Good News: ಅನುದಾನಿತ ಶಾಲೆ, ಕಾಲೇಜುಗಳ ಬೋಧಕ ಹುದ್ದೆ ಭರ್ತಿಗೆ ಆದೇಶ - Vistara News

ಪ್ರಮುಖ ಸುದ್ದಿ

Good News: ಅನುದಾನಿತ ಶಾಲೆ, ಕಾಲೇಜುಗಳ ಬೋಧಕ ಹುದ್ದೆ ಭರ್ತಿಗೆ ಆದೇಶ

Good News: ಖಾಸಗಿ ಅನುದಾನಿತ ಪ್ರೌಢಶಾಲೆ, ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ 2016ರಿಂದ 2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಅನುಮೋದನೆ ನೀಡಿದೆ.

VISTARANEWS.COM


on

Teacher jobs good news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶಿಕ್ಷಕ, ಬೋಧಕ (Teachers) ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ (good news) ದೊರೆತಿದೆ. ದಿನಾಂಕ 1-1-2016ರಿಂದ 31.12 2020 ರ ವರೆಗೆ ಅನುದಾನಿತ ಶಾಲೆಗಳಲ್ಲಿ (Aided Schools) ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಇರುವ ಬೋಧಕ ಹುದ್ದೆಗಳನ್ನು ತುಂಬಲು ಸರ್ಕಾರ ಅಧಿಕೃತ ಆದೇಶ ನೀಡಿದೆ.

ರಾಜ್ಯದಲ್ಲಿ 1994-95ರ ಶೈಕ್ಷಣಿಕ ಅವಧಿಗೆ ಪೂರ್ವದಲ್ಲಿ ಆರಂಭಗೊಂಡು ಈಗಾಗಲೇ ವೇತನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆ, ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ 2016ರಿಂದ 2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಅನುಮೋದನೆ ನೀಡಿದೆ.

ಈ ಮೊದಲು 1987ರಿಂದ 1994-95ರ ಅವಧಿಯಲ್ಲಿ ಆರಂಭವಾದ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಹಣಕಾಸು ಇಲಾಖೆಯು ಅನುಮತಿ ನೀಡಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶವನ್ನು ಮಾರ್ಪಡಿಸಿರುವ ಶಿಕ್ಷಣ ಇಲಾಖೆಯು, 1994-95ರ ಶೈಕ್ಷಣಿಕ ಅವಧಿಗೆ ಪೂರ್ವದಲ್ಲಿ ಆರಂಭಗೊಂಡ ಎಲ್ಲ ಸಂಸ್ಥೆಗಳಿಗೂ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಟರ್ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. 2016-17ರಿಂದ 2023-24ನೇ ಸಾಲಿನವರೆಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಲಿತಾಂಶ ಮತ್ತು ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು. ಹುದ್ದೆ ಭರ್ತಿ ಮಾಡಿಕೊಳ್ಳುವ ಶಾಲಾ, ಕಾಲೇಜುಗಳು ಆರಂಭವಾದ ಅಂದಿನಿಂದ ನಿರಂತರವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಕನ್ನಡಿಗರಿಗೆ ಉದ್ಯೋಗ ಕಡ್ಡಾಯಕ್ಕೆ ಕಾನೂನು ಸಮಸ್ಯೆ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ಉದ್ಯಮಗಳಲ್ಲಿ ಮೀಸಲು (Karnataka Jobs Reservation) ಕಡ್ಡಾಯ ಮಾಡುವ ಕುರಿತು ರಾಜ್ಯ ಸರ್ಕಾರದ (Karnataka Government) ನಿಲುವಿನಿಂದಾಗಿ ಸೃಷ್ಟಿಯಾದ ಗೊಂದಲದ ನಡುವೆ, ನಾಲ್ವರು ಸಚಿವರು ಇಂದು ವಿಧಾನಸಭೆಯಲ್ಲಿ (Vidhan sabha) ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು. ಈ ವಿಚಾರದಲ್ಲಿ ಕಾನೂನಾತ್ಮಕ ಸಮಸ್ಯೆ ಇದ್ದು, ಇದರ ಬಗ್ಗೆ ಇನ್ನಷ್ಟು ಚರ್ಚೆ ನಡೆಯಬೇಕಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಹೇಳಿದ್ದಾರೆ.

ಖಾಸಗಿ ಕ್ಷೇತ್ರದ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಮಂಗಳವಾರ (ಜು.16) ಅನುಮೋದನೆ ನೀಡಿತ್ತು. ಇದಕ್ಕೆ ಉದ್ಯಮಿ ಕಿರಣ್‌ ಮಜುಂದಾರ್‌ ಶಾ, ಮೋಹನ್​ ದಾಸ್​ ಪೈ ಸೇರಿದಂತೆ ಇನ್ನೂ ಅನೇಕ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಮಸೂದೆಗೆ ಉದ್ಯಮಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಮುಜುಗರಕ್ಕೆ ಒಳಗಾದ ಸರಕಾರ, ವಿಧೇಯಕ ಜಾರಿಗೆ ಹಿಂದೇಟು ಹಾಕಿದೆ. ಈ ಹಿನ್ನೆಲೆಯಲ್ಲಿ ಇಂದು (ಜು.18) ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಾಲ್ವರು ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸಚಿವರಾದ ದಿನೇಶ್‌ ಗುಂಡೂರಾವ್​, ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್‌ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡರು.

