ವಿಸ್ತಾರ ಸಂಪಾದಕೀಯ: ಮಹಿಳಾ ಪ್ರೀಮಿಯರ್‌ ಲೀಗ್‌ ಆಟಗಾರ್ತಿಯರಿಗೆ ಧನಬಲ! - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಮಹಿಳಾ ಪ್ರೀಮಿಯರ್‌ ಲೀಗ್‌ ಆಟಗಾರ್ತಿಯರಿಗೆ ಧನಬಲ!

ಡಬ್ಲ್ಯುಪಿಎಲ್‌ (WPL 2023) ಭಾರತೀಯ ಕ್ರಿಕೆಟ್‌ ಇತಿಹಾಸದಲ್ಲಿ ಒಂದು ದಿಟ್ಟ ಹೆಜ್ಜೆಯೇ ಸರಿ. ಇದು ಹೊಸದೊಂದು ಉದ್ಯಮದ ಸೃಷ್ಟಿಗೂ ಮೂಲ. ಮಹಿಳಾ ಕ್ರಿಕೆಟರ್‌ಗಳ ಸ್ವಾಭಿಮಾನ- ಸಮಾನತೆ ಆಶಯಕ್ಕೂ ಉತ್ತೇಜನ. ಹೀಗಾಗಿ ಇಂಥ ಉಪಕ್ರಮಗಳನ್ನು ಸ್ವಾಗತಿಸೋಣ.

VISTARANEWS.COM


on

WPL
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಹಿಳಾ ಪ್ರೀಮಿಯರ್‌ ಲೀಗ್‌ನ (ಡಬ್ಲ್ಯುಪಿಎಲ್‌) ಮೊದಲ ಆವೃತ್ತಿಯ ಪಂದ್ಯಾಟಗಳು ಮಾರ್ಚ್‌ 4ರಿಂದ 24ರವರೆಗೆ ಮುಂಬೈಯಲ್ಲಿ ನಡೆಯಲಿವೆ. ಈ ಪಂದ್ಯಾಟದ ಕಾವು ಹೆಚ್ಚಾಗುತ್ತಿದ್ದು, ಇದಕ್ಕೆ ಹಿನ್ನೆಲೆಯಾಗಿ ಮುಂಬೈಯಲ್ಲಿ ಬಿಸಿಸಿಐ ಆಯೋಜಿಸಿದ್ದ ಆಟಗಾರ್ತಿಯರ (WPL 2023) ಹರಾಜು ಪ್ರಕ್ರಿಯೆ ಅದ್ಧೂರಿಯಾಗಿ ನಡೆದಿದೆ. ಮಹತ್ವಾಕಾಂಕ್ಷೆಯ ಮಹಿಳಾ ಐಪಿಎಲ್‌ ಟೂರ್ನಿಯ ಮೊದಲ ಆವೃತ್ತಿಯಲ್ಲಿ ಐದು ತಂಡಗಳು ಟ್ರೋಫಿಗಾಗಿ ಸೆಣಸಲಿವೆ. ಹರಾಜು ಪಟ್ಟಿಯಲ್ಲಿ ಒಟ್ಟಾರೆ 409 ಆಟಗಾರ್ತಿಯರ ಹೆಸರಿದ್ದುದು ಈ ಕ್ಷೇತ್ರದಲ್ಲಿ ಹರಿಯುತ್ತಿರುವ ಪ್ರತಿಭೆಯ ಮಹಾಪೂರಕ್ಕೆ ಒಂದು ನಿದರ್ಶನ. ಇದರಲ್ಲಿ 87 ಆಟಗಾರ್ತಿಯರು ವಿವಿಧ ತಂಡಗಳಲ್ಲಿ ಸ್ಥಾನ ಗಿಟ್ಟಿಸಲು ಯಶಸ್ವಿಯಾಗಿದ್ದಾರೆ. ಹರಾಜಿಗೆ ಕಿಚ್ಚು ಹಚ್ಚಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಸ್ಟಾರ್‌ ಓಪನರ್‌ ಸ್ಮೃತಿ ಮಂಧಾನಾ ಅವರನ್ನು ಬರೋಬ್ಬರಿ 3.4 ಕೋಟಿ ರೂ.ಗಳ ಭಾರಿ ಬೆಲೆಯೊಂದಿಗೆ ಖರೀದಿಸಿದೆ. ಅವರು ಆರ್‌ಸಿಬಿ ತಂಡದ ಕ್ಯಾಪ್ಟನ್‌ ಆಗಿ ಕೂಡ ಹೊರಹೊಮ್ಮಿದ್ದಾರೆ. ಆಶ್ಲೇ ಗಾರ್ಡನರ್‌ (3.2 ಕೋಟಿ ರೂ.), ನತಾಲೀ ಸಿವರ್‌ (3.2 ಕೋಟಿ ರೂ.), ದೀಪ್ತಿ ಶರ್ಮಾ (2.6 ಕೋಟಿ ರೂ.), ಜೆಮಿಮಾ ರೋಡ್ರಿಗಸ್‌ (2.2 ಕೋಟಿ ರೂ.) ಮುಂತಾದವರೂ ಗಣನೀಯ ಮೊತ್ತ ಪಡೆದಿದ್ದಾರೆ.

