Future generation only if pollution is stoppedವಿಸ್ತಾರ ಸಂಪಾದಕೀಯ : ಮಾಲಿನ್ಯ ತಡೆದರೆ ಮಾತ್ರ ಮುಂದಿನ ಪೀಳಿಗೆಗೆ ಭವಿಷ್ಯ Vistara News
Connect with us

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ : ಮಾಲಿನ್ಯ ತಡೆದರೆ ಮಾತ್ರ ಮುಂದಿನ ಪೀಳಿಗೆಗೆ ಭವಿಷ್ಯ

ಮಾಲಿನ್ಯದ ಪರಿಣಾಮಗಳು ನಮಗೆ ಗೊತ್ತೇ ಇವೆ. ವಾಯುಮಾಲಿನ್ಯದಿಂದ ಪ್ರತಿ ವರ್ಷ ಜಗತ್ತಿನಲ್ಲಿ 24 ಲಕ್ಷ ಜನ ಸಾಯುತ್ತಿದ್ದಾರೆ ಎಂದು ಡಬ್ಲ್ಯುಎಚ್‌ಒ ತಿಳಿಸಿತ್ತು. ಒಂದು ವರ್ಷದಲ್ಲಿ ವಿಶ್ವಾದ್ಯಂತ ಸಂಭವಿಸುವ ಸಾವುಗಳಲ್ಲಿ, ರಸ್ತೆ ಅಪಘಾತಗಳಿಗಿಂತಲೂ ವಾಯುಮಾಲಿನ್ಯದಿಂದ ಆಗುವ ಸಾವುಗಳೇ ಹೆಚ್ಚು.

VISTARANEWS.COM


on

Koo

2022ರ ವಿಶ್ವದ ಅತ್ಯಂತ ಕಲುಷಿತ ನಗರಗಳ (Polluted City) ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿರುವ ವಿಶ್ವದ 50 ನಗರಗಳ ಪಟ್ಟಿಯಲ್ಲಿ ಭಾರತದ 39 ನಗರಗಳು ಇವೆ! ಸ್ವಿಡ್ಜರ್‌ಲ್ಯಾಂಡ್‌ನ ಐಕ್ಯು ಏರ್ ಸಂಸ್ಥೆ ಬಿಡುಗಡೆ ಮಾಡಿರುವ ವಿಶ್ವ ವಾಯು ಗುಣಮಟ್ಟ ವರದಿಯಲ್ಲಿ ಭಾರತದ ಕಳಪೆ ವಾಯು ಗುಣಮಟ್ಟ ಬೆಳಕಿಗೆ ಬಂದಿದೆ. ಭಾರತವು 2022ರಲ್ಲಿ ಅತಿ ಹೆಚ್ಚು ಮಾಲಿನ್ಯ ಹೊಂದಿರುವ ವಿಶ್ವದ 8ನೇ ದೇಶವೆಂದು ಗುರುತಿಸಿಕೊಂಡಿರುವುದು ಆತಂಕದ ಸಂಗತಿ. ಇದಕ್ಕೂ ಹಿಂದಿನ ವರ್ಷ ಭಾರತ ಐದನೇ ಸ್ಥಾನದಲ್ಲಿತ್ತು. ಸದ್ಯ ಸ್ವಲ್ಪ ಸುಧಾರಣೆ ಕಂಡಿದೆ ಎಂಬುದು ನಿಜವಾದರೂ, ಅದೇನೂ ಭಾರೀ ಪ್ರಗತಿಯಲ್ಲ. 131 ದೇಶಗಳ 7,300ಕ್ಕೂ ಹೆಚ್ಚು ನಗರಗಳ ಪೈಕಿ ಮಾಲಿನ್ಯದ ವಿಚಾರದಲ್ಲಿ ಭಾರತದ ನಗರಗಳು ಮುಂಚೂಣಿಯಲ್ಲಿವೆ. ಅಗ್ರ 10 ಕಲುಷಿತ ನಗರಗಳ ಪೈಕಿ ಭಾರತದ 6 ನಗರಗಳಿವೆ. ಈ ಅಂಕಿ ಸಂಖ್ಯೆಗಳು ಭಾರತಕ್ಕೆ ಎಚ್ಚರಿಕೆಯ ಗಂಟೆಯಾಗಿದೆ.

ಅತ್ಯಂತ ಕಲುಷಿತ ನಗರಗಳಲ್ಲಿ ದೆಹಲಿ ಹಾಗೂ ಕೋಲ್ಕೊತಾ ಅತ್ಯಂತ ಮೇಲಿವೆ. ಜಾಗತಿಕ ನಗರಗಳ ಪೈಕಿ ಬೆಂಗಳೂರು 440ನೇ ಸ್ಥಾನದಲ್ಲಿರುವುದು ಸ್ವಲ್ಪ ಸಮಾಧಾನಕರ ಎನ್ನಬಹುದು. ಆದರೆ ನಾವೇ ನೋಡುತ್ತಿರುವಂತೆ, ಒಂದೆರಡು ದಶಕಗಳ ಹಿಂದೆ ಉದ್ಯಾನವನಗಳ ಪಟ್ಟಣವಾಗಿದ್ದ, ಕೆರೆಗಳ ನಗರಿಯಾಗಿದ್ದ, ನಿವೃತ್ತರ ಸ್ವರ್ಗವೆನಿಸಿದ್ದ, ಸಮಶೀತೋಷ್ಣ ವಾತಾವರಣ ಹೊಂದಿದ್ದ ಬೆಂಗಳೂರು ಇಂದು ಗಿಜಿಗುಟ್ಟುವ ಟ್ರಾಫಿಕ್‌, ಕೆರೆಗಳ ಒತ್ತುವರಿಯ, ವಿಲೇವಾರಿಯಾಗದ ಕಸದ ರಾಶಿಗಳನ್ನು ಹೊಂದಿದ, ಮುಗಿಯದ ರಸ್ತೆ ಕಾಮಗಾರಿಗಳಿಂದ ಸದಾ ಏಳುತ್ತಿರುವ ಧೂಳಿನ ಸ್ವರ್ಗವಾಗಿದೆ. ಹದತಪ್ಪಿದ ಅಧಿಕಾರಶಾಹಿ, ಅಂಕೆಯೇ ಇಲ್ಲದ ರಿಯಲ್‌ ಎಸ್ಟೇಟ್‌ ಮಾಫಿಯಾ, ಧನದಾಹದ ಜನಪ್ರತಿನಿಧಿಗಳಿಂದಾಗಿ ನರಕವಾಗುವತ್ತ ಧಾವಿಸುತ್ತಿದೆ. ಇದನ್ನು ತಡೆಯದಿದ್ದರೆ ಅಪಾಯ ಕಾದಿದೆ.

ಸಾರಿಗೆ ವಲಯ, ಕೈಗಾರಿಕಾ ಘಟಕಗಳು, ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳು, ಕಸ, ತ್ಯಾಜ್ಯ ಸುಡುವುದು ಮುಂತಾದವು ಮಾಲಿನ್ಯದ ಮುಖ್ಯ ಮೂಲಗಳು. ವಿಶ್ವ ಆರೋಗ್ಯ ಸಂಸ್ಥೆ 2021ರಲ್ಲಿ ಬಿಡುಗಡೆ ಮಾಡಿದ್ದ ಮಾರ್ಗಸೂಚಿಗಳ ಅನ್ವಯ, ನಾವು ಇರುವ ಪರಿಸರದ ಪ್ರತಿ ಕ್ಯುಬಿಕ್‌ ಮೀಟರ್‌ ಪ್ರದೇಶದಲ್ಲಿ ಮಾಲಿನ್ಯಕ್ಕೆ ಕಾರಣವಾಗುವ ಪಿಎಂ 2.5 ಸೂಕ್ಷ್ಮಾಣು ಕಣಗಳ ಪ್ರಮಾಣ 5 ಮೈಕ್ರೋಗ್ರಾಂಗಿಂತ ಹೆಚ್ಚಿಗೆ ಇರಬಾರದು. ಆದರೆ ಭಾರತದಲ್ಲಿ ಈ ಪ್ರಮಾಣ 56 ಮೈಕ್ರೋಗ್ರಾಂನಷ್ಟಿದೆ. ಅಂದರೆ ನಿಗದಿತ ಮಾನದಂಡಕ್ಕಿಂತ 11 ಪಟ್ಟು ಹೆಚ್ಚು. ದಿಲ್ಲಿಯಲ್ಲಿ ಈ ಪ್ರಮಾಣ 107 ಮೈಕ್ರೋಗ್ರಾಂನಷ್ಟು, ಅಂದರೆ ನಿಗದಿತ ಮಾನದಂಡಕ್ಕಿಂತ 21 ಪಟ್ಟು ಅಧಿಕವಿದೆ. ಭಾರತದ ಎಲ್ಲ 130 ಕೋಟಿ ಜನರೂ ವಿಶ್ವ ಆರೋಗ್ಯ ಸಂಸ್ಥೆ ನಿಗದಿ ಪಡಿಸಿರುವುದಕ್ಕಿಂತ ಹೆಚ್ಚಿನ ಮಾಲಿನ್ಯ ಇರುವ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ನಿಗದಿಪಡಿಸಿರುವ ಮಾನದಂಡವನ್ನು ಪಾಲಿಸದೇ ಹೋದಲ್ಲಿ ಪ್ರತಿ ಭಾರತೀಯನ ಜೀವಿತಾವಧಿ 5 ವರ್ಷದಷ್ಟು ಇಳಿಕೆಯಾಗಲಿದೆ; ಅದರಲ್ಲೂ ವಿಶ್ವದಲ್ಲೇ ಅತ್ಯಂತ ಹೆಚ್ಚಿನ ಮಾಲಿನ್ಯ ಹೊಂದಿರುವ ನವದೆಹಲಿಯಲ್ಲಿ ಜನರ ಜೀವಿತಾವಧಿ 10 ವರ್ಷದಷ್ಟು ಇಳಿಕೆಯಾಗಲಿದೆ ಎಂದು ಷಿಕಾಗೋ ವಿಶ್ವವಿದ್ಯಾಲಯದ ‘ಇಂಧನ ನೀತಿ ಸಂಸ್ಥೆ’ ಕಳೆದ ವರ್ಷ ಬಿಡುಗಡೆ ಮಾಡಿದ್ದ ಸಂಶೋಧನಾ ವರದಿ ಗಂಭೀರ ಎಚ್ಚರಿಕೆ ನೀಡಿತ್ತು.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಆಸ್ಕರ್‌ ಗೆಲುವು ಆರೋಗ್ಯಕರ ಸ್ಪರ್ಧೆಗೆ ನಾಂದಿಯಾಗಲಿ

