Site icon Vistara News

Road Accident: ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ; ಬಸ್-ಬೈಕ್ ಡಿಕ್ಕಿಯಾಗಿ ನಾಲ್ವರ ದುರ್ಮರಣ

bike accident

ರಾಯಚೂರು: ತಾಲೂಕಿನ ಮಿಟ್ಟಿಮಲಕಾಪುರ ಬಳಿ ಬುಧವಾರ ಭೀಕರ ರಸ್ತೆ ಅಪಘಾತ ನಡೆದಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಸ್ಥಳದಲ್ಲಿ ನಾಲ್ವರು ಕೊನೆಯುಸಿರೆಳೆದಿದ್ದಾರೆ.

ರಾಯಚೂರು ನಗರದ ಇಂದಿರಾನಗರ ನಿವಾಸಿಗಳಾದ ಪರಶುರಾಮ್ (30), ರಾಘವೇಂದ್ರ (35), ಗೋವಿಂದ (32), ಪ್ರಾಣೇಶ್ (22) ಮೃತರು. ಹೊಲದ ಕೆಲಸ ಮಾಡುತ್ತಿದ್ದ ಇವರು, ಬೈಕ್‌ನಲ್ಲಿ ಹೋಗುತ್ತಿದ್ದಾಗ ದುರಂತ ನಡೆದಿದೆ. ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | ಆನ್‌ಲೈನ್ ಷೇರ್ ಟ್ರೇಡಿಂಗ್ ವಂಚನೆ: 1.92 ಕೋಟಿ ರೂ. ಮೋಸ ಹೋದ ಮಹಿಳೆ! ಸುರಕ್ಷಿತ ಹೂಡಿಕೆ ಹೇಗೆ?

ಮಹಿಳೆಯೊಂದಿಗೆ ಅನುಚಿತ ವರ್ತಿಸಿದ ವ್ಯಕ್ತಿಯ ಕೊಲೆ

ಚಿಕ್ಕಬಳ್ಳಾಪುರ: ಮಹಿಳೆಯೊಂದಿಗೆ ಅನುಚಿತ ವರ್ತನೆ ಹಿನ್ನೆಲೆ ವ್ಯಕ್ತಿಯೊಬ್ಬನ ಕೊಲೆ ಮಾಡಿರುವ ಘಟನೆ ನಗರದ 31ನೇ ವಾರ್ಡ್‌ನ ಇಂದಿರಾನಗರದ ಬಾಡಿಗೆ ಮನೆಯಲ್ಲಿ ನಡೆದಿದೆ.

ಸಾದಲಿ ಗ್ರಾಮದ ಆಂಜಿನಪ್ಪ (40) ಕೊಲೆಯಾದವರು. ರಾಘವೇಂದ್ರ ಕೊಲೆ ಆರೋಪಿ. ಇಂದಿರಾನಗರದ ಕಳ್ಳೇಕಾಯಿ ಸೀನಪ್ಪ ಎಂಬುವವರ ಮನೆಯಲ್ಲಿ ಬಾಡಿಗೆಗೆ ಆಂಜಿನಪ್ಪ ವಾಸವಾಗಿದ್ದರು. ರಾಡ್‌ನಿಂದ ಹೊಡೆದು ಕೊಲೆ ಮಾಡಲಾಗಿದ್ದು, ಸ್ಥಳಕ್ಕೆ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್, ವೃತ್ತ ನಿರೀಕ್ಷಕ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿದ್ಯುತ್ ಪ್ರವಹಿಸಿ ಬೆಸ್ಕಾಂ ಗುತ್ತಿಗೆ ನೌಕರ ಸಾವು

ಕೋಲಾರ: ವಿದ್ಯುತ್ ಪ್ರವಹಿಸಿ ಬೆಸ್ಕಾಂ ಗುತ್ತಿಗೆ ನೌಕರ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮಾಗೇರಿ ಗ್ರಾಮದ ಬಳಿ ನಡೆದಿದೆ. ಬಂಗಾರಪೇಟೆ ತಾಲೂಕಿನ ಮರವಳ್ಳಿ ಗ್ರಾಮದ ಮಂಜುನಾಥ್ (45) ಮೃತ ವ್ಯಕ್ತಿ. ವಿದ್ಯುತ್ ಕಂಬ ದುರಸ್ತಿ ಮಾಡಲು ಕಂಬಕ್ಕೆ ಹತ್ತಿದ್ದ ವೇಳೆ ಅವಘಡ ನಡೆದಿದೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ.ದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Exit mobile version