ಡಬ್ಲ್ಯುಪಿಎಲ್‌ ಭಾರತೀಯ ಕ್ರಿಕೆಟ್‌ ಇತಿಹಾಸದಲ್ಲಿ ಒಂದು ದಿಟ್ಟ ಹೆಜ್ಜೆಯೇ ಸರಿ. ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ದೇಶದಲ್ಲಿ ಮಹಿಳಾ ಕ್ರಿಕೆಟ್‌ ಅಭಿವೃದ್ಧಿಯನ್ನು ಗಂಭೀರವಾಗಿಯೇ ತೆಗೆದುಕೊಂಡಿದೆ ಎಂಬುದಕ್ಕೆ ಇದು ನಿದರ್ಶನ. ಹಲವು ವರ್ಷಗಳಿಂದ ನನೆಗುದಿಯಲ್ಲಿದ್ದ ಡಬ್ಲ್ಯುಪಿಎಲ್‌ ಈ ಬಾರಿ ನನಸಾಗುತ್ತಿದೆ. ಕ್ರಿಕೆಟ್‌ ಎಂಬುದೇ ಒಂದು ಕಾಲದಲ್ಲಿ ಪುರುಷರ, ಅದರಲ್ಲೂ ಶ್ವೇತವರ್ಣೀಯರ ಆಟವಾಗಿತ್ತು. ಅದರಲ್ಲಿ ಬಳಿಕ ಭಾರತೀಯರು ಪಾರಮ್ಯ ಸಾಧಿಸಿದ್ದಾರೆ. ಇಲ್ಲೂ ಅದು ಪುರುಷರ ಆಟವಾಗಿತ್ತು. ನಿಧಾನವಾಗಿ ಮಹಿಳೆಯರು ಅಲ್ಲೂ ತಮ್ಮ ಛಾಪು ತೋರಿಸಿದರು. ನಂತರ ಟಿ-ಟ್ವೆಂಟಿ ಬಂತು. ಸ್ತ್ರೀಯರು ಅಲ್ಲೂ ಸಮಾನತೆ ಸಾಧಿಸಿದರು. ಇದೀಗ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಕೂಡ ಮಹಿಳೆಯರ ಪಾಲಿಗೆ ಬಂದಿದೆ. ಪುರುಷ ಕ್ರಿಕೆಟ್‌ಗೆ ಯಾವುದರಲ್ಲೂ ಮಹಿಳಾ ಕ್ರಿಕೆಟ್‌ ಕಡಿಮೆಯಿಲ್ಲ ಎಂಬುದನ್ನು ಖಚಿತಪಡಿಸಲು ಇದು ಇನ್ನೊಂದು ಸಾಕ್ಷ್ಯ. ಇದರಲ್ಲಿ ಇರುವ ಹಣಕಾಸಿನ ಪ್ರಮಾಣವೂ ಹೀಗಾಗಲು ಒಂದು ಕಾರಣ ಎಂಬುದು ನಿಜವೇ ಆದರೂ, ಎಲ್ಲ ಕ್ರೀಡೆಗಳಂತೆ ಸ್ತ್ರೀಯರೂ ಇಲ್ಲಿ ತಮ್ಮ ಗುರುತು ಮೂಡಿಸುತ್ತಿದ್ದಾರೆ, ಹೊಸ ಪ್ರತಿಭೆಗಳ ಆಗಮನವಾಗುತ್ತಿದೆ ಎಂಬುದು ಮುಖ್ಯ.

ಕ್ರೀಡೆ ಒಂದು ರೀತಿಯಲ್ಲಿ ಸಮಾನತೆ ಸಾಧಿಸುವ, ಸಾಮಾಜಿಕ ನ್ಯಾಯ ಮೆರೆಯುವ ಕ್ಷೇತ್ರ. ಇಲ್ಲಿ ದೈಹಿಕ ಚಾಕಚಕ್ಯತೆ, ಕೌಶಲ್ಯ, ಪ್ರತಿಭೆಗಳಿಗೇ ಮಣೆ. ಬೇರೆ ಯಾವ ವಶೀಲಿಬಾಜಿಗಳೂ ಇಲ್ಲಿ ನಡೆಯುವುದಿಲ್ಲ. ಅದಕ್ಕೆ ತಕ್ಕಂತೆ ಅವಕಾಶಗಳೂ ಸೃಷ್ಟಿಯಾಗಬೇಕು. ಹೀಗಾಗಿಯೇ ಕಳೆದ ಒಂದು ದಶಕದಲ್ಲಿ ಇಲ್ಲಿ ಮಿಥಾಲಿ ರಾಜ್‌, ಸ್ಮೃತಿ ಮಂಧಾನಾ ಅವರಂಥ ಅದ್ಭುತ ಪ್ರತಿಭೆಗಳು ಬರಲು ಸಾಧ್ಯವಾಯಿತು. ಇವರ ಆಟವನ್ನು ನೋಡುತ್ತ ನೋಡುತ್ತಾ ಇನ್ನೊಂಷ್ಟು ಆಟಗಾರ್ತಿಯರು ಸೃಷ್ಟಿಯಾದರು, ಆಗುತ್ತಿದ್ದಾರೆ. ಈ ಹಿಂದೆ ಬ್ಯಾಡ್ಮಿಂಟನ್‌ ಮತ್ತು ಟೆನ್ನಿಸ್‌ ಕ್ಷೇತ್ರಗಳೂ ಇದೇ ಮಾದರಿಯಲ್ಲಿ ಭಾರತದಲ್ಲಿ ಮರುಹುಟ್ಟು ಪಡೆದುದನ್ನು ನಾವು ಗಮನಿಸಬಹುದು. ಸಾಕಷ್ಟು ಹಿಂದಿನಿಂದಲೇ ಇಲ್ಲಿ ಮಹಿಳೆಯರು ಆಡುತ್ತಿದ್ದರೂ, ಕೆಲವು ಮಹಾನ್‌ ಪ್ರತಿಭೆಗಳ ಆಗಮನ ಆಗುವವರೆಗೂ ಇದು ಬೇರು ಮಟ್ಟದಲ್ಲಿ ಜನಪ್ರಿಯವಾಗಿರಲಿಲ್ಲ. ಟೆನ್ನಿಸ್‌ ಕ್ಷೇತ್ರದಲ್ಲಿ ಒಬ್ಬ ಸಾನಿಯಾ ಮಿರ್ಜಾ, ಬ್ಯಾಡ್ಮಿಂಟನ್‌ನಲ್ಲಿ ಪಿ.ವಿ.ಸಿಂಧು ಮುಂತಾದ ಆಟಗಾರರು ಸೃಷ್ಟಿಸಿದ ಸಂಚಲನ ದೊಡ್ಡದು. ಇವರಿಂದ ಸ್ಫೂರ್ತಿ ಪಡೆದ ಅನೇಕ ಹೊಸ ಆಟಗಾರ್ತಿಯರು ಇಂದು ಒಲಿಂಪಿಕ್ಸ್‌, ಏಷ್ಯಾಡ್‌ ಮುಂತಾದ ಕಡೆ ಭಾಗವಹಿಸಿ ಪದಕಗಳನ್ನು ಗೆಲ್ಲುವುದು ಸಾಧ್ಯವಾಗುತ್ತಿದೆ.