ಮಾಲಿನ್ಯದ ಪರಿಣಾಮಗಳು ನಮಗೆ ಗೊತ್ತೇ ಇವೆ. ವಾಯುಮಾಲಿನ್ಯದಿಂದ ಪ್ರತಿ ವರ್ಷ ಜಗತ್ತಿನಲ್ಲಿ 24 ಲಕ್ಷ ಜನ ಸಾಯುತ್ತಿದ್ದಾರೆ ಎಂದು ಡಬ್ಲ್ಯುಎಚ್‌ಒ ತಿಳಿಸಿತ್ತು. ಒಂದು ವರ್ಷದಲ್ಲಿ ವಿಶ್ವದಾದ್ಯಂತ ಸಂಭವಿಸುವ ಸಾವುಗಳಲ್ಲಿ, ರಸ್ತೆ ಅಪಘಾತಗಳಿಗಿಂತಲೂ ವಾಯುಮಾಲಿನ್ಯದಿಂದ ಆಗುವ ಸಾವುಗಳೇ ಹೆಚ್ಚಂತೆ. ಇನ್ನು ನೀರಿನ ಮಾಲಿನ್ಯ, ಆಹಾರ ಮಾಲಿನ್ಯ ಇತ್ಯಾದಿಗಳನ್ನೂ ಸೇರಿಸಿದರೆ ಮತ್ತಷ್ಟು ಸಂಖ್ಯೆ ಹೆಚ್ಚಬಹುದು. ನಾನಾ ಬಗಯೆ ಕ್ಯಾನ್ಸರ್‌ಗಳು, ಹೃದಯ ಕಾಯಿಲೆಗಳು, ಮಕ್ಕಳಿಗೂ ಕಾಡುವ ಅಸ್ತಮಾ ಇವೆಲ್ಲವೂ ಮಾಲಿನ್ಯದ ಕೊಡುಗೆಗಳೇ ಆಗಿವೆ. ಸರ್ಕಾರ ಮತ್ತು ನಾಗರಿಕ ಸಮಾಜ ಇವೆರಡೂ ಎಚ್ಚರಗೊಂಡರೆ ಮಾತ್ರ ಮಾಲಿನ್ಯ ತಗ್ಗಿಸಿ, ಮುಂದಿನ ತಲೆಮಾರನ್ನು ಅನಾರೋಗ್ಯದ ಕೂಪದಿಂದ ರಕ್ಷಿಸಲು ಸಾಧ್ಯ. ಇದಕ್ಕೆ ಹಲವು ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕಿದೆ. ಪೆಟ್ರೋಲಿಯಂ ಬಳಕೆ ಕಡಿಮೆ ಮಾಡಿ ಶುದ್ಧ ಇಂಧನಕ್ಕೆ ಪರಿವರ್ತನೆ (ಜೈವಿಕ ಇಥೆನಾಲ್, ಜೈವಿಕ ಡೀಸೆಲ್ ಅಥವಾ ವಿದ್ಯುನ್ಮಾನ ವಾಹನಗಳ ಹೆಚ್ಚಳ), ಫ್ಯಾಕ್ಟರಿಗಳಿಂದ ಆಗುವ ಮಾಲಿನ್ಯ ತಡೆಗೆ ಕಟ್ಟುನಿಟ್ಟಾದ ಮಾರ್ಗಸೂಚಿ ಜಾರಿ, ಮರಗಿಡಗಳೂ ಸೇರಿದಂತೆ ಪ್ರಾಕೃತಿಕ ಸಂಪನ್ಮೂಲಗಳ ಹೊಣೆಯರಿತ ಬಳಕೆ ಮತ್ತು ಅರಣ್ಯೀಕರಣ, ಜಲಮೂಲಗಳ ಸಂರಕ್ಷಣೆ- ಇಂಥ ಕಾರ್ಯಗಳು ಸಾಕಷ್ಟು ನಡೆದರೆ ಮಾತ್ರ ನಮ್ಮ ಭವಿಷ್ಯದ ತಲೆಮಾರು ಮಾಲಿನ್ಯದ ಅಪಾಯದಿಂದ ಪಾರಾಗಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ChatGPT Subscription: ದಕ್ಷತೆ ಹೆಚ್ಚಳ; ನೌಕರರಿಗೆ ಚಾಟ್‌ಜಿಪಿಟಿ ಉಚಿತ ಸಬ್‌ಸ್ಕ್ರಿಪ್ಶನ್‌ ನೀಡಿದ ಬೆಂಗಳೂರು ಕಂಪನಿ

ChatGPT Subscription:‌ ಚಾಟ್‌ಜಿಪಿಟಿಯು ಬಹುತೇಕ ಕ್ಷೇತ್ರಗಳನ್ನು ಆವರಿಸುತ್ತಿದೆ. ಬೆಂಗಳೂರಿನ ಕ್ಯಾಪಿಟಲ್‌ ಮೈಂಡ್‌ ಎಂಬ ಕಂಪನಿಯು ಚಾಟ್‌ಜಿಪಿಟಿಯ ಮಹತ್ವವನ್ನು ಅರಿತು, ಅದರ ನೋಂದಣಿಯನ್ನು ಉದ್ಯೋಗಿಗಳಿಗೆ ಉಚಿತವಾಗಿ ನೀಡಲು ತೀರ್ಮಾನಿಸಿದೆ.

VISTARANEWS.COM


on

Edited by

Bengaluru company to gift ChatGPT Plus subscription to employees after seeing rise in productivity
Koo

ಬೆಂಗಳೂರು: ಚಾಟ್‌ಜಿಪಿಟಿ ಚಾಟ್‌ಬಾಟ್‌ ಬಗ್ಗೆಯೇ ಈಗ ಎಲ್ಲಡೆ ಮಾತು ಕೇಳಿಬರುತ್ತಿವೆ. ಅದರಲ್ಲೂ, ಕೃತಕ ಬುದ್ಧಿಮತ್ತೆಯಿಂದ (Artificial Intelligence) ಇದು ಕಾರ್ಯನಿರ್ವಹಿಸುತ್ತಿರುವ ಕಾರಣ ಚಾಟ್‌ಜಿಪಿಟಿ ತಂತ್ರಜ್ಞಾನವನ್ನು ಬಹುತೇಕರು ಬಳಸುತ್ತಿದ್ದಾರೆ. ಹಾಗೆಯೇ, ಇದು ಯಾವುದೇ ವಿಷಯದ ಬಗ್ಗೆ ಲೇಖನ ಬರೆಯುವುದರಿಂದ ಹಿಡಿದು, ಕೋಡಿಂಗ್‌ವರೆಗೆ ಎಲ್ಲ ಕೆಲಸ ಮಾಡುತ್ತಿರುವ ಕಾರಣ ಮುಂದೊಂದು ದಿನ ಚಾಟ್‌ಜಿಪಿಟಿಯು ಉದ್ಯೋಗ ಕಸಿಯಲಿದೆ ಎಂಬ ಚರ್ಚೆಗಳು ಕೇಳಿಬರುತ್ತಿವೆ. ಹೀಗಿರುವ ಮಧ್ಯೆಯೇ, ಬೆಂಗಳೂರಿನ ಕಂಪನಿಯು ತನ್ನ ಉದ್ಯೋಗಿಗಳಿಗೆ ಚಾಟ್‌ಜಿಪಿಟಿಯ ಸಬ್‌ಸ್ಕ್ರಿಪ್ಶನ್‌ಅನ್ನು (ChatGPT Subscription) ಉಡುಗೊರೆಯಾಗಿದೆ ನೀಡಿದೆ.

