ ಕಡೆಯವರು ಸಾಮಾಜಿಕ, ಮೂಲಸೌಕರ್ಯ ಮತ್ತು ಹಣಕಾಸು ಕ್ಷೇತ್ರಗಳು ಸೇರಿದಂತೆ ಮಾಲ್ಡೀವ್ಸ್​ ನೀಡಲಾಗಿರುವ ಒಟ್ಟಾರೆ ಅಭಿವೃದ್ಧಿಗೆ ಭಾರತದ ಬೆಂಬಲವನ್ನು ಕೊಂಡಾಡಿದ್ದಾರೆ.

    Continue Reading
    Advertisement
    ಪ್ರಮುಖ ಸುದ್ದಿ31 mins ago

    Train Accident : ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲಿನ ಎರಡು ಬೋಗಿ

    Pralhad Joshi
    ದೇಶ46 mins ago

    Pralhad Joshi: ಪ್ರತಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನಕ್ಕೆ ಕ್ರಮ; ಪ್ರಲ್ಹಾದ್‌ ಜೋಶಿ

    CM Siddaramaiah
    ಕರ್ನಾಟಕ48 mins ago

    CM Siddaramaiah: 6000ಕ್ಕೂ ಹೆಚ್ಚು ಗ್ರಂಥಾಲಯ ಮೇಲ್ಚಿಚಾರಕರು ಕನಿಷ್ಠ ವೇತನ ವ್ಯಾಪ್ತಿಗೆ; ಸಿದ್ದರಾಮಯ್ಯ ಮಹತ್ವದ ಘೋಷಣೆ

    Independence day speech in Kannada
    ದೇಶ53 mins ago

    Independence day speech in Kannada: ವಿದ್ಯಾರ್ಥಿಗಳಿಗಾಗಿ ಇಲ್ಲಿದೆ ಸ್ವಾತಂತ್ರ್ಯ ದಿನಾಚರಣೆಯ ಸಿದ್ಧ ಭಾಷಣ!

    S Jaishankar's Maldives visit
    ಪ್ರಮುಖ ಸುದ್ದಿ53 mins ago

    S Jaishankar’s Maldives visit : ಚೀನಾ ವಿರುದ್ಧ ಭಾರತಕ್ಕೆ ರಾಜತಾಂತ್ರಿಕ ಗೆಲುವು, 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟುಕೊಟ್ಟ ಮಾಲ್ಡೀವ್ಸ್​​

    Manu Bhaker
    ಕ್ರೀಡೆ1 hour ago

    Manu Bhaker : ಮದುವೆಯಾಗ್ತೀರಾ ಹೇಗೆ? ನೀರಜ್​ ಚೋಪ್ರಾ- ಮನು ಭಾಕರ್​ ಭೇಟಿಯ ವಿಡಿಯೊ ವೈರಲ್ ಮಾಡಿದ ನೆಟ್ಟಿಗರು

    Namma Metro
    ನೋಟಿಸ್ ಬೋರ್ಡ್1 hour ago

    Namma Metro: ಹಸಿರು ಮಾರ್ಗದಲ್ಲಿ ಆ.13ರಿಂದ 15ರವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

    Lakshmi Hebbalkar
    ಕರ್ನಾಟಕ2 hours ago

    Lakshmi Hebbalkar: ಹಾಲಕೆರೆ ಮಠದ ಬೆಳ್ಳಿ ರಥೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

    NIRF 2024 Rank
    ಶಿಕ್ಷಣ2 hours ago

    NIRF 2024 Rank: ದೇಶದ ಟಾಪ್‌ 10 ಮೆಡಿಕಲ್‌ ಕಾಲೇಜುಗಳಲ್ಲಿ ನಿಮ್ಹಾನ್ಸ್‌ ನಂ.4; ಫಾರ್ಮಸಿಯಲ್ಲಿ ರಾಜ್ಯದ 2 ಕಾಲೇಜುಗಳಿಗೆ ಸ್ಥಾನ

    Paris Olympics 2024
    ಪ್ರಮುಖ ಸುದ್ದಿ2 hours ago

    Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಸಿಕ್ಕಿದ ಕೋಟಿಗಟ್ಟಲೆ ಬಹುಮಾನಗಳ ವಿವರ ಇಲ್ಲಿದೆ

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ10 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ11 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    galipata neetu
    ಕಿರುತೆರೆ9 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ9 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    karnataka Weather Forecast
    ಮಳೆ4 days ago

    Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

    Bellary news
    ಬಳ್ಳಾರಿ4 days ago

    Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

    Maravoor bridge in danger Vehicular traffic suspended
    ದಕ್ಷಿಣ ಕನ್ನಡ4 days ago

    Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

    Wild Animals Attack
    ಚಿಕ್ಕಮಗಳೂರು6 days ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ6 days ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ1 week ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    karnataka rain
    ಮಳೆ1 week ago

    Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    karnataka Rain
    ಮಳೆ2 weeks ago

    Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

    Karnataka Rain
    ಮಳೆ2 weeks ago

    Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

    karnataka Rain
    ಮಳೆ2 weeks ago

    Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

    ಟ್ರೆಂಡಿಂಗ್‌