ಸಂಪಾದಕೀಯ : ವಿಸ್ತಾರ ಸಂಪಾದಕೀಯ: ಸರ್ವಸ್ಪರ್ಶಿ ಬಜೆಟ್; ಆದರೆ ಯೋಜನೆ ಜಾರಿಯೇ ಸವಾಲು

ಹಾಗೆಯೇ ಇಂಥ ಪ್ರತಿಭೆಗಳು ತಳಮಟ್ಟದಿಂದ ಮೇಲೆ ಆಗಮಿಸಲು ಅವಕಾಶಗಳ ಸೃಷ್ಟಿಯಾಗುವುದು ಅತಿಮುಖ್ಯ. ಟೆನ್ನಿಸ್‌, ಬ್ಯಾಡ್ಮಿಂಟನ್‌ ಕ್ಷೇತ್ರದಲ್ಲಿ ದೇಶದಲ್ಲಿ ಸೄಷ್ಟಿಯಾದ ವ್ಯಾಪಕ ಪಂದ್ಯಾಟಗಳು, ಕೋಚಿಂಗ್‌ ನೆಲೆಗಳು ಆಯಾ ಆಟಗಳಲ್ಲಿ ಹೊಸ ಪ್ರತಿಭೆಗಳು ಆಗಮಿಸಲು, ಪಾರಮ್ಯ ಸಾಧಿಸಲು ಸಾಧ್ಯ ಮಾಡಿದವು. ಹಾಗೆಯೇ ಟಿ- ಟ್ವೆಂಟಿ ಪಂದ್ಯಾಟಗಳಲ್ಲಿ ಇನ್ನಷ್ಟು ಸಾಧಕಿಯರು ಹುಟ್ಟಿಕೊಳ್ಳಲು, ತಮ್ಮ ಪರಾಕ್ರಮ ಮೆರೆಯಲು ಡಬ್ಲ್ಯುಪಿಎಲ್‌ ಕಾರಣವಾಗಬಹುದು. ಹಾಗೆಯೇ ಇದು ಹೊಸದೊಂದು ಉದ್ಯಮದ ಸೃಷ್ಟಿಗೂ ಮೂಲ. ಮಹಿಳಾ ಕ್ರಿಕೆಟರ್‌ಗಳ ಸ್ವಾಭಿಮಾನ- ಸಮಾನತೆ ಆಶಯಕ್ಕೂ ಉತ್ತೇಜನ. ಹೀಗಾಗಿ ಇಂಥ ಉಪಕ್ರಮಗಳನ್ನು ಸ್ವಾಗತಿಸೋಣ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Drown in Mekedatu: ಮೇಕೆದಾಟು ಬಳಿ ಈಜಲು ಹೋಗಿದ್ದ ಐವರು ಪ್ರವಾಸಿಗರ ಸಾವು

Drown in Mekedatu: ಮೇಕೆದಾಟು ಬಳಿ ನೀರಲ್ಲಿ ಈಜಲು ಹೋಗಿದ್ದ ಬೆಂಗಳೂರು ಮೂಲದ ಮೂವರು ಯುವಕರು, ಇಬ್ಬರು ಯುವತಿಯರು ನೀರುಪಾಲಾಗಿದ್ದಾರೆ.

VISTARANEWS.COM


on

Drown in Mekedatu
Koo

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟು ಬಳಿ ಈಜಲು ಹೋಗಿದ್ದ ಐವರು ಪ್ರವಾಸಿಗರು ದಾರುಣವಾಗಿ ಮೃತಪಟ್ಟಿರುವ ಘಟನೆ (Drown in Mekedatu) ಸೋಮವಾರ ನಡೆದಿದೆ. ಬೆಂಗಳೂರು ಮೂಲದ ಮೂವರು ಯುವಕರು, ಇಬ್ಬರು ಯುವತಿಯರು ನೀರಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ.

5 ಜನರ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರಕ್ಕೆ ತೆಗೆದಿದ್ದಾರೆ. ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಅರಣ್ಯಾಧಿಗಳು ಹಾಗೂ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗಳು ಸಾವು

ಕೋಲಾರ: ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಗ್ರಾಮದ ವೃಷಭಾವತಿ ಕರೆಯಲ್ಲಿ ನಡೆದಿದೆ. ಮಜರಾಗೊಲ್ಲಹಳ್ಳಿ ಗ್ರಾಮದಲ್ಲಿ ಮದುವೆ ಕಾರ್ಯಕ್ರಮಕ್ಕೆಂದು ಬಂದಿದ್ದ ತಂದೆ-ಮಗಳು, ಕೆರೆ ಬಳಿ ಸೆಲ್ಫಿ ತೆಗದುಕೊಳ್ಳಲು ಹೋದಾಗ, ಮಗಳು ಕಾಲು ಜಾರಿ ನೀರಗೆ ಬಿದ್ದಿದ್ದಾಳೆ. ಹೀಗಾಗಿ ಮಗಳನ್ನು ರಕ್ಷಿಸಲು ಹೋದ ತಂದೆಯೂ ಮುಳುಗಿದ್ದಾರೆ

ಬೆಂಗಳೂರು ಮೂಲದ ಸಯ್ಯದ್ ಅಯ್ಯೂಬ್ (35) ಹಾಗೂ ಫಾತಿಮಾ (10) ಮೃತ ತಂದೆ, ಮಗಳು. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ | Physical Abuse: ಮದುವೆಗೊಪ್ಪದ ಬಾಲಕಿಯ ಅತ್ಯಾಚಾರ; ಕೆನ್ನೆಯ ಮೇಲೆ ಬಿಸಿ ಕಬ್ಬಿಣದಿಂದ ಪಾಗಲ್‌ ಪ್ರೇಮಿ ಹೆಸರು!