ಬೆಂಗಳೂರು ಮೂಲದ ಕ್ಯಾಪಿಟಲ್‌ ಮೈಂಡ್‌ (Capital Mind) ಎಂಬ ಕಂಪನಿಯು ಉದ್ಯೋಗಿಗಳಿಗೆ ಉಚಿತವಾಗಿ ಚಾಟ್‌ಜಿಪಿಟಿ ಸಬ್‌ಸ್ಕ್ರಿಪ್ಶನ್‌ ನೀಡಿದೆ. ಇತ್ತೀಚೆಗೆ ಚಾಟ್‌ಜಿಪಿಟಿ ಬಳಕೆಯಿಂದ ಕಂಪನಿಯ ನೌಕರರ ಕಾರ್ಯದಕ್ಷತೆ ಹಾಗೂ ಉತ್ಪಾದಕೆಯು ಜಾಸ್ತಿಯಾದ ಕಾರಣ ಚಾಟ್‌ಜಿಪಿಟಿಯ ನೋಂದಣಿಯ ಶುಲ್ಕವನ್ನು ಕಂಪನಿಯೇ ಭರಿಸಲಿದೆ ಎಂದು ಘೋಷಿಸಲಾಗಿದೆ. ಚಾಟ್‌ಜಿಪಿಟಿಯ ನೋಂದಣಿ ಶುಲ್ಕವು ಮಾಸಿಕ 1,640‌ ರೂ. (20 ಡಾಲರ್) ಆಗಲಿದೆ. ಇಷ್ಟನ್ನೂ ಕಂಪನಿಯೇ ನೀಡಲಿದೆ.

ಕಂಪನಿ ಸಿಇಒ ಟ್ವೀಟ್

“ಚಾಟ್‌ಜಿಪಿಟಿಯಿಂದ ನೌಕರರ ಉತ್ಪಾದಕತೆ ಹೆಚ್ಚಾಗಿದೆ. ಅದರಲ್ಲೂ, ಕಿರಿಯ ಉದ್ಯೋಗಿಗಳ ಉತ್ಪಾದಕತೆಯು 5 ಪಟ್ಟು ಜಾಸ್ತಿಯಾಗಿದೆ. ಕೋಡಿಂಗ್‌ ರಚನೆ ಸೇರಿ ಹಲವು ವಿಧಗಳಲ್ಲಿ ನೌಕರರಿಗೆ ಚಾಟ್‌ಜಿಪಿಟಿಯು ಅನುಕೂಲವಾಗಿದೆ. ಬೇರೆ ವ್ಯಕ್ತಿಯ ನೆರವಿಲ್ಲದೆ, ಚಾಟ್‌ಜಿಟಿಪಿಯ ಸಹಾಯದಿಂದಲೇ ನೌಕರರು ಹಲವು ವಿಷಯಗಳನ್ನು ಕಲಿಯುತ್ತಿದ್ದಾರೆ. ಇದರಿಂದ ಕಂಪನಿಯ ಉತ್ಪಾದಕತೆಯು ಹೆಚ್ಚಾಗಿದೆ. ಎಲ್ಲ ಕೆಲಸವೂ ಈಗ ಉತ್ಕೃಷ್ಟ ಮಟ್ಟದಲ್ಲಿ ಸಾಗುತ್ತಿದೆ. ಹಾಗಾಗಿ, ನೌಕರರಿಗೆ ಉಚಿತವಾಗಿ ಚಾಟ್‌ಜಿಪಿಟಿ ನೋಂದಣಿ ನೀಡಲಾಗುತ್ತಿದೆ” ಎಂದು ಕಂಪನಿಯ ಸಿಇಒ ವಶಿಷ್ಠ ಅಯ್ಯರ್‌ ಮಾಹಿತಿ ನೀಡಿದ್ದಾರೆ.

ಉದ್ಯೋಗ/ಉದ್ಯಮ ವಲಯವನ್ನು ಚಾಟ್​ ಜಿಪಿಟಿ ಕಬಳಿಸುತ್ತಿದೆ, ಮನುಷ್ಯರು ಮಾಡುವ ಹಲವು ಸೃಜನಾತ್ಮಕ ಕೆಲಸಗಳನ್ನು ಇದು ಮಾಡುತ್ತಿರುವ ಕಾರಣ, ಅನೇಕರು ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆಯಿದೆ ಎಂಬ ಆತಂಕವೂ ಮನೆಮಾಡಿದೆ. ಚಾಟ್​ಜಿಪಿಟಿ ಬಳಕೆ ಮಾಡುತ್ತಿರುವ ಅನೇಕರು ಒಂದಲ್ಲ ಒಂದು ಕಾರಣಕ್ಕೆ ಇದನ್ನು ಹೊಗಳುತ್ತಿದ್ದಾರೆ. ಲೇಖಕರು, ಕಂಟೆಂಟ್‌ ರೈಟರ್‌ಗಳು, ಕೋಡಿಂಗ್‌ ಕ್ಷೇತ್ರದಲ್ಲಿರುವವರಿಗೆ ಚಾಟ್‌ಜಿಪಿಟಿಯು ಮಾರಕ ಎಂಬ ವರದಿಗಳು ಕೂಡ ಲಭ್ಯವಾಗಿವೆ.

ಅಷ್ಟೇ ಅಲ್ಲ, ಇತ್ತೀಚೆಗಷ್ಟೇ ಚಾಟ್‌ ಜಿಪಿಟಿಯಿಂದ ನನ್ನ ನಾಯಿ ಬದುಕುಳಿಯಿತು ಎಂದು ವ್ಯಕ್ತಿಯೊಬ್ಬರು ಟ್ವಿಟರ್‌ನಲ್ಲಿ ತಿಳಿಸಿದ್ದರು. ಟ್ವಿಟರ್​ ಬಳಕೆದಾರರೊಬ್ಬರು ತಮ್ಮ ಟ್ವಿಟರ್​ ಅಕೌಂಟ್​ನಲ್ಲಿ ಚಾಟ್​ಬಾಟ್ ಚಾಟ್​ಜಿಪಿಟಿಯಿಂದ ತಮಗೆ ಆದ ಸಹಾಯವನ್ನು ಬರೆದುಕೊಂಡಿದ್ದಾರೆ. ‘ನನ್ನ ಪ್ರೀತಿಯ ನಾಯಿಯ ಜೀವನನ್ನು ಉಳಿಸಿದ್ದು ಚಾಟ್​ಜಿಪಿಟಿ’ ಎಂದು ಬರೆದುಕೊಂಡಿದ್ದು, ಅದು ಹೇಗೆ ಎಂಬುದನ್ನೂ ವಿವರಿಸಿದ್ದರು. @peakcooper ಎಂಬ ಟ್ವಿಟರ್​ ಅಕೌಂಟ್​​ನಲ್ಲಿ ಈ ಸ್ಟೋರಿ ಹಂಚಿಕೊಳ್ಳಲಾಗಿದೆ. ಅನಾರೋಗ್ಯಕ್ಕೀಡಾದ ನನ್ನ ನಾಯಿ ಸ್ಯಾಸಿಗೆ ಏನಾಗಿದೆ ಎಂದು ಕಂಡು ಹಿಡಿಯಲು ಪಶುವೈದ್ಯರಿಗೂ ಸಾಧ್ಯವಾಗಲಿಲ್ಲ. ಆದರೆ ಚಾಟ್​ಬಾಟ್ ಚಾಟ್​ಜಿಪಿಟಿ ನನ್ನ ನಾಯಿಯ ರೋಗ ಪತ್ತೆ ಮಾಡಿ, ಅದನ್ನು ಉಳಿಸಿಕೊಟ್ಟಿತು’ ಎಂದಿದ್ದರು.

ಇದನ್ನೂ ಓದಿ: ChatGpt: ನಾಯಿಯ ಜೀವ ಉಳಿಸಿದ ಚಾಟ್​ಜಿಪಿಟಿ; ಪಶುವೈದ್ಯರಿಗೂ ಗೊತ್ತಾಗಲಿಲ್ಲ ಎಂದ ಶ್ವಾನದ ಮಾಲೀಕ

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಹಿಂದಿ ಬಗ್ಗೆ ಪೂರ್ವಗ್ರಹ ಬೇಡ, ಹಾಗಂತ ಹೇರಿಕೆ ಸಲ್ಲದು

ಭಾರತವು ವಿವಿಧತೆಯಲ್ಲಿ ಏಕತೆಗೆ ಜಗತ್ತಿನಲ್ಲೆ ಖ್ಯಾತಿ ಪಡೆದಿದೆ. ಹಾಗಾಗಿ ಭಾಷೆ ವಿಚಾರದಲ್ಲಿ ಭಾರತೀಯರು ಕಚ್ಚಾಡುವಂಥ ಸನ್ನಿವೇಶವನ್ನು ನಿರ್ಮಾಣ ಮಾಡಬಾರದು.