ಇದನ್ನೂ ಓದಿ: Karnataka Jobs Reservation: ಉದ್ಯೋಗ ವಿಚಾರದಲ್ಲಿ ಕನ್ನಡಿಗರೊಂದಿಗೆ ಸರ್ಕಾರ ಚೆಲ್ಲಾಟ: ವಿಜಯೇಂದ್ರ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Mary Kom: ಒಂದೇ ತಾಸಿನಲ್ಲಿ 2 ಕೆಜಿ ತೂಕ ಇಳಿಸಿ ಚಿನ್ನ ಗೆದ್ದಿದ್ದ ಬಾಕ್ಸರ್​ ಮೇರಿ ಕೋಮ್

Mary Kom: ಅಚ್ಚರಿ ಎಂದರೆ ಕೋಮ್​ ಒಂದು ಗಂಟೆಯ ಅವಧಿಯಲ್ಲಿ 2 ಕೆಜಿ ತೂಕ ಇಳಿಸಿ ಫೈನಲ್​ನಲ್ಲಿ ಚಿನ್ನದ ಪದಕ ಜಯಿಸಿದ್ದರು. ತೂಕ ಇಳಿಸುವ ಸಲುವಾಗಿ ಸತತ 1 ಗಂಟೆಗಳ ಕಾಲ ಅವರು ಸ್ಕಿಪ್ಪಿಂಗ್ ನಡೆಸಿದ್ದಾಗಿ ​ ಹೇಳಿಕೊಂಡಿದ್ದಾರೆ.

VISTARANEWS.COM


on

Mary Kom
Koo

ನವದೆಹಲಿ: ದೇಹತೂಕ ಕಾಪಾಡಿಕೊಳ್ಳಲು ವಿಫಲವಾದ ಹಿನ್ನಲೆಯಲ್ಲಿ ಒಲಿಂಪಿಕ್ಸ್ ಕೂಟದಿಂದ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(vinesh phogat) ಅನರ್ಹಗೊಂಡಿರುವ ವಿಚಾರ ಈಗಾಗಲೇ ಎಲ್ಲರಿಗೂ ತಿಳಿದಿದೆ. ಅಗತ್ಯಕ್ಕಿಂತ 100 ಗ್ರಾಂ ಹೆಚ್ಚು ತೂಕ ಹೊಂದಿದ್ದ ಕಾರಣ ಅವರನ್ನು ಫೈನಲ್ ಸ್ಪರ್ಧೆಯಲ್ಲಿ ಆಡದಂತೆ ಅನರ್ಹಗೊಳಿಸಲಾಗಿತ್ತು. ಆರು ಬಾರಿಯ ವಿಶ್ವ ಚಾಂಪಿಯನ್ ಮತ್ತು 2012 ರ ಒಲಿಂಪಿಕ್ ಕಂಚಿನ ಪದಕ ವಿಜೇತೆ, ಭಾರತದ ಖ್ಯಾತ ಬಾಕ್ಸಿಂಗ್​ ತಾರೆ ಮೇರಿ ಕೋಮ್(Mary Kom) ಕೂಡ ಹಿಂದೊಮ್ಮೆ ತೂಕದ ಸಮಸ್ಯೆಯಿಂದ ಅನರ್ಹಗೊಳ್ಳುವ ಭೀತಿಯನ್ನು ಎದುರಿಸಿದ್ದರಂತೆ. ಈ ವಿಚಾರವನ್ನು ಅವರೇ ಈಗ ಬಹಿರಂಗಪಡಿಸಿದ್ದಾರೆ.

ವಿನೇಶ್ ಫೋಗಟ್ ಘಟನೆಯ ಬಳಿಕ ಸಂದರ್ಶನವೊಂದರಲ್ಲಿ ಮಾತನಾಡಿದ ಖ್ಯಾತ ಮಹಿಳಾ ಬಾಕ್ಸರ್ ಮೇರಿ ಕೋಮ್, 2018ರಲ್ಲಿ ಪೊಲೆಂಡ್‌ನ ಗ್ಲಿವೈಸ್‌ನಲ್ಲಿ ನಡೆದಿದ್ದ ಮಹಿಳೆಯರ 13ನೇ ಸಿಲೆಸಿಯನ್ ಓಪನ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ನನಗೆ ತೂಕದ ಸಮಸ್ಯೆ ಎದುರಾಗಿತ್ತು. ನಾನು ಸ್ಪರ್ಧಿಸುವ ವಿಭಾಗದಲ್ಲಿ 48 ಕೆಜಿ ತೂಕದ ಮಿತಿ ಇತ್ತು. ಅದಕ್ಕಿಂತ ಒಂದೆರಡು ಕಿಲೋಗ್ರಾಂಗಳಷ್ಟು ಹೆಚ್ಚಿನ ತೂಕ ಹೊಂದಿದ್ದೆ. ಹೀಗಾಗಿ ಅನರ್ಹದ ಭೀತಿ ಎದುರಿಸಿದ್ದೆ. ಆದರೆ, ನಾನು ಸತತವಾಗಿ ಒಂದು ಗಂಟೆ ಸ್ಕಿಪ್ಪಿಂಗ್ ಮಾಡಿದ ನಂತರ ತೂಕವನ್ನು ಇಳಿಸಲು ಸಾಧ್ಯವಾಯಿತು” ಎಂದು ಮೇರಿ ಕೋಮ್‌ ಅಂದಿನ ಘಟನೆಯನ್ನು ಮೆಲುಕು ಹಾಕಿದ್ದಾರೆ.

ಇದನ್ನೂ ಓದಿ Paris Olympics: ಶ್ರೀಜೇಶ್​ಗೆ ಸಿಗಲಿ ಗೆಲುವಿನ ವಿದಾಯ; ಇಂದು ಭಾರತ-ಸ್ಪೇನ್​ ಕಂಚಿನ ಕಾದಾಟ

ಚಿನ್ನ ಗೆದ್ದಿದ್ದ ಕೋಮ್​


ಅಚ್ಚರಿ ಎಂದರೆ ಕೋಮ್​ ಒಂದು ಗಂಟೆಯ ಅವಧಿಯಲ್ಲಿ 2 ಕೆಜಿ ತೂಕ ಇಳಿಸಿ ಫೈನಲ್​ನಲ್ಲಿ ಚಿನ್ನದ ಪದಕ ಜಯಿಸಿದ್ದರು. ತೂಕ ಇಳಿಸುವ ಸಲುವಾಗಿ ಸತತ 1 ಗಂಟೆಗಳ ಕಾಲ ಅವರು ಸ್ಕಿಪ್ಪಿಂಗ್ ನಡೆಸಿದ್ದಾಗಿ ​ ಹೇಳಿಕೊಂಡಿದ್ದಾರೆ.