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

ಹುಬ್ಬಳ್ಳಿ: ನೇಹಾ ಹಿರೇಮಠ್‌ ಹತ್ಯೆ ಪ್ರಕರಣದ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ (Love Jihad Case) ಬೆಳಕಿಗೆ ಬಂದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕರೆತಂದಿದ್ದ ಅನ್ಯಕೋಮಿನ ಯುವಕನಿಗೆ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ | Jatra Rathotsava: ಇಂಡಿಯ ಕಮರಿಮಠದ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ದುರ್ಮರಣ; ಮತ್ತೊಬ್ಬ ಗಂಭೀರ

ಹುಬ್ಬಳ್ಳಿಯ ಗಬ್ಬೂರನಲ್ಲಿ ಅನ್ಯಕೋಮಿನ ಯುವಕನ ಜತೆ ಬಾಲಕಿ ಇದ್ದಳು. ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಬಾಲಕಿಯನ್ನು ಯುವಕ ಕರೆತಂದಿದ್ದ. ಗಬ್ಬೂರ ಹೋಟೆಲ್‌ನಲ್ಲಿ ಇದ್ದವನನ್ನು ಗಮನಿಸಿ ಸ್ಥಳೀಯರು ಪೊಲೀಸ್ ಸ್ಟೇಷನ್‌ಗೆ ಕರೆದೊಯ್ದಿದ್ದಾರೆ. ಈ ವೇಳೆ ಹಿಂದು ಜಾಗರಣಾ ವೇದಿಕೆ ಮುಖಂಡರು, ಯುವಕನಿಗೆ ಥಳಿಸಿ, ಹುಬ್ಬಳ್ಳಿಯ ಬೇಂಡಿಗೇರಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಅಪ್ರಾಪ್ತ ಬಾಲಕಿ ಕಾಣೆಯಾಗಿರುವ ಕುರಿತು ಕೇಸ್ ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

ಕ್ರೀಡೆ

T20 World Cup 2024: ವಿಶ್ವಕಪ್​ಗೆ ಪಂತ್​ ಮೊದಲ ಆಯ್ಕೆಯ ಕೀಪರ್​​ ಅಲ್ಲ; ಮತ್ಯಾರು?

T20 World Cup 2024: ಕ್ರಿಕ್​ ಇನ್ಫೋ ವರದಿಯ ಪ್ರಕಾರ, ಆಯ್ಕೆ ಸಮಿತಿಯು ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್(Sanju Samson) ಅವರನ್ನು ಟೀಮ್ ಇಂಡಿಯಾಕ್ಕೆ ತಮ್ಮ ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಪರಿಗಣಿಸಲಿದೆ, ಪಂತ್​ ದ್ವಿತೀಯ ಆಯ್ಕೆಯ ಕೀಪರ್​ ಆಗಿದ್ದಾರೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

VISTARANEWS.COM


on

T20 World Cup 2024
Koo

ಮುಂಬಯಿ: ಜೂನ್​ 1ರಿಂದ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ಗೆ(T20 World Cup 2024) ಸೋಮವಾರ ನ್ಯೂಜಿಲ್ಯಾಂಡ್ ತನ್ನ ತಂಡವನ್ನು ಪ್ರಕಟಗೊಳಿಸಿದೆ. ಭಾರತ ತಂಡ ಯಾವಾಗ ಪ್ರಕಟಗೊಳ್ಳಿದೆ ಎಂದು ಕಾಯುತ್ತಿರುವಾಗಲೇ ಅಚ್ಚರಿಯ ಸುದ್ದಿಯೊಂದು ಹೊರಬಿದ್ದಿದೆ.​

ಕಾರು ಅಪಘಾತದಿಂದ ಗಾಯಗೊಂಡು ಐಪಿಎಲ್​ ಮೂಲಕ 14 ತಿಂಗಳ ಬಳಿಕ ಕ್ರಿಕೆಟ್​ ಆಡಲಿಳಿದರೂ ಕೂಡ ರಿಷಭ್​ ಪಂತ್(Rishabh Pant)​ ಅವರ ಕೀಪಿಂಗ್​ ಮತ್ತು ಬ್ಯಾಟಿಂಗ್​ ಫಾರ್ಮ್​ನಲ್ಲಿ ಯಾವುದೇ ಕೊರತೆ ಕಂಡುಬಂದಿರಲಿಲ್ಲ. ಈ ಹಿಂದಿನಂತೆ ಅವರ ಫಾರ್ಮ್​ ಕಂಡುಬಂದಿತ್ತು. ಹೀಗಾಗಿ ಪಂತ್​ ಟಿ20 ವಿಶ್ವಕಪ್​ಗೆ ಮೊದಲ ಕೀಪರ್​ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಪಂತ್​ ಮೊದಲ ಆಯ್ಕೆಯ ಕೀಪರ್​ ಎಲ್ಲ ಎನ್ನುವ ಮಾತುಗಳು ಕೇಳಿ ಬಂದಿವೆ.

ಕ್ರಿಕ್​ ಇನ್ಫೋ ವರದಿಯ ಪ್ರಕಾರ, ಆಯ್ಕೆ ಸಮಿತಿಯು ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್(Sanju Samson) ಅವರನ್ನು ಟೀಮ್ ಇಂಡಿಯಾಕ್ಕೆ ತಮ್ಮ ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಪರಿಗಣಿಸಲಿದೆ, ಪಂತ್​ ದ್ವಿತೀಯ ಆಯ್ಕೆಯ ಕೀಪರ್​ ಆಗಿದ್ದಾರೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿ T20 World Cup 2024: ಸಭೆ ನಡೆಸಿದ ರೋಹಿತ್​, ಅಗರ್ಕರ್​; ಈ ಆಟಗಾರನಿಗೆ ಅವಕಾಶವಿಲ್ಲ!