VISTARANEWS.COM


on

No prejudice about Hindi such imposition is not worth it
Koo

ನಮ್ಮ ಕರ್ನಾಟಕದ ಹೆಮ್ಮೆಯ ಉತ್ಪನ್ನ, ಕೆಎಂಎಫ್‌ನ ಮೊಸರಿನ ಪ್ಯಾಕೆಟ್ ಮೇಲೆ ದಹಿ ಎಂದು ಹಿಂದಿ ಭಾಷೆಯಲ್ಲಿ ಕಡ್ಡಾಯವಾಗಿ ಮುದ್ರಿಸಬೇಕು ಎಂದು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ ಆದೇಶ ಹೊರಡಿಸಿತ್ತು. ತಮಿಳುನಾಡಿನ ಮೊಸರು ಉತ್ಪನ್ನದ ಮೇಲೂ ಹಾಗೆಯೇ ಮುದ್ರಿಸುವಂತೆ ಆದೇಶಿಸಲಾಗಿತ್ತು. ಈ ಆದೇಶದ ವಿರುದ್ಧ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ವ್ಯಾಪಕ ಜನಾಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೊನೆಗೂ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ ವಿವಾದಾತ್ಮಕ ಆದೇಶವನ್ನು ಪಂಪಡೆದುಕೊಂಡಿದೆ. ಮೊಸರಿನ ಪ್ಯಾಕೆಟ್ ಮೇಲೆ ದಹಿ ಎಂದು ಹಿಂದಿಯಲ್ಲಿ ಬರೆಯಬೇಕಿಲ್ಲ. Curd ಎಂದು ಇಂಗ್ಲಿಷ್‌ನಲ್ಲಿ ಬರೆದು, ಬ್ರಾಕೆಟ್‌ನಲ್ಲಿ ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಮೊಸರು ಎಂದು ಬರೆಯಬಹುದು ಎಂದು ಸ್ಪಷ್ಟನೆ ನೀಡಲಾಗಿದೆ. ಇಂಥದೊಂದು ಹಿಂದಿ ಹೇರಿಕೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತಿತರರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಇದೊಂದು ಅನಗತ್ಯವಾಗಿದ್ದ ವಿವಾದ. ಕನ್ನಡಿಗರು ಹಾಗೂ ತಮಿಳರ ಮೇಲೆ ʼದಹಿʼಯನ್ನು ಹೇರಬೇಕು ಎಂದು ಕೇಂದ್ರದ ಪ್ರಾಧಿಕಾರಕ್ಕೆ ಯಾಕೆ ಅನಿಸಿತೋ ಗೊತ್ತಿಲ್ಲ. ಕನ್ನಡದ ಮೊಸರಿನ ಬದಲು ಹಿಂದಿಯ ದಹಿ ಬಂದು ಕೂತರೆ ಉತ್ಪನ್ನದ ಗುಣಮಟ್ಟ ಏನಾದರೂ ಹೆಚ್ಚಾಗುತ್ತದೆಯೇ? ದಹಿಯ ಬದಲು ಮೊಸರು ಇದ್ದರೆ ಗುಣಮಟ್ಟ ಕಡಿಮೆಯಾಗುತ್ತದೆಯೇ? ಅಥವಾ ಕರ್ನಾಟಕದಾಚೆಗೆ ಇಲ್ಲಿನ ಹಾಲಿನ ಉತ್ಪನ್ನಗಳನ್ನು ಪರಿಚಯಿಸಬೇಕು, ಜನಪ್ರಿಯಗೊಳಿಸಬೇಕು ಎಂಬ ಇರಾದೆ ಕೇಂದ್ರಕ್ಕೆ ಇದ್ದರೆ, ಅದಕ್ಕೆ ತಕ್ಕ ಮೂಲಸೌಕರ್ಯಕ್ಕೆ ನೆರವಾಗಬೇಕೇ ಹೊರತು ಹೀಗೆ ಹೆಸರು ಬದಲಾಯಿಸುವುದರಿಂದ ಅಲ್ಲ. ಗುಜರಾತ್‌ ಮೂಲದ ಅಮುಲ್‌ ಉತ್ಪನ್ನಗಳು ಗುಜರಾತ್‌ನ ಆಚೆಗೂ ವ್ಯಾಪಿಸಿವೆ. ಕರ್ನಾಟಕದಲ್ಲೂ ಲಭ್ಯವಿವೆ. ಆದರೆ ಇವುಗಳ ಮೇಲೆ ಕನ್ನಡದಲ್ಲಿ ಹಾಲು- ಮೊಸರು ಎಂದು ಮುದ್ರಿಸಿಲ್ಲ. ಅಂದ ಮೇಲೆ ನಂದಿನಿ ಪ್ಯಾಕೆಟ್‌ಗಳ ಮೇಲೆ ಹಿಂದಿಯಲ್ಲಿ ಮುದ್ರಿಸುವುದನ್ನು ಕಡ್ಡಾಯಗೊಳಿಸುವುದರ ಹಿಂದೆ ಯಾವುದೇ ತರ್ಕ, ವೈಜ್ಞಾನಿಕತೆ ಇಲ್ಲ.

ಹಿಂದಿ ಹೇರಿಕೆ ವಿರುದ್ಧ ದಕ್ಷಿಣ ಭಾರತದ ರಾಜ್ಯಗಳಲ್ಲಿ ಆಗಾಗ ಆಕ್ರೋಶ ವ್ಯಕ್ತವಾಗುತ್ತಲೇ ಇರುತ್ತದೆ. ಹಿಂದೆ ಅನೇಕ ಬಾರಿ ಹಿಂದಿಯನ್ನು ಬಳಸಲು ಹೋಗಿ ಕೇಂದ್ರ ಸರ್ಕಾರಗಳು ತಮಿಳುನಾಡಿನಲ್ಲಿ ಮುಖಭಂಗಕ್ಕೆ ಒಳಗಾಗಿವೆ. ಹಿಂದಿ ವಿರೋಧಿ ಚಳವಳಿಯ ಮೂಲವೇ ತಮಿಳುನಾಡು. ಇತ್ತೀಚೆಗೆ ತಮಿಳಿಗರಿಂದ ಸ್ವಲ್ಪ ಪಾಠ ಕಲಿತಿರುವ ಕನ್ನಡಿಗರು ತಮ್ಮ ಭಾಷೆಯ ಮೇಲೆ ಆಗುವ ಅನ್ಯಾಕ್ರಮಣವನ್ನು ಪ್ರಶ್ನಿಸಲು ತೊಡಗಿದ್ದಾರೆ. ಕನ್ನಡಿಗರು ಪ್ರೀತಿಯಿಂದ ಎಲ್ಲ ಭಾಷೆಯನ್ನೂ ಕಲಿಯುತ್ತಾರೆ. ಆದರೆ ತಮ್ಮ ಮೇಲೆ ಹೇರಿಕೆಯನ್ನು ಸಹಿಸುವುದಿಲ್ಲ. ಎಲ್ಲ ಭಾರತೀಯ ಭಾಷೆಗಳಂತೆ ಹಿಂದಿಯೂ ಒಂದು ಭಾಷೆ. ಹಿಂದಿ ಭಾಷೆಗೆ ಇರುವ ಘನತೆ ಕನ್ನಡ ಭಾಷೆಗೂ ಇದೆ. ಬ್ಯಾಂಕಿಂಗ್‌, ರೈಲ್ವೇ ಮುಂತಾದ ವಲಯಗಳಲ್ಲಿ ಹಿಂದಿ ಭಾಷಿಕರು ಬಂದು ತುಂಬಿಕೊಂಡಿರುವುದರಿಂದ ಕನ್ನಡಿಗರಿಗೆ ಹಿಂದಿಯ ಮೇಲೆ ಸ್ವಲ್ಪ ಅಸಹನೆಯೂ ಇದೆ. ಇಂಥ ಹೊತ್ತಿನಲ್ಲಿ ಕೇಂದ್ರ ಸರ್ಕಾರ ಭಾಷೆಯ ವಿಚಾರದಲ್ಲಿ ಸರಸವಾಡುವುದು ಬೆಂಕಿಯ ಜತೆ ಆಡಿದಂತೆ. ಕೇಂದ್ರ ಆಡಳಿತದ ಅಧಿಕಾರಿಗಳು ಈ ಸೂಕ್ಷ್ಮವನ್ನು ಅರ್ಥ ಮಾಡಿಕೊಳ್ಳಬೇಕು. ಅನಗತ್ಯವಾಗಿ ಅನ್ಯ ಭಾಷಿಕರನ್ನು ಕೆರಳಿಸುವಂಥ ಸುತ್ತೋಲೆಗಳನ್ನು ಹೊರಡಿಸಬಾರದು. ಕೇಂದ್ರ ಸರ್ಕಾರದ ನಾನಾ ಇಲಾಖೆ, ಬ್ಯಾಂಕ್ ಹುದ್ದೆಗಳ ಆಯ್ಕೆ ವೇಳೆಯೂ ಇಂಗ್ಲಿಷ್, ಹಿಂದಿಯಂತೆ ಸ್ಥಳೀಯ ಭಾಷೆಗಳಿಗೂ ಅದ್ಯತೆ ನೀಡಬೇಕು.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಮತ ಪ್ರಮಾಣ ಹೆಚ್ಚಿಸುವ ಆಯೋಗದ ಕ್ರಮವನ್ನು ಬೆಂಬಲಿಸೋಣ