ಬೆಳ್ಳಿ ಪದಕ್ಕಕೆ ಮನವಿ ಮಾಡಿದ ವಿನೇಶ್​


ವಿನೇಶ್ ಫೋಗಟ್ ತಮ್ಮನ್ನು ಅನರ್ಹ ಮಾಡಿದ ನಿರ್ಧಾರದ ವಿರುದ್ಧ ಕೋರ್ಟ್ ಆಫ್ ಆರ್ಬಿಟ್ರೇಷನ್ ಫಾರ್ ಸ್ಪೋರ್ಟ್ಸ್ (ಸಿಎಎಸ್)ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜಂಟಿ ಬಳ್ಳಿಪದಕವನ್ನು ನೀಡುವಂತೆ ಕೋರಿದ್ದಾರೆ. ಗುರುವಾರ ಈ ಮೇಲ್ಮನವಿ ಬಗ್ಗೆ ಮಧ್ಯಂತರ ತೀರ್ಪು ನೀಡುವ ನಿರೀಕ್ಷೆ ಇದ್ದು, ಮೂಲ ನಿರ್ಧಾರವನ್ನು ಬದಲಿಸುವ ಸಾಧ್ಯತೆಯೂ ಇದೆ. ಒಲಿಂಪಿಕ್ ಕೂಟದ ಕಟ್ಟುನಿಟ್ಟಿನ ಸಂರಚನೆ ಕಾರಣದಿಂದಾಗಿ ಚಿನ್ನದ ಪದಕಕ್ಕೆ ಸ್ಪರ್ಧಿಸುವ ಅವಕಾಶವನ್ನು ನೀಡುವ ಸಾಧ್ಯತೆ ಕಡಿಮೆ. ಏಕೆಂದರೆ ಚಿನ್ನದ ಪದಕಕ್ಕಾಗಿ ಇರುವ ಸ್ಪರ್ಧೆಯ ಮರು ವೇಳಾಪಟ್ಟಿ ಸಿದ್ಧಪಡಿಸುವುದು ಸವಾಲುದಾಯಕ. ಆದರೆ ಅಧಿಕೃತ ಪ್ರಸಾರಸಂಸ್ಥೆಯಾಗಿರುವ ಜಿಯೊಸಿನಿಮಾ ಪ್ರಕಾರ, ವಿನೇಶ್ ಜಂಟಿ ಬೆಳ್ಳಿಪದಕಕ್ಕಾಗಿ ಮನವಿ ಸಲ್ಲಿಸಿದ್ದಾರೆ.

ಸಿಎಎಸ್ ಎನ್ನುವುದು 1984ರಲ್ಲಿ ಸ್ಥಾಪಿತವಾದ ಸ್ವತಂತ್ರ ಸಂಸ್ಥೆಯಾಗಿದ್ದು, ಕ್ರೀಡಾಸಂಬಂಧಿ ವ್ಯಾಜ್ಯಗಳನ್ನು ಮಧ್ಯಸ್ಥಿಕೆ ಮೂಲಕ ಬಗೆಹರಿಸುತ್ತದೆ. ಸ್ವಿಡ್ಜರ್ಲೆಂಡ್ ನ ಲೌಸನ್ ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಿಎಎಸ್, ನ್ಯೂಯಾರ್ಕ್ ಹಾಗೂ ಸಿಡ್ನಿಯಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಹೊಂದಿದ್ದು, ಒಲಿಂಪಿಕ್ ಆತಿಥ್ಯ ವಹಿಸುವ ದೇಶಗಳಲ್ಲಿ ತಾತ್ಕಾಲಿಕ ಕೋರ್ಟ್ ಗಳನ್ನು ಹೊಂದಿರುತ್ತದೆ.

Continue Reading

ಪ್ರಮುಖ ಸುದ್ದಿ

Lalbagh Flower Show: ಸಸ್ಯಕಾಶಿಯಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ; ಏನೇನಿದೆ, ಪಾರ್ಕಿಂಗ್‌ ಎಲ್ಲಿ, ಟಿಕೆಟ್‌ ದರ ಎಷ್ಟು?

Lalbagh Flower Show: ಈ ಬಾರಿಯ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ (Dr BR Ambedkar) ಥೀಮ್ ಆಧರಿಸಿದೆ. ಅಂಬೇಡ್ಕರ್‌ ಜೀವನದ ಮಹತ್ವದ ಸನ್ನಿವೇಶಗಳ ಕಲಾಕೃತಿಗಳ ಪ್ರದರ್ಶನವಿದೆ.