ಕೆ.ಎಲ್​ ರಾಹುಲ್(KL Rahul)​, ದಿನೇಶ್​ ಕಾರ್ತಿಕ್​ ಮತ್ತು ಜಿತೇಶ್ ಶರ್ಮಾ ಕೂಡ ಕೀಪಿಂಗ್​ ರೇಸ್​ನಲ್ಲಿದ್ದರು. ಈ ಪೈಕಿ ಜಿತೇಶ್​ ಶರ್ಮ ಈ ಬಾರಿಯ ಐಪಿಎಲ್​ನಲ್ಲಿ ಅಷ್ಟಾಗಿ ಉತ್ತಮ ಪ್ರದರ್ಶನ ತೋರಿಲ್ಲ. ಹೀಗಾಗಿ ಅವರಿಗೆ ಸ್ಥಾನ ಸಿಗುವುದು ಅನುಮಾನ ಎನ್ನಲಾಗಿದೆ. ಆರಂಭಿಕರಾಗಿ ರೋಹಿತ್ ಶರ್ಮಾ ಜತೆ ಇನಿಂಗ್ಸ್​ ಆರಂಭಿಸಲು ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್ ಮತ್ತು ಋತುರಾಜ್​ ಗಾಯಕ್ವಾಡ್​ ಮಧ್ಯೆ ತೀವ್ರ ಪೈಪೋಟಿ ಇದ್ದರೂ ಎಡಗೈ ಬ್ಯಾಟರ್​​ ಆಗಿರುವ ಜೈಸ್ವಾಲ್​ಗೆ ಈ ಅವಕಾಶ ಸಿಗುವು ಸಾಧ್ಯತೆ ಅಧಿಕವಾಗಿದೆ.

ವಿಶ್ವಕಪ್​ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ವಿಂಡೀಸ್​ ನೆಲದಲ್ಲಿ ಈಗಾಗಕಲೇ ಜೈಸ್ವಾಲ್​ ಉತ್ತಮ ದಾಖಲೆ ಹೊಂದಿದ್ದಾರೆ. ಚೊಚ್ಚಲ ಟೆಸ್ಟ್​ ಪಂದ್ಯದಲ್ಲಿಯೇ ಬಿರುಸಿನ ಬ್ಯಾಟಿಂಗ್​ ಮೂಲಕ ಶತಕ ಬಾರಿಸಿ ಮಿಂಚಿದ್ದರು. ನಿಧಾನಗತಿಯ ಪಿಚ್​ನಲ್ಲಿಯೂ ಜೈಸ್ವಾಲ್​ ಉತ್ತಮ ರನ್​ ಗಳಿಸುವಲ್ಲಿ ಸಮರ್ಥರಿದ್ದಾರೆ. ಹೀಗಾಗಿ ಅವರಿಗೆ ಈ ಅವಕಾಶ ಸಿಗುವುದು ಪಕ್ಕಾ ಆಗಿದೆ.

ಏಷ್ಯಾ ಕಪ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವಕಾಶ ಸಿಗದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೆ ಐಪಿಎಲ್​ ಪ್ರದರ್ಶನ ನೋಡಿ ಟಿ20ಯಲ್ಲಿ ಅವಕಾಶ ಸಿಗಬಹುದು ಎನ್ನಲಾಗಿತ್ತು. ಆದರೆ, ಅವರು ಆಯ್ಕೆಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕೋಚಿಂಗ್ ಸ್ಟಾಫ್‌ ನ ಪ್ರಭಾವಿ ಸದಸ್ಯರಿಗೆ ಚಾಹಲ್ ಆದ್ಯತೆಯ ಆಯ್ಕೆಯಾಗಿಲ್ಲ ಎಂದು ವರದಿಯಾಗಿದೆ. ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ಸ್ಪಿನ್ ವಿಭಾಗದಲ್ಲಿ ಮೊದಲ ಆಯ್ಕೆಯಾಗಿದ್ದು, ಮೂರನೇ ಸ್ಪಿನ್ನರ್ ಸ್ಥಾನಕ್ಕೆ ಅಕ್ಷರ್ ಪಟೇಲ್ ಅಥವಾ ರವಿ ಬಿಷ್ಣೋಯಿ ಆಯ್ಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

Continue Reading

ಕರ್ನಾಟಕ

S M Krishna: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

S M Krishna: ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಆರೋಗ್ಯದಲ್ಲಿ ಏರುಪೇರಾದ ಕಾರಣ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಅವರು ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

VISTARANEWS.COM


on

S M Krishna
Koo

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (91) (S M Krishna) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಏರ್‌ಪೋರ್ಟ್‌ ರೋಡ್‌ನಲ್ಲಿರುವ (Airport Road) ಮಣಿಪಾಲ್‌ ಆಸ್ಪತ್ರೆಗೆ (Manipal Hospital) ಎಸ್‌.ಎಂ.ಕೃಷ್ಣ ಅವರನ್ನು ದಾಖಲಿಸಲಾಗಿದ್ದು, ಸದ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಎಸ್.ಎಂ.ಕೃಷ್ಣ ಅವರು ಕಳೆದ 12 ದಿನಗಳ ಹಿಂದೆಯೇ ವಿಠ್ಠಲ್‌ ಮಲ್ಯ ರಸ್ತೆಯಲ್ಲಿರುವ ವೈದೇಹಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆರೋಗ್ಯದಲ್ಲಿ ತೀವ್ರ ಏರುಪೇರಾದ ಕಾರಣ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಸಾಗಿಸಲಾಯಿತು. ಸದ್ಯ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ವೈದೇಹಿ ಆಸ್ಪತ್ರೆಗೆ ದಾಖಲಾದಾಗ ಎರಡು ದಿನಗಳಲ್ಲೇ ಅವರನ್ನು ಡಿಸ್‌ಚಾರ್ಜ್‌ ಮಾಡಲಾಗುತ್ತದೆ ಎಂಬುದಾಗಿ ವೈದ್ಯರು ತಿಳಿಸಿದ್ದರು. ಆದರೆ, ಚೇತರಿಸಿಕೊಳ್ಳದ ಕಾರಣ ಚಿಕಿತ್ಸೆ ಮುಂದುವರಿಸಲಾಗಿತ್ತು ಎಂದು ತಿಳಿದುಬಂದಿದೆ.