ಹಾಗಂತ ನಾವೂ ಹಿಂದಿ ಭಾಷೆಯ ಬಗ್ಗೆ ಪೂರ್ವಗ್ರಹ ಪೀಡಿತರಾಗಿ ಏಕಪಕ್ಷೀಯವಾಗಿ ದ್ವೇಷ ಕಾರಬೇಕಿಲ್ಲ. ಹಿಂದಿ ಇಂದಿಗೂ ದಕ್ಷಿಣ ಭಾರತೀಯರ ಭಾವನಾತ್ಮಕ ವಲಯವನ್ನು ಪ್ರವೇಶಿಸಲು ಇನ್ನೂ ಶಕ್ತವಾಗಿಲ್ಲವಾದರೂ, ನಮ್ಮ ಸಂವಿಧಾನವೇನೋ ಹಿಂದಿಯನ್ನು ದೇಶದ ಅಧಿಕೃತ ಭಾಷೆಯಾಗಿ ಬಳಸಬಹುದು (ಆರ್ಟಿಕಲ್‌ 343 (1) ಎಂದಿದೆ. ದೇಶವನ್ನು ಸಮಗ್ರವಾಗಿ ಸಂಪರ್ಕಿಸುವ ಒಂದು ಭಾಷೆ ಇರಲಿ ಎಂಬ ದೂರದೃಷ್ಟಿ ನಮ್ಮ ಹಿರಿಯರಿಗೆ ಇದ್ದಿದ್ದರೆ ಅದು ಸಹಜ. ಇಂದು ಇಂಗ್ಲಿಷೇ ಆ ಕಾರ್ಯವನ್ನು ನಿರ್ವಹಿಸುತ್ತಿದೆ. ಆದರೆ ಹಿಂದಿ ನಮ್ಮದೇ ನೆಲದ ಭಾಷೆ. ಅದರಲ್ಲಿ ವಿಪುಲವಾದ ಸಾಂಸ್ಕೃತಿಕ ಸಂಪತ್ತು ಕೂಡ ಇದೆ. ಆದದ್ದರಿಂದ ನಮಗದು ತ್ಯಾಜ್ಯವಲ್ಲ. ಭಾರತವು ವಿವಿಧತೆಯಲ್ಲಿ ಏಕತೆಗೆ ಜಗತ್ತಿನಲ್ಲೆ ಖ್ಯಾತಿ ಪಡೆದಿದೆ. ಹಾಗಾಗಿ ಭಾಷೆ ವಿಚಾರದಲ್ಲಿ ಭಾರತೀಯರು ಕಚ್ಚಾಡುವಂಥ ಸನ್ನಿವೇಶ ನಿರ್ಮಾಣ ಆಗಬಾರದು.

Continue Reading

ದೇಶ

Google Layoffs: ಗೂಗಲ್‌ನಿಂದ ವಜಾಗೊಂಡ ನೌಕರರಿಗೆ ಸಿಗಲಿದೆ 2.6 ಕೋಟಿ ರೂ., ಇವರಿಗೆ ಬೇರೆ ನೌಕರಿಯೇ ಬೇಕಿಲ್ಲ

Google Layoffs: ಐರ್ಲೆಂಡ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲ ನೌಕರರಿಗೆ ಮಾತ್ರ ಕೋಟ್ಯಂತರ ರೂಪಾಯಿ Severance Pay ಸಿಗಲಿದೆ. ಆದರೂ, ಗೂಗಲ್‌ನಿಂದ ವಜಾಗೊಂಡ ಯಾವ ನೌಕರನಿಗೂ ಕಂಪನಿಯು ಕಡಿಮೆ ಮೊತ್ತ ನೀಡಿ ಕಳುಹಿಸುತ್ತಿಲ್ಲ ಎಂಬುದು ಗಮನಾರ್ಹ.

VISTARANEWS.COM


on

Edited by

Google Layoffs Some employees may get up to Rs 260 crore in severance pay
Koo

ನವದೆಹಲಿ: ಟ್ವಿಟರ್‌, ಮೆಟಾ, ಮೈಕ್ರೋಸಾಫ್ಟ್‌, ಅಮೆಜಾನ್‌, ಆಕ್ಷೆಂಚರ್‌, ಫೋರ್ಡ್‌ ಸೇರಿ ಜಗತ್ತಿನ ಅಗ್ರ, ಬಹುರಾಷ್ಟ್ರೀಯ ಕಂಪನಿಗಳು ಸಾವಿರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸಿವೆ. ಜಾಗತಿಕ ಆರ್ಥಿಕ ಹಿಂಜರಿತದ ಭೀತಿ, ಕೊರೊನಾ ಸಮಯದಲ್ಲಿ ಉಂಟಾದ ನಷ್ಟ ತೂಗಿಸುವಿಕೆ ಸೇರಿ ಹಲವು ಕಾರಣಗಳಿಂದಾಗಿ ಸಾಲು ಸಾಲಾಗಿ ಕಂಪನಿಗಳು ನೌಕರರನ್ನು ವಜಾಗೊಳಿಸುತ್ತಿವೆ. ಇದರಿಂದಾಗಿ ಜಾಗತಿಕ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವವರೂ ಭೀತಿಯಲ್ಲಿಯೇ ಕಾರ್ಯನಿರ್ವಹಿಸುವ ಪರಿಸ್ಥಿತಿ ಎದುರಾಗಿದೆ. ಆದರೆ, ಗೂಗಲ್‌ ಕಂಪನಿಯಿಂದ (Google Layoffs) ವಜಾಗೊಂಡವರು ಮಾತ್ರ ಹೆಚ್ಚು ಯೋಚನೆ ಮಾಡಬೇಕಿಲ್ಲ. ಏಕೆಂದರೆ, ಅವರಿಗೆ ಸಿಗುವ ಬೇರ್ಪಡಿಸುವಿಕೆ ಮೊತ್ತ ಅಥವಾ ಕಂಪನಿಯು ಉದ್ಯೋಗಿಯನ್ನು ವಜಾಗೊಳಿಸಿದ ಬಳಿಕ ನೀಡುವ ಹಣಕಾಸು ಪರಿಹಾರದ ಪ್ಯಾಕೇಜ್‌ (Severance Pay) ಅಷ್ಟರಮಟ್ಟಿಗೆ ಇದೆ.

ಹೌದು, ಗೂಗಲ್‌ ಇತ್ತೀಚೆಗೆ ಜಾಗತಿಕವಾಗಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದೆ. ಇವರಲ್ಲಿ ಐರ್ಲೆಂಡ್‌ನಲ್ಲಿ ಕೆಲಸ ಮಾಡುತ್ತಿದ್ದ 240 ಉದ್ಯೋಗಿಗಳು ಕೂಡ ಇದ್ದು, ಅವರಿಗೆ ವಜಾಗೊಳಿಸುವ ಕುರಿತು ಮಾಹಿತಿ ನೀಡಲಾಗಿದೆ. ಸೇಲ್ಸ್‌ ವಿಭಾಗದ 85, ಟೆಕ್ನಾಲಜಿ ವಿಭಾಗದ 80 ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ. ಆದರೆ, ಇವರಲ್ಲಿಯೇ ಕೆಲವು ಮಂದಿಗೆ ಹಣಕಾಸು ಪರಿಹಾರದ ಪ್ಯಾಕೇಜ್‌ 2.6 ಕೋಟಿ ರೂಪಾಯಿವರೆಗೆ ಸಿಗಲಿದೆ. ಹಾಗಾಗಿ, ವಜಾಗೊಂಡಿರುವ ನೌಕರರಿಗೆ ಸಿಗುವ ಮೊತ್ತವನ್ನು ನೋಡಿದರೆ ಅವರು ಬೇರೆ ಕೆಲಸ ಹುಡುಕುವ ಪ್ರಮೇಯವೇ ಬರುವುದಿಲ್ಲ ಎಂಬುದಾಗಿ ಅಭಿಪ್ರಾಯ ವ್ಯಕ್ತವಾಗಿದೆ.

ವಜಾಗೊಳ್ಳುತ್ತಿರುವ ನೌಕರರಿಗೆ ಕಂಪನಿಯು Severance Pay ನೀಡುವುದಾಗಿ ಭರವಸೆ ನೀಡಿದೆ. ಐರ್ಲೆಂಡ್‌ನಲ್ಲಿ 2003ರಲ್ಲಿ ಕಚೇರಿಯನ್ನು ತೆರೆದಿದ್ದು, ಕಚೇರಿ ಆರಂಭವಾದಾಗಿನಿಂದ ಇದುವರೆಗೆ ಕಾರ್ಯನಿರ್ವಹಿಸಿದ ನೌಕರರಿಗೆ ಇಷ್ಟು ಮೊತ್ತದ ಪ್ಯಾಕೇಜ್‌ ಸಿಗಲಿದೆ. ಹೀಗೆ, ಸುದೀರ್ಘ ಅವಧಿಗೆ ಕಾರ್ಯನಿರ್ವಹಿಸಿದ ನೌಕರರಿಗೆ ಪ್ರತಿವರ್ಷದಂತೆ ಲೆಕ್ಕ ಹಾಕಿ ಆರು ವಾರಗಳ ಹೆಚ್ಚುವಳಿ ಸಂಬಳ, 30 ದಿನಗಳ ಗಳಿಕೆ ರಜೆ ಸೇರಿ ಅವರ ಫೈನಲ್‌ ಸೆಟಲ್‌ಮೆಂಟ್‌ ಮೊತ್ತವು 2.6 ಕೋಟಿ ಆಗಲಿದೆ ಎಂದು ತಿಳಿದುಬಂದಿದೆ.