VISTARANEWS.COM


on

lalbagh flower show 2024
Koo

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ (Independence Day) ಅಂಗವಾಗಿ ತೋಟಗಾರಿಕೆ ಇಲಾಖೆಯಿಂದ (Horticulture department) ಆಯೋಜನೆಯಾಗುವ ಫಲಪುಷ್ಪ ಪ್ರದರ್ಶನ (Lalbagh Flower Show) ಇಂದಿನಿಂದ ಲಾಲ್‌ಬಾಗ್‌ನಲ್ಲಿ ಆರಂಭವಾಗಲಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಬೆಳಗ್ಗೆ ಉದ್ಘಾಟಿಸಲಿದ್ದಾರೆ. ಆಗಸ್ಟ್‌ 8ರಿಂದ 19ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಈ ಬಾರಿಯ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ (Dr BR Ambedkar) ಥೀಮ್ ಆಧರಿಸಿದೆ. ಜೊತೆಗೆ ನವದೆಹಲಿಯ ಸಂಸತ್ ಭವನದ ಕಲಾಕೃತಿ ಇರಲಿದೆ. ಸಂಸತ್‌ ಭವನದ ಪ್ರತಿಕೃತಿಯು 3.6 ಲಕ್ಷ ಗುಲಾಬಿ ಹಾಗೂ 2.4 ಲಕ್ಷ ಸೇವಂತಿಗೆ ಹೂಗಳಲ್ಲಿ ಅನಾವರಣಗೊಂಡಿದೆ. ಸಂಸತ್‌ ಭವನದ ಮುಂಭಾಗದಲ್ಲಿ 12 ಅಡಿ ಎತ್ತರದ ಡಾ.ಬಿ.ಆರ್. ಅಂಬೇಡ್ಕರ್‌ ಅವರ ಪ್ರತಿಮೆ ರಾರಾಜಿಸಲಿದೆ. ಅಂಬೇಡ್ಕರ್ ಅವರ ಚೈತ್ಯಭೂಮಿ ಸ್ಮಾರಕ ಸ್ತೂಪವನ್ನು 3.4 ಲಕ್ಷ ಹೂಗಳಿಂದ ನಿರ್ಮಿಸಲಾಗಿದೆ. ಮಹಾಡ್ ಸತ್ಯಾಗ್ರಹ, ಕಲಾ ರಾಮ್‌ ದೇವಸ್ಥಾನದ ಪ್ರವೇಶ, ಕೋರೆಗಾಂವ್ ವಿಜಯೋತ್ಸವ ಮುಂತಾದ ಅಂಬೇಡ್ಕರ್‌ ಜೀವನದ ಮಹತ್ವದ ಸನ್ನಿವೇಶಗಳ ಕಲಾಕೃತಿಗಳ ಪ್ರದರ್ಶನವಿದೆ.

216ನೇ ಫಲಪುಷ್ಪ ಪ್ರದರ್ಶನಕ್ಕೆ 10:30ಕ್ಕೆ ಚಾಲನೆ. ಅಂಬೇಡ್ಕರ್ ಮೊಮ್ಮಗ ಭೀಮರಾವ್ ಯಶ್ವಂತ್ ಅಂಬೇಡ್ಕರ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿರಲಿದ್ದಾರೆ. ಹೊರರಾಜ್ಯಗಳಿಂದ 8.6 ಲಕ್ಷ ಹೂವುಗಳನ್ನು ರಾಜಧಾನಿಗೆ ತರಲಾಗಿದೆ. 12 ದಿನಗಳ ಕಾಲ ನಡೆಯಲಿರುವ ಕಲರ್‌ಫುಲ್ ಪುಷ್ಪ ಪ್ರದರ್ಶನಕ್ಕೆ ಈ ಬಾರಿ 2.80 ಕೋಟಿ ವೆಚ್ಚ ಮಾಡಲಾಗಿದೆ.

ವಾಹನ ನಿಲುಗಡೆ ನಿಷೇಧ

ಲಾಲ್‌ಬಾಗ್‌ ಸುತ್ತಮುತ್ತಲ ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆ (Vehicle parking) ನಿಷೇಧಿಸಲಾಗಿದೆ. ನಿಷೇಧಿತ ರಸ್ತೆಗಳು ಹೀಗಿವೆ:

ಮರೀಗೌಡ ರಸ್ತೆ– ಲಾಲ್‌ಬಾಗ್‌ ಮುಖ್ಯದ್ವಾರದಿಂದ ನಿಮ್ಹಾನ್ಸ್‌ವರೆಗೆ ರಸ್ತೆಯ ಎರಡೂ ಬದಿ.
ಕೆ.ಎಚ್‌. ರಸ್ತೆ – ಕೆ.ಎಚ್‌. ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿ.
ಲಾಲ್‌ಬಾಗ್‌ ರಸ್ತೆ – ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್‌ ಮುಖ್ಯದ್ವಾರದವರೆಗೆ
ಸಿದ್ದಯ್ಯ ರಸ್ತೆ – ಊರ್ವಶಿ ಚಿತ್ರಮಂದಿರದ ಜಂಕ್ಷನ್‌ನಿಂದ ವಿಲ್ಸನ್‌ ಗಾರ್ಡನ್‌ 12ನೇ ಕ್ರಾಸ್‌ವರೆಗೆ
ಬಿಟಿಎಸ್ ಬಸ್ ನಿಲ್ದಾಣ – ಬಿಎಂಟಿಸಿ ಜಂಕ್ಷನ್‌ನಿಂದ ರಸ್ತೆಯ ಎರಡೂ ಬದಿ.
ಕೃಂಬಿಗಲ್‌ ರಸ್ತೆಯ ಎರಡೂ ಬದಿ
ಲಾಲ್‌ಬಾಗ್‌ ವೆಸ್ಟ್‌ಗೇಟ್‌ನಿಂದ ಆರ್‌.ವಿ. ಟೀಚರ್ಸ್‌ ಕಾಲೇಜುವರೆಗೆ.
ಆರ್‌.ವಿ. ಟೀಚರ್ಸ್‌ ಕಾಲೇಜಿನಿಂದ ಅಶೋಕ ಪಿಲ್ಲರ್‌ವರೆಗೆ.
ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್‌ವರೆಗೆ.

ವಾಹನಗಳ ನಿಲುಗಡೆಗೆ ಅವಕಾಶ ಎಲ್ಲೆಲ್ಲಿ?

  • ಮರೀಗೌಡ ರಸ್ತೆ – ಆಲ್‌ ಅಮೀನ್‌ ಕಾಲೇಜು ಆವರಣದಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
  • ಕೆ.ಎಚ್‌. ರಸ್ತೆ– ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
  • ಮರೀಗೌಡ ರಸ್ತೆ – ಹಾಪ್‌ಕಾಮ್ಸ್‌ನಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ಇದೆ.
  • ಜೆ.ಸಿ. ರಸ್ತೆ – ಕಾರ್ಪೊರೇಶನ್‌ ಪಾರ್ಕಿಂಗ್‌ ಸ್ಥಳಗಳಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ

ಟಿಕೆಟ್ ದರ ಎಷ್ಟು?