Padma Vibhushan SM Krishna has converted bengaluru as IT city says Dinesh Gooligowda

91 ವರ್ಷ ವಯಸ್ಸಿನ ಎಸ್​.ಎಂ.ಕೃಷ್ಣ ಸಕ್ರಿಯ ರಾಜಕಾರಣದಿಂದ ದೂರವೇ ಉಳಿದಿದ್ದಾರೆ. ಮೊದಲು ಕಾಂಗ್ರೆಸ್​ನಲ್ಲಿದ್ದು ಕೇಂದ್ರ ಸಚಿವರು, ಕರ್ನಾಟಕ ಮುಖ್ಯಮಂತ್ರಿಯಾಗಿದ್ದ ಎಸ್​.ಎಂ.ಕೃಷ್ಣ, ನಂತರ ಪಕ್ಷ ತನ್ನನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿ 2017ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಎರಡು ವರ್ಷದ ಹಿಂದೆ ಅವರು ನಾಡಪ್ರಭು ಕೆಂಪೇಗೌಡ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿರುವ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಳೆದ ವರ್ಷ ಎಸ್.ಎಂ. ಕೃಷ್ಣ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆದಿದ್ದಾರೆ. “ಸಕ್ರಿಯ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದ ಮಾತ್ರಕ್ಕೆ ನಾನು ಸಂಪೂರ್ಣವಾಗಿ ಸನ್ಯಾಸಿಯಾಗುತ್ತೇನೆ ಎಂದಲ್ಲ, ಪಕ್ಷ ಇಲ್ಲವೇ ನಾಯಕರು ಸಲಹೆ ಕೇಳಿದರೆ ಕೊಡುವುದಾಗಿಯೂ ಅವರು ತಿಳಿಸಿದ್ದರು. ʻʻಮೀಸಲಾತಿ ವಿಚಾರವಾಗಿ ಕೇಳಿದ್ರೆ ಸಲಹೆ ಕೊಡುತ್ತೇನೆ. ನಾನು ಮೇಲೆ ಬಿದ್ದು ಸಲಹೆ ಕೊಡುವುದಿಲ್ಲ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ವಿಚಾರದಲ್ಲಿ ಅವರು ಬಂದು ಸಲಹೆ ಕೇಳಿದರೆ ಕೊಡುತ್ತೇನೆ” ಎಂದಿದ್ದರು.

ಎಸ್.ಎಂ.ಕೃಷ್ಣ ಅವರನ್ನು ಬಿಜೆಪಿ ಕಡೆಗಣಿಸುತ್ತಿದೆ ಎಂಬ ಆರೋಪದ ವಿಚಾರವಾಗಿ ಸುದ್ದಿಗಾರರು ಪ್ರಶ್ನಿಸಿದಾಗ ʻʻನಾನೇ ರಿಟೈಡ್ ಆಗುತ್ತಿರುವಾಗ ಕಡೆಗಣಿಸುವ ಪ್ರಶ್ನೆ ಬರುವುದಿಲ್ಲ. ನಾನೇ ನಿವೃತ್ತಿ ಪಡೆಯುತ್ತಿದ್ದೇನೆʼʼ ಎಂದಿದ್ದರು. ರಾಜಕೀಯದಲ್ಲಿ ಯಾರೂ ಪೆನ್ಶನ್‌ ಕೊಡುವುದಿಲ್ಲ. ಹೀಗಾಗಿ ನನ್ನ ನಿವೃತ್ತಿ ನಿರ್ಧಾರವನ್ನು ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆ ಇಲ್ಲ” ಎಂದಿದ್ದರು.

ಇದನ್ನೂ ಓದಿ: Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Continue Reading

ಪ್ರಮುಖ ಸುದ್ದಿ

WhatsApp Exit India: ವಾಟ್ಸ್ಯಾಪ್‌ ಜೊತೆಗೇ ಭಾರತ ತೊರೆಯಲಿವೆಯೇ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ?

WhatsApp ಪ್ರಕಾರ, ಎಂಡ್-ಟು-ಎಂಡ್ ಎನ್ಕ್ರಿಪ್ಶನ್ ವೈಶಿಷ್ಟ್ಯವನ್ನು ತೆಗೆದುಹಾಕಲು ಭಾರತ ಸರಕಾರದಿಂದ ಒತ್ತಡ ಬಂದರೆ, ಅದು ಭಾರತಕ್ಕೆ ವಿದಾಯ ಹೇಳುವುದು ಖಚಿತ. ಐಟಿ ನಿಯಮಗಳು 2021ರ ನಿಯಮ 4(2) ರ ಅಡಿಯಲ್ಲಿ ಭಾರತ ಸರ್ಕಾರ ಮತ್ತು WhatsApp ನಡುವೆ ಸಮರ ನಡೆಯುತ್ತಿದೆ. ಈ ನಿಯಮದ ಪ್ರಕಾರ, ಸರ್ಕಾರ ಕೇಳಿದಾಗ, ವಾಟ್ಸ್ಯಾಪ್‌ ವೇದಿಕೆಯು ನಿರ್ದಿಷ್ಟ ಸಂದೇಶದ ಮೂಲವನ್ನು ಬಹಿರಂಗಪಡಿಸಬೇಕಾಗುತ್ತದೆ.