ಅಮೆರಿಕದ ನೌಕರರಿಗೂ ಸಿಗಲಿದೆ ಹೆಚ್ಚಿನ ಮೊತ್ತ

ಅಮೆರಿಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗೂಗಲ್‌ ಉದ್ಯೋಗಿಗಳಿಗೂ ಹೆಚ್ಚಿನ ಪ್ರಮಾಣದ Severance Pay ಪ್ಯಾಕೇಜ್‌ ಸಿಗಲಿದೆ. ಅಮೆರಿಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರಿಗೆ 16 ವಾರಗಳ ಸಂಬಳ, 16 ವಾರದ ಜಿಎಸ್‌ಯು ವೆಸ್ಟಿಂಗ್‌, 2022ರ ಬೋನಸ್‌, ಆರು ತಿಂಗಳವರೆಗೆ ವಿಮೆ ವಿಸ್ತರಣೆ, ವಲಸೆ ಬಂದವರು ಬೇರೆ ದೇಶಗಳಿಗೆ ತೆರಳಲು ಅಥವಾ ತಮ್ಮ ದೇಶಗಳಿಗೆ ಮರಳಲು ನೆರವು ಒದಗಿಸುವುದು ಸೇರಿ ಹತ್ತಾರು ಸೌಲಭ್ಯ ನೀಡಿದೆ. ಆದರೆ, ಐರ್ಲೆಂಡ್‌ನಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳಿಗೆ ಮಾತ್ರ ಹೆಚ್ಚಿನ ಮೊತ್ತ ನೀಡಲಾಗಿದೆ.

ಕಳೆದ ಜನವರಿಯಲ್ಲಿ ಗೂಗಲ್‌ ಸಿಇಒ ಸುಂದರ್‌ ಪಿಚೈ ಅವರು ಉದ್ಯೋಗಿಗಳಿಗೆ ಇ-ಮೇಲ್‌ ಕಳುಹಿಸುವ ಮೂಲಕ ಕೆಲಸದಿಂದ ವಜಾಗೊಳಿಸುತ್ತಿರುವ ತೀರ್ಮಾನವನ್ನು ಪ್ರಕಟಿಸಿದ್ದರು. ಹಾಗೆಯೇ, “ಇಂತಹ ಕಠಿಣ ತೀರ್ಮಾನದಿಂದ ನನ್ನ ಮನಸ್ಸಿಗೆ ನೋವಾಗಿದ್ದು, ಇದರ ಸಂಪೂರ್ಣ ಹೊಣೆಯನ್ನು ನಾನೇ ಹೊರುತ್ತೇನೆ” ಎಂದು ಹೇಳಿದ್ದರು. ಭಾರತದ 450 ಜನ ಗೂಗಲ್‌ನಿಂದ ವಜಾಗೊಂಡಿದ್ದಾರೆ.

ಇದನ್ನೂ ಓದಿ: xooglers: ಗೂಗಲ್‌ನಿಂದ ಕೆಲಸ ಕಳೆದುಕೊಂಡ 7 ಮಂದಿ ಹೊಸ ಕಂಪನಿಯನ್ನೇ ಆರಂಭಿಸಿದರು!

Continue Reading

ಕರ್ನಾಟಕ

ವಿಸ್ತಾರ TOP 10 NEWS: ಕರ್ನಾಟಕದ ರಾಜಕೀಯ ಪಲ್ಸ್‌ನಿಂದ, ಸಿದ್ದುಗೆ ವರುಣ ಟೆನ್ಶನ್‌ವರೆಗಿನ ಪ್ರಮುಖ ಸುದ್ದಿಗಳಿವು

ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ದಿನದ ಪ್ರಮುಖ ಬೆಳವಣಿಗೆಗಳಲ್ಲಿ ಪ್ರಮುಖ ಸುದ್ದಿಗಳ ಗುಚ್ಛವೇವಿಸ್ತಾರ TOP 10 NEWS

VISTARANEWS.COM


on

Edited by

top 10 News
Koo

1. Pulse of Karnataka 2: ಹಳೆ ಮೈಸೂರು, ಕರಾವಳಿ, ಮಲೆನಾಡು, ಮಧ್ಯಕರ್ನಾಟಕದ ಜನರ ನಾಡಿ ಮಿಡಿತ
ವಿಸ್ತಾರ ನ್ಯೂಸ್, ರಾಜ್ಯದ ಪ್ರತಿಷ್ಟಿತ ಪೊಲಿಟಿಕಲ್ ಅನಾಲಿಸಿಸ್ ಸಂಸ್ಥೆಯಾದ ಅಖಾಡ ಜತೆಗೂಡಿ ರಾಜ್ಯದ ಮೂಲೆಮೂಲೆಗೆ ತೆರಳಿ ಸ್ಥಳೀಯರ ಪಲ್ಸ್ ಅರಿಯುವ ಕೆಲಸ ಮಾಡಿದೆ. ಮಾರ್ಚ್‌ ಮೊದಲ ವಾರದಲ್ಲಿ ಪ್ರಕಟವಾಗಿದ್ದ ಮೊದಲ ಆವೃತ್ತಿ ನಂತರ ಇದೀಗ ಪಲ್ಸ್ ಆಫ್ ಕರ್ನಾಟಕ ಎರಡನೇ ಆವೃತ್ತಿ ಪ್ರಸಾರ ಆರಂಭವಾಗಿದೆ. ಮೊದಲ ದಿನದಂದು ಹಳೆ ಮೈಸೂರು, ಕರಾವಳಿ, ಮಲೆನಾಡು, ಮಧ್ಯಕರ್ನಾಟಕದ ಜನರ ನಾಡಿ ಮಿಡಿತವನ್ನು ಪ್ರಕಟಿಸಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದ ಎಲ್ಲ ಪ್ರದೇಶದ ಚಿತ್ರಣವನ್ನು ನೀಡಲಾಗುತ್ತದೆ.
Pulse of Karnataka 2: ಹಳೆ ಮೈಸೂರು ವಲಯ: JDS ಭದ್ರಕೋಟೆಯಲ್ಲಿ ಸಿದ್ದರಾಮಯ್ಯ ಆಗುವರೇ ಕಿಂಗ್?‌
Pulse of Karnataka 2: ಮಧ್ಯ ಕರ್ನಾಟಕ: ಸೀರೆ, ಮಿಕ್ಸಿ, ಕುಕ್ಕರ್‌ ನೀಡಿದರೆ ಮತಗಳು ಸಿಗುತ್ತವೆಯೇ?
Pulse of Karnataka 2: ಕರಾವಳಿ-ಮಲೆನಾಡು: ಬಿಜೆಪಿಗೆ ಮತ ಸೆಳೆಯಲು ಬಿ.ಎಸ್‌. ಯಡಿಯೂರಪ್ಪ ಎಷ್ಟು ಅನಿವಾರ್ಯ?

2. ಕೋಲಾರ ಬಳಿಕ ವರುಣದಲ್ಲೂ ಸಿದ್ದುಗೆ ಟೆನ್ಶನ್; ವಿಜಯೇಂದ್ರ ಕಣಕ್ಕಿಳಿಸಲು ಬಿಜೆಪಿ ಮಾಸ್ಟರ್​ ಪ್ಲ್ಯಾನ್?
ಬೆಂಗಳೂರು:
ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರಿಗೆ ಕೋಲಾರ ಬಳಿಕ ಇದೀಗ ಸುರಕ್ಷಿತ ಎಂದು ಹೇಳಲಾದ ವರುಣದಲ್ಲೂ ಟೆನ್ಶನ್‌ ಶುರುವಾಗಿದೆ. ಇದಕ್ಕೆ ಕಾರಣ ಬಿಜೆಪಿ ಮಾಡಿಕೊಂಡಿದೆ ಎನ್ನಲಾದ ಮಾಸ್ಟರ್‌ ಪ್ಲ್ಯಾನ್‌. ಇಲ್ಲಿ ಬಿಜೆಪಿಯು ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕಿಳಿಸುವ ತಂತ್ರ ಹೂಡಿದೆ ಎನ್ನಲಾಗಿದೆ. ಇದೇ ಸಂಕೇತವನ್ನು ಬಿಎಸ್‌ವೈ ಕೂಡಾ ನೀಡಿದ್ದಾರೆ.ವಿಜಯೇಂದ್ರ ಆರ್‌ಎಸ್‌ಎಸ್‌ ಕಚೇರಿಗೆ ಭೇಟಿ ನೀಡಿದ್ದು, ಈ ಬೆಳವಣಿಗೆಗೆ ಪುಷ್ಟಿ ನೀಡಿದೆ. ಪೂರ್ಣ ವರದಿಗೆ ಕ್ಲಿಕ್‌ ಈ ಲಿಂಕ್‌ ಕ್ಲಿಕ್‌ ಮಾಡಿ
ಪೂರಕ ವರದಿ : ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಚಿಂತನೆ: ಖಚಿತಪಡಿಸಿದ ಬಿ.ಎಸ್‌.ವೈ