ವಯಸ್ಕರಿಗೆ ಟಿಕೆಟ್ ದರ (Ticket fees) 80 ರೂ. ಮಕ್ಕಳಿಗೆ 30 ರೂ. ರಜಾ ದಿನಗಳಲ್ಲಿ ವಯಸ್ಕರಿಗೆ 100 ರೂ. ಶಾಲಾ ಮಕ್ಕಳಿಗೆ ಸಂಪೂರ್ಣ ಉಚಿತವಾಗಿದೆ.

ಇದನ್ನೂ ಓದಿ: Lalbagh Flower Show: ಈ ಬಾರಿಯ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಅರಳಲಿದೆ ಡಾ. ಅಂಬೇಡ್ಕರ್‌ ಜೀವನಗಾಥೆ!

Continue Reading

ರಾಜಕೀಯ

Parliament Session: ಇಂದು ವಕ್ಫ್ ಮಸೂದೆ ಮಂಡನೆ: ಸಂಸತ್ತಿನಲ್ಲಿ ಕೋಲಾಹಲ ಸಾಧ್ಯತೆ; ಅಧಿವೇಶನವನ್ನು Live ಆಗಿ ನೋಡಿ

Parliament Session: ಸಂಸತ್‌ನಲ್ಲಿ ನಡೆಯುತ್ತಿರುವ ಮಳೆಗಾಲದ ಅಧಿವೇಶನ ಕಾವೇರಿದ ಚರ್ಚೆಗೆ ಸಾಕ್ಷಿಯಾಗುತ್ತಿದ್ದು, ಇಂದು ವಕ್ಫ್‌ ಮಸೂದೆ ಮಂಡನೆಯಾಗಲಿದೆ. ಈ ವೇಳೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇದೆ. ವಕ್ಫ್ ಕಾಯ್ದೆ 1995ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ವಕ್ಫ್ (ತಿದ್ದುಪಡಿ) ಮಸೂದೆ 2024 ಅನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಪರಿಚಯಿಸಲು ಸಜ್ಜಾಗಿರುವುದರಿಂದ ಸಂಸತ್ತಿನ ಕಲಾಪಗಳು ಗುರುವಾರ ಕೋಲಾಹಲದಿಂದ ಕೂಡಿರಲಿದೆ ಎಂದು ಅಂದಾಜಿಸಲಾಗಿದೆ. ಅಧಿವೇಶನವನ್ನು ಲೈವ್‌ ಆಗಿ ಇಲ್ಲಿ ನೋಡಿ.

VISTARANEWS.COM


on

Parliament Session
Koo

ನವದೆಹಲಿ: ಸಂಸತ್‌ನಲ್ಲಿ ನಡೆಯುತ್ತಿರುವ ಅಧಿವೇಶನ (Parliament Session)ದಲ್ಲಿ ಇಂದು ವಕ್ಫ್‌ ಮಸೂದೆ (Waqf Act) ಮಂಡನೆಯಾಗಲಿದ್ದು, ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇದೆ. ವಕ್ಫ್ ಕಾಯ್ದೆ 1995ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ವಕ್ಫ್ (ತಿದ್ದುಪಡಿ) ಮಸೂದೆ 2024 ಅನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಪರಿಚಯಿಸಲು ಸಜ್ಜಾಗಿರುವುದರಿಂದ ಸಂಸತ್ತಿನ ಕಲಾಪಗಳು ಗುರುವಾರ ಕೋಲಾಹಲದಿಂದ ಕೂಡಿರಲಿದೆ.

ಮಸೂದೆಯನ್ನು ಪರಿಚಯಿಸಿದ ನಂತರ ಪರಿಶೀಲನೆಗಾಗಿ ಸಂಸತ್ತಿನ ಸ್ಥಾಯಿ ಸಮಿತಿಗೆ ಕಳುಹಿಸಬೇಕೆಂದು ಪ್ರತಿಪಕ್ಷಗಳು ಬುಧವಾರ ಆಗ್ರಹಿಸಿವೆ. ಈ ಬಗ್ಗೆ ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಸರ್ಕಾರವು ವ್ಯವಹಾರ ಸಲಹಾ ಸಮಿತಿಗೆ ಈಗಾಗಲೇ ತಿಳಿಸಿದೆ.

ಮಸೂದೆ ಬಗ್ಗೆ ಮಾತನಾಡಿದ ಕಾಂಗ್ರೆಸ್‌ ಸಂಸದ ಗೌರವ್‌ ಗೊಗೊಯ್‌ ಮತ್ತು ತೃಣಮೂಲ ಕಾಂಗ್ರೆಸ್‌ ಸಂಸದ ಸುದೀಪ್‌ ಬಂಡೋಪಾಧ್ಯಾಯ ಅವರು ಮಸೂದೆ ಮಂಡಿಸಿದ ನಂತರ ಪರಿಶೀಲನೆಗಾಗಿ ಸಂಸತ್ತಿನ ಸಮಿತಿಗೆ ಕಳುಹಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮಾತ್ರವಲ್ಲ ಇಂದು ಸಂಸತ್ತಿನಲ್ಲಿ ಈ ಬಗ್ಗೆ ಗಟ್ಟಿಯಾಗಿ ಧ್ವನಿ ಎತ್ತಲು ಪ್ರತಿಪಕ್ಷಗಳು ಸಜ್ಜಾಗಿವೆ.

ಸರ್ಕಾರ V/S ಪ್ರತಿಪಕ್ಷಗಳ ವಾಗ್ವಾದ

ಮಸೂದೆ ವಿಚಾರದಲ್ಲಿ ಈಗಾಗಲೇ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ ಆರಂಭವಾಗಿದೆ. ದೇಶಾದ್ಯಂತ ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ತರಲು ಇಂತಹ ಮಸೂದೆ ಅಗತ್ಯ ಎಂದು ಬಿಜೆಪಿ ಪ್ರತಿಪಾದಿಸಿದೆ. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಯು ಅವರು, ʼʼವಕ್ಫ್ ಆಸ್ತಿಗಳ ನಿಯಂತ್ರಣವನ್ನು ಹೆಚ್ಚು ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿಸಲು ಮುಸ್ಲಿಮರು ಈ ಬಗ್ಗೆ ನಿರಂತರ ಬೇಡಿಕೆ ಸಲ್ಲಿಸಿದ್ದಾರೆʼʼ ಎಂದು ಸಮರ್ಥಿಸಿಕೊಂಡಿದ್ದಾರೆ.

ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ ಹಲವು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಕಿಡಿಕಾರಿ ಕೆಲವು ಮುಸ್ಲಿಂ ಸಂಘಟನೆಗಳು ವಿರೋಧಿಸುತ್ತಿರುವ ಮಸೂದೆಯನ್ನು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದೊಂದಿಗೆ ವ್ಯವಹರಿಸುವ ಸ್ಥಾಯಿ ಸಮಿತಿಗೆ ಕಳುಹಿಸಬೇಕು ಎಂದು ಹೇಳಿವೆ. ಇನ್ನೂ ಸಮಿತಿಯನ್ನು ರಚಿಸಲಾಗಿಲ್ಲ ಎಂದು ಹೇಳಿವೆ.

ಏನೆಲ್ಲ ತಿದ್ದುಪಡಿ?

ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಮಂಡಳಿಗೆ ಸೇರಿಸಲು ಪಾರದರ್ಶಕ ನಿಯಮಗಳ ಪಾಲನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅದರಲ್ಲೂ, ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಿಸುವ ಪರಮಾಧಿಕಾರ ತೆಗೆಯಲಿದೆ. ಇನ್ನು, ವಕ್ಫ್‌ ಆಸ್ತಿಗಳ ಮೇಲೆ ನಿಗಾ ಇರಿಸುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಇದುವರೆಗೆ ವಕ್ಫ್‌ ಮಂಡಳಿಯಲ್ಲಿ ಹೆಣ್ಣುಮಕ್ಕಳ ಸಹಭಾಗಿತ್ವವೇ ಇರಲಿಲ್ಲ. ಹಾಗಾಗಿ, ಪ್ರತಿಯೊಂದು ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಹೆಣ್ಣುಮಕ್ಕಳಿಗೂ ಸ್ಥಾನ ನೀಡುವುದು. ರಾಜ್ಯಗಳ ಮಂಡಳಿಗಳಲ್ಲಿ ಕನಿಷ್ಠ ಇಬ್ಬರು ಮಹಿಳೆಯರಿಗೆ ಸ್ಥಾನ ನೀಡುವುದು. ಕೇಂದ್ರ ಸಮಿತಿಗಳಲ್ಲೂ ಇಬ್ಬರೂ ಹೆಣ್ಣುಮಕ್ಕಳು ಇರಬೇಕು ಎಂಬ ನಿಯಮ ಜಾರಿಗೆ ತರುವುದು. ಮುಸ್ಲಿಮರು ಕೂಡ ವಕ್ಫ್‌ ಆಸ್ತಿಯನ್ನು ಸೃಷ್ಟಿಸಬಹುದು ಎಂಬ ನಿಯಮ ಜಾರಿಗೊಳಿಸುವುದು ಸೇರಿ ಹಲವು ತಿದ್ದುಪಡಿಗಳಿಗೆ ಪ್ರಸ್ತಾವನೆ ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Pralhad Joshi: ಪಿಎಂ ಕುಸುಮ್ ಯೋಜನೆಗೆ ಕರ್ನಾಟಕದಿಂದಲೇ 1.79 ಲಕ್ಷ ರೈತರ ಬೇಡಿಕೆ

ಹಣಕಾಸು ಮಸೂದೆ ಅಂಗೀಕಾರ

ಲೋಕಸಭೆಯಲ್ಲಿ ಬುಧವಾರ ಹನಕಾಸು ಮಸೂದೆ 2024 ಅನ್ನು ಅಂಗೀಕರಿಸಲಾಯಿರು. ರಿಯಲ್‌ ಎಸ್ಟೇಟ್‌ ಮೇಲೆ ಇತ್ತೀಚೆಗೆ ಪರಿಚಯಿಸಲಾದ ಹೊಸ ಬಂಡವಾಳ ಲಾಭ ತೆರಿಗೆಯನ್ನು ಸರ್ಕಾರ ಸಡಿಲಿಸಿದ ನಂತರ ಮಂಡಿಸಿದ ಈ ಮಸೂದೆಯನ್ನು ಲೋಕಸಭೆ ಅಂಗೀಕರಿಸಿತು. ಲೋಕಸಭೆ 45 ಅಧಿಕೃತ ತಿದ್ದುಪಡಿಗಳೊಂದಿಗೆ ಮಸೂದೆಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಿದೆ ಎಂದು ಮೂಲಗಳು ತಿಳಿಸಿವೆ. ಇದರ ಜತೆಗೆ ಒಲಿಂಪಿಕ್ಸ್‌ನ 50 ಕೆಜಿ ವಿಭಾಗದ ಕುಸ್ತಿ ಫೈನಲ್‌ ಪಂದ್ಯದಿಂದ ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ ಅನರ್ಹಗೊಂಡಿರುವ ಬಗ್ಗೆಯೂ ಸರ್ಕಾರ ಮಾಹಿತಿ ನೀಡಿದೆ.