VISTARANEWS.COM


on

facebook whatsapp instagram
Koo

ಹೊಸದಿಲ್ಲಿ; ಐಟಿ ನಿಯಮಗಳಿಗೆ (IT Rules) ವಿರುದ್ಧವಾಗಿ ನಡೆದುಕೊಂಡು ಕೇಂದ್ರ ಸರ್ಕಾರದ ಕೆಂಗಣ್ಣಿಗೆ ತುತ್ತಾಗಿರುವ ವಾಟ್ಸ್ಯಾಪ್‌ (WhatsApp), ಎಂಡ್‌ ಟು ಎಂಡ್‌ ಎನ್‌ಕ್ರಿಪ್ಷನ್‌ (End to End encription) ಅನ್ನು ಭೇದಿಸಲಾಗುವುದಿಲ್ಲ ಎಂದಿದೆ. ಈ ವಿಚಾರದಲ್ಲಿ ಒತ್ತಡ ಬಂದರೆ ದೇಶವನ್ನೇ ತೊರೆಯುವುದಾಗಿ (WhatsApp Exit India) ಬೆದರಿಕೆ ಹಾಕಿದೆ. ಇದರೊಂದಿಗೆ, ಇದೇ ಕಂಪನಿಗೇ ಸೇರಿದ ಫೇಸ್‌ಬುಕ್‌ (Facebook) ಹಾಗೂ ಇನ್‌ಸ್ಟಾಗ್ರಾಂ (Instagram) ಕೂಡ ದೇಶವನ್ನು ತೊರೆಯಬಹುದೇ ಎಂಬ ಕುತೂಹಲ ಮೂಡಿದೆ.

ವಾಟ್ಸ್ಯಾಪ್‌, ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂಗಳು ಪ್ರಪಂಚದಾದ್ಯಂತದ ಬಳಕೆದಾರರಲ್ಲಿ ತುಂಬಾ ಜನಪ್ರಿಯವಾಗಿವೆ. ಇದು ಜನರ ನಡುವಿನ ಸಂವಹನಕ್ಕೆ ಮಾತ್ರವಲ್ಲದೆ ಅನೇಕ ಅಧಿಕೃತ, ಕಚೇರಿ ಕೆಲಸಗಳಿಗೂ ಉತ್ತಮ ಮಾಧ್ಯಮವಾಗಿವೆ. ಆದರೆ ಮೆಟಾ ಒಡೆತನದ ವಾಟ್ಸ್ಯಾಪ್ ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದೆ. ಅದು ಭಾರತವನ್ನು ತೊರೆಯಬಹುದು ಎಂಬ ವರದಿಗಳಿವೆ. ಇದರ ಹಿಂದಿನ ಕಾರಣ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಗೌಪ್ಯತೆ ವೈಶಿಷ್ಟ್ಯ. ಇದು ಭಾರತ ಸರ್ಕಾರದ 2021ರ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ವಿರುದ್ಧವಾಗಿದೆ.

WhatsApp ಪ್ರಕಾರ, ಎಂಡ್-ಟು-ಎಂಡ್ ಎನ್ಕ್ರಿಪ್ಶನ್ ವೈಶಿಷ್ಟ್ಯವನ್ನು ತೆಗೆದುಹಾಕಲು ಭಾರತ ಸರಕಾರದಿಂದ ಒತ್ತಡ ಬಂದರೆ, ಅದು ಭಾರತಕ್ಕೆ ವಿದಾಯ ಹೇಳುವುದು ಖಚಿತ. ಐಟಿ ನಿಯಮಗಳು 2021ರ ನಿಯಮ 4(2) ರ ಅಡಿಯಲ್ಲಿ ಭಾರತ ಸರ್ಕಾರ ಮತ್ತು WhatsApp ನಡುವೆ ಸಮರ ನಡೆಯುತ್ತಿದೆ. ಈ ನಿಯಮದ ಪ್ರಕಾರ, ಸರ್ಕಾರ ಕೇಳಿದಾಗ, ವಾಟ್ಸ್ಯಾಪ್‌ ವೇದಿಕೆಯು ನಿರ್ದಿಷ್ಟ ಸಂದೇಶದ ಮೂಲವನ್ನು ಬಹಿರಂಗಪಡಿಸಬೇಕಾಗುತ್ತದೆ.

ಭಾರತದ ಐಟಿ ನಿಯಮಗಳು- 2021ಕ್ಕೆ ಮೆಟಾ ಸವಾಲು ಹಾಕಿದೆ. ಈ ಬಗ್ಗೆ ವಾಟ್ಸ್ಯಾಪ್, ನ್ಯಾಯಾಲಯದಲ್ಲಿ ವೈರಲ್ ಸುದ್ದಿಗೆ ಸಂಬಂಧಿಸಿದಂತೆ ಈಗಾಗಲೇ ಕ್ರಮ ಕೈಗೊಂಡಿರುವುದಾಗಿ ತಿಳಿಸಿತ್ತು. ಆದರೆ, ಬಳಕೆದಾರರ ಗೌಪ್ಯತೆಯ ಹಕ್ಕಿನ ಅಡಿಯಲ್ಲಿ, ಕಂಪನಿಯು ತನ್ನ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಷನ್‌ ಅನ್ನು ತೆಗೆದುಹಾಕಲು ಸಾಧ್ಯವಿಲ್ಲ ಎಂದಿದೆ. ವಾಟ್ಸ್ಯಾಪ್‌ ಹಾಗೂ ಮೂಲ ಕಂಪನಿ ಮೆಟಾ ಭಾರತವನ್ನು ತೊರೆದರೆ, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಕೂಡ ಇಲ್ಲಿಂದ ಹೊರಡಬಹುದು.