3. ಕ್ರೈಸ್ತ, ಜೈನರಿಗೆ ಮೀಸಲಾತಿ ಮುಂದುವರಿಕೆ; ಮುಸ್ಲಿಮರು ಮಾತ್ರ ಹೊರಕ್ಕೆ: ವರ್ಗೀಕರಣದ ಕುರಿತು ಚರ್ಚೆ
ಎಸ್‌ಸಿಎಸ್‌ಟಿ ಸಮುದಾಯಕ್ಕೆ ಒಳಮೀಸಲಾತಿ ಹಂಚಿಕೆ ನಂತರ ಒಕ್ಕಲಿಗೆ ಹಾಗೂ ವೀರಶೈವ ಲಿಂಗಾಯತರ ಮೀಸಲಾತಿ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದರ ಕುರಿತು ಕೆಲವು ಜಿಜ್ಞಾಸೆಗಳು ಮೂಡಿವೆ. ಸಂವಿಧಾನಬಾಹಿರ ಎಂದು ಮುಸ್ಲಿಮರನ್ನು ಮೀಸಲಿನಿಂದ ಹೊರಗಿಟ್ಟ ಸರ್ಕಾರ, ಜೈನ್‌ ಹಾಗೂ ಕ್ರಿಶ್ಚಿಯನ್ನರನ್ನು ಹಾಗೆಯೇ ಉಳಿಸಿಕೊಂಡಿದೆ. ಸರ್ಕಾರದ ಈ ಸರ್ಕಸ್‌ ಭಾರಿ ಚರ್ಚೆಗೆ ಕಾರಣವಾಗಿದೆ. ಪೂರ್ಣ ವರದಿಗೆ ಕ್ಲಿಕ್‌ ಮಾಡಿ
ಪೂರಕ ವರದಿ : ಮುಸ್ಲಿಂ ಬಾಂಧವರಿಗೆ ಬಿಜೆಪಿ ಅನ್ಯಾಯ ಮಾಡಿಲ್ಲ: ಮನವೊಲಿಸುತ್ತೇವೆ ಎಂದ ಯಡಿಯೂರಪ್ಪ

4.ವಿಸ್ತಾರ Special: ಬಿಜೆಪಿ ಇತಿಹಾಸದಲ್ಲೇ ಮೊದಲು: ಅಭ್ಯರ್ಥಿ ಆಯ್ಕೆಗೆ ಶುಕ್ರವಾರ ಆಂತರಿಕ ಚುನಾವಣೆ
ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಇತಿಹಾಸದಲ್ಲೆ ಮೊಟ್ಟ ಮೊದಲ ಬಾರಿಗೆ ಹೊಸ ಪ್ರಯತ್ನಕ್ಕೆ ಕೈ ಹಾಕಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಕಾರ್ಯಕರ್ತರ ಆಂತರಿಕ ಚುನಾವಣೆಯನ್ನು ಶುಕ್ರವಾರ ರಾಜ್ಯಾದ್ಯಂತ ನಡೆಸಲಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

5. ಚುನಾವಣಾ ಅಕ್ರಮ: ತುಮಕೂರು ಗ್ರಾಮಾಂತರ ಜೆಡಿಸ್‌ ಶಾಸಕ ಗೌರಿಶಂಕರ್‌ ಶಾಸಕತ್ವದಿಂದ ಅನರ್ಹ
ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಜಾತ್ಯತೀತ ಜನತಾದಳಕ್ಕೆ ತೀವ್ರ ಹಿನ್ನಡೆಯಾಗಿದೆ. ತುಮಕೂರು ಗ್ರಾಮಾಂತರದ ಜೆಡಿಎಸ್‌ ಶಾಸಕ ಗೌರಿಶಂಕರ್‌ ಅವರನ್ನು ರಾಜ್ಯ ಹೈಕೋರ್ಟ್‌ ಶಾಸಕತ್ವದಿಂದ ಅನರ್ಹಗೊಳಿಸಿದೆ. ಆದರೆ, ಈ ಆದೇಶ ಈ ಅವಧಿಗೆ ಮಾತ್ರ ಸೀಮಿತವಾಗಿದ್ದು, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

6. ಹಿಂದಿ ಹೇರಿಕೆ ವಿರೋಧಕ್ಕೆ ಮಣಿದ ಕೇಂದ್ರ, ಮೊಸರು ಪ್ಯಾಕೆಟ್‌ನಲ್ಲಿ ‘ದಹಿ’ ಎಂಬ ಮುದ್ರಣ ಆದೇಶ ವಾಪಸ್
ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಯತ್ನಕ್ಕೆ ಕರ್ನಾಟಕ ಹಾಗೂ ತಮಿಳುನಾಡು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮೊಸರಿನ ಮೇಲೆ ಹಿಂದಿಯ ದಹಿ (Dahi Row) ಎಂಬುದಾಗಿ ಮುದ್ರಿಸಬೇಕು ಎಂಬ ಆದೇಶವನ್ನು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ(FSSAI)ವು ಹಿಂಪಡೆದಿದೆ. ಆ ಮೂಲಕ ಕರ್ನಾಟಕ ಹಾಗೂ ತಮಿಳುನಾಡು ಸೇರಿ ಹಲವೆಡೆ ವ್ಯಕ್ತವಾದ ವಿರೋಧಕ್ಕೆ ಕೇಂದ್ರ ಸರ್ಕಾರ ಮಣಿದಂತಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. ಮೋದಿ ಓಡಿಸಿ, ದೇಶ ಉಳಿಸಿ ಬಳಿಕ ದೇಶಾದ್ಯಂತ ಆಪ್‌ನಿಂದ ಪೋಸ್ಟರ್ ಕ್ಯಾಂಪೇನ್ ಶುರು!
ನವದೆಹಲಿ: ಮೋದಿಯನ್ನು ಓಡಿಸಿ, ದೇಶವನ್ನು ಉಳಿಸಿ ಅಭಿಯಾನದ ಬಳಿಕ ಆಮ್ ಆದ್ಮಿ ಪಾರ್ಟಿ, ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಪೋಸ್ಟರ್ ಕ್ಯಾಂಪೇನ್ ಗುರುವಾರ ಆರಂಭಿಸಿದೆ. ಒಟ್ಟು 11 ಭಾಷೆಗಳಲ್ಲಿ ದೇಶಾದ್ಯಂತ ಮೋದಿ ವಿರೋಧಿ ಪೋಸ್ಟರ್‌ಗಳನ್ನು ಪ್ರದರ್ಶಿಸಿದೆ. ಈ ಹಿಂದೆ, ಮೋದಿಯನ್ನು ಓಡಿಸಿ, ದೇಶವನ್ನು ಉಳಿಸಿ ಪೋಸ್ಟರ್‌ಗಳನ್ನು ದಿಲ್ಲಿಯ ಬೀದಿಗಳಲ್ಲಿ ಅಂಟಿಸಲಾಗಿತ್ತು. ಈ ಸಂಬಂಧ ದಿಲ್ಲಿ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ನೂರು ಎಫ್ಐಆರ್‌ಗಳನ್ನು ದಾಖಲಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. IPL 2023: ಆರ್​ಸಿಬಿಗೆ ಆಘಾತ; ಮೊದಲ ಪಂದ್ಯಕ್ಕೆ ಸ್ಟಾರ್​ ಆಟಗಾರರು ಅಲಭ್ಯ
ಕಳೆದ 15 ಆವೃತ್ತಿಯ ಐಪಿಎಲ್​ನಲ್ಲಿ ಈ ಸಲ ಕಪ್ ನಮ್ದೇ ಎಂದು ಹೇಳುತ್ತಲೇ ಬಂದಿರುವ ಆರ್​ಸಿಬಿ ಒಂದು ಬಾರಿಯೂ ಕಪ್​ ಗೆಲ್ಲುವಲ್ಲಿ ಯಶಸ್ಸು ಕಂಡಿಲ್ಲ. ಈ ಬಾರಿಯಾದರೂ ಕಪ್​ ಗೆಲ್ಲಬೇಕೆಂದಿದ್ದ ಆರ್​ಸಿಬಿಗೆ ಗಾಯದ ಸಮಸ್ಯೆಯೊಂದು ಅಡ್ಡಿಯಾದಂತೆ ತೋರುತ್ತಿದೆ. ಆರ್​ಸಿಬಿ ತನ್ನ ಐಪಿಎಲ್​ ಅಭಿಯಾನವನ್ನು ಏಪ್ರಿಲ್​ 2 ರಂದು ಮುಂಬೈ ಇಂಡಿಯನ್ಸ್​ ವಿರುದ್ಧ ಕಣಕ್ಕಿಳಿಯುವ ಮೂಲಕ ಆರಂಭಿಸಲಿದೆ. ಆದರೆ ಈ ಪಂದ್ಯಕ್ಕೆ ಸ್ಟಾರ್​ ಆಟಗಾರರಿಬ್ಬರು ಅಲಭ್ಯರಾಗಲಿದ್ದಾರೆ ಎಂದು ತಂಡದ ಮೂಲಗಳು ತಿಳಿಸಿವೆ. ಪೂರ್ಣ ವರದಿಗೆ ಲಿಂಕ್‌ ಕ್ಲಿಕ್‌ ಮಾಡಿ