Continue Reading

ದೇಶ

Sajjan Singh Verma: ಪ್ರಧಾನಿ ಮೋದಿ ನಿವಾಸಕ್ಕೂ ಜನ ನುಗ್ಗುತ್ತಾರೆ; ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ನ ಮತ್ತೊರ್ವ ನಾಯಕ-ವಿಡಿಯೋ ಇದೆ

Sajjan Singh Verma: ಬಾಂಗ್ಲಾದೇಶದಲ್ಲಿ ಉದ್ರಿಕ್ತ ಪ್ರತಿಭಟನಾಕಾರರ ಗುಂಪು ಅಲ್ಲಿನ ಪ್ರಧಾನಿ ಶೇಖ್‌ ಹಸೀನಾ ಅವರ ಅಧಿಕೃತ ನಿವಾಸಕ್ಕೆ ನುಗ್ಗಿ ಇಡೀ ಮನೆಯನ್ನೇ ಪುಡಿಗಟ್ಟಿ ಲೂಟಿ ಮಾಡಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿಸ ಸಜ್ಜನ್‌ ಸಿಂಗ್‌, ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಶೇಖ್ ಹಸೀನಾ ಮತ್ತು ಅವರ ಸರ್ಕಾರದ ತಪ್ಪು ನೀತಿಗಳಿಂದಾಗಿ ನೆರೆಯ ದೇಶದಲ್ಲಿ ನಾಗರಿಕ ಅಶಾಂತಿಯ ಸಂದರ್ಭದಲ್ಲಿ ಬಾಂಗ್ಲಾದೇಶದ ಜನರು ಪ್ರಧಾನಿಯವರ ಅಧಿಕೃತ ನಿವಾಸವನ್ನು ಪ್ರವೇಶಿಸಿದ್ದಾರೆ.

VISTARANEWS.COM


on

Sajjan singh Verma
Koo

ಭೋಪಾಲ್‌: ನೆರೆಯ ಬಾಂಗ್ಲಾದೇಶದಂತೆಯೇ(Bangladesh Unrest) ಭಾರತದಲ್ಲಿಯೂ ಅಶಾಂತಿ ಉಂಟಾಗುವ ಸಾಧ್ಯತೆ ಇದೆ ಎಂದಿರುವ ಕಾಂಗ್ರೆಸ್ ಹಿರಿಯ ಮುಖಂಡ ಸಲ್ಮಾನ್ ಖುರ್ಷಿದ್(Salman Khurshid) ಅವರ ಹೇಳಿಕೆ ಸದ್ಯ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ ಮತ್ತೊರ್ವ ಕಾಂಗ್ರೆಸ್‌ ನಾಯಕನೂ ಅಂತಹದ್ದೇ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. ಮಧ್ಯಪ್ರದೇಶದ ಹಿರಿಯ ನಾಯಕ ಸಜ್ಜನ್‌ ಸಿಂಗ್‌ ವರ್ಮಾ(Sajjan Singh Verma) ಈ ಹೇಳಿಕೆ ನೀಡಿದ್ದು, ಬಾಂಗ್ಲಾದೇಶದಂತೆ ಭಾರತದಲ್ಲೂ ಪ್ರಧಾನಿ ನರೇಂದ್ರ ಮೋದಿ(PM Narendra Modi) ಮನೆಗೆ ಜನ ನುಗ್ಗುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.

ಬಾಂಗ್ಲಾದೇಶದಲ್ಲಿ ಉದ್ರಿಕ್ತ ಪ್ರತಿಭಟನಾಕಾರರ ಗುಂಪು ಅಲ್ಲಿನ ಪ್ರಧಾನಿ ಶೇಖ್‌ ಹಸೀನಾ ಅವರ ಅಧಿಕೃತ ನಿವಾಸಕ್ಕೆ ನುಗ್ಗಿ ಇಡೀ ಮನೆಯನ್ನೇ ಪುಡಿಗಟ್ಟಿ ಲೂಟಿ ಮಾಡಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿಸ ಸಜ್ಜನ್‌ ಸಿಂಗ್‌, ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಶೇಖ್ ಹಸೀನಾ ಮತ್ತು ಅವರ ಸರ್ಕಾರದ ತಪ್ಪು ನೀತಿಗಳಿಂದಾಗಿ ನೆರೆಯ ದೇಶದಲ್ಲಿ ನಾಗರಿಕ ಅಶಾಂತಿಯ ಸಂದರ್ಭದಲ್ಲಿ ಬಾಂಗ್ಲಾದೇಶದ ಜನರು ಪ್ರಧಾನಿಯವರ ಅಧಿಕೃತ ನಿವಾಸವನ್ನು ಪ್ರವೇಶಿಸಿದ್ದಾರೆ.

ನರೇಂದ್ರ ಮೋದಿಯವರನ್ನು ನೆನಪಿಟ್ಟುಕೊಳ್ಳಿ. ನಿಮ್ಮ ತಪ್ಪು ನೀತಿಗಳಿಂದ ಮುಂದೊಂದು ದಿನ ಜನರು ಪ್ರಧಾನಿಯವರ ನಿವಾಸವನ್ನು ಪ್ರವೇಶಿಸುತ್ತಾರೆ ಮತ್ತು ಅದನ್ನು ಆಕ್ರಮಿಸಿಕೊಳ್ಳುತ್ತಾರೆ. ಇದು ಇತ್ತೀಚೆಗೆ ಶ್ರೀಲಂಕಾದಲ್ಲಿ (2022 ರಲ್ಲಿ) ಸಂಭವಿಸಿದೆ, ಅಲ್ಲಿ ಜನರು ಪ್ರಧಾನಿ (ಅಧ್ಯಕ್ಷರ) ಮನೆಗೆ ಪ್ರವೇಶಿಸಿದರು, ಇದೀಗ ಬಾಂಗ್ಲಾದೇಶದಲ್ಲಿ ನಡೆಯುತ್ತಿದೆ. ಇನ್ನೇನಿದ್ದರೂ ಭಾರತದ ಸರದಿ ಎಂದು ಸಜ್ಜನ್‌ ಸಿಂಗ್‌ ವರ್ಮಾ ಹೇಳಿದ್ದಾರೆ.

ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿ ಭಾರತದಲ್ಲಿಯೂ ಸಂಭವಿಸಬಹುದು ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಮಂಗಳವಾರ ವಿವಾದವನ್ನು ಹುಟ್ಟು ಹಾಕಿದ್ದಾರೆ. ಶಿಕ್ಷಣ ತಜ್ಞ ಮುಜಿಬುರ್ ರೆಹಮಾನ್ ಅವರ ‘ಶಿಕ್ವಾ-ಎ-ಹಿಂದ್: ದಿ ಪೊಲಿಟಿಕಲ್ ಫ್ಯೂಚರ್ ಆಫ್ ಇಂಡಿಯನ್ ಮುಸ್ಲಿಮ್ಸ್’ (Shikwa-e-Hind: The Political Future of Indian Muslims) ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದರು.

ಮೇಲ್ನೋಟಕ್ಕೆ ಕಾಶ್ಮೀರದಲ್ಲಿ ಎಲ್ಲವೂ ಸಹಜವಾಗಿದೆ ಎಂದು ಕಾಣಿಸಬಹುದು. ಇಲ್ಲಿ ಎಲ್ಲವೂ ಸರಿ ಇದೆ ಎಂದು ಎಲ್ಲರೂ ಭಾವಿಸಬಹುದು. 2024ರ ಗೆಲುವು ಅತ್ಯಲ್ಪ ಎಂದು ನಂಬುವವರಿದ್ದಾರೆ. ಇನ್ನೂ ಹೆಚ್ಚಿನದು ಆಗಬೇಕಿದೆ. ಆದರೆ ವಾಸ್ತವ ಬೇರೆಯದೇ ಇದೆ. ಬಾಂಗ್ಲಾದೇಶದಲ್ಲಿ ಸಂಭವಿಸಿದ್ದು, ನಮ್ಮ ದೇಶದಲ್ಲಿಯೂ ನಡೆಯಬಹುದುʼʼ ಎಂದು ಹೇಳಿ ವಿವಾದದ ಕಿಡಿ ಹೊತ್ತಿಸಿದದ್ದರು.

ಇದನ್ನೂ ಓದಿ: Shehzad Poonawalla: ಬಾಂಗ್ಲಾದಂತೆ ಭಾರತದಲ್ಲಿಯೂ ಹಿಂಸಾಚಾರ; ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್ ಹೇಳಿಕೆಗೆ ಬಿಜೆಪಿ ಕಿಡಿ

Continue Reading
Advertisement
Vinay Rajkumar pepe preset Vinay Rajkumar Shreelesh S Nair
ಸ್ಯಾಂಡಲ್ ವುಡ್32 seconds ago

Vinay Rajkumar: ʻಪೆಪೆ’ ಸಿನಿಮಾದಲ್ಲಿ ಜೇನು ಕುರುಬ ಸಾಂಗ್: ಚಿತ್ರತಂಡದ ವಿಭಿನ್ನ ಪ್ರಯತ್ನಕ್ಕೆ ಪ್ರೇಕ್ಷಕರ ಜೈಕಾರ!

Mary Kom
ಕ್ರೀಡೆ4 mins ago

Mary Kom: ಒಂದೇ ತಾಸಿನಲ್ಲಿ 2 ಕೆಜಿ ತೂಕ ಇಳಿಸಿ ಚಿನ್ನ ಗೆದ್ದಿದ್ದ ಬಾಕ್ಸರ್​ ಮೇರಿ ಕೋಮ್

Repo Rate
ವಾಣಿಜ್ಯ8 mins ago

Repo Rate: ಗೃಹಸಾಲದ ಇಎಂಐ ಭಾರ ಇಳಿಕೆ ಇಲ್ಲ; ರೆಪೋ ದರ ಯಥಾಸ್ಥಿತಿ

Naga Chaitanya Nagarjuna Called Sobhita Dhulipala Hot
ಟಾಲಿವುಡ್14 mins ago

Naga Chaitanya: ನಾನು ಹೀಗೆ ಹೇಳಬಾರದು..ಆದರೂ ಶೋಭಿತಾ ತುಂಬಾ ಹಾಟ್‌ ಎಂದಿದ್ದ ನಾಗಾರ್ಜುನ; ವಿಡಿಯೊ ವೈರಲ್‌!

Henna Jihad
ದೇಶ26 mins ago

Henna Jihad: ಹಿಂದೂ ಮಹಿಳೆಯರಿಗೆ ಮುಸ್ಲಿಮರು ಮೆಹಂದಿ ಹಚ್ಚಿದರೆ ಹುಷಾರ್‌! ಭುಗಿಲೆದ್ದ ಹೆನ್ನಾ ಜಿಹಾದ್‌ ವಿವಾದ

lalbagh flower show 2024
ಪ್ರಮುಖ ಸುದ್ದಿ30 mins ago

Lalbagh Flower Show: ಸಸ್ಯಕಾಶಿಯಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ; ಏನೇನಿದೆ, ಪಾರ್ಕಿಂಗ್‌ ಎಲ್ಲಿ, ಟಿಕೆಟ್‌ ದರ ಎಷ್ಟು?

Gold Rate Today
ಚಿನ್ನದ ದರ35 mins ago

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಬಂಗಾರ ಇಂದು ಇಷ್ಟು ಅಗ್ಗ

ಉದ್ಯೋಗ41 mins ago

Banking Recruitment 2024: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 896 ಸ್ಪೆಷಲಿಸ್ಟ್ ಆಫೀಸರ್ ಹುದ್ದೆ; ಆಯ್ಕೆ ಪ್ರಕ್ರಿಯೆ ಹೇಗೆ? Complete Details

Actor Yash journey begins Yash Gave Update On Toxic Movie
ಸ್ಯಾಂಡಲ್ ವುಡ್43 mins ago

Actor Yash:  ʻಟಾಕ್ಸಿಕ್‌ʼ ಪಯಣ ಶುರುವಾಗಿದೆ ಎಂದು ಗುಡ್‌ ನ್ಯೂಸ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌!

head master self harming
ಕ್ರೈಂ52 mins ago

Self Harming: ಇಬ್ಬರು ಇನ್‌ಸ್ಪೆಕ್ಟರ್‌ಗಳ ಬಳಿಕ ಹೆಡ್‌ಮಾಸ್ಟರ್‌ ಶಾಲೆಯಲ್ಲೇ ಆತ್ಮಹತ್ಯೆ; ಏನಾಗ್ತಿದೆ ರಾಜ್ಯದಲ್ಲಿ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ7 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ7 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ7 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