WhatsApp ಭಾರತದಲ್ಲಿ ಅತ್ಯಗತ್ಯ ಸೋಶಿಯಲ್‌ ಮೀಡಿಯಾ ಹಾಗೂ ಸಂದೇಶ ವೇದಿಕೆಯಾಗಿದೆ. ಅಂಕಿಅಂಶಗಳ ಪ್ರಕಾರ, ಈ ವೇದಿಕೆಯನ್ನು ವಿಶ್ವಾದ್ಯಂತ 278 ಕೋಟಿ ಬಳಕೆದಾರರು ಬಳಸುತ್ತಾರೆ. ಹೆಚ್ಚಿನ ಭಾರತೀಯ ಬಳಕೆದಾರರು ಇದನ್ನು ಬಳಸುತ್ತಾರೆ. ಮೆಟಾಗೆ 53.58 ಕೋಟಿ ಭಾರತೀಯ ಬಳಕೆದಾರರು ಭಾರತದಲ್ಲಿದ್ದಾರೆ. ಹೀಗಾಗಿ ಮೆಟಾ ಕಂಪನಿಗೆ ಭಾರತದ ಮಾರುಕಟ್ಟೆಯೂ ಮಹತ್ವದ್ದಾಗಿದೆ.

WhatsApp ಅನ್ನು ಫೆಬ್ರವರಿ 2009ರಲ್ಲಿ ಪ್ರಾರಂಭಿಸಲಾಯಿತು. ಇದರ ಆರಂಭಿಕ ಆವೃತ್ತಿಯು ಕ್ರ್ಯಾಶಿಂಗ್ ಸಮಸ್ಯೆಗಳನ್ನು ಹೊಂದಿತ್ತು. ಐಫೋನ್‌ನಲ್ಲಿ WhatsApp 2.0 ಅನ್ನು ಆಗಸ್ಟ್ 2009ರಲ್ಲಿ ಬಿಡುಗಡೆ ಮಾಡಲಾಯಿತು. 250000 ಜನರು ಡೌನ್‌ಲೋಡ್‌ ಮಾಡಿದರು. ನಂತರ 2010ರಲ್ಲಿ Android ಬಳಕೆದಾರರಿಗೆ ಪರಿಚಯಿಸಲಾಯಿತು. ಅಂದಿನಿಂದ ವಾಟ್ಸ್ಯಾಪ್ ಜನಪ್ರಿಯತೆಯ ತುದಿ ಮುಟ್ಟಿದೆ. ಸದ್ಯ ಭಾರತ ಸರ್ಕಾರ ಮತ್ತು ವಾಟ್ಸ್ಯಾಪ್ ನಡುವಿನ ಸಮರ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಮೇಲೆ ಕೂಡ ಪರಿಣಾಮ ಬೀರುತ್ತದೆಯೇ ಎಂದು ಕಾದು ನೋಡಬೇಕಾಗಿದೆ.

ಇದನ್ನು ಓದಿ: WhatsApp update: ಈ ಹಳೇ ಫೋನ್‌ಗಳಲ್ಲಿ ಇನ್ನು ವಾಟ್ಸ್ಯಾಪ್‌ ಸಿಗೋಲ್ಲ! ನಿಮ್ಮ ಫೋನ್‌ ಕೂಡ ಇದೆಯಾ ನೋಡಿಕೊಳ್ಳಿ

Continue Reading
Advertisement
Drown in Mekedatu
ಕರ್ನಾಟಕ2 mins ago

Drown in Mekedatu: ಮೇಕೆದಾಟು ಬಳಿ ಈಜಲು ಹೋಗಿದ್ದ ಐವರು ಪ್ರವಾಸಿಗರ ಸಾವು

T20 World Cup 2024
ಕ್ರೀಡೆ9 mins ago

T20 World Cup 2024: ವಿಶ್ವಕಪ್​ಗೆ ಪಂತ್​ ಮೊದಲ ಆಯ್ಕೆಯ ಕೀಪರ್​​ ಅಲ್ಲ; ಮತ್ಯಾರು?

S M Krishna
ಕರ್ನಾಟಕ22 mins ago

S M Krishna: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ವೈರಲ್ ನ್ಯೂಸ್27 mins ago

Viral Video: ಪಾಪಿ ಮಗನಿಂದ ತಂದೆ ಮೇಲೆ ಇದೆಂಥಾ ಕ್ರೌರ್ಯ! ವಿಡಿಯೋ ನೋಡಿ

facebook whatsapp instagram
ಪ್ರಮುಖ ಸುದ್ದಿ29 mins ago

WhatsApp Exit India: ವಾಟ್ಸ್ಯಾಪ್‌ ಜೊತೆಗೇ ಭಾರತ ತೊರೆಯಲಿವೆಯೇ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ?

Dubai Airport
EXPLAINER39 mins ago

Dubai Airport : ದುಬೈನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಏರ್​ಪೋರ್ಟ್​​; ಏನಿದರ ವಿಶೇಷತೆ? ಎಲ್ಲ ಮಾಹಿತಿ ಇಲ್ಲಿದೆ

IPL 2024 Points Table
ಕ್ರೀಡೆ50 mins ago

IPL 2024 Points Table: ಚೆನ್ನೈ ಗೆಲುವಿನಿಂದ ಅಂಕಪಟ್ಟಿಯಲ್ಲಿ 3 ತಂಡಗಳಿಗೆ ಭಾರೀ ಹೊಡೆತ

Minister Lakshmi hebbalkar Latest statement in Belagavi
ಬೆಳಗಾವಿ1 hour ago

Lakshmi Hebbalkar: ಪ್ರಜ್ವಲ್ ಹಗರಣದ ಬಗ್ಗೆ ಬಿಜೆಪಿ ನಾಯಕರ ಮೌನವೇಕೆ? ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ

Sahil Khan Travelled 1,800 km In 4 Days To Avoid Arrest
ಬಾಲಿವುಡ್1 hour ago

Sahil Khan: ಪೊಲೀಸರಿಂದ ತಪ್ಪಿಸಿಕೊಳ್ಳಲು 1,800 ಕಿ.ಮೀ ಪ್ರಯಾಣಿಸಿದ್ದ ನಟ ಸಾಹಿಲ್ ಖಾನ್!

Hassan Pen Drive Case Deve Gowda refuses to expel Prajwal and What is the reason
ಕರ್ನಾಟಕ1 hour ago

Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20243 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202423 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