9. Import duty exemption : ಅಪರೂಪದ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಎಲ್ಲ ಔಷಧಗಳ ದರ ಇಳಿಕೆ
ಕೇಂದ್ರ ಸರ್ಕಾರವು ಅಪರೂಪದ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಎಲ್ಲ ಔಷಧ ಹಾಗೂ ಆಹಾರಗಳ ದರ ಇಳಿಕೆಗೆ ಪೂರಕವಾಗಿ, ಅವುಗಳಿಗೆ ಆಮದು ಸುಂಕದಿಂದ ವಿನಾಯಿತಿ (Import duty exemption) ನೀಡಿದೆ. ಏಪ್ರಿಲ್‌ 1ರಿಂದ ಈ ಆಮದು ಸುಂಕ ವಿನಾಯಿತಿ ಅನ್ವಯವಾಗಲಿದೆ. ಪೂರ್ಣ ವರದಿಗೆ ಕ್ಲಿಕ್‌ ಮಾಡಿ

10. ‘ಲೋಕವನ್ನೇ ಗೆದ್ದವನೆ’; ಮೋದಿ ಭಾವಚಿತ್ರಕ್ಕೆ ಮುತ್ತು ಕೊಟ್ಟ ಕರ್ನಾಟಕದ ರೈತ, ವಿಡಿಯೊ ವೈರಲ್
‌ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಎಷ್ಟೇ ಟೀಕೆ ಮಾಡಿದರೂ, ಬೆಲೆಯೇರಿಕೆ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದರೂ, ಪ್ರಧಾನಿ ಮೋದಿ ಅವರ ಮೇಲೆ ಜನರಿಗಿರುವ ಪ್ರೀತಿ, ಬೆಂಬಲದಲ್ಲಿ ಮಾತ್ರ ಕಡಿಮೆಯಾಗಿಲ್ಲ. ದೇಶದ ಯಾವುದೇ ಮೂಲೆಗೆ ಹೋದರೂ ನರೇಂದ್ರ ಮೋದಿ ಅವರಿಗೆ ಜನ ಭಾರಿ ಬೆಂಬಲ ವ್ಯಕ್ತಪಡಿಸುತ್ತಾರೆ. ಗಂಟೆಗಟ್ಟಲೆ ನಿಂತು, ಜನರ ಗದ್ದಲದ ಮಧ್ಯೆಯೂ ಮೋದಿ ಅವರನ್ನು ಕಣ್ತುಂಬಿಕೊಳ್ಳುತ್ತಾರೆ. ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ ಕರ್ನಾಟಕದ ರೈತರೊಬ್ಬರು ಬಸ್‌ ಮೇಲಿರುವ ಮೋದಿ ಅವರ ಭಾವಚಿತ್ರಕ್ಕೆ ಮುತ್ತು ಕೊಟ್ಟಿದ್ದಾರೆ. ಈ ವಿಡಿಯೊ ಈಗ ವೈರಲ್‌ ಆಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಇನ್ನಷ್ಟು ಪ್ರಮುಖ ಸುದ್ದಿಗಳು

  1. Indore Temple Tragedy: ಇಂದೋರ್‌ ದೇಗುಲದಲ್ಲಿ ಮೆಟ್ಟಿಲುಬಾವಿ ಕುಸಿದು 13 ಜನ ಸಾವು; ಮೋದಿ ಸಂತಾಪ
  2. World Master Athletics: 95ನೇ ವಯಸ್ಸಿನಲ್ಲಿ ಮೂರು ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಗವಾನಿ ದೇವಿ
  3. ವಿಧಾನಸಭೆಯಲ್ಲಿ ಕುಳಿತು ಬ್ಲ್ಯೂ ಫಿಲಂ ವೀಕ್ಷಿಸಿದ ತ್ರಿಪುರಾ ಬಿಜೆಪಿ ಶಾಸಕ, ಉಗಿದು ಉಪ್ಪಿನಕಾಯಿ ಹಾಕಿದ ಜನ
  4. ಧವಳ ಧಾರಿಣಿ ಅಂಕಣ: ರಾಮನೆನ್ನುವ ನಿತ್ಯ ಆದರ್ಶ
  5. ರಾಜ ಮಾರ್ಗ ಅಂಕಣ : ಎಸ್ಸೆಸ್ಸೆಲ್ಸಿ ಪರೀಕ್ಷೆ ತಯಾರಿ ಭಾಗ-6, ನಿಮ್ಮದೂ ಒಂದು ಯಶೋಗಾಥೆ ಯಾಕಾಗಬಾರದು?
Continue Reading
Advertisement
Man commits suicide after wife commits suicide in Srirangapatna
ಕರ್ನಾಟಕ2 hours ago

Suicide Case: ಕೌಟುಂಬಿಕ ಕಲಹ; ಪತ್ನಿ ಆತ್ಮಹತ್ಯೆ ಕಂಡು ಪತಿಯೂ ನೇಣಿಗೆ ಶರಣು

Amid wedding rumours, AAP MP Raghav Chadha picks up Parineeti Chopra from Delhi airport
ದೇಶ2 hours ago

Raghav-Parineeti: ಮತ್ತೆ ಒಟ್ಟಿಗೆ ಕಾಣಿಸಿದ ರಾಘವ್‌, ಪರಿಣೀತಿ; ವಾರದಲ್ಲಿ 3ನೇ ಭೇಟಿ, ಸ್ನೇಹಾನಾ? ಪ್ರೀತಿನಾ?

Do you know how much marks Virat Kohli got in iron pea maths?
ಕ್ರಿಕೆಟ್2 hours ago

Virat Kohli : ಕಬ್ಬಿಣದ ಕಡಲೆ ಗಣಿತದಲ್ಲಿ ವಿರಾಟ್​ ಕೊಹ್ಲಿ ಪಡೆದ ಮಾರ್ಕ್​ ಎಷ್ಟು ಗೊತ್ತಾ?

Manmohan Lalwani says Solar powered system best tool to cross digital gap
ಕರ್ನಾಟಕ2 hours ago

SELCO India: ಡಿಜಿಟಲ್ ಕಂದಕ ದಾಟಲು ಸೌರಚಾಲಿತ ವ್ಯವಸ್ಥೆ ಅತ್ಯುತ್ತಮ ಸಾಧನ: ಮನಮೋಹನ್ ಲಾಲ್ವಾನಿ

Four farmers seriously injured in lathi charge by forest department personnel
ಕರ್ನಾಟಕ3 hours ago

Tumkur News: ಒತ್ತುವರಿ ತೆರವಿಗೆ ಆಕ್ಷೇಪಿಸಿದ್ದಕ್ಕೆ ಲಾಠಿ ಚಾರ್ಜ್ ಮಾಡಿದ ಅರಣ್ಯ ಸಿಬ್ಬಂದಿ; 4 ರೈತರಿಗೆ ಗಂಭೀರ ಗಾಯ

Bengaluru company to gift ChatGPT Plus subscription to employees after seeing rise in productivity
ಕರ್ನಾಟಕ3 hours ago

ChatGPT Subscription: ದಕ್ಷತೆ ಹೆಚ್ಚಳ; ನೌಕರರಿಗೆ ಚಾಟ್‌ಜಿಪಿಟಿ ಉಚಿತ ಸಬ್‌ಸ್ಕ್ರಿಪ್ಶನ್‌ ನೀಡಿದ ಬೆಂಗಳೂರು ಕಂಪನಿ

No prejudice about Hindi, such imposition is not worth it
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ಹಿಂದಿ ಬಗ್ಗೆ ಪೂರ್ವಗ್ರಹ ಬೇಡ, ಹಾಗಂತ ಹೇರಿಕೆ ಸಲ್ಲದು

Google Layoffs: Some employees may get up to Rs 2.60 crore in severance pay
ದೇಶ3 hours ago

Google Layoffs: ಗೂಗಲ್‌ನಿಂದ ವಜಾಗೊಂಡ ನೌಕರರಿಗೆ ಸಿಗಲಿದೆ 2.6 ಕೋಟಿ ರೂ., ಇವರಿಗೆ ಬೇರೆ ನೌಕರಿಯೇ ಬೇಕಿಲ್ಲ

Former bowler of Rajasthan Royals who joined Chennai Super Kings
ಕ್ರಿಕೆಟ್4 hours ago

IPL 2023 : ಚೆನ್ನೈ ಸೂಪರ್​ ಕಿಂಗ್ಸ್​ ಬಳಗ ಸೇರಿದ ರಾಜಸ್ಥಾನ್​ ರಾಯಲ್ಸ್​ನ ಮಾಜಿ ಬೌಲರ್​

ಕರ್ನಾಟಕ4 hours ago

Prof. Madhav Kulkarni: ಖ್ಯಾತ ಲೇಖಕ, ವಿಮರ್ಶಕ ಪ್ರೊ. ಮಾಧವ ಕುಲಕರ್ಣಿ ಇನ್ನಿಲ್ಲ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

ಕರ್ನಾಟಕ8 hours ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ14 hours ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ4 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ4 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 weeks ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

ಟ್ರೆಂಡಿಂಗ್‌

error: Content is protected